ಒಟ್ಟು 562 ಕಡೆಗಳಲ್ಲಿ , 86 ದಾಸರು , 513 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೆಂದೆನುತ ಬಂದೆನು ನಾ ಪ ಬಂದಾ ಬಂದಜನಕಾನಂದ ಕೊಡುತಲಿ ವಂದಿಸಿ ಭಜಿಪರಘಂಗಳ ಕಳೆದು ಸಲಹುವಿಯೋ ಸದ್ಗುರು ರಾಘವೇಂದ್ರಾ 1 ಭೀತರಾಗುತ ನಿನ್ನಡಿಗಳ ಸೇವಿಸಲು ಆದರದಿಂದಲವರ ಭವ-ಭಯವ ಪರಿಹರಿಸಿ ಸಲಹಿ ಉದ್ಧರಿಸುವೆ ಗುರುರಾಘವೇಂದ್ರಾ 2 ದುಷ್ಟ ಜನರು ಕೂಡಿ ಕೆಟ್ಟಯೋಚನೆ ಮಾಡಿ ಗುಟ್ಟಾಗಿ ನಿಮ್ಮ ಪರೀಕ್ಷಿಸ ಬೇಕೆಂಧು ಜೀವ ವಿದ್ದವನ ನಿರ್ಜೀವನೆನುತ ತರಲು ಸತ್ಯದಿ ನಿರ್ಜೀವನನ್ನಾಗಿ ಮಾಡಿದೆ ಪ್ರಭವೆ 3 ಕುಹಕಿ ಜನರು ಎಲ್ಲಿ ವನಕೆತುಂಡನು ತಂದು ಚಿಗುರಿಸ ಬೇಕೆನುತಲಿ ಕೇಳಲು ಕಮುಂಡದೊಳಿದ್ದ ದಿವ್ಯೋದಕ ಪ್ರೋಕ್ಷಿಸಿ ಚಿಗುರಿಸಿ ಫಲ ಮಾಡ್ದೆ ಅದ್ಭುತ ಮಹಿಮಾ 4 ಮಾವಿನರಸದೊಳು ಮುಳುಗಿ ಮೃತನಾದಾ ಬಾಲಕನಿಗೆ ಪ್ರಾಣಗಳನಿತ್ತೆ ದಯದೀ ಭುವಿಯೊಳು ನಿಮ್ಮ ಮಹಿಮೆಗೆಣೆಕಾಣೆ ಮಂತ್ರಾಲಯದೊರೆ ಗುರು ರಾಘವೇಂದ್ರಾ 5 ``ಶ್ರೀರಾಘವೇಂದ್ರಾಯ ನಮಃ'' ಎಂಬ ದಿವ್ಯನಾಮವ ಮನುಜನು ಪ್ರತಿದಿನ ಭಜಿಸುತ್ತಲಿರಲು ಘೋರ ದುರಿತಗಳೆಲ್ಲ ದೂರವ ಮಾಡಿ ನಿನ್ನ ಚರಣಸೇವಕರನ್ನು ಸಲಹುವಿಯೋಗುರುವೇ6 ಶ್ರೀ ರಘುರಾಮನ ಪ್ರಿಯಭಕ್ತನಾದ ಶ್ರೀ ಗುರು ರಾಘವೇಂದ್ರರ ಚರಣ ಭಜಿಸಿರೊ ನಂಬಿದ ಭಕ್ತರ ಬೆಂಬಿಡದೆ ಸಲಹುವ ಘನ್ನಕೃಪಾನಿಧಿ ನಮ್ಮ ಗುರು ರಾಘವೇಂದ್ರಾ 7
--------------
ರಾಧಾಬಾಯಿ
ವ್ಯಗ್ರಬುದ್ಧಿಯು ನಿನಗೆ ಶ್ರೀಹರಿಯೆ ಸುಗ್ರಾಸನವು ನನಗೆ ಅಗ್ರದೈವರು ನೀನೇ ಗತಿಯೊ ಉಗ್ರತಪದಲಿ ಭಜಿಸುವಾತ್ಮಗೆ ಉಗ್ರರೂಪವ ತೋರಿ ವಿಧವಿಧಾ- ನುಗ್ರಹಿಪೆ ಅಮೃತಾನ್ನ ಭೋಜನ ಪ ಜನಿಸಲಮೃತ WಟÀವು ಸಿಂಧುವಿನೊಳು ವನಜನಾಭನೆ ವಂಚಿಸಿ ದನುಜ ಕಣಕದು ಇಲ್ಲದಾಗಿ ಅನುಮಿಷರಿಗತ್ಯಂತಮಿಕ್ಕೆ ಘನಹರುಷ ತೋರಿದೆಯು ಸುರರಿಗೆ ನಿನಗೆ ಮೆಲ್ಲಲು ಇರಿಸಲಿಲ್ಲಾ 1 ಧೀರ ದೂರ್ವಾಸ ಮುನಿ ಶಿಷ್ಯರ್ವೆರಸಿ ಹೋರಿದಾಹಾರಕ್ಕಾಗಿ ನೀರಜಾಕ್ಷಿಯು ಘೋರ ಬಂತೆಂದಾ ರಾತ್ರಿಯಲಿ ನೆನೆಯೆ ನಿನ್ನನು ಆ ರಭಸದೊಳು ಬಹುನಿಮಿಷÀದಿ ಸೂರಿ ಮಾಡ್ದೆಯೋ ಇಷ್ಟು ಭೋಜನಾ 2 ಸಖ ಸುದಾಮನು ಕಾಣಲು ಶ್ರೀಹರಿಯೆ ಭಕುತಿ ನೋಡಿ ಮೆಚ್ಚಿದಿ ಮುಕುತಿದಾಯಕ ಪರಮ ಪುರುಷನೆ ಭಕುತಿ ಭೋಜನವಿತ್ತೆನಗೆ ಸದಾ ಪ್ರಕಟ ನರಸಿಂಹವಿಠಲನೆ ಬಲು ನಿಕಟಮನ ಕೊಡು ನಿನ್ನ ಭಜಿಸುವಾ 3
--------------
ನರಸಿಂಹವಿಠಲರು
ವ್ಯರ್ಥವಾಯಿತೆನ್ನಿ ಜನ್ಮ ಸ್ವಾರ್ಥವಿಲ್ಲದೆ ಪರ ಕೃತ್ತಿ ವಾಸನ ಪೂಜೆಯನ್ನು ಮಾಡದೆ ಪ ಹಿಂದೆ ಜನನಿ ಗರ್ಭವಾಸದಿಂದ ಹೊರಟು ಬಂದ ಮೇಲೆ ಕೊಂದು ದಿವಸನಾನು ನಿಷ್ಠೆಯಿಂದ ಲಿರ್ದು ಆಗಮೋಕ್ತ ದಿಂದ ಶಿವಗೆ ಜಲದಿ ರುದ್ರದಿಂದ ಜಳಕ ಗೈದು ಶ್ರೀ ಗಂಧ ಪುಷ್ಪ ಪತ್ರೆಯಿಂದ ಪೂಜೆಯನ್ನು ಮಾಡದೆ 1 ಪುಣ್ಯನದಿಯು ಪುಣ್ಯಕ್ಷೇತ್ರ ಪುಣ್ಯ ಭೂಮಿಯಲ್ಲಿ ವಾಸ ಪುಣ್ಯಕಥೆಯು ಪುಣ್ಯತೀರ್ಥ ಸ್ನಾನವಿಲ್ಲದೆ ಪುಣ್ಯ ಮೂರ್ತಿಯಲ್ಲಿ ಧ್ಯಾನ ಪುಣ್ಯಪುರುಷರೊಡನೆ ಸಂಗ ಪುಣ್ಯ ಕಾಲದಲ್ಲಿ ಶಿವನ ಪೂಜೆಯನ್ನು ಮಾಡದೆ 2 ಮಂಡೆ ಜುಟ್ಟ ಸೂತ್ರವನ್ನು ಖಂಡಿಸಿರ್ದುಯತಿಎನುತ್ತ ದಂಡವನ್ನು ಧರಿಸಿ ಪೀತ ಕೌಶೇಯ ವಸನವನ್ನು ಪೊದ್ದು ಮೊಂಡತನದಿ ಸಕಲ ವಿಷಯ ಭೋಗವನು ಭೋಗಿಸುತ್ತ ಮಂಡೆ ಬೋಳನಾದರೇನು ಮನವ ಬÉೂೀಳಮಾಡದೆ 3 ಕಾಮಾರಿಯನ್ನು ಆಗಮೋಕ್ತದಿಂದ ಪೂಜೆಯನ್ನು ಮಾಡಿ ಘೋರಪಾತಕಂಗಳನು ಸುಟ್ಟುಸೂರೆಮಾಡದೆ 4 ಬೆಟ್ಟದೊಳಗನಂತ ವ್ಯಕ್ಷ ಹುಟ್ಟಿಮಡಿದ ವೊಲು ಜನ್ಮ ನಷ್ಟ ವಾಯ್ತು ವಿಧಿಯು ಬರೆದಿಟ್ಟ ದುರ್ಲಿಖಿತವೆಲ್ಲ ತುಟ್ಟಿಸಿತ್ತು ತಿಳಿದು ಶಿವನ ಮುಟ್ಟಿ ಪೂಜಿಸಾದರಿನ್ನು ಕೆಟ್ಟು ಹೋಗ ಬೇಡ ಲಕ್ಷ್ಮೀಪತಿಯ ಸ್ಮರಣೆಮಾಡದೆ 5
--------------
ಕವಿ ಪರಮದೇವದಾಸರು
ಶಂಕರಾ ಪೊರೆಯಯ್ಯ ನಾ ನಿನ್ನ ಕಿಂಕರ ಪ ಪಂಕಜಾಸನಕುವರ ಮನದ ಶಂಕ ನಾಶಗೈಸಿ ಶೇಷಪ ರ್ಯಂಕಶಯನನ ಪಾದ ಪಂಕಜದೇಕ ಭಕುತಿಯನಿತ್ತು ಸಲಹಯ್ಯಅ.ಪ ನಿಟಿಲನಯನ ಧೂರ್ಜಟಿಯೆ ಸೋಮಧರಾ ಜಟಾಜೂಟನೆ ಕಠಿಣವೆನ್ನಯ ಕುಟಿಲಮತಿಯ ಜಟಿಲಕಳೆದು ನಿಷ್ಕುಟಿಲ ಮನದೊಳು ವಿಠಲಮೂರ್ತಿಯ ಧೇನಿಸಲು ಹೃ ತ್ತಟದಿ ದಿಟಮನ ಕೊಟ್ಟು ರಕ್ಷಿಸಯ್ಯ 1 ಘೋರ ದುರಿತಾಪಹಾರ ತ್ರಿಪುರಹರ ಕರುಣಾಸಮುದ್ರನೆ ನಿರುತ ಶ್ರೀಹರಿಚಾರುಚರಣಸ್ಮರಣೆ ಕರುಣಿಸಿ ಪೊರೆಯೋ ಗುರುವರ ಸುರನದೀಧರ ಪಾರ್ವತೀವರ ಕರಿಗೊರಳ ಕೈಲಾಸಮಂದಿರ2 ಸರ್ಪಭೂಷಣ ಶೂಲಿ ಡಮರುಧರ ಕಂದರ್ಪಹರ ಶಿವ ಸರ್ಪಗಿರಿ ಶ್ರಿ ವೆಂಕಟೇಶಗೆ ಸರ್ವಭಕ್ತಿ ಸಮರ್ಪಿಸಯ್ಯ ಆಪತ್ತುಹರ ಸಂಪತ್ತುಕರ ಶಾರ್ವರೀಕರಧರ ಶುಭಕರ 3 ಶಂಬರಾಂತಕವೈರಿ ಭಸಿತಧರ ಬೆಂಬಿಡದೆ ಸಲಹೊ ಶಂಭು ಶಚಿಪತಿಬಿಂಬ ಗುರುವರ ಸಾಂಬ ಪೊಂಬಸುರಕುವರ ತ್ರ್ಯಂಬಕಾ ತ್ರಿಪುರಾಂತಕ ಶುಕ 4 ಗಿರೀಶ ಸುರವರ ರುಂಡಮಾಲಾಧರ ಕರಿಚರ್ಮಾಂಬರ ನಿರುತ ಹೃದಯಸದನದೊಳನ ವರತ ಉರಗಾದ್ರಿವಾಸ ವಿಠಲನ ಚರಣಸರಸಿಜಮಧುಪ- ನೀ ಸುಖ ಸವಿದು ಸೇವಿಪ ವೈಷ್ಣವಾಗ್ರಣಿ5
--------------
ಉರಗಾದ್ರಿವಾಸವಿಠಲದಾಸರು
ಶರಣಾಗತ ರಕ್ಷಕ ಕರುಣಾಂಬುಧೆ ಪರಿಪಾಲಿಸುವ ಮೊರೆ ಪಂಕಜಾಕ್ಷ ಪೊರೆವುದು ಲೇಸು ನಿರಾಕರಿಸದೆ ಹರಿ ನಿನ್ನ ಚರಣಕಮಲವನು ಸ್ಮರಿಸುತಲಿರುವೆನು ಪ ನಂದನಂದನ ಮುನಿವೃಂದ ವಂದಿತ ರಾಕೇಂದುವದನ ಗೋ ವಿಂದ ಕೃಷ್ಣಾ ಮಂದರಧರ ಮುಚುಕುಂದವರದ ಸಂ- ಕುಂದರದನ ಶ್ರೀ ಮುಕುಂದ ಶೌರಿ ಬಂಧನ ಮೋಚನ ಆಪದ್ಭಾಂಧವ ಶೌರೇ 1 ವೇಣುಗೋಪಾಲ ಪುರಾಣಪುರುಷ ಸುಮ- ಬಾಣಜನಕ ಸಾಮಗಾನ ಲೋಲ ಮಾಧವ ಚತು- ವಿನುತ ವiಹಾನುಭಾವ ಶ್ರೀನಿ- ವಾಸಾಚ್ಯುತಾಶ್ರೀತ ಕಲ್ಪತರು ಚಕ್ರಪಾಣಿ ಪದ್ಮೋದರ ಘೋರರೂಪ ಭಂಜನ ದೇವಾದಿದೇವ ವಿಷ್ವಕ್ಸೇನ ಜನಾರ್ದನ ಶ್ರೀ ವತ್ಸಲಾಂಛನ 2 ಹರಿಸರ್ವೋತ್ತಮ ಮರುತಾಂತರ್ಗತ ಪರಮಾತ್ಮ ಗರುಡವಾಹನ ಶುಭಕರಚರಿತ ಮುರಸೂದನಾನಂತ ಮುಕ್ತಿದಾಯಕ ಜಗದ್ಭರಿತ ಕೇಶವ ಕೌಸ್ತುಭಾಲಂಕೃತ ವರದ ಅಹೋಬಲ ಗಿರಿವಾಸ ವಸುಧೇಶ ಭಾಸುರ ಕೀರ್ತಿಸಾಂದ್ರ 3
--------------
ಹೆನ್ನೆರಂಗದಾಸರು
ಶಿವ ಕರುಣಿಸಯ್ಯ ಚಂದ್ರಶೇಖರ ನೀನೆನ್ನೊಳೊಲಿದು ಪ ತಾಪ ಹರಣ ಮಾಡು ನಿನ್ನ ದಿವ್ಯಚರಣಗಳಿಗೆ ನಮಿಪೆನುರಗಾಭರಣ ಶರಣು ಶರಣು ಶರಣು ಅ.ಪ. ಕಾಳಭೈರವ ಶಂಭು ಶಂಕರ ಗಿರಿಜೆಯಾಣ್ಮಕೇಳು ಕೇಳು ನಿನ್ನ ಕಿಂಕರಹೂಳಿ ಷಡ್ರಿಪುಗಳನು ಮನದಲಿಊಳಿ ನಿಜಜ್ಞಾನವನು ಸಜ್ಜನರೋಳಿಯಲಿ ನಿಲಿಸುತ್ತ ನಿತ್ಯದಿಬಾಳಿ ತಾಳಿ ಎನುವಂತೆ 1 ನಂಟನಯ್ಯ ಭಕ್ತ ಜನಕೆ ಇನ್ನು ಮಿತಿಯುಂಟೆ ನಿನ್ನಯ ಕರುಣಲಹರಿಂಗೆಎಂಟು ದಿಕ್ಕನು ಸುಡುವ ವಿಷವನುಕಂಠದಲಿ ಧರಿಸಿ ಜಗತ್ತಿನಕಂಟಕವನು ಪರಿಹರಿಸಿದಂಥಬಂಟ ನೀನೈ ಮಹಾದೇವಾ 2 ಮೂರು ಊರುಗಳನು ಸಂಹಾರಾಮಾಡಿ ಉಳಿಸಿದಿಘೋರ ಸಂಕಟದಿಂದ ಜಗಪೂರಸೂರಿ ಬೊಮ್ಮನ ಮತ್ತೆ ಗದುಗಿನವೀರನಾರಾಯಣನ ಕೂಡಿನಾರಿ ಸತಿಯನಸೂಯಳನ್ನುದ್ಧಾರ ಮಾಡಿದ ರೀತಿಯಲ್ಲಿ 3
--------------
ವೀರನಾರಾಯಣ
ಶಿವರಗಳೆ ಉದಯದಲೆದ್ದು ಸದಾಶಿವ ಎನ್ನಿ |ಅದರಿಂದಲಿ ಸದ್ಗತಿಗಿರುವದು ಒಂದೇ ಹಾದಿ |ನಾನಾ ಗ್ರಂಥಗಳ್ಯಾತಕ ಓದೀ |ಓದಿದರೋದಲಿ ಬೇಕಧ್ಯಾತ್ಮಾ ||ಸಾಧಿಸಿ ಬರುವನು ಶಿವ ಸರ್ವೋತ್ತಮಾಸರ್ವೋತ್ತಮ ತಿಳಿದರೆ ಸಾಕು |ಅನೇಕ ಶಾಸ್ತ್ರಗಳೇತಕೆ ಬೇಕು |ಬೇಕೆಂಬೋದೇ ಬಿಡುವದೆ ಪರಮಾರ್ಥಲೋಕದ ಪರಿಯಲ್ಲಿರುವದೆ ಸ್ವಾರ್ಥ |ಸ್ವಾರ್ಥಕೆ ಪರಮಾರ್ಥಕೆ ಬಹು ದೂರಾ |ಎರಡೂ ಸಮನಿಸಿದವನೇ ಧೀರಾ ||ಧೀರ ಉದಾರಗೆ ಆರ ಹಂಗಿಲ್ಲಾ |ಸೂರೆಗೊಂಡನು ಮೂಜಗವೆಲ್ಲಾ |ಎಲ್ಲರಿಗೆ ತಾ ಬಲು ಕಿರಿದಾಗಿ |ಬಲ್ಲತನದ ಬಡಿವಾರವ3ೀಗಿನೀಗಿ ನಿಶ್ಚಿಂತ್ಯಾದರ ತ್ಯಾಗಿ ||ತ್ಯಾಗವು ಬಲಿತರೆ ಅವನೇ ಯೋಗಿಯೋಗಿಗೆ ಮೂಲಾ ಐಕ್ಯದ ಮಾಟಾ |ಬೇಗನೆ ತಿಳಿಯದು ಜೀವ ಶಿವ ಕೂಟಾ |ಕೂಟವ ತಿಳಿಯದೆ ಯಾತರ ಜ್ಞಾನಿ |ಚಾಟಕನಾದರೆ ಜ್ಞಾನಕೆ ಹಾನಿಹಾನಿಗೆ ಹಾನಿ ತಂದವ ಜಾಣಾಸ್ವಾನುಭವದಲಿದ್ದವ ಪ್ರತಿಗಾಣಾ |ಪ್ರತಿಗಾಣನು ಶಿವರತಿಯುಳ್ಳವನು |ಗತಿ ಬಯಸುವನು ಗುರು ಚರಣವನು |ಚರಣಗಳಲ್ಲಿ ವರಗಳು ಉಂಟು |ಗುರುಹಿರಿಯರಿಗೆ ಶರಣು ಹೋಗಿರಿ |ಪರಿಣಾಮದ ಘೋರಿಗೆ ಪರಿಪರಿ ಸ್ತುತಿಗಳು |ಪರಿ ಪರಿಸ್ತುತಿಗೆ ಪರಿಪರಿ ಪೂಜೀ |ಪರಿಪರಿ ಪೂಜಿಗೆ ಪರಿಪರಿ ವಾಜೀ ||ವಾಜಿ ಒಂದಾದರೆ ಸಹಜವೆ ತಾನು |ಮೂಜಗದೊಳಗಿದು ಸೋಜಿಗವೇನು |ಸೋಜಿಗವೆಂಬದು ಶ್ರಮದಲಿ ಮಾಯಾ ಕಂಟಕ ಕಾಕು ಭಂಗ ಬ್ರಹ್ಮಜ್ಞಾನ ಯೋಗಿ ಬ್ರಹ್ಮಜ್ಞಾನ ಬ್ರಹ್ಮಜ್ಞಾನ |ಸಿದ್ಧಗುರು ತ್ರಿಪುರಾಂತಕ ಧ್ಯಾನ |ಪ್ರಕಾಶ ಮುಖದಲಿ ಹೇಳಿದ ರಗಳಿ |ಶಿವ ಸಾಯೋಜ್ಯವೆ ಬೈಲನೆ ಹೊಗಳಿ ||
--------------
ನರಸಿಂಹ
ಶುಭ ಸಂಧಾನ ನೋಡು ಪ ಸಾರವಿಲ್ಲದಿಹ ಸಂಸಾರದಿ ಬಲು ಘೋರ ತಾಪಗಳು ತೋರಿದಾಗ ಭೂರಿ ಸೌಖ್ಯಗಳ ಭೀರುತಿರ್ಪ ಕಾರುಣಿಕನ್ನ ವಿಚಾರಮಾಡು 1 ದೇಹಿಗಳ್ಗೆ ಕಡುದ್ರೋಹವಗೈವ ತ್ರಾಹಿಯನೆ ತಾಳ್ವರೇನು 2 ಶ್ರೀ ಪುಲಿಬೆಟ್ಟದ ಭೂಪನೇ ಸರಿ ಜ್ಞಾಪಕಗೊಂಡನು ತಾಪಗೂಡಿ 3
--------------
ವೆಂಕಟವರದಾರ್ಯರು
ಶೇಷ ಪರ್ಯಂಕ ಶಯನ ವಿಷಯದಭಿ ಲಾಷೆ ಪರಿಹರಿಸಿ ಕಾಯೋ ಪ ರೆನದೆ ಮನೆಮನೆ ತಿರುಗಿದೆ ಅನಿಮಿಷೋತ್ತಂಸ ನಿನ್ನ ಪಾದವೊಂ ದಿನ ಭಜಿಸಿದವನಲ್ಲವೋ 1 ಹರಿ ಗುರುಗಳನು ನಿಂದಿಪ ನೀಚರನು ಸರಿಸಿ ಅವರನು ಸ್ತುತಿಸಿದೆ ಪೊರೆಯಲೋಸುಗ ಉದರವ - ಜನರಿಂದ ಹರಿದಾಸನೆನಿಸಿಕೊಂಡೆ 2 ಭಗವಂತ ನಿನ್ನ ಗುಣವ ವರ್ಣಿಸದೆ ಭಗವತಿಯರವಯವಗಳಾ ಸೊಗಸಿನಿಂದಲಿ ವರ್ಣಿಸಿ ಎನ್ನ ನಾ ಲಗೆ ಎರಡು ಮಾಡಿಕೊಂಡೆ 3 ಸರ್ವಪ್ರಕಾರದಲ್ಲಿ ಹಗಲಿರುಳು ದುರ್ವಿಷಯಕೊಳಗಾದೆನೋ ಶರ್ವಾದಿ ವಂದ್ಯ ಚರಣಾ ನೀನೊಲಿ ದುರ್ವಿಯೊಳು ಸಲಹ ಬೇಕು 4 ಉಪರಾಗ ಪರ್ವಗಳಲಿ ಸ್ನಾನ ಜಪ ತಪ ಅನುಷ್ಠಾನ ಜರಿದು ನೃಪರ ಮಂದಿರವ ಕಾಯ್ದು ಧನವ ತಂ ದುಪ ಜೀವಿಸಿದೆನೊ ಜೀಯಾ 5 ವೇದ ಶಾಸ್ತ್ರಾರ್ಥಗಳನು ತಿಳಿದು ಸ ನ್ಮೋದ ಬಡದಲೆ ಕುಶಾಸ್ತ್ರ ಓದಿ ಪಂಡಿತನೆನಿಸಿದೆ ಕೀರ್ತಿ ಸಂ ಪಾದಿಸಿದೆ ವ್ಯರ್ಥ ಬಾಳಿದೇ 6 ವೈರಾಗ್ಯ ಪುಟ್ಟಲಿಲ್ಲ ಘೋರ ಸಂ ಸಾರದೊಳು ಮಗ್ನನಾದೆ ಸೂರಿಗಳ ಮಧ್ಯದಲ್ಲಿ ಬುಧನಂತೆ ತೋರುವೆನು ನೋಳ್ಪ ಜನಕೆ 7 ನಾ ಮಾಡ್ದ ಪಾಪರಾಶಿ ಎಣಿಸಲ್ಕೆ ತಾಮರಸಭವಗಸದಳ ಸ್ವಾಮಿ ಎನಗೇನು ಗತಿಯೋ ಭಾರವಾದೆ ಈ ಮಹಿಗೆ ಪ್ರತಿದಿನದಲೀ 8 ಭೂತ ಸಂಬಂಧದಿಂದ ಬಹುವಿಧದ ಪಾತಕವೆ ಸಮನಿಸಿದವೋ ದಾತೃನೀ ಕಡೆ ಗೈದಿಸೋ ಭವದಿ ಜಗ ನ್ನಾಥ ವಿಠ್ಠಲ ಕೃಪಾಳೋ 9
--------------
ಜಗನ್ನಾಥದಾಸರು
ಶೇಷ-ರುದ್ರದೇವರು ಪಾದ ಭೂ- ಪಾದ ಪ. ಹರಿಗೆ ಹಾಸಿಗೆಯಾಗಿ ಹರುಷಪಡುವ ಪಾದ ಹರಿಯ ಮಂದಿರಲ್ಲಿ ಇರುವ ಪಾದ ಹರ ಪುರಂದರರಿಗೆ ಪೂಜ್ಯವಾಗಿಹ ಪಾದ ಪಾದ 1 ವಾರುಣಿ ದೇವಿಗೆ ವರನೆನಿಸಿದ ಪಾದ ಶ್ರೀ ರಾಮಗೆ ಕಿರಿಯನಾದ ಪಾದ ಘೋರ ಇಂದ್ರಾರಿಯ ಸಂಹರಿಸಿದ ಪಾದ ಪಾದ 2 ವಾಯುದೇವರು ಜೊತೆಗೆ ವಾದವಾಡಿದ ಪಾದ ನೋಯದೆ ಭೂಮಿಯನು ಪೊತ್ತಿಹ ಪಾದ ಶ್ರೀಯರಸನ ಪಾದಪದ್ಮ ಸೇವಿಪ ಪಾದ ಸುರರು ಪಾದ 3 ಸಪ್ತೆರಡು ಭುವನದಲಿ ಗುಪ್ತವಾಗಿಹ ಪಾದ ಚಿತ್ತದಭಿಮಾನಿಗೆ ಸೇವಕನಾದ ಪಾದ ಮತ್ತೆ ಮನ ಅಹಂಕಾರ ತತ್ವದೊಡೆಯನ ಪಾದ ಪಾದ 4 ಘೋರರೂಪವ ತೊರೆದು ಸೌಮ್ಯವಾಗಿಹ ಪಾದ ಸೇರಿದವರನು ಪೊರೆವ ಶ್ರೇಷ್ಠ ಪಾದ ಹಾರೈಸಿ ಗೋಪಾಲಕೃಷ್ಣವಿಠ್ಠಲನ ಪಾದ ಪಾದ 5
--------------
ಅಂಬಾಬಾಯಿ
ಶೌರಿ ನಿನ್ನಯ ಭಕ್ತ ನಾನೆನ್ನಿಸೊ ಪ ಇಂದುವರನಂದದಲಿ ಬಂದೆ ನೀ ಕನಸಿನಲಿ ಇಂದಿರಾಪತಿಯೆಂದೆ | ಹುಸಿನಗೆಯಲಿ ಒಂದು ಶಿವಚರಿತೆ ಪೇಳೆಂದು ಗುರುರೂಪದಲಿ ಅಂದಿತ್ತ ದರ್ಶನವೆ ಸಾಕು ಎನಗೆ 1 ವಾರಿನಿಧಿಯೊಳು ಮುಳುಗಿ ದಾರಿಕಾಣದ ಮುನಿಗೆ ತೋರಿದಾ ಶಿಶುರೂಪ ಸಾಕು ಎನಗೆ ಘೋರ ಕಾನನದಲ್ಲಿ ಜಾನಿಸಿದ ಬಾಲನಿಗೆ ಸಿರಿ ಮೊಗವೆ ಸಾಕು ಎನಗೆ 2 ಅರಸಿಯಾಲಿಂಗನವ ಅರೆಘಳಿಗೆ ಬಿಡದವಗೆ ಕರುಣದಿಂ ನೀತೋರ್ದ ಚರಣ ಸಾಕೆನಗೆ ಪರರ ದಂಡಿಸಿ ಧನವ ಅಪಹರಿಸಿದಾತಂಗೆ ಗುರುವೆನಿಸಿದಾ ರೂಪ ಸಾಕು ಎನಗೆ 3 ಘೋರ ರೂಪವ ಗಳಿಸಿ ನಾರಣಾಯೆಂದವಗೆ ತೋರಿದಾ ಕಾರುಣ್ಯವಿರಲಿ ಎನ್ನೊಳಗೆ [ಹದಿ ನಾ]ರು ಸಾಸಿರ ಜನರ ಗುಂಪಿಂದಲೈತಂದು ತೋರಿದಾ ದ್ವಿಜರೂಪ ಸಾಕು ಎನಗೆ4 ರಂಗನಾಥನು ನೀನೆ ಗಂಗಾಧರನು ನೀನೇ ಮಾಂಗಿರಿಯ ಶೃಂಗಾರ ನಿಲಯ ನೀನೇ ಅಂಗಜನ ಪಿತನೀನೆ | ಅಂಗಜಾರಿಯು ನೀನೆ ಮಂಗಳಾಂಗನೆ ಭವದ ಹಂಗ ಬಿಡಿಸೋ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಕುಮಾರ ಚಾರು ಚರಣಕೆ ನಾ ನಮಿಪೆ ಕೃಪಾಕರ ಪ ಸುಂದರಾನನ ಸ್ಕಂಧ ಕಾಮಗೋ ವಿಂದಸುತ ಸುಂದರಾಂಗ ಪ್ರದ್ಯುಮ್ನನೆ ಇಂದಿರೇಶನ ದಯ ತಂದು ನೀ ಒದಗಯ್ಯ ವಂದಿಪೆ ನಿನ್ನರವಿಂದ ಪಾದಕೆ ನಾ 1 ಸೂರ ಪದುಮಾದಿ ಅಸುರರೆಲ್ಲ ನೀ ಮುರಿದು ಪೊರೆದೆಯೊ ಮೂರು ಜಗವ ಎನ್ನ ಘೋರ ಬಾಧೆಗಳನ್ನು ತರಿದು ನೀ ಪೊರೆಯಯ್ಯ ಧೀರ ಉದಾರನೆ ಸುರಸೇನಾಧಿಪ 2 ಸೋಮವದನ ಉಮೇಶಸುತ ಗುಹ ಪ್ರೇಮದಯದಿ ಭ್ರಮಾಕಲುಷ ಕೀಳೊ ಬೊಮ್ಮನ ತಾತ ಪ್ರಸನ್ನ ಶ್ರೀನಿವಾಸ ವಾಮನ ಶ್ರೀಶನ ಪ್ರೇಮ ಸುಪಾತ್ರನೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕೃಷ್ಣ ಚರಿತ್ರೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸ್ವರ ಋಷಭ ಶ್ರೀ ರಮಣ ಚರಣಾರವಿಂದವ ಆರಡಿ ಪರಿಯಾಗಿ ಸೇವಿಸಿ ಶ್ರೀ ರಮಾ ಬ್ರಹ್ವಾದಿ ಗುರುಪದ ಸೇರಿ ಸೇವಿಸುವೆ| ನಾರಿಮಣಿ ಶಿರಿದೇವಿ ಅಪಾರ ಮಹಿಮೆಯ ತಿಳಿವುದಕೆ ಪೂರ ಮನಗಂಡಿಲ್ಲ ಮತ್ತಿನ್ನಾರು ಬಲ್ಲವರು 1 ಆರಗೊಡವಿನ್ನೇನು ಮತ್ತಿನ್ನಾರು ದೂರಿದರೇನುಸರ್ವವು ಪೂರಮಾಡುವ ನಮ್ಮ ಗುರುಗಳ ಪೂರದಯವಿರಲು| ಮನದಲಿ ಘೋರತರ ಅಭಿಲಾಷೆ ಯೋಗ್ಯತೆ ಮೀರಿ ಇರುವುದು 2 ಮನಸಿನಲಿ ಮಾತ್ಸರ್ಯವಿಲ್ಲದೆ ಘನಕವೀಶ್ವರಗಳಿಗೆವಂದಿಸಿ ಅನುಸರಿಸಿ ಭಾಗವತವನು ಬಹುವಿನುತ ದಶಮ ಸ್ಕಂದದರ್ಥವ ಕನ್ನಡಿ ತೋರಿಸಿದಂತೆ ಸ್ಪಷ್ದದಿ ಕನ್ನಡಿಲ್ಹೇಳುವೆನು 3 ಪದ್ಯ ಭಾರ ಆಘೋರದುಃಖವನು ಶ್ರೀ ರಮೇಶನ ಸ್ತುತಿಸುತಿರುವ ಕಾಲದಲಿ| ಸಾರ ಸಾರಿ ಹೇಳಿದನು ವೃಂದಾರ ಕರುಗಳಿಗೆ 1 ಪದ, ರಾಗ:ಯರಕಲಕಾಂಬೋದಿ ಅಟತಾಳ ಸ್ವರಧೈವತ ಕೇಳಿರೋ ಭೋ ದೇವತೆಗಳಿರಾ ಹೇಳುವೆ ಹರಿಭಾವವ ಹೇಳಿರೋ ನಿಮ್ಮವರಿಗೆಲ್ಲಾ ಭಾಳ ಸಂತೋಷದಿಂದಲೇ ಪ ಇಷ್ಟುದಿವಸ ಭೂದೇವಿ ಕಷ್ಟವ ಬಟ್ಟಳು ಬಹಳ ಸ್ಪಷ್ಟವಾಗಿ ಆಕೆಯಾ ಕಷ್ಟವು ದೂರಾಗುವುದಿನ್ನು || ವಿಷ್ಣುನಾಜ್ಞೆಯಲಿ ನೀವು ವೃಷ್ಣಿ ಕುಲದಲ್ಹುಟ್ಟಿರೋ|| ವಿಷ್ಣುತಾ ದೇವಕಿಯಲ್ಲಿ ಕೃಷ್ಣನಾಗಿ ಹುಟ್ಟುವಾ1 ಪದ ಈ ವಚನವ ಕೇಳಿ ದೇವತಿಗಳಾಗ ಹರಿಸೇವೆ ಆಗಲಿಯೆಂಬೋ ಭಾವದಲಿ ಜನಿಸಿದರು| ಈ ವಸುಧಿಯೊಳಗವರು ಭಾವಕನು ಕಶ್ಯಪ ವಿಭಾವಸುವನ ಪೋಲ್ವ ವಸು ದೇವನಾದನು ಅದಿತಿದೇವಿ ತಾ ಜನಿಸಿದಳು ದೇವಕಿಯು ಆಗಿ| ದೇವ ಪೂಜಕನು ವಸುದೇವ ತಾ ಪ್ರೀತಿಯಲಿ ದೇವಕಿಗೆ ಕೊಟ್ಟ ಸದ್ಭಾವದಲಿ ಬೇಕಾದ್ದು ದೇವಕಿಯಲಿ ವಸುದೇವ ರಥವೇರಿದನು ಆವಾಗ ಕಂಸ ತಾ ತೀವ್ರ ನÀಡಿಸಲಾವತ್ತಿಗಾಯಿತಲ್ಲೆ ವಿಯದ್ವಾಣಿ ಪದ, ರಾಗ(ದೇಸಿ) ಅಟತಾಳ, ಸ್ವರಷಡ್ಜ ಕೇಳು ಕಂಸನೆ ನಿನಗೇಳುವೆ ನಾ ಬಂದು| ಕೇಳು ಕಂಸಾ|| ಬಹಳ ದಿವಸ ಬಾಳಿ ಇರುವವನಲ್ಲ ಕೇಳು ಕಂಸ ಪ ಮಂಗಳಾಂಗಿಯು ಈಕೆ ತಂಗಿ ಎಂದೆನಬೇಡ ಕೇಳು ಕಂಸಾ| ತಂಗಿಯ ಮಗನೇ ನಿನ್ನಂಗಕ್ಕೆ ವೈರಿಯು ಕೇಳು ಕಂಸಾ|| 1 ಭಂಡ ನಾನೆಂದು ಉತ್ಕಂಠಿದಿಂದರ ಬೇಡ ಕೇಳು ಕಂಸಾ| ಎಂಟನೆಯವ ನಿನ್ನ ಘಂಟಸಿ ಕೊಲ್ಲುವನು ಕೇಳು ಕಂಸಾ|| 2 ವೈರಿ ದಾವಾತಿದ್ದಾನೆಂದೆನ ಬೇಡ ಕೇಳು ಕಂಸಾ| ಶುದ್ಧ ಅನಂತಾದ್ರೀಶ ಅವತಿಳಿ ಕೇಳು ಕಂಸಾ|| 3 ಪದ್ಯ ನುಡಿದಿರುವ ಆ ಸತ್ಯವಾಣಿಯ ಕೇಳಿ ಮೃತ್ಯುಗಂಜಿಕೀನ್ನ ಹೊತ್ತುಗಳೆಯದಲೆ ಆ ಹೊತ್ತು ಕೊಲಬೇಕೆಂದು ಸತ್ವರದಿ ಕೇಶದಲಿ ಒತ್ತಿ ಹಿಡಿದು ಕತ್ತಿ ಹಿರಿದೆತ್ತಿದನು ಕÀಂಸಾ| ಆ ವೃತ್ತಿಯನು ತಿಳಯುತಲೆ ಅತ್ಯಂತವಾಗಿ ತನ್ನ ಚಿತ್ತದಲಿ ಮಿಡುಕಿ ಮದಮತ್ತ ಕಂಸಗೆ ನುಡಿದ ಒತ್ತಿ ಈ ಪರಿಯಾ || 1 ಪದ, ರಾಗ:ಆನಂದಭೈರವಿ ಆದಿತಾಳ ಬೇಡಲೊ ನೋಡಿ ಈಕೆಯಲಿ ಮಾಡು ಮಮತೆಯನು ಮಾಡಬೇಡ ಹಿಂಸಾ|| ಪ ಯಾಕೆಕೊಲ್ಲುವಿಯೋ ನೀ ಕರುಣಿಸು ಸಣ್ಣಾಕಿ ನಿರ್ಮಲಾಂಗಿ|| 1 ಕೊಂದರೆ ಎನಗೆ ಕೇಡು | ಮತ್ತದರಿಂದ ನಿನಗೆ ಕೇಡು ತಿಳಿದು ನೋಡು|| 2 ಏಸು ದಿವಸ ನೀನು ಬದುಕುವಿ ನಾಶವಿಲ್ಲವೇನು| ಮೋಸವಾಗದಿರು ಶ್ರೀಶ ಅನಂತಾದ್ರೀ ಕೋಪಿಸುವನು 3 ಆರ್ಯಾ ಬಹಳ ರೀತಿಯಲಿ ಹೇಳಿಕೊಂಡರೂ ಕೇಳಲಿಲ್ಲ ಕಂಸನು ಶೌರಿಯು ಹೀಗೆ || 1 ಪದ, ರಾಗ:ಅನಂದ ಭೈರವಿ ತಾಳ:ಆದಿ ಬೇಡಿದ್ದು ಕೊಡುವೆನು ನಾನು| ಪ ಜೇವ ಹತ್ಯವೇ ಮುಂಚೆ ಕೇವಲ ನಿಂದ್ಯದು ಸ್ತ್ರೀ ವಧಕಂತು ಇನ್ನು ದಾವುದು ಸರಿಯದು || 1 ಹುಟ್ಟುದರೀಕೆಯ ಹೊಟ್ಟೆ | ಮಕ್ಕಳು ಘಟ್ಟಿ ಮನಸು ಮಾಡಿ ಕೊಟ್ಟುಬಿಡುವೆನು ಕೇಳು || 2 ಬಲ್ಲಿದಾನಂತಾದ್ರಿವಲ್ಲಭನ ಆಣಿ|| 3 ಪದ, ರಾಗ:ಯರಕಲಕಾಂಬೋಧಿ ಶೌರಿಯ ವಚನವ ಕೇಳಿ ವೈರಿಯ ಕಂಸನು ಆಗ ಮೋರೆಯ ತೆಗ್ಗಿಬಿಟ್ಟನು ನಾರಿಯ ಕೊಲ್ಲುವದು | ವೈರಿಯ ಭಯ ಕಳೆವುತ ನಾರಿಯ ಕರಕೊಂಡು ||1 ಮುಂದಾ ದೇವಕಿಯಲಿ ಕಂದನು ಆದಾಕ್ಷಣಕೆ ತಂದೊಪ್ಪಿಸಿದನು ಕಂಸಗೆ ನೊಂದ ವಸುದೇವ| ಮುಂದಾ ಕಂಸನ ನೋಡಿ| ಮನನ ಹಾಸ್ಯದಿ ಮತ್ತ ಕಂದನ ತಿರಿಗಿ ಒಪ್ಪಿಸಿ ಆಗಂದನು ಈ ಪರಿಯು || 2 ಶಿಷ್ಟನೆ ನೀಕೇಳೈ ಬಂದಿಷ್ಟಿಲ್ಲಿವನಿಂದೆನಗೆ| ಸ್ಪಷ್ಟದಿ ನಿನಗ್ಹೇಳುವೆ ಎನಗಷ್ಟಮನೇ ವೈರಿ| ದುಷ್ಟನ ಮಾತಿಗೆ ಶೌರಿಯು ತುಷ್ಟನು ಇದು ಎಂದು || 3 ಪದ, ರಾಗ:ಕನ್ನಡ ಕಾಂಬೋದಿ ತಾಳ:ಬಿಲಂದಿ ಮುಂದ ಶೌರಿಯು ತನ್ನ ಮಂದಿರಕ್ಕೆ ಪೋಗಲು ಬಂದ ನಾರದನು ಆಗಲ್ಲೆ ಕಂಸ ಇದ್ದಲ್ಲೆ || 1 ಮಾಡಿದಾ | ಮಾತನಾಡಿದಾ|| 2 ಸುದ್ದಿಯಂಬೋದ್ಹುಟ್ಟಿತು | ಕೆಲಸ ಕೆಟ್ಟಿತು|| 3 ದಾವ ಮೊತೇನ್ಹೇಳಲಿ ದೇವದೇವ ಶ್ರೀಹರಿ ದೇವಕಿಯಲ್ಲಿ ಪುಟ್ಟುವಾ| ನಿನ್ನ ಕೊಲ್ಲುವಾ|| 4 ಅಸುರರಾದವರುಗಳಾ ಅಸುಗಳನ್ನೆ ಹೀರುವಾ ವಸುಧಿ ಭಾರವನಿಳಿಸುವಾ ಕೀರ್ತಿ ಬೆಳಿಸುಮವಾ|| 5 ನಂದಗೋಪಾದಿUಳೆÀಲ್ಲ ನಂದ ಬಾಂದವರು ಮತ್ತು ಮುಂದ ವಸುದೇವಾದಿಗಳು | ದೇವತಿಗಳು|| 6 ಇನ್ನಕೇಳು ಇವರ ಹೊರ್ತು ಅನ್ನರಾದವರು ಎಲ್ಲಾನಿನ್ನ ಅನುಸರಿಸೆ ಇರುವುವರು | ಅಸುರರೇ ಅವರು|| 7 ಮೂಲದಲ್ಲೇ ಮುಂಚೆ ನೀ ಕಾಲನೇಮಿಯೆನಿಸಿ ಈ ಕಾಲಕ್ಕೆ ಕಂಸನಾಗಿರುವಿ | ಮೈಮರ್ತು ಇರುವಿ || 8 ನಿನ್ನ ಪೂರ್ವ ವೈರಿಯು ಚನ್ನಿಗಾನಂತಾದ್ರೀಶಾ ನಿನ್ನ ಕೊಲ್ಲುವನೆಂಬುದದು |ನಿನಗೆ ತಿಳಿಯದು || 9 ಧಿಟ್ಟ ನಾರದನು ಮುನಿಮುಟ್ಟಿ ಬಂದ್ಹೀಂಗನಲು ಥಟ್ಟನೆ ಕಂಸ ಭಯಬಟ್ಟು ಅವರಿಬ್ಬರಿಗೆ ಘಟ್ವ ಬೇಡಿಯ ಬಿಗಿದು ಹುಟ್ಹುಟ್ಟದವರನ್ನ ಬಿಟ್ಟು ಬಿಡುದಲೆÀ ಕೊಂದ ಹುಟ್ಟಿದಾಕ್ಷಣಕೆ|| ಹುಟ್ಟುಗ್ರ ಸೇನನಲಿ ಹುಟ್ಟಿದಾರಭ್ಯ ಬಹು ದಿಟ್ಟಾದ ಸ್ನೇಹವನು ಬಿಟ್ಟ ಆ ಕಂಸ ಕಂಗೆಟ್ಟು ಬಹುಕಾಸೋಸಿ ಬಟ್ಟವನ ಬಂದಿಯ ಲ್ಲಿಟ್ಟುತಾನೆ ಆದ ಪಟ್ಟಕಾಧಿಪತಿಯು|| 1 ಪದ:ರಾಗ:ಶಂಕರಾಭರಣ ಸ್ವರ:ಷಡ್ಜ, ತಾಳ:ಆದಿ ಯೂದವರನ್ನು ಬಹುಪೀಡಾ ಬಡಿಸೀದಾ || 1 ದುಷ್ಟನ ಕೈಯೊಳು ಸಿಕ್ಕು ಶಷ್ಟ ಬಡಲಾರೆವು ಎಂದು ಅಷ್ಟೂರು ನಿಲ್ಲದೆ ದೇಶಭ್ರಷ್ಟರಾಸರು|| 2 ಅನುಬಂಧಿಗಳೆಂಬುವರು ಅನುರಾಗದಿಂದಲ್ಲೆ| ಅವನ ಅನುಸರಿಸಿಕೊಂಡಿರುತಿಹರು ಅನುದಿನದಲ್ಲಿ||3 ಕ್ರೂರಾಗಿ ಇರುವೊನು ಕಂಸಾ ನಾರಿ ದೇವಕ್ಕಿ ದೇವಿಯು ಆರು ಮಹಾಕಾಳಿಯ ಹರೊ ಆಜ್ಞೆಯಿಂದ ಕೀಳುತು ರೋಹಿಣಿ ಗರ್ಭದೊಳಿಟ್ಟಳು|| 4 ದೇವಕಿದೇವಿಯು ವಸುದೇವಾದಿಗಳೆಲ್ಲ ಗರ್ಭ ಸ್ರಾವವಾಯಿತೆಂದೊದರಿದರು ಆ ವ್ಯಾಳ್ಯದಲ್ಲಿ|| 5 ಎಂಟನೆ ಗರ್ಭಾಗಿ ಶ್ರೀ ವೈಕುಂಠೇಶ | ನಿಂತಾನು ಸಾಧು ಕಂಟಕರನ್ನು ಕೊಲ್ಲುವೆ ನೆಂದುತ್ಕಂಠದಿಂದಲಿ || 6 ಶಂಜಾಕ್ಷಿ ದೇವಕಿ ದೇವಿ ಶಂಜನಾಭನುದರವೆಂಬೋ ಪಂಜರದೊಳಿರಲು ತೇಜಃ ಪುಂಜಳಾದಳು7 ಇಂಥಾಕಿಯ ಕಂಡು ಕಂಸಾನಂತಾದ್ರೀಶ ಗರ್ಭದಲ್ಲಿ ನಿಂತಾನೆಂದು ತಿಳದೀಪರಿ ಚಿಂತಿ ಮಾಡಿದಾ|| 8 ಪದ:ರಾಗ:ಶಂಕರಾಭರಣ ಏನು ಮಾಡಲಿ | ನಾ ಇನ್ನೇನು ಮಾಡಲಿ | ಏನು ಮಾಡಲೇನು ವಿಷ್ಟು ತಾನೆ ಬಂದಿನ್ನೇನು ಗತಿ ಇನ್ನೇನು|| ಪ ವೀರರೊಳಗೆ ಸೇರಿ ಎನ್ನ ಮಾರಿ ಹ್ಯಾಂಗ ತೋರಲಿನ್ನೇನು ||1 ತಂಗಿ ವಧ ಜಗಂಗಳೊಳಗೆ ಅಮಂಗಳಿದು ಸು
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಕೇತುದೇವ ಸ್ತೋತ್ರ ತ್ರಾತ ಹರಿ ಪದ್ಮಜರ ಅನುಗ್ರಹ ನಿಯಮನದಿ ಕೇತುಗಳ ದೇವನೇ ಕೇತುವೇ ನಮಸ್ತೇ ಪ ಕರಾಳ ದ್ಯುತಿ ಸಂಕಾಶ ರೌದ್ರನೇ ನಮೋ ಘೋರ ಪಾಪ ಕಷ್ಟಂಗಳ ದೂರಮಾಡಿ ಸಲಹೆನ್ನ 1 ಅನೇಕರೂಪ ವರ್ಣಾಶ್ಚ ಶತಶೋಥ ಸಹಸ್ರಶಃ ಎನ್ನನ್ನ ಕೃಪದಿ ಸಂರಕ್ಷಿಸೋ ಸತ್ಜ್ಞಾನ ಕರ್ಮಜದೇವ 2 ವೇಧಪಿತ ಶ್ರೀ ಪ್ರಸನ್ನ ಶ್ರೀನಿವಾಸ ಮುಕುಂದನ್ನ ಸದಾ ದಯದಿ ಒಲಿಸೆನಗೆ ಪಾಹಿ ನಮೋ ಕೇತೋ 3 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗುರುವೇ ಮಹಾಮಹಿಮಾ ಪೂರ್ಣಾತ್ಮಸುಖಧಾಮಾ ಬಾಗಿ ನಮಿಪೆ ಪ್ರಶಾಂತಕಾಮಾ ಬೇಗ ನೀ ಬೋಧಿಸೈ ಅನುಭಾವಪೂರ್ಣ ಜ್ಞಾನದಾ ದಾರಿಯಾ ತೋರು ನೀ ದಯೆದೋರು ಜ್ಞಾನ ನಿಧಿಯೇ ವಂದಿಪೆ ಬೋಧಿಸೈ ಸಂಸಾರ ಘೋರವಾರಿಧಿ ದಾಂಟಿಪಾ ಧೀರ ನೀ ನಿಜರೂಪನಿಷ್ಠ ವಿಭುವೇ ವಂದಿಪೆ ಬೋಧಿಸೈ ಗುರುಸಾರ್ವಭೌಮ ನಿನ್ನ ಈ ಪಾದವಾ ನಂಬಿದೆ
--------------
ಶಂಕರಭಟ್ಟ ಅಗ್ನಿಹೋತ್ರಿ