ಒಟ್ಟು 638 ಕಡೆಗಳಲ್ಲಿ , 83 ದಾಸರು , 545 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕುಮಿವಲ್ಲಭ ಹರಿಯ ಮಂದಿರದಿಂದ ಬಕುಳೆ ಬಂದ ಪರಿಯ ನಗುತ ಸದ್ಯುಕುತಿಯಿಂದಲಿ ಪೇಳ್ದಳು ಪ. ಯಾರು ಬಲ್ಲರಿವನ ಸಂಸ್ಥಿತಿಯನ್ನು ನೀರೆ ನೀ ಪೇಳ್ವದನ ದಾರಿಯ ಪೇಳೆ ಜಾಣೆ 1 ಕ್ಷೀರಾಂಬುಧಿವಾಸನ ಸಕಲಗುಣ ವಾರುಧಿ ವರದೇಶನ ಸಾರಿ ಸಾರಿಗೆ ಸರ್ವ ಸುರಮುನೀಶ್ವರರೆಲ್ಲ ಸೇರಿ ಬಾಳುವರೀತನ 2 ಮಾತಿಗೆ ದೊರೆಯನಂತೆ ಮನೋಗತಿ ನೀತಿಯು ನಡೆಯದಂತೆ ಜಾತಿ ಗೋತ್ರ ಬಂಧು ಜನರಿಲ್ಲದವನಿಗಿನ್ಯಾತಕೆ ಪರಿಣಯವು 3 ಭೂತೇಂದ್ರಿಯ ಮನವು ಬಲಿಷ್ಠ ಮಹಾತತ್ವ ಹಂಕೃತಿಯು ಶ್ರೀ ತರುಣಿಯ ಗುಣ ತ್ರಯಮುಖ ತತ್ವ ಸಂಘಾತವೀತನಿರಲು 4 ಮನೆಯ ಕಟ್ಟಿದನೆಂಬೊರು ನಿಜವಾಗಿ ಪೇಳು 5 ಸಕಲ ಜಗನ್ನಿವಾಸ ಸಾಂಗೋಪಾಂಗ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 6 ಮನೆವಾರ್ತೆಗಳ ಬಿಟ್ಟು ಸಂಚರಿಸುವ ಮುನಿಗಳ ಸರಿವನಂತೆ ತನುಮನದಲಿ ತನ್ನ ನೆನೆವರ ಕೃತ್ಯಗಳನು ತಾನೆ ಮಾಳ್ಪನಂತೆ 7 ದಾಸರ ಪಾಲಿಪುದು ಎಂದೆಂದಿಗು ಶ್ರೀಶನ ಮಹಬಿರುದು ದೋಷದೂರನಾದರಿಂದ ಮೌನಿ ಮನೋವಾಸನಾಗಿಹ ನೆರದು 8 ಕುಲಹೀನನಾಗಿ ಕಲ್ಪಾಂತದೊಳಿರುವಗೆ ಲಲನೆಯ ನಿಪ್ಪುದೆಂತೆ 9 ಸುಧೆಯನು ತಾನೆ ತಂದ ಮುದವ ತೋರಿದ ಮುಕುಂದ 10 ಹೊಡದಾಡಿ ಬರುವನಂತೆ ಕೊಡುವದೆಂತೆ 11 ಮಗುವಿನ ಮಾತ ಕೇಳಿ ತಕ್ಷಣ ನರಮೃಗನಾಗಿ ಕೋಪತಾಳಿ ಬಗೆದು ಬಲಿಷ್ಠ ದೈತ್ಯನು ಸುಲಭದಿ ಬೇಗ ತೆಗೆದನು ಕರುಳನಂತೆ 12 ಸಿರಿಯನಾಳುವನಾದರೆ ದೈತ್ಯರ ಮುಂದೆ ತರಿವುದು ಸರಿಯೆ ನೀರೆ ಮರುಳು ಮಾತುಗಳಾಡಲ್ಯಾತಕೆ ಸುಮ್ಮನೆ ಥರವಲ್ಲ ಹಿಂದೆ ಸಾರೆ 13 ಕೃತ್ರಿಮ ದ್ವಿಜನಿವನು ಭೂಭಾರಕ ಕ್ಷತ್ರ ಸಮೂಹವನು ಶಸ್ತ್ರ ಪಿಡಿದು ಬುಡ ಕತ್ತ್ರಿಸಿ ಮಡುಗಳ ನೆತ್ರದಿ ರಚಿಸಿದನು 14 ದಾನವರನು ಗೆಲಲು ಚಪಲ ಬುದ್ಧಿ ವಾನರರನು ಒಲಿಸಿ ಪೇಳ್ವ ಹೀನವಾರ್ತೆಗಳೇನಿದು 15 ಧರೆಯ ಭಾರವನಿಳುಹಿ ಸಕಲ ಸುರವರ ಮುನಿಗಳ ಸಲಹಿ ತೆರವ ತೋರಿದ ಕೃಷ್ಣನು 16 ಜೈನರ ಸಭೆಯೊಳಗೆ ಮೈಯೊಳು ವಸ್ತ್ರಹೀನನಾಗಿರುವ ಬಗೆ ನಾನರಿಯೆನೆ ಬಹು ಮಾನ ಬಿಟ್ಟವನಿಗೆ ಏನೆಂದು ಮಗಳೀವನೆ 17 ಕೊಲುವನು ಖಡ್ಗದಲಿ ನಿಖಿಳ ಕುಲವನುದ್ಧರಿಸುವನು 18 ಏನೆಂದರು ಮನದಿ ನಿರ್ಣಯ ತೋರದೇನು ಮಾಡಲಿ ಕೆಳದಿ ಮಾನಿನಿ ಶಿರೋಮಣಿಯೆ 19 ದೋಷ ಲೇಶಹೀನನು ಸಕಲಗುಣ ಭೂಷಿತ ಶ್ರೀವರನು ಶೇಷ ಗಿರೀಶನೆನಲು ತನ್ನ ಮಗಳೀವ ಭಾಷೆಕೊಟ್ಟಳು ಧರಣಿ 20
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀದೇವಿಯ ಪ್ರಾರ್ಥನೆ ಶ್ರೀನಿವಾಸನ ಕರುಣಾನು ಸಂಸರಣಿ ಜ್ಞಾನ ಭಕ್ತಿಗಳನ್ನು ಪಾಲಿಸಂಭರಣಿ ಪ. ಅಜಭವಾದಿಗಳಿಗೆ ನಿಜಪದದಾಯಿನಿ ವೃಜಿನ ಸಮೂಹ ನಿವಾರಿಣಿ ಕುಜನ ಕುಠಾರಿಣಿ ಕುಂಜರ ಗಮನೆ ಪಾಲು ದಧಿವಾಸನ ಕೂಡಿ ಸದನದಿ ನೆಲೆಗೊಳ್ಳೆ 1 ಆರಿಗೆ ನಿನ್ನ ಕರುಣಾರಸ ದೊರೆವದೊ ನೀರಜಾಲಯೆ ನಿನ್ನ ಸೇರಿಕೊಂಡಿಹ ಎನ್ನ ವೈರಿ ಜನರು ಬೇಗ ಗಾರಾಗದುಳಿವರೆ 2 ನೀನೊಲಿಯಲೂ ಸರ್ವ ಮಾನವರೊಳಗತಿ ಮಾನ ಮಹತ್ವಾದಿ ಸದ್ಗುಣವೂ ತಾನಾಗಿ ಬರುವವಿಂನೇನೆಂದು ನಿನ್ನ ಮಹಿ- ಮಾನು ವರ್ಣನೆ ಮಾಳ್ಪೆ ದೀನ ದಯಾಕಲೆ 3 ಮಂದಿರದೊಳಗೆ ನೀ ನಿಂದು ನಗುತ ನಲಿ ವಂದ ನೋಡುತ ಮಿತ್ರ ಬಂಧುಗಳು ಮಂದರಧರ ತಾನೆ ನಿಂದು ರಕ್ಷಿಸನೆಂದಾ ನಂದ ಪೂರಿತ ಮನದಿಂದ ಸೇರಿರುವರು 4 ಸರಸಿಜನಾಭ ಶ್ರೀಹರಿಯು ನಿನ್ನನ್ನೆ ಮುಂ ದಿರಿಸಿ ಚತುರ್ವಿಧ ಪುರುಷಾರ್ಥವಾ ಕರುಣಿಪೆನೆಂದು ಕಂಠಸರದ ಮಧ್ಯೂರದಲಿ ಧರಿಸಿ ಶೋಭಿಪ ಶೇಷಗಿರಿವರ ಶಿಖರದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ಲಕ್ಷ್ಮೀಶ ಹರಿ ವಿಠಲ ರಕ್ಷಿಸೋ ಇವಳಾ ಪ ಕುಕ್ಷಿಯೊಳಗನ್ಯರೆನೆ | ರಕ್ಷಕರ ಕಾಣೇ ಅ.ಪ. ಮಧ್ವ ಮತದಲ್ಲಿಹಳು | ಶ್ರದ್ಧೆ ಭಕ್ತೇಯುತಳುಪದ್ಧತಿಗಳಲವಡಿಸಿ | ಶುದ್ಧ ಸಾಧನದಾ |ಅಧ್ಯಾನ ಕಳೆ ತಂದು | ಬದ್ಧಳನ ಮಾಡುತ್ತಉದ್ಧರಿಸೋ ಶ್ರೀ ಹರಿಯೆ | ಪದ್ಮನಾಭಾಖ್ಯಾ 1 ಸಿರಿ ಭವ ಹಾರೀ 2 ಸಾರ ಸಾಧನಕೇ |ಚಾರು ನಿನ್ನಯ ನಾಮ | ಸಾರಸದಿ ಸವಿದುಂಬಭರಣಿಯಲಿರಿಸಯ್ಯ | ಮಾರಪಿತ ಹರಿಯೇ 3 ಕರ್ಮಗಳ ಮಾಳ್ಪವಲಿ | ಮರ್ಮಗಳ ತಿಳಿಸಯ್ಯನಿರ್ಮಮತೆ ನೀಡುತ್ತ | ಧರ್ಮ ಸಾಧನಕೇ |ಕರ್ಮ ನಾಮಕ ಹರಿಯೆ | ಪೇರ್ಮೆಯಲಿ ಇವಳನ್ನಕ್ರಮ್ಮಿಸೋ ಕರ್ಮದಲಿ | ಧರ್ಮಗುಪ್‍ಧರ್ಮೀ 4 ಧಾವಿಸೀ ಬಂದಿಹಳು | ದೇವ ತವ ದಾಸ್ಯವನೆ ಭಾವುಕಳಿಗಿತ್ತಿಹೆನೋ | ಓವಿ ಉಪದೇಶಾಗೋವಳರ ಪ್ರೀಯ ಗುರು | ಗೋವಿಂದ ವಿಠ್ಠಲನೆನೀವೊಲಿದು ಪೊರೆ ಇವಳ | ದೇವ ದೇವೇಶಾ 5
--------------
ಗುರುಗೋವಿಂದವಿಠಲರು
ಲೋಕನೀತಿ ಎಲ್ಲಿಗೇತಕೆ ಪೋಗಿ ತಲ್ಲಣಿಸುವೆಯೊ ಮನವೆ ಇಲ್ಲೆ ಶ್ರೀಹರಿಯಿಲ್ಲವೆ ಪ ಬಲ್ಲವರ ಹೃದಯಗುಹೆಯಲ್ಲಿ ಪ್ರಕಟಿಸುತ ಜನ ತುಂಬಿ ಸೂಸುತಲಿರುವ ಅ.ಪ ಕಾಶಿ ರಾಮೇಶ್ವರ ಬದರಿ ತಿರುಪತಿಯೆಂದು ಘಾಸಿಗÉೂಳ್ಳುವೆ ಏತಕೋ ವಾಸನೆಯ ನೀಗದವನಾಶೆಪಾಶಗಳಿಂದ ಬೇಸತ್ತು ಚರಿಸಲೇಕೋ ಈಶನಾವಾಸವೀಜಗವೆಲ್ಲವಿಲ್ಲಿಲ್ಲ ವಲ್ಲಿರುವನೆಂಬುದೇಕೋ ಶ್ರೀಶ ಶ್ರೀಹರಿಯ ನೀನಿರುವಲ್ಲೆ ಶೋಧಿಸುವ ಆಸೆಯುದಯಿಸಲಿಲ್ಲವೇಕೋ 1 ಅಣುಮಹತುಗಳಲ್ಲಿ ತೃಣಜೀವಕೋಟಿಯಲಿ ಗುಣ ಮಹಿಮನರಿಯ ಬಯಸೋ ಎಣಿಸಲಾಗದನಂತಗುಣನ ಪ್ರಾಣಿ ಸಮೂಹ ಗಣಗಳೊಳು ಕಾಣಬಯಸೋ ಅಣುವಿಗಣುವೆನಿಸಿ ಮಹತಿಗೆ ಮಹತ್ತಹನ ಕಣ್ದಣಿಯೆ ಕಾಣುತ ಭಾವಿಸೊ ಗುಣನಿಧಿಯು ನಿನ್ನ ಶ್ರದ್ಧಾಭಕ್ತಿಗಳಿಗೊಲಿದು ಕ್ಷಣದಿ ಕಾಣಿಸುವನಿದನರಿತು ನೀ ಚರಿಸೋ 2 ವ್ರತನಿಯಮಗಳ ಕಾಮ್ಯ ಫಲದಾಸೆಯಿಂ ಮಾಡೆ ಫಲವೇನು ವ್ಯರ್ಥಶ್ರಮವೋ ಸತತ ನಿನ್ನಯ ವ್ಯಾಪ್ತ ಮಹಿಮೆಯರಿಯದೆ ಪೂಜೆ ಮಾಡಿದರು ವ್ಯರ್ಥಶ್ರಮವೋ ಮತಿವಿಕಳ ಕೋಪ ತಾಪದ ದಾಸನವ ಮಾಳ್ಪ ದಾನವದು ವ್ಯರ್ಥಶ್ರಮವೋ ಅಕಳಂಕಮಹಿಮ ರಘುರಾಮವಿಠ್ಠಲನೆಂದು ನಂಬಿ ನಡೆವುದೆ ಸಾರ್ಥಕವೋ 3
--------------
ರಘುರಾಮವಿಠಲದಾಸರು
ಲೋಕನೀತಿಯ ಪದಗಳು ಚರಣಕಮಲ ಭಜಿಸೋ ಗೋಪಾಲಕೃಷ್ಣನ ಪ ತರುಣಿಯರ ಮನವನು ಮರುಳುಗೊಳಿಸಿದ ಪರಮ ಸುಂದರನ ಧರಿಯೊಳಗೆ ಭಾಸ್ಕರಪುರ ಸುಮಂದಿರನೆಂದು ಕರೆಸುವನ ಕರಿರಾಜವರದನ ಅ.ಪ ಕ್ಷೋಣೆ ಗೀರ್ವಾಣರಿಂದಲಿ ಪೂಜೆಗೊಂಬುವನಾ ಮಾನಸದಿ ತನ್ನನು ಧೇನಿಪರ ಸುರಧೇನು ಎನಿಸುವನಾ ಗಾನವನು ಕೇಳುವ ಧೇನು ವತ್ಸಗಳಿಂದ ಶೋಭಿತನಾ ವೇಣುಗೋಪಾಲನ 1 ವಂದನೆಯ ಮಾಳ್ಪರ ಬಂಧ ಬಿಡಿಶ್ಯಾನಂದ ನೀಡುವನಾ ಮಂದರದಿ ಗಣಪತಿ ಗಂಧವಾಹನರಿಂದ ವಂದಿತನಾ ಮಂದಜಾಸನ ಮುಖ್ಯ ಸುರಗಣದಿಂದ ಸೇವಿತನಾ ಸಿಂದೂರವರದನ 2 ಕೃಷ್ಣಾ ಅಷ್ಟಮಿಯ ಉತ್ಸವ ಮಾಳ್ಪ ಭಕುತರನಾ ಸೃಷ್ಟೀಶನಿವನೆಂದರಿಂದ ಮಹಿಮೆಯ ಪಾಡಿಪೊಗಳುವನಾ ಕಷ್ಟವನು ಪರಿಹರಿಸ್ಯವರ ಸಕಲಾಭೀಷ್ಠಗರಿಯುವನಾ ಪರಮೇಷ್ಠಿ ಜನಕನ 3 ಗರಿಯೆ ಗೋಗಳನಾ ಗಿರಿಯ ಧರಿಸಿದನಾ ಇದ ಕೃಷ್ಣನ್ನ ಪೂಜಿಸಲು ಒಲಿದನ 4 ಶರಣಾಗತ ಜನರ ಪೊರೆಯಲು ಬಂದುನಿಂತಿಹನಾ ಕಾ ರ್ಪರ ಕ್ಷೇತ್ರದಿ ಮೆರಿವ ತರುಪಿಪ್ಪಲ ಸುಮಂದಿರನ ಸುರವಿನುತ ಸಿರಿನರಹರಿಯ ರೂಪಾತ್ಮಕನು ಎನಿಸುವನು ತುರುಪಾಲ ಕೃಷ್ಣನ 5
--------------
ಕಾರ್ಪರ ನರಹರಿದಾಸರು
ವರದ ನರಹರಿ ವಿಠಲ | ಪೊರೆಯ ಬೇಕಿವಳ ಪ ಕರಿವರದ ಶ್ರೀ ಹರಿಯೆ | ಕರುಣಿ ನೀನೆಂದರಿತುಮೊರೆಯಿಡುವೆ ನಿನ್ನಡಿಗೆ | ಮರುತಾಂತರಾತ್ಮಾ ಅ.ಪ. ದಾಸದೀಕ್ಷೆಯಲಿ ಮಹ | ದಾಶೆಯನು ಉಳ್ಳವಳಲೇಸಾಗಿ ಕೈಪಿಡಿದು | ನೀ ಸಲಹ ಬೇಕೋವಾಸವಾನುಜ ದಾಸ | ವೇಷದಿಂ ಸ್ವಪ್ನದಲಿಸೂಸಿ ಸೂಚಿಸಿದ ಉಪ | ದೇಶವಿತ್ತಿಹೆನೋ 1 ಮಧ್ವಮತ ಪದ್ಧತಿಗ | ಳುದ್ಧರಿಸಿ ಇವಳಲ್ಲಿಶ್ರದ್ಧೆಯಿಂ ತವಪಾದ | ಪದ್ಮಗಳ ಭಜಿಸೇಶುದ್ಧ ತತ್ವ ಜ್ಞಾನ | ಸದ್ಭಕ್ತಿ ವೈರಾಗ್ಯಮಧ್ವಾಂತರಾತ್ಮ ಅನಿ | ರುದ್ಧ ಪಾಲಿಪುದೋ 2 ಪತಿಯ ಕೈಂಕರ್ಯವನು | ಹಿತದಿಂದ ಮಾಳ್ಪಂಥಮತಿಯ ನೀ ಕರುಣಿಸುತ | ಕೃತ ಕೃತ್ಯಳೆನಿಸೋಕ್ಷೀತಿಭಾರಹರಣ ಶ್ರೀ | ಪತಿಯೆ ನೀ ಒಲಿದಿವಳಅತುಳ ವಿಭವದಿ ಮೆರೆಸಿ | ಗತಿಪ್ರದನು ಆಗೋ 3 ಸಂತತದಿ ತವನಾಮ | ಚಿಂತಿಸುವ ಸೌಭಾಗ್ಯವಂತೆಯೆಂದೆನಿಸಿವಳ | ಕಾಂತೆಯ ಸಖನೇಅಂತರಾತ್ಮಕ ನೀನೆ | ಅಂತರಂಗದಿ ತೋರಿಸಂತಸವ ನೀಡಯ್ಯ | ಪಂಥಭಿಧ ಹರಿಯೇ 4 ಸರ್ವಜ್ಞ ಸರ್ವೇಶ | ಸರ್ವವ್ಯಾಪಕ ದೇವನಿರ್ವಿಕಾರನೆ ಹರಿಯೆ | ದುರ್ವಿ ಭಾವ್ಯಾಸರ್ವವಿಧ ಪರತಂತ್ರ | ದರ್ವಿ ಜೀವಿಯ ಕಾಯೋಸರ್ವಸುಂದರ ಗುರೂ ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ವರದೇ ಕಾರುಣ್ಯ ಶರಧೇ ಕರೆದೆನ್ನ ತವ ಸನ್ನಿಧಿಯಲಿಟ್ಟು ಪೊರೆಯೇ ಪ ವರದೆ ವರದೇ ಎಂದು ಕರೆದ ಮಾತ್ರದಲಿ ವಗ್ದುರಿತಗಳ ಪರಿಹರಿಸಿ ಪೊರೆವ ನೀನು ಕರಣ ಶುದ್ಧಿಯಲಿ ಸಂದರುಶನಭಿವಾದನವ ವಿರಚಿಸುವ ಮಾನವಗೆ ಪರಮ ಸೌಖ್ಯವನೀವೆ 1 ಸ್ನಾನ ಸಂಧ್ಯಾನ ಜಪ ಧ್ಯಾನಾರ್ಚನೆಯ ಮಾಳ್ಪ ಮಾನವರಿಗನುದಿನದಲೇನು ಫಲವೋ ಸಾನುರಾಗದಿ ಒಲಿದು ನೀನಿತ್ತು ಪಾಲಿಸಿದೆ ಆನರಿಯೆ ವಾರಿನಿಧಿ ರಾಣಿ ಕಲ್ಯಾಣಿ 2 ಕರುಣಿಸೆನಗಿದನೆ ವರ ವರವ ಬೇಡುವೆ ನಿನಗೆ ಹರಿಗುರುಗಳಲಿ ಭಕುತಿ ಪರಮ ಜ್ಞಾನ ಮರುತಾಂತರಾತ್ಮಕ ಜಗನ್ನಾಥ ವಿಠಲ ಒಂ ದರೆಘಳಿಗೆ ಬಿಡದೆ ಪೊಂದಿರಲಿ ಮನ್ಮನದಿ 3
--------------
ಜಗನ್ನಾಥದಾಸರು
ವಸುಮತೀಶ ವಿಠ್ಠಲನೇ ನೀನಿವಗೆ | ಎಸೆವ ಜ್ಞಾನವನಿತ್ತುಹಸನಾಗಿ ಕಾಪಾಡಬೇಕೊ ಹರಿಯೆ ಪ ಕುಸುಮ ಸಂಭವ ಪಿತನೆ | ವಾಸುದೇವನೆ ಕೃಷ್ಣನಸು ನಗೆಯಲೀ ನಿನ್ನ ಉಪಾಸನವ ಕೊಡೊ ಹರಿಯೆ ಅ.ಪ. ತರತಮವು ಪಂಚಭೇದದ ಜ್ಞಾನ | ನಿರತಿಶಯ ಹರಿಭಕ್ತಿಗುರುಭಕ್ತಿಗಳ ಕರುಣಿಸೀ ಕಾಪಾಡಬೇಕೊ ಹರಿಯೇ |ವರ ಪ್ರದಾಯಕ ಸ್ವಾಮಿ ವೈರಾಗ್ಯ ಭಾಗ್ಯಗಳ ನೀನಿವರಿಗಿತ್ತುಕರುಣದಿಂ ಕಾಪಾಡಬೇಕೊ ಹರಿಯೇ 1 ನಿನ್ನ ಮೊರೆ ಹೊಕ್ಕವನ | ಇನ್ನು ಕೈ ಪಿಡಿಯುವುದುನಿನ್ನ ಧರ್ಮವಲ್ಲವೆ ಸ್ವಾಮಿ ರಾಮಚಂದ್ರ |ನನ್ನೆಯಿಂದಲಿ ಇವನ ಪಾಪಗಳ ಪರಿಹರಿಸಿನಿನ್ನ ಪದ ಸೇವಕನ ಮಾಡೊ ವೈಕುಂಠ ಪತಿಯೇ 2 ಖಗವರಧ್ವಜ ದೇವ ಜಗಜ್ಜನ್ಮಾದಿ ಕಾರಣನೆಬಗೆಬಗೆಯ ಮಹಿಮೆಗಳ ತೋರಿ ಕಾಪಾಡೊ ಹರಿಯೇ |ಸುಗುಣ ಮೂರುತಿ ದೇವ ತ್ರಿಗುಣ ವರ್ಜಿತ ಸ್ವಾಮಿಹಗರಣಗಳೀಯದಲೆ ಕಾಪಾಡೊ ಹರಿಯೇ 3 ಇಷ್ಟಮೂರುತಿ ದೇವ ಸೃಷ್ಟ್ಯಾದಿ ಕಾರ್ಯಗಳದೃಷ್ಟಿಯಿಂದಲಿ ಮಾಳ್ಪ ಮಹಮಹಿಮ ಹರಿಯೇ |ಕೃಷ್ಣಮೂರುತಿ ಹೃದಯ ಅಷ್ಟದಳ ಮಧ್ಯದಲಿದೃಷ್ಟಿಗೋಚರನಾಗಿ ಕಾಪಾಡೊ ಹರಿಯೇ 4 ಮೂರ್ತಿ ಹಯ ಮೊಗಾತ್ಮಕನೇ |ವೇದಾಣಿ ವಂದ್ಯ ಗುರುಗೋವಿಂದ ವಿಠ್ಠಲನೇನೀ ದಯದಿ ಕೈ ಪಿಡಿದು ಕಾಪಾಡೊ ಹರಿಯೇ 5
--------------
ಗುರುಗೋವಿಂದವಿಠಲರು
ವಾದಿರಾಜ ಅಸ್ಮದ್ಗುರು ವಾದಿರಾಜ ಪ ವಾದಿರಾಜ ತವ ಪಾದಕಮಲಕಭಿ ವಾದನ ಮಾಳ್ಪೆ ಸಮೋದವಿತ್ತು ಕಾಯೊ 1 ಸಾರಿದರಿಗೆ ಕಲ್ಪ ಭೂರುಹ ದಂತೆ ಮ ನೋರಥ ಸಲಿಸುವ ಸೂರಿಗಳರಸೇ 2 ಭೇದ ಪಂಚಕವನು ಸಾಧಿಸಿ ಕುಮತಕು ವಾದಿಗರ್ವಾದ್ರಿ ವಿಭೇದನ ಗೈದೆ 3 ದೇಶಿಕವರ್ಯ ವಾಗೀಶ ಕುವರನೆ ಕ್ಲೇಶ ಹರಿಸು ಅಘನಾಶ ಗೈದು 4 ಸಿರಿ ಜಗನ್ನಾಥವಿಠಲನ ಸುಗುಣಗಳನುದಿನ ಪೊಗಳಿ ಹಿಗ್ಗುವೊ 5
--------------
ಜಗನ್ನಾಥದಾಸರು
ವಾದಿರಾಜರ ಸ್ತೋತ್ರ ಇದಿರ್ಯಾರೋ ಗುರುವೆ ಸಮರ್ಯಾರೋ ಶ್ರೀ ಹಯವದನ ಪದ ಪ್ರಿಯ ವಾದಿರಾಜ ಪ ಸಿರಿನಿಲಯನ ಗುಣಗಳ ಸ್ಮರಿಸುತಗುರು ಮಧ್ವ ಮುನಿಪನ ಮಹಿಮೆಯ ಪೊಗಳುತನೆರೆದಿದ್ದ ಮಾಯ್ಮದ ಕರಿಗಳ ಶಿರವನುಭರದಿ ಛೇದಿಪ ಬಲಿ ವಿಬುಧ ಕೇಸರಿಯೆ 1 ಸಾರ ಸಜ್ಜನರಿಗೆ ತಿಳಿಯದೇಪರಿಪರಿ ಕುಸಮಯ ತಮ ಕವಿಯಲು ನೀಸರಸ ಭಾರತಿ ಮೊದಲಾದ ಗ್ರಂಥಗಳನುವಿರಚಿಸಿ ತಮ ಹರಿಸಿದ ದಿನಕರನೇ 2 ಸೋದೆಯ ಪುರದಲ್ಲಿರುವ ಹಯವದನನಮೋದದಿ ಭಜಿಸುತ ಈ ಧರೆಯೊಳ್ ಪೂರ್ಣಬೋಧ ತೀರ್ಥರ ಪಾದಸೇವಕರಿಗೆಆದರ ಮಾಳ್ಪ ಯತಿಕುಲ ಶಿರೋಮಣಿಯೇ 3 ಮುದ್ದು ಲಕ್ಷ್ಮೀಶ ವೆಂಕಟ ವಿಠ್ಠಲನಹೊದ್ದಿದ ಭಕ್ತರ ಸಂತಾಪ ಕಳೆಯುತ ಮಧ್ವಮುನಿಯ ಮತ ದುಗ್ಧವಾರಿಧಿಯೊಳುಉದ್ಭವಿಸಿದ ಪೂರ್ಣ ಶುದ್ಧ ಚಂದ್ರಮನೇ 4
--------------
ವೆಂಕಟೇಶವಿಟ್ಠಲ
ವಾರಿಜಾಕ್ಷನೆ ನಿನ್ನ ಚಾರುಚರಣದ ಸ್ಮರಣೆ ಬಾರಿ ಬಾರಿಗೆ ಮಾಳ್ಪ ಭಾಗ್ಯವೀಯೊ ಸಾರಸಾಕ್ಷನೆ ಸಂಸಾರ ದು:ಖದಿ ಎನ್ನ ಸೇರದಂದದಿ ಮಾಡೋ ಸರ್ವವಂದಿತ ಕೃಷ್ಣ 1 ಅಂಬುಜಾಕ್ಷನೆ ನಿನ್ನ ನಂಬಿದೆನೊ ಈ ಭವದ ಬಂಧ ತಪ್ಪಿಸಿ ಕಾಯೊ ಇಂದಿರೇಶ ಹಿಂದು ಮುಂದ್ಯಾರಿಲ್ಲವೆಂದು ನಂಬಿದೆ ನಿನ್ನ ಛಂದದಿಂದ ಸಲಹೊ ಮಹೇಂದ್ರತೀರ ನಿವಾಸ 2 ಸುಂದರಾಂಗನೆ ದೇವ ವಂದಿಸುವೆ ತವಪಾದ ಧ್ವಂದ್ವ ಭಜಕರ ಸಂಗ ಬಂದುನೀಡೈ ಇಂದಿರಾರಮಣನೆ ನಂದಗೋಪನ ಕುವರ ಬಂದು ಭಕುತರ ಪೊರೆವ ಆನಂದ ಮೂರುತಿ ಕೃಷ್ಣ3 ಶರಣಜನರನು ಪೊರೆಯೆ ತ್ವರಿತದಲಿ ಬಂದು ಈ ಗಿರಿಯ ಮಧ್ಯದಿನಿಂದೆ ಮಧುಸೂದನ ಶರಣುಶರಣೆಂದು ನಿನ್ನಡಿಗೆರಗುವ ಜನರ ದುರಿತವೆಲ್ಲವ ಕಳೆದು ಪೊರೆವ ದಯಾನಿಧಿ ಕೃಷ್ಣ4 ಕನಕಗರ್ಭನ ಪಿತನೆ ಕಡುಲೋಭವನೆ ಬಿಟ್ಟು ದೃಢವಾದ ಅಭಯವನು ದಯಪಾಲಿಸೊ ಪೊಡವಿಗೊಡೆಯನೆ ದೇವ ಕಮಲನಾಭವಿಠ್ಠಲ ಬಿಡದೆ ನಿನ್ನನು ಭಜಿಪ ಧೃಢ ಮನವ ನೀಡೈ5
--------------
ನಿಡಗುರುಕಿ ಜೀವೂಬಾಯಿ
ವಿಜಯಗುರು ನಿನ್ನಡಿಯ ಭಜಿಸುವೆನೋ ಸತತದಲಿ ವಿಜಯ ಕೊಡು ದಾಸತ್ವದಿ ಪ. ಪಾದ ಭಜನೆಯ ಮಾಳ್ಪಂಥ ಮತಿ ರುಜು ಮಾರ್ಗ ತೋರಿ ಸಲಹೋ ದಯದಿ ಅ.ಪ. ವಿಧಿ ವಶದಿ ಘನ ಕಷ್ಟ ಒದಗುತಿರೆ ಚರಿಸಿ ಯಾತ್ರೆ ಪದುಮನಾಭನ ದಯದಿ ಕಾಶಿಕ್ಷೇತ್ರದಲಿರುವ ಅದೆ ಕಾಲದಲಿ ಸ್ವಪ್ನದಿ ವಿಧಿಸುತಾಂಶರು ಪುರಂದರದಾಸರಿತ್ತಂಥ ಅದುಭುತದ ಉಪದೇಶದಿ ಉದಿತವಾಗಲು ಜ್ಞಾನ ಒದೆದು ದುಷ್ಕರ್ಮಗಳ ಪದುಮೇಶ ದಾಸನಾದಿ ಮುದದಿ 1 ಪರಮ ವೈರಾಗ್ಯದಲಿ ಚರಿಸಿ ತೀರ್ಥಕ್ಷೇತ್ರ ತರುಣಿ ಶಿಷ್ಯರ ಸಹಿತದಿ ಪರಿಪರಿಯ ಮಹಿಮೆಗಳವರ ಭಕ್ತಿಗೆ ತೋರಿ ಕರುಣಾಳುವೆನಿಸಿ ಮೆರೆದಿ ಪುರಂದರ ಗುರು ಆಜ್ಞೆ ತೆರದಂತೆ ಪದಲಕ್ಷ ವಿರಚಿಸಿದೆ ಪದ ಸುಳಾದಿ ನರವರರಿಗನ್ನದಾನಗಳನು ಮದುವೆ ಮುಂಜಿ ತೆರವಿಲ್ಲದೆಲೆ ಚರಿಸಿದಿ ದಯದಿ 2 ನಿನ್ನ ಕರುಣವು ದಾಸಕುಲದವರ ಮೇಲೆ ಬಹು ಉನ್ನತವಾಗಿಹುದು ಘನ್ನ ಗುರು ವಿಜಯವಿಠ್ಠಲದಾಸರೆಂತೆಂದು ನಿನ್ನ ಸ್ಮರಿಸಲು ಕಾವುದು ಎನ್ನ ಗುರು ತಂದೆ ಮುದ್ದುಮೋಹನರ ದಯದಿ ನಿನ್ನ ಸ್ಮರಿಸಲು ಬಾಹುದು ಘನ್ನ ಶ್ರೀ ಗೋಪಾಲಕೃಷ್ಣವಿಠ್ಠಲನ ದಯದಿ ಉನ್ನತ ಜಯವೀವುದು 3
--------------
ಅಂಬಾಬಾಯಿ
ವಿಜಯದಾಸರ ಭಜನೆ ಮಾಡಿರೊ |ವಿಜಯದಾಸರ ಭಜನೆ ಮಾಡಲುಅಜನ ಜನಕ ನಿಜನಿಗೊಲಿದುಕುಜನ ಸಂಗತಿ ತ್ಯಜನ ಮಾಡಿಸಿಸುಜನರ ಪಾದಾಂಬುಜದಲ್ಲಿಡುವ ಪ ಶುದ್ಧ ಮಂದರನ್ನ ಉದ್ಧಾರಾರ್ಥವಾಗಿಮಧ್ವರಾಯರ ಮತಾಬ್ಧಿಯೊಳು ಪುಟ್ಟಿಸಿದ್ಧಾಂತ ಸ್ಥಾಪಿಸಿ ಗೆದ್ದು ವಾದಿಗಳಹೆದ್ದೈವವೇ ಅನಿರುದ್ಧನು ಯೆಂದು ||ಪದ್ಧತಿಂದ ಪೇಳಿಸಿದಿ ವೈಷ್ಣವರನ್ನಶುದ್ಧಾತ್ಮರ ಮಾಳ್ಪ ಉದ್ಯೋಗದಿಂದಲಿಹದ್ದನ್ನೇರಿ ಬಪ್ಪ ಪದ್ದುಮನಾಭನ್ನಹೃದ್ದಯದೊಳಗಿಟ್ಟ ಸದ್ಗುರುರಾಯ 1 ಭೂಸುರಾಬ್ಧಿಗೆ ತಾರೇಶನಂತೊಪ್ಪುವಸಾಸಿರ ನಾಮದ ಶೇಷಗಿರಿ ಶ್ರೀ ನಿ-ವಾಸನ ಯಾತ್ರೆಯ ಲೇಸಾಗಿ ಮಾಡ್ಯೆತಿ ಸ- |ಹಾಸ ಸಂತೋಷದಿಂದಲೆ ||ವಾಸುದೇವನ ಮಾನಸದೊಳಿಟ್ಟು ದು-ರಾಶೆಯ ತೊರೆದು ಕ್ಲೇಶವ ಪಡದಲೆಮೀಸಲ ಪುಣ್ಯದ ರಾಶಿ ಘಳಿಸಿಕೇಶವನ ನಿಜ ದಾಸನೆಂದೆನಿಪ2 ಪಾದ ನಿತ್ಯ ಸಿರಿ ಮೋಹನ್ನ ವಿಠಲನೆಪರನೆಂದರುಹು ಮಾಡಿದ ಸುರ ತರುವಾದ 3
--------------
ಮೋಹನದಾಸರು
ವಿಜಯರಾಯರ ದಿನದಿ ವಿಜಯ ಪಯಣವ ಮಾಳ್ಪೆ ನಿಜದಾಸಕೂಟ ಪಥದಿ ಪ. ವಿಜಯಸಖಪ್ರಿಯ ತಂದೆ ಮುದ್ದುಮೋಹನ ಗುರು ವಿಜಯವಿತ್ತುದ್ಧರಿಸಲಿ ದಯದಿ ಅ.ಪ. ಧರೆಯಲ್ಲಿ ಪುಟ್ಟಿ ಮುವ್ವತ್ತಾರು ವತ್ಸರವು ಸರಿದುದೀ ಬಹುಧಾನ್ಯಕೆ ವರಗುರು ಉಪದೇಶ ಅಂಕಿತವು ಲಭಿಸಿ ಎಂ ಟೊರುಷವಾಗಲಿಂದಿಗೆ ಪರಮಕೃಪೆಯಿಂದ ದಾಸತ್ವ ಸಿದ್ಧಿಸಲೆಂಬ ಕಾಲ ಒದಗೆ ನರಹರಿಯೆ ನಿನ್ನ ಚರಣವೆ ಎನಗೆ ಗತಿ ಎಂದು ನೆರೆ ನಂಬಿ ಪೊರಟೆನೀಗ ಬೇಗ 1 ಸರುವ ವಸ್ತುಗಳಲ್ಲಿ ಇರುವ ಅಭಿಮಾನ ಶ್ರೀ ಹರಿ ನಿನ್ನ ಪದದಲಿರಿಸು ವರ ಗುರು ಚರಣದಲಿ ಸದ್ಭಕ್ತಿ ಸರ್ವದಾ ಸ್ಥಿರವಾಗಿ ನೆಲೆಯಗೊಳಿಸು ಹೊರಗೊಳಗೆ ಹಿಂದುಮುಂದರಘಳಿಗೆ ಬಿಡದೆ ನೀ ನಿರುತದಲಿ ಸಂರಕ್ಷಿಸು ಹರಿದಾಸ ಮಾರ್ಗದಲಿ ಹರುಷದಲಿ ನಲಿವಂತೆ ವರಮತಿಯ ದಯಪಾಲಿಸು ಹರಿಯೆ 2 ಗುರುಕರುಣ ಕವಚ ತೊಟ್ಟಿರುವ ಎನಗಿನ್ನಾವ ಪರಿಯ ಭಯವಿಲ್ಲವೆಂದು ಸ್ಥಿರವಾಗಿ ನಂಬಿ ಪೊರಮಡುವೆನೀ ಶುಭದಿನದಿ ಗುರುವಾರ ಗುರು ಕೃಪೆಯಲಿ ಪರಿಪರಿಯ ದುಷ್ಕರ್ಮ ಪರಿಹರಿಸಿ ಕಾಯುವೊ ಗುರುಚರಣ ಧ್ಯಾನಬಲದಿ ಮರುತಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಕರುಣದಲಿ ಒಲಿದು ಪೊರೆಯೊ ಹರಿಯೆ 3
--------------
ಅಂಬಾಬಾಯಿ
ವಿಠಲನ ನಾಮ ಮರೆತು ಪೋದೆನಲ್ಲ ಲಟಪಟ ನಾ ಸಟೆಯಾಡುವೆನಲ್ಲಪ ಶೇಷಗಿರಿಯ ಮೇಲೆ ಸವುತೆಯ ಬಿತ್ತಿದೇವಗಿರಿಯ ಮೇಲೆ ಅವತಾರವಿಕ್ಕಿಹಾಳೂರಿನೊಳಗೊಬ್ಬ ಕುಂಬಾರ ಸತ್ತಗೋಕರ್ಣದೊಳಗೊಬ್ಬ ಪರದೇಶಿ ಅತ್ತ 1 ಆ ಸಮಯದಿ ಮೂರು ರಾಯರ ಕಂಡೆಕುಪ್ಪುಸ ತೊಟ್ಟ ಕೋಳಿಯ ಕಂಡೆಬೆಳ್ಳಕ್ಕಿ ಬೆರಣಿಯ ಮಾಳ್ಪುದ ಕಂಡೆನರೆಸೂಳೆ ಗೆಯ್ವುದ ಕಣ್ಣಾರೆ ಕಂಡೆ 2 ನುಸಿಯೊಂದು ರೊಟ್ಟಿಯ ಸುಡುವುದ ಕಂಡೆಆಡೊಂದು ಮದ್ದಳೆ ಬಡಿವುದ ಕಂಡೆಕಪ್ಪೆ ತತ್ಥೈ ಎಂದು ಕುಣಿವುದ ಕಂಡೆಬಾಡದಾದಿಕೇಶವನ ಕಣ್ಣಾರೆ ಕಂಡೆ3
--------------
ಕನಕದಾಸ