ಒಟ್ಟು 6772 ಕಡೆಗಳಲ್ಲಿ , 131 ದಾಸರು , 3884 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದೇನೈ ಛಂದಾ | ಗುರುವೇ | ಇದೇನೈ ಛಂದಾ ಪ ಅರೂಪದಲಿ ಗೋಚರಿಸಿತು ಪ್ರೇಮ1 ವನದೊಳು ವೃಂದಾವನದೊಳು ನಲಿದೆ2 ಯಾತಕೆ ಮೌನದ ರೀತಿಯ ಹಿಡಿದೆ 3 ಏನೆಂದು ಅರಿಯದ ಜ್ಞಾನಿಯುನಾನು | ನ್ಯೂನಾರಿಸದೆ ನೀಡು ಸ್ವಾನಂದವನು 4 ಎಂದೆಂದು ಕರಿಯೆ `ಓ' ಎಂದನು ಕರುಣಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇವೆ ಗುರುಕೃಪೆಯದಾಟಗಳು ಧ್ರುವ ಮನಯೋಗದ ಗೋಲ್ಹಾಟಗಳು ಅನುದಿನ ಅನಿಮಿಷ ನಯನದ ನೋಟಗಳು ಜ್ಞಾನ ಸಮುದ್ರದ ಲೋಟಗಳು ಏನೇಂದ್ಹೇಳಲಿ ಸ್ವಾನಂದದ ಸುಖ ಅನಂದೋಬ್ರಹ್ಮದ ಆಟಗಳು 1 ಸೊನ್ನೆಯ ಸೂಟಿಗಳು ತಾಳಮೃಂದಗವು ಭೇರಿಡುತಿಹ್ಯ ಕೇಳುವ ಧಿಮಿಧಿಮಿಟಗಳು ತಲ್ಲೀನದಿ ಶ್ರುತಿಘೋಷಾಲಿಸುವನೀದೃಶ್ಯದ ಉದಾಟಗಳು ತಿಳಿಯಲು ಬಲು ಆವ್ಹಾಟಗಳು 2 ಬಲ್ಲವೇನು ನರಕೀಟಗಳು ದೇವದೇವೋತ್ಮನ ನೋಟಗಳು ದಯಕರುಣದಿ ಜೀವನ ¸ದ್ಗೈಸುವ ಭವನಾಶನ ಕೃಪಾದೃಷ್ಟಿಗಳು ಧನ್ಯಧನ್ಯ ಕುಲಕೋಟಿಗಳು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೋ ಶಿವ ಬಂದಾ ವೇದಾಂತ ವೇದದಯೋದದಿ ಬಂದಾ ಪ ಇಂದುಧರನು ಬಂದಾಕಂದುಗೋರಳ ಬಂದಾ ನಂದಿವಾಹನ ಚಿದಾನಂದನು ಬಂದಾ1 ಶಂಭುಶಂಕರ ಬಂದಾ ಜಂಭಾರಿಸುತ ಬಂದಾ ಅಂಬಿಕಾರಮಣ ತ್ರಯಂಬಕ ಬಂದಾ2 ಕಂತುಹರನು ಬಂದಾ ಅಂತರಾತ್ಮನು ಬಂದಾ ಚಿಂತಿತಾರ್ಥೀವ ತ್ರಿಪುರಾಂತಕ ಬಂದಾ 3 ಗಂಗಾಧರನು ಬಂದಾ ಮಂಗಳಾಂಗನು ಬಂದಾ ಸಂಗ ರಹಿತ ಮಹಾಲಿಂಗನು ಬಂದಾ4 ಉರಗ ಭೂಷಣ ಬಂದಾ ಸುರರ ಪೋಷಣ ಬಂದಾ ಗುರು ಮಹಿಪತಿ ಪ್ರಭು ಕರುಣದಿ ಬಂದಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದ್ರಪ್ರಸ್ಥದಲ್ಲೆ ಕುಂತಿ ನಂದ(ನ) ರಾಜಸೂಯ್ಯಾಗವನು ಆ- ನಂದದಿ ಮಾಡಿಂದಿರೇಶಗರ್ಪಿಸಿದನು 1 ಮಂದಬುದ್ಧಿ ಕೌರವನು ಚೆಂದನೋಡಿ ಸೈರಿಸದೆ ಪಾಂಡವರ ಪಟ್ಟಣದಿಂದ್ಹೊರಗ್ಹಾಕುವೆನೆಂದನು 2 ಘಾತಕ ದುರ್ಯೋಧನ ತನ್ನ ಮಾತುಳ ಶಕುನಿಯ ಕೇಳಿ ಪ್ರೀತಿಂದೆ ಪಾಂಡವರ ಕರೆಸಿ ದ್ಯೂತವಾಡಿದ 3 ಆಗ್ರಾದಿಂದಾಟಗಳ ಸೋಲಿಸಿ ಶೀಘ್ರದಿಂದ್ವನವಾಸವ ಚರಿಸಿ ಅಜ್ಞಾತ್ವಾಸೊಂದೊ(ದ್ವ?) ರುಷವೆಂದು ಪ್ರತಿಜÉ್ಞ ಮಾಡಿದ 4 ಸೋತು ಧರ್ಮ ಸಕಲೈಶ್ವರ್ಯ ಸಾದೇವ ನಕುಲ ಭೀಮರ ಪಾರ್ಥ ದ್ರೌಪದಿಯ ಪಣಕಿಟ್ಟು ಕೂತನಾಗಲೆ 5 ಆನೆ ಕುದುರೆ ಅಷ್ಟೈಶ್ವರ್ಯ ಬ್ಯಾಗೆ ತನ್ನಿರಿ ಭಂಡಾರವನು ಹೋಗಿ ದ್ರೌಪದಿ ಕರೆಯಿರೆಂದು ಹೇಳಿದನಾಗ 6 ಕರವ ಮುಗಿದು ನಿಂತು ಇಂದು ನಮ್ಮ ರಾಜಸಭೆಗೆ ಬನ್ನಿರೆಂದರು 7 ದಾಯವಾಡಿ ಸೋತರಿನ್ನುಪಾಯವಿಲ್ಲೀಗೆ 8 ಇಂದಿರೇಶನ ದಯವು ನಮ್ಮಲ್ಲಿದ್ದ ಕಾರಣದಿಂದೀಗ ದುರಿತ ಬಯಲಾಗುವುದ್ಹ್ಯಾಗೆಂದು ನುಡಿದಳು 9 ಚಂದ್ರ ಜ್ಯೋತಿಯಂತೆ ಹೊಳೆವೊ ಮಂದಗಮನೆ (ಇ)ಂದು ವದನೆ ದುಂಡು ಮಲ್ಲಿಗೆಶಿರವ ಬಾಗಿ ಬಂದು ನಿಂತಳು 10 ಕಂಡು ದುರ್ಯೋಧನ ದ್ರೌಪದಿ ನಿನ್ನ ಗಂಡರಡವಿಗೈದುವೋರು ಹೆಂಡತ್ಯಾಗಿರೆನ್ನ ಬಳಿಗೆ ಬಾರೆ ಎಂದನು 11 ಕೆಂಡ ತುಂಬಿದ ಕೊಂಡದೊಳು ಕಂಡೂ ನೀ ಹಾರುವರೇನೊ ತುಂಡು ಮಾಡಿ ಕಡಿವೋರೈವರು ಬ್ಯಾಡೋಯೆಂದಳು 12 ಪತಿಗಳಿಂದೆ ರಹಿತಳೆ ದ್ರೌಪದಿಯೆ ನೀನತಿ ಹರುಷದಿಂದೆ ಸತಿಯಾಗಿ ಬಾಳ್ಹಿತದಿಂದೆನ್ನಕೂಡೇಯೆಂದನು 13 ಪತಿಯಿಂದೆ ರಹಿತಳು ಭಾನುಮತಿಯೋ ಧೃತರಾಷ್ಟ್ರ ಗಾಂಧಾರಿ ಸುತಹೀನರಾಗುವರತಿ ಬ್ಯಾಗೆ ಮತಿಗೇಡಿ ಕೇಳೊ 14 ಪಟ್ಟೆ ಮಂಚಕ್ಕೊಪ್ಪುವ್ಯಂತೇ ಬಾರೇಯೆಂದನು 15 ಅಷ್ಟ ಬಡವರೈವರು ನಿನ ಶಿರ ಕುಟ್ಟಿ ಯಮಪಟ್ಟಣಕ್ಕೆ ಅಟ್ಟಿ ರಾಜ್ಯಕ್ಕಧಿಕಾರ್ಯವರು ಕೇಳೋಯೆಂದಳು 16 ಹೇಮ ಇಚ್ಛ ಮಾಡಿದ್ದೇನೀಗೆನ್ನ ಕೂಡೆ ಎಂದನು 17 ಹುಚ್ಚು ಹಿಡಿದಿತೇನೋ ನಿನಗೆ ಉಚ್ಚು ಬಡಿದು ನಿನ್ನ ಹಲ್ಲು ನುಚ್ಚು ಮಾಡಿ ಕೊಲ್ಲೋರೈವರು ಬ್ಯಾಡೋಯೆಂದಳು 18 ಬಡನಡುವಿನ ವೈಯಾರಿ ಕಡುಚೆಲ್ವೆ ದ್ರೌಪದಿಯೆ ಎನ್ನ ತೊಡೆಯಮ್ಯಾಲೆ ಒಪ್ಪುವ್ಯಂತೆ ಬಾರೆಯೆಂದನು 19 ಕಡುಪಾಪಿ ನೀ ನುಡಿವೋ ನಾಲಿಗೆ ಕಡಿದು ಭೀಮನ ಗದೆಯು ನಿನ್ನ ಉರ ಭೇದಿಸುವೋದನು ನೋಡೇನೆಂದಳು 20 ಅಂಗನೆ ನಿನ್ನಂಗಸಂಗವಾಗದಿದ್ದರೆ ನಿನ್ನ ಮಾನ- ಭಂಗ ಮಾಡಿ ಬತ್ತಲೆ ನಾ ನಿಲಿಸೇನೆಂದನು 21 ಪುಂಡ ಖಳ ನಿನ್ನುದರ ಓಕುಳಿಕೊಂಡಮಾಡೋಕುಳಿಯನಾಡಿ ಚೆಂಡನಾಡಲು ನಿನ್ನ ಶಿರವ ನೋಡೇನೆಂದಳು 22 ಪಾಪಿ ದುಶ್ಶಾಸನನು ಬಂದು ದ್ರೌಪದಿಯ ಮುಂದೆ ನಿಂತು ನೂತನದ ನಿರಿಯ ಪಿಡಿದು ಸೆಳೆಯುತಿದ್ದನು 23 ನಿಲ್ಲೊ ಪಾಪಿ ನಿನ್ನ ರಕ್ತ ಎರೆದು ಹಲ್‍ಹಣಿಗಿಯಲ್ಹಿಕ್ಕಿ ಎಲ್ಲ ಕರುಳ್ವನಮಾಲೆಯ ಮಾಡಿ ಮುಡಿವೆನೆಂದಳು 24 ಮಂಗಳ ಮೂರುತಿ ಮಾರಜನಕ ಎನ್ನ ರಕ್ಷಿಸೆಂದು ಕರವ ಮುಗಿದು ನಿಂತಳು 25 ಮಡುವಿನಲ್ಲೆ ಮುಚ್ಛನಾಗಿ ಬಿಡದೆ ವೇದವ ತಂದು ಕ್ಷೀರ- ಕಡಲ ಕಡೆದ ಕೂರುಮ ಎನ್ನ ಕಾಯೋಯೆಂದಳು 26 ಕಡುಕ್ರೂರ ವರಾಹಾವತಾರ ಹಿಡಿದು ಹಿರಣ್ಯಾಕ್ಷನ ಕಂಬ ವೊಡೆದು ಬಂದಾರ್ಭಟಿಸುವ ಸಿಂಹ ಕಾಯೊ ಎಂದಳು 27 ಬಡವನಾಗಿ ಬಲಿಯ ದಾನ ಬೇಡಿಕೊಂಡ್ವಾಮನನೆ ದೊಡ್ಡ ಕೊಡಲಿ ಪಿಡಿದು ಕ್ಷತ್ರಿಯರನೆ ಕಡಿಬ್ಯಾಗೆಂದಳು 28 ಹತ್ತು ತಲೆಯ ರಾವಣನ ಹತವಮಾಡಿದ್ದವನೆ ಗೋಪೀ ಪುತ್ರನಾದ ಕೃಷ್ಣ ಎನ್ನ ರಕ್ಷಿಸೆಂದಳು29 ಬತ್ತಲಿದ್ದ ಬೌದ್ಧ ನೀ ಬಿಟ್ಟೊ ್ವಸ್ತ್ರ ಎನಗುಡುಗೊರೆಯ ಕೊಟ್ಟು ಹತ್ತಿ ತೇಜಿ ಹರುಷದಿಂದ ಬಾರೋಯೆಂದಳು 30 ಕ್ಷೀರಸಾಗರದಲ್ಲೆ ನೀ ಶ್ರೀಲಕ್ಷ್ಮೀ ಸಹಿತ ಇದ್ದರೇನು ಭೂ ವೈಕುಂಠವಾಸಿ ಎನ್ನ ಕಾಯೋಯೆಂದಳು 31 ಅನಂತಾಸನದಲ್ಲೆ ಆದಿಲಕ್ಷ್ಮೀ ಸಹಿತಾಗಿದ್ದರೇನು ಸೇತೂ(ಶ್ವೇತ?) ದ್ವೀಪವಾಸಿಯೆನ್ನ ಕಾಯೋಯೆಂದಳು 32 ಮಧುರಾ ವಾಸಿ ವೃಂದಾವನ ಗೋವ್ರಜದಲ್ಲಿದ್ದರೇನೊ ಕೃಷ್ಣ ಒದಗಿಬಂದೀಗೆನ್ನಭಿಮಾನ ಕಾಯೋಯೆಂದಳು 33 ಬ್ಯಾಗೆ ಬಿಟ್ಟೀಗೆನ್ನ ಬಳಿಗೆ ಬಾರೋಯೆಂದಳು 34 ಕಾಂತ ಅಕ್ಷಯವೆಂದ ವಸ್ತ್ರಾನಂತವಾದುವು 35 ಕೆಂಪು ಹೂವು ಇರುವಂತಿಗೆಯು ಪಂಚಪೈಠಣಿ ಪಗಡಿ ಬಣ್ಣ ಚಿಂತಾಕು ಪೈಠಣಿಯ ನಿರಿ ಸೆಳೆಯುತಿದ್ದನು 36 ಕರಿಯ ಹೂವು ಕಡ್ಡಿಪೈಠಣಿ ಸೆರಗು ಜರದ ಚಾರಖಾನಿ ಪರಿಪರಿ ಪತ್ತಲಗಳ ತಾ ಸೆಳೆಯುತಿದ್ದನು 37 ಬಿಳಿಯ ಹೂವು ಬಟ್ಟ ಮುತ್ತಿನ ಹೊಳೆವೊ ನಿಂಬಾವಳಿಯು ಚಂದ್ರ ಕಳೆಯ ಸೀರೆಗಳನೆ ಪಿಡಿದು ಸೆಳೆಯುತಿದ್ದನು 38 ಸೂರೂತಿ ಸುಗುತೀಯ ಬಣ್ಣ ಭಾರಿ ಬಾಳೆಪಟ್ಟೆಗಳನು ದ್ವಾರ್ಯಾಮನಿ ಖಂಬಾವತಿ ಸೀರೆ ಸೆಳೆಯುತಿದ್ದನು 39 ತಬಕಾದ್ಹೂವೆಳ್ಳ್ಹೂವು ಗೆರೆ ಸಾಸಿವೆಯ ಚಿಕ್ಕಿ ಸರಪಳ್ಯಂಚು
--------------
ಹರಪನಹಳ್ಳಿಭೀಮವ್ವ
ಇಂದ್ರಲೋಕವ ಪೋಲ್ವ ದ್ವಾರಕೆಯಿಂದ ನಮ್ಮನು ಸಲಹಲೋಸುಗಸಿಂಧುವಿನ ಮಾರ್ಗದಲಿ ತೌಳವ ಜನರ ದೇಶಕ್ಕೆಬಂದು ಮಧ್ವಾಚಾರ್ಯರ ಕೈ-ಯಿಂದ ಪೂಜೆಯಗೊಂಬ ಕೃಷ್ಣನಮಂದಹಾಸದ ಮುದ್ದುಮೊಗ ಸೇವಿಪಗೆ ಸಂಪದವು1 ಪಾದ ಮನೋಹರೋರುದ್ವಂದ್ವ ಶ್ರೀಕೃಷ್ಣನ ಮೂರ್ತಿಯ ನೋಳ್ಪರ ನಯನ ಸುಕೃತಫಲ2 ನಿತ್ಯದಲಿ ಗೋಘೃತದ ಮಜ್ಜನಮತ್ತೆ ಸೂಕ್ತ ಸ್ನಾನ ತದನು ಪ-ವಿತ್ರ ಮಂತ್ರ ವಿಚಿತ್ರ ತರವಹ ಕಲಶದಭಿಷೇಕವಸ್ತ್ರಗಂಧ ವಿಭೂಷಣಂಗಳವಿಸ್ತರಿಪ ಶ್ರೀತುಲಸಿ ಪುಷ್ಪದಿಭಕ್ತಿಭರಿತರು ಮಾಡುವಾರಾಧನೆಯನೇನೆಂಬೆ 3 ಸುತ್ತ ಸುಪ್ತಾವರಣದರ್ಚನೆವಿಸ್ತರಿಪ ಸ್ತೋತ್ರಗಳ ಗಾನ ವಿ-ಚಿತ್ರರ ನೈವೇದ್ಯವು ಸುವೀಳೆಯ ಧೂಪ ದೀಪಗಳುರತ್ನದಾರ್ತಿಗಳ ಸಂಭ್ರಮಛತ್ರ ಚಾಮರ ನೃತ್ಯಗೀತಾ-ದ್ಯುತ್ಸವಗಳೊಪ್ಪಿಹವು ದೇವನ ಮುಂದೆ ದಿನದಿನದಿ 4 ಅಪ್ಪಮೊದಲಾದಮಲ ಭಕ್ಷ್ಯವತುಪ್ಪ ಬೆರೆಸಿದ ಪಾಯಸವ ಸವಿ-ದೊಳ್ಪ ಶಾಕಗುಡಂಗಳನು ಕಂದರ್ಪನಪ್ಪನಿಗೆಅರ್ಪಿಸುವರನುದಿನದಿ ರಸ ಕೂ-ಡಿಪ್ಪ ಪಕ್ವಫಲಾದಿಗಳು ರಮೆಯಪ್ಪಿಕೊಂಡಿಪ್ರ್ಪಚ್ಯುತಗೆ ಪೂಜಿಸುವ ಯೋಗಿಗಳು 5 ಸಿರಿ ನೆಲಸಿಹುದು ಶ್ರೀಕೃಷ್ಣನ ಮನೆ ಶೃಂಗಾರ 6 ಶುಭ ವಾಕ್ಯಗಳ ನಮಗೆನಿಷ್ಠಸುಜನರು ತಟ್ಟನೆ ಮನ-ಮುಟ್ಟಿ ನೆನೆವರಿಗಿಷ್ಟ ಅಖಿಳವಕೊಟ್ಟು ಸಲಹದೆ ಸೃಷ್ಟಿಯೊಳು ನೀಗಿಪ್ಪೊ ಗುಣಪುಷ್ಪ 7 ಏನನೆಂಬೆನು ಕೃಷ್ಣ ದೀನರ ದೊರೆಯು ನೀನೆಂದಾದ ಕಾರಣಮಾನವರ ಸುರಧೆÉೀನುತನ ನಿನಗಿಂದು ಸೇರಿತಲಹೀನತೆಯ ಪರಿಹರಿಸಿ ಭಾಗ್ಯಾಂಭೋನಿಧಿಯೆ ನಿಜರ್ಗೀವ ನಿನ್ನ ಮ-ಹಾನುಭಾವದ ಬಲುಮೆಗೆಣೆಗಾಣೆನು ಮಹಾಪ್ರಭುವೆ 8 ಭಾಪು ದಿವಿಜರ ದೇವರಾಯನೆಭಾಪು ಭಜಕರಅಭೀಷ್ಟವೀವನೆಭಾಪು ಹರಿನೀಲೋತ್ಪಲನೆ ಶ್ಯಾಮಲನೆ ಕೋಮಲನೆಭಾಪು ಹಯವದನಾಖಿಲೇಶನೆಭಾಪು ಸುಜನರ ಪಾಪ ನಾಶನೆಭಾಪು ಕೃಷ್ಣಾಲಸತ್ರೈಪಾಲಕನೆ ಬಾಲಕನೆ 9
--------------
ವಾದಿರಾಜ
ಇಂದ್ರಾಕ್ಷಿ ಸಲಹೆ ಬಂದು | ಸಂರಕ್ಷಿಸಿ ಇಂದ್ರಾಕ್ಷಿ ಸಲಹೆ ಬಂದು ಪ ಚಂದ್ರಶೇಖರನಂಕ ಸಂಸ್ಥಿತೆ ಚಂದ್ರ ಬಿಂಬಾನನೆ ದಯಾನ್ವಿತೆ ಇಂದ್ರ ಮುಖ ಸುರಗಣ ಸಮರ್ಚಿತೆ ತಂದ್ರ ಪರಿಹೃತೆ ಭಕ್ತತತಿ ಹಿತೆ ಅ.ಪ. ಅರಿಯದ ತರಳನಮ್ಮ | ನಿನ್ನಂಘ್ರಿ ಸೇವಿಪ ಮೆರೆವ ಭಾಗ್ಯವ ನೀಡಮ್ಮ | ಮರೆಯದಿರಮ್ಮಾ ಶರಣ ಜನರನು ಪೊರೆವೆನೆನ್ನುತ ಕರದಿ ಪಿಡಿದಿಹೆ ಬಿಡದೆ ಉನ್ನತ ದರವಿಯನು ಸಿದ್ದಾನ್ನ ಪಾತ್ರೆಯ ಕರುಣಿ ತ್ರಿಜಗಜ್ಜನನಿ ಸುಗುಣಿಯೆ 1 ನಿತ್ಯಾನಂದಿನಿ ಮೋಹಿನಿ | ಸುಗತಿ ಪ್ರದಾಯಿನಿ ಭೃತ್ಯಾನುಗ್ರಹ ಕಾರಿಣಿ | ಬುಧ್ಯಾಭಿಮಾನಿ ನಿತ್ಯಮಂಗಳೆ ಭೃತ್ಯವತ್ಸಲೆ ಸತ್ಯರೂಪಿಣಿ ಮೃತ್ಯುನಾಶಿನಿ ನಿತ್ಯತ್ವತ್ಪದ ಭಜಿಪ ಸಂಪದ- ವಿತ್ತು ಪಾಲಿಸೆ ಶ್ರೀ ಕಾತ್ಯಾಯಿನಿ 2 ಭೀಮಾ ಭೈರವನಾದಿನಿ | ಕುಮಾರ ಜನನಿ ಕಾಮನಿಗ್ರಹನ ರಾಣಿ | ವರವರ್ಣಿನಿ ಬ್ರಾಹ್ಮಿ ವೈಷ್ಣವಿ ಬ್ರಹ್ಮಚಾರಿಣಿ ಚಾಮುಂಡೇಶ್ವರಿ ಕೋಲರೂಪಿಣಿ ಭ್ರಮರಿ ಶಾಕಾಂಬರಿ ನೃಸಿಂಹಿಣಿ ಅಮಿತರೂಪಿಣಿ ಅಹಿತ ಮಾರಿಣಿ 3 ಸರ್ವಮಂಗಳ ಮಾಂಗಲ್ಯೆ | ಸರ್ವಾರ್ಥದೆ ಶಿವೆ ಶರ್ವನರ್ಧಾಂಗಿಯೆ | ಪರ್ವತನ ತನಯೆ ಶರ್ವಬ್ರಹ್ಮರ ವರದಿ ಕೊಬ್ಬಿ ಸು- ಪರ್ವರನು ಕಂಗೆಡಿಸೆ ದನುಜರು ಸರ್ವಶಕ್ತಳೆ ಮುರಿದು ಖಳರನು ಉರ್ವಿಭಾರವ ನಿಳುಹಿ ಪೊರೆದೌ 4 ಅಜಿತೆ ಭದ್ರದೆ ಆನಂದೆ | ನಿನ್ನನು ಬಿಡದೆ ಭಜಿಪರ ಪೊರೆವಳೆಂದೆ | ನಾನಿಂದು ಬಂದೆ ಕುಜನಮರ್ಧಿನಿ ಕುಟಿಲ ಹಾರಿಣಿ ಗಜಗಮನೆ ಗಂಭೀರೆ ಗುಣಮಣಿ ವೃಜಿನ ಪರಿಹರೆ ವಿಘ್ನಸಂಹರೆ ನಿಜ ಪದಾಂಬುಜ ಭಜಕನೆನಿಸಿ 5 ಶಿವದೂತಿ ಪರಮೇಶ್ವರಿ | ರುದ್ರಾಣಿ ಚಂಡಿಕೆ ಶಿವೆ ಭವೆ ಜ್ಞಾನೇಶ್ವರಿ | ಸೌಂದರ್ಯಲºರಿ ಭುವನ ಮೋಹಿನಿ ದೈತ್ಯನಾಶಿನಿ ತಾಪ ಜ್ವರ ನಿವಾರಿಣಿ ಕವಿಭಿರೀಡಿತೆ ದೇವ ಪೂಜಿತೆ ವಿವಿಧ ಫಲಗಳ ಒಲಿದು ಕೊಡುವಳೆ 6 ಶೃತಿ ಸ್ಮøತಿ ಶ್ರದ್ಧೆ ಮೇಧಾ | ವಿದ್ಯಾಸರಸ್ವತಿ ಧೃತಿ ಶಾಂತಿ ಕಾಂತಿ ವಾದಾ | ಎನಿಸುತ್ತ ಮೆರೆವ ವಿತತ ಮಹಿಮಳೆ ವಿಶ್ವತೋಮುಖೆ ಅತುಳ ಭುಜಬಲೆ ಭದ್ರಕಾಳಿಯೆ ಪಾವನಿ ಸತ್ವಶಾಲಿನಿ ಸತಿ ಶಿವಪ್ರಿಯೆ ನೀಡಿ ಸುಮತಿಯ 7 ಅರಿದರಾಂಕುಶ ಮುಸಲ | ಮುದ್ಗರಚಾಪ ಮಾರ್ಗಣ ಪಾಶ ಪರಶು ಘಂಟಾ ಶಕ್ತಿ ಪಾತ್ರೆಯು ವರಗದಾಭಯ ಕರದೊಳೊಪ್ಪುತ ದುರುಳರನು ಸಂಹರಿಸಿ ಸಂತತ ಸುರನರೋರಗರನ್ನು ಪೊರೆಯುವ 8 ಮಾರಿ ಮಸಣಿ ಹೆಮ್ಮಾರಿ | ಕರೆಕರೆದುಗೊಳಿಸುವ ಕ್ರೂರ ಶಾಕಿನಿ ಡಾಕಿನಿ | ಪೂತಣಿಯೆ ಮುಖರು ಘೋರ ರೂಪದಿ ಬಂದು ಪೋರರ ಗಾರುಗೊಳಿಸುತ್ತಿರಲು ತವಪದ ಸಾರಿ ನೆನೆದರೆ ತೋರಿ ಹಿಮ್ಮಡಿ ದೂರ ಸರಿವರು ಮುಗಿದು ಕರಗಳ 9 ತಾಪತ್ರಿತಯ ತಪ್ತರ | ಆಹ್ಲಾದಪಡಿಸಲು ಗೋಪತಿ ಮುಖವ ತೋರ | ಕೃಪಾಂಬುನಿಧಿಯೆ ತಾಪಸಾರಾಧಿತ ಪದಾಂಬುಜೆ ಶ್ರೀಪತಿಯ ಸೊದರಿಯೆ ನೀ ನಿಜ- ರೂಪುದೋರಲು ಪಾಪತಾಪ ಪ್ರ- ಳಾಪ ಮಾಡದೆ ರಾಪುಗೈವುದೆ 10 ದುರ್ಗಮ ಸಂಕಟದಿ | ಬಿದ್ದಿಹೆನಮ್ಮಾ ನಿರ್ಗಮ ಕಾಣೆನಮ್ಮಾ | ಉದ್ಧರಿಸಮ್ಮಾ ದುರ್ಗದಿಂತಾರಿಸುವೆ ಭಕ್ತರ ದುರ್ಗೆ ನಾಮಾಂಕಿತದಿ ಎಂಬರು ಕರವ ಸು- ಮಾರ್ಗ ತೋರಿಸೆ ದುರ್ಗೆ ಜನನಿಯೆ 11 ಸುರಾಸುರ ಸಂಗ್ರಾಮದಿ | ಮುರವೈರಿ ದಯದಿ ಸುರರು ಗೆಲ್ಲರು ಮುದದಿ | ಗರ್ವಿಸಲು ಭರದಿ ಹರಿಯ ರೂಪಾಂತರದಿ ತೃಣವನು ಧರೆಯೊಳಿರಿಸುತ ಬಲ ಪರೀಕ್ಷಿಸಿ ಸುರರು ಜಯಿಸದೆ ಮರುಳರಾಗಲು ಬರದೆ ಪರತತ್ವವನು ಕರುಣದಿ 12 ಕಿಂಕರ ಶಂಕರಿಯೆ | ಶತ್ರು ಭಯಂಕರೆ ಓಂಕಾರೆ ಹೂಂಕಾರೆಯೇ | ಸ್ಮಿತ ಅಟ್ಟಹಾಸೆ ಪಂಕಜಾಂಬಕಿ ರಕ್ತನಯನ ಕ ಳಂಕಮುಖಿ ಅತ್ಯುಗ್ರವದನೆ ನಿ ಶ್ಯಂಕ ಬಿಂಕದಿ ಬಂದೆ ಕಾಲದಿ ಮಂಕುಹರೆ ಸಂಕಟದೆಯೆನಿಸುವೆ 13 ರಕ್ತಬೀಜಾಸುರನ | ರಕ್ತವನು ಹೀರಿದ ಶಕ್ತಳೆಂದೆನುತ ನಿನ್ನ | ನಂಬಿದೆನು ಎನ್ನ ಉಕ್ತಿಲಾಲಿಸಿ ಒತ್ತಿ ವಿಘ್ನವ ಇತ್ತು ಜ್ಞಾನ ವಿರಾಗ ಭಕ್ತಿಯ ಮುಕ್ತಪಾವನ ಮಾಡಿ ಸಂತತ ಮುಕ್ತಿಕಾಂತನ ಸ್ಮರಣೆ ಪಾಲಿಸಿ14 ಮಹಿಷನ ಸಂಹರಿಸಿ | ಮಹಿಯನ್ನು ಪಾಲಿಸಿ ಮಹಿಸೂರೆ ನೆಲೆಯೆನಿಸಿ | ಪತಿಸಹಿತವಸಿಸಿ ಮಹಿಪತಿಗಳಾದಿಯಲಿ ಸರ್ವರಿಂ ಅಹರಹರ್ ಸೇವೆಯನು ಕೊಳುತ ಮಹಿಮೆ ತೋರುತಿರುವೆ ಪ್ರತಿದಿನ ಅಹಹ ಬಣ್ಣಿಸಲೊರೆವೆ ನರರಿಗೆ 15 ಚಂಡ ಮುಂಡರ ಮರ್ದಿಸಿ | ಚಾಮುಂಡಿಯೆನಿಸಿ ಖಂಡೆಯವನು ಝಳಪಿಸಿ | ಪುಂಡರನು ವಧಿಸಿ ಖಂಡ ಪರುಶುವಿನಂತೆ ಅದÀಟರ ರುಂಡಮಾಲೆಯ ಕೊಂಡು ಭೂತಗ- ಳ್ಹಿಂಡು ಡಿಂಡಿಮ ಡಂಡೆಣಿಸಲು ತಾಂಡವಾಡಿದ ಚಂಡಕಾಳಿಯೆ 16 ಶುಂಭ ನಿಶುಂಭರನು | ಕುಂಭಿಣಿಗೆ ಕೆಡಹೆ ಸುರರು | ಕುಂದುಭಿಯ ಹೊಡೆಯೆ ಡೊಂಬ ಕೊಳಾಸುರನ ಸೂಕರ ಡಿಂಬ ತಾಳುತ ಸೀಳಿ ದೈತ್ಯ ಕ- ದಂಬವೆಲ್ಲಕೆ ಕಂಭ ಸಂಭವ ನಿಂಬು ರೂಪವ ನಂಬಿ ತೋರಿದೆ 17 ಸಕಲ ಶಕ್ತ್ಯಾತ್ಮಕಳೆ | ಭುವಿಯಲಿ ಈ ಪರಿ ಪ್ರಕಟಳಾಗುತ ಖಳರ | ಕಟಕವನು ತರಿದು ಭಕುತವರ್ಗಕೆ ಬಂದ ಸಂಕಟ ನಿಕರ ಪರ್ವತ ವಜ್ರವೆನಿಸುತ ಮುಕುರದಂದದಿ ಪೊಳೆದು ಪೊರೆಯುವೆ ವಿಕಟನಾಮದಿ ನಿಕಟದಿರುತ 18 ಜ್ಞಾನೇಚ್ಚಾ ಕ್ರಿಯ ರೂಪಳೆ | ನಿನ್ನನು ನುತಿಸಿ ಆನತಿಸಿದವರಿಗೆ | ಪ್ರಸನ್ನಳಾಗಿ ಮಾನ ಸತಿಸುತ ಧ್ಯಾನ ಧನಮನೆ ಜ್ಞಾನ ಭಕ್ತಿ ವಿರಕ್ತಿ ಮುಂತವ ದೇನು ಬೇಡಲು ಕೊಡುವೆ ನಿನ್ನ ಸಮಾನರಾರನು ಕಾಣೆ ಜಗದೊಳು 19 ಅಂಗನಾಮಣಿಯರಿಗೆ | ಮಾಂಗಲ್ಯವೃದ್ಧಿಗೆ ಮಂಗಳಗೌರಿಯೆಂದು | ಪ್ರಸಿದ್ಧಿಗೊಂಡು ರಂಗುಮಾಣಿಕದ್ಹಸೆಯ ಪೀಠದಿ ಮಂಗಳದ್ರವ್ಯಗಳಿಂದೊಪ್ಪುತ ಮಂಗಳೇಕ್ಷಣದಿಂದ ಕುಳಿತಿಹೆ 20 ವೈದ್ಯ ಜ್ಯೋತಿಷ ಪುರಾಣ | ವೇದಾಂತ ಮುಂತಹ- ಗಾಧ ಗ್ರಂಥಗಳನು | ನಿಜಪತಿಯ ಮುಖದಿ ಸಾಧಿಸಿದೆ ಸಜ್ಜನರಿಗೋಸುಗ ಬೋಧಿಸಿದೆ ಗುಹ ಗಣಪ ಮುಖರಿಗೆ ಆದಿದೇವನ ಒಲಿಮೆ ಪಡೆಯಲು ಹಾದಿ ತೋರಿದೆ ಹೇ ದಯಾನಿಧೆ 21 ಅಷ್ಟಬಾಹುಗಳಿಂದಲಿ | ಅಷ್ಟಾಯುಧಂಗಳ ದಿಟ್ಟತೆಯಿಂ ಧರಿಸಿ | ಅಷ್ಟಾತ್ಮನಂವೆರಸಿ ಶಿಷ್ಟ ನಾಲ್ಮಡಿ ಕೃಷ್ಣ ಭೂಪನ ಇಷ್ಟದೇವತೆಯಾಗಿ ನೆಟ್ಟನೆ ಬೆಟ್ಟದಲಿ ರಂಜಿಸುವೆ ಭಕ್ತರಿಷ್ಟ ಹರಿಸುತ ಕೊಟ್ಟಭೀಷ್ಟವ 22 ಸಂತರ ನುಡಿಗಳು | ನಾನಾಂತು ನಿನ್ನಯ ಚಿಂತಿತಾರ್ಥದ ಪದವ | ಸ್ವಾಂತದಲಿ ತಂದು ಇಂತು ತುತಿಸಿದೆನರಿಯೆನನ್ಯಯಥ ಪಂಥವನು ಎನ್ನಂತರಂಗವ ನಂತು ತಿಳಿದಿಹೆ ಜನನಿ ಕೊಡು ಶ್ರೀ- ಕಾಂತ ಭಕ್ತಿಯ ಮುಂತೆ ಕರುಣದಿ 23
--------------
ಲಕ್ಷ್ಮೀನಾರಯಣರಾಯರು
ಇನ್ನೆಲ್ಲಿತನಕ ಇವಗೆ ದುರ್ಬವಣೆ ಹರಿಯೆ ನಿನ್ನ ಉನ್ನತವಾದ ಮರೆಬಿದ್ದ ಬಳಿಕ ಪ ಮಂದಮತಿ ತೊಲಗದು ಕುಂದು ನಿಂದೆ ಅಳಿವಲ್ಲದು ಮಂದಿಮಕ್ಕಳ ಮೋಹವೊಂದು ಕಡಿವಲ್ಲದು ಸಿಂಧುಶಯನನೆ ಗೋವಿಂದ ನಿಮ್ಮ ಚರಣ ವೊಂದೆ ಮನದಲಿ ಭಜಿಸಾನಂದಪಡಿವಲ್ಲದು 1 ಮೋಸಮರವೆ ಹರಿವಲ್ಲದು ಆಶಪಾಶ ಬಿಡವಲ್ಲದು ಹೇಸಿ ಸಂಸಾರದ ದುರ್ವಾಸನೆಯು ಹಿಂಗದು ದೂಷಣೆಗೆ ನೋಯುವುದು ಭೂಷಣೆಗೆ ಹಿಗ್ಗುವುದು ದೋಷದೂರನೆ ನಿನ್ನ ಧ್ಯಾಸನಿಲ್ಲವಲ್ಲದು 2 ಕಪಟ ಮತ್ಸರಬುದ್ಧಿ ಚಪಲತನ ಅತಿಕ್ರೋಧ ಕಪಿಮನದ ಚೇಷ್ಟೆ ಅಪರೋಕ್ಷ ನಿಲ್ಲವಲ್ಲದು ಅಪ್ಪ ಶ್ರೀರಾಮ ನಿಮ್ಮ ಜಪತಪ ಸಿದ್ಧಿಸವಲ್ಲದು 3
--------------
ರಾಮದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಇಲ್ಲಿ ಬಾ ಇಲ್ಲಿ ಬಾ ಮೆಲ್ಲ ಮೆಲ್ಲನೆ ಹೆಜ್ಜೆಯನಿಕ್ಕುತ ಪುಲ್ಲನಾಭ ಗೋಪಾಲಕೃಷ್ಣ ಗೊಲ್ಲರೊಡಗೂಡಿ ಪ. ಪಾಲು ಮೊಸರು ಬೆಣ್ಣೆ ಕೊಡುವೆ ಬಾ ಗೋಲಿ ಗುಂಡು ಗಜಗನೀಡುವೆ ಬಾ ಆಲಯ ಪೊಕ್ಕು ಧೂಳಿ ಮಾಡಲು ಬ್ಯಾಡ 1 ಅಂಗಳದೊಳು ಬಾ ಬೆಳದಿಂಗ ತೋರುವೆನು ರಂಗು ಮಾಣಿಕ್ಯದುಂಗರ ನಿಡುವೆನು ಮಂಗಳಾಂಗನೆ 2 ಮೃದನಯ್ಯನೆ ಬಾ ಸುದತಿಯರೊಡಗೂಡಿ ಬಾ ಸಡಗರದಿ ನೀ ಬಾ ಕಾಳೀಮರ್ಧನಕೃಷ್ಣ ಬಾ 3
--------------
ಕಳಸದ ಸುಂದರಮ್ಮ
ಇಲ್ಲೆವೆ ನಿಧಾನವು ಶ್ರೀಗುರುವೆ ನಿಮ್ಮಲ್ಲೆವೆ ನಿಧಾನವು ಎಲ್ಲರಿಗಿದು ತಾ ದುರ್ಲಭವಾಗಿಹ್ಯ ಸುಲಭದಲಿ ಒಲಿದಿಹ್ಯ ಸದ್ಗುರು ನಮಗಿಲ್ಲೆ ನಿಧಾನವು ಧ್ರುವ ಪಾದ ಪದ್ಮವ ತಿಳಿದು ವೇದಕಗೋಚರವು ಸದ್ಗತಿ ಸುಖ ಸಾಧಿಸುವವ ಧನ್ಯನು ಶೋಧಿಸಿ ಅತ್ಮದಿ ಬೋಧೆಯಲಿ ನಿಜ ಅದಿತತ್ವದ ಗತಿ ಭೇದಿಸಿ ತಿಳಿದವಗಿಲ್ಲಿವೆ 1 ಖುಲ್ಲ ಮನುಜರಿಗಿದು ತಿಳಿಯದೆ ಇಲ್ಲದಂತಾಗಿಹುದು ಎಲ್ಲಾ ದೈವದ ಮೂಲವು ಬಲ್ಲವಗಿದು ಸೊಲ್ಲಿನೊಳಗಿಹುದು ಕಲ್ಲಿನೊಳಿಹ ದೈವಿಲ್ಲವೆ ಇಹ್ಯ ಪ್ರಾಣದೊಲ್ಲಭ ಗುರುನೆಂದಿಲ್ಲೆವೆ ತಿಳಿದುವಗಿಲ್ಲೆವೆ 2 ಸುತ್ತೇಳು ಸಾಗರದ ಪೃಥ್ವಿಲಿಹ್ಯ ನಿತ್ಯವುಳ್ಳ ದೈವೀತನು ಸುತ್ತ ಸನಕಾದಿಗಳು ಮತ್ತೆ ದೇವರು ತೆತ್ತೀಸ ಕೋಟಿಗಳು ಹತ್ತಿಲೆ ಹೊಳೆಯುತ್ತ ಚಿತ್ತದ ತುದಿಯಲಿ ಸತ್ಯಕೈಲಾಸವೆ ಇತ್ತ ವೈಕುಂಠವು ಇಲ್ಲೆವೆ 3 ಕಾಶಿ ರಾಮೇಶ್ವರವು ಸಕಲ ಕ್ಷೇತ್ರವಾಸವಾಗಿಲ್ಲಿಹವು ದೋಷನಾಶನ ಕೃಷ್ಣೆಯು ಮಿಗಿಲಾದ ಏಸು ತೀರ್ಥಗಳಿಹ್ಯವು ವಾಸವಾಗಿಹವು ಸೂಸುತ ನದಿಗಳು ಈಶನ ಚರಣದಲಿ ಭಾಸುದು ಕಂಡವಗಿಲ್ಲೆವೆ 4 ಚೆಂದುಳ್ಳ ದ್ವಾರಕೆಯು ಗೋಕುಲ ವೃಂದಾವನ ಕುರುಕ್ಷೇತ್ರವು ಒಂದೊಂದೇ ಕ್ಷೇತ್ರದಲಿ ವಾಸವಾಗಿ ನಿಂದು ಮಾಡಿದ ಪುಣ್ಯವು ಹಿಂದಿನ ಕರ್ಮವು ಹೊಂದದೆ ಗಳಿಸುವ ಮಂದಾಕಿನಿ ನದಿಯಿಂದ ಫಲಿಲ್ಲಿವೆ 5 ಬ್ರಹ್ಮಾಂಡ ನಾಯಕನು ಅದ್ವೈತ ಸುಖವು ಉಂಡವಗಿದು ಪಿಂಡ ಬ್ರಹ್ಮಾಂಡೈಕ್ಯವು ಮಂಡಲದೊಳು ಪಿಂಡಾಂಡದಿ ಕಂಡವಗಿಲ್ಲ್ಲೆವೆ 6 ಸಂದೇಹ ವೃತ್ತಿ ಹರಿದು ಸದಮಲಾನಂದ ಮುಕ್ತಿಯಲಿ ಬೆರೆದು ಒಂದು ಪಥsÀವನರಿದು ಜಗದೊಳು ದ್ವಂದ್ವಗಳನೆ ಮರೆದು ಎಂದಿಗಗಲದಂತೆ ಶ್ರೀಪಾದವನಿಂದ ಮಹಿಪತಿಗೆ ಇಲ್ಲೆವೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವ ನೋಡಮ್ಮ ನವನೀತಚೋರ ದೇವದೇವ ಮಾ ಮನೋಹರ ಧ್ರುವ ಗೋವನಿವ ಗೋಪಾಲ ಶ್ರೀಧರ ಗೋವಿಸುವ ಇವ ದಾಮೋದರ ಸಾವಿರ ನಾಮದೊಡೆಯ ಸಹಕಾರ ಫಣಿ ಮೆಟ್ಟಿದ ವೀರ 1 ಸಿರಿಯ ಲೋಲನಿವ ನಂದಕುಮಾರ ಉರಗಶಯನ ಕೌಸ್ತುಭಭರ ಪರಮ ಪುರಷ ಹರಿಯ ಸುರವರ ಮರುಳಮಾಡಿದವ ಗೊಲ್ಲತೇರ 2 ಬೆಣ್ಣೆ ಮೊಸರು ಕದ್ದು ವೈವನ ಕಣ್ಣಿಲೆ ಕಟ್ಟಬೇಕು ಇವನ ಪುಣ್ಯಯುಳ್ಳ ಯಶೋದೆ ಕಂದನ ಬಣ್ಣಿಸೊ ಮಹಿಪತಿಗನುದಿನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇವ ನೋಡಮ್ಮಾ ಮಾನವನೆ|ಅವತರಸಿಹ ತ ಮಾಧವನೇ ಪ ಹಲವು ನಾರೇರೊಳಗ ಕೂಡಿ|ಹಲವು ರೂಪಾದನು ನೋಡಿ| ಬೋಧ ಸ್ವರದಿ ಪಾಡಿ| ನಲಿದಾಡುವ ಸ್ವಸುಖ ನೀಡಿ 1 ಅವಿದ್ಯ ವಿಷಮಡುವನೆ ಕಲಕಿ|ಬವರದಿ ಹಮ್ಮಿತುರಗ ತುಡಕಿ| ತವೆ ವಾಸನೆ ಹಡೆಗಳ ಕುಸುಕಿ| ಜೀವನಮೃತ ಮಾಡಿದ ಬಳಿಕಿ 2 ಗೋವಳರನು ತೆಗೆದಾ| ಕವಿಗುರು ಮಹಿಪತಿಜನ ಹೊರದಾ| ಭುವನದಿ ಗೋಕುಲದಲಿ ಮೆರೆದಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇವನೆ ಪ್ರಹ್ಲಾದನಿಂದಲಿ ಉಪಾಸ್ಯ ಪವಮಾನ ಪಿತ ಭಕ್ತವರದ ಲಕ್ಷ್ಮೀಶ ಪ. ವಲಯಕಾರದಿ ಶೇಷ ಛತ್ತರಿಯಾಗಿ ಹಲ ಮುಸಲ ಧರಿಸಿ ಎಡದಲಿ ವಾರುಣೀ ಬಲದಲ್ಲಿ ಶಂಬುಕ ವರ್ಣನೆಂಬ ಪುತ್ರನ ಸಹಿತ ನಲಿದು ಸೇರಿಸೆ ಇಂಥ ಆಸನದಿ ಕುಳಿತಾ 1 ಯೋಗಾಸನವನ್ಹಾಕಿ ಎಡತೊಡೆಯ ಮೇಲ್ ಸಿರಿಯು ಆಗಮನುತ ಬಲದ ತೊಡೆಯಲ್ಲಿ ವಾಯು ಭೋಗ ರೂಪನು ಸರ್ವ ಆಭರಣ ಶೃಂಗಾರ ಸಾಗರಾತ್ಮಜೆ ಪತಿಯು ಧರಿಸಿ ಮೆರೆವಂಥಾ2 ಶಿರದಿ ನವರತ್ನ ಮಕುಟವು ಫಣೆಯು ತಿಲಕವೂ ಕರ್ಣ ಕುಂಡಲವೂ ನಾಸಿಕ ಗಲ್ಲ ತೆರದ ಬಾಯ್‍ದಾಡೆಗಳು ದುರುಳರಿಗೆ ಘೋರ ವರಭಕ್ತರಿಗೆ ಅಭಯ 3 ಕಂಠ ಕೌಸ್ತುಭಮಣಿಯು ಶ್ರೀವತ್ಸ ತುಳಸಿ ಸರ ವೈಜಯಂತಿ ಹಾರಾ ಕರ ಶಂಖ ಚಕ್ರವು ಪದ್ಮ ಗದೆ ಅಭಯ ವಂಟಿ ಕರಶಿರಿ ಭುಜದಿ ದ್ವಯ ಯೋಗ ಚಿಹ್ನೆ 4 ಉರ ಉದರ ಶೃಂಗಾರ ಅರವಿಂದ ಪೊಕ್ಕಳಲಿ ಬ್ರಹ್ಮ ಮೆರೆಯೇ ಮಿರುಗುವೋ ಮಕುಟ ಉಟ್ಟಿರುವ ನಡು ಕಿರುಗೆಜ್ಜೆ ಕರಿಸೊಂಡಲಿನ ತೊಡೆಯು ಸುರವರದ ಚರಣಾ5 ಚರಣದಾಭರಣ ಸಾಲ್ಯೆರಳನಖ ಕಾಂತಿಗಳು ಪಾದ ಪದುಮಾ ಮೃಗ ಮುಖವು ನರಮೃಗಾಕೃತಿರೂಪ ತರಳ ಪ್ರಹ್ಲಾದನಲಿ ಕರುಣಾರ್ದ ದೃಷ್ಟಿ 6 ಎಡತೊಡೆಯಲಿ ಸಿರಿಯು ಬಲಕರದಿ ಪದುಮವ ಪಿಡಿದು ಎಡತೊಡೆಯ ಮೇಲೆ ಮದನನ ಕುಳ್ಳಿರಿಸುತಾ ಮದನ ಇರಿಸಿ ಹೂ ಬಾಣವನು ಪಿಡಿದು ರತಿ ಪದುಮ ಕರದಿಂದ ಶೋಭಿಸಲೂ 7 ಹರಿಗೆ ಬಲತೊಡೆಯಲಿದ್ದಂಥ ವಾಯುವು ತನ್ನ ಅರಸಿ ಭಾರತಿಯ ಎಡತೊಡೆಯಲಿಟ್ಟೂ ತರಳ ವಿಷ್ವಕ್ಸೇನನನು ಬಲದ ತೊಡೆಯಲ್ಲಿ ಇರಿಸಿಕೊಂಡತುಲ ಸಂತಸದಿಂದ ಮೆರೆಯೇ 8 ಚತುರ ಹಸ್ತನು ವಾಯು ಎಡಗೈಲಿ ಪಿಡಿದು ಗದೆ ಹಿತದಿ ಬಲಗೈಯ್ಯ ಭಕ್ತರಿಗಭಯ ತೋರ್ವ ಅತಿಭಕ್ತಿಯಿಂದುಭಯಕರ ಅಂಜಲಿಯ ಮಾಡಿ ಪತಿ ಭಿಕ್ಷೆ ಬೇಡುವಾ9 ನಾಭಿಯಲಿ ಬ್ರಹ್ಮ ಉದ್ಭವಿಸಿ ಹಸ್ತದಿ ವೇದ ಶೋಭಿಸಲು ಎಡತೊಡೆಯ ಮೇಲೆ ವಾಣೀ ಆಭರಣ ಶೃಂಗರದಿ ವೀಣೆ ಪುಸ್ತಕ ಧರಿಸಿ ವೈಭವದಿ ದೇವ ಮುನಿ ಎಡೆ ತೊಡೆಯೊಳಿರಲೂ10 ಬ್ರಹ್ಮ ಬಲತೊಡೆಯಲ್ಲಿ ಪಂಚಮುಖ ರುದ್ರನ್ನ ಸುಮ್ಮಾನದಿಂದ ಕುಳ್ಳಿರಿಸಿಕೊಂಡಿರಲೂ ಬ್ರಹ್ಮಸುತ ಕರದಿ ಆಯುಧ ಗೌರಿ ಎಡದಲ್ಲಿ ಷಣ್ಮುಖನ ಬಲ ತೊಡೆಯಲ್ಲಿಟ್ಟು ಮೆರೆಯೇ 11 ಗೌರಿಗಣಪನ ತನ್ನ ತೊಡೆಯೊಳಿಟ್ಟಿರಲು ಈ ರೀತಿಯಿಂದ ಪರಿವಾರ ಸಹಿತಾ ಶೌರಿ ಮೆರೆಯುವ ದಿವ್ಯ ಅದ್ಭುತಾಕೃತಿ ನೃಹರಿ ಪತಿ ಮನದಿ ತೊರೆ ಭಕ್ತರಿಗೆ 12 ಕಾಲನಾಮಕ ಗರುಡ ಬಾಲೆ ಸೌಪರ್ಣಿ ಲೀಲೆಯಿಂದಲಿ ಕೂಡಿ ಸಮ್ಮುಖದಿ ನಿಂದೂ ಓಲಗವ ಕೊಡುತ ಹರಿಗನುಕೂಲನಾಗಿರುವ ಲೀಲ ಮಾನುಷ ಇಂಥ ವೈಭವದಿ ಮೆರೆವಾ13 ಇಂತೆಸೆವ ಹರಿ ಎದುರು ನಿಂತು ಪ್ರಹ್ಲಾದ ಗುಣ ವಂತೆ ಸಾಧ್ವೀ ಸಾಧುಮತಿ ಸತಿಯ ಸಹಿತಾ ಅಂತರಂಗದಿ ಚಿಂತಿಸುತ ಅಂಜಲಿಯ ಕರದಿ ಶಾಂತಮನದಲಿ ಸುಖಿಸಿ ಆನಂದಿಸುವನೂ14 ವರಭಕ್ತ ಪ್ರಹ್ಲಾದ ವರದನ್ನ ಈ ರೂಪ ನರರು ಚಿಂತಿಸಲಳವೆ ಚರಿಪ ಭಕ್ತಿಯಲೀ ಪರಮ ಉತ್ಸಾರಕರನೊಂದೊಂದು ಅಂಶದಲಿ ವರ ಭಕ್ತರಲಿ ನೆಲಸೆ ಚಿಂತನೆಗೆ ನಿಲುವಾ 15 ಪರಿವಾರ ಆಭರಣ ಆಯುಧಗಳಿಂ ಮೆರೆವ ನರಹರಿಯ ಈ ರೂಪ ನಿರುತ ಸ್ಮರಿಸೇ ಗುರುವರದ ಕರಿಗಿರೀ ಯೋಗ ಭೋಗಾ ನೃಹರಿ ಕರುಣಿಸುವ ಮುಕ್ತಿ ಗೋಪಾಲಕೃಷ್ಣವಿಠಲಾ16
--------------
ಅಂಬಾಬಾಯಿ
ಇಷ್ಟಾದರು ದಯಮಾಡು ಪಂಡರಿನಾಥ ಪಾದ ಮುಟ್ಟಿ ಪ್ರಾರ್ಥಿಪೆನು ಪ ದಾನಧರ್ಮವು ಮಾಡಬೇಕೆಂದು ಮನವಿರೆ ದಾನವಾಂತಕ ಕೃಷ್ಣ ಧನವಿಲ್ಲವಯ್ಯ ಗಾನಲೋಲನೆ ಭಕ್ತಪಾಲ ನಿನ್ನಯ ಪಾದ ಧ್ಯಾನವ ಮಾಳ್ಪರ ಪಾದಧ್ಯಾನ ಕೊಡಿಸುದೇವ 1 ತೀರ್ಥಯಾತ್ರೆಗಳಿಂದ ಪಾರ್ಥಸಾರಥಿ ಕೃಷ್ಣ- ಮೂರ್ತಿ ಸೇವಿಸಲಸಮರ್ಥನಾಗಿರುವೆ ಮಾತು ಮಾತಿಗೆ ಕೃಷ್ಣಗೋವಿಂದ ಮಾಧವ ಶ್ರೀಪತಿ ಶ್ರೀಧರ ಸಲಹೆಂಬ ಸ್ಮರಣೆ 2 ಜ್ಞಾನಿಗಳೊಡನಾಡಿ ಶ್ರೀನಿವಾಸನೆ ನಿನ್ನ ನಾನಾಲೀಲೆಗಳ ಧ್ಯಾನಿಸಲಿಲ್ಲ ಹರಿಯೆ ಜ್ಞಾನಿಗಳರಸ ಭಕ್ತರ ಸುರಧೇನು ಅಜ್ಞಾನಿಗಳಳಿದು ಸುಜ್ಞಾನಜನರ ಸಂಘ 3 ಅಗಣಿತ ಮಹಿಮನೆ ನಿಗಮಗೋಚರ ಕೃಷ್ಣ ಖಗವಾಹನ ಕಂಸಾರಿಯೆ ದೇವ ಹಗಲು ಇರುಳು ನಿನ್ನ ಬಗೆಬಗೆ ಸ್ತುತಿಪರ ಪಾದಗಳು ಸೇವಿಪ ಪರಮಲಾಭವನು 4 ಕರೆ ಕರೆಗೊಳಿಸದೆ ಕಡಲಶಯನನೆ ಎನ್ನ ತೊಡರುಗಳನೆ ಬಿಡಿಸೆಂದು ಮೊರೆ ಇಡುವೆ ಮಡುವಿನೊಳ್ ಗಜವನುದ್ಧರಿಸಿ ರಕ್ಷಿಸಿದಂಥ ಕಮಲನಾಭ ವಿಠ್ಠಲನೆ ನಿನ್ನ ಸ್ಮರಣೆ 5
--------------
ನಿಡಗುರುಕಿ ಜೀವೂಬಾಯಿ
ಇಷ್ಟು ದಿನ ಇಂಥ ಸುಖ ಕಾಣಲಿಲ್ಲಕೃಷ್ಣ ಈ ದಿನ ನೋಡಿ ತುಷ್ಟನಾದೆನೊ ದೇವಾ ಪ ಆಟಗಳು ಸುಖವಲ್ಲ ಕೃಷ್ಣ ನೋಟಗಳು ಸುಖವಲ್ಲಪಾಠಗಳು ಸುಖವಲ್ಲ ಕೂಟವಲ್ಲತೋಟದೊಳು ರವಿಸುತನ ಕೂಟದೊಳು ಗೋಪಿಯರಆಟಕದ ಕೊಳಲೂದೊ ನೋಟ ಸ್ಮರಣೆಗೆ ತರುವೆ 1 ಏನು ಸೌಂದರ್ಯವೊ ಕೃಷ್ಣ ಏನು ಸೌಭಾಗ್ಯವೊಧೇನುಪಾಲನ ನೋಟಕಾಶ್ಚರ್ಯವೊನಾನು ಒಲ್ಲೆನು ಸೀದಾ ಆಣೆ ಮಾಡುವೆನೀಗಧೇನು ಮುಖ ಸಮ ತೋರಿ ಧ್ಯಾನ ತಪ್ಪಿಸೋ ಜಗದಿ 2 ಇಂದು ಬಾಯೊಳಗಿಟ್ಟುಮಂದಹಾಸವ ಮಾಡುತಿಂದಿರೇಶಕಂದರ್ಪಸಮರೂಪದಿಂದ ನೋಡುವೆನೀಗಸಿಂಧುನೊಳು ಮುಳುಗಿದೆನು ನಂದಬಾಲಕನೆ 3
--------------
ಇಂದಿರೇಶರು