ಒಟ್ಟು 801 ಕಡೆಗಳಲ್ಲಿ , 92 ದಾಸರು , 741 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಿಪಾಲಿಪುದೈ ಗುರುವೆ ನೆರೆನಂಬಿದೆನಯ್ಯ ಪ್ರಭುವೆ ಪ ಘಾಸಿ ಗೊಂಡೆನಲ್ಲಾ ಮಾಯಾ ಪಾಶದಿ ಸಿಲುಕಿದೆನಲ್ಲಾ | ಉ- ಪಾಯ ವನರಿಯೆ ಪಾಲಿಸೈ ಪ್ರಭವೇ 1 ಕಾಯೋ ಪ್ರಭುವೇ 2 ಉಳಿಸಿಕೊ ಗುರುದೇವಾ ನಿರುತದಿ ಮಾಡುವೆ ನಿನ್ನ ಸೇವಾ ಕರುಣಿಸು ಶ್ರೀ ರಾಘವೇಂದ್ರಾ 3
--------------
ರಾಧಾಬಾಯಿ
ಪರಿಪಾಲಿಸು ದಯದಿ ನಿರುತ ದಾಸಪುರಂದರ ಗುರುವೆ ಧರ್ಮಪಥವನು ತೋರಿ ಉದಾರಿ ಪ ಸುರಮೌನಿಯೆ ಮುದದಿ ಹರಿನಾಮವಾ ಘನ ಬೀರುತಾ ನಿರಯಾ ಪಾತ್ರರ ಸಲಹಿದಿನೀ 1 ಬಾಣಾಲಕ್ಷಕೆ ಪಾದನ್ಯೂನ ಕವನ ನೀ ವಿರಚಿಸುತಾ ವನಜನಾಭನ ಸ್ತಪಿಸಿದ ನೀ 2 ಶಿರಿಶಾಮಸುಂದರನಾ ಚರಣಾಬ್ಜಕಾರಡಿಯಂದದಿ ಚರಿಪ ಜ್ಞಾನಿಯೆ ನಮಿಸುವೆನು 3
--------------
ಶಾಮಸುಂದರ ವಿಠಲ
ಪರಿಭವ ತಾಪಹರಣ ಪ ದಯದಿ ಯುವತಿಯಕುಲ ಉದ್ಧಾರಣ ಜವದಿ ಕರಿಧ್ರುವಬಂಧಮೋಚನ ಯುವತಿಗಕ್ಷಯವಿತ್ತು ಒಲಿದು ಹಯವ ಪಿಡಿದು ರಥವ ನಡೆಸಿದ ಭುವನ ಬ್ರಹ್ಮಾಂಡ ಸೂತ್ರಧಾರಕ ಶಿವಸುರಾರ್ಚಿತ ಪೊರೆ ಸುಹೃದಯ ಅ.ಪ ಪತಿತಪಾವನ ಶ್ರೀಶಕೇಶವ ಸಹಸ್ರಾಕ್ಷಶಯನ ಮಾಧವ ಭೋಗ ಗರುಡಗಮನ ಪತಿತಪಾವನೆ ಇಂದಿರೆಂiÀi ಜೀವ ಜಗದಾದಿದೇವ ಯತಿತತಿನುತ ಪವಿತ್ರನಾಮ ಕ್ಷಿತಿಸುತೆಪತಿ ಪವಿತ್ರ ಮಹಿಮ ಸತಿಯರವ್ರತಹರ ಜಿತಮಹಮುಪ್ಪುರ ಕೃತ್ರಿಮ ಮುರಹರ ಮಥನಸಾಗರ ನುತಿಪರ್ಹಿತಕರ ಸುಪಥರಾಧಾರ ಹಿತದಿ ಪೊರೆಯೆನ್ನ ಕರುಣಾನಿಕರ 1 ನಿರುತ ಜನರ ಕಲ್ಪತರು ನೀನು ಭಯಭಕ್ತಿಯಿಂದ ಸ್ಮರಿಸಿ ಬೇಡ್ವರ ಪರಮಸುರಧೇನು ಸುರಗಂಗಾಜನಕ ಶರಣು ಸಜ್ಜನರಮಿತ ದಯಾ ಪರನು ವಿಶ್ವರಕ್ಷಕನು ಮರಣರಹಿತ ಮದನತಾತ ಶುಭ ಸಚ್ಚರಿತ ದುರುಳ ಸಂಹರ ಶರಣುಮಂದಾರ ಸುಗುಣರೋದ್ಧಾರ ಶರಣಭಜಕರ ವರಸುಖಕರ ಕರಣಿಸಭವನೆ ತ್ವರಿತ ಸುವರ 2 ಕುಸುಮನಯನ ಸ್ವತಂತ್ರ ಮಹಲೀಲ ದಿವಕೋಟಿ ಪ್ರಭಾಕರ ಕುಸುಮಗಾತ್ರ ಮಹತಂತ್ರ ಮಾಯಜಾಲ ಗೋವರ್ಧನೋದ್ಧಾರ ಕುಸುಮಧರ ಕುರುಕುಜನಕುಲಕಾಲ ಗೋಪಾಲಬಾಲ ಕುಸುಮನಾಭ ಕೌಸ್ತುಭಾಂಬರ ಅಸಮ ತುಲಸಿಮಾಲಾಲಂಕಾರ ಒಸೆದು ದಾಸನ ಪುಸಿಯೆಂದೆನಿಸದೆ ಹಸನುಮತಿಯಿತ್ತು ಪೋಷಿಸನುದಿನ ಎಸೆವ ತವಪಾದ ನಂಬಿ ಮರೆಬಿದ್ದ ಅಸಮದಯಾನಿಧಿ ಮಮ ಶ್ರೀರಾಮ 3
--------------
ರಾಮದಾಸರು
ಪವನಜ ದೇವ ಸದಾ | ಜಿವೇಶ ಗುರು ಪ್ರೇಮಾಪಕ ಪ ಅಮಿತ ಮಹಿಮ ತವ ಪಾದಕೆ | ನಮಿತೆ ಸುಮತಿಯ ಪ್ರೇರಿಸು ಬೇಗ 1 ಸದನ ಗುರು ಭಾರತೀಕಾಂತ ನೀ ದೂರಗೈಯದಲೆ ದೇವ 2 ನಿರುತದಿ ಶ್ರೀವರಶಾಮಸುಂದರ | ಧ್ಯಾನವ ನೀಡುವದೈ ಈಗ 3
--------------
ಶಾಮಸುಂದರ ವಿಠಲ
ಪವಮಾನ ಜಗದ ಪ್ರಾಣ ಸಂಕರುಷಣ ಭವನೇ ಭಯಾರಣ್ಯದಹನ ಪ ಶ್ರವಣವೆ ಮೊದಲಾದ ನವವಿಧ ಭಕುತಿಯ ತವಕದಿಂದಲಿ ಕೊಡು ಕವಿಗಳ ಪ್ರೀಯ ಅ.ಪ. ಹೇಮ ಕಚ್ಚುಟ ಉಪವೀತ-ಧರಿಪ ಮಾರುತ ಕಾಮಾದಿ ವರ್ಗರಹಿತ ವ್ಯೋಮಾದಿ ಸರ್ವವ್ಯಾಪುತ-ಸತತ ನಿರ್ಭೀತ ರಾಮಚಂದ್ರನ ನಿಜದೂತ ಯಾಮ ಯಾಮಕೆ ನಿನ್ನರಾಧಿಪುದಕೆ ಕಾಮಿಪೆ ಎನಗಿದ ನೇಮಿಸಿ ಪ್ರತಿದಿನ ಪಾಮರ ಮತಿಯನು ನೀ ಮಾಣಿಪುದು 1 ವಜ್ರ ಶರೀರ ಗಂಭೀರ-ಮಕುಟಧರ ದುರ್ಜನವನ ಕುಠಾರ ನಿರ್ಜರಮಣಿ ದಯಾ ಪಾರಾ-ವಾರ ಉದಾರ ಸಜ್ಜನರಘ ಪರಿಹಾರ ಅರ್ಜುನಗೊಲಿದಂದು ಧ್ವಜವಾನಿಸಿ ನಿಂದು ಮೂರ್ಜಗವರಿವಂತೆ ಗರ್ಜನೆಮಾಡಿದೆ ಹೆಜ್ಜೆ ಹೆಜ್ಜೆಗೆ ನಿನ್ನ ಅಬ್ಜಪಾದದ ಧೂಳಿ- ಮೂರ್ಜನದಲಿ ಭವವರ್ಜಿತನೆನಿಸೊ 2 ಪ್ರಾಣ ಅಪಾನ ಉದಾನ-ವ್ಯಾನ ಸಮಾನ ಆನಂದ ಭಾರತೀರಮಣ ನೀನೆ ಯಾಮ ಯಾಮಕೆ ಜ್ಞಾನ ಧನಪಾಲಿಪ ವರೇಣ್ಯ ನಾನು ನಿರುತದಲಿ ಏನೇನನೆಸಗಿದೆ ಕರ್ಮ ನಿನಗೊಪ್ಪಿಸಿದೆನೊ ಪ್ರಾಣನಾಥ ಸತ್ಯ ವಿಜಯವಿಠ್ಠಲನಕಾಣಿಸಿ ಕೊಡುವುದು ಭಾನು ಪ್ರಕಾಶ 3
--------------
ವಿಜಯದಾಸ
ಪವಮಾನ ಪಾವನ ಚರಿತ ಪದ್ಮ ಭವನ ಪದಾರ್ಹನೆ ನಿರುತ ಅಹ ಪ ಶ್ರವಣಾದಿ ಭಕುತಿ ಜ್ಞಾನವಿತ್ತು ಸಲಹೊ ಮೂ ರವತಾರಾತ್ಮಕ ತತ್ವ ದಿವಿಜನಿಯಾಮಕ ಅ.ಪ. ಪ್ರಾಣೋಪಾನ ವ್ಯಾನೋದಾನ ಹೇ ಸ ಮಾನ ರೂಪಕನೆ ವಿಜ್ಞಾನ ತತ್ವ ಗೀರ್ವಾಣ ಅಹ ಸೇನಾಧಿಪತಿ ನಿನ್ನ ಜ್ಞಾನಸಾರದಲಿಪ್ಪ ಮಾನವರನು ಕಾಯೋ ಮೌನಿ ಧ್ಯಾನಗಮ್ಯ 1 ನಾಗಕೂರ್ಮ ದೇವದತ್ತ ಕೃಕಳ ಯೋಗಿವರಿಯ ಮುಕ್ತಾಮುಕ್ತ ಕ್ಲುಪ್ತ ಭೋಗಗಳೀವ ಸುಶಕ್ತಾ ತಲೆ ಬಾಗಿ ಬೇಡುವೆ ಸರ್ವೋದ್ರ್ರಿಕ್ತ ಅಹ ಜಾಗುಮಾಡದೆ ನಿಜ ಭಾಗವತರೊಳಿಡೊ ಮೈಗಣ್ಣಪದನಾಳ್ದ 2 ಮೂರುಕೋಟಿ ರೂಪಧರನೆ ಲೋಕ ಧಾರಕ ಲಾವಣ್ಯಕರನೆ ಸರ್ವ ಪ್ರೇರಕ ಭಾರತಿವರನೆ ತ್ರಿಪು ರಾರಿಗೆ ವಜ್ರಪಂಜರನೆ ಆಹ ನೀರಜ ಜಾಂಡದಿ ಮೂರೇಳು ಸಾವಿರ ದಾರು ನೂರು ಜಪ ಬೇರೆ ಬೇರೆ ಮಾಳ್ಪ 3 ಆಖಣಾಶ್ಮ ಸಮಚರಣ ಪದ್ಮ ಲೇಖರ ಮಸ್ತಕಾಭರಣ ಕಲ್ಪ ಶಾಖೆಯಂತೆ ಅತಿಕರುಣಾದಿಂದ ಈ ಖಂಡದೊಳು ಮಿಥ್ಯಾವರಣ ಆಹಾ ನೀ ಖಂಡಿಸಿದಿ ದಂಡ ಮೇಖಲ ಭೂಷಣ ಆಖುವಾಹನಪಿತ ಆಖಂಡಲರ್ಚಿತ 4 ಶ್ರೀವಲ್ಲಭಗೆ ಪ್ರತಿಬಿಂಬನಾಗಿ ಜೀವವೇದ ಕಾಲಸ್ತಂಭಗತ ಆವಾಗ ಹರಿರೂಪ ಕಾಂಬ ಶಕ್ತ ನೀ ಒಬ್ಬನಹುದೋ ನಾನೆಂಬೆ ಆಹಾ ವಿಭವ ಜಗ ನಿತ್ಯ 5 ದಕ್ಷಿಣಾಕ್ಷಿಗತ ವತ್ಸಾ ರೂಪಿ ದಕ್ಷನಹುದೋ ಪರಮೋಚ್ಚಾ ಚಾರು ತ್ರ್ಯಕ್ಷಾದಿ ಸುರರೊಳಧ್ಯಕ್ಷಾ ಸರ್ವಾ ಪೇಕ್ಷರಹಿತನೆ ಸ್ವೇಚ್ಛಾ ಆಹಾ ಮೋಕ್ಷಾದಿ ದ್ವಾತ್ರಿಂಶ ಲಕ್ಷಣ ಪುರುಷ ನಿ ರೀಕ್ಷಿಸಿ ಕರುಣದಿ ರಕ್ಷಿಸೋ ಎನ್ನನು 6 ಮೂಲೇಶನಂಘ್ರಿ ಸರೋಜ ಭೃಂಗ ಏಳೇಳು ಲೋಕಾಧಿರಾಜಾ ಇಪ್ಪ ತ್ತೇಳು ರೂಪನೆ ರವಿತೇಜಾ ಲೋಕ ಪಾಲಕರಾಳ್ವ ಮಹೋಜಾ ಆಹಾ ಕಾಳಿರಮಣ ನಿನ್ನ ಕಾಲಿಗೆರಗುವೆ ಕೃ ಪಾಳು ಭಕ್ತಿ ಜ್ಞಾನವಾಲಯ ಕರುಣಿಸು 7 ಅಧಿಭೂತ ಅಧ್ಯಾತ್ಮಗತನೇ ವಿಮಲ ಅಧಿದೈವರೊಳು ಪ್ರವಿತತನೆ ಕಲಿ ವದನದಿ ನಿಲಿಸೋ ಮಾರುತನೆ ಆಹಾ ಬದರಿಕಾಶ್ರಮದೊಳು ಹದಿನಾರು ಸಾವಿರ ಸನ್ನುತ 8 ಮಾತರಿಶ್ವ ಮಹಾಮಹಿಮ ಸರ್ವ ಚೇತನ ಹೃದ್ಗತ ಹನುಮ ಭೀಮ ಭೂತಳದೊಳು ಮಧ್ವ ನಾಮಾದಿಂದ ಜಾತನಾಗಿ ಜಿತಕಾಮಾ ಆಹಾ ಆ ತಿಪ್ಪಣ್ಣಾದಿ ವಿಖ್ಯಾತ ಮಾಯ್ಗಿಳ ಗೆದ್ದ ಸೀತಾರಮಣ ಜಗನ್ನಾಥ ವಿಠ್ಠಲ ದೂತ 9
--------------
ಜಗನ್ನಾಥದಾಸರು
ಪವಮಾನ-ಪಾವನಮೂರ್ತಿಯು ನೀನು ಕಾವುದೆಮ್ಮನು ಪ ಭುವನ ಚತುರ್ದಶದಲ್ಲಿಹ ಜೀವರ ಜೀವನ ನಿನ್ನದೋ ದೇವವರೇಣ್ಯಅ.ಪ ತೃಣಜೀವರಾದಿ ಸರ್ವರೊಳು ನಿಂತು ಗುಣಕಾಲಕರ್ಮಕ್ಕನುಗುಣನಾಗಿಹ ಫಲವ ನೀನಿತ್ತು ಕ್ಷಣ ಬಿಡದೆಲೆ ನೀನಗಣಿತ ಕಾರ್ಯವ ದಣಿಯದೆ ಮಾಡಿಸಿ ಧಣಿಗರ್ಪಿಸುವಿಯೊ1 ಶ್ರೀ ಜಗದ್ಗುರುವರೇಣ್ಯನೆ ನೀನು ಋಜುಸಾರ್ವಭೌಮ ನಿಜ ಪಾದಾಂಬುಜವ ತೋರಿಸೊ ಇನ್ನು ಈ ಜಗ ಕಾರ್ಯ ನಿವ್ರ್ಯಾಜದಿ ಮಾಡುತ ನೀ ಜಯಾಪತಿಗರ್ಪಿಸಿ ಅಜಪದ ಪಡೆದೆಯೊ2 ಕೋಟಿತ್ರಯರೂಪನೆ ಕಾಯುವುದಯ್ಯ ದಾಟಿಸು ಭವಶರಧಿಯಾ ಪಾಟುಪಟ್ಟದ್ದೆಲ್ಲ ನೀನರಿಯಾ ಸಾಟಿಯುಂಟೆ ಲಲಾಟನೇತ್ರ ಬೆ ನ್ನಟ್ಟಿ ಬರಲು ಕೇದಾರಕೆ ಅಟ್ಟಿದೆ 3 ಮರಣ ಜನುಮಂಗಳು ಬಂದರೆ ಬರಲಿ ಹರಿಗುರುಗಳಲಿ ಸ್ಮರಣೆಯು ತಪ್ಪದೆ ನಿಶ್ಚಲವಿರಲಿ ಉರುತರ ಹರಿಸರ್ವೋತ್ತಮವೆಂಬುವ ತರತಮ ಭೇದವು ನಿರುತವು ಇರಲಿ 4 ಶ್ರವಣ ಮನನಾದಿ ಭಕುತಿಯನ್ನು ಪವಮಾನ ನೀ ಕೊಡು ಅನುಮಾನಿಸಬೇಡವೋ ನೀ ಇದಕ್ಕಿನ್ನು ಭವಮೋಚಕ ಶ್ರೀ ವೇಂಕಟೇಶ ಇನ್ನೊಳಹೊರಗಿಹನೆಂಬುವುದನು ತೋರೋ 5
--------------
ಉರಗಾದ್ರಿವಾಸವಿಠಲದಾಸರು
ಪವಮಾನ-ಪಾವನಾ ಜಗಜ್ಜೀವನ ಪ ಶಿವ ಖಗಪತಿ ಅಹಿಸುರ ವಂದಿತಪದ ಅ.ಪ ಸೇವಾ ಕೃಷ್ಣ ಸಾಧನಾ ಕಾವಕರುಣಿ ಕಿಂಪುರುಷ ಖಂಡಾಧಿಪ ಕಾವಳದೊಳು ನಿನ್ನವರನು ಕಾಯ್ದೆ ಭೂವಳಯದೊಳವಿದ್ಯೆಯನಳಿಸಿದ ಸದ್ವರ್ತನು ನೀನೆನ್ನನುದ್ಧರಿಸಯ್ಯ 1 ಶರಧಿ ಹಾರಿದೆ | ಕೌರವ ಕಲಿಯಾ ನೀ ಗದೆಯಿಂ ಛೇದಿಸಿದೆ ಧಾರುಣಿಯೊಳು ಯತಿಪುಂಗವನೆಂದೆನಿಸಿದೆ ನಿರುತದಿ ರಾಮರ ಕಾರ್ಯವ ಸಾಧಿಸಿ ವಿರಥರ ಮಾಡಿದೆ ಅತಿರಥರುಗಳ ಹರಿಸರ್ವೋತ್ತಮ ತರತÀಮ ಸತ್ತತ್ವಗ ಳರುಹಿದ ಸದ್ವರ್ತನು ನೀನೆ 2 ರಾಮಪದಕುಮುದಸೋಮ ಭೀಮಾ ರಿಪುಕುಲ ಧೂಮ ನಿಸ್ಸೀಮ ಶ್ರೀಮದಾನಂದಮುನಿ ಸಾರ್ವಭೌಮ ಭೂಮಿಜೆ ಕುರುಹ ಶ್ರೀರಾಮರಿಗರ್ಪಿಸಿ ಅ ಮಹ ಬಕ ಕೀಚಕರ ಸಂಹರಿಸಿ ತಾಮಸ ಗ್ರಂಥವನಳಿಸಿ ಜನಕೆ ಸದ್ಬೋಧೆ ಇತ್ತ ಗುರು ಪೂರ್ಣಬೋಧನೆ 3 ದ್ರೋಣಾಚಲವ ತಂದ ಪ್ರಾಣ ಎಣೆಯುಂಟೆ ಬಲದೊಳು ನೀನೆ ನಿಸ್ಸೀಮ ಕಾಣೆನೊ ಜಗದಿ ಪರಮಹಂಸರ ಪ್ರಾಣ ಪ್ರಾಣಿಗಳೊಳಗೆ ಮುಖ್ಯಪ್ರಾಣನೆಂದೆನಿಸಿದೆ ಕ್ಷೋಣಿಯೊಳು ಕುರುಸೇನೆ ಸಂಹರಿಸಿ ಕ್ಷೀಣವಾಗುತಲಿಹ ಸುಜನರ ಮನಸ ತ್ರಾಣ ಮಾಡಿ ಸತ್ಪ್ರಮಾಣಗಳಿತ್ತೆ4 ಋಜುಪುಂಗವ ದೇವಾ ಹನುಮಾ ಗಜಪುರಾಗ್ರಣಿ ಕೌರವನಿಗೆ ನೀ ಕಾಲಯಮ ಕುಲಿಶ ನಿಸ್ಸೀಮ ಅಜಪದ ಪಡೆದಿ ಶ್ರೀ ಆಂಜನೇಯನೆ ವಿಜಯಸಾರಥಿನೊಲಿಸಿ ಪೂಜಿಸಿ ಸೃಜಿಸಿ ಮರೆದೆ ಸಚ್ಛಾಸ್ತ್ರದಿಂದ ಈ ಚತುರ್ದಶಭುವನಾಚಾರ್ಯನೆನಿಸಿದೆ 5 ಖೂಳ ಅಕ್ಷಕುವರನ ಹರಿಸೆ ಖಳರ ಕಾಳೋರಗ ಬಾಧೆ ಲೆಕ್ಕಿಸದೆ ಖಳ ಭೂದೈತ್ಯರ ಬಾಧೆ ಹರಿಸಿದೆ ಬಾಲತನದಲಿ ಭಾನುಮಂಡಲ ಹಾರಿದೆ ಲೋಲತನದಿ ಸತಿಗೆ ಪೂವಿತ್ತೆ ಶೀಲಮೂರುತಿ ಮಾಯ ಜಾಲ ಹರಿಸಿ ಜಗಖ್ಯಾತನಾದೆ ಯತಿದಶಪ್ರಮತಿಯೆ 6 ಮಾರುತಿ ಧೀಮಂತಮೂರುತಿ ಭಾರತದಿ ಭೂಭಾರನಿಳುಹಿದ ಖ್ಯಾತಿ ಸಾರ ಶ್ರೀ ಬಾದರಾಯಣಗೆ ಅತಿಪ್ರೀತಿ ಅರಿಪುರ ವೈಶ್ವಾನರನಿಗರ್ಪಿಸಿ ವಾರಣಪುರದೊಳು ಅತಿರಥನೆನಿಸಿ ದುರ್ವಾದಿಮತ್ತಗಜಸಿಂಹನಾಗಿ ನೀ ನಿವ್ರ್ಯಾಜÀದ ಭಕ್ತಿಯ ಹರಿಗರ್ಪಿಸಿದೆಯೊ 7 ಹನುಮಾ ಭೀಮಾ ಆನಂದ ಮುನಿಪಾ ಆ ವಾನರಾಧಿಪಾ ಗಜಪುರಾಧಿಪ ಯತಿಪಾ ಧ್ಯಾನನಿರತ ರಾಮಪದದಿ ಮಾನಸದಲ್ಲಿ ಯದುಪತಿಯ ಪೂಜಿಸಿ ದೀನಜನರುದ್ಧಾರಮಾಡಿ ಸದ್ಬೋಧೆ ಯನಿತ್ತ ಮಧ್ವಮುನಿಯೆ 8 ರಾಮಾಲಿಂಗನ ಮಾಡಿದಾ ರೋಮ ರೋಮಕೆ ಕೋಟಿಲಿಂಗವ ಸೃಜಿಸಿದಾ ಶ್ರೀಮಧ್ಯಗೇಹಾರ್ಯಸೂನುವೆಂದೆನಿಸಿದಾ ಆ ಮಹಾರ್ಣವ ಲಂಘಿಸಿದಾ ಧೀರಾ ಭೀಮಭಯಂಕರ ದ್ರೌಪದೀಪ್ರಿಯಕರ ಈ ಮಹಿಮೆಯೊಳಾರೆಣೆಯೋ ನಿನಗೆ ನಿ ಸ್ಸೀಮನಹುದೋ ಯತಿಸಾರ್ವಭೌಮನೆ 9 ಸುರಜೇಷ್ಠಾನಸ್ತ್ರ ಮಾನಿಸಿದಾ| ಜರೆಯನ ಸೀಳಿ ನಿರಪರ ಸೆರೆಯ ಬಿಡಿಸಿದಾ ಧರೆಯೊಳ್ ಸುರಶ್ರೇಷ್ಠನೆಂದೆನಿಸಿದಾ ಭರದೊಳು ಭರತೆಗೆ ಕುಶಲವ ತಿಳಿಸಿ ಕರುಳಮತಿಯಿಂ ಸತಿಯ ಸಂತೈಸಿ ದುರುಳ ಭಾಷ್ಯಂಗಳ ತತ್ತ್ವವನಳಿಸಿದಾ ಪರಮದಯಾಂಬುನಿಧಿ ಶ್ರೀಮದಾನಂದ 10 ರಕ್ಷಕ ನೀನೆ ಸಜೀವ ಲಾಕ್ಷ್ಯಾಗಾರದ ಬಾಧೆÉಯಿಂ ರಕ್ಷಿಸಿ ಮೆರೆದಯ್ಯ ಈ ಕ್ಷಿತಿಯೊಳು ದೈತ್ಯ ಶಿಕ್ಷಕನೆನಿಸಿದೆ ತಕ್ಷಣ ಸಿಂಹಿಕೆ ಕುಕ್ಷಿಯ ಸೀಳ್ದೆ ಭಿಕ್ಷೆಯಿಂದ ನಿನ್ನವರನು ಕಾಯ್ದೆ ದಕ್ಷನಹುದೊ ನೀನಚ್ಯುತ ಪ್ರೇಕ್ಷರಿಂ ದೀಕ್ಷೆಯ ವಹಿಸಿ ಸತ್ಸಿಕ್ಷಕನಾದ್ಯೊ 11 ನೀ ರಂಜಿಸಿ ಮೆರೆದೆಯೊ ಗುರು ಮಧ್ವಾರ್ಯ ಧೀರ ಕೇಸರಿಕುವರ ಪುರುಷಾಮೃಗವ ಸಾಧಿಸಿ ತಂದ ಶೂರ ಈ ಧರಾವಲಯದಿ ತೋರಿದೆ ತತ್ವಸಾರ ತೋರಿ ಭಕ್ತಿ ಶ್ರೀರಾಮರ ಪದದಿ ಕಂ ಸಾರಿಯ ಸೇವಿಸಿ ಭಾರವನಿಳುಹಿದೆ ಸಾರಿದೆ ಹರಿಸರ್ವೋತ್ತಮ ತರತಮಭೇದವನರುಹಿದ ಪರಮದಯಾಳೊ12 ಅಂಜನೆ ಕುವರಾ ಧೀರಾ ಕುಂಜರಪುರದ ಅರಿಗಳಂಜಿಸಿದ ಶೂರ ಧರಣಿ ದುರ್ಮದಾಂಧರ ದುರ್ವಾದ ಪಂಕಜೋದ್ಭವನ ಪದವ ಪಡೆವೆ ನೀ ಅಂಜದೆ ಗದೆಯಿಂ ಕೊಂದೆ ಕುರುಪನ ಮಂಜುಳವಾಣಿಯ ಜಗಕೆ ಇತ್ತು ನೀ ರಂಜಿಸಿ ಮರೆದೆಯೊ ಗುರುಮಧ್ವಾರ್ಯ 13 ರೋಚಕ ನಾಮಕನೆನಿಸಿ ಪು ರೋಚನನ ಕಾರ್ಯವನೆಲ್ಲಾ ಕೆಡಿಸಿ ಪಾಜಕ ಕ್ಷೇತ್ರ ಪವಿತ್ರ ಮಾಡಿದೀ ಖೇಚರಮಾರ್ಗದಿ ನೆಗಹಿ ನಿ ಶಾಚರರೆÉಲ್ಲರ ಸದೆದೆ ಗದೆಯಿಂ ಸೂಚಿತ ಗ್ರಂಥ ವಿರಚಿಸಿ ಜಗಕೆ ನೀ ಗೋಚರಿಸಿದೆಯೊ ತ್ರಿಜಗಾಚಾರ್ಯ 14 ರಣದೊಳು ಘುಣಿವಿರೂಪಾನೆತ್ತಿದೆ ಬಾಣಸಿಗನೆನಿಸಿ ಮತ್ಸ್ಯದೇಶವ ಸೇರ್ದೆ ಕ್ಷೋಣಿಯೊಳು ಗುಣವಾರಿಧಿ ಎನಿಸಿದೆ ಗಣನೆ ಇಲ್ಲದೆ ಗಿರಿಯನೆಗಹಿದೆ ಹಣಿದೆ ಹಿಡಿಂಬಾಸುರನ ಸೀಳಿದೆ ಮಣಿಮಂತಾದಿ ದುರಾತ್ಮರಿಗೆ ನೀನಂತಕನೆನಿಸಿದೆ ಶಾಂತಮೂರುತಿಯೆ15 ವಿಜಯರಥಕೆ ನೀ ಕೇತುನಾಥ ವಿಜಯಸಾರಥಿಯಾ ದೂತ ವಿಜಯದಶಮಿಯೊಳ್ ಜನಿತ ಸೋಜಿಗ ತೋರಿ ಸಂಜೀವನ ತಂದೆ ಆ ಜಗಜಟ್ಟಿಗಳೆಲ್ಲರ ಸದೆದೆ ಈ ಜಗದೊಳು ಸರಿಗಾಣೆ ಜಗದೊ ಳು ಜಗದ್ಗುರುವಹುದೋ ನೀ ಗುರುಪೀಳಿಗೆಗೆ16 ಮಂಗಳಮೂರುತಿ ಮಾರುತಿ ಸೌಗಂಧಿಕ ನೆವದಿ ಮರುತನೊಳ್ ನೀ ಸೆಣೆಸಿದಿ ಶೃಂಗಾರ ಗೋಪಿನಂದನನ ಸ್ಥಾಪಿಸಿದೆ ಭಂಗಿಸಿ ವನವನು ಉಂಗುರವನು ತಂದೆ ಸಂಗರ ಹನುಮನೊಳ್ ನೀಡಿ ಮೋಹ ತೋರ್ದೆ ಅಂಗಜಪಿತನ ಇಂಗಿತವರಿತು ಭಂಗಿಸಿದೆಯೊ ದುಶ್ಯಾಸ್ತ್ರಂಗಳನು 17 ಕೇಸರಿ ಕ್ಷೇತ್ರ ಜನಿತಾಭೂಸು ರ ಸುತನ ಭೀತಿಯ ನೀ ಬಿಡಿಸಿದೆ ವಸುಮತಿಯೊಳು ಸುರಶ್ರೇಷ್ಠನೆಂದೆನಿಸಿದೆ ಕೋಸಲನಗರಾಧೀಶನ ಪ್ರೀಯ ವಾಸುದೇವಗರ್ಪಿಸಿದೆ ಅಧ್ವರ್ಯ ಶ್ರೀಶನಾಜ್ಞೆಯ ತಾ ಶಿರದಿ ಧರಿಸಿ ಪ್ರ ಕಾಶ ಮಾಡ್ದೆ ಸರ್ವಮೂಲಗ್ರಂಥವ 18 ಶ್ವಾಸನಿಯಾಮಕನೆನಿಸಿದೆ ಪ್ರ ಯಾಸವಿಲ್ಲದೆ ವನವಾಸಂಚರಿಸಿದೆ ಶ್ರೀ ವ್ಯಾಸರಿಗೆ ಅತಿಮೋದವ ಪಡಿಸಿದೆ ಶ್ರೀಶನಾಜ್ಞೆಯಲ್ಲಿ ಕೀಶನಾಗಿ ನಿಂದು ನಿಶಾಚರರೆÉಲ್ಲರ ಸದೆದೆ ಗದೆಯಿಂದ ಶ್ರೀಶನೆ ಸರ್ವೋತ್ತಮನೆಂಬ ಸತ್ಸಿದ್ಧಾಂತವ ತೋರಿದ ಸದ್ಗುಣಪೂರ್ಣ 19 ಸರ್ವಜೀವರ ತ್ರಾಣ ಪ್ರಾಣ ಗರ್ವಿಸಿದವರೊಳು ನೀ ಗರ್ವ ಹರಣ ಸರ್ವಜ್ಞಾಚಾರ್ಯ ಗುರುವರೇಣ್ಯ ಪೂರ್ವದೇವರ ಗರ್ವವನಿಳುಹಿ ಸರ್ವ ಕೌರವರ ಪಡೆಯನು ಸವರಿದೆ ಉರ್ವಿಯೊಳು ಜನಿಸಿದ ದುರ್ಮದಾಂಧರ ಗರ್ವಹರಣಮಾಡಿ ಕರುಣವ ತೋರಿದೆ 20 ಶ್ರೀರಾಮನೇಕಾಂತ ಭಕ್ತ ಶೌರಿಯ ಆಜ್ಞೆಯಿಂ ಸರ್ವಕಾರ್ಯಸಕ್ತ ಧಾರುಣಿಯೊಳು ಸಚ್ಛಾಸ್ತ್ರಕರ್ತ ಹಾರಿದೆ ಶರಧಿಯ ಅಣುಮಹದ್ರೂಪದಿ ತೋರಿದೆ ಶಕ್ತಿಯ ಗಿರಿ ತರುತೃಣವತ್ ಸಾರಿದೆ ಧರಣಿಯ ಸುರಜನುಮದಿ ನೀ ಬೀರಿದೆ ಸುಜನಕೆ ತತ್ವಾಮೃತವ 21 ಕಾಶಿ ಕಂಚುಕವ ಧರಿಸಿದೆ ಕಾಶ್ಯಪಿಯೊಳು ಕಾವಿಶಾಟಿಯ ಧರಿಸಿದೆ ಕೀಶತನದಿ ಹರಿಕಾರ್ಯವ ಸಾಧಿಸಿ ಜಗ ದೀಶಕುಲದೊಳು ಜನಿಸಿ ಮೆರೆದೆ ವೇದ ವ್ಯಾಸ ಪದಕಮಲ ಮಧುಪ ಜಗಖ್ಯಾತನಾ ದ ಶ್ರೀ ಮಧ್ವಸೂರ್ಯನೆ 22 ಸುಗ್ರೀವಗಭಯ ಕೊಡಿಸಿದಾ ಮ ಹೋಗ್ರರಾದ ದ್ವೇಷಿಗಳ ಸವರಿದಾ ಸ ಮಗ್ರ ಸಿದ್ಧಾಂತ ರಚಿಸಿದಾ ವಿಗ್ರಹದೊಳು ಧಾತಾಸ್ತ್ರವ ಮಾನಿಸಿ ಅಗ್ರಹರಿಪುಕುಲ ಕಾಲನೆಂದೆನಿಸಿ ಉಗ್ರವಾದಿಗಳ ದುರಾಗ್ರಹ ವಿಗ್ರಹ ಶೀಘ್ರದಿ ಮಾಡಿ ಅನುಗ್ರಹವಿತ್ತೇ23 ಸೋಮಕುಲದೊಳು ನೀನೆ ಅತಿ ಬಲವಂತ ಈ ಮಹಿಯೊಳು ರೌಪ್ಯಪೀಠದಿ ಜನಿತ ರಾಮಾಂಗನೆಯ ಪ್ರೇಮದ ದೂತ ಸೋಮಶೇಖರನ ಕೇದಾರಕಟ್ಟಿದ ಸ್ವಾಮಿಗೆ ಪ್ರಕೃತಿಯ ಮಾಯವ ಪೇಳ್ವ ಕೇಸರಿ ಎನಿಸಿದೆ 24 ಮಾರ್ಜಾಲರೂಪವ ಧರಿಸಿದೆ ನೀ ನರ್ಜುನಾಗ್ರಜಾದಿಗಳ ಪೊರೆದೇ ನೀ ಸರ್ಜಿಸಿ ತೋರ್ದೆ ಸತ್ಸತ್ವಗಳೆಲ್ಲ ಘರ್ಜಿಸಿ ಅರ್ಜುನನ ರಥದಲಿ ನೆಲೆಸಿದೆ ಮೂರ್ಜಗಜಟ್ಟಿಗಳೆಲ್ಲರ ಸದೆದೆ ವರ್ಜಿಸಿ ಅರಿಷಡ್ವರ್ಗಗಳೆಲ್ಲವ ದುರ್ಜಯವಾದಕೆ ಘರ್ಜನೆ ಮಾಡಿದೆ 25 ವಾಯುಕುವರ ಅಸುವರ ಕಾಯಜನಯ್ಯನ ಅತಿಪ್ರೀಯಾ ಶೂರಾ ಜೀಯಾ ನೀನಿತ್ತೆ ಸದ್ಗ್ರಂಥವಿಸ್ತಾರಾ ಕಾಯಕಭಕುತಿ ಶ್ರೀರಾಮರಿಗರ್ಪಿಸಿ ಮಾನಸದಲಿ ಯದುಪತಿಯ ಪೂಜಿಸಿ ಮಾಯಮತವ ನಿರಾಕರಿಸಿ ವಾಚದಿ ಶ್ರೀಯರಸನ ಮೆಚ್ಚಿಸಿದೆ ಯತೀಂದ್ರ 26 ವಾತಜಾತ ಹನುಮಂತ ಖ್ಯಾತ ದ್ವಾಪರದಿ ದ್ರೌಪದೀಕಾಂತ ಭೂತಳದೊಳು ಯತಿನಾಥ ಅತಿಶಾಂತ ಧತಾಜನಕ ಶ್ರೀ ವೇಂಕಟೇಶನ ಪ್ರೀತಿಪಾತ್ರ ಶ್ರೀಕೃಷ್ಣನಂಘ್ರಿಗೆ ಖ್ಯಾತನಾದೆ ಸೂತ್ರಾರ್ಥಪೇಳಿ ಕೃಪಾಪಾತ್ರನಾದೆ ಶ್ರೀ ಬಾದರಾಯಣಗೆ27
--------------
ಉರಗಾದ್ರಿವಾಸವಿಠಲದಾಸರು
ಪಾಂಡುರಂಗನೆ ಪಾಲಿಸೆನ್ನನು ಬೇಡಿಕೊಂಬೆನು ವರವ ನೀಡಯ್ಯ ನೀನು ಪ. ಸುರರು ನಿರುತ ನಿನ್ನನು ಬಿಡರು ಕರಗಳನೆ ಜೋಡಿಸುವರು ವರಗಳನೆ ನೀಡೆಂಬರು ಭರದಿ ಹದಿನಾಲ್ಕು ಜಗದ ಉದರದಿ ಇಂಬಿಟ್ಟ ಭೋಜ ಸಿರಿಸ್ತುತಿಗೆ ಸಿಲ್ಕ ರಾಜವರ ರವಿಶತರ ತೇಜ ಭೀಮರಥಿಯ ತೀರದಲ್ಲಿ ಮಹಾನಂದ ಭರಿತ ನಂದನ ಕಂದ ಪೂರ್ಣಸುಖವನ್ನೆ ಕೊಟ್ಟು ಅನುದಿನ ಸೇರಿಸೊ ವೈಕುಂಠ 1 ಇಂದು ನಾ ಮಾಡ್ದ ಪುಣ್ಯ ಬಂದು ಕೈಸೇರಿತಿನ್ನ ಸುಂದರಾಂಗನೆ ಎನ್ನ ಬಂಧ ಪರಿಹರಿಸಿ ಬೇಗದಿಂದ ಉದ್ಧರಿಸೋ ಈಗ ನಂದನ ಕಂದ ರಂಗ ಬಂಧುವೇ ಪಾಂಡುರಂಗ ಕಮಠ ವರಹ ವೇಷಧಾರಕನೆ ನಾರಸಿಂಹನೆ ದೈತ್ಯಸಂಹಾರಿ ಗಂಗಾಪದಧಾರಿ ಕ್ಷತ್ರಿಯ ಕುಲವೈರಿ ಪೊಗಳಲು