ಒಟ್ಟು 605 ಕಡೆಗಳಲ್ಲಿ , 77 ದಾಸರು , 499 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೈಶಾಖದುತ್ಸವ ಗೀತೆ ವರ್ಣಿಸಲಳವೆ ವೈಶಾಖದುತ್ಸವವಾ ಪ. ವೃಷಭಸೇರಿದ ವೈಶಾಖಮಾಸದ ಶುಕ್ಲ ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ ಯರ್ಸಹಿತ ದಿಟ್ಟತನದಲಿ ಪೊರಟು ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1 ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ ಬಂದ ಅರ್ಜುನ ಸಾರಥಿಯು 2 ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ ಪುರುಷನು ಬರುವ ಪರಿಯನೇನೆಂಬೆ 3 ದಂತದ ಉಯ್ಯಾಲೆಮಂಟಪದಲಿ ನಿಂದು ಕಂತುಪಿತ ಕರ್ಪೂರದಚೂರ್ಣದಲಿ ಮಿಂದು ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ ಕಾಂತನು ನಡೆತರುವ ಪರಿಯನೇನೆಂಬೆ 4 ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು ಛಂದದಿಂ ರಂಭೆಯರ ಕೋಲಾಟಗಳ ನೋಡಿ ಇಂದಿರೆಯಿದಿರು ಮಂಟಪಕೆ ನಡೆತಂದ 5 ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6 ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ ಮುತ್ತಿನಾ ಹಾರವನು ಹಾಕಿ ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7 ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು ರತ್ನದಾ ಹಸ್ತದಲಿ ಅಭಯವನು ಕೊಟ್ಟು ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8 ಹತ್ತಿ ಹಯವನು ರಂಗ ಒಂಭತ್ತು ದಿನದಲಿ ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು ಅರ್ತಿಯಿಂ ಬಂದ ನೀರಾಳಿಮಂಟಪಕೆ 9 ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ ಬಂದು ಕಂಕಣವನ್ನು ಬಿಚ್ಚಿ ಆ ಘೃತ ಚೂತಫಲಗಳ ಸವಿದು ನಿಂದ ವೆಂಕಟರಂಗ [ಕರುಣಾಂತರಂಗ] 10
--------------
ಯದುಗಿರಿಯಮ್ಮ
ಶಂಕರ ಗಂಡನ ಹಾಡು ಸರಸ್ವತಿಗಭಿವಂದಿಸುವೆ ಒಡೆಯನು ಎನ್ನ ಮನದೊಡೆಯ 1 ಸಂಭ್ರಮ[ದಾ] ಕೇಳಿ ಸಜ್ಜನರು 2 ವಿಶಾಲ ವಿಲಾಸ ಪಟ್ಟಣದಿ ಖಚಿತ ಮಂದಿರದಿ 3 ಮಂದಮಾರುತ ತಂಪೆÉಸೆಯೆ ಗಂಧ ಕಸ್ತೂರಿ ಕದಂಬವನೇರಿಸಿ ಆನಂದವಾಗಿದ್ದ ಮನ್ಮಥನು4 ಮಯೂರ ಪಕ್ಷಿಗಳು ನಳಿನ ನಾಭನ ಓಲಗವು 5 ನಿರ್ಭಯದಲಿನಲ್ಕಾವತಿಯು ಪಾಲಿಸುತ್ತ 6 ಮರಿಹಾವುಗಳ ನೆರೆಹುವಳು ಗೊಂಬೆಯಾಟವನೆ ಆಡುವಳು 7 ಕೂಡಿದ್ದ ಗೆಳತಿಯರ ಒಡನೆ ನೋಡಿದ ನವಯೌವನೆಯನು 8 ಕುಚವು ತೋರಿದವು ಚಿತ್ತದೊಳಗೆ ಚಿಂತಿಸುತ್ತಿದ್ದ 9 ಚೆನ್ನಿಗನು ಮನ್ಮಥನು ಉದಯಕ್ಕೆ ಕರೆತನ್ನಿರೆಂದ 10 ಬಂದು ವಿಲಾಸ ಪಟ್ಟಣದೊಳು ಮದನಗೆ ಪ್ರೀತಿಲಿ ನಿಂದು ಕೈ ಮುಗಿದರು ಹೋ ಗ್ಯೆಂದು ಶಂಕರಗಂಡ ಕಳುಹಿದ ನಿಮ್ಮನೆಗೈತಂದೆವೆನಲು 11 ಮಾತಾಡಿ ನಗುತ ಭೂ ಕೇಳಿದ ಮನ್ಮಥನ 12 ರಾಜ್ಯವು ಕ್ಷೇಮವೆನ್ನಲು ಬ್ರಹ್ಮಾನಂದದಲಿದ್ದ ಶಂಕರಗಂಡನು 13 ವಿವಾಹ ಮಾಡಲಿಚ್ಛಿಸುವೆ ಚಂದ್ರಮುಖಿಯು 14 ಸಂಭ್ರಮದಿಂದ ಕುಳಿತರು ತಂದಿಡುವರು ಮನ್ಮಥಗೆ 15 ಅಂಗಜ ಅತಿ ದೈನ್ಯ ಉಕ್ತಿಯಿಂದಲಿ ಬಹು ಮಂಗಳ ಮೃದು ವಾಕ್ಯವನ್ನು ಪ್ರ ತಂಗಿಯನೆನಗೀಹುದೆಂದ 16 ಮಲ್ಲಿಗಿಸರ ಕಬ್ಬು ಬಿಲ್ಲು ಹಿರಿಯರು ಹೇಳುವರು 17 ಒಬ್ಬಳೇ ರತಿ ನಮ್ಮ ತಂಗಿ ಹಬ್ಬ ಹುಣ್ಣಿಮೆಗೆ ಕಳಿಸದೆ ನಮ್ಮನೆಗೆ ನಿರ್ಬಂಧ ಮಾಡುವಿರೆಂದ 18 ಕಡುಮೋಹದಿಂದ ಸಾಕಿದೆನು ಕೊಡಲಾರೆ ತಂಗಿಯನೆಂದ 19 ಅವಳಿಗೆ ಸ್ವತಂತ್ರವಿಲ್ಲೇನು ನುಡಿದ ದೈನ್ಯದಲಿ 20 ಭಾಗ್ಯದಿಂದಲಿ ನೋಡಿದರು ಮದನ ನೇಮವನೆ ಮಾಡಿದರು 21 ಪ್ರತಿಬಿಂಬ[ದಂದ]ದಲಿ ಎಣಿಕೆಯಿಲ್ಲದ ಬಂಧು ಜನರ 22 ಎಲ್ಲರು ನೆರೆದು ಸಂಭ್ರಮದಿ ಮಲ್ಲಿಗೆ ಸರದಿ ಮದನರತಿದೇವಿಗೆ ಕಲ್ಯಾಣವನೆ ಮಾಡಿದರು 23 ಬಟ್ಟಲು ಗಿಂಡಿಗಳನ್ನು ಬಳುವಳಿ ತಂಗಿಗೆ ಇತ್ತ 24 ಸಾಸಿರ ಗೋವು ಗಜವು ತುರಗವು ಬ್ಯಾಸರಿಯದೆ ತಂಗಿಗಿತ್ತ ವಿಲಾಸಪಟ್ಟಣಕೆ ಕಳಿಸಿದ 25 ದಿನ ಬಾಳುತಿರಲು ತಾನೇ ಯೋಚಿಸಿದ 26 ಬಿಗಿದ ನಾಡಗಂಬಳಿಯ ನಗುವಂತೆ ಮಾಡಿ ರೂಪವನು 27 ಕುಡಗೋಲು ಕÀವಣೆಯ ಪಿಡಿದು ಮಾಡುವೆನೆನುತ 28 ರೂಢಿಯೊಳಗೆ ಅತಿಚೆಲುವ ಸತಿಗೆ ತೋರಿದನು 29 ಒಡಹುಟ್ಟಿದಣ್ಣ ತಾ ಮುನಿಯೆ ನಮಗೆ ಬೇಡವೆಂದ್ಲು 30 ಕಾರಣವ ಹೇಳದಂತೆ ದಿನÀಕರ ನಂತೆ ಹೊಳೆಯುತ ಸಭೆಯಲಿತವಕದಿಂದಲಿ ಬಂದು ಕುಳಿತು31 ಗೆಲುವಿನಿಂದ ಮಾತಾಡಲಿಲ್ಲ ಜುಲ್ಮಿಂದ ತಾನೆ ಕೇಳಿದನು 32 ನಮ್ಮನೆಯಲಿ ನಾವೀಗ ಕಳಿಸುವೋರಲ್ಲ 33 ತೌರುಮನೆಯ ಹಾರೈಸುವರು ಉಂಡು ಸಂಭ್ರಮದಿಂದ ಬಾಹೋಳೆಂದ 34 ಕರುವ ಕಾಯಿ ನಮ್ಮ ಮನೆಯ ಮರೆಯದೆ ಹೊಯ್ಸುವೆಂನೆಂದ 35 ಜೋಳವ ಕೊಂಡು ಹೋಗೆನಲು ಬೇಡೆಲವೊ ಕಾಮ ನಿನ್ನ ಐಶ್ವರ್ಯವ ಹಾಳು ಮಾಡುವೆನೊಂದÀು ಗಳಿಗೆಯಲಿ 36 ಗಮಕದಿಂದಲಿ ಬೆಳೆವೆನೆಂದು ಚಮತ್ಕಾರದಿಂದ ಮಾಯವಾದ 37 ಅಟ್ಟ ಅಡಿಗೆ ಮನೆಂiÉ
--------------
ಹೆಳವನಕಟ್ಟೆ ಗಿರಿಯಮ್ಮ
ಶತ್ರುಗಳ ಬೇಗ ಜಯಿಸು ಪ. ಶಿಶುವಾದ ಪ್ರಲ್ಹಾದ ಪೇಳಿದ ಕ್ಷಮೆ ತಾಳಿದ ನಯನುಡಿಗಳ ಕೇಳ್ದ ನಿನ್ನ ತೋರೆಂದು ಹಾಟಕ ಬಂದ ದೈತ್ಯನ ದೇಹದಿಂದ ದೀನ ಬಂಧು ಗೋವಿಂದ 1 ಶತ್ರುಸಂಚಯ ಪಚನ ವಿಭಾವನ ದಾನವಕೂಟ ಮಥನ ಲೋಕಪಾವನ ದಯಕರ ಪಕ್ಷಿಗಮನ ಗೆಲ್ವ ಶಕ್ತಿಕೊಡುವರೆ ಬಲ್ಲನ 2 ಈ ಭೂಮಿಗತವೈರಿಜನರೆಲ್ಲಾ ಕೂಡಿಹರಲ್ಲ ಇನ್ನೂ ಹತರಾಗಲಿಲ್ಲ ನಾ ಬಲಹೀನನೆಂಬುದ ಬಲ್ಲ ಶ್ರೀಭೂನಲ್ಲ ನೀನರಿಯದುದಿ ಲಾಲಿಪರಿಲ್ಲ ಆದರು ಭಯವಿಲ್ಲ ಸೂತ ರಕ್ಷಿಸು ಜಗನ್ನಾಥ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶರಣಜನೋದಧಿಚಂದ್ರಾ ಸಿರಿ ಯರಸ ದೇವ ದೇವ ಕರುಣಿ ಮುಕುಂದಾ ಪ ಹಾರದ ನಿಗದಿಯ ಬಿಟ್ಟು ಸೋತವನಾಗಿ ವ್ಯಾಸ ಭೀಷ್ಮನ ಗೆಲಿಸಿದೆ ಮುಕುಂದಾ 1 ಹಗಲೇ ಇರಳ ಮಾಡಿ ಸೈಂಧವನಸುವನು ತೆಗಿಸಿ ನರನ ವಾಸಿ ಕೊಂಡ್ಯೋ ಮುಕುಂದಾ 2 ಶರಧಿಯಂಜಿಸಿಕೊಂಡು ಪಕ್ಷಿಯ ಶಿಶುವಾಗಿ ಗರುಡನ ವಾಸಿಯ ಕೊಂಡ್ಯೊ ಮುಕುಂದಾ 3 ದಶಜನುಮವತಾಳಿ ಮುನಿಯ ಬೆದರಿಸ್ಯಂಬ ರಿಕ್ಷಣ ಫಲನಡಿಸಿದೆ ಮುಕುಂದಾ 4 ಗುರು ಮಹಿಪತಿ ಸ್ವಾಮಿ ಭಕ್ತ ವತ್ಸಲನೆಂಬ ಬಿರುದುವಾಳಿದರೆಂದು ಸಲಹೋ ಮುಕುಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರಣು ನಿನಗೆ ಶರಣೆಂದೆನೊ ಹರಿಯೇ ಕರುಣಿಸಿ ಕಾಯೋ ಎನ್ನಧೊರಿಯೆ ಪ ಪರಮಕೃಪಾಕರ ಪಾವನ ನರಹರಿ ಪಾಲಿಸೊ ಎನ್ನನಿ--- ಶರಣೆಂದ ವಿಭೀಷಣನ ಆದಿಭಕ್ತರ ಶ್ರಮ ಪರಿಹರಿಸಿದಂಥ ಶ್ರೀಧರಾ 1 ಭಕ್ತಾ ಪಾಂಡವ ಪಕ್ಷಾ ಬಲಿಯ ಭೂಮಿಯ ಭಿಕ್ಷಾ ಯುಕ್ತಿಲಿ ನೀ ಸಾಧಿಸಿದ ಯೋಧನೆ ಮುಕ್ತಿದಾಯಕ ದೇವ ಮುರಹರ ಮಾಧವನೆ ಮೌಕ್ತಿಕ ಮುಕುಟ ಧರಿಸಿದನೆ 2 ಸುಂದರ ಮೂರುತಿ-----ಜಗತ್ಪತಿ ಇಂದಿರಾ ಹೃದಯಾನಂದನೆ ಬಂದ ಭಕ್ತರ ಬಿಡದೆ ಅಂದಿಗೆ ನೀನೆ ಪೊರೆದೆ----ಹೆನ್ನ ವಿಠ್ಠಲಾ ಸಲಹೋ ಎನ್ನ 3
--------------
ಹೆನ್ನೆರಂಗದಾಸರು
ಶರಣು ಶರಣು ಶ್ರೀ ರಾಮಚಂದ್ರನೆ ಶರಣು ಸುರಮುನಿ ವಂದ್ಯನೆ ಪ. ಶರಣು ಶ್ರೀ ರಘುಕುಲಾಬ್ಧಿಚಂದ್ರನೆ ಶರಣು ಸದ್ಗುಣ ಸಾಂದ್ರನೆ ಅ.ಪ ಕಮಲನಾಭನೆ ಕಮಲನೇತ್ರನೆ ಅಮರವಂದಿತ ವಿಮಲಚರಿತನೆ ಕುಮುದಸಖಸಮಾನ್ಯನೆ 1 ಅಂಬುಜಾಸನ ಶಂಭುವಂದಿತ ಶಂಬರಾರಿಯ ಜನಕನೆ ಕಂಬುಕಂದರ ನಂಬಿ ಭಜಿಸುವೆ ಬೆಂಬಿಡದಲೆ ಪಾಲಿಸೈ 2 ಪಕ್ಷಿವಾಹನ ರಕ್ಕಸಾಂತಕ ಲಕ್ಷ್ಮೀರಮಣ ಶುಭಲಕ್ಷಣ ಲಕ್ಷ್ಮಣಾಗ್ರಜ ಸತ್ಯವಿಕ್ರಮ ರಕ್ಷಿಸೈ ಪುರುಷೋತ್ತಮ 3 ಪರಮಪಾವನ ಶೇಷಗಿರಿಯೊಳು ನಿರುತ ನೆಲೆಸಿಹ ಶ್ರೀಶಗೆ ಶರಣ ಜನರ ಸಚ್ಚರಿತೆಯೋದುವ ವರವ ಪಾಲಿಸು ದೇವನೇ 4
--------------
ನಂಜನಗೂಡು ತಿರುಮಲಾಂಬಾ
ಶರಣು ಹೈಮವತೀಶ ಶಿವಶಂಭು ಅವಿನಾಶ | ಶರಣು ಧನಪತಿ ಮಿತ್ರ ಪಾವನತರಚರಿತ್ರ | ಶರಣು ದಾನವವಿಪಕ್ಷಾ || ಶರಣು ಕರ್ಪೂರ ಗೌರಾಂಗ ಗುಣಮಂದಾರ | ಶರಣು ಶೃತಿಪೃತಿಪಾದ್ಯಯೋಗಿಮನಕಾಭೇದ್ಯ | ಶರಣು ಆನಂದ ಕಂದಾ ||
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶರೀರ ಜರಿಯಬೇಡಾ | ಬೆರಿಯಬೇಡಾ | ಸ್ಥಿರವಿದ್ದ ಕೈಯಲಿ ಗುರು ಶರಣವ ಹೊಕ್ಕು | ತಾರಿಸೋ ಭವದಿಂದ ನೀ ಮರಳು ಜೀವವೇ ಪ ಲೋಕದೊಳು ವಾರಿಜೋದ್ಭವ ನಿನ್ನ ಜನ್ಮ ಕೊಟ್ಟು | ನೂಕಲಾಗ ತಾಯಿ ಗರ್ಭದೊಳಾವರಿಸಿ ತಾನು ಧರಿಸಿ | ರೇಖೆ ರೂಪ ಲಾವಣ್ಯ ಅವಯವಂಗಳಿಂದ | ಸಾಕಾರವಾಗಿ ಸುಂದರೆನಿಸಿ ವರನೆನಿಸಿ | ಬೇಕಾದ ವಿದ್ಯವನು ಸರ್ವ ಸಂಪಾದಿಸಲು | ತಾ ಕಾರ್ಯವಾಗಿ ಅಭ್ಯಾಸದಿಂದಾ ಧ್ಯಾಸದಿಂದಾ | ವಾಕ್ಪಟುದಲಿ ಸಮರ್ಥನೆಂಬನಾಮ ಪಡೆದು | ಪ್ರಖ್ಯಾತವಾದೆ ಈ ಕಾಯದಿಂದ 1 ಸ್ನಾನವನು ಮಾಡಿ ತ್ರಿಕಾಲ ಸಂಧ್ಯಾನ ವಿಧಿಯನು | ಮೌನ ಜಪಗಳವನು ತಪಗಳನು | ಸ್ವಾನುಭಾವ ಸೂರ್ಯಾಡಲಾಗಿ ನೇಮವನುಷ್ಠಾನ ಮೊದಲಾದ | ಧ್ಯಾನ ಧಾರಣವನು ಕಾರವನು | ಜ್ಞಾನ ಭಕ್ತಿ ವೈರಾಗ್ಯ ಶಮದಮ ಕರುಣನು ದಿನಮಾಳ್ಪಾ | ಕರ್ಮ ನೈಮಿತ್ಯವಾದಾ ನಿತ್ಯವಾದಾ | ತಾನು ತನ್ನ ಉದ್ಧರಿಸಿಕೊಳಲಿಕ್ಕೆ ಭಾವದಿಂದಾ | ಮಾನುಭಾವg ದಯ ಪಡೆವುದರಿಂದಾ 2 ತಾನು ಕುಣಿಯಲಾರದೆ ಅಂಕಣವು ಡೊಂಕು ಎಂದು | ಹೀನೋಯಿಸಿ ನುಡಿವ ನಟ ವೇಷಿಯಂತೆ | ನೀನು ನೀಟ ನಡಿಯದ್ಹೋಗಿ ದೇಹ ಕಶ್ಮಲವೆಂದು | ಜ್ಞಾನ ರಹಿತನಾಗಿ ಹಳಿವುದು ಉಚಿತ ಇದು ಪ್ರಾಚೀತ | ಈ ನಾಲ್ಕೆರಡು ವೈರಿಗಳ ದಂಡಿಸದೇ ಬರಿದೇ | ಹೀನ ವೈರಾಗ್ಯವಾ ಶಣಸಬೇಡಾ ದಣಿಸಬೇಡಾ | ಕಾನನದ ಹುತ್ತಮ್ಯಾಲ ಬಡಿದರೇನು ವರಗಿರುವಾ | ಆ ನಾಗದರ್ಪಗುಂದದು ಕಂಡಾ 3 ಪರಿಪರಿ ಮುಮ್ಮುಳಿ ವಳಗಾಗಿ ಜೀವಿಸುವ | ತೆರನಂತೋಯಂದು ಚಿಂತಿಸಬಹುದು ಸುರಿಸಬಹುದು | ನೂರು ಭಂಡಿಗಳ ತÀುಂಬಿ ಬಂದರೇನು ತಾ | ಧರೆಯೊಳು ಸೂಲ ತಾ ಹಾವುದೊಂದೇ ನೋವುದೊಂದೇ | ಬರೆದ ಬರಹವೇ ಪಣಿಯಾಲಿದ್ದಪರಿ ತಪ್ಪದೈ | ವರ ಕೂಡಿ ಕೊಟ್ಟಡವಿ ಮಾಡುವದೇನು ನೋಡುದೇನು | ಪರಿ | ಪಡಿ ನೀನು 4 ಸಾಕ್ಷರಾವೆಂಬ ಮೂರಕ್ಷರವ ಬರೆದು ತಾ | ರಾಕ್ಷಸಾವೆಂಬುದೇ ಅರ್ಥವಹುದು ಅನರ್ಥ ವಹುದು | ಪರಿ ವಳಿತು ಹೊಲ್ಲೆ | ಪಕ್ಷದ್ವಯಕ ಬಾಹುದು ಮಾಡಿದಾಂಗ ಕೂಡಿದಾಂಗ | ರಕ್ಷಿಸೆಂದು ಮಹಿಪತಿಸುತ ಜೀವನಾದಿ ವಿಶ್ವಾ | ಭವ ಹಿಂಗು ಬ್ಯಾಗ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುಭ ವೀರಾಂಜನೇಯಾಯ ಜಯ ಮಂಗಳಂ ಪ ಮಣಿ ಪುಂಜ ರಂಜಿತಾಯ ಶುಭಾಂಗಯ ಮಂಜುಳಾಯ 1 ಲಕ್ಷ್ಮಣ ಪ್ರಾಣ ಸಂರಕ್ಷಣಾಯ ಪಕ್ಷೀಂದ್ರ ಗಂಧವಹ ಗತಿ ಲಕ್ಷಿತಾಯ 2 ಪಂಚಾನನಾದಿ ಮುಖ ಪಂಚಕಾಯ ಪಂಚತಾಪ ಹರಾಯ ಪÀಂಚಾಕ್ಷರಾಯ 3 ಕಂದರ್ಪ ನವವರವ್ಯಾಕರಣ ನವಪಂಡಿತಾಯ ನವಪಂಚಕೋಟಿ ಯೂಧಪ ಸೇವಿತಾಯ 4 ಮಹಾಕಾಂಡ ಬೃಂದಾರಕಾಯ ಗಂಧರ್ವವೇದೇಷು ಘನ ಪಂಡಿತಾಯ 5 ಸರ್ವಮಂತ್ರಾವಳೀ ಸನ್ನುತಾಯ ಸರ್ವಭೀತಿ ಹರಾಯ ಸರ್ವಾತ್ಮಕಾಯ 6 ಶತಕೋಟಿ ಭಯವರ್ಜಿತಾಯ ಬೇಟೆರಾಯಾಖ್ಯ ದೀಕ್ಷಿತ ರಕ್ಷರಾಯ 7 ಪರಯಂತ್ರ ವಿದ್ವಂಸಕಾಯ 8
--------------
ಬೇಟೆರಾಯ ದೀಕ್ಷಿತರು
ಶೇಷ ಗಿರಿಯ ವಾಸಈಶ ಜಗತ್ರಯ ಪೋಷಕ ಸರ್ವೇಶ ಭಾಸುರ ಕೀರ್ತಿ ಶೇಷ ಎನ್ನ ನೀ ಪೋಷಿಸುವುದು ಈಶ ಪ ವಕ್ಷಸ್ಥಳದಲಿ ವಾಸವಾಗಿಹ ಶ್ರೀ ಪರಬ್ರಹ್ಮ ನಾ ಪಕ್ಷಿವಾಹನ ಪರಮಪರುಷ ಅಕ್ಷಯ ಫಲದಾಯಕನಾ ರಕ್ಷಕ ದೀನ ಜನರ ಸರ್ವೋತ್ತಮನ ರಾಜೀವದಳನಯನ ಈಕ್ಷಣದಲೆನ್ನ ನಿನ್ನ ಕುಕ್ಷಿಯೊಳಗೆ ಇಟ್ಟು ರಕ್ಷಿಸೊ ಸಂಪನ್ನ 1 ವೇಣುನಾದ ವಿನೋದನಾದ ಸುಗಾನಲೋಲ ಹರಿಯೆ ದಾನವಾಂತಕ ದಜನುರಕ್ಷಕ ಸುಜ್ಞಾನಿಗಳ ಧೊರಿಯೆ ಮಾನವಾಧಿ ಪ ಮದನವಿಲಾಸ ಮಾಧವ ಮುಕುಂದಾ ನೀನೆ ದಯಮಾಡಿ ಸಲಹೊ ಆನಂದಾ ನಿಜನಿತ್ಯ ಗೋವಿಂದಾ 2 ವಾರಿಧಿ ಬಂಧಿಸಿ ದೈತ್ಯರ ಬಲವನೆಲ್ಲ ಮುರಿದಾ ಬಲವಂತಾ ರಾವಣನ ಭಂಗವ ಬಡಿಸಿ ತಲೆಗಳ ಛೇದಿಸಿದಾ ಸುಲಭದಿ ಅವನನುಜಗೆ ಪಟ್ಟವನಿತ್ತು ಸತಿಯನೆ ತಂದಾ ಜಲಧಿಶಯನ ಅಹೋಬಲ 'ಹೊನ್ನವಿಠ್ಠಲ’ ಚಲುವ ಸದಾನಂದಾ 3
--------------
ಹೆನ್ನೆರಂಗದಾಸರು
ಶೇಷದೇವರು ಖಗರಾಜ ಮಹೋಜ ಸತ್ತ್ವಧಾಮ ಭಕ್ತಿಭಾವ ರವಿತೇಜ ಜಿತಕಾಮ ಪ. ನಿಗಮಾಗಮಯೋಗತತ್ತ್ವ ಪ್ರಾಜ್ಞ ಮಹಾಭಾಗ ನಾಗಾಂತಕ ಮನೋಜ್ಞ 1 ಸಾಮಗಾನಪ್ರವೀಣ ವೈನತೇಯ ಹರಿಧ್ಯಾನೈಕತಾನ ಶುಭಕಾಯ 2 ವರಲಕ್ಷ್ಮೀನಾರಾಯಣನ ವರೂಥ ಹರಿಪಕ್ಷ್ಯೆಕದೀಕ್ಷ ಪ್ರಖ್ಯಾತ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶೇಷದೇವರು ಖಗರಾಜ ಮಹೋಜ ಸತ್ತ್ವಧಾಮ ಭಕ್ತಿಭಾವ ರವಿತೇಜ ಜಿತಕಾಮ ಪ. ನಿಗಮಾಗಮಯೋಗತತ್ತ್ವ ಪ್ರಾಜ್ಞ ಮಹಾಭಾಗ ನಾಗಾಂತಕ ಮನೋಜ್ಞ 1 ಸಾಮಗಾನಪ್ರವೀಣ ವೈನತೇಯ ಹರಿಧ್ಯಾನೈಕತಾನ ಶುಭಕಾಯ 2 ವರಲಕ್ಷ್ಮೀನಾರಾಯಣನ ವರೂಥ ಹರಿಪಕ್ಷ್ಯೆಕದೀಕ್ಷ ಪ್ರಖ್ಯಾತ3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಜಗದೀಶ ಮುರಾರಿ ಶ್ರೀತಜನ ರಕ್ಷಕನೆ ಪೂಜಿತ ಸರ್ವತ್ರ ಪೂರ್ಣ ಪ್ರಭಾವನೆ ಪುರುಷೋತ್ತಮಹರಿಯೆ ಪ ರಾಜಾಧಿರಾಜ ಶ್ರೀ ರಘು ಕುಲೋತ್ತಮ ನೀರಜದಳನಯನಾ ಈ ಜಗತ್ರಯಗಳ ಇಷ್ಟದಿ ಸಲಹುವ ವೆಂಕಟಗಿರಿ ರಮಣ ಭೋಜ ಭಾನುಕೋಟಿತೇಜ ಪ್ರಕಾಶನೆ ಪಾಂಡವ ಪಕ್ಷಕನೆ ಸದ್ಗುಣ ಭೂಷಿತನೆ 1 ಪುಂಡರೀಕವರದ ಪುರಾಣಪುರುಷ ಕೋದಂಡಧರ ಪ್ರಿಯಾ ಅಂಡಜವಾಹನ ಅಖಿಲಲೋಕಕರ್ತ ಆನಂದ ನಿಲಯಾ ಮಾಧವ ಗೋವಿಂದ ಕೃಪೆಯ ಮಾಡುಯೆಂದಾ 2 ಮಹಾನುಭಾವಾ ಗಂಗಾಪಿತ ಶ್ರೀಗೌರಿಪತಿ ಪ್ರಿಯಾ ಕರುಣಾಸಾಗರ ದೇವಾ ಶೃಂಗಾರಾಂಗನೆ ಶ್ರೀ ಲಕುಮಿಯ ಉರಸೂಸುತಲಿರುವಂಥಾ ರಕ್ಷಿಸೊ ಭಗವಂತಾ
--------------
ಹೆನ್ನೆರಂಗದಾಸರು
ಶ್ರೀ ಜಗನ್ನಾಥದಾಸರು ನಮೋ ದಾಸವರ್ಯ ಪೂತಾತ್ಮ ಪದ ನಮೋ ದೇವತಾತ್ಮ || ಪ ರಮಾ ರಮಣಪದ ಅಮಲ ಭಜನೆ ಕೊಡುನಮೋ ನಮೋ ಭವ್ಯಾತ್ಮ ಅ.ಪ. ನಾರಸಿಂಹ ಸತ್ಪೋರನೆಡರ ಪರಿಹಾರ ಪದದಿ ದೀಕ್ಷಪಾರುಮಾಳ್ಪಕೂಪಾರ ಭವವ ಸತ್ಸರಾಮೃತ ಕೃತದಕ್ಷ |ಭಾರ ನಿನ್ನದಾಪಾರ ಕೃಪೆಯ ನೀತೋರ್ವುದೆಂಬ ಮಹರಕ್ಷಬಾರಿ ಬಾರಿ ನಿರ್ಧಾರ ಮನದಿ ಹಾರೈಸುತಿಹೆನೂ ಹರಿಪಕ್ಷ 1 ಮಾನವೀಶ ಪ್ರಾಣೇಶ ದಾಸನುತ ಆನತೇಷ್ಟ ತೋಷಗಾನಲೋಲ ಮೌನೀಶ ಪದಾಂಬುಜ ಆನಮಿಪರ ಆಶೇಷ |ಹೀನವೆನಿಪ ಕುಯೋನಿ ನಿವಾರಕ ಧ್ಯಾನಗಮ್ಯ ಸುವಿಶೇಷಪ್ರಾಣನಾಥ ಮಹಿಮೋನ್ನತಿ ಗಾನದಿ ಕಳೆದೆ ದೋಷ 2 ಪಾದ ಮೂರ್ತಿ ಪಾದ ತೋರೊ ದೇವ 3
--------------
ಗುರುಗೋವಿಂದವಿಠಲರು