ಒಟ್ಟು 564 ಕಡೆಗಳಲ್ಲಿ , 86 ದಾಸರು , 441 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಮೋದವಿಠಲದಾಸರ ಸ್ತೋತ್ರ ಮೋದವಿಠಲದಾಸರಾಯ ನಿನ್ನ ಪಾದವನಂಬಿದೆ ಪಾಲಿಪುದಯ್ಯ ಪ ಭೇದಮತಾಬ್ಧಿ ಪಾಠಿನ ಆದು - ರ್ವಾದಿಮಾಯಿಗಳಿಗೆ ಗಂಟಲಗಾಣ ಸಾಧುಜನರ ಪಂಚಪ್ರಾಣನೆನಿಪ ಮೇದಿನಿಯೊಳು ಹರಿಭಕ್ತ ಪ್ರವೀಣ 1 ಗುರುಪ್ರಾಣೇಶದಾಸರಲಿ ಜ್ಞಾನ ವರ ಉಪದೇಶವ ಕೊಂಡು ಭಕ್ತಿಯಲಿ ವರದೇಂದ್ರಾರ್ಯರ ಸನ್ನಿಧಿಯಲಿ ಸತತ ಹರಿಭಜನೆಯ ಮಾಳ್ಪ ನಲಿನಲಿಯುತಲಿ 2 ಸ್ನಾನಸಂಧ್ಯಾದ್ಯನುಷ್ಠಾನವನು ಙÁ್ಞನಪೂರ್ವಕದಿ ಚರಿಸುವ ನಿಧಾನ ಹೀನಜನಗಳಲ್ಲಿ ಮೌನ ನಿರುತ ಶ್ರೀನಿವಾಸನ ಮನದಲಿ ಮಾಳ್ಪ ಧ್ಯಾನ 3 ಬಾಲ್ಯತನದಿ ನಿಮ್ಮಾಜ್ಞ್ಞವನು ಮೀರಿ ಕಾಲಕಳೆದೆ ದುರ್ವಿಷಯದಿ ನಾನು ಶ್ರೀಲೋಲನಂಘ್ರಿ ಮರೆದೆನು ಮುಂದೆ ಪಾಲಿಸೆನ್ನಯ ಮೊರೆ ಶರಣು ಬಂದಿಹೆನು 4 ಶ್ರೀ ಮರುನ್ಮತಙÁ್ಞನವನು ನಮ್ಮ ಸ್ವಾಮಿ ವರದÉೀಶವಿಠಲನ ದಾಸ್ಯವನು ಆ ಮುನಿವರನ ಸೇವೆಯನು ಕೊಟ್ಟು ನೀ ಮುದದಲಿ ಕರುಣಿಸು ಸುರಧೇನು5
--------------
ವರದೇಶವಿಠಲ
ಶ್ರೀರಮಣಿ ದಯದೋರು ಬ್ರಹ್ಮ ಸಮೀರಜನ ನೀ ಬೇಗ ಮೂರುತಾಪದ ದೂರಗೈಸಿ ಸರೋರುಹಾಕ್ಷನ ಸಾರಗೈಸುತ ಪ. ಶ್ರೀನಿವಾಸನ ಸರ್ವಸೇವೆಯ ತಾನೆ ಮಾಳ್ಪೆನೆಂದು ಭಾನುಕೋಟಿ ಸಮಾನಭಾಸ ವಿಮಾನವಾಗಿ ನಿಂದು ಮಹಾನಭೀಯ ಸಮಸ್ತ ವಸ್ತು ವಿ- ಧಾನರೂಪಿಣಿಯಾಗಿ ಭಕ್ತಜನಾನುವರ್ತಿಯ ಭಾವ ಗ್ರಹಿಸಿದ 1 ಹಾರಕಟಕ ಕಿರೀಟವರ ಕೇಯೂರ ಬಾಹುಪುರಿಯು ಚಾರುತರ ಗಂಭೀರರವ ಶೃಂಗಾರದ ನೂಪುರವ ಮಾರನೈಯ್ಯನ ಮುದ್ದು ಹಸ್ತದಿ ವಾನೈಜಾರಿಗದಾಬ್ಜರೂಪದಿ ಸೇರಿ ಶೋಭಿಪ ಶಕ್ತಿ ನಿನ್ನ ಪದಾರವಿಂದವ ನಂಬಿ ನಮಿಪೆನು 2 ಕುಂದ ನೋಡದಿಂದೂ ಹರಿ ಚಂದನಾತ್ಮಕ ವೆಂಕಟೇಶನು ಬಂದಿಲ್ಲಿಹನೆಂದು ಮುನಿಜನವೆಂದ ಮಹಿಮೆಯ ನಿಂದು ತೋರುತ ಸನ್ನಿಹಿತಳಾಗೆಂದು ಚರಣದ್ವಂದ್ವ ಪೊಗಳುವೆ 3 ,
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಲೋಲ ಶ್ರೀನರಸಿಂಹ ಬಲಗೋಂಬೆನು ನಿನ್ನ ಪ. ಸಾರರಹಿತವಹ ಘೋರತರ ಸಂಸಾರದಿ ತೊಳಲುತ ಗಾರುಗೊಂಡಿಹೆನೈ ಶ್ರೀಲೋಲ ಅ.ಪ. ಚಿಣ್ಣನು ತಾ ಬಣ್ಣಿಸಿ ಕರೆಯೆ ಮನಕದ ತಂದು ಅನ್ಯದೈವಗಳ ಮರೆದು ತನ್ನನೆ ನೆನೆವ ಚಿಣ್ಣನಿಗಾಗಿ ಕಂಬದಿ ಬಂದು ಘನ್ನ ರೋಷದಿ ದೈತ್ಯನ ಸೆಳೆದು ಕುನ್ನಿಯ ಮುಡಿಯನು ಪಿಡಿದೆತ್ತಿ ಜಡಿದು ತನ್ನ ತೊಡೆಯೊಳಗಿರಿಸಿ ಖಳನುರ ವನ್ನು ಬಗೆದು ಕರುಳನು ಕೊರಳೊಳು ಧರಿಸಿದ 1 ಘೋರರೂಪಕೆ ನಡುಗುತಲಂದು ಸುರಗಣನಿಂದು ಶರಣೆಂದಾಕಂದನ ಕರೆದು ಪರಮಾದರದಿಂ ಶ್ರೀದೇವಿಯನೊಡಗೊಂಡು ಪರತರಾಭಯ ಹಸ್ತವ ನೀಡಿ ಸರಸದಿ ಕರೆದಾದರಗೂಡಿ ತರಳನೆ ಭಕ್ತಾಗ್ರೇ ಸರ ನೆನ್ನಿಸಿ ನೆರೆಸುಖಿಸೆಂದೊದವಿದ 2 ಚಾರು ಚರಿತ ಪ್ರಹ್ಲಾದನ ಆಲಿಸಿ ನಲವಿಂ ಸಾರಿತನ್ನನೇ ನೆನೆವರನೆಂದೆಂದು ಕೋರಿಕೆಗಳ ಸಲ್ಲಿಸಿ ಸಲಹುವನೆಂದು ಸಾರೆಬಂದಿಹೆ ನಿನ್ನೆಡೆಗಿಂದು ಸಾರಸಾಕ್ಷನೆ ನೀ ಕೃಪೆದೋರೆಂದು ಕೋರಿಭಜಿಪೆ ಶ್ರೀಶೇಷಗಿರಿವರ ದಯಾಸಿಂಧು 3
--------------
ನಂಜನಗೂಡು ತಿರುಮಲಾಂಬಾ
ಶ್ರೀಶನ ಸತಿಯರ ಹಾಸ್ಯವ ಮಾಡುತ ಸೋಸಿಲೆ ಕೋಲಹೊಯ್ದೇವ ಕೋಲ ಪ. ಧಿಟ್ಟೆ ನಾನೆಂಬೋದು ಸೃಷ್ಟಿಕರ್ತನೆ ಬಲ್ಲಗಟ್ಯಾಗಿ ನಿನ್ನ ಗುಣಗಳಗಟ್ಯಾಗಿ ನಿನ್ನ ಗುಣಗಳ ವರ್ಣಿಸಲು ಸಿಟ್ಟು ಬಂದಿತು ಸಭೆಯೊಳು1 ಗಂಡನ ಬಳಗವ ಕಂಡರೆ ನಿನಗಾಗದುಲೆಂಡರ ಮನೆಗೆ ನಡೆದ್ಹೋಗಿಲೆಂಡರ ಮನೆಗೆ ನಡೆದ್ಹೋಗಿ ಸೇರಿದ್ದುಪಂಡಿತರು ಕಂಡು ನಗುತಾರೆ 2 ಘಟ್ಯದೆಗಾರಳು ಪೆಟ್ಟಿಗಂಜುವಳಲ್ಲಎಷ್ಟು ಧೈರ್ಯವೆ ಎಲೆನಾರಿಎಷ್ಟು ಧೈರ್ಯವೆ ಎಲೆನಾರಿ ನಿನ್ನ ಕೂಡಕೃಷ್ಣ ಕಡಿ ಬೀಳೋ ತೆರನಂತೆ 3 ಮುದದಿಂದಲೆ ದ್ವಾರಕಾಸದನದೊಳಗ್ಹೋಗಿಕದನವ ಹೂಡಿ ಕೆಡಿಸುವೆಕದನವ ಹೂಡಿ ಕೆಡಿಸುವೆ ನಿನ್ನಗುಣಕೆಮದನನಯ್ಯನೆಂತು ಮನಸೋತ4 ಹಲವು ರಾಯರ ಗೆದ್ದ ಬಲುಧೀರರೆಲ್ಲನಿನ್ನ ಬಲೆಯೊಳು ಬಿದ್ದು ಬಳಲೋರುಬಲೆಯೊಳು ಬಿದ್ದು ಬಳಲೋರು ಇದ ಕಂಡುಬಲರಾಮ ತಾನು ನಗುತಾನ5 ಸುರರು ಜರಿದು ನಾರಿಹರಿಯು ಗುಣಪೂರ್ಣ ನೆನುತಲೆಹರಿಯು ಗುಣಪೂರ್ಣ ನೆನುತಲೆ ಮಲ್ಲಿಗೆಸರವ ಹಾಕಿದಿಯೆ ಕೊರಳಿಗೆ 6 ಕೇಳೆ ರುಕ್ಮಿಣಿ ನಿನ್ನ ಭಾಳ ಚಾಪಲ್ಯ ನೋಡಿಹೇಳ ಕೇಳದಲೆ ಹಿರಿಯರಹೇಳ ಕೇಳದಲೆ ಹಿರಿಯರ ಕೃಷ್ಣಯ್ಯಭೋಳೆ ತನದಿಂದ ಮದುವ್ಯಾದ 7 ಗಂಡನ ಎದುರಿಗೆ ಗಂಡುಗಚ್ಚಿಯ ಕಟ್ಟಿಗಂಡಸಿನಂತೆ ಧನುವೆತ್ತಿಗಂಡಸಿನಂತೆ ಧನುವೆತ್ತಿ ಕಾದಿದಬಂಡುಗಾರತಿಯೆನಿನ ತಂಗಿ8 ಅಕ್ಕ ತಂಗಿಯರ ಶೌರ್ಯ ಶಕ್ಯವೆ ವರ್ಣಿಸಲುನಕ್ಕು ನಾರಿ ಸರಿಯವರುನಕ್ಕು ನಾರಿ ಸರಿಯವರು ರಾಮೇಶಗೆತಕ್ಕವರೇನೆ ಮಡದಿಯರು ಕೋಲ9
--------------
ಗಲಗಲಿಅವ್ವನವರು
ಶ್ವಾನ ಪ ಹೆಂಡತಿ ಉಟ್ಟು ತಿರುಗಾಡುವುದು ಹರಕು ಹರಕು ಚಿಂದಿಮಿಂಡಿತಿ ಉಟ್ಟು ಮೆರೆಯುವುದು ಮಿಸುನಿಯ ಮೇಲ್ಬಂದಿ 1 ಹೆಂಡತಿಯದು ತಾ ಕೊಳೆ ತುಂಬಿದ ಮಂಡೆಮಿಂಡತಿಯದು ಚೌರಿ ರಾಗಟೆ ಗೊಂಡೆ 2ಇದ್ದಲಿಯನು ಹಾಲೊಳ್ ತೊಳೆದರೆ ಶುಭ್ರವು ತಾನಹುದೆಶುದ್ಧ ಚಿದಾನಂದನ ಬೋಧೆಯಲಿ ದುರ್ಬುದ್ಧಿಗೆ ಬುದ್ಧಿಯು ಬಹುದೆ3
--------------
ಚಿದಾನಂದ ಅವಧೂತರು
ಷಟ್ಪದಿ ಭೃಂಗ ದಿವಿಜ ಲಲಾಮ ಶುಭಗುಣ ಸಾಂದ್ರ ಗುರುವರನೇಸೇರಿಹೆನು ತವಶಿಷ್ಯ ಕೋಟಿಲಿ ಬೀರಿ ಕರುಣಾ ದೃಷ್ಟಿ ಶ್ರುತಿ ಭಂಡಾರ ಸೂರೆಯ ಮಾಡ್ವ ಹಾ ಹಾ ಕಾರದಿಂ ತಪಿಪ 1 ಬಾಲ ನೆನ್ನಯ ಶಿರವ ನಿಮ್ಮಯ ಶೀಲಕರದಿಂ ಭೂಷಿಸುತ ಕವಿತಾ ಲತಾಂಗಿಯ ತಾಂಡವಾಡಿಸಿ ಚಂದ್ರಮೌಳಿನುತಕಾಳಿಮನಕುಮುದೇಂದು ಜಗಸಂ ಚಾಲಕ ಪ್ರಭು ಮುಖ್ಯ ಪ್ರಾಣಗುಪಾಲಿಸುತ ಸತ್ತಾದಿ ಸಕಲವ ಪೊರೆದು ಮೆರವಂಥಾ 2 ಪತಿ ಮಾ ವಂದ್ಯ ನಿರುಪಮ ನಾರಸಿಂಹನುಅಂದು ನಿಮ್ಮನು ಕಾಯ್ದ ತೆರಪೊರೆ ಶ್ರೀ ಸುಧೀಂದ್ರ ಸುತ 3 ಏನಿದೇನಿದು ನಿಮ್ಮ ಮಹಿಮೆಯಮಾನವರಿಯಲು ಸುರರಿಗಾಗದುಮಾನವರ ಪಾಡೇನು ಶಿರತೂ ಗುತಿಹ ಫಣಿರಾಜಮಾನ್ಯ ಸುರ ಋಷಿ ಕರುಣ ಬಲವೋಮೇಣ್ಪರಿಸರನ ಕೃಪೆಯೊ ಕಾಣೆನುದಾನಿ ನರಹರಿ ವರದ ಫಲವೋ ಮೊತ್ತವೇ ಯೆಂಬೆ 4 ಜಂಭಾರಿ ಮೇಣಾಬಾಲ ಸುಬ್ರಹ್ಮಣ್ಯನೋ ಶಂಕಿಪುದು ಸುರನೀಕಾ 5ಸೂಕ್ಷ್ಮಮತಿಗಳೆ ಪೇಳಿ ಸರ್ವಾಧ್ಯಕ್ಷನವತಾರವನು ಯಾವ ಸುಲಕ್ಷಣ ಭಕುತಗೇನೆ ಮಾಡಿಹ ನಮ್ಮಗುರುವ ಬಿಡೆಪಕ್ಷ ವಹಿಸದೆ ಪೇಳಿ ಯಾವನು ಲಕ್ಷ್ಯ ಮಾಡದೆ ಕಷ್ಟ ಮಾತೆಯಕುಷಿಯಂ ಬಂದಿಹನು ಮುಮ್ಮುಡಿ ನಮ್ಮ ನುದ್ಧರಿಸೆ 6 ವ್ಯಾಜ ವಿಲ್ಲದಲೆದೈತ್ಯ ಪಿತತಾನಿತ್ತ ಬಾಧೆಗೆ ನಾಥ ನರಹರಿ ಬಂದುದಚ್ಚರಿಯಂತೆ ಭಾವಿಸೆ ಭಕ್ತವತ್ಸಲ ಬಿರುದು ಪೊಳ್ಳೆಬಿಡೆ 7 ಸತಿ ಸಂಹಾರ ಕಾಟವು ಮತ್ತೆ ಯತಿ ಯಂತಾಗೆ ಹಾಗೆಯೆನಿಂತಿರಲು ವೃಂದಾವನದಿ ಕಾಡುವರು ಶಿಷ್ಯಗಣಾ 8 ಸತಿಯ ಬೇಕೆಂದೊಬ್ಬ ನೀಡೈ ಸುತನ ದಂಪತಿ ವ್ಯಾಜ್ಯ ಹರಿಸಿರಿಜತನ ಮಾಡಿಸಿ ವೇತನವ ಹರಿಸಿನ್ನು ವ್ಯಾಧಿಗಳಪಥನ ವಾಯಿತು ಕೂಳುಕೊಡಿಸೈ ಸತತ ವೀತೆರ ಬಯಕೆ ವ್ರಾತದಿಸುತಪ ನೀನೆಂತಾಗೆ ಕುಪಿತನು ಬಲ್ಲ ಬತ ಹರಿಯೇ 9 ತಿರುಗುತಲಿಹರು ತಮ್ಮಯ ಹೀನ ನಡತೆಗಳಿಂದ ಸ್ತ್ರೀಯರು ವಿಧಿಯ ನಡೆಸುವರು ಚೆನ್ನ ಔಷಧ ವಿಹುದು ನಿನ್ನಲಿ ಹಣ್ಣಿನಾಶಯ ತೋರಿನೀ ಭವ ಹುಣ್ಣುವಳಿಯುವೆ ಎಷ್ಟು ಕರುಣಿಯೊ ಗುರುವೆ ಶರಣೆಂಬೆ 1 ಕಳತ್ರ ವೆಲ್ಲವನೆಂತೆನಲು ಬಲು ಹುಚ್ಚುತನವ ರ್ಣಿಸಲು ಮಿಕ್ಕುದುದಾಉಕ್ತಿ ಭಜಿಸುವಗೇನು ಪೇಳ್ವುದು ಮುಕ್ತಿಕರಗತ ವೇಕೆ ಸಂಶಯ ಶಾಸ್ತ್ರ ಭಾಗ್ಯವೆ ಸಾಕು ಕರುಣಿಸಿ ನಮಿಪೆ ಭೂಯಿಷ್ಠ 