ಒಟ್ಟು 21316 ಕಡೆಗಳಲ್ಲಿ , 137 ದಾಸರು , 8969 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾ ಕಂಡ ಕನಸು ಕನಸಲ್ಲ ಅದು ಹೇಳಲು ಬಾರದು ಕೇಳಲು ಬಾರದು ಪ ಕಂಗಳ ಮುಟ್ಟಿ ನಾನಿರುತಿಹೆ ಅಂತರಂಗದೊಳಗೆ ದೃಷ್ಟಿಯನಿಡೆಮಂಗಳವಿತ್ತು ಮಹತ್ತುಯಿತ್ತು ಜಂಗಮವಿತ್ತು ಜಗತ್ತು ಇತ್ತು1 ಧ್ಯಾನವು ಗುರುಪಾದದಲ್ಲಿರೆ ಒಳ್ಳೆ ಗಾನವು ಕಿವಿಗೆ ಕೇಳಿಸುತಲಿರೆಆನಂದವಿತ್ತು ಸುಖತರವಿತ್ತು ತನ್ಮಯವಿತ್ತು ಥಳಿಥಳಿಸಿತ್ತು 2 ಆನಂದ ಮನೆಯೊಳಗಾನಿರೆ ಚಿದಾನಂದ ದೇವರ ಕೂಡಿರೆತಾನೆ ತಾನಿತ್ತು ತವೆ ಬೆರೆತಿತ್ತು ಏನೇನೋ ಇತ್ತು ಎಂತೆಂತೋ ಇತ್ತು 3
--------------
ಚಿದಾನಂದ ಅವಧೂತರು
ನಾ ಕೆಟ್ಟ ಕೇಡ ಹೇಳುವೆನು ಎಲ್ಲ ಲೋಕದಂತೆನ್ನಬದುಕು ಆಗಲಿಲ್ಲ ಪ ಹೆಂಡರಿಚ್ಛೆಯಿಲ್ಲ ಹೀನವೆಂಬುದಿಲ್ಲಪಂಡಿತತ್ವದ ಪರಮಾರ್ಥಕಿಲ್ಲಉಂಡೆ ಉಟ್ಟೆನೆಂಬ ಊಹೆ ಮೊದಲಿಗಿಲ್ಲಕಂಡ ಕಂಡಂತೆ ಚರಿಸುವಂತಾಯಿತೆ 1 ಅರಿವು ಮರೆವು ಇಲ್ಲ ಆಸೆಗಳೇನಿಲ್ಲಇರುಳು ಹಗಲು ಎಂಬುದೆರಡಿಲ್ಲವೋಶರೀರ ಸ್ಮರಣೆಯಿಲ್ಲ ಶ್ರೇಷ್ಠ ಭಾವಗಳಿಲ್ಲಮರುಳು ಮರುಳು ಆಗಿ ತಿರುಗುವಂತಾಯಿತು 2 ಚಿದಾನಂದ ಗುರುವಿನ ಚಿತ್ತದಿ ಪಿಡಿದರೆಒದವಿದ ಬ್ರಹ್ಮಾನಂದವ ಸವಿದುವಿಧವಿಧವಾದ ಬೆಳಕಿನೊಳಾನಡಗಿರೆಇದರಿಂದಲಿ ಇಂತಾದುದಿದೆಲ್ಲವು3
--------------
ಚಿದಾನಂದ ಅವಧೂತರು
ನಾ ಧನ್ಯ ನಾ ಧನ್ಯ ನಾ ಧನ್ಯನಿಂದು ಪ ಹೇ ದಯಾನಿಧೇ ನಿನ್ನ ಪಾದಾನುಗ್ರಹದಿಂದ ಅ.ಪ. ಏತರವ ನಾನೆಂದುದಾಸೀನ ಮಾಡದೆಲೆ ಲೇಸು ಮಮತೆಯ ಕೋರಿ ಈ ಸ್ಥಳಕೆ ಬಂದಿ ಆಸುರೀ ಭಾವವನು ನಾಶಗೊಳಿಸಿ ಎನ್ನ ನೀ ಸಲಹಿದೆಯೋ ಜಗದೀಶ ನಿರುಪಮ ಕರುಣಿ 1 ಸತ್ವಗುಣ ಪ್ರಚುರರಲಿ ನೀ ತೋರುವುದಕ್ಕಿಂತ ಅತ್ಯಧಿಕ ವಾತ್ಸಲ್ಯವೆನ್ನೊಳಗೆ ತೋರ್ಪೆ ಕರ್ತೃ ನೀನೆಂಬ ತತ್ವ ಮನಸಿಗೆ ತಂದೆ ಭಕ್ತವಾತ್ಸಲ್ಯಕ್ಕಿದು ಕುರುಹಲ್ಲವೇ ದೇವ 2 ಸುರಲೋಕಕ್ಕಿಂತಧಿಕ ಪದವಿ ಎನಗಿತ್ತೆ ನಿರುತಲೆನ್ನಯ ಬೆನ್ನು ಕಾಯುತಲಿರುವೆ ಕರುಣಿಗೆಣೆಗಾಣೆ ಕರಿಗಿರೀಶನೇ ನಿನ್ನ ಸ್ಮರಣೆಯನನವರತ ಇರುವಂತೆ ಕೃಪೆಮಾಡೋ 3
--------------
ವರಾವಾಣಿರಾಮರಾಯದಾಸರು
ನಾ ಧನ್ಯನಾದೆನಿಂದು | ಸತ್ಯ | ಬೋಧರಾಯರ ದಿವ್ಯ | ಪಾದಕಮಲವ ಕಂಡು ಪ ಹಿಂಗಿದವಖಿಳದೋಷಂಗಳು ಸನ್ಮುನಿಗಳವ ರಂಘ್ರಿ ಸಂದರುಶನದೀ ಗಂಗಾದಿತೀರ್ಥ ಭುಜಂಗಾದಿ ಮೊದಲಾದ ತುಂಗ ತೀರ್ಥಯಾತ್ರೆ ಫಲ ಸಮನಿಸಿತು1 ಆವ ಮುನಿಗಳೋ ಮತ್ತಾವ ದೇವತೆಗಳೋ ಆವಾವಬಲ್ಲ ಮತ್ತಾವಾಗಲೂ ಸೇವಿಸುವರ ಕೃಪಾವಲೋಕನದಿಂದ ಪಾವನ ಮಾಡಲು ಕೋವಿದಾರ್ಯರ ಕಂಡು 2 ಸೀತಾರಮಣ ಜಗನ್ನಾಥ ವಿಠ್ಠಲರೇಯಾ ಭೂತಳದೊಳಗೀ ಮಹಾತ್ಮರನಾ ಪ್ರೀತಿಯಂ ಸೃಜಿಸಿದನಾಥ ಜನರನ ಪು ನೀತರ ಮಾಡಲು ಆತ ತಕ್ಷಣದಿ 3
--------------
ಜಗನ್ನಾಥದಾಸರು
ನಾ ನಿನ್ನ ನಂಬಿದೆನೊ ಗೋಪಾಲಕೃಷ್ಣ ನಿನ್ನ ನಾನಂಬಿದೆನೊ ಎನ್ನ ದಾನೆಂದೆಂಬ ಹಮ್ಮಿನವಶದಲಿ ಸುಮ್ಮನೆ ಮುಳುಗಿದೆನೋ ಶ್ರೀ ಹರಿಯೆ ನಿನ್ನನಾ ನಂಬಿದೆನೋ ಪ ಸಿರಿ ಸಹಿತಲಾಗಿ ಚಿನುಮಯಾತ್ಮಕ ಆನಂದ ಕಟಾಕ್ಷದಿ ತನಯ ನೆಂದೆನ್ನನು ಕಾಯೋ ಮುರಾರಿ 1 ದ್ರಷ್ಟವಾಗಿಹುದೆಲ್ಲ ಸಟೆಯಿದು ನಷ್ಟವಾಗಿಯೆ ಪೋಪುದೋ ಕಷ್ಟ ಸಂಸಾರದ ಬಟ್ಟೆಯು ಸ್ಥಿರವೆಂಬ ತೊಟ್ಟ ಮುರಿದು ಕಾಯೋ ಶಿಷ್ಟ ಮುರಾರಿ 2 ಆಸೆಯಂಬಂಗನೆಯ ನಾಶವಮಾಡಿ ಸಲಹೋ ಎನ್ನ ವಾಸುದೇವನೆ ನಿನ್ನ ದಾಸನ ಕರುಣದಿ ಪಾ ಲಿಸಿ ಕಾಯೋ ಲಕ್ಷ್ಮೀಶ ಮುರಾರಿ 3
--------------
ಕವಿ ಪರಮದೇವದಾಸರು
ನಾ ನಿನ್ನ ಮರೆತರೆ ನೀ ಯನ್ನ ಮರೆವರೆ ದೀನ ವತ್ಸಲ ರಂಗ ದಾನವಾಂತಕ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಧ್ಯಾನ ದೊಳಿಟ್ಟೆನ್ನ ಮಾನದಿಂದಲಿ ಕಾಯೋ ಶ್ರೀನಿವಾಸ ಪ್ರಭುವೆ ಅ.ಪ. ದಿನಕರನ ಜನರು ನೆನೆಯದೆ ಬಿಟ್ಟರೆÉ ಜನರನ್ನು ಬೆಳಗದೆ ದಿನಕರ ಬಿಡುವನೆ ಹೀನವಿಷಯದಿ ಮುಳುಗಿ ತೇಲುವ ಎನ್ನ ನೀನಾಗಿ ಪೊರೆದರೆ ಘನತೆಯಲ್ಲವೆ ದೇವಾ 1 ಪೆತ್ತ ಮಕ್ಕಳು ಬಲು ಕತ್ತೆಗಳಾದರು ಹೆತ್ತ ತಾಯಿಯು ತಾನು ಎತ್ತದೆ ಬಿಡುವಳೆ ಮತ್ತನಾನಾದರು ಉತ್ತಮೋತ್ತಮಸ್ವಾಮಿ ವಾತ್ಸಲ್ಯತೋರಯ್ಯ ಹಸ್ತಿವರದ ಧೊರೆಯೇ 2 ಗೋವತ್ಸಹಾಲಿಗೆ ಗೋವಿನಗುದ್ದಲು ತವಕದಿ ಉಣಿಸದೆ ಗೋವು ಬಿಡುವುದೇ ತವಪಾದ ಕಮಲದಿ ಅವಿನೀತನಾದರೆ ಸುವಿವೇಕ ಜ್ಞಾನವ ಈಯದಿರುವರೇನೋ 3 ಕರಿ ಧೃವ ಭಕ್ತರ ಪೊರೆಯಲಿಲ್ಲವೆ ನೀನು ಘೋರಪಾಪಗಳ ತರಿದೆ ಅಜಾಮಿಳಗೇ ವರವಿತ್ತು ವ್ಯಾಧಗೆ ವರಕವಿಯೆನಿಸಿದೇ ಭಾರವೆ ನಾನಿನಗೆ ಕರುಣಾಸಾಗರ ರಂಗ 4 ಜಯಮುನಿ ಅಂತರ ವಾಯುವಿನೊಳಗಿಪ್ಪ ರಾಯ ಶ್ರೀಕೃಷ್ಣವಿಠಲನೆ ನಂಬಿದೆ ಕಾಯವಚ ಮನದಿ ಜೀಯನೆ ಗತಿಯೆಂಬೆ ನೋಯಿಸದೆ ಭವದಿ ದಯಮಾಡಿ ಸಲಹಯ್ಯ 5
--------------
ಕೃಷ್ಣವಿಠಲದಾಸರು
ನಾ ನಿಮ್ಮ ದಾಸನಯ್ಯಾ ಸೀತಾರಾಮಾ ಪ ನಾನು ನಿಮ್ಮಯದಾಸನಹುದೊ ನೀನು ಯೀಜಗದೀಶನಹುದೊ ಭಾನು ಕೋಟಿ ಪ್ರಕಾಶನೇ ಸಂಗೀತ ಗಾನ ವಿನೋದರಂಗಾ 1 ಮತಿಹೀನ ನಾನಾದೆನೈ ಶಾಶ್ವತನಾ ಸ ದ್ಗತಿಯ ನೋಡದೆ ಹೋದೆನೈ ಹಿತವ ಪಾಲಿಸಬೇಕೊ ವೋ ಶ್ರೀ ಪತಿತಪಾವನ ರಂಗನಾಯಕ ಸತಿ ಶಿರೋಮಣಿ ಪರಮಸೀತಾ ಪತಿಯೆ ನಾನಿನ್ನ ಸುತನು ಕಾಣೈ 2 ಕಂದಯ್ಯಗಾರುಗತಿ ನಿನ್ನಯ ಚಲ್ವ ಚಂದಗಾದವೆ ಶೃತೀ ಹಿಂದೆ ಮಾಡಿದ ಕೊಲೆಗಳಂ ಬೆನ್ನ ಮುಂದೆ ಬಾರದಂತದ ಹರಿಯೋ ಇಂದಿರೇಶ ಮುಕುಂದ ಪರಮಾ ನಂದ ತುಲಸೀರಾಮ ದೇಶಿಕಾ 3
--------------
ಚನ್ನಪಟ್ಟಣದ ಅಹೋಬಲದಾಸರು
ನಾ ನಿಮ್ಮ ದಾಸರ ದಾಸಈ ನರರ ಪಾಡೇನೆರಡು ದಿನದ ಸಂಸಾರ ಪ ಕರೆಸು ಕಂಬದಿ ಎಂದು ವಾದಿಸಿದವ ಕೆಟ್ಟಪರಹೆಣ್ಣಿಗಾಸೆ ಪಟ್ಟು ಕೀಚಕ ಕೆಟ್ಟಬರಿದೆ ದ್ರೌಪದಿಗಾಗಿ ದುರ್ಯೋಧನ ಕೆಟ್ಟಉರಿ ಹಸ್ತವ ಬೇಡಿ ಭಸ್ಮಾಸುರ ಕೆಟ್ಟ 1 ಆಡಿದ ಮಾತಿಗೆ ಬಲಿ ನೀಡಲಾಗಿ ಕೆಟ್ಟಮಾಡುವ ದಾನ ತಡೆದು ಶುಕ್ರನು ಕೆಟ್ಟಕೂಡಿದ ಶಿರವರಿದು ರೂಢಿಗೀಶ್ವರ ಕೆಟ್ಟಬೇಡಲು ಗುಂಡಿಗೆ ಸೀಳಿ ಕರ್ಣನು ಕೆಟ್ಟ 2 ಎರಡೆಂಟಾಡೆನೆಂದು ಹರಿಶ್ಚಂದ್ರ ಕೆಟ್ಟನೆರೆ ಪಗಡೆಯನಾಡಿ ಧರ್ಮಜನು ಕೆಟ್ಟಹರಿದು ಬಾಣವ ತೊಟ್ಟು ದಶರಥನು ಕೆಟ್ಟಹರಿಯ ಮೊರೆ ಸೇರಿದರ್ಗೆ ಸ್ಥಿರ ಪಟ್ಟ 3 ಹಮ್ಮನಾಡಿ ಮುನ್ನ ಬ್ರಹ್ಮ ತಾ ಕೆಟ್ಟಅಮ್ಮನ ನುಡಿ ಕೇಳದೆ ಹನುಮಂತ ಕೆಟ್ಟತಮ್ಮನ ನುಡಿ ಕೇಳದೆ ರಾವಣನು ಕೆಟ್ಟನಿಮ್ಮ ನೋಯಿಸಿದ ಮೈರಾವಣನು ಕೆಟ್ಟ 4 ಭಾಗೀರಥಿಯ ತಂದೆ ಬಹುದೈತ್ಯರ ಕೊಂದೆಭೋಗಿಶಯನ ಶ್ರೀ ಲಕ್ಷ್ಮೀಕಾಂತನೆಭಾಗವತ ಪ್ರಿಯ ಭವಭಯಹರಕಾಗಿನೆಲೆಯಾದಿಕೇಶವಗೆ ನಮೊ ನಮೋ 5
--------------
ಕನಕದಾಸ
ನಾ ಪೊಗಳೆಲು ನಿನ್ನಾಗಾನಾ ಪರಿಪೂರ್ಣಾ ಸತ್ಯಜ್ಞಾನಾ ಗುರುಮೂರ್ತಿ ಎನಗೆ ದಾನಾ ನೀಡಿದೆ ನೀ ದಿವ್ಯಜ್ಞಾನಾ ಅವಿಚಾರದಿಂದ ತೊಳಲಿ ಭವಭಾಧೆಯಿಂದ ಬಳಲಿ ಕಿವಿಗೊಡದೆ ನಿನ್ನನುಡಿಗೆ ಭುವನದಲಿ ದುಃಖಿಯಾದೆ ಶಿವ ನೀನೆ ಎಂದು ಪೇಳಿ ಸವನಿಸಿದೆ ಮೋಕ್ಷಪದವಾ ಏನೆಂದು ಪಾಡಲಯ್ಯಾ ನಾನೆಂಬ ಭಾವವಡÀಗಿ ನೀ ನಾನೆ ಎಂಬ ತಿಳಿವು ಘನವಾಗಿನೆಲಿಸಿತೀಗ ಏನೊಂದು ತೋರದಯ್ಯಾ ನಾನಾತ್ವವೆಂಬ ಭಾವ ಈ ಸೋಹವೆಂಬ ಪದವ ಲೇಸಾಗಿ ಬೋಧಿಸಿದ ನೀ ಆಶಾನಿವಾಸೆ ನೀಗಿ ನಾ ಶಾಂತನಾದೆ ಮನದಿ ನೀ ಸಚ್ಚಿದಾತ್ಮಗುರುವೇ ಶಂಕರನೆ ಕಲ್ಪತರುವೆ
--------------
ಶಂಕರಭಟ್ಟ ಅಗ್ನಿಹೋತ್ರಿ
ನಾ ಬೇಡುವೆನೋ ನಿನ್ನ ಸೌಭಾಗ್ಯಸಾಗರ ಶ್ರೀ ಭೂ ನೀಳಾವರ ಭಾಗವತೋದ್ಧಾರ ಪ ಯಾವಾಗಲು ನಿನ್ನ ಬಳಿಯೊಳು ನಾನಿದ್ದು ಭಾವಿಸಿ ಕುಶಲದ ಮಾತನಾಡೀ ದೇವ ನಿನ್ನಯ ಪಾದಯುಗಳವನೊತ್ತುತೆ ಸೇವಿಸಿ ಸುಖಿಪಂತೆ ಕರುಣಿಸು ಮುರಹರ1 ಮುಂಗಡೆ ಕುಣಿ ಕುಣಿದಾಡಿ ಸ್ತೋತ್ರವ ಮಾಡಿ ಕಂಗಳೊಳಾನಂದಭಾಷ್ಪಗೂಡೀ ಅಂಗವ ಮರೆತೆನ್ನ ಕಂಠಗದ್ಗದವಪ್ಪ ಮಂಗಳಕರ ಭಕ್ತಿ ಕೃಪೆ ಮಾಡು ಶ್ರೀರಂಗ 2 ಹೆಜ್ಜಾಜಿಯ ಚೆನ್ನಕೇಶವ ಮಾಧವ ಹೆಜ್ಜೆ ಹೆಜ್ಜೆಗೆ ನಿನ್ನ ಸ್ಮರಣಿಯಿತ್ತು ಸಜ್ಜುಗೊಳಿಸಿ ಎನ್ನ ಹೃದಯಪೀಠದಿ ಕೂಡೊ ಅರ್ಜುನಸಾರಥಿ ಶ್ರೀಕೃಷ್ಣ ಪರಮಾತ್ಮ 3
--------------
ಶಾಮಶರ್ಮರು
ನಾ ಮಂದನಾದರು ಸರಿ ಗುರುಗಳ ಕೃಪೆಯಿಂದ ನಾ ಎಂಬುದ ಮರೆತು ಅರಿತಷ್ಟು ಪೇಳುವೆನು ಕಾಮನಯ್ಯ ಕೇಶವನ್ನ ಸ್ಮರಿಸು ಲಲಾಟದಲ್ಲಿ ಒಮ್ಮನಸಿನಿಂದ ಮೂಲವನ್ನು ಉದರ ಮಧ್ಯದಲಿ ಸಾನುವಂದಿತಾದ ಮೇಶನನ್ನು ಹೃದಯದಿ ಉ ಪಮೇರಹಿತನಾದ ಗೋವಿಂದನನ್ನು ಕಂಠ ಮಧ್ಯದಿ ಪತಿ ಶ್ರೀ ವಿಷ್ಣುವಿನನ್ನುದಷೋದರದಿ ಶೂನ್ಯ ಮಧುರಿಪುವಿನ ದಕ್ಷಭುಜದಿ ವಾಮ ಪ್ರತಿಕಂಠದಿ ತ್ರಿವಿಕ್ರಮನನ್ನು ವಾಮನ ಉದರದಿ ವಾಮನ ಮೂರ್ತಿಯನ್ನು ವಾಮ ಭುಜಕಂಠದಿ ಶ್ರೀಧರ ಹೃಷಿಕೇಶರನ್ನು ಸ್ವಾಮಿಯಾಗದಿ ಪದ್ಮನಾಭನನ್ನು ಪುಷ್ಟಭಾಗದಿ ನಿಮ್ಮ ಮಹಿಮ ಗುರು ಕಾಳೀಮರ್ಧಕೃಷ್ಣ ಭಿನ್ನ ದಾಮೋದರನನ್ನು ಶಿರೋ ಭಾಗದಿ ನೆನೆಯೊ 1 ಉದರ ಮಧ್ಯದಲಿ ಐದು ಚಕ್ರಂಗಳು ಹೃದಯಾಕಾಶದಲ್ಲಿ ಮೂರು ಚಕ್ರಂಗಳು ಹೃದಯ ಮೇಲಿನ ಕಂಠದಲ್ಲಿ ಒಂದು ಉದರದಕ್ಷ ಕುಕ್ಷಿಯಲ್ಲಿ ಎರಡು ಮಧುಸೂದÀನ ಸ್ಥಳದಿ ಮೇಲೆ ಎರಡು ಅಧರ ಭಾಗದಿ ವಾಮ ಬಾಹುವಿನಲ್ಲಿ ಒಂದು ಅದಲ್ಲದೆ ವಾಮಕಂಠದಿ ತಾ ಒಂದು ಎದೆಯ ಬಲಪಕ್ಷ ಕಪೋಲದಿ ಮೂರು ಒಂದು ಇದೇ ಇದೇ ತಿಳಿದು ಚಕ್ರಂಗಳ ಧರಿಸುವರು ಸದಮಲಗುರು ಕಾಳೀಮರ್ಧನಕೃಷ್ಣನ ಕೊಂಡರು ದಕ್ಷ ಬಾಹು ಕಂಠದಲ್ಲಿ ಕೆಳಗೆ ಒಂದು ಒಂದರಂತೆ ಕುಕ್ಷಿವಾಮದಲ್ಲಿ ಭಂಧದಿಕೊಂದು ಪರಂಗಳ ಪಕ್ಷಿವಾಹನನಾದ ಶ್ರೀಧರಸ್ಥಾನದ ಮೇಲೆ ಎರಡು ಕಪೋಲ ಒಂದು ಮೂರರಂತೆ ಕ್ರಮದಿ ದಕ್ಷನಾಗಿ ಧರಿಸಿ ಗುರು ಕಾಳೀಮರ್ಧನ ಕೃಷ್ಣನನೆಯೆ 3
--------------
ಕಳಸದ ಸುಂದರಮ್ಮ
ನಾಕಾಧಿಪ ಮುನಿಜನವರದಾಮೆಯಾ ಪ ಲೋಕೇಶನುತ ಕಂಜಲೋಚನಾಮೆಯಾ ಸಾಕಾರ ಭೋಗೀಶ್ವರ ಮಂಜುಳಚರಣಾ ಅ.ಪ ಉದಿತ ಭಾಸ್ಕರಹಿತನಾಥನಾಧಾರೇ 1 ವರವೇಲಾಪುರವಾಸ ವೈಕುಂಠ ಸರ್ವೇಶಾ2
--------------
ಬೇಲೂರು ವೈಕುಂಠದಾಸರು
ನಾಕೇಶ ವಿನುತೆ | ರ ತ್ನಾಕರನ ತಾಯೆ ಪ ಗೋಕುಲದೊಳಿದ್ದು | ಆಕಳ ಕಾಯ್ದಗೆ ಲೋಕಪಾವನೆ ಸಿರಿಯೆ ಅ.ಪ ನೀರೊಳಗೆ ಇದ್ದು ನಗಭಾರ ಬೆನ್ನಲಿಪೊತ್ತು ಬೇರು ಮೆಲ್ಲುವನಿಗೆ | ಚೀರಿ ಕಂಭದಿ ಬಂದು | ಘೋರ ರೂಪದಿ ಬಲಿ ದ್ವಾರ ಕಾಯ್ದವಗೆ | ವೀರ ನೆನಿಸಿ ಪೆತ್ತ | ನಾರಿಯ ಶಿರವ ಸಂ ಹಾರಮಾಡಿದವಗೆ | ಭೂರುಹಚರ ಪರಿವಾರ ದೊಳಗಿದ್ದು ದಧಿ ಚೋರನೆನಿಸಿದವಗೆ 1 ಸಂದೇಹವಿಲ್ಲದೆ ವಸನ ತ್ಯಜಿಸುತ ಬಂದು ನಿಂದವನಿಗೆ | ಇಂದಿರಾಧವ ನಿನ್ನ ಹಿಂದೆ ಬಂದವನ ಅಂದು ಕೊಂಡವನಿಗೆ | ಕುಂದರದನೆ ನಿನ್ನ ಪೊಂದದೆ ಛಂದದಿ ಕಂದರ ಪಡೆದವಗೆ 2 ಜಾತಿಯನರಿಯದೆ ಶಬರಿಯ ಎಂಜಲ ಪ್ರೀತಿಲಿ ಉಂಡವಗೆ ಶ್ವೇತವಾಹನಜಗೆ ತಾ ಸೂತನೆಂದೆನಿಸುತ ಖ್ಯಾತಿ ಪಡೆದವಗೆ ನೀತಿ ಇಲ್ಲದೆಯ ಮಾತೆಯ ಅನುಜನ ಘಾತಿಸಿದಾತನಿಗೆ || ವಾತಾಶನವರ ತಲ್ಪದೊಳು ಮಲಗಿದ ಶಾಮಸುಂದರ ಧೊರೆಗೆ 3
--------------
ಶಾಮಸುಂದರ ವಿಠಲ
ನಾಗವೇಣಿ ಶುಕವಾಣಿ ಸಖಿ ಪ ಭೋಗ ಭಾಗ್ಯ ಬಯಸುವ | ಕು ಯೋಗ ಕುತ್ಸಿತಳಲಿ ಅ.ಪ. ಅಗಣಿತ ಗುಣಾರ್ಣವಗೆ ಸುಗುಣನೆಂದರಿತು ನಾ ಮಣಿಯಲರಿಯೆ ಬಗೆ ಬಗೆ ಕುಸುಮಂಗಳನು ಸೊಗಸಿನಿಂದಲಂಕರಿಸಿ ನಗಧರನ ಸ್ತುತಿಸಲರಿಯದವಳಲ್ಲಿ 1 ರಮಾಭಿಮಾನ್ಯನಂತಾಸನ ಸದನಗೆ ಕಮಲಾಸನವಿತ್ತು ಪ್ರೇಮ ಮಾಡಲರಿಯೆ ಸೋಮ ಸೂರ್ಯನಂತರುಧಾಮದಿ ಬೆಳಗುತ್ತಿರೆ ನೇಮದಿಂದ ದೀಪದಾರತಿಯ ಮಾಡುವಳಲ್ಲಿ 2 ಸಿರಿಭವಾದ್ಯರೆ ಆಭರಣ ಉಳ್ಳವಗೆ ಕರಗುವ ಕನಕ ತೊಡಿಸಲರಿಯೆ ಕರಿವರದ ವಿಜಯ ರಾಮಚಂದ್ರವಿಠಲನ್ನ ಅರಿತು ಒಲಿಸಲರಿಯದವಳಲ್ಲಿ 3
--------------
ವಿಜಯ ರಾಮಚಂದ್ರವಿಠಲ
ನಾಗಶಯನ ವರಯೋಗಿ ನಿಕರಪ್ರಿಯ ಬಾಗಿದೆ ಶಿರ ಅನುರಾಗದಿ ನೋಡೆಲೊ ಪ ಆಗ ನಿನ್ನ ಮರೆತೆನೆಂದು ಈಗ ಎನ್ನ ಮರೆಯದಿರೆಲೋ ಅ.ಪ ಶ್ರೀರಮಣ ನಿನ್ನ ಪ್ರೇರಣೆಯಿಲ್ಲದೆ ಯಾರು ನಡೆಯುವರು ಈ ಧರೆಯೊಳಗೆ ಕಾರಣ ಕಾರಣ ನಿನ್ನೊಳಗೆ ಮನ ಸೇರಿಸಿ ಪೊರೆಯೋ ಸಮೀರಸಖ 1 ಸುಂದರರೂಪ ಮುಕುಂದ ಪರಾತ್ಪರ ಸಿಂಧುಶಯನ ನಿನ್ನ ಶುಭಗುಣಗಳಲಿ ಸಂದೇಹ ಬಾರದೆ ಕರುಣಿಸೆಲೋ ಮುಚು ಕುಂದ ವರದ ಗೋವಿಂದ ಹರೇ 2 ನಿನ್ನ ಕರುಣದಿಂದ ಕಣ್ಣು ತೆರದಿಹೆನೊ ಪೂರ್ಣವಿಮಲ ಸುಖ ಜ್ಞಾನ ಸುಕಾಯ ಮಾನ್ಯ ಪ್ರಸನ್ನ ಸದಾ ಪೊರೆಯೋ ಸರ್ವ ಭಿನ್ನ ಸಮೀಚೀನ ಸುಖವೀಯೊ 3
--------------
ವಿದ್ಯಾಪ್ರಸನ್ನತೀರ್ಥರು