ಒಟ್ಟು 9531 ಕಡೆಗಳಲ್ಲಿ , 132 ದಾಸರು , 5434 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯೆಂದು ಪಿಡಿಯುವಿ ಕೈಯ್ಯ ಇಂದಿರೇಶ ಚಲುವ ಕೃಷ್ಣನೆ ಪ ಮುಂದೆ ಹೋಗಲು ಬಂಧಮಾಡುತ ಕುಂದು ಅಳಿಯುತ ತಂದೆ ದಯೆತೊರಿ ಅ.ಪ ಮಂದ ನಾನಯ್ಯ ಕಂದಿ ಕುಂದಿದೆ ಭವದಿ ಕೇಳಯ್ಯ ಬಂಧು ಬಳಗವು ಯಾರು ಇಲ್ಲಯ್ಯ ನಿಂದು ಮುಂದಿನ ದಾರಿ ನಡೆಸಯ್ಯ ಜೀಯಾ ಅಂದು ಸಭೆಯೊಳು ಮಂದಗಮನೆಯ ಒಂದು ನೊಡದೆ ಬಂದು ಸಲಹಿದ ಸಿಂಧು ಶಯನಾನಂದ ಮೂರುತಿ ನಂದನಂದನ ಶ್ಯಾಮಸುಂದರ ಬಂಧು ಸರ್ವರ ಬಂಧಮೋಚಕ ಮಂದರಾದ್ರಿ ಧರನೆ ಯದುಕುಲ ಚಂದ್ರ ಶೋಭಾಸಾಂದ್ರ ಕೃಷ್ಣನೆ ಬಂದು ಚಂದದಿ ಸಲಹಿ ಎನ್ನನು 1 ಬಾಲತನದಲ್ಲಿ ಲೀಲೆಗೋಷ್ಠಿಲಿ ಮೆರೆದೆ ನಾನಲ್ಲಿ ಮೇಲೆ ಯೌವನ ಒಡನೆ ಬಂತಲ್ಲಿ ಲಲನೆ ಕೇಳಿಲಿ ಮುಳುಗಿ ಹೋದೆನು ಅಲ್ಲಿ ಮೆಲ್ಲಮೆಲ್ಲನೆ ಮುಪ್ಪು ಬಂತಲ್ಲಿ ಕಾಲಕಳೆದೆನು ಪಗಡೆ ಜೂಜಿನಲಿ ಮಲ್ಲಮರ್ದನ ಮಾತುಲಾಂತಕ ಚಲ್ವಸೂಕರ ಪುಲ್ಲಲೊಚನ ಪುಲ್ಲನಾಭನೆನಲ್ಲ ಸರ್ವರ ಬಿಂಬರೂಪನೆ ಎಲ್ಲ ಕಾಲದಿ ಎಲ್ಲಮಾಡುತ ನಿಲ್ಲದೆಜಗ ಸಾರ ಶ್ರೀ ನಲ್ಲ ನಿನ್ನಯ ಎಲ್ಲ ಬಲ್ಲವರಿಲ್ಲ ಎಲ್ಲಿಯೂ ಬುದ್ಧ ಕಲ್ಕಿಯೆ ಸೊಲ್ಲು ಲಾಲಿಸಿ ಒಲಿದು ಬಂದ ನಾರಸಿಂಹನೆ ಇಲ್ಲ ಸಮರು ಅಧಿಕರೈಯ್ಯ ಪೂರ್ಣದೇವನೆ2 ಮೂರು ತಾಪವ ಹರಿಪ ಬಗೆಯೇನೋ ವೈರಿ ಆರರ ಭರದಿ ತರಿ ನೀನೂ ಮೂರು ಋಣಗಳು ಉಳಿಯೆಗತಿಯೇನು ಮೂರು ಕರ್ಮದಿ ಬಿಡಿಸಿ ಹೊರೆಯನ್ನು ಭಕ್ತಸುರಧೇನು ಸಾರಸಜ್ಜನ ಪ್ರಾಪ್ಯ ಶುಭಗುಣ ಸಾರ ಕರುಣಾ ಪೂರ್ಣವಾರಿಧಿ ಮಾರಜನಕನೇ ಋಷಭಮಹಿದಾಸ ತೋರು ಜ್ಞಾನವ ಬಾದರಾಯಣ ಮೀರಲಾರೆನು ವಿಷಯವಾಸನೆ ಭಾರತೀಶನ ಒಡೆಯ ಕೃಷ್ಣನೆ ಭಾರ ನಿನ್ನದು ಎನ್ನ ಪೊರೆವದು ಮತ್ಸ್ಯ ವಾಮನ ಧೀರ ಧೃವನಾ ಪೊರೆದ ವರದನೆ ಬೀರಿ ಭಕ್ತಿ ಜ್ಞಾನ ವೈರಾಗ್ಯ 3 ಎನ್ನ ಯೋಗ್ಯತೆ ನೋಡಿ ಫಲವೇನು ನಿನ್ನ ಘನತೆ ತೋರಿ ಪೊರೆ ನೀನು ನಿನ್ನ ದಾಸನ ಮಾಡು ಎನ್ನನ್ನು ಅನ್ಯಹಾದಿಯ ಕಾಣೆ ನಾ ನಿನ್ನು ಬೆನ್ನು ಬಿದ್ದೆನು ಇನ್ನೂಮುನ್ನೂ ಮಾಧವ ವಿಶ್ವ ತೈಜಸ ಪ್ರಾಜ್ಞತುರಿಯ ಹಂಸ ವಿಷ್ಣುವೇ ಜ್ಞಾನ ಭೋಧಕ ಸನತ್ಕುಮಾರನೇ ಮೌನಿ ದತ್ತಾತ್ರೇಯ ಹಯಮುಖ ದೀನವತ್ಸಲ ಯಜ್ಞ ಧನ್ವಂತ್ರಿ ಶ್ರೀನಿವಾಸ ರಾಮ ಕಪಿಲನೆ ಜ್ಞಾನ ನಿಧಿ ಮುನಿ ನಾರಾಯಣನೆ ನೀನೆ ಅನಿರುದ್ಧಾದಿ ರೂಪನು ಧ್ಯಾನಗೊಚರ ಶಿಂಶುಮಾರನೆ ಸಾನುಕೂಲದಿ ನೀನೆ ವಲಿಯುತ ಕರ್ಮ ಸಂಚಯ4 ಆದಪೊದ ಮಾತು ಏಕ್ಕಯ್ಯ ಮಧ್ವರಾಯರ ಪ್ರೀಯ ಶೃತಿಗೇಯ ಮೋದದಾಯಕ ಮುಂದೆ ಸಲಹೈಯ್ಯ ಪಾದಪದ್ಮದಿ ಶರಣು ಅಲ್ಲದೆ ಏನು ಮಾಡಲಿ ಜೀಯ ಅಯ್ಯ ತಿದ್ದಿ ಮನವನು ಕದ್ದು ಅಘವನು ಒದ್ದು ಲಿಂಗವ ಶುದ್ಧಜ್ಞಾನದ ಸಾಧು ಜಯಮುನಿ ವಾಯುವಂತರ ಮಾಧವ ಶ್ರೀ ಕೃಷ್ಣವಿಠಲನೆ ಪಾದ ಮಧುಪರ ವೃಂದ ಮಧ್ಯದಿ ವೇದ ಸಮ್ಮತ ಗಾನ ಸುಧೆಯನು ಶುದ್ಧಭಕ್ತಿ ಜ್ಞಾನದೊಡಗೂಡಿ ಮೆದ್ದು ಪಾಡುತ ಕುಣಿವ ಭಾಗ್ಯವ ಮುದ್ದು ಕೃಷ್ಣನೆ ನೀನೆ ಎನಗಿತ್ತು 5
--------------
ಕೃಷ್ಣವಿಠಲದಾಸರು
ಯೆಲ್ಲಿ ಭಯಗಳು ಹರಿಯ ಭಕುತರಿಗೆ ಇಲ್ಲಾ | ಇಲ್ಲವೋ ಕಾಣೋ ಯೆಂದಿಗಾದರು ಮರುಳೆ ಪ ಹುಲಿ ಇಲಿಯಾಗುವದು ತೋಳ ಕೋಳ್ಯಾಗುವುದು | ಕಲಿ ಬಂದು ಹಿತ್ತಿಲನ್ನೀಗ ಬಳಿವಾ || ಮೂಲ ಮಹಾಚೋರ ಚೊಚ್ಚಿಲ ಗೌಡಿಮಗನಾವಾ | ಜಲಜಾಕ್ಷನ ಕೃಪೆಯ ಪಡೆದ ದಾಸರಿಗೆ 1 ಕರಡಿ ಕರು ಆಗುವದು ಉರಿ ಮಂಜು ಆಗುವದು | ಕರಿ ನಾಯಿ ಆಗುವದು ಕಂಡವರಿಗೆ || ಭರದಿಂದ ಸುರಿವ ಮಳೆ ನಿಲ್ಲೆನಲು ನಿಲುವದು | ನರಹರಿಯ ನಾಮಗಳ ನಂಬಿ ಪಠಿಪರಿಗೆ 2 ಘಣಿ ಸರವೆ ಆಗುವದು ದಣುವಾಗುತಿಹ ಮಾರ್ಗ ಕ್ಷಣದೊಳಗೆ ಪೋದಂತೆ ಕಾಣಿಸುವದು || ಘನ ಪಾಷಾಣಗಳು ತೃಣ ಸಮವು ಯೆನಿಸುವವು ವನಜಾಕ್ಷನ ಕೃಪೆಯ ಪಡದ ದಾಸರಿಗೆ 3 ಕ್ಷುಧೆ ತೃಷೆಯಾಗದು ಕ್ಷುದ್ರ ಸಂಗ ಬಾರದು | ಪದೇ ಪದೆಗೆ ರೋಗಗಳು ಬೆನ್ನಟ್ಟವು || ಉದಯಾಸ್ತಮಾನವೆಂಬೋ ಭಯವು ಸುಳಿಯದು | ಪದುಮನಾಭನ ಕೃಪೆಯ ಪಡೆದ ದಾಸರಿಗೆ4 ಬಾರವು ಭಯಗಳು ಬಂದರು ನಿಲ್ಲವು | ಹಾರಿ ಹೋಗುವವು ದಶದಿಶಗಳಿಗೆ || ಘೋರ ದುರಿತಾರಿ ಶ್ರೀ ವಿಜಯವಿಠಲನಂಘ್ರಿ | ಸೇರಿದಾ ಜನರಿಗೆ ಇನಿತಾಹುದುಂಟೇ 5
--------------
ವಿಜಯದಾಸ
ಯೇನಾದರೇನು ಜ್ಞಾನವಿಲ್ಲದೆ ಮೋಕ್ಷವಿಲ್ಲಾ ಪ ವೇದವನೋದಿದರೇನು | ಶಾಸ್ತ್ರವ ನೋಡಿದರೇನು | ಕಾದಿ ಕಾದಾಡಿದರೇನು || 1 ಕಾಶಿಗೆ ತಾ ಹೋದರೇನು | ಕಾನನವ ಸೇರಿದರೇನು | ಕಾಶಿ ಪೀತಾಂಬರ ಉಟ್ಟರೇನು 2 ಜಪ ತಪವ ಮಾಡಲೇನು | ಜಾಣತನದೊಳ್ ಮೆರೆದರೇನು | ವಿಜಯವಿಠ್ಠಲನ್ನ ಸಾರಿದರೇನು 3
--------------
ವಿಜಯದಾಸ
ಯೇನೆಲವೊ ದೈವಾ ವೈಕುಂಠನಾಥ ನೀ ನಾರಿವೇಷವನು ಧರಿಸಿದ ಬಗೆಯೇನೊ ಪ ದೈತ್ಯರು ಎರಗಿ ದೇವತತಿಗಳು ತಲ್ಲಣಿಸೆ | ಮಿತ್ರಭಾವದಲಿವರು ಕೂಡಲಿಟ್ಟು | ಇತ್ತಂಡದ ನಡುವೆ ಸುಧೆಯ ಬಡಿಸುವೆನೆಂದು | ಮಿತ್ರವೇಷವ ಧರಿಸಿ ಸುರರ ಸಲಹಿದ ಬಗೆಯ 1 ಶಿವಗೆ ವೃಕಾಸುರನು ಬೆಂಬಿಡದೆ ತನ್ನುರಿ | ಕರವ ನೀಡುವೆನೆಂದು ಬರಲಾಗಲು || ಅವನೀಶ ಭವಹರ ಕೇಶವ ನೀನೆ ಗತಿಯೆನಲು | ಯುವತಿ ವೇಷವ ಧರಿಸಿ ಶಿವನ ಸಲಹಿದ ಬಗೆಯಾ 2 ಅಂದು ಮಾಡಿದ ಚರಿತೆ ಭಕ್ತಜನರು ಬಂದು | ಒಂದೊಂದನ ನುಡಿದರನ ಲೀಲೆಂದು | ಇಂದು ಸತಿವೇಷವನು ಧರಿಸಿ ತೋರಿದಿಯೋ ಪು ರಂದರ ದಾಸರಿಗೊಲಿದೆ ವಿಜಯವಿಠಲ ಚಲುವಾ3
--------------
ವಿಜಯದಾಸ
ಯೇಸು ಧನ್ಯನೊ ಹರ ತಾನೇಸು ಧನ್ಯನೊ ವಾಸವಾದಿ ಸುರರಿಗಿಂತ ಕೇಶವನ ಕರುಣ ಪಾತ್ರ ಪ. ವೇದವಿನುತನಮಲ ಪದ್ಮ ಪಾದ ಮೋದಿಸ್ವರ್ಧುನಿಯ ಸಾದರದಿ ಶಿರದಿ ಧರಿಸಿ ಮೋದ ಬಡುವ ಮುಕ್ಕಣ್ಣಾ 1 ಶ್ರೀಶನನ್ನು ಭಜಿಪ ಮುಖ್ಯ ದಾಸತಾನೆಂದರಿಯಿರೆಂದು ಹಾಸಿಕೆಯ ಹೆಗಲ ಮೇಲೆ ಭೂಷಣಗೊಂಡಮಿತ ಮಹಿಮ 2 ಅಂಹೊಮೋಪಾಹನರ ಸಿಂಹನನ್ನು ಹೃದಯಕಮಲ ಸಿಂಹಾಸನದೊಳಿರಿಸಿ ದಿವ್ಯ ಜಿಂಹ್ಮೆಯಿದ್ದನವಗೈವ 3 ಘೋರ ಸಂಸಾರಾಬ್ಧಿ ಭಯ ತಾರಕವಾಗಿರುವ ರಾಮ ತಾರಕ ಮಂತ್ರೋಪದೇಶ ತಾರಕ ರಘುವಾರ ದೇವ 4 ಪಂಕಜಾಕ್ಷ ಪರಮ ಕರುಣಿ ವೆಂಕಟಾದ್ರಿವಾಸ ಹರಿಯಾ ಕಿಂಕರ ಭಕ್ತಿ ಜನರಾ ತಂಕವಾರಾ ಶಂಕರ 5
--------------
ತುಪಾಕಿ ವೆಂಕಟರಮಣಾಚಾರ್ಯ
ಯೋಗದರ್ಶನ ಎಂತುಗೂಡುವದೊ ನಿಜ ಹರಿಯೆ ಧ್ರುವ ನಿದ್ರ್ವಂದ್ವದಲಿದ್ದ ಒಂದೆ ವಸ್ತುವೆ ನೀನು ದ್ವಂದ್ವಾಭೇದದ ಸಂದೇಹಿ ನಾನು ಅಂದಿಗಿಂದಿಗೆ ಪೂರ್ಣ ಎಂದೆಂದಿಗೆ ನೀನು ಹೊಂದಲರಿಯದಾ ತಿಮಿರಾಂಧ ನಾನು ಹರಿ 1 ನಿಃಪ್ರಪಂಚದ ನಿರ್ಮಳ ನಿರ್ಗುಣನು ನೀನು ಪ್ರಾಪಂಚಿಕ ಪರಮ ನಾನು ಕೃಪೆಯುಳ್ಳ ಕರುಣಾಕಾರ ಪರಿಪೂರ್ಣ ನೀನು ಕಪಟ ಕುಟಿಲಲಿಹ ಪ್ರಾಣಿ ನಾನು ಹರಿ 2 ಮಹಿಗೆ ಪತಿಯಾದ ಸ್ವಾಮಿ ಶ್ರೀಪತಿ ನೀನು ಸೋಹ್ಯ ತಿಳಿಯದಾ ಮಂದಮತಿ ನಾನು ಸಾಹ್ಯ ಮಾಡುವ ಸಹಕಾರ ಸದ್ಗತಿ ನೀನು ಮಹಾಮಹಿಮೆಯುಳ್ಳ ಮೂರುತಿ ನೀನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯೋಗಿ ಜಿತಭೋಗಿ ಪ. ಲಭ್ಯಸುಕೃತವಿರಭ್ಯುದಯವಾಗಿ ಅ.ಪ. ಸತ್ಯಜ್ಞಾನ ಸುವಿರಕ್ತಿ ಹರಿಭಕ್ತಿ ಚಿತ್ತದೊಳಿದ್ದರೆ ನಿತ್ಯಾಸಕ್ತಿ1 ಹೊದ್ದಿದನಿವನು ಬ್ರಾಹ್ಮಣನು ನಮ್ಮವನು ಇದ್ದರೆ ಪುಣ್ಯವು ಶುದ್ಧಾಂತಃಕರಣನು 2 ಭಾರ ಸರ್ವಾಧಾರ ಲಕ್ಷ್ಮೀನಾರಾಯಣ ಲಕ್ಷ ನಮಸ್ಕಾರ3
--------------
ತುಪಾಕಿ ವೆಂಕಟರಮಣಾಚಾರ್ಯ
ಯೋಗಿ ವೇಷ ನೀಚನಾಯಿ ನಿನಗ್ಯಾತಕೆ ತತ್ವ ಭಾಷಾ ಹುಚ್ಚನಾಯಿ ನಿನಗೇತಕೆ ವಸ್ತ್ರ ಕಾಷಾ ಮುರುಕುನಾಯಿ ನಿನಗೇತಕೆ ಗುರುಪಾದವಾಸ ಹೊಲಸ ಪ ಕೊರಳಿಗೆ ಕಪನಿ ತೊಟ್ಟು ಜಪಸರವನೆ ಮುಂಗೈಯಲಿಟ್ಟು ತತ್ವಬರಿನುಡಿ ಸಾಲು ಸಾಲಿಟ್ಟು ಕಾಲಕೆರವನೆ ಇವನ ಬಾಯೊಳಗೆ ವಷಟ್ಟು ಭ್ರಷ್ಟಾ1 ನೀರೊಳಗೆ ನೆರಳನೆ ನೋಡಿ ಹಣೆಗೆಗೀರುವೆ ಗಂಧವ ತೀಡಿ ಪೋರಪೋರರ ಜೋಡನೆ ಕೂಡಿ ನಿನ್ನಮೋರೆಯ ಮೇಲೆ ಹುಯ್ಯಬೇಕು ಕಸ ಪುಡಿಕೆ ಕಡುಗ 2 ಅತ್ತ ಸಂಸಾರ ಕೆಟ್ಟುಮತ್ತಿತ್ತ ಗುರುಪಾದವ ಬಿಟ್ಟು ನೀನತ್ತತ್ತ ಉಭಯ ಭ್ರಷ್ಟಾ ನಿನಗೆಸತ್ತಿಹರು ಅರಮನೆಯ ಗೌಡೆಯರೆಷ್ಟು ಜಾಣ3 ಕಂಡ ಕಂಡಲ್ಲಿಯೇ ಉಂಡುದೊಡ್ಡ ಹೊಟ್ಟೆಯ ಬೆಳೆಸಿಕೊಂಡುಬಾಡದಂಡೆಯ ಮನೆಗಂಟಿಕೊಂಡು ನಿನ್ನಮಂಡೆಯ ಹೊಡಿಬೇಕು ಪಾಪಾರಿಕೊಂಡು ಹೊಲೆಯ 4 ಇಂದು ಕೆಟ್ಟಾ5
--------------
ಚಿದಾನಂದ ಅವಧೂತರು
ಯೋಗಿ ವಲ್ಲಭನ ಅನುರಾಗವನು ಪಡೆದವಗೆ ಲಾಗವೆಲ್ಲವು ದೊಡ್ಡ ಯೋಗವಾಗುವುದು ಪ ಹೋಗಿ ಗಂಗೆಯ ತೀರದಲಿ ಬಾವಿ ತೋಡಿದರೂ ಬೇಗ ಸಿಗುವುದು ದಿವÀ್ಯ ಬಲಮುರಿಯ ಶಂಖವು ಅ.ಪ ಮಾಧವನ ಪರಮ ಕರುಣವ ಪಡೆದ ಮನುಜನಿಗೆ ಹೋದ ಕಡೆಗಳಲಿ ದೊರೆಕುವುದಾದರೆ ಮೂದಲಿಸುವರ ಮನವು ಕಾದ ಬೆಣ್ಣೆಯು ಕರಗಿ ಹೋದ ತೆರದಲಿ ಕ್ಷಣದಿ ಸಾಧುವಾಗುವುದು 1 ವೇದಾಂತ ರಾಜ್ಯದಲಿ ಜ್ಞಾನಭಕುತಿಗಳಿಂದ ಮೋದ ಪಡಿಸುವನು ಕಾದ ಮರುಭೂಮಿಯಲಿ ಸಕಲ ಸಂಪತ್ತುಗಳ ಸಾಧಿಸುವ ಬೇಧಿಸುವ ವಿಘ್ನರಾಶಿಗಳನ್ನು 2 ಕುರುಡ ನೋಡುವನೆಲ್ಲ ಕಿವುಡ ಕೇಳುವನೆಲ್ಲ ಗುರುವರ ಪ್ರಸನ್ನ ನೀ ಮರುಕ ತೋರಿದರೆ ಕರಡಿ ಕೈ ಗೊಂಬೆಯಾಗುವುದು ಕೈಗೊಂಬೆಯು ತ್ವರಿತದಲಿ ಕಲ್ಪತರುವಾಗಿ ಕೊಡುವುದು ಫಲವ 3
--------------
ವಿದ್ಯಾಪ್ರಸನ್ನತೀರ್ಥರು
ಯೋಗಿಯಾಗೆಲೆ ಇಲ್ಲ ತ್ಯಾಗಿಯಾಗೆಲೆ ಪ ಹಾಗೂ ಹೀಗೂ ಆಗದೆ ಭವ ರೋಗಿಯೆನಿಸದರೆಲೆ ಗೂಗಿ ಅ.ಪ ಮಾತುಮಾತಿಗೆ ನೀತಿವಚನ ಆತುರಕ್ಕಾಗಿ ಕೂಗಿ ಕೂಗಿ ಪಾತಕದೊಳಗೆ ಬಿದ್ದು ಯಮನ ಯಾತನಕಿಳಿಯಬೇಡ ಭವಿ 1 ಕಾವಿಕಪನಿಲಾಂಛನ್ಹೊದ್ದು ಸೇವೆಗೊಂಡು ಭಾವಗೆಟ್ಟು ಸಾವುಹುಟ್ಟು ಬಲೆಗೆ ಬಿದ್ದು ನೋಯಬೇಡೆಲೆ ನೀಚಮತಿ2 ನಿತ್ಯ ನಿತ್ಯವೆನಿಪ ಪರ ಮಾರ್ಥತತ್ತ್ವಗುರ್ತುಯಿಲ್ಲದೆ ಕತ್ತೆಯಂತೆ ಒದರಿ ವ್ಯರ್ಥ ಮೃತ್ಯುಹೊಂದ ಬೇಡ ಮೂರ್ಖ 3 ಸೋಗುಹಾಕಿ ಸಾಧುಯೆನಿಸಿ ಕಾಗೆಯಂದದಿ ತೀರ್ಥಮುಳುಗಿ ಜಾಗರ ಮಾಡಿ ಪೋಗದಿರಲೆ ನರಕಕಧಮ 4 ಭೂಮಿ ಪ್ರೇಮ ತಾಮಸ ನೀಗಿ ಕಾಮ ಕ್ರೋಧ ಲೋಭ ಜೈಸಿ ಭೂಮಿತ್ರಯಂಗಳೊಡೆಯ ಶ್ರೀ ರಾಮನಾಮ ಭಜಿಸಿ ಮುಕ್ತನಾಗೆಲೊ 5
--------------
ರಾಮದಾಸರು
ಯೋಗಿವರ್ಯ ಶಿರಬಾಗಿ ನಮಿಸುವೆನು ಶ್ರೀ ರಾಘವೇಂದ್ರನೆ ಪ ಹೇಳಿದ ವಚನವ ಕೇಳಿ ಮನದಲಿ ಬಹಳ ಸುಖಿಸುತಲಿಕಾಲಕಾಲಕೆ ಶ್ರೀ ಲಲಾಮನ ಲೀಲೆ ಪಾಡುತ ವ್ಯಾಳೆ ನೋಡುವಿ 1 ಸತ್ಯವಾಣಿಯು ಮಿಥ್ಯವಾಗದು ಮತ್ತೆ ಲೋಕದೊಳುಚಿತ್ತದೊಳು ಅನಿತ್ಯ ಚಿಂತಿಸಿ ವೃತ್ತಿ ಕೃಷ್ಣನೊಳು ಇತ್ತು ಪಾಡುವಿ 2 ಎಲ್ಲ ಬಿಟ್ಟವ ಸುಳ್ಳನಾಡೊದು ಎಲ್ಲಿ ಕಾಣಿಸದುಫುಲ್ಲನಾಭನ ಭಕ್ತನಲ್ಲಿ ಹೇಳಿದ ಸುಳ್ಳು ಕಾದುಕೋ 3 ಆಶೆ ತೋರಿಸಿ ನಿರಾಶೆ ಮಾಡುವುದು ದಾಸ ಜನರೊಳಗೆಈಶ ನಿಜ ಬಹು ತೋಷವೆಂಬುದು ಭಾಷಿಸದೆಯತಿವೇಷ ದಿವಿಜನೆ 4 ಶಕ್ತಿವಚನವ ಕೃತ್ಯಮಾಡಲು ಶಕ್ತನಾರದನು ಒತ್ತಿ ಪೇಳಿದಹತ್ತರಾತನ ಭೃತ್ಯರಾಶಯ ಪೂರ್ತಿಮಾಡಿಸು 5 ನೀನೇ ಬಾಂಧವ ನೀನೇ ದೈವತ ನೀನೇ ಗುರುಪಿತನುನಾನು ನಂಬಿದೆ ಮೌನಿ ತೋರಿಸು ವೇಣು ಬಾಲಕನ ಜವ 6 ಇಂದು ಎನ್ನೊಳುನಿಂದು ಪ್ರಾರ್ಥಿಸು 7
--------------
ಇಂದಿರೇಶರು
ರಕ್ಷಿಸು ಎನ್ನನು ಪಕ್ಷಿವಾಹನ ಪಾಂಡು ಪಕ್ಷನೆ ತವ ಭಕ್ತಿಯಗಲಿಸದೆ ಲಕ್ಷಿಸಿ ಧ್ರುವನೊರೆದೆ ಲಕ್ಷ್ಮೀಶ ಮರೆಹೋದೆ ಪ ಕ್ಷಿತಿಯೊಳು ನಾಂ ಬಲು ಚತುರನೆನಿಪದು ರ್ಮತಿಯಿಂದ ಕಷ್ಟಕ್ಕೆ ಗುರಿಯಾದೆ ರತಿಪತಿಪಿತ ಎನ್ನ ಅತಿತಪ್ಪು ಮನ್ನಿಸಿ ಗತಿಗಾಣಿಸಿತ್ವಾಕ್ಯ ಅಖಿಲೇಶ ಯತಿನುತ ಸುರಪೋಷ ಹತಭವ ಗುಣಕೋಶ 1 ಮಂದಮತಿಯತನದಿಂದ ನಾ ಮಾಡಿದ ಹಿಂದಿನ ಅವಗುಣವೆಣಿಸದೆ ಪಾದ ಎಂದೆಂದು ಮರೆಯದೆ ಬಂಧುರಭಕ್ತಿಯ ವರ ನೀಡೊ ಕಂದನೊಳ್ದಯಮಾಡೊ ತಂದೆ ನೀ ಕಾಪಾಡೊ 2 ದುರುಲನೆನಿಸಿ ಬಲು ಧರಣಿಯೊಳ್ತಿರುಗುವ ಮರುಳುಗುಣವನೆನ್ನದೀಡ್ಯಾಡೊ ಹರಿಯ ದಾಸರ ಸಂಗ ಕರುಣದಿ ದೊರಕಿಸಿ ಪರಿಶುದ್ಧ ಮಾಡೆನ್ನ ಹೇಯ ಜನುಮ ಶರಣಜನರ ಪ್ರೇಮ ಕರುಣಿಯೆ ಶ್ರೀರಾಮ 3
--------------
ರಾಮದಾಸರು
ರಕ್ಷಿಸು ಕಮಲದಲಾಕ್ಷನೆ ಎನ್ನ ಪಕ್ಷಿವರಧ್ವಜ ನಂಬಿದೆ ನಿನ್ನ ಯಾಕೆ ಪರಮಾಸ್ಪದರನ್ನ ಪ. ಮಹೋತ್ತಮ ಶಕ್ತ ದೂರೊತ್ತು ರಮೇಶ 1 ದೊರೆಯೆಂಬುವ ಭಾವ ಭವ ಭೂಪತಿ ನೀನೆ ನಿರುತದಿ ಕಾವ 2 ಸರ್ವಾಗ್ರಹ ತತ್ವೇಶ ನಿಯಂತ್ರ ಗೀರ್ವಾಣಾರ್ಚಿತ ಪದ ಶ್ರೀಕಾಂತ ನಿರ್ವಾಹಕ ನೀನಲ್ಲದೆ ವೇಂಕಟ ಪರ್ವತ ರಿಪು ಗರ್ವ ನಿಕೃಂತ 3
--------------
ತುಪಾಕಿ ವೆಂಕಟರಮಣಾಚಾರ್ಯ
ರಕ್ಷಿಸೆ ಏಕನಾಥೆ ತಾಯೆ ದಯದಿಂದ ಎನ್ನನು ಸೊಕ್ಕಿದ ದೈತ್ಯ ಸಂಹಾರೆ ಶರಣ ಜನೋದ್ಧಾರೆ ಪ. ದುರಿತ ದುಃಖ ನಿವಾರಿ ಶರಣರ ಸಲಹುವ ದಾತೆ ಖಳರೆದೆಗಂತೆ ನಿಡಿ ಗುರುಳ ಬಾಲೆ ಪಲ್ಲವಪಾಣಿ ಸುರರ ನಾಯಕಿ ಅಖಿಲದೇವಮಾತೆ ವಿಖ್ಯಾತೆ 1 ಅಳುವಾಡುವ ರಂಗನ ಅದೇನರಿತು ಭಂಗ ಬಾಳ ಬಡಿಸಿದೆಯವ್ವ ಭಕ್ತರುದ್ಧಾರಿ ಕಾಳಗದೊಳು ಕಂಠೀರವೆ ಕರೆದಭಯವನೀವೆ ಸುಕೃತ ಪಂಥಗಾರ್ತಿ 2 ಹಿಂಡು ಭೂತಂಗಳಿಗೆಲ್ಲ ಹೆಚ್ಚಿನ ಬಿರುದನೆ ತಾಳ್ದೆ ಚಂಡಿ ಚಾಮುಂಡಿ ತ್ರೈಲೋಕ್ಯನಾಥೇ ಕಂಡು ನಮಿಸುವರ ಕಾಯ್ವೆ ಕಾಮಿತದಾತೆ 3 ಇಂದ್ರಾದಿ ದಿಕ್ಪಾಲಕರು ವಂದಿಸಿ ಸ್ತುತಿಮಾಡಲವರ ಬಂಧನವ ಪರಿಹರಿಸಿದೆಯೆ ಚಂದ್ರಮುಖಿಯೆ ಇಂದು ಬಂದ ಬಂಧನವ ಬಿಡಿಸಿ ಎಂದೂ ಎನ್ನ ನೀ ಕಾಯೆ ತಾಯೆ 4 ಮಲೆತ ಮಹಿಷಾಸುರನ ಕೊಂದೆ ಮಲೆಬೆನ್ನೂರಿನಲಿ ನಿಂದೆ ಬಲುನೇಮವಂತೆ ಸಂತೆಹರವಿಲೆ ನಿಂತೆ ಪುಲ್ಲಲೋಚನೆ ಪ್ರಖ್ಯಾತೆ ಪರಶುರಾಮನ ಮಾತೆ ಹೆಳವನಕಟ್ಟೆ ರಂಗನ ಸಹೋದರಿ5
--------------
ಹೆಳವನಕಟ್ಟೆ ಗಿರಿಯಮ್ಮ
ರಕ್ಷಿಸೋ ಗೌರೀವರ | ತ್ರಿಪುರದಶಿಕ್ಷಕ ದ್ರೋಣ ಕುವರ ಪ ಅಕ್ಷಿ ರಕ್ತ ರೇಖ ಮಾನಿ | ಯಕ್ಷೇಶ ಪ್ರಿಯ ಮಿತ್ರದಕ್ಷಾಧ್ವರಘ್ನ ರುದ್ರ | ತ್ರ್ಯಕ್ಷನೆ ಲೋಕಾಧ್ಯಕ್ಷಅ.ಪ. ವಿಭೂತಿ ಭಸ್ಮಾರ್ಚಿತ ||ಸು ಭಗಣೀಧೀಶ ಶಿರ | ನಭಕೀಶ ನಿನ್ನ ಸುತೆವಿಭವಾ ಪೊಗಳಲಳವೆ | ಕುಭವ ಪರೀಹರ 1 ಹಿಂಡು ನಖ ಮೃ | ಕಂಡ ಪರಿಪಾಲಕೊಂಡೆನ್ನ ಭಿನ್ನಪವ | ದಂಡಿಸೊ ದುಷ್ಟ ಮನ 2 ಗೋವುಗಳ್ಪರಿ ಪಾಲಕ5ಗೋಪೇರ | ದಾವಾಗ್ನಿಯಿಂ ರಕ್ಷ5ಭಾವ ಜನಯ್ಯ ಗುರು | ಗೋವಿಂದ ವಿಠಲನಭಾವದೊಳಗೆ ಕಾಂಬ ಭಾವವನೀವುದು 3
--------------
ಗುರುಗೋವಿಂದವಿಠಲರು