ಒಟ್ಟು 8337 ಕಡೆಗಳಲ್ಲಿ , 130 ದಾಸರು , 4215 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿಕ್ಕಬೇಕು ಗುರುಪಾದ ಸಿಕ್ಕಬೇಕು ಸಿಕ್ಕಿದ ಬಳಿಕಲಿ ದಕ್ಕಬೇಕು 1 ಮುಕ್ಕಬೇಕು ಗುರು ನಾ ಮುಕ್ಕಬೇಕು ಮುಕ್ಕಿದ ಬಳಿಕಲಿ ಅಕ್ಕಬೇಕು 2 ಉಕ್ಕಬೇಕು ಘನಸ್ಫುರಣ ಉಕ್ಕಬೇಕು ಉಕ್ಕಲು ಮಹಿಪತಿಗುಕ್ಕಬೇಕು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಿಂಗನಾ ಏರಿದ ನರಸಿಂಗ ತೋಮರವ ಪಿಡಿದು | ರಂಗ ವೈಭೋಗದಿಂದ | ನಲಿದು ಚತು | ರಂಗ ಬೀದಿಯೊಳು ಮೆರೆದಾ ಪ ಮುತ್ತಿನ ಕಿರೀಟ ಮೇಲೆ ಎತ್ತಿದ ಸತ್ತಿಗೆ ಪೊಳೆಯ | ವಾಹನ ರಥ | ಹತ್ತಿ ಬರುವ ಪುರದ ಜನಗಳು 1 ಸನಕಸನಂದನ ಸನತ್ಸುಜಾತ ಸನತ್ಕುಮಾರ | ಮುನಿವರರು ವೇದ ಘೋಷಣೆ ಉಚ್ಚರಿಸುತ್ತ | ಅನಿಮಿಷರಾಗಿ ಇಚ್ಚೈಸುತಾ 2 ಗಂಧರ್ವಾದಿ ಗಾಯನಾ ನಾರಂದನು ಪಾಡುತ್ತ ಬರೆ | ಎಂದು ತುಂಬರನು ಹಾಡಿ ಪಾಡುತಾ 3 ವೇಶ್ಯ ಜನರು ರಂಭೆ ಊರ್ವಶಿ ಪಾತ್ರ ಮಾಡುತಿರೆ | ದಾಸಾನುದಾಸರು ಪಾಡುತಾ | ಸಲಹೊ ಶ್ರೀನಿ ವಾಸನೆಂದು ಬೇಡಿಕೊಳುತಾ 4 ಮಂಗಳಪಾಂಗ ಸಾಂಗೋಪಾಂಗದಿಂದ ಒಪ್ಪೆ ಅಲಮೇ ವೆಂಗಳೇಶ ಶ್ರೀ ವೆಂಕಟೇಶಾ 5
--------------
ವಿಜಯದಾಸ
ಸಿಟ್ಟು ಮಾಡುವುದೆಂದಿಗು ಸಲ್ಲ ಪೂರ್ಣ ಸಿರಿನಲ್ಲ ಪ. ಮೋಹ ಪಾಶ ಮಿಕ್ಕು ಬಿಗಿದಿಹುದು ರಿಪು ವ್ಯೂಹ ಸುತ್ತಮುತ್ತ ನೆಗದಿಹುದು ದೇಹದಿ ದಿನದಿನ ಬಲಕುಂದಿ ಬಂತು ಚಿ- ದ್ದೇಹ ನೀನೊಲಿವ ಸನ್ನಹಗೊಳ್ವದೆಂತೊ 1 ಒಂದು ಸತ್ಕರ್ಮ ಸಾಧಿಸುವಲ್ಲಿ ಬೇಗ ಪಾತಕ ಝಲ್ಲಿ ಮಂದರಧರ ಮಧುಸೂದನ ಮನದಿ ನೀ ನಿಂದು ಸಾರ್ಥಕ ಮಾಳ್ಪ ತೆರವೆಲ್ಲ ಬಲ್ಲಿ 2 ಹಿಂದೆ ಮುಂದಿನ ಸರ್ವ ಕರ್ಮಫಲ ಎನ್ನ ತಂದೆ ಸ್ವೀಕರಿಸಿ ಮಾಡಿಸು ನಿರ್ಮಲ ಇಂದಿರೇಶ ವೆಂಕಟೇಶನೆ ತ್ವಚ್ಚರ- ಣೆಂದೀವರ ನೆರಳಿರಿಸನುಗಾಲ 3
--------------
ತುಪಾಕಿ ವೆಂಕಟರಮಣಾಚಾರ್ಯ
ಸಿಂದೂರಗಮನೆ ಸಾರೆ ಮಲಗಿರುವನ್ಯಾರೆ ಪ ಸಂದರೀ ಮಂದಿರದೊಳಿವನ್ಯಾರೆ ಸೌಂದರ್ಯದ ಮ್ಯಾರೆ ಛಂದದಲಿ ನೀ ಸಾರೆ ಇಂದು ನಭದಲಿ ಚರಿಸುತಲಿ ಮನ ನೊಂದು ಬೇಸರದಿಂದ ಇಲ್ಲಿಗೆ ಬಂದು ಮಲಗಿಹನೇನೆ ಸುಖದಿ 1 ಶೀಲೆ ನೋಡಿವನ ಮುಖಕಮಲ ಸಂಗರದೊಳತಿ ಚಟುಲ ಸುವಿಶಾಲ ಭುಜಯುಗಲ ಶ್ರೀ ಲಕುಮಿವರ ಪಾಲ ನಯನ ಮರಾಳ ಧ್ವಜರೊಳ ಗಾವನೊ ಇವ ಪೇಳುವದು ಕೀಲಾಲಜಾಂಬಕಿ2 ನಾರಿ ಮಾತನಾಡಿಸೇ ಇವನ ಮನ ಮೋಹದವರನ ಕಮನೀಯ ಗುಣಯುತನ ವಾರಿಜಾಸನ ಮುಖ್ಯ ಸುರಪರಿವಾರ ಸೇವಿಯ ಕೊಳುವ ಕಾರ್ಪರನಾರಸಿಂಹನೆ ಪವಡಿಸಿಹನೆ 3
--------------
ಕಾರ್ಪರ ನರಹರಿದಾಸರು
ಸಿದ್ಧಬಸವ ಪ್ರಸಿದ್ಧನ ಮಹಿಮೆಯ ಕೇಳಿರಿ ನೀವಿನ್ನು |ವಿದ್ಯಾ ಬುದ್ಧಿ ಧನ ಧಾನ್ಯವನು ಸಿದ್ಧಿಸುವವಿನ್ನೂ ಪ ಶಿವನ ಅಪ್ಪಣೆ ತೆಗೆದುಕೊಂಡು ಶಿವಕಂಚಿಯೊಳಗೆ |ಪಾವನ ಚರಿತ ಬ್ರಾಹ್ಮಣನಲ್ಲಿ ಪುಟ್ಟಿದನು ಬೇಗ ||ದಿವಸ ದಿವಸಕೆ ಬೆಳೆದನು ಬಿದಗಿ ಚಂದ್ರಮನ ಹಾಗೆ |ಜಾವ ಜಾವಕೆ ಶಿವನ ಧ್ಯಾನವ ಮಾಡುವ ಮನದೊಳಗೆ1 ಮುಂಜಿ ಮಾಡಿಸಿಕೊಂಡನು ಸಿದ್ಧನು ಮದುವೆಯಾಗಲಿಲ್ಲ |ರಂಜಿಸುತಿಹನು ಸೂರ್ಯನಂತೆ ತೋರುವ ಜಗಕೆಲ್ಲ ||ಬಂಜೆ ಒಬ್ಬಳು ಇದ್ದಳು ಆಕೆಗೆ ಮಗನ ಕೊಟ್ಟನಲ್ಲ |ಸಂಜೆ ಹಗಲು ಕಾಣದ ಕುರುಡಗ ಕೊಟ್ಟನು ಕಣ್ಣುಗಳ 2 ತಂದೆ ತಾಯಿಗೆ ಹೇಳಿದನಾಗ ಪೋಗುವೆ ನಾನೆಂದು |ಕಂದ ನಮ್ಮನು ಬಿಟ್ಟು ಪೋಗುವದುಚಿತವೆ ನಿನಗೆಂದು ||ಅಂದ ತಾಯಿಗೆ ವಂದಿಸಿ ಹೇಳಿದ ಮಗನಾಗುವೆನೆಂದು |ಸಂದೇಹವು ಬೇಡೆಂದು ಪೇಳುತ ತೆರಳಿದ ದಯಾಸಿಂಧು 3 ಮಹಾಶಿವಾಲಯ ಕಂಡನು ಸಿದ್ಧನು ದೇಶ ತಿರುಗುತಲಿ |ಆ ಸೀಮೆಯಲಿ ಹಳ್ಳದ ನೀರು ನಿರ್ಮಲ ನೋಡುತಲಿ ||ಆಸನ ಹಾಕಿ ಕುಳಿತನು ಶಿವನ ಧ್ಯಾನವ ಮಾಡುತಲಿ |ಆ ಸಮಯದಿ ಬಂದನು ಕರಣಿಕ ಹೊಲಗಳ ನೋಡುತಲಿ 4 ಉದ್ದಂಡ ಸಂತತಿ ಆಗಲಿ ಇನ್ನು 5 ನಿನ್ನಯ ಪೂಜೆಯ ಮಾಡುವದ್ಹೇಗೆ ಹೇಳೋ ನಮಗೀಗ |ಮನ್ನಿಸಿ ಅವಗೆ ಪೇಳಿದ ಸಿದ್ಧ ಪುರುಷನು ತಾ ಬೇಗ ||ಸಣ್ಣ ಬಿಂದಿಗೆಯನಿಟ್ಟು ದ್ವಿಜರ ಪಾದೋದಕವೀಗ |ಸಂಖ್ಯೆಯಿಲ್ಲದ ಕೊಡಗಳ ಹಾಕಲು ತುಂಬದು ಎಂದೀಗೆ 6 ಅಂದಿಗೆ ಉಂಟು ಇಂದಿಗೆ ಇಲ್ಲ ಎನಲಾಗದು ನೀನು |ಸಂದೇಹವಿಲ್ಲ ಆಶ್ವೀನ ವದ್ಯ ದ್ವಿತೀಯದ ದಿನವು ||ಇಂದಿಗೆ ಕರಣಿಕ ವಂಶದವರು ಮಾಡುತಾರೆ ಇನ್ನೂ |ಮುಂದಕೆ ತೆರಳಿ ಕೊಳಕೂರಕೆ ಬಂದ ಸಿದ್ಧ ತಾನು 7 ಗಾಣಿಗರ ಮನೆಯೊಳಗಿದ್ದು ಗಾಣಾ ಹೂಡಿದನು |ಪ್ರಾಣ ತೊಲಗಿದ ಹೆಣ್ಣುಮಗಳಿಗೆ ಪ್ರಾಣವನಿತ್ತಾನು ||ಗೋಣಿಯೊಳಗೆ ಹೊಲಿದು ನದಿಯಲಿ ಪಾಚ್ಛಾ ಹಾಕಿದನು |ಕಾಣಿಸದಂತೆ ಬೇಗನೆ ಹೊರಗೆ ಹೊರಟು ಬಂದಾನು 8 ಹೆಸರು ನಿನ್ನದು ಏನು ಎಂದು ಪಾಚ್ಛಾ ಕೇಳಿದನು |ಹೆಸರು ನನಗೆ ಬಸವನೆಂದು ಕರೆತಾರೆ ಇನ್ನು ||ಪಶು ನೀನಾದರೆ ಸೊಪ್ಪಿಯ ಬೇಗ ತಿನಬಾ ಎಂದನು |ನಸು ನಗುತಲಿ ಸೊಪ್ಪಿಯ ತಿಂದು ಡುರಕಿ ಹೊಡೆದಾನು 9 ಗೊಂಬಿಗೆ ವಸ್ತಾ ಸೀರೆಯನುಡಿಸಿ ಸಿಂಗಾರ ಮಾಡಿದನು |ರಂಭೆಗೆ ಸರಿ ಈ ಹೆಣ್ಣು ಮಗಳಿಗೆ ಮದುವ್ಯಾಗೋ ನೀನು ||ಅಂಬುಜ ಮುಖಿ ಬಾರೆಂದು ಕರೆದನು ಸಿದ್ಧ ಮುನೀಶ್ವರನು |ತುಂಬಿದ ಬಸುರೊಳು ಮಗನ ಪಡೆದಳು ವಂಶಾದೆ ಇನ್ನು 10|| ನೇಮವ ಮಾಡಿ ಕೊಳಕೂರದಿ ಇರುವೆನು ನಾನೆನುತ |ಈ ಮಹಿಮೆಯೊಳಗೆ ಭೀಮಾ ದಕ್ಷಿಣವಾಹಿನಿ ಮಹಾಕ್ಷೇತ್ರ ||ಗ್ರಾಮಸ್ಥರನು ಕರೆದು ಹೇಳಿದನು ಅಡಗುವೆ ನಾನೆನುತ |ನೀವು ಮಾತ್ರ ನಾವಿದ್ದ ಸ್ಥಳವನು ನೋಡಬೇಡೆನುತ 11 ಕಲಿಕಾಲವನು ಕಂಡು ಸಿದ್ಧನು ಅದೃಶ್ಯನಾದನು |ತಿಳಿದು ಭಕ್ತಿ ಮಾಡಿದವರಿಗೆ ವರಗಳ ಕೊಡುತಿಹನು ||ಸುಳಿವನು ಕಣ್ಣಿಗೆ ಸತ್ಪುರುಷರಿಗೆ ಸಿದ್ಧ ಬಸವ ತಾನು |ಹಲವು ಹಂಬಲ ಮಾಡಲು ಬೇಡರಿ ಇರುವೆ ನಾನಿನ್ನೂ 12 ಹನ್ನೆರಡು ನುಡಿ ಸಿದ್ಧನ ಸ್ತೋತ್ರವ ಕೇಳಿದವರಿಗೆ |ಮುನ್ನ ಮಾಡಿದ ಪಾಪವು ನಾಶಾಗಿ ಹೋಗುವದು ಬೇಗ ||ಧನ್ಯನಾಗುವ ಕೀರ್ತಿ ಪಡೆಯುವ ಲೋಕದ ಒಳಗ |ಚನ್ನಾಗಿ ಶ್ರೀಪತಿ ಗುರುವಿಠ್ಠಲನು ಒಲಿವನು ತಾ ಬೇಗ 13
--------------
ವಿಶ್ವಪತಿ
ಸಿರಿ | ಉರಗಾದ್ರಿ ವಾಸಾ ಪ ಭವ | ವಾರಿಧೀಯ ಅ.ಪ. ಸುತ್ರಾಮ ವಂಧ್ಯಾ 1 ಭಕ್ತ ವತ್ಸಲ ಕೃಷ್ಣ | ಮುಕ್ತಿದಾಯಕ ಹರಿಯೆ |ಸಕ್ತವಾಗಿಸು ನಿನ್ನ ಪ್ರಸಕ್ತಿಲೀ |ದೃತ - ಭೋಕ್ತø ಭೋಗ್ಯಗ ಮುಕ್ತರಾಶ್ರಯ |ಭಕ್ತಿ ಪುಟ್ಟಿಸಿ ನಿನ್ನ ಪದದಲಿಯುಕ್ತ ರೀತಿಲಿ ವ್ಯಕ್ತವಾಗ್ವುದು |ಭಕ್ತವತ್ಸಲ ಅವ್ಯಕ್ತ ಮೂರ್ತೇ 2 ಊರು ಒಂದೆನಗಿಲ್ಲಾ | ಗಾರಗಳ್ಮಿತಿಯಿಲ್ಲಮರಳಿ ಬರುವ ರೋಗ | ಪಾರ ಗಾಣಿಸೊ ದೇವ ||ದೃತ - ಬಾರಿ ಬಾರಿಗೆ | ಮೊರೆಯ ನೀಡುವೆನು |ಧೀರ ಗುರು ಗೋವಿಂದ ವಿಠಲನೆಸೂರಿಗಮ್ಯ | ಸುಖಾತ್ಮ ಚಿನುಮಯಚಾರು ರೂಪವ | ತೋರೊ ಬೇಗ3
--------------
ಗುರುಗೋವಿಂದವಿಠಲರು
ಸಿರಿ ಇಂದಿರೇಶ ದಾಸಜನಪೋಷ ದಾಸನಾಶೋತ್ತರಕೆ ಬೇಸರಿಯಬೇಡ ಪ ಭೇದಭಾವನೆ ಬಿಡಿಸು ವಾದಮತಿ ಪರಿಹರಿಸು ಸಾಧುಸಜ್ಜನರ ಸುಬೋಧನುಡಿಗಲಿಸು ಕ್ರೋಧ ತಾಮಸ ಕಡಿಸು ವೇದವಾಕ್ಯವ ತಿಳಿಸು ಸಾಧನದಿ ಪರಲೋಕ ಹಾದಿಯೊಳು ನಡೆಸು 1 ಶಾಂತಿ ಸದ್ಗುಣ ಕಲಿಸು ಶಾಂತಿನುಡಿಗಳು ನುಡಿಸು ಶಾಂತಿ ಮಂತ್ರವ ಬೋಧಿಸು ಶಾಂತಿಸ್ಥಿರಗೊಳಿಸು ಶಾಂತರೊಡನಾಟವಿರಿಸು ಶಾಂತಿಸುಖ ಕರುಣಿಸು ಶಾಂತಜನಪ್ರಭುವೆ ವೇದಾಂತ ಎನಗೊಲಿಸು 2 ಕಾಸಿನಾಸೆಯು ಬಿಡಿಸು ಹೇಸಿ ಬವಣೆಯ ಗೆಲಿಸು ಮೋಸಮಯಪಹರಿಸು ದೋಷದೂರೆನಿಸು ದೋಷನಾಶನ ಜಗದೀಶ ಶ್ರೀರಾಮ ನಿನ್ನ ಸಾಸಿರ ನಾಮ ಎನ್ನ ಧ್ಯಾಸದೊಳು ನಿಲಿಸು 3
--------------
ರಾಮದಾಸರು
ಸಿರಿ ಪ ನಲ್ಲನವರ ಸಂಗದಿ ಕೂಡು ಅ.ಪ ಉಪದೇಶ ಮಾಳ್ಪುದಕೆ ಹೋಗಬೇಡ ನೀ ಚಪಲಚಿತ್ತನು ತಿಳಿದಿರು ಮೂಢ- ತೋರ್ಪದಿರು ಕೋಣ 1 ಹಿಂದೆ ಹೋದರು ಬಹಳ ಮಂದಿ | ಸ್ಥಿರ- ವೆಂದು ತಿಳಿದು ನೀದುಃಖ ಹೊಂದಿ ಮುಂದಾಗುವುದುಕ್ಕೆಲ್ಲಾ ಕಂದರ್ಪ ಕಾರಣನಲ್ಲಾ 2 ಎಲ್ಲಾ ಜನರನು ಸುಲಿವರು ಮುನ್ನು ಕ್ಷುಲ್ಲಕರಿಗೆ ತತ್ವವ ಪೇಳೆ ಸುಳ್ಳೆಂದು ನಿಂದಿಸುವರು 3 ಪ್ರಶ್ನೆಗೆ ತಕ್ಕ ಉತ್ತರವಾಡು | ಸೂರ್ಯ- ರಶ್ಮಿಯೊಳಗಿರುವ ಲವಣಿಯ ನೋಡು ನಿ_ ನ್ನಸ್ವರೂಪವದರಂತೆ | ಯಾತಕೆ ಇನ್ನು ಅಗಾಧ ಭ್ರಾಂತಿ 4 ಅನಂತ ಪ್ರಾಣಿಗಳೊಳಗೆ ನಿವಾಸ | ನಮ್ಮ ವನಜಾಕ್ಷ ಗುರುರಾಮವಿಠಲೇಶ ಅನಿಮಿತ್ತ ಬಂಧುವನು ಬಿಡಿಬಿಡಿರೋ ದುರಾಶಾ5
--------------
ಗುರುರಾಮವಿಠಲ
ಸಿರಿ ಪತಿಯ ಒಂದೊಂದು ವಚನಗಳು ಗುರುತರಾ ನಂದತೀರ್ಥರ ಭಾವಕೆ ಹೊಂದಿಸುವ ಯುಕತಿ ಬಾಣ | ತೆಗೆಯಲವು ಕುಂದಿಲ್ಲ ಧೀಷುಧಿಗಳು 1 ವಂದಿಸುವ ಜನ ಬೇಡಿದ ಫಲಗಳಿಗೆ ಮಂದಾರು ತರು ಸನ್ನಿಭ | ತಾವು ವಂದಿಸುವ ಶಿಷ್ಯರಿಗೆ | ಹೃದಯದಲ್ಲಿ ಕುಂದ ಕುಸುಮದ ಮಾಲಿಕೆ | ತಾವು 2 ಗೆಲಿದು ಪ್ರತಿವಾದಿ ಹೃದಯ | ಗಿರಿಗಳಿಗೆ ಕುಲಿಶಗಳಂತಿಹವೆ ಅವರ ವಚನ ವಾಸುದೇವ ಸಲೆ ಕೃಪೆಯೆಂದು ತಿಳಿಯೊ | ಪ್ರಾಣಿ 3
--------------
ವ್ಯಾಸತತ್ವಜ್ಞದಾಸರು
ಸಿರಿ ಪಾಂಡುರಂಗನಾ ಪಾಡಿದೆನೊ ಜಗದಂತರಂಗನ ಖಗ ತುರಂಗನ ಬೇಡಿದೆನೊ ಗುಣಾಂತರಂಗನಾ ಪ ಕಪಿಲ ವಿಭುಹರಿ ಸಾರ್ವಭೌಮ ಸು ತಪನಂದನ ಕೃಷ್ಣ ಕೃಷ್ಣ ಗೀರ್ವಾಣ ತಪಯಜ್ಞ ಜಿತದತ್ತ ಧನ್ವಂತ್ರಿ ವಿನುತ ವೃಷಭ ಹಯ ಲಪನ ವೈಕುಂಠ ಹಂಸ ತಪನಾ ಕುಪಿತ ಜಿತ ಮುನಿ ನರನಾರಯಣ ಅಪರಿಮಿತ ರೂಪ ಧರಿಸಿದಾನಂದ ಗುಪಿತ ಮಹಿಮನ 1 ಮುನಿವನ ಜಿತ ಚಿತ್ತ ಶುದ್ಧದಿ ಜನನಿ ಜನಕನ ಚರಣ ಸೇವೆಯ ಅನುದಿನದಿ ಘನವಾಗಿ ಮಾಡುತ ಗುಣಗಳಿಂದಲಿಯಿರಲು ಇತ್ತಲು ಮುನಿ ನಾರದನು ಗಾಯನವ ಗೈಯುತ ಇನಿತು ಸೋಜಿಗ ನೋಡಿ ತನ್ನಯ ಜನಕಗರುಹಲು ನಗುತಲಾ ಮನದಿ ಕೈಕೊಂಡ ಮೂಲ ಮೂರ್ತಿಯ 2 ಪೊಡವಿಯೊಳು ನೀನವತರಿಸಿ ಆ ದೃಢü ಬಕುತನಿಗೆ ದರುಶನವೆ ಇ ತ್ತಡಿಗಡಿಗೆ ಸುಖಬಡಿಸಿ ಅಲ್ಲಲ್ಲಿ ಬಿಡದೆ ನಿಲ್ಲುವೆ ನಿಮ್ಮ ಸಹಿತಲಿ ವಿನುತ ಕಳುಹಿದ ಒಡನೆ ಸಲ್ಲಿಪೆನೆಂದ ಯಮುನಾ ತಡಿಯ ಜನಿಸಿದ ಜಗನ್ಮೋಹನಾ 3 ನಿಧಿಯ ನೋಡುವೆನೆನುತ ಗೋವುಗಳ ಮುದದಿ ಮೇಯಿಸಿಕೊಳುತ ಕಾವುತ ಒದಗಿ ಗೋವಳರೊಡನೆ ಬಂದನು ವಿಧಿ ಸಂಭವಾದ್ಯ ಭಕ್ತನ ಎದುರಲಿ ನೋಡಿದನು ಹೋ ಹೋ ಇದೇ ಸಮಯವೆಂದು ನಿಂದಾ ಹಿಂಭಾ ಗದಲಿ ಭಕ್ತಿಗೆ ಮೆಚ್ಚಿ ಬಲು ವೇಗಾ4 ತಿರುಗಿ ನೋಡದಲಿರಲು ಭಕುತನ ಮರಳೆ ಮಾತಾಡಿಸಲು ಇಟ್ಟಿಗೆ ಭರದಿ ಹಿಂದಕೆ ಒಗಿಯೆ ವಿಠ್ಠಲ ಹರುಷದಲಿ ವಶವಾಗಿ ನಿಲ್ಲಲು ಕರುಣರಸ ಸಂಪೂರ್ಣ ದೇವನ ನಿರೀಕ್ಷಿಸಿದ ಜಯವೆಂದು ಪೊಗಳಿ ವರವ ಬೇಡಿದ ಪುಂಡರೀಕನು ಗಿರಿಯನೆತ್ತಿದ ಗೋಕುಲೇಶನ 5 ಭಕುತ ಮನೋರಥ ಎನ್ನ ಪೆಸರಿಲಿ ಸಕಲ ಲೋಕದೊಳಗೆ ನೀನೆ ಮುಕುತಿ ಕೊಡುತಲಿ ಇಲ್ಲೆ ನಿಲುವದು ಅಖಿಳ ಬಗೆಯಿಂದ ಭಜನೆಗೊಳುತ ನೀ ರುಕ್ಮಿಣಿಪತಿ ಒಲಿದು ಪಾಲಿಸಿ ವ್ಯಕುತವಾದನು ಪೂರ್ವಮುಖನಾಗಿ ಸುಖವಯೋನಿಧಿ ಮೆರೆಯುತಲಿ ಇಂದೂ 6 ಕ್ರೋಶ ಯೋಜನ ಯೋಜನತ್ರಯ ದೇಶ ಪರಿಮಿತ ಕ್ಷೇತ್ರವಿಪ್ಪುದು ವಾಸ ಒಂದಿನಮಲ ಮನುಜರನ ಲೇಸು ಪುಣ್ಯಗಳೆಣಿಸಿ ಸರಸಿ ಜಾಸನನು ಬೆರಗಾಗಿ ನಿಲ್ಲುವ ದೋಷ ವರ್ಜಿತ ಹರಿಯ ನೆನೆಸುತ ಆ ಸೇತು ಮಧ್ಯದಲಿ ವಿಶೇಷವಾಗಿದ್ದ ಈ ಕ್ಷೇತ್ರ ಮೂರ್ತಿಯಾ 7 ನಂದಾ ಮಂದಾಕಿನಿ ಮಧ್ಯಾಹ್ನಕೆ ನಿಂದಿರದೆ ಬರುತಿಪ್ಪ ಪ್ರತಿದಿನ ಚಂದ್ರಭಾಗಾ ಪ್ರಸೂನುವತಿ ಅರ ಕುಂಡಲ ಚತುರ ದಿಕ್ಕಿನಲಿ ಪೊಂದಿಪ್ಪವು ಓರ್ವನಾದರು ಮಿಂದು ತೀರ್ಥದಲಿ ಆ ನಂದ ಸತ್ಕರ್ಮ ಚರಿಸಲಾಕ್ಷಣ ಇಂದಿರೇಶನು ಒಲಿವ ನಿಶ್ಚಯಾ 8 ದ್ವಾರಸ್ಥ ಜಯ ವಿಜಯ ನಾರದ ಭಾರತಿ ಪಂಚ ಕೋಟಿ ದೇವರು ಶ್ರೀರಮಣಿ ಮಿಕ್ಕಾದ ಜನರೆಲ್ಲ ಈರೆರಡು ದಿಕ್ಕಿನಲಿಯಿಹರು ಸುತ್ತಲಿ ಪಾಡುತ್ತ ಕುಣಿಯುತ್ತ ಹಾರುತಲಿ ಹಾರೈಸಿ ನಾನಾ ವಿ ಹಾರದಲಿ ಪುರಿ ಪ್ರದಕ್ಷಣಿ ವಿ ಸ್ತಾರ ಮಾಡುತಲಿಪ್ಪ ಸೊಬಗನಾ 9 ಎರಡು ವಿಂಶತಿ ಗುದ್ದು ಮೊಳವೆ ಕರಿಸಿ ಕೊಂಬೊದೊಂದೆ ನಿಷ್ಕವು ಇರದೆ ಇವು ನಾನೂರುಯಾದಡೆ ವರಧನಸ್ಸು ಪ್ರಮಾಣವೆನಿಸೊದು ಗುರುತು ತಿಳಿವದು ಇಂಥ ಧನಸ್ಸು ಅರವತ್ತು ಪರಿಮಿತಾ ಈ ಭೀಮಾ ಸರಿತೆಗಳು ಪರಿಪರಿ ತೀರ್ಥಗಳಕ್ಕು ನಿರೀಕ್ಷಿಸಿ ವಂದನೆಯ ಮಾಡುತಾ 10 ಜ್ಞಾತಿ ಗೋತುರ ಹತ್ತದೊಂದೆ ಮಾತು ಮನ್ನಿಸಿ ಕೇಳಿ ಸುಜನರು ವಾತದೇವನ ಕರುಣತನವನು ನೀತಿಯಲಿ ಪಡಕೊಂಡು ಸತ್ವದಿ ಜ್ಞಾತ ಅನುಷ್ಠಾನದಲಿ ನಡೆದು ಪು ಮಾನವ ಬಂದರಾದಡೆ ಆತುಮದೊಳು ಹರಿ ಪೊಳೆದು ಬಲು ಕೌತುಕವ ತೋರಿಸುವ ರಂಗನಾ 11 ಶಯ್ಯಾ ಹರಿ ದಿನದಲಿ ಮಾನವ ಕಾಯ ನಿರ್ಮಳನಾಗಿ ಫಂಡರಿ ರಾಯ ರಾಜೀವನೇತ್ರ ತ್ರಿಭುವನ ನಾಯಕನ ಕ್ಷೇತ್ರಕ್ಕೆ ಮನಮುಟ್ಟಿ ಗಾಯನವ ಮಾಡುತಲಿ ಬಂದ ನಿ ರ್ಮಾಯದಲಿ ಕೊಂಡಾಡಿ ದಮ್ಮಯ್ಯ ಕೈಯ ಪಿಡಿಯನೆ ಕರುಣದಿಂದ ಸಾ ಹಾಯವಾಗುವ ವಾಣಿ ಜನಕನಾ 12 ಮಕುಟ ಕುಂಚಿ ಕುಲಾಯ ಕುಂತಳ ಕುಂಡಲ ಮಣಿ ಕಿರಣ ಸ ನ್ನುಖ ಮುಕರ ಸೋಲಿಸುವ ಕಾಂತಿ ಚಂ ನಾಸಿಕ ಮುಖ ಮೃಗನಾಭಿ ಸಣ್ಣ ತಿ ಲಕ ಕೌಸ್ತುಭಗಳ ತುಲಸಿ ಮಾಲಿಕಾ ನಖ ಪದಕ ಕಟೆಕಂಬು ಕರದ್ವಯ ನಖ ಪಾದ ಭೂಷಣ ಮಾ ಣಿಕ ಇಟ್ಟಿಗೆ ಮೇಲೆ ನಿಂದ ವಿಠ್ಠಲನ 12 ಸಂಗಮ ಸುರ ಮಥನ ಕಾಳಿಂಗ ಭಂಗ ಭಾವುಕ ಭಕ್ತಜನಲೋಲ ಶೃಂಗಾರಾಂಬುಧಿ ರೋಮ ಕೋಟಿ ಕೋಟಿ ಲಿಂಗಧರ ಗೌರೀಶ ಸುರಪ ನಂಗ ಮಿಗಿಲಾದ ಮುನಿವಂದಿತಾ ಮಾ ತುಂಗ ವರದ ಗೋವಿಂದ ವರದೇಶ ಸಂಗ ನಿಃಸಂಗ ಸುಪ್ರಸನ್ನ ನೀ ಅನುದಿನ 14 ಪೇಳಲೊಶವೇ ಲೋಹದಂಡಿ ಹಿ ಯ್ಯಾಳಿ ಕ್ಷೇತ್ರದ ಮಹಿಮೆ ಸಾವಿರ ನಾಲಿಗಿಂದಲಿ ಪೊಗಳಿ ಸುಮ್ಮನೆ ವ್ಯಾಳಪತಿ ಬೆರೆಗಾಗಿ ನಿಲ್ಲುವ ಸಲಿಗೆ ನಾ ಮಾಳ್ಪರು ವಿಲಿಂಗರು ಮೇಲು ಮೇಲೀ ಭುವನದೊಳಗಿದ್ದು ಹೇಳಿ ಕೇಳಿದ ಜನರಿಗಾನಂದಾ ಬಾಲಾ ವಿಜಯವಿಠ್ಠಲರೇಯನಾ 15
--------------
ವಿಜಯದಾಸ
ಸಿರಿ ರಂಗನಿಗೇ ಮಂಗಳಾಂಗನಿಗೆ ಪ ಭಾರ ಬೆನ್ನಿಲೆ ಪೊತ್ತು ದಾಟಿಸಿತಂದಂದು ನಾರಶಿಂಹನಿಗೆ ಸುರಶೂರ ಸಿಂಹನಿಗೆ 1 ಬಲಿಯ ದಾನವ ಬೇಡಿ ಕುಲವ ಸಂಹರಿಸುತಶಿಲೆಯನುದ್ಧರಿಸಿದ ಚೆಲುವ ಬಾಲನಿಗೆ ಗಾನಲೋಲ ಕೃಷ್ಣನಿಗೆ 2 ದುರಿತ ನಾಶಕಗೆ 3
--------------
ಸಿರಿಗುರುತಂದೆವರದವಿಠಲರು
ಸಿರಿಕೃಷ್ಣ ವಿಠಲನೆ | ಪೊರೆಯ ಬೇಕಿವಳಾ ಪ ಮರುತಾಂತರಾತ್ಮಕನೆ | ಶರಣ ಸುರಧೇನೂ ಅ.ಪ. ಭವ | ಕರಿಗೆ ಕೇಸರಿಯೇ |ಮರುತ ಮತ ತತ್ವಗಳ | ಅರಿವು ಕೊಡುತಲಿ ಇವಳಕರುಣನೋಟದಿ ನೋಡೊ | ಸರ್ವದೇವೇಡ್ಯಾ 1 ಕಂಸಾರಿ ತವದಾಸ್ಯ | ಶಂಸನಾರ್ಹತೆಯರಿತುಸಂಶಯವುರಹಿತೆಪದ | ಪಾಂಸು ಬಯಸುವಳೋ |ಹಂಸವಹ ವಂದ್ಯ ವೀ | ಪಾಂಸಗನೆ ಸಿರಿಲೋಲವಂಶವೃದ್ಧಭಿಲಾಷೆ | ಹಂಸಪೂರೈಸೋ 2 ಕಾಯ ಬೇಕೋ 3 ಪವನ ವಂದಿತ ದೇವಾ | ಭವವನಧಿ ನವಪೋತತವನಾಮ ಸಂಸ್ಕøತಿಯ | ಪವನ ಮೂರರಲೀ |ಅವಶದಲಿ ಕೀರ್ತಿಸುವ | ದಿವ್ಯಭಕ್ತಿಯ ಜ್ಞಾನಹವಣಿಸುತ ಶ್ರೀಹರಿಯೆ | ತಾವಕಳ ಪೊರೆಯೇ 4 ಕರ | ಪುಟವ ಜೋಡಿಸಿ ಬೇಡ್ವೆಧಿಟಗುರೂ ಗೋವಿಂದ | ವಿಠಲ ಪೊರೆ ಇವಳಾ 5
--------------
ಗುರುಗೋವಿಂದವಿಠಲರು
ಸಿರಿಚರಣದಮರೆಸೇರ್ದೆ ಕಾಪಾಡೋ ಪ ಅರಿಯದೆ ವಿಪ್ರನೆಂದಿರಿಸಿ ಕೊಂಡೆ | \ ಪರಿಯ ಕೃತ್ಯದಿ ಬಿದ್ದೆ ನೀ ಅಧೋಗತಿಗೆ 1 ಸುತನಂತೆ ಕಾಯೆಂದು ಬೇಡ್ವೆ ದಮ್ಮಯ್ಯ 2 ಬಂದ ಬವಣೆಗಳ ಕಳೆ ಅಗ್ರಗಣ್ಯಾ 3 ವ್ಯಾಕುಲ ಕಳೆಯೆಂದು ಸೆರಗನೊಡ್ಡುವೆನೂ4 ನೆಂದೆನ್ನ ಕಾಯೊ ಪಾವಂಜೆಪುರ ನಲ್ಲ 5
--------------
ಬೆಳ್ಳೆ ದಾಸಪ್ಪಯ್ಯ
ಸಿರಿದೇವಿ ವರಬೇಗ ಕರುಣಿಸೊ ದಯದಿಂದ ಶರಣಾಗತ ಪರಿಪಾಲನೆಂಬಿ ಘನ ಬಿರುದಿಹದೊರೆ ನರಹರಿಕರುಣಾಕರ ಪ. ಕರಿರಾಜ ಮೊರೆಯಿಡುವ ಸ್ವರವ ಕೇಳುತಲಂದು ಸಿರಿಯೊಳಗುಸುರದೆ ಗರುಡನ ಪೆಗಲೇರಿ ಸರಸಿ ತಡಿಗೆ ಬಂದು ಕರಿಯನುದ್ಧರಿಸಿದಿ 1 ಘೋರ ಕಿಂಕರರಿದಿರು ಸಾರೆಜಾಮಿಳ ಭಯದಿ ನಾರಾಯಣನೆಂದು ಬೇಡಿದ ಮಾತ್ರದಿ ವಾರಿಜಭವಪಿತ ಪಾರಗಾಣಿಸಿದಿ 2 ತರಳ ಪ್ರಹ್ಲಾದನನು ಹಿರಣ್ಯಕನು ಬಾಧಿಸಲು ಹರಿ ನೀನೆ ಗತಿಯೆನುತಿರೆ ಕಂಭದಿ ಇರವ ತೋರಿ ಬಹು ಪರಿಯಲಿ ಸಲಹಿದಿ 3 ದುರುಳ ಸೀರೆಯ ಸೆಳೆಯೆ ಹರಿಕೃಷ್ಣ ಸಲಹೆನೆ ಸೀರೆಯ ಮಳೆ ಗರದಂದದಲಿತ್ತು ಪರಿಪಾಲಿಸಿದೆ 4 ಎನ್ನ ದುಷ್ಕøತದಿಂದ ನಿನ್ನ ನಾಮದ ಮಹಿಮೆ ಭಿನ್ನವಾಗುವದೆ ನಿನ್ನ ಪದಾಂಬುಜ ವನ್ನು ನಂಬಿದ ಮೇಲಿನ್ನುದಾಸೀನವೆ 5 ಪಾಕಶಾಸನನಘವ ನೀಕರಿಸಿ ಸಲಹಿದನೆ ಭೀಕರವಾಗದೆ ಸಾಕು ಸಾನುಭವ ಕೃಪಣ ದಯಾಕರ ಮೂರುತಿ 6 ಒಳಗೆ ನೀ ತಳಿಸುತಲಿ ಗಳಿಸಿ ಪಾಪಗಳೆನಗೆ ತಳಮಳಗೊಳಿಸುತ ಬಳಲಿಪದುಚಿತವೆ ಉಳುಹಿನ್ನಾದರು ನಳಿನನಾಭ ಹರಿ 7 ಬಡವ ಮಾನವನೊಬ್ಬ ಪಡೆಯ ತನ್ನವರನ್ನು ಕೆಡಲು ಬಿಡನು ಜಗದೊಡೆಯ ನೀ ಎನಗಿರೆ ತಡವ ಮಾಡಿ ಕಂಡ ಕಡೆಯಲಿ ಬಿಡುವುದೆ 8 ನಿನ್ನ ಕಥಾಮೃತಸಾರವನ್ನೆ ಶಿರದಿ ಧರಿಸಿ ಇನ್ನು ಬಳಲಿದರೆ ನಿನ್ನ ಘನತೆಗಿದು ಚೆನ್ನಾಗುವುದೆ ಪ್ರಸನ್ನ ಮುಖಾಂಬುಜ 9 ಮಾನಾಮಾನವ ತೊರೆದು ನಾನಾ ದೇಶದಿ ತಿರಿದು ಶ್ರೀನಿವಾಸ ನಿನ್ನಾನನ ದರುಶನ- ವನು ಮಾಡಿದ ಮೇಲೇನಿದು ತಾತ್ಸಾರ 10 ಆಶಾಪಾಶವ ಬಿಡಿಸಿ ಮನದಾಸೆಗಳ ಪೂರೈಸಿ ದಾಸದಾಸನೆಂಬೀ ಸೌಖ್ಯವನಿತ್ತು ಪೋಷಿಸು ಶೇಷಗಿರೀಶನೆ ತವಕದಿ 11
--------------
ತುಪಾಕಿ ವೆಂಕಟರಮಣಾಚಾರ್ಯ
ಸಿರಿಯು ಬರುವ ಸೊಬಗ ನೋಡಿರೆ ಭರದಿ ಬನ್ನಿರೆ ಶಿರವಬಾಗಿ ಚರಣಕೆರಗಿ ವರವಬೇಡಿರೆ ಪ. ಕಾಲೊಳಂದಿಗೆ ಗೆಜ್ಜೆ ಪಿಲ್ಲಿ ಘಲಿರುಘಲಿರೆನೆ ಬಾಲೆಯರ ಬಳಿಗೆ ಬರುವಳೊಲಿದಳೆಂಬೆನೇ 1 ಮಾತೆಗೆನಿತೋ ಪ್ರೀತಿಯೆಮ್ಮೊಳಗೈತಂದಳೀದಿನಂ ಪೂತುದರರೆ ಪೂರ್ವಪುಣ್ಯ ತರವಿದೆಂಬೆನಾಂ 2 ಪರಮಪುರುಷ ಶೇಷಶೈಲವರದನರಸಿಯಿಂ- ದರರೆ ಒಲಿದಳೆಮಗೆ ಧರೆಯೊಳರಿದುದಿನ್ನದೇನ್ 3
--------------
ನಂಜನಗೂಡು ತಿರುಮಲಾಂಬಾ