ಒಟ್ಟು 647 ಕಡೆಗಳಲ್ಲಿ , 88 ದಾಸರು , 567 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮರೆಯದಿರೆಲೊ ಮನುಜಾ ಮಾಧವನನ್ನು ಮರೆಯದಿರೆಲೋ ಶುದ್ಧ ಮರುಳೆ ಮಾತನು ಕೇಳು ಪರಿಪರಿಯಲಿ ನಮ್ಮ ಪೊರೆವ ಕಾರುಣಿಕನ ಪ. ತನ್ನ ಸೇವೆಗೆ ಸಾಧನವಾಗಿಹ ದೇಹ- ವನ್ನು ಪಾಲಿಸಿದವನ ಯಿನ್ನು ನೀ ತಿಳಿಯದೆ ಅನ್ಯ ದೈವಗಳನ್ನು ಮನ್ನಿಸಿ ಮನದಣಿದನ್ನ ನಾಯಕನನ್ನು 1 ಹಸ್ತ ಪಾದಾದಿಗಳ ಕೊಟ್ಟದರಿಂದ ವಿಸ್ತರಿಸಿರುವಾನಂದ ತೋರುವ ಸುರ ಮಸ್ತಕ ಮಣಿಯನು ಮರೆತು ಮೂಢರ ಸೇರಿ ಬಸ್ತಕನಂತೆ ನಿರಸ್ತನಾಗದೆಯೆಂದು 2 ಮನೆಯಲಿ ನಿಲಿಸಿರುವ ವಾಕ್ಕಾಯಕರ್ಮ ಮನದಲಿ ತುಂಬಿರುವ ನಮ್ಮಯ ಸರ್ವ ವನು ತನಮನ ತಾನೆ ನೆನೆದು ಪಾಲನೆ ಗೈವ ವನಜನಯನ ಲಕ್ಷ್ಮಿಯಿನಿಯನ ಮಹಿಮೆಯ 3 ದುರಿತರಾಶಿಯನರದು ದುರ್ ಹೃದಯರ ತರಿದು ಕಾಲಿಂದಲೊದೆದು ಸಿರಿ ಸಹಿತವಾಗಿ ನಮ್ಮಲ್ಲಿರುವನ ಸರ್ವಾಮಯ ಹರ ಪದದಲ್ಲಿ ಭಾರವಿರಿಸು ವಿಚಾರಿಸು 4 ಬಿಡು ಬಿಡು ಭ್ರಾಂತಿಯನು ಮುರಾಂತಕನ- ಲ್ಲಿಡು ನಿನ್ನ ಚಿಂತೆಯನು ಕಡಿವನು ವೈರಿಗಳ ಕೊಡುವನು ಶುಭಗಳ ಒಡೆಯ ವೆಂಕಟಪತಿ ತಡಿಯ ತೋರುವನೆಂದು 5
--------------
ತುಪಾಕಿ ವೆಂಕಟರಮಣಾಚಾರ್ಯ
ಮರೆವನೇ ಮುರವೈರಿಯು ಸಿರಿಪತಿ ಸತ್ಯಶಾಸನ ಪ ಸುಖದು:ಖಗಳನು ಮನಕೆ ಸೇರಿಸದೆ ಸದಾ ಅಖಿಲ ಕಾರಣ ಹರಿಭಕುತ ಜನರ1 ಅತಿಭಾಗ್ಯ ಬಂದಾಗಲೂ ಚ್ಯುತಿ ಬಂದರೂ ಸ್ಥಿರ ಮತಿಯ ಪೊಂದುತ ಭಜಿಸುವ ಭಕುತನ 2 ಸಿಂಧುಶಯನನನು ವಂದಿಪ ಸುಜನರ ಬಂಧು ಬಳಗ ಜನವೆಂದರಿವನು 3 ಸಂಕಟ ಬಂದಾಗಲು ಶಂಕೆಯ ಮಾಡದ ಪಂಕಜನಾಭನ ಕಿಂಕರನನು 4 ಎನ್ನ ಕರ್ಮಗಳೆಲ್ಲ ನಿನ್ನ ಅಧೀನವೆಂದು ಸಂತತ ಭಜಿಸೆ ಪ್ರಸನ್ನನಾಗದೆ 5
--------------
ವಿದ್ಯಾಪ್ರಸನ್ನತೀರ್ಥರು
ಮರೆವಾರೇನೋ ನಿನ್ನ ನೀನು ಗುರುತಾ ನೆಲೆ ಮಾಡದೆ | ಸಿರಿಯರಸನಸಿರಿ ಚರಣವ ಸ್ಮರಿಸದೇ | ನರದೇಹ ಬರಡವ ಮಾಡುವರೆ ಜಾಣಾ ಪ ಹಲವು ಪುಣ್ಯದಿಂದಲ್ಲದೇ ಸುಲಭದಲ್ಲಿ ಜನ್ಮವು | ಇಳೆಯೊಳಗುದಯಿಸಿ ತಿಳಿಯದೆ ಸ್ವಹಿತದ | ಬಳಿಕೆಯ ನೆರೆಭವ ಬಲಿಯೊಳು ಸಿಲುಕಿ | ತೊಳಲುತ ನಿಶಿದಿನ ಬಳಲುವೆ ಜಾಣಾ 1 ಅವಗತಿಯೋ ಎನಗೆ ಮುಂದಾ | ಆವ ಜನಮ ವಿಹುದೋ | ವಿವೇಕದಿಂದ ವಿಚಾರಿಸಿ ಮನದೊಳು | ಭಾವಿಸಿ ಗುರುವಿನ ಪಾವನ ಪಾದಾ | ಭಾವಭಕುತಿಯಲಿ ಸಾವಧನನಾಗದೆ | ಹ್ಯಾವಹೆಮ್ಮೆಲೆ ದಿನಗಳೆದೇ ಜಾಣಾ 2 ಬದಿಯಲ್ಲಿದ್ದಾ ವಸ್ತುವನು | ಸದಗಾನಾದ್ಯೋ ಕಾಣದೆ | ಸಾಧುರ ಕೈಯಲಿ ಹಾದಿಯ ಕೇಳೆಲೋ | ಸಾದರದಲಿ ನಿಜ ಸಾಧನ ಬಲಿದು | ಭೇದಿಸು ಮಹಿಪತಿನಂದನ ಸಾರಿದಾ | ಗಾದಿಯನ್ನದೆ ಗತಿ ಸಾಧಿಸೋ ಜಾಣಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮರ್ಯಾದಿ ಗುಣ ವಳ್ಹದೋ | ಗುರುವರ್ಯರ ಸೇವೆಲಿ ಬಾಳ್ವೆನೆಂಬನಿಗೆ ಪ ಅರಸುವಲಿದು ಅತಿ ಪ್ರೀತಿ ಮಾಡಿದರೇನು ? ಕರಗಳ ಮುಗಿದು ನಿಂದಿರಬೇಕು ಚರನು 1 ಹಿಂಗದೆ ಭಕುತಿಗೆ ಬೆಜ್ಜರ ವಿಡಿದರ | ಬಂಗಾರಕ ಸುವಾಸನೆಯು ಬಂದಂತೆ 2 ಕುದುರೆಗೆ ಉತ್ತತ್ತಿ ತುಸು ಕೊಟ್ಟರಾರೋಗ್ಯ | ಅದೇ ವಿಶೇಷ ಕೊಡಲು ವಿಪರೀತವೋ 3 ಯೋಗ್ಯವಲ್ಲದ ಅಲಂಕಾರಿಸಿಕೊಂಡರೆ ತನ್ನ | ಶ್ಲಾಘ್ಯವೇ ಜಗದೊಳು ಉಪಹಾಸ್ಯ ಮೂಲಾ 4 ತರಳತನವ ಬಿಟ್ಟೆಚರದಲಿ ನಡಿಬೇಕು | ಗುರು ಮಹಿಪತಿಸುತ ಪ್ರಭು ನೊಲುವಂತೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಲಗು ಮಲಗೆಲೊ ಸುಮ್ಮನೆ ಸುಕುಮಾರ ಚೆಲುವ ಜೋಗುಳವ ಪಾಡುವೆ ಗೋಪಾಲ ಪ ಲಲನಾಮಣಿಯರು ಸುಲಭದಿ ನಿನ್ನನು ಕಲಭಾಷಣದಿಂದ ಸೆಳೆಯ ಬಯಸುತಿಹರೋ ಅ.ಪ ಭೋಗಿಶಯನ ಹರಿ ಈ ಜಗದೊಳಗೆ ಈಗ ಬಂದಿರುವ ಜಾಗವನರಿಯದೆ ಯೋಗಿ ಜನರು ಅನುರಾಗದಿಂದ ನಿನ್ನ ಸಾಗಿಸಲಿರುವರೊ ಕೂಗದೆ ಸುಖದಲಿ 1 ದುರುಳ ಶಕಟನನು ಮುರಿದ ಕೋಮಲದ ಚರಣ ಕಮಲಗಳು ಉರಿಯುತಲಿದ್ದರು ಮರೆಯಲದನು ಸುವಿನೋದವೀಯುವ ಸರಸಪದಗಳನು ಪರಿಪರಿಯರುಹುವೆನೊ 2 ಎನ್ನಯ ಕರಗಳು ನೋಯುತಲಿರುವುವು ಚಿನ್ಮಯ ರೂಪನೆ ನಿದ್ರೆಯ ಮಾಡೊ ದಧಿ ಪಯ ಬೆಣ್ಣೆಯ ಕೊಡುವೆ ಪ್ರಸನ್ನ ಸುಹೃದಯದಲಿ 3
--------------
ವಿದ್ಯಾಪ್ರಸನ್ನತೀರ್ಥರು
ಮಳೆಯ ದಯಮಾಡೊ ರಂಗಯ್ಯ ನಿಮ್ಮ ಕರುಣ ತಪ್ಪಿದರೆ ಉಳಿಯದೀ ಲೋಕ ಪ. ಪಶುಜಾತಿ ಹುಲ್ಲೆ ಸಾರಂಗ ಮೃಗಗಳು ಬಹಳ ಹಸಿದು ಬಾಯಾರಿ ಬತ್ತಿದ ಕೆÀರೆಗೆ ಬಂದು ತೃಷೆಯಡಗದೆ ತಲ್ಲಣಿಸಿ ಮೂರ್ಛೆಗೊಂಡು ದೆಸೆದೆಸೆಗೆ ಬಾಯಿ ಬಿಡುತಿಹವಯ್ಯ ಹರಿಯೆ 1 ಧಗೆಯಾಗಿ ದ್ರವಗುಂದಿ ಇರುವ ಬಾವಿಯ ನೀರ ಮೊಗೆ ಮೊಗೆದು ಪಾತ್ರೆಯಲಿ ನಾರಿಯರು ಹಗಲೆಲ್ಲ ತರುತಿಹರು ಯೋಚನೆಯ ಮಾಡುತ್ತ ಬೇಗದಿಂದಲಿ ತರಿಸೊ ವೃಷ್ಟಿಯನು ಹರಿಯೆ2 ಸಂದು ಹೋದವು ಜ್ಯೇಷ್ಠ ಆಷಾಢ ಶ್ರಾವಣ ಬಂದಿದೆ ಭಾದ್ರಪದ ಮಾಸವೀಗ ಇಂದು ಪುರಂದರಗೆ ಹೇಳಿ ವೃಷ್ಟಿಯ ತರಿಸೊ ಸಂದೇಹವಿನ್ಯಾಕೆ ಹೆಳವನಕಟ್ಟೆಯ ರಂಗ3
--------------
ಹೆಳವನಕಟ್ಟೆ ಗಿರಿಯಮ್ಮ
ಮಾತಿನಂತಲ್ಲನುಭವ ಜ್ಞಾನ ಮರುಳಜನ ಬಲ್ಲವೇನ ಯತಿಮುನಿಗಳು ಸಾಧಿಸುವ ಖೂನ ಮನೋನ್ಮನದ ಸಾಧನ ಧ್ರುವ ನುಡಿಜ್ಞಾನಾಡಿ ತೋರಬಹುದು ನಾಡ ಲೋಕದೊಳೆಲ್ಲ ನಡಿಜ್ಞಾನದೆ ದುರ್ಲಭವದು ಆಡಿ ದೋರಲಿಕ್ಕಿಲ್ಲ ಗುಹ್ಯ ನಿಜಬೋಧಿದು ಒಡೆದ್ಹೇಳುವದಲ್ಲ ಒಡನೆ ಸದ್ಗುರು ಘನ ದಯದಲಿದು ಪಡೆದವನೆ ತಾಂ ಬಲ್ಲ 1 ಕಲಿತಾಡುವ ಮಾತಿಗೆ ಸಿಲುಕದ ಮೂಲವಸ್ತುದ ಖೂನ ನೆಲೆನಿಭವೆ ತಾ ಅಗಮ್ಯಿದು ಬಲು ಸೂಕ್ಷ್ಮಸ್ಥಾನ ಬಲಿಯದೆ ರೇಚಕ ಪೂರ್ವಿದು ನೆಲೆಗೊಳ್ಳುದು ಸಾಧನ ನಿಲಕಡ್ಯಾಗದೆ ಕುಂಭಕಲಿದು ಬಲಿಯದು ಗುರುಙÁ್ಞನ 2 ಸ್ವಾನುಭವ ಸುಖ ಸಾಧಿಸಿ ಅನುದಿನದಿ ನೋಡಿ ಮನಗೆದ್ದು ಜನಕೆ ಮೋಹಿಸುವ ಅನುಭವ ಹೇಳಬ್ಯಾಡಿ ಭಾನುಕೋಟಿತೇಜನೊಲಿದು ತಾ ಖೂನಾಗುವ್ಹಾಂಗ ಮಾಡಿ ದೀನ ಮಹಿಪತಿ ಸ್ವಾಮಿ ಮನಗಂಡು ಮನೋಹರ ಕೊಂಡಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮಾನನಿಧಿ ಶ್ರೀಕೃಷ್ಣ ಮಧುರೆಗೈದುವನಂತೆಏನು ಪಥವಮ್ಮ ನಮಗೆ ಪ ಮಾನವೇನಿನ್ನಿದಕೆ ಮಾನಿನಿಯರೆಲ್ಲರುಆಣೆಯನು ಕಟ್ಟಿವನಿಗಡ್ಡ ನಿಲ್ಲುವ ಬನ್ನಿ ಅ.ಪ. ಕಳ್ಳತನವೇ ನಮ್ಮ ವಲ್ಲಭರು ಈ ಸುಳುವುಎಲ್ಲವನು ಬಲ್ಲರಮ್ಮಒಲ್ಲದಲೆ ನಮ್ಮ ಬಿಟ್ಟರೆ ಒಳಿತು ವನಜಾಕ್ಷಎಲ್ಲಿಗೈದಿದರೆ ನಾವಲ್ಲಿಗೈದುವ ಬನ್ನಿ1 ಇಂದುದಯದಿ ಮೊದಲು ಇಂದೀವರಾಕ್ಷಿಯರುಗೋವಿಂದನ ಬಳಿಗೈದುವಒಂದು ಕಡೆಯಲಿ ಕುಳಿತು [ವನಜಾಕ್ಷಿಯೋರ್ವ ಕೈಯಂದಲಲ್ಲಿಗೆ ಕಳುಹಿ] ಕೇಳ್ವೆವೇನು ಪೇಳುವನೋ 2 ಹರಿಣಾಂಕವದನೆಯರು ನೆರೆದು ಬರುತಿರೆ ಕಂಡುಪರಮ ಹರುಷದಲಿ ಬಂದುಸರಿ ರಾತ್ರಿಯೊಳು ಹೀಗೆ ಬರುವುದೇನೆಂದೆನಲುಎರಗಿ ಬಿನ್ನೈಸಿದರು ಅಂಬುಜದಳಾಕ್ಷನಿಗೆ3 ಶ್ಲೋಕ ಹಲವು ಕಾಲವು ನಿನ್ನ ಸ್ನೇಹ ಸುಖವ ಹಾರೈಸಿಕೊಂಡಿರುತಿಹಲಲನಾವ್ಯೂಹವ ಬಿಟ್ಟು ಅಕ್ರೂರನೊಡನೆ ನೀ ಮಧುರೆಗೆ ಪೋದರೆಕಳೆಯಲಾಪವೇ ಕಾಂತ ಕೇಳು ದಿನವ ಈ ಕಂತುವಿನ ಬಾಧೆಗೆಘಳಿಗೊಂದು ಯುಗವಾಗಿ ತೋರುತಿÀಹುದೋ ಜಲಜಾಕ್ಷ ನೀನಿಲ್ಲದೆ ಪದ ಮಾಧವ ಕೃಪಾಕರನೆ4 ಶ್ಲೋಕ ಬಾಲಭಾವದಲಿಂದಲಂಗಸುಖವ ಬಹುಬಗೆಯಲಿಂದುಳುಹಿದೆಲೋಲಲೋಚನೆ ನಿಮ್ಮ ಬಿಟ್ಟು ಪುರದ ನಾರೇರಿಗಾನೊಲಿದರೆನೀಲಕಂಠನು ಮೆಚ್ಚ ನೋಡು ನಿಜವ ನಿಮಗ್ಯಾತಕೀ ಸಂಶಯಕಾಲಕ್ಷೇಪವನಲ್ಲಿ ಮಾಡೆ ಕಿಂಚಿತ್ಕಾಲದೊಳಾನೈದುವೆ ಪದ ಪಾಲಿಸಿರೆನಗಪ್ಪಣೆಯ ಪಾಟಲ ಸುಗಂಧಿಯರೆಕಾಲಹರಣವ ಮಾಡದೆನಾಳೆ ಉದಯಕೆ ಪೋಗಿ ನಾಲ್ಕೆಂಟು ದಿನದೊಳುವ್ಯಾಳೆಗಿಲ್ಲಿಗೆ ಬರುವೆ ಕಾಳಾಹಿವೇಣಿಯರೆ 5 ಶ್ಲೋಕ ಮಾರನಯ್ಯನೆ ಕೇಳು ಅಲ್ಲಿರುತಿಹ ನಾರೇರು ಬಲು ನಿಪುಣರೋನೀರಜಾಂಬಕ ನೋಡು ನಿನ್ನ ಮನವ ನಿಮಿಷಾರ್ಧದೊಳುಸೆಳೆವರೋಮಾರಕೇಳಿಯ ಶಾಸ್ತ್ರಮರ್ಮವರಿದ ಆ ನಾರೇರು ನೆರೆಯಲುಗಾರು ಪಳ್ಳಿಯಲಿಪ್ಪ ಗೋಪಿಯರ ವಿಚಾರಂಗಳ ಸ್ಮರಿಪೆಯಾ ಪದ ಬಿಲ್ಲ ಹಬ್ಬವೆ ಸುಳ್ಳು ಬಿಸುರುಹಾಕ್ಷಿಯರಿಕ್ಷುಬಿಲ್ಲಿನುತ್ಸವಕೆ ನಿನ್ನಖುಲ್ಲ ಅಕ್ರೂರನನು ಕಳುಹಿ ಕರೆಸಿದರಲ್ಲಿವಲ್ಲಭೆಯರನ್ನು ನೆರೆವೆ ನಮ್ಮೆಲ್ಲರನು ಮರೆವೆ 6 ಶ್ಲೋಕ ನಾರೀಹಾರ ಕಿರೀಟ ಕುಂಡಲಯುಗ ಕೇಯೂರವಲಯಾದಿಗಳುಚಾರು ವಸ್ತ್ರ ಸುಗಂಧ ಪುಷ್ಪನಿಚಯ ಹಾರಂಗಳಂ ಧರಿಸದೆಮಾರ ಕೇಳಿಯ ಮಾತಿಲಿಂದಲವರ ಮನಸೆಮ್ಮೊಳೊಂದಾಗದೆನಾರೇರೊಲುಮೆಯುಂಟೆ ಲೋಕದೊಳಗೆ ನನ್ನ್ಯಾತಕೆ ದೂರ್ವಿರೇ ಪದ ಮಲ್ಲಯುದ್ಧವ ನೋಡಬೇಕೆನುತ ನಮ್ಮಾವಅಲ್ಲಿಗೆ ಕರೆಸಲದಕೆಇಲ್ಲದಪವಾದ ಈ ಸುಳ್ಳು ಸುದ್ದಿಗಳ ನೀ -ವೆಲ್ಲ ಸೃಜಿಸಿದಿರಿ ಸರಿಯಲ್ಲ ನಿಮಗಿಳೆಯೊಳಗೆ 7 ಶ್ಲೋಕ ವಾರಿಜಾಂಬಕ ವಾರಿಜಾರಿವದನ ವಾರಾಶಿಜಾವಲ್ಲಭವಾರಿವಾಹನಿಭಾಂಗ ವಾಸವನುತ ವಾಕೆಮ್ಮದೊಂದಾಲಿಸೋವಾರಿಜೋದ್ಭವನಯ್ಯ ನಿನ್ನ ವಿರಹ ವಾರಾಶಿಯೊಳು ಮುಳುಗಿಹನಾರೀನಿಚಯವ ಪಾರುಗಾಣಿಸು ಕೃಪಾನಾವೆಯಲಿಂದೆಮ್ಮನು ಪದ ಮಾರನೆಂಬುವನು ಬಲು ಕ್ರೂರ ನಮ್ಮಗಲಿ ನೀ ಊರಿಗ್ಹೋದುದನು ಕೇಳಿವಾರಿಜಾಸ್ತ್ರವನು ಎದೆಗೇರಿಸೆಮ್ಮನು ಬಿಡದೆಹೋರುವನು ಅಹÉೂೀ ರಾತ್ರಿಯಲಿ ತಪಿಸುತ 8 ಶ್ಲೋಕ ನೀಲಕುಂತಳೆ ಕೇಳು ನಿಮ್ಮ ಮನೆಯೊಳಾ ನೆಲುವಿನ ಮ್ಯಾಲಿನಪಾಲು ಬೆಣ್ಣೆಯ ಕದ್ದು ಮೆದ್ದು ಬಹಳ ಕಾಲಂಗಳಂ ಕಳೆದೆನೆಬಾಲೆ ಮನ್ಮಥಬಾಣದೆಚ್ಚು ತಪಿಸೆ ಬಹು ಬಗೆಯಲಿಂದುಳುಹಿದಲೋಲಲೋಚನೆ ನಿಮ್ಮೊಳಾನು ಬಹಳ ಜಾರತ್ವಮಂ ಮಾಳ್ಪೆನೇ ಪದ ಬಟ್ಟಗಂಗಳೆ ನಿಮ್ಮ ಬಿಟ್ಟು ಘಳಿಗಿರಲಾರೆದುಷ್ಟ ಕಂಸನು ಕರೆಸಲುಅಟ್ಟಿದರೆ ಪೋಗದಿರೆ ಸಿಟ್ಟಿನಿಂದಲಿ ವ್ರಜಕೆಅಟ್ಟುಳಿಯ ಮಾಡುವನು ಅಂಬುಜಸುಗಂಧಿಯರೆ 9 ಶ್ಲೋಕ ಪತಿ ಸುತ ಪಿತೃ ಮುಖ್ಯ ಭ್ರಾತೃ ಬಾಂಧವರು ಎಂಬಅತಿಶಯ ನಮಗಿಲ್ಲ ಆಲಿಸೋ ಮಾತನೆಲ್ಲರತಿಪತಿಪಿತ ನೀನೇ ರಾತ್ರಿಯೊಳು ಕೊಳಲನೂದೆಕ್ಷಿತಿಪತಿ ನಿನ್ನೆಡೆಗೆ ಕ್ಷಿಪ್ರದಿಂ ಬಂದೆವಲ್ಲೊ ಪದ ಬಾಲತನದಲಿ ಯಮುನಾ ತೀರದಲಿ ನೀ ವತ್ಸ-ಪಾಲನೆಯ ಮಾಡುತಿರಲು ಆಕಾಲ ಮೊದಲಾಗಿ ಈ ವ್ಯಾಳೆ ಪರಿಯಂತರವುಕಾಲುಘಳಿಗಗಲದಿಹ ಕಾಂತೆಯರ ತ್ಯಜಿಸುವರೆ10 ಶ್ಲೋಕ ಪರಿಪರಿಯಲಿ ನಿಮ್ಮ ಪಾಲಿಸಿ ನೋಡೆ ಮುನ್ನಕರುಣಕೆ ಕೊರತಿಲ್ಲ ಕಾಂತೆ ಕೇಳೆನ್ನ ಸೊಲ್ಲತ್ವರಿತದಿ ಬಾರದಲೆ ತಡೆದು ನಾ ನಿಂತರಲ್ಲೆಸರಸಿಜಭವ ಮಾರರಾಣೆ ಕಾಣೆ ಪ್ರವೀಣೆ ಪದ ಕ್ಲುಪ್ತ ಕಾಲಕೆ ಬಂದುನೆರೆಯದಿದ್ದರೆ ನಾನು ಪರಮ ಪುರುಷೋತ್ತಮನೆ11 ಶ್ಲೋಕ ಮಾರನೆಂಬುವನಂದೆ ಮಡಿದನು ಶಿವನ ಮೂರನೆ ಕಣ್ಣಿಲಿನಾರೇರಿಲ್ಲದೆ ನಾಭಿಯಿಂದ ಪಡೆದ ಆ ಬ್ರಹ್ಮನೆಂಬಾತನ ನಾರಿ ಈರ್ವ ಕುಮಾರರಾಣೆ ಹರಿಯು ತಾನಿಟ್ಟನೇನೆಂಬೆವೆಮಾರಿ ಹೊರಗಿನ ಹೊರಗೆ ಹೊಯಿತೆಂಬೊ ತೀರಾಯಿತೆ ಭಾವುಕಿ ಪದ ಹಲವು ಮಾತುಗಳ್ಯಾಕೆ ಜಲಜಾಕ್ಷ ನಿನ್ನ ಪದನಳಿನಗಳ ನೆರೆ ನಂಬಿಹಒಲುಮೆಯಲ್ಲಿರುತಿಪ್ಪ ಲಲನೆಯರನೆಲ್ಲರನುಸಲಹೊ ಸಲಹದೆ ಮಾಣು ರಂಗವಿಠಲರೇಯ12
--------------
ಶ್ರೀಪಾದರಾಜರು
ಮಾನವ ಪ ಗರುವವೇತಕೆ ನಿನಗೆ ಎಲೆ ಮಂಕು ಜೀವಅ ರೂಪದಲಿ ಮನ್ಮಥನೆ ಶಾಪದಲಿ ಗೌತಮನೆಕೋಪದಲಿ ದೂರ್ವಾಸ ಮುನಿಯೆ ನೀನುತಪದಲ್ಲಿ ವ್ಯಾಸನೆ ಕೃಪೆಯಲ್ಲಿ ಬಲೀಂದ್ರನೆನಿಪುಣತ್ವದಲಿ ನಾರದ ಮುನಿಯೆ ನೀನು 1 ಯತಿಯಲ್ಲಿ ಅಗಸ್ತ್ಯನೆ ಕ್ಷಿತಿಪರಲಿ ಜನಮೇಜಯನೆಗೀತದಲಿ ಗಂಧರ್ವನೇ ನೀನುವ್ರತದಲ್ಲಿ ಲಕ್ಷ್ಮಣನೆ ಮತಿಯಲ್ಲಿ ಕಶ್ಯಪನೆವಿತರಣ ಗುಣದಲಿ ಯಮಧರ್ಮನೆ ನೀನು 2 ಮಾನವ 3 ಕೊಡುವುದಕೆ ಕರ್ಣನೆ ನಡತೆಯಲಿ ಧರ್ಮಜನೆದೃಢ ಮನಸಿನಲಿ ರುಕ್ಮಾಂಗದನೆ ನೀನುಪಡೆಯಲ್ಲಿ ಕೌರವನೆ ನುಡಿಯಲ್ಲಿ ಗಾಂಗೇಯನೆಮಡದಿಯರ ಭೋಗಕ್ಕೆ ಸುರಪತಿಯೆ ನೀನು4 ಬಾಣದಲಿ ರಾಮನೇ ತ್ರಾಣದಲಿ ಭೀಮನೇಕೇಣದಲಿ ಶಿಶಪಾಲನೇನೊಗುಣದಲಿ ಸುಧರ್ಮನೇ ರಣದಲಿ ಶಲ್ಯನೆ ಆನುಗುಣ್ಯವಾದದಲಿ ನರಪತಿಯೆ ನೀನು5 ಛಲದಲ್ಲಿ ರಾವಣನೆ ಬಲದಲ್ಲಿ ವಾಲಿಯೇನಿಲುಗಡೆಯ ಮನದಲ್ಲಿ ದ್ರೋಣನೆ ನೀನುಕುಲದಲಿ ವಸಿಷ್ಠನೇ ಗೆಲುವಿನಲಿ ಪಾರ್ಥನೇಬಿಲುವಿದ್ಯೆಯಲಿ ಪರಶುರಾಮನೆ ನೀನು 6 ಶಕ್ತಿಯಲಿ ಹನುಮನೇ ಭಕ್ತಿಯಲಿ ವಿಭೀಷಣನೆಕೀರ್ತಿಯಲಿ ಹರಿಶ್ಚಂದ್ರರಾಯನೆ ನೀನುಅರ್ತಿಯಲಿ ಶುಕಮುನಿಯೆ ಸ್ಫೂರ್ತಿಯಲಿ ಸೂರ್ಯನೇಮುಕ್ತಿ ಸಾಧನಕೆ ಪ್ರಹ್ಲಾದನೆ ನೀನು7 ಗೋತ್ರದಲಿ ಬ್ರಹ್ಮನೇ ಸೂತ್ರದಲಿ ಕೌಶಿಕನೆಪಾತ್ರದಲಿ ವಾಲ್ಮೀಕಿ ಋಷಿಯೆ ನೀನುಮಾತಿನಲಿ ಗುರುಸುತನೆ ಜ್ಯೋತಿಯಲಿ ಬೃಹಸ್ಪತಿಯೆನೀತಿಮಾರ್ಗದಲಿ ಸಹದೇವನೇ ನೀನು 8 ಅಂಗದಲಿ ಅಜಮಿಳನೆ ಶೃಂಗದಲಿ ಮಾರುತನೆಕಂಗೊಳಿಪ ತನದಲ್ಲಿ ಕಾಮಸುತನೆಗಂಗೆಯನು ಪಡೆದಂಥ ನೆಲೆಯಾದಿಕೇಶವನಹಿಂಗದೆ ಭಜಿಸಿ ಪಾವನನಾಗು ಮನುಜ 9
--------------
ಕನಕದಾಸ
ಮಾನವ ಸಿಂಗನಾದನು ಪ ರಂಗಮಾನವ ಸಿಂಗನಾಗಲು ಭಂಗಾರ ಗಿರಿಯ ಶೃಂಗಗಳಲ್ಲಾಡೆ ಹಿಂಗದೆ ಎಂಟು ಮಾತಂಗ ಸಪುತ ದ್ವೀ- ಪಂಗಳು ಕಂಪಿಸೆ ವಿಗಡದಿ ಅ.ಪ. ವನಜ ಭವನಂದನರಾನಂದದಿ ವನಧಿಯೊಳಿದ್ದ ವನಜನಾಭನ ವನಜಾಂಘ್ರಿ ದರುಶನಕ್ಕೋಸುಗದಿ ಘನ ವೈಕುಂಠ ಪಟ್ಟಣ ಸಾರೆ ವಿನಯರಲ್ಲದ ಜಯನು ವಿಜಯನವ- ರನು ತಡೆಯಲು ಮುನಿದೀರ್ವರಿಗೆ ದನುಜಾಂಗದಿಂದ ಜನಿಸಿರೋ ಎಂದು ಮುನಿಗಳು ಶಾಪವನ್ನು ಈಯೆ 1 ದಿಕ್ಕು ಎಂಟರೊಳು ಕಕ್ಕಸರೆನಿಸಿ ದಿಕ್ಕು ಪಾಲಕರ ಲೆಕ್ಕಿಸದಲೇವೆ ಸೊಕ್ಕಿ ತಿರುಗುವ ರಕ್ಕಸರಾಗಲು ಮುಕ್ಕಣ್ಣ ಬಲದಿಂದಕ್ಕೆ ಜದಿ ನಕ್ಕು ಪರಿಹಾಸ್ಯಕಿಕ್ಕಿ ಸರ್ವರನು ಮುಕ್ಕಿ ಮುಣಿಗಿ ಧರ್ಮಕೆ ವಿರೋಧಿಸಿ ಸಿಕ್ಕದಂತಲ್ಲಲ್ಲಿ ತುಕ್ಕುತಿರೆ 2 ಇತ್ತ ಶಾಪದಿಂದಲಿತ್ತಲೀರ್ವರಿಗಾ ಪೊತ್ತ ಸುರಾಂಗದಲಿತ್ತಲೋರ್ವವನಿಯು ಕಿತ್ತು ಒಯ್ಯಲು ಬೆಂಬುತ್ತಿ ಹರಿಯು ಕೊಲ್ಲೆ ಇತ್ತ ಹಿರಣ್ಯನುನ್ಮತ್ತದಿಂದ ಸುತ್ತುತಿರುವಾಗ ಪುತ್ರನು ಭಾಗವ ತ್ತೋತ್ತಮನಾಗಿ ಸರ್ವೋತ್ತಮ ಬ್ರಹ್ಮನ ಕರವ ಲೋ- ಕತ್ರಯವರಿವಂತೆ ಬಿತ್ತಿದನು3 ಸೊಲ್ಲು ಕೇಳುತಲಿ ಎಲ್ಲೆಲೊ ನಿನ್ನ ದೈ- ವೆಲ್ಲೊ ಮತ್ತಾವಲ್ಲೆಲ್ಲಿಹನೆನುತಲಿ ನಿಲ್ಲದರ್ಭಕನ್ನ ಕಲ್ಲು ಕೊಳ್ಳಿ ಮುಳ್ಳು ಕರವಾಳ ಬಿಲ್ಲು ನಾನಾ ಎಲ್ಲ ಬಾಧೆಯನ್ನು ನಿಲ್ಲದೆ ಬಡಿಸೆ ಎಳ್ಳನಿತಂಜದೆ ಎಲ್ಲೆಲ್ಲಿಪ್ಪನೆಂದು ಸೊಲ್ಲನು ಬೇಗದಿ ಸಲ್ಲಿಸೆನೆ 4 ಏನು ಕರುಣಾಳೊ ಏನು ದಯಾಬ್ಧಿಯೊ ಏನು ಭಕ್ತರಾಧೀನನೊ ಏನೇನು ನಾನಾ ಮಹಿಮನೊ ಏನೇನೊ ಏನೊ-ಈ- ತನ ಲೀಲೆ ಕಡೆಗಾಣರಾರೊ ದಾನವಾಭಾಸನ ಮಾನಹಾನಿ ಗೈಯೆ ಸ್ಥಾಣು ಮೊದಲಾದ ಸ್ಥಾನದಲ್ಲಿ ಸರ್ವ ದೀನರಿಗೆ ದತ್ತ ಪ್ರಾಣನಾಗ 5 ತುಟಿಯು ನಡುಗೆ ಕಟ ಕಟ ಪಲ್ಲು ಕಟನೆ ಕಡಿದು ನೇಟನೆ ಚಾಚುತ ಪುಟಪುಟ ನಾಸಪುಟದ ರಭಸ ಕಠಿನ ಹೂಂಕಾರ ಘಟುಕಾರ ನಿಟಿಲನಯನ ಸ್ಫುಟಿತ ಕಿಗ್ಗಿಡಿ ಮಿಟಿಯೆ ಹುಬ್ಬಿನ ನಿಟಿಲ ರೋಷದಿ ಮಿಟಿಯೆ ಚಂಚು ಪುಟದಂತೆ ರೋಮ ಚಟುಲ ವಿಕ್ರಮುದ್ಧಟ ದೈವ 6 ನಡುಕಂಭದಿಂದ ಒಡೆದು ಮೂಡಿದ ಕಡು ದೈವವು ಸಂಗಡಲೆ ಚೀರಲು ಬಡ ಜೀವಿಗಳು ನಡುಗಿ ಭಯವ ಪಡುತಲಿ ಬಾಯ ಬಿಡುತಿರೆ ಕಡೆಯೆಲ್ಲೊ ಹೆಸರಿಡಬಲ್ಲವರಾರೊ ತುಡುಗಿ ದುಷ್ಟನ ಪಡೆದ ವರವ ಪಿಡಿದು ಅವನ ಕೆಡಿಸಿ ಹೊಸ್ತಿಲೊ- ಳಡಗೆಡಹಿದನು ಪವಾಡದಲಿ 7 ವೈರಿಯ ಪಿಡಿದು ಊರುಗಳಲ್ಲಿಟ್ಟು ಘೋರ ನಖದಿಂದ ಕೊರೆದು ಉದರವ ದಾರುಣ ಕರುಳಹಾರ ಕೊರಳಲ್ಲಿ ಚಾರುವಾಗಿರಲು ಮಾರಮಣ ಸಾರಿಗೆ ಭಕ್ತಗೆ ಕಾರುಣ್ಯಮಾಡಿ ಶ್ರೀ ನಾರೀಶನಾನಂದದಿ ತೋರುತಿರೆ ಸುರ- ವರರ್ನೆರೆದು ಅಪಾರ ತುತಿಸಿ ಪೂ- ಧಾರೆ ವರುಷ ವಿಸ್ತಾರೆರೆಯೆ 8 ನೃಕೇಸರಿಯಾಗೆ ಭಕುತಗೆ ಬಂದ ದುಃಖವ ಕಳೆದು ಸುಖವನೀವುತ್ತ ಅಕಳಂಕದೇವ ಲಕುಮಿಪತಿ ತಾ- ರಕ ಮಂತ್ರಾಧೀಶ ಸುಕುಮಾರ ಅಖಿಳ ಲೋಕಪಾಲಕ ಪ್ರಹ್ಲಾದಗೆ ಸಖನಾಗಿ ಇಪ್ಪ ಸಕಲ ಕಾಲದಿ ಭಂಜನ ವಿಜಯವಿಠ್ಠಲ ಮುಕುತಿ ಈವ ಭಜಕರಿಗೆ9
--------------
ವಿಜಯದಾಸ
ಮಾಯ ಮೋಹಿಗಳಿಗೆಲ್ಲ ಭವಬಂಧಳಿಯುವುದೇ ಕಾಯ ಶುದ್ಧಲ್ಲದವಗೆ ಕರ್ಮಬಂಧ್ಹರಿಯುವುದೇ ಪ ಮುಣುಗು ಕಲಿತಿರುವನು ದಣಿವಿನಿಂ ಮುಕ್ತಹನೆ ಕುಣಿತಕಲಿತಿರುವವ ಮನದಿ ನಾಚುವನೆ ಒನಪು ಕಲಿತಿರುವಗೆ ಮನಸಿಜ ದೂರನೆ ಮನೆಮನೆ ತಿರುಗುವನು ಘನತೆಗೆ ಬಹನೆ 1 ಪಾದ ತಾಡಣೆಯು ತಪ್ಪುವುದೆ ಕೇಡುಗಾರಿಗೆ ಸುಖದ ಜಾಡು ತಿಳಿಯುವುದೆ ಕಾಡಡವಿಲಿರುವವಗೆ ರೂಢಿಯ ಸುದ್ದಿಹುದೆ ನಾಡ ಮಾತಾಡುವಗೆ ಕೇಡು ತಪ್ಪುವುದೆ 2 ನಿಂದಕಗೆ ಮುಂದಿನ್ನು ಹಂದಿಜನ್ಮ ತಪ್ಪುವುದೆ ಛಂದಸ್ಸರಿಯದವಗೆ ಕವಿತದಂದ ತಿಳಿಯುವುದೆ ಮಂದಿಗೋಷ್ಠಿಗ್ಹೋಗುವಗೆ ಕುಂದೊದಗದಿರುತಿಹ್ಯದೆ ತಂದೆತಾಯನ್ಹಳಿಯುವಗೆ ಬಂಧ ತಪ್ಪುವುದೆ 3 ಮೋಸಕಾರಿಗೆಮಶಾಪವು ತಪ್ಪುವುದೆ ಆಶಕಾರಿಗೆ ಮಹನಾಶ ಬಿಡುತಿಹ್ಯದೆ ದೇಶದೇಶ ತಿರುಗುವಗೆ ಘಾಸಿಯು ತಪ್ಪುವುದೆ ದಾಸಜನ ದೂಷಕಗೆ ಈಶನೊಲಿಮಿಹ್ಯದೆ 4 ಸುಗುಡಿಗೆ ಪತಿಸರಸ ಸೊಗಸಾಗಿ ಕಾಣುವುದೆ ಜಗಳಗಂಟಿಗೆ ವ್ರತದ ಬಗೆಯುಶೋಭಿಪುದೆ ಸುಗುಣೆಯರೊಡನಾಟ ಷಂಡನಿಗೆ ಸಲ್ಲುವುದೆ ಸುಗುಣ ಸಂಗಿಲ್ಲದೆ ನರಕ ಭುಗಿಲು ತಪ್ಪುವುದೆ 5 ಕಪಟತ್ವ ನೀಗದೆ ತಪವೃದ್ದಿಯಾಗುವುದೆ ಕೃಪಣತ್ವ ಬಿಡದವಗೆ ತಾಪತ್ರಳಿಯುವುದೆ ಜಪವಿಲ್ಲದೆ ವಿನಾ ಸುಫಲದೊರಕುವುದೆ ಗುಪಿತವನು ತಿಳಿಯದವಗಪರೋಕ್ಷವಿಹ್ಯದೆ 6 ಮಾನವನ ಗುಣರಿಯದೆ ಜ್ಞಾನ ಸ್ಥಿರವಾಹುದೆ ಜ್ಞಾನವಿಲ್ಲದೆ ಬೇರೆ ಧ್ಯಾನ ಸಿದ್ದಿಪುದೆ ದೀನನಾಥ ಮಮ ಪ್ರಾಣೇಶ ಶ್ರೀರಾಮನಡಿ ಖೂನವರಿಯದೆ ಮುಕ್ತಿ ಜಾಣೆ ಸುಖಬಹುದೆ 7