11 ಸೂತ್ರ ಖರೆ 12 ಪ್ರೀತಿತಮ ಇವನಂಥ ದಾತನ ಗ್ರಂಧ ನಿಚಯವ ಭೋಜ್ಯ ಕಿಡುತಲಿ ಸುತ್ತಿಗೆದ್ದಲು ಹುಳಕೆ ಮೆಚ್ಚುವ ನೇನು ಪಯ ಸುರಿಯೆಪುತ್ರರಿಗೆ ಮದ್ದಿಕ್ಕಿ ಪಿತನಿಗೆ ಮತ್ತೆ ಭೋಜನ ವಿಕ್ಕೆ ಬಹುಸುಪ್ರೀತಿ ಯಾದಂತಾಯ್ತು ಹರಿಹರೀ ಪಾಹಿಮಾಂ ಪಾಹೀ 13 ಶುಂಠನಾದರು ಪಠಿಸೆ ನಮ್ಮಯ ಕಂಠದಿಂ ಬಂದಂಧ ನುಡಿವೈಕುಂಠ ರಮಣನ ಕಾಂಬ ಪಂಡಿತ ನೆನೆಸಿ ಧರೆಯೊಳಗೆಕಂಟಕವ ನಿರಿದು ಭವದಲಿ ವಿಷ ಕಂಠ ಗಾತಪ್ರಿಯ ತನ್ನಯಭಂಟನನು ಮಾಡಿಕೊಳಲೆಂತೆಂದೆನ್ನ ಹರಿಸಿ ಪೊರೆ 14 ಏಳಿರೇಳಿರಿ ಸಂತ ಮಿತ್ರರೆ ಕೇಳಿ ಕೇಳಿದುದೆಲ್ಲ ನೀಡುವಪಾಲಕನು ಶ್ರೀ ರಾಘವೇಂದ್ರನು ಇಲ್ಲ ಮೆರೆಯುತಿರೆಕೇಳಿ ಭವಸುಖ ಮತ್ತೆ ಭವದಲಿ ಬೀಳುವರೆ ವಿಜ್ಞಾನ ಯಾಚಿಸಿಕೊಲ್ಲಿರೀ ಸಂಸಾರ ಬೀಜವ ಕಲಿಯು ಎಷ್ಠರವ15ನಾಲ್ಕುಶತ ಐವತ್ತು ವರುಷವೆ ವೋಲಗವ ಕೈಕೊಂಬ ಮುಂದಿವಅಲಸವ ಮಾಡಿದೆಡೆ ಸುರತರು ಬಿಟ್ಟತೆರವೇನೆಜಾಲ ಮಾತುಗಳೇಕೆ ಮುಂದಿನ ಶೀಲ ಮಾರ್ಗವ ನೋಡ್ವ ಜಾಣನುಪಾಲಿಸೈಧೋರೆ ಕೆಟ್ಟೆ ಕೆಟ್ಟೆನು ಎನ್ನ ಕೈ ಕೊಡುವ 16 ಏಕೆ ಭಯ ನಮಗಿನ್ನು ನರಕದ ಏಕೆ ಕಳವಳ ಅಶನ ವಸನÀಕೆಏಕೆ ಸಂಶಯ ಜ್ಞಾನ ವಿಶಯದಿ ಪಿಡಿಯೆ ಗುರುವರನೆನೂಕಿ ವಿಷಯದಿ ಬಯಕೆ ಬೇಗನೆ ಬೇಕು ಎನ್ನುತ ಜ್ಞಾನ ನಿಧಿಗಳಹಾಕಿ ದಂಡವ ಪಾಹಿ ಗುರುವರ ಪಾಹಿ ಯೆಂತೆನ್ನ 17 ಭುಕ್ತಿ ಹಾಗೆ ವಿರಕ್ತ ಭಕ್ತಿಯು ಭಕ್ತ ವೃಂದಕೆ ಭ್ರಷ್ಟ ಬಿಟ್ಟವನು 18 ಜಯ ಜಯವು ಗುರುಸಾರ್ವಭೌಮಗೆಜಯ ಜಯವು ಮಂತ್ರಾಲಯಸ್ಥಗೆಜಯ ಜಯವು ವಿಜಯೀಂದ್ರ ಪೌತ್ರಗೆ ವ್ಯಾಸರಾಜನಿಗೆಜಯ ಜಯ ಪರಿಮಳಾ ಪ್ರದಾತಗೆ ಜಯಜಯವು ಖಂಡಾರ್ಥ ನೀಡ್ದಗೆಜಯ ಜಯವು ಸಶರೀರ ಬೃಂದಾ ವನದಿ ಸೇರ್ದವಗೇ 19 ಜಯ ಜಯವು ಬಾಹ್ಲೀಕ ರಾಯಗೆ ಜಯ ಜಯವು ಶ್ರೀ ಸತ್ಯಸಂಧಗೆಜಯ ಜಯವು ಪ್ರಹ್ಲಾದರಾಜಗೆ ಶಿಷ್ಯ ವತ್ಸಲ್ಯಗೆಜಯ ಜಯವು ಶ್ರೀ ರಾಘವೇಂದ್ರಗೆಜಯ ಜಯವು ಮಂಗಳವ ಸುರಿಪಗೆಜಯ ಜಯವು ಜಯ ಮುನಿಯ ಪ್ರೀಯಗೆ ನಮ್ಮ ಗುರುವರಗೆ 20 ಮಾನನಿಧಿ ಜಯತೀರ್ಥ ರಾಯರಘನ್ನ ಹೃದಯಗ ವಾಯು ವಂತರಶ್ರೀ ನಿಲಯ ಶ್ರೀ ಕೃಷ್ಣವಿಠಲ ಪ್ರೀಯ ಗುರುರಾಜನಾನು ಪಾಮರ ಬಾಲ ನುಡಿಗಳ ನೀನೆ ತಿದ್ದುತ ಮನ್ನಿಪುದು ನಾನಿನ್ನ ದಾಸರ ದಾಸನೆಂದು ಸ್ವೀಕರಿಸು ಶರಣು 21
--------------
ಕೃಷ್ಣವಿಠಲದಾಸರು
ಸಕಲಕಾರ್ಯಾಂತರ್ಗತನಾಗಿ ಹರಿ ಭಕುತರ ಹೃದಯದಲಿ ನೆಲಸಿ ಭಕುತರ ಮನ ಬಂದಂತೆ ಕುಣಿಸೆ ಅವರನು ಹರಿ ಸಕಲಕಾಲದಲ್ಲೂ ಕಾದು ಕೊಂಡಿದ್ದು ಸಲಹುವ ಶ್ರೀ ಶ್ರೀನಿವಾಸ ಪ. ಯಾವಾಗ ಬರುವನೋ ಭಕ್ತರೆಡೆಗೆ ಹರಿ ಹರಿ ಆವಾಗಲಾಗಮಿಸುವುದೇ ಪರ್ವಕಾಲ ಹರಿಯ ಆವಾಗಲೇ ನೆನದು ಮಿಂದು ಧ್ಯಾನಿಸೆ ಆವಾಗಲೇ ಸಂಧ್ಯಾಸಕಲ ಕರ್ಮವ ನಡೆಸೆ ಯಾವಾಗಲೂ ಹರಿ ತಾ ತನ್ನ ಭಕ್ತರ ಕೈ ಬಿಡ ಯಾವ ಕಾಲದಲ್ಲೂ ಶ್ರೀ ಶ್ರೀನಿವಾಸ 1 ನಾನು ದೊಡ್ಡವ ನೀನು ದೊಡ್ಡವನೆಂದು ಹೊಡೆದಾಡದೇ ನಿಮಗೂ ನಮಗೂ ಮತ್ತೊಬ್ಬನಿಹನು ಹರಿ ನಿಮಗ್ಯಾತಕೀ ಛಲದ ವಾದ ಮನುಜರೇ ಅನುದಿನವೂ ನೆನೆಯಿರಿ ಶ್ರೀಹರಿ ಶ್ರೀ ಶ್ರೀನಿವಾಸನ್ನ ಸಕಲರಿಗೂ ದೊಡ್ಡವನವನೇ ಕೇಳಿ ಸಜ್ಜನರೇ 2 ಕಾಲ ಆ ಕಾಲವೆಂದಿಲ್ಲ ಹರಿಗೆ ತನ್ನ ಭಕ್ತರ ಸಾಕಲು ಈ ಸಮಯ ಆ ಸಮಯವೆಂದು ನೋಡನು ಹರಿ ಇಂಥಾ ಈ ಕರುಣದೊರೆಯೆಲ್ಲಾದರುಂಟೆ ಜಗದಿ ಈ ತನುವಿರುವ ತನಕ ಈ ಪರಮ ಪುರುಷನನು ಬೇಕಾದ ಕಾಲದಲಿ ಈ ಮನುಜ ಜಪಿಸುತಿರೆ ಕಮಲನಾಭ ಶ್ರೀ ಶ್ರೀನಿವಾಸ ಸಲಹದಿರನೇ ನಿನ್ನ ಆಪತ್ತಿಗಾಹ ಶ್ರೀಶ ಶ್ರೀ ವೆಂಕಟೇಶಾ 3 ಜಾಗರದಲೂ ಹರಿ ಕಾವ ನಿದ್ರೆಯಲೂ ಹರಿಕಾವ ಜಾಗರ ಸುಷುಪ್ತಿಯಲಿ ಹರಿ ಜಾಗರಮೂರುತಿ ನಿನ್ನ ಕಾವ ಜಾಗು ಮಾಡದೆ ಭಜಿಸು ಜಾನಕಿರಮಣ ಶ್ರೀ ರಾಮಚಂದ್ರನ್ನ ನಿತ್ಯ ಶ್ರೀ ಶ್ರೀನಿವಾಸನ್ನ ಮನವೆ 4 ಬುದ್ಧಿ ಬಂದಿದ್ದು ಅವನಿಂದ ಬುದ್ಧಿ ಅರಿವುದು ಅವನಿಂದ ಅಪ್ರಬುದ್ಧನಾಗದೇ ಬುದ್ಧಿ ಪೂರ್ವಕ ನೀ ನೆನೆದರೆ ಹರಿ ಬದ್ಧಕಂಕಣ ತೊಟ್ಟಿಹನು ಭಕ್ತರ ಕಾಯೆ ಆ ಶ್ರೀ ಶ್ರೀನಿವಾಸನ ಶುದ್ಧ ಮನದಿ ನೆನೆಮನವೆ 5 ವೈರಿ ಗೆಲ್ಲು ಮೊದಲು ನೀನವರ ವಶವಾಗದೆ ನಿನ್ನ ಮನ ಶುದ್ಧಮಾಡಿಕೊ ಮೊದಲು ನಿನ್ನ ಮನಸಿನಶ್ವಕ್ಕೆ ಬುದ್ಧಿಲಗಾಮು ಹಾಕು ನಿನ್ನ ಬುದ್ಧಿಯಲಿ ಮೊದಲನೆ ಕಾರ್ಯವಿದು ಎಂದರಿ ಈ ಮೊದಲು ನನಿಕಾರ್ಯ ನೋಡಿ ಶ್ರೀ ಶ್ರೀನಿವಾಸ ಒಲಿವ ನಿನಗೆಂದೆಂದು ಮನವೆ6 ಈ ತನವು ಈ ನುಡಿ ಈ ಕಾರ್ಯ ಈ ವಾರ್ತೆ ಈ ಕೃಪೆಯು ಶ್ರೀ ಶ್ರೀನಿವಾಸಗಲದೆ ಅನ್ಯತ್ರವಿಲ್ಲ ಹರಿ ಭಕ್ತರ ಸುಳಾದಿ ಭಕ್ತವತ್ಸಲ ಶ್ರೀ ಶ್ರೀನಿವಾಸಗರ್ಪಿತವೆಂದು ತಿಳಿ ಮನವೆ 7
--------------
ಸರಸ್ವತಿ ಬಾಯಿ
ಸಕಲವೆಲ್ಲವು ಹರಿಸೇವೆ ಎನ್ನಿ ಯಕುತಿವಂತರು ಹರಿಭಕುತಿ ಯೆನ್ನಿ ಧ್ರುವ ಹುಟ್ಟಿ ಬಂದಿಹ್ಯದೆ ವಿಠ್ಠಲನ ಸುಸೇವೆಗೆನ್ನಿ ಸೃಷ್ಟಿಯೊಳಿಹ್ಯದೆ ಶ್ರೀ ವಿಷ್ಣು ಸಹವಾಸವೆನ್ನಿ 1 ಬದುಕಿ ಬಾಳುದೇ ಇದು ಶ್ರೀಧರ ಉದ್ದೇಶವೆನ್ನಿ ಸಾಧನ ಸಂಪತ್ತು ಶ್ರೀ ಮಾಧವನದು ಎನ್ನಿ 2 ಉಂಬುಂತಿಂಬುದೆಲ್ಲ ಅಂಬುಜಾಕ್ಷನ ನೈವೇದ್ಯವೆನ್ನಿ ಕೊಂಬುಕೊಡುವ ಹಂಬಲ ಶ್ರೀ ಹರಿಯದೆನ್ನಿ 3 ಇಡುವ ತೊಡುವದೆಲ್ಲ ಪೊಡವಿಧರನಾಭರಣವೆನ್ನಿ ಉಡುವ ಮುಡಿವದೆಲ್ಲ ಹರಿಯ ಸಡಗರವೆನ್ನಿ 4 ನುಡಿವ ನುಡಿಗಳೇ ಹರಿಬಿಡದೆ ಕೊಂಡಾಡುದೆನ್ನಿ ಬಡುವ ಹರುಷವೆಲ್ಲ ವಸ್ತುದೇ ಎನ್ನಿ 5 ನಡೆವ ನಡಿಗೆಯಿಲ್ಲ ಹರಿಯ ಪ್ರದಕ್ಷಿಣಿ ಎನ್ನಿ ಎಡವಿ ಬೀಳುದು ಹರಿನಮವೆನ್ನಿ 6 ಏಳುವ ಕೂಡುವದೆಲ್ಲ ಹರಿಯ ಊಳಿಗವೆನ್ನಿ ಹೇಳಿ ಕೇಳುದೆಲ್ಲ ಹರಿಪುರಾಣವೆನ್ನಿ 7 ನೋಡುವ ನೋಟಗಳೆಲ್ಲ ಹರಿ ಸುಲಕ್ಷಣವೆನ್ನಿ ಮಾಡುವ ಮಾಟಗಳೆಲ್ಲ ಹರಿಯದೆನ್ನಿ 8 ಮಲಗಿ ನಿದ್ರೆಗೈವದೇ ಹರಿಯ ಕಾಲಿಗೆರಗುದೆನ್ನಿ ಬಲಕ ಎಡಕ ಹೊರಳುದೇ ಲೋಟಾಂಗಣ(?) ವೆನ್ನಿ 9 ವನಿತೇರ ಸಂಗವೇ ತಾ ಹರಿಯ ಲೀಲೆಯು ಎನ್ನಿ ತನುಮನವೆಲ್ಲಾ ಹರಿಸ್ಥಾನವೆ ಎನ್ನಿ 10 ಸತಿಸುತ ಮಿತ್ರರೆಲ್ಲ ಹರಿಸೇವೆ ದೂತರೆನ್ನಿ ಮತ್ತೆ ಬಂಧುಬಳಗೆಲ್ಲ ಹರಿಯದೆನ್ನಿ11 ಸುಖದು:ಖವೆಂಬುದೇ ಶ್ರೀಹರಿಯ ಸಂಕಲ್ಪವೆನ್ನಿ ನಕ್ಕು ನುಡುವುದೆಲ್ಲ ಹರಿ ಆಖರವೆನ್ನಿ 12 ಹೆಣ್ಣು ಹೊನ್ನಾರ್ಜಿತವೆಲ್ಲ ಹರಿಯ ಕಾಣಿಕೆ ಎನ್ನಿ ನಾನೀನೆಂಬುದೆಲ್ಲ ಹರಿಚೇತನವೆನ್ನಿ 13 ಸ್ವಾರ್ಥ ಹಿಡಿವದೆಲ್ಲ ಪಾರ್ಥನ ಸ್ವಾಮಿಗೆ ಎನ್ನಿ ಅರ್ತು ಮರ್ತು ನಡೆವ ಹರಿಕರ್ತೃತ್ವವೆನ್ನಿ 14 ಅಂತ್ರಬಾಹ್ಯವೆಲ್ಲ ಹರಿಗುರು ಮಾತೃಪಿತೃವೆನ್ನಿ ಗುರ್ತುವಾದದ್ದೆಲ್ಲ ತೀರ್ಥಕ್ಷೇತ್ರವೆನ್ನಿ 15 ಲಾಭಾಲಾಭವೆಲ್ಲ ಹರಿಪಾದಕರ್ಪಿತವೆನ್ನಿ ಶುಭಾ ಶುಭವೆಲ್ಲ ಹರಿಶೋಭೆಯು ಎನ್ನಿ 16 ಕನಸು ಮನಸುಗಳೆಲ್ಲ ಹರಿಯ ನೆನೆವ ಸೇವೆನ್ನಿ ಧೇನಿಸಿ ಬಯಸುದೇ ಹರಿಧ್ಯಾನವೆನ್ನಿ 17 ನಿತ್ಯಕರ್ಮವೆಲ್ಲ ಹರಿಪಾದಕ ಸಮರ್ಪಣವೆನ್ನಿ ಸತ್ಯಾಸತ್ಯವೆಲ್ಲ ಹರಿ ಅಗತ್ಯವೆನ್ನಿ 18 ಹೆಜ್ಜೆಗೊಮ್ಮೆ ಬೆಜ್ಜರ್ಹಿಡಿದು ರಾಜೀವನಯನನೆನ್ನಿ ಸಜ್ಜನರೊಡೆಯ ಗಜವರದ ಎನ್ನಿ 19 ಸೋಹ್ಯ ಸೂತ್ರವೆಲ್ಲ ಹರಿಯ ಮಹಾಮಹಿಮೆ ಎನ್ನಿ ಗುಹ್ಯಗೂಢವೆಲ್ಲ ಹರಿಯಗುರುತ ಎನ್ನಿ 20 ಇಹಪವೆಲ್ಲ ಹರಿಸೇವೆಗನುಕೂಲ ವೆನ್ನಿ ಸೋಹ್ಯ ಮಾಡುದೆಲ್ಲ ಹರಿಯ ದಯವೆನ್ನಿ 21 ಸಕಲ ಧರ್ಮಗಳೆಲ್ಲ ಹರಿಯ ಶಿಖಾಮಣಿಯೆನ್ನಿ ಪ್ರಕಟವಾಗಿ ದೋರುದೇ ಪ್ರತ್ಯಕ್ಷವೆನ್ನಿ 22 ನೇಮನಿತ್ಯ ಇದೇ ಮಹಿಪತಿಯ ಸ್ವಾಮಿಯದೆನ್ನಿ ಪ್ರೇಮದಿಂದ ಒಪ್ಪಿಸಿಕೊಂಬ ದಯಾಳುವೆನ್ನಿ 23
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂತೆಯ ನೋಡಲು ಬಂದವನಾ | ಭ್ರಾಂತತನವ ನೋಡಿ ಮಾನವನಾ ಪ ಪರಿ ವಾಸನೆಕಾರರು ವಿಷಯದ | ಸರಕಿನ ಚಟ್ಟೆಯ ರಂಗಡಿಯು | ದುರುಳತ ನವಗುಣ ಭೂಸಿನ ರಾಶಿಯು | ನೆರೆದಿಹ ಸಂದಣಿ ಜನದೊಳಗ 1 ಇಂತಿಹ ನರದೇಹ ಪ್ಯಾಟೆಯ ಸಡಗರ | ಪ್ರಾಂತವ ಕಾಣದೆ ಮರುಳಾಗಿ | ನಿಂತಲ್ಲಿ ನಿಲ್ಲದೆ ನೋಡುತ ತಿರುಗುತ | ಕಂಥಿಯ ಕಳೆದನು ಹೆಗಲಿನಾ 2 ಗುರುಮಹೀಪತಿ ಸ್ವಾಮಿಯ ಗಡಚಿನ | ಶರಣಿರವಳಿಹುಗದೆವೆ ಮರೆದು | ಧರಿಯೊಳು ಉಣಲಿಲ್ಲ ಉಡಲಿಲ್ಲ ಬಂದಿವ | ಬರುದೆವೆ ಮುಮ್ಮಳಿ ಘಳಿಸಿದನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸದ್ದು ಮಾಡಲು ಬೇಡವೋ-ನಿನ್ನ ಕಾಲಿಗೆಬಿದ್ದು ನಾ ಬೇಡಿಕೊಂಬೆ ಪ ನಿದ್ದೆಗೆಯ್ಯುವರೆಲ್ಲ ಎದ್ದರೆ ನೀನು ಬಂದಿದ್ದದ್ದು ಕಂಡರೇನೆಂಬುವರೋ ರಂಗಅ.ಪ. ಬಳೆ ಘಲ್ಲುಕೆನ್ನದೇನೋ-ಕೈಯ ಪಿಡಿದುಎಳೆಯದಿರೋ ಸುಮ್ಮನೆಮೊಲೆಗಳ ಮೇಲಿನ ಸೆರೆಗನೆಳೆಯಲು ಕೊ-ರಳ ಪದಕಗಳು ಧ್ವನಿಗೆಯ್ಯುವವೊ ರಂಗ 1 ನಿರುಗೆಯ ಪಿಡಿಯದಿರೊ-ಕಾಂಚಿಯ ದಾಮಕಿರುಗಂಟೆ ಧ್ವನಿಗೆಯ್ಯದೆಕಿರುದುಟಿಗಳ ನೀನು ಸವಿದು ಚಪ್ಪರಿಸಲುತರವಲ್ಲ ಗಂಡ ಮತ್ಸರವ ತಾಳುವನಲ್ಲ 2 ನಾಡಮಾತುಗಳೇತಕೊ-ಸಂಗೀತವಪಾಡುವ ಸಮಯವೇನೊಗಾಡಿಕಾರ ಶ್ರೀ ರಂಗವಿಠಲನಪಾಡಿಪಂಥಗಳೊಡಗೂಡುವ ಸಮಯದಿ 3
--------------
ಶ್ರೀಪಾದರಾಜರು
ಸಮೀರನ ಮಹಿಮೆ ಪೇಳುವೆವಾಸುದೇವ ವಿಧೀರ ಮುಖಸುರರಾಶಿತಸ್ತ್ರೀ ಮುನಿಯತೀಶ ಸು-ದಾಸರಭಿ ನಮಿಪೆ ಪ ವಾರಿಧಿಯನು ದಾಟುಲೋಸುಗಶ್ರೀ ರಮೇಶನ ನಮಿಸಿ ಗಿರಿಯನುಚಾರು ಚರಣದಿ ಮೆಚ್ಚಿ ಮೇಲಕೆ ಹಾರಿದನು ಹನುಮಾ 1 ಹರಿಯ ಬಲವನು ಸರಿಸಿ ಪೋದುವುತರುಗಳಬ್ಧಿಯು ಯಾದಸಂಗಳುಶರಧಿ ತಳಗತ ಕಪಿಯಗೋಸುಗಗಿರಿಯು ಎದ್ದಿಹನು 2 ಧರಣಿಧರ ಪಕ ನಾಶ ಕಾಲದಿಮರುತ ರಕ್ಷಿತ ಪಕ್ಷ ಹೈಮನುಶರಧಿ ಭೇದಿಸಿ ಹನುಮ ವಿಹೃತಿಗೆತ್ವರದಿ ಬಂದಿಹನು 3 ಪರಮ ಪೌರುಷ ಬ ಲನು ಕಪಿವರಚರಿಸದಲೆ ವಿಶ್ರಮವನದರೊಳುಹರುಷದಿಂದಪ್ಯವನ ಕಂಡನುಉರಗ ಮಾತೆಯನು 4 ಸುರಸೆಯೆಂಬುವ ನಾಗಮಾತೆಗೆವರವ ನೀಡುತ ಕಪಿಯ ಬಲವನುಅರಿಯಲೋಸುಗ ಕಳುಹಿಸೀದರುಸುರರು ಶರಧಿಯಲಿ 5 ಯಾವ ವಸ್ತುವ ತಿನ್ನೋ ಇಚ್ಛೆಯು ೀವಿ ನಿನಗಾಗುವದೊ ಅದು ತವಬಾಯಿಗನ್ನಾಗಿರಲಿ ಎಂದರುದೇವತೋತ್ತುಮರು 6 ಸುರರ ವರವನು ಕಾಯೊಗೋಸುಗಸುರಸೆ ಮುಖದೊಳು ಹೊಕ್ಕು ಹೊರಡುತಪರಮಮಣು ರೂಪದಲಿ ದಿವಿಜರಹರುಷ ಬಡಿಸಿದನು 7 ಅಸುವರಾತ್ಮಜನುರು ಪರಾಕ್ರಮಹೃಷಿತರಾಗುತ ನೋಡಿ ದಿವಿಜರುಕುಸುಮವೃಷ್ಟಿಯ ಮಾಡುತವನಲಿಯಶಸು ಪಾಡಿದರು 8 ಛಾಯಾ ಪ್ರಾಣಿಗಳನ್ನು ಹಿಡಿಯುವಮಾಯಾ ಸಿಂಹಕೆ ನಾಮ ಕಸುರಿಯವಾಯುಸುತ ನೋಡಿದನು ಎದುರೆ ವಿಹಾಯ ಮಾರ್ಗದಲಿ 9 ವಿಧಿಯು ಲಂಕೆಯ ಕಾಯಲೋಸುಗಸುತಿಗ್ವರಗಳನಿತ್ತು ಕಾದಿಹಾಮದದಿ ಅಸುರಿಯು ತನ್ನ ಛಾಯವವದಗಿ ಪಿಡಿದಿಹಳು 10 ಆಗ ಆಕೆಯ ಪೊಕ್ಕು ಪೊಟ್ಟೆಯಯೋಗದಿಂದಲಿ ಪಾವಮಾನಿಯುಬೇಗ ಬಂದನು ಹೊರಗೆ ತತ್ತನುಭಾಗ ಮಾಡುತಲೆ 11 ಆತ್ಮಬಲವಮಿತೆಂದು ತೋರಿವಿಧಾತೃ ವರವುಳ್ಳವಳ ಕೊಲ್ಲುತವಾತನಂತೆ ತ್ರಿಕೂಟ ಪರ್ವತಕೀತ ಹಾರಿದನು 12 ಬೆಕ್ಕಿನಂದದಿ ಹನುಮ ತನ್ನಯಚಿಕ್ಕ ರೂಪವ ಮಾಡಿ ಲಂಕೆಯಪೊಕ್ಕು ನಿಶಿಯಲಿ ಮಧ್ಯಮಾರ್ಗದಿರಕ್ಕಸಿಯ ಕಂಡಾ 13 ಬಟ್ಟಿಯಲಿ ಬಂದಡ್ಡಗಟ್ಟುವದುಷ್ಟ ರಾಕ್ಷಸೀಯನ್ನು ಗೆಲ್ಲುತಮುಷ್ಟಿಯಿಂದಲಿ ಹೊಡೆದು ಲಂಕಾಪಟ್ಟಣವ ಪೊಕ್ಕಾ 14 ಪುರದ ಹೊರಗೊಳಗ್ಹೊಕ್ಕು ರಾಮನತರುಳೆ ಕಾಣದೆ ಹನುಮ ಶಿಂಶುಪತರುನ ಮೂಲದಿ ಕಂಡ ಸೀತೆಯಉರುತರಾಕೃತಿಯಾ 15 ನರಜನಂಗಳ ಮೋಹ ಮಾಡುವಪರಮ ಪುರುಷನ ಚೇಷ್ಟೆಗಳನನುಸರಿಸಿ ನಡೆಯುವ ದೇವಿ ಚರಿಯನುಸರಿಸಿ ಚೇಷ್ಟಿಸಿದಾ 16 ರಾಮನಿಂದಲಿ ಅಂಗುಲಿಯನುಪ್ರೇಮದಿಂದಲಿ ಕೇಸರಿಯ ಸುತಾಭೂಮಿ ಜಾತೆಗೆ ಕೊಟ್ಟು ಸುಖಿಸಿದಾನಾಮ ಹದ್ದನದಿ 17 ರುಚಿ ನೀಡಿದವು ರಾವಣನ್ಹರಣ ಕಾಲದಲಿ 18 ಧರಣಿದೇವಿಯ ಸುತೆಯ ತನ್ನಯಪರಮ ಚೂಡಾಮಣಿಯನಿತ್ತಳುಗುರುತು ತೋರಿಸು ರಾಮದೇವಗೆಮರುತಾ ಸುತನೆಂದು 19 ಸೀತೆ ಹನುಮರದೀ ವಿಡಂಬನಯಾತು ಧಾನರಿಗಲ್ಲಾ ನಾಕಗಭೂತ ವಿಡಂಬನ ಧೈತ್ಯವಂಚನಹೇತು ಆಗುವದು 20 ಇಂಥ ಕಾರ್ಯವ ಮಾಡಿ ತನ್ನಯಾನಂಥ ಪೌರುಷ ಪ್ರಕಟ ಮಾಡುವದಿಂತು ಮನವನು ಮಾಡಿದನು ಮತಿವಂತ ವಾನರನು 21 ಚಾರು ಶಿಂಶುಪ ಬಿಟ್ಟು ರಾಕ್ಷಸವಾರ ವಳಿಸುವ ಮನದಿ ಹನುಮನುಭೂರಿವನವನು ಮುರಿದು ಲಂಕೆಯತೋರಣೇರಿದನು 22 ಭೃತ್ಯ ಜನರಿಗೆಕಟ್ಟಿ ಹಾಕಿರಿ ಕಪಿಯನೆಂದನುರುಷ್ಟನಾಗುತಲೆ 23 ಹರನ ವರದಲಿ ಮರಣ ವರ್ಜಿತಸರವ ಭೃತ್ಯರು ರಾಕ್ಷಸೇಶನಮರುತ ಸೂನುನ ಮೇಲೆ ಬಂದರುಪರಮ ವೇಗದಲಿ 24 ಹತ್ತು ಒಂದು ಕೋಟಿ ಯೂಥವತತ್ಸಮಾನ ಪುರಃ ಸರಾನ್ವಿತಎತ್ತಿ ಆಯುಧ ಸೈನ್ಯ ಹನುಮನಸುತ್ತಿಕೊಂಡಿಹುದು 25 ಹಿಡಿದು ಕರದಲಿ ಆಯುಧಂಗಳಹೊಡೆವ ಸೈನ್ಯವ ನೋಡಿ ಹನುಮನುಹೊಡೆದು ಕರತಳದಿಂದಲೆಲ್ಲರಪುಡಿಯ ಮಾಡಿದನು 26 ನೀಲಕಂಠನ ವರಗಿರಿಪ್ರಭಏಳುಮಂದಿಯ ಮಂದಿ ಪುತ್ರರಕಾಲಿನಿಂದಲಿ ಒದ್ದು ಕೆಡಹಿದನಾಳು ಮಾಧವನಾ 27 ಧುರದಿ ಮುಂಭಾಗದಲಿ ಪೋಗುವಗರುವ ಮಾಡುವ ರಾಕ್ಷಸಂಗಳಮುರಿದು ಸೈನ್ಯದ ತೃತೀಯ ಭಾಗವಹರಿಯು ಕೊಂದಿಹನು 28 ಪೋರ ಬಲವನು ಕೇಳಿ ಹನುಮನಚಾರ ಮುಖದಲಿ ಸ್ವಾತ್ಮ ಸದೃಶರುಮಾರ ಕಾಕ್ಷಾಭಿಧನ ಕಳುಹಿದ ವೀರ ರಾವಣನು 29 ಉತ್ತುಮಾಸ್ತ್ರಗಳಿಂದ ಮಂತ್ರಿತವೆತ್ತಿ ಬಾಣಗಳ್ಹೊಡೆದು ಹನುಮನಕೆತ್ತಿ ಹಾಕಲು ಅಕ್ಷ ಸಾಲದೆಶಕ್ತಿ ನಿಂತಿಹನು 30 ಮಂಡ ಮಧ್ಯೆಯ ತನಯ ಅಕ್ಷನುಪುಂಡ ರಾವಣ ಸಮನು ಸೈನ್ಯದಹಿಂಡಿನೊಳು ತೃತೀಯಾಂಶ ಯಂದುದ್ದಂಡ ಚಿಂತಿಸಿದಾ 31 ಹತ್ತು ತಲೆಯವನನ್ನೆ ಕೊಲ್ಲುವದುತ್ತಮಾತ್ಮವು ಆದರೀತನುತುತ್ತು ರಾಮಗೆ ಕಾರಣಿಂಥಾಕೃತ್ಯ ಥರವಲ್ಲಾ 32 ಇಂದ್ರಜಿತನನು ನಾನು ಈಗಲೆಕೊಂದು ಹಾಕಿದರಿವನ ಕೃತಿಗಳಛಂದ ನೋಡುವುದಿಲ್ಲಾ ಕಪಿಗಳವೃಂದ ಯುದ್ಧದಲಿ 33 ತತ್ಸಮಾಗಿಹ ಮೂರನೆಯವನ್ಹತ್ಯೆ ಮಾಡುವೆನೆಂದು ಹನುಮನುಚಿತ್ತದಲಿ ಚಿಂತಿಸುತ ತತ್ವದ ವೆತ್ತಿ ಹಾರಿದನು 34 ತಿರುಹಿ ಚಕ್ರದ ತೆರನೆ ರಾಕ್ಷಸರರಸೀನಾತ್ಮಜನನ್ನು ಕ್ಷಣದಲಿಧರಿಯ ಮೇಲಪ್ಪಳಿಸಿ ಒಗೆದನುಮರುತನಾತ್ಮಜನು 35 ಹನುಮನಿಂದಲಿ ತನ್ನ ಕುವರನುಹನನ ಪೊಂದಲು ನೋಡಿ ರಾವಣಮನದಿ ಶೋಕಿಸುತಾತನಣ್ಣನರಣಕೆ ಕಳುಹಿದನು36 ಇಂದ್ರಜಿತು ಪರಮಾಸ್ತ್ರಯುತ ಶರವೃಂದದಲಿ ಹೊಡೆದು ಹನುಮನಹಿಂದಕಟ್ಟಲು ಶಕ್ತಿ ಸಾಲದೆನಿಂದು ಚಿಂತಿಸಿದಾ 37 ಸರವ ದುಃಸಹವಾದ ಬ್ರಹ್ಮನಪರಮಮಸ್ತ್ರವ ಬಿಡಲು ರಾವಣಿಹರಿಯು ವ್ಯಾಕುಲನಾಗದಲೆ ಈಪರಿಯ ಚಿಂತಿಸಿದಾ 38 ವಾಣಿನಾಥನ ಎಷ್ಟೊ ವರಗಳನಾನು ಮೀರಿದೆ ದುಷ್ಟ ಜನದಲಿಮಾನಿನೀಯನು ಕಾರಣಾತನಮಾನ ಮಾಡುವೆನು 39 ದುಷ್ಟ ರಾಕ್ಷಸರೆಲ್ಲ ಎನ್ನನುಕಟ್ಟಿ ಮಾಡುವದೇನು ಪುರಿವಳಗಿಷ್ಟು ಪೋಗಲು ರಾಕ್ಷಸೇಶನಭೆಟ್ಟಿಯಾಗುವದು 40 ಹೀಗೆ ಚಿಂತಿಸಿ ಹನುಮನಸ್ತ್ರಕೆಬಾಗಿ ನಿಲ್ಲಲು ಅನ್ಯ ಪಾಶಗಳಾಗೆ ಬಿಗಿದರು ಬ್ರಹ್ಮನಸ್ತ್ರವುಸಾಗಿತಾಕ್ಷಣದಿ 41 ಕಟ್ಟಿ ಕಪಿಯನು ರಾಕ್ಷಸೇಶನ ಭೆಟ್ಟಿಗೊಯ್ಯಲು ಆತನೀತನದೃಷ್ಟಿಯಿಂದಲೆ ನೋಡಿ ಪ್ರಶವನೆಷ್ಟೊ ಮಾಡಿದನು 42 ಕಪಿಯೆ ನೀನು ಕುತೋಸಿ ಕಸ್ಯವಾಕೃತಿಯ ಮಾಡಿದಿ ಯಾತಕೀಪರಿಕಿತವ ಕೇಳಲು ರಾಮನೊಂದಿಸಿ ಚತುರ ನುಡಿದಿಹನು 43 ಹೀನ ರಾವಣ ತಿಳಿಯೇ ಎನ್ನನು ಮಾನವೇಶ್ವರ ರಾಮದೂತನುಹಾನಿಮಾಡಲು ನಿನ್ನ ಕುಲವನುನಾನು ಬಂದಿಹೆನು 44 ಜಾನಕೀಯನು ರಾಮದೇವಗೆಮಾನದಿಂದಲಿ ಕೊಡದೆ ಹೋದರೆಹಾನಿ ಪೊಂದುವಿ ಕೇಳೊ ನೀ ನಿಜಮಾನವರ ನೀ ಕೂಡಿ 45 ಶಕ್ತರಾಗರು ಸರ್ವ ದಿವಿಜರುಮತ್ರ್ಯನಾತನ ಬಾಣ ಧರಿಸಲುಎತ್ತೋ ನಿನಗಿವಗಿನ್ನು ಧರಿಸಲುಹತ್ತು ತಲೆಯವನೆ 46 ಸಿಟ್ಟು ಬಂದರೆ ಆತನೆದುರಿಲಿಘಟ್ಟಿನಿಲ್ಲುವನಾವ ರಾಕ್ಷಸಇಷ್ಟು ಸುರದಾನವರೊಳಾತನದೃಷ್ಟಿಸಲು ಕಾಣೆ 47 ಇಂಥಾ ಮಾತನು ಕೇಳುತಾತನಅಂತ ಮಾಡಿರಿಯನ್ನೆ ವಿಭೀಷಣಶಾಂತ ಮಾಡಲು ಪುಚ್ಛ ದಹಿಸಿರಿಯಂತ ನುಡಿದಿಹನು 48 ಅರಿವೆಯಿಂದಲಿ ಸುತ್ತಿ ಬಾಲಕೆಉರಿಯನ್ಹಚ್ಚಲು ಯಾತುಧಾನರುಮರುತ ಮಿತ್ರನು ಸುಡದೆ ಹನುಮಗೆಹರುಷ ನೀಡಿದನು 49 ಯಾತುಧಾನರು ಮಾಡಿದಂಥಪಘಾತವೆಲ್ಲವ ಸಹನ ಮಾಡಿದವಾತಪೋತನು ಲಂಕೆ ದಹಿಸುವಕೌತುಕಾತ್ಮದಲಿ 50 ತನ್ನ ತೇಜದಿ ವಿಶ್ವಕರ್ಮಜಘನ್ನಪುರಿಯನು ಸುಟ್ಟು ಬಾಲಗವನ್ಹಿಯಿಂದಲೆ ಸರ್ವತಃ ಕಪಿಧನ್ಯ ಚರಿಸುತಲೆ 51 ಹೇಮರತ್ನಗಳಿಂದ ನಿರ್ಮಿಸಿದಾಮಹಾ ಪುರಿಯನ್ನು ರಾಕ್ಷಸಸ್ತೋಮದಿಂದಲಿ ಸಹಿತ ಸುಟ್ಟುಸುಧಾಮ ಗರ್ಜಿಸಿದಾ 52 ಹನುಮಸಾತ್ಮಜ ರಾಕ್ಷಶೇಶನತೃಣ ಸಮಾನವ ಮಾಡಿ ನೋಡಲುದನುಜರೆಲ್ಲರ ಭಸ್ಮ ಮಾಡುತಕ್ಷಣದಿ ಹಾರಿದನು 53 ಕಡಲ ದಾಟುತ ಕಪಿಗಳಿಂದಲಿಧಡದಿ ಪೂಜಿತನಾಗಿ ಮಧುವನುಕುಡಿದು ರವಿಜನ ವನದಿ ರಾಘವನಡಿಗೆ ಬಂದಿಹನು 54 ಸೀತೆ ನೀಡಿದ ಚೂಡಾರತ್ನವನಾಥನಂಘ್ರಿಯೊಳಿತ್ತು ಸರ್ವಶಗಾತ್ರದಿಂದಲಿ ನಮಿಸಿ ರಾಮಗೆಶಾತ ನೀಡಿದನು 55 ರಾಮನಾದರು ಇವಗೆ ನೀಡುವಕಾಮ ನೋಡದೆ ಭಕ್ತಿಭರಿತಗೆಪ್ರೇಮದಿಂದಲಿ ಅಪ್ಪಿಕೊಂಡನುಶ್ರೀ ಮನೋಹರನು 56 ಇಂದಿರೇಶನೆ ಎನ್ನ ಚಿತ್ತದಿನಿಂದುಮಾಡಿದ ನೀಸುಕವನವನಿಂದು ಭಕ್ತಿಲಿ ತತ್ಪುದಾಂಬುಜದ್ವಂದ್ವಕರ್ಪಿಸುವೆ 57 ಇತಿ ಶ್ರೀ ಸುಂದರ ಕಾಂಡಃ ಸಮಾಪ್ತಃ (ಪ್ರಾಕೃತ)ಶ್ರೀ ಗುರುವರದ ಇಂದಿರೇಶಾರ್ಪಣಮಸ್ತು ನೋಡುವೆನು ನೋಡುವೆನು ತೋರಿಸುನಿಮ್ಮ ನೋಡುವೆ ಪ ನೋಡುವೆ ಮಾಡು ದಯ ಎನ್ನೊಳುರೂಢಿಯೊಳಗೆ ನಿಮ್ಮ ಪಾಡುತ ಮಹಿಮೆ ಅ.ಪ. ಮದನ ಜನಕನೊಳು ಕದನ ಮಾಡಿದ ದು-ರ್ಯೋಧನನ ಶಿರದೊಳಿಟ್ಟ ಪದುಮ ಪಾದಗಳನು 1 ನೂರುಗಾವುದ ಜಲ ಹಾರುವಾಗಲೆ ದಿವ್ಯಭೂರುಹ ಕೆಡದಿಹ ಊರುಗಳನ್ನು ಸ್ವಾಮಿ 2 ಕೆಟ್ಟ ಬಕನ ಕೊಂದು ಅಷ್ಟು ಅನ್ನವನುಂಡಹೊಟ್ಟಿ ನೋಡುವೆ ದಿವ್ಯ ದೃಷ್ಟಿ ನೀಡಿರಿ ಸ್ವಾಮಿ 3 ಭೂಮಿ ಸುತೆಯ ವಾರ್ತೆ ರಾಮನು ಕೇಳಿದಾಪ್ರೇಮಾಲಿಂಗನವಿತ್ತ ಆ ಮಹಾವುರವನ್ನೆ 4 ಮದಗಜಗಳ ಕೂಡ ಕದನ ಮಾಡಿದ ದಿವ್ಯಗದೆಯ ಪಿಡಿದ ಕರವದು ಮಗಳನು ಸ್ವಾಮಿ 5 ಅಜಗರ ನಹುಷನ ವಿಜಯ ಸಹೋದರ ಪದುಮನಾಭನ ಗುಣಮುದದಿ ಸಾರುತ ದೈತ್ಯ ಕದನಗೆಳೆದ ನಿನ್ನ ವದನಕಮಲವನ್ನು 6 ವೇದ ಶಾಸ್ತ್ರಗಳನ್ನು ಓದಿ ಹೇಳುತ ಶಿಷ್ಯಮೋದಗರೆವ ನಿನ್ನ ವಾಣಿ ಸ್ವಾದು ಕೇಳುವೆ ನಿನ್ನ 7 ಇಂದಿರೇಶನ ದಯದಿಂದ ಗೆಲಿದಿ ಇಪ್ಪ-ತ್ತೊಂದು ಮತವ ಆನಂದ ತೀರ್ಥರೆ ನಿಮ್ಮ 8
--------------
ಇಂದಿರೇಶರು
ಸರಿಯಾರೈ ಜಯಮುನಿ ಸಮರಾರೈ ಗುರುಮಧ್ವಕೃತಿ ವಿವೃತಿ ರಚಿಸುವಲ್ಲಿ ಪ ವರ್ಣವಂದಾರು ಬಿಡದಲೆ ಬಹುಫಲ ವರ್ಣಿಪೆ ಲೋಭದಿ ಶರಣ ಜನರಿಗೆ ಕರ್ಣಸುಧಾರಸ ಬೆರೆದು ನೀ ಬಲುಗೂಢ ಪೂರ್ಣಮತಿ ಭಾವವ ತೆಗೆವತಿ ಶೂರ 1 ಒಂದೊಂದು ವಚನವ ಹಿಂದಾಗಿ ಮುಂದಾಗಿ ಛಂದಾಗಿ ತಿರಿಗಿಸಿ ತಿರೆಯ ಸಿಂಧುರದಂತೆ ಬಂದಿಸಿ ಮುಂದಾಗಿ ಬಂದು ದುರ್ವಾದಿಯ ಸಂದುಗಳನೆ ಸೀಳಿ ಮೆರೆದತಿ ಶೂರ 2 ಕತ್ತಿಯ ಒಂದೇ ಹಿಡದೆ ಬಿಡದಲೆವೆ ಹತ್ತು ದಿಕ್ಕಿಗೆ ತಿರಿಗಿಪ್ಪ ವೀರನ ತೆರೆ ಅತ್ಯರ್ಥ ಮೂಲದ ಹಿಡಿದು ಅದನ್ನು ಸುತ್ತಿಸಿ ವಿಮತರ ತತ್ತರಿಸುವ ಧೀರ3 ಮೂಲ ವಚನಗಳ ಕಲ್ಪಲತೆಯ ಮಾಡಿ ಮೇಲಾದ ತತ್ವಗಳೆಂಬೊ ಫಲಗಳು ಶೀಲಮತಿಗಳುಳ್ಳ ಶಿಷ್ಯ ಶಿಶುವಿಗಳಿ ಗಾಲಿಸಿ ಮೇಳಿಸುತ ಒಲಿಸುವ ಧೀರ 4 ಅಕ್ಷೋಭ್ಯ ಮುನಿಗಳ ಪುಣ್ಯಫಲಗಳೆಂತೊ ಕರ್ಮ ಕಷ್ಟವೆ ಒದಗಿತು ಈ ಕ್ಷೋಣಿತಳದಲ್ಲಿ ವಾಸುದೇವವಿಠಲನಕಕ್ಷವ ವೊಹಿಸಿ ಪುಟ್ಟಿದ್ಯೊ ಜಯರಾಯ5
--------------
ವ್ಯಾಸತತ್ವಜ್ಞದಾಸರು
ಸಂಸಾರದೊಳು ಸುಖವಿಲ್ಲ ಪ ದುಂಡನೆ ಬಂದಿಹೆ ದುಂಡನೆ ಹೋಗುವೆ ಹೆಂಡಿರು ಮಕ್ಕಳ ನಡುವೆಯಲಿ ತಂಡ ತಂಡದಿ ಹುಟ್ಟಿ ಕೊಂಡವರು ನಚ್ಚಿ ಕೊಂಡಿವರನು ಪರಗತಿಯ ಕೆಡಿಸದಿರು 1 ಹುಟ್ಟುತ ತರಲಿಲ್ಲ ಹೋಗುತ ವೈಯೊಲ್ಲ ನಟ್ಟ ನಡುವೆ ಬಂದ ಸಿರಿಯಿದು ಕಟ್ಟ ಕಡೆಗೆ ನೀನು ಮಡಿಯಲಿ ಕರುವೆಯ ಬಟ್ಟೆಯ ಶವ ಕಿತ್ತಲಿದು ಬಳ್ಳಿತೆಂಬರು 2 ಎನ್ನಮನೆಯು ಎನ್ನತೋಟ ತುಡಿಗೆಯಿದು ದೆನುತ ಹಿಗ್ಗದಿರು ಇದರೊಳಗೊಂದು ಚಿನ್ನ ಬಾರದು ಕಾಲನವರೆಳೆದೊಯ್ವಾಗ 3 ಘಟ್ಟದ ಕೆಳಗುಷ್ಟು ಬೆಟ್ಟದ ಮರಗಾಯಿ ಹುಟ್ಟಿದ ಬಯಲ ಸೀಮೆಯ ಮೆಣಸು ಬಟ್ಟಾದ ಲವಣ ಶಾಕದ ವೋಲು ಸಂಸಾರ 4 ಜಾಣನಾದರೆ ಪರಗತಿಯ ನೀ ನೊಲುವೊಡೆ ತ್ರಾಣ ವಿರಲಿಕೆ ತೊಡಕಬಿಟ್ಟು ಕಾಣುಸಂಸಾರವ ವಿಷವೆಂದು ತ್ಯಜಿಸಿ ಗೀರ್ವಾಣವಂದಿತ ಲಕ್ಷ್ಮೀರ ಮಣನ ಮೊರೆಹೋಗು 5
--------------
ಕವಿ ಪರಮದೇವದಾಸರು
ಸಹಿಸಲಾರೆನೊ ವ್ಯಥೆಯ ಪವಮಾನ ವಂದಿತನೆ ಪ. ಅಹೋರಾತ್ರಿಲಿ ಮನ ಕಳವಳ ಪಡುವದೊ ಆಹಾರ ನಿದ್ರೆಗಳು ತೊಲಗಿ ಪೋದವು ದೇವಾ ಸಹಿತಾಗಿ ತಾಯಿಯ ಸರ್ವಬಾಂಧವರೆಲ್ಲಾ ಸ ನ್ನಿಹಿತರಾಗಿ ಎನ್ನ ಬಳಗ ಇದ್ದರೂ ಕೂಡ ಅ ಸಹ್ಯವಾದ ದುಃಖ ದೂರಾಗಲಿಲ್ಲವೊ ಆಹಾ ಇರಲಾರೆ ಇರಲಾರೆ ಭಕ್ತ ಜನರ ಬಿಟ್ಟು ಮಹಿದಾಸ ಮೂರ್ತಿಯ ನಿನ್ನ ಭಕ್ತರ ಪಾದ ಸಹವಾಸ ಸುಧೆಯ ಸುರಿಸಿ ಬಲುಪರಿ ಅಹಿಭೂಷಣ ತಾತ ಕಾಳಿಮರ್ಧನಕೃಷ್ಣಾ 1 ಕರ್ಮ ಅಡ್ಡಬಂದು ಎನ್ನ ಘಾಸಿ ಮಾಡುತಲಿದೆ ಅರಿಯದಾದೆನೊ ದೇವಾ ಬ್ಯಾಸರವಾಗಿದೆ ಜನ್ಮವು ಮಹಿಯೊಳು ಸಾಸುವೆ ಮಾತ್ರವು ಸ್ವತಂತ್ರವಿಲ್ಲದಿಹ ದೋಷಿಜೀವನ ತಾನೇನು ಮಾಡಬಲ್ಲ ಸಾಸಿರನಾಮಗುರು ಕಾಳೀಮರ್ಧನಕೃಷ್ಣ2 ಜಲದ ಮಧ್ಯದಿ ಇರುವ ಮೀನವನು ಕಾವ ಮಳಲಿನೊಳಗೆ ತೆಗೆದು ಬಿಸುಟಿದಂತಾಯಿತು ಹೊಳೆಯ ಈಜುವೆನೆಂದು ಬಲು ಹೆಮ್ಮೆಯಿಂದಲಿ ಸೆಳೆವಿಗೆ ಸಿಕ್ಕು ಬಿದ್ದ ಮನುಜನ ತೆರನಾಯ್ತು ಬಲವಾಗಿ ಘಾಯವ ಪೊಂದಿದ ಸ್ಥಾನದಲ್ಲಿ ಸಲೆ ಕಾದ ಆಯಸ ಸೆಳೆಯನೆಳೆದಂತಾಯ್ತು ಅಳಲನು ನಿನಗಲ್ಲದೆ ಇನ್ನಾರಿಗೆ ಪೇಳಲೋ ಕೊಳಲಧರನೆ ಗುರು ಕಾಳಿಮರ್ಧನಕೃಷ್ಣಾ 3 ನಿನ್ನ ಭಕ್ತರಾ ಮಾತು ಯನಗದು ಮನ್ನಣೆ ನಿನ್ನ ಭಕ್ತರ ಕಥಾಶ್ರವಣ ಯನ್ನ ಕರಣಾಭರಣ ನಿನ್ನ ಭಕ್ತರ ಸಮೂಹ ಎನ್ನಯ ಕಣ್ಬೆಳಕು ನಿನ್ನ ಭಕ್ತರ ಪಾದದೂಳಿಯೆ ಶಿರೋಭೂಷಣವೆನೆಗೆ ನಿನ್ನ ಭಕ್ತರ ಆಶೀರ್ವಾದವೇ ಸರ್ವ ಬಲವೈ ಇನ್ನು ಈ ಬುದ್ಧಿಯು ಎಂದಿಗೂ ಕೆಡೆದಂತೆ ಚೆನ್ನಾಗಿ ರಕ್ಷಿಸೊ ಗುರು ಕಾಳಿಮರ್ಧನಕೃಷ್ಣಾ 4 ಪರಾಧೀನನೆಂದು ಪರಿಪರಿಯಿಂದಲಿ ಕೊರಗಿಸುವುದು ನಿನಗೆ ಎಂದಿಗೂ ಸರಿ ಅಲ್ಲ ಪರಾಧೀನನು ಅಹುದು ಪರತಂತ್ರನಾನಹುದು ಸರ್ವತಂತ್ರ ಸ್ವತಂತ್ರ ನೀನೆಂಬುದು ಸಿದ್ಧ ಶರಣಾಕರ ಆದರಿಷ್ಟು ಮಾತ್ರ ಕೇಳೋ ಸತಿ ತನ್ನಧೀನಳೆಂದು ಶಿರಶಿಡಿಯುವ ಊರಿ ಬಿಸಿಲಿನೊಳು ನಿಲ್ದಪನೆ ಸರಿಬಂದಿದ್ದು ಮಾಡೋ ಇದರ ಮೇಲಿನ್ನು ದೇವಾ ಉರಗಶಯನ ಗುರು ಕಾಳೀಮರ್ಧನಕೃಷ್ಣಾ 5 ನೀನು ನುಡಿಸಿದಂತೆ ನುಡಿದು ನುಡಿವೆನಯ್ಯ ನಿನ್ನ ಚಿತ್ತವು ಗುರು ಕಾಳೀಮರ್ಧನಕೃಷ್ಣಾ
--------------
ಕಳಸದ ಸುಂದರಮ್ಮ
ಸಾರಿದೆನೋ ನಿನ್ನ ವೆಂಕಟರಮಣ ಪ ನಾರಪ್ಪಯ್ಯನಿಗೊಲಿದು ಗೋರೂಪದಲಿ ಬಂದಿಯೊ ಅ.ಪ ಸುಂದರ ಶುಭಕಾಯಾ ಆಕಾಶರಾಜನ ನಂದಿನಿಯಳ ಪ್ರೀಯ ವಂದಿಸುವೆನು ಭವಬಂಧನ ಬಿಡಿಸಯ್ಯ 1 ಕುರಕಿಹಳ್ಳಿಯ ಗ್ರಾಮದಿ ಶಿಲೆಯೊಳಗೆನಿಂದು ವರಕೃಷ್ಣಾನದಿ ಜಲದೀ ಅರುಣನುದಯದಲ್ಲಿ ನಿರುತ ಪೂಜೆಯಕೊಳುವಿ 2 ನೀರದ ನಿಭಕಾಯಾ ಧರೆಯೊಳುಕೃಷ್ಣಾ ತೀರ ಕಾರ್ಪರನಿಲಯಾ ಘೋರ ಪಾತಕಹರ ನಾರಸಿಂಹಾತ್ಮಕನೆ 3
--------------
ಕಾರ್ಪರ ನರಹರಿದಾಸರು