ಒಟ್ಟು 11788 ಕಡೆಗಳಲ್ಲಿ , 134 ದಾಸರು , 6185 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂಗಳಂ ಜಯ ಮಂಗಳಂ ಪ ಇಂಗಡಲ ಕುವರಿಗೆ ಮಂಗಳಕಾಯೆಗೆ ಅ.ಪ. ನಿತ್ಯ ಪೂಜಿತದೇವಿಗೆರಾಜೀವ ನಯನೆಗೆ ಭಾಗ್ಯವೀವಳಿಗೆ 1 ಹಸಿರು ಸೀರೆಯನುಟ್ಟು ಹಳದಿ ಕುಪ್ಪುಸತೊಟ್ಟುಎಸೆವ ಚಿನ್ನಾಭರಣನಿಟ್ಟು ಮೆರೆವವಳಿಗೆ 2 ಪ್ರತ್ಯಕ್ಷಾಪ್ರತ್ಯಕ್ಷ ಶಕ್ತಿಯ ದೇವಿಗೆನಿತ್ಯ ಸಂಸಾರಿಗಗತ್ಯವಿರುವವಳಿಗೆ 3 ಕುಲಗೋತ್ರವೆಣಿಸದಲೊಲಿಯುವ ದೇವಿಗೆನೆಲೆಗೊಡದ ಚಂಚಲೆಮಾಲಕುಮಿದೇವಿಗೆ 4 ಮದನನ ಮಾತೆಗೆ ಪದುಮಲಯಳಿಗೆಗದುಗಿನ ವೀರನಾರಾಯಣನ ಸತಿಗೆ 5
--------------
ವೀರನಾರಾಯಣ
ಮಂಗಳಂ ಜಯ ಮಂಗಳಂ ಪ. ನಿತ್ಯ ಮಂಗಳ ನಗಧÀರ ಕೂರ್ಮಗೆ ಅತಿ ಮಂಗಳ ಜಗವವನುದ್ಧರಿಸಿದ ವರಾಹಗೆ ಮಂಗಳ ಮಗುವ ಕಾಯ್ದ ನರಸಿಂಹನಿಗೆ 1 ದಾನವ ಬೇಡಿದ ವಾಮನಗೆ ಮಂಗಳ ಕ್ಷೋಣಿಪರನು ಕೊಂದಗೆ ಮಂಗಳ ಜಾನಕಿ ರಮಣ ರಾಮಗೆ ಮಂಗಳ ಜ್ಞಾನಿಗಳ ಕಾಯ್ದ ಗೋಪಾಲಗೆÀ 2 ಬುದ್ಧ ರೂಪದಲಿಹ ದೇವಗೆ ಮಂಗಳ ಮಧ್ವವಲ್ಲಭ ಹಯವದನಗೆ ಮಂಗಳ ಉದ್ಧರಿಸುವ ದೇವರ ದೇವಗೆ 3
--------------
ವಾದಿರಾಜ
ಮಂಗಳಂ ಜಯ ಮಂಗಳಂ ರಾಮ ಮುನಿಜನ ಸ್ತೋಮ ಮಂಗಳಂ ಲೋಕಾಭಿರಘುರಾಮ ಸದ್ಗುಣ ಸ್ತೋಮ ಪ ದಶರಥನ ವರಪುತ್ರ ನೀನಾಗಿ ಕೌಶಿಕನ ಯಜ್ಞದಿ ಅಸಮಸಾಹಸ ದೈತ್ಯರನು ಗೆಲಿದಿ ವಸುಧೆಯೊಳು ಗೌತಮನ ಸತಿಯಳನು ಉದ್ಧರಿಸಿ ತಾಟಕಿ ಹೊಸಪರಿಯ ದೈತ್ಯರನು ಸಂಹರಿಸಿ ಎಸೆವ ಮಿಥಿಲಾ ಪುರದಿ ಜಾನಕಿ ಬಿಸಜನೇತ್ರೆಯ ಕೈಪಿಡಿದು ರನ್ನ ಹೊಸ ಪರಿಯ ರಥದೊಳಗೆ ಪೊರಟು ಸತಿಸಹಿತ ಅಯೋಧ್ಯೆಯಲಿ ಮೆರೆದಗೆ1 ದಶರಥನು ಪುತ್ರಗೆ ಪಟ್ಟವನು ಕಟ್ಟುವೆನು ಎನಲು ದಶದಿಕ್ಕಿಗೆ ಪತ್ರವನು ಕಳುಹಿಸಲು ಎಸೆವ ಮಂಗಳ ವಾದ್ಯ ಕೇಳುತಲೆ ಕೈಕೇಯಿ ಬರಲು ಅಸದಳದವರ ಬೇಡಿ ಕಾಡಿಸಲು ವಸುಧೆಗೀಶನ ವನಕೆ ಕಳುಹಲು ಕುಶಲವಿಲ್ಲದೆ ಮರುಗೆ ದಶರಥ ಮಿಸುಣಿಮಣಿ ಸಿಂಹಾಸನ ತ್ಯಜಿ- ಸುತಲಿ ಪಿತೃ ವಾಕ್ಯವ ನಡೆಸಿದಗೆ 2 ಮಡದಿ ಸೀತಾ ಲಕ್ಷ್ಮಣರ ಕೂಡಿ ಬಿಡದೆ ದೈತ್ಯರನೆಲ್ಲ ಕಡಿದಾಡಿ ಒಡತಿ ಸೀತೆಗೆ ಉಂಗುರವ ನೀಡಿ ಹನುಮಂತ ಬರಲು ಕಡುಜವದಿ ಸಾಗರದಿ ಸೇತುವೆಯ ಮಾಡಿ ತಡೆಯದಲೆ ರಾವಣನ ಮೂಲವ ಕಡಿದು ಕಮಲನಾಭ ವಿಠ್ಠಲನು ಮಡದಿಸಹಿತಾಯೋಧ್ಯೆ ಪುರದಲಿ ಸಡಗರದಿ ಸಾಮ್ರಾಜ್ಯವಾಳ್ದಗೆ3
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಜಯ ಮಂಗಳಂ ರಾಮ ಸಜ್ಜನರ ಪ್ರೇಮ ಮಂಗಳಂ ಲೋಕಾಭಿರಘುರಾಮ ಪಟ್ಟಾಭಿರಾಮ ಪ ಮಂಗಳಂ ಶ್ರೀ ದಶರಥಾತ್ಮಜಗೆ ಮಂಗಳಂ ಅಯೋಧ್ಯವಾಸಿಗೆ ಮಂಗಳಂ ಜನಕಜಾಮಾತೆಗೆ ಮಂಗಳಂ ಶ್ರೀ ರಾಮಚಂದ್ರಗೆ ಅ.ಪ ದೇವದೇವೋತ್ತಮ ವೈಕುಂಠದೊಳಗೆ ಶ್ರೀ ಭೂಮೇರಿಂದ ಸೇವೆಗಳ ಕೈಗೊಳ್ಳುತ ಮಲಗಿರಲು ದೇವಋಷಿ ಬ್ರಹ್ಮೇಂದ್ರಾದಿಗಳು ಸಹಿತ ಶ್ರೀಧರನ ಸ್ತುತಿಸುತ ರಾವಣಾಸುರನುಪಟಳ ವರ್ಣಿಸಲು ಸಂತೈಸಿ ಅವರನು ಭೂಮಿಪತಿ ದಶರಥನ ಪ್ರೇಮ ಕುಮಾರನಾಗುದಿಸುತಲಯೋಧ್ಯದಿ ಪ್ರೇಮ ತೋರುತ ಮೆರೆದವಗೆ ಜಯ1 ದಶರಥನ ಸುತರಾಗಿ ಬೆಳೆಯುತಲಿ ಕೌಶಿಕನÀಯಜ್ಞವ ಕುಶಲದಲಿ ರಕ್ಷಿಸುತ ಹರುಷದಲಿ ಶಶಿಮುಖಿಯ ಕೂಡುತ ಕುಶಲದಲಿ ವನವಾಸ ಚರಿಸುತಲಿ ದಶಶಿರನು ಜಾನಕಿಯ ಕದಿಯಲು ಶಶಿಮುಖಿಯನರಸುತಲಿ ವನವನ ವಸುಧಿಪತಿ ಕಪಿಗಳ ಕಳುಹಿ ಸತಿ ಕುಶಲ ತಿಳಿಯುತ ನಲಿದವಗೆ ಜಯ 2 ಬಂದ ಕಪಿ ಕಟಕವನೆ ನೋಡುತ್ತ ಸಾಗರಕೆ ಸೇತುವೆ ಒಂದೇ ನಿಮಿಷದಿ ರಚಿಸಿ ಶೀಘ್ರದಲಿ ಮಂದಮತಿ ರಾಕ್ಷಸರ ವಧಿಸುತಲಿ ಅಂದಣವ ಕಳುಹಿ ಮಂದಗಮನೆಯ ಕರೆಸಿ ಬೇಗದಲಿ ಬಂದ ರಾಮನು ಎಂದು ಮಾರುತಿ ಮುಂದೆ ಭರತಗೆ ಕುಶಲ ತಿಳಿಸಲು ತಂದೆ ಕಮಲನಾಥ ವಿಠಲ ಮುಂದೆ ಪ್ರಜೆಗಳ ಪೊರೆದವಗೆ ಜಯ 3
--------------
ನಿಡಗುರುಕಿ ಜೀವೂಬಾಯಿ
ಮಂಗಳಂ ಜಯ ಸುಂದರ ಮೂರುತಿಗೆ ಮಾ ಮನೋಹರನಿಗೆ ಪ ಮಂಗಳ ಮಧುಸೂದನನಿಗೆ ಮಂಗಳ ಮುರಮರ್ದನನಿಗೆ ಮಂಗಳಾಂಗ ಶ್ರೀ ಮದನಂತ- ರಂಗನಿಗೆ ಶುಭಾಂಗ ಹರಿಗೆ 1 ರಂತಿದೇವನನ್ನು ಪೊರೆದ ಚಿಂತಿತಾರ್ಥ ಪ್ರದಾತನಿಗೆ ಸಂತತವು ಭಕುತರನು ಸಂತೋಷದಿ ಪೊರೆವ ಹರಿಗೆ2 ಪಾಂಡವರನು ಪೊರೆದÀಗೆ ಪುಂಡರೀಕಗೆ ಒಲಿದಗೆ ತಂಡತಂಡದ ಭಕ್ತರನ್ನು ಕಂಡುಪೊರೆವ ಮಹಮಹಿಮಗೆ3 ನಾರಿ ರುಕ್ಮಿಣಿ ಭಾಮೆ ಸಹಿತದಿ ದ್ವಾರಕಾಪುರ ವಾಸನಿಗೆ ಸೌಳಸಾಸಿರ ಸತಿಯರಾಳ್ದ ಸಾರಸಾಕ್ಷ ಹರಿಗೆ ಬೇಗ4 ಕಡಲೊಡೆಯಗೆ ಮೃಡಸಖನಿಗೆ ಕಡುಹರುಷದಿ ಕಾಮಿನಿಯರು ಸಡಗರದಲಿ ಕಮಲನಾಭ ವಿಠ್ಠಲನಂಘ್ರಿ ಭಜಿಸಿನಲಿದು5
--------------
ನಿಡಗುರುಕಿ ಜೀವೂಬಾಯಿ
ಮಂಗಳ ಜಯಮಂಗಳ | ಶುಭಮಂಗಳ | ಮಂಗಳ ಮಹೀಪತಿ ಗುರುಮೂರ್ತಿಗೆ | ಮಂಗಳ ಶರಣರ ಸಾರಥಿಗೆ ಪ ಹಲವು ಸಾಧನದಿಂ ತೊಳಲುತ ತತ್ವದ | ನೆಲೆಗಾಣದವರನು ತಾರಿಸಲಿ | ಒಲಿದು ಶ್ರೀಗುರು ರೂಪದಿಂದಲಿ ನರದೇಹ | ಇಳೆಯೊಳು ಧೃಡಿಸ್ಯವತರಿಸಿದಗೆ 1 ಬೇಡಿದಿಷ್ಟಾರ್ಥವ ಕಾಮ್ಯ ಭಕುತರಿಗೆ | ನೀಡುತ ನಿರುಪಾಧಿಕ ಜನರಾ | ಮಾಡಿ ಜೀವನ್ಮುಕ್ತರ ನಿಜಬೋಧದ ಲಾಡುವ ಕರುಣಾಸಾಗರಗೆ 2 ಎಡಬಲದಲಿ ಯೋಗ ಭೋಗ ಚಾಮರದಿಂ | ದೃಢಸಿಂಹಾಸನ ಲೊಪ್ಪವಗೆ | ಪೊಡವಿಲಿ ಮೂಢ ನಂದನ ಕೈಯ್ಯವ | ಬಿಡನೆಂದಭಯವಿತ್ತ ಸ್ವಾನಂದಗೆ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳಂ ನರಶಿಂಗ ಮೂರುತಿಗೆ ಲಕ್ಷ್ಮೀಸಮೇತಗೆ ವಿಹಂಗ ವಾಹನಗೆ ಅಂಗಜನಪಿತಗೆ ಅಂಗುಟದಿ ಗಂಗೆಯನು ಪಡೆದವಗೆ ಮಾ ತಂಗವರದಗೆ ಪ ವಾರಿಜಾಸನ ಮುಖ್ಯಸುರನುತಗೆ ಉ- ದಾರ ಚರಿತಗೆ ಸೇರಿದವರಘದೂರ ಮಾಡುವಗೆ ಕಾರ್ಪರ ಋಷಿಗೆ ಘೋರ ತಪಸಿಗೆ ಒಲಿದು ಬಂದವಗೆ ಅಶ್ವತ್ಥ ರೂಪಗೆ 1 ಕುಕ್ಷಿಯೊಳು ಜಗವಿಟ್ಟು ರಕ್ಷಿಪಗೆ ಕರುಣಾಕ- ಟಾಕ್ಷಗೆ ವಕ್ಷದೊಳು ಶ್ರೀ ವತ್ಸಲಾಂಛನಗೆ ದ್ರೌಪದಿ ದೇವಿಗೆ ಅಕ್ಷಯಾಂಬರವಿತ್ತು ಸಲಹಿದಗೆ ಲಕ್ಷ್ಮೀನೃಸಿಂಹಗೆ 2 ಕೃಷ್ಣವೇಣಿ ತಟವಿರಾಜಿತಗೆ ಸೃಷ್ಟ್ಯಾದಿ ಕರ್ತಗೆ ಶ್ರೇಷ್ಠತರು ಪಿಪ್ಪಲದಿ ಪ್ರಕಟಿತಗೆ ದುಷ್ಟನಿಗ್ರಹಗೆ ದ್ಯಷ್ಟ ಬಾಹುಗಳಿಂದ ಭಜಕರಿಗೆ ಇಷ್ಟಾರ್ಥಗರಿವಗೆ 3 ಹಿಂದೆ ಗೋರೂಪದಲಿ ಬಂದವಗೆ ಬಹುಸುಂದರಾಂಗಗೆ ವಂದಿಸುವೆ ಶೀ ವೇಂಕಟೇಶನಿಗೆ ಮಂದರೋದ್ಧರಗೆ ಭವ ಬಂಧ ಬಿಡಿಸುವಗೆ ಆನಂದವೀವಗೆ 4 ತರುಳ ಪ್ರಹ್ಲಾದನ್ನ ಕಾಯ್ದವಗೆ ಸುರಸಾರ್ವಭೌಮಗೆ ಶರಣು ಜನ ಮಂದಾರನೆನಿಸುವಗೆ ಭೂಸುರರ ಪೊರಿವಗೆ ಧರಣಿಯೊಳು ಕಾರ್ಪರ ಸುಮಂದಿರಗೆ ಶಿರಿನಾರಶಿಂಹಗೆ 5
--------------
ಕಾರ್ಪರ ನರಹರಿದಾಸರು
ಮಂಗಳಂ ಮಂಗಳಂ | ಜಯ | ಮಂಗಳಶ್ರೀ ಶ್ರೀನಿವಾಸನರ್ಧಾಂಗಿ ಪ ಭೃಗುಕಾಲಿಲೊದಿಯಲು | ಅಗಲಿ ಬಂದಳು ಎಂಬೋ ||ಬಗೆ ತೋರಿ ಮೋಹಿಸಿ ಇಗಡ ಜನರ ನಾ || ಮಂಗಳಂ 1 ಪರಮ ಧಾರ್ಮಿಕನಾದ | ವರನಾರಾಯಣ ಋಷಿ ಗೊರವಿತ್ತು ನಡೆತಂದೆ | ಮೆರೆವ ಸನ್ನತಿಗೆ || ಮಂಗಳಂ2 ಕೋಲಾಸುರನ ಕೊಂದು | ಪಾಲಿಸಿ ಪುರವನ್ನು |ಶೀಲೆ ಚಂದ್ರಾದೇವಿ ಆಳಿದಗೊಲಿದೆ || ಮಂಗಳಂ 3 ಪಾತಕ ಕಳದೆ || ಮಂಗಳಂ 4 ಗುರುಪ್ರಾಣೇಶ ವಿಠಲಾ | ಇರುವ ನೀನಿದ್ದಲ್ಲಿಎರವಿಲ್ಲೀ ಮಾತಿಗೆ ಸುರರ ಸಮ್ಮತವೂ || ಮಂಗಳಂ 5
--------------
ಗುರುಪ್ರಾಣೇಶವಿಠಲರು
ಮಂಗಳ ಮಂಗಳ ಜಯ ಮಂಗಳ ಶುಭಮಂಗಳ ಗುರುಮೂರ್ತಿ ವಿರೂಪಾಕ್ಷನಿಗೆ ಪ ಶುಭ್ರಾಂಶುಧರನಿಗೆ ಶುಭ್ರವಸ್ತ್ರವನಿಟ್ಟುಶುಭ್ರತಿದೇಹ ಶುಭ್ರದಾಭರಣಗೆಶುಭ್ರಸ್ತ್ರೀಧರ ಯಶಶ್ಶುಭ್ರನಿಗೆ 1 ದರಹಾಸ ಮುಖನಿಗೆ ನಗಾಲಯನಾಗಿರ್ದಧರಶಿಖಿ ಶಿವಪಾತ್ರ ಭರಣಿಪತಿಗೆಧರಮುನಿ ವರದಗೆ ಧರರೂಪ ಪಾಲಗೆಧರಧನುವನು ತಾಳ್ದ ಧರವಾಸಗೆ 2 ಭವ ಭವ ದುರಿತನಿಗೆ 3
--------------
ಚಿದಾನಂದ ಅವಧೂತರು
ಮಂಗಳಂ ಮಂಗಳಂ ಪ ಮಂಗಳಂ ಮಂಗಳಂ | ಪರಿಮಾಳಾರ್ಯರಿಗೆ ತುಂಗೆ ತೀರಗ ಯತಿ | ಪುಂಗರೀಗೇ ಅ.ಪ. ವೈರಿ ಭೃಂಗ | ಸುಧೀಂದ್ರ ಚರಣಾಬ್ಜಮಧುಕರರೆನಿಸುತ್ತ | ಸುಧೆಯ ಸೌರಭವ |ಬುಧ ಜನ ಕುಣಿಸುತ್ತ | ವಿಧ ವಿಧ ಮೆರೆಯುವತ್ರಿದಶ ಭೂರುಹವೆನಿಸಿ | ಸದಯದಿ ಪೊರೆವಗೇ 1 ಮಧ್ವ ಮತಾಬ್ಧಿಗೆ | ಶುದ್ಧ ಪೂರ್ಣೇಂದ್ವಿಗೆಅದ್ವೈತ ಕಲಿಮಲ | ದಾವಾಗ್ನಿಗೇ |ಸದ್ವೈಷ್ಣ್ವ ಕುಮುದೇಂದು | ವಿದ್ವಾಂಸನತ ಪಾದಶೌದ್ಧೋದನಿಯ ಮತ | ವಿಧ್ವಂಸಕಗೇ 2 ಕರದೆಡೆ ಬರುವಂಥ | ಪರಮ ದಯಾಳುಗೆಧರೆಯೊಳೆಲ್ಲೆಲ್ಲೂ | ಮೆರೆಯುತಿಹಗೇ |ಶರಣರ ಹೃತ್ಕಮಲ | ವರ ಮಿತ್ರನೆಂದೆನಿಸಿಗುರು ಗೋವಿಂದ ವಿಠಲ | ಚರಣಾಬ್ಜಧೇನಿಪಗೇ 3
--------------
ಗುರುಗೋವಿಂದವಿಠಲರು
ಮಂಗಳಂ ಮಂಗಳಂ ರಂಗನಿಗೇ | ಜಯಮಂಗಳವೆನ್ನಿ ಶ್ರೀ ವೆಂಕಟಗೇ ಪ ಪತಿ ಮಾಧವ ಹರಿಗೇ 1 ನೀರಜಜ ಗೋರೂಪಿ | ಸಾರಿ ಪುತ್ತಾಶ್ರಿತಗೆಕ್ಷೀರಾಭಿಷೇಚಿಸಿ | ಸಾರುತಿರೆ ನೃಪ ಗೃಹ |ಮಾರನೆ ದಿನ ಗೋ | ಚಾರ ಕೊಡಲಿ ಹತಿಗೆದೂರ ಸರಿಸಿ ಗೋವ | ಶಿರವನೊಡ್ಡಿದಗೇ 2 ನಗ ವೆಂಕಟಾದ್ರೀಲಿಅಘಹರ ಲೀಲೆಗಳ್ | ಸೊಗಸಾಗಿ ತೋರ್ವಗೇ 3 ಆವಾವ ಬಗೆಯಿಂದ | ಜೀವನಧ್ಯಾತ್ಮದಿಓಧಿ ಸಾಧನೆಗೈದು | ದೇವನ ಪದ ಸಾರುವಭಾವವನರುಹುಲು | ಊರ್ವಿಯೊಳವತರಿಸಿಮಾವಾರಿ ನಟಿಸುತ್ತ | ಜೀವರ ಪೊರೆವಗೇ 4 ದೇವ ದೇವ ನಮ್ಮ | ಗೋವ ಪರಿಪಾಲಕಮಾವಿನೋದಿಯು ಗುರು | ಗೋವಿಂದ ವಿಠಲಭೂವೈಕುಂಠಸ್ಥನು | ಕಾವ ಭಕ್ತರನೆಲ್ಲ ಈ ವಿದಧಿ ತುತಿಪರ್ಗೆ | ಭಾವದಿ ಒದಗುವಗೇ5
--------------
ಗುರುಗೋವಿಂದವಿಠಲರು
ಮಂಗಳಂ ಮಧುಕೈಟ ಭಾರಿಗೇ - ಜಯಮಂಗಳ ಯದುಕುಲಾಂಬುಧಿ ಚಂದ್ರಗೇ ಪ ಗೋಕುಲದೊಳು ಪುಟ್ಟಿ ಗೋಗಣಂಗಳ ಕಾಯ್ದುರಾಕೇಂದು ವದನೇರ ಕೂಡಿದ ಸರಸಿಗೇ 1 ಪಾಲನ ಲಯ | ಒಟ್ಟಾಗಿ ಮಾಳ್ಪಂಥಕೃಷ್ಣೆ ಗಕ್ಷಯಫಲ ಕೊಟ್ಟಂಥ ಹರಿಗೇ2 ಬೃಹತೀ ಸಹಸ್ರನ್ನ ಬಹುವಾಗಿ ಉಂಡಗೇಮಹ ಋಷಿಗ್ವರವಿತ್ತ | ಶ್ರೀ ಉಪೇಂದ್ರಗೆ 3 ಲಕ್ಕುಮಿಯನು ತಾನು | ಲೆಕ್ಕಿಸದಲೆ ವೇಗಪೊಕ್ಕುಳಿಂದಲಿ ಅಜನ | ಪಡೆದ ಶ್ರೀಹರಿಗೇ 4 ಗರುಡ ಗಮನನಾಗಿ | ಕರಿಯ ಕಾಯಲಿ ಬಂದುಹರುಷವ ಪಡಿಸೀದ | ಗುರು ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು
ಮಂಗಳಂ ಮಹಾಗಂಗೆ | ಭಕುತ ಮನೋಹಾರಿಗೆ | ಮಂಗಳಂ ಬಲುದುರಿತ ಸಂಹಾರಿಗೆ | ಮಂಗಳಂ ಪ್ರಯೋಗ ಕ್ಷೇತ್ರ ವಿಹಾರಿಗೆ ಕುಸುಮ ಚಿತ್ರಹಾರಿಗೆ ಪ ವೇಣಿಗೆ ನಿತ್ಯಕಲ್ಯಾಣಿಗೆ ಪಲ್ಲವ | ಪಾಣಿಗೆ ಗಂಭೀರ ಗುಣಶ್ರೇಣಿಗೆ | ತ್ರಾಣಿಗೆ ಕೋಕಿಲವಾಣಿಗೆ ಯಾದವನ | ರಾಣಿಗೆ ಮಣಿಹೇಮ ಭೂಷಣೆಗೆ 1 ಖ್ಯಾತಿಗೆ ತ್ರಿಲೋಕ ಮಾತೆಗೆ ಯ | ಮುನೆ ಸಂಘಾತಿಗೆ ಸರ್ವದಾ ಬಲುನೀತಿಗೆ | ಜಾತಿಗೆ ತುಹಿನಗಿರಿದಾತೆಗೆ ಲಕುಮಿಯ | ಅಮಿತ ಗುಣ ಪ್ರತಾಪಿಗೆ || 2 ಚನ್ನಿಗೆ ನಾರಿಕುಲರನ್ನಿಗೆ ಭಾಗ್ಯ ಸಂ | ಪನ್ನಿಗೆ ಸಗರಕುಲ ಪಾವನ್ನಿಗೆ | ಕಣ್ಣಿಗೆ ಪೊಳೆವ ಪ್ರಸನ್ನಿಗೆ ಸೀತಾ ಸು | ವರ್ನಿಗೆ ವಿಜಯವಿಠ್ಠಲ ಕನ್ನಿಗೆ 3
--------------
ವಿಜಯದಾಸ
ಮಂಗಳ ಮುಖ್ಯ ಪ್ರಾಣೇಶಗೆ ಪ ಜಯ ಮಂಗಳ ಶುಭಮಂಗಳ ವಾಯುಕುಮಾರನಿಗೆ ಅ.ಪ ಅಂಜನಾದೇವಿಯ ಕಂದಗೆ ಮಂಗಳಕಂಜಾಕ್ಷ ಹನುಮಂತಗೆ ಮಂಗಳಸಂಜೀವನವ ತಂದಾತಗೆ ಮಂಗಳಸಜ್ಜನ ಪರಿಪಾಲಗೆ ಮಂಗಳ1 ಅತಿ ಬಲವಂತ ಶ್ರೀಭೀಮಗೆ ಮಂಗಳಪ್ರತಿಮಲ್ಲರ ಗೆಲಿದಗೆ ಮಂಗಳಸತಿಯ ಸೀರೆಯ ಸೆಳೆದ ದೈತ್ಯನ ಕೊಂದುಪೃಥ್ವಿ ಮೇಲೆ ಚೆಂಡನಾಡಿದಗೆ 2 ಸೀತಾದೇವಿಯ ಬಾಲಗೆ ಮಂಗಳಶ್ರೀರಾಮನ ಭಂಟಗೆ ಮಂಗಳಗೋಪಾಲ ಕೃಷ್ಣನ ಪೂಜೆಯಮಾಡುವಗುರು ಮಧ್ವ ಮುನಿರಾಯಗೆ ಮಂಗಳ3
--------------
ವ್ಯಾಸರಾಯರು
ಮಂಗಳ ಮುಖ್ಯಪ್ರಾಣೇಶಗೆ ಜಯ ಮಂಗಳ ಮೂಜಗವಂದಿತಗೆ ಪ. ಅಂಜನೆತನಯಂಗೆ ಮಾಪ್ರತಿ ಮಹಿಮಂಗೆ ಕಂಜನಾಭನ ಕಾರ್ಯದನುಕೂಲಗೆ ರಂಜಿಪ ಹನುಮಗೆ ಮಂಗಳ 1 ಆ ಮಹಗಡಲ ಲಂಘಿಸಿ ಹೋಗಿ ಲಂಕೆಯ ಧಮಧುಮ ಮಾಡಿ ವನವ ಕಿತ್ತು ರಾಮ ಮುದ್ರಿಕೆ ಜಾನಕಿಗೆ ತಂದಿತ್ತÀ ಹೇಮಾದ್ರಿ ಹನುಮಗೆ ಮಂಗಳ 2 ಸುತ್ತ ಸಾಗರ ಮಧÀ್ಯದಲ್ಲಿ ಲಂಕೆಯ ಮುತ್ತಿ ವನಜಾಕ್ಷಿಯ ಮುಂದೆ ಬಂದು ಹತ್ತು ತಲೆಯ ರಾವಣನೈಶ್ವರ್ಯವನಳಿದಗೆ ಖ್ಯಾತ ಹನುಮಗೆ ಮಂಗಳ 3 ಜಾತಿ ಬಂಧುಗಳ ಒಡಗೊಂಡು ಸಮುದ್ರದ ಸೇತುವ ಕಟ್ಟಿ ಸಾಹಸದಿಂದಲಿ ಸೀತಾಪತಿಯ ಬಲವ ನಡೆಸಿದ ಪ್ರ ಖ್ಯಾತ ಹನುಮಗೆ ಮಂಗಳ 4 ಈ ಕಾಡಕಪಿಯಲ್ಲ ನಿಮ್ಮ ಸೇವಕನೆಂದು ಬೇಡವೆಂದು ಸೀತೆಯ ಭಯಬಿಡಿಸಿ ಚೂಡಾರತ್ನ ಶ್ರೀ ರಾಮರಿಗಿತ್ತ ಬಂಟ ಕೊಂಡಾಡಿಸಿಕೊಂಬಗೆ ಮಂಗಳ 5 ಬಲ್ಲಿದ ರಾವಣೇಶ್ವರನ ಮಾರ್ಬಲವನು ಕಲ್ಲು ಮರದೊಳಿಟ್ಟು ಕೆಡಹಿದಗೆ ಜಲ್ಲುಕ ದೈತ್ಯರಿಗೆಲ್ಲ ಎದೆಯ ಶೂಲವಗಿದ ಧಲ್ಲ ಹನುಮಗೆ ಮಂಗಳ 6 ಬಲು ದೈತ್ಯರನೆಲ್ಲ ಗೆಲಿದು ಮುದ್ದೇನಹಳ್ಳಿಲಿ ಸ್ಥಿರವಾಗಿ ನಿಂದು ಭಕ್ತರ ಹೊರೆವ ಹೆಳವನಕಟ್ಟೆ ವೆಂಕಟೇಶನ ದೂತ ಚಲದಂಗ ಹನುಮಗೆ ಮಂಗಳ 7
--------------
ಹೆಳವನಕಟ್ಟೆ ಗಿರಿಯಮ್ಮ