--------------
ರಾಮದಾಸರು
ಮಾರಕೋಟಿ ಸುಂದರಾಂಗ ಪ ಸರುವಾಂತರಯಾಮಿಯೆಂದು ಶೃತಿಯು ನಿನ್ನ ಪೊಗಳವೆಅ.ಪ ಬಲ್ಲಿದನೀ ಒಳಗೆ ಇದ್ದು ಬರಿದೆ ಬನ್ನಬಡಿಸುವರೆ 1 ಶರಣಾಗತ ಪ್ರಾಣನೆಂಬ ಬಿರುದು ಪೋಗದೆ ನಿನಗೆ 2 ಮ್ಮಪ್ಪಕಾಯೊ ಶ್ರೀ ಗುರುರಾಮ ವಿಠಲರಾಯ ಸ್ವಾಮಿ 3
--------------
ಗುರುರಾಮವಿಠಲ
ಮಾರಮಣಾ ಹರಿ ಗೋವಿಂದಾ ಬಾರೋ ಕೊಂಡಾಡಿ ಪಡೆವೆನಾನಂದ ಪ ನಾರದಾದಿ ಮುನಿ ಬೃಂದಾನಂದ ಬಾರೋ ಭಕ್ತಕುಮುದೇಂದು ಮುಕುಂದಾ ಅ.ಪ ನಾನಾ ಜನುಮಗಳೊಳಗುದಿಸಿದೆವಯ್ಯ ಏನೆಂದು ಪೇಳಲಿ ನಿನಗೆ ಜೀಯ ನೀನೆನಗಿತ್ತಾ ತನುಗಳನಳೆಯಲು ಏನಪೇಳಲೈ ಭೂಮಿಗೆ ನಾಲ್ಮಡಿ ಸಾನುರಾಗದಿ ಜನನಿಯಿತ್ತಾ ಘೃತ ಪಾನಕ್ಷೀರ ವಾರಿಧಿಗಿಮ್ಮಡಿಯೋಳ್ ಬಾ 1 ನೋಡಿ | ಮನಕರಗದೆ ರುಕುಮಿಣಿ ರಮಣಾ ಮೃಡ ವಂದಿತ ಸರಸಿಜ ಚರಣಾ ಪಾಡೀ ಕೊಂಡಾಡುತಿರ ದೇಕೆ ನಿಷ್ಕರುಣಾ ಬೇಡಿದರ್ಗೆ ಕೈನೀಡುತೆ ದಾನವ ಮಾಡಲಿಲ್ಲವದರಿಂದ ದರಿದ್ರತೆ ಪೀಡಿಸವೈ ನಾ [ಮಾಡಿದ] ಪಾತಕವಾರ್ಜಿಸಿ ಜನುಮಂಗಳ ಪಡೆದೆನೊ ಬಾ 2 ಸುನಾಮ ನಮಿಸುವೆ ಸುಗುಣ ವಿರಾಮ ಸನ್ನುತ ವರಮಾಧವ ಕೋಮಲಾಂಗ ಸೋಮಶೇಖರಾಧಿಪ ಸುಮಚರಣವ ನೋಳ್ಪೆನೋ ಬಾ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮಾರುತನ ನಿಜ ಜಾಯೆ ಪ ಬಾರಿ ಬಾರಿಗೆ ನಿನ್ನ ಚರಣವ ಸ್ಮರಿಸುವೆ ಚಾರುಮತಿಯನೀಯೆ ಅ.ಪ. ಮೂರನೆ ಯುಗದಲಿ ಧೀರ ದ್ರುಪದನಧ್ವರದೊಳುದಿಸಿ ಶೂರ ಪಾಂಡವರೈವರ ವೀರಪತ್ನಿಯು ನೀನೆನಿಸಿ ಕೌರವನ ಸಭೆಯಲಿ ಸೀರೆಯನು ಸೆಳೆಯಲು ನೀ ಮಾರಪಿತನ ಭಜಿಸಿ ಭೂರಿವಸನ ಪೊಂದಿದೆ ಧೀರೆ 1 ವೀರ ಮಾರುತಿಯ ಗದೆ ಕುರುಪನ ಊರು ಮುರಿಯಲೆಂದು ವಾರಿಧಿ ಮಿತಿ ಮೀರುತಿರೆ ನೀ ಸಾರಿದೆ ಪತಿಗಳ ಗಂಭೀರೆ 2 ಆ ರಣಾಗ್ರದಿ ಕ್ರೂರ ದುಶ್ಶಾಸನ ಸಾರಿ ಬರುವುದ ನೋಡಿ ದಾರಿ ಹಿಡಿದಪ್ಪಳಿಸವನ ದೋರೆ ಕರುಳ ಹಿರಿದೀಡ್ಯಾಡಿ ಮೋರೆಯಿರಿದು ಪಲ್ಮುರಿದು ಹಂಗಿಸಿದಂಥ- ಸತಿ 3
--------------
ರಂಗೇಶವಿಠಲದಾಸರು