ವ್ಯರ್ಥ ಕೆಟ್ಟರು ಯಿಂದು ನರಮನುಜರು ಸಾರ್ಥಕ ಮಾಡಿಕೊಳ್ಳರು ಶರೀರವುಳ್ಳವರು ಪ ಮರುಳಾಟ ಪರ ಬುದ್ಧಿಯೊಳು ಮುಳುಗಿ ವಿಷಯವ ಭೋಗಿಸಿ ಮದ್ದು ತಿಂದಂತೆ ಇದ್ದಾದರು ಉದಯದಲಿ ಎದ್ದು ಕುಳಿತು ಒಮ್ಮೆ ಹರಿಯಂದು ನುಡಿಯದೆ 1 ಹರಿವ ಜಲವ ಮಿಂದು ಹರಿಗೆ ಅರ್ಪಿಸುತೇವೆಂದು ಬರಿದೆ ಬಾರದೆ ಬಿಂದು ಜಲ ತಂದು ಅರಘಳಿಗೆ ಅಚ್ಯುತಗೆ ಭಕುತಿಯಲಿ ಅಭಿಷೇಕ ಯರದು ಯಮಬಾಧೆ ಕಳೆಯಲರಿಯದ ಮಂಕು 2 ಅಡವಿಯಿಂದಲಿ ಒಂದು ತುಳಸಿದಳವನೆ ತಂದು ತಡಿಯದಲೆ ತಾವರೆದಳನಯನನ ಕರವ ಮುಗಿದು ಮುಕುತಿ ಪಡಿಯಲೊಲ್ಲದ ಪರಮ ಪಾಪಿಷ್ಟ ಜನರಯ್ಯಾ3 ಪತ್ರ ಫಲ ಪುಷ್ಪ ತೋಯ ಮುಂದಿರಿಸಿ ನೀಲ ಗಾತ್ರಗೆ ನೈವೇದ್ಯವೆಂದು ಬಗೆದು ಸ್ತೋತ್ರವನೆ ಮಾಡಿ ಪ್ರದಕ್ಷಿಣೆ ನಮಸ್ಕಾರ ನಿತ್ಯ ಒಂದೊಂದು ಮಾಡದೆ ಕರ್ಮಿಗಳು4 ಇಂದಿನ ಹಮ್ಮು ನಾಳಿಗೆಯಿಲ್ಲ ಈ ದೇಹ ಇಂದು ಬಂದದೆ ನಾಳೆ ಬರಲರಿಯದೂ ಸಿಂಧುಶಯನ ನಮ್ಮ ವಿಜಯವಿಠ್ಠಲನ ಮನ ಬಂದಾಗ ನೆನೆದು ಭವವನದಿ ಉತ್ತರಿಸದೆ 5
ವ್ಯರ್ಥ ಹೋರಾಟವಲ್ಲದೆ ಇದು ನಿಜವಲ್ಲಾ ಕರ್ತೃ ಶ್ರೀಹರಿ ಮಾಡಿದರ್ಥವೆ ಸರಿ ಅಲ್ಲದೆ ಪ ಪುರಾಕೃತ ಸಂಚಿತಾರ್ಥ ಪುಣ್ಯ ಪಾಪಗಳಿಂದ ಪರಿ ಅನುಭವ ಬಡುತಾ ಇನ್ನೂ ಇರುವೆಯಲ್ಲದೆ ಘಣಿಯಲಿ ವಿರಂಚಿ ಬರೆದ ಭಂಗ ಬಡುತಲಿಷ್ಟು 1 ಎಂದೆಂದೂ ನಿನ್ನ ಹಿಂದೆ ಒಂದೂ ಬರುವುದಿಲ್ಲ ಮುಂದುಗಾಣದೆ ಇನ್ನು ಮೋಹಕೆ ಸಿಲುಕಿ ನಂದೆಂದು ಪರಿಯಿಂದ ಘಳಿಸಿದ ದ್ರವ್ಯದ ಬಿಂದಿಗೆ ದಾರೋ ನೀದಾರೋ ಪಾಮರ ಮೂಢಾ 2 ನನ್ನ ಹೆಂಡತಿ ಮಕ್ಕಳು ನನ್ನ ಮನೆ ಬಾಗಿಲು ನನ್ನ----ಯು ವೃತ್ತಿ ನನ್ನದೆಂದೂ ನಿತ್ಯ ಒಂದಾಡುವೆ ನೀದಾರೋ ಮೂಢಾ 3 ತಂದೆ ತಾಯಿಯ ಗರ್ಭದಿಂದ ಪುಟ್ಟಿರುವಂದೇ ತಂದೆಲ್ಲೊ ತಾಯೆಲ್ಲೊ ತಾನೆಲ್ಲೊ ಮರುಳೆ ಹಿಂದೆ ಆದವರ ಚರ್ಯವ ವಿವರಿಸಿ ನೋಡಿನೋಡಿ ಕುಂದು ಇಲ್ಲದೆ ಮುಕ್ಕುಂದನ ಸ್ಮರಿಸು ಗಾಢಾ 4 ಮಾಯಾ ಪ್ರಪಂಚದೋಳ್ ಮಗ್ನನಾಗಿ ಇನ್ನು ಕಾಯಾ ಅಸ್ಥಿರವೆಂದು ಕಾಣೋ----- ಶ್ರೀಯರಸ 'ಹೆನ್ನ ವಿಠ್ಠಲ’ರಾಯನ ಕರ್ಮ ಧ್ಯಾನವು ಬಿಟ್ಟು 5
ವ್ಯರ್ಥವಾಗೊದÉೂ ಜನ್ಮ ಸಾರ್ಥಕಾಗದೊ ಭಕ್ತಿ ಭಾವದಿಂದ ಪುರುಷೋತ್ತಮನ ಪೂಜಿಸದ ಜನ್ಮ ಪ ಪರಮ ಶ್ರೇಷ್ಠಜನ್ಮದಿ ಬಂದು ಪರಮ ಭಕುತಿಯಿಂದಲೀಗ ಪರಮಾತ್ಮನ್ನ ಪಾದವ ಭಜಿಸದೆ ಪಾಮರನಾಗಿ ಕಳೆವೋ ಜನ್ಮ 1 ಲಕ್ಷ್ಯ ಇಟ್ಟಧೋಕ್ಷಜ ನಿನ್ನನುಗ್ರಹ ಅಪÉೀಕ್ಷಿಸದಲೆ ಲಕ್ಷ್ಮೀಪತಿಯ ಪಾದವನ್ನಲಕ್ಷ್ಯ ಮಾಡದವನ ಜನ್ಮ 2 ಕರ್ಮ ಕಳೆದು ಪಂಚಮುಖನ ಪ್ರಿಯನ ನಾಮ ಮುಂಚೆ ನೆನೆಯದವನ ಜನ್ಮ 3 ನಿತ್ಯ ನಿನ್ನ ನಾಮ ಬಿಟ್ಟನಿತ್ಯ ಮಾರ್ಗ ಹಿಡಿದು ಮುಂದೆ ಕೆಟ್ಟು ಹೋಗೋದಕ್ಕೆ ಒಡಂಬಟ್ಟು ಹರಿಯ ಬಿಟ್ಟ ಜನ್ಮ 4 ಏಸುಏಸು ಜನ್ಮದಲ್ಲಿ ಬ್ಯಾಸರದಲೆ ಸಲಹುತಿಹ ಭೀ- ಮೇಶ ಕೃಷ್ಣನಂಘ್ರಿಗಳನು ದರ್ಶನ ಮಾಡದವನ ಜನ್ಮ 5