ಜೀಯಾ ಶೇಷಗೊಶವಲ್ಲವಯ್ಯಾ 2 ಪುಟ್ಟ ಧ್ರುವರಾಯಗಿನ್ನ ಕೊಟ್ಟೆ ಸ್ಥಿರ ಪಟ್ಟವನ್ನ ಎಷ್ಟು ವರ್ಣಿಸಲಿ ನಿನ್ನ ಇಷ್ಟ ಫಲದಾಯಕನ್ನ ಇಟ್ಟಿಗೆ ಪೀಠನಿಲಯ ದಿಟ್ಟ ಶ್ರೀ ಕೃಷ್ಣರಾಯ ಕಷ್ಟಪರಿಹರಿಸು ಗೋಪಾಲಕೃಷ್ಣವಿಠ್ಠಲ ಜೀಯ ಪಾಡಲಿ ಹಗಲಿರುಳು ಕೊಡದಿರು ವಿಠ್ಠಲಯ್ಯ ಬಲವಂತÀ ರಕ್ಷಿಸೆನ್ನ ವಸಂತ ಶ್ರೀದ ಕೈಯ ಮುಗಿವೆ ಸರ್ವದಾ 3
--------------
ಅಂಬಾಬಾಯಿ
ಪಾದ - ಮೋದದಿ ಭಜಿಸಿದ ಮನುಜನೆ ಬಲು ಧನ್ಯನೋ ಪ ಬೋಧ ಪಾದ ಸೇವಕರಾದ ಮಹಸುಸ್ವಾದಿ ಪುರದೊಳು | ವೇದ ವಿನುತನ ಸ್ತುತಿಸಿ ಮೋದಿಪ ಅ.ಪ. ವಾಗೀಶ ಮುನಿಪ ಸದಾಗಮಜ್ಞನ ವರ | ವೇಗದಿಂದಲಿ ಫಲಿಸಲುಜಾಗು ಮಾಡದೆ ಗೌರಿ ತತ್ಪತಿ | ರಾಗ ರಹಿತರು ನಿನ್ನನೊಪ್ಪಿಸೆ |ರೋಗಹರ ಹಯವದನ ಪದವನು | ರಾಗದಿಂದಲಿ ಭಜಿಪ ಯತಿ 1 ತಿಮಿರ ತಾಮರಸ ಬೋಧ ಶಾಸ್ತ್ರವ | ಪ್ರೇಮದಿಂದಲಿ ಪೇಳ್ದಯತಿವರ 2 ಮೂರ್ತಿ ಪ | ರಾಕ್ರಮನಿಂ ತರಿಸೀಚಕ್ರಿಯನೆ ನಿಲಿಸ್ಯುತ್ಸವದಿ ಸುರಪನ | ವಿಕ್ರಮದ ಆಳ್ಬಂದು ಕರೆಯಲು |ಉತ್ಕ್ರಮಣ ತೊರೆದವರ ಕಳುಹುತ | ವಿಕ್ರಮನ ಪದಕೆರಗಿನಿಂದ3 ನಿಗಮವೇದ್ಯನ ಬಗೆಬಗೆಯಲಿ ಸಂಸ್ಕøತ | ಮಿಗಿಲು ಪ್ರಾಕೃತ ಪದ್ಯದೀಸುಗುಣಮಣಿಮಯ ಮಾಲೆಗಳ ಪ | ನ್ನಗನಗೇಶನ ಕೊರಳೂಳರ್ಪಿಸಿ |ಚಿಗಿ ಚಿಗಿದು ಆನಂದದಿಂದಲಿ | ದೃಗು ಜಲದಿ ಹರಿಪದವ ತೊಳೆದ 4 ಸುರನದಿ ನದಿಧರರಾದಿ ಸ್ಥಾಪಿಸುತಲ್ಲಿ | ಎರಡೆರಡೊಂದು ವೃಂದಾವನವಾ | ಸ್ಥಿರಪಡಿಸಿ ಶ್ರೀವ್ಯಾಸ ಸಮ್ಮುಖ | ವರ ನರೇಯಣ ಭೂತಬಲದಲಿಇರಿಸಿ ಗುರು ಗೋವಿಂದ ವಿಠಲನ | ನಿರುತ ಧ್ಯಾನಾನಂದಮಗ್ನ5
--------------
ಗುರುಗೋವಿಂದವಿಠಲರು
ಪಾದ ನಿಜವಾಗಿ ಕಂಡೆನು ಪ್ರೇಮದಿಂದಲಿಯೆನ್ನ ಸೇರಿ ಕೊಂಡಾಡೋ ಪ ನಿತ್ಯ ನಲಿಯುತ್ತಲಿರುವದು ಕಾಲಕಾಲಕೆ ಮತ್ತೆ ಸೇವೆಗೊಳುವದು ಬಾಲರು ಪಿಡಿದರೆ ಇಷ್ಟವ ಕೊಡುವದು ಓಲೈಸಿ ಭಕ್ತಗೆ ವರವನೀಯುವÀದು 1 ಪಾದ ಮಧ್ಯದಿ ಪದ್ಮ ರೇಖೆಯ ಕಂಡೆನು ಸಾಧು ಸಜ್ಜನರು ಪೂಜೆಯ ಮಾಡುವುದನು ಖೇದವ ನೀಗುವ ಬೆರಳನು ಕಂಡೆನು ಆದ್ಯಂತವಿಲ್ಲದೆ ನಿರುತವಾದುದನು2 ಮನದಣಿ ನೋಡಿದೆ ಪಾದಯುಗ್ಮಗಳನ್ನು ಮನಲೇಪ ಮಾಡಿದೆ ಹರಿಪಾದಗಳಿಗೇ ಅನುದಿನ ದೂರ್ವಾಪುರದಿ ನೆಲೆಸಿರುವಂಥ ಘನಕೋಟಿ ತೇಜದ ಕೇಶವ ಪದವ 3
--------------
ಕರ್ಕಿ ಕೇಶವದಾಸ
ಪಾದ ಪರಮಭಕ್ತಿಲಿ ಎನ್ನ ಶಿರದ ಮೇಲ್ಪೊತ್ತು ಬಿಡದಿರುವೆನನವರತ ಪ ತಾಳಿ ವಿಮಲಭಕ್ತಿ ತಾಳದಂಡಿಗೆ ಸ ಮ್ಮೇಳದೊಡನೆ ತ್ರಿಕಾಲವು ಬಿಡದೆ ನೀಲವರ್ಣನ ಭಜನೆ ಮೇಲಾಗಿ ಮಾಡುವ ರಾಲಯದಿ ನಲಿದಾಲಿಸಾನದಿಂದಪ 1 ನಿಲಯದಂಗಳದೊಳು ತುಲಸಿವನವ ರಚಿಸ ನಿತ್ಯ ಜಲಜನಾಭಂಗೆ ಮಲತ್ರಯಂಗಳ ನೀಗಿ ಮಲಿನಗುಣವ ಕಳೆದು ಸಲಿಸಿ ಶ್ರೀಪಾದಮಂ ಒಲಿಸಿ ಸುಖಿಸುತಿರ್ಪ 2 ತಿಳಕೊಂಡು ಸಂಸಾರ ಕಳವಿನಿಂದುಳಕೊಂಡು ಹೊಳೆವ ಜ್ಞಾನಜ್ಯೋತಿ ಬೆಳಗಿನೋಳ್ನಲಿಯುತ ನಿಲಿಸಿ ಹರಿಪಾದದಿ ಚಲಿಸದೆ ಮನ ಹಂ ಬಲಿಸಿ ತಪವ ಶೇಷಾಚಲಯಾತ್ರೆ ಮಾಳ್ಪಂಥ 3 ಮರೆವು ಮಾಯವ ನೀಗಿ ಅರಿವಿನಾಲಯದೊಳು ಸಿರಿಯರರಸನ ನಿಜ ಚರಿತಂಗಳರಸುತ ಪರಮಸಾಲಿಗ್ರಾಮದ್ವರಮಹಿಮೆಯನರಿತು ನಿರುತದಿಂ ಪೂಜಿಸಿ ಪರಮಪಾವನರೆನಿಪ 4 ಕಾಮಿತಂಗಳ ನೀಗಿ ಕೋಮಲ್ಹøದಯರಾಗಿ ಪ್ರೇಮಪಿಡಿದು ಸರ್ವಭೂಮಿ ಜೀವಂಗಳೊಳ್ ನೇಮನಿತ್ಯದಿ ನಿಸ್ಸೀಮರಾಗಿ ಸತತ ಸ್ವಾಮಿ ಶ್ರೀರಾಮನಾಮಾಮೃತ ಸುರಿಯುವ 5
--------------
ರಾಮದಾಸರು
ಪಾದ ಲಂಬೋದರಅಂಬರಾಧಿಪ ಮನದ್ಹಂಬಲವ ನೀಡೆಂದು ಪ ನಾಕನಾಥನುತ ಪಿನಾಕಿಸುತ | ಕಾಕುಮತಿಯ ಕಳೆದು ಕಾಯೊಖುವಾಹನೇಕದಂತ 1 ಭದ್ರಮೂರುತಿಯೆ ಕರುಣಾಬ್ಧಿತ್ವರಿತದ್ಧರಿಸು ಎಂದು ನಮಿಪೆ ಅದ್ರಿಜೆ ಕುಮಾರ ನಿರುತ 2 ಸಿಂಧೂರ ವದನನೆ ಸುರವೃಂದ ವಂದಿತವಂದಿಸಿ ಬೇಡುವೆ ಶಾಮಸುಂದರನ ಪ್ರೀತಿ ಪಾತ್ರ 3
--------------
ಶಾಮಸುಂದರ ವಿಠಲ
ಪಾದ ಸೇವೆಯಿಂದಲಿ ಸುಖಿಸೋಳೊ ಲಕ್ಷ್ಮೀಲೋಲ ಪಾಡಿ ತೂಗುವಳೊ ಮೋಹದಲಿ ಯಶೋದ ಯೋಗಿ ಜನರು ಕೊಂಡಾಡಲ್ವಿನೋದ 1 ಜಲಧಿ ಭೂದೇವಿ ಪ್ರಜ್ವಲಿಸುವ ಆಲದೆಲೆಯು ತಾನಾಗಿ ನಿದ್ರೆಹಸಿವು ಬಿಟ್ಟು ನಿರುತದಿ ಆತನ- ಲ್ಲಿದ್ದಳಂಭ್ರಣಿ ಸ್ತೋತ್ರದಲಿ ಭೂದೇವಿ 2 ವಟದ ಎಲೆಯ ಮೇಲೆ ವಟುವಾಗಿ ಮಲಗಿ ಉಂ- ಗುಟವ ಬಾಯೊಳಗಿಟ್ಟು ಮುದದಿ ಚಪ್ಪರಿಸೆ ಕಟುತರದಲಿ ನಾಲ್ಕು ವೇದವ ತೋರುತ ಪಟುತರದಲಿ ಯೋಗನಿದ್ರೆ ಮಾಡಿದನು 3 ಹದಿನಾಲ್ಕು ಲೋಕ ತನ್ನುದರದಲ್ಲಿಡುವ ಪದುಮಾಕ್ಷ ಶ್ರೀಕೃಷ್ಣ ಪರಮಾತ್ಮ ಲಾಲಿ ಅಜಭವಸುರರೆಲ್ಲ ಭಜನೆಯ ಗೈವರು ಮುದದಿ ಶಯನವ ಮಾಡೊ ಮಧು ಮುರಾಂತಕನೆ 4 ಕಡಲಶಯನ ಹರಿ(ಯ) ತೊಟ್ಟಿಲೊಳಿಟ್ಟು ಬಿಡದೆ ನಾರಿಯರೆಲ್ಲ ಪಾಡಿ ತೂಗುವರು ಪೊಡವಿಗೊಡೆಯ ನಿನ್ನ ನಾಮ ಕೊಂಡಾಡಲು ಬಿಡದೆ ಭಕ್ತರ ಕಾಯೊ ಭೀಮೇಶಕೃಷ್ಣ 5
--------------
ಹರಪನಹಳ್ಳಿಭೀಮವ್ವ
ಪಾರ್ವತಿ ಬೀರೆ ಸನ್ಮತಿಯ ಪಾರ್ವತಿ ಬೀರೆ ಸನ್ಮತಿಯ ಪ ಪೋರನಲ್ಲಪಾರ ದೊಷ ದೂರಗೈಯುತ ಮಾರನೈಯ್ಯನ ಚಾರು ಮೂರುತಿ ತೋರಿ ನಿರುತ ಸಾರಸಾಕ್ಷಿ ಗಾರು ಮಾಡದೆ 1 ಕ್ಷೋಣಿಯಲ್ಲಿ ಪ್ರಾಣಮತವ ಜ್ಞಾನದಿಂದಲಿ ಗಾನಮಾಡುವ ದಾನವಿತ್ತು ಸಾನುರಾಗದಿ ದಾನವಾಂತಕ ಕಾಣುವಂತೆ 2 ಕಾಮಹರನ ವಾಮಭಾಗದಿ ಪ್ರೇಮದೀರುವ ಭಾಮಾಮಣಿಯೆ ಕಾಮಮಾರ್ಗಣ ಧಾಮಕೆಡೆಹಿ ಶ್ರೀ ನರಹರಿ ನಾಮಸುಖವ 3
--------------
ಪ್ರದ್ಯುಮ್ನತೀರ್ಥರು