ಒಟ್ಟು 3008 ಕಡೆಗಳಲ್ಲಿ , 115 ದಾಸರು , 1760 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೃಷ್ಣಾರ್ಯರು ಮನವೇ ಲಾಲಿಸಿ ಕೇಳೊ ಬಿನ್ನೈಸುವೆನೊ ನಿನಗೆ ಚೆನ್ನಾಗಿ ವಡೆಯಾನಾ ಪಾದದಲ್ಲಿ ಭಕುತಿಯನ್ನೆ ಮಾಡಿ ಮಮತೆ ವಿಷಯಾದಿ ಅಹಂಕಾರ ಬುದ್ಧಿಯನ್ನೇ ಬೀಸಾಟಿ ದೃಢವಾಗಿ ಧೈರ್ಯದಿಂದ ಇದೇ ಸಾಧನವೆಂದುಗುಪಿತಾದಲ್ಲಿ ಸಂಚರಿಸೆ ಪಾಣಿಯಾ ಪಿಡಿದುತಾ ವಾಣಿ ಅರಸ ನಿರ್ಮಾಣವ ತೋರಿಸುವ ಪ್ರಾಣದೇವರು ಪ್ರಾಣವಪ್ಪಿಸಿ ಸಾಕುವಬಿಡದೆ ಪಂಚಪ್ರಾಣಾತ್ಮಕನಾದ ತಂದೆವರದಗೋಪಾಲವಿಠಲರೇಯಾನ ಭಜಿಸು ಬಿಡದೆ 1 ಇಂದು ಸಾಧನವೆಂದು ತಿಳಿದು ನಿನ್ನಿಂದ ನೀನೇ ಹಿಗ್ಗಿ ಕುಗ್ಗಾದೀರು ಮಗ್ಗುಲೊಳಗಿದ್ದ ಮಧ್ವದ್ವೇಷಿ ಬಂದು ಮದ್ದು ಹಾಕಿ ಮಣಿಸೂವ ಮಧ್ವರಾಯರ ಪಾದಪದ್ಮದಲ್ಲಿ ಬುದ್ಧಿಯನಿಟ್ಟರೆ ಬಾಧೆಯ ತಪ್ಪಿಸಿ ಉದ್ಧರಿಸುವ ಮುದ್ದು ಮುಖದ ತಂದೆವರದಗೋಪಾಲ- ವಿಠಲರೇಯಾನವಲಿಸು ಬಿಡದೆ 2 ಅನಾದಿ ಕಾಲದಿಂದ ನಿಜ ಗುರುರಾಯನು ನಿನ್ನೊಳಿದ್ದು ಜನಿಸಿ ಬಂದ ಸಾಧನ ಬಿಟ್ಟು ಸುಖದುಃಖ ಜಲಮಯ ಸಂಸಾರದೊಳಗೆ ಬಿದ್ದು ಬಾಯ್ಬಿಡುವಿ ಕಂಡ್ಯಾ ಆ ಗುರುರಾಯರ ಮೂರುತಿ ನಿನ್ನೊಳು ನೋಡುತ್ತ ಪಾಡುತ್ತ ಸುಖಿಯಾಗಿ ಸಕಲ ಕರ್ಮಗಳಾಚರಿಸಿ ತದ್ವಾರ ನವನಿಧಿ ರಾಜನ ಚರಣಕ್ಕೆ ಆರೋಪಿಸೆ ಕೈಗೊಂಡು ಹೊಸಹೂವ ಸುಂದರ ಮೂರುತಿ ತಂದೆವರದಗೋಪಾಲವಿಠ್ಠಲರೇಯಾನ ನಿಲ್ಲಿಸೊ ಬಿಡದೇ 3 ಅವರ ಬಳಿಯಲ್ಲಿ ಪೋಗಿ ನೀನೂ ನಿನ್ನದು ಎನ್ನದಿರು ಕಂಡ್ಯಾ ಮುನ್ನ ನಿನಗೆ ಘನ್ನವಾದ ವೈರಾಗ್ಯ ಪುಟ್ಟುವಾದೂ ಇನ್ನು ನೀನು ಮನದಾಶೆ ಎಂಬ ಪಿಶಾಚೀಗೆ ಒಳಗಾಗಿ ಏನಾಹೋದೋ ನಿನ್ನ ಘಾಸಿಯನರಿತು ಕ್ಲೇಶಾಪಾಶಾಗಳಿದ್ಯಾಡಿಪಶುಪತಿಪಿತನ ಪಡೆದ ತಂದೆವರದಗೋಪಾಲವಿಠಲರೇಯಾನ ವಲಿಸೋ ಬಿಡದೆ4 ಸದಾಕಾಲದಲ್ಲಿ ಇವರ ಸ್ಮರಣೆ ಮಾಡಿ ಧ್ಯಾನಕೆ ತಂದು ಯೋಗಾದಿ ನೋಡುವಾದೆ ಮಹಾ ನಿಜವಾದ ಭಕುತಿ ಇವರ ಪಾದಸ್ಮರಣೆ ಮಾಡಾದ ಮನುಜರಿಗೆ ಶ್ರೀಪದ್ಮ ರಮಣಾನು ಸೃಷ್ಟಿಸೂವ ಆ ಮನುಜಗೋಸುಗ ನರಕ ನರಕಾದೊಳಗಿಟ್ಟು ಕುಟ್ಟುವ ಕ್ಷಣ ಬಿಡದೆ ಎಷ್ಟು ಮಾಡಿದರೇನು ಉತ್ತುಮೋತ್ತಮರೆಲ್ಲ ಸೋತ್ತುಮರಾಯರ ದ್ರೋಹಮಾಡಿ ತುತ್ತುತುತ್ತೀಗೆ ಹಾಕಿಸಿಕೊಂಡು ಕುತ್ತೀಗೆ ಕಟ್ಟಿ ನಿತ್ಯಾದಲ್ಲಿ ಸ್ಮರಣೆಯ ಮಾಡಿದರೆ ನೃತ್ಯವಾಗೈಸುವ ಭಕ್ತಾವತ್ಸಲ ತಂದೆವರದಗೋಪಾಲವಿಠಲರೇಯಾನ ನಿಲ್ಲಿಸೋ ಬಿಡದೆ 5 ಜತೆ :ನವವಿಧಭಕುತಿಯನ್ನೇ ಅರಿತು ಗುರುಪೂಜೆ ಮಾಡಲು ತದ್ವಾರಾ ವಲಿದಾ ತಂದೆವರದಗೋಪಾಲವಿಠ್ಠಲಾ 6
--------------
ತಂದೆವರದಗೋಪಾಲವಿಠಲರು
ಕೇಶವಾಚ್ಯುತ ಮಾಧವಾನಂತ|ಶ್ರೀ ಶಕಮಲದಳೇಕ್ಷಣಾ| ವಾಸುದೇವ ಮುಕುಂದ ಮುರಹರ ಕ್ಲೇಶಹರಣ ಜನಾರ್ಧನಾ|| ವಾಸುಕಿಯ ಪರಿಯಂಕನೆನುತಲಿ|ನೆನೆವನಾವ ನರೋತ್ತಮಾ| ಮೋಸಹೋಗದಿರವರೊಳೆಂದು|ಚರರಿಗ್ಹೇಳಿದನೈಯಮಾ 1 ರಾಮರಾಘವ ರಾಜಶೇಖರ|ರಾವಣಾಸುರಮರ್ದನಾ| ಶಾಮಸುಂದರ ಸಕಲ ಗುಣನಿಧಿ|ಶಬರಿಪೂರಿತ ವಾಸನಾ ಭೂಮಿಜಾಪತಿ ಭೂತನಾಥ|ಪ್ರಿಯನೆಂಬ ನರೋತ್ತಮಾ| ಪ್ರೇಮಿಕನ ನುಡಿಸದಿರಿಯೆಂದು|ಚರರಿಗ್ಹೇಳಿದನೈಯಮಾ 2 ಬಾಲಲೀಲವಿನೋದ ಶ್ರೀ ಗೋಪಾಲ ಗೋಕುಲ ಲಾಲನಾ| ಕಾಲಜಲಧರ ನೀಲಮುರಲೀ ಲೋಲಸುರವರ ಪಾಲನಾ| ಕಾಲಕಾಲನೆ ಕಂಸಹರನನು ತಾವ ನೆನೆವ ನರೋತ್ತುಮಾ| ಕಾಲಿಗೆರಗಿರಿ ಅವರಿಗೆಂದು|ಚರರಿಗ್ಹೇಳಿದನೈಯಮಾ 3 ಮಕರಕುಂಡಲ ಕಿರೀಟ ಕೌಸ್ತುಭ|ಕಟಕಕೇಯೂರ ಭೂಷಣಾ| ಅಖಿಲ ಜಗನುತ ಚರಣಪೀತಾಂಬರನೆ ಶ್ರೀವತ್ಸಲಾಂಭನಾ| ಪ್ರಕಟಿತಾಯುಧ ಶಂಖಚಕ್ರಗದಾಬ್ಜ ನೆನೆವನರೋತ್ತಮಾ| ಸುಖಿಸುವವರನು ತ್ಯಜಿಸಿರೆಂದು ಚರರಿಗ್ಹೇಳಿದನೈಯಮಾ 4 ಶ್ರವಣಪೂಜನೆ ಸ್ಮರಣಕೀರ್ತನೆ ವಂದನೆದಾಸ್ಯದಿ ಸಖ್ಯವಾ| ಬಿಡದನಾವನರೋತ್ತುಮಾ| ಅವನ ಸೀಮೆಯ ಹೋಗದಿರೆಂದು ಚರರಿಗ್ಹೇಳಿದನೈಯಮಾ 5 ಯಾರಮನೆಯಲಿ ತುಲಸಿವೃಂದಾವನದಿ ಶಾಲಿಗ್ರಾಮವು| ಚಾರುದ್ವಾದಶನಾಮ ಹರಿಚಕ್ರಾಂಕಿತದ ಶುಭಕಾಯವು| ಮೀರದಲೆ ಹರಿದಿನದ ವ್ರತದಲಿ ನಡೆವನಾವನರೋತ್ತಮಾ| ದಾರಿ ಮೆಟ್ಟದಿರೆಂದು ತನ್ನಯ ಚರರಿಗ್ಹೇಳಿದನೈಯಮಾ 6 ಸಾಧುಸಂತರು ಬಂದರೆರಗುತ ಪಾದೋದಕದಲಿ ಮೀವನು| ಆದಿನವಯುಗ ವಾದಿಚತುರ್ದಶ ಪರ್ವಕಾಲಗಳೆಂಬನು| ಸಾದರದಿ ಹರಿಪೂಜೆಯಿಂದರ್ಚಿಸುವ ನಾವನರೋತ್ತಮಾ| ಮೋದದಿಂದಲಿ ಬಾಗಿರೆಂದು ಚರರಿಗ್ಹೇಳಿದನೈಯಮಾ 7 ಅಂದು ಹೇಳಿದ ಕಥೆ ರಹಸ್ಯದ ಹರಿಯನಾಮದ ಮಾಲಿಕಾ| ತಂದೆ ಮಹೀಪತಿ ಎನ್ನ ಮುಖದಲಿ ನುಡಿಸಿದನು ಭೋಧಾಷ್ಟಕ| ತಂದು ಮನದಲಿ ಭಕುತಿಯಿಂದಲಿ ನೆನೆವನಾವನರೋತ್ತಮಾ| ಇಂದು ಜೀವನ್ಮುಕ್ತನಮಗಿನ್ನೇನು ಮಾಡುವನೈಯಮಾ 8
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿ ಬಂದೆ ಪ ಕೇಳಿ ಬಂದೆ ನಿನ್ನ ಮೊರೆಹೊಕ್ಕವರ ಕೈಯ್ಯಾ | ಇಳೆಯೊಳಗ ಬಿಡನೆಂಬ ಬಿರುದವ ನಾ1 ಸುಗ್ರೀವ ತಾ ಪುಗೆ ಒಡಲವನು ವಾಲಿಯನು | ನಿಗ್ರಹಿಸಿರಾಜ್ಯ ಪದವಿತ್ತನೆಂದು 2 ಶರಧಿ ಧಡಿಯಲಿ ವಿಭೀಷಣನು ಶರಣವನು | ಬರಲು ಧೃಡ ಸಂಪತ್ತು ನಿತ್ತನೆಂದು 3 ಖಂಡಿಸಿ ಕೌರವರ ಬಳಗವನು ಸೈನ್ಯವನು | ಪಾಂಡವರನು ಸ್ಥಾಪನೆ ಗೈದಾನೆಂದು 4 ಏನ್ನನು ಪೇಕ್ಷಿಸದಿರು ನೀನು ಕಾರಣನು | ಸನ್ನುತ ಮಹಿಪತಿ ಸುತ ಜೀವನಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳಿದಾಗಲೇ ಹೇಳಬಹುದೇನೋ ಬ್ರಹ್ಮಾನುಭವಮಿದು ಪ ಹಾಳುವಾದವಲಾ ವಿಚಾರಿಸಲೇಳು ವ್ಯಸನಕೆ ಸಿಲ್ಕಿ ಕುಣಿಯುವ ಅ.ಪ ಖೂಳ ಕಪಟರಿಗೆಂತು ಅನುಭವಶಾಲಿಗಾಗಿಹ ಪರತರಾನ್ವಯ ಸುಳ್ಳಮಳ್ಳರಿಗಾಗದಹುದಣ್ಣ ವೇದಾಂತಸಾರಸ ಮೂಲ ಪ್ರಣವ ವಿಚಾರಕಹುದಣ್ಣ ಯಾರಾದಡಾಗಲೀ ನೀಲಜ್ಯೋತಿಯ ಕಾಣದೆ ಬರಿ ಶೂಲ ಶೀಲಕೆ ಸಿಲ್ಕಿ ಕುಣಿಯುತ ಆಲಿಸೆಂದು ನಮಸ್ಕರಿಸುತಿಹ ಜಾವಿದ್ಯದ ಪೋಲಿ ಜನಗಳು 1 ಪಂಡಿತರಿಗೇನದು ಕಂಡು ತಿಳಿಯಣ್ಣ ದೂರವಿಲ್ಲವು ಅಂಡದೊಳಗಿಹ ಪಿಂಡವೇ ಬ್ರಹ್ಮಾಂಡ ವೇದಾಂತಾರ್ಥ ಸಮ್ಮತಿ ಭಂಡರಿಗೆ ಬಹುಭಾಷೆಗಹುದೇನ ಕುಂಡಲೀಪುರ ತತ್ಪ್ರಯಾಣವು 2 ಓದಿ ವಿಕ್ರಯವನ್ನು ಮಾಡ್ಯಾರು ಓಂಕಾರ ಬೀಜದ ಹಾದಿಯನು ತಾವು ಕಾಣದೋಡ್ಯಾರೊ ರಾ ಜಾಧಿರಾಜರೂ ಕಾವಿ ಜಗಳವ ಕುಂತು ನೋಡ್ಯಾರು ವೇದಾಂತಿಗಳೂ ನಿಜ ಜ್ಞಾನಪುತ್ಥಳಿಯನ್ನು ಕಂಡ್ಯಾರು ಆದಿಮಧ್ಯಾಂತಗಳರಿಯದ ವಾದಿಗಳಿಗೆಂತಕ್ಕು ತತ್ವದ ಬೋಧೆಯೊಳಗಿಹುದು ಆದಿತತ್ವವು 3 ಕವಿಗಳೆಷ್ಟೋ ಕಷ್ಟಪಟ್ಯಾರು ಅವಸಾನಕರಂ ಭವದ ಬಲೆಯೊಳು ಕಟ್ಟಿಕುಟ್ಯಾರು ಆಗಲ್ಲಿ ಸುಜನರು ಜ್ಞಾ ನವೈರಾಗ್ಯವನು ಕೊಟ್ಯಾರು ಶಿವನು ತಾನೆಂತೆಂಬ ಅದ್ವೈತವನು ಆಡಲ್ಕಡಕಲಹುದೇ ಭುವನದೊಳು ಪಂಚಾಕ್ಷರೋ ನಿಜತ್ರಿಣೆಯಸತಿ ಮೋಕ್ಷೆಚ್ಛೆ ಕವಚಂ4 ನಾಗನಗರಿಪುರೀಶ ಕಾಣಣ್ಣ ಆಧ್ಯಾತ್ಮದನುಭವ ಕಾಗಿ ನಿನ್ನೊಳ ಹುಡುಕಬೇಕಣ್ಣ ಹಂಸಾಶ್ರಯದಿ ನಿನ್ನೊ ಳಗಿದೆಲ್ಲವು ಹುಡುಕಿ ನೋಡಣ್ಣ ಭೋಗಿಶಯನ ಶ್ರೀ ತುಲಸೀರಾಮನ ರಾಗವಿರಹಿತನಾಗಿ ಭಜಿಸಿದಡಾಗ ನಿನ್ನೊಳಗಂಕುರಿಪುದ 5
--------------
ಚನ್ನಪಟ್ಟಣದ ಅಹೋಬಲದಾಸರು
ಕೇಳಿರೋ ಕೇಳಿರೋ ಆಲಿಸಿ ಜನರು | ಕಲಿಯುಗದೊಳಗ ಒಡಿಯ ನಾಟವನು ಪ ಫುಲ್ಲನಾಭನ ಭಕ್ತಿ ಎಳ್ಳೆನಿತಿಲ್ಲಾ | ಹುಲ್ಲು ಕಲ್ಲು ದೈವಕ ಎರಗಿ ನಡೆವರು | ಬೆಲ್ಲವು ಕಹಿಯಾಗಿ ಸಿಹಿ ಬೇವಾಯಿತು | ಅಲ್ಲ-ಹುದೆಂಬುದು ಬಲ್ಲವರಾರು 1 ಸಾಧು ಸಂಗಕ ಕಾಲು ಏಳುವು ನೋಡಿ | ಸಾಧಿಸಿ ದುರ್ಜನರಾ ನೆರಿಯ ಸೇರುವರು | ಮಾಧವ ನಾಮ ಉಣ್ಣಲು ಮುಖರೋಗ | ಭೂದೇವಿ ನಿಸ್ಸಾರವಾದಳು ನೋಡಿ2 ನೀಚರಿಗುದ್ಯೋಗ ಊಚರಿಗಿಲ್ಲ | ಆಚಾರ ಸದ್ಗುಣ ಆಡವಿ ಸೇರಿದವು | ಯೋಚಿಸಿ ಒಬ್ಬರಿ ಗೊಬ್ಬರು ಕೇಡಾ | ಭೂಚಕ್ರದೊಳು ಎಲ್ಲಾ ತೀರಿ ತಿಂಬುರೈಯಾ3 ಇಲಿಯು ಹೆಗ್ಗಣ ಹೆಚ್ಚಿ ತೋಳ ಬಡಿದು | ದಾಳಿಯಿಟ್ಟವು ಲಂಕಾ ಯೋಧ್ಯದ ನಡುವೆ | ಇಳಿಯೊಳು ಹತ್ತೆಂಟು ಕಾಲ-ವೀಪರಿಯಾ | ತಲಿ ತಲಿಗಿನ್ನು ನಾಯಕರಾಗಿ ಇರಲು 4 ಮ್ಯಾಲೊಬ್ಬ ನಿಂದಲಿ ಸುಖದಲಿ-ರಲಿಕ್ಕೆ | ಕುಲ ಅನ್ಯ ಇಲ್ಲದ ರಾಜೇಶನಾ | ಕಾಲಿಲಿ ಸರ್ವ ಸಂಕರ ವಾಗುತಿರಲು | ಹೊಳೆವನು ಗುರುಮಹಿಪತಿ ಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೈ ಮುಗಿವೆ ಕೈ ಮುಗಿವೆ ಕೈಮುಗಿವೆನುಸಖಿ ವೈಭವದ ಗುರುಗಳು ಕೈವಲ್ಯನೀವನಮ್ಮ ಕವಿಗಳ ಚರಣಕ್ಕೆ ಪ. ಪದ್ಮನಾಭ ಮಾಧವ ಮಾಧವ ಅಕ್ಷೋಭ್ಯರ ಚರಣವವಿದ್ಯುಕ್ತದಿಂದ ಬಲಗೊಂಬೆ ಸಖಿಯೆ 1 ಪ್ರಶಿದ್ದ ಜಯತೀರ್ಥ ವಿದ್ಯಾಧಿರಾಜಕವೀಂದ್ರ ವಾಗೇಶ ರಾಮಚಂದ್ರರೆ ಸಖಿಯೆ ವಾಗೇಶ ರಾಮಚಂದ್ರ ವಿದ್ಯಾನಿಧಿಗಳಪಾದಪದ್ಮವ ಮೊದಲೆ ಬಲಗೊಂಬೆ ಸಖಿಯೆ 2 ರಘುನಾಥ, ರಘುವರ್ಯ, ರಫೂತ್ತಮ ತೀರ್ಥರವೇದವ್ಯಾಸ ವಿದ್ಯಾಧೀಶರೆ ಗೆಲಿಸಲಿವೇದವ್ಯಾಸ ವಿದ್ಯಾಧೀಶರ ಚರಣವಭಕ್ತಿಯಿಂದಮೊದಲೆ ಬಲಗೊಂಬೆ ಸಖಿಯೆ3 ಅಗಣಿತ ವೇದನಿಧಿ ಸತ್ಯವೃತ ತೀರ್ಥರ ಸತ್ಯನಿಧಿ ಸತ್ಯನಾಥರೆ ಸಖಿಯೆಸತ್ಯನಿಧಿ ಸತ್ಯನಾಥರ ಚರಣವ ಅತ್ಯಂತವಾಗಿ ಬಲಗೊಂಬೆ ಸಖಿಯೆ4 ಸತ್ಯಾಭಿನವತೀರ್ಥ ಸತ್ಯಪೂರ್ಣತೀರ್ಥರಸತ್ಯ ವಿಜಯ ಸತ್ಯಪ್ರಿಯರ ಸಖಿಯೆಸತ್ಯ ವಿಜಯ ಸತ್ಯಪ್ರಿಯತೀರ್ಥರಚರಣವ ಅತ್ಯಂತವಾಗಿ ಬಲಗೊಂಬೆ ಸಖಿಯೆ 5 ಸತ್ಯಬೋಧ ಸತ್ಯಸಂಧ ಸತ್ಯವರರಚಿತ್ತಶುದ್ಧಿಯಲಿ ಬಲಗೊಂಬೆಚಿತ್ತಶುದ್ದಿಯಲಿ ಬಲಗೊಂಬೆ ಸಭೆಯೊಳುಸತ್ಯವಾಕ್ಯಗಳ ನುಡಿಸಲಿ ಸಖಿಯೆ 6 ಯತಿಮುನಿರಾಯರ ಅತಿಭಕ್ತರಾಗಿದ್ದಗತಿಪ್ರದರಾದ ಗುರುಗಳ ಸಖಿಯೆಗತಿ ಪ್ರದರಾದ ಗುರುಗಳುರಾಮೇಶನ ಅತಿಭಕ್ತರ ಮೊದಲೆ ಬಲಗೊಂಬೆ 7
--------------
ಗಲಗಲಿಅವ್ವನವರು
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈಲಾಸದಾಶೆಯಲ್ಲಿಹುದೊಶೈಲೇಂದ್ರಸುತೆಯರಸ ಶಿವನ ಒಲವಿಲ್ಲದವಗೆ ಪ. ಗುರುಹಿರಿಯರರಿಯದಗೆ ಪರಗತಿಯ ತೊರೆದವಗೆವರಧರ್ಮಪಥವ ಮರೆದವಗೆದುರುಳರನೆ ಪೊರೆದು ಪರಸತಿಯ ನೆರೆದವಗೆ 1 ದೀನಜನರೊಡನಾಡಿ ಹೀನಕರ್ಮವ ಮಾಡಿಆನೆಂಬ ಮಮತೆಯನೆ ಕೂಡಿದಾನವನೆ ಬೇಡಿ ದುರ್ದಾನಕೆ ಮರುಳಹಗೆ 2 ಅನಾಚಾರಂಗಳ ಬಿಡÀದೆ ಮನೆಗೆ ಬಂದರು ಕೊಡದೆಧನದ ಗಂಟುಗಳನು ಕಡಿಯದೆಅನುಸರಿಸಿ ನಡೆಯದೆ ಪರರ ಜರಿದು ನುಡಿವವಗೆ 3 ವಾದಿರಾಜನ ನುಡಿಯ ಹಿತವೆಂದು ಲಾಲಿಸದೆಕ್ರೋಧಮಯನಾಗಿ ದೂಷಿಪಗೆಪಾದಕೆರಗದೆ ಜನನಿಯನಾದರಿಸದವಗೆ 4 ಹಯವದನನಲ್ಲೆಂದು ತಾನೆಲ್ಲ ಬಲ್ಲೆಯೆಂದುದಯವುಳ್ಳವರ ದೈವನೆನದೆ ಈಸ್ವಯಂಭು ಲಿಂಗದ ಕಲ್ಲೇ ದೈವವೆಂಬುವಗೆ 5
--------------
ವಾದಿರಾಜ
ಕೈಲಾಸನಾಥ ಮಹೇಶ ಈಶ ಶೈಲೇಶ ತನಯೇಶ ಬಾಲಾರ್ಕ ಸಮಭಾಸ ಪ ಶೂಲಾಕ್ಷ ಡಮರುಗಳಿಂದ ಶೋಭಿಪ ಹಸ್ತ ತಾಲಾಂಕನನುಜನೊಳ್ಸಮರಗೈದೀರ್ಪ ಫಾಲಾಕ್ಷದಿಂದಲಿ ಕಾಮನ ದಹಿಸಿರ್ಪ ಶೂಲಿಯ ಮಹಿಮೆಯನೇನು ಬಣ್ಣಿಸಲಿ 1 ವಿಷ್ಣುಭಕ್ತರೊಳಗತಿ ಪ್ರೇಮವಿರುವ ಕೃಷ್ಣ ದ್ವೈಪಾಯನರ ಸುತರಾಗಿ ಶೋಭಿಪ ಸನಕಾದಿಗಳ ಶಿಷ್ಯ ದುರ್ವಾಸರೆನಿಪ 2 ನಂಜುಂಡನೆನಿಸಿರ್ಪ ಪ್ರಖ್ಯಾತ ಮಹಾದೇವ ಕಂಜಜಾತನ ಸುತನೆನಿಸಿರ್ದ ದೇವ ರಾಜೇಶ ಹಯಮುಖ ಭಕ್ತಪುಂಗವ ನೀನು ಅಂಜಲಿ ಬಂಧದಿಂ ನಮಿಪೆ ನಿನ್ನಡಿಗೆ 3
--------------
ವಿಶ್ವೇಂದ್ರತೀರ್ಥ
ಕೈವಲ್ಯಪತಿ ವಿಠಲ | ಇವಳ ನೀ ಸಲಹೋ ಪ ದೇವದೇವೊತ್ಮತವ | ದಾಸ್ಯಕಾಂಕ್ಷಿಪಳಾ ಅ.ಪ. ಗುರುಗಳೊಂದಗೆ ಯಾತ್ರೆ | ಭರದಿ ಸ್ವಪ್ನದಿಗೈದು |ಮರಳಿ ಕೊಲ್ಹಾಪುರದ | ಶಿರಿರಮೆಯ ಕಂಡೂ |ಮರುತ ದರ್ಶನದಿಂದ | ವರಸು ಉಪದೇಶಕ್ಕೆತರುಣಿ ಶುದ್ಧಳು ಇಹಳು | ಉರಗಾದ್ರಿವಾಸಾ 1 ತೈಜಸನು ನೀನಾಗಿ ನೈಜದಂಕಿತ ಪ್ರಾಪ್ತಿಮಾಜದಲೆ ಸೂಚಿಸಿಹೆ | ಭ್ರಾಜಿಷ್ಣು ಮೂರ್ತೇ|ಯೋಜಿಸಿದೆ ಅದಕಾಗಿ | ತರಳೆಗಂಕಿತವನ್ನುರಾಜಿಸೋ ಮನದಿ ತವ | ನೈಜರೂಪವನೂ 2 ತರತಮದ ಸುಜ್ಞಾನ | ಹರಿಗುರೂ ಸದ್ಭಕ್ತಿಮರುತ ಮತ ದೀಕ್ಷೆಯನು | ಪರಮ ವೈರಾಗ್ಯಕರುಣಿಸುತ ಸಂಸಾರ ಶರಧಿಯನೆ ದಾಂಟಿಸೊಅರವಿದೂರನೆ ಹರಿಯೆ | ಪ್ರಾರ್ಥಿಸುವೆ ನಿನ್ನಾ 3 ಕರ್ಮ ನಿಷ್ಕಾಮದಲಿ | ಪೇರ್ಮೆಯಲಿ ಚರಿಪಂತೆಭರ್ಮಗರ್ಭನ ಪಿತನೆ | ಸನ್ಮನವನಿತ್ತೂ |ನಿರ್ಮಮತೆ ನೀಡಿ | ಕರ್ಮನಿರ್ಲೇಪದಲಿಹಮ್ರ್ಯ ವೈಕುಂಠವನು | ಗಮಿಪ ತೆರಮಾಡೋ 4 ಭಾವುಕರ ಪರಿಪಾಲ | ಭೂವೈಕುಂಠಲೋಲದೇವದೇವೋತ್ತಮನೆ | ಗೋವಿಂದ ಮೂರ್ತೇ |ನೀ ವೊಲಿಯದಿಲ್ಲ ಗುರು | ಗೋವಿಂದ ವಿಠ್ಠಲನೆಸೇವಕಳ ಪೊರೆಯಲ್ಕೆ | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಕೊಂಡಾಡಬಹುದೆ ಯತೀಂದ್ರ ಎನ್ನಾ ಪಾಂಡವಪ್ರಿಯನಾಭಜಕ ವಾದಿರಾಜಯತಿ ಪ ನಾನಾ ಜನುಮದಾ ಯೋನಿಮುಖದಲಿ ಬಂದು ಮಾನವಳಿದು ಜ್ಞಾನಶೂನ್ಯನಾಗಿಹ ಶ್ವಾನಮನದ ಮೂಢಮನುಷ್ಯನಾಗಿ ಹೀನ ಅಹಂಕಾರಪೂರಿತ ದೋಷಿಂiÀi1 ಅರಿಷಡ್ವರ್ಗದೊಳು ಸಿಲುಕಿ ನರಗುರಿಯಾಗಿ ಪರರವಾರ್ತೆಯ ಸವಿವ ಹಗಲು ಇರಳೂ ದುರುಳ ದುಶ್ಚೇಷ್ಟಿಕನು ಬಹುದುರಾತ್ಮನು ನಾನು ಗುರುಹಿರಿಯರಿಗೆ ಎರಗದ ಗೂಢಪಾಪಿಯನು 2 ಒಡೆಯ ವೈಕುಂಠ ವಿಠಲನ ಭಜಿಸದೆ ಪೊಡವಿಯೊಳು ಕ್ಷುದ್ರ ದೈವಗಳಿಗೆಲ್ಲ ಪೊಡಮಡುತಿಹೆ ಸ್ವಾಮಿದ್ರೋಹಿ ಗರುವಿಯಾ ಕಡುಪಾತಕನ್ನ ನಡತೆಯನು ನೀನರಿಯದಲೇ 3
--------------
ಬೇಲೂರು ವೈಕುಂಠದಾಸರು
ಕೊಂಡಾಡಲಳವೆ ನಿನ್ನಯ ಕೀರ್ತಿ ಭೂ- ಮಂಡಲದೊಳು ಹಯಗ್ರೀವಮೂರ್ತಿ ಪ. ವೇದಂಗಳ ಜಲದಿಂದ ತಂದೆ ನೀ ಪೋದ ಗಿರಿಯ ಬೆನ್ನೊಳಾಂತು ನಿಂದೆ ಮೇದಿನಿಯ ಕದ್ದೊಯ್ದನ ಕೊಂದೆ ಸಂ- ವಾದದಿಂದ ಕಂಬದಿಂದಲಿ ಬಂದೆ 1 ಚರಣಾಗ್ರದಲಿ ನದಿಯನು ಪೆತ್ತೆ ತೀಕ್ಷ್ಣ ಪರಶು ಪಿಡಿದು ಬಾಹುಜರ ಕಿತ್ತೆ ನೆರೆನಂಬಿದಗೆ ಸ್ಥಿರಪಟ್ಟವನಿತ್ತೆ ದೊಡ್ಡ ದುರುಳಕಾಳಿಂಗನ ಶಿರದಿ ನಿಂತೆ 2 ಪರವ್ರತೆಯರ ಮಾನಭೇದನ ಚತುರ ತುರಗವೇರಿ ನಲಿವನ ಕ್ಷಿತಿಯೊಳುತ್ತಮ ವಾದಿರಾಜನ ಸ್ವಾಮಿ ಸತತ ರಕ್ಷಿಪ ಶ್ರೀ ಹಯವದನ 3
--------------
ವಾದಿರಾಜ
ಕೊಡು ಕೊಡು ವರವ ಕಿಂಕರ ನಾನಲ್ಲೆ ಪಿಡಿಕೈ ಹೂವಿನ್ಹಡಗಲಿ ಹನುಮಂತರಾಯ ಪ ನೂರುಗಾವುದ ಶರಧಿಯ ದಾಟಿ ಲಂಕೆ ಊರು ಸುಟ್ಟು ಬಂದ ಧೀರ ನೀನಲ್ಲೆ 1 ಕ್ರೂರ ಕೌರವರ ಮಡುಹಿ ಕರಿಪತಿ ರಾಜ್ಯ ರಾಯ ಧರ್ಮಗೆ ಪಟ್ಟ ಕಟ್ಟಿದೆಯಲ್ಲ 2 ಮಾಯಾವಾದಿಗಳ ಮರ್ದಿಸಿ ಮಧ್ವಮುನಿಯೆ ಭೀಮೇಶಕೃಷ್ಣಧಿಕೆಂಬೊ ಬಿರುದೆತ್ತಿದ್ಯಲ್ಲ 3
--------------
ಹರಪನಹಳ್ಳಿಭೀಮವ್ವ
ಕೊಡು ತಾಯೆ ವರವ ಧೃಡವಾಗಿರುವ ಕೊಡು ತಾಯೆ ವರವಾ ಪ. ಕೊಡೆ ವರ ತಡಮಾಡದೆ ಧೃಡ ಭಕ್ತಿ ಎಂಬ ಮಾಂಗಲ್ಯ ಭಾಗ್ಯ ಧೃಡವಾಗಿರುವಂತೆ ಅ.ಪ. ಪರಿಪರಿ ಧ್ಯಾನಿಸೆನ್ನ ಮನಮಂದಿರವೆಂಬ ವರಗೃಹದಲಿ ಯೆನ್ನಯ ಭಕ್ತಿಮಂಟಪದಿ ಹರದಿ ಲಕುಮಿ ನಿನ್ನ ಪೂಜಿಸಿ ನಮಿಸಲು ವರ ಅಘ್ರ್ಯಪಾದ್ಯ ಆಚಮನವಿತ್ತು ನಲಿವೆ 1 ನವವಿಧ ಭಕ್ತಿಯೆಂಬ ನವರತ್ನ ಮಂಟಪದಿ ನವವಧು ಹರಿಗೆ ನೀನೆಂದು ಕುಳ್ಳಿರಿಸಿ ನವವಿಧ ಪಂಚಾಮೃತ ಸ್ನಾನಗೈಸಿ ನವನೀತಚೋರ ನಿನಗೆ ವಸ್ತ್ರಾಭರಣವನಿಟ್ಟು ನವವಿಧ ಭಕುತಿಲಿ ಪೂಜಿಪೆ 2 ಜಾಜಿ ಮಲ್ಲಿಗೆ ರೋಜ ಸಂಪಿಗೆ ರಾಜಿಪಲಕ್ಷ್ಮಿಗೆ ಮಲ್ಲಿಗೆ ದಂಡೆ ಮುಡಿಸಿ ಜಡೆಗೆ ಕಮಲ ಕೆಂಪಿನ ತಿರುಪಿನ ಹೂವ ತಿರುಗಿಸಿ 3 ಅರಿಶಿನ ಕುಂಕುಮ ಪರಿಮಳ ಗಂಧದಿ ವರಮಹಾಲಕ್ಷ್ಮಿಗೆ ಪೂಜಿಸುವೆ ವರಲಕ್ಷ್ಮಿಗೆ ಪರಿಪರಿ ಪುಷ್ಪ ಅಷ್ಟೋತ್ತರಗಳಿಂದರ್ಚಿಸೆ ಕೊಡು ವರ ದೃಢಭಕ್ತಿಯೆಂದು ಬೇಡುವೆ 4 ಷಡ್ರಾಸಾನ್ನ ಪಾಯಸ ಭಕ್ಷ್ಯಗಳ ಷಡ್ವಿಧ ದದಿಘೃತ ಪಾಲು ಸಕ್ಕರೆ ಬಗೆಬಗೆ ಉಂಡೆಗಳ ಷಡ್ವಿದ ಫಲಗಳನರ್ಪಿಸಿ ಧೂಪ ದೀಪದಿ ವರ ಅಷ್ಟ ಮಂಗಳಾರತಿ ಬೆಳಗಿ ಪಾಡುತ ನಮಿಸುವೆ 5
--------------
ಸರಸ್ವತಿ ಬಾಯಿ
ಕೊಡುಜಡಜಾಕ್ಷ ನಿಮ್ಮಡಿ ಧ್ಯಾನಮೃತ ಕಡುದಯದೆನ್ನಯ ಜೆಹ್ವೆಗೆ ಸತತ ಪ ದುರುಳ ದಾನವರೊದೆದ ಸುರರನುದ್ಧರಿಸಿದ ಪರಮಪಾವನ ಪಾದಸ್ಮರಣಸಂಜೀವನ 1 ಅತ್ರಿಮುನಿಯ ಕಾಯ್ದ ಸತ್ರಾಜಿತನ ಪೊರೆದ ಸತ್ಯವ್ರತೆಗೆ ವರವಿತ್ತ ಅಮಿತಪುರುಷ 2 ಭಕ್ತರಾಪತ್ತು ಕಳೆದು ಅರ್ಥಿಯಿಂ ಕಾಯ್ವ ಪ ವಿತ್ರ ಶ್ರೀರಾಮನಾಮ ಮುಕ್ತಿ ಸಂಪದಸಿದ್ಧಿ 3
--------------
ರಾಮದಾಸರು