ಒಟ್ಟು 2646 ಕಡೆಗಳಲ್ಲಿ , 114 ದಾಸರು , 1733 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಮಲ ಭಜಿಸೋ ಮೈಲಾರ ಲಿಂಗನ ಪ ಪುರಹರ ಸ್ವರೂಪನೆ ಎಂದು ಧ್ಯಾನಿಸೋ ಪಾತಕ ತಿಮಿರ ಭಾಸ್ಕರನೆಂದು ನೀ ಸ್ಮರಿಸೋ ಶಿರಬಾಗಿ ನಮಿಸೋ ಅ.ಪ ತುರಗವಾಹನವೇರಿ ಬರುತಿಹನ ಧರೆಯೊಳಗೆ ಮೈಲಾಪುರ ಸುಮಂದಿರನೆಂದು ಕರೆಸುವನಾ ಹೊನಕೆರೆಯ ಜಲದಭಿಷೇಕದಿಂದ ರ್ಚನೆಯ ಕೊಂಬುವನ ಶರಣರನ ಪೊರೆವನ 1 ಕಾಲಕಾಲದಿ ಪಾಲಕಿಯ ಉತ್ಸವದಿ ಮೆರೆಯುವನ ಅನು ಗಾಲಭಕುತರ ಮ್ಯಾಳವನು ಪಾಲಿಸಲು ಬಂದಿಹನ ಕೇಳಿ ದ್ವರಗಳ ಕೊಡುವ ಘನ ತ್ರಿಶೂಲ ಧರಿಸಿಹನ ಮಾಳಸಾಕಾಂತನ 2 ನಿಷ್ಠೆಯಿಂದಲಿ ಭಜಿಪ ಭಕುತರನ ರಕ್ಷಿಸಲು ಕೊಪ್ಪರ ಕಟ್ಟಿಯಲಿ ಸೇವೆಯನ್ನು ಕೊಳುತಿಹನ ಸಿರಿ ವಿಷ್ಣು ಭಕುತರ ಮನೆಗಳಲಿ ಪೂಜೆಯನು ಕೊಂಬುವನ ಇಷ್ಟ ಪ್ರದಾತನ3 ಸಂಚರಿಸುತಲಿ ದಿನಕರನು ಮಕರದಿ ಬರಲು ಸಂಕ್ರಮಣ ಉತ್ಸವದಿ ನೋಡಲು ನೆರೆದ ಬಹು ಜನ ರಿಂದ ಸೇವಿತನ ಗಿರಿಶಿಖರ ಗುಂಡಿನ ಮೇಲೆ ದೀಪೋತ್ಸವದಿ ರಾಜಿತನ ಮಹಿಮಾನ್ವಿತನ 4 ವಿನುತ ಶುಭಚರಣ ಸರೋಜ ಕಾರ್ಪರ ನಾರಸಿಂಹನ ಒಲಿಮೆ ಪಡೆ ದಿಹನಾ ರವಿವಾರ ವಾರದಿ ಮಾರ್ತಾಂಡದೇವನ5
--------------
ಕಾರ್ಪರ ನರಹರಿದಾಸರು
ಕಮಲ ಪರ ಭವ ಬಂಧ ನಮಗೆಕುಹಕ ಬುದ್ಧಿಯಲಂದು ಬಯಲ ಭ್ರಾಂತಿಗೆ ಸಂದುಬಹು ದುಃಖಬಟ್ಟುದ ನೆನೆದು ನಾವಿಂದು 1ತನುವಿದನೆನಿತು ಪೋಸಲು ಮತ್ತೆವನಿತಾದಿ ಜನರ ನಂಬಿರಲುಧನ ತನ್ನದೆಂದು ಬಚ್ಚಿಡಲು ಭೋಗಕನುಕೂಲವಾುತೆಂದೆನಲುತನುವಳಿುತು ಜನ ಸಡಿಲಿತು ಗಳಿಸಿದಧನ ಹೋುತನುಮಾನವೇತಕಿನ್ನಿನಿತು 2ಸುಖವೆಂಬದು ದುಃಖ ತಿಳಿಯೆ ಮದಮುಖರಾಗದಿರಿ ಮನವೆಳೆಯೆಸುಖಪರಿಪೂರ್ಣನು ಹರಿಯೆ ುನ್ನುಸುಖವುಂಟು ನಮಗಾತನೊಲಿಯೆಸಕಲ ಲೋಕೇಶ ಶ್ರೀ ತಿರುಪತಿ ವೇಂಕಟೇಶನಕುಟಿಲ ಭಕುತರಿಗುಂಟು ಸಂತೋಷ 3ಓಂ ಶ್ರೀ ಹರಯೇ ನಮಃ
--------------
ತಿಮ್ಮಪ್ಪದಾಸರು
ಕಮಲಕಮಲಾಧರನೆ ಕಮಲಭವ ವಂದಿತನೆ ಕಮಲ (?) ನುತನೇ ಕಮಲಶತ ಹಿತಕರನೆ ಪ ಕಮಲಬಾಣನ ಪಿತನೇ ಕಮಲದಳ ಲೋಚನನೇ ಕಮನೀಯನುಪ್ಪವಡಿಸಾ ಹರಿಯೇ ಅ.ಪ ಸಲಹಲೀ ಲೋಕಗಳ ಬಹುವೆನಿಪ ದಾನವರ ಗೆಲಿದು ಪಾಲ್ಗಡಲ ನಡುವಲದ ನೆಲೆವನೆಯ ತಲೆವಣಿಯ ಕಾಂತಿಗಳ ಮಿಗೆ ಜ್ವಲಿಪ ಬೆಳಗುಗಳಿಂದ ಫಲಿತ ಪುಳಕಗಳು ಮಿಗೆ ಬಲಿದ ನಿದ್ರೆಗಳ ಶ್ರೀಲಲನೇಶನುಪ್ಪವಡಿಸ1 ಸಿರಿ ಮುರಿಯುತಿದೆ ಶರಧಿಯೇಳ್ಗೇ ಉದಯಕೆ ಕರೆಯುತಿದೆ ಗಿಳಿವಿಂಡು ಕೊರುಗುತಿವೆ ಕೋಕಗ ಗರೆಯುತಿದೆ ಕೋರಕಂ ವೋಲಗಕೆ ಕರುಣಾಳು ಉಪ್ಪವಡಿಸಾ 2 ತೋರುತಿದೆ ಇನಬಿಂಬ ದೂರುತಿದೆ ಕುಮುದ ಸೊಂ ಪೇರುತಿದೆ ವನರುಹಂ ಬೀರುತಿದೆ ಕಡು ಚೆಲ್ವ ಸೋರುತಿದೆ ಮಕರಂದ ತೋರುತಿದೆ ತನಿಗಂಪ ಪಾರುತಿವೆÉ ಭ್ರಮರಂಗಳೂ ಚೀರುತಿವೆ ಪಕ್ಷಿಗಳು ಮೀರುತಿವೆ ಜನರವಂ ಪೂರ್ಣಧನು ಉಪ್ಪವಡಿಸಾ3 ಆಡುವರೆ ನರ್ತನವ ಪಾಡುವರೆ ಗಾನಗಳ ನೀಡುವರೆ ಪನ್ನೀರ ತೀಡುವರೆ ಸುರಭಿಗಳ ಮಾಡುವರೆ ಸಿಂಗರವ ಪೂಡುವರೆ ಹಾರಗಳನೂ ಕೋಡುವರೆ ಕಾಣಿಕೆಯ ಬೇಡುವರೆ ಸಂಪದವ ಸೂಡುವರೆ ಕುಸುಮಗಳ ನೋಡುವರೆ ಸಮಯಗಳ ಗಾಡಿಮಿಗಲುಪ್ಪವಡಿಸಾ 4 ದೇವ ಸಂಸ್ತುತಲೀಲ ದೇವ ಮುನಿನುತ ಶೀಲ ದೇವತತಿಗನುಕೂಲ ದೇವರಿಪುವನಜಾಲ ಚೇಲ ದೇವ ಗುಣಗಣಜಾಲ ದೇವಪುರಿ ಶ್ರೀಲೋಲ ದೇವ ನಲಿದುಪ್ಪವಡಿಸಾ 5
--------------
ಕವಿ ಲಕ್ಷ್ಮೀಶ
ಕರವ ಕರವ ಮುಗಿದು ಹೇಳಿದೆ ಹರಿಯ ಭಕ್ತರ ಸಿರಿಯ ದ್ವಾರಕೆ ದೊರೆಗೆ ಎರಗುವೆನೆಂದಳು ಶ್ರೀ ಹರಿಗೆ ಎರಗುವೆನೆಂದಳು ಪ. ಇಂದು ಸುಕೃತ ಬಹಳ ಬಂದುಒದಗಿತೆಂದನು ರಾಯ ಬಂದು ಒದಗಿತೆಂದನು 1 ಅಂದಮಾತು ಕೇಳಿ ಆನಂದ ಪೂರ್ಣನಾದನು ರಾಯಬಂದ ಜನರು ವೃಂದಾರಕರೆಂದು ಬಂದ ಕೃಷ್ಣ ಎಂದನು ಈಗ ಬಂದ ಸ್ವಾಮಿ ಎಂದನು 2 ಎಷ್ಟು ಯಜ್ಞವು ಎಷ್ಟು ದಾನವು ಎಷ್ಟು ಜಪ ತಪ ಹೋಮವುಮತ್ತೆ ಎಷ್ಟು ತೀರ್ಥಯಾತ್ರೆ ಫಲಿಸಿತು ಕೃಷ್ಣ ಬಂದನೆಂದು ಈಗ ಕೃಷ್ಣ ಮನೆಗೆ ಬಂದನು 3 ಧಿಟ್ಟೆರೈವರು ಕೃಷ್ಣನಂಘ್ರಿಯ ಮುಟ್ಟಿ ಮನದಲ್ಲಿಟ್ಟರುಕೃಷ್ಣ ಮನೆಗೆ ಬಂದನೆಂದುಎಷ್ಟು ಹರುಷ ಬಟ್ಟರು ಅವರು 4 ಏಳು ಜನ್ಮದ ಸುಕೃತದಿಂದ ಈ ವೇಳೆ ಒದಗಿತೆಂದನು ರಾಯ ಕೇಳ ರುಕ್ಮಿಣಿ ಭಾವೆ ಬಂದದ್ದು ಹೇಳಲ್ವಶವೆಎಂದನುರಾಯ ಹೇಳಲ್ವಶವೆ ಎಂದನು 5 ಪಾದ ಕಾಣದೆ ನಿಲ್ಲಲಾರೆವೆಂದರುಕ್ಷಣ ನಿಲ್ಲಲಾರೆವೆಂದರು ಚಲ್ವ ರಂಗನ ಬದಿಲೆ ಬಂದು ನಿಲ್ವೆವೀಗ ಎಂದನು ರಾಯ 6 ಏಸು ಜನ್ಮದ ಸುಕೃತದಿಂದ ರಾಮೇಶಬಂದನೆಂದನು ಸರ್ವೇಶ ಬಂದನೆಂದನು ವಾಸುದೇವರ ಪಾದಕಾಂಬುವೆ ಈ ಸಮಯದೊಳು ಎಂದನುರಾಯ 7
--------------
ಗಲಗಲಿಅವ್ವನವರು
ಕರವೇ ವಂದಿಸಿ-ನಮಸ್ಕರಿಸಿ ಮಾತನುಸುರುವೆ ಪ ಪರಮಾದರದಲಿ ಕರುಣ ಎನ್ನ ಮೇಲೆ ಹರಹಿ ದುರುಮತಿಯ ಪರಿಹರಿಸುವುದು ಅ.ಪ. ವಾತತನಯ ವಾರಿಜಾತ ಬಾಂಧವ ಸಂ ಭೂತ ಸಹಾಯ ರಘುನಾಥನ್ನ ಪ್ರಿಯದೂತ ಶಾತಕುಂಭ ಮಕುಟ ಶೀತಕರ ಕುಂಡಲ- ತೀತ ಸುಂದರ ಕಾಯ-ಜಾತ ಶರವರ್ಜಿತ ದಾತನಿಂದಲಿ ಬಹಳಾತುರದಲಿ ಗು- ರುತು ಪಡೆದು ನಿರ್ಭೀತನಾಗಿ ಪೋಗಿ ಮಾತೆಗೆರಗಿ ಖಳವ್ರಾತವ ಘಾತಿಸಿ ಪ್ರೀತಿಯಿಂದಲಿ ನಿಜರಾತಿಯ ತಣಿಸಿದ 1 ಉದ್ದಂಡ ವಿಷವನುಂಡು ಕುಂಡಲಿಯಿಂದ ಕೈಗೊಂಡು ಮನ್ನಣೆಯ ಚಂಡಗದೆಯ ದಿಟ್ಟ ಗಂಡುಗಲಿ ಪ್ರಚಂಡ ಹಿಂಡು ಖಳರ ಶಿರ ಚೆಂಡಾಡಿ ಗುರು ಕೋ ದಂಡ ರುದ್ರನ ಮುಂಕೊಂಡು ಭಜಿಸಿ ರಣ ಮಂಡಲದೊಳು ಜಗಭಂಡನ ಕರುಳನು ದಂಡೆಯ ಮುಡಿಸಿದ ಖಂಡ ಪ್ರತಾಪ 2 ದ್ವಿಜನ ಉದರದಲ್ಲಿ ಸೃಜಿಸಿ ಮೆರೆದೆಯೊ ತ್ರಿಜಗದೊಳಗೆ ಶುದ್ಧ ಸುಜನಾಂಬುಧಿಗೆ ಚಂದ್ರ ಕುಜನ ಮತ ಭುಜಂಗ ದ್ವಿಜರಾಜನೆನಿಸಿದೆ ಅಜನ ಪಿತನ ಪಾದಾಂಬುಜವ ಬಿಡದೆ ನಿತ್ಯ- ಭಜಿಸುವೆ ಯತಿ ದಿಗ್ವಿಜಯ ಮೂರುತಿ ಸುರ- ಪಂಕಜ ಭವ ಪದವಿಯ ನಿಜವಾಗಿ ಕೈಗೊಂಡು ಋಜುಗಣದಧಿಪ ತಿವಿಜಯವಿಠ್ಠಲನಂಘ್ರಿರಜವನು ಧರಿಸಿದ 3
--------------
ವಿಜಯದಾಸ
ಕರಿಮುಖದ ಗಣಪತಿಯ ಚರಣಕ್ಕೆಯೆರಗಿ ಶಾರದೆಗೆ ಸೆರಗೊಡ್ಡಿ ವರವನು ವರವ ಬೇಡಿಕೊಂಡೆ ಸ್ಥಿರವಾದ ಭಕುತಿ ಕೊಡುಯೆಂದು 1 ವಾಯು ಬ್ರಹ್ಮ ಭಾರತಿಗೆ ಬಾಳ ಬೇಡಿಕೊಂಡ್ವೇ- ದವ್ಯಾಸರಿಗೆ ನಮೋಯೆಂಬೆ ನ- ಮೋಯೆಂದು ನಾರದರ ಪಾದಪದ್ಮಗಳಿಗೆರಗುವೆ 2 ಅತ್ರಿ ಅಂಗೀರಸ ವಸಿಷ್ಠಗೌತಮ ವಿಶ್ವಾ- ಮಿತ್ರ ಮಾರ್ಕಾಂಡೇಯ ಚ್ಯವನರು ಚ್ಯವನ ಭಾರದ್ವಾಜ ಬಕದಾಲ್ಭ್ಯರಿಗೆ ನಮಿಸುವೆ 3 ಪಂಡಿತ್ವಾಲ್ಮೀಕಿ ಕೌಂಡಿಣ್ಯ ಕೌಂಡಿಣ್ಯ ಅಗಸ್ತ್ಯಮುನಿ ಮರೀಚರಿಗೆ ನಾನು ನಮೋಯೆಂಬೆ4 ಶೇಷಗಿರಿವಾಸನ ಆಕಾಶನಳಿಯನೆ ವೆಂಕ- ಟೇಶ ನೀ ನಮ್ಮನೆ ದೈವ ಮನೆದೈ- ವ ಸಲಹೆನ್ನ ಪದ್ಮಾವತೀಶ ಪರಮಾತ್ಮ 5 ಮಂಗಳಾಂಗನೆ ನೀನು ಮಂಗಳಮಹಿಮನೆ ಮಂಗಳದೇವಿ ರಮಣನೆ ನೀನೆಮಗೆ ಜಯ ಮಂಗಳವ ಕೊಟ್ಟು ಸಲಹೆನ್ನ 6 ವಾಸುದೇವನೆ ನೀನು ವಾಸುಕಿಶಯನನೆ ವಾಸವಿಯ ರಥವ ನಡೆಸಿದೆ ನಡೆಸಿದಂಥ ಶ್ರೀನಿ- ವಾಸ ನೀನೆಮಗೆ ದಯಮಾಡು 7 ಎನ್ನಲ್ಲೆ ನೀನಿದ್ದು ನಿನ್ನಗುಣ ಬಹುರೂಪ- ವನ್ನು ತಿಳಿಸದಲೆ ಇರುವೋರೆ ಇರುವೋರೆ ನೀನು ಪ್ರ- ಸನ್ನನಾಗೆನಗೆ ದಯಮಾಡು 8 ಕಾಲ ಕಾಲಕೆ ನಿನ್ನ ನಾಮವನು ನಾಲಿಗೆ ಮ್ಯಾಲಿಟ್ಟು ನಿನ್ನ ನೆನೆವಂತೆ ನೆನೆವಂತೆ ಅನಿರುದ್ಧ 9 ಕಾಮಕ್ರೋಧವು ಮದ ಮಾತ್ಸರ್ಯ ಲೋಭಗಳು ಮೋಹ ಮಡುವಿನಲಿ ಮುಣುಗಿದೆ ಮುಣುಗಿದೆನೊ ಎನ್ನ ಕೈ ನೀನೆ ಪಿಡಿದೆತ್ತಿ ಕರೆದೊಯ್ಯೊ 10 ಐದು ಮಂದ್ಯೆನ್ನಲ್ಲಿ ಐದಾರೆ ಮಾರಾಯ ಬೈದರು ಬಿಡರೋ ಎನ್ನೀಗ ಎನ್ನೀಗ ಕಟ್ಟಿ ಕೊಂಡೊಯ್ದು ಹಾಕುವರೊ ಯಮನಲ್ಲಿ 11 ಆರು ಮಂದ್ಯರಿಗಳು ಕ್ರೂರ ಶತ್ರುಗಳುಂಟು ಘೋರಬಡಿಸುವರೊ ಅನುಗಾಲ ಅನುಗಾಲ ದುರ್ವಿಷಯ ತಾವೆನಗೆ ಕಲಿಸಿ ದಣಿಸೋರು 12 ಹತ್ತು ಮಂದಿ ಯೆನ್ನ ಸುತ್ತ ಮುತ್ತಿರುವರೊ ಕೂಪ ಭವದೊಳು ಭವದೊಳಗೆ ಬಳಲುವೆನು ಚಿತ್ತಕ್ಕೆ ತಂದು ದಯಮಾಡು 13 ಸಂಚಿತಾಗಾಮಿಗಳ ಮುಂಚೆ ದಹಿಸಿ ಈ ಪ್ರ- ಪಂಚವನು ಬಿಡಿಸೊ ಪರಮಾತ್ಮ ಪರಮಾತ್ಮ ನೀಯೆನ್ನ ವಂಚನಿಲ್ಲದಲೆ ಸಲಹೈಯ್ಯ 14 ಜ್ಞಾನ ಭಕ್ತಿ ಗಾನ ವೈರಾಗ್ಯ ಭಾಗ್ಯಗಳು ಜಾನಕಿರಮಣ ಜಗದೀಶ ಜಗದೀಶ ಜನಕನ ಜಾಮಾತ ನೀನೆ ತಿಳಿಸಯ್ಯ 15 ದ್ವಾಸುಪರುಣನಂತೆ ಈ ಶರೀರದೊಳಿದ್ದು ಏಸೇಸು ಜನ್ಮಕ್ಕಗಲದೆ ಅಗಲದಂತಿದ್ದು ಉ- ದಾಸೀನವ ಮಾಡೋದೊಳಿತಲ್ಲ 16 ಇಂದುಕುಲಜಾತ ನಿನ್ನೊ ್ಹಂದಿಕೊಂಡಿದ್ದು ಎಂದೆಂದಿಗು ಬಿಡದೆ ಗೆಳೆತನ ಗೆಳೆತನವಿದ್ದಲ್ಲಿ ಸಂದೇಹವ್ಯಾಕೊ ಸಲಹಲು 17 ಮುಕ್ತಿದಾಯಕ ನಿನ್ನ ಭಕ್ತರೇಸುಮಂದಿ ಹೆತ್ತಾಯಿಸುತರೇನವರೆಲ್ಲ ನಾ ಹುಟ್ಟಿದೆನೆ ಮತ್ತೆ ಮಲತಾಯಿ ಉದರದಿ 18 ಶ್ರೀಶನೆ ಕೇಳ್ ನಿನ್ನ ದಾಸರಂಗಳದಲ್ಲಿ ಬೀಸಿ ಬಿಸಾಕೊ ಎನ್ನನು ಎನ್ನ ಹರಿದಾಸರ ದಾಸತ್ವಯೆನಗೆ ಕೊಡಿಸಯ್ಯ 19 ಅಂಬರೀಷ್ವರದ ನಿನ್ನ ್ಹಂಬಲೆನಗಿರಲಯ್ಯ ಬಿಂಬ ಮೂರುತಿಯೆ ಬಿಡದೆನ್ನ ನಿನ್ನೂರಲ್ಲಿ ಇಂಬುಕೊಟ್ಟೆನ್ನ (ಅ)ಲ್ಲಿರಿಸಯ್ಯ 20 ಕಡಿದು ಹೊಡೆದು ಬಯ್ದು ಬಂದು ಕಾಲಿಂದೊದ್ದ- ರ್ಹಿಡಿಯದೆ ಅವರ ಅಪರಾಧ ಅಪರಾಧವೆಣಿಸದಿರೆ ನಡೆದರೊ ನಿನ್ನ ಪುರಕಾಗ 21 ಪುಟ್ಟ ಪ್ರಹ್ಲಾದ ಧ್ರುವ ಕೊಟ್ಟರೆಷ್ಟು ಭಾಗ್ಯ ಕಷ್ಟಕ್ಕೆ ಬಂದು ಒದಗಿದೆ ಒದಗಿ ಬಂದವರ ಆಪತ್ತು ಬಂಧನ ಬಿಡಿಸಿದೆ 22 ತನ್ನ ಮಗನ ಕರೆಯೆ ಎನ್ನ ಕರೆದನೆಂದು ನಿನ್ನ ದೂತರನು ಕಳಿಸಿದೆ ಕಳಿಸಿದ್ಯಜಮಿಳಗೆ ಮನ್ನಿಸಿ ಕೊಟ್ಟ್ಯೊ ನಿನಲೋಕ 23 ತಿರುಕ ತಂದವಲಕ್ಕಿ ಕರಕÀರನೆ ನೀಮುಕ್ಕಿ ದೊರೆತನವ ಕೊಟ್ಟು ದಾರಿದ್ರ್ಯ ದಾರಿದ್ರ್ಯ ಕಳೆದದ್ದು ಅರಿಕಿಲ್ಲವೇನೊ ಜನಕೆಲ್ಲ 24 ನಿಲ್ಲಬೇಕೆಂದಿಟ್ಟಿಕಲ್ಲು ಕೊಟ್ಟವಗೆ ಕೈ- ವಲ್ಯವನು ಕೊಟ್ಟ್ಯೋ ಕರುಣಾಳು ಕರುಣಾಳು ಬುಕ್ಕಿ ್ಹಟ್ಟು ಮಲ್ಲಿಗೆಯ ಮಾಲೆಗೊಲಿತೀಯೊ 25 ಕರೆದು ಕಂಸಗೆ ಕೊಟ್ಟು ಕೊಲಿಸಬಂದ- ಕ್ರೂರ(ಗೆ) ನದಿಯಲ್ಲೆ ನಿನ್ನ ನಿಜರೂಪ ನಿಜರೂಪ ತೋರಿದ್ದು ಇದುಯೇನು ನಿನ್ನ ಮಹಿಮೆಯು 26 ಗಂಧಕ್ಕೆ ಒಲಿದು ಕುಬ್ಜೆಯ ಡೊಂಕನೆ ತಿದ್ದಿ ಸುಂದರಿಯ ಮಾಡಿ ಸುಗುಣನೆ ಸುಗುಣನೆ ನೀನಾಕೆ- ಯಂಗಸಂಗ್ಯಾಕೆ ಬಯಸಿದಿ 27 ಕಲ್ಲಾದಹಲ್ಯೆಯನು ಕಡು ಚೆಲ್ವೆಯನು ಮಾಡಿ ಎಲ್ಲಿ ಮಲಗಿದ್ದ ಮುಚುಕುಂದ ಮುಚುಕಂದನ ಗುಹೆ- ಕೈವಲ್ಯ ಕೊಡಹೋದ್ಯೊ 28 ಮಗ್ಗವನೆ ಹಾಕಿ ಮಾರುಬಟ್ಟೆ ನೇದಿಲ್ಲ ರೊಕ್ಕವನೆ ಕೊಟ್ಟು ತರಲಿಲ್ಲ ತರಲಿಲ್ಲ ದ್ರೌಪದಿಗೆ
--------------
ಹರಪನಹಳ್ಳಿಭೀಮವ್ವ
ಕರುಣದಿ ಕಾಯಬೇಕಿನ್ನು ಪ್ರಾಣೇಶ ಅರಿಯೆನೊ ಅನ್ಯರ ಜಗದ್ವಾಸ ಪ. ಪರಿಪರಿ ಬವಣೆಯ ಪರಿಹಾರಗೈಸುತ ತ್ವರಿತದಿ ಸಲಹೊ ಭಾರತಿಗೀಶ ಅ.ಪ. ಅನ್ನವಸನಗಳಿಗೆ ಅಲ್ಪರ ತೆರದೊಳು ಬನ್ನಬಡುತಲಿರಲು ನಿನ್ನ ಪಾದವ ನಂಬಿ ನೀ ಗತಿ ಎನುತಿರೆ ಮನ್ನಿಸಿದ ಮಹಿಮ ನಿಸ್ಸೀಮ 1 ಮನದಿ ಬಹುನೊಂದು ನಿನ್ನ ಘನತೇನೆಂದು ಅನುದಿನ ಕಾಯೊ ಎಂದು ಎನುತಿರೆ ಸ್ವಪ್ನದಿ ಹನುಮ ನಿನ್ನಭಯ ಹಸ್ತ ವನೆ ಶಿರದಿ ಇಟ್ಟೆ ಶ್ರೇಷ್ಠನೆ 2 ಉಭಯ ಹಸ್ತವು ಎನ್ನ ಶಿರದ ಮ್ಯಾಲಿಡುತಲಿ ಅಭಯ ಕೊಡುತಲಿರಲು ನಿರ್ಭಯದಿಂದ ನಾ ನಿನ್ನ ಭಜಿಪೆನಯ್ಯ ಶುಭಗುಣನಿಲಯ ಜೀಯಾ 3 ಹನುಮ ಭೀಮಾನಂದ ಮುನಿಯಾಗಿ ಜಗದಲಿ ಹನನಗೈಯುತ ದನುಜರ ವನಜಾಕ್ಷ ಹರಿಯನು ಘನವಾಗಿ ಸೇವಿಸಿ ಅನುದಿನದಲಿ ಕಾಯ್ವೆ ಸುಜನರ4 ಶ್ವಾಸಜಪವ ಮಾಡಿ ರಾಶಿ ಜೀವರ ಕಾಯ್ವೆ ಶ್ವಾಸ ನಿಯಾಮಕನೆ ಶ್ರೀಶ ಶ್ರೀ ಗೋಪಾಲಕೃಷ್ಣವಿಠ್ಠಲನಿಗೆ ಕೂಸು ಎಂದೆನಿಸಿರುವೆ ನೀ ಕಾವೆ 5
--------------
ಅಂಬಾಬಾಯಿ
ಕರುಣದೆನ್ನ ಕರಪಿಡಿ ಕಾಯೋ ಪ ಸಿರಿನಾರಾಯಣ ಶರಣೆಂಬೆ ಅ.ಪ ಮೇಲ್ ಮೇಲ್ ಗುಣಗಾನವ ಮಾಡೆ ಬಾಲ್ಯಮೊದಲು ಮುದಿತನ ದೊಳಗುಂ ಸೌ ಶೀಲ್ಯ ಸ್ತುತಿಪೆ ಶುಕನುಡಿಯಂತೆ 1 ದಶರೂಪಗಳಂ ಧರಿಸುತ ಮರೆಸಲು ವಿಶ್ವವ್ಯಾಪಕಗುರು ತರವೇ ಕೃಷ್ಣನಾಮನಾವೆಯೊಳು ಬಹೇ 2 ವೈನತೇಯನನೊಡಗೊಂಡು ಬಹೆ ನಿನ್ನ ಸೆರಗ ಪಿಡಿಯುತ ಬರುವೆ3 ಸುಮನಸ ಪೂಜಿತ ನಮಿಸುವೆ ನಾಂ ಭ್ರಮೆಗಳ ಬಿಡಿಸುತ ಭವಭಯ ಹರ¸ ಕಮಲನಯನ ಹೆಜ್ಜಾಜೀಶ 4
--------------
ಶಾಮಶರ್ಮರು
ಕರುಣವ ಬೀರು ಚೆನ್ನ ಕಾಯಬೇಕೋ ಎನ್ನಮರೆತಿರೆ ಕಾವರ ಕಾಣೆಪ. ಸೊಪನ ಜಾಗರದಲ್ಲಿ ನಿನ್ನ ಧ್ಯಾನವೆ ಬಂದುತೃಪ್ತನಾಗಿ ನಾನು ಜೀವಿಸುವೆಕಪಟದ ನುಡಿಯಲ್ಲ ನೀನೆ ಬಲ್ಲೆವಿಪತ್ತುಗಳನೆ ಬಿಡಿಸಯ್ಯ 1 ಕಡಲಮಗಳ ಗಂಡ ಕಾಮಧೇನು ನೀ ಕಂಡ್ಯಾಬಡವ ನಿನ್ನಡಿಗೆ ಪೊಡಮಡುವೆಒಡಲ ಬಳಿಯ ನೆಳಲಂತೆ ಬಿಡದೆ ನಿನ್ನದೃಢವಾಗಿ ನಾನು ಕೂಡುವೆನು 2 ತಂಡ ತಂಡದ ವ್ಯಾಧಿಯ ಉಂಡು ಉಂಡು ಬಳಲಿದೆಕಂಡ ಕಂಡವರ ಬೇಡಿ ನೊಂದೆಹಿಂಡುಹಿಂಡುಗಟ್ಟಿ ಬಂದ ಚಂಡ ದಂಡಧರನವರುತುಂಡು ತುಂಡು ಮಾಡಿ ಕಾಡುವರು 3 ಘೋರತರ ವ್ಯಾಧಿಗಳ ತೋರಿ ತೋರಿ ನರಕದಿಮುರಹರನುಣಿಸದೆ ಬಿಡನುಮೀರಿ ಮೀರಿ ಬಹ ಮೃತ್ಯು ಆರನಂಜಿಸುವುದುಭಾರಿ ಭಾರಿ ಗಳಿಸಿದ ಪಾಪ 4 ಹರಿ ನಿನ್ನ ಚರಣದ ಸ್ಮರಣೆ ಒಂದಿರೆ ಸಾಕುಮರಣಗಿರಣಕಂಜೆನಯ್ಯಶರಣಜನರು ನಿನ್ನ ಪ್ರಾಣಕ್ಕೆ ಸರಿಯೆಂಬೆಸಿರಿರಮಣನೆ ಸಲಹೆನ್ನ 5 ಶರಧಿಯೊಳಾಡುವ ಮಂದರಧರ ವರಾಹನೆಹಿರಣ್ಯಾಕ್ಷವೈರಿ ವಾಮನನೆಪರಶುರಾಮನೆ ರಘುರಾಮ ಕೃಷ್ಣ ಬೌದ್ಧನೆಧುರದಿ ಕಲ್ಕಿಯಾಗಿ ಮೆರೆದೆ 6 ಕರಕರ ಮತತತ್ವವ ಒರದೊರೆದು ಪೇಳುವೆಥÀರಥರದ ಹಿರಿಯರನೆಲ್ಲಮಿರಿ ಮಿರಿ ಮಿಂಚುತಿಹ ಮುರಹರನ ಭಜಿಸದೆಹರಿಹರಿಯೆಂದು ಪೇಳೆನೊಮ್ಮೆ 7 ಮನೆಮನೆವಾರ್ತೆಗೆ ಧನಂಗಳ ಗಳಿಸಿದೆಚಿನಿಚಿನಿಯಂಬರಕೆ ಮರುಳಾಹೆಮನೆಮನೆ ಮಹಿಮೆಯ ಕಾಣೆ ಕಾಣೆ ಕೆರೆಗಳನೆನೆನೆನೆದಾಡುತ್ತ ನಾ ಭಜಿಸಿ 8 ತನು ಜೀರ್ಣವಾಯಿತು ಕರಣ ಎನ್ನಿಚ್ಛೆಯೊಳಿಲ್ಲಮನವೆನ್ನ ಮಾತು ಕೇಳದಯ್ಯಇನಿತು ಸಂಕಟದವ ಇನ್ನು ನಾನೆಂತರ್ಚಿಪೆವನಜನಾಭನೆ ಹಯವದನ9
--------------
ವಾದಿರಾಜ
ಕರುಣಾಕರ ಭಕ್ತ ಪಾರಾಯಣ ಸತ್ಯನಾರಾಯಣ ಪ ಭಕ್ತಿ ಭಾವದೆ ನಿನ್ನ ಸೇರಿದೆನು ವ್ರತ ಮಾಡಿದೆನು ಸತ್ಯ ದೇವನೆ ಕೃಪೆ ತೋರುವುದು ವರ ನೀಡುವುದು ಸತ್ಯ ದೇವೇಶನೆÀ ಬೇಡುವೆನು ನುತಿ ಮಾಡುವೆನು 1 ಗಂಧ ಪುಷ್ಪಾಕ್ಷತೆ ದೀಪಗಳಿಂ ಪಂಚಫಲಂಗಳಿಂ ಇಂದಿರೇಶನೆ ನಿತ್ಯ ಭಾವಿಸಿದೆ ವಂದಾರು ಮಂದಾರ ಪಾಲಿಸೆನ್ನನು ಬೇಡಿಕೊಂಬೆನು 2 ಮೌನೀಶ ವಂದ್ಯನೆ ಸರ್ವೇಶನೆ ದೀನಪಾಲಕನೆ ಸುಜ್ಞಾನ ಭಾವಿಪುದು ನಿಜತೋರುವುದು ದಯೆಯಿಂದ ಬಹು ವಿಧದಿಂದ 3
--------------
ಬೇಟೆರಾಯ ದೀಕ್ಷಿತರು
ಕರುಣಿಸು ಕರುಣಿಸು ಚನ್ನಕೇಶವನೇ ಕರುಣಿಸು ನಾ ನಿನ್ನ ದಾಸನೆಂತೆಂದು ಪ ಸಹÀಸ್ರನಾಮಗಳೀಶ ಬೇಗ ಮುಕ್ತಿಯನು 1 ನಂಬಿದೆ ಹರಿ ನಿನ್ನ ಚರಣವ ದೇವಾ ಅಂಬುಜ ನಯನನೆ ನಿನ್ನ ಭಕ್ತಿಯನು 2 ಬಹಳ ನೊಂದೆನು ಸಂಸಾರ ಜಾಲದಲೀ ಇಹ ಯಾತ್ರೆ ಮುಗಿಸುತ್ತ ಪರಗತಿಯನ್ನು 3 ವರ ದೂರ್ವಾಪುರದಲ್ಲಿ ನಿರುತನಾಗಿದ್ದು ಸರಸದಿ ಭಕ್ತರ ಪೊರೆವ ಶ್ರೀ ಹರಿಯೇ 4
--------------
ಕರ್ಕಿ ಕೇಶವದಾಸ
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸೆನ್ನ ಗುರು ಮಂತ್ರಾಲಯ ನಿಲಯಾ ಶ್ರೀ ನರಹರಿ ಗತಿ ಪ್ರೀಯಾ ಪ. ಹರಿಶಯ ಮರುತರ ಆವೇಶಕೆ ನಿಲಯಾ ನಂಬಿದೆ ಶುಭಕಾಯಾ ಅ.ಪ. ತರಳತನದಿ ಶ್ರೀ ನೃಹರಿ ಶಾಂತನಾಗೇ ಸುರರೆಲ್ಲರು ನಿಮಗೇ ಎರದÀು ಕೀರ್ತಿ ಹಿರೆತನವಹಿಸಿದ ರಾಗೇ ಅದರಂದದಿ ಈಗೇ ವರ ಯತಿಗಳು ಹರಿದಾಸರು ವಂದಾಗೇ ಅಘ ನೀಗೇ ಧರೆ ಕಲ್ಪ ಧ್ರುಮವೆಂದು ನಿಮ್ಮ ಬಳಿಗೇ ವಪ್ಪಿಸುವರು ಅಡಿಗೇ 1 ಎಮ್ಮ ಗುರುಗಳಿಂದ್ಹೇಳಿದ ನುಡಿ ಮರೆದೇ ನಿಮ್ಮಡಿಗೆರವಾದೇ ಸಮ್ಮತದಲಿ ಮೃತ್ತಿಕೆಯನು ಸೇವಿಸದೇ ಹಮ್ಮಿನಲಿ ಮೈಮರೆದೇ ನಿಮ್ಮ ಸುಕೀರ್ತಿಯ ತಿಳಿಸು ತಿಳಿಯದಾದೇ ಅತಿ ಭಕ್ತಿಯ ಜರಿದೇ ನಿಮ್ಮ ಕರುಣವಿರಲದರಿಂದೀಗರಿದೇ ತನುಮನವಪ್ಪಿಸಿದೇ 2 ಕೃತಿ ದ್ವಿದಳಾತ್ಮಕದಪರಾಧ ಪಡಿಸಿತು ಬಹು ಬಾಧ ಸಂದಿತು ಕಾಲವು ಮುಂದರಿಯುವ ಮೋದ ಸಂದಿಸಿತುತ್ಸಹದಾ ನಂದಕೆ ಕಲಿ ಮಲ ತೊಳೆಯಲು ಮೌನದಾ ಪರಿ ಅರಿತೆ ಸುಭೋಧಾ ಕುಂದೆಣಿಸದೆ ಪೊರೆದೆನ್ನ ನಿಮ್ಮಗಾಧಾ ಕೃಪೆತೋರಲು ಬಹು ಮೋದಾ 3 ಎಲ್ಲಿ ನೋಡಲಲ್ಲಲ್ಲಿ ನಿಮ್ಮ ವಾಸಾ ಪುರಗಳು ಜನ ತೋಷಾ ಸೊಲ್ಲು ಸೊಲ್ಲಿಗೇ ನುತಿಪ ಗಾನ ಘೋಷಾ ಮಹಿಮೆಗಳ ಪ್ರಕಾಶ ವಲ್ಲದಾಯಿತ್ಯಾತಕೊ ಎನಗಭಿಲಾಷಾ ಬಲ್ಲವರೀಪರಿ ಮಾಡುವರೇ ಮೋಸಾ ಸದ್ಭಕ್ತರಲಾಭಾಸಾ 4 ಒಂದು ದಿನದ ಮೃತ್ತಿಕೆ ಜಲ ಸೇವಿಂದ ಪೊಂದಿದೆ ನಿಮ್ಮ ಪದಾ ಒಂದಾಗಲಿ ಗುರುವೆನಿಸಿದರೆಲ್ಲರದಾ ಮನವಮ್ಮನ ವಾದಾ ನಂದವು ಶ್ರೀ ನರಹರಿ ತಾ ಪರಿಕಿಸಿದಾ ನಂದವು ಬಹು ಮೋದಾ ಸಂದಲಿ ಗೋಪಾಲಕೃಷ್ಣವಿಠಲನಿಂದಾ ಎಣಿಸದೆ ಬಹು ಕುಂದಾ 5
--------------
ಅಂಬಾಬಾಯಿ
ಕರುಣಿಸೊ ಗುರು ತಾರಿಸೊ ಶರಣರಕ್ಷಕ ನಮ್ಮ ಕರುಣಾಕರ ದೇವ ಧ್ರುವ ¨Àವಜನ್ಮದಲಿ ಬಂದು ಬಹುಬಳಲಿದೆ ನಾನು ಅವಿದ್ಯದಾಟಕೆ ಐವರು ಕೂಡಿ ತಾ ಜೀವನ ಮುಕ್ತಿಗಾಣಿಸಗೊಡದಿಹರು 1 ಮೂರೊಂದು ಮಂದಿಯು ಸೇರಗೊಡದೆ ಪಥ ಆರುಮಂದಿಯ ಕೂಡಿ ಕಾಡುತಲಿ ಆರು ಮತ್ತೆರಡುಮಂಡೆಯ ಕಾವಲಿಗೆ ನಾನು ಆರೆನಯ್ಯ ಶ್ರೀಗುರುಶಿರೋಮಣಿಯೆ 2 ಹತ್ತು ಹೊಳಿಯು ಸುತ್ತ ಅಡ್ಡಗಟ್ಟಿಹುದು ಪಥ ನಡಲೀಸದೆ ಇಂತಿವ ತಾರಿಸಿ ಮೂಢsÀಮಹಿಪತಿಯ ಸಂತತ ಸದ್ಗತಿಸುಖ ಈವುದೆನಗಿನ್ನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕರುಣಿಸೊ ಶ್ರೀ ಗುರುರಾಜ ಬರದ್ಯಾಕೆ ಎನ್ನೊಳು ದಯ ಪ ದಯಮಾಡೊ ಶ್ರೀ ಗುರುರಾಜ ಹಯವದನನಿಗತಿ ಪ್ರಿಯ ಅ.ಪ ಒಲಿಸಾದೆ ವಿದ್ಯೆಗಳನ್ನು ಬಾಲತನದಿ ಬಹುಕಾಲ ಕಳೆದೆ ಕುಲೀಲೆಗಳಲ್ಲಿ ಛಲವ್ಯಾಕೆ ಎನ್ನೊಳು ಬಲ್ಲಿ 1 ಜ್ಞಾನರಹಿತ ಪ್ರಾಯದಿ ಮಾನಾಪೇಕ್ಷೆಯನೆ ಮಾಡಿ ಮೌನಿ ವೇಷವನೆ ಧರಿಸಿ ಹೀನಾಚರಣೆಯಲ್ಲಿರುವೆ 2 ಪತಿತಾಗ್ರಣಿಯು ನಾ ಬಲ್ಲಿ ಪತಿತಪಾವನ ನೀ ಬಲ್ಲೆ ಗತಿಪದ ಮತಿಯನಿತ್ತು ರತಿಪತಿಪಿತನ ತೋರಿ3 ಬಲ್ಲವರನು ರಕ್ಷಿಪುದು ಅಲ್ಲ ಬಿರುದು ಘನವಾದ್ದು ಅಲ್ಪನ ಪೊರೆಯಲು ನಿನಗೆ ಒಳ್ಳೆ ಕೀರುತಿ ಬರುವುದು 4 ಸರ್ವಜ್ಞ ನಿನಗೆ ನಾನೆಂತೋ ಉರ್ವೀಭಾರನು ನಾ ಪೇಳ್ವೆ ಪರ್ವ ಪಂಚಕಗಳ ಕಳೆ ಶ್ರೀ ನರಹರಿಯನೆ ಪೊಂದಿಸಿ 5
--------------
ಪ್ರದ್ಯುಮ್ನತೀರ್ಥರು