ಒಟ್ಟು 1143 ಕಡೆಗಳಲ್ಲಿ , 97 ದಾಸರು , 719 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರನೇನೆ ಭಾಗ್ಯನಿಧಿ | ಬಡವರ ಮರೆಯದೇ | ಮಾನಿನಿ ಪ ಕಾಲಿಲ್ಲದವನಂತೆ ಕುಳಿತನೇ ಮಧುರಿಲಿ | ನೀಲಾಂಗನಂಗವೆಂತು | ನಿಬ್ಬರವೇ ಮಾನಿನೀ 1 ಮುಂದಕೆ ತಿರುಗಲೊಲ್ಲ ಹಿತಗಜಪಂಚಾನನ | ಮಾನಿನಿ 2 ಮಾನಿನಿ 3 ತಂದೆ ಮಹೀಪತಿ ಪ್ರಭು | ತುರಗವೇರಿ ಬಂದನೆಂದು | ಇಂದು ಹೇಳಿದರಿಷ್ಟಾರ್ಥ ಈವನೆಲ್ಲ ಮಾನಿನಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾಲಕೃಷ್ಣ ಸುಮ್ಮನೆ ಹಟವ್ಯಾತಕಮ್ಮಾ ನಿನಗೆಮೊಮ್ಮುಣಿಸುವೆ ನಾನು ಕೇಳೊ ಕೃಷ್ಣಯ್ಯ ಪ. ಹಶಿವಿಯಾಗಿಹುದೇನೊ ನಿನಗೆ ಸಣ್ಣಹಸುಳರಂಜಿಪ ಬಾವಾ ಬಂದಾನೊ ಹೊರಗೆಮೊಸರಕಡೆದು ನಾ ಬೇಗ ಅಟ್ಟಿಹೊಸ ಬೆಣ್ಣೆ ಕೊಡುವೆನೊ ಕಂದಯ್ಯ ನಿನಗೆ 1 ಹಾಲು ಕುಡಿಸುವೆನೊ ನಾ ಒಬ್ಬಕೀಳು ತಿರುಕ ಬಾಗಿಲಲ್ಲಿ ಬಂದಿಹನೊಬಾಲಯ್ಯ ಅಳದೀರೊ ನೀನು ತನ್ನಜೋಳಗೆಯಲಿ ನಿನ್ನ ಕೊಂಡೊಯುವನು 2 ಅರಳೆಲೆ ಅಂದಿಗಿ ಇಡಿಸಿ ನಿನ್ನಪೆರನೂಸಲಲಿ ಕಸ್ತೂರಿಯ ಧರಿಸಿಪರಿಪರಿಯಲಿ ಸಿಂಗರಿಸಿ ಗೊಲ್ಲತರಳರೊಡನ ಆಡಕಳುವೆನೋ ಕರಸಿ 3 ಉಂಗುರು ಸರಪಳಿಯಿಟ್ಟು ಬಣ್ಣದಂಗಿಯ ತೊಡಿಸುವೆ ಕೇಳೋ ನಿ ಇಷ್ಟುರಂಗಯ್ಯ ಬಂತ್ಯಾಕೊ ಸಿಟ್ಟು ನಿನಗೆಮಂಗಳಾತ್ಮಕ ಏನೂ ಬೇಕೊ ಹೇಳಿಷ್ಟು 4 ಸಿರಿ ವೆಂಕಟರಾಯಾನಿನ್ನಾಟವಬಲೇಶ ನಿಚಯಾ ನೋಡಿಕರಂಣಿನೊಳಗಿಟ್ಟು ಹೀರುವರಯ್ಯಾ 5 ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ 6 ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ 7 ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ 8 ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ 9 ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ 10 ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ 11
--------------
ಐಹೊಳೆ ವೆಂಕಟೇಶ
ಬಾಲಕೃಷ್ಣವಿಠಲ | ಕಾಪಾಡೊ ಇವನಾ ಪ ನೀಲ ನೀರದ ವರ್ಣ | ಕಾಳಿಂದಿ ರಮಣ ಅ.ಪ. ಮೋದ ತೀರ್ಥರ ಮತದಿಹಾದಿಯಲ್ಲಿರುವವನ | ಕಾದುಕೋ ಹರಿಯೇವೇದಾಣಿ ಸನ್ನುತನೆ | ಭೇದ ಪಂಚಕ ತಿಳಿಸಿಮೋದ ಪಡಿಸುವುದಿವನ | ವೇದಾಂತ ವೇದ್ಯ 1 ವ್ಯಾಪ್ತೋಪಾಸಕ ಜೀವಿ | ಗಿತ್ರಿಹೆನೊ ಅಂಕಿತವಸುಪ್ತೀಶ ಪೇಳ್ದಪರಿ | ಗೋಪ್ತ ಮಹಿಮಾಆಪ್ತ ನಿವ ನೆಂದೆನುತ | ಗೊತ್ತು ಮಾಡಿಹೆ ದೇವದೀಪ್ತ ಮೂರುತಿ ಹರಿಯೆ | ತೃಪ್ತಿ ಪಡಿಸಿವನಾ 2 ಸ್ವಾಪದಲಿ ಸತ್ಪಂಚ | ಪುಷ್ಪ ಬಕುಳವನಿತ್ತುಶ್ರೀಪ ನಿನ್ನನುಗ್ರಹ | ಪ್ರಾಪಕದಸೂಚ್ಯಾನೀ ಪಾಲಿಸುತ್ತಿವಗೆ | ಬಾಷ್ವಾವಾನಂದುದರಿಸೋಪಾನ ಮುಕ್ತಿಗೆನೆ | ವ್ಯಾಪಾರ ನಿನದೋ 3 ಉಂಬುಡುವ ಕ್ರಿಯೆ ಸರ್ವ | ಬಿಂಬ ತಾಗೈಯೈ ಪ್ರತಿಬಿಂಬ ಕುಂಟೆಂಬುವಾ | ಸುಜ್ಞಾನವಿತ್ತುಗುಂಭ ಸಾದನದಿ ಹೃದ | ಯಾಂಬರದಿ ನೀತೋರಿಸಂಭ್ರಮದಲಿರಿಸಿವನ | ಅಂಬುಜದಳಾಕ್ಷ 4 ಎಲ್ಲೆಲ್ಲೂ ನಿನ್ನ ವ್ಯಾಪ್ತಿ | ಸೊಲ್ಲನುಣಿಸುತ ಹರಿಯೆಬಲ್ಲಿದರ ಸಂಗವನು | ಸಲ್ಲಿಸುತ ಇವಗೇಪಲ್ಲಿವಿಸೆ ಸುಜ್ಞಾನ | ಬೇಡ್ವೆ ನಿನ್ನನು ದೇವಚೆಲ್ವ ಹಯಮುಖ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಬಿಟ್ಟೆನಯ್ಯ ಬಿಟ್ಟೆನಯ್ಯ ಪ್ರಪಂಚವಮುಟ್ಟಿದೆನು ಬ್ರಹ್ಮವನು ಮುಕ್ತನಾದೆನುಹುಚ್ಚು ಮೂಳಿ ಹೆಂಡತಿಯ ಪ ಮೆಚ್ಚಿ ನಲಿವ ಮಗನು ಸೊಸೆಯುಉಜ್ಜಿ ಬದುಕನೆಲ್ಲ ನಾನು ಉಡುಗಿ ಕಳೆದೆನು 1 ನೆಂಟರಿಷ್ಟರೆಲ್ಲರನ್ನು ದೂರಮಾಡಿ ಕುಳಿತೆ ನಾನುಹೆಂಟೆಯಂತೆ ಕಂಡೆನಯ್ಯ ಹೇರು ಹೇಮವ 2 ಅಷ್ಟದೇವರನ್ನು ನಾನು ಅಡವಿಗೆಂದು ಅಟ್ಟಿಬಿಟ್ಟೆಕಷ್ಟಪಡಿಪ ಪುರೋಹಿತನ ಕಡೆಗೆ ತಳ್ಳಿದೆ 3 ವಾರವಾರ ನೇಮವನ್ನು ಒಲೆಯನೀಗ ಹೊಗಿಸಿದೆದಾರಿ ಹಚ್ಚಿಸಿದೆನು ಕುಲವ ಶೀಲವ್ರತಗಳ 4 ಮತಗಳೆಂಬ ವಾದವನ್ನು ಮಣ್ಣುಪಾಲು ಮಾಡಿದೆನುಸತತ ಚಿದಾನಂದ ಬ್ರಹ್ಮ ಸಾಕ್ಷಿಯಾದನು 5
--------------
ಚಿದಾನಂದ ಅವಧೂತರು
ಬಿನ್ನವೆನ್ನೆಣೆಸದಿರು ಎಲೆ ಮಾನವಾ ಚನ್ನಕೇಶವ ಸ್ವಾಮಿ ಒಲಿದು ಪಾಲಿಸುವಾ ಪ ವಸುಧೆಯಲಿ ಚಲಿಸುತಿಂತ ಸಕಲ ಜಂತುಗಳೆಲ್ಲ ಹಸನಾಗಿ ತಿಳಿಯದೆ ನಿನ್ನಾತ್ಮವೆಂದು ತೃಷೆ ಕ್ಲೇಶಗಳು ಮುರಿದೊಗೆವ ಜೀವವನು ಕಸಕಸರಿ ಮಾಡದಿರು ಪರರಾತ್ಮವೆಂದು 1 ಅವರಿವರು ಬಂಧುಗಳು ಅಪ್ತೇಷ್ಟ ಸಹೃದರು ಇವರವರು ದೂಷಕರು ಪರಜಾತಿಯೆಂದು ಸವಿಸುತಲಿ ಮನಸನ್ನು ಪರಪಂಚವೆನಿಸುತ್ತ ಭವವನ್ನೆ ಸೆಲೆ ನಂಬಿ ಪರರಾತ್ಮವೆಂದು 2 ದಾಸದಾಸರಿಗೆಲ್ಲ ವಂದನೆಯ ಮಾಡುತ್ತ ದಾಸರೆಲ್ಲರು ಜಗದಿ ಏಕಾತ್ಮರೆಂಬ ವಾತನೆಯ ನಂಬದಲೆ ಬಿನ್ನಾತ್ಮರೆಂದೆಣಿಸಿ ವಾಸುಕೀಶಯನನೂ ಭಿನ್ನಾತ್ಮನೆಂದು 3
--------------
ಕರ್ಕಿ ಕೇಶವದಾಸ
ಬಿಲ್ವಪತ್ರೆಯ ಪೂಜೆಗೊಲಿವನು ಜಗದ್‍ವಲ್ಲಭನಾದ ರಾಮೇಶ್ವರನು ಪ ಕೋಟಿ ಕನ್ಯಾದಾನವ ಮಾಡಿದ ಫಲಕೋಟಿ ತುರಗದಾನದ ಫಲವುಕೋಟಿ ಸಂಖ್ಯಾ ಗಜದಾನದ ಫಲ ಶಶಿಜೂಟಗೊಂದೆ ಬಿಲ್ವಪತ್ರೆಯೇರಿಸಿದರೆ 1 ಕೋಟಿ ಗಂಗಾಸ್ನಾನವ ಮಾಡಿದ ಫಲಕೋಟಿ ಪ್ರಯಾಗ ಸ್ನಾನದ ಫಲವುಕೋಟಿ ಗೋದಾನದ ಫಲ ಬರುವುದು ಶಶಿಜೂಟಗೊಂದೆ ಬಿಲ್ವಪತ್ರೆಯೇರಿಸಿದರೆ2 ಲಕ್ಷ ಪಂಚಾಕ್ಷರಿ ಜಪವ ಮಾಡಿದ ಫಲಲಕ್ಷಭೂಮಿಯ ಪ್ರದಕ್ಷಿಣ ಫಲವುಲಕ್ಷಾಶ್ವಮೇಧಯಾಗವ ಮಾಡಿದ ಫಲತ್ರ್ಯಕ್ಷಗೊಂದೆ ಬಿಲ್ವಪತ್ರೆಯೇರಿಸಿದರೆ 3 ವೇದಪುರಾಣವ ಪಠಿಸಿದ ಫಲ ಸರ್ವಮೇದಿನಿ ದಾನವನಿತ್ತ ಫಲವುಭೂದಿವಿಜರ ಸಂರಕ್ಷಿಸಿದ ಫಲ ಶ್ರೀಮಾದೇವಗೇಕ ಬಿಲ್ವವನೇರಿಸಿದರೆ4 ಸೋಮವಾರದ ದಿನ ನೇಮದಿಂದಲಿ ಬಹುಕೋಮಲ ಬಿಲ್ವಪತ್ರೆಗಳ ತಂದುಶ್ರೀ ಮಹಾದೇವಗರ್ಪಿಸಿದಂಥ ಭಕ್ತರ್ಗೆರಾಮೇಶಲಿಂಗ ಮುಕ್ತಿಯನೀವನು 5
--------------
ಕೆಳದಿ ವೆಂಕಣ್ಣ ಕವಿ
ಬೂಟಾಟಿಗನು ನಾನು ಸತ್ಯಮಾಯ ಝಾಟ ನಾಟಕವಾಡಿ ದಾಟಿ ಬೈಲಿಗೆ ನಿಂತ ಪ ಮಿಥ್ಯ ಪ್ರಪಂಚ ಮರೆದು ಅರ್ತು ನಿತ್ಯಸುಖದಿ ಮನ ಬೆರೆದು ಅರ್ತುಅರಿಯದೆ ಮತ್ರ್ಯದೊರ್ತನದೊಳಗಿರ್ದು ಗುರ್ತಿಟ್ಟು ಪರಲೋಕ ಸುರ್ತುಮಾಡಿಕೊಂಡ 1 ಸಾಧುವರ್ತನದ್ಹಾದಿ ತಿಳಿದು ನಿಜ ಶೋಧಿಸಿ ಕಾಲನ ಬಾಧೆ ಗೆಲಿದು ವಾದಿಮೂರ್ಖರ ಕೂಡಿ ವಾದಿಸದನುದಿನ ಸಾಧಿಸಿ ಪರಸುಖಸ್ವಾದ ಸವಿಯುವಂಥ2 ಕಾಮಕ್ರೋಧಾದಿಗಳಳಿದು ಮಹ ಪ್ರೇಮ ಮೋಹಂಗಳ ತುಳಿದು ಸ್ವಾಮಿ ಶ್ರೀರಾಮನ ಪ್ರೇಮ ಪಡೆದು ಮುಕ್ತಿ ಸಾಮ್ರಾಜ್ಯಸುಖ ಸಂಪಾದಿಸಿಕೊಂಡಂಥ 3
--------------
ರಾಮದಾಸರು
ಬೂದಿಯ ಹಚ್ಚಿರೊ ಶುದ್ಧ ವೈಷ್ಣವರಿದ- ರಾದಿಯ ತಿಳಿಯಲು ಕೇಳಿ ಬಲ್ಲವರು ಪ ಮೂಲಾಗ್ನಿಯಿಂದಲೆ ಸುಟ್ಟಿಹ ಬೂದಿ ಮೂಲ ಮಂತ್ರಂಗಳ ಜಪಿಸುವ ಬೂದಿ ಮೂಲಾಧಾರವ ತೋರುವ ಬೂದಿ ಕಾಲ ಕರ್ಮಂಗಳ ಕಡಿವಂಥ ಬೂದಿ 1 ಏಳು ಸುತ್ತಿನ ಒಳಗೆ ಇರುವಂಥ ಬೂದಿ ಏಳು ವೈರಗಳನ್ನು ಕಳೆವಂಥ ಬೂದಿ ಏಳು ಅಗಳ ದಾಟಿ ಹಾರುವ ಬೂದಿ ಬ- ಹಳ ಜ್ಞಾನಿಗಳೆಲ್ಲ ಧರಿಸುವ ಬೂದಿ 2 ಒಂಭತ್ತು ಕಡೆಯಿಂದ ಒಲಿದಿಟ್ಟ ಬೂದಿ ಕುಂಭಕದೊಳಗದ ಇರಿಸುವ ಬೂದಿ ಸಂಭ್ರಮದಿ ಅರಸನ ಗೆಲುವಂಥ ಬೂದಿ ಅಂಬರಕಾಗಿಯೆ ಲಂಬಿಪ ಬೂದಿ 3 ಪಂಚಾಗ್ನಿಯಿಂದಲೆ ಬೆಂದಿಹ ಬೂದಿ ಪಂಚತತ್ವಂಗಳನು ಗೆಲುವಂಥ ಬೂದಿ ಪಂಚ ಮೃತ್ಯುಗಳನ್ನು ಕಳೆವಂಥ ಬೂದಿ ವಂಚಿಸಿಕೊಳ್ಳದೆ ಧರಿಸುವ ಬೂದಿ 4 ಆರು ವೈರಿಗಳನ್ನು ತೂರುವ ಬೂದಿ ಆರು ಭಾವಗಳನ್ನು ಬೇರಿಟ್ಟ ಬೂದಿ ಆರು ಭ್ರಮೆಗಳನ್ನು ಕಡಿದಿಟ್ಟ ಬೂದಿ ಆರಿಗೂ ತೋರದೆ ಹಾರುವ ಬೂದಿ 5 ಅಷ್ಟಮದಂಗಳ ಕಟ್ಟುವ ಬೂದಿ ದುಷ್ಟಾತ್ಮರನ್ನು ಅಟ್ಟುವ ಬೂದಿ ಕುಟ್ಟೆ ಹಿಡಿವ ಬೀಜಕಿಟ್ಟಿಹ ಬೂದಿ ಭ್ರಷ್ಟಕರ್ಮಗಳನ್ನು ಸುಟ್ಟಂಥ ಬೂದಿ 6 ಸಕಲ ಋಷಿಗಳೆಲ್ಲ ಧರಿಸುವ ಬೂದಿ ತ್ರಿಕರ್ಣ ಶುದ್ಧದಿ ತುಂಬಿದ ಬೂದಿ ಮಕರಕುಂಡಲಧರ ಮರುಳಹ ಬೂದಿ ಸಖನಹ ವರಾಹತಿಮ್ಮಪ್ಪ ಬೂದಿ 7
--------------
ವರಹತಿಮ್ಮಪ್ಪ
ಬೆಳಗಾಗಲು ಅರಘಳಿಗೆಯು ಇರುತಿರೆ ಸ್ಮರಿಸುವೆ ವಿಶ್ವಮೂರುತಿಯನ್ನು ಬೆಳಗಾಗಲು ಹರಿಧ್ಯಾನವ ಮಾಡುತ ಬಹಿರ ಭೂಮಿಗ್ಹೋಗುತ ಮುನ್ನು 1 ಕಲಿ ಮೊದಲಾಗಿಹ ದೈತ್ಯರನೆಲ್ಲಾ ವಿ- ಸರ್ಜನೆ ಮಾಡುತ ಮತ್ತಿನ್ನೂ ದಂತ ಧಾವನೆಯ ಮಾಡುತ ಶ್ರೀ ಮಾ- ಧವನನು ಸ್ಮರಿಸುವೆ ನಾನಿನ್ನೂ 2 ಮುಖವನು ತೊಳೆಯುತ ಮುರಹರಿ ಧ್ಯಾನದಿ ಶ್ರೀತುಳಸಿಯ ನಮಿಸುತಲಿನ್ನೂ ಮೀಸಲ ನೀರನು ಎರೆಯುತ ಬೇಗದಿ ಮೃತ್ತಿಕಿ ಫಣಿಗಿಡುತಲಿ ಇನ್ನು 3 ಮೂರು ಪ್ರದಕ್ಷಿಣಿ ಮಾಡುತ ಬೇಗದಿ ಮುದದಿ ನಮಸ್ಕರಿಸುತಲಿನ್ನೂ ದೇವರ ಮನೆಕಡೆ ಪೋಗುತ ನಿಂದಿಹ ಜಯವಿಜಯರಿಗೊಂದಿಸಿ ಮುನ್ನು 4 ದೇವರ ದರ್ಶನಕಾಜ್ಞೆಯ ಕೇಳುತ ದೇವರ ಗೃಹದೊಳು ಪೋಗುತಲಿ ಮಾಯಾ ಪತಿಯನು ಮನದೊಳು ಧ್ಯಾನಿಸಿ ವಂದನೆ ಮಾಡುತ ಬೇಗದಲಿ 5 ದೇವರ ಮನೆಯನು ಸಾರಿಸಿ ಶಂಖುಚಕ್ರವುಗದೆ ಪದುಮನ್ಹಾಕುತಲಿ ಗಜವರದನ ಕೊಂಡಾಡುತ ಮುದದಿ ಗಜೇಂದ್ರ ಮೋಕ್ಷನ ಸ್ಮರಿಸುತಲಿ 6 ಗೋವೃಂದದ ಕಡೆ ಪೋಗುತ ಶ್ರೀ- ಗೋವಿಂದನ ಸ್ಮರಿಸುತ ನಿತ್ಯದಲಿ ಗೋಪೀ ಬಾಲನ ಗೋಕುಲವಾಸನ ಗೋವ್ಗಳ ಮಧ್ಯದಿ ಸ್ಮರಿಸುತಲಿ 7 ಬಾಲಕೃಷ್ಣನ ಲೀಲೆಯ ಪೊಗಳುತ ಬಾಲಲೀಲೆಗಳ ಕೇಳುತಲಿ ಪುರಾಣವ ಪೇಳುವ ದ್ವಿಜರಿಗೆ ವೃದ್ಧರಿಗೆರಗುತ ಪ್ರತಿನಿತ್ಯದಲಿ 8 ಮುರಳಿಯನೂದುತ ಮೆರೆಯುವ ಕೃಷ್ಣನ ಅನುದಿನ ಮಾಡುತಲಿ ಸರಸಿಜನಾಭನ ಸ್ಮರಿಸುತ ಮನದಲಿ ಸ್ನಾನಕೆ ತೆರಳುತ ಶೀಘ್ರದಲಿ 9 ನದಿಯ ಸ್ನಾನಕೆ ಪೋಗುವ ಸಮಯದಿ ನಾರದವಂದ್ಯನ ಸ್ಮರಿಸುತಲಿ ಭಾಗೀರಥಿಯಲಿ ಸ್ನಾನವು ಮಾಡುತ ಬಾಗುತ ಸಿರವನು ಬೇಗದಲಿ10 ಫಣಿರಾಜನ ಶಯನದಿ ಮಲಗಿಹ ಶ್ರೀ- ಪರಮಾತ್ಮನ ನೋಡುತ ಬೇಗ ಪಾದಗಳ ಸೇವಿಪ ಶ್ರೀ ಭೂದೇವಿಯ- ರೇನುಧನ್ಯರೆಂದೆನುತಾಗ11 ಪೊಕ್ಕಳ ಮಧ್ಯದಿ ಪೊರಟಿಹ ನಾಳದ ತುದಿಯಲಿ ರಂಜಿಪ ಕಮಲದಲಿ ಉದ್ಭವಿಸಿದ ನಾಲ್ಮೊಗನನು ನೋಡುತ ಬಗೆ ಬಗೆ ಪ್ರಾರ್ಥಿಸುತಲಿ ಇನ್ನು 12 ನೆರೆದಿಹ ಸುರ ಪರಿವಾರವೆಲ್ಲ ಶ್ರೀ- ಹರಿಯನು ವಾಲೈಸುತಲಿನ್ನೂ ಪರಮವೈಭವದಿ ಮೆರೆಯುವ ದೇವನ ಸ್ಮರಿಸುವೆ ಜಲಮಧ್ಯದೊಳಿನ್ನು 13 ದೇವರ ರಥವನು ತೊಳೆಯುವೆನೆಂಬ- ನುಸಂಧಾನದಿ ಸ್ನಾನವು ಮಾಡಿ ದೇವರ ರಥ ಶೃಂಗರಿಸುವೆನೆನ್ನುತ ಶ್ರೀಮುದ್ರೆಗಳ್ಹಚ್ಚುತ ಪಾಡಿ 14 ನಿತ್ಯ ಕರ್ಮಮುಗಿಸುವ ಬೇಗದಿ ಶ್ರೀ- ಹರಿಪೂಜೆಗೆ ಅಣಿಮಾಡುತಲಿ ಪುಷ್ಪಗಳನು ಗಂಧಾಕ್ಷತೆ ಶ್ರೀ ತುಳಸಿಯ ತಂದಿಡುವೆನು ಮೋದದಲಿ 15 ಪಂಚಭಕ್ಷ ಪಾಯಸಗಳ ಮಾಡುತ ಪಂಚಾತ್ಮಕ ನ ಸ್ಮರಿಸುತಲಿ ಮಿಂಚಿನಂತೆ ಹೊಳೆಯುವ ತಬಕಿಲಿ ತಾಂಬೂಲವ ನಿರಿಸುತ ಬೇಗದಲಿ 16 ಬ್ರಹ್ಮನು ಈ ವಿಧ ಪೂಜೆಯ ಪ್ರತಿದಿನ ಬ್ರಹ್ಮನ ಪಿತಗರ್ಪಿಸುತಲಿರಲು ಸುಮ್ಮಾನದಿ ಮಹಲಕುಮಿಯು ಇದ- ನೊಯ್ಯತ ಸುರಮುನಿ ವಂದ್ಯನಿಗೆ ತಾನರ್ಪಿಸಲು17 ಪರಮಾತ್ಮನು ಈ ವಿಧ ಸೇವೆಯ ಕೈ- ಗೊಳುತಲಿ ಸಂತಸ ಪಡಲಿನ್ನು ಅರಿತವರೆಲ್ಲರು ನಿರುತದಿ ಹರಿ ಧ್ಯಾ- ನವ ಮಾಡುತಲಿರೆ ತಾವಿನ್ನು 18 ದೇವಪೂಜೆ ವೈಶ್ವದೇವವು ನಿತ್ಯದಿ ಗೋಬ್ರಾಹ್ಮಣನರ್ಚಿಸಿ ಇನ್ನು ಸಾಯಂ ಸಮಯದಿ ಸಾಧುಗಳೊಡನೆ ದೇವರ ಕಥೆ ಕೇಳುತಲಿನ್ನೂ 19 ಝಾಮಝಾಮದಿ ಜಯಶಬ್ದಗಳಿಂ ಜಯಾಪತಿಯನು ಪೊಗಳುತಲಿ ಆರತಿ ಜೋಗುಳ ಹಾಡುತ ಮುದದಲಿ ಮಧ್ವೇಶಾರ್ಪಣ ಪೇಳುತಲಿ 20 ಮಲುಗುವಾಗ ಮುಕುಂದನ ಸ್ಮರಿಸುತ ಲಯ ಚಿಂತನೆಯನು ಮಾಡುತಲಿ ಕರಮುಗಿಯುತ ಕಾಯೇನ ವಾಚಾ ಎಂ- ದ್ಹೇಳುತ ಪ್ರಾಜ್ಞನ ಸ್ಮರಿಸುತಲಿ 21 ಝಾಮಝಾಮದಿ ಶ್ರೀ ಹರಿ ಮಾಧವ ಆಗಲು ಬೆಳಗಿನ ಝಾವದಿ ಸೃಷ್ಟಿಯ ಚಿಂತನೆ ಮಾಡಿ ಎಂದೆನುತ22 ಮಳಲಗೌರಿ ನೋಂತಿಹ ಸತಿಯರಿಗೆ ಮುರಳೀಧರ ಒಲಿದಿಹನೆನ್ನುತ ಉದಯವಾಗಲು ವಿಶ್ವನ ಸ್ಮರಿಸುತ ವಿಧಿ ನೇಮಗಳನುಸರಿಸುತ್ತ 23 ನಿತ್ಯದಿ ಈ ತೆರವಾಚರಿಸುವ ನರ ಮುಕ್ತನು ಧರೆಯೊಳಗೆಂದೆನುತ ಅತ್ಯುತ್ಸಾಹದಿ ಬರೆದೋದುತಲಿ- ದರರ್ಥವ ತಿಳಿದಾಚರಿಸುತ್ತ24 ಈ ವಿಧ ಚಿಂತನೆ ಮಾಡುವ ಮನುಜಗೆ ದಾರಿದ್ರ್ಯವು ದೂರಾಗುವದು ಮಾರಮಣನು ತನ್ನವರೊಡಗೂಡುತ ವಾಸವಾಗುವನೆಂಬುವ ಬಿರುದು25 ಕರೆಕರೆಗೊಳ್ಳದೆ ಕೇಳಿರಿ ನಿತ್ಯವು ಕನಕಗಿರಿವಾಸನ ಮಹಿಮೆ ಕನಲಿಕೆ ಕಳೆವುದು ಕಮಲನಾಭ- ವಿಠ್ಠಲನು ಕೊಂಡಾಡುತ ಮಹಿಮೆ 26
--------------
ನಿಡಗುರುಕಿ ಜೀವೂಬಾಯಿ
ಬೆಳಗಾಯಿತು ಕೇಳಿ ಭ್ರೂಮಧ್ಯ ಮಂಟಪದೊಳಗೆಬೆಳಕು ಪಸರಿಸುತಿದೆಕೊ ಎತ್ತಿತ್ತ ನೋಡೆಮುಂಬೆಳಕು ಕಾಣಿಸುತ್ತ ರವಿಕೋಟಿಯಂ ಪಳಿಯುತಿದೆನಿರ್ಮಳ ನೋಡಲುಪ್ಪವಡಿಸ ಯತಿರಾಜ ಪ ಷೋಡಶಾಕಾರವಹ ಸೋಮ ಕಳೆಗುಂದಿಹುದುಖೋಡಿ ಜನನ ಮರಣ ಚಕ್ರ ತಾ ಕೊರಗಿದುದುಪಾಡಳಿದು ಜೀವಶಿವ ಶೈತ್ಯ ಬಿಟ್ಟಾಡಿದುದುಆರೂಢನೊಲಿದುಪ್ಪವಡಿಸ ಯತಿರಾಜ1 ತಾಪತ್ರಯಗಳೆಂಬ ರಾತ್ರಿ ತಾ ಜಗುಳಿದುದುಪಾಪಿ ಇಹಪರವೆಂಬ ಸುಳಿಗಾಳಿ ಜಾರಿದುದುಕೋಪಿ ಸಪ್ತವ್ಯಸನ ಗೂಗೆ ಕಣ್ಣುಡುಗಿದುದುನಿರ್ಲೇಪನುಪ್ಪವಡಿಸ ಯತಿರಾಜ2 ಅಷ್ಟ ಪ್ರಕೃತಿಗಳೆಂಬ ನಕ್ಷತ್ರವಡಗಿದವುದುಷ್ಟ ಪಂಚೇಂದ್ರಿಯದ ಕುಮುದಗಳು ಬಾಡಿದವುನಷ್ಟರಾರುವರೆಂಬ ಶಿವನಿಕರ ವೋಡಿದವುಶಿಷ್ಟ ನೀನೊಲಿದುಪ್ಪವಡಿಸ ಯತಿರಾಜ3 ಭ್ರಮರ ಕಮಲ ತಾನಿಲ್ಲಿ ಬಿರಿಯುತಿದೆನಿಶ್ಚಿಂತನೊಲಿದುಪ್ಪವಡಿಸ ಯತಿರಾಜ 4 ಮೂರ್ತಿ ಚಿದಾನಂದಗುರುನಾಥನುಪ್ಪವಡಿಸ ಯತಿರಾಜ 5
--------------
ಚಿದಾನಂದ ಅವಧೂತರು
ಬೆಳುದಿಂಗಳ ಪ್ರಭೆ ಬಲು ಕಾಂತಿಯಿರಲುಬಲವನು ದುರ್ಗುಣಕೆ ಹತ್ತಬಹುದೇಬೆಳಗುತ್ತ ಜ್ಞಾನದ ಚಂದ್ರನು ಹೊಳೆದಿರೆಬಳಿಕ ಜನನ ಮರಣ ಮುತ್ತಬಹುದೆ ಪ ಬಹು ಬೆಳಕು ಬೆಳಗಲು ಮನದ ಮರ್ಕಟವದುಮರವ ನೇರದೆ ಕೆಳಗೆ ನಿಲ ಬಲ್ಲುದೆಬಹು ಕಾಮವೆಂಬ ಕಾಗೆ ಕಣ್ಣುಡುಗಲುಗೂಡಿನಿಂದಾ ಹೊರಗೆ ಬರಬಲ್ಲದೆ1 ಚೆಲ್ಲಿರೆ ಕಾಂತಿಯು ಕಳ್ಳರಾರ್ವರ ತಲೆಚೆಂಡಾಡದೆ ತಾನು ಸುಮ್ಮನಿಹುದೆಫುಲ್ಲ ತಿಂಗಳ ಬೆಳಕು ಎಲ್ಲೆಡಗೆ ಹರಡಿರೆಪಂಚ ವಂಚಕರು ಓಡದಿಹರೆ2 ಒಲಿದರೆ ತೇಜವು ಅವಿದ್ಯದ ಕತ್ತಲೆಯುತಾನೋಡದೆ ಅಲ್ಲಿ ನಿಲಬಲ್ಲುದೆಬಲು ಕಳೆ ಚಿದಾನಂದಗುರು ತಾನು ಬೆಳಗುತಿರೆಬಹಳ ಜನ್ಮದ ಪಾಪ ಹರಿಯದಿಹುದೇ3
--------------
ಚಿದಾನಂದ ಅವಧೂತರು
ಬೋಧ ಬಂದನು ಮಾ | ಪ್ರಪಂಚ ಗೆಲುವವ ನಾರೆಲಮಾ ನಮ್ಮ | ಪತಿ - ಭಕ್ತರು ಕಾಣಿಲಮಾ ಪ ಎನಗಾರು ಇದಿರಿಲ್ಲ ಸ್ವರಾಜ್ಯದೊಳಗಿಂದು | ನೀನಾರೋ ಪರದೇಶಿ ಹೇಳಲಮಾ | ನಾನೆಂಬ ಹಮ್ಮಿನ ಬಿರುದನ ಬಿಡಿಸುವ | ನಾನೆಂಬ ಹಮ್ಮಿನ ಬಿರುದವ ಬಿಡುಸುವ | ಜ್ಞಾನ ಶಸ್ತ್ರಧಾರಿ ಬೋದನುಮಾ 1 ಸರಸಿದ ಭವರುದ್ರ ಇಂದ್ರರ ಬಗೆಯದ | ನೆರೆ ಕಾಮ ಗೆಲುವವ ರಾರೆಲಮಾ | ಭಾಗವತ ಶುಕ ಹನುಮಂತನು ಮೆರೆವ ಭೀಷ್ಟ ದೇವ ನಲ್ಲೇನುಮಾ 2 ವೈಕುಂಠದೊಳು ಸನಕಾದಿಕರೊಳು ಹೊಕ್ಕ | ಆ ಕೋಪ ಕಾನುವ ನಾರೆಲಮಾ | ಸಾಕಿ ಬೆಳೆಸಿದ ಶಾಂತಿಯ ನೆಲೆಯಿಂದ | ಪ್ರಖ್ಯಾತ ಕದರಿಯು ಕೇಳಲಮಾ 3 ಧರಿಯಿತ್ತ ರಾಮಗ ಸ್ಥಳ ವಿಲ್ಲೆಂದರು ಬ್ರಾ | ಹ್ಮರು ಲೋಭಗೆದ್ದ ವನಾರೆಲಮಾ | ಮರುಳ ಕೇಳು ಧನ ತೃಣ ಸಮ ಬಗೆದರು | ಕರ್ಣ ರಲ್ಲೇನು ಮಾ 4 ಬೆಟ್ಟದಿ ಉಡಿಹಾಕಿ ಕೊಳ್ಳಲು ಹೋದನ | ಶಿಷ್ಯ ಮೋಹನ ಗೆಲುವ ನಾರೆಲ ಮಾ | ಮುಟ್ಟಿ ಬೇಡಲುಳಿವ ಮಹನ ತಂದಿಟ್ಟನು | ಸೃಷ್ಟಿ ಮನುಜ ಚಿಲ್ಹಾಳಲ್ಲೇನು ಮಾ 5 ಭ್ರಗು ಮುನಿದಕ್ಷನು ಕಾರ್ತೃ-ವೀರ್ಯಾದಿಯ | ಬಗೆಯದ್ದ ಮದ-ವಳಿ ದಾರೆಲ ಮಾ | ಜಗ ಹೊಡೆತನವಿದ್ದು ಬಾಗಿ ನಡೆದ ನಮ್ಮ | ಸುಗುಣ ಜನಕರಾಯ ನಲ್ಲೇನು ಮಾ 6 ಹುಚ್ಚಾದ ವಶಿಷ್ಟನೊಳು ವಿಶ್ವಾಮಿತ್ರನು | ಮತ್ಸರಿಲ್ಲದವ ನಾರೆಲ ಮಾ | ಎಚ್ಚರಿಸಿದ ಸುಯೋಧನಗ ವಿಜಯತನ | ಸಚ್ಚರಿತ ಧರ್ಮ ನಿಲ್ಲೇನು ಮಾ 7 ಬಗೆ ಬಗೆ ವಿಷಯ ದುಪಾಯಗಳೆನಗುಂಟು | ನಿಗದಿಯ ನಡೆನುಡಿ ಕೇಳೆಲ ಮಾ | ಭಗವದ್ಭಾವ ಸರ್ವ ಭೂತದಿ ನೋಡಲು | ವಿಗುಣವೆ ಸದ್ಗುಣ ಭಾಸುದ ಮಾ 8 ನಿನ್ನ ಬಲವ ಕಂಡೆ ಶರಣವ ಹೊಕ್ಕೆನು | ಬೋಧ ಕೇಳೆಲ ಮಾ | ಸನ್ನುತ ಮಹಿಪತಿ ಸುತ ಪ್ರಭು ನೆಲೆದೋರಿ ಮನ್ನಿಸಿ ಹೊರೆವನು ಬಾರೆಲಮಾ 9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬ್ರಹ್ಮ ತಾವೆಂದು ಭಾವಿಸಿರೋ ಭಾಗ್ಯರಿರಾಬ್ರಹ್ಮತಾವೆಂದು ಭಾವಿಸಿದವರುಂಟು ಪ ಕಪಿಲ ನಾರದನು ಗೌತಮನು ಕಣ್ವನುನಿಪುಣ ಕೌಶಿಕನು ನಿರ್ಮಲನು ಅಗಸ್ತ್ಯಾಉಪಮಾನ್ಯ ಶಿಖಿ ಪಂಚ ದೂರ್ವಾಸರಂತಿವರು ಬ್ರಹ್ಮ ತಾವೆಂದು ಭಾವಿಸುವರು 1 ವ್ಯಾಸ ಶ್ರೀವತ್ಸ ಶುಕನು ಶೌನಕನುವಾಶಿಷ್ಟ ಅತ್ರಿ ಗಾರ್ಗೇಯನು ಕಶ್ಯಪನುದಾಸ ಪ್ರಹ್ಲಾದ ಬಕದಾಲ್ಬ್ಯ ಜಮದಗ್ನಿಭಾಸುರರಿಂತಿವರು ಬ್ರಹ್ಮತಾವೆಂದು ಭಾವಿಸುವರು 2 ಸನಕ ಸನಂದನ ಸನತ್ಸುಜಾತನುಮುನಿಯು ತೃಣಬಿಂದು ಮಾರ್ಕಾಂಡೇಯ ರೋಮಶನುಘನ ವಾಮದೇವ ದತ್ತಾತ್ರೇಯ ವಡಬನುಚಿನುಮಯರಿವರು ಬ್ರಹ್ಮತಾನೆಂದು ಭಾವಿಪರು3 ನಿತ್ಯ ತಾವೆಂದು ಭಾವಿಸುವರು 4 ಭವ ಮೂಲ ಹರಿವುದುಬ್ರಹ್ಮ ಬೇರೆನಲು ಬಹುಜನ್ಮವೇ ಬಹುದುಬ್ರಹ್ಮತಾವೆಂದು ಭಾವಿಸಿ ನೀವು ನಿತ್ಯಬ್ರಹ್ಮ ಚಿದಾನಂದ ತಾವಾಗುವಿರಿ ಸತ್ಯ 5
--------------
ಚಿದಾನಂದ ಅವಧೂತರು
ಬ್ರಹ್ಮ ಲಿಖಿತವ ಮೀರಿ ಬಾಳ್ವರುಂಟುನಿರ್ಮಳದಿ ವೈಷ್ಣವರ ಮನಮುಟ್ಟಿ ಭಜಿಸಿ ಪ ಪಾಪಕೆ ಹೇಸದ ಶಬರ ಬಟ್ಟೆಯನು ಕಾದಿರಲುಆ ಪಥದಿ ಸಲೆ ವೈಷ್ಣವನು ಬಂದುಪಾಪವನು ತಪ್ಪಿಸಿ ರಾಮನಾಮವ ಕೊಡಲುಕಾಪಥಕ ವಾಲ್ಮೀಕಿ ಮುನಿಯಾಗಲಿಲ್ಲವೆ ? 1 ಪಂಚಮಹಾಪಾತಕವ ಮಾಡಿದ ಅಜಾಮಿಳನವಂಚಿಸಿ ಯಮದೂತರೆಳೆದೊಯ್ಯುತಿರಲುಕಿಂಚಿತ್ತು ಹರಿನಾಮವನಾಕಸ್ಮಿಕದಿ ನೆನೆಯೆಅಂಚಿಗೆಳೆದೊಯ್ದವರು ವಿಷ್ಣುದೂತರಲ್ಲವೆ ?2 ಬಾಲಕ ತನ್ನ ತಾಯ್ತಂದೆಯೊಳ್ ಮುನಿದು ಹಲವುಕಾಲ ವನದೊಳು ತಪವ ಮಾಡಲುನೀಲಮೇಘಶ್ಯಾಮ ಮೆಚ್ಚಿ ಬಾಲಕನಿಗೆಮೇಲಾದ ಪದವಿಯನು ಕೊಡಲಿಲ್ಲವೆ ? 3 ದಶಕಂಠನನುಜನು ಜಾನಕಿಯ ಬಿಡ ಹೇಳೆಅಸುರ ಕೋಪವ ತಾಳಿ ಹೊರಗಟ್ಟಿದಾಗಪೆಸರಗೊಳುತ ಬಂದು ಮೊರೆಹೊಕ್ಕ ವಿಭೀಷಣಗೆಶಶಿರವಿ ಪರ್ಯಂತ ಪಟ್ಟಗಟ್ಟಲಿಲ್ಲವೆ ? 4 ಕಲಿಗೆ ಬೆದರುವರಲ್ಲ ಕಾಲನ ಬಾಧೆಗಳಿಲ್ಲಛಲದಿ ನರಳಿ ಪುಟ್ಟುವ ಗಸಣೆಯಿಲ್ಲಒಲಿದು ಕಾಗಿನೆಲೆಯಾದಿಕೇಶವರಾಯನಸಲೆ ನಂಬಿದವರಿಗೆ ಮುಕುತಿಯಿತ್ತುದಿಲ್ಲವೆ ? 5
--------------
ಕನಕದಾಸ
ಬ್ರಹ್ಮವೆತ್ತಲು ಪರಬ್ರಹ್ಮವೆತ್ತಲುಬ್ರಹ್ಮ ತಾವೆಯೆಂದು ವಾಚಾಬ್ರಹ್ಮವನೆ ಬಗಳುತಿಹರಿಗೆ ಪ ಆಸೆಯೆಂಬದು ಅಳಿಯಲಿಲ್ಲ ಆಕಾಂಕ್ಷೆತಾ ಕಳೆಯಲಿಲ್ಲಪಾಶವೆಂಬುದು ಬಿಗಿದು ಉರುಲು ಬಿದ್ದಿಹುದುದೋಷವೆಂಬುದು ಅಡಗಲಿಲ್ಲ ದುಷ್ಕøತವೆಂಬುದು ಒಣಗಲಿಲ್ಲಕ್ಲೇಶ ಪಂಚಕದ ವಿಷಯದಿ ಕೆಡೆದಿಹ ಮನುಜರಿಗೆ 1 ಕಾಮವೆಂಬುದು ಕಡಿಯಲಿಲ್ಲ ಕ್ರೋಧವೆಂಬುದು ಅಳಿಯಲಿಲ್ಲತಾಮಸವೆಂಬುದು ಶರೀರ ತುಂಬಿಕೊಂಡಿಹುದುಕಾಮಿತವೆಂಬುದು ಹೋಗಲಿಲ್ಲ ಕಷ್ಟವೆಂಬುದು ನೀಗಲಿಲ್ಲಪಾಮರರಾಗಿ ದಾಹಕೆ ಸಿಕ್ಕುಬಿದ್ದಿಹ ಮನುಜರಿಗೆ2 ಮೋಹವೆಂಬುದು ಹರಿಯಲಿಲ್ಲ ಮೂರ್ಖತೆಯೆಂಬುದು ಕರಗಲಿಲ್ಲಊಹೆ ಎಂಬ ಕುಬುದ್ಧಿಯು ಉಡುಗಲಿಲ್ಲದೇಹ ಶೋಧನೆ ತಿಳಿಯಲಿಲ್ಲ ದೇಹಿ ಚಿದಾನಂದ ಅರಿಯಲಿಲ್ಲಕಾಹುರ ಮದದಲಿ ಮರೆತಿಹ ಮಂಕುವನು ಮನುಜರಿಗೆ 3
--------------
ಚಿದಾನಂದ ಅವಧೂತರು