ಒಟ್ಟು 908 ಕಡೆಗಳಲ್ಲಿ , 94 ದಾಸರು , 779 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನ್ನಿಂತಾವಳೀ ಜಗದೊಳುಂಟೇನೆ ರಮಣೀ ಪ ನಿಂತಾಗೆ ನುಂಗಿದಳು ಕಂತೆ ಕಬ್ಬಾ ಅ.ಪ ಗರತಿಯು ತಾನಲ್ಲ ಗೌಡಿಯ ತಾನಲ್ಲ ಗುರುತೇಳುತದೆ ನೀವೆದ್ದರೆ ಕೇಳಿರೈ ಸರಿತಾಯಿ ಪರಿಯುತ್ತೆ ವರಗಂಡನಿಗೆ ಮೋಸ ಕರಿಯುತ್ತಳಿಹ ಪ್ರಖ್ಯಾತ ನಳ್ಳಿಯೊಳು 1 ಆದಿಲಿ ಹೊಗ ಪರಬೀದಿಯೊಳು ತಾನೆಂತೂ ವಾದಿಸಿ ಅವರೊಳು ಭೇದವಿಡಿದೆ ಕಾದಿರುವೆ ನಿನಗಾಗಿ ಕಾಮನಯ್ಯನೆ ಬಾರೊ ವೇದಗೋಚರ ಗುರು ಶ್ರೀತುಲಸೀರಾಮಾ2
--------------
ಚನ್ನಪಟ್ಟಣದ ಅಹೋಬಲದಾಸರು
ನ್ಯಾಯದ ನುಡಿ ನರಲೀಲೆಗಿದು ಬಲ್ಲವರಲಿ ಸಲ್ಲದು ನ್ಯಾಯದ ನುಡಿ ನರಲೀಲೆಗಿದು ಪ. ಮಾಯಾತೀತ ಮನೋಭವತಾತ ಪ ರಾಯಣ ತವ ಗುಣ ನಾನೆಂತರಿವೆನು ಅ.ಪ. ಪಾದ ಶ್ರೀದ ಚೆಲುವೆ ರಮಾಕರನಳಿನಾಶ್ರಯಕರಮಾದ ಜಲಜಭವಾದಿ ಸುರಾಳಿಗಳರ್ಚಿಪ ಸುಲಲಿತ ತವ ಪದದೊಲವೆಂತರಿವೆನು 1 ಶರಣಾಗತಜನ ದುರಿತನಿವಾರಣ ನೀನು ಇನ್ನೇನು ತರುಣೀಮಣಿಯಳ ಸೆರೆಯನು ಬಿಡಿಸುವದಿನ್ನು ಕರುಣಾಕರ ನಿನ್ನ ಸ್ಮರಿಸುವಳನುದಿನ ಸ್ಥಿರಚರ ಜೀವಾಂತರ ಪರಿಪೂರ್ಣನೆ2 ಆಕ್ಷೇಪಿಸದಿರು ರಕ್ಷಿಸು ರಘುಕುಲಚಂದ್ರ ರಾಜೇಂದ್ರ ಲಕ್ಷ್ಮೀನಾರಾಯಣ ಸದ್ಗುಣ ಗಣಸಾಂದ್ರ ಈಕ್ಷಿಸು ಕರುಣಾಕಟಾಕ್ಷದಿ ಪೂರ್ವದ ಲಕ್ಷಣ ಹೊಂದಲಿ ಲಕ್ಷ್ಮಣಾಗ್ರಜನೆ3
--------------
ತುಪಾಕಿ ವೆಂಕಟರಮಣಾಚಾರ್ಯ
ಪಂಚಮಿಯ ದಿನ ವಿಭವ ನಮ್ಮ ಶ್ರೀನಿವಾಸನ ಮಹಾತ್ಮವ ಮಾನಿನಿ ರನ್ನೆ ನೀ ಪೇಳೆ ಭಕ್ತಾ- ಧೀನದ ಚರಣದ ಲೀಲೆ ಭಾನು ಉದಯದಲಿ ವೀಣಾದಿ ಸು- ಗಾನ ವಾದ್ಯ ನಾನಾವಿಧ ರಭಸದಿ1 ಎತ್ತಲು ನೋಡಿದಡತ್ತ ಜನ- ಮೊತ್ತವಿಲಾಸವಿದೆತ್ತ ಚಿತ್ತದಿ ನಲಿನಲಿದಾಡಿ ತೋಷ- ವೆತ್ತಿರುವನು ಒಟ್ಟುಗೂಡಿ ಸುತ್ತುಮುತ್ತು ಒತ್ತೊತ್ತಿಲಿಹರು ವಿ- ಪ್ರೋತ್ತಮ ಶ್ರೀಹರಿಭಕ್ತರ ಮಯವಿದು2 ಚಾಮರ ಛತ್ರ ಸಿಗುರಿಯು ಜನ- ಸ್ತೋಮ ಪತಾಕೆ ತೋರಣವು ಹೇಮದ ಕಂಚುಕಿ ಈಟಿ ಗುಣ- ಧಾಮನ ಬಿರುದುಗಳ್ ಕೋಟಿ ಆ ಮಹಾಭೇರಿ ಪಟಹ ನಿಸ್ಸಾಳಕ ಸಾಮಗಾನ ಸಾಮ್ರಾಜ್ಯವೋಲಿಹುದು3 ಬಾಲರು ವೃದ್ಧ ಯೌವನರು\ಜನ- ಜಾಲವೆಲ್ಲರು ಕೂಡಿಹರು ಲೋಲ ಸ್ರೀಮುಂದ್ರಾಂಕಿತದಿ ಬಹು ವಿ- ಶಾಲ ದ್ವಾದಶನಾಮ ಮುದದಿ ಆಲಯದೊಳಗಿಹ ಬಾಲಕಿಯರು ಸಹ ಸಾಲಂಕೃತ ಸಮ್ಮೇಳದಿ ನಲಿವರು4 ಒಂದು ಭಾಗದಿ ವೇದಘೋಷ ಮ- ತ್ತೊಂದು ಭಾಗದಿ ಜನಘೋಷ ಇಂದಿನ ದಿನದತಿಚೋದ್ಯ ಏ- ನೆಂದು ವರ್ಣಿಸುವದಸಾಧ್ಯ ಚಂದಿರಮುಖಿ ಯಾರೆಂದೆನಗುಸುರೆಲೆ ಮಂದರಧರ ಗೋವಿಂದನ ಮಹಿಮೆಯ5 ಊರ್ವಶಿ : ಕೇಳಿದ್ಯಾ ನಳಿನಾಕ್ಷಿ ಶ್ರೀಹರಿಲೀಲೆ ಪೇಳಲೇನದಾ ಮೂರ್ಲೋಕದೊಳಗೀ ವಿ- ಶಾಲವ ನಾ ಕಾಣೆಪ. ಸೋಜಿಗ ಸೌಭಾಗ್ಯ ಸಂಪದಕಿದು ಬೀಜ ಕಾಣೆಲೆ ರಾಜೀವನಾಭನ ಪೂಜಾವಿನೋದದಿ ರಾಜವದನೆ ವನಭೋಜನದಿಂದಿನ1 ನೇತ್ರದ ಕಲ್ಮಷವಡಗುವದು ಪವಿತ್ರವಾಗಿಹ ಗೋತ್ರಕುಮಾರಿ ಪ್ರೀತ್ಯರ್ಥದಿ ಕೊಟ್ಟಿಹ ರಾತ್ರಿ ಪೂಜೆ ಗೈವ ಮಾತ್ರದಿ ಪೊರಟರು2 ನೂತನವೆಂದು ನೀ ಪೇಳುವಿ ಚಂದಿರ ಮುಖಿ ಜನಸಂದಣಿಗಳು ಮಹಾ ಮಂದಿ ಓಲೈಸುವರಿಂದು ಮುಕುಂದನ3 ಬಾರೆ ನಾರೀಮಣಿ ವೈಯ್ಯಾರೆ ನೀರೆ ಬಾರೆಪ. ನಿನ್ನಿಂದಾಯಿತ್ತು ಪುಣ್ಯ ಸಂಪಾದನೆ ಕಣ್ಣಾರೆ ಕಾಣುವ ಯೋಗಭೋಗ1 ಎನಗತಿ ಮನವು ನಿನಗತಿ ಛಲವು ಜನುಮಾಂತರ ಪುಣ್ಯವೈಸೆ ನೀ2 ರಂಭೆ : ಏನಮ್ಮ ಬಾರಿತ್ತಲು ನೋಡೀತನ್ಯಾರಮ್ಮಾ ಭಾನುಕೋಟಿ ಪ್ರಕಾಶದಿಂದ ಮೆರೆವನಮ್ಮಾಪ. ಅನವರತದಿಂದ ಬರುವ ಪುರುಷನಲ್ಲ ಮೀನಕೇತನ ಶತರೂಪ ಕಾಣೆ1 ನೂತನ ಪುರುಷನಿವನ್ಯಾರೆಂದರಿಯೆನಮ್ಮಾ ಶಾತಕುಂಭದ ಮಂಟಪವೇರಿ ಬರುವನಮ್ಮಾ2 ಸುರುಚಿರಫಣಿಪ ಪೆಡೆ ಶಿರದೊಳಿರುವದಮ್ಮಾ ತರತರ ರತ್ನವರದ ಬಾಯೊಳಿರುವದಮ್ಮಾ3 ಕೊರಳೊಳು ಕೌಸ್ತುಭವ ಧರಿಸಿಕೊಂಡಿಹನಮ್ಮಾ ಪರಮ ಪುರುಷನಂತೆ ತೋರುವನು ಅಮ್ಮಾ4 ಬಾಲಾರ್ಕನಂತೆ ಮುಖ ಪ್ರಜ್ವಲಿಪುದು ನೀಲಮಾಣಿಕ್ಯ ಕಾಂತಿಯ ಸೋಲಿಪುದು5 ತೋರಲರಿಯೆ ಕಾಲಿಗೆರಗುವೆನು ಪೇಳಬೇಕು ಸಖಿಯೆ6 ಕರದೊಳು ಶಂಖಚಕ್ರವ ಧರಿಸಿಕೊಂಡಿಹನಮ್ಮಾ ಬೆರಳೊಳು ವಜ್ರದುಂಗುರವನಿಟ್ಟವನಮ್ಮಾ7 ವರರತ್ನಖಚಿತದಾಭರಣದಿಂದ ಮೆರೆವ ಚರಣ ಸರೋಜದೊಳು ರೇಖೆಯಿಂ ಶೋಭಿಸುವ 8 ವಲ್ಲಭೆಯರ ಸಹಿತುಲ್ಲಾಸದಿ ಬರುವ ಖುಲ್ಲರ ಮಾನಸಕೆ ಝಲ್ಲೆನಿಸಿ ಮೆರೆವ9 ಬಲ್ಲಿದ ಪುರುಷನಿವನೆಲ್ಲಿಂದ ಬಂದ ಎಲ್ಲವ ಪೇಳೆಲೆಗೆ ನಲ್ಲೆ ಸದಾನಂದ10 ಊರ್ವಶಿ : ನೋಡು ನಿತ್ಯಾನಂದಕರನ ಮೂಡಗಿರಿಯಿಂದೋಡಿ ಬಂದನ ನೋಡೆಪ. ಛಪ್ಪನ್ನೈವತ್ತಾರು ದೇಶ ಸರ್ಪಶೈಲ ರಾಜವಾಸ ಚಪ್ಪರ ಶ್ರೀ ಶ್ರೀನಿವಾಸ1 ತಿರುಗುತ್ತಿಪ್ಪಾ ತಿರುಮಲೇಶ ಶರಣ ರಾಮನ ಭಕ್ತಿಪಾಶ ದುರುಳಿನಲಿ ನಿಂದಿರ್ಪಶ್ರೀಶ ತರಿಸುವನು ಕಾಣಿಕೆ ವಿಲಾಸ2 ಪಟ್ಟದರಸನಾದ ದೇವ ಸೃಷ್ಟಿಯಾಳುವಜಾನುಭಾವ ದೃಷ್ಟಿಗೋಚರವಾಗಿ ಕಾಯ್ವ ಇಷ್ಟವೆಲ್ಲವ ಸಲಿಸಿ ಕೊಡುವ 3 ಊರ್ವಶಿ : ಬಂದ ಗೋವಿಂದ ಸಾನಂದದಿ ಭಕ್ತರ ವೃಂದ ನೆರಹಿ ವನಕೆ ಅಂದಣವೇರಿ ಮುಕುಂದನೊಲವಿನಲಿ ಕುಂದಣ ಮಂಟಪವೇರಿ ಮತ್ತೊಬ್ಬನು ಸಂದರುಶನವಂ ನೀಡುತ ಯಿಬ್ಬರು ಒಂದಾಗುತ್ತಾನಂದವ ಬೀರುತ್ತ 1 ಅಕ್ಕ ನೀ ನೋಡು ಬಹುಮಾನದಿ ಸಿಕ್ಕಿದಿ ಬಿರುದು ಪೊತ್ತಾ ಉಕ್ಕುವದತಿ ತೋಷ ಸ್ತುತಿಪಾಠಕ ಜನಗಳ ಮಿಕ್ಕಿ ನೊಡುವ ನೋಟಕೆ ಮನಸಿನೊಳು ಝಕ್ಕೆನ್ನುವ ಕ್ಷಿತಿಗಕ್ಕಜ ತೋರುತ್ತಾ 2 ಪವಿತ್ರ ನಿಶಾನಿಧಾರಣಾ ಪವಿತ್ರಗೈಯುವ ಕಾರಣ ಮಿತ್ರಮಂಡಳವನು ಮೀರಿ ಪೊಳೆವುತಿಹ ರತ್ನಖಚಿತ ಮಂಟಪದಲಿ ಮಂಡಿಸಿ ಧಾತ್ರಿಯೊಳಗೆ ಅನ್ಯತ್ರವಿಲ್ಲೆಂಬುವ ಕೀರ್ತಿಯ ಧರಿಸಿ ಜಗತ್ರಯಪಾವನ 3 ನಿಸ್ಸಾಳ ಪಟಹ ಭೂರಿ ಜನ ಜಾಲ ಕೂಡಿರುವ ಮೇಳವಿಸುತ್ತನುಕೂಲಿಸಿ ಬಹು ಬಿರು ದಾಳಿಗೆ ಸಂಭ್ರಮದೇಳಿಗೆಯಿಂದಲಿ ಕೋಲು ಪಿಡಿದು ಓಹೋಯೆಂಬಂಥ ವಿ- ಶಾಲ ಭಕ್ತರ ಮೇಲು ಸಂತೋಷದಿ 4 ದೇಶದೇಶದ ಜನರು ನಾನಾ ವಿಧ &ಟಿ
--------------
ತುಪಾಕಿ ವೆಂಕಟರಮಣಾಚಾರ್ಯ
ಪತಿಯಿಂದಲೆ ಸದ್ಗಿತಿಯೆಂಬುವಳು ಅತಿಮತಿಯೆನ್ನುವಳು ನಮ್ಮ ಶ್ರೀದೇವಿ ಪ ಕ್ಷಿತಿಯೊಳು ತನ್ನಯ ಪತಿಯೊಳು ಸಲ್ಲದೆ ಇತರವನೆಣಿಪಳೆ ಮೂದೇವಿ ಅ.ಪ ಗಂಡನು ಪುಂಡನು ಕುರುಡನು ಕುಂಟನು ಭಂಡಾಂಗನೆಯಂ ಕಲಹಿಪಳೆ ಮೂದೇವಿ 1 ಅತ್ತೆಮಾವನ ಹೇಳಿಕೆಗೆ ಪ್ರ ತ್ಯುತ್ತರಳಲ್ಲ ಶ್ರೀದೇವಿ ಕತ್ತೆಯಂತೆ ತಾ ಬಗಳುವ ಕಳ್ಳ ಚಿತ್ತಿನಿ ಹವುದೆಲೊ ಮೂದೇವಿ 2 ಅರಿಸಿನ ಕುಂಕುಮ ಹಣೆಯೊಳಗಿಡುವಳು ಅಡಿಯಾ ಗಿರುವಳು ಶ್ರೀದೇವಿ ಅನು- ಕರಿಸಲು ಬಾರದೆ ಕಳವಳಗೊಳುವಳು ಕರಠೆಕಮಾನಳು ಮೂದೇವೀ 3 ಶಿರಬಾಗಿ ತನ್ನರಸನ ಸೇವೆಯ ಹರುಷದೊಳಿರುಪವಳೆ ಶ್ರೀದೇವೀ ಕರಸಲು ಬಾರದೆ ಕಳವಳಗೊಳುವಳು ಕರಟಕ ತನುವಳು ಮೂದೇವೀ 4 ಇರುವ ಅತಿಥಿ ಅಭ್ಯಾಗತಗಳಿಗುಪ ಚರಿಸುವಳೆ ನಮ್ಮ ಶ್ರೀದೇವಿ ಗುರುವು ತುಲಶಿರಾಮಯೆಂದೆನ್ನುತ ಭಜಿಸದೆ ಯಿರುವಳೆ ಮೂದೇವೀ 5
--------------
ಚನ್ನಪಟ್ಟಣದ ಅಹೋಬಲದಾಸರು
ಪಥ ನಡೆಯದಯ್ಯ ಪರಲೋಕ ಸಾಧನಕೆ - ಮ-ನ್ಮಥನೆಂಬ ಖಳನು ಮಾರ್ಗವ ಕಟ್ಟಿ ಸುಲಿಯುತ್ತಿರೆ ಪ ಗಜ ಕಾಯ ಕಾಂತಾರವೆಂಬ ಮಾರ್ಗದಿಸ್ತನದ್ವಯ ಕಣಿವೆಯ ಮಧ್ಯೆ ಸೇರಿಹನು 1 ಮದನ ಮಾರ್ಗವ ಕಟ್ಟಲುಬಲವುಳ್ಳ ಭಕ್ತ ಮುನಿ ಸಂನ್ಯಾಸಿ ಯೋಗಿಗಳುಸುಲಿಸಿಕೊಂಡರು, ಕೆಲರು ಸಿಕ್ಕಿದರು ಸೆರೆಯ 2 ಸುರರು ದಾನವರು - ಕ-ಟ್ಟಾಳು ಮನ್ಮಥನ ಛಲದಂಕ ಬಿರುದುಪೇಳಲೆನ್ನಳವೆ ಬಡದಾದಿಕೇಶವರಾಯ-ನಾಳ ಸಂಗಡ ಹೋದರಾವ ಭಯವಿಲ್ಲ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಪಥವ ಬಿಡು ಬಿಡು ದೇವ ಪಥದಿ ಮಲಗುವರೆಗತಿ ಚಿದಾನಂದನಿರೆ ಗತಿಗೆಡುವೆನೆ ಭಯಕೆ ಪ ಭವ ಹರಿದುನಿಲ್ಲದಲೆ ನಾನೀಗಲೈ ತರಲಿಕೆಇಲ್ಲಿ ಸರ್ವವೆ ಆಗಿ ನೀ ಬಂದು ಮಲಗಿರುವೆಸುಳ್ಳನಿತು ಸೇರದಿದು ನಿನ್ನವಗೆ ಬಿಡು ಪಥವ1 ಮನುಜ ಸಂಗವನಳಿದು ಮಹದರಣ್ಯವ ಹೊಕ್ಕುಅನಂತರದ ಪುಣ್ಯದಾಶ್ರಮವ ನೋಡಿಸನುಮತದಿ ಪೂಜೆಯನು ಮಾಳ್ಪೆನಾನೆಂದು ಬರೆಘನಸರ್ಪವಾಗಿ ನೀನಡ್ಡ ಬಿದ್ದಿಹೆ ದೇವ 2 ಸಕಲ ಸಂಗವನುಳಿದು ಸ್ವಾನುಭಾವಗಳಿಂದಅಖಿಲ ಮೃಗಗಳ ಕೂಡಿ ನಿಶ್ಚಲತೆಯಿಂದಭಕುತಿಯಲಿ ನಿನ್ನನು ಭಜಿಪೆನೆಂದೈದುತಿರೆಭಕುತನಿಗೆ ಸರ್ಪನಂತಿಹುದಿದೇನೈ ಸ್ವಾಮಿ3 ಏಕಾಂತ ಗೃಹಗಳಲಿ ಏಕಾಂತ ಸ್ಥಳಗಳಲಿಏಕಾಂತವಾಗಿ ನಿನ್ನನೆ ಪೂಜಿಸಿಏಕಾಂತ ಸರ್ವಸಾಧನವೆನುತಲೈದುತಿರೆಏಕಾಂತ ಮಾತೇಕೆ ಪಥವ ಬಿಡು ಎಲೆ ದೇವ 4 ಶುಕಗೆ ಪಂಜರದಂತೆ ಸಾಕ್ಷಿಯೆನಗಿರುತಿರಲುಅಖಿಲ ಚಿಂತೆಯ ಗಿಡುಗ ಬರಲಹುದೆಮುಕುತಿದಾಯಕ ಚಿದಾನಂದ ಗುರು ಕೇಳೆನಗೆಯುಕುತಿಯುಂಟೇ ಬೇರೆ ಬಿಡುಬಿಡಿರೆ ಬಿಡು ಪಥವ5
--------------
ಚಿದಾನಂದ ಅವಧೂತರು
ಪನ್ನಗ ನಗಾಧೀಶ ಅಗಣಿತ ಗುಣಾನಂದ ಚಿದ್ಘನ ಪರೇಶ ಪ. ಜಗದ ಜೀವರಿಗೆ ಬಗೆ ಬಗೆ ವೇಷವ ತೊಡಿಸಿ ಸೊಗಸಿನಿಂದಲಿ ನೋಡಿ ನಗುತಲಿಹೆಯೊ ತ್ರಿಗುಣಮಾನಿನಿಯೊಡನೆ ಹಗಲಿರುಳು ಕ್ರೀಡಿಸುತ ಮಿಗೆ ಹರುಷದಿಂದಿರುವ ಖಗವರಧ್ವಜ ಹರಿಯೆ 1 ನಾನಾವತಾರದಲಿ ನಂಬಿದ ಸುರಾದಿಗಳಿ- ಗಾನವಾರಿಧಿಯ ಸ್ನಾನ ಮಾಡಿಸುವಿ ದೀನತ್ವದಲಿ ನಿನ್ನ ಧ್ಯಾನವೇ ಗತಿಯೆಂದು ನಾನಿದಿರು ಬಂದೆರಗೆ ಮಾನಿಸದೆ ಮರುಳಾಗಿ 2 ಅಂತರಾತ್ಮಕನಾಗಿ ಚಿಂತನಾದಿಗಳ ಬಲ ವಂತದಲಿ ನೀನೆ ಮಾಡಿಸಿದ ಮೇಲೆನ್ನ ಇಂತು ಬಳಲಿಸುವ ದುರಂತ ಮಹಿಮನೆ ನಿನಗೆ ಕಂತು ಬ್ರಹ್ಮರ ಜನಕ 3 ನಾನು ನನ್ನದು ಎಂಬ ಮಾನವಿತ್ತದರಿಂದ ಈ ನಳಿನಜಾಂಡವದೊಳು ನಾನು ಸಿಲುಕಿಹೆನು ಮಾನಾಭಿಮಾನಿಗಳ ನೀನೀವುದರಿಂದ ದೀನತನ ಕಳದು ಸನ್ಮಾನ ಪಾಲಿಸು ದೇವ 4 ತಂದೆತಾಯಿಗಳು ನಿಜ ಬಂಧುಬಳಗಗಳೆಲ್ಲ ಒಂದೊಂದು ಜನ್ಮದಲಿ ಬ್ಯಾರೆಬ್ಯಾರಹರು ಎಂದೆಂದಿಗೂ ನೀನೆ ತಂದೆ ನಿನ್ನರಸಿ ತಾ- ಯ್ಯೆಂದು ತಿಳಿಹೆನು ಮುಚಕುಂದ ರಕ್ಷಕ ಸ್ವಾಮಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪರಮ ಕಾರುಣ್ಯ ಗುರು ಕರುಣಿಸೆನಗ್ಹರಿ ಪದವ ಶರಣೆಂದು ನಮಿಪೆ ನಿಮಗೆ ಪ. ಹರಿಯ ದಾಸತ್ವದಲಿ ವರದೀಕ್ಷೆಯನೆ ಕೊಟ್ಟು ಕರುಣಿಸಿ ಕೃಪೆಗೈದಿರಿ ಗುರುವೆ ಅ.ಪ. ಅಂಕಿತವ ಮೊದಲಿತ್ತು ಹೃದಯಾಂಕದಲಿ ನಿಲಸಿ ಮಂಕುಬುದ್ಧಿಯ ತೊಲಗಿಸಿ ಶಂಖ ಚಕ್ರಾಂಕಿತನ ಪದಕಮಲವನು ಮನ ಪಂಕಜದೊಳಗೆ ತೋರಿ ಶಂಕರಾರ್ಚಿತನ ಕೃಪೆ ಎನ್ನೊಳಾಗಲಿ ಎಂದು ಶಂಕಿಸದೆ ವರವಿತ್ತಿರಿ ಗುರುವೆ 1 ಶ್ರೀನಿವಾಸನು ನಿಮ್ಮೊಳ್ ಸಾನುರಾಗದಿ ನೆಲಸಿ ತಾನಿತ್ತ ದಾಸತ್ವವ ಏನೆಂಬೆ ಈಗಭಿಮಾನವ ತೊರೆ ಎನುತ ತಾ ನುಡಿಸುತಿಹನು ನಿಮ್ಮೊಳ್ ಮಾನಾಭಿಮಾನ ಹರಿ ಗುರುವಶವಾಗಿರಲು ನಾನಳುಕಲಿದಕೇತಕೆ ಗುರುವೆ 2 ಸ್ವಪ್ನದಲಿ ದಾಸತ್ವ ಸಿದ್ಧಿಸಲಿ ಎಂದೆನುವ ಅಪ್ರತಿಮ ನುಡಿ ಕೇಳಿದೆ ಕ್ಷಿಪ್ರದಿಂದಲಿ ಕರುಣಿಸಿದಿರೆನಗಾಗಿದನಿನ್ನು ತಪ್ತವಾಯಿತು ಭವದ ದುರಿತ ಆಪ್ತಗುರು ನಿಮ್ಮಂಥ ಮಹಿಮರನು ನಾ ಕಾಣೆ ಗುಪ್ತದಲಿ ಜಗದಿ ಮೆರೆವ ಗುರುವೆ 3 ಇತ್ತಿರೆನಗೊಂದೊಂದೆ ದಾಸತ್ವ ಸಾಮಗ್ರಿ ಅತ್ಯಧಿಕ ಕರುಣೆಯಿಂದ ನಿತ್ಯವಾಗಿರಲಿ ಹರಿದಾಸತ್ವ ಇಹ ಪರದಿ ಸತ್ಯವಂತರ ಕೃಪೆಯಲಿ ನಿತ್ಯದಲಿ ನೀತ ಗುರು ನಿಮ್ಮಿಂದ ನಿಜ ರೂಪ ವ್ಯಕ್ತವಾಗಲಿ ಜ್ಞಾನದೀ ಗುರುವೆ 4 ಸಿರಿ ತಂದೆ ಮುದ್ದುಮೋಹನದಾಸರಾಯ ಗುರುವೆ ನಿಮ್ಮ ಕರುಣದಿ ಪರಿ ಪರಿ ಭವಪಾಶ ದುರಿತಗಳು ದೂರಾದವು ಪರಮ ಸಾತ್ವಿಕರೆ ಸಿರಿವರನ ಪದ ಭಜಿಪಂಥ ವರದೇವತಾಂಶರೆನಿಪ ಗುರುವೆ 5 ಮಂದರಿಗೆ ಬಹು ಮಲಿನರಂದದಲಿ ತೋರುತ ಕಂದರ್ಪಪಿತನ ಸ್ಮರಿಪ ಒಂದೊಂದು ವ್ಯಾಪಾರ ಅರಿಯಲಳವಲ್ಲಿನ್ನು ಮಂದಮತಿಯಾದ ಎನಗೆ ಬಂದು ಭೂಲೋಕದಲಿ ಸಜ್ಜನರನುದ್ಧರಿಪ ತಂದೆ ನಿಮ್ಮರಿವರ್ಯಾರೊ ಗುರುವೆ 6 ಅರಿಯೆ ಅನ್ಯರನಿನ್ನು ಶ್ರೀ ಗುರುವೆ ಕರುಣಿಸಿರಿ ವರಜ್ಞಾನ ಸುಧೆಯನಿತ್ತು ವರಶೇಷಶಯನನ ನಿರುತ ಸೇವಿಸುವಂಥ ಪರಮಭಾಗ್ಯವ ಕರುಣಿಸಿ ಸಿರಿವರ ಗೋಪಾಲಕೃಷ್ಣವಿಠ್ಠಲನ ರೂಪ ತ್ವರಿತದಿಂ ತೋರಿ ಪೊರೆಯೊ ಗುರುವೆ 7
--------------
ಅಂಬಾಬಾಯಿ
ಪರಮ ಪಾವನ ಮೂರುತಿಯೇ | ಶರಣ ರಕ್ಷಕ ಮಹೀಪತಿಯೇ ಪ ಸರ್ವಾಗಮ ಸನ್ಮತಾ ದೋರ್ವದು ನಿನ್ನ ಚರಿತಾ | ಉರ್ವಿಯೊಳಗೆ ಸುಖದಾತಾ | ಮೂರ್ವೀ ಜಗವಂದಿತಾ | ಸರ್ವಗುಣ ನಿಧಿಯೇ ನೀ | ಸರ್ವರೊಳು ವ್ಯಾಪ್ತನಾಗಿ | ಕಾಲ ಕೊಂಬೆ1 ಕಾಮನೆ ಪೂರೈಸುವಾ | ಕಾಮಧೇನುವೆ ಜಗಜೀವಾ | ಸುರತರು ದೇವಾ | ಸ್ವಾಮಿ ನೀ ಗತಿಯೆಂದು | ನಿಮ್ಮೊರೆ ಹೊಕ್ಕರೆ | ಪ್ರೇಮದಿ ಸಲಹುವೆ | ಈ ಮನುಜರನು2 ನಿನ್ನ ಮಹಿಮೆ ತಿಳಿಯಲು | ಎನ್ನಳವೇ ಧರಿಯೊಳು | ಚಿನ್ನ ಕೃಷ್ಣೊಡಿಯಾ ದಯಾಳು | ಉನ್ನತೋನ್ನತ ಕೃಪಾಳು | ಮುನ್ನ ಮಾಡಿದ ಘನ್ನಪರಾಧವ | ಇನ್ನು ಕ್ಷಮಿಸಿ ನೀ | ಚನ್ನಾಗಿ ಕಾಯೋ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪರಮ ಪುರುಷ ಹರಿ ಗೋವಿಂದ - ಸಿರಿವರ ನಾರಾಯಣ ಗೋವಿಂದ ಪ ನಿಶೆವೆಸರಸುರನ ಉಸಿರ ತೊಲಗಿಸಿದೆಕುಸುಮ ಶರನ ಪಿತ ಗೋವಿಂದವಸು ಪೂರಿತ ಶ್ರುತಿ ಮಸುಳಿಸದೆ ತಂದೆಬಿಸಜ ಸಂಭವನಯ್ಯ ಗೋವಿಂದ 1 ಮಂದರ ಸಿರಿ ಗತವಾಗದ ಮುನ್ನಕ್ಷಿತಿ ಪೆತ್ತನಯ್ಯ ಗೋವಿಂದ 2 ಭೂತಳವೆರಸಿ ರಸಾತಳಕಿಳಿದಿಹಪಾತಕನ ಕಂಡೆ ಗೋವಿಂದಆತನೊಡನೆ ಕಾದಾತನ ಗೆಲಿದು ಮ-ಹೀತಳವನು ತಂದೆ ಗೋವಿಂದ 3 ದುರುಳಾಸುರನ ನಡುಗರುಳ ಮಾಲೆ ಮುಂ-ಗೊರಳೊಳು ಧರಿಸಿದೆ ಗೋವಿಂದಗರಳ ಕೊರಳನು ಬೆರಳೆತ್ತಿ ಪೊಗಳಲುತರಳಗೊಲಿದೆ ನೀ ಗೋವಿಂದ4 ವಾಮನನಾಗಿ ನಿಸ್ಸೀಮ ಬಲಿಯ ಕೈಯಭೂಮಿಯನಳೆಕೊಂಡೆ ಗೋವಿಂದತಾಮರಸ ಪದದಿ ಕನಕ ಗರ್ಭಯೋಗವ್ಯೋಮ ಗಂಗೆಯ ತಂದೆ ಗೋವಿಂದ 5 ಸುರ ಪಶುವಿಗೆ ಋಷಿಯನು ಕೊಂದನ ಬಹುಕರ ಬಲ ಮುರಿದೆಯೊ ಗೋವಿಂದತರ ಹರಿಸದೆ ವಸುಧೆಯ ಒಡೆತನ ಭೂಸುರರಿಗೆ ನೀಡಿದೆ ಗೋವಿಂದ 6 ತ್ರಿಣಯನ ತಾತ್ಪರ್ಯ ರಾವಣನ ಶಿರರಣದೊಳುರುಳಿಸಿದೆ ಗೋವಿಂದಕ್ಷಣಮೆಣಿಸದೆ ಸದ್ಗುಣವಂತ ವಿಭೀ-ಷಣಗಭಯವಿತ್ತೆ ಗೋವಿಂದ 7 ಕ್ರತು ಸಿರಿ ಭೂಭಾರೋತ್ತಾರಣ ಬಲಯುತ ಗೋವಿಂದ 8 ಕಥೆಯನು ನಿರ್ಮಿಸಿ ಪತಿವ್ರತೆಯರ ಘನವ್ರತಗಳ ಕೆಡಿಸಿದೆ ಗೋವಿಂದಜತೆಯಗಲದ ಪುರ ತ್ರಿತಯ ಗೆಲಿದು ದೇ-ವತೆಗಳ ಸಲಹಿದೆ ಗೋವಿಂದ 9 ಜಾಜಿಯ ಮರಕತ ತೇಜಿಯನೇರಿ ವಿ-ರಾಜಿಪ ರಾವುತ ಗೋವಿಂದಸೂಜಿಯ ಬೆನ್ನೊಳು ರಾಜಿಪ ತೆರದಿ ಸ-ಹಜರೊಳಡಗಿರ್ಪ ಗೋವಿಂದ 10 ಮೇದಿನಿಗೋಸುಗ ಕಾದಿ ಕಲಹದಿ ವಿ-ರೋಧಿಗಳ ಕೊಂದೆ ಗೋವಿಂದಸಾಧುಗಳಿಗೆ ಸುಖವೀಯುವ ಬಾಡದಶ್ರೀಧರ ಕೇಶವ ಗೋವಿಂದ 11
--------------
ಕನಕದಾಸ
ಪರಮಪಾವನ ಸಂಸಾರದ ಘನ ಅ.ಪ ಕರಿಯಪಾಲನ ಕರುಣ ಕಡುಕಮಲನಯನ ಖರೆಯ ಸುಖಕೆ ತೊರಪಿಟ್ಟೆನ್ನ ಕೊರಗಿಪ್ಪ ಕಿರಿಕಿರಿಯ ತರಿದು1 ಜನಕಜಾವರ ಜನಕ ಜಗದ ಜಯ ಸುಖಕರ ಜನುಜನಮದಿ ಜನಿಸಿ ಬರುವ ಜಡರನಳಿದು ಜಯವ ನೀಡಿ 2 ಸುಜನ ಜೀವನ ಸುಖಶರಧಿ ಸುಮನರೊಂದನ ಶುಭಕೆ ಶುಭವೆನಿಸುವ ಸುಮುಕ್ತಿ ಸುದಯದಿತ್ತು ಸಲಹು ಶ್ರೀರಾಮ 3
--------------
ರಾಮದಾಸರು
ಪರಶುರಾಮ ದೇವರು ಬೆಳಗಿರಾರುತಿಯನು ಜಲಜ ನೇತ್ರರೆ ನೀವುಛಲವ ಸಾಧಿಸಿದಂಥ ಚೆಲುವರಾಯನಿಗೆ ಪ ರೇಣುಕಾಸುತ ಕ್ಷೋಣಿಪಾಲಕರ ಕೊಂದುಕಾಮಧೇನುವಿನ ಆಶ್ರಮ ಸ್ಥಾನದಿ ತಂದಾ 1 ಹತ್ತೇಳು ಒಂದು ಅಕ್ಷೋಹಿಣೀ ಸೈನ್ಯಹತ್ಯೆ ಮಾಡುತ್ತ ರಕ್ತದ ನದಿಯನು ಸುತ್ತಹರಿಸಿದವಗೆ 2 ವಂದ್ಯ ಮಹಿಮನೆ ಇಪ್ಪತ್ತೊಂದು ಬಾರಿಲೆ ಕ್ಷಾತ್ರವೃಂದವನಳುಹಿದ ಇಂದಿರೇಶನಿಗೆ 3
--------------
ಇಂದಿರೇಶರು
ಪರಸಿರಿಗೆ ಕರಗುತಿಹುದು ಸರಿಯೇ ಯೋಚಿಸು ಪ ಹರಿಯು ಕರುಣದಿಂದ ಕೊಟ್ಟ ಸಿರಿಗೆ ತೃಪ್ತನಾಗದÀಂತೆ ಅ.ಪ ಉರಗನ ನೆರಳಲ್ಲಿ ಕಪ್ಪೆಯು ಚಿರಕಾಲ ಜೀವಿಸುವುದೇ ಧರೆತಲದಲಿ ನರರ ಸಿರಿಯು ಸ್ಥಿರವಲ್ಲವೆಂದರಿಯದಂತೆ 1 ಹಲವು ಜನುಮಗಳ ಕರ್ಮದ ಫಲವನರಿತು ಮೋಸವಿಲ್ಲದೆ ನಳಿನನಾಭ ನಾರಾಯಣನೊಲಿದು ಕೊಡುವನೆಂದರಿಯದೆ 2 ಎನ್ನದೆಂದು ನಿನ್ನದೆಂದು ಖಿನ್ನನಾಗುವುದು ಸರಿಯೆ ಸನ್ನುತ ಪ್ರಸನ್ನ ಹರಿಯು ತನ್ನ ಭಾಗ್ಯವನರಿತು ನೀಡಲು 3
--------------
ವಿದ್ಯಾಪ್ರಸನ್ನತೀರ್ಥರು
ಪರಿ ನಿರ್ದಯಗೈದಿರಿ ತಂದೆ ಶ್ರೀ ಗುರುವೆ ಪೇಳಿ ಪ. ನೊಂದೆನು ಈ ದಿನ ನಿಮ್ಮ ವಾರ್ತೆ ತಿಳಿಯದೆ ಕುಂದೇನು ತೊರಿತೋ ಎನ್ನಿಂದ ಕ್ಷಮಿಸಿರಿ ಅ.ಪ. ಪ್ರತಿದಿನದಲಿ ನಿಮ್ಮ ಹಿತವಾರ್ತೆ ಕೇಳುತ ಅತಿಶಯಾನಂದವ ಪಡುತಲಿದ್ದೆ ಇಂದು ಅತಿಶಯದ ನಿಮ್ಮ ಹಿತವಾರ್ತೆ ತಿಳಿಯದೆ ಮತಿ ಹೀನಳಾಗಿಹೆ 1 ಉಲ್ಲಾಸಗೊಳಿಸುವ ಪುಲ್ಲನಾಭವ ಮಹಿಮೆ ಸೊಲ್ಲು ಸೊಲ್ಲಿಗೆ ನುಡಿಸಿ ಭವದಾಟಿಸಿ ಒಲ್ಲೆನು ನಾನೊಂದು ಇಹಪರ ಸೌಖ್ಯವು ನಿಲ್ಲಲಿ ಎನ್ನಮನ ನಿಮ್ಮ ಪಾದದಿ ನಿರುತ 2 ತನುಮನ ಒಪ್ಪಿಸಿ ಮನದಿ ಧ್ಯಾನಿಸುವುದು ಘನಮನಕಿನ್ನೀಗ ಬರಲಿಲ್ಲವೆ ವನಜಜಾಡಂಡದೊಳಿನ್ನು ಎನ್ನ ರಕ್ಷಿಸುವರ ಮನದಿ ನಾ ಕಾಣೆನು ವನಜಾಕ್ಷ ಬಲ್ಲನು 3 ಮೊರೆಯ ಕೇಳುತಲೀಗ ತ್ವರಿತದಿಂ ಬನ್ನಿರಿ ಸರಸಿಜಾಕ್ಷನ ತೋರಿ ಹರುಷವಿತ್ತು ದುರಿತವ ತೊಲಗಿಸಿ ಕರಕರಗೊಳಿಸದೆ ಪರಮಪ್ರಿಯರು ಎಂಬೊ ಬಿರುದುಳ್ಳ ಶ್ರೀ ಗುರುವೆ 4 ತಡಮಾಡದೆ ಭವಕಡಲ ದಾಟಿಸಿ ಈಗ ಮೃಡಸಖನನು ತೋರಿ ದೃಢ ಮನದಿ ಒಡೆಯ ಶ್ರೀ ಗೋಪಾಲಕೃಷ್ಣವಿಠ್ಠಲ ಜಗಕೆ ಬಿಡದೆ ಪೊರೆಯುವನೆಂಬೊ ದೃಢವೆನಗೆ ಕರುಣಿಸಿ 5
--------------
ಅಂಬಾಬಾಯಿ
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು