ಒಟ್ಟು 9384 ಕಡೆಗಳಲ್ಲಿ , 131 ದಾಸರು , 5285 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರ್ಖರ ವಡಂಬಡಿಸಲಾಗವದೆಂದೆಂದು ಪ ಮಳಲ ತಂದಿಕ್ಕಿ ಗಾಣದೊಳಗ ಸಾಯಸದಿಂದ | ಬಲಿದು ಎಣ್ಣೆಯ ತೆಗೆಯಲಿಬಹುದು 1 ಗಿರಿಗಳಂದದಿ ಬಹಥೆರೆಗಳ ಕಡಿಯುತ | ಶರಧಿಯದಾಟಿ ಹೋಗಲು ಬಹುದು 2 ಇಳೆಯೊಳು ತಿರುಗುತ ದೇಶ ದೇಶಗಳನು | ಮೊಲದಾ ಕೋಡವ ದೊರಕಿಸಬಹುದು 3 ತೋರುವ ಮೃಗಜಲ ಹಿಡಿದು ಪ್ರಾಶನ ಮಾಡಿ | ನೀರಡಕಿ ಶಾಂತ ಮಾಡಿಲಿಬಹುದು 4 ಮೊಸಳಿದಾಡಿಯೊಳಿಹ ಅಮೌಲಿಕ ರತ್ನ ತನ್ನ | ವಶವನೆ ಮಾಡಿಕೊಳ್ಳಲಿಬಹುದು 5 ಪರಿ | ಶಿರಸದಿ ಬೇಗ ಧರಿಸಲಿಬಹುದು 6 ಗುರುಮಹಿಪತಿಸುತ ಪ್ರಭು ಗುರುತಿಲ್ಲವರಾ | ನೆರಳಿಗೆ ದೂರ ಕೈ ಮುಗಿವನು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೂರ್ತಿ ಪ ಲೋಕದ ಜನರಘವನು ತೊಳೆಯಲಿಕೆ ತ್ರೈ ಲೋಕ ದೊಡೆಯ ಚದಂಬರನಾಗಿ ಭೂಕಾಂತೆಯೊಳಗೆ ಮೂರ್ತಿ ದಯಾಪರ ಮೂರುತಿ 1 ಮಾಡಿಕೊಂಡ ಪಾಪದ ರಾಶಿಯು ದಿನ ದಿನ ಉರಿಗೊಂಡು ಸುಟ್ಟುದು ಮರೆಹೊಕ್ಕೆನೀಗಳು ಪಾದ ಪುಂಡರೀಕವನು ಚಿದಂಬರಮೂರ್ತಿ 2 ಹೊನ್ನು ಹಣವ ಚಿನ್ನ ಚಿಗುರು ಬೇಡುವನಲ್ಲ ಪಾದ ಪದ್ಮದ ಸ್ಮರಣೆಯನು ಸಂಪೂರ್ಣವಾಗಿರುವ ನಿತ್ಯ ಸುಖಾರ್ಣವಾನಂದ ಚಿದಂಬರಮೂರ್ತಿ 3 ಬೇಡುವೆನೊಂದು ವರವ ಕೊಡುವರೆ ಈ ಗೂಡಿರುವತನಕ ಕೃಪೆಮಾಡಿ ಸಲಹೋ ಎನ್ನ ನೋಡಿ ಬಡವನ ಚಿದಂಬರಮೂರ್ತಿ 4 ಪ್ರಾಕುನುಡಿದ ಪುಣ್ಯದಿಂದ ನಿಮ್ಮಯಪಾದ ಸೇರೆ ನಾ ಕೃತ ಕೃತ್ಯನಾದೆ ನಿಂದಿನ ಜನ್ಮ ಸಾರ್ಥಕ ವಾಯ್ತು ಪರಾಕೆ ಚಿದಂಬರ ನೀ ಕರುಣಿಸೋ ಎನಗಭಯವಿತ್ತು 5
--------------
ಕವಿ ಪರಮದೇವದಾಸರು
ಮೂರ್ತಿ ಚಿನ್ಮಯಾತ್ಮಕ ರೂಪ ಸಂತತದಿ ನೆನೆವವರ ಸಲಹೊ ಕರುಣಿ ಪ. ತುಂಬಿ ಇರುತಿಹುದು ಎಂತು ನಿನ್ನಾಟ ಪೇಳ್ ನಿಗಮವೇದ್ಯ ಚಿಂತೆ ಎನಗೊಂದಿಲ್ಲ ಅಂತರಂಗದಿ ನೆಲೆಸಿ ಸಂತತದಿ ನಿನ ಧ್ಯಾನ ನೀಡೆಂಬೆನೊ 1 ದೇಶಾಧಿಪತಿಗಳಿಗೆ ಕೋಶ ತುಂಬದ ಚಿಂತೆ ದೇಶ ತಿರುಗುವನಿಗೆ ಹಣದ ಚಿಂತೆ ದೇಶಸ್ಥನಾದವಗೆ ರಾಜಭಟರಾ ಚಿಂತೆ ಕಾಶಿಯಲ್ಲಿರುವವಗೆ ಮನೆಯ ಚಿಂತೆ 2 ಜಾರಿಣಿಗೆ ವಿಟನೊಬ್ಬ ಬಾರದಿರುವ ಚಿಂತೆ ಚೋರನಿಗೆ ರವಿ ಮುಳುಗದಿರುವ ಚಿಂತೆ ಮಾರನಿಗೆ ಯೋಗಿಗಳ ಹೃದಯ ಭೇದಿಪ ಚಿಂತೆ ಪತಿ ಒಲುಮೆ ಪಡೆವ ಚಿಂತೆ 3 ಕರ್ಮತತ್ಪರರಿಗೆ ಹರಿಮರ್ಮವರಿಯದ ಚಿಂತೆ ಧರ್ಮಪುರುಷಗೆ ಕಲಿಬಾಧೆಯ ಚಿಂತೆ ವೇದಶಾಸ್ತ್ರಜ್ಞನಿಗೆ ವಾದಿಯ ಭಯ ಚಿಂತೆ ಹಾದಿ ನಡೆವಗೆ ದುಷ್ಟ ಜನರ ಚಿಂತೆ 4 ಸಾಧು ಸಜ್ಜನರಿಗೆ ಬಾಧೆ ಕೊಡುವರ ಚಿಂತೆ ಹಾದಿ ತಪ್ಪಿದ ಪಾಪಿಗೆ ಯಮನ ಚಿಂತೆ ವಾಣಿಜ್ಯತನದವಗೆ ಹಣವು ಗಳಿಸುವ ಚಿಂತೆ ಮಾನವಂತರಿಗೂನ ನುಡಿಯ ಚಿಂತೆ 5 ಇಂತೆಲ್ಲರಾ ಚಿಂತೆ ಇರಲಿ ಕೇಳ್ ಹರಿಯೆ ಚಿಂತೆ ಬಿಡಿಸೆನಗೆ ನೀನೊಲಿದು ದೊರೆಯೆ ಚಿಂತನೆಗೆ ಸಿಗದಿಹುದು ನಿನಗೆ ಸರಿಯೆ ಚಿಂತಿಪರಿಗೊಲಿವಂಥ ಸಿರಿಕಾಂತ ಹರಿಯೆ6 ಶಾಂತ ಮೂರುತಿ ಪರಮ ಕರುಣಾಳುವೆನ್ನುತಲಿ ಎಂತೆಂತೂ ಸಜ್ಜನರು ಸ್ತುತಿಪುದನು ಕೇಳುತಲಿ ಇಂತು ನಿನ ಪದವನಾನ್ಹಾರೈಸಿ ಬಂದರೂ ನಿಂತರೂ ಎದುರಲ್ಲಿ ನೀನೊಲಿಯಲಿಲ್ಲ 7 ಕರಮುಗಿದು ಎರಗಿದರೂ ಶಿರಬಾಗಿ ನಮಿಸಿದರೂ ಚರಣದಲಿ ತನುಮನ ಒಪ್ಪಿಸಿದರೂ ಕರಗಲಿಲವು ಮನಸು ಕರುಣಪುಟ್ಟಲು ಕಾಣೆ ಭರವಸೆಯು ನಿನ್ನಲ್ಲಿ ಮೂಡಲಿಲ್ಲ 8 ಶಿರದಿ ಕರವಿಡಲಿಲ್ಲ ತೊರೆದೆಯೊ ಜರಿದೆಯೊ ವರಭಕ್ತಿ ಸಾಲದೊ ಗುರುವಿಕೆಯೊ ದೊರೆತನವೊ ಅರಹೊಟ್ಟೆ ಜೀವಿಸುತ ಅರಿಯದೆ ಮತ್ತೊಂದು ಇರುಳು ಹಗಲಾಲ್ಪರಿವ ತೆರವು ತೋರದೊ ಮನಕೆ 9 ಸರಿಯಲ್ಲ ಸರಿಯಲ್ಲ ಕರುಣಾಳುವೆಂಬುವೋ ಬಿರುದುಳಿವ ತೆರವಿಲ್ಲ ಬಿಂಕಪಟ್ಟರೆ ಈಗ ಕರೆದು ಮನ್ನಿಸೊ ಪಾಂಡುರಂಗವಿಠ್ಠಲ ದೇವ ವರ ಪುಂಡಲೀಕಗೆ ಒಲಿದದ್ದು ನಿಜವಾಗೆ 10 ಪರಿಪರಿಯ ಭಕ್ತರನು ಪೊರೆದದ್ದು ನಿಜವಾಗೆ ಹರಿದಾಸ ಸಂತತಿಗೆ ಮನೆದೈವ ನಿಜವಾಗೆ ಸರಿಯಿಲ್ಲದಾ ದೈವ ನೀನೆಂದು ನಿಜವಾಗೆ ಹೊರವೊಳಗೆ ಒಂದಾಗಿ ಕರಪಿಡಿದು ಸಲಹಿನ್ನು 11 ಗುರುಕೊಟ್ಟ ವರಬಲದಿ ಶರಣು ಪೊಂದಿದೆ ನಿನಗೆ ಚರಣದಲಿ ಬಿದ್ದಿರುವೆ ಪರಮ ಪುರುಷನೆ ದೇವ ಸ್ಮರಪಿತನೆ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಣೆ ಮಾಡಿದ ಮೇಲೆ ಭವದ ಭಯ ಉಂಟೆ 12
--------------
ಅಂಬಾಬಾಯಿ
ಮೂರ್ತಿ ನೆಲಸಲಂತರ್ಧಾನದಿ ಕ್ಷಣದೀ 1ನಾ ಪುಣ್ಯವಂತನೆಂಬೆನೆ ಮೂರ್ತಿಯಗಲುವದೆ ನಾಪಾಯೆಂಬೆನೆಕಾಬೆನೆರೂಪುಮರೆಯಾದರೇನೈ ಪೂರ್ಣವಸ್ತುವೆಂಬೀ ಪಂಥವನು ಪಿಡಿವೆನೆವ್ಯಾಪಾರದಲಿ ಸಿಲುಕಿದೀ ಮನಕೆ ಬಿಡದೆ ಸದ್ರೂಪ ನಂಬಿದ್ದೆನಿದನೆಸಾಪರಾಧಿಗೆ ಮುಖಗೊಡದ ತೆರದಿ ಮರೆಯಾದ ತಾಪ ಬೆಂಬಿಡದು ತಾನೆ ಎನ್ನನೆ 2ಬರಿದೆ ನಾನಪರಾಧಿಯೆಂದು ಪಂಬಲಿಸುವದು ತರವಲ್ಲ ಧನ್ಯ ನಾನೂಕರುಣದಿಂ ಮೂರುತಿಯ ತೋರಿ ಸುಖಗೊಳಿಸಿಯುರೆ ಮರೆಯಾದ ಭಾವ ತಾನೂಸ್ಮರಿಸಿ ಸ್ಮರಿಸಿಯೆ ಮನವು ಕರಗಿ ತನ್ನೊಳುನಿಜದಿ ಬೆರೆಯಲೆಂತೆಂಬುದಿದನೂಮರಳಿ ಜಾನಿಸಿ ಧೈರ್ಯ'ಡಿದರೂ ಮೊದಲುಂಡ ಪರಮಸುಖ ಬಿಡದೆನ್ನನೂ ತಾನೂ 3ಭಾಪುರೆ ಭಾಗ್ಯಶಾಲಿಯು ಧನ್ಯಧನ್ಯನೈ ನಾ ಪುಣ್ಯವಂತನಹುದೂತಾ ಪೂರ್ಣ ಕೃಪೆವಂತ ಶ್ರೀಕೃಷ್ಣಯೋಗೀಂದ್ರ ನೀ ಪೊಡ' ಮೊದಲೊಳಹುದೂತಾಪಬಡುವರು ಭಜಕರೆಂದು ಮಂಗಳಕರದ ರೂಪವನು ಮೊದಲೆ ತಳೆದೂವ್ಯಾಪಕನು ಶ್ರೀ ದಾಸಾರ್ಯನಾಗಿರುವನೀ ಪದ'ಗೆಣೆಯಾವದು ಇಹುದೂ 4ಗುರು ವಾಸುದೇವಾರ್ಯನೆನಿಸಿ ಚಿಕ್ಕನಾಗಪುರ ವರದವೆಂಕಟರಮಣನೆಕರದು ಸುಜ್ಞಾನಸುಧೆಯೆರೆದಜ್ಞರಜ್ಞತೆಯ ಪರಿದ ಕರುಣಾವಂತನೆವರ ಕೃಷ್ಣಯೋಗೀಂದ್ರ ಶ್ರೀರಾಮದಾಸಾರ್ಯ ಶರಣಾಗತೋದ್ಧರಣನೆಮರೆಯೊಕ್ಕೆ ನಾನು ತಿಮ್ಮದಾಸ ಜೀಯ್ಯಪರಾಕು ಕರ'ಡಿಯಬೇಕೆನ್ನನೆ ನೀನೆ5
--------------
ತಿಮ್ಮಪ್ಪದಾಸರು
ಮೂರ್ತಿ ಪ ಪಾದ ನಂಬಿದ ದಾಸನ ಮೇಲೆ ಅ ಎಡರಿಗಾಗುವರಿಲ್ಲ ಕಡನ ನಂಬುವರಿಲ್ಲಬಡವನೆಂದು ವಸ್ತ್ರವ ಕೊಡುವರಿಲ್ಲದೃಢದೊಳಿದ್ದರು ಬವಣೆ ಬಂದೊಡನೆ ಕಾಡುವುವುಒಡೆಯ ಕಂಡೂ ಕಾಣದಿರುವುದುಚಿತವಲ್ಲ1 ಮೊರೆಯ ಕೇಳುವರಿಲ್ಲ ಸಿರಿವಂತ ನಾನಲ್ಲಪರಮಾತ್ಮ ನಿನ್ನೊಳಗೆ ನಾನರಿತಿಲ್ಲಬೆರೆತುಕೊಂಡಿರಲು ಸಜ್ಜನರ ಗೆಳೆತನವಿಲ್ಲಪರಮಹಂಸನೆ ಹರಿಸೊ ಇಂಥ ಕೊರತೆಗಳೆಲ್ಲ 2 ನೀಲವರ್ಣದ ಲೋಲ ಕಾಲನವರಿಗೆ ಶೂಲಬಾಲ್ಯದಿ ಯಶೋದೆಯ ಹಾಲ ಸವಿದ ಗೋಪಾಲನಾಲಗೆಗೆ ನಿನ್ನ ವಿಶಾಲ ಅಷ್ಟಾಕ್ಷರಿಯನಿತ್ತುಪಾಲಿಸೋ ಶ್ರೀ ಕಾಗಿನೆಲೆಯಾದಿಕೇಶವನೆ3
--------------
ಕನಕದಾಸ
ಮೂರ್ತಿ ಶರಣರ ಸಾರ್ಥಿ ಪ ಮರಹು ಬಿಡಿಸಿ ತನ್ನ ಅರವಿನೊಳಿಟ್ಟು | ಬೀರುವ ನಿಜ ಸ್ಫೂರ್ತಿ 1 ಮೂರ್ತಿ 2 ಪೂರಿಪ | ಮನದಾರ್ತಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮೂರ್ತಿ ಸ್ತೋತ್ರ ಗುರುವರ ದಕ್ಷಿಣಾ ಮೂರ್ತಿಗೆ ಎರಗುವೆ ಪುರಂದರ ಮುಖ ಸುರ ವೃಂದ ವಂದಿತರು ಪರಮಾತ್ಮನು ಶ್ರೀ ರಾಘವ ಸಿಂಹನ ಸುರತರು ಪ ಅಮೃತ ಕಲಶ ಅಭಯ ವಿದ್ಯಾಮುದ್ರಾ ದರ್ಶಕ ಕೈ ಪದ್ಮಗಳ್ ಸುಂದರ ತರ ಶುದ್ಧ ಸ್ಫಟಿಕಾಮಲವರ್ಣ ಇಂಥ ದಕ್ಷಿಣ ಮೂರ್ತಿಗೆ ಆನಮಿಸುವೆ 1 ಉರಗ ಭೂಷಣ ದಿವ್ಯ ಹೊಳೆವ ಆಭರಣಗಳ್ ಚಂದ್ರ ಚೂಡ ತ್ರಿನೇತ್ರ ಕೃಪಾಕರ ದಕ್ಷ ಪ್ರಜೇಶ್ವರಾ ದ್ಯಮರರಿಂದೀಡ್ಯ ಈ ದಕ್ಷಿಣ ಮೂರ್ತಿಯ ಸ್ಮರಿಸೆ ಸಂತೈಪರು 2 ಶ್ರೀಪತಿ ಜ್ಞಾನ ಪ್ರದರ್ಶಸಿ ತೇಜಸ್ ಐಶ್ವರ್ಯ ಈವೋರು ಅಪಮೃತ್ಯು ವಿಷರೋಗ ಪರಿಹರಿಸುವರು ಅಬ್ಜಜ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ಹೃತ್ಪದ್ಮದಿ ಕಾಂಬ ಮೇಧಾಕೊಡುವರು | ಗುರುವರ ದಕ್ಷಣಾ ಮೂರ್ತಿಗೆ ಎರಗುವೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಮೂರ್ತಿ ಹರಿ ಎಲ್ಲ ಕೇಳುವುದೆಲ್ಲ ನಿನ್ನ ಕೀರ್ತಿ ಪ ಎಲ್ಲ ಸಾರುವುದೆಲ್ಲ ನಿನ್ನ ವಾರ್ತಿ ಎಲ್ಲೆಂದರಲ್ಲೆ ನಿನಗೆ ಶರಣಾರ್ಥಿ ಅ.ಪ ಕಲ್ಲಿನಲ್ಲಿ ನಿನಗೆ ಶರಣಾರ್ಥಿ ನೆಟ್ಟ ಮುಳ್ಳಿನಲ್ಲಿ ನಿನಗೆ ಶರಣಾರ್ಥಿ ಕಳ್ಳರಲ್ಲಿ ನಿನಗೆ ಶರಣಾರ್ಥಿ ಮಹ ಕುಳ್ಳರಲ್ಲಿ ನಿನಗೆ ಶರಣಾರ್ಥಿ ವೈರಿ ಕೊಲ್ಲಲುಬರಲವ ರಲ್ಲೆ ನಿನಗೆ ಬಹು ಶರಣಾರ್ಥಿ 1 ಊರೊಳು ನಿನಗೆ ಶರಣಾರ್ಥಿ ಮಹ ದಾರಣ್ಯದಲಿ ನಿನಗೆ ಶರಣಾರ್ಥಿ ಘೋರತಾಪದಿ ನಿನಗೆ ಶರಣಾರ್ಥಿ ಬಿಡದಾ ಪಾರ ಸೌಖ್ಯದಿ ನಿನಗೆ ಶರಣಾರ್ಥಿ ಸಾರವಿಲ್ಲದ ಸಂಸಾರದಿ ನಿನಗೆ ಬಾರಿಬಾರಿಗೆ ಬಹು ಶರಣಾರ್ಥಿ 2 ನಿನಗೆ ಜಾಗ್ರದಲಿ ಶರಣಾರ್ಥಿ ಬಿದ್ದ ಕನಸಿನಲಿ ನಿನಗೆ ಶರಣಾರ್ಥಿ ಘನ ನಿದ್ರದಿ ನಿನಗೆ ಶರಣಾರ್ಥಿ ಬಿಡ ದನುದಿನದಲಿ ನಿನಗೆ ಶರಣಾರ್ಥಿ ತನುಮನಧನದಲಿ ಜನಕ ಶ್ರೀರಾಮ ನಿನಗೆಣಿಕಿಲ್ಲದ ನಿಜ ಶರಣಾರ್ಥಿ 3
--------------
ರಾಮದಾಸರು
ಮೂಲ ದೇಹದಿ ಪಾಳ್ಯ ಬಿಡುತಿದೆ ನಾಳೆ ನಾಡದೋ ಕಾಣೆ ತಮಪುರವಿದು ಕಾಲ ಬರುತಿದೆ ಪ ಬಂದು ಬಂದವರೆ ಮುಕ್ತಿಗೆಯಿಕ್ಕಿ ರವಿ ನಂದನ ನಾಳುಪದ್ರವನಿಕ್ಕಿ ಹಿಂದು ಮುಂದಕು ಛಾವಣೆಯಿಕ್ಕಿಪುರದ ಮಂದಿಯ ಕಾವಲನಿಕ್ಕಿ 1 ಪುರದೊಳಗೇನು ಬೀಯಗಳಿಲ್ಲ ಮುಂದೆ ಬರುವ ಮಾರ್ಗವ ಕಟ್ಟಿದರೆಲ್ಲ ಕರಣವೃತ್ತಿಗಳು ತಗ್ಗಿತು ಎಲ್ಲ ಕೋಟೆ ಜರಿದು ಹೋಯಿತು ಸುತ್ತಲು ಎಲ್ಲ 2 ಕಾಲು ಕೈಗಳ ಧಾತು ತಪ್ಪಿತು ನುಡಿದ ನಾಲಗೆ ಹಿಂದಕೆ ಸರಿಯಿತು ಕಣ್ಣಾಲಿಯೊಳಗೆ ನೀರು ಉಕ್ಕಿತು ವಸ್ತು ಗಾಳಿಯೊಳಗೆ ಮಾಯವಾಯಿತು 3 ಮಡದಿ ಮಕ್ಕಳಿಗೆಲ್ಲ ಹೊಡೆದಾಟ ಬಲಕೆ ಎಡಕೆ ಹೊರಳದಿರಿ ಎನುವಾಟ ಕಿಚ್ಚಿ ಯೊಡನೆ ಗೂಡನು ಸುಡುವಾಟ ಕೆಲವು ಕಡೆಯವರೆಲ್ಲ ತೆರಳುವಾಟ 4 ಹೇಳದ ಯಮದೂತರಿಗಂದು ಕಡು ಖೂಳ ಪಾಪಿಗಳೆಳತಹುದೆಂದು ಲಕ್ಷ್ಮೀ ಲೋಲ ನಾಳು ಗಳಮುಟ್ಟದಿರೆಂದು ತನ್ನಾಳಿಗೆ ಕಟ್ಟು ಮಾಡಿದನಂದು 5
--------------
ಕವಿ ಪರಮದೇವದಾಸರು
ಮೂಲಮಂತ್ರವ ಜಪಿಸು ಅರ್ಹತೆಯಿರುವಂತೆ ನೀನು ಪ ನಮೋನಾರಾಯಣಾಯ ಕಡೆಯಲುಳ್ಳ ಅ.ಪ ವೇದ ಪಾಂಚರಾತ್ರಾಗಮ ಪೌರಾಣಗಳ ನಿರುತ ನುತಿಪ ವೇದದೆ ಶ್ರೀವೈಷ್ಣವರಿಗೆ ತಾರಕಬ್ರಹ್ಮವಾದ ಆದಿಯೊಳಾಚಾರ್ಯರಿಂದ ಪಂಚಸಂಸ್ಕಾರ ಹೊಂದಿ ಬೋಧೆ ಪಡೆದ ಮಹಾಮಂತ್ರರಾಜವೆನಿಸಿ ಮುಕ್ತಿ ಕೊಡುವ 1 ಅಷ್ಟಾಕ್ಷರಿಯಾದ ಮಂತ್ರ ಇಷ್ಟಸಿದ್ಧಿಮಾಳ್ಪ ಮಂತ್ರ ನಿಷ್ಠೆಯಿಂದ ಜಪಿಸುವರಿಗನಿಷ್ಟಹಾರಿಯಾದ ಮಂತ್ರ ಇಷ್ಟುಮಾತ್ರ ಪಠಿಸುವರಿಗೂ ಮೋಕ್ಷವನ್ನೆ ಕೊಡುವ ಮಂತ್ರ ಸೃಷ್ಟೀಶ ಹೆಜ್ಜಾಜಿಯ ಕೇಶವನನ್ನೊಲಿಪ ಮಂತ್ರ 2
--------------
ಶಾಮಶರ್ಮರು
ಮೃಗಮೋಹಿನಿಯೊಡನೇಕೋ ಪಂಥ ಪ ಕಾಂತ ಸಿರಿಕಾಂತ ಸುರನಗರಾಧಿಪ ಅ- ನಂತ ಗುಣವಂತ ದೇವಾ ಎನ್ನ ಸಲಹೊ ಅ.ಪ ಸುಲಲಿತ ಲತಾಂಗಿ ನಿನ್ನೊಲುಮೆಯಲ್ಲಿ ನೆರೆಹೊಂಗಿ- ಸಲೆ ಮನವ ಮಾಡಿ| ನಿನ್ನಗಲಿ ಬಾಯಾರಿ ಬಲು ವಿರಹದಾಸರಿನ ಬೇಸರಿನಲ್ಲಿ ಯಿಂ_ ತಳಿದವಳ ಕಾಯೊ ಸಿರಿಧಾಮ ಗುಣಧಾಮ 1 ಕಳಕಳಿಪ ನೋಟ ಕಾತರಿಪ ವಿರಹದ ಹೂಟ ಅಳಲು ಮನ ಅಳಿನಿದ್ರೆ ನಿನಗಾಲಯ ಮುದ್ರೆ ಅಳಿದುಳಿಸು ಲಜ್ಜೆಗೇಡುಗಳ ಪಾಡುಗಳ ಇಂ- ತುಳಿದವಳ ಕಾಯೊ ಸಿರಿಧಾಮ ಗುಣಧಾಮ 2 ಮೂರಾರವಸ್ಥೆಗಳ ನೀರಿಕಡೆಯನವಸ್ಥೆ ಮಾತಿರುವಳೆ ಬಾಲೆ ನಿನಗೆದ್ದ ಮೇಲೆ ನಾರಿಯೆಡೆಗೈದರಲೆಗಲಿಪ್ಪಿ ಬಿಗಿದಪ್ಪಿ ಸೊಗಸೇ ತೋರಿಸಿದನಮರ ಪುರಿಪಾಲ ಸಿರಿಲೋಲ 3
--------------
ಕವಿ ಲಕ್ಷ್ಮೀಶ
ಮೃಡ ನೀನಾದೆನಡುವೆ ಜಡನಾದೆನ್ನ ಮೃಡನ ಮಾಡಯ್ಯ 1ತನುವೆರಡರೊಳಗಿರುವ ತತ್ವ ಗಣವೆನಿಸುವದುತನುಗಣಕೆ ನೀ ಸ್ವಾ'ುಯಾಗಿರಲು ಬಳಿಕಜನರೆಲ್ಲ ನಿನ್ನಡಿಯ ತನು'ನಲಿ 'ಘ್ನಗಳಕೊನೆಗಂಡು ಮನದಭೀಷ್ಟವ ಪಡೆಯುತಿಹರು 2'ಘ್ನೇಶನೆಂಬೊಂದು ಪದಕೆ ವರ್ಣತ್ರಯವು'ಘ್ನವೆಂಬೆರಡು ವರ್ಣದಿ ಜ್ಞಾನವೊಂದು'ಘ್ನಹತಿಯದಕೀಶ 'ಘ್ನೇಶ ನೀನೆ ನಿರ್'ಘ್ನದಿಂ ಜ್ಞಾನವನು ಕೊನೆಗಾಣಿಸಯ್ಯ 3ಮೊದಲ ವರ್ಣವೆ ಸಾಕ್ಷಿಯದರ ಕಡೆಯದು ಮಾಯೆುದಕೊಡೆಯನೆನುತಿಹುದು ಮೂರನೆಯ ವರ್ಣಅದರಿಂದ ಕರಣಪ್ರೇರಕನೆಂಬ ಹದನಾಗಿವೊದಗಿದುದು 'ಘ್ನೇಶನೆಂಬ ನಿನ್ನ ನಾಮ 4ಪರಮಾತ್ಮ ನೀನೆಂದು ನೆರೆ ತಿಳಿದು ನಿನ್ನಡಿಗೆಎರಗಿದೆನು ವ್ಯವಹಾರ ದೆಸೆುಂದಲೀಗತಿರುಪತಿಯ ವೆಂಕಟನೆ ವರದ ಗಣಪತಿಯೆಂದುಮೆರೆಯುತಿಹೆ ರಾಮೇಶನಾಲಯಾವಾಸ 5
--------------
ತಿಮ್ಮಪ್ಪದಾಸರು
ಮೆಲ್ಲನೇಳಯ್ಯ ಮಣಿವೆ ಪ ನಲ್ಲುಲಿಗಳಿಂದ ಶುಕಪಿಕಗಳೆಚ್ಚರಿಸುತಿವೆ ಅ.ಪ ಅರುಣ ವರ್ಣದ ಗಗನಯೆಂಬ ಹರಿವಾಣವನು ಕರದಿ ಪಿಡಿದೆತ್ತೆ ನಿನಗಾರತಿಯ ಗೈಯಲು ತರಣಿ ನಿಂದಿರ್ಪ ತುಂಬುರು ನಾರದರು ಮುದದಿ ಪರಮಾತ್ಮ ಸುಪ್ರಭಾತಗಳ ಪೇಳುವರು 1 ಭೃತ್ಯ ದಿಕ್ಪಾಲಕರು ಅತ್ಯಧಿಕ ಭಕ್ತಿಯಿಂ ಕರವೆತ್ತಿ ಮುಗಿದು ನಿತ್ಯಕಾರುಣ್ಯ ಪರಿಪೂರ್ಣ ಸದ್ಭಕ್ತಗಣ ನುತ್ಯ ನೀನೇಳೆಂದು ನುತಿಸುತಿಹರು 2 ನಿನ್ನ ನಾಮವ ಭಜಿಸಿ ಪಾದಪೂಜೆಯ ಗೈದು ನಿನ್ನ ಕಾರುಣ್ಯ ದರ್ಶನಕೆ ಕಾದಿರುವಾ ಪನ್ನರೆಲ್ಲರ್ಗೆ ದರ್ಶನವ ನೀನೀಯಲು ಇನ್ನೇಕೆ ತಡ ಏಳು ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೇಲನೆಸಗಲಿ ನಿಮಗೆ ಮಾಲಕುಮಿ ಮನ್ನಿಸುಗೆ ಪ. ಬಾಲಕರು ಬಯಸುವೆವು ಬಾಲೆಯರು ಹರಸುವೆವು ಅ.ಪ. ಮಾಧವನ ದಯೆಯಿರಲಿ ಯೊಧರಿಗೆ ಜಯವಿರಲಿ ಸಾಧನವು ಕೈಸೇರೆ ಶ್ರೀಧರನು ಮೈದೋರೆ 1 ಸಿದ್ಧಿಸಿದಾವ್ರತವೆಂದು ಶುದ್ಧಭಾವದಿ ಬಂದು ಬದ್ಧಕಂಕಣರಾಗಿ ಶ್ರದ್ಧೆಯಿಂ ಶಿರಬಾಗಿ 2 ವಾಸುದೇವನ ಸ್ಮರಿಸಿ ಮೀಸಲಂ ತೆಗೆದಿರಿಸಿ ವಾಸಪಂಥದಿ ಬೇಗ ದಾಸ್ಯಮಂ ಬಿಡಿಸೀಗ 3 ವಿಜಯದಶಮಿಯು ನಾಳೆ ವಿಜಯಯಾತ್ರೆಗೆ ತೆರಳೆ ವಿಜಯಸಾರಥಿಯೊಲಿದು ವಿಜಯವೀಯುವನಹುದು 4 ಘನತೆಗೇರುವ ನಮ್ಮ ವನಿತೆಯರೆ ನಿಮ್ಮ ಮನೆತನವ ಬೆಳಗಿಸಿರೆ ಇನಿಯರನು ಹುರಿಡಿಸಿರೆ 5 ಪೌರುಷವು ಪುಟ್ಟುವೋಲ್ ವೀರರಹುದೆನ್ನುವೋಲ್ ವೀರಮಾತೆಯರೆ ನೀಂ ವೀರಪುತ್ರರ ಪಡೆಯಿರೆ 6 ಮಕ್ಕಳಂ ತಕ್ಕೈಸಿ ತಕ್ಕಂತೆ ನುಡಿಗಲಿಸಿ ಕಕ್ಕುಲಿತೆಯಿಂ ನೋಡಿ ಅಕ್ಷರಸ್ಥರ ಮಾಡಿ 7 ಮಹಿಳೆಯರೆ ಮಾದರಿಯ ಗೃಹಿಣಿರಹೆ ಶಾರದೆಯ ಮಹಿಮೆಯದು ಕರಮೆಸೆಗೆ ವಿಹಿತಮದು ನಿಮ್ಮೊಳಗೆ 8 ದೇಶದೇಳಿಗೆಯಲ್ಲಿ ಆಸೆ ನಿಮಗಿರುವಲ್ಲಿ ದೇಶೀಯವ್ರತಧರಿಸಿ ಐಶ್ವರ್ಯಮಂ ಬೆಳಸಿ 9 ಪತಿ ಸುತ ಸಹೋದರರ ಹಿತವೆಳಸಿ ಬಾಂಧವರ ಮತವರಿತು ನಡೆಯಿಸಿರೆ ವ್ರತಸಾಂಗವೆನ್ನಿಸಿರಿ 10 ಇನ್ನೇಳಿ ಕೈನೀಡಿ ಸನ್ಮಾನೈಯರೆ ನೋಡಿ ಧನ್ಯವಾದವ ಮಾಡಿ ಮನ್ನಿಸಿರೆ ದಯೆಗೂಡಿ 11 ಬಾಲಕರು ಬೇಡುವರು ಮೇಲೆನಿಪ ಮಮತೆಯನು ಶಾಲುಸಕಲಾಸೆಯನು ಬಾಲಕರು ತಾ ಬಯಸರು 12 ತಾಯಿಯರೆ ನೀವಿತ್ತ ತಾಯ್ನಲವನಿತ್ತ ತಾಯೆಂದುಕೊಳ್ಳುವರು ಈಯಣುಗರ್ ಕೇಳಿದನು 13 ಕನ್ಯೆಯರು ಹಾಡುವರು ಕನ್ನಡವ ಪಾಡುವರು ಕನ್ನಡಕೆ ಜಯವಾಗಲೆನ್ನುವರು ನಲವೀಗೆ 14 ಹರಕೆಯನು ಸಲ್ಲಿಸಿರೆ ತರಳರಂ ಮನ್ನಿಸಿರಿ ಮರಳಿ ಬಾರೆಂದೆನಿರೆ ಹರುಷದಿಂ ಬೀಳ್ಕೊಡಿರಿ15 ವರಶೇಷಗಿರಿವಾಸ ಕರುಣದಿಂದಲೆ ಲೇಸ ಧರೆಗೆಲ್ಲ ಸಂತೋಷ ದಯೆಗೆಯೈ ಸರ್ವೇಶ16
--------------
ನಂಜನಗೂಡು ತಿರುಮಲಾಂಬಾ
ಮೈಹೋಳು ನೀ ಬಂದು ಮೈಯ ಮರಿಯ ಬ್ಯಾಡವೋ ಮಹಿಮಾನಂದನಂಘ್ರಿಯ ಬಿಡಬ್ಯಾಡವೋ ಧ್ರುವ ಮಾಯಾ ಮೋಹದೊಳು ಸಿಲ್ಕಿ ದೇಹ್ಯ ಭ್ರಮೆಯಗೊಂಡು ಕಾಯ ಸೌಖ್ಯಕೆ ಬಾಯಿದೆರಿಯಬ್ಯಾಡವೋ 1 ಹೊನ್ನು ಹೆಣ್ಣು ಮಣ್ಣಿಗಾಗಿ ಬಣ್ಣ ಪರಿಯಲಿನ್ನು ಕಣ್ಣು ಗೆಟ್ಟು ಕರುಡನಂತೆ ದಣಿಯಬ್ಯಾಡವೋ 2 ನಾನು ನೀನು ಎಂಬ ಭಾವ ಮಹಿಪತಿಗಳೆದು ಭಾನುಕೋಟಿತೇಜನಂಘ್ರಿ ಬೆರೆದು ಮನಕೂಡವೂ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು