ಒಟ್ಟು 4668 ಕಡೆಗಳಲ್ಲಿ , 127 ದಾಸರು , 3353 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂತವಗೊಲಿದು ನೆರೆದೆ ಎಲೆ ಬಾಲೆ ನೀ ಬರಿದೆ ಪ ಕಾಂತೆಯುದರದಲಿ ತಾಳ್ದ ಕಮನಿಯೊಳ್ ಬಾಳ್ದಅ.ಪ ಮೈಮೊಗ ಬೇರಾದವಗೆ ಮಾತೃಘಾತಕನಿಗೆ ಬೈಯಲು ಭಾವನಕೊರಳ ಭಾವಿಸದರಿದವಗೆ ಕೈವಿಡಿದ ಕಾಂತೆಯನು ಕಾಡಿಗಟ್ಟಿದವಗೆ ತಮ್ಮಯ್ಯನರ್ಧಾಂಗಿಯನು ಅಣ್ಣನ ನೆರೆಸಿದವಗೆ1 ಹದ್ದನೇರಿದವಗೆ ಹಾವಿನಮೇಲೊರಗಿದವಗೆ ಶುದ್ಧ ಕರಡಿಯಮಗಳ ಸರಿ ಎಂದು ಆಳ್ದವಗೆ ಮುದ್ದಾಡಿ ಮೊಲೆಯೂಡಿದವಳಸುವನೆ ಕಳೆದವಗೆ ಕದ್ದು ಬೆಣ್ಣೆಯ ಮೆದ್ದ ಕರಿಮೈಯವಗೆ2 ಸುರನಿಶಾಚರ ಮಧ್ಯೆ ಅರಿಯೆ ಪೆಣ್ಣಾದವಗೆ ಸುರಪನಂದನ ಶಕಟನ ನೆರೆ ಹೊಡೆದವಗೆ ಸುರಪುರದರಸು ಶ್ರಿ ಲಕ್ಷ್ಮೀರಮಣಗೆ 3
--------------
ಕವಿ ಲಕ್ಷ್ಮೀಶ
ಎಂತಾದರು ಮಾಳ್ಪುದು ಏಕಾದಶಿ ಇಂಥಾ ವ್ರತವದಾವುದು ಕಂತುಜನಕ ಲಕ್ಷ್ಮೀಕಾಂತನೊಲಿದು ನಿರ್ಮ- ಲಾಂತಃಕರಣದಿ ನಲಿವ ಮಹಾಂತ ಪದವನೀಪ ಪ. ಕೋಟಿ ಕೋಟಿ ಜನ್ಮದ ಪಾತಕಗಳ ಕೋಟಲೆ ಬಿಡಿಸುವುದು ಆಟ ಪಾಟಗಳಿಂದಲಾದರು ನಿದ್ರೆಯ ದುರಿತ ಮಹಾಟವಿ ದಹಿಸುವ 1 ಹತ್ತೊಂದು ಕರಣದಿಂದ ಘಳಿಸಿದ ನಿ- ವತ್ರ್ಯ ಪಾತಕಗಳಿಂದ ನಿತ್ಯ ನರಕದೊಳಗೊತ್ತೆಗೊಳಿಪರ ಮೇ- ಲೆತ್ತಿ ರಕ್ಷಿಪ ಪರಮೋತ್ತಮ ವ್ರತವನ್ನು 2 ವರುಷದೊಳೊಂದಾದರು ಮಾಡಲು ಸರ್ವ ಪುರುಷಾರ್ಥಗಳೀವುದು ಸರಸಿಜನಾಭ ಶ್ರೀವೆಂಕಟಾಚಲಪತಿ ಕರುಣಾಸ್ಪದವಾದ ಹರಿದಿನ ವ್ರತವನ್ನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಎಂತು ನಿಲ್ಲುವೆನು ನಿನ್ನಯ ಬಳಿಯಲ್ಲಿ | ಅಂತರಾತ್ಮಕ ಪೇಳು ಎನಗೊಂದು ಹದನಾ ಪ ವೇದಶಾಸ್ತ್ರವನು ಅರಿಯೆ | ಪುರಾಣ ಪುಣ್ಯಕಥೆ | ಓದಲಿನ್ನರಿಯೆನೊ ಎಂದೆಂದಿಗೂ | ಭೇದ ಭೇದವನರಿಯೆ | ಬಾಗಿ ನಮಿಸುವದನರಿಯೇ | ಆದರಣಿ ಅರಿಯೆ ಆರಾಧಿನಿಯನರಿಯೆ1 ಜ್ಞಾನ ಭಕುತಿಯನರಿಯೆ | ಗಮನ ತೀರ್ಥವನರಿಯೆ | ಧ್ಯಾನವನು ಅರಿಯೆ ದಾಕ್ಷಿಣ್ಯವನು ಅರಿಯೆ | ಮೌನವನು ಅರಿಯೆ ಮಹತಪಸ್ಸು ಮೊದಲೆ ಅರಿಯೆ | ಗಾನವನು ಅರಿಯೆ ಗತಿಮತಿಗಳನು ನಾನರಿಯೆ 2 ಬುದ್ಧಿ ಪೂರ್ವಕವರಿಯೆ | ಯಾತರ ಸೇವಿ ಅರಿಯೆ ಏನು ಅರಿಯೆ | ದಾತಾರ ಜಗದೇಕ | ನಿನ್ನ ನಾಮವನುಣಿಸಿಕಾಯೊ 3
--------------
ವಿಜಯದಾಸ
ಎಂತು ಬಣ್ಣಿಸಲಮ್ಮಯ್ಯಾ ಈ ಗುರುವರರ ಪ ಎಂತು ಬಣ್ಣಿಪೆ ನಾ ನಂತನಾಂಶ ಜಗ - ದಂತರದೊಳಗಾ - ನಂತ ಮಹಿಮರಅ.ಪ ಸುರವರನಗರಸಮ - ವರಮಂತ್ರಸದನ ಜರಿದು ಸ್ಥಿರವಾಗೀ ಪುರದಲ್ಲಿ ಮೆರೆಯುತಲಿಹರನ್ನ 1 ಪೂರ್ವಯುಗದೊಳು ಸಾರ್ವಭೌಮನೆನಿಸಿ ಪಾರ್ವರ ಪೊರೆವದಕ್ಕ ಪೂರ್ವ ಯತಿ ಎನಿಸಿಹರನ್ನ 2 ದಿನ ದಿನದಲ್ಲಿ ಮಹ ಕನಕಾಭೀಷೇಕ ಮಾಳ್ಪ ಧನಿಕರ ತೆಜಿಸಿ ನಿ - ರ್ಧನಿಕ ಗೊಲಿದಿಹರನ್ನ 3 ಕ್ಷೀರಶೇಚನ ನಿತ್ಯ-ಸಾರ ಪಂಚಾಮೃತ ಬಿಟ್ಟು ಕೀರುತಿ ಮಾಳ್ಪಜನರ ಸೇರಿ ಕೊಂಡಿಹರನ್ನ 4 ದಾತರೆನಿಸಿ ಜಗದಿ - ಖ್ಯಾತರಾಗಿ ಗುರುಜಗ ನಾಥ ವಿಠಲನೊಲಿಸಿ ದೂತಜನರ ಪೊರೆವೊರನ್ನ 5
--------------
ಗುರುಜಗನ್ನಾಥದಾಸರು
ಎಂತು ಬಿನ್ನೈಸಲೊ ಮುರಾರಿ ಸಾರಿಗೆ ಸಾರಿ | ಸಂತ ಜನರ ಆಧಾರಿ ಪ ಶ್ಲೋಕ - ಘನ ಅನವರತÀ ಕಾಯಾ | ಸ್ವಾಮಿ ಲಕ್ಷ್ಮೀ ಸಹಾಯ | ಅನಿಮಿಷ ಮುನಿಗೇಯಾ ಹೇಯ ಧರ್ಮ ವಿಹಾಯ | ನಗರ ನಿಲಯಾ | ಅಮಿತÀ ಆನಂದ ಕಾಯಾ | ನಾಗ ತಲ್ಪೋರು ಗಾಯಾ 1 ಪದ - ಶರಣು ಶರಣು ಶಾರಣ್ಯನೆ | ಗುಣ ಗುಣ್ಯನೆ | ನಮಗಾನನ್ಯನೆ | ನಿರುತರಂತರ ಕಾರುಣ್ಯನೆ ಪ್ರದದಾನ್ಯನೆ | ಅಪ್ರತಿ ಧನ್ಯನೆ | ಪರಮ ಪುರುಷ ಅಸಮಾನ್ಯನೆ | ಮಹ ಪುಣ್ಯನೆ | ಪ್ರಳಯ ಕನ್ಯೆನೆ | ಕರುಣ ಸಾಕ್ಷಿಗನೆ ಲಾವಣ್ಯನೆ | ಅನುಗಣ್ಯನೆ ಪ್ರಾಕೃತ ಶೂನ್ಯನೆ 1 ಶ್ಲೋಕ - ಪರಿಪರಿ ಹೇಯ ಗಾತ್ರಾ ತೆತ್ತನೊ ಇಷ್ಟ ಮಾತ್ರಾ | ಚರಿಸಿದೆ ವಿಷಯ ಯಾತ್ರಾ | ಪಾರಗಾಣೆನೋ ಮಿತ್ರಾ | ಕೊರಳಿಗೆ ಮಮತೆ ಸೂತ್ರಾ | ಉರುಲು ಬಿದ್ದಿದೆ ಚಿತ್ರಾ | ಸುರಕು ಬಡಿಪ ತನುತ್ತಾ | ಕಮಲ ನಿನೇತ್ರಾ | 2 ಪದ - ನರಕ ನರಕ ಉಂಡು ಬೆಂದೆನೊ | ಇಲ್ಲಿ ನಿಂದೆನೊ | ಗತಿಗೆ ಮುಂದೇನೊ | ಕುರುಡ ಕಿವುಡನಾಗಿ ನೊಂದೆನೊ | ಇನ್ನೊಂದೇನೊ | ಉಪಾಯವಂದೆನೊ | ಮರಹು ಸಾಗರದೊಳು ಸಂದೆನೊ | ಅಂದು ಹಿಂದೆನೊ | ಸುಜನರಿಗಂದೇನೊ 2 ಶ್ಲೋಕ - ಸುಲಲಿತ ರುಚಿರಪಾಂಗಾ | ಶುದ್ದ ಸ್ವಭಾವÀ ರಂಗಾ | ಪಲಿಪರಮಾಣು ಸಂಗಾ | ಪಾವನ ಕೋಮಲಾಂಗಾ | ವೊಲಿಸಿದವರ ಭಂಗಾ | ಪರಿಸುವ ಶಿಂಗ ಶಿಂಗಾ | ವರಬಲಗುಣ ತರಂಗಾ | ಸರಸಿಜ ಹೃತ್ಪುಂಗಾ3 ಪದ - ಚಿಂತಿಸುವೆನೊ ನಿನ್ನ ವಿಗ್ರಹಾ | ಮನೋನಿಗ್ರಹಾ | ವಾಗಲಿ ಅನುಗ್ರಹಾ | ಸಂತತ ಎನಗಿದೆ ಸಂಗ್ರಹಾ | ದೇಹವೈಗ್ರಹಾ | ದುರುಳರ ಪ್ರತಿ ಗ್ರಹಾ | ಮುಂತೆ ಕೈಕೊಂಬ ದುರಾಗ್ರಹಾ | ಯೈವ ವಿಗ್ರಹಾ | ಮಾಣಿಸು ಶಿರಿಗ್ರಹಾ | ಸಂತೈಸು ಕರುಣವಾರುಣಗ ಅನಿಗ್ರಹಾ 3 ನವನೀತ ಗೋಪಿ ವಸ್ತ್ರಾಪಹಾರಾ | ಕಾಲ ಧಾರಾ | ಕಂಸದಾನವ ಸಂಹಾರಾ | ಧ್ರುವ ಬಲಿಕರಿ ಉದ್ಧಾರಾ | ನಾನವತಾರ ಧೀರಾ | ಪವನ ಮನಮಂದಿರಾ ಪಾಲಿಸೊ ವಾರಂ ವಾರ4 ಪದ - ವಿಜಯನಗರಾಧೀಶ ಸರ್ವೇಶಾ | ಮಣಿಮಯ ಭೂಷಾ | ಸೂರ್ಯ ಕೋಟಿ ಪ್ರಕಾಶಾ | ತ್ರಿಜಗದೊಳಗೆ ನೀನೆ ನಿರ್ದೋಷಾ | ಶಕ್ತಿ ವಿಶೇಷಾ | ಐಶ್ವರ್ಯ ವಿಲಾಸಾ | ಋಜುಜ್ಞಾನ ಕೊಡುವದೊ ಮನೋತ್ತರಿಸಾ | ಮಂಜುಳ ಭಾಷಾ | ಭೂದಾ ರಜವಾಸಾ | ನಿರ್ಜರ ಕೋಶಾ | ಹೃದಯ ಕಾಶಾ | ನಾಮಕ ಮಹಿದಾಸಾ 4
--------------
ವಿಜಯದಾಸ
ಎಂತು ಮರುಳಾದೆ ನೀ ಯದಿಯ ಬಿಗುವಿನಲಿ ತಿರುಗಿ | ಪಂಥದಲ್ಲಿ ಕೆಡಲಿಬೇಡ ಎರಡು ದಿನ | ಸಂತೆ ನೆರೆದಂತೆ ಮೂಢ ಇಪ್ಪದಿದು | ಸಂತತ ತೊರೆದು ಬಾಡೊ ಪ್ರಾಣಿ ಪ್ರಾಣಿ ಪ ವಿಂಚುಗೂಳನು ತಿಂದು ಮನೆ ಮನೆಗಳು ತಿರುಗಿ | ಸಂಚಿತಾರ್ಥವ ತಿಳಿಯದೆ ಮರುಳಾದ | ಪರ | ಪಂಚವನು ನೀ ಕಳಿಯದೆ ವ್ಯರ್ಥಾಯ | ವಂಚನಿಂದಲಿ ನಡೆದು ಬಾಯಿ ತೆರೆದು | ಹಲ್ಲನು | ಹಂಚಿಕೆ ತೋರಿದಂತೆ ಮೃತ್ಯುವಿನ | ಪಂಚದಲಿ ಸೇರಿದಂತೆ | ಆಗುವುದು | ಕಂಚು ಕೆಳಗೆ ಬಿದ್ದಂತೆ ಪ್ರಾಣಿ 1 ನುಗ್ಗು ನುಸಿಯಾಗದಿರು | ನೂಕು ನಿನ್ನಹಂಕಾರ | ಮುಗ್ಗದಿರು ಈ ಬಲಕಿಗೆ ಸ್ಥಿರವಾಗಿ | ಬಗ್ಗು ನಡೆವಳಿ ನಡೆದು | ವೆಗ್ಗಳದ ನಡೆವಳಿ ನಡೆದು | ವೆಗ್ಗಳದ ಧರ್ಮದಾ ಸುಗ್ಗಿಯಲಿ ದಿನವ ಹಾಕೊ | ಬಿಡು ಬಿಡು ಅಗ್ಗಳಿಕೆತನವೆ | ಸಾಕು ಆವಾಗ ತೆಗ್ಗಿಕೊಂಡಿರಲಿ ಬೇಕು | ಪ್ರಾಣಿ 2 ಇನ್ನಾದರೂ ಕೇಳು | ಪುಣ್ಯವಂತರ ಕೂಡು | ನಿನ್ನವರು ನಿನಗೆ ದಾರೊ | ಕಣ್ಣಾಗೆ ಎಣ್ಣೆ ಬಿದ್ದಂತೆ ಸಾರೊ ಬಾಯಿಂದ | ಬೆನ್ನಿಗೆ ಬಂದ ವಿಚಾರೊ ತುದಿಯಲಿ | ಮಣ್ಣು ಮಣ್ಣನೆ ಕಲಿತು ಹೋಗುವುದು ನಿಶ್ಚಯವು | ಚೆನ್ನಾಗಿ ಎಚ್ಚೆತ್ತುಕೋ ಈ ಮಾತಿಗೆ | ಖಿನ್ನನಾಗುವದೇತಕೊ ಸಾವಿರಕು | ಮುನ್ನಿಲ್ಲವೊ ಮನಸಿತೊ ಪ್ರಾಣಿ 3 ವೇದಶಾಸ್ತ್ರವನರಿಯೆ ಆದಿಪುರಾಣಗಳು | ಅದ್ವೈತ | ವಾದವರ ಕೂಡದಿರು ಇದೆ ಮಿಗಿ ಲಾದರು ಮರಿಯದಿರು ಉತ್ತಮ | ಸಿರಿ ವಿಜಯವಿಠ್ಠಲನ ಶ್ರೀ | ಪಾದವನು ಒಂದೇ ಭಕ್ತಿಯಿಂದಲಾ | ರಾಧಿಸು ಇದಕೆ ಯುಕ್ತಿ ಕಡಿಯದಲೆ | ಮಾಧವನು ಕೊಡುವ ಮುಕ್ತಿ ಪ್ರಾಣಿ4
--------------
ವಿಜಯದಾಸ
ಎತ್ತಲಿಂದ ಬಂದೆ ಎನ್ನ ಒಗೆತನಕೆ ಎಲೆಖೋಡಿ ಸವತಿಎತ್ತಲಿಂದ ಬಂದೆ ಎನ್ನ ಒಗೆತನಕೆ ಪ ಕತ್ತಲು ಬೆಳುದಿಂಗಳಂತಾಯಿತುಮಿತ್ತು ಎತ್ತಲಿಂದ ಬಂದು ಸೇರಿತುಬಂದು ಎದುರಿಗೆ ಹಲ್ಲ ತೆರೆದಳುಒಂದು ಮಾತನು ಆಡದೆನ್ನೊಳುಒಂದನ್ನು ಸೇವೆಗೆ ಬರಗೊಡಳುಸಂದಿಯಲಿ ಲೊಟಕೆಯ ಹಾಕುತಲಿಹಳು1 ಹಾಲೊಳು ವಿಷವ ಹೊಯ್ದಂತೆ ಮಾಡಿದಳುಇಲ್ಲವನೆ ಹೇಳಿ ಕಾಲಕಾಲಲಿ ಎನ್ನ ಒದೆಸಿದಳುಬೇಳ ಮೇಳದಿ ತೊಡೆಯ ಮೇಲೆ ಹೊರಳಿಮೇಲೆಯೆ ಮೀಸೆಯ ಹುರಿ ಮಾಡುವಳು 2 ನೆರಳ ನೀರೊಳು ಬಗ್ಗಿ ನೋಡುವಳು ಎಬ್ಬಿ ತೆಗೆದುಮರಳಿ ಮರಳಿ ಒಡವೆಯ ನಿಡುವಳುಹೊರಯಿಕೆ ಒಳಯಿಕೆ ಮುರುಕಿಸಿ ನಡೆಯುತಲಿರೆ ಗಂಡಸು ಎಂದು ಅಣಕಿಸುತಿಹಳು3 ಮೋರೆಯನೀಗ ಎನಗೆ ತೋರಿಸಳುಸೀರೆ ಕುಪ್ಪುಸವ ಆರು ಕಾಣದಂತೆ ಉಡುವಳುದಾರಿಯ ಹಿಡಿ ನೀನಿರಬೇಡೆಂಬಳುನೂರು ಬಾರಿಯು ಸಾರಿದೆನೆಂಬಳು 4 ಒಗೆತನ ಕೊಂಡಳು 5 ಜನನ ಮರಣಗಳಳಿದು ಜಠರ ಬಾಧೆಗಳಳಿದುಘನ ಪುರುಷನಾಗಿ ಘನತಾನಾಗಿ ಇರುವನವನ6 ಪತಿ ಚಿದಾನಂದ ಮೂರುತಿ ತಾನಾದವನು7
--------------
ಚಿದಾನಂದ ಅವಧೂತರು
ಎಂಥ ಆಟವಿದು ಕ್ಷಿತಿಜಪತಿದೆಂಥ ಆಟವಿದು ಪ ಎಂಥ ಆಟ ಶ್ರೀ ಕಂತುಜನಕ ಭ ಕ್ತಾಂತರಂಗ ಸುರಚಿಂತಾಮಣಿಯೇ ನಿನ್ನದೆಂಥ ಅ.ಪ ಮಡುವಿನೊಳಡಗಿರುವ ಉರಗನ ಹೆಡೆಮೆಟ್ಟಿ ನಾಟ್ಯಮಾಡುವ ಸಡಗರದಲಿ ಗೊಲ್ಲ ರ್ಹುಡುಗರ ಕೂಡಿಸಿ ಒಡನೆ ಬಿಲ್ಲಿನಾಟ ರಚಿಸಿ ಮಧುರಪುರ ಬಿಡದೆ ಸೇರಿ ಗಡಕಡಿದು ಮಾವನ ಶಿರ ತಡೆಯದೆಮನಪುರಪಥವ ಪಿಡಿಸಿದ್ದು 1 ಗೋವಳರೊಡಗೂಡಿ ಗೋವುಗಳ ಕಾಯಲ ಡವಿಸೇರಿ ಮಾಯವೃಷ್ಟಿ ಅತಿಭರದಿ ಗೈಯಲಾಗ ಗೋವರ್ಧನ ಗಿರಿಯೆತ್ತೆ ಏಳುದಿನ ಗೋವುಗಳನು ಮತ್ತು ಗೋವಳರೆಲ್ಲರ ಜೀವ ಸಮಾನಮಾಡಿ ಪ್ರೇಮದಿ ಸಲಹಿದ್ದು 2 ಎಷ್ಟು ಕ್ಷೀರ ನೀಡೆ ಜನನಿಗಿನ್ನಿಷ್ಟೆಂದ್ಹಟ ಮಾಡೆ ಸಿಟ್ಟಿನಿಂದ ತಾಯಿ ಕಟ್ಟಲು ಒರಳಿಗೆ ಅಟ್ಟಹಾಸದಿ ಡುರುಕಿಟ್ಟು ನಡೆದು ಶಾಪ ಪಟ್ಟು ಪಟ್ಟಣಮುಂದೆಷ್ಟೋಕಾಲದಿಂದ ಕಷ್ಟಪಡುವರ ದಯದೃಷ್ಟಿಯಿಂ ಸಲಹಿದ್ದು 3 ದುರುಳ ಭಸ್ಮನಂದು ಹರನಿಂ ಉರಿಹಸ್ತವನು ಪಡೆದು ಪರಮಪಾಪಿ ವರ ಕರುಣಿಸಿದವನಿಗೆ ಮರುಳಮಾಡವನ ಕರವೆ ಅವನ ಮೇ ಲ್ಹೊರೆಸಿ ಉರುವಿಸಿ ಹರನ ರಕ್ಷಿಸಿದ್ದು 4 ಬತ್ತಲೆ ಪುರಗಳನ್ನು ಪೊಕ್ಕು ನೀ ಸತಿಯರ ವ್ರತಗಳನು ಹತಗೈದು ತ್ರಿಪುರದ ಪಥಪಿಡಿಸೆಮಪುರ ಹಿತದಿಂ ಸುರಗಣಕತಿಸೌಖ್ಯವ ನಿತ್ತು ಜತನಗೈದಿ ಸಿರಿಪತಿಯ ಶ್ರೀರಾಮನೆ ಸತತದಿಂಥ ಮಹಪತಿತ ಮಹಿಮದಿಹ 5
--------------
ರಾಮದಾಸರು
ಎಂಥ ಗುರುಶಿಷ್ಯರ ಜೋಡಿಯು ನೋಡಿರಿಇಂಥವರ ಸ್ಮರಿಸಿದರೆ ಚಿಂತೆ ದೂರಾಗುವದು ಪಧ್ರುವರಾಜವಂಶದಿಂದಿಳೆಯೊಳಗೆ ಅವತರಿಸಿಸರ್ವದುರ್'ಷಯದಲಿ ವೈರಾಗ್ಯ ಬೆಳೆಸಿಬಾಲ್ಯದಲಿ ಪರಮಹಂಸಾಶ್ರಮ ಸ್ವೀಕರಿಸಿಶ್ರೀಪಾದ-ರಾಜರೆಂದೆನಿಸಿ ಮೆರೆವರು ನೋಡು 1ಶ್ರೀಶನನು ಕಂಬದಿಂದ ತಂದ ಪ್ರಲ್ಹಾದನೆವ್ಯಾಸಮುನಿಯಾಗಿ ಅವತರಿಸಿ ಬಂದುದೇಶಾಧಿಪತಿಗೆ ಬಂದಾಪತ್ತು ಪರಿಹರಿಸಿಶ್ರೀ ಪಾದರಾಜರಿಗೆ ಶಿಷ್ಯರಾದರು ನೋಡು 2ಜ್ಞಾನ ವೈರಾಗ್ಯ ಭಕ್ತಿಯು ತುಂಬಿರುವುದುದೀನಜನ ಮಂದಾರ ಭಕ್ತ ಪುರಧೇನು'ಜುೀಂದ್ರ ವಾದಿರಾಜರಿಗೆ ಗುರು ಪರಮಗುರುಭೂಮಪತಿ'ಠ್ಠಲನ ಕುಣಿಸಿದ ಮಹಾತ್ಮರು 3ಸೋದೆ ವಾದಿರಾಜರು
--------------
ಭೂಪತಿ ವಿಠಲರು
ಎಂಥ ಮಾತನಾಡಿದಿ ಎಲಾ ನೀನು | ಛೀ | ಸಂತನಾದ ಮೇಲೆ ಮುಂಚಿನದೇನೊ ಪ ಊರ ಮುಂದಿನ ಕೆರೆ ಭಾವಿಯ ನೀರು |ಊರೆಲ್ಲ ಬಳಕಿಗೆ ತಾವು ತರುವರು | ಪಾರಮಾರ್ಥಿಕರ ಪಾದೋದಕ ಮಾಡಲು | ನೀರೆಂದು ಅದಕಿನ್ನು ದಾರಾಡುವರು ? 1 ಕಲ್ಲಲ್ಲಿ ಲಿಂಗವ ಮಾಡಿದರೇನೊ | ಲಿಂಗವಲ್ಲದೆ ಕಲ್ಲು ಎಂಬುವರೇನೊ | ಬಲ್ಲ ಸತ್ಪುರುಷರ ಬಗೆಯನರಿತು | ತನ್ನಲ್ಲಿ ಬ್ರಹ್ಮವ ಕಂಡವನೀಗ ನರನೇನೊ 2 ಕಾಮರ ಅಡವಿಯೊಳಿರುವದಾ ತಂದು | ಕಾಮಿಸಿ ಪಾದುಕ ಮಾಡಲು ಎಂದು | ಸ್ವಾಮಿ ಸದ್ಗುರು ಭವತಾರಕ ಮೆಟ್ಟಲು | ಭೂಮಿ ಜನರಡ್ಡ ಬೀಳ್ವರಿದೇನೋ 3
--------------
ಭಾವತರಕರು
ಎಂಥ ಸೂಕ್ಷ್ಮವ ನೋಡಿರಿವನ ನಮ್ಮ ಕಾಂತೆ ದ್ರೌಪತಿದೇವಿಗೆ ವರಹೀನ ಪ. ಸಣ್ಣ ಕೂಸಿದ್ದಾಗ ಇವನು ಸೂರ್ಯಗೆ ಹಣ್ಣೆಂದುಹಾರಿದ ಗಗನಕ್ಕೆ ತಾನು ಉಡ್ಡೀನ ಗೈದುನೀರಧಿಯ ದಾಟಿದನುಇವನ ಅಂಗದ ಕೋಮಲ ಬಣ್ಣ ವರ್ಣಿಸಲೇನು 1 ಗಂಧಮಾದನ ಗಿರಿ ತಂದು ನೋಡಿ ಗಿರಿ ನಿಂದಲ್ಲೆ ಹಿಂದಕ್ಕೆ ಒಗೆದ ಈಡ್ಯಾಡಿಒಂದೊಂದು ಬೆಡಗವ ನೋಡಿನಮ್ಮ ಇಂದಿರೇಶನು ನಕ್ಕ ಕೌತುಕ ಮಾಡಿ 2 ಹುಟ್ಟಿದಾಗ ಭೀಮ ಒಂದಿಷ್ಟು ಎತ್ತಿಪಟ್ಟನೆ ಬಿದ್ದು ಕೌತುಕ ಮಾಡಿದನೆಷ್ಟುಬೆಟ್ಟಗಳ ಒಡೆದು ಹಿಟ್ಟೆಟ್ಟುಇವನ ಅಂಗದ ಕೋಮಲ ವರ್ಣಿಸಲೆಷ್ಟು3 ಭಿಕ್ಷೆ ಬೇಡಿದನಂತೆ ಕಂಡು ತಾನರಿಯಳು ಕಾಂತೆ ಇಂಥ ದಿಂಡ ಪುರುಷನ ಬೆರೆದಳು ಕಾಂತೆ4 ಘನ್ನಗರಳ ಕುಡಿದನಂತೆ ಅದು ತನ್ನ ದೇಹವ ತಪಿಸುತಲಿದ್ದವರಂತೆಸನ್ಯಾಸ ಇವಗ್ಯಾಕೆ ಕಾಂತೆನಮ್ಮ ಚೆನ್ನ ರಾಮೇಶ ನೋಡಿನಕ್ಕನಂತೆ 5
--------------
ಗಲಗಲಿಅವ್ವನವರು
ಎಂಥಾ ಜಾಣೆಯೋ ಸುಪ್ರವೀಣೆಯೋ ಮುನ್ನಾಕೆಎಂಥಾ ನೋಂಪಿಯನೋಂತ ಫಲವೋಕಾಂತನ ಪರಕೀಯ ಕಾಂತೆಯೆಡೆಗ ಬಿಡ-ದಂತೆ ಸಂತಸದೊಳೇಕಾಂತ ಸುಖದೊಳಿರ್ಪ ಪ ನುತ ಹಂಸತೂಲತಲ್ಪದೊಳು ನಾನಾ ಬಂಧಗತಿಯಲಿ ಕಾಮಕೇಳಿಯನೆಸಗಿರತಿಸುಖಪಾರವಶ್ಯದೊಳೊಂದು ವರುಷದಮಿತಿಯನು ತೃಟಿಕಾಲವೆಂದುಸುರುವಳು ತಾ 1 ಹೆಣ್ಣು ಜನ್ಮದಿ ಹುಟ್ಟಿದುದಕೆ ಫಲವದುಕನ್ನೆಯರೊಳಗೆ ಕಟ್ಟಾಣಿಯಾಕೆಮುನ್ನೆಷ್ಟುಗಾಲ ತಪವ ಮಾಡಿ ತಾನಿಂಥಾಪುಣ್ಯವ ಪಡೆದಳಾಕೆಯ ಜನ್ಮ ಸಫಲವೋ2 ವರುಷವಾಗಲಿ ಒಂದು ದಿನವಾದರಾಗಲಾತರುಣಿಯ ಭೋಗದಂತಿರಬೇಡವೆಇರುಳು ಹಗಲು ಕಾಣದಂತೆ ಶ್ರೀ ಕೆಳದಿಯಪುರದ ರಾಮೇಶನೊಳ್ಪರಸದೊಳಿರುವಳಿಂ 3
--------------
ಕೆಳದಿ ವೆಂಕಣ್ಣ ಕವಿ
ಎಂಥಾ ನಿರ್ದಯನಾದ್ಯೋ ಎಲೆ ದೇವನೆ ಕಂತುಪಿತ ನಿನ್ನ ಅಂತ:ಕರುಣ ಎನ್ನ ಮೇಲೆ ಇಲ್ಲದೆ ಪ ಅಂತರಂಗದಿ ಮನದಿ ಅನುದಿನವು ಬಿಡದೆ ನಿಮ್ಮಾ ಚಿಂತನೆಯ ಮಾಡಿದರೆ ಚಿತ್ತಕರಗದೇಕೆ ಅಂಥ ಮಹಾದೋಷ ದತಿಶಯನಗೇನುಂಟ- ನಂತಗುಣ ಪರಿಪೂರ್ಣ ಆದಿನಾರಾಯಣ 1 ವಾಸುದೇವನೆ ನಿಮ್ಮ ವರ್ಣಿಸುವೆನು ವಸುಧಿಯೊಳು ಭೂಸುರರ ಪೋಷಿಸುವ ಪುಣ್ಯಪುರುಷಾ ಘಾಸಿಗೊಳಗಾಗಿ ನಿಮ್ಮ ಧ್ಯಾಸವೇಗತಿಯೆಂದು ಏಸೋ ಪರಿಯಲಿ ಭಜಿಸಿ ಈಶ ನಿನ್ನ ಕೃಪೆಯಾಗದೂ 2 ಸಕಲಲೋಕಾಧೀಶ ಸಕಲಭಾರಕರ್ತನಾಗಿ ಪ್ರಕಟ ಭಕುತರೊಳಗೆ ಪಾಲಿಸದೆ ಎನ್ನಾ ಮುಕುತಿದಾಯಕ ಹೆನ್ನ ವಿಠ್ಠಲ ನೀನೆ ಗೋವಿಂದ ಅಕಲಂಕ ಮಹಿಮ ನಿನ್ಹರುಷವನು ತೋರದಿನ್ನಾ 3
--------------
ಹೆನ್ನೆರಂಗದಾಸರು
ಎಂಥಾ ಬಾಲಕನಿವನು ಎಷ್ಟೆಂದ್ಹೇಳಲಿ ನಾನು ಪಂಥಗಾರಿಕೆಯಂಗ ಪರಮ ಪುರುಷರಂಗ ಅಂತವ ತಿಳಿಗುಡನು ಗೋಪೆಮ್ಮಾ ಪ ನೋಟಾವೇಟದಿ ನಲುವಾ ನಡೆಯಾಲೊಲ್ಲದೆ ನಿಲುವಾ ಸ್ಫೋಟ ಹೃದಯವಾಗುವ ಪರಿಯಂಜಿಸುವ ಮಗು ನೀಟ ಘಾತಪಾತಕನಮ್ಮಾಗೋಪೆಮ್ಮ ನಿತ್ಯ ಬೆಣ್ಣೆಯ ಸವಿದು ಕಾಟಕಾರವೆ ಭಂಡಾ ತುರುಗಾವರೋಳು ಪುಂಡಾ ಆಟಕೆ ಗುಣವೇನ ಗೋಪೆಮ್ಮಾ 1 ನಯ ಮಾತಿಲಿ ಬರುವಾ ನೋಡಲು ಕಠಿಣಿರುವಾ ತಾಯಡಬಲ ನೋಡಾ ತರುಣಿಯರನ ಬಿಡಾ ಬಾಯಾದೆರೆದು ಬೇಡವಾ ಗೋಪೆಮ್ಮಾ ತಾಯಿಂಗಂಜನು ನಿನಗೆ ತಡೆದುರೋಗವ ಹೊರಗೆ ಮಾಯಾಗಾರನೆ ಗೋವಾ ಮತಿಯ ಕಡುವನಿವ ಸಾಯಸ ಕಲಿಯಮ್ಮ ಗೋಪೆಮ್ಮಾ 2 ಇದರೇರಿ ಚಿನ್ನವರಾ ಇಕ್ಕಿ ಅಂಗವ ತೋರಾ ಕಾಲ ಕೆದರಿ ಪೊರೆವ ಬಾಲಾ ಅದ್ಭುತ ವಿಕ್ರಮನೆ ಗೋಪೆಮ್ಮಾ ಉದ ಧಿಗಂಜನು ಧುಮುಕಿ ಉಲುವಾ ಬುದ್ದಿಯ ಸೊಕಿ ಮುದದಿ ವಾಜಿರಿಸೇ ಮಹಿಪತಿಸುತ ಪ್ರಭು ಬುಧ ಜನರೊಲುವಂತೆ ಗೋಪೆಮ್ಮಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂಥಾ ಮಹಿಮನಿವನೆ ಗೋಪಾಲಕೃಷ್ಣ ಎಂಥ ಮಹಿಮನಿವನೆ ಪ. ಎಂಥಾ ಮಹಿಮನಿವನಂತ ಕಂಡವರಿಲ್ಲ ಕಂತು ಜನಕ ಸರ್ವರಂತರಂಗದೊಳಿಪ್ಪ ಅ.ಪ. ಕರಚರಣಗಳಿಲ್ಲದೆ ಇದ್ದರು | ಮುದುರಿ ಘುರುಘುರುಗುಟ್ಟುತಿಹುದೆ ವರಕಂಬೋದ್ಭವ ವಟು ಪರಿಶು | ಧರಿಸಿರುವನ ಚರಿಸಿ ಮಾವನ ಕೊಂದ ನಿರ್ವಾಣ ಹಯವೇರಿ ಶರಧಿಯೊಳಾಡಿ ಗಿರಿಯಡಿ ಓಡಿ ಧರೆಯನು ತೋಡಿ ಕರಳೀಡ್ಯಾಡಿ ಕರವ ನೀಡಿ ಭಾರ್ಗವ ದಶರಥ ಸುತ ಅಂಬರ ತೊರೆದ ರಾವುತ 1 ಮಂದರ | ಬೆಂಡಂತೆ ಧರಿಸಿ ವನಿತೆಯ ತಂದನೀ ಧೀರ ಘನ‌ಘರ್ಜನೆಯು ಗಂಗಾಜನಕ | ಜಮದಗ್ನಿಸುತ ವನಚಾರಿ ತುರುಪಾಲ ವನಿತೆರೊಂಚಕ ಕಲ್ಕಿ ಜನಿಸಿ ಜಲದಿ ಬೆನ್ನಲಿ ಗಿರಿಕೋರೆ ಘನ ಹೊಸಲಾಸನ ತಿರಿದನುಜನ ತರಿದ ಮಾತೆ ಕಪಿವೆರಸಿ ವೃಂದಾವನ ಚರಿಸಿ ದಿಗಂಬರ ಹರಿ ಏರಿದನೆ 2 ಸುತನಿಗಾಗಮವಿತ್ತನೆ | ಕ್ಷಿತಿಧರಧಾರಿ ಸುತನ ಮೂಗಿನೊಳ್ ಬಂದನೆ ಸುತವಾಕ್ಯ ಸತ್ಯವೆನಿಸಿ ಅತಿ ಕುಬ್ಜ ಕ್ಷಿತಿಯನಿತ್ತು ವ್ರತಧಾರಿ ವಸನ ಚೋರ ವ್ರತಭಂಗ ಏರಿ ತುರಂಗ ಸತಿಯನೆ ಪೊರೆದ ಸತಿಯಂತಾದ ಸತಿಯಳ ಸಂಗ ಸತಿಗರಿದಂಗ ಸತಿಯ ಬೇಡಿ ನೀಡಿ ಸತಿಯ ಕೂಡಿ ಜಾರ ಸತಿ ಹೆಗಲೇರಿದ 3 ವಾಸ ಜಲದಿ ಮೈ ಚಿಪ್ಪು | ಯಜ್ಞ ಸ್ವರೂಪ ಮಾನವ ಮೃಗರೂಪು ಆಸೆಬಡಕ ಮಾತೆ ದ್ವೇಷ ವನದಿ ವಾಸ ಪೋಷ ಪಾಂಡವ ಜಿನ ಮೋಸ ವಾಜಿ ಮೇಲ್ವಾಸ ನಾಸಿಕ ಶೃಂಗ ನಗಪೋತ್ತಂಗÀ ಮಾನವ ಸಿಂಗ ನೃಪರ ದ್ವೇಷ ಪೋಷಿ ಯಜ್ಞವೃಂದ ವಾಸಿ ಘಾಸಿವ್ರತ ಕಲಿಮುಖ ದ್ವೇಷಿ 4 ಅಮೃತ ಭೂಸತಿಯ ಪೊರೆದು ಪಾಪಿ ಕರುಳ್ಬಗೆದ ಜಲಪಿತ ಭೂಪರ ಕಾಡಿ ರಘುಭೂಪ ಸೋದರತಾಪ ಗೋಪ್ಯಕಲ್ಯಂತಕಾಲ ಗೋಪಾಲಕೃಷ್ಣವಿಠ್ಠಲ ಆಪಜವಾಸ ಆ ಪೃಥ್ವೀಶ ಆ ಪುತ್ರಪೋಷ ಆ ಪದ ಸರಿತ ಕೋಪಿ ಲಂಕೆ ಪುರತಾಪಿ ಗೋಪಿಕಾ ವ್ಯಾಪಿ ಮಾನಹೀನ ಘೋಟಕವಹನ 5
--------------
ಅಂಬಾಬಾಯಿ