ಒಟ್ಟು 844 ಕಡೆಗಳಲ್ಲಿ , 95 ದಾಸರು , 674 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಂಟರಾಗಿ ಬಾಗಿಲ ಕಾಯೋರು ಹರಿಯವೈಕುಂಠದಿ ರಂಗನಾಯಕನರಮನೆಯ ಪ. ಸುತ್ತ ವಿರಜಾನದಿ ಮತ್ತು ನಂದನ ವನಉತ್ತಮೋತ್ತಮ ವೈಕುಂಠಉತ್ತಮೋತ್ತಮ ವೈಕುಂಠದೊಳಗಿನ್ನುಮಿಂಚಿನಂತೆ ಹೊಳೆವೊ ಮುಕ್ತರು1 ಶ್ರೀದೇವಿ ತಾನು ಮುರಹರನ ಪುರದಾಗವಿರಜಾ ತಾನೆಂದು ಕರೆಸುತವಿರಜಾ ತಾನೆಂದು ಕರೆಸುತ ನಾನಾ ಪರಿಗಿಳಿ ಕೋಗಿಲಾಗಿ ಮೆರೆವೋಳು2 ಉತ್ತರ ದಿಕ್ಕಿನಲೆಥಳ ಥಳಿಸುವ ದ್ವಾರ ಮುತ್ತು ಮಾಣಿಕ್ಯ ಅಳವಟ್ಟಮುತ್ತು ಮಾಣಿಕ್ಯ ಅಳವಟ್ಟ ಹರಿಪುರರತ್ನದ ಝಲ್ಲೆ ಬಿಗಿದಾವೆÉ 3 ರಾಜಿ ಮಾಣಿಕ ಗೋಡೆ ಗಾಜಿನ ನೆಲಗಟ್ಟುಈ ಜೋಡು ದ್ರವ್ಯ ಎಲ್ಲಿಲ್ಲ ಈ ಜೋಡು ದ್ರವ್ಯ ಎಲ್ಲಿಲ್ಲ ಇದುನಮ್ಮ ಶ್ರೀದೇವಿಯರಸನ ಅರಮನೆ 4 ಕೇಶರ ಶ್ರೀಗಂಧ ಕಲವೆಲ್ಲ ಪರಿಮಳಬಿಸÀಜನೇತ್ರನರಮನೆಯಬಿಸಜನೇತ್ರೆಯರ ಮನೆಯಿಂದ ಕುಸುಮದ ವೃಷ್ಟಿಗರೆದಾವು5 ಉತ್ತರ ಪಾಲ್ಗಡಲೊಳು ಮುತ್ತು ಮಾಣಿಕರತ್ನಪಚ್ಚ ಕರ್ಪೂರ ಸುಳಿಗಾಳಿಪಚ್ಚ ಕರ್ಪೂರ ಸುಳಿಗಾಳಿ ಇದುನಮ್ಮ ಅಚ್ಯುತಾನಂತನರಮನೆಯ6 ಕೃಷ್ಣ ರಾಮೇಶನ ವಿಶಿಷ್ಠದ ವೈಕುಂಠಸೃಷ್ಟಿ ಮಾಡಿ ರಚಿಸಿದ ಸೃಷ್ಟಿ ಮಾಡಿ ರಚಿಸಿದ ನೋಡಲು ದೃಷ್ಟಿ ಸಾಲದು ಜನರಿಗೆ7
--------------
ಗಲಗಲಿಅವ್ವನವರು
ಬಟ್ಟೆ ಪ ಕೆಟ್ಟವನೆಂಬಪಕೀರ್ತಿಯ ಪಡಿಯುವ ಅ.ಪ ಒಂದು ಹೊತ್ತಿಲ್ಲದಿರುಲು ತಾಳಲಾರೆ | ನಿನಗಾಗಿ ನೀಚ- ವೃಂದವÀ ಯಾಚಿಸಿ ನಾ ಬಳಲಲಾರೆ ತಂದೆ ತಾಯಿಗಳನ್ನಾದರೂ ವಂಚಿಸಿ ಮುಂದಾಗುವ ಕೇಡರಿಯದಿರುವ ಹಾಳು 1 ಹೆಚ್ಚು ಕೊಟ್ಟರು ಒಲ್ಲೆಯೆಂಬೆ | ಕಡಿಮೆಯಾದರೂ ಬಾಯಿ ತುಚ್ಛರ ಸೇವಿಸಿ ಅನ್ಯಾರ್ಜಿಸಿ ಹುಚ್ಚು ಹಿಡಿಸುವೆಯೇನೊ ನೀ ಕೊನೆಗೆ 2 ನಿನಗಾಗೀ ಸಕಲ ವಿದ್ಯಗಳರಿತು | ಸಭೆಯೊಳು ವಾದಿಸಿ ಮನಸು ಚಪಲ ಮಾಡಿ ತಹ ತಹ ಪಡಿಸುವ 3 ವ್ಯವಸಾಯಯೋಗ್ಯ ವ್ಯಾಪಾರಗಳು | ಯಾಚನೆಕಷ್ಟ ಭಾರವಾಹತ್ವ ಮೊದಲು ದಿವಸ ದಿವಸ ಮಾಡುತ ನಿನ್ನೊಲಿಸಲು ಜವನಾಳ್ಗಳ ಕೈಗೊಪ್ಪಿಸಿಸುವೆ ಕಡೆಗೆ 4 ಜ್ಞಾನ ನಿಷ್ಕಾಮ ಕರ್ಮದಾನ | ಸಂಧ್ಯಾಜಪತಪ ಸ್ನಾನಾನುಷ್ಠಾನ ಸತ್ಸಾಧನಾ ಏನು ನಡೆಯಲೀಸದೆ ದಿನದಿನದಲಿ ನಾನು ನನಗೆ ಎನ್ನಿಸಿ ಬಾಯಿಬಿಡಿಸುವ 5 ಮುಷ್ಕರದಿಂದ ನಿನ್ನ ನೋಯಿಸಲು | ಕರಗಿಯೆಲ್ಲ ನಿಷ್ಕಾರಣವಲ್ಲವು ನೀ ಜಗದೊಳು 6 ಕೊಟ್ಟಷ್ಟರಲ್ಲೆ ತೃಪ್ತಿಯ ಹೊಂದು | ಸಾಲದಿರಲು ಸಿಟ್ಟೇಕೆನ್ನೊಳು ದಯಮಾಡಿಂದು ಮುಟ್ಟಿ ಭಜಿಸೆ ಸಂತುಷ್ಟಿಯ ಪಡೆವೆ 7
--------------
ಗುರುರಾಮವಿಠಲ
ಬಡನಡುವು ಬಾಲೆಯರ ಕೂಡಿ | ಪಾ | ಲ್ಗಡಲೋಡಿಯನೊಡನೊಡನೆ | ಬಿಡದೆ ಆಡಿದರೊ ವಸಂತ ಪ ಪಾಲ್ಗೆನೆಗಧಿಕ ಮೃದುವಸನಮಂ ಉಟ್ಟ್ಟು ನು | ಣ್ಗೂದಲು ತಿದ್ದಿ ಪಲಪು ಬೈತಲೆ ಸೊಗಸು | ತುಂಬಿ ಕುಂಕುಮ ಮಿಗೆ | ಬಲ್ಕಸ್ತುರಿಯ ತಿಲಕ | ಅರೆರೆ | ಕಾಳ್ಗತ್ತಲೆ ಮೀರಿ ತೋರುತಿರೆ ತಿರ್ತಿತಿರಗಿ | ವಾಲ್ಗಣ್ನು ನೋಟ ವೈಯಾರ ಸೋಲ್ದುರುಬು ವಿ | ಶಾಲ್ಗೊಂಚಲು ಮುತ್ತುಸುತ್ತು ಸೂಸುತಲಿರೆ ಪೇಳ್ಗಾಣೆ ಪೆಂಗಳು ಶೃಂಗರಿಸುವ ಮದವೊ 1 ಸಣ್ಮೊಗ್ಗೆ ಜಗದ ವಿಚಿತ್ರ ಕಂಚುಕವು ಮೋ | ಹನ್ಮಾಲೆ ಪದಕ ನ್ಯಾವಳ ಸರಿಗೆಸರ ಮುತ್ತು | ವಾಲೆ ಪೊಂಪುಷ್ಟ ಬುಗುಡಿ ಥೋ | ರನ್ಮುತ್ತು ನಾಸಾಮಣಿ | ಅರರೆ | ಮನ್ಮನೋಹರವಾದ ಕಡಕ ಕಂಕಣ ಮುದ್ರೆ | ಸನ್ಮೋಹನಾಂಗಿಯರು ಸರ್ವಾಭರಣವಿಟ್ಟು | ಮನ್ಮಥನ ಹಿಡಿದೇಜಿ ಕುಣಿವಂತೆ ಮುಂದೊರಿದು | ಕಣ್ಣಂಚಿನಿಂದ ಜಗವೆಲ್ಲ ಬೆಳಗುತಲಿ 2 ಕರ್ಪುರದ ವೀಳ್ಯೆಯವ ಮೆಲುತ ನಾನಾ ಬಗೆ | ಅಗರು ಶಿರಿಗಂಧ | ಸಾರ್ಪರಿಮಳ ಸಕಲ ದ್ರವ್ಯದಿಂದೋಕುಳಿಯ | ಮಾರ್ಪೆಸರು ಬಾರದಂತೆ | ಅರೆರೆ | ಕರ್ಪಾಣಿಯೊಳಗೆ ದ್ವೀಪಾಂತರದ ತರ ನಿಲುವ | ದರ್ಪಣವ ಪಿಡಿದು ಸರ್ವಾಂಗ ನೋಡಿಕೊಳುತ | ದರ್ಪ ತಗ್ಗಿಸದಲೆ | ಪೊನ್ನುಡೆಗಳ ತುಡುಕಿ ಕಂ | ದರ್ಪನಪ್ಪನ ಮೇಲೆ ಗುಪ್ಪಿರರು ಮುದದೀ 3 ಮೇಲ್ಮೇಲು ಸೊಗಸು ಚನ್ನಿಗರಾಯನಿಲ್ಲ ನಿಲೂ ನೀಲ್ಮೇಘ ವರ್ಣಾನೆ | ಕಾಲ್ದೆಗೆದು ನಮ್ಮಮ್ಮ | ತೋಳ್ಮದವ ತೀರಿಸದೆ ಪೋಗದಿರು ಭಡಭಡಾ | ಕರವ ತೆಕ್ಕೊ | ಅರೆರೆ | ತಾಳ್ಮದತಿಗತಿಯಂತೆ ಹೆಜ್ಜೆಯ ನಿಡುತ | ಸತಿ | ಜಾಲ್ಮೊಗದು ವಾರಿಧಿಯ ಥೆರೆಯಂತೆ ಮೂದಲಿಸಿ | ಆಳ್ಮಾತಿಲಿಂದ ಹೈ ಎನುತ ಚಲ್ಲಿದರೂ4 ಪೆಣ್ಗಳಿರಾ ನಿಮಗೇಕೆ ಪ್ರಬಲತನವೆಂದೆನುತ | ಅಣ್ಗದಾ ಗೋವಳರ ನಡುವೆ ವಪ್ರ್ಪಿರ್ದಸು | ವಣ್ಮಾತ್ರ ಪರಮಾತ್ಮನೀಕ್ಷಿಸಿದ ಅವರವರ | ಕಣ್ಗೊರಳ ಕುಚ ತೊಡೆಗಳ | ಅರೆರೆ | ಹೃತ್ತಾಪ ಹರಿಸುವ | ಸಿರಿ | ಸರ್ರನೆ ಓಕಳಿ ಚಲ್ಲೆ | ಸಣ್ಗೊಲ್ಲತಿಯರು ಬೆರಗಾಗಿ ಮರಳೆÀ ಹರಿಯ | ಬೆಣ್ಗಳ್ಳನೆಂದು ಮುತ್ತಿದರು ಹಾಸ್ಯದಲಿ 6 ತೋರ್ಕೈಯ ಬಚ್ಚಿಡದೆ ಪಳ್ಳಿಗನೆ ಠಕ್ಕಿಸದೆ | ಮಾರ್ಕರೆದುಕೋ ನಿನ್ನ ಗೆಳೆಯರನ ಒಂದಾಗಿ | ಸೂರ್ಕುದೇಗಂತೆ ಸರ್ವೋದ್ಧಾರಗರದ ವೈ | ಜೀರ್ಕೋಳಲಿ ತೆರವಿಲ್ಲದೆ | ಅರೆರೆ | ಅರ್ಕನರ್ಕಕೆ ವಾರಿ ಇಂಗಿ ಪೋಗುವಂತೆ | ನರ್ಕಾಂತಕನ ಕಾಯದೊಳಗೆ ಓಕುಳಿಯಡಗೆ | ಅರ್ಕಾದ್ರಿಯಂತೆ ಶಿರಿ ಕೃಷ್ಣರಾಜಿಸುತಿರೆ | ತರ್ಕೈಪ ಭರದಿಂದ ನಾರಿಯರು ಇರಲು 7 ಹಸ್ತ ಲಾಘವ ನೋಡಿ ತಲೆದೂಗಿ ನಕ್ಕು ಸ | ಮಸ್ತ ನಾರಿಯರಿಟ್ಟು ಉಟ್ಟ ಮಂಗಳವಸನ | ವಸ್ತುಗಳು ಜಿಗಳುವಂತೆ ಓಕುಳಿಯಿಂದ | ವಿಸ್ತಾರವಾಗಿ ಉಗ್ಗೆ | ಅರೆರೆ | ಕಸ್ತೂರಿಮೃಗದಂತೆ ಸುಳಿಸುಳಿಯ ನಿಂದಿರ್ದ| ಹಸ್ತಿಗಮನಿಯರೊಡನೆ ಕ್ರೀಡೆಯನು ಪರಾತ್ಪÀರ | ವಸ್ತು ಲಕುಮಿಯ ರಮಣ ಆಡುತಿರೆ ನಾಲ್ಕೈದು | ಮಸ್ತಕಾದ್ಯರು ವಿಸ್ತರಿಸಲರಿದೆನಲು 8 ಸುಕ್ಕದೆ ಕುಚಗುಳುಬ್ಬಿ ಕಕ್ಕಸವಾಗೆ ಹೆಜ್ಜೆ | ಇಕ್ಕಲಾರದೆ ವಿರಹತಾಪದಿಂದೀಕ್ಷಿಸುತ | ವಖ್ಖಣಿಸುವ ಮಾತು ಹಿಂದಾಗುತಿರೆ ಕಲೆಗ | ಳುಕ್ಕೇರಿ ಬೆವರುತಿರಲು | ಅರೆರೆ | ಅಕ್ಕಕ್ಕೊ ಎಂದು ಅಕ್ಕೋಜಗೆಗೊಳ್ಳುತ್ತ ತಾ | ರಕ್ಕಿಯಂತೆ ಕೃಷ್ಣ ಸುತ್ತ ವಲ್ದರು | ಸಕ್ಕರೆದುಟಿ ಚಲುವ ಉಡುಪನಂತೆ ವಪ್ಪೆ | ದಕ್ಕಿವನಂತೆ ಸಂತರಿಸುತಲಿ ಇಂದೂ 9 ಬೆರ್ದೋಕಳಿಯನಾಡಿ ಸರಿ ಮಿಗಿಲು ಎನಿಸಿ ಕೆಲ | ಸಾರ್ದಿರ್ದ ನಾರಿಯರ ಶಿರವ ತಡವರಿಸಿ ಶತ | ಸಾರ್ದವೆಲೆ ಉಳ್ಳ ಉಡುಗೊರೆನಿತ್ತು ಮನ್ನಿಸಿ | ಮೀರ್ದಾಭರಣವ ತೊಡಿಸಿ | ಅರೆರೆ | ಸಾರ್ದೆಗೆದು ತರ್ಕೈಸಿ ಪ್ರೀತಿಯಿಂ ಬಡಿಸಿ ಮುರ ಮರ್ದನ ವಿಜಯವಿಠ್ಠಲ ಮೆರೆದ ಗೋಕುಲ ದೊರೆ | ಸುಜನ ಜನಸಂಗಾ 10
--------------
ವಿಜಯದಾಸ
ಬಡಿವಾರ ನಿಮ್ಮ ಕೀರ್ತಿಅರಿಯೆವೊಪಾರ್ಥ ಸಾಕೊ ನಿನಗೆಬಡಿವಾರ ಪ. ಬೀಗನಾಡಿದ ಬಲು ಬಿಂಕದ ಮಾತು ಕೇಳಿ ಸಾಗರಶಯನ ಮುರಿದೆದ್ದಸಾಗರಶಯನ ಮುರಿದೆದ್ದ ಅರ್ಜುನ ಹ್ಯಾಂಗಂದ್ಯೊ ನಿನ್ನ ಮನದಾಗ1 ಏನಲೊ ಅರ್ಜುನ ಈ ನುಡಿ ನಿನಗ್ಯಾಕೊನೀನು ನಿಮ್ಮವಳು ತಿರು ತಿರುಗಿನೀನು ನಿಮ್ಮವಳು ತಿರು ತಿರುಗಿ ಮಾರಿದರೆಕಾಣಿಯ ಬೆಲೆಯ ಹೋಲಲಾರೆ2 ದಶರಥರಾಯನ ಭಾಗ್ಯ ವರ್ಣಿಸಲು ವಶವಲ್ಲಹೊಸದಾಗಿ ಇವಳು ಹೋಗಲಿಕ್ಕೆಹೊಸದಾಗಿ ಇವಳು ಹೋಗಲಿಕ್ಕೆ ಎನಗೆ ಈ ದೆಶೆಗೇಡಿ ಬಂದು ದಣಿಸಲಿಲ್ಲ 3 ಹಿಂದೆ ಇವಳಿಂದಲೆ ನೊಂದೆನೋ ಅನ್ನಕ್ಕೆ ಸಂದೇಹವಾಗಿ ಅಡವಿಯಸಂದೇಹವಾಗಿ ಅಡವಿಯ ತಿರುಗಿಸಿದವಳಿಗೆ ಅಂದಣ ಆನೆ ಬರಲುಂಟೆ 4 ಕಾಲ ಲಕ್ಷಣವೆಲ್ಲಿ ಅಡಗಿತ್ತೆ 5 ಅಕ್ಷ ಮ್ಯಾಲಂತರದಿ ವೃಕ್ಷದಲ್ಲಿದ್ದಾಗ ಲಕ್ಷ ಕಷ್ಟಗಳ ಬಡುವಾಗಲಕ್ಷ ಕಷ್ಟಗಳ ಬಡುವಾಗ ಇವಳ ಕೈಯ ಲಕ್ಷಣವೆಲ್ಲಿ ಅಡಗಿತ್ತೆ 6 ಬಡಿವಾರ ಬಮ್ಮ ವರ್ಣಿಸಲಾರ ಹೆಮ್ಮಿ ನೋಡಿದರೆ ವಿಪರೀತಹೆಮ್ಮಿ ನೋಡಿದರೆ ವಿಪರೀತ ಎಲೊ ಪಾರ್ಥಸುಮ್ಮನೆ ಯಾಕೆ ಮುನಿಸಾಗಿ 7 ಕೇಳಿ ನಿಮ್ಮವರ ಕೀರ್ತಿ ಭಾಳೆ ವಿಸ್ತಾರವಾಗಿ ಹೇಳಲು ಲಜ್ಜೆ ಬರತದೆ ಹೇಳಲು ಲಜ್ಜೆ ಬರ ತದೆ ನಮ್ಮ ಅಮ್ಮನ ತಾಳುವಿಕೆಯಿಂದ ಉಳಿದಾರೊ 8 ನಾರು ವಸ್ತ್ರವನುಟ್ಟು ನಾರಿ ಸಂಚರಿಸುವಾಗವೀರ ರಾಮೇಶ ಜರಿದಾಗ ವೀರ ರಾಮೇಶ ಜರಿದ ಕಾಲಕ್ಕೆ ಇವಳ ಮೋರೆ ಲಕ್ಷಣವು ಅಡಗಿತು9
--------------
ಗಲಗಲಿಅವ್ವನವರು
ಬದರೀನಾಥ ವಿಠಲ | ಪೊರೆಯ ಬೇಕಿವನಾ ಪ ಸದಯ ಹೃದಯನೆ ಇವಗೆ | ಮುದವನ್ನೆ ಬೀರತಲಿಹದುಳದಲಿ ಕೈಪಿಡಿದು | ಕಾಪಾಡೊ ಹರಿಯೇ ಅ.ಪ. ಮೇಶ ಮಧ್ವೇಶ ಮಹಿ | ದಾಸ ನಿನ್ನಡಿ ದಾಸ್ಯಆಸಿಸುವ ಬಾಲಕನ | ಆಶೆಯನು ಸಲಿಸೀ |ಕ್ಲೇಶಗಳ ಪರಿಹರಿಸಿ | ನೀ ಸಲಹೆ ಭಿನ್ನವಿಪೆಹೇಸದಾಗತಿ ವಂದ್ಯ | ವಾಸವಾನುಜನೇ 1 ಲೌಕಿಕದ ಸಂಪತ್ತು | ಬೇಕಾದ ವರವಿತ್ತುಕಾಕು ಸಂಗವ ಕೊಡದೆ | ನೀಕಾಯ ಬೇಕೋ ||ತೋಕನಿಗೆ ನಿನ್ನಲ್ಲಿ | ಭಕುತಿ ಜ್ಞಾನಗಳಿತ್ತುಲೌಕಿಕವನೆಲ್ಲ ವೈ | ದೀಕ ವೆಂದೆನಿಸೋ 2 ಮೋದ ಕೊಡು ಸತತಾ 3 ಸ್ವಾಪದಲಿ ಮತ್ಸ್ಯಾದಿ | ರೂಪಗಳ ಸ್ತೋತ್ರವೆನೆವ್ಯಾಪಾರ ಮಾಡಿಸುತ | ಕೃಪೆ ತೋರ್ದೆ ಹರಿಯೇವೈಪರೀತ್ಸದ ಮನದ ಚಾಪಲ್ಯ ಕಳೆಯಲ್ಕೆಸ್ವಾಪದಲಿ ಸೂಚಿಸುತ | ನೀಪೇಳ್ದೆ ಧೃಡವಾ 4 ಪತಿ ವಿನುತ | ನಾರಾಯಣಾಖ್ಯ ಹರಿಘೋರಭವ ಕೂಪಾರ | ಪಾರಗಾಣಿಸುವಾಭಾರ ನಿನ್ನದು ಎಂದು | ಪೋರನ್ನ ಒಪ್ಪಿಸಿಹೆಧೀರ ಗುರು ಗೋವಿಂದ | ವಿಠಲ ಪೊರೆ ಇವನಾ 5
--------------
ಗುರುಗೋವಿಂದವಿಠಲರು
ಬಂದರೆ ಭಾಗ್ಯ ಲಕ್ಷ್ಮಿಯರುಮುಯ್ಯವ ಛಂದಾಗಿ ಗೆಲಿಸೆಂದುವಂದಿಸಿ ಹರಿಗೆ ಪ. ಇಂದು ಮುಖಿಯರೆಲ್ಲ ಛಂದಾದ ವಸ್ತಗಳಿಟ್ಟುಚಂದ್ರಗಾವಿಯನುಟ್ಟು ಚಂದ್ರನಂತೆ ಒಪ್ಪುತ 1 ನೀಲ ಮಾಣಿಕದ್ವಸ್ತ್ರಮೇಲುದು ಧರಿಸುತ ನೀಲಾದಿಗಳೆಲ್ಲ 2 ವಸ್ತ ಮುತ್ತಿನ ಇಟ್ಟು ಕಸ್ತೂರಿ ಬೊಟ್ಟಿಟ್ಟುಮಸ್ತಕದಲಿ ಮಾಣಿಕ್ಕಿಟ್ಟು ಭದ್ರಾದಿಗಳು 3 ಹಸ್ತಾಭರಣ ಸಮಸ್ತ ವಸ್ತಗಳಿಟ್ಟುಸ್ವಸ್ತ ಚಿತ್ತದಿಂದ ಮಿತ್ರ ವೃಂದಾರಕಾದಿಗಳು 4 ಕಾಲಿಂದ್ಯಾದಿಗಳೆಲ್ಲ ಬಹಳೆ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಲಾಶಯನನ ಬಳಿಗೆ5 ಲಕ್ಷಣಾದಿಗಳೆಲ್ಲ ಲಕ್ಷ ವಸ್ತಗಳಿಟ್ಟುಲಕ್ಷ್ಮಿರಮಣನೆ ಪಂಥ ವೀಕ್ಷಿಸಿಗೆಲಿಸೆಂದು 6 ಜಾಂಬವಂತ್ಯಾದಿಗಳು ತುಂಬಿದೊಸ್ತಗಳಿಟ್ಟುಸಂಭ್ರಮ ಸೂಸುತ ಅಂಬುಜಾಕ್ಷನ ಬಳಿಗೆ7 ಹದಿನಾರು ಸಾವಿರ ಚದುರೆಯರು ವಸ್ತಗಳಿಟ್ಟುಮದನ ಜನಕನ ಮುಯ್ಯ ಮುದದಿಂದ ಗೆಲಿಸೆಂದು8 ವೀರ ರಾಮೇಶ ನಾರಿಯರ ಸೋಲಿಸೋ ಭಾರನಿನ್ನದೆಂದು ನೂರು ಮಂದಿನುಡಿದಾರು 9
--------------
ಗಲಗಲಿಅವ್ವನವರು
ಬಂದು ನಿಲ್ಲೋ | ಕಣ್ಣ ಮುಂದೆ ಪ ಬಂದು ನಿಲ್ಲೋ ನಿನ್ನ ಪಾದಕ್ಕೆ ವಂದಿಪೆ ಇಂದಿರೆಯರಸಾ ಗೋವಿಂದ ಮುಕುಂದಾ ನೀ ಅ.ಪ. ಅರಳಿದ ಕೆಂದಾ | ವರೆಯ ಧಿಕ್ಕರಿಸುವ ಚರಣಾರವಿಂದವ | ನಿರುತ ತೋರು ನೀನು 1 ಭ್ರಮರ ಕುಂಡಲ ಮಂಡಿತ || ಮೇಲಾದ ರಾಕೇಂದು | ಮುಖವ ತೋರಿಸುತಲೀ2 ಪದುಮನೇತ್ರನೆ ನಿನ್ನ | ಸದನವೆನುತಯೆನ್ನ || ಹೃದಯದೊಳಗೆ ನಿಂತು ನಾ | ಮುದದಿ ಭಜಿಸುವಂತೇ 3 ಕರಿಯ ಮೊರೆಯ ಕೇಳಿ | ಕರುಣದಿಂ ಬಂದಂತೆ || ಕರೆದಾಗ ನಿನ್ನ ದಿವ್ಯ | ಚರಣಾವ ತೋರಿಸುತಾ4 ಅಜಭವಾದಿಗಳಿಗೆ | ನಿಜಪದವನಿತ್ತಂತೆ || ಭಜಿಪ ಭಕ್ತರಿಗೊಲಿವ | ವಿಜಯವಿಠ್ಠಲರೇಯಾ5
--------------
ವಿಜಯದಾಸ
ಬಂಧಕವಾಗದ ಹಾಂಗೆ | ಕರ್ಮಛಂದಾಗಿ ಮಾಡಿಸೊ ಹರಿಯೆ ಪ ದಾತ | ನೀನೆನ್ನ ಸಲಹೊ ಸತ್ರಾಣ1 ಸತಿಸುತ ಧನಧಾನ್ಯ ಅಯ್ಯ | ಎನ್ನ | ಮತಿ ಭ್ರಮಣೆ ಮಾಡಿದ ಪರಿಯಪ್ರತಿಕ್ರಿಯೆ ನೀನೆಲ್ಲ ತಿಳಿಯ | ಎನ್ನ | ಹಿತದಿಂದ ಪಾಲಿಸೋ ಜೀಯಾ 2 ಸರ್ವ ಕರ್ಮವು ಕ್ರೀಯಗಳಲಿ | ಅಲ್ಲಿ ಸರ್ವಸ್ವಾಮ್ಯವು ನಿನ್ನದಿರಲಿಸರ್ವದ ನಾಮ ನಾಲಿಗೆಲಿ | ನಿಂತು | ಸರ್ವತ್ರ ಎನ್ನ ಪಾಲಿಸಲಿ 3 ಕಾರಕ ಕ್ರಿಯ ದ್ರವ್ಯವೆಂಬ | ಭ್ರಮೆ | ಮೂರುಗಳನು ಕಳೆಯೆಂಬಸಾರ ಪ್ರಾರ್ಥನೆ ಇದೆಯೆಂಬ | ಎನ್ನ | ದೂರ ವ5À್ಪುದು ಮಾಣು ಬಿಂಬ 4 ತನು ಕರಣ ವಿಷಯಾದಿಗಳು | ಜಡ | ಮನದಿಂದಾಗುವ 5iರ್Àುಗಳುಅಣು ಜೀವಕ್ಕಾರೋಪಗಳು | ಮಾಡಿ | ಜನನ ಮರಣದ ಭವಣೆಗಳು 5 ಇತ್ತೆ ನೀ ಸ್ವಾತಂತ್ರ ಎನಗೆ | ಎಂಬ | ಶಾಸ್ತ್ರದ ಸೊಲ್ಲಿನ ಬಗೆಸುತ್ತು ಹುಟ್ಟುವ ಪರಿಯಾಗೆ | ಕಾಯೊ | ಭಕ್ತವತ್ಸಲ ದಯಾವಾಗೆ6 ಕರ್ಮ | ಮರ್ಮವ ತಿಳಿಸಲೋ ಧೊರೆಯೆ |ನಿರ್ಮಲಾತ್ಮನೆ ಮೊರೆಯಿಡುವೆ | ಎನ್ನ | ಕರ್ಮವ ಸುಡುವುದು ಹರಿಯೆ7 ಕರ್ಮ | ಗುರು | ಪ್ರಾಣಾಂತರ್ಗತಗೀವ ಮರ್ಮಜ್ಞಾನಾನು ಸಂಧಾನ ಪರ್ಮ | ಇತ್ತು ನೀನಾಗಿ ಪಾಲಿಸೊ ಧರ್ಮ 8 ಭಾವ ಕ್ರಿಯ ದ್ರವ್ಯಾದ್ವೈತ | ಮೂರು | ಭಾವಗಳಿಂದನುಷ್ಠಾತಶ್ರೀವರ ಎನಿಸೆನ್ನ ತಾತ | ಗುರು | ಗೋವಿಂದ ವಿಠಲ ಸುಪ್ರೀತ 9
--------------
ಗುರುಗೋವಿಂದವಿಠಲರು
ಬನ್ನ ಬಡಿಸುವುದು:ಖನೀಗುವಂತೆ ಸಿರಿ ಮನ್ನಣೆಯ ಪಡಿಯ ಕಂಡ್ಯಾಮನವೆ ಪ ಘನ್ನವಿದ್ಯದಮಬ್ಬಿಲಿನ್ನ ಖಳಜಗದ ಜೀ ವನ್ನ ಮಲಗಿದೆರೊಳಗ ಮುನ್ನ ಮಾಡಿದ ಸುಕೃತ ಪುಣ್ಯ ತಂಗಾಳಿ ಸಂಪನ್ನ ಗುರು ಕರುಣೋದಯ ದುನ್ನತೆಯ ಬೆಳಗು ಕಂಡು ಸನ್ನುತುದಯರಾಗಸ್ತವನ್ನು ಪಡುತಜ್ಞಾನ ಚನ್ನ ನದಿಯೊಳುಮಿಂದು ತನ್ನ ಸಂಚಿತದ ತ್ರೈಯ ಘ್ರ್ಯನ್ನೆರದು ಮೆರುವುತಿಹ ನಿನ್ನ ಸಿರಿಕರ ನೋಡು ಇನ್ನು ನಾಚಿಕೆ ಬಾರದೇ 1 ಬಂದು ನರದೇಹದಲಿ ನಿಂದಾಗ್ರ ಜನ್ಮದಲಿ ಹೊಂದುಪಥವನೆ ಬಿಟ್ಟು ಛಂದ ಹೊಲಬದಿ ಕೆಟ್ಟು ಮಂದಮತ ತನವೆರಿಸಿ ಮಂದಿಯೊಳಗಲ್ಲೆನಿಸಿ ಪರಿ ಪರಿಯ ಬಯಸೀ ಬೆಂದ ವಡಲನೆ ಹೊರೆದಿ ಕುಂದದಾಟಕೆ ಬೆರೆದಿ ತಂದಾಯುಷವ ಹೊತ್ತು ಇರದಯೇರಿತು ಬೆರೆತು ಮುಂದ ನಿನ್ನಯ ಗತಿಯ ಯಂದು ಘಳಿಸುವೆ ಸ್ಥಿತಿಯಾ ಇಂದಿರೇಶನ ವಲುಮೆಯಾ 2 ಮರಹು ಮುಸುಕವ ತೆಗೆದು ಅರಹುನಯನವ ತೆರೆದು ಪರಮ ಭಾವನೆ ಬಲಿದು ವರ ಭಕುತಿಗಳ ಜಡಿದು ತರಣೋಪಾಯವ ಕೂಡು ಹರಿಯ ಸೇವೆಯ ಮಾಡು ನೆರೆ ಸಾಧು ಸಂಗ ಬೇಡು ಸುರಸ ಬೋಧವ ಕೇಳು ಸರಕುಮಾತನೆ ಕೀಳು ಧರಿಯೊಳಗ ಸಾರ್ಥಕಲಿ ಪರಿಬಾಳುತಲಿರಲಿ ಗುರು ಮಹಿಪತಿಸ್ವಾಮಿ ಹೊರೆವದಯದಲಿ ನೇಮಿ ಶರಣ ಜನರಂತರ್ಯಾಮೀ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬನ್ನಿರಿ ಬನ್ನಿರಿ ದಾಸರೊಂದಾಗಿ ಚನ್ನ ಕೇಶವನರಮನೆಗೆ ಮುಂದಾಗಿ ಪ ಬನ್ನಿರಿ ಹರುಷದಿ ಪೋಗುವಾ ಬೇಗದಿ ಸನ್ನುತ ತಾತನ ಮೆನೆಯೊಳಗಿರುವಾ ಅ.ಪ. ನಿತ್ಯ ನೀಲಾಂಜನೆ ಪರಮ ಪಾವನನ ಭೃತ್ಯರ ಸಲಹುವ ಬರ ಶ್ರೀಧರನ ಪ್ರತ್ಯುಪಕಾರವ ಬೇಡದೆ ಸಲಹುವ ಸತ್ಯನಾರಾಯಣ ದೇವರ ಗುಡಿಗೆ 1 ನಗಧರ ರಂಗನ ಖಗವಾಹನನ ಜಗದೊಳು ಮೆರೆಯುವ ಗೋವಳ ಹರಿಯ ಅಗಣಿತಮದನನ ಸನಕ ವಂದಿತನ ಭೃಗಕುಲ ಶ್ರೇಷ್ಠನ ದೇವರ ಗುಡಿಗೆ 2 ತರಳರ ಸಲಹುವ ಭಜಕರ ಪೊರೆಯುವ ಪರಿಪರಿ ರೂಪದಿ ಮೆರೆಯುವ ಪರಿಯ ಪರಮಾತ್ಮನನ್ನು ಭಕ್ತಿಯಲಿ ಕೀರ್ತಿಸಲಾಗ ಸರಸದಿ ದಾಸರಿಗೊಲಿವ ಕೇಶವನ 3
--------------
ಕರ್ಕಿ ಕೇಶವದಾಸ
ಬರಬಾರದಾಗಿತ್ತು ಬಂದೆನಯ್ಯಾ ಪ ಕರೆತರಲು ಬಂದುದಕೆ ಫಲವೇನೊ ದೇವಾಅ.ಪ ತರಳತನದಲ್ಲಿ ಎನ್ನ ಕರಣಗಳು ಮಾಡಿದ ಪರಿಪರಿಯ ಕ್ರೀಡೆಗಳ ಫಲವೇನೊ ಎನಗೆ ದುರುಳ ಸಂಗದೊಳಿದ್ದು ಹರುಷದಿಂದಲಿ ಎನ್ನ ಆಯುವನು ಕಳೆದೆ1 ಸತಿಸುತರು ಹಿತರಿವರು ಎನಗೆಂದು ಉಬ್ಬುಬ್ಬಿ ಮಿತಿ ಇಲ್ಲದಾ ಕಾರ್ಯಗಳನೆ ಮಾಡೀ ಗತಿಯೇನು ಮುಂದು ಹಿತವು ಯಾವುದು ಎಂದು ಮತಿಗೆಟ್ಟಮೇಲೆನಗೆ ಗೊತ್ತಾಗುವುದೆಂತೋ 2 ಶ್ವಾನ ಸೂಕರಗಳು ಸ್ವೇಚ್ಛೆಯಿಂದಲಿ ಚರಿಸಿ ತನ್ನ ಪರಿವಾರವನೆ ತಾ ಪೊರೆಯುತಿಹವೋ ಎನ್ನ ಸತಿಸುತರುಗಳ ಉದರಪೋಷಣೆಗಾಗಿ ಹೀನಸೇವೆಯಿಂದ ಉಪಜೀವಿಸಲು ಬಹುದೆ 3 ತನುಬಲವು ಇದ್ದಾಗ ಕೋಣನಂದದಿ ತಿರುಗಿ ಜ್ಞಾನ ಕರ್ಮಗಳನ್ನು ಆಚರಿಸದೇವೆ ಧನ ವನಿತೆ ಮೋಹಕೆ ಕೊನೆಮೊದಲು ಇಲ್ಲದೆ ಮನವೆಲ್ಲವನು ನಾನು ಹೊಲೆಗೆಡಿಸಿದಮೇಲೆ4 ವಿಕಳಮತಿಯನು ಹರಿಪ ಅಕಳಂಕ ಹರಿಭಕ್ತ- ರಕುಟಿಲಾಂತಃತರಣ ದೊರೆತು ಎನ್ನ ಸಕಲಾಪರಾಧಗಳ ಕ್ಷಮಿಸುವರ ಸಂಗ ನೀ ಕರುಣಿಸದಿದ್ದ ಮೇಲೆ ಶ್ರೀ ವೇಂಕಟೇಶಾ 5
--------------
ಉರಗಾದ್ರಿವಾಸವಿಠಲದಾಸರು
ಬರುವ ಸಂದಣಿ ಭಾಳೆ ಭಾಳವೆ ಅಲ್ಲಿ ರಂಭೆ ಊರ್ವಶಿಯರ ಸಮ್ಮೇಳವೆ ಪ. ವರಗಿರಿ ವಾಸನ ಕರೆಯ ಬರುವ ಸೊಬಗು ಧರೆಯ ಮ್ಯಾಲಿಲ್ಲ ಸುಂದರಿಯೆ ರುಕ್ಮಿಣಿಯೆ 1 ಪಾಂಚಾಲಿ ಮೊದಲಾದ ಕೆಂಚೆಯರ ಆಭರಣವುಮಿಂಚಿನಂತೆ ಹೊಳೆಯುತ ಸಿದ್ಧರಾಗಿಹರಮ್ಮ ಚಂಚಲೆಯರು2 ಕಾಲಿಂದಿ ಮೊದಲಾದವರು ಭಾಳ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಳಾಶಯನನ ಬಳಿಗೆ 3 ಭದ್ರೆ ಮೊದಲಾದವರು ತಿದ್ದಿ ತಳಪಿಟ್ಟು ಶುದ್ಧ ವಸ್ತಗಳಿಟ್ಟುಸಿದ್ಧರಾಗಿಹರಮ್ಮ ಅನಿರುದ್ದನ ಕರೆಯಲು4 ಮಂದಗಮನೆಯರು ಗಂಧಕಸ್ತೂರಿ ಪುಷ್ಪಅಂದಾಗಿ ಧರಿಸಿ ಆನಂದವಾಗಿಹರಮ್ಮ5 ಕಾಲಂದುಗೆಗೆಜ್ಜಿ ತೋಳಲೆ ತಾಯಿತ ಭಾರಿ ವಸ್ತಗಳಿಟ್ಟು ಲೋಲ್ಯಾಡುತಿಹರಮ್ಮ6 ಅಚ್ಚಮುತ್ತಿನ ವಸ್ತ ಸ್ವಚ್ಚತೋರುವಂತೆ ಬಿಚ್ಚಿ ಚಾದರ ಹೊತ್ತು ಮಚ್ಚನೇತ್ರಿಯರೆಲ್ಲ 7 ಅಂದುಗೆ ಅರಳೆಲೆ ಬಿಂದುಲಿ ಭಾಪುರಿ ಕಂದರಿಗೊಸ್ತಗಳಿಟ್ಟು ಆನಂದವಾಗಿಹರಮ್ಮ8 ಮುತ್ತಿನ ಝಲ್ಲೆ ವಸ್ತಗಳಿಟ್ಟು ಫುಲ್ಲನಾಭನ ಕರೆಯಲು ಎಲ್ಲರೂನಿಂತಾರೆ9 ಶ್ರೇಷ್ಠ ರಾಮೇಶನ ಅಷ್ಷೊಂದು ಕರೆಯಲು ಪಟ್ಟಾವಳಿಗಳನುಟ್ಟು ಧಿಟ್ಟೆಯರು ನಿಂತಾರೆ10
--------------
ಗಲಗಲಿಅವ್ವನವರು
ಬಲ್ಲವನಾದರೀ ತಳ್ಳಿಬೇಡ ಅಲ್ಲದ ಪಥವಿದರಾಸೆಯ ಬಿಡು ನೀನು ಪ ಸರ್ಪನ ಪಣೆಯೊಳು ಜೇನುತುಪ್ಪವ ಕಂಡು ಅಪ್ಪನೆ ತಾರೆಂದು ಅಳುತಿರಲು ತುಪ್ಪದ ಸವಿಯನು ಜನರುಂಡು ತೀರಲು ಮುಪ್ಪಾಗಿಯಿರುವುದ ಕಂಡು ಮೂದಲಿಸುವ 1 ನಂಬಿದ ಮನುಜರ ಹಂಬಲ ಮರವದು ಡೊಂಬಿಯವರು ಕಂಡು ತಡೆಯಲಾಗಿ ಅಂಬರವನು ಕಂಡು ನಗುತಿಪ್ಪ ಮನುಜನ 2 ಅಂಬರವಡಗಿಯೆ ಕುಂಭಿನಿ ಜಾರಿಯೆ ನಂಬಿದ ಮನುಜರು ನಡೆವೆಡೆಯ ಕುಂಭದ ನೀರನು ಚೆಲ್ಲುತ್ತ ಮಗುಳಲ್ಲಿ ಕಂಭದ ಹಾಗೆಲ್ಲ ನಿಂತಿಹ ಜನರನು 3 ಕಟ್ಟಿದ್ದು ಕರಗಿಯೆ ಸೆಟ್ಟೆಲೆ ಒಣಗಿಯೆ ದುಷ್ಟನೊಬ್ಬನು ಬಂದು ನಿಂತಿಹನು ಇಟ್ಟಿಹ ಬಾಗಿಲ ಕಾಣದೆ ತಾ ಬಂದು ಹೊಟ್ಟೆಯ ಬಗಿದಲ್ಲಿ ಹೊರವಂಟ ವೇಳೆ 4 ಕಡಹದ ಪಲ್ಲಕ್ಕಿ ಬೆಡಗನ್ನು ಕಾಣುತ್ತ ಮೃಗ ಬಂದು ಕುಳಿತಿರ್ದುದ ಒಡನೆ ಕಟ್ಟಿದ ವಾಹಕರ್ಹದಿನಾರು ಮಂದಿಯು ಕಡಿಮೆಯ ಸಂಬಳ ಕಡವಿಡುವವರನ್ನು 5 ಅಕ್ಕಿಯ ರಾಶಿಯು ತೀರಲು ಕೊಳಗವು ಬೆಕ್ಕನೆ ಬೆರಗಾಗಿ ಕುಳಿತಿಪ್ಪುದು ಬಿಕ್ಕಿದ ಅಕ್ಕಿಯ ಹಕ್ಕಿಯು ಹೆಕ್ಕಿಯೆ ಗಕ್ಕನೆ ಹಾರುವ ಪಕ್ಷಿಯ ನೋಡುತ್ತ 6 ರವಿಶಶಿಯೊಂದಾಗಿ ಇರುತಿಹ ಗಣಿತದಿ ಧರೆಯೊಳು ಸಾವಿರಯೆಲೆ ಬೀಳ್ವುದು ಎರವಿನಾಭರಣವ ಅವರವರೊಯ್ಯಲು ವರಾಹತಿಮ್ಮಪ್ಪನ ಮರೆ ಬೀಳು ಕಂಡ್ಯ 7
--------------
ವರಹತಿಮ್ಮಪ್ಪ
ಬಲ್ಲೆ ಬಲ್ಲೆನು ಕೃಷ್ಣ ನಿನ್ನ ಮಹಿಮೇ ಪ ಗುಲ್ಲು ಮಾಡದೆ ಬೇಗ ನಿಲ್ಲೈಯ ಮನದಲಿ ಅ.ಪ ತಿರುಪೆ ಬೇಡಿದೆ ಯಾಕೆ ಪರಮ ಪುರುಷನು ಎನಿಸಿ ತುರುವ ಕಾಯ್ದೇಕೆ ಪರಿವಾರ ಸುರರಿರಲು ಕರಡಿಕಪಿಗಳ ಸೈನ್ಯ ನೆರವು ಯಾತಕೆ ನಿನಗೆ ಚರಿತೆ ಸೋಜಿಗವಯ್ಯಾ 1 ಅಷ್ಟಕರ್ತನಿಗೇಕೆ ಸಂತತವು ಜಪತಪವು ಪಟ್ಟ ಮಹಿಷಿಯರಿರಲು ಕುಬ್ಜೆಕೂಡಿದೆ ಯಾಕೆ ಉಟ್ಟು ಸೀರೆಯ ಖಳರ ವಂಚಿಸಿದ ಬಹು ಶೂರ ನಿಷ್ಟೆಯಿಂದಲಿ ಬಲಿಯ ಬಾಗಿಲನು ಕಾಯುವನೆ 2 ಬೆಣ್ಣೆ ಕಳ್ಳರ ಗುರುವೆ ಹೆಣ್ಣು ಕದ್ದವ ನೀನು ಮಣ್ಣು ಮಾಡಿದೆ ಕುಲವ ಯೆಂಜಲುಂಡವ ದೊರೆಯೆ ಅಣ್ಣ ತಮ್ಮಂದಿರಲಿ ಕಲಹವನು ವÀಡ್ಡುತಲಿ ನುಣ್ಣ ಗೆಲ್ಲರ ಮಾಡಿ ನಿಷ್ಕಪಟಿಯೆನಿಸಿದೆಯೊ 3 ಅನ್ಯರಿಗೆ ಉಪಕಾರಿ ಅನನ್ಯರಾ ಶತ್ರುವು ಭವ ಭ್ರಷ್ಟತ್ವ ನೀಡುವೆಯೊ ನಿನ್ನಾಳ ನಿಖಿಳರಿಗು ತೊರ್ಗೊಡದ ಬಹುಗೂಢ ಕಣ್ಣು ಕೈ ಕಾಲೆಲ್ಲ ಸಮವೇನೆ ನಿನಗಯ್ಯ 4 ದೊಡ್ಡ ದೇವನು ಎನಿಸಿ ಗುಡ್ಡವೇತಕೆ ಹೊಕ್ಕೆ ಗಿಡ್ಡರೂಪವ ತೋರಿ ದೊಡ್ಡದಾಗುತ ಎಂದು ಅಡ್ಡಿಯಿಲ್ಲದೆ ಬಲಿಯ ಹೆಡ್ಡನೆನಿಸಲು ಬಹುದೆ ಗುಡ್ಡೆಯಿಲ್ಲದೆ ಚರಿಪ ವಡಲು ಬಗೆದಾ ಘೋರ 5 ಪೂಡವಿಗೊಡೆಯನು ಎನಿಸಿ ಹಡೆದ ಮಾತೆಯ ಕಡಿದೆ ಅಡವಿ ಬೇರನು ತಿಂದೆ ಕಡಲೊಳಗೆ ಸಂಚರಿಪೆ ಮಡದಿಯನು ಕಳಕೊಂಡು ಹುಡುಕುತಲಿ ತಿರುಗಿದೆಯೋ ಸಡಗರದಿ ಹಯವೇರಿ ಕೆಡುಕು ಕಡಿಯುವೆಯಂತೆ 6 ನಾಮಕುಲಗೋತ್ರಗಳ ನೆಲೆಯಕಂಡವರಿಲ್ಲ ಸಾಮಸರಿ ನಿರ್ಗುಣವು ಪೂರ್ಣಗುಣ ನೀನಂತೆ ವಾಮನೀನಾವರಿಸಿ ವಳ ಹೊರಗೆ ಲೋಕಗಳ ನೇಮದಿಂ ಕಾಯುವನು ಪುಡುಕಿದರು ಸಿಗೆಯೇಕೇ 7 ಮಂಗಳಾಂಗನು ಅಂತೆ ಲಿಂಗವರ್ಜಿತನಂತೆ ಶೃಂಗಾರರಸನಂತೆ ಭಂಗರಹಿತನು ಅಂತೆ ಲಿಂಗವೆರಡೂ ಅಂತೆ ಸಿಸ್ಸಂಗ ನೀನಾಗಿ ಅಂಗದಲಿ ಅಂಗನೆಯ ಧರಿಸಿ ಮೆರೆಯುವೆಯೇಕೆ 8 ವೇದ ಬೋಧೆಯನಿತ್ತಗಾಧ ವರ್ಜಿತ ಮಹಿಮ ಮೋದ ಮಯ ನೀ ನಿನ್ನ ನಾದಿನಿಯ ಬೆರೆದೇಕೆ ಸಾಧುಗುಣಪೂರ್ಣ ಭಾನುವನು ಮರೆ ಮಾಡಿ ಮೈದುನನ ಸಲಹಿದ್ದು ಬಹುನ್ಯಾಯ ವೇನೈಯ್ಯ 9 ಹಾಲು ಕೊಟ್ಟವಳನ್ನು ಲೀಲೆಯಿಂದಲಿ ಕೊಂದೆ ಶೀಲಸತಿಯಳ ಬೆರದು ವ್ರತವಳಿದು ಪರವಿತ್ತೆ ಕಾಲನಾಮಕನಾಗಿ ಜಗವೆಲ್ಲ ನುಂಗುವನೆ ಹೇಳುವರು ಕೇಳುವರು ನಿನಗಿಲ್ಲವೇನೈಯ್ಯಾ 10 ಏನೆಂದು ವರ್ಣಿಸಲಿ ನಿನ್ನಯ ವಗತನವ ಸತಿ ಚಂಚಲೆಯು ಮಗಳ ಮಾರ್ಗವುಡೊಂಕು ಮಾನಾಭಿಮಾನಗಳ ಬಿಟ್ಟವರೆ ಪರಿವಾರ ನೀನಿರದಠಾವಿಲ್ಲ ನಿನಗಿಲ್ಲ ತುದಿಮೊದಲು 11 ಸರ್ವಜ್ಞನಾದವಗೆ ಸಾಂದೀಪ ಗುರುವೇಕೆ ಸರ್ವ ನಾಮವು ಕೂಡೆ ನಾಮಕರಣವು ಏಕೆ ಸರ್ವಸ್ವಾಮಿಯು ಎನಿಸಿ ಸಾರಥಿಯು ಆದೇಕೆ ಸರ್ವ ತೋಮುಖ ನೀನು ಜಗವಿಲಕ್ಷಣ ನೈಯ್ಯಾ12 ಒಬ್ಬರಲಿ ನೀಜನಿಸಿ ಮತ್ತೊಬ್ಬರಲಿ ನೀ ಬೆಳೆದೆ ತಬ್ಬಲಿಯೆ ವಾಸ್ತವದಿ ಉಬ್ಬಿಳಿತವರ್ಜಿತವೆ ಅಬ್ಬಬ್ಬ ಬ್ರಹ್ಮಾಂಡ ಹಬ್ಬಿ ನಡೆಸುವ ಧೀರ ಕೊಬ್ಬಿದಾ ಖಳಗಂಜಿ ಮಧುರೆಯನು ತೊರೆದೇಕೊ 13 ಮೇದಿನಿಗೆ ನೀ ಸ್ವಾಮಿ ಮದುವಾದೆ ಮಗಳನ್ನು ಬೈದವಗೆ ಗತಿಯಿತ್ತೆ ಭಕ್ತರಿಗೆ ಕೂಳಿಲ್ಲ ಮೋದ ಮಯ ನುಂಡುಣಿಸಿ ನಿರ್ಲೇಪನೀ ನಿರ್ಪೆ ವಿದುರ ನೌತಣ ಕೊಂಡೆ ಕನ್ಯೆಯಲಿ ನೀ ಬಂದೆ 14 ಜಯ ಮುನಿ ಹೃದಯದಲಿ ವಾಯುವಿನಂತರ ದಿರ್ಪ ಶ್ರೀಯರಸ ತಾಂಡವ ಕೃಷ್ಣವಿಠಲನೆ ನೀನು ಮಾಯಾವಿ ತೋರಗೊಡೆ ನಿಜಮರ್ಮಖಳಜನಕೆ ಜೀಯನೆ ಮೊರೆಹೊಕ್ಕೆ ನಿನ್ನಿರವ ತೋರೈಯ್ಯಾ 15
--------------
ಕೃಷ್ಣವಿಠಲದಾಸರು
ಬಲ್ಲೆ ಬಲ್ಲೆನು ನಿನ್ನ ಬಾಳ ಪ್ರತಾಪವಎಲ್ಲಾ ಲೋಕ ಲೋಕದಿ ಪ ಭಂಗ ಪಡಿಸಿದೆ ನಿನಗೆಣೆ-ಯಿಲ್ಲ ಶನೈಶ್ಚರನೆ ಅ ಹರಿಹರ ಬ್ರಹ್ಮಾದಿಗಳ ಭಂಗಪಡಿಸಿದೆ ಕರುಣವಿಲ್ಲವೆ ನಿನಗೆ ಹರಿಶ್ಚಂದ್ರ ನಳಚಕ್ರವರ್ತಿ ಷೋಡಶ ಮಹಾರಾಯ ಪಾಂಡ್ಯರ ದಣಿಸಿ ತೋರಿಸಿದೆ ಮನೆ ಮನೆ ವಾರ್ತೆಗಳೆಲ್ಲವ ತಿರಿದುಂಡು ಮರುಳುಗೊಂಡು ಪರರ ಪೀಡಿಸಿ ಭ್ರಮೆಪಟ್ಟು ಲಜ್ಜೆಗೆಟ್ಟು ತಿರುಗುವಂದದಿ ಮಾಡಿದೆ 1 ಕಟ್ಟಿದ ಪಶು ಕರೆಯದು ತಾನಾಡಿದ ಮಾತು ಕಟ್ಟದು ಸಭೆಯೊಳಗೆ ಮೆಟ್ಟಿದ ನೆಲ ಮುನಿವುದು ಹೊನ್ನ ಹಿಡಿದರೆ ಬಕ್ಕಟ್ಟೆ ಬಯಲಹುದು ಉಟ್ಟದ್ದು ಹಾವಾಗಿ ಹರಿವುದು ಸಾಲಿ-ಗರಟ್ಟುಳಿ ಘನವಹುದು ಮುಟ್ಟ ಹೇಸುವರು ಕುರುಹ ನಾರಿಯರು ನೆಂಟರಿಷ್ಟರೆ ಕಾಣರು 2 ಸತಿ ಬದ್ಧದ್ವೇಷದಿ ಬೈವಳು ಇದ್ದ ಮನುಜರ ಪಾಡೇನು ನೀ ಬಂದು ಹೊದ್ದಿದ ಮಾತ್ರದಲಿ ನಿದ್ದೆ ಹಸಿವು ಬಳಲಿಕೆ ದಟ್ಟ-ದಾರಿದ್ರ್ಯವು ಕೈಗೊಂಬುದು 3 ಒಳ್ಳೆದಾಗಿದ್ದ ಸಂಗಾತಿಯ ಸ್ನೇಹವೆಲ್ಲವನು ಬಿಡಿಸಿ ಅಲ್ಲಲ್ಲಿ ಕೊಡುವ ದಾನಿಗಳ ಮನದಿ ಪೊಕ್ಕು ಇಲ್ಲಿಲ್ಲ ಹೋಗೆನಿಸಿ ಇಲ್ಲದ ಅಪವಾದ ಭಾಳ ಕಂಟಕ-ರೋಗದಲ್ಲಿ ನೋಯಿಸಿ ಒಲ್ಲೆನೀ ಜನ್ಮವೆಂದೆನಿಸಿ ಸಾಧಿಸಿ ಕಡೆಯಲ್ಲಿ ಗುಣ ತೋರಿಸಿ4 ದೇಶದೇಶದ ರಾಯರ್ಗಳನೆಲ್ಲರನು ಪರದೇಶಿಗಳನು ಮಾಡಿದೆ ವಾಸವನೆ ಬಿಡಿಸಿ ತಿರುಗಿಸಿ ಗಾಸಿ-ಯಿಂದಲೆ ನೋಯಿಸಿ ಶೇಷಶಯನ ಸರ್ವೇಶ ದೇವೇಶನೆ ಲೇಸು ಪಾಲಿಸೊ ಎನಗೆ ದೇಶದಂತರ್ಯಾಮಿ ನೆಲೆಯಾದಿಕೇಶವತೋಷದಿ ಸಲಹೊ ಎನ್ನ 5
--------------
ಕನಕದಾಸ