ಒಟ್ಟು 8519 ಕಡೆಗಳಲ್ಲಿ , 133 ದಾಸರು , 4842 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೌರಿ ಪ ಬೃಂದಾರಕವರದಿಂದ ಶೌರಿಯಾನಂದವ ಸೇವಕ ಬೃಂದಕೆ ತೋರಿ ಅ.ಪ. ಕುಂದಮುಕುಳದಿಂದಾ ಕುಮುದಸು ಗಂಧಿಯಗಳಿನಿಂದಾ ರಚಿಸಿಸೊಗಸಿಂದಲಿ ಮೆರೆಯುವ 1 ಸುತ್ತಿರೆ ಹಸ್ತಿಗಳೂ-ಕೂರ್ಮನು ಪೊತ್ತಿರೆ ಮಧ್ಯದೊಳು ಮತ್ತೆಫಣೀಂದ್ರನ ಮಸ್ತಕದಲ್ಲಿರೆ ಸ್ವಸ್ತಿಕಾದಿಬಹು ಚಿತ್ರದಿ ಶೋಭಿಪ 2 ಪಂಕಜ ಚಿಹ್ನೆಗಳಾ-ಸೂರ್ಯಶ-ಶಾಂಕ ಸುರೇಖೆಗಳಾ ಬಹುಬಿಂಕದೊಳೆಸೆಯುವ3 ಕೋಟೆಯ ತೆನೆಗಳಲಿ ದಿವ್ಯವಧೂಟಿಯರೊಲವಿನಲಿ ಬಹುದೀಟಿಲಿ ತೋರುವ 4 ಶಾರದಾಭ್ರನೀಲ-ಶರೀರದಿ- ಹೈರಣ್ಮಯಚೇಲಾ ಜೀರಭೂಷಣೋದಾರ ವಿಹಾರ 5 ಮಂಗಳರವದೊಳಗೆ-ಶಂಖಮೃದಂಗ-ಧ್ವನಿಮೊಳಗೆ ನಾಟ್ಯಂಗಳರಚಿಸಲು6 ವರ ವಿಪ್ರರು ಪೊಗಳೆ-ಛತ್ರಚಾಮರಗಳ ನೆಳಲೊಳಗೆ ವರದವಿಠಲನು ವರಗಳ ಬೀರುತ 7
--------------
ಸರಗೂರು ವೆಂಕಟವರದಾರ್ಯರು
ಶೌರಿ ಬಾರೋ ಶ್ರೀಹರಿ ಪ ಬಾರೋ ಬಾರೋ ಕರುಣಾನಿಧಿ ನಿನ್ನನು ಬಾರಿ ಬಾರಿಗೆ ಸಿರಬಾಗಿ ನಮಿಸುವೆನು ಅ.ಪ ಮಾರನಯ್ಯನೆ ಮಂಗಳರೂಪ ತೋರೊ ಬೇಗನೆ ಸಾರಸಾಕ್ಷ ಸನ್ಮಂಗಳ ಮಹಿಮನೆ ತೋರೋ ನಿನ್ನ ಮಹಾ ಮೀನರೂಪವನು 1 ಸುಂದರಾನನ ಚಂದಿರವದನ ಮಂದಹಾಸನೆ ದುರಿತ ಕಳೆವಂದದಿ ಬೆನ್ನಿಲಿ ಮಂದರವೆತ್ತಿದ2 ಆದಿದೈತ್ಯನು ಭೂದೇವಿಯಪಹಾರ ಗೈದನು ಆ ದಿತಿಜರ ಸಂಹಾರ ಮಾಡಲು ನೆಲ ವರಾಹ ಬೇಗ 3 ಕಂದನಾಡಿದ ಆ ನುಡಿ ಕೇಳಿಯಾನಂದ ತಾಳಿದ ಮಂದರೋದ್ಧರ ಮುಚುಕುಂದ ವರದ ಸುರ- ಗಂಗೆಯ ಪಿತ ನರಸಿಂಗರೂಪದಿ 4 ಬಾಲರೂಪದಿ ಬೇಡಿದ ದಾನ ಭೂಮಿ ಮಾತ್ರದಿ ಬೇಡಿದುದನೆ ಕೊಟ್ಟಾಮಹೀಪಾಲನ ದೂಡಿ ಪಾತಾಳಕ್ಕೆ ಬಾಗಿಲ ಕಾಯ್ದೆ 5 ಶೂರ ರಾಜರ ಸಂಹಾರ ಮಾಡಿ ತೋರಿ ಶೌರ್ಯವ ಸಾಗರಶಯನಗೆ ತೋರಿ ಪರಾಕ್ರಮ ಶೂಲಿಯ ಧನುವಿತ್ತೆ ರೇಣುಕಾತ್ಮಜ 6 ವಾನರಾಧಿಪ ಹಗಲಿರುಳು ಭಕ್ತಿಮಾಡಿ ಧ್ಯಾನಿಪ ಶ್ರೀ ಮಾನಿನಿಯಳ ಕೈಪಿಡಿಯುತ ಅಯೋಧ್ಯದಿ ಮೆರೆದ ಶ್ರೀರಾಮ ಚಂದಿರನೆ 7 ಪಾಂಡುನಂದನ ಮಾಡಿದ ನಿನ್ನ ಬಂಡಿ ಬೋವನ ಸಂದೇಹಿಸದಲೆ ಅಂದು ಅವರ ಮನೆ ಎಂಜಲ ಬಳಿದ ಮುಕುಂದನೆ ಬೇಗದಿ 8 ಮಂಗಳಾತ್ಮಕ ತ್ರಿಪುರರ ಮದ ಭಂಗನಾಶಕ ಮಂಗಳಮಹಿಮ ವಿಹಂಗವಾಹನ ಸುರ ಸಂಗೀತಲೋಲ ಕೃಪಾಂಗ ದಯಾನಿಧೆ 9 ತೇಜಿಯನೇರುತ ಸುಜನರು ಮಾಳ್ಪಪೂಜೆಗೊಳ್ಳುತ ರಾಜೀವಾಕ್ಷ ರಕ್ಕಸ ಸಂಹಾರಕ ಅ- ಪಾರ ಮಹಿಮ ರಥವೇರುತ ತವಕದಿ 10 ಕಂಜಲೋಚನ ಕಮಲಾಯತಾಕ್ಷ ಮಂಜುಭೂಷಣ ಕಂಜದಳಾಂಬಕ ಕಮಲನಾಭ ವಿಠ್ಠಲಝಗಝಗಿಸುವ ಮದ್ಹøದಯ ಮಂಟಪಕೇ 11
--------------
ನಿಡಗುರುಕಿ ಜೀವೂಬಾಯಿ
ಶೌರಿ ವಿಮಲಾಂಬರಧರ ಪಾಹಿ ಮುರಾರಿ ಪ ಸುಮನಸನುತ ಪದದನುಜ ಸಂಹಾರಿ ಅ.ಪ ಸರಸಿಜಲೋಚನ ಶರಣಸಂಜೀವನ ಸುರಮುನಿಸೇವನ ಕರುಣಾಸದನ ಅರವಿಂದಾನನ ವರಮಣಿರದನ ದುರಿತವಿಮೋಚನ ನಿರುಪಮ ಗಾನ 1 ಪುರಹರ ವಿನಮಿತ ಪಾವನಚರಿತ ಧರಣಿರಮಾಯುತ ಸುರಮುನಿವಿನುತ ಫಣಿ ಫಣಿಭೂಷಿತ ಮುರಳೀಧರ ಮಾಂಗಿರಿ ಶೃಂಗಸ್ಥಿತ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ಯಾಮಸುಂದರ ಶ್ರೀಮಾಧವ ಕಾಮಿಸುವಳಾ ಕಾಮಿನಿಯು ಪ. ಭಾಮಾಮಣಿಯು ನಿನ್ನನೀಕ್ಷಿಸದೆ ಯಾಮಯಾಮಕೆ ತಾಮಸಗೊಂಬಳು ಅ.ಪ. ಚಂದನಾದಿ ಸೌಗಂಧಕುಸುಮ ವಿಷ- ದಂದವೆಣಿಸುವಳು ಚಂದ್ರಮುಖಿ ಮಂದಾನಿಲ ಮಕರಂದ ಪಾನರಸ- ವೊಂದನೊಲ್ಲಳ ಪ್ರಿಯಸಖಿ ನಂದನ ಕಂದನೆ ವಂದನೆ ವಲ್ಲಭಗೈವಳು 1 ಹಾರ ಹೀರ ಬಂಗಾರ ಭೂಷಣವ ಭಾರವೆಂದು ಶೃಂಗರಿಸಳು ಕೀರಕೀಕಿ ಪಿಕ ಚೀರುಸ್ವನ ಶರ- ಧಾರೆಯೆಂದು ತಾ ಸೈರಿಸಳು ಕಾರುಣ್ಯವಾರಿಧೆ ಬಾರದೆ ಬಾಯಾರಿರುವಳು 2 ಮೀನಧ್ವಜನುರುಬಾಣದುರುಬೆಗೆ ಕ್ಷೀಣವಾಗಿಹಳು ಮೀನಾಕ್ಷಿ ಭಾನುತೇಜ ಲಕ್ಷ್ಮೀನಾರಾಯಣ ಧ್ಯಾನಿಸುವಳು ನಿನ್ನ ಪ್ರಾಣಸಖಿ ಮಾನಾಭಿಮಾನಾಧೀನವನಿನ್ನೊಳಗಿಟ್ಟಿಹಳು 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ಯಾಮಸುಂದರಿ ಭೂಮಿನಂದಿನಿ ರಾಮಸುಂದರಿ ಸೀತೆಯೆ ಪ ಪ್ರೇಮದಿಂದ ದಿವ್ಯ ಪೀಠಕೆ ಭಾಮಿನಿಯೆ ಬಾ ಪ್ರಿಯೆ ಅ.ಪ. ದೇವ ಸುಂದರಿಯರು ಸೇರಿ ದೇವಿ ನಿನ್ನ ಕರೆವರು ದೇವ ವೃಂದವು ನಿನ್ನ ಸ್ಮರಿಸಿ ಭಾವಿಸುತ್ತಲಿರುವರು 1 ಮಂದಗಮನೆ ಸುಂದರಾಂಗಿ ಮಂದಹಾಸ ಶೋಭಿತೆ ಚಂದ್ರಬಿಂಬ ಸದೃಶವದನೆ ಚಂದ್ರವಂಶ ನಂದಿನಿ 2 ಭ್ರಮರ ವೇಣಿ ಸುಮ ಸುಮಾಲಿ ಕಾಯುತೆ ವಿಮಲ ವಾಣಿ ರಮಣಿ ತರುಣಿ, ಸುಮನ ಕೀರವಾಣಿಯೆ 3 ಮಾನಿನಿ ಶಿರೋಮಣಿಯೆ ಧೇನುನಗರ ವಲ್ಲಭೆ ಜಾನಕಿಯೆ ಸನ್ನುತೆಯೆ ಮೌನಿ ಬೃಂದವಂದಿತೆ4
--------------
ಬೇಟೆರಾಯ ದೀಕ್ಷಿತರು
ಶ್ರಯಧೇನು ಬಂತು ಮನಿಗೆ ದಯ ಕರುಣದಿಂದೊಲಿದು ಸರ್ವಾರ್ಥಗರೆವುತಲಿ ಧ್ರುವ ತನ್ನಿಂದ ತಾನೊಲಿದು ಚೆನ್ನಾಗಿ ತೋರ್ವಿಳಿದು ಭಿನ್ನವಿಲ್ಲದೆ ನೋಡಿ ಹಂಬಲಿಸುತ ಉನ್ನತೋನ್ನತ ಮೋಹ ಮೊಳಿಯೊಳಮೃತ ತುಂಬಿ ಪುಣ್ಯಧಾರಿಂದೊರಗಿ ಭೋರಿಡುತಗಲೆರವುತಲಿ 1 ಸುರಸ ಸಾರಾಯದನುಭವ ಬೆರಸಲಾಗಿ ತಾಂ ವರ ಮಹಾಕೃಪೆ ಘನದೊಳವಿನಿಂದ ಧರೆಯೊಳಾನಂದ ಸುಖ ಸಾರಿಡುತ ಪೂರ್ಣ ಇರ್ಹುಳಗಲೆನದೆ ಸರ್ವಪತಿ ಯಿಂದ್ಹರುಷಗರೆವಾ 2 ಬೆಳಗಿ ತನ್ನರ ಬೆಳೆಸಲಾಗಿ ಸದ್ವಸ್ತು ತಾಂ ತಿಳಿದು ಶ್ರಯಧೇನಾಗಿ ಬಂತು ಬಳಿಗೆ ಕಳವಳಿಸಿ ಕರುಣ ಕಟಾಕ್ಷದಿಂದಲಿ ನೋಡಿ ಎಳೆಗರುವ ಮಹಿಪತಿಗಮೃತನುಣಿಸಿಕೊಳಲಾಗಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರವಣ ಮಂಗಳನೀವುದೊ ಎನ್ನ ಕರ್ಣಗಳಿಗಾ- ನಂದ ಕೊಡುವುದು ಶರಣ ಜನರಿಗೆ ಬಂದ ದುರಿತಗಳ್ಹರಣ ಮಾಡುವುದು 1 ಭರಣ ಭೂಷಿತನಾದ ಲಕ್ಷ್ಮೀರಮಣ ನೀಲಾ- ವರಣ ನಿನ್ನ ಝಣ ಝಣಂದಿಗೆ ನಾದ ನೂಪುರ ಚರಣಕ್ವಂದಿಸುವೆ 2 ಕಮಲನಾಳದಿ ಪುಟ್ಟಿದಾತನ ಜನನಿ ಪತಿ ಜಗಜ್ಜನಕ ನಿನ್ನ ವನಜಪಾದಕೆ ನಮಿಸುವೆನೊ ಈ ಮನವು ನಿನ್ನಲ್ಲಿ 3 ನಿಲಿಸಿದರೆ ನಾ ನಿನ್ನ ನಾಮವ ನೆನೆಸಿದರೆ ಫÀಲಫಲಿಸಿ ಬಾಹೋದು ಒಲಿಸುವನು ವೈಕುಂಠಪತಿ ನೀ ಮನಸು ಮಾಡುವರೆ 4 ಘನಮಹಿಮ ಗಾಂಧಾರಿ ಸುತರನು ಹನನ ಮಾಡಿದ ಪವನ ಪ್ರಿಯನೇ ಜನುಮ ಜನುಮದಿ ನಿನ್ನ ಬಿಡೆ ನಾ ಜಗದ ವಲ್ಲಭನೆ 5 ಪತಿ ನಿನ್ನ ಸುಂದರಾಂಗವನು ತೋರದಲೆ ಭವ ಭಂಗ ಬಿಡಸುವು- ದ್ಯಾತಕೋ ಶ್ರೀರಂಗ ಪೇಳಿನ್ನು 6 ಚಕ್ರದಂದದಿ ತಿರುಗೊ ಎನಮನ ಚಕ್ರಧಾರಿಯೆ ನಿನ್ನ ಕಾಣದೆ ಶಕ್ರಸುತನ ಸಖನೆ ದಯಮಾಡ್ಹಕ್ಕಿವಾಹನನೆ 7 ಅನ್ನದಾತನು ಇರಲುಕಾಣದೆ ಅನ್ಯರಿಗೆ ಬಾಯ್ತೆರೆಯಲ್ಯಾತಕೆ ಪನ್ನಗಾದ್ರಿಶಯನ ನೀ ಸಲಹೆನ್ನ ಶ್ರೀಹರಿಯೆ 8 ಸರ್ವಗುಣ ಸಂಪನ್ನ ಸರ್ವೋತ್ತಮನೆ ಸರ್ವ ವ್ಯಾಪಾರಗಳನು ಸರ್ವಕಾಲದಿ ನಡೆಸುತಿರುವ ಸರ್ವರಾಧಾರಿ 9 ವರಮಹಾಲಕ್ಷ್ಮೀಪತಿಯೆ ವಾರಣವರದ ನಿನ್ನ ಸುರ ವಿರಿಂಚನಾ ಹರನು ವೀಣಾ- ಪಾಣಿನಾರದ ಬರಿದೆ ನಮಿಸುವರೆ 10 ಪರಮ ಕರುಣಾಶರಧಿ ಎನ್ನ ದುರಿತಗಳ ನೀ ದೂರ ಮಾಡುವೆ ಬಿರುದು ನಿನ್ನದÀು ಬಿಡದೆ ಭೀಮೇಶಕೃಷ್ಣ ಸಲಹೆನ್ನ 11
--------------
ಹರಪನಹಳ್ಳಿಭೀಮವ್ವ
ಶ್ರಿತ ಜನ ಮಂದಾರ ಯದುವೀರ ಪ ದುರಿತ ಪರಿಹಾರ ಕುಜನ ಸಂ- ಹಾರ ಯಶೋದೆ ಸುಕುಮಾರ ನಮೋ ನಮೋ ಅ.ಪ ಪಾಂಡವಪ್ರಿಯ ಬ್ರಹ್ಮಾಂಡನಾಯಕ ವೇ- ತಂಡ ರಾಜವರದ ಪುಂಡರಿಕಾಕ್ಷನೆ 1 ನಿಟಿಲಾಕ್ಷ ಸಖನೆ ನಮೋ 2 ದುರಭಿಮಾನಿಗಳ ಗರುವ ಬಿಡಿಸಿ ತನ್ನ ಶರಣರ ಸಲಹುವ ಗುರುರಾಮ ವಿಠಲನೆ 3
--------------
ಗುರುರಾಮವಿಠಲ
ಶ್ರೀ ಲಕ್ಷ್ಮೀಶ ವಿಠಲಾ | ರಕ್ಷಿಸೋ ಇವನಾ ಪ ಕುಕ್ಷಿಯೊಳಗನ್ಯರನೆ | ರಕ್ಷಕರ ಕಾಣೇ ಅ.ಪ. ಮಧ್ವ ಮತದಲ್ಲಿವನು | ಶ್ರದ್ಧೆ ಭಕ್ತಿಯುತನುಪದ್ಧತಿಗಳಳವಡಿಸಿ | ಶುದ್ಧ ಸಾಧನದಾ |ಅಧ್ಯಯನಕೆಳೆ ತಂದು | ಬದ್ಧನನ | ಮಾಡುತ್ತಾಉದ್ಧರಿಸೋ ಶ್ರೀ ಹರಿಯೇ ಪದ್ಮನಾಭಾಖ್ಯಾ 1 ಭವ ಹಾರೀ2 ಸಾರ ಸಾರ ಸವಿ ಸವಿದುಂಬಭಾರಣಯಲಿರಿಸಯ್ಯ | ಮಾರಪಿತ ಹರಿಯೇ 3 ಕರ್ಮಗಳ ಮಾಳ್ಪುವಲಿ | ಮರ್ಮಗಳ ತಿಳಿಸಯ್ಯನಿರ್ಮಮತೆ ನೀಡುತ್ತ | ಧರ್ಮ ಸಾಧಕನೇಕರ್ಮನಾಮಕ ಹರಿಯೇ | ಪೇರ್ಮಣಯಲಿ ಇವನನ್ನುಕ್ರಮ್ಮಿಸೋ ಕರುಣದಲಿ | ಧರ್ಮಗುಪಾಧರ್ಮಿ 4 ಧಾವಿಸಿ ಬಂದಿಹನು | ದೇವ ತವ ದಾಸ್ಯಕೆನೆಭಾವಕನಿಗಿತ್ತಿಹೆನೊ | ಓವಿ ಉಪದೇಶಾಗೋವಳರ ಪ್ರಿಯ ಗುರು | ಗೋವಿಂದ ವಿಠಲನೆನೀ ವೊಲಿದು ಪೊರೆ ಇವನ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಶ್ರೀ | ಜಯ ಹರಿ ವಿಠಲಾ ಪ ರಾಜವದನ ಕರುಣಾಲವಾಲಾ ಅ.ಪ ಪಾತಕ ಪರಿಹಾರ ಗೀತ ಸುಧಾಕರ ಭೀತಿವಿದೂರ ಖ್ಯಾತಿಯ ತಾನರಸುತ ವೇಣುಂಕರ ನೇತಾ ಸಕಲವರದಾತಾ ಮಾಂಗಿರಿವರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕಮಲನೇತುರ | ಪುಣ್ಯಗಾತುರ | ಸಾಕಾರ ಕ್ಷಣ ಮಾತುರ | ನೀ ಕರುಣದಿಂದ | ವಾಕು ಲಾಲಿಸು | ಬೇಕು ವೇಗದಲಿ | ಗೋಕುಲಾಂಬುಧಿ ರಾಕಾಂಬುಜ ಲಾ | ವಕರ ತೊಲಗಿಸಿ | ಸಾಕುವುದೆನ್ನ ನಿ | ಜಕರ ವಿಡಿದೂ ಪ ನಿತ್ಯ ಅಜಾತಾ | ಕುಂಭ ಮಕುಟನೀತಾ | ಮಾವ ಮರ್ದನ ನಿರ್ಭೀತಾ || ದೇವಮರರ ಕಾ | ವ ಭಕ್ತರ | ಜೀವನೆ ವರ | ವೀವನನುದಿನ | ಆವು ಕಾವುತ ಪೋಗಿ | ದಾ ವಿಷ ಬಿಡಿಸದೆ || ಶ್ರೀ ವಲ್ಲಭ ನಿನಗಾವವನೆಣೆ ತ್ರಿ | ಭುವನದೊಳಗತಿ | ಸೇವಕ ಜನರಿಗೆ ಕೈವಲ್ಯವನು ಕೊಡುವಾ 1 ಪೂತನಿ ಪ್ರಾಣಾಪಹಾರಾ | ಪರಮ ಸುಂದರಾ | ಪರಿಹಾರಾ | ಮರಣಜರ ವಿದೂರಾ | ಭೂತಿ ಉಳ್ಳಿಂದ್ರ ಕುಮಾರಾ | ಸೂತ ನೀನಾಗಿ ಭೂತಳದೊಳು | ವ್ರಾತ ಯಮುನೆಯ | ಭ್ರಾತನ್ನ ನಗರಿಯ | ಯಾತನಿಗಟ್ಟಿದೆ | ಪೂತುರೆ ನಿನ್ನ ಮಾ | ಯಾತನಕೇನೆಂಬೆ | ಖ್ಯಾತಿ ಮೂರುತಿ ಬೆನ್ನಾತು ಕಾಯೊ ಪಾರಿ | ಜಾತವ ತಂದ | ಮಿತ ಮಹಿಮ ಜಗ | ತಾತಾ ಬೊಮ್ಮಾದಿ ವಿನುತಾ 2 ತೋಷ ಗೋಪಾಲ ಮಾನಿಸಾ ವೇಷ | ಆ ಪಾರ ರತುನ ಭೂಷಾ | ನಂತಪ್ರಕಾಳಾ | ತಾಪಸಿಗಳ ವಿಲಾಸಾ || ಕೋಪ ಮೊದಲಾದ ತಾಪತ್ರಯಗಳ | ನೀ ಪೋಗಾಡು ಉ | ಡುಪಿ ಸದನನೆ ಪಾಪರಹಿತ ಮಧ್ವಪತಿ ಕರದಿಂ | ದ ಪೂಜೆಗೊಂಡ ಪ್ರತಾಪನೆ ಜ್ಞಾನದ | ದೀಪ ಬೆಳಗಲಿ | ರೂಪವ ತೋರಿಸು ಯದುಪಾ ಎನ್ನ ಸಮೀಪಾ 3
--------------
ವಿಜಯದಾಸ
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಕೃಷ್ಣ ಸ್ತುತಿಗಳು ಅದೋ ಬರುವ ರಂಗ ಅದೋ ಬರುವ ಇದೋ ನಲಿವರಂಗ | ಇದೋ ನಗುವ ಪ ಇನಬಿಂಬವದನಾ | ಭ್ರಮರಕುಂತಲ ಘನ ಜನಮನರಂಜನ ಅದೋ ಬರುವ ಅ.ಪ ಶರನಿಧಿಮಂದಿರ ಭುವನಮನೋಹರ ಶರಣರಮಂದಾರ | ಅದೋ ಬರುವ ಮಾಧವ | ಅದೋ ಬರುವ 1 ಪರಿಮಳ ಹೂಹಾರ ಮೆರೆವ ಮಾಣಿಕಸರ ಪರಿಪರಿ ಮಣಿಹಾರ ಧರಿಸಿರುವ ಶರಣರಭೀಷ್ಟವ ಸಲಿಸುವೆನೆನ್ನುವ ಮುರಳಿಯನೂದುವ | ಅದೊ ಬರುವ 2 ಕುಣಿ ಕುಣಿದಾರೈವ ತರುಣಿ ರಾಧೆಯತವ ಮಣಿಯೆನಿಸುವ ದೇವ ಅದೋ ಬರುವ ವೇಣುವನೂದುವ ಜಾಣನ ಪಾದವ ಕಾಣುವ ಭಾಗ್ಯವ ನೆರೆ ಪಡೆವ 3 ಕಂಸಾರಿ ಇವನೆ ಭಕ್ತರ ಸಿರಿ ಇವನೆಲೆ ದುರುಳಾರಿ ವರನೃಹರಿ ಇವನೆಲೆ ಮಾಂಗಿರಿಶೃಂಗವಿಹಾರಿ ಇವನಹುದೆಮ್ಮಯ ಅಮಿತಸಿರಿ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಕೃಷ್ಣವೇಣಿ ಕಲ್ಯಾಣೀ ಪಂಕಜಾಸನ ಸ್ವೀಕೃತ ಬುಧ ಶ್ರೇಣೀ ನೀ ಕೃಪೆÉಯಿಂದ ಮಹಾಕೃತು ಹರಿಯ ನಿ ಜಾಕೃತಿ ತೋರ್ದೂರಿಕೃತ ದುರಿತೇ ಪ ಸುಜನ ಮಾತೆ ಶಮಲ ಸಂಕೂಲ ನರ್ಧೂತೆ ಸುಮನಸ ಜನ ಸನ್ನುತೆ ಸನ್ಮೋದ ದಾತೆ ವಿಮಲ ಸದ್ಗುಣ ಸಂಭೃತೆ ನಮಿಸುವೆ ತ್ವತ್ಪದÀ ಕಮಲಯುಗಳಿಗನು ಪಮ ಸುಂದರೆ ಭ್ರಮೆಗೊಳಿಸುವ ದುರ್ಮಮ ಕಳೆದು |ಸೋ ತ್ತಮರ ಪದಾಬ್ಜಕೆ ಭ್ರಮರನೆನಿಸಿ ಮಾರಮಣನ ದುಹಿತ್ರೆ 1 ಮದಗಜಯಾನೆ ಪಿಕಗಾನೆ ಉಭಯಾನೆ ಮಾನಿನಿ ಮದನಾರಿ ಜಟಜಸೊನೆ ಪಾಪೌಘದಹನೆ ಮುದವ ಕೊಡು ಎಮಗೆ ನಿ ೀನೆ ಮದಡನರನು ಒಂದು ದಿನ ಮಜ್ಜನವ ವಿಧಿಸೆ ಶರೀರದಿ ಹುದುಗಿದ ಪಾಪಗಳುದುರಿಸಿ ಕಾಲನ ಸದನವ ಹೋಗಗೊಡದುದಧಿ ಮಥನ ಪದ ಪದುಮವ ತೋರ್ಪೆ 2 ನೀಲ ಪುನತ ಹೃತ್ಕುಮುದಾ ಭೇಶೇ ಅನುದಿನ ಪೂರೈಸೇ ಜನನಿಯೆನ್ನ ದುರ್ಗುಣವೆಣಿಸದೆ | ಮಾ ತನು ಲಾಲಿಸು ಸುಹೃದ್ವನರುಹದಲಿ ಶ್ರೀ ವನತೆಯರಸ ಜಗನ್ನಾಥ ವಿಠಲನ ಅನವರತ ನಿಲಿಸು ಘನ ಮಾಂಗಲ್ಯೇ 3
--------------
ಜಗನ್ನಾಥದಾಸರು