ಒಟ್ಟು 2688 ಕಡೆಗಳಲ್ಲಿ , 114 ದಾಸರು , 2023 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಂದರಿಂ ಸುಖವಿಲ್ಲ ಹುಟ್ಟು ಮೊದಲು ಡಂಭ- ಪ ದಿಂದ ಭೈರೂಪ ತೊಟ್ಟು ತಿರುಗುತಿದೆಅ.ಪ ಬಟ್ಟೆ ಸಂಸಾರ ವಿಷಯ ಕೋಟಲೆಗೊಂಡುನಾಯ್ ಬಾಯ ಕೊಚೆಯಂತೆ ನಸಿಯುತಿದೆ ದೇಹ 1 ಬುದ್ಧಿ ದೃಢ ದುರ್ಮಾರ್ಗದಿಂದ ನೋಡದೆ ಹೋಯ್ತುಶುದ್ಧ ಸತ್ಕರ್ಮವಿಲ್ಲದೆ ಸೂರೆ ಹೋಯ್ತುದುರ್ದೆಸೆಯ ಪಥದ ಲಂಪಟ ಮಾಯಕೆ ಸಿಲುಕಿಮದ್ದಳೆಯ ಇಲಿಯಂತೆ ಆಯಿತೀ ದೇಹ 2 ಭೋಗ ಸಂಗವಮಾಡಿ ಪೋಗಲೈಸಿತು ದೇಹರಾಗಲೋಭವು ಹೆಚ್ಚಿ ವೈರಾಗ್ಯ ಹೊಯ್ತುಆಗಮವ ತಿಳಿಯದೆ ಕೃಷ್ಣನ್ನ ಧ್ಯಾನಿಸದೆಜೋಗಿ ಕೈ ಕೋಡಗನಂತೆ ತಿರುಗುತಿದೆ 3
--------------
ವ್ಯಾಸರಾಯರು
ಒಂದು ಕೊಟ್ಟರೆ ಶಿವ ಮತ್ತೊಂದು ಕೊಡನಯ್ಯ ಆನಂದ ವಸ್ತುವಿಗೊಂದು ಲೀಲೆ ಇದಯ್ಯ ಪ ರೊಕ್ಕವಿದ್ದವರಿಗೆ ಮಕ್ಕಳೆಂಬವರಿಲ್ಲ ಮಕ್ಕಳಿದ್ದರೆ ತಕ್ಕವನಿತೆಯಿಲ್ಲ ಚೊಕ್ಕಸತಿಯು ಸಿಕ್ಕಿತಾನುರೂಪದೊಳಿರೆ ಪಕ್ಕನೆ ಅಗಲಿ ಪೋಗುವರಯ್ಯ 1 ಚೆಲುವ ಹೆಣ್ಣೆಗೆ ತಕ್ಕ ಚೆಲುವ ಪುರುಷನಿಲ್ಲ ಚೆಲುವ ನಾದವ ಗೊಳ್ಳೆಲಲನೆಯಿಲ್ಲ ಹಲವು ಜನ್ಮದ ಪುಣ್ಯ ಫಲದಿಂದ ಸೇರಲು ಹೊಳೆದು ಹೋಗುವರಿದರೊಳಗೊಬ್ಬರಯ್ಯ 2 ಸತಿ ಸುತರು ಇರುತಿರಲು ದಾರಿದ್ರ ತಿಂಬುವುದಕಿಲ್ಲ ಗತಿಯಿಲ್ಲದವನಿಗೆ ನರಕವಿಲ್ಲ ಅತಿಶಯವಾಗಿ ತಿಂಬುದಕ್ಕಿದ್ದ ನರರಿಗೆ ಸತತ ಶಾರೀರ ಸುಖವಿಲ್ಲವಯ್ಯ 3 ಉಂಬಲೂಡಲು ಸರ್ವಸಕಲ ಸಂಪತ್ತೆಲ್ಲ ತುಂಬಿರಲು ತನ್ನ ಗೃಹದೊಳೆಲ್ಲ ಬೆಂಬಿಡದೆ ರೋಗವು ಪುಟ್ಟಿತನುವಿನೊಳ್ ತಿಂಬುದಕವಗೆ ಬಾಯಿಗಳಿಲ್ಲವಯ್ಯ 4 ಸಕಲ ಜೀವರಿಗು ಚಿಂತೆಗಳಿಲ್ಲದವರಿಲ್ಲ ಸುಖವು ಸ್ವಪ್ನದೊಳು ಕಾಣುವುದಿಲ್ಲವಯ್ಯ ಬಕನ ವೈರಿಯ ಕೋಣೆಯ ಲಕ್ಷ್ಮೀಪತಿ ಪ್ರಿಯ ಮಕರ ಕೇತನ ವೈರಿಯಾಟವಿದಯ್ಯ 5
--------------
ಕವಿ ಪರಮದೇವದಾಸರು
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಒಂದೇ ಬ್ರಹ್ಮವು ಮತ್ತೊಂದಿಲ್ಲವುಇದ್ದುದು ಬ್ರಹ್ಮವು ಒಂದೇಒಂದನು ಎರಡಾಗಿ ಮಾಡುವುದೆಂತೈಮಾಡಲು ಕೆಡುವನು ಮುಂದೆ 1 ಕನಕದಿಂದ ಒಡವೆ ಬಹಳಾಗಲು ಒಡವೆಗೆಲ್ಲಕನಕವೊಂದೇ ಘನ ಬ್ರಹ್ಮದಿಂದ ನಾನಾ ಜೀವವಾಗೆನಾನಾ ಜೀವಕೆ ಬ್ರಹ್ಮವೊಂದೇ2 ಲೋಹಗಳಿಂದಲಿ ಅನೇಕ ವಿಧವಿರೆಅನೇಕ ವಿಧಕೆ ಲೋಹವೊಂದೇಮಹಾಬ್ರಹ್ಮಾದಿ ಮಹತ್ತು ಅಣುವಿರೆಮಹತ್ತು ಅಣುವಿಗೆ ಬ್ರಹ್ಮವೊಂದೇ 3 ಬೀಜದಿಂದ ಬೀಜವನೇಕವಾಗಲುಅನೇಕ ಬೀಜಕೆ ಬೀಜವೊಂದೇತೇಜ ಚಿದಾನಂದ ಬ್ರಹ್ಮವು ಸರ್ವವುಆ ಸರ್ವಕೆ ಬ್ರಹ್ಮವು ತಾನೊಂದೆ 4
--------------
ಚಿದಾನಂದ ಅವಧೂತರು
ಒಂದೇ ಮತ ಹರಿಯ ಮತ ಒಂದೇ ಭಾವ ಸಿರಿಯರಸನ ಭಾವ ಸಲಹಿದ ನರಹರಿ ಒಂದೇ ಮನದಂಬರೀಷನ ಕಾಯ್ದ ಹರಿ ಒಂದೇ ಮನದಿ ಧ್ರುವನ ಕಾಯ್ದ ಹರಿ ಒಂದೇ ಗಳಿಗೆಯಲಿ ತನ್ನುಂಗುಟದಿ ಸೋಕಿಸೆ ಕಲ್ಲಾಗಿದ್ದಹಲ್ಲೆಯ ಪೆಣ್ ಮಾಡಿದ ತಂದೆಯಂದದಿ ಭಕ್ತರ ಹಿಂದೆ ಕಾದಿದ್ದು ಕರುಣಾಸಿಂಧು ಭಕ್ತರ ಬಂಧು ಸುಂದರಿ ಸಿಂಧುಸುತೆಯರಸನ ನಿತ್ಯ ನೆನಯಿರಿ ಹರಿ ಭಕ್ತರು 1 ಸಾರ ನಾಲ್ಕು ಯುಗದಾಧಾರ ನಾಲ್ಕು ಮುಖದಲಿ ನೆಲಸಿ ಸೃಷ್ಟಿಕಾರ್ಯವ ನಡೆಸಿ ನಾಲ್ಕು ಮುಖ ಬೊಮ್ಮನಲಿ ನಾನಿಲ್ಲವೆನಿಸಿ ನಾಲ್ಕು ಯುಗದಲಿ ಜನಿಸಿದ ರಕ್ಕಸರಿಗೆ ತಿಳಿಸಿ ನಾಲ್ಕು ಲೋಕದಿ ಮೆರೆದ ನಾಕಚಾರ ವಂದ್ಯ ನಾಲ್ಕು ಹಸ್ತದಿ ನಾಲ್ಕು ವೇದತಂದಾ ಮೂರ್ತಿ ನಾಲ್ಕು ವೇದದ ಸಾರದಮೃತ ಭಕ್ತರಿಗಿತ್ತು ಹದಿನಾಲ್ಕು ಲೋಕಕೆ ನಾನೇ ಕರ್ತನೆಂದರಿಸಿ ನಾಲ್ಕು ವಿಧದಲಿ ಕಾವ ಶ್ರೀ ಶ್ರೀನಿವಾಸನ ಭಕ್ತರಾದರೆ ಈ ಕಲಿಯುಗದಿ ನಾಲ್ಕು ಜನರು ಮೆಚ್ಚುವರು ನಿಮ್ಮ ಹರಿ ಭಕ್ತರೆ ಕೇಳಿ2 ನಿನ್ನ ಸಹವಾಸ ಸೈ ನಿನ್ನ ಒಡನಾಟ ಸೈ ನಿನ್ನ ರೂಪ ಚತುರ ಬುದ್ಧಿ ಎನ್ನ ಸೈ ಎನ್ನಲಾಪರೆ ನಿನ್ನ ಕೈ ಚಳಕವಿಲ್ಲದಲೆ ಜೈಸುವದೆಂತೀ ಕಲಿಕಾಲದಿ ಸ್ವಾಮಿ ಜೈಲುವಾಸದಿ ಕೂತು ನಿನ್ನ ಕಲ್ಯಾಣವ ಕಟ್ಟಿದರೊ ನಿನ್ನ ಭಕ್ತರು ಜೈ ಕರುಣಾಕರ ನಿನ್ನ ಭಕ್ತರ ಮಹಿಮೆ ನಾ ಪೊಗಳುವದೆಂತೊ ಜೈ ಎನಿಸಿಕೊಳ್ಳಲು ನಿನ್ನೊಲುಮೆ ಕಾರಣವಲ್ಲವೆ ಜೈವೆಂಕಟ ಶ್ರೀಶಾ ಶ್ರೀ ಶ್ರೀನಿವಾಸ ನಿನ್ನ ಭಕ್ತರಿಗೆ ಜಯ ಅಪಜಯವೆಲ್ಲಿ ನಿನ್ನ ಭಕ್ತರಿಗೆ ಎಂದೆಂದಿಗೂ ಜೈ ಹರಿಭಕ್ತರ ನೆನೆಯಿರಿ ಹರಿಭಕ್ತರು 3 ಯನ್ನ ಯತ್ನವೇನಿಲ್ಲಿದರೋಳು ಪನ್ನಗಾದ್ರಿ ನಿವಾಸನಲ್ಲದೇ ಯನ್ನ ಯತ್ನ ಸಲ್ಲುವುದೇ ಎನ್ನ ಮನಸಿಲಿ ಬಂದು ನಿಂದು ತಾನೇ ನುಡಿಸಿದನಿಂದು ಚೆನ್ನಗಿರಿಯರಸ ಭಕ್ತ ಜನ ಬಂಧು ಬಂದು ನಿಂದು ಎನ್ನ ಮನದಭಿಲಾಷೆ ಸಲಿಸೆ ದೀನ ವತ್ಸಲನು ಎನ್ನ ಕರದಲಿ ಬರೆಸಿ ನಲಿದಾಡಿದ ತನ್ನ ವಾಣಿಯನಿತ್ತು ಎನ್ನ ಕುಲದೈವ ಶ್ರೀ ಶ್ರೀನಿವಾಸನ ಕೃಪೆ ಎನ್ನ ಮೇಲೆಂತುಟೊ ಕಾಣೆ ಇನ್ನು ಈ ವಾಣಿ ಹರಿಯದೆಂದು ನುಡಿವುದು ಹರಿಭಗವದ್ಭಕ್ತರು 4 ಪಾಮರರಿಗೆ ಕಲ್ಪತರು ಪಾಮರರಿಗೆ ಜಗದ್ಗುರು ವರವ ತೋರಿ ಪಾಮರರ ಪುನೀತರನು ಮಾಡೆ ಹರಿ ಪಾಮರೆಂದು ಲೆಕ್ಕಿಸದೇ ತಾವಲಿದು ನುಡಿಸಿದ ಪತಿತ ಪಾವನ್ನ ಶ್ರೀ ಶ್ರೀನಿವಾಸನದೇ ಈ ಉಕ್ತಿಯಲ್ಲರ ನೃತ್ರವಿಲ್ಲೆಂದು ತಿಳಿದು ಪಾಮರರನ್ನುದ್ಧರಿಸಲು ಹರಿಭಕ್ತರು ಪಠಿಸುವುದು ಈ ನುಡಿಯ 5 ಜತೆ ಶರಣು ಭಕ್ತರ ಪಾಲ ಶರಣು ಶ್ರೀಲೋಲಾ ಶರಣು ನಿನಗೆ ಸದಾ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಒಬ್ಬಟ್ಟಿಗೆ ಮಂಗಳಜಯ ಮಂಗಳಂ ಶುಭೋದಯ ಮಂಗಳಂನಯ'ದರಿಗೊಪ್ಪಾದ ಒಬ್ಬಟ್ಟಿಗೆ ಪಐದು ದ್ರವ್ಯಂಗಳೊಡನೈದಿತೊ ಇಚ್ಛೆಯಲಿ ುೀ ಕೃತಿಯಾಗಿನಾದಿ ತೇಜೋಬ್ಧಿಯಲಿ ಸರ್ವಜನಕೆಐದಿಸುತ ಸುಖವ ಸಂಪಾದಿಸುತ ಗುರುವರನಪಾದಸ್ಮರಣೆಗೆ ಮತಿಯನೀಯುವುದಕೆ 1ಹರಿಸಮಾರಾಧನೆಯೊಳರಸಿ ನೋಡಿದರೆ ತಾನಿರದೆಡೆಯೊಳಿಲ್ಲ ಮಂಗಳವೆನಿಸುತಬೆರೆದಿರಲು ತಾನು ಸರ್ವರಿಗು ಹರುಷವನಿತ್ತುಪೊರೆದು ಚೆನ್ನಾುತೆನಿಸುವ ವಡವೆಗೆ 2ಮೆರೆದು ಚಿಕ್ಕನಾಗಪುರದಲಿ ತನ್ನ ಮ'ಮೆಯನುಗುರುವಾಸುದೇವ ಕೃಪೆಯನ್ನು ಪಡೆದುಪರಮ ಭಾಗವತ ಗಂಗಾಧರಯ್ಯನ ಹೊಣೆಯನಿರದೆ ಸಂಪಾದಿಸಿದ ಒಬ್ಬಟ್ಟಿಗೆ 3
--------------
ತಿಮ್ಮಪ್ಪದಾಸರು
ಒಬ್ಬನೆ ದಾಸ ಹುಟ್ಟಿದವನಿವ | ನೊಬ್ಬನೆದಾಸ ಪ ಸೂರಿ ತಾಯಿತಂದೆಗಳಿಂದಾಯಿತು ಅ.ಪ ನಾಲ್ಕು ವರ್ಷದವರೆವಿಗೂ ಮಾತಾಪಿತರು ಪಾಲನೆಗೈದರು ಬಳಿಕ ಕಾಲಾಧೀನವನೈದಿದರವರಾ ಮೇಲೆ ನಡೆದ ಕಥೆಯನು ಬಿನ್ನೈಸುವೆ 1 ದ್ವಾದಶ ವರುಷ ಪರಿಯಂತವು ಮಾತುಳನ ಗೃಹದಿ ಬೆಳೆದು ಪಾದವೂರದೆ ದೇಶವÀ ತಿರುಗುತ- ಲಾದುದು ಇಪ್ಪತ್ತುನಾಲ್ಕು ವರುಷವು 2 ಶ್ರೀರಮಣ ಗುರುದ್ವಾರದಲಿ ಇಪ್ಪತ್ತು ಮೂರನೆಯ ವರುಷದಲಿ ಸಾರವ ತಿಳುಹಿಸಿ ಅನುಗ್ರಹಿಸಿದನ- ಪಾರ ಸುಗುಣನಿಧಿ ಕೈಪಿಡಿದೆನ್ನನು 3 ಹರಿನಾಮಬಲದಿಂದಲಿಪ್ಪತ್ತೈದು ವರುಷದ ಮೊದಲು ಸುಕೃತದಿಂ ಹರಿಸೇವೆಗಳಿಂ ನೆರೆದ್ರವ್ಯಗಳಿಸಿ ನಲವತ್ತು ವರುಷವಾಯಿತು 4 ನಲವತ್ತೊಂದನೆ ವರ್ಷಮೊ- ದಲು ಬಲು ಜನಗಳ ಬೇಡಿ ಕಳೆದಿತು ಐವತ್ತಾರು ವರ್ಷಗಳು 5 ಮಧ್ವರಾಯರೆ ನಮ್ಮ ತಂದೆಯು ಮಧ್ವರಾಯರೆ ನಮಗೆ ಗುರು ಮಧ್ವರಾಯರೆ ಉದ್ಧಾರಕರ್ತರು ಪದ್ಮನಾಭಗತಿ ಪ್ರೀತ್ಯಾಸ್ಪದರು 6 ಬೆಂಡಾಗಿರುವುದು ಶರೀರ- ಧರ್ಮವು ಬೇರೊಬ್ಬರ ಕಾಣೆ ಉಂಡುಟ್ಟು ತೆಗೆಯುವ ವಿಷಯದಿ ಊರಿನವರ ದೂರುವುದಿನ್ಯಾಕೆ 7 ಹರಿನಾಮದ ಬಲದಿಂದ ಗಳಿಸಿದುದು ಹರಿಗೆ ಪ್ರೀತಿಯಾಯಿತು ಪರರು ವ್ಯರ್ಥವಾಗಸೂಯೆ ಪಟ್ಟರೆ ದುರಿತವ ಪ್ರಯೋಜನವು ಸತ್ಯವಿದು 8 ಏನು ಕೋರುವುದು ಸಾಕು ಸೀತಾಪತಿ ಗುರುರಾಮವಿಠ್ಠ- ಲನ ಸೀಮೆ ಈಗಲು ಮುಂದಕು ಇರಬೇಕು9
--------------
ಗುರುರಾಮವಿಠಲ
ಒಲಿದವಳ ಬಿಡುವುದು ಧರ್ಮವಲ್ಲ | ಚಲುವ ನಿನಗಾಗಿ ನಾ ಯೇಸು ಕಾಲಕೆ ತಪವಿದ್ದೆ ಪ ತಂದೆತಾಯಿಗಳಲ್ಲಿ ಪುಟ್ಟಿದಾಕ್ಷಣದಲ್ಲಿ | ಅಂದೆ ನೇಮಿಸಿದರು ಪೆಸರನಿಟ್ಟು | ಸಂದೇಹಗೊಳದಿರು ಮೈಲಿಗೆಯವಳೆಂದು | ಬಂದ ಪ್ರಾಣವÀ ನೋಡು ಬರಿದೆ ಪೇಳುವಳಲ್ಲ 1 ಕನ್ಯಾವಸ್ಥಿಯಲಿಂದ ನಿನ ನಿನ್ನ ಧ್ಯಾನವಲ್ಲವೇ | ಅನ್ಯಪುರುಷರಾಪೇಕ್ಷೆ ಮಾಡಲಿಲ್ಲ | ಅನ್ಯಾಯವೇನು ಆಗಲಿ ಪೋಗುವರೇನೊ | ಅನ್ಯಥಾ ಈ ನುಡಿಗೆ ನಿಜಕೆ ನಿಲ್ಲುವೆ ನಾನು 2 ಮಲದಲ್ಲಿ ಮೂರುದಿನ ಪೋಗಾಗಿ ಹೋಗಿದ್ದೆ | ಬಲು ಶುಚಿಯಾದೆನೊ ಶುದ್ಧ ಜಲದಿ | ಘಳಿಗೆ ಕಡೆದರೆ ಎನ್ನ ಪ್ರಾಣನಿಲ್ಲವೊ | ಎನ್ನನಗಲಿ ಮೈ ತಪ್ಪಿಸಿ | ದೂರ ಕರೆದೊಯ್ಯೊ ಕರುಣದಲಿ 3 ನಗೆಗೇಡಿ ಮಾಡದಿರು ಜಗದೊಳಗೆ ಇಪ್ಪವಳ | ಸೊಗಸಿಗನೆ ಸರಸವಾಡುವನೆ ಬಾರೊ | ಮಗುಳೆ ಮತ್ತೊಬ್ಬರು ಮೆಚ್ಚಿದರೆ ಇದೆ ಪಾಟು | ಮಗುಳೇನು ಹೊಸ ಪರಿಯು ತೋರುವುದು ನೋಡಿದರೆ 4 ಕಂಡ ಕಾಣದ ಹಾಗೆ ಮಾತನಾಡಿದಿರೆನ್ನ | ಅಂಡೊಲಿವ ಖ್ಯಾತಿ ಎಂದಿಗೆ ತೀರದೂ | ಕುಂಡಲಿಗಿರಿವಾಸ ವಿಜಯವಿಠ್ಠಲ ವೆಂಕಟ | ಹಿಂಡು ಬಂಧುಗಳಿದ್ದರೇನು ಮಾನವನು ತೊರೆದೆ 5
--------------
ವಿಜಯದಾಸ
ಒಲ್ಲೆ ದುರಿತಗಳೊಲ್ಲೆ ಒಲ್ಲೆಫುಲ್ಲನಾಭನ ಸ್ಮರಣೆ ಇಲ್ಲದೆ ಇರಲೊಲ್ಲೆ ಪ. ದುರ್ಜನರ ಸಂಗವನೆಂದೆಂದಿಗೂ ಒಲ್ಲೆಸಜ್ಜನರ ವಿರಸಗಳೊಲ್ಲೆ ಒಲ್ಲೆಅರ್ಜುನಸಖ ನಿನ್ನ ಸೇವೆಯ ಬಿಡಲೊಲ್ಲೆಅಬ್ಜಬಾಣನ ಮೇಳ ಒಲ್ಲೆ ಒಲ್ಲೆನೊ ಸ್ವಾಮಿ 1 ಬಲ್ಲೆನೆಂಬೊ ಅಹಂಕಾರ ಎಂದೆಂದಿ[ಗೂ]ಒಲ್ಲೆಸಲ್ಲದ ಸುಖಗ[ಳ]ಒಲ್ಲೆ ಒಲ್ಲೆಬಲ್ಲಿದ ಹರಿ ನಿಮ್ಮ ಪಾದವ ಬಿಡಲೊಲ್ಲೆಕ್ಷುಲ್ಲದೇವರ ಪೂಜೆ ಒಲ್ಲೆ ಒಲ್ಲೆನೊ ಸ್ವಾಮಿ 2 ಹರಿನಾಮ ಸ್ಮರಣೆಯ ಮನದಿ ತೊರೆದಿರಲೊಲ್ಲೆದುರುವಿಷÀಯದಿ ಹರುಷ ಒಲ್ಲೆ ಒಲ್ಲೆಕರುಣ ಹಯವದನನ್ನ ಕಂಡಲ್ಲದೆ ಮಿಕ್ಕಕಾರುಣ್ಯದ[ಹವಣು]ಒಲ್ಲೆ ಒಲ್ಲೆನೊ ಸ್ವಾಮಿ 3
--------------
ವಾದಿರಾಜ
ಒಲ್ಲೆನೀ ಕವಚ ಕುಂಡಲಗಳನ್ನು ಒಲ್ಲೆ ನಾನು ಕಿರೀಟ ಪಾದುಕೆಗಳನ್ನು ಪ ಹಗಲು ಹಾದರಗಿತ್ತಿಯಂತಿಪ್ಪ ಮನುಜನಿಗೆ ಸೊಗಸುವುದು ಸೊಗಸದೆಂಬರುಹಿಲ್ಲದೇ ಜಗದುದರ ನಿನ್ನಿಂದ ಶೋಭಿಸುವನಘ್ರ್ಯದ ವ ಸ್ತುಗಳ ಎನಗೀಯಲೇತಕೆ ಮೆಚ್ಚಿದೆಯೋ ದೇವ 1 ನೋಡಲೆವೆ ಸೀವುದಿದನಿಟ್ಟು ಕೈಕೊಂಡ ಪ್ರಾಣ ಗೂಡಿನೊಳಗಿಹುದೇ ಅಕಟಕಟ ಹರಿಯೇ ಬೇಡವೀ ಮಾಯ ಕೃಪೆಯಿಂದ ಸದ್ಭಕುತಿಯ ಜೋಡ ತೊಡಿಸಿದನೊಲ್ಲೆ ಕಾಡಬೇಡವೋ ದೇವ 2 ಶಿರಕೆ ಕರ್ಣಕೆ ಚರಣಗಳಿಗೆ ಕಥೆಯನ್ನು ಪೇ ಳ್ದೆರಗುವುದನೊಲಿದು ಕುಣಿದಾಡುವುದನು ಕುಂಡಲ ಕಿರೀಟಗಳನು ವರ ಪಾದುಕೆಗಳ ನಾನೊಲ್ಲೆ ಹರಿಯೇ 3 ನಿನ್ನ ದಾಸಾನುದಾಸ ದಾಸರ ಗುಣಾರ್ಣವದೊ ಳೆನ್ನೊಳೆಳ್ಳನಿತುಂಟೆ ಅಕಟಕಟ ಹರಿಯೇ ಬನ್ನಬಡಿಸಲು ಬೇಡ ದಕ್ಕದೀಯುಡುಗೊರೆಯು ಚುನ್ನವಾಡುವರು ಧಾತ್ರಿಯ ಮನುಜರೆಲೆ ದೇವ 4 ಇದನು ಕೊಡಬೇಕಾದಡೆಯು ಮುಕ್ತ್ಯಾಂಗನೆಯ ಮದುವೆಯನು ಮಾಡಿ ಯಾಬಳಿಕನಿತ ವೊದವಿಸುವುದುಚಿತ ಒಪ್ಪಂದವಾಗಿಹುದು ಚದುರ ವೈಕುಂಠ ವೇಲಾಪುರಾಧೀಶ 5
--------------
ಬೇಲೂರು ವೈಕುಂಠದಾಸರು
ಒಳ್ಳೆವಾಜಿಯ ಕಲಿತಿದ್ದಿತಾಳೊ ಬುದ್ಧಿಲ್ಲ ಕೇಳೊಒಳ್ಳೆ ವಾಜಿಯ ಕಲಿತಿ ತಾಳೊಸುಳ್ಳು ಕೆಲಸವ ಹೇಳಿ ಸುಳಿಯುವಿ ನೆರೆಮನೆಯಚಲುವನರಿಯುತ ಚಲುವೆರಿಬ್ಬರ ಕುಚೋದ್ಯದಲಿ ಪ. ಹೆಣ್ಣು ಕೊಟ್ಟವನಿಗೆ ಕಣ್ಣು ಕಾಣದು ಏನೊಇನ್ನೆಲ್ಲಿ ವರನ ಕಾಣದೆ ಇನ್ನೆಲ್ಲಿ ವರನ ಕಾಣದೆ ಇಂಥವಗೆಹೆಣ್ಣು ಕೊಟ್ಟವನು ಬಲು ಹೇಡಿ 1 ಕೊಟ್ಟರೇನಾಯಿತು ಅಟ್ಟುಣಲು ಬಲ್ಲಹುಟ್ಟು ಗತಿಯಂತು ಮೊದಲಿಲ್ಲಹುಟ್ಟು ಗತಿಯಂತು ಮೊದಲಿಲ್ಲ ದಾನವಕೊಟ್ಟ ಬಲೀಂದ್ರ ಇದು ಬಲ್ಲ 2 ಕುಲವಿಲ್ಲಗೋತ್ರವಿಲ್ಲ ನೆಲೆಯಿಲ್ಲ ಆಚಾರವಿಲ್ಲಬಲುದೈತ್ಯರೊಳು ಹಗೆಯಾದ ಬಲುದೈತ್ಯರೊಳು ಹಗೆಯಾದ ಇಂಥವಗೆ ಜಲನಿಧಿ ಮಗಳ ಕೊಡಬಹುದೆ 3 ಮೂರು ಗುಣಗಳ ಮೀರಿದವ ನೀಚನೆನಿಸುವ ಇವನು ನೀಚನೆನಿಸುವಇವನ ಗುಣಯಾರು ಅರಿಯರು ಧರೆ ಮ್ಯಾಲೆ4 ಹಾಲು ಕೆನೆಯ ಕದ್ದು ಬಾಲೆರೆಲ್ಲರಪೀಡಿಸಿಬಾಲನಾಗಿ ಒರಳ ಎಳೆಯುತಬಾಲನಾಗಿ ಒರಳ ಎಳೆಯುತಜನನಿಗೆ ಚಾಲವರೆದದ್ದು ಮರೆತೇನೊ5 ಬೆಣ್ಣಿ ಮೊಸರು ಕದ್ದು ಹೆಣ್ಣುಮಕ್ಕಳ ಕಾಡಿಸಿ ಮುನ್ನ ತೊತ್ತಿನ ಮನೆಯಲ್ಲಿಮುನ್ನ ತೊತ್ತಿನ ಮನೆಯಲ್ಲಿ ಉಂಡುನೀ ಹೆಣ್ಣಾಗಿದ್ಯಲ್ಲೊ ರಮಿಯರಸು6
--------------
ಗಲಗಲಿಅವ್ವನವರು
ಓಂಕಾರ ಪ್ರತಿಪಾದ್ಯ ಶಂಖಚಕ್ರಾಭಯಕರ ಬಿಂಕದಿಂದ ಬಾಕು ಟೊಂಕದಿ ಕಟ್ಟಿ ಮೆರೆವ ದೇವ 1 ಇಷ್ಟು ಜನರ ರೋಗ ತೊಟ್ಟಿ ತೀರ್ಥದಿಂದ ಕಳೆವ ಕಷ್ಟದ ಕಂಕಣ ಕಟ್ಟಿ ಮೆರೆವ ದೇವಾ 2 ದೇಶದೇಶದಿ ಬರುವ ದಾಸ ಜನರ ಅರ್ಥಿ ಕಾಸುವೀಸಕೆ ಕೊಟ್ಟು ಲೇಸಾಗಿರುವಿಯಿಲ್ಲಿ 3 ನಾಮ ತೀರ್ಥ ಪ್ರಸಾದ ಕಾಮಿಸೆ ವಿಕ್ರಯಿಸುವ ನೇಮಗಳನೆ ಕೊಟ್ಟು ತ್ರಿಧಾಮ ನಿಲಯನೆ 4 ಮಂಗಳ ಮಹಿಮನೆ ಗಂಗಾಜನಕನೆ ಅಂಗಜನಯ್ಯನೆ ವೆಂಕಟರಮಣನೆ 5 ತಾಳ ತಂಬೂರಿ ದಮ್ಮಡಿ ಮೇಳದೊಳು ದಾಸರು ವೇಳೆ ವೇಳೆಗೆ ಸೇವಿಸೆ ಕಾಳ ದೋಷವ ಕಳೆವ 6 ರಮಾ ಸೇವಿತÀ ವಿಜಯ ರಾಮಚಂದ್ರವಿಠಲ ನಿತ್ಯ ನಿನ್ನ ನಾಮಗಳನೆ ನುಡಿಸೊ 7
--------------
ವಿಜಯ ರಾಮಚಂದ್ರವಿಠಲ
ಓಡಿ ಬಾರೋ ರಂಗಯ್ಯ ಓಡಿ ಬಾರೋ ಕೃಷ್ಣಯ್ಯ ಪ. ನೋಡಿ ನಿನ್ನ ಮುತ್ತನೀಡುವೆ ಹಾಡಿ ಜೋಗುಳವ ಪಾಡುವೆ ಅ.ಪ. ಮೊಸರು ಭಾಂಡ ಒಡೆದು ಬೆಣ್ಣೆ ಹಸುಳೆ ಮೆದ್ದು ಬಾಯೆಲ್ಲಾ ರಸಿಕಸಿಯಾಗಿರುವ ಮೈಗೆ ಬಿಸಿ ನೀರೆರೆವೆನೊ ರಂಗ 1 ಬಿಸಿ ದೋಸೆಯ ಕೊಡುವೆನೆ ಮೊಸರೋಗರವ ಉಣಿಸಿ ನಿನಗೆ ಹಸುರಂಗಿಯ ತೊಡಿಸುವೆ ಕೃಷ್ಣಾ 2 ಮುದ್ದು ಮುದ್ದಾದ ಪಾದ ಹೆಜ್ಜೆನಿಟ್ಟು ಬಾರೆಲೊ ಮುದ್ದೆ ಬೆಣ್ಣೆ ಹಣ್ಣು ಕೊಟ್ಟು ಮುದ್ರೆಯುಂಗುರವನಿಟ್ಟು ನೋಡುವೆ 3 ಅಣ್ಣ ಬಲರಾಮನೊಡನೆ ಚಿಣ್ಣ ಆಡಬಾರೆಲೊ ಚಿಣ್ಣಿಕೋಲು ಚಂಡು ಬುಗುರಿ ಚಿಣ್ಣ ಕೊಡುವೆನೋ ಕೃಷ್ಣಾ 4 ಶೃಂಗಾರವ ಮಾಡುವ ಶ್ರೀ ಶ್ರೀನಿವಾಸ ಬಾರೆಲೊ ಮುದ್ದು ಕಂಗಳಿಗೆ ಕಪ್ಪನ್ಹಚ್ಚಿ ರಂಗ ನಿನ್ನ ನೋಡುವೆದಣಿಯ5
--------------
ಸರಸ್ವತಿ ಬಾಯಿ
ಓಡಿಬಾ ಬಾ ರಂಗ ಆಡುಬಾ ನೀಲಾಂಗ ಪಾಡಿ ಪೊಗಳುವೆ ರಂಗ ಶ್ರೀಪಾಂಡುರಂಗ ಪ ಬೇಡುವೆನೊ ಮಾರಾಂಗ ನೋಡಿನಲಿವೆನೊರಂಗ ನೀಡು ವರಂಗಳ ರಂಗ ಶ್ರೀಕರಾಂಗ ಅ.ಪ ಬಡ ಮೌನಿಗಳು ನಿನ್ನ ಪಿಡಿಯ ಬಂದಿಹರೆನ್ನ ತೊಡೆಯ ಮೇಲಿರೋ ಚಿನ್ನ ಮುದ್ದುಮೋಹನ್ನ ಬೆಡಗ ತೋರುತೆ ಚೆನ್ನ ಚೆಲುವ ಬಾ ರನ್ನ ಒಡೆಯ ಮಾಂಗಿರಿಯ ಚೆನ್ನಿಗ ನಂಬಿಹೆನೊ ನಿನ್ನ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂ||ಇಂದುವಿನ ವಾರದರ್ಚನೆಸಂದುದು ನಿನ್ನಡಿಗಳಿಂಗೆ ಗ್ರಹಗತಿ ಸೂಚಿಸೆಹಿಂದಣ ಕರ್ಮದ ಫಲವನುಸಂದೇಹವು ಬಿಡದು ಬಿಡಿಸು ವೆಂಕಟರಮಣನೆದುರಿತವನು ಪರಿಹರಿಸು ಸ್ಥಿರಭಕ್ತಿುರಿಸುತಿರುಪತಿಯ ಸ್ಥಿರವಾಸ ಶ್ರೀ ವೆಂಕಟೇಶ ಪಭಯವಾಗುತಿದೆ ದೇವ ಭಯಬಡಿಸುತಿರೆ ಕರ್ಮಭಯವಿಲ್ಲದಿರುವದೆಂತುಭಯನಿವಾರಕನಾಮ ಭಯತಿಮಿರ ರವಿಯಹುದುಭಯ ಹೋಗಿ ಸ್ಥಿರವಾಗಿ ಮನ ನಿಲ್ಲದಿಹುದು 1ಪರಮ ಯೋಗ್ಯನಿಗೊಂದು ಪಿರಿದಾದ ದುಃಖವಿದೆಪರಿಹರಿಸದಾವ ವಿಧದಿಕರಗಿ ಕಂದುತಲಿರಲು ಬಿರಿಸು ಕರ್ಮದ ಗತಿಯುನರಹರಿಯೆ ಮಹಿಮೆಯನು ನೆರೆ ತೋರಿಸೀಗ 2ಭಜನೆಯನು ಮಾಡಿದರೆ ಭಜನೆ ಕಾಮನೆಯಾಗಿನಿಜ ದೊರಕದೆಂಬ ಭಯವುಭಜಿಸಿ ಪಾಪವ ಕಳೆಯೆ ಭಜನೆಯದಕಾಗುವುದುಭಜನೆ ದೇಹದಿ ನಿಂದು ಭವ ತಾನು ನಿಲ್ಲುವುದು 3ಕರ್ಮಕೀ ಪರಿ ಬಲವು ಧರ್ಮವಾಗಿರೆ ಬಲಿತುಕರ್ಮವೇ ಬೆಳೆಯುತಿಹುದುಮರ್ಮವರಿತರು ಬಿಡದು ಹೆಮ್ಮೆಯದು ಬಲ್ಲವಿಕೆಧರ್ಮ ಬರುವದು ನಿನಗೆ ಕರ್ಮವಿದ ಕಡೆಗೊಳಿಸು 4ಇಚ್ಛೆುಂದಿದ ಸೃಜಿಪೆ ುಚ್ಛೆುಂ ಪರಿಹರಿಪೆಇಚ್ಛೆಯೇ ತೋರುತಿಹುದುಇಚ್ಛೈಸಿ ನಿನ್ನಡಿಯನಚ್ಯುತನೆ ಭಜಿಪರಿಗೆ 5ತುಚ್ಛವಾದೀ ಕರ್ಮ ಬಿಚ್ಚದಿಹುದೇನುಗರ್ವ ಬರುವದು ಜನಕೆ ಸರ್ವಗತನೆನಿಸಿದರೆನಿರ್ವಹಿಪೆನೆನಲು ಹೀಗೆಸರ್ವೇಶ ನೀನೊಲಿದು ಸರ್ವದೋಷವ ಕಳೆಯೆಗರ್ವವೆಡೆಗೊಳ್ಳದೈ ಪೂರ್ವದವನೆನಿಸು 6ಸೂತ್ರವನು ನಿರ್ಮಿಸಿದೆ ಸೂತ್ರ ನಿನ್ನಾಧೀನಸೂತ್ರಕ್ಕೆ ಶಕ್ತಿಯೆಂತುಯಾತಕೀ ಕರ್ಮಗತರನು ಮಾಡಿ ಜನರುಗಳ ಪಾತಕರು ಹೊರಗೆಂದು ಯಾತನೆಯ ಮಾಳ್ಪೆ 7ಮೃಷೆಯೆಂದ ಮಾತ್ರದಲಿ ಮೃಷೆಯಾಗದೀ ದುಃಖವಿಷಮವೇ ಬಳಲಿಸುವದುವಿಷವು ಮೊದಲಾಗಿ ತದ್ವಿಷಮ ಕರ್ಮದಿ ಹರವುವಿಷಮವಿದು ನಿನ್ನ ನಿಜದಲಿ ತೊಲಗದೆಂತು 8ಕರುಣಾಕರನೆ ನೀನು ಗುರುಮುಖದಿ ಕರ್ಮಗಳಬರಸೆಳೆದು ಬಯಲಮಾಡೆಮರೆವೆಯಾವರಣವಿರಬೇಕೆ ತಿರುಪತಿವಾಸವರದ ಶ್ರೀ ವಾಸುದೇವಾರ್ಯ ವೆಂಕಟರಮಣ 9ಓಂ ಪಾರ್ಥಸಾರಥಯೇ ನಮಃ
--------------
ತಿಮ್ಮಪ್ಪದಾಸರು