ಒಟ್ಟು 477 ಕಡೆಗಳಲ್ಲಿ , 82 ದಾಸರು , 399 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

204ಏನು ಮರುಳಾದೆಯೇ ಎಲೆ ಭಾರತೀ ಪವಾನರಕುಲದೊಳಗೆ ಶ್ರೇಷ್ಠನಾದವಗೆಅ.ಪಕಣ್ಣಿಲ್ಲದವಳ ಗರ್ಭದಲಿ ಜನಿಸಿ ಬಂದುನಿನ್ನ ತೊರೆದು ಬ್ರಹ್ಮಚಾರಿಯಾದ ||ಹೆಣ್ಣಿಗಾಗಿ ಪೋಗಿ ವನವ ಕಿತ್ತಾಡಿ |ಉಣ್ಣ ಕರೆದರೆ ಎಂಜಲೆಡೆಯನೊಯ್ದವಗೆ 1ಹುಟ್ಟಿದನು ಗುರುತಲ್ವಗಾಮಿಯಾ ವಂಶದಲಿ |ನಟ್ಟಿರುಳೊಳೊಬ್ಬ ಅಸುರಿಯಕೂಡಿದ||ಹೊಟ್ಟೆಗೆಂತಲೆ ಹೋಗಿ ಭಿಕ್ಷದನ್ನವನುಂಡು |ಅಟ್ಟ ಹಾಕುವನಾಗಿ ದಿನವ ಕಳೆದವಗೆ 2ಮಂಡೆಬೋಳಾಗಿ ಭೂಮಂಡಲವ ತಿರುಗಿದ |ಕಂಡವರು ಯಾರು ಈತನ ಗುಣಗಳ ||ಪುಂಡರೀಕಾಕ್ಷಶ್ರೀ ಪುರಂದರವಿಠಲನ |ಕೊಂಡಾಡುತಲಿ ಬೋರೆ ಮರದ ಕೆಳಗಿದ್ದವಗೆ 3
--------------
ಪುರಂದರದಾಸರು
ಅಳದಿರೊ ಸುಮ್ಮನಿರಮ್ಮ ನೀಅಳದಿರೊ ಬವ್ವ ಬಂದಾವಮ್ಮ ಕೃಷ್ಣಮ್ಮ ಪ.ನಾಲ್ಕು ಮೊಗವುಳ್ಳ ಬವ್ವ ಹದಿನಾಲ್ಕು ಜಗವ ಜೋಳಿಯಲ್ಲಿಟ್ಟ ಬವ್ವಗೋಳಿಟ್ಟಿಸುತಿದೆ ಬವ್ವ ನಿನ್ನಕಾಲು ಕಂಡರೆ ಕಚ್ಚಿ ಕೊಂಡೊಯ್ವ ಬವ್ವ 1ಗಗನ ತುಂಬ್ಯಾಡುವ ಬವ್ವ ಪ್ರಾಣಿಗಳ ದೇಹವ ಪೊಕ್ಕು ಚೇಷ್ಟಿಪ ಬವ್ವಜಗವನಲ್ಲಾಡಿಪ ಬವ್ವ ನಿನ್ನಮೊಗವರಿತು ದೂರಲಿ ದಿ? ನಿಂತಿಪ್ಪ ಬವ್ವ 2ಮೊಗವೈದು ಪಣೆಗಣ್ಣ ಬವ್ವ ಪುಲಿದೊಗಲು ಕೆಂಜೆಡೆ ರುಂಡಮಾಲೆಯ ಬವ್ವಬಗೆಯಿಂದ ಪೆಣ್ಣೆತ್ತಿ ಬವ್ವ ತಾಸೊಗಸಿಲೆ ರಾಮರಾಮೆನುತಿದೆ ಬವ್ವ 3ಮೈಯೆಲ್ಲ ಕಣ್ಣಿನ ಬವ್ವÀ ತನ್ನಕೈಯಲ್ಲಿ ವಜ್ರವ ಬೀಸುವ ಬವ್ವಉಯ್ಯಲಾಡುತಲಿದೆ ಬವ್ವ ನಿನ್ನಒಯ್ವೆನೆನುತ ಬಂತು ಹಲಕಾಲ ಬವ್ವ 4ಒಂದಲ್ಲ ನೂರಲ್ಲ ಬವ್ವ ನಿನ್ನಮಂದಿರ ಸುತ್ತುತವನಂತ ಬವ್ವಪೊಂದೊಟ್ಟಿಲೊಳು ನಿದ್ರೆಗೆಯ್ಯೈ ಎನ್ನತಂದೆ ಪ್ರಸನ್ವೆಂಕಟ ಸಿರಿದೊರೆಯೆ 5
--------------
ಪ್ರಸನ್ನವೆಂಕಟದಾಸರು
ಆಚಾರವಿಲ್ಲದ ನಾಲಿಗೆನೀಚಬುದ್ದಿಯ ಬಿಡು ನಾಲಿಗೆವಿಚಾರವಿಲ್ಲದೆ ಪರರ ದೂಷಿಪುದಕ್ಕೆಚಾಚಿಕೊಡಿರುವಂತ ನಾಲಿಗೆಪ್ರಾರ್ಥಕಾಲದೊಳೆದ್ದು ನಾಲಿಗೆಸಿರಿಪತಿ ಎನ್ನ ಬಾರದೆ ನಾಲಿಗೆಪತಿತ ಪಾವನನಮ್ಮ ರತಿಪತಿ ಜನಕನಸತತವು ನುಡಿಕಂಡ್ಯ ನಾಲಿಗೆ| 1 |ಚಾಡಿ ಹೇಳಲಿ ಬೇಡ ನಾಲಿಗೆ ನಿನ್ನಬೇಡಿಕೊಂಬುವೆನು ನಾಲಿಗೆರೂಢಿಗೊಡೆಯ ಶ್ರೀರಾಮನ ನಾಮವಪಾಡುತಲಿರು ಕಂಡ್ಯ ನಾಲಿಗೆ| 2 |ಹರಿಯ ಸ್ಮರಣಿ ಮಾಡೊ ನಾಲಿಗೆನರಹರಿಯ ಭಜಿಸು ಕಂಡ್ಯ ನಾಲಿಗೆವರದಪುರಂದರವಿಠಲರಾಯನಚರಣಕಮಲವ ನೆನೆ ನಾಲಿಗೆ| 3 |
--------------
ಪುರಂದರದಾಸರು
ಆರ ಬಾಲಕನೆ ಜಾರನಿವನಾರ ಬಾಲಕನೆ ಪ.ಗುಂಡಿಗೆ ಬೆಣ್ಣೆ ಕದ್ದುಂಡಸಿಯರ ಕುಚಪುಂಡರೀಕವಿಡಿದು ಭಂಡು ಮಾಡುತಲಿಹ 1ನಿದ್ದೆಯ ಕಾಲಕೆ ಸದ್ದಿಲ್ಲದೆ ಬಂದುಗದ್ದಮುಂಡ್ಯಾಡಪ್ಪಿ ಮುದ್ದು ನೀಡುವ ನೋಡೆ2ಅರ್ತಿಲಿ ಬಾಲನ್ನೆತ್ತಿಕೊಂಡರೇನಮ್ಮಅತ್ತೆ ಮಾವನ ಮುಂದೆ ಬತ್ತಲೆ ಮಾಡುವ 3ಬಲು ಮೋಹ ಬರುತಿರೆ ಎಳೆಯನ ಕಾಣುತಅಳುಕದೆಮ್ಮುಡಿಯೇರಿ ಕಳೆವಕಂಚುಕಇವ4ಹುಸಿಯೇ ಅಳಲು ಅವಚಿ ರಂಬಿಸಿದ ಮೇಲೆಪ್ರಸನ್ವೆಂಕಟ ಕೃಷ್ಣ ನಸುನಗು ನಗುತಾನೆ 5
--------------
ಪ್ರಸನ್ನವೆಂಕಟದಾಸರು
ಆರೆನ್ನ ಉಳುಹುವರೈ ರಂಗಘೋರಾರಣ್ಯ ಭವದಿ ಸಿಕ್ಕಿದೆ ರಂಗ ಪ.ಎಂಟು ಕಾಡಾನೆ ಎಂಟು ಕಡೆಯಲಿ ನಿಂತಿವೆಗಂಟನಿಕ್ಕಿವೆ ಮೂರು ದಳ್ಳುರಿಯಸುಂಟರಗಾಳ್ಯೆಬ್ಬರಿಸಲು ಗಿಡಗಂಟಿಲಿ ಬಿದ್ದೆ ನೀನಲ್ಲದೆನ್ನ 1ಹುಲಿಯೊಂದು ಗುಡುಗುಡಿಸುತಿದೆ ಭಯಂಕರಬಲು ತೋಳೆರಡು ಕೆಕ್ಕರಿಸುತಿವೆಸಲುಗೆಯ ಕೋತಿಯೊಂದಣಕಾಡುತಲಿದೆಮೇಲೆ ಕರಡಿಯು ಹತ್ತೆಳವುತಿದೆ 2ಕಾಳುರಗನ ಕಟ್ಟು ಮೈತುಂಬ ನನ್ನನಾಲಿಗೇಳದು ನಿನ್ನ ಕರೆಯಲಿಕೆ ನಿನ್ನಾಳಟ್ಟಿ ಕರೆಸಿಕೊಳ್ಳೆಲೆ ತಂದೆ ನಾಗೋಳಿಟ್ಟೆ ಪ್ರಸನ್ನವೆಂಕಟ ಬಂಧು 3
--------------
ಪ್ರಸನ್ನವೆಂಕಟದಾಸರು
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎರೆದು ಪೀತಾಂಬರÀವನುಡಿಸಿದಳಾಗವರಗೋಪಿಯು ಬೇಗಪಮುರುಳಿಯನೂದುತ ಪರಿಪರಿ ಗೆಳೆಯರುಪರಮಾತ್ಮನೆ ನಿನ್ನರಸುತಲಿಹರೆಂದು ಅಪಗುರುಳು ಕೂದಲು ಮುಖದಲ್ಲಿ ಹೊಸ ಬೆವರುಥಳಥಳಿಸುತಲಿಹುದುಎಳೆಯ ಶ್ರೀ ತುಳಸಿಯ ವನಮಾಲೆಗಳುಗಳದಲಿ ಶೋಭಿಪುದುಅರಳು ಮಲ್ಲಿಗೆ ಪುಷ್ಪದ ಹಾರಗಳುಮುತ್ತಿನ ಪದಕಗಳುಕೊರಳೊಳು ಮುತ್ತಿನ ಸರಗಳಿಂದೊಪ್ಪುತಮುರುಳಿಯ ನೂದುತ ಸರಸರ ಬಾರೆಂದು 1ಗುರುಳು ಕೂದಲೊಳೊಪ್ಪುವ ಅರಳೆಲೆಯುಸೊಗಸಿನ ನವಿಲ್ಗರಿಯುಬಿಗಿದು ಸುತ್ತಿದ ಸಿರದಲಿ ಕೇಶಗಳುಅತಿ ಶೋಭಿಸುತಿಹವುಚದುರಿದ ಕೇಶದಿ ಕೆಂದೂಳಿಗಳುಮಧುವೈರಿಯ ಕೇಳುವಿಧವಿಧ ರಾಗದಿ ಪಾಡುತ ನಿನ್ನನುಸದನದಿ ಪೂಜಿಸಿ ನೋಡುವೆ ಬಾರೆಂದು 2ನೊಸಲಲ್ಲಿ ಕುಡಿನಾಮವನಿಟ್ಟಿಹಳುನೋಡುತ ಹಿಗ್ಗುವಳುಎಸಳು ಕಣ್ಣಿಗೆ ಕಪ್ಪನೆ ತೀಡುವಳುಬಣ್ಣಿಸಿ ಕರೆಯುವಳುಎಸೆವೊ ಕರ್ಣಕೆ ನೀಲದ ಬಾವುಲಿಯೂರತ್ನದ ಚೌಕಳಿಯುಬಿಸುಜನಾಭ ನಿನ್ನ ಶಶಿಮುಖಿಯರುಗಳುರಸಕಸಿ ಮಾಳ್ಪರು ಹಸನಾಗಿ ಕೂಡೆಂದು 3ಅರಳುಕೆಂದಾವರೆ ಪೋಲುವಚರಣಸ್ಮರಿಸುವರಘಹರಣಸುರರುಕಿನ್ನರರೋಲೈಸುವಚರಣವರಸುಗುಣಾಭರಣಘಲುಘಲುಘಲುರೆಂದೊಪ್ಪುವಚರಣಸಜ್ಜನರಾಭರಣಅಡಿಯಿಡುತಲಿ ಬಾ ಮೃಡಸಖ ನಿನ್ನಯಅಡಿಗೆರಗುವರೈ ತಡೆಯದೆ ಬಾರೆಂದು 4ವರಹಸ್ತದಿ ಬೆಣ್ಣೆಯ ಮುದ್ದೆಯ ಕೊಡುವೆಬಾರೆನ್ನಯ ದೊರೆಯೆಜರದೊಲ್ಲಿಯ ಮುರಳಿಸಹಿತ ನಡುವಿಗೆ ಕಟ್ಟುವೆನುಬಾ ಭಕುತರ ಪೊರೆಯೆಉಗುರಿಂದ ಗಿರಿಯನು ಎತ್ತಿದ ಧಣಿಯೆಸುರಚಿಂತಾಮಣಿಯೆಹಗಲು ಇರಳು ನಿನ್ನಗಲಿರಲಾರೆ ಶ್ರೀ-ಕಮಲನಾಭವಿಠ್ಠಲ ಬೇಗಬಾರೆಂದು 5
--------------
ನಿಡಗುರುಕಿ ಜೀವೂಬಾಯಿ
ಎಷ್ಟು ಸುಖಿಗಳೊ ಗೋವು ಗೊಲ್ಲತಿ ಗೋಪರು ಶ್ರೀಕೃಷ್ಣನೊಡನೆ ಹಗಲಿರುಳು ಕ್ರೀಡೆಯಲಿ ಕಾಲವ ಕಳೆವರು ಪ.ಕೋಹೋ ಕೋಹೋ ತೃವ್ವೆ ತೃವ್ವೆ ಅಂಬೆ ಅಂಬೆ ಬಾರೆ ಎಂದುಮೋಹದಿಂದ ಕರೆಸಿಕೊಂಡು ಓಡಿ ಓಡಿ ಬಂದುಶ್ರೀಹರಿಯ ಹೆಗಲ ಮೇಲೆ ಗಳಗಳಿಟ್ಟುಕದಪುಕಂಠಲೇಹಿಸಿ ಮೊಗದಿರುದಿರುಹಿ ಸಿರಿನಖದಿಂ ತುರಿಸಿಕೊಂಬರು 1ತುಡುಗನೆಂದು ತುಡುವಿಡಿದು ಅಡಿಗಡಿಗೆ ಅಪ್ಪಿ ಚುಂಬಿಸಿಪಿಡಿಪಿಡಿದು ಗೋಪಿಯಡಿಗೆ ಒಪ್ಪಿಸಿ ಒಪ್ಪಿಸಿಮಡದೆರೆಲ್ಲ ಮಧುವೈರಿಯ ಸಂಗ ಸೊಬಗಿಲೋಲಾಡುತಲಿಒಡನೊಡನೆ ಗೋಪಾಲ ಮೂರುತಿಯ ಕಣ್ಣುಮನದಲಿಟ್ಟು ಸುಖಿಪರು 2ಸಣ್ಣವರಾಡಲೊಲ್ಲೆನೆನಲು ಗದ್ದವಿಡಿದು ಮುದ್ದಿಸಿ ನಮ್ಮಣ್ಣ ತಮ್ಮಗಳಿರಾ ಗೆಳೆಯರಿರಾ ಬನ್ನಿರೆಂದುಅಣ್ಣೆಕಲ್ಲೊಡ್ಡಿ ಗಜಗವಾಡಿ ಸೋಲಿಸಿಕೊಂಡಳುವಚಿಣ್ಣರ ಮನ್ನಿಪ ಪ್ರಸನ್ವೆಂಕಟೇಶನ ಉಣ್ಣುವೆಂಜಲಸೆಳೆದುಂಬುವರು 3
--------------
ಪ್ರಸನ್ನವೆಂಕಟದಾಸರು
ಏಳಿ ಮೊಸರ ಕಡೆಯಿರೇಳಿ-ಗೋ-|ಪಾಲ ಚೂಡಾಮಣಿ ಏಳದ ಮುನ್ನ ಪಇಂದುಮುಖಿಯರೆದ್ದು ಮುಖವನೆ ತೊಳೆದು ಶ್ರೀ-|ಗಂಧ-ಕಸ್ತೂರಿ-ಕುಂಕುಮಗಳಿಟ್ಟು ||ಚಂದ್ರಗಾವಿಯ ಸೀರೆಯ ನೀರಿವಿಟ್ಟು ಮು-|ಕುಂದನ ಪಾಡುತ ಚದುರೆಯರೆಲ್ಲ 1ಹೊಂಗೊಡ ಬೆಳಗಿಟ್ಟು ಪೊಸಮೊಸರನೆತುಂಬಿ|ರಂಗನೀಲದ ಕಡೆಗೋಲನಿಟ್ಟು ||ಶೃಂಗಾರವಾದ ರೇಶಿಮೆಯ ನೇಣನೆ ಹಿಡಿದು |ರಂಗನ ಪಾಡುತ ಚದುರೆಯರೆಲ್ಲ 2ಬಡನಡು ಬಳುಕುತ ಕುಚಗಳಲ್ಲಾಡುತ |ಕಡಗ-ಕಂಕಣ ಝಣಝಣರೆನ್ನುತ ||ಮುಡಿದ ಮಲ್ಲಿಗೆ ಹೂವು ಎಡಬಲಕುದುರೆ ಪಾ-|ಲ್ಗಡಲೊಡೆಯನ ಪಾಡುತ ಚದುರೆಯರು 3ಹುಸಿನಿದ್ದೆಯಲಿ ಶ್ರೀಕೃಷ್ಣನು ಮಲಗಿರೆ |ಹಸಿದು ಆಕಳಿಸಿ ಬಾಯಾರುತಲಿ ||ಮುಸುಕಿನೊಳಿದ್ದು ಬೆಣ್ಣೆಯ ಬೇಡುತಲಿರೆ |ಶಶಿವದನನಿಗೆ ಬೆಣ್ಣೆಯ ನೀಡಲೋಸುಗ 4ಏಣಾಂಕಮುಖಿಯರು ಹೊಸ ಬೆಣ್ಣೆಯನು ತೆಗೆದು |ಪ್ರಾಣಪದಕ ಕೃಷ್ಣನಿಗೆ ಕೊಡಲು ||ಚಾಣೂರ ಮಲ್ಲನ ಗೆಲಿದು ಬಾರೆನುತಲಿ ||ಜಾಣ ಪುರಂದರವಿಠಲನಪ್ಪಲುಗೋಪಿ5ದೃಷ್ಟಿಯು ತಾಗೀತೆಂದಿಟ್ಟು ಅಂಗಾರವ |ತಟ್ಟೆಯೊಳಾರತಿಗಳ ಬೆಳಗಿ ||ಥಟ್ಟನೆ ಉಪ್ಪು-ಬೇವುಗಳನಿವಾಳಿಸಿ|ತೊಟ್ಟಿಲೊಳಿಟ್ಟು ಮುದ್ದಾಡುವಳೊ 6ನಮ್ಮಪ್ಪ ರಂಗಯ್ಯ ಅಳಬೇಡವೊ ದೊಡ್ಡ |ಗುಮ್ಮ ಬಂದಿದೆ ಸುಮ್ಮನಿರು ಎನುತ ||ಅಮ್ಮಿಯನೀಯುತ ಅಮರರನಾಳ್ದನ |ರಮ್ಮಿಸಿ ರಮ್ಮಿಸಿ ಮುದ್ದಾಡುವಳೊ 7ಏಸೊ ಬೊಮ್ಮಾಂಡವ ರೋಮದೊಳಿರಿಸಿದ |ವಾಸುದೇವನನೆತ್ತಿ ಕೊಂಬುವಳೊ ||ನಾಶರಹಿತನಾಯುಷ್ಯ ಹೆಚ್ಚಲೆಂದು |ರಾಶಿದೈವಕೆ ತಾ ಬೇಡಿಕೊಂಬುವಳೊ 8ಮಾಧವಬಾ ಮದುಸೂದನ ಬಾ ಬ್ರ-|ಹ್ಮಾದಿವಂದಿತಹರಿಬಾ ಯೆನುತ ||ಆದಿ ಮೂರುತಿ ಶ್ರೀ ಪುರಂದರವಿಠಲನ |ಆದರದಲಿ ಮುದ್ದಾಡುವಳೊ 9
--------------
ಪುರಂದರದಾಸರು
ಕೊಡು ಕಂಡೆಯಾ ಹರಿಯೆ-ನಿನ್ನ ನಾಮ-|ಕೊಡು ಕಂಡೆಯಾ ಹರಿಯೆ ಪಬಡವ ನಾನೆಂದು ಕಾಡಲಿಲ್ಲ ಹರಿಯೆ ಅ.ಪಒಡಲುತುಂಬದು ಎಂದು ಬಳಲಿಸೆ ಬರಲಿಲ್ಲ |ಸಡಗರದಿಂ ಭಾಗ್ಯ ಬೇಡಲಿಲ್ಲ ||ಮಡದಿ-ಮಕ್ಕಳಿಗಾಗಿ ಕಡು ಮೋಹವೆನಗಿಲ್ಲ |ಬಿಡದೆ ನಾಮಸ್ಮರಣೆ ಕೊಡು ಒಂದೇ ಸಾಕೊ 1ಸ್ನಾನ-ಮೌನ ಜಪ-ತಪಗಳು ಎನಗಿಲ್ಲ |ನಾನಾಯೋನಿಗಳಲ್ಲಿ ಬಳಲಿ ಬಂದೆ ||ದೀನರಕ್ಷಕ ನೀನೆ ದಯದಿಂದಲೆನಗಿನ್ನು |ಧ್ಯಾನಸುಧೆಯನಿತ್ತು ಸಲಹಯ್ಯ ಹರಿಯೆ 2ಬಲೆಗೆ ಸಿಲುಕಿದ ಮೃಗದಂತೆ ಬಾಯ್ಬಿಡುತಲಿ |ಅಲಸಿ ಕೋಟಲೆಯ ಸಂಸಾರದಿಂದ |ತಲೆಹುಳಿತ ನಾಯಂತೆ ಬಯಲಾಸೆಗೆ ಸಿಲುಕಿದೆ |ಸಲಹೊ ದೇವರ ದೇವಪುರಂದರವಿಠಲ3
--------------
ಪುರಂದರದಾಸರು
ಗುಮ್ಮನೆಲ್ಲಿಹ ತೋರಮ್ಮ-ನಮ್ಮಮ್ಮ-|ಸುಮ್ಮನಂಜಿಸಬೇಡಮ್ಮ ಪಪಂಚಾಶತ್ಕೋಟಿ ವಿಸ್ತೀರ್ಣದ ಭೂಮಿಯ |ವಂಚನೆಯಿಲ್ಲದೆ ತಿರುಗಿ ಬಂದೆನೆ ನಾನು ||ಹಂಚಿಸಿಕೊಟ್ಟೆನೆ ಅವರವರಿಗೆ ನಾ |ಅಂತು ನೋಡಿದರೂ ಕಾಣೆನೆ ಗುಮ್ಮನ 1ಈರೇಳು ಲೋಕವನುದರದೊಳಗೆ ಇಟ್ಟು |ತೋರಿದೆ ಬ್ರಹ್ಮಾಂಡ ಬಾಯೊಳಗೆ ||ಘೋರರೂಪದಿ ಬಂದ ಗಾಳಿಯ ಸುರನ ಕೊಂದೆ |ಅಲ್ಲಿ ನೋಡಿದರೂ ಕಾಣೆನೆ ಗುಮ್ಮನ 2ಕಾಳಿಯ ಮಡು ಧುಮುಕಿ ಕಾಳಿಂಗನ ಹೆಡೆ ತುಳಿದು |ಮೇಲೆ ನಾಟ್ಯಂಗಳ ನಾನಾಡುತಲಿದ್ದೆ ||ಓಲೆಯ ಭಾಗ್ಯವನಿತ್ತೆ ನಾಗಪತ್ನಿಯರಿಗೆ |ಅಲ್ಲಿ ನೋಡಿದರೂ ಕಾಣೆನೆ ಗುಮ್ಮನ 3ಅಕ್ರೂರನಿಗೆ ವಿಶ್ವರೂಪವ ತೋರಿದೆ |ಘಕ್ಕನೆ ರಥವೇರಿ ಮಥುರೆಗೆ ಪೋದೆ ||ಸೊಕ್ಕಿದ ರಜಕನ ಕೊಂದು ಮಡಿಯನುಟ್ಟೆ |ಹೊಕ್ಕು ನೋಡಿದರೂ ಕಾಣೆನೆ ಗುಮ್ಮನ 4ಬಿಲ್ಲು ಹಬ್ಬಕೆ ಹೋಗಿ ಮಲ್ಲರ ಮಡುಹಿದೆ |ಅಲ್ಲಿ ಮಾವನ ಕೊಂದು ಮುತ್ತಯ್ಯಗೊಲಿದೆ ||ಚೆಲ್ವಗೋಪಾಲ ಶ್ರೀ ಪುರಂದರವಿಠಲನ |ಸೊಲ್ಲು-ಸೊಲ್ಲಿಗೆ ನೀ ಬೆದರಿಸಬೇಡಮ್ಮ 5
--------------
ಪುರಂದರದಾಸರು
ಗೋಕುಲದೊಳಗಿರಲಾರೆವಮ್ಮ-ಗೋಪಮ್ಮ ಕೇಳೆ |ಗೋಕುಲದೊಳಗಿರಲಾರೆವಮ್ಮ ಪಸಾಕು ಸಾಕು ನಮಗೇಕೆ ರಚ್ಚೆಗಳು |ಆ ಕೃಷ್ಣನಪರಿನೀ ಕೇಳಮ್ಮಅ.ಪಹಾಲು-ಮೊಸರು ಕದ್ದರೆ ಕಳಲಿ-ಗೋಪಮ್ಮ ಕೇಳೆ |ಮೇಲಿಟ್ಟ ಬೆಣ್ಣೆ ಮೆದ್ದರೆ ಮೆಲಲಿ-ಗೋಪಮ್ಮ ಕೇಳೀ ||ರೇಳು ಭುವನದೊಳಾಡುತಲಿರಲಿ |ಆಲದೆಲೆಯ ನಮ್ಮಾಲಯವನೆ ಪೊಕ್ಕು-|ಬಾಲೆಯರೆಲ್ಲರ ಬತ್ತಲೆ ಮಾಡಿ ||ಶಾಲೆಗಳೆಲ್ಲ ಮೇಲಕೆ ಹಾರಿಸಿ |ಆಲಂಗಿಸಿಕೊಂಡು ಬರುವನಮ್ಮ 1ತಾನಾಗಿ ಮನೆಗೆ ಬಂದರೆ ಬರಲಿ-ಬಾಹೊ ವೇಳೆಯಲಿ |ಅಣುಗರ ಕೂಡಿಕೊಂಡು ಬರಲಿ-ಕರೆತಂದರೆ ತರಲಿ |ಅನುಬಂಧನಾಗಿ ಇದ್ದರೆ ಇರಲಿ ||ಅನುವು ಕಂಡುಕೊಂಡಾವೇಳೆಯಲಿ |ಉಣಬಿಟ್ಟಾಕಳ ಕರುಗಳನುಣಿಸಿ ||ಮನೆಯವರೆಲ್ಲರನೆಬ್ಬಿಸಿ ತಾನೇ |ಮನೆಯೆಲ್ಲವ ಸೂರಾಡಿದನಮ್ಮ 2ಬಾರಿಬಾರಿಗೆ ಮುನಿದ ಕಳ್ಳ-ಪತಿಯಂತೆ ತಾನು |ನೂರಾರು ಹೆಣ್ಣ ಕೂಡಿದನಲ್ಲ-ಗೋಪಮ್ಮ ಕೇಳೆ |ಯಾರ ಮುಂದೆ ಹೇಳಲಿ ಸೊಲ್ಲ? ||ಓರಗೆಯಲಿ ಸಂಸಾರ ಮಾಡುವ |ನಾರಿಯರೆಲ್ಲರ ರಂಬಿಸಿಕರೆದು ವಿ-|ಕಾರ ಮಾಡದಂತೆ ಪುರಂದರವಿಠಲಗೆ |ಸಾರಿಸಾರಿ ನೀ ಬುದ್ಧಿ ಹೇಳಮ್ಮ 3
--------------
ಪುರಂದರದಾಸರು
ಚಿತ್ರ ವಿಚಿತ್ರವುಹರಿವ್ಯಾಪಾರಚಿತ್ತದಿ ಚಿಂತಿಪರಿಗೆ ಪಸತ್ಯಭಾಮೆಯ ರಮಣನ ಕ್ರಿಯೆಗಳುಉತ್ತಮ ಋಷಿವರರರಿಯರೆನಲು ಬಹು ಅ.ಪಮಿತ್ರೆ ರುಕ್ಮಿಣಿ ಕೂಡುತಹರಿಇರಲು ಪಾರಿಜಾತದ ಹೂಮತ್ತೆ ಮಾಧವಗೀಯಲು ನಾರದರು ಕೌತುಕವನೆ ಕೇಳುತಸತ್ಯಭಾಮೆಯು ಕೋಪವ ತಾಳುತಲಿ ಶಚಿಪತಿಯೊಳು ಕಲಹಉತ್ತಮ ಶ್ರೀಹರಿ ಸಮರದಿ ಸೋಲಲುಮತ್ತೆ ಇಂದ್ರ ಜಯಭೇರಿಯ ಹೊಡಿಸಲುಸತ್ಯಭಾಮೆ ಸಮರದಿ ಗೆಲ್ಲುತ ಪುಷ್ಪವೃಕ್ಷಸಹಿತ ದ್ವಾರಕಿಗೈತರೆ ಬಹು 1ದುರುಳದೈತ್ಯರು ಕೂಡುತ ಗುಂಪಾಗಿ ಶ್ರೀಹರಿಯನು ಪಿಡಿಯಲುಭರದಿಂದೋಡುತ ಬರುತಿರಲದ ನೋಡಿ ಶ್ರೀಹರಿ ತಾ ತಿಳಿದುತ್ವರದಿಂದೋಡುತ ಬರುತಲಿ ಗುಹೆ ಸೇರಿ ಮುಚುಕುಂದರಾಯನಿಗೆಜರದವಲ್ಲಿ ಹೊದಿಸುತ ಮಾಯವಾಗಲುಖಳರು ಬಂದೊದ್ದರು ಮಚುಕುಂದಗೆತೆರೆದು ಕಣ್ಣ ನೋಡಲು ಖಳರೆಲ್ಲರುಉರಿದು ಭಸ್ಮವಾದರು ಕೇಳಿರಿ ಬಹು 2ಮತ್ತೊಮ್ಮೆ ಖಳರೆಲ್ಲರು ಸೇರುತಲಿ ಸತ್ಯೇಶನ ಪಿಡಿಯಲುಸುತ್ತಮುತ್ತ ಚೀರುತ ಬರುತಿರಲು ಹರಿಬೆದರಿದಪರಿಮತ್ತೋಡೂತ ಹಿಂದಕೆ ನೋಡುತ ಓಡುತಲಿ ಪರ್ವತವನೆ ಏರಲುಸುತ್ತಲು ನಿಂತರು ಖಳರೆಲ್ಲರುಹರಿಒತ್ತಿ ತುಳಿಯೆ ಪರ್ವತ ಕುಸಿಯಲು ಜಲಎತ್ತಿ ಮುಖಕೆರಚಲು ಖಳರೋಡಲುಮೆತ್ತನಿಳಿದುದ್ವಾರಕಿ ಸೇರಿದ ಬಹು 3ಚಕ್ರವ್ಯೂಹದಿ ಸಿಕ್ಕಿದ ಅಭಿಮನ್ಯು ಷಡುರಥದೊಳು ಕಾದಿದಿಕ್ಕು ದಿಕ್ಕಿಲಿ ಬಾಣದ ಮಳೆಸುರಿಸಿ ರಥಿಕ ಮಹರಥರÉೂಳುಉಕ್ಕಿ ಬರುತಿಹ ರೋಷದಿ ಹೊಯ್ದಾಡಿ ದುರುಳರ ವಶವಾಗಲುಅಕ್ಕರದಲಿ ದೇವಕಿತನಯ ತನ್ನಮಿತ್ರನ ಸುತನ ವಿಯೋಗ ದು:ಖದತಕ್ಕ ಉಪಾಯದಿ ಪರಿಹರಿಸಲು ಸಾ-ಮಥ್ರ್ಯನಾಗಿರಲು ನರನಂತೆ ನಟಿಸಿದ 4ಹತ್ತು ಹನ್ನೊಂದನೆ ಸಲ ಸಮರದಲಿ ಸರ್ವೇಶನ ಜಯಿಸಲುದೈತ್ಯದಾನವಜರೆಸುತ ಬರುತಿರಲು ಶ್ರೀಹರಿತಾ ತಿಳಿದುಉತ್ತಮ ದ್ವಾರಕಾಪುರ ರಚಿಸುತಲಿ ಜಲಮಧ್ಯದೊಳಿರಲುಪಟ್ಟದರಿಸಿ ಅಷ್ಟ ಸತಿಯರು ಸೌಳಸಾಸಿರ ಸತಿಯರ ಕೂಡುವ ಹರುಷದಿಕರ್ತೃಕಮಲನಾಭ ವಿಠ್ಠಲ ಭಕುತರಇಚ್ಛಿಸಲಿಸಲೀಪರಿ ನಟಿಸಿದ ಬಹು 5
--------------
ನಿಡಗುರುಕಿ ಜೀವೂಬಾಯಿ
ಚೆಂಡನಾಡುತ ಬಂದ ಪುಂಡ ಕೃಷ್ಣನು ತನ್ನ |ಹಿಂಡುಗೋಪಾಲಕರ ಕೊಂಡು ಯಮುನೆಯ ತಡಿಗೆಪಓರೆ ತುರುಬನೆಕಟ್ಟಿಗೀರುನಾಮವನಿಟ್ಟು |ಹಾರ ಕಂಕಣ ತೋಳಬಂದಿ ಘುಂಗುರ ಘನ-|ಸಾರಕುಂಕುಮ ಕೇಸರಿಗಂಧ ಕೂಡಿಸಿ |ಸೇರಿಸುತ ನಡುವಿಗೆ ಕಾಸಿದಟ್ಟಿಯನುಟ್ಟು |ಹಾರಾಡುತಲಿ ಬಂದ-ತೊಡರಗಾಲ |ತೋರ ಚಿನ್ಮಣಿಗಳಿಂದ. ಮುತ್ತಿನ ಚೆಂಡು |ಧಾರಿಣಿಗೆ ಪುಟಿಸಿ ನಿಂದ-ವಜ್ರದಖಣಿ|ತೋರಿ ಗೆಳೆಯರ ಕೂಡ ಬಂದರಾ ಮನೆಯಿಂದ 1ಕೊಂಡಾಲ ತಿಮ್ಮನು ಚೆಂಡನೆ ಹೊಡೆದನು |ಮಿಂಡೆಯರ ಮೊಲೆಗಾಗಿ ಹಾರಿಹರಿದು ಬೀಳೆ |ಹಿಂಡುನಾರಿಯರೆಲ್ಲ ಸುತ್ತಿಕೊಂಡಿರೆಅವರ|ಮುಂಡೆಗೆ ತಗುಲಿಸಿ ಪುರದ ಬಾಗಿಲ ಬಿಟ್ಟು |ಕಿಂಡಿಯಿಂದಲಿ ಬಂದನು-ನಾರಿಯರ |ಮಂಡೆಗೆ ಚೆಂಡಿಟ್ಟನು-ತೋರಿಸುವರ |ಕಂಡು ತಾ ನಗುತಿದ್ದನು-ಕೌತುಕವೆಂದು |ದಿಂಡೆಯರುಮಡುವಿನೊಳಗೆ ಹಾಕಿ ನಡೆದರು2ಗೆಳೆಯರೆಲ್ಲರು ಕೂಡಿ ಚೆಂಡು ತಾ ಎನಲಾಗಿ |ಗುಳುಗುಳಿಸುವ ವಿಷದ ಯಮುನಾ ತಡಿಯಲಿನಿಂದು|ಬಳಿಯ ವೃಕ್ಷದ ಮೇಲೇರಿ ತಾ ಧುಮುಕಲು |ಕಳಕಳಿಸುವ ಗೋಪಾಲರಳುತಿರೆ |ಇಳಿದ ನೀರೊಳಗಾಗಲು-ನಾಗರಫಣಿ|ತುಳಿದು ಕುಣಿಕುಣಿಯುತಿರಲು-ಬ್ರಹ್ಮನು ಬಂದು |ತಿಳಿದು ಮದ್ದಲೆ ಹೊಯ್ಯಲು-ಇಂದ್ರಾದ್ಯರು |ನಲಿದು ತಾಳವನಿಟ್ಟು ಕೊಂಡಾಡುತಿದ್ದರು 3ಮಗನ ಸುದ್ದಿಯಕೇಳಿಹರಿದು ಬಂದಳುಗೋಪಿ|ನಗರದ ಹೊರಗಾಗಿ ಬಾಯ ನಾದದಿಂದ |ವಿಗಡೆಯರು ಬಿಟ್ಟ ಮಂಡೆಯ ಜುಂಜು ಕೆದರುತ |ತೆಗೆದು ಮಣ್ಣನೆ ತೂರಿ ಕುಳಿತಲ್ಲಿಂದಲೆ ನಮ್ಮ-|ನ್ನಗಲಿ ಹೋಗುವರೆ ಹೀಗೆ-ರಂಗ ನಮ್ಮ |ಮೊಗವ ನೋಡುವುದೆಂದಿಗೆ-ನೋಡಿದ ಕಣ್ಣ |ತೆಗೆದು ಕೀಳುವೆನಿಂದಿಗೆ-ಪಡೆದ ಪೊಟ್ಟೆ |ದಗದಗಿಸಲು ಕೊಟ್ಟು ಮುನಿಯದೆ ಬಾ ಬೇಗ 4ಏನನೆಂಬೆನು ಕೃಷ್ಣ ನಿನ್ನ ಕಾಣದೆ ಪುರದ |ಮಾನಿನಿಯರು ಬೆರಗಾಗಿ ಬೀಳುತ ಕರುವ |ಕಾಣದಿರೆತ್ತಿಗೆ ಕರುವನು ಬಿಡುವರು |ಆ ನಾಸಿಕದ ಮೂಗುತಿ ಕಿವಿಗಿಡುವರು |ಧೇನುಮೇವನೆ ತೊರೆದುವು-ಗೋವುಗಳನ್ಯ-|ರಾಮನೆಗೋಡಿದುವು-ವತ್ಯಗಳೆಲ್ಲ |ಮೌನದಿ ಮೊಲೆ ತೊರೆದುವು ಕೃಷ್ಣಯ್ಯನ |ವೇಣುನಾದದ ಧ್ವನಿ ಕೇಳದೆ ಮೆಚ್ಚವು 5ದ್ವಾರಕಿ ಕೃಷ್ಣ ನೀ ಬಾಯೆಂದು ಕರೆವೆನೊ |ತೋರುವ ಸಮಪಾದ ವಿಠಲನೆಂಬೆನೊ |ಶ್ರೀರಮಣ ವೆಂಕಟನೆಂದು ಒದರುವೆನೊ |ಶ್ರೀರಂಗಶಯನನೆಂದೆನಲ್ಲದೆ ನಿನ್ನ |ಚೋರ-ಜಾರನೆಂದೆನೆ-ಹದ್ದಿನ ಮೇಲೆ |ಏರಿ ತಿರುಗುವನೆಂದೆನೆ-ಬೆಣ್ಣೆಯ ಕದ್ದು |ಸೂರೆ ಮಾಡುವನೆಂದೆನೆ-ಕೃಷ್ಣಯ್ಯ ನೀ |ಬಾರಯ್ಯ ಬಾರದಿದ್ದರೆ ಪ್ರಾಣ ನೀಗುವೆ 6ಕಣ್ಣೆತ್ತಿ ನೋಡಿದನೆಂದೆನೆ ಕಡೆಗೋಲ |ಬೆನ್ನಲಿ ಪಿಡಿದನೆಂದೆನೆ ಹಲ್ಲಳನೂರಿ |ಮಣ್ಣ ಕಚ್ಚಲು ಬಾಯ ತೆರೆಯುವನೆಂದೆನೆ |ಮಣ್ಣ ಬೇಡಲು ನಾ ಕೊಡಲಾರೆನೆಂದೆನೆ |ಎನ್ನ ಕುತ್ತಿಗೆ ಕೊಯ್ವರೆ-ಮಾತೆಯ ಮಾತು |ಮನ್ನಿಸಿ ವನಕೆ ಪೋಪರೆ-ಬಲಭದ್ರ |ಅಣ್ಣನಿಗೆ ಮುಖವ ತೋರೆ-ಕೃಷ್ಣಯ್ಯ ನೀ |ಸಣ್ಣವನೆನ್ನದೆ ಹರಿಯ ಕೊಂಡಾಡಿದೆ 7ಎಂದ ಮಾತನು ಕೇಳುವಾ ಸಮಯ ನಾಗಿಣಿ-|ವೃಂದವೆಲ್ಲವು ತಮ್ಮ ಕಂಠಭೂಷಣರಾಗಿ |ಅಂದದ ಮೇಲುದ ಸುತ್ತಿಕೊಂಡಿರೆ ಅರ-|ವಿಂದನಾಭಾಚ್ಯತ ಕೇಶವಮುರಹರ|ಮಂದರಧರಹರಿಯೆ-ನಿನಗೆ ನಾವು |ಮಂದಾಕಿನಿಯ ಸರಿಯೆ-ಮಾಂಗಲ್ಯದ |ಚೆಂದ ಕಾಯೈ ದೊರೆಯೆ-ಹರಿಯ ಕೃಪೆ-|ಯಿಂದ ಕರೆದು ನಮ್ಮ ಕಾಯಬೇಕೆಂದರು 8ಇಂತಿಂತು ಸ್ತವನವ ಮಾಡೆ ಕಾಳಿಂಗನ |ಕಾಂತೆಯರ ಸ್ತೋತ್ರಕ್ಕೆ ಮೆಚ್ಚಿ ನಾಗನ ಬಿಟ್ಟು |ಕಂತುಕ ಸಹಿತ ಪಂಕಜನಾಳವನೆ ಕೊಂಡು |ಸಂತಸದಲಿ ಇಕ್ಕುತ-ಶೋಕದಿ ನೀವು |ಭ್ರಾಂತಿ ಬಿಡಿರಿ ಎನ್ನುತ-ಬರಿದೆ ಎಲ್ಲ |ಸಂತೆ ಕೂಡಿದೆ ಎನ್ನುತ-ನಾ ಹಸಿದೆನು |ಪಂತಿಭೋಜನ ಕೊಂಡು ನಡೆಯಿರಿ ಮನೆಗೆಂದ 9ಸುರರಿಗೆಸುಧೆಮುಂಚೆ ಉಣಿಸಿದ ಪರಬ್ರಹ್ಮ |ಪರಿಪರಿ ಭೋಜನ ಮಾಳ್ಪ ಕಂಡುವರಾರು? |ಸುರದುಂದುಭಿ ಪೊಡೆದು ಪಾರಿಜಾತದ ಮಳೆ |ಸುರಿಸಿದರಾಕ್ಷಣಕೆ-ಬ್ರಹ್ಮನು ತಾನು |ತೆರಳಿದನಾಶ್ರಮಕೆ-ಪುರಂದರವಿಠಲ |ತಿರುಗಿದ ನಿಜಧಾಮಕೆ-ಕೃಷ್ಣನ ಲೀಲೆ |ಗುರುದಯೆಯಲಿ ನಮ್ಮ ಹರಿಯ ಕೊಂಡಾಡಿದೆ 10
--------------
ಪುರಂದರದಾಸರು
ಜೋ ಜೋ ಯಶೋದೆಯ ನಂದ ಮುಕುಂದನೆಜೋ ಜೋ ಕಂಸಕುಠಾರಿ ಪ.ಜೋ ಜೋ ಮುನಿಗಳ ಹೃದಯಾನಂದನೆಜೋ ಜೋ ಲಕುಮಿಯ ರಮಣ ಅಪಹೊಕ್ಕುಳ ಹೂವಿನ ತಾವರೆಗಣ್ಣಿನಇಕ್ಕಿದಮಕರ ಕುಂಡಲದಜಕ್ಕುಳಿಸುವ ಕದಪಿನ ಸುಳಿಗುರುಳಿನಚಿಕ್ಕ ಬಾಯ ಮುದ್ದು ಮೊಗದ ||ಸೊಕ್ಕಿದ ಮದಕರಿಯಂದದಿ ನೊಸಲೊಳಗಿಕ್ಕಿದ ಕಸ್ತೂರಿ ತಿಲಕ |ರಕ್ಕಸರೆದೆದಲ್ಲಣ ಮುರವೈರಿಯೆಮಕ್ಕಳ ಮಾಣಿಕ್ಯ ಜೋ ಜೋ 1ಕಣ್ಣ ಬೆಳಗು ಪಸರಿಸುತಿರೆಗೋಪಿಅರೆಗಣ್ಣ ಮುಚ್ಚಿ ನೋಡಿ ನಗುತ |ಸಣ್ಣ ಬೆರಳುಗಳ ಬಾಯೊಳಗಳವಡಿಸಿಪನ್ನಗಶಯನ ತೊಟ್ಟಿಲಲಿ ||ನಿನ್ನ ಮಗನ ಮುದ್ದನೋಡು ಎಂದೆನುತಲಿತನ್ನ ಪತಿಗೆ ತೋರಿದಳು |ಹೊನ್ನ ಬಣ್ಣದ ಸೊಬಗಿನ ಖಣಿಯೆ ಹೊಸರನ್ನದ ಬೊಂಬೆಯೆ ಜೋ ಜೋ 2ನಿಡು ತೋಳ್ಗಳ ಪಸರಿಸುತಿರೆ ಗೋಪಿಯತೊಡೆಯ ಮೇಲ್ಮಲಗಿ ಬಾಯ್ದೆರೆಯೆ |ಒಡಲೊಳಗೀರೇಳು ಭುವನವಿರಲು ಕಂಡುನಡುಗಿ ಕಂಗಳನು ಮುಚ್ಚಿದಳು ||ಸಡಗರಿಸುತ ತಾನರಿಯದಂತೆಯೆಹೊಡೆ ಮರುಳಿ ಮೊಗವ ನೋಡುತಲಿಕಡಲಶಯನ ಮೊಗವ ನೋಡುತಲಿಕಡಲಶಯನ ಶ್ರೀ ಪುರಂದರವಿಠಲನುಬಿಡದೆ ನಮ್ಮೆಲ್ಲರ ರಕ್ಷಿಸುವ 3
--------------
ಪುರಂದರದಾಸರು