ಒಟ್ಟು 677 ಕಡೆಗಳಲ್ಲಿ , 89 ದಾಸರು , 529 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನವೇನೆಂಬುದನರಿಯೋ ಮನುಜ ಮನ ವೇನೆಂಬುದನು ಧ್ರುವ ಮನವೇನೆಂಬುದನನುಭವಕೆ ತಂದು ಖೂನದಲಿಡದೆ ಜ್ಞಾನದಲಿ ನಾನಾ ಶಾಸ್ತ್ರವ ಓದಿ ನೀ ಅನುದಿನ ಏನು ಘಳಿಸಿದ್ಯೊ ಮರುಳ ಮನುಜ1 ಉತ್ಪತ್ತಿ ಸ್ಥಿತಿ ಲಯ ಕರ್ತನೆಂದೆನಿಸಿ ಪ್ರತ್ಯೇಕರವನು ತೋರುತಲಿ ಮತ್ತೆ ಬ್ಯಾರ್ಯಾದ ಪರಬ್ರಹ್ಮೆಂದು ತಾ ಚಿತ್ತ ಭ್ರಮಿಸುದು ದಾವುದೊ ಮನುಜ 2 ಏಕೋ ವಿಷ್ಣು ವೆಂದೆನಿಸಿ ಮುಖದಲಿ ಪೋಕ ದೈವಕೆ ಬಾಯದೆರೆಸುತಲಿ ನಾಕುವೇದವ ಬಲ್ಲವನೆಂದೆನಿಸಿ ವಿಕಳಿಸುತಿಹ್ಯದು ದಾವುದೊ ಮನುಜ 3 ಉತ್ತಮೊತ್ತಮರ ಕಂಡಾಕ್ಷಣ ಹರುಷದಿ ನಿತ್ಯಿರಬೇಕೀ ಸಹವಾಸವೆನಿಸಿ ಮತ್ತೊಂದರಘಳಿ ಗಾಲಸ್ಯವ ತೋರಿ ಒತ್ತಿ ಆಳುವದು ದಾವುದೊ ಮನುಜ 4 ಪಾಪವ ಮಾಡಬಾರದು ಎಂದೆನಿಸಿ ವ್ಯಾಪಿಸಿಗೊಡದೆ ಕಾಣದನಕ ಉಪಾಯದಲಿ ಅಪಸ್ವಾರ್ಥವು ಇದಿರಡೆ ಅಪಹರಿಸುವದು ದಾವುದೊ ಮನುಜ 5 ಪ್ರಾಚೀನವೆ ತಾಂ ನಿಜವೆಂದರುಹಿಸಿ ಆಚರಣೆಯ ಬ್ಯಾರೆ ತೋರುತಲಿ ನೀಚ ಊಚ ಹೊಡೆದಾಡಿಸುತ ನಾಚಿಸುತಿಹುದು ದಾವೊದೊ ಮನುಜ 6 ಸಗುಣ ನಿರ್ಗುಣ ಬ್ಯಾರೆರಡನೆ ತೋರಿ ಬಗೆ ಬಗೆ ಸಾಧನ ತೋರಿಸುತ ಬಗೆದೊಂದೆವೆ ಭಕುತಿಗೆ ನೆಲೆಗೊಳಿಸಿದ ಪ್ರಗತಿ ತೋರುವುದು ದಾವುದೊ ಮನುಜ 7 ಧ್ಯಾನಕೆ ಕೂಡಿಸಿ ಮೋನವ ಹಿಡಿಸಿ ಅನುದಿನ ಜಪವನು ಮಾಡಿಸುತ ಘನವಾಗಿಹÀ ಅನುಭವ ಸುಖದಾಟದ ಖೂನ ದೋರಿಸುದು ದಾವುದೊ ಮನುಜ 8 ಮರವಿಗೆ ತಾನೆ ಅರಿವೇ ಕೊಟ್ಟು ತಿರಿವು ಮರವಿನಂಕುರದ ಕುರ್ಹುವಿನ ಇರಹು ತೋರಿಸುದು ದಾವುದೊ ಮನುಜ 9 ಮನವಿನ ಮೂಲವು ತಿಳಿವದು ಭಾನುಕೋಟಿ ಪ್ರಕಾಶನ ಕರುಣದಲಿ ನಾನು ನಾನೆಂಬವರಿಗೆ ಇದರ ಖೂನ ಲೇಶ ತಿಳಿಯದೊ ಮನುಜ 10 ಹರಿಯೆ ಗುರುವೆಂದರುಹಿಸಿ ಆತ್ಮಲಿ ಶರಣಹೋಗುವ ಭಾವನೆದೋರಿ ತರಳಮಹಿಪತಿ ಗುರುದಯ ಪಡಕೊಂಡಿಂದು ಯೋಗ್ಯನಾಗುವದಿದೊಂದೆ ಮನುಜ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮನಸಿನ ಮಲಿನವ ಮನಸೀಜನೈಯನೆ ಹನನ ವೈದಿಸದಿರೆ ಬದುಕುವ ದೆಂತೊ ಪ ವನಜ ಸಂಭವ ಜನಕ ತನುಮನ ಪ್ರೇರಕ ಮಾನವ ನಾನು ಶರಣುಹೊಕ್ಕೆನೈಯ ಅ.ಪ ಸ್ನಾನ ಸಂಧ್ಯಾನುಷ್ಠಾನ ವೇನು ಗೈದವನಲ್ಲ ಹೀನ ಸ್ತ್ರೀಯರ ಧ್ಯಾನ ಘಳಿಗೆ ಬಿಟ್ಟವನಲ್ಲ ಧಾನ ಧರ್ಮಗಳೊಂದು ಮಾಡಿಕೊಂಡವನಲ್ಲ ಗಾನದಿಂದಲಿ ಹರಿನಾಮವಾದರು ಪಾಡಲಿಲ್ಲ ದೀನಜನಮಂದಾರ ಕರುಣೋದಾರ ಮಹಿಮನೆ ಮಾನಮತ್ತವಮಾನ ನಿನ್ನಾಧೀನ ವಲ್ಲವೆ ತನುಮನೇಂದ್ರಿಯ ನಾಥ ನಾಯಕ ನೀನೇ ಆಗಿರೆ ಎನ್ನ ದೇನಿದೆಬರಿದೆ ದೂರದೆ ಸಾನುರಾಗದಿ 1 ನೋಡಬಾರದ ನೋಟ ನೋಡಿ ಆಯಿತು ಜೀಯ ಮಾಡಬಾರದ ಬಯಕೆ ಮಾಡಿದ್ದಾಯಿತು ಸ್ವಾಮಿ ಕೂಡಬಾರದ ಕೂಟ ಕೂಡಿದ್ದಾಯಿತು ತಂದೆ ಈಡುಕಾಣೆನು ನನ್ನ ಕೇಡು ಕರ್ಮಕೆ ಇಂದು ಗಾಡಿಕಾರ ನಿಗೂಢ ಹೃದಯಗ ಬೇಡಿ ಕೊಂಬೆನು ಪ್ರೌಡ ಭಕ್ತರಗಾಢ ಪ್ರೇಮದಿ ಕೂಡಿಸುತ ತಿಳಿ ಗೇಡಿಯೆನಿಸದೆ ವೇದ ಸಮ್ಮತ ಗಾನ ಜೋಡಿಸಿ ಹಾಡಿ ಹಾಡಿಸೆ ಭಾಢ ಮಹಿಮೆ ವಿಶೇಷ ನಿನ್ನದು 2 ಮುಂದು ಮಾಡುತ ಹಿಂದೆ ಇಂದು ಕಂದನಲ್ಲವೆ ನಾನು ಎಂದೆಂದು ನಿನಗೆ ಇಂದಿರೇಶನೆ ನಿನ್ನಮೀರಿಕರ್ಮವಮಾಡೆ ಎಂದಿಗಾದರು ಸಾಧ್ಯವಾಹುದೆ ನನಗೆ ತಂದೆ ಜಯಮುನಿವಾಯು ಹೃದಯಗ ನಂದಮಯ ಶ್ರೀ ಕೃಷ್ಣವಿಠಲ ನಿಖಿಳ ವಿಶ್ವಕೆ ಕುಂದುಮಯ ಅಭಿಮಾನ ಮನಸಿಗೆ ತಂದಿಡದೆಯೆಂದೆಂದು ಸಲಹುತ ಕುಂದು ಗೈದವನೆಂದು ನುಡಿಯದೆ ಪಥ 3
--------------
ಕೃಷ್ಣವಿಠಲದಾಸರು
ಮನುಜಶರೀರವು ವರವೊ ದುರ್ಲಭವೊ ಪ ಭವಸಾಗರವನು ದಾಂಟಲು ನೌಕೆಯಿದೊ ಭವಭಾಧೆಯ ನೀಗಲು ಇದು ಸಾಧನವೊ ಪಾವನಸ್ವರೂಪಜ್ಞಾನವನರಿಯಲು ದೇವನೆ ತಾನೆನಿಸುವನೊ ಆ ನರನು 1 ತಿಳಿ ನೀನೀಗಲೆ ನಾನಾರೆಂಬುದ ಮನುಜಾ ಅಳಿವೀ ದೇಹದೊಳೇ ತಿಳಿಯಲುಬಹುದಿದನಾ ಉಳಿದ ದೇಹಗಳು ಹಲವಾರಿರುತಿರೆ ಫಲವೇನೈ ತಿಳಿವಿರದೇ ತಿಳಿ ಭರದೇ 2 ಪಾಪಿ ಜನ್ಮವು ಎಂದು ಶಪಿಸಲು ಬೇಡಾ ತಾಪನೀಗಲು ಇದೇ ದಾರಿಯೈ ನೋಡಾ ಭವ ಕಡಿಯೇ 3
--------------
ಶಂಕರಭಟ್ಟ ಅಗ್ನಿಹೋತ್ರಿ
ಮನೆಯ ನಿರ್ಮಲಗೈದು ಮೋದಬಡಿಸುವುದು ವನಜನಾಭನ ಭಕ್ತಿಯಂಬವಳ ಬಿರಿದು ಪ. ಬಾಯಿಮೊದಲಾದೈದು ಬಾಗಿಲುಗಳಲ್ಲಿ ವಾಯುವಂದ್ಯನ ಚರಿತ ವರ್ಣನಾದಿಗಳಾ ಛಾಯಗೊಂಬುವ ತೆರದಿ ಚಿತ್ರಕೃತ್ಯವನೂ ನಿತ್ಯ ನಲಿವುದನು 1 ಬುದ್ಧಿ ದೀಪವನು ಬಹು ಶುದ್ಧಕನು ತಾ ತದ್ದಾರಿ ಮನವ ಮೇಲುದ್ಧರಿಸಿಕೊಳುತಾ ಸಿದ್ಧಗಮ್ಯನ ಪದಕೆ ಸರಿಯಾಗಿಸುತಾ ಬದ್ಧ ಬೊಗಳುತಾ ಜನರ ಬಾಯಿ ಮುಚ್ಚಿಸುತಾ 2 ದೋಷ ದುಷ್ಕøತ ಕೆಸರ ಲೇಶವಿಡಗೊಡಳು ಆಶೆಯೆಂಬುವ ಬಲೆಯ ಕೊೈಸಿ ಬಿಸುಟುವಳು ಈಶ ಮಾನಿತ್ವಕವಕಾಶವೇನಿಡಳು ಕೇಶವನ ಕರತಂದು ಕಾವಲಿರಿಸುವಳು 3 ಇವಳಾಶ್ರಯವ ಪೊಂದಲ್ಯಾರಭಯವಿಲ್ಲ ನವರೂಪಳನ್ನುಸರಿಸಿ ನಲಿವ ಸಿರಿನಲ್ಲ ತವಕದಿಂದಲಿ ತಾನೆ ಓಡಿ ಬಂದೆಲ್ಲಾ ಯುವತಿಯರ ಕೂಡಿ ತಾ ಪಾಡುವರೆ ಬಲ್ಲಾ 4 ಕಂಜನಾಭನ ಕರುಣ ಪಂಜರದೊಳಿರಿಸಿ ಸಂಜೀವನೌಷಧವ ಸುಲಭದೋಳ್ ಕುಡಿಸಿ ಅಂಜಿಕೆಯ ಬಿಡಿಸಿ ರಿಪು ಪುಂಜವನ ಕಡಿಸಿ ಮಂಜುಳಾತ್ಮಕ ಮಾಧವನ ಮುಂದೆ ಕರಿಸಿ 5 ದಾನ ವ್ರತಾದಿಗಳನೇನ ಮಾಡಿದರು ಶ್ರೀನಿವಾಸನ ಕರುಣ ಸಾಧ್ಯವಾಗಿರದು ನೀನೆ ರಕ್ಷಕನೆಂಬ ಧ್ಯಾನದಲಿ ಮೆರದು ಜ್ಞಾನ ಭಕ್ತಿಗಳಿಂದ ನಲಿವುದೇ ಬಿರುದು 6 ಯುಕ್ತಿಯಿಂದಲಿ ನೋಡಲೆಲ್ಲ ಶಾಸ್ತ್ರದಲಿ ಭಕ್ತಿಯೋಗವ ಪೇಳ್ವವೇಕಮತ್ಯದಲಿ ಭುಕ್ತಿ ಮುಕ್ತಿಯ ಶೇಷ ಭೂಧರೇಶನಲಾ ಸಕ್ತಿಯಿರೆ ಸಕಲಾರ್ಥವೀವನುತ್ಸವದಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ಮರವೆ ಮುಸುಕಿದುದುತಾ ಪರಮ ಕೃಪೆವಂತ ಬಂದು ಪ್ರಳಾಪವೇನಿದುಯೆಂದು ನನ್ನಯತಾಪವನು ತಂಪಿಸುತ ಬಿಗಿಯಪ್ಪಿದನು ದೇಶಿಕನು 1ಕಂಗಳೊಳಗಾನಂದಜಲ ಸುರಿದಂಗದೊಳು ರೋಮಾಂಚವಾಗಿಯೆಮಂಗಳಾಕೃತಿಗಂಡು ಚರಣಕ್ಕೆರಗಿದೆನು ಮರಳಿಕಂಗಳೊರತೆಯ ತೊಡೆದು ದಿವ್ಯ ಕರಂಗಳಿಂದಲಿ ಶಿರತಡ' ಸರ್ವಾಂಗವನು ಬಿಗಿಯಪ್ಪಿಯಭಯವನಿತ್ತ ದೇಶಿಕನು 2ನಿನ್ನೊಳಾನಿಹೆನೆಲ್ಲಿ ಪೋಪೆಡೆಯನ್ನು ತೋರಿಸು ನನಗೆ ನೀನಾರೆನ್ನ ಮನ ನಿನ್ನುವನುಳಿದು ನಿಲಬಲ್ಲುದೇ ಮಗನೇಇನ್ನು ಧೈರ್ಯವ ಮಾಡು ಗಿರಿಗುಹೆಯನ್ನು ಸೇರ್ವೆನು ನಾನು ಜನತತಿಯನ್ನು ಹೊದ್ದುವದಿಲ್ಲವೆಂದುಸುರಿದನು ದೇಶಿಕನು 3ಇರಿಸಿರುವೆನೀ ಪಾದುಕೆಗಳನು ಹರುಷದಿಂದರ್ಚಿಸುತ ಭಾ'ಸುಬರಿಯ ಭ್ರಾಂತಿಯ ಬಿಟ್ಟು ಭಕ್ತಿಯ ಬಲದಿ ಮಂತ್ರವನುನಿರುತ ಜಪಿಸುತ್ತಿರು ಯಥೇಚ್ಛೆಯೊಳರಿವು ಸುಖಸಂಪತ್ತಿ ಲಭಿಪುದುಪರಮ ಭಕತನು ನೀನೆನುತ ವಾಚಿಸಿದನು ದೇಶಿಕನು 4'ಜಯದಶ'ುಯ ದಿವಸ ಲಭಿಸಿತು 'ಜಯಕರ ಮುಂದಿನ್ನು ನಿನಗೆಲೆದ್ವಿಜನೆ ಸುತ ಪೌತ್ರಾದಿ ಕುಲಪಾರಂಪರೆಗೆ ನಿನ್ನಾಸುಜನತೆಯ ಕರುಣಿಪುದು ಭಕ್ತವ್ರಜದೊಲೋಲಾಡುವದು ತಪ್ಪದು'ಜಯಸಾರಥಿ ನಿನ್ನ ವಶವೆಂದನು ಗುರೂತ್ತಮನು 5ಅನಿತರೊಳು ಜನಸಂದಣಿಯ ಧ್ವನಿಯನು ತಿಳಿದು ನಾನೆದ್ದೆ ಬೇಗದಿಘನಕೃಪಾನಿಧಿ ಗುರುವ ಕಾಣದೆ ಮತ್ತೆ ಬಳಲಿದೆನುಇನನುದಿಸಿದೊಂದರೆಘಳಿಗೆ ತಲೆಯನು ಬಿಡದೆುದ್ದಲ್ಲಿ ಪಾದುಕೆಯನು ಶಿರದಿ ತಾಳಿದೆನು ಮನೆಗೈದಿದೆನು ಹರುಷದಲಿ 6ತಿರುಪತಿಯ ವೆಂಕಟನು ಸುಖವನು ಕರುಣಿಸಲು ದೇಶಿಕನ ತನುವನುಧರಿಸಿ ಪಾದುಕೆುತ್ತು ಸಲ'ದನೊಲಿದು ಕೃಪೆುಂದಹರುಷದಿಂದೀ ದಿವಸ ಶ್ರೀ ಗುರುವರನ ಪೂಜಾಕಾರ್ಯವೆನಿಪುದುನಿರುತ ಭಜಿಸುವರಿಂಗೆ ಸಕಲೇಷ್ಟಾರ್ಥ ಸಿದ್ಧಿಪುದು * 7
--------------
ತಿಮ್ಮಪ್ಪದಾಸರು
ಮರುಳು ಮನವೇ ವ್ಯರ್ಥ ಚಿಂತಿಸುವಿಯಾಕೋ ಹರಿ ತಾನೇ ಕಾಯ್ವ ಮನ ದೃಢವಿರಲಿ ಬೇಕೊ ಪ ಎಲ್ಲಿ ನೋಡಿದರಲ್ಲಿ ಇರುವಾತಾ ಎಲ್ಲರನು ಪೊರೆವಾತಾ ಬಲ್ಲಿದನು ಬಲಿಯ ತುಳದಾತಾ ಸೊಲ್ಲು ಸೊಲ್ಲಿಗೆ ಬಂದು ಎಲ್ಲಿವನು ಪೇಳಿದರೆ ಕಲ್ಲಾಗುವನೇ ಸ್ವಾಮಿ ಪ್ರಲ್ಹಾದ ತಾತಾ 1 ಹಬ್ಬಿರುವ ಮಾಂಸಗಾಗರ್ಭದೊಳಿರುವಾಗ ಉಬ್ಬಸವ ಬಡುವಾಗ ಸಲಹಿದವರ್ಯಾರೋ ಅಬ್ಬರದ ನೋವಿನೊಳು ಒಬ್ಬನೇ ಬರುವಾಗ ಹೆಬ್ಬಾಗಿಲವ ನಿನಗೆ ತೋರಿದವರ್ಯಾರೋ 2 ವರದ ಹನುಮೇಶವಿಠಲನ ಚರಣವ ನಂಬು ಮೊರೆಯಾಗ್ವನಲ್ಲಾ ಹರಿ ಕರುಣ ಸಾಗರನೋ ಕರಿರಾಜ ಕರಿಯಲಾಕ್ಷಣಕೆ ಅವಸರದಲಿ ಗರುಡವಾಹನ ಕೃಷ್ಣ ಬರಲಿಲ್ಲವೇನೋ 3
--------------
ಹನುಮೇಶವಿಠಲ
ಮಲಗಿದನು ಶ್ರೀರಂಗ ಶ್ರೀರಂಗ ಪ ಕಲಿಜನರ ನೋಡುತಲಿ ಅಳುಕಿದಾಮನದಿಂದ ಅ.ಪ ಜೀವ ಜಗಬಿಂಬನಿಗೆ ಯಾವುದೈ ಆಯಾಸ ಕಾವ ಸಚರಾಚರವ ಶ್ರೀವರನಿಗುಂಟೆ ನಿದ್ರೇ ಸಾರ್ವಭೌಮನಿಗೆ ಕ್ಷುದ್ರಜೀವ ಸಮರೆಂತೆಂಬ ಕೋವಿದಾಭಾಸಗಣ ಸೇವೆಕೊಳ್ಳನು ಎಂದು 1 ವೈದೀಕರೆನ್ನುತಲಿ ವೇದಮರ್ಮವ ತಿರುಚಿ ಬೌದ್ಧಮತವನೆ ಮತ್ತೆ ಬೊಧಿಪರೆ ಈ ಜನರು ಸಾಧು ಸಮ್ಮತ ಮಧ್ವವಾದ ನೋಡದೆ ಬರಿದೆ ಸಾಧು ವೇಷದಿ ತಿರಿಪ ಗರ್ದಭರ ಕಂಡಂಜಿ 2 ನಾಮಜಪವೇನಿಲ್ಲ ನೇಮ ನಿಷ್ಠೆಗಳಿಲ್ಲ ನಾಮ ಹಾಕುವ ದೊಡ್ಡ ನೇಮವಂದೇಯಿಹುದೆ ಹೇಮಗೋಸುಗ ತತ್ವ ಹೋಮಮಾಡುವ ಎಲ್ಲ ಕಾಮ ಕಾಮಿನಿ ಜನರ ವಾಮಗುಣಗಣನೆನೆದು 3 ಅನ್ನದೇವನ ತೊರೆದು ಅನ್ನಕೊಂಬರೆ ಕ್ರಯಕೆ ಅನ್ಯರೆನ್ನದೆ ಹರಿಗೆ ಇನ್ನು ಘಳಿಪರೆ ನಿರಯ ಹುಣ್ಣಂತಮವಿಪರೀತ ಕಣ್ಣಿಂದ ನೊಡದವ ಧನ್ಯಧನ್ಯನು ಎಂದು ಕಣ್ಣುಗಳ ಮುಚ್ಚುತಲಿ 4 ಶ್ರೀಲೊಲ ಮಲಗಿದಡೆ ಏಳುವುದು ಜಗವೆಂತು ವ್ಯಾಳಗುರುಹೃಸ್ಥ “ಶ್ರೀ ಕೃಷ್ನವಿಠಲ”ನೆ ತಾಳಿ ಕೃಪೆ ಹೃದಯದಲಿ ಶೀಲರೂಪವ ತೋರೊ ಕಾಲ ವಾಲಗವ ಕೈಕೊಂಡು 5
--------------
ಕೃಷ್ಣವಿಠಲದಾಸರು
ಮಲಗು ಮಲಗಮ್ಮ ತಾಯೆ ಶ್ರೀಹರಿಯ ಜಾಯೆ ಮಲಗು ದುಗ್ಧಾಬ್ಧಿನಿಲಯೆ ಸಾಗರನ ತನಯೆ ಜೋ ಜೋ ಪ ಇಂದಿರೆಯೆ ಹರಿ ನಿನ್ನ ಅಂದವನು ನೋಡಿ ಮಂದರಧರ ತನ ವಕ್ಷದಿ ಮಂದಿರವ ಮಾಡಿ ಚಂದದಿ ಮುದ್ದಿಪನು ಗೋವಿಂದ ನಲಿದಾಡಿ ಮಂದಸ್ಮಿತನಾಗಿ ತಾ ನಿಂದಿರುವ ನಿನ ಕೂಡಿ 1 ಮೂರುಕಣ್ಣ ಮೋಹಿಸಿದನೇನೆಂಬೆನಾಗ ಮಾರಮಣನು ಸ್ತ್ರೀ ವೇಷಧರಿಸಿದಾಗ ಆ ರಮೇಶ ಮರುಳಾದನಮ್ಮ ನಿನಗೀಗ ನೀರೆ ನೀ ಮಲಗು ನಿಶ್ಚಿಂತಳಾಗಿ ಬೇಗ 2 ಪನ್ನಗಾರಿಧ್ವಜಗೆ ಛತ್ರ ಚಾಮರವಾದಿ ಉನ್ನಂಥ ವಸ್ತ್ರ ಆಭರಣಗಳು ನೀನಾದಿ ಅನ್ನಪಾನಾದಿಗಳಿತ್ತು ತೃಪ್ತಿಪಡಿಪಳಾದಿ ನಿನ್ನಂತೆ ಸೇವಿಪರ್ಯಾರು ಮೂರು ಭುವನದಿ 3 ಏನು ಸುಕೃತಗೈದಿದ್ದೆ ನಾ ಕಾಣೆನಮ್ಮಾ ಜಾಣೆ ನಿನಗೆಣೆಯ ಕಾಣೆ ಜನನಿ ಕೇಳಮ್ಮಾ ತಾನೆ ತನ್ನಲ್ಲಿ ರಮಿಪನಲ್ಲವೇನಮ್ಮಾ ದಾನವಾಂತಕನು ನಿನ್ನ ಕೈಪಿಡಿದನಮ್ಮಾ 4 ಮಂಗಳಾಂಗಿಯೆ ನಿನಗೆ ಸರಿಸಮರ್ಯಾರಿಲ್ಲ ಭೃಂಗಕುಂತಳೆ ಕೈ ಜೋಡಿಪರು ಸುರರೆಲ್ಲ ಬಂಗಾರದ ಮಂಚವಣಿಯಾಗಿಹುದಲ್ಲ ರಂಗೇಶವಿಠಲ ತಾ ಪವಡಿಸಿರ್ಪನಲ್ಲ 5
--------------
ರಂಗೇಶವಿಠಲದಾಸರು
ಮಹಾಲಕ್ಷ್ಮೀ ಅಷ್ಟಕಂ ಪಂಕಜ ಮಾಲಿನಿಪಾಹಿಮಾಂ ಕರವೀರವಾಸಿನಿ ಪಾಹಿ ರಾಘವ ಕಾಮಿನಿ ಪ ಚಂದ್ರಮಂಡಲ ಹಾಸ ಸನ್ಮುಖ ಮಂದಹಾಸ ಸುಶೋಭಿತೆಸಿಂಧುರೇಂದ್ರ ಕರಾಮೃತೌಘ ಸುಗಂಧ ಬಿಂದು ನಿಷೇಚಿತೆಕುಂದರೋಜ್ವಲ ಇಂದ್ರನೀಲ ಮಣೀಂದ್ರಹಾರ ವಿಲಾಸಿತೇಬಂದ್ರಿರಾಜಸುತೇವ ಸೂನುಮನಾದಿ ಬಂಧ ವಿವರ್ಜಿತೇ 1 ಸಾಂಬ ಸುಶಾಂತಿ ಕಾಂತಿ ಸಹೋದ್ಭವೆ 2 ಚಾರು ಸುರಾಳಿ ಮೌಳಿಗ ಹಸ್ತತೇ 3 ತಪ್ತಕಾಂಚನ ನೂಪುರೋಜ್ವಲ ರಕ್ತಪಾಲ ಸರೋರಹೆಚಿತ್ರಪೇಟ ಪಟೋಲ್ಲ ಸತ್ಕಟೆ ರತ್ನ ಕಾಂಚಿ ಗುಣೋದ್ಭವೇನಿತ್ಯತೃಪ್ತ ನಿರಂಜನೈಸುರ ಮೃತ್ಯುಮೋಹನ ವಿಗ್ರಹೆತತ್‍ಕೃಪೈವಪು ಮೃತ್ಯುಸಾಧನ ಸಪ್ತ ಮೋಡಿಹ ವಿದ್ಮಹೆ 4 ಅಂಬಜಾವಕ ಲಕ್ಷ್ಮೀ ಮೇಷ ಕದಂಬಿನೀನಿಲಯಸ್ಥಿತೆಕಂಬುಕಂಜರ ತಾರಿಬೇಟ ಕರಾಂಬು ಸಂಭವ ಸೇವಿತೆಶಂಭರಾರಿ ಸುತಾಂಘ್ರಿಪಂಕಜೆ ಬಿಂಬರಾಹಿ ಭೂಸುತೆಸಾಂಬಹೀಂಬ ನಿಹಾ ಸುದರ್ಶಯ ಜಂಜವೈರಿನಿ ಸೇವಿತೆ 5 ತಲ್ಪ ಮಂದ ಸೌಭಗ ಶಾಲನಂವಂದ್ಯ ಮಾನ ವಿದೇಂದ್ರ ದೈವತ ವೃಂದ ವೈಭವದಾಯಿನಂಸುಂದರಾಂಗಿಣಿ - ನಿವೇದಗೇಹ ಭವಾಂಧಿ ಪೋಪನೀ ಶೋರ್ಪಣಂ 6 ಜೀವವರ್ಗ ಹೃದಾಲಯ ಸ್ಥಿತ ಭೂವರಾಹಸಹಾನನೇಪಾವನೀತಾಹೇ ವಸೇದ್ರುಮ ಹಾನು ಭಾವ ಶಿಖಾಮಣಿಹಾವಭಾವ ವಿಲಾಸಿನಾಕಿ ಸುವಾಸಿನಿನುತ ಸದ್ಗುಣಿಸೇವಕೇಯ ವಿಭಾವಿತಾಖಿಲ ಭಾವಕಾಯದ ಶಿಕ್ಷಣಿ 7 ಇಂದಿರೇಶ ಸತೀಂದುಮೌಳಿ ಕರಾರವಿಂದ ನಿಷೇವಣೇಚಂದ್ರಮಾರುತರೇಂದು ಸೈಂದವವೀಂದ್ರ ಪೂರ್ವಸು ವಾಹನೇಅಂಧಕೂಪ ಸಮಾನ ದುರ್ಭವ ಬಂಧ ಸೇಘನೀ ಪೋಷಿಣಿನಂದನಂದನ ಮಾಸುದರ್ಶಯ ಬಂಧುರಾಮೃತ ಭಾಷಿಣಿ 8
--------------
ಇಂದಿರೇಶರು
ಮಾಡುವುದೆಲ್ಲ ವಿವಾದಕೆ ಕಾರಣ | ಸಾಧಿಸುವದೆ ಬ್ರಹ್ಮಾ ಪ ಸಾಧು ಜನರ ಸುಸಮಾಧಿಯ ಬೋಧವು ಬಾಜಾರವೇನೋ ತಮ್ಮಾ ಅ.ಪ ಮನದೊಳು ತನದೊಳು ನಯನಗಳಿರುತಿರೆ | ಮನ ಬಯಸಿದದೊಂದು | ಘನ ಜ್ಯೋತಿಯ ತಾ ತಾರದೆ ತೋರದು | ಸನ್ಮುಖದಲಿ ನಿಂದೂ 1 ಅರಿವುದು ಕರಣದಿ ಬೆರೆವುತ ನಿನ್ನ | ಅರಿಯದಲಿರುತಿಹುದೂ | ಪರಮ ಪುರುಷರಾಚರಿಸುವ ಪರಿಯಲಿ | ಗುರುಪದ ಸಾರುವದೋ2 ತಪ್ಪದೆ ನೆಲಕೆ ಭಗುರಿಯನೆ ಎಸೆವರೆ | ಜಪ್ಪಿಸುವರೆ ಹೇಳಾ | ದಪ್ಪನೆ ಗುರು ಭವತಾರಕ ತ್ರಯ ಜಗದಪ್ಪನ ನೀ ಕೇಳಾ 3
--------------
ಭಾವತರಕರು
ಮಾತನಾಡಲೆ ಜಾಣೆ ಮೋಹನಿಭಿ ಮದಯಾನೆ| ರೀತಿ ನಿನಗುಚಿತವೇನೇ|ಯಾತಕಿದು ಮನ ಮುನಿಸು| ಎನ್ನೊಳು ಸುಖಬೆರೆಸು ಪ್ರೀತಿ ರತಿಸೊಬಗು ದೊರೆನಾರೀ ಪ ತಿಂಗಳಾನನೆ ನಿನ್ನ ತೋಳಿಂಬವಿಲ್ಲದಿರೆ| ಕಂಗಳಿವೆ ಗೊಡವಲ್ಲೆ ನಲ್ಲೆ| ಅಂಗ ದವಯವವು ತಮ್ಮ ಅರ್ಥಿಯನೆ ಜರಿದವಾ| ಲಿಂಗನವ ಬಯಸಿ ನೋಡೆ ನೀಡೇ1 ಮುಂದಕಡಿಯಿಡಲಾರೆ ಮನಸೋತವಗೆ ದಯ| ದಿಂದಕರ ಪಲ್ಲವಾರೆ ದೋರೆ| ಬಂದ ನಿನ್ನಯ ವಿರಹ ಬಹಳ ತಾಪಕ ಸರಸಾ| ನಂದ ಮಳೆಯಗರಿಯೇ ವೆರಿಯೇ 2 ಏಣಾಕ್ಷಿ ಕೇಳಿನ್ನಯ ದೇವನೀಗ ಯಾಚಕನು| ತಾನಾಗಿಬಂದೆನಲ್ಲೆ ನಿಲ್ಲೆ| ತಾ ನೊಲಿದು ಅಧರಾಮೃತ ಫಲವೇ ಸೂರೆಯನು| ಮೌನದಲಿ ಕೊಡಲಿಬಾರೇ ನೀರೇ 3 ಕಾಂತೆ ನಿನ್ನ ವಿಯೋಗ ಕೇಳು ಜನವನ ವಾಗೆ| ಎಂತಶನ ಶುಚಿ ಹೇಳೆ ಕೇಳೆ| ಕಂತುವಿನ ಶರಗಳರಕಂ ಮಡುವಂ ಪೊಕ್ಕೆಗುಣ| ವಂತೆ ಫಣೀ ವೇಣಿ ಪಿಡಿಯೇ ಜಡಿಯೆ4 ಮಂದಗಮನೆ ಬುದ್ದಿಮೋಹಿಸುವದೇನು|ನಿಜ| ಛಂದ ವಾಜಿಯಲಿ ಕೂಡೆ ನೋಡೇ| ಎಂದ ವಚನನಲಿದು ಎರಗಿ ಗಿರಿ ಮಹಿಪತಿ|ನಂದ ನೊಡೆಯನ ನೆರದಳೇ ತರಳೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾತಿನ ಸುಖವೇನೋ ಸುಖವೇನೋ | ರೀತಿಯನರಿಯದೆ ತಾನು ಪ ಸಂತರ ವೇಷವ ಹಿಡಿವೀ | ಮನದಲಿ | ಶಾಂತಿಯ ಮನಗುಣ ಬಿಡುವೀ 1 ಪಡಿಯದೆ ಆತ್ಮ ವಿಚಾರಾ | ದೋರುವಿ | ನುಡಿಯಂಗಡಿಯ ಪಸಾರಾ 2 ಇಂದು | ಹೇಳುವಿ | ಸರ್ವಂ ವಾಸುದೇವೆಂದು ಮ 3 ತರಂಗವಿಲ್ಲದ ಶರಧಿಯಂತೆ | ಇರುವುದು ಪರಮ ಸಮಾಧಿ 4 ತಂದೆ ಮಹಿಪತಿ ಬೋಧಾ | ಮನನಕೆ | ತಂದವನೇ ಸುಖಿಯಾದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾತಿನಂತಲ್ಲನುಭವ ಜ್ಞಾನ ಮರುಳಜನ ಬಲ್ಲವೇನ ಯತಿಮುನಿಗಳು ಸಾಧಿಸುವ ಖೂನ ಮನೋನ್ಮನದ ಸಾಧನ ಧ್ರುವ ನುಡಿಜ್ಞಾನಾಡಿ ತೋರಬಹುದು ನಾಡ ಲೋಕದೊಳೆಲ್ಲ ನಡಿಜ್ಞಾನದೆ ದುರ್ಲಭವದು ಆಡಿ ದೋರಲಿಕ್ಕಿಲ್ಲ ಗುಹ್ಯ ನಿಜಬೋಧಿದು ಒಡೆದ್ಹೇಳುವದಲ್ಲ ಒಡನೆ ಸದ್ಗುರು ಘನ ದಯದಲಿದು ಪಡೆದವನೆ ತಾಂ ಬಲ್ಲ 1 ಕಲಿತಾಡುವ ಮಾತಿಗೆ ಸಿಲುಕದ ಮೂಲವಸ್ತುದ ಖೂನ ನೆಲೆನಿಭವೆ ತಾ ಅಗಮ್ಯಿದು ಬಲು ಸೂಕ್ಷ್ಮಸ್ಥಾನ ಬಲಿಯದೆ ರೇಚಕ ಪೂರ್ವಿದು ನೆಲೆಗೊಳ್ಳುದು ಸಾಧನ ನಿಲಕಡ್ಯಾಗದೆ ಕುಂಭಕಲಿದು ಬಲಿಯದು ಗುರುಙÁ್ಞನ 2 ಸ್ವಾನುಭವ ಸುಖ ಸಾಧಿಸಿ ಅನುದಿನದಿ ನೋಡಿ ಮನಗೆದ್ದು ಜನಕೆ ಮೋಹಿಸುವ ಅನುಭವ ಹೇಳಬ್ಯಾಡಿ ಭಾನುಕೋಟಿತೇಜನೊಲಿದು ತಾ ಖೂನಾಗುವ್ಹಾಂಗ ಮಾಡಿ ದೀನ ಮಹಿಪತಿ ಸ್ವಾಮಿ ಮನಗಂಡು ಮನೋಹರ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾತು ಬಿಡಬೇಕು ನೀತಿ ಹಿಡಿಬೇಕು ಪ್ರೀತಿಯಿಂದಧ್ಯಾತ್ಮ ನಿಜಸ್ಥಿತಿಗೂಡಬೇಕು ಧ್ರುವ ಕೋಟಿ ಮಾತಾದೇನು ಕೋಟಿಲಿದ್ದಾವೇನು ನೋಟ ನೆಲೆಗೊಳದ ಶಾಸ್ತ್ರಪಾಠ ಮಾಡಿನ್ನೇನು 1 ಸಂಜೀವ ಗಿಡಮೂಲವ್ಯಾತಕೆ ಸರ್ವ ನಡಿಯು ಙÁ್ಞನವರಿಯದಿಹ ನುಡಿಯಾತಕೆ ಬೀರ್ವ 2 ನಡೆನುಡಿ ಒಂದೇ ಮಾಡಿ ದೃಢ ಭಾವನೆ ಕೂಡಿ ಒಡನೆ ಬಾಹ್ವ ಮಹಿಪತಿ ಒಡಿಯ ಕೈಗೂಡಿ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾನನಿಧಿ ಶ್ರೀಕೃಷ್ಣ ಮಧುರೆಗೈದುವನಂತೆಏನು ಪಥವಮ್ಮ ನಮಗೆ ಪ ಮಾನವೇನಿನ್ನಿದಕೆ ಮಾನಿನಿಯರೆಲ್ಲರುಆಣೆಯನು ಕಟ್ಟಿವನಿಗಡ್ಡ ನಿಲ್ಲುವ ಬನ್ನಿ ಅ.ಪ. ಕಳ್ಳತನವೇ ನಮ್ಮ ವಲ್ಲಭರು ಈ ಸುಳುವುಎಲ್ಲವನು ಬಲ್ಲರಮ್ಮಒಲ್ಲದಲೆ ನಮ್ಮ ಬಿಟ್ಟರೆ ಒಳಿತು ವನಜಾಕ್ಷಎಲ್ಲಿಗೈದಿದರೆ ನಾವಲ್ಲಿಗೈದುವ ಬನ್ನಿ1 ಇಂದುದಯದಿ ಮೊದಲು ಇಂದೀವರಾಕ್ಷಿಯರುಗೋವಿಂದನ ಬಳಿಗೈದುವಒಂದು ಕಡೆಯಲಿ ಕುಳಿತು [ವನಜಾಕ್ಷಿಯೋರ್ವ ಕೈಯಂದಲಲ್ಲಿಗೆ ಕಳುಹಿ] ಕೇಳ್ವೆವೇನು ಪೇಳುವನೋ 2 ಹರಿಣಾಂಕವದನೆಯರು ನೆರೆದು ಬರುತಿರೆ ಕಂಡುಪರಮ ಹರುಷದಲಿ ಬಂದುಸರಿ ರಾತ್ರಿಯೊಳು ಹೀಗೆ ಬರುವುದೇನೆಂದೆನಲುಎರಗಿ ಬಿನ್ನೈಸಿದರು ಅಂಬುಜದಳಾಕ್ಷನಿಗೆ3 ಶ್ಲೋಕ ಹಲವು ಕಾಲವು ನಿನ್ನ ಸ್ನೇಹ ಸುಖವ ಹಾರೈಸಿಕೊಂಡಿರುತಿಹಲಲನಾವ್ಯೂಹವ ಬಿಟ್ಟು ಅಕ್ರೂರನೊಡನೆ ನೀ ಮಧುರೆಗೆ ಪೋದರೆಕಳೆಯಲಾಪವೇ ಕಾಂತ ಕೇಳು ದಿನವ ಈ ಕಂತುವಿನ ಬಾಧೆಗೆಘಳಿಗೊಂದು ಯುಗವಾಗಿ ತೋರುತಿÀಹುದೋ ಜಲಜಾಕ್ಷ ನೀನಿಲ್ಲದೆ ಪದ ಮಾಧವ ಕೃಪಾಕರನೆ4 ಶ್ಲೋಕ ಬಾಲಭಾವದಲಿಂದಲಂಗಸುಖವ ಬಹುಬಗೆಯಲಿಂದುಳುಹಿದೆಲೋಲಲೋಚನೆ ನಿಮ್ಮ ಬಿಟ್ಟು ಪುರದ ನಾರೇರಿಗಾನೊಲಿದರೆನೀಲಕಂಠನು ಮೆಚ್ಚ ನೋಡು ನಿಜವ ನಿಮಗ್ಯಾತಕೀ ಸಂಶಯಕಾಲಕ್ಷೇಪವನಲ್ಲಿ ಮಾಡೆ ಕಿಂಚಿತ್ಕಾಲದೊಳಾನೈದುವೆ ಪದ ಪಾಲಿಸಿರೆನಗಪ್ಪಣೆಯ ಪಾಟಲ ಸುಗಂಧಿಯರೆಕಾಲಹರಣವ ಮಾಡದೆನಾಳೆ ಉದಯಕೆ ಪೋಗಿ ನಾಲ್ಕೆಂಟು ದಿನದೊಳುವ್ಯಾಳೆಗಿಲ್ಲಿಗೆ ಬರುವೆ ಕಾಳಾಹಿವೇಣಿಯರೆ 5 ಶ್ಲೋಕ ಮಾರನಯ್ಯನೆ ಕೇಳು ಅಲ್ಲಿರುತಿಹ ನಾರೇರು ಬಲು ನಿಪುಣರೋನೀರಜಾಂಬಕ ನೋಡು ನಿನ್ನ ಮನವ ನಿಮಿಷಾರ್ಧದೊಳುಸೆಳೆವರೋಮಾರಕೇಳಿಯ ಶಾಸ್ತ್ರಮರ್ಮವರಿದ ಆ ನಾರೇರು ನೆರೆಯಲುಗಾರು ಪಳ್ಳಿಯಲಿಪ್ಪ ಗೋಪಿಯರ ವಿಚಾರಂಗಳ ಸ್ಮರಿಪೆಯಾ ಪದ ಬಿಲ್ಲ ಹಬ್ಬವೆ ಸುಳ್ಳು ಬಿಸುರುಹಾಕ್ಷಿಯರಿಕ್ಷುಬಿಲ್ಲಿನುತ್ಸವಕೆ ನಿನ್ನಖುಲ್ಲ ಅಕ್ರೂರನನು ಕಳುಹಿ ಕರೆಸಿದರಲ್ಲಿವಲ್ಲಭೆಯರನ್ನು ನೆರೆವೆ ನಮ್ಮೆಲ್ಲರನು ಮರೆವೆ 6 ಶ್ಲೋಕ ನಾರೀಹಾರ ಕಿರೀಟ ಕುಂಡಲಯುಗ ಕೇಯೂರವಲಯಾದಿಗಳುಚಾರು ವಸ್ತ್ರ ಸುಗಂಧ ಪುಷ್ಪನಿಚಯ ಹಾರಂಗಳಂ ಧರಿಸದೆಮಾರ ಕೇಳಿಯ ಮಾತಿಲಿಂದಲವರ ಮನಸೆಮ್ಮೊಳೊಂದಾಗದೆನಾರೇರೊಲುಮೆಯುಂಟೆ ಲೋಕದೊಳಗೆ ನನ್ನ್ಯಾತಕೆ ದೂರ್ವಿರೇ ಪದ ಮಲ್ಲಯುದ್ಧವ ನೋಡಬೇಕೆನುತ ನಮ್ಮಾವಅಲ್ಲಿಗೆ ಕರೆಸಲದಕೆಇಲ್ಲದಪವಾದ ಈ ಸುಳ್ಳು ಸುದ್ದಿಗಳ ನೀ -ವೆಲ್ಲ ಸೃಜಿಸಿದಿರಿ ಸರಿಯಲ್ಲ ನಿಮಗಿಳೆಯೊಳಗೆ 7 ಶ್ಲೋಕ ವಾರಿಜಾಂಬಕ ವಾರಿಜಾರಿವದನ ವಾರಾಶಿಜಾವಲ್ಲಭವಾರಿವಾಹನಿಭಾಂಗ ವಾಸವನುತ ವಾಕೆಮ್ಮದೊಂದಾಲಿಸೋವಾರಿಜೋದ್ಭವನಯ್ಯ ನಿನ್ನ ವಿರಹ ವಾರಾಶಿಯೊಳು ಮುಳುಗಿಹನಾರೀನಿಚಯವ ಪಾರುಗಾಣಿಸು ಕೃಪಾನಾವೆಯಲಿಂದೆಮ್ಮನು ಪದ ಮಾರನೆಂಬುವನು ಬಲು ಕ್ರೂರ ನಮ್ಮಗಲಿ ನೀ ಊರಿಗ್ಹೋದುದನು ಕೇಳಿವಾರಿಜಾಸ್ತ್ರವನು ಎದೆಗೇರಿಸೆಮ್ಮನು ಬಿಡದೆಹೋರುವನು ಅಹÉೂೀ ರಾತ್ರಿಯಲಿ ತಪಿಸುತ 8 ಶ್ಲೋಕ ನೀಲಕುಂತಳೆ ಕೇಳು ನಿಮ್ಮ ಮನೆಯೊಳಾ ನೆಲುವಿನ ಮ್ಯಾಲಿನಪಾಲು ಬೆಣ್ಣೆಯ ಕದ್ದು ಮೆದ್ದು ಬಹಳ ಕಾಲಂಗಳಂ ಕಳೆದೆನೆಬಾಲೆ ಮನ್ಮಥಬಾಣದೆಚ್ಚು ತಪಿಸೆ ಬಹು ಬಗೆಯಲಿಂದುಳುಹಿದಲೋಲಲೋಚನೆ ನಿಮ್ಮೊಳಾನು ಬಹಳ ಜಾರತ್ವಮಂ ಮಾಳ್ಪೆನೇ ಪದ ಬಟ್ಟಗಂಗಳೆ ನಿಮ್ಮ ಬಿಟ್ಟು ಘಳಿಗಿರಲಾರೆದುಷ್ಟ ಕಂಸನು ಕರೆಸಲುಅಟ್ಟಿದರೆ ಪೋಗದಿರೆ ಸಿಟ್ಟಿನಿಂದಲಿ ವ್ರಜಕೆಅಟ್ಟುಳಿಯ ಮಾಡುವನು ಅಂಬುಜಸುಗಂಧಿಯರೆ 9 ಶ್ಲೋಕ ಪತಿ ಸುತ ಪಿತೃ ಮುಖ್ಯ ಭ್ರಾತೃ ಬಾಂಧವರು ಎಂಬಅತಿಶಯ ನಮಗಿಲ್ಲ ಆಲಿಸೋ ಮಾತನೆಲ್ಲರತಿಪತಿಪಿತ ನೀನೇ ರಾತ್ರಿಯೊಳು ಕೊಳಲನೂದೆಕ್ಷಿತಿಪತಿ ನಿನ್ನೆಡೆಗೆ ಕ್ಷಿಪ್ರದಿಂ ಬಂದೆವಲ್ಲೊ ಪದ ಬಾಲತನದಲಿ ಯಮುನಾ ತೀರದಲಿ ನೀ ವತ್ಸ-ಪಾಲನೆಯ ಮಾಡುತಿರಲು ಆಕಾಲ ಮೊದಲಾಗಿ ಈ ವ್ಯಾಳೆ ಪರಿಯಂತರವುಕಾಲುಘಳಿಗಗಲದಿಹ ಕಾಂತೆಯರ ತ್ಯಜಿಸುವರೆ10 ಶ್ಲೋಕ ಪರಿಪರಿಯಲಿ ನಿಮ್ಮ ಪಾಲಿಸಿ ನೋಡೆ ಮುನ್ನಕರುಣಕೆ ಕೊರತಿಲ್ಲ ಕಾಂತೆ ಕೇಳೆನ್ನ ಸೊಲ್ಲತ್ವರಿತದಿ ಬಾರದಲೆ ತಡೆದು ನಾ ನಿಂತರಲ್ಲೆಸರಸಿಜಭವ ಮಾರರಾಣೆ ಕಾಣೆ ಪ್ರವೀಣೆ ಪದ ಕ್ಲುಪ್ತ ಕಾಲಕೆ ಬಂದುನೆರೆಯದಿದ್ದರೆ ನಾನು ಪರಮ ಪುರುಷೋತ್ತಮನೆ11 ಶ್ಲೋಕ ಮಾರನೆಂಬುವನಂದೆ ಮಡಿದನು ಶಿವನ ಮೂರನೆ ಕಣ್ಣಿಲಿನಾರೇರಿಲ್ಲದೆ ನಾಭಿಯಿಂದ ಪಡೆದ ಆ ಬ್ರಹ್ಮನೆಂಬಾತನ ನಾರಿ ಈರ್ವ ಕುಮಾರರಾಣೆ ಹರಿಯು ತಾನಿಟ್ಟನೇನೆಂಬೆವೆಮಾರಿ ಹೊರಗಿನ ಹೊರಗೆ ಹೊಯಿತೆಂಬೊ ತೀರಾಯಿತೆ ಭಾವುಕಿ ಪದ ಹಲವು ಮಾತುಗಳ್ಯಾಕೆ ಜಲಜಾಕ್ಷ ನಿನ್ನ ಪದನಳಿನಗಳ ನೆರೆ ನಂಬಿಹಒಲುಮೆಯಲ್ಲಿರುತಿಪ್ಪ ಲಲನೆಯರನೆಲ್ಲರನುಸಲಹೊ ಸಲಹದೆ ಮಾಣು ರಂಗವಿಠಲರೇಯ12
--------------
ಶ್ರೀಪಾದರಾಜರು