ಒಟ್ಟು 1305 ಕಡೆಗಳಲ್ಲಿ , 97 ದಾಸರು , 1006 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತತ್ವೋಪದೇಶತೋರಿಸಬೇಕು ನಿನ್ನ ನಿಜವನು ಕಾರುಣ್ಯನಿಧಿ ಗುರುರಾಯ ನೀನು ಪತೋರುವ ತೋರಿಕೆಯನು 'ುೀರಿ 'ುಕ್ಕಿಹ ಪಾರಮಾರ್ಥಿಕ ಸಚ್ಚಿದಾನಂದ ರೂಪವ ಅ.ಪಕಾಯ ಬಂದಂದವೆನಗೆ ಕಾಣಿಸದು ಮಾಯಾಪಾಶದ ತೊಡರೆನ್ನ ಬಿಡದುಜಾಯಾಸುತಾದ್ಯರ ಬರಿಯ ಮೋಹದಲಾಯು ಬೀಯವಾಗುತಲಿದೆ ಬಿಡಿಸಿದ ಬೇಗದಿ 1ಪ್ರಕೃತಿಯೊಳ್ ಕೂಡಿ ಪ್ರಕೃತಿಧರ್ಮಗಳಾದ ಸುಕೃತ ದುಷ್ಕøತ ಫಲ ರೂಪವಾದ'ಕರಿಪ ಸುಖದುಃಖದನುಭವಕದಕೊಳಗಾಗದಕಳಂಕದಿರ'ದೆಂಬುದು ತೋರದಿದೆ ದೇವ 2ಆಕಾಶದೊಳು ದೀಪಪ್ರಕಾಶವು ಏಕವಾದಂತೆ ಚಿದಚಿತ್‍ಸಂಮೇಳವುಐಕ್ಯವಾಗಿರಲಚಿದ್ಭಾವವಳಿದು ಚಿತ್ತು ಏಕವಾಗಿಹ ನಿತ್ಯನಿರ್ಗುಣ ರೂಪವ 3ಅರಿ'ದ್ದೂ ಮರವೆಯೊಳರಿವರಿಯದೆ ಪಿರಿದಾಗಿ ಹಮ್ಮು 'ಹರಿಸುತಿಹುದುಮರವೆಯಹಂಭಾವ ತೋರದರಿ'ನೊಳು ಬೆರೆದು ಬೆರೆದ ಪರಿ ತೋರದಿರುವ ಹಾಗೆ4ಮೃತ್ತಿನಿಂದಾದ ಘಟಶರಾವಾದಿಗಳು ಮತ್ತೊಂದು ರೂಪವಾದ ತೆರದಲಿಚಿತ್ತೊಂದುಪಾಧಿುಂ ನಾನಾತ್ವವಾಗಿರೆ ಕೃತ್ರಿಮ'ದ ಕಡೆಗೊಳಿಸಿ ನಿಜದೊಳಿರಿಸಿ5ಬೀಜದಿಂದಾದ ತರು ಭಿನ್ನರೂಪಾಗಿ ಬೀಜದಾಕಾರ ಮಾಜಿದಂದದಲಿವ್ಯಾಜರ'ತ 'ಭ್ರಾಜಮಾನ ಬ್ರಹ್ಮಬೀಜದಿಂ ಮೂಜಗವಾದ ಬಗೆಯದೇನು 6ನಂಬಿದೆ ನಿನ್ನ ಚರಣಸರೋಜವ ಅಂಬುಜನಾಭ ಗುರು ವಾಸುದೇವನಂಬುಗೆಯನು ಕೊಟ್ಟು ಕರುಣವೆನ್ನೊಳಗಿಟ್ಟುುಂಬಿಟ್ಟು ಸಲ'ದ ವೆಂಕಟರಮಣ ನೀ7
--------------
ತಿಮ್ಮಪ್ಪದಾಸರು
ತಂದೆ ವಿಜಯರಾಯ ವ್ಯಾಳಿಗೆಬಂದ್ಯೊ ವಿಜಯರಾಯ ||ಹಿಂದೇಸು ಜನ್ಮವು ಮುಂದೇಸು ಜನ್ಮವುಒಂದು ತಿಳಿಯದೆಂದಿಗು ಯೆನ್ನಯ ಪ ಸೂರ್ಯನ ಸುತನಂತೆ ಅಲ್ಲಿ ಮಹಶೌರ್ಯ ದೂತನಂತೆ ||ಕಾರ್ಯಾಕಾರ್ಯವು ತಿಳಿಯದೆ ನಿನ ಪರಿಚಾರ್ಯನ ಯೆಳೆತಿರೆ ಭಾರ್ಯಳು ಮೊರೆಯಿಡೆ 1 ಮೋದ ತೀರ್ಥರೆಂ-ದೊದರಿದಳೊದರಿದಳ್ ವಿಜಯರಾಯರೆಂದು 2 ಕರಗಳನೇ ಕಟ್ಟಿ ಯೆಳೆಯುತಿರೆದೊರೆಗಳನೇ ಮುಟ್ಟಿ ||ಸಿರಿ ಮೋಹನ ವಿಠಲನ ಪದವ ತೋರಿಧರಿಗೆ ತಂದುಬಿಟ್ಟೆ ಕರುಣಾಳುವೆ ಯೆನ್ನ 3
--------------
ಮೋಹನದಾಸರು
ತನುವಿದು ನಿತ್ಯವಲ್ಲ ಮನವು ನಿಶ್ಚಲ ಅಲ್ಲ ಪ ಕನಸಿನಂತೆ ಜೀವಿತವೆಲ್ಲ ಇನಿತು ಶಾಂತಿಯ ತಾಣ ಅಲ್ಲ ಅ.ಪ ಜಲಚರಂಗಳು ವನಚರಂಗಳು ಅಲೆವ ಪಕ್ಷಿಕೀಟಕ್ರಿಮಿಗಳು ಕಲುಷ ವಿಮಲವೆಂಬುದನರಿಯವು ಮಾನವ ಜನ್ಮಕೆ 1 ಜನುಮಗಳೊಳು ಹಿರಿಯದೆನಿಪ ಮನುಜ ಜನ್ಮವನಾಂತ ಮೇಲೆ ವಿನಯ ನಯ ವಿಧೇಯತೆಯಿಂದ ವನಜನಾಭನ ನೆನೆಯದಿರ್ದೊಡೆ 2 ಭಜಿಪ ಭಕ್ತರ ಕೂಗಿಗೊಲಿದು ಗಜವ ಪಾಲಿಸಿದಂತೆ ಬಂದು ನಿಜಪದಂಗಳ ತೋರ್ಪ ಮಾಂಗಿರಿ ವಿಜಯರಂಗನ ಸನ್ನುತಿ ಗೈಯದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆನೆಂದರೆ ಮನ ತನುಮಧ್ಯೆಯರ ತನುವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ1 ಚರಣದ ಪೂಜೆಯೊಳಿರುವೆನೆಂದರೆ ಕರವರೆಡು ಕೋಮಲೆಯರನರಸುವುವು ಹರಿಕಥಾಶ್ರವಣದೊಳಿರೆ ಈ ಕಿವಿಗಳು ಹರಿಣಾಕ್ಷಿಯರ ಕಂಠಸ್ವರಕೆ ಮೋಹಿಪವಯ್ಯ 2 ದುರಿತದೂರನ ನಾಮ ಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸೋಕ್ತಿ ಪಡೆದು ಚರಣಶ್ರೀತುಳಸಿಯನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಿಶರೀರವಿ ದುನ್ನುತಸ್ತನವುಳ್ಳ ಕನ್ನೆಯರೊಳ್ ತನ್ನ ಸುರತಸುಖವನೆ ಚಿಂತಿಸುವದು ಎನ್ನಾಧೀನದೊಳಿಲ್ಲ ನೀನೆ ಬಲ್ಲೆ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ಹರಿ ನಿನ್ನದೇ ಸರಿ ದುರಿತಸುಕೃತಕೆನ್ನ ಗುರಿಮಾಡದೆ ಕಾಯೋ ವರದವಿಠಲ ಕೃಷ್ಣ 5
--------------
ವೆಂಕಟವರದಾರ್ಯರು
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆಂನೆಂzರÀಮನ ತನುಮಧ್ಯೆಯರತನು ವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ 1 ಚರಣದ ಪೂಜೆಯೊಳಿರುವೆನೆಂದರೆ ಕರವೆರಡು ಕೋಮಲೆಯರ ನರಸುವುವು ಹರಿಕಥಾಶ್ರವನದೊಳಿರದೆ ಈ ಕಿವಿಗಳು ಹರಿಣಾಕ್ಷಿಯರ ಕಂಠ ಸ್ವರಕೆಮೋಹಿಪವಯ್ಯ 2 ದುರಿತದೂರನ ನಾಮಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸ್ತೋಕ್ತಿಪಡೆದು ಚರಣ ಶ್ರೀ ತುಳಸಿಯ ನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಶರೀರ ವಿದುನ್ನತಸ್ತನವುಳ್ಳ ಕನ್ನೆಯರೋಳ್ ತನ್ನ ಸುರತಸುಖವನ್ನ ಚಿಂತಿಸುವದು ಯನ್ನಾಧೀನದೊಳಿಲ್ಲ ನೀನೇ ಬಲ್ಲಿ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ದುರಿತ ಕೃತಕೆನ್ನ ಗುರಿಮಾಡದೆ ಕಾಯೋ ವರದ ವಿಠಲ ಕೃಷ್ಣ 5
--------------
ಸರಗೂರು ವೆಂಕಟವರದಾರ್ಯರು
ತನ್ನ ಪ್ರಾಪ್ತಿಯ ಫಲವ ತಾನರಿಯದೆ ಪ ಇನ್ನು ನುಡಿವುದು ಮೂರ್ಖತನವಲ್ಲದೆ ಅ ಸರಸಿಜೋದ್ಭವನು ಫಣೆಯೊಳು ಬರೆದು ನಿರ್ಮಿಸಿದತೆರನೊಂದು ಬೇರುಂಟೆ ತಾನರಿಯದೆಕೆರಕೊಂಡು ಕಂಡವರ ಕೂಡೆ ತಾನಾಡಿದರೆನೆರೆ ದುಃಖವಿದು ಬಿಟ್ಟು ಕಡೆಗೆ ತೊಲಗುವುದೆ 1 ವಿಧಿ ಬೆನ್ನ ಬಿಡಲರಿವುದೆಅಡಿಗಡಿಗೆ ಶೋಕದಲಿ ಅವರಿವರಿಗುಸುರಿದರೆಬಡತನವು ತಾ ಬಿಟ್ಟು ಕಡೆಗೆ ಕದಲುವುದೆ2 ದೆಸೆಗೆಟ್ಟು ನಾಡದೈವಂಗಳಿಗೆ ಎರಗಿದರೆನೊಸಲ ಬರೆಹವ ತೊಡೆದು ತಿದ್ದಲಳವೆವಸುಧೇಶ ಕಾಗಿನೆಲೆಯಾದಿಕೇಶವಸನಂಘ್ರಿಬಿಸಜವನು ಕಂಡು ನೀ ಸುಖಿಯಾಗು ಮನುಜ3
--------------
ಕನಕದಾಸ
ತಪಿಸಲಾರೆ ನಾನು ಪರಿಪರಿ ತಾಪದಲಿ ಕೃಪೆಮಡಿ ಸಲಹಿರಿ ಶ್ರೀ ಗುರುಗಳೆ ಪ. ಸುಪಥ ಕಾಣದೆ ನಿಮ್ಮ ಪಾದವನೆ ನಂಬಿದೆನು ಗುಪಿತ ಮಹಿಮರೆ ಇನ್ನು ಭವಪಾಶ ಬಿಡಿಸುತ್ತ ಅ.ಪ. ಬಂಧು ವರ್ಗಗಳನ್ನ ಬದುಕಿಸುವರು ಎಂದು ಬಂಧನದೊಳು ಬಿದ್ದು ಬೆಂದು ನೊಂದೆ ಮುಂದೆ ದಾರಿಯ ಕಾಣೆ ಮುಕ್ತಿ ಮಾರ್ಗವನರಿಯೆ ಬಂಧು ಬಳಗಗಳೆಲ್ಲ ನೀವೆಂದು ನಂಬಿದೆ 1 ಅಶನವಸನಗಳಲ್ಲಿ ಆಸೆಯನು ತೊರೆಯದೆ ವಸುಮತಿಯೊಳು ಜ್ಞಾನ ಹೀನವಾಗಿ ಪಶುವಿನಂದದಿ ತಿರುಗಿ ಕಾಲವ್ಯರ್ಥ ಕಳೆದೆ ಅಸಮ ಮಹಿಮರೆ ಇನ್ನು ಅಜ್ಞಾನ ಪರಿಹರಿಸಿ 2 ಮಮತೆಯನು ತೊರೆಯದೆ ಮಾಯ ಪಾಶಕೆ ಸಿಲುಕಿ ಮಮಕಾರದಿಂದ ನಾ ಮೈಮರೆತೆನು ನಮಿಸುವೆನು ದೈನ್ಯದಲಿ ನಾನೀಗ ನಿಮ್ಮ ಪದಕೆ ರಮೆಯರಸನ ತೋರಿ ಎನ್ನ ಮನ ಮಧ್ಯದಿ 3 ಪಾವನರೂಪರೆ ಪಾಪರಾಹಿತ್ಯರೆ ಪಾವಿನಶಯನಗೆ ಪರಮಪ್ರಿಯರೆ ದೇವತೆಗಳೊಡೆಯರೆ ದೇವಾಂಶ ಸಂಭವರೆ ಪಾವಮಾನಿಗೆ ಪ್ರಿಯರೆ ಪಾವನ್ನಗಾತ್ರರೆ 4 ಆಪತ್ತು ಕಳೆಯುವರೆ ಶ್ರೀಪತಿಯ ತೋರ್ವರೆ ಕೋಪಿಸದೆ ಎನ್ನೊಳು ಕೃಪೆಗೈಯ್ಯರಿ ಗೋಪಾಲಕೃಷ್ಣವಿಠ್ಠಲ ತಾನು ಹೃದಯದಲಿ ತೋರ್ಪುತೆ ಕರುಣಿಸುತ ಈ ಪರಿಯಿಂ ಸಲಹಿರಿ5
--------------
ಅಂಬಾಬಾಯಿ
ತಪ್ಪ ಪಾಲಿಸಯ್ಯ ತಿಮ್ಮಯ್ಯ ತಪ್ಪ ಪಾಲಿಸಯ್ಯಪ. ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳು ಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆಅ.ಪ. ಜಲಜನಾಭ ನಿನ್ನ ಮಹಿಮೆಯ ನೆಲೆಯನರಿಯದೆನ್ನ ಮನವದು ನೆಲೆಯಿಲ್ಲದ ಭವಜಲಧಿಯೊಳಾಡುತ್ತ ಲಲನಾ ವಿಷಯದ ಬಲೆಗೆ ಮೋಹಿಸಿ ಮನ ಸಿಲುಕಿ ಮಲಿನವಾಯ್ತು ತತ್ವದ ನೆಲೆಯನರಿಯದಾಯ್ತು ಹೀಗೆನ್ನುತ ಕಳೆದುಹೋಯ್ತು ವಿಂಶತಿ ವತ್ಸರಗಳು ತೊಳಲಿ ಸಕಲ ಭವದೊಳಗಾರ್ಜಿತವಹ1 ಹಾಳು ಮನವು ಕೂಡಿ ನಾನಾ ಚಾಳಿ ಮಾಳ್ಪುದಾಡಿ ಬುದ್ಧಿಯ ಪೇಳಿದಷ್ಟು ದುಶ್ಯೀಲವೆ ಮಾಳ್ಪುದು ಆಲೋಚನೆಯೊಳಗೆ ಬಿದ್ದರೆ ಮೇಲಿಲ್ಲವು ಕ್ಷಣಕೆ ತನ್ನಯ ಶೀಲವನೆ ಸ್ವೀಕರಿಸುತಿರುವುದು ಪೇಳಲೇನು ಕರುಣಾಳು ನೀ ಯೆನ್ನಯ2 ನಾನಾ ಕಷ್ಟಪಟ್ಟೆ ಇನ್ನಾದರು ಮಾನಿಸಬೇಕಷ್ಟೆ ಎನ್ನೊಳು ಊನ ಗ್ರಹಿಸಿ ಅನುಮಾನ ಸಾಧಿಸಿದರೆ ನಾನೆಂಬುವದೇನು ಸ್ವತಂತ್ರವ ಕಾಣೆನು ಎನ್ನೊಳಗೆ ಸಂತತ ನೀನೇ ಗತಿಯೆನಗೆ ಇದಕನು- ಮಾನವಿಲ್ಲ ಪಾದಾನತಜನರಾ ಧೀನನೆಂಬ ಬಿರುದಾನಬೇಕಾದರೆ3 ಅಪರಾಧಿಯೆ ನಾನು ಹೇಗೈ ಅಖಿಲಾತ್ಮನು ನೀನು ಹೃದಯದಿ ಕೃಪೆಯ ಬೀರಿ ತೋರಿಪ ಪರಮಾತ್ಮನೆ ಚಪಲನಾಗಿ ಎನ್ನುಪಮೆಗೆಯೊಡ್ಡಿದೆ ಸಫಲವಾಯ್ತು ಎನಗೆ ಕೀರ್ತಿಯು ಅಪಕೀರ್ತಿಯು ನಿನಗೆ ಪಾದವ ಜಪಿಸುವಂತೆ ಕರುಣಿಪುದಿನ್ನಾದರೂ ಕಪಟವಾಯ್ತೆ ಸರೀಸೃಪಗಿರಿರಾಜನೆ4 ದೂಷಣಾರಿ ನಿನ್ನ ಪಾದದ ದಾಸಗೈಯ್ಯೊ ಎನ್ನ ಎನ್ನೊಳು ದೋಷವಿಲ್ಲ ಜಗದೀಶ ಜನಾರ್ದನ ದಾಶರಥಿಯ ಕರುಣಾಶರಧಿಯೊಳಗೆ ಈಸಾಡಿದ ದಾಸ ಕಾರ್ಕಳಾ ಧೀಶ ಶ್ರೀನಿವಾಸ ರವಿಶತ ಭಾಸ ಶ್ರೀಲಕ್ಷ್ಮೀನಾರಾಯಣ ಸ ರ್ವೇಶ ಭಕ್ತಜನಪೋಷ ನೀಯೆನ್ನಯ5
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪ ಪಾಲಿಸಿಕೊಳ್ಳೊ ಜೀಯಾ ತಿಮ್ಮಪ್ಪ ವೆಂಕಟಗಿರಿರಾಯ ಪ. ಬಪ್ಪ ತನ್ನಯ ಭಕ್ತ ಜನರ ಬವಣೆಗಳ ನೊಪ್ಪನೆಂಬ ಬಿರುದಿಪ್ಪ ಭಾಸುರಕಾಯ ಅ.ಪ. ಅರವಿಂದ ಸಖನುದಯಿಸಲು ಅಜ ಗರನಂತೆ ಬೀಳುವ ತಪ್ಪು ಗುರು ಹಿರಿಯರ ಜರಿವಂಥ ತಪ್ಪು ನಿನ್ನ ಸ್ಮರಣೆಯ ಮಾಡದ ತಪ್ಪು ನಿತ್ಯ ಕರ್ಮಗಳ ಬಿಡುವ ತಪ್ಪು ಸ್ಥಿರ ಚಿತ್ತದಲಿ ನಿನ್ನ ಚರಣಾರಾಧಿಸದಂಥ 1 ಸಂಧ್ಯಾ ಕೃತ್ಯಗಳ ಕಾಲದಲಿ ಪರ ನಿಂದೆಯ ಮಾಡುವ ತಪ್ಪು ದಿವ್ಯ ಶ್ರೀ ಗಂಧ ಶ್ರೀ ತುಳಸಿ ಪುಷ್ಪಗಳ ತಾನೆ ತಂದಿರಿಸದ ಮಹಾ ತಪ್ಪು ಮಿಂದು ಮಡಿಯೊಳಿದ್ದು ಮರುಳನಾಗಿ ನಿಜ ಮಂದಗಮನೆಯಳ ಮಾತನಾಲಿಸುವಂಥ 2 ಮನ ವಚನಾದಿಗಳಿಂದ ಪರ ವನಿತೇರ ಸ್ಮರಿಸುವ ತಪ್ಪು ಪುಣ್ಯ ದಿನಗಳ ತ್ಯಜಿಸುವ ತಪ್ಪು ಪರ ಧನಾಭಿಲಾಶಿಯ ತಪ್ಪು ಕನಸಿಲಾದರು ನಿನ್ನ ನೆನೆಯದೆ ಸತಿಸುತ ತನುವೆನ್ನದೆಂಬ ಚಿಂತನೆಯಿಂದ ಬಳಲುವ 3 ನೇಮ ವ್ರತಗಳೆಲ್ಲ ಮರತು ಸೌಖ್ಯ ಕಾಮುಕನಾಗಿಹ ತಪ್ಪು ಬಹು ಪಾಮರವೃತ್ತಿಯ ತಪ್ಪು ನಿನ್ನ ದಯ ಶೋಭಿಸದಂಥ ತಪ್ಪು ಆ ಮಹಾ ಮಂತ್ರಗಳ ಜಪಿಸದ ತಪ್ಪು ಕಾಮಿನಿಯರ ಮೋಹಕ್ಕೊಳಗಾಗಿ ಬಳಲುವ 4 ನರಗುರಿಯಾದೆನ್ನ ತಪ್ಪ ನೋಡೆ ಹುರುಳು ಗಾಣುವುದುಂಟೆನಪ್ಪ ಸರ್ವ ಸ್ಥಿರ ಚರಾದಿಗಳೊಳಗಿಪ್ಪ ಲಕ್ಷ್ಮೀ ವರನಿತ್ಯ ಸತ್ಯ ಸಂಕಲ್ಪ ಪರಮ ಪಾವನ ಶ್ರೀಮದುರಗೇಂದ್ರ ಗಿರಿವಾಸ ಕರುಣದಿಂದೆನ್ನನುದ್ಧರಿಸಿ ರಕ್ಷಿಸು ಬೇಗ 5
--------------
ತುಪಾಕಿ ವೆಂಕಟರಮಣಾಚಾರ್ಯ
ತಮ್ಮನರಿಯದೆ ತಮ್ಮೊಳೀತೆರನಾಡುವರು |ಹಮ್ಮ ಬಿಡದೆ ಪರಬಮ್ಮನ ಜರಿಯುವರು ಪ ಒಂಬತ್ತು ಛಿದ್ರುಳ್ಳ ಕುಂಭದ ಗಾಲಿಗೆ |ಸ್ತಂಭದಂತೆ ನಿಲಿಸಿ ಸಂಭ್ರಮ ಪಡೆವರು 1 ಮುಂಡ ಬೋಳವ ಮಾಡಿ ಕಂಡಲ್ಲನ್ನವನುಂಡು |ದಂಡ ಧರಿಸಿ ಮನ ದಂಡಿಸದಿರುವರು 2 ಕದಲಿಸದೆ ಕಾಯಾ ಹದನದಿಂದಲಿರಿಸಿ |ವೇದದ ಮೊದಲೆಂದು ನಾದಕೆ ಬೆರೆವರು 3 ಓದಿ ಆಗಮಗಳನು ಭೇದಿಸಿ ತಿಳಿಯದೆ |ಮೇದಿನಿಯೊಳಗೆಲ್ಲ ವಾದಿಸಿ ಮೆರೆವರು 4 ಪಥ ಪಡೆದು ವೇಷ ಪಾಲಟ ಮಾಡಿ |ದೋಷಕಂಜದೆ ರುಕ್ಮ ಭೂಷಗೆ ಮರೆವರು 5
--------------
ರುಕ್ಮಾಂಗದರು
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾನೇ ಬ್ರಹ್ಮನಿರುತಲಿರೆತಾನೇ ವಸ್ತುವಿರುತಲಿರೆತಾನೇ ತನ್ನ ತಿಳಿಯಲಾರದೆಏನೇನೋ ಮಾಡುತಲಿಹರು ಪ ಆಸನವನು ಒಲಿದು ಒಲಿದುನಾಸಿಕದೊಳು ದೃಷ್ಟಿಯಿಟ್ಟುಸೂಸಲೀಯದೆ ಮನವ ನಿಲ್ಲಿಸಿಈಸು ಪರಿಯ ಕಾಂಬುದೇನೋ 1 ಅನ್ನವ ವರ್ಜಿಪುದಾರಿಗೆಅಡವಿಯೊಳು ಇಹುದು ಯಾರಿಗೆತನ್ನ ತಿಳಿಯಲಾರದ ದುಃಖತನ್ನ ನಿಂತು ಮಾಡುತಲಿಹುದು 2 ಚೇತನರಹಿತ ಶರೀರಕ್ಕೆಚೇತನವಾಗಿ ತಾನೆ ಇರ್ದುಚೇತನಾತ್ಮಕ ಚಿದಾನಂದಚೇತನನಾಗಿ ಆಡುತಲಿರೆ 3
--------------
ಚಿದಾನಂದ ಅವಧೂತರು
ತಾಂಬೂಲ ಕೊಡುವೆನೀಗ ಕೈಕೊಳ್ಳೈ ಪ್ರಿಯ ನಾಂ ಬಲು ವಿಲಾಸದಿಂದ ಬೆಳ್ಳಿತಟ್ಟಿಯೊಳ್ ನಿಮಗೆ ಪ ಮೈಸೂರುವೀಳೆಯದೆಲೆ ಬೀರೂರುಅಡಕೆ ವಾಸನಾಯುಕ್ತ ಚನ್ನಪಟ್ಟಣಸುಣ್ಣವು ಸಹಿತ1 ಏಲಾಲವಂಗ ಜಾಯಿಕಾಯಿ ಪತ್ರೆಯ ಒಳ್ಳೆ ಕೇಸರಿ ಬೆರೆದ 2 ಖಂಡಸಕ್ಕರೆ ಕೊಬರಿ ಸೇರಿಸಿರುವೆನೈ ಅ ಖಂಡಾದಿ ದೇವಸೇವ್ಯ ಜಾಜಿಕೇಶವಾ ಸವಿಯ 3
--------------
ಶಾಮಶರ್ಮರು
ತಾರಿಸಬೇಕೋ ಎನ್ನಾ|ಯಾದವ ರನ್ನಾ ಪ ತಾರಿಸಬೇಕೋ ಎನ್ನಾ | ಯಾದವ ರನ್ನಾ| ಸಾರಿದೆ ನಾನು ನಿನ್ನಾ|ಘೋರ ಭವಾಂಬುಧಿಯಾ| ಪಾರಗಾಣೆನೋ ಜೀಯಾ | ವಾರೆ ಕಂಗಳೆನ್ನಾ ನೋಡಿ| ದಯಮಾಡಿ ಒಡಮೂಡಿ ಅಭಯವ ನೀಡಿ1 ತಾನಾರೆಂಬುದು ನೋಡದೇ ತನುವಿನೊಳು| ನಾ ನನ್ನದೆಂದು ಪಾಡಿದೇ| ಶ್ರೀನಾಥ ನಿನ್ನ ನಾಮಾ|ನೆನೆಯದೆ ಮನದೊಳೊಮ್ಮಾ| ನಾನಾ ವಿಷಯದೊಳು ಬೆರೆದು|ಮೈಮುರಿದು| ಹಿತಜರಿದು ಕೆಡುವಾದೇನರಿದು 2 ಶರಣರಾ ಸಂಗದೋರಿಸಿ|ಸ್ವರೂಪವಾ| ಮರೆದ ವಿಭ್ರಮ ಹಾರಿಸೀ| ಗುರುಮೂರ್ತಿ ಪ್ರಭು|ಅರಹು ನೀಡೋ ಭಕ್ತಿಯಾ| ಸುರಸಾ ಸಾರಾಯದ|ಸುಖನುಂಬೆ|ಬಲಗೊಂಬೆ| ನಮೋಯೆಂಬೆ ಎನ್ನಿಂಬ ಬಿಂಬವೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು