ಒಟ್ಟು 494 ಕಡೆಗಳಲ್ಲಿ , 78 ದಾಸರು , 430 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿಯು ಬರುವ ಸೊಬಗ ನೋಡಿರೆ ಭರದಿ ಬನ್ನಿರೆ ಶಿರವಬಾಗಿ ಚರಣಕೆರಗಿ ವರವಬೇಡಿರೆ ಪ. ಕಾಲೊಳಂದಿಗೆ ಗೆಜ್ಜೆ ಪಿಲ್ಲಿ ಘಲಿರುಘಲಿರೆನೆ ಬಾಲೆಯರ ಬಳಿಗೆ ಬರುವಳೊಲಿದಳೆಂಬೆನೇ 1 ಮಾತೆಗೆನಿತೋ ಪ್ರೀತಿಯೆಮ್ಮೊಳಗೈತಂದಳೀದಿನಂ ಪೂತುದರರೆ ಪೂರ್ವಪುಣ್ಯ ತರವಿದೆಂಬೆನಾಂ 2 ಪರಮಪುರುಷ ಶೇಷಶೈಲವರದನರಸಿಯಿಂ- ದರರೆ ಒಲಿದಳೆಮಗೆ ಧರೆಯೊಳರಿದುದಿನ್ನದೇನ್ 3
--------------
ನಂಜನಗೂಡು ತಿರುಮಲಾಂಬಾ
ಸಿರಿಯು ಬೇಡೆನಗೆ ಈ ಬರಿಯ ವೈಭವದ ಪರಿಯು ಬೇಡವೆನಗೆ ಪ ಪರಿಪರಿಯಲಿ ನಿನ್ನ ಚರಣ ಸೇವೆಯಲಿ ಪರತರ ಸುಖಗಳ ಅರಿವು ಬೇಕಲ್ಲದೆ ಅ.ಪ ಮರೆತೆನೊ ನಿನಗಾಗಿ ಚೆಲುವ ಸತಿಸುತರ ತೊರೆದೆನೋ ಬಹು ವಿಧ ಪ್ರೇಮಪಾಶಗಳ ಬೆರಗಾದೆನೋ ದೇವ ಮರುಕದಿಂದೆನಗೆ ನೀ ವರ ಮಾರ್ಗವ ತೋರೋ ಮುರಳೀಧರನೆ 1 ಮಂದಮತಿಗಳೆನ್ನ ನಿಂದಿಸುತಿರುವುದಾ ನಂದವೇನೋ ನಿನಗೆ ಸುಂದರ ಮೂರುತಿ ಕುಂದಿ ಕುಂದಿದ ಮನ ಮಂದಿರದಲಿ ನಿಲ್ಲೋ ಇಂದಿರಾ ರಮಣನೆ 2 ಎನ್ನ ಕುಂದುಗಳನ್ನು ಮನ್ನಣೆ ಮಾಡಿ ಸಂ ಪನ್ನತೆ ಎನಗೀಯೋ ಘನ್ನ ಮಹಿಮ ಸುಪ್ರಸನ್ನವಿಠ್ಠಲನೇ ನಿನ್ನವನೆನಿಸೆಲೋ ಪನ್ನಗಶಯನನೇ 3
--------------
ವಿದ್ಯಾಪ್ರಸನ್ನತೀರ್ಥರು
ಸುಂದರ ಮೂರುತಿ ಹರಿಯೆ ಬಾ- ರೆಂದು ಕಶ್ಯಪ ಋಷಿ ಅದಿತಿಯರು ಮಂದಹಾಸದಿ ನಮ್ಮ ಮಂದಿರಕೀಗ ಗೋ- ವಿಂದ ಬಾ ಶ್ರೀಮುಕುಂದ ಬಾ ಯಾದವ ವೃಂದ ಬಾ ಬಲುಮುದದಿಂದ ಬಾ ಬಾ- ರೆಂದು ಕರದಾರು ಶೋಭಾನೆ 1 ಅಚ್ಚುತಾನಂತ ಶ್ರೀಹರಿ ನೀನು ಸಚ್ಚಿದಾನಂತಾತ್ಮನೆ ನೀನು ಮಿತ್ರೆ ಲಕುಮಿ ಒಡಗೂಡುತ ಬಾರೆಂದು ಅತ್ರಿಯರು ಸ್ತುತಿಪರು ಮಿತ್ರೆಯರು ಪಾಡ್ವರು ಕೀರ್ತಿಪರು ಅನಸೂಯಾತ್ರಿಯರು ಬಾರೆಂದು ಕರೆದಾರು ಶೋಭಾನೆ 2 ಭಾಗವತರ ಪ್ರಿಯ ಬಾರೆಂದು ಭಾರದ್ವಾಜರು ಭಕ್ತಿಯಲಿ ಸತಿ ಸುಶೀಲೆ- ಯರು ಸುಂದರ ನಾರಿಯರು ಕರೆವರು ಕಂಸಾರಿ ಬಾರೆಂದು ಕರದಾರು ಶೋಭಾನೆ 3 ಹಸ್ತಿವರದ ಹರಿ ಬಾರೆಂದು ವಿಶ್ವಾಮಿತ್ರರು ಹರುಷದಲಿ ಸತಿ ಸಹಿತದಿ ಕರೆವರು ಭಕ್ತಿಯಲಿ ಪರಮಾಸಕ್ತಿಯಲಿ ಹರಿಯನು ಸ್ತೋತ್ರದಲಿ ಭೂ ರಮಾ ಪಾರ್ಥಸಾರಥಿಯ ಕರದಾರು ಶೋಭಾನೆ 4 ಕೌಶಿಕ ಯಜ್ಞಪಾಲನೆ ಬಾ ಕಂಸನ ಸಭೆಯಲಿ ಸೆಳೆದನೆ ಬಾ ಹಂಸವಾಹನಪಿತ ಬಾರೆಂದು ಕರೆವರು ಗೌತಮರು ಪತ್ನಿ ಅಹಲ್ಯೆಯರು ಪಾಡುತ ಪ್ರಾರ್ಥಿಪರು ಮುರಹರಿ ಗೋಪಾಲ ಬಾರೆಂದು ಕರದಾರು ಶೋಭಾನೆ 5 ಜಗದುದರನೆ ಶ್ರೀ ಹರಿಯೆ ಬಾ ನಿಗಮತಂದು ಸುತಗಿತ್ತನೆ ಬಾ ಝಗಿಝಗಿಸುವ ಆಭರಣಗಳ್ಹೊಳೆಯುತ ಬಾರೆಂದು ಜಯ ಜಯವೆನ್ನುವರು ಋಷಿ ಜಗದಗ್ನಿಯರು ರೇಣುಕ ಸಹಿತ ಶ್ರೀಶನ ಕರದಾರು ಶೋಭಾನೆ 6 ಮದನ ಗೋಪಾಲನಿಗೆ ಮಂಗಳ ಯದುಕುಲ ತಿಲಕನಿಗೆ ಮಂಗಳ ಕಮಲಾನಾಭ ವಿಠ್ಠಲನಿಗೆ ಸತಿ ಅ- ರುಂಧತಿಯರು ಜಯ ಜಯ ಮಂಗಳವೆಂದು ಕರದಾರು ಶೋಭಾನೆ7 ಶೋಭನವೆನ್ನಿರೆ ಶ್ರೀಹರಿಗೆ ಶೋಭನವೆನ್ನಿರೆ ಮಾಧವಗೆ ಶೋಭನವೆನ್ನಿರಿ ಸೊಬಗುಳ್ಳ ದೇವಗೆ ಶೋಭಾನೆ ಸಿರಿಯರಸಗೆ ದಿವ್ಯ ಶೋಭಾನೆ ಪರಮಪುರುಷನಿಗೆ ಶೋಭಾನೆ ಶೋಭನ ಗರುಡಗಮನಗÉಶೋಭನವೆನ್ನಿರೆ ಶೋಭಾನೆ 8
--------------
ನಿಡಗುರುಕಿ ಜೀವೂಬಾಯಿ
ಸುಮ್ಮನೆ ಹೋಗುತಾದಲ್ಲೋ ಇಷ್ಟಾರ್ಥಪಡಿದೇ ಸುಮ್ಮನೆ ಹೋಗುತಾದಲ್ಲೋ ಪ ಸುಮ್ಮನೆ ಹೋಗುತಾದೆ ಹೆಮ್ಮಾರಿಗೀಡಾಗಿ ಮರ್ಮವರಿತು ಪರಬ್ರಹ್ಮನ ಕೂಡದೆ ಅ.ಪ ಎಷ್ಟೋ ಸುಕೃತವಡೆದು ಈ ನರಜನ್ಮ ತೊಟ್ಟು ಸೃಷ್ಟಿಗೆ ಇಳಿದು ಹುಟ್ಟಿ ಬಂದಂಥ ಕಾರ್ಯ ಬಿಟ್ಟು ಮರವೆಗೂಡಿ ಕೆಟ್ಟು ಹೋಗ್ಯಾದೋ ವಯ ಕೃಷ್ಣಾರ್ಪಣೆನದೆ ಸುಟ್ಟು 1 ವಯವೆಂಬ ಧನ ಪಡೆದು ಈ ಮಹದನು ಭವದ ಸಂತೆಗೆ ಇಳಿದು ಭವದ ಜಯೆಂಬ ಅನುಭವದ ವ್ಯಾಪಾರ ಮಾಡಿ ಭವಹರನ ಕಾಣದೆ ಜವನಗೀಡಾಗಿ ತಾನು 2 ಅರಿವಿನಾಲಯ ಪೊಕ್ಕು ಸಂಸಾರವೆಂಬ ಮರೆವಿನ ಬಲೆಯೊಳ್ ಸಿಕ್ಕು ಪರಮಪುರುಷ ಸಿರಿಯರಸ ಶ್ರೀರಾಮನ ಚರಣಕಮಲಕ್ಕೆ ಸಲ್ವ ವರಮೋಕ್ಷ ಪಡೆಯದೆ ಲ
--------------
ರಾಮದಾಸರು
ಸುಮ್ಮನ್ಯಾತಕೆ ಕಾಲಕಳೆಯುವಿಯೋ ಹೇ ಸುಮ್ಮನ್ಯಾತಕೆ ಕಾಲಕಳಯುವಿ ಪ ಬ್ರಹ್ಮನಯ್ಯನ ವಿಮಲ ಚರಣ ಒಮ್ಮನದಿಂ ಪೊಗಳುತನುದಿನ ನಿರ್ಮಲಪದವಿ ಸಂಪಾದಿಸದೆ ನೀ ಅ.ಪ ಮತ್ತು ನಿನ್ನಗೆ ಹತ್ತಿ ಬರುವುದೆ ನಿತ್ಯ ವೆನಿಪತ್ಯಧಿಕ ಸಮಯವು ಸತ್ಯ ಸರ್ವೋತ್ತಮನ ಪಾದವ ನಿತ್ಯ ಪಾಡುತ ಸಾರ್ಥಕ್ಹೊಂದದೆ 1 ಮೃತ್ಯುಬಾಧೆಯ ಗೆಲಿಸಿ ನಿನ್ನ ಪ ವಿತ್ರನೆನಿಪ ಮಹ ಮೃತ್ಯುಲೋಕದಿ ಉತ್ಪತ್ತಿಯಾಗಿ ರಿಕ್ತಹಸ್ತದ್ಹೋಗ್ವತಿ ಚಿತ್ತಜಪಿತನ್ನರ್ತು ಭಜಿಸದೆ 2 ಭಕ್ತಜನರು ಕೈಯೆತ್ತಿ ಪೇಳಿದ ಸತ್ಯದೋಕ್ತಗಳ್ನಿತ್ಯವೆಂದು ಭಕ್ತವತ್ಸಲ ಸಿರಿಯರಾಮನ ಚಿತ್ತದರಿತು ಮುಕ್ತಿ ಪಡೆಯದೆ 3
--------------
ರಾಮದಾಸರು
ಸುರವೃಂದ ವಾರಿಧಿಶಯನ ಗೋವರ್ಧನೋದ್ಧರಣ ಚಾರುಚರಣ ಪ ವಾರಿಜದಳ ನಯನ ವಾರಿಧಿಶಯನ ಉರ್ವಿಭಾರಾಪಹರಣ ಸಾರಿದಜನ ಸಂಸಾರಿಸಿರಿಯಣ 1 ಭಂಜನ ಹರಣ ಪಾರ್ಥಿವ ಕುಲರಂಜನ ಚಾತುರ್ಯತರ ಜಾಣ ಚೇತನಾತ್ಮಕ ಸುಗುಣ ಜಾತ ರಹಿತ ಜನಜಾತ ಸಂಜೀವನ 2 ದೇವಕಿ ವರನಂದನ ದಿವಿಜನುತ ರಾವಣಾಸುರ ಬಂಜನ ಮಾವ ಕಂಸಾಂತಕ ಮಾವಧುನಾಯಕ ಸೇವಿತ ರಕ್ಷಕ ಶರ್ವಾಣೀವರ ಸಖ 3 ಭಂಜನ ನಾರದ ನುತ ವಾನರಪತಿ ಪರಿಪಾಲನ ದೀನಜನರ ಪೋಷ ಭಾನು ಕೋಟಿ ಪ್ರಕಾಶ ಮನಮೋಹನ ರೂಪ ಲೀಲಾರ ಮಾಲೋಲ 4 ಚಿಂತತ ಫಲದಾಯಕ ಭಕ್ತರ ಹೃದಯಾಂತರಂಗದ ನಾಯಕ ಕಂತು ಜನಕ ಲಕ್ಷ್ಮೀಕಾಂತ ಭೀಮನ ಕೋಣೆ ಸಂತತವಾಸ ತಕ್ಷಕಾಂತಕಾರೂಢ ಹರಿ 5
--------------
ಕವಿ ಪರಮದೇವದಾಸರು
ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ ಹಳೆಯ ಜನರ ಅನುಭವಗಳ ಹಳಿಯಬೇಡಿರೊ ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ ಗೋವು ಕೊಂದು ಪಾದರಕ್ಷೆ ದಾನಬೇಡವೊ 10 ಅರಿಯದ ಜನರಲ್ಲಿ ಅಂತರಂಗಬೇಡವೊ ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ ಜಂಭ ಕೊಚ್ಚಬೇಡವೊ ರಗಳೆ ರಂಪದಿಂದ ಪರರ ಒಲಿಸಬೇಡವೊ ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20 ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ ಪೋಕರಿ ಜನಗಳಲಿ ಮೂಕ ಬದಿರನಂತಿರೊ ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ ಸಂಕಟ ಬಂದಾಗ ವೆಂಕಟೇಶ ಬರುವನೆ ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31 ಪರರು ನೋಯುವಂಥ ಮಾತನಾಡಬೇಡಯ್ಯ ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ ದುರುಳ ಜನಗಳಲ್ಲಿ ಸರಳನಾಗಬೇಡಯ್ಯ ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ ತಿರುಕನಂತೆ ಜ್ಞಾನದ ಭಿಕ್ಷೆಯನು ಬೇಡೆಲೊ ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40 ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ ಸಂಗದಿಂದ ದುಷ್ಟಭೋಗ ಕಾಮ ಬರುವುದೊ ಭಂಗವಾದ ಕಾಮದಿಂದ ಕೋಪ ಬರುವುದೊ ಕೋಪದಿಂದ ಮನದಲಿ ವ್ಯಾಮೋಹ ಬರುವುದೊ ಈ ಪರಿಮೋಹದಲಿ ಸ್ಮರಣೆ ನಾಶಪಡುವುದು ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50 ಜ್ಞಾನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ ಜ್ಞಾನ ಸರ್ವಕರ್ಮಗಳನು ದಹಿಸಿಬಿಡುವುದೊ ಜ್ಞಾನದಿಂದ ಪರಮಶಾಂತಿ ಪಡೆಯುಬಹುದೆಲೊ ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ ಮಿತಿಯ ಮೀರಿ ಭೋಜನವನು ಮಾಡಬೇಡವೊ ಕಾಲ ಕಳೆಯಬೇಡವೊ ಲೋಕವ ಭಯಪಡಿಸಬೇಡ ನಡೆನುಡಿಗಳಲಿ ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60 ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ ದೇಶಕಾಲ ಪಾತ್ರವರಿತು ದಾನ ಮಾಡೆಲೊ ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ ಪರರ ಮನವು ಕೆದರದಂತೆ ನಿಜಹಿತ ನುಡಿಯು ಗುರುತರ ವಾಚನಿಕ ತಪವ ಮರೆಯಬೇಡವೊ 70 ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು