ಒಟ್ಟು 44128 ಕಡೆಗಳಲ್ಲಿ , 139 ದಾಸರು , 10983 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀ ಚಪ್ಪರ ಶ್ರೀನಿವಾಸಪ. ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆ ದರ್ಪಕತಾತನೆ ತಾ ಸಜ್ಜನಪ್ರೀತಅ.ಪ. ಮಾಧವ ನಿನ್ನಯ ಮಹಿಮೆ ತಿಳಿಯದಪ- ರಾಧವ ಮಾಡಿದೆ ದಾರಿದ್ರ್ಯದ ಪಾದ ದರುಶನದ ಗಾದಿಯ ಕಾಣದಾದೆ ನಾ ದ್ರೋಹಿಯಾದೆ1 ತ್ರಾಣವಿರುವಾಗ ಕಾಣಿಕೆ ಹಾಕಿದೆ ದೀನದಾರಿದ್ರ್ಯದ ಹೊತ್ತಿನಲಿ ಮೇಣದರಿಂದಲಿ ತೆಗೆದು ತೆಗೆದು ಪಂಚ ಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ2 ಮಂದವಾರದಿಕ್ಕೊಂದೂಟವ ಸತ್ತ್ವ ದಿಂದಿರುವಾಗ ನಾ ನೇಮಗೈದೆ ಮಂದಭಾಗ್ಯ ಜ್ವರದಿಂದ ಪೀಡಿತನಾದ- ರಿಂದೆರಡೂಟವನೂ ಮಾಡಿದೆ ನಾನು3 ಶನಿವಾರಕ್ಕೊಂದಾಣೆ ಕಾಣಿಕೆ ಹಾಕುತ್ತ ಮಿನುಗುವ ಡಬ್ಬಿಯ ನಾ ಮಾಡಿದೆ ಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದ ಹಣವೆಲ್ಲ ಗುಣ ನುಂಗಿತು ಪಾದಕೆ ಗೊತ್ತು4 ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದ ದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿ ಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣ ಗುಡ್ಡೆಯ ಮೇಲಿರುವ ಮಹಾನುಭಾವ5 ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯು ಮಂಡೆಯೊಳುರಿವುದು ಖಂಡಿತದಿ ಪುಂಡರೀಕಾಕ್ಷನೆ ಕರುಣಾಮೃತರಸ ಕುಂಡದೊಳ್ ಮೀಯಿಸಯ್ಯ ವೆಂಕಟರಾಯ6 ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆ ಕೆಡುಕು ಮಾಡುವುದೇನು ಜಡಜನಾಭ ಕಡಲಶಯನ ಲಕ್ಷ್ಮೀನಾರಾಯಣ ನ- ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ7
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪುಗಳೊಪ್ಪುವೆ ಎನ್ನಲಿ ತಿಮ್ಮಪ್ಪ ನೀ ಕ್ಷಮಿಸಿ ರಕ್ಷಿಸು ಕರುಣದಲಿ ಪ. ಬುದ್ಧಿ ಹೀನನಾಗಿ ಎದ್ದು ಹಾಸಿಕೆಯಿಂದ ಮೇಧ್ಯವಸ್ತುಗಳೆಲ್ಲ ತಂದು ತಿಂದು ಮಧ್ಯಾನದಲಿ ನಿದ್ರೆ ಗೈದು ಮೋಹದಲಿ ನಿ- ಸತಿ ಸಂಗ ಗೈದಿಹೆನು 1 ಗುರು ಹಿರಿಯರ ಕೆಟ್ಟ ಗರುವದಿಂದ ನೀ ಕರಿಸಿ ಲೋಭದೊಳತಿಥಿಗಳ ಬಿಟ್ಟು ಪರ ಧನವನು ನಾನಾ ತರದಿಂದ ಕೊಂಡು ಶ್ರೀ ವರ ನೀನೆ ಗತಿಯೆಂದು ಸ್ಮರಿಸಿಕೊಂಡಿಹೆನು 2 ಇಂಥಾನಂತಾನಂತ ಪಾತಕಿಗಳ ರಮಾ ಕಾಂತ ನೀ ಕ್ಷಮಿಸಲು ಶಕ್ತನೆಂದು ಚಿಂತಿಸಿ ನುಡಿದೆನು ಲಾಲಿಸಿ ಕಾಯೊ ದು- ರಂತ ಮಹಿಮ ವೆಂಕಟೇಶ ನೀ ದಯದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಪ್ಪೆಣಿಸುವರೇನೋ | ತಾಮರದಳಾಕ್ಷ ಅಪ್ಪ ನೀ ಒಪ್ಪಿದರೆ ತಪ್ಪೆಲ್ಲಿ ಇಹುದೋ ಪ ಅಕ್ಕರದ ಅಜಮಿಳನು ಅಕ್ಕನಾಮಗ ನೇನೋ ಚಿಕ್ಕ ಧೃವನಾ ತಾಯಿ ಚಿಕ್ಕಮ್ಮನೇನೋ ರಕ್ಕಸಾ ಸುತ ನಿನಗೆ ರೊಕ್ಕ ಕೊಟ್ಟನೊ ಎನೋ ಇಕ್ಕಿ ನೀ ಭವದೊಳಗೆ ಹೀಂಗೆ ನೋಡುವರೇನೋ 1 ಅಂತ್ಯಜಳ ಕೂಡಿ | ಅನಂತ ಕರ್ಮವ ಮಾಡಿ ಅಂತರದಿ ನಿನ್ನೊಮ್ಮೆ ನೆನೆದನೇ ನೋ ಅಂಥ ಶೊಬಚನ ಮಗಳ ಕಾಂತನೆಂದೆನಿಸಿದೀ ಕಂತು ಪಿತನೇ ನಿನ್ನ ಕರುಣವಿದ್ದರೆ ಸಾಕೊ 2 ನಾಮಾಡಿದಪರಾಧ ನೀಕ್ಷಮಿಸದಿದ್ದರೆ ಯಾರು ಪೊರೆವರೊ ಎನ್ನ ವಾರಿಜಾಕ್ಷ ಧೀರ ನರಸಿಂಹ ವಿಠಲ ನಿನ್ನಾಧೀನಳಾದೆನೋ ಇನ್ನೇನು ಮಾಡಿದರು ಮಾಡೋ ನೀನು 3
--------------
ಓರಬಾಯಿ ಲಕ್ಷ್ಮೀದೇವಮ್ಮ
ತಪ್ಪೇನು ಮಾಡಿದೆನೋ ಬ್ರಹ್ಮಣ್ಯ ಗುರು ಪ ಅಪ್ಪಾ ನಿನ್ನಯ ಮನಕೊಪ್ಪದೇ ಇಪ್ಪಂಥ ಅ.ಪ ತಂದೆ ತಾಯಿಯು ನೀನೇ ಬಂಧು ಬಳಗ ನೀನೆ ಸಂದೇಹವಿಲ್ಲವೋ ಕಂದನೆಂದೆನ್ನದಂಥ1 ಒಂದೂ ತಿಳಿಯದಂಥ ಮಂದಮತಿಯು ನಾನು ಛಂದದಿಂದಲಿ ಬುದ್ಧಿ ಮುಂದೆ ಹೇಳಾದಂಥ 2 ಸಂದೇಹ ಕಳೆದಿನ್ನ ಬಂಧವಾಗಹ ಅಘ ವೃಂದ ಕ್ಷಮಿಸಿ ಬೇಗ ಮುಂದೆ ಕರೆಯದಂಥ 3 ದುರುಳರೆಲ್ಲರು ಸೇರಿ ಮರುಳುಗೊಳಿಸಿ ಎನ್ನ ಕರುಣಸಾಗರ ನಿನ್ನ ಕರುಣ ಪಡೆಯದಂಥÀ 4 ಶಾಂತ ಶ್ರೀ ನರಹರಿ ಪಂಥಾದಿಚರಿಸದೇ ಭವ ಕಾಂತಾರ ದಾಟಿಸದಂಥ 5
--------------
ಪ್ರದ್ಯುಮ್ನತೀರ್ಥರು
ತಂಬೂರಿ ಹಿಡಿಸಿದನು ಪ ಅಂಬುಜಾಕ್ಷನು ದಯದಿ ಅ.ಪ ನಂಬೀದ ಜನರಿಗೆ ಬೆಂಬಲ ತಾನೆಂಬ ನಂಬಿಕೆ ಹೃದಯದಿ ತುಂಬುತ ತಾನೀಗ 1 ಆಶಾ ಪಾಶಕೆ ಸಿಲುಕಿ ಬೇಸತ್ತು ಬೆಂಡಾಗಿ ಮೋಸ ಹೋಗುತ್ತಲಿದ್ದೆ ಶ್ರೀಶ ದಯಾಂಬುಧಿ 2 ಹುಟ್ಟಿದ ದಿನದಿಂದ ಕಷ್ಟದಲ್ಲೇ ಬಂದೆ ಮುಟ್ಟಲಿದನು ಈಗ ಸಂತುಷ್ಟಿಯ ಕಂಡೆನು 3 ಕಾಡಿ ಬೇಡುವರಿಲ್ಲ ನಾಡೆಲ್ಲ ನಮ್ಮದೇನೆ ನೀಡುವ ದೊರೆ ಒಬ್ಬ ಈಡಿಲ್ಲದವನಾತ 4 ವಿಧಿ ವಿಸ್ಮರಣೆ ನಿಷೇಧ ಹರಿನಾಮ ಸುಧೆಯನ್ನು ಕರೆದು ಕರೆದು ಕುಡಿವೆ5 ತಂಬೂರಿ ಸಿಗುವುದು ತುಂಬ ಭಾಗ್ಯವು ಸತ್ಯ ಹಂಬಲಂಗಳ ಬಿಡಿಸಿ ತುಂಬುವ ಹರಿ ಮನದಿ6 ಪುಣ್ಯ ರಾಶಿಗಳೆಲ್ಲ ವದಗಿ ಬಂದವೊ ಏನೋ ಚಿನ್ಮಯ “ಶ್ರೀ ಕೃಷ್ಣವಿಠಲ”ನ ದಾಸನಾದೆ7
--------------
ಕೃಷ್ಣವಿಠಲದಾಸರು
ತಮ್ಮ ಕೇಳಿದ್ಯಾ ಪರಬೊಮ್ಮ ನೀನಂತೊ ನಿತ್ಯ ತೃಪಿತನು ನೀನಂತಲ್ಲೊ ಕೃಷ್ಣಯ್ಯ ಸುತ್ತಿ ಬಂದೆನೆ ನಾಲಿಗಾರಿದೆ ಅಮ್ಮ ಹತ್ತು ಸಾವಿರ ಭಾನುಪ್ರಭೆಯುಳ್ಳವನಂತೊ ಕತ್ತಲೆಮನೆ ಪೋಗಲೊಬ್ಬನಂಜುವೆನೆ 1 ಪುರಾಣಪುರುಷ ನೀನಂತಲ್ಲೊ ಕೃಷ್ಣಯ್ಯ ಆರು ತಿಂಗಳು ಪೋದಾವಂದೆಲ್ಲ ಎನಗೆ ನಿರತಿಶಯ ಮಹಾ ಮಹಿಮೆ ಉಳ್ಳವನಂತೊ ಪೂರತಿ ಮನೆಯೊಳು ನಡೆಯಲಾರೆ 2 ಅಣ್ಣಾ ನೀ ಸರ್ವಜ್ಞನೆಂಬೋರೊ ಜಗವೆಲ್ಲ ಬೆಣ್ಣೆಯು ಸಿಗದಲ್ಲೆ ಪುಡುಕಿದರೆ ಸಣ್ಣವ ನೀನಲ್ಲವೆಂಬರೊ ಪಿರಿಯಾರು ಮಣ್ಣು ನಾ ಮೆದ್ದಾರೆ ಟೊಣದೆಲ್ಲವಮ್ಮ 3 ಜಗದುದರನು ನೀನಂತಲ್ಲೊ ಕೃಷ್ಣಯ್ಯ ನಗುಚಾಟಲು ಸಣ್ಣ ಪೊಟ್ಟಿ ನೋಡೆ ನಿಗಮಗಳು ನಿನ್ನ ತುತಿಯಂತೊ ಗೋವಿಂದ ನಗುವರಲ್ಲವೆ ಗೋಪ ನಾರಿಯರು 4 ಮೂಢ ದೈತ್ಯರಿಗೆಲ್ಲದಲ್ಲಣ ನೀನಂತೊ ಜಾಡ ಮೈಯನ ನೋಡಿ ಅಂಜುವೆನೆ ಬೇಡಿದ ಪುರುಷಾರ್ಥ ಕೊಡುವನು ನೀನಂತೊ ಬೇಡಿದೆ ನಮ್ಮಮ್ಮ ಅಮ್ಮೆ ಕೊಡೆಂದು 5 ಬೆಟ್ಟವ ನೀನೆತ್ತಿದಂತಲ್ಲೊ ಕೃಷ್ಣಯ್ಯ ಬಟ್ಟು ನಿನ್ನದು ನೋಡೆ ಎತ್ತಲಾರೆ ಘಟ್ಯಾಗಿ ವಿಪ್ರರು ಪೇಳೋದು ಪುಸಿ ಏನೊ ಹೊಟ್ಟಿಗೋಸುಗ ಸುಳ್ಳು ಪೇಳುವರೆ 6 ಏಸು ಲಕ್ಷ್ಮಣವಿವೆ ನೋಡಬೇಕೆಂದರೆ ಪುಸಿದ್ಯಾಕುಸರಾನು ನೋಡೆಂದನು ಪರಿ ಗೋಪಿಯ ಮೋಸಗೊಳಿಪ ಕೃಷ್ಣ ನಮ್ಮ ಸಲಹಲಿ 7
--------------
ವ್ಯಾಸತತ್ವಜ್ಞದಾಸರು
ತಮ್ಮನರಿಯದೆ ತಮ್ಮೊಳೀತೆರನಾಡುವರು |ಹಮ್ಮ ಬಿಡದೆ ಪರಬಮ್ಮನ ಜರಿಯುವರು ಪ ಒಂಬತ್ತು ಛಿದ್ರುಳ್ಳ ಕುಂಭದ ಗಾಲಿಗೆ |ಸ್ತಂಭದಂತೆ ನಿಲಿಸಿ ಸಂಭ್ರಮ ಪಡೆವರು 1 ಮುಂಡ ಬೋಳವ ಮಾಡಿ ಕಂಡಲ್ಲನ್ನವನುಂಡು |ದಂಡ ಧರಿಸಿ ಮನ ದಂಡಿಸದಿರುವರು 2 ಕದಲಿಸದೆ ಕಾಯಾ ಹದನದಿಂದಲಿರಿಸಿ |ವೇದದ ಮೊದಲೆಂದು ನಾದಕೆ ಬೆರೆವರು 3 ಓದಿ ಆಗಮಗಳನು ಭೇದಿಸಿ ತಿಳಿಯದೆ |ಮೇದಿನಿಯೊಳಗೆಲ್ಲ ವಾದಿಸಿ ಮೆರೆವರು 4 ಪಥ ಪಡೆದು ವೇಷ ಪಾಲಟ ಮಾಡಿ |ದೋಷಕಂಜದೆ ರುಕ್ಮ ಭೂಷಗೆ ಮರೆವರು 5
--------------
ರುಕ್ಮಾಂಗದರು
ತಮ್ಮಾ ನೀ ನೋಡಿದ್ಯಾ | ಒಮ್ಮನದಿಂದಬೊಮ್ಮ ಮೂರುತಿ ಶ್ರೀ | ವಲ್ಲಭ ರಂಗನಾ ಪ ಹಿಂಡು ದೈವರ ಗಂಡ | ಚಂಡ ವಿಕ್ರಮ ನಮ್ಮಕೊಂಡಜ್ಜಿ ಬಳಿಲಿರುವ | ಪುಂಡರೀಕಾಕ್ಷನ 1 ನೂಪುರ ಗೆಜ್ಜೆಪೆಂಡ್ಯ | ಆಪಾದ ಸೊಬಗಿಂದಶ್ರೀಪತಿ ಮೆರೆಯುವ | ಭೂಪತಿ ವರದನ 2 ಅಕ್ಷಯ ಫಲದವನವಕ್ಷದೋಳ್ ಧರಿಸೀಹ | ಲಕ್ಷ್ಮೀ ಉಳ್ಳವನ 3 ಕೌಸ್ತುಭ | ಕರ್ಣದಿ ಕುಂಡಲಶಿರದಲ್ಲಿ ಕಿರೀಟ | ಧರಿಸಿ ಮೆರೆವವನ4 ಪವನಾಂತರಂಗನ | ಪಾವನ ಚರಿತನಭುವನ ಮೋಹನ ಗುರು | ಗೋವಿಂದ ವಿಠಲನ 5
--------------
ಗುರುಗೋವಿಂದವಿಠಲರು
ತರಣಿ ಕರುಣಿ ಕಾಯಯ್ಯ ಪ. ನಾನಾ ಯೋನಿಗಳಲ್ಲಿ ನಿಂದು ನೊಂದೆಹೀನತೆಯ ಕಳೆದು ಕಾಯಯ್ಯಗೋವಿಂದ ಮುಕುಂದ ಇದೇನು ಚೆಂದ 1 ನೀನಲ್ಲದನ್ಯರನು ನಾನರಿಯೆಜ್ಞಾನಿಗಳರಸ ಕಾದುಕೊಂಬುದಿನ್ನಾರುಎನ್ನ ತೋರು ಮುಂದಾರು 2 ಶ್ರೀಹಯವದನ ಪ್ರಭುವೆ ನೀನು ಸರ್ವಜ್ಞನೇಹವನು ಮಾಡು ಎಂದೆಂದು ನಾ ದಾಸಶ್ರೀನಿವಾಸ ಪಾಪನಾಶ3
--------------
ವಾದಿರಾಜ
ತರಣಿ ಪಾವಕ ಶಶಿ ನೇತ್ರಗಳುಪರಶುಮೃಗಂಗಳ ಧರಿಸಿರೆ ಕರಗಳು ವರದಾಭಯಗಳಲೊಪ್ಪಿರಲು 1ವಾಮವ ಗೌರಿಗೆ ಕೊಟ್ಟಿರಲು ಸಾಮಜಕೃತ್ತಿಯ ಹೊದ್ದಿರಲುಭೀಮನು ಮೂರ್ತಿಯ ಬೇಡಲು ಕೊಡಲು ಕಾಮನ ನೋಟದಿ ಕೆಡಹಿರಲು 2ಧರೆಯೊಳು ದಕ್ಷಿಣ ಕಾಶಿಯಲಿ ುರೆ ಗಂಗಾಧರ ರೂಪಿನಲಿತಿರುಪತಿ ವೆಂಕಟ ವರ ನಾಮದಲಿ ಮೆರೆವೆ ಮಹೇಶ್ವರ ಮಹಿಮೆಯಲಿ 3ಓಂ ಕೋಟಿಸೂರ್ಯಸಮಪ್ರಭಾಯ ನಮಃ
--------------
ತಿಮ್ಮಪ್ಪದಾಸರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತರುಣಿಯರೆಲ್ಲರು ಬಾರೆಂದು ಕರೆವರು ವರಮಣಿಪೀಠಕೆ ಮುದದಿ ಪ. ಕ್ಷೀರವಾರಿಧಿಜಾತೆ ಚಾರುಸುಂದರಗಾತ್ರೆ ಮಾರಜನಕದಯಿತೆ ಸಾರಸಾನನೆ ಮದ ವಾರಣಗಮನೆ ನಿನ್ನಅ.ಪ ಇಂದು ಕುಂದಣದ ಹಸೆಗೆ ಮಂದಹಾಸವ ತೋರಿ ಬಂದೆಮ್ಮ ಮನೆಯೊಳೆಂದೆಂದಿಗು ಕುಂದದಾನಂದವ ಬೀರೆಂದು 1 ಗಾಡಿಕಾರನಾ ಕೃಷ್ಣನ ದೃಢಭಕ್ತರ ಕೈ ಬಿಡದಾಧರಿಸುತ್ತ 2 ನಿರುತಸೇವಿಪ ವರವ ವರಶೇಷಗಿರಿವಾಸನರಸಿ ನೀನಲಿದಿಂದು 3
--------------
ನಂಜನಗೂಡು ತಿರುಮಲಾಂಬಾ
ತಲೆಯ ತೂಗಿ ನಗುವುದೇನೊ ಚೆಲುವ ತಿಮ್ಮರಾಯ ನೀ ತಿಳಿಸಿದಂತೆ ನುಡಿದೆನಿಂದು ಸಲುಹಬೇಕು ಜೀಯ ಪ. ಯೋಗ ಮಾಯ ಶಕ್ತಿ ತಾಳ ರಾಗ ರಚನೆಯರಿಯೆ ಲಾಘವಾದಿ ವರ್ಣಭೇದವಾಗಲಿದನು ತೊರೆಯೆ ಶ್ರೀಗುರು ಮುಖೇಡ್ಯ ನಿನ್ನಾದಾಗಲು ನಾ ಮರೆಯೆ ನಾಗಶಯನ ನಿನ್ನ ಪದಕೆ ಬಾಗಿ ನುಡಿವೆ ದೊರೆಯೆ 1 ಮಾನಸ ವಾಕ್ಕರ್ಮವೆಲ್ಲ ನೀನೆ ಮಾಳ್ಪಿಯೆಂದು ಧ್ಯಾನಿಸಿಕೊಂಡಿಹೆನು ಭಕ್ತಾದೀನ ಕರುಣಾಸಿಂಧು ಮಾನವಿಯ ನುಡಿಯೊಳಿರುವ ನಾನಾ ಥರವ ಕುಂದು ನೀನೆ ಕ್ಷಮಿಸಬೇಕು ಪದ್ಮಮಾನ ದೀನ ಬಂಧು 2 ಬುದ್ಧಿಹೀನ ಶಿಶುವು ನುಡಿವಾ ಬದ್ಧ ಮಾತಿನಿಂದ ಲೆದ್ದು ಬಂದು ಜನನಿ ತೊಡೆಯೊಳಿದ್ದು ಕೇಳುವಂದ ಸಿದ್ಧವಾಗು ಶ್ರೀನಿವಾಸ ಶುದ್ಧ ಪೂರ್ಣಾನಂದ ಗೋಪಿ ಕಂದ 3
--------------
ತುಪಾಕಿ ವೆಂಕಟರಮಣಾಚಾರ್ಯ
ತಲ್ಲಣಿಸದಿರು ಕಂಡ್ಯ ತಾಳು ಮನವೆ ಪ ಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ ಅ ಬೆಟ್ಟದಾ ತುದಿಯಲ್ಲಿ ಹುಟ್ಟಿದ ವೃಕ್ಷಕ್ಕೆಕಟ್ಟೆಯನು ಕಟ್ಟಿ ನೀರೆರೆದವರು ಯಾರೊಪುಟ್ಟಿಸಿದ ಸ್ವಾಮಿ ತಾ ಹೊಣೆಗಾರನಾಗಿರಲುಗಟ್ಯಾಗಿ ಸಲಹುವನು ಇದಕೆ ಸಂಶಯವಿಲ್ಲ 1 ಅಡವಿಯೊಳಗಾಡುವ ಮೃಗಪಕ್ಷಿಗಳಿಗೆಲ್ಲಅಡಿಗಡಿಗೆ ಆಹಾರವಿತ್ತವರು ಯಾರೊ ಪಡೆದ ಜನನಿಯ ತೆರದಿ ಸ್ವಾಮಿ ಹೊಣೆಗೀಡಾಗಿಬಿಡದೆ ರಕ್ಷಿಪನು ಇದಕೆ ಸಂಶಯವಿಲ್ಲ 2 ನವಿಲಿಗೆ ಚಿತ್ರ ಬರೆದವರು ಯಾರುಪವಳದ ಲತೆಗೆ ಕೆಂಪಿಟ್ಟವರು ಯಾರುಸವಿಮಾತಿನರಗಿಳಿಗೆ ಹಸುರು ಬರೆದವರು ಯಾರುಅವನೆ ಸಲಹುವನು ಇದಕೆ ಸಂಶಯವಿಲ್ಲ3 ಕಲ್ಲಿನಲಿ ಹುಟ್ಟಿ ಕೂಗುವ ಕಪ್ಪೆಗಳಿಗೆಲ್ಲಅಲ್ಲಲ್ಲಿಗಾಹಾರ ತಂದೀವರಾರುಬಲ್ಲಿದನು ಕಾಗಿನೆಲೆಯಾದಿಕೇಶವರಾಯಎಲ್ಲರನು ಸಲಹುವನು ಇದಕೆ ಸಂಶಯವಿಲ್ಲ 4
--------------
ಕನಕದಾಸ
ತವರು ಮನೆಯು ನನ್ನ ಸುವಿದ್ಯಪುರಲ್ಯದೆ ಸಾವಿರಕೊಬ್ಬಗೆ ದೋರುತದೆ ಧ್ರುವ ಸಾವಿರಕೊಬ್ಬನೆ ತಾ ಸುದೇವನೆ ಬಲ್ಲ ಭಾವಿಸದಲ್ಲದೆ ತಿಳಿಯುವದಲ್ಲ ಅವಿದ್ಯಪುರ ದಾಟ, ಮಂದಾಕ್ಕಾಗಲು ಎಲ್ಲ ಆವಾಗ ತಿಳಿವುದು ಹೇಳಿದ ಸೊಲ್ಲ 1 ಸಾವಿರ ತೆನೆಯಲೊಪ್ಪುತದೆ ಒಳಕೋಟ ಠವಿಠವಿಸುತದೆ ನೋಡಿ ಮನಮುಟ್ಟಿ ಅವ್ವ ಅಪ್ಪನೇ ನಮ್ಮ ಇಹಸ್ಥಾನವು ಘಟ್ಟಿ ದೇವಾಧಿ ದೇವನೊಬ್ಬನೆ ಜಗಜಟ್ಟಿ 2 ಬಲು ಅಭೇದ್ಯಸ್ಥಳ ತಿಳಿಯದಿನ್ನೊಬ್ಬರಿಗೆ ನೆಲೆವಂತರಿಗೆ ತಾನು ತಿಳಿವದು ಬ್ಯಾಗೆ ತುಂಬಿ ಥಳಗುಟ್ಟಿ ಹೊಳವ್ಹಾಂಗೆ ಬಲಗೊಂಡು ಕೇಳಿ ಶ್ರೀಸದ್ಗುರುವಿಗೆ 3 ಅಣ್ಣನೆಂಬಾತ್ಹಾನೆ ಅನಂದದಲ್ಹಾನೆ ನೆನೆಪಿಗೊಮ್ಮೆ ಬಂದು ಸುಳವುತ್ಹಾನೆ ಕಣ್ಣೆಲಿ ಕಟ್ಯಾನೆ ತಮ್ಮನೆಂಬತ್ಹಾನೆ ಕ್ಷಣಕೊಮ್ಮೆ ಹೊಳೆವುವಾನೆ4 ಅಕ್ಕನೆಂಬಾಕಿ ತಾ ಸಖರಿ ಅಗ್ಹಾಳೆ ಅಖರದಲೆವ್ವ ಈ ಮಾತು ಕೇಳೆ ಪ್ರಖ್ಯಾತದಲಿ ಪ್ರೀತಿಮಾಡುವ ತಂಗ್ಹ್ಯಾಳೆ ಸುಖ ಸುರುತ್ಹಾಳೆ ಇರುಳು ಹಗಲು 5 ಅತ್ತಿಗೆ ನಾದುನಿ ಭಾವ ಮೈದುನರೆಲ್ಲ ಅಂತ್ಯಕವಾಗ್ಹ್ಯಾರೆ ಮನಿಯೊಳಗೆಲ್ಲ ಸುತ್ತೇಳುವ ಬಳಗ ಉತ್ತುಮರೆನಗೆಲ್ಲ ಹಿತದೋರುತಾರವ್ವ ಸರ್ವಾಪ್ತರೆಲ್ಲ 6 ಸರ್ವಾಪ್ತವೆಂಬುದು ಸರ್ವೇಶನೆ ತಾನು ಸರ್ವದಾ ಎನ್ನೊಳು ತಾ ಕಾಮಧೇನು ಪರ್ವಕಾಲದ ಬಹಳ ಏನೆಂದ್ದೇಳಲಿ ನಾನು ಸರ್ವಾರ್ಥ ಕೊಡುತ್ಹಾನೆ ಸರ್ವಾತ್ಮ ತಾನು 7 ಅವ್ವ ನಮ್ಮಪ್ಪಗೆ ಸರಿ ಇಲ್ಲ ಜಗದೊಳು ಆವ ಕಾಲಕೆ ತಾ ಇವರ ಮೇಲು ಇವರೆಂಬುದು ಒಂದೆ ಮಾತಿನ ಸ್ವಕೀಲು ಸವಿಸುಖಬಲ್ಲರು ಅನುಭವಿಗಳು 8 ತೌರಮನೆಂಬುದು ಪ್ರತ್ಯೇಕಾ ತಾನಿಲ್ಲ ಭಾವಾರ್ಥದ ಮಾತು ಕೇಳಿರೆಲ್ಲ ಅವಗುಣನೆ ಬಿಟ್ಟು ಕೇಳಿ ಸವಿಯ ಸೊಲ್ಲ ಪೂರ್ವಿಕರಿಗಿದೆ ಸಾರವೆಲ್ಲ 9 ಸುದ್ದಿ ಹೇಳಿ ಕಳುಹುಲಿಕ್ಕೆ ಈ ಸಾಧನ ಇದುವೆ ಅಯಿತು ತವರ ಮನಿ ಬುದ್ಧಿವಂತನೆಬಲ್ಲ ಲಕ್ಷಕೊಬ್ಬ ಜ್ಞಾನಿ ಸಿದ್ಧಿದರಿಡುವದು ಸದ್ಗುರು ಪ್ರಾರ್ಥನಿ 10 ಬಳಗದೊಳು ಕೂಡಿ ಒಳಿಥಾಗ್ಯಾಯಿತು ಎನಗೆ ಒಳ ಹೊರಗೆ ಸುಖ ಎದುರಿಟ್ಟತೀಗ ಕುಲಕೋಟಿ ಬಳಗ ಸದ್ಗುರು ಪಾದವ್ಯನಗೆ ಸಲಹುತಾನೆ ಸ್ವಾಮಿ ಮಹಿಪತಿಗೆ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು