ಒಟ್ಟು 11788 ಕಡೆಗಳಲ್ಲಿ , 134 ದಾಸರು , 6185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಜದಾಕ್ಷಣ ಕಂಜನೇತ್ರನೆ ಸಂಜೀವಿನಿಯಾ ತಂದು ನೀಡಿದಾ ಪ ಪಸುಳನೈಯಾ ವಪುವೆಸೆವ ರಾಯ ಅಸುರವರ್ಗದಸುವ ಮಿಸುಕದಾಕ್ಷಣ ಹಿಸುಕಿ ಬಿಡುತಿಹ 1 ಭೀಮಸೇನಾ ಭಕ್ತಕಾಮಪೂರ್ಣಾ ಕಾಮಕೀಚಕಾ ಬಾರ ಪಾಮರರಿದಾ ನಾಕ ನಾನು ಮೆರೆದಾ 2 ಶಕ್ತಿಸಾರಾ ಭಕ್ತ ವಿರಕ್ತಿ ಪೂರಾ ಭಕ್ತವೃಂದಕೆ ಮುಕ್ತಿಪಥ ಮಹಾಪೂರಾ ಯುಕ್ತಿಯಿಂದಾ ವ್ಯಕ್ತಪಡಿಸಿದಾ ಅವ್ಯಕ್ತರೂಪಾ 3 ಕ್ಲೇಶದೂರಾ ಪ್ರಾಣೇಶ ವಾರಾ ಗಂಭೀರಾ ದಾಸಜನ ನುಡಿಯಾ ಗುಣದೋಷ ಹರಣಾ ಅಣಿಮಾ ವಾಸನ ರಹಿತಾ ಗುಣಗಣಗಡಣಾ ಗರಿಮಾ 4 ದಿಟ್ಟ ರಾಮಾದಕಾ ಹೃದಯ ಪ್ರೇಮ ಮಧುರಾ ವಿಠಲನರಸಿಂಹಾ ಎದೆಯಾರವಿಂದ ನಯನಾ ದಿಟ್ಟನಿಟ್ಟಿಗೇ ಸಾಧನೆಯ ಸಾರುವಂಥಾ ಧೀರಾ 5
--------------
ನರಸಿಂಹವಿಠಲರು
ಅಂಜನಾಸುತ ವರದ | ವಿಠಲ ಪೊರೆ ಇವನಾ ಪ ಕಂಜಜನಯ್ಯ ಹರಿ | ಸಂಜೆ ಚರಹರನೇ ಅ.ಪ. ಕರ್ಮ | ಮಾಡಿ ಮಾಡಿಸುತಾಮತಿರಹಿತ ಜೀವನಿಗೆ | ಫಲ ಎಂಬ ತೆರಮಾಳ್ವೆಕೃತುಭುಜನೆ ಈ ತರಳ | ನುದ್ಧಾರಗೈಯ್ಯೊ 1 ಆದ್ಯಂತರಹಿತ ಸ | ದ್ಬುದ್ಧಿಗಳ ಪ್ರೇರಕನೆಶ್ರ್ರದ್ಧಾಳು ಎನಿಸಿವನ | ಮಧ್ವಮತದಲ್ಲೀಪದ್ಧತಿಯ ಪ್ರಕಾರ | ಬದ್ದನಾಗಿಹದಾಸಶುದ್ಧ ದೀಕ್ಷೆಯಲಿವನ | ಉದ್ಧರಿಸೋ ದೇವ 2 ಉತ್ತಮಾಧಮರೆಂಬ | ತತ್ವ ತರತಮ ತಿಳಿಸಿಆರ್ಥಿಯಿಂದಿವನ ಭಾವ | ಉತ್ತರಿಸೊ ಹರಿಯೇ |ಕತೃ ಸರ್ವಕೆ ನೀನೆ | ಅತ್ಯಂತ್ಯ ಆಪ್ತ ತಮಮತ್ತೊಬ್ಬರಿಲ್ಲಿವಗೆ | ಸ್ತುತ್ಯ ಶ್ರೀಹರಿಯೇ 3 ಕಂಸಾರಿ ತವತಾಮಶಂಸನಕೆ ಎಡೆಗೊಟ್ಟು | ಸಲಹ ಬೇಕಿವನಾಅಂಶ ಅವತಾರಗಳ | ಶಂಸನದಿ ತವಪಾದಪಾಂಸುವನೆ ಭಜಿಪಂಥ | ಸನ್ಮತಿಯನೀಯೊ 4 ಸತ್ಸಂಗ ದೊರಕಿಸುತ | ಕುತ್ಸಿತರ ದೂರಗೈಮತ್ಸ್ಯಧ್ವಜ ಪಿತ ಶ್ರೀ | ವತ್ಸಲಾಂಛನನೇನಿತ್ಯ ತವ ಸಂಸ್ಮರಣೆ | ಇತ್ತುಪಾಲಿಪುದಿವನಚಿತ್ಸುಖಪ್ರದ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಅಂಜಬ್ಯಾಡ ಬ್ಯಾಡೆಲೆ ಜಾಣಿ ಭವಭಂಜನ ಬಲರಾಮನ ಅಣಿ ಪ. ಕುಂಜರಗಮನೆ ಕಮಲಾಕ್ಷಿಕುಂಜರಗಮನೆ ಕಮಲಾಕ್ಷಿ ದ್ರೌಪದಿಅಂಜಬ್ಯಾಡ ಅಭಯಕೊಡತೇವ1 ಭಯವುಳ್ಳ ಬಾಲೆ ನೀ ಐವರಿಗೆ ಇಂತಿಪ್ಪೆಸೈವಲ್ಲದ ಮಾತು ಜಗಕಿದುಸೈವಲ್ಲದ ಮಾತು ಜಗಕಿದು ಈ ನಡೆತೆನಯವಲ್ಲವೆಂದು ನಗುತಾರೆ2 ಲೋಕದೊಳೊಬ್ಬಳಿಗೆ ಏಕಪತಿಯುಂಟುಏಕಕಾಲದೆ ಐವರ ಏಕಕಾಲದಲೆ ಐವರನ ಕೂಡೋದುನಾ ಕಾಣಿನೆಲ್ಲೂ ಕೌತುಕವ3 ಕೆಂಡವ ತುಂಬಿದ ಕುಂಡದಿ ಪುಟ್ಟಿದಿಕಂಡ ಜನಕೆಲ್ಲ ಭಯವಾದಿಕಂಡ ಜನಕೆಲ್ಲ ಭಯವಾದಿ ಭೀಮಸೇನನಿನ್ನ ಗಂಡ ಎಂಥ ಎದೆಗಾರ4 ಎಲ್ಲ ನಾರಿಯರೊಬ್ಬ ನಲ್ಲನಬೆರಿಯೆಬಲ್ಲಿದ ಭೂಪ ರೈವರುಬಲ್ಲಿದ ಭೂಪರೈವರ ನೊಲಿಸಿದಿಎಲ್ಲರಂತಲ್ಲ ಬಲುಧೀರೆ 5 ಪಲ್ಯಾದ ತುದಿಯಿಂದ ಎಲ್ಲ ಪದಾರ್ಥಮಾಡಿಬಲ್ಲಿದ ಮುನಿಗೆ ಉಣಿಸಿದಿಬಲ್ಲಿದ ಮುನಿಗೆ ಉಣಿಸಿದಿ ಇಂದ್ರÀಜಾಲಬಲ್ಲವಳಿಗಿಂಥ ಭಯವುಂಟೆ6 ಕೇಳ ದ್ರೌಪತಿ ರಾಜ್ಯವಾಳೊಗಂಡನ ಕೈಲೆಲಾಳಿ ತಕ್ಕೊಂಡ ಪರಿಯಂತೆಲಾಳಿ ತಕ್ಕೊಂಡ ಪರಿಯಂತೆ ಈ ನಡತೆಕೇಳಿದವರೆಲ್ಲ ನಗುತಾರೆ 7 ಅತ್ತೆಯ ಮಗ ನಿನ್ನ ಅತ್ಯಂತ ನಗೆನೋಡಿತಪ್ತವಾಗೊಮ್ಮೆ ತಿರುಗಿದತಪ್ತವಾಗೊಮ್ಮೆ ತಿರುಗಿದ ದ್ರೌಪತಿಮತ್ತಾರೆ ಬುದ್ಧಿ ಬರಲಿಲ್ಲ8 ಅರಸನ ಮಡದಿ ಒಬ್ಬ ಅರಸನ ಮನೆಯಲ್ಲಿನಿರುತ ದಾಸಿಯೆಂದು ಇರುತಲೆನಿರುತ ದಾಸಿಯೆಂದು ಇರುತಲೆ ಸೇವಿಸೋದುಈ ಸರಸ ರಮೇಶಗೆ ಹರುಷೇನ9
--------------
ಗಲಗಲಿಅವ್ವನವರು
ಅಂಜಬ್ಯಾಡಂಜಬ್ಯಾಡವೋ ಭೂನಂದಸೂನು ಪ ಅಂಜಬ್ಯಾಡಂಜಬ್ಯಾಡ ಕರುಣನಿಧಿಯೆಸಂಜೆ ಮುಂಜಾನಿಲ್ಲೆ ಬಾರೋ ಮಂಜುಳಾದ ಕಥೆಯ ಪೇಳ್ವೆ ಅ.ಪ. ಪಾಂಡುತನಯನಂತೆ ನಿನ್ನ ಭಂಡಿ ಬಾಹು ಕನ್ನೆಮಾಡಿಕಂಡ ಕಂಡ ಕಾರ್ಯದಲ್ಲೆ ದಂಡಿಸುವುದು ಎನ್ನೊಳಿಲ್ಲ 1 ಗೋಪಿಯಂತೆ ಸೊಂಟದಲ್ಲೆ ತ್ಯಾಪಿ ಹಗ್ಗಗಳನೆ ಕಟ್ಟಿಶ್ರೀಪತಿಯ ಒರಳಿಗ್ಹಾಕಿ ಆಪರಿಂದ ಕಟ್ಟೋಣಿಲ್ಲ2 ಜಾರ ಚೋರನಂತೆ ನಿನ್ನ ನಾರೇರಂತೆ ವ್ಯಾಸಮುನಿಯಮಾರಿಗ್ಹಾಕಿ ವಾರ್ತೆಯನ್ನು ದೂರೋಣಿಲ್ಲ ಜಗದಿ ಸ್ವಾಮಿ 3 ಮಂದಗಮನೆ ಮೋಹಕಾಗಿ ಚಂದ್ರಮೌಳಿಯಂತೆ ಬೆಣ್ಣೆಹಿಂದೆ ಮುಂದೆ ಓಡಿಸಿಂದು ದಣಿಸೋಣಿಲ್ಲ ಶ್ರೀಶಕೃಷ್ಣ 4 ಇಂದಿರೇಶ ಎನ್ನ ಹೃದಯ ಮಂದಿರದೊಳಿಟ್ಟುಕೊಂಡುಚಂದ ಚಂದ ಕಥೆಯ ಪೇಳ್ವೆ ನಂದತನಯ ನೊಂದಿಸುವೆನು 5
--------------
ಇಂದಿರೇಶರು
ಅಜಭವಾದಿ ವಂದ್ಯ ಚರಣೇ | ತಾಯಿನಿಜ ಜನರ ಪೊರೆವ ಕರುಣೇ ಪ ರಜತಮನ ಕಳೆವ ಹೊಣೇ | ಅಜನಮ್ಮ ನಿನ್ನ ಹವಣೇ ಅ.ಪ. ದಿವಿಜ ಪತಿ | ಪದ್ಮ ಪದಹವ | ನುದ್ಭವ ಗೈ 1 ಗುಣ ಮೂರ ಮಾನಿನಿಯೆ | ಗುಣ ದೊರೆ ಅಂಭ್ರಣೀಯೆಗುಣ ಜಡವ ಕಳೆಯದಿರೆಯೆ | ಘನವೇನೆ ನಿನಗೆ ತಾಯೇ ||ವಾನರನು | ನಾನಾ ದುರ್ | ಯೋನಿಯಲಿ | ಜನೀಸಿಹೆಮಾನೀಸನು | ಧ್ಯಾನಿಲ್ಲವು | ಏನುಗತಿ | ನೀನೇ ಪೊರಿ 2 ಭವ ನೀ ಕಳೆರಮೆ 3 ಅವ್ಯಕ್ತಾಭಿಮಾನಿ ಕಾಯೋ ಭವ್ಯಮೂರ್ತಿ ಹರಿಯ ಜಾಯೇ |ತ್ರಯ್ಯ ಗೋಚರ ಶ್ರೀ ಹರಿಯೇ | ಗಮ್ಯನೆಂಬುದ ತೋರಿ ಪೊರೆಯೆಶ್ರೋತವ್ಯನ | ಮಂತವ್ಯನ | ಧ್ಯಾತವ್ಯನ | ಸ್ಮರ್ತವ್ಯನಅಗಮ್ಯನೆ | ಪೂಜ್ಯನನೆ | ಶ್ರೀ ಸ್ತವ್ಯನ | ತೋರಯ್ಯೆನ 4 ತಾಪ ಇಂದಿರೆ ಸಿರಿ ಸಿರಿ ಸಿರಿ ಸಿರಿ ಸಿರಿ ಸಿರಿ ಮಾಯೆ | ಶ್ರೀ ಪೊರೆಯೇ... 5
--------------
ಗುರುಗೋವಿಂದವಿಠಲರು
ಅಂಜಿಕೆಯಾಗುತಿದೆ ುದನೋಡಿ ಅಂಜಿಕೆಯಾಗುತಿದೆಮಂಜಿನಂದದ ಮಾಯೆ ರಂಜನೆಯಾಗಿ ರಂಜನನರಿಯದಿರೆ ಪಹುಸಿಯೆಂದು ಶ್ರುತಿ ಸಾರ್ದರೂ ತಾನೊಮ್ಮೆ ನಸಿಯದೆ ನಿಜದಂತಿರೆಹೊಸದು ಕಟ್ಟಿದ ಬಲೆ ಹೊದಿಸಿದಂದದಿ ಮತ್ತೂ ಹೊಸಹೊಸತಾಗಿರಲುಹಸಿವು ತೃಷೆಗಳೆಂಬಿವು ದಿನದಿನ ಹಸಗೆಡಿಸುತಲಿರಲುಕುಸುಮಬಾಣನ ಕಾಟ ಕುಸಿಯ ಮೆಟ್ಟಲು ಮನ ಮಸಿಯಾಗಿ ಮುದ್ರಿಸಲು 1 ಪೇಳ್ವದು ಪರತತ್ವವು ಬುದ್ದಿಯ ಬಾಳ್ವಿಕೆ ಬಹು ಬದ್ಧವುಕೋಳ್ವೋದ ಶೂರನ ಕಲಿತನದಂತಿದು ಕೀಳ್ವಾಯಕಿಳೀಯುತಿರೆಕೇಳ್ವರೆ ಮಾರ್ಗವನು ಜ್ಞಾನಿಯು ಕೋಳ್ವಿಡಿಯಲಿ ಬದ್ಧನುಹಾಳ್‍ವಾದದಲಿ ಹೊತ್ತು ಹೋಗುತ ನಿಜವಾಗಿ ಆಳ್ವನನರಿಯದಿರೆ 2 ಯೋಗಿಗಳ್‍ಕಾಣದಿರೆ ಕರ್ಮದ ರಾಗಿಗಳ್ ಕಾಳಾಗಿರೆಭೋಗಿಗಳೆಲ್ಲರು ಭಯದಲ್ಲಿ ಮುಳುಗಿರೆ ರೋಗಗಳ್ ಬಹುವಾಗಿರೆಸಾಗದೆ ಮಾರ್ಗವಿರೆ ಪುನರಪಿ ಪ್ರಾಗನೆ ಪಡೆಯುತಿರೆಹಾಗೆ ವಾಸನೆಯನ್ನು ಹೊದ್ದಿ ಮತ್ತತಿಶಯವಾಗಿಯೆ ವರಕೊಂಡಿರೆ 3ಧರ್ಮವ ಮಾಡದಿರೆ ಮನ ಪಾಪ ಕರ್ಮವ ಕೂಡುತಿರೆದುರ್ಮಾರ್ಗವೆಂದರೆ ದೃಢವಾಗಿ ನಲಿದು ವಿಕರ್ಮಕ್ಕೆ ವೊಡಲಾಗಿರೆಹಮ್ಮನು ನೆಗ್ಗಿದರೆ ಹೋಗದೆ ಬಿಮ್ಮಾಗಿ ಬೆಳೆಯುತಿರೆನೆಮ್ಮುತ ವಿಷಯವ ನೆನೆಯುತಲೀ ಪರಿ ಹೆಮ್ಮೆಯೆ ಹೆಚ್ಚುತಿರೆ 4ಮೊಳೆಯುತ ಮೇಲ್ಮುಟ್ಟಿರೆ ಹಮ್ಮಿದು ಬೆಳೆಯುತ ಬೇರ್ಬಿಟ್ಟಿರೆಕಳಚಿದರ್ಕೆಡದಾಶೆ ಕಾಲ್ಕಟ್ಟಿ ಕೆಡಹಿರೆ ತಳತುದಿ ತೋರದಿರೆಅಳಿಯುವದೆಂದಿಗಿದು ಸುಖ ತಾನು ಹೊಳೆಯುವದೆಂದಿಗದುನಳಿನಾಕ್ಷ ತಿಳುಹಿಸು ನಂಬಿದೆ ತಿರುಪತಿನಿಳಯ ವೆಂಕಟನಾಥನೆ 5ಕಂ||ಎಡೆಬಿಡದನುತಪಿಸುತ ಪದವಿಡಿದೆರಗಿಯೆ ಬಿನ್ನವಿಸಲು ತಿರುಪತಿಯೊಡೆ ಯಂಕಡು ಕರುಣದಿಂದ ಗುರುತನು ವಿಡಿದಭಯವನಿತ್ತ ನುಡಿಯನನುವದಿಸುವೆನಾಂ ಓಂ ಪರಸ್ಮೈಬ್ರಹ್ಮಣೇ ನಮಃ
--------------
ತಿಮ್ಮಪ್ಪದಾಸರು
ಅಜ್ಞಾನಿ ಜೀವನಿಗೆ ಅಭಿಮಾನ ಬಹಳ ಸುಜ್ಞಾನಿಯಾ ನುಡಿಯ ಲಕ್ಷಿಸನು ಕೇಳಾ ಪ ಬುದ್ಧಿ ಮನದೇಹಗಳು ತಾನೆಂದು ತಿಳಿಯುತಲಿ ಇದ್ದುದನು ಮರೆತು ತಾ ಜಾಣನೆನಿಸುವನು ಒದ್ದಾಡುತಿದ್ದರೂ ಅಭಿಮಾನವನೆ ಹÉೂತ್ತು ಗುದ್ದಾಡುತಲಿ ತಾನು ಸುಖವ ಹುಡುಕುವನು 1 ಸಟಿಯಾದ ಸಂಸಾರ ದಿಟವೆಂದು ನಂಬುತಲಿ ಸೆಟೆದಾಡುತಿರುವೆಯೋ ತಿಳಿದು ನೋಡಾ ಹಟವ ಹಿಡಿಯಲು ಬೇಡ ತೋರ್ಪುದೇ ದಿಟವೆಂದು ನಟನೆಯಾ ಮಾತಲ್ಲವೆನೆ ಕೇಳನವನು 2 ಅರಿ ನೀನು ನಿನ್ನ ಅರಿವಿನಾ ಹೊರತು ನೀ ಸುಖ ಪೊಂದಲಾರೆ ಆರು ಸುಖಪಡೆದಿಲ್ಲ ಅಜ್ಞಾನದಿಂದೆನಲು ಇರಲಿ ಹೋಗೆಂದೆನುತ ಮೋರೆ ಹೊರಳಿಸುವಾ 3 ಬಾಳುವೆಯು ನಿಜವೆಂದು ನಂಬಲಿವನಾ ಗೋಳು ಗಾಳಿಯನೆ ಗುದ್ದಿ ಮೈ ನೊಯ್ಸಿಕೊಂಡಂತೆ ಕೇಳು ಚಿತ್ರದೊಳಿರುವ ಬೆಂಕಿ ತಾ ದಿಟವೆಂದು ಮೇಲೆ ನೀರೆರೆದಂತೆ ಎನೆ ಕೇಳನವನು 4 ಗೊಡ್ಡು ಮಾತೆಂದು ತಾ ಜ್ಞಾನಕೆರವಾಗುತಲಿ ದಡ್ಡತನವನೆ ತೋರಿ ದುಃಖಿಯಾಗುವನು ಶುದ್ಧಜ್ಞಾನವನಂಬಿ ತನ್ನ ತಾ ತಿಳಿಯದಲೆಬುದ್ಧ ಶಂಕರನುಕ್ತಿಗೆರವಾಗುತಿಹನು 5
--------------
ಶಂಕರಭಟ್ಟ ಅಗ್ನಿಹೋತ್ರಿ
ಅಂಜ್ಯಾಕೆ ಎಲೆ ಮನುಜ ಭಯವಿಲ್ಲ ನಿನಗೆ ಕಂಜನಾಭನ ಧ್ಯಾನವಿರಲಿ ಮನದೊಳಗೆ ಪ ತಾಪತ್ರ ಬಂದೊದಗೆ ಪಾಂಡುಪ್ರಿಯನೆಂದೆನ್ನು ಶಾಪವೊದಗಲು ಅಂಬರೀಷನ್ವರದೆನಲೋ ಭೂಪತಿಗಳು ಮುನಿಯೆ ಪಾಂಚಾಲಿಪಾಲಕನೆನ್ನು ಆಪಾರ ಕಷ್ಟದಲಿ ಕರಿವರದೆನೆನಲೋ 1 ಮಾತೃ ವೈರ್ಯಾದರೆ ಧ್ರುವಪಾಲನೆನಲೋ ಭ್ರಾತೃವೈರ್ಯಾದರೆ ಸುಗ್ರೀವಸಖನೆನ್ನು ಖಾತ್ರಿಯಿಂ ಸತತದಿ ಸೂತ್ರಧಾರೆನಲೋ 2 ಸೆರೆಮನೆಯು ಒದಗಿರಲು ಪಿತಮಾತೆರ್ವರದೆನ್ನು ಧುರದೊಳಗೆ ಪೊಕ್ಕಿರಲು ನರಸಹಾಯನೆನಲೋ ಬರಿ ಮಳೆಯೊಳ್ಸಿಕ್ಕಿರಲು ಗಿರಿಯೆತ್ತಿದವನೆನ್ನು ದುರುಳರ್ಹಾವಳಿಯೊಳಗೆ ದನುಜಹರನೆನಲೋ 3 ಕವಿಯಲು ವೈರಿಗಳು ಕಂಸಮರ್ದನನೆನ್ನು ಶಿವನ ಕಾಯ್ದವನೆನ್ನು ಉರಿಹತ್ತಿಸುಡಲು ಭವಿಜನುಮ ಬಂದಿರಲು ಭವರೋಗಹರನೆನ್ನು ದಿವನಿಶೆಯು ಎಡೆಬಿಡದೆ ಭಯದೂರನೆನಲೋ 4 ಸ್ಥೂಲಭ್ರಷ್ಟನಾದರೆ ಬಲಿದ್ವಾರಪಾಲಕನೆನ್ನು ಕುಲಭ್ರಷ್ಟನಾದರಜಮಿಳನ್ವರದನೆನಲೋ ಇಳೆಮೂರು ಸಂರಕ್ಷ ಚೆಲುವ ಶ್ರೀರಾಮನಂ ಹಲವು ವಿಧದಲಿ ಭಜಿಸಿ ಫಲಗಳಿಸು ಬಿಡದೆ 5
--------------
ರಾಮದಾಸರು
ಅಡವಿನಿಲಯ ನಿನ್ನಡಿಗೆರಗುವೆ ಕರ ಪಿಡಿದು ಪಾಲಿಸಯ್ಯ ಪ ಮೃಡನುತ ಭಾರತಿ ಒಡೆಯನೆ ಪ್ರಾರ್ಥಿಪೆ | ಮಾಯಾ ಅ.ಪ ನಿನ್ನ ದರುಶನದಿ ಎನ್ನ ಜನ್ಮ ಪಾ | ವನ್ನ ವಾಯಿತಯ್ಯ | ನಿನ್ನನುಗ್ರಹಪಡೆದ ಸಂ | ಪನ್ನರೊಳಿಡು ಜೀಯಾ 1 ತರುಚರನರದ್ವಿಜ | ವರರೂಪತ್ರಯ | ಧರಿಸಿದಂಥ ದೇವ || ಶರಣರ ಸಂಜೀವಾ 2 ಸೃಷ್ಟಿಯೊಳಗೆ ಅತಿ ಶ್ರೇಷ್ಟನೆಂದೆನಿಸಿದ | ಕುಷ್ಟಗಿ ಮೂರುತಿ ಪುರವಾಸ ಧಿಟ್ಟ ಮೂರುತಿ ಶಾಮಸುಂದರ ವಿಠಲ ಪ್ರಿಯದಾಸ 3
--------------
ಶಾಮಸುಂದರ ವಿಠಲ
ಅಂತರಂಗದಲಿ ಹರಿಯ ಕಾಣದವನೆಹುಟ್ಟು ಕುರುಡನೋ ಪ ಸಂತತ ಸಿರಿಕೃಷ್ಣ ಚರಿತೆ ಕೇಳದವನೆಜಡಮತಿ ಕಿವುಡನೊ ಎಂದೆಂದಿಗುಅ.ಪ. ಹರುಷದಲಿ ನರಹರಿಯ ಪೂಜೆಯ ಮಾಡದವನೆ ಕೈ ಮುರಿದವನೊಕುರುವರ ಸೂತನ ಮುಂದೆ ಕೃಷ್ಣಾಯೆಂದುಕುಣಿಯದವನೆ ಕುಂಟನೋನರಹರಿ ಚರಣೋದಕ ಧರಿಸದ ಶಿರನಾಯುಂಡ ಹೆಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರ ಭೋಜನವೋ ಎಂದೆಂದಿಗು 1 ಅಮರೇಶ ಕೃಷ್ಣಗರ್ಪಿತವಿಲ್ಲದಾ ಕರ್ಮಅಸತಿಯ ವ್ರತನೇಮವೋರಮೆಯರಸಗೆ ಪ್ರೀತಿಯಿಲ್ಲದ ವಿತರಣೆರಂಡೆ ಕೊರಳ ಸೂತ್ರವೊಕಮಲನಾಭನ ಪಾಡಿ ಪೊಗಳದ ಸಂಗೀತಗಾರ್ಧಭ ರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರಮಾಡದವನೆ ಮೃಗವೊ, ಎಂದೆಂದಿಗು2ಜರೆ ಪುಟ್ಟು ಮರಣವ ತೊಡೆವ ಸುಧೆಯ ಬಿಟ್ಟುಸುರೆಯ ಸೇವಿಸಬೇಡವೊಸುರಧೇನುವಿರಲಾಗಿ ಸೂಕರ ಮೊಲೆಹಾಲುಕರೆದು ಕುಡಿಯಬೇಡವೊಕರಿರಥಾ ತುರಗವಿರಲು ಬಿಟ್ಟು ಕೆಡಹುವಕತ್ತೆಯೇರಲಿಬೇಡವೊಪರಮ ಪದವನೀವ ಸಿರಿಕೃಷ್ಣನಿರಲಾಗಿನರರ ಸೇವಿಸಬೇಡವೊ, ಎಂದೆಂದಿಗು 3
--------------
ವ್ಯಾಸರಾಯರು
ಅತ್ತೆಯಣುಗನು ಮತ್ತೆ ಸತ್ಯಾತ್ಮನಿವನೆನುತೆ ಚಿತ್ತದೊಳು ನೆರೆನಂಬಿ ಪತ್ನಿಯಾದೆ ಪಲಜನರನೆರೆಬೇಡಿ ಪಲಜನರನುರೆ [ವಧು]ಕಾಡಿ ಪಲಸತಿಯರ ಕೂಡಿದಿವನಗಾಡಿ ಅರಿತು ಪೇಳುವರುಂಟೆ ಸರಸಿಯಿವನೆಂದೆನುತೆ ನೆರೆದು ಜೀವಿಪರುಂಟೆ ಅರರೆ ತಂಟಿ ಮೋಸಗಾರರೊಳಗಗ್ರೇಸರನು ಈ ವರನು ವಾಸುದೇವನು ಬಂಧುದ್ವೇಷಿಯಿವನು ಸ್ತ್ರೀಯರನದಾವಗಮನದೆನಿತೊ ಜರೆವ ಮಾಯೆಯಿಂದವರೊಡನೆ ಕೂಡಿಮೆರೆವ ಬಾಯೊಳಗೆ ಸುಬ್ರಹ್ಮಜ್ಞಾನ ಮೊರೆವ ಜೀಯ ಶೇಷಗಿರೀಶತಾನೆಂದು ನಲಿವ
--------------
ನಂಜನಗೂಡು ತಿರುಮಲಾಂಬಾ
ಅಥ ಹನುಮದ್ವ್ರತ ಕಥಾ ಸುಳಾದಿ ಧ್ರುವ ತಾಳ ವೃತವೆ ಉತ್ತಮ ವೃತವೆಂದು ಪೇಳಿಹರು ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು | ಸತತ ಅಧ್ಯಾತುಮ ಅನಂತ ವೃತವೆಂದು | ಕ್ಷಿತಿಯೊಳು ಈ ವೃತಕೆÀ ಸರಿಗಾಣೆನೊ | ಪತಿತ ಮಾನವರ ಉದ್ಧಾರಗೋಸುಗವಾಗಿ ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ | ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ | ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ | ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು | ಮತಿವಂತರು ಮನಕೆ ತಂದು ತಿಳಿದು | ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ | ಪತಿಭಕುತಿಯುಕುತಳಾದ ದ್ರೌಪದಿಯು | ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ | ಮಿತ ಜ್ಯಾನದಿಂದ ಚರಿತ ವ್ರತವೊ | ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ | ಚ್ಯುತನಾದ ರಾಮನುಮತಿವಾನ್ ಹನು | ಮಂತನ ಭಕುತಿಗೊಲಿದು ಮಾಡ್ಡ ವೃತವೊ | ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ | ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ | ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ | ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ 1 ಮಟ್ಟತಾಳ ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು | ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ | ಮೇಣು ಭಕುತಿಯಿಂದ ಙÁ್ಞನವಂತರೆ ನಿಮ್ಮಿಂ | ನಿತ್ಯ | ಧೇನಿಸುವೆವು ಹರಿಯಾ ಪುನೀತರ ಮಾಡುವಾ | ಕಾಣೋವನ್ಯ ವೃತವು ಆವುದುಪೇಳೆನಲು | ನಿತ್ಯ ಶೂದ್ರಾದಿ ನಾಲ್ಕು | ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ | ಏನು ಬೇಡಿದರೆ ತಡಿಯದೆ ಕೊಡುವುದೊ | ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು | ಪುತ್ರಾದಿಗಳೀವುದು ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ | ಮಾನನಿಧಿ ಸುತ ಸುಂದರ ವಿಠಲನ | ಧ್ಯಾನ ಧಾರಣವೀವ ಉತ್ತುಮಾಮಹವೃತವೊ 1 ರೂಪಕ ತಾಳ ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ | ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು | ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ | ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ | ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ | ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು | ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ | ಮುಂದೆ ಅಧ್ಯಯನ ಶ್ರುತಸಂಪನ್ನರಾದವರು | ಒಂದೊಂದು ವೇದ ಋಗು ಯಜು:ಸಾಮಾಥರ್ವಣ ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು | ಮಿಂದು ಹರಿಪದಜಲದಿ ಚತುರ ವೇದ ಘೋಷದಿ | ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ | ಎಂದೆಂಬುವ ಹರಿಕಥಾಮೃತ ಪಾನ ಮಾಡುವ | ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ | ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು | ಸುಂದರ ವಿಠಲಾತ್ಮಕ ವ್ಯಾಸದೇವನು | ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು 3 ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ | ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ | ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ | ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ | ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು | ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ | ಜೇಷ್ಟಾದಿಕೃಷ್ಣೇಯೊಡನೆ ಉತ್ಕøಷ್ಠ ಪೂಜೆಯ ಮಾಡೆ ಪರ ಮೇಷ್ಠಿ ಜನಕನು ತಾನು ತುಷ್ಟ ನಾಹೆ | ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ | ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ | ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ? ಧಿಟ್ಟತನದಲೆ ತಪವನೆಸಗಿ ಕಿರಿಟಯು | ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು | ತ್ಕøಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ | ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ | ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ | ಇಷ್ಟವೀವುದಕಾಗಿ ಬಂದಿಹನು ರಾಜಾಯು | ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ | ನಿಷ್ಠಿಯಿಂದಲಿ ಧರ್ಮತನಯ ನುಡಿದನು 4 ತ್ರಿವಿಡಿ ತಾಳ ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ | ನಮೊ ನಮೊ ನಮೊ ಎಂದು ಬಿನ್ನೈಸುವೆ | ಶ್ರಮ ಪರಿಹರವೃತವಾವುದದÀರ ಮಹಿಮೆ | ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ | ಕುಮತಿ ಪರಿಹರಿಸುವ ದೇವತೆ ಆರು ಉ | ತ್ತಮ ನಿಯಮ ಆವುದು ಪೂಜಾ ಕ್ರಮವು | ಶಮೆ ದಮೆವೀವ ನಿಯಮ ತಿಥಿ ಆವುದು | ರಮೆ ರಮಣನೆÉ ಆವ ಮಾಸದಲಿ ಮಾಡೋದು | ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ | ಗಮನವು ಎಮ್ಮಯ ಕಷ್ಟ ದೊರೋಡಿಸಲು | ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ | ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು | ಭ್ರಮಣ ಮತಿಯ ಕಳೆವ ಹನುಮಾನ್ ಹ ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು | ಆಮಮ ಪೇಳಲೇನೊ ಹನುಮದ್ವ್ರತವೋ | ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ | ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ | ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ | ತಾಮಸ ರೋಗ ನಿವರಣವಾಗುವದು | ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ? ಸೀಮೆಗಾಣದ ಅಭೀಷ್ಟಪ್ರದಾಯಕವೊ ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ ನುಮದ್ವ್ರತವನ್ನು ಉಪದೇಶಿಸಿ | ನೇಮದಿಂದಲೀ ವ್ರತವು ಮಾಡಿರೆನಲು ಕಾಮಿತಫಲವೀವಾ ವ್ರತದ ಮಹಿಮೆ ಆ | ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ | ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ ಹೇ ಮಹಿಷಿಯೆ ಇದೆನೆನ್ನಲಾಗಿ | ತಾಮರಸನಯನೆ ಶ್ರೀ ಹನುಮದ್ದೋರವನ್ನೆ | ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ | ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ | ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು ಕಾಮಿ ಜನರ ತೆರದಿಂದಲಿ ಅರ್ಜುನನು ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ ಆ ಮುದದ ದೋರವನು ಹರಿದು ಬಿಸಾಟಲು ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ | ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು | ಪರಿಯಂತ | ರಾಮ ಮನೊರಮನು ಇನಿತು ನುಡಿಯೆ | ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು | ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು 5 ಧ್ರುವ ತಾಳ ಕೇಳಯ್ಯಾ ಧರ್ಮರಾಜ ಆಲಸ ಮಾಡದೆ | ಪೇಳುವೆ ನಿನಗೊಂದು ಪುರಾತನ ಕಥೆಯು | ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು | ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ ನಿತ್ಯ ಲಕ್ಷ್ಮಣನೊಡಗೂಡಿ | ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ ಹಾಳ ಮತಿಯುಳ್ಳ ವಾಯುಜ ಮಾಡಿಸೆ | ಮಾಸ ಮಳೆಗಾಲವು ವಾಸ ಮಾಡ್ಡ | ಕಾಲದಲಿ ಹನುಮನು ರಾಮದೇವಗೆ ನಮಿಸಿ | ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ | ಬಾಲನ ಬಿನ್ನಪ ಮನಕೆ ತರಲು | ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ | ಕಾಲ ಜನನದಲಿ ಇಂದ್ರನಿಂದಲಿ ಎನ್ನ ಮೇಲಾದ ವಜ್ರಾಯುಧದಿಂದ ಹನುಘಾತಿಸಲು ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ | ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ | ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು | ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ | ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ | ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ | ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ | ಲೋಲನ ಸಖನಾದ ವಾಯುದೇವನು ಎನ್ನ | ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ | ಕಾಲನಾಮಕ ಭಗವಾನಿಚ್ಛೆಯಂತ ತೃಟಿ | ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ | ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ | ಕಾಲಲವದಲ್ಲಿ ಕೆಡಹೆನೆನಲು ಆ | ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ | ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ | ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ | ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ | ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು | ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ | ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ | ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು | ತಾಳ ಮ್ಯಾಳರೊಡನೆ ವರವ ನೀಡಿ ಪೋದರು | ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ | ಪೇಳೆ ಸುಂದರ ವಿಠಲ ರಘುರಾಮನು ನಸುನಗೆ | ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು 6 ಮಟ್ಟತಾಳ ಭಕುತ ವತ್ಸಲ ನೀನು ಭಕುತರಿಚ್ಛವ ನೀನು | ಭಕುತ ಭಾಂಧವ ನೀನು ಭಕುತರೊಡಿಯ ನೀನು | ಭಕುತ ಪಾಲಕನೆಂಬ ಬಿರುದುಳ್ಳವ ನೀನು | ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು | ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ | ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು | ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು | ಭಕುತರ ಮನದಿಂಗಿತ ತಿಳಿಯದವನೆ ನೀನು | ಅಖಿಳ ಬ್ರಹ್ಮಾಂಡÀರಸನೆ ನಮೊ ನಮೊ ನಮೊ ನಮೊ | ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು | ಭಕುತರು ನಿನ್ನಿಂದಲೆ ಕೀರ್ತಿವಂತರÀಹರು | ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ | ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ | ಮಾಳ್ಪದು ನಿಜವಾಗೆ | ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ | ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ | ಭಕುತ ಹನುಮಂತ ಇನಿತು ವಿಙÁ್ಞಪಿಸಿ ನಿಲಲು | ಪ್ರಕಟಿತ ಅಶರೀರ ವಾಕ್ಯವು ಬಿಡದಲೆ | ಸಕಲ ನುಡಿ ಹನುಮಾ ಸತ್ಯನಾಡಿದನೆನಲು | ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ 7 ಝಂಪಿತಾಳ ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ | ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ | ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ | ದಶ ಗ್ರಂಥಿüಯುತ ಹರಿದ್ರಾದೋರಗಳಲಿ | ಭಾಸುರಾಮತಿವೀವ ಹನುಮನಾವ್ಹಾನಿಸಿ | ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ | ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ | ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ | ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” | ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ | ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು | ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ | ಮೀಸಲಾ ಮನದಿ ಈ ಸತ್ಕಥೆಯನು ಕೇಳಿ | ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ | ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ | ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ | ತೋಷದಲಿ ವಿಭೀಷಣ ಶ್ರೀರಾಮನಾಙÉ್ಞಯಿಂ ಮಾಡ್ಡು | ದೇಶಲಂಕೆಯ ರಾಜ್ಯವನು ಪಡೆದನು | ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ | ಲೇಸುವಿಶ್ರುತವಾದಿತೈ ಹನುಮದ್ವ್ರತವೂ | ಪರಿಯಂತ ಮಾಡ್ಡುದ ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ | “ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆÀಯಲಿ ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ | ಸ್ತ್ರೀಸಹಿತ ಅನುಜರೊಡನೇ ಈ ವ್ರತವನು | ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ | ಕೋಶ ಭಾಂಡಾರಪ್ರಾಪ್ತಿಯಾಗುವದು | ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ | ಆ ಸುಂದರ ವಿಠಲನ ಭಕುತರು ಮುದಭರಿತರಾಗೆ 8 ರೂಪತಾಳ ರವಿಯು ವೃಶ್ಚಿಕ ರಾಶಿಗೆ ಬರಲಾಗಿ | ಸವೆಯಾದ ಪದವೀವ ವ್ರತವಮಾಡುವದಕ್ಕೆ | ಕವಳಾ ಅಜ್ಞಾನಾಖ್ಯ ರಾತ್ರಿಕಳೆದು | ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು | ಕವಿವ್ಯಾಸರ ಮುಂದೆ ಮಾಡಿ ಧರ್ಮಜನು | ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ | ಹವಿಷಾದಿ ದ್ರÀ್ರವ್ಯಗಳಲಿ ಹರಿಯಚಿಂತಿಸಿ ಮಾ | ಧವÀನಾಜ್ಞೆಯಂತೆ ಉದ್ಯಾಪನವಂಗೈದು | ಕವ್ಯವಾಹನನಲ್ಲಿ ಮೂಲಮಂತ್ರದಿಂದ | ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ | ನವಭಕುತಿಯಲಿ ಹನುಮಂತನ ವ್ರತಾಚರಿಸಲು | ಹವಣಿಸಿ ಸಂವತ್ಸರವು ಪೋಗಲು ಪಾಂಡವರು | ಬವರದಲ್ಲಿ ಕೌರವರಗೆ
--------------
ಸುಂದರವಿಠಲ
ಅಂಥವನಲ್ಲಾ ಕಾಣಿರೇ ಸಂತತ ತೃಪ್ತಾ ಪ ಹಸಿದರೆ ಬಂದು ಬೇಡಿ ತುಸು ಹಾಲು ಕೊಳ್ಳಲರಿಯಾ ಮೊಸರಾಲು ಕುಡಿಯ ಬಲ್ಲನೇ ನಮ್ಮ ಶ್ರೀರಂಗಾ 1 ಗಡಿಬಿಡಿಯನ್ನಾಲಾಗ ವಡನೆಂಜಿಸಾರುವ ಕಡೆವ ಬೆಣ್ಣೆಯ ಮೆಲುವನೇ 2 ತರಳರ ಕೂಡ ಹೋಗಿ ಬರಲು ಹಾದಿ ತಪ್ಪವ ಕೇರಿ ಕೇರಿತಿರುಗಬಲ್ಲನೇ 3 ಹೊಸ ಮೋರೆ ಕಾಣಲು ಕುಸಿದು ತಲೆ ಭಾಗುವ ವಿಷಯಕ್ಕೆ ನಿಮ್ಮ ಯಳೆವನೇ 4 ಅಡಿಯಿಡ ವುತ-ಕಾಲ ತೊಡಕಿತಾ ಬೀಳುವಾ ತುಡುಗದಿ ಓಡ ಬಲ್ಲನೇ 5 ಹಡೆದಾ ಮಕ್ಕಳು ನಿಮಗ ಪೊಡವಿಯೊಳಿಲ್ಲವೇನೇ ಬಿಡ ನುಡಿಗವ ಸಲ್ಲನೇ 6 ಗುರು ಮಹಿಪತಿ ಸ್ವಾಮಿ ಸರಸಾಟಕವತಾಳಿ ಚರಿಸುವ ಅಂತದೋರನೇ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಂದರೇನೋ ಆ ನಾರಿಯರು ನಿನ್ನಂದರೇನೋ ಪ ಕಂದಯ್ಯ ನಿನ್ನಂದಾರೇನೋ ಅ.ಪ ಬಿಸಿಲೊಳು ಮನೆಕಟ್ಟಿ ಬಿಸಿಬಿಸಿಯಾಗಿ ಹಾಲೆರದೂ ಕೊಲ್ಲೀಸುವೆ ನೀನಳದಿರಣ್ಣಾ1 ನಿನ್ನಾಡಿಕೊಂಬೋರಚೆನ್ನಾಗಿ ಹಿಡಿದೆಳತಂದು ಬೆನ್ಹಾ ಹೊಯಿಸುವೆನೀನಳಬೇಡವೋ ಚಿನ್ನಾ 2 ಬಲುಭಂಗಾ ಪೋಗಾಬೇಡಾ 3 ಪಾಲು ಮೊಸರನ್ನವ ಕಲೆಸಿ ನಾ ಉಣಿಸುವೆ ಸದ್ದು ಮಾಡದೆ ಉಂಡು ನಿದ್ರೆ ಮಾಡೆನ್ನ ಕಂದಾ 4 ಮುದ್ದು ಕಂದಯ್ಯ ನೀನು ಮಡುವ ಧುಮಿಕಿದರೆ ಮನದಾ ಸಂತಾಪ ಸೈರಿಸಲಾರೆನೋ 5 ಶೇಷ ಗಿರೀಶನೆ ದಾಸರಧಿನನೇ ಶೇಷ ಶಯನನೇ ವೇಂಕಟ ವಿಠಲನೇ 6
--------------
ರಾಧಾಬಾಯಿ
ಅಂದವ ಜರೆವರಾರು ರಂಗ ನಿನ್ನ ಅಂಗವ ಹಳಿವರಾರು ಪ ಅಂದವ ಜರೆವರಾರೋ ಇಂದೀವರಾಕ್ಷ ಗೋವಿಂದ ನಿ ನ್ನಂದಕೇಣಿ ಬಂದವರಿಲ್ಲವಯ್ಯ ಅ.ಪ ನೀರಮೀನು ಎಂಬರೇನೋ ರಂಗಯ್ಯ ಭಾರಿ ಕೂರ್ಮನೆಂಬರೇ ಭಾರಿ ರೋಮ್ಯನು ಎನೆ ಭೂರಿಸಂತಸವಿತ್ತೇ 1 ಕೋರೇ ಹಲ್ಲವನೆಂಬರೇ ರಂಗಯ್ಯ ಕೇಸರಿ ಎಂಬರೇ ಕೋರೆ ಹಲ್ಲಿಗೆ ಶೃಂಗಾರ ಧರಣಿದೇವಿ ಘೋರ ಕೇಸರಿಗೆ ಹತ್ತಾರು ಕೈಗಳು ಚಂದ 2 ಕೊಡಲಿ ಹಿಡಿದನೆಂಬರೇ ಕೊಡೆಯ ಹಿಡಿದಡೇನು ಬಲಿಯ ಬಾಗಿಲ ಕಾಯ್ದೆ ಕೊಡಲಿ ಹಿಡಿದು ಕಾರ್ತವೀರ್ಯಾರ್ಜುನನ ಕೊಂದೆ 3 ಎಂಜಲ ತಿಂದರೇ ರಂಗಯ್ಯ ಗುಂಜುಗದಾತನೆಂಬರೇ ಎಂಜಲ ತಿಂದಾ ಬಲದಿ ಮಾರೀಚನ ಕೊಂದೇ ಗುಂಜುಗ ವೇಗದಿಂದ ಸತಿಯ [ಬಿಡಿಸಿ ಕಂದೆ] ಕಂಜನೇತ್ರೆಯಳ ಕೈ [ಹಿಡಿದು ಬಂದೆ] 4 ದುರುಳ ಚೋರನು ಎಂಬರೇ ರಂಗಯ್ಯ ತುರಗವನೇರಿದನೆಂಬರೇ ದುರುಳ ಕೌರವರೆದೆ ಬಿರಿವಂತೆ ಮಾಡಿದೆ ದುರಿತಾರಿ ನೀ ಮಾಂಗಿರಿಯ ರಂಗಯ್ಯ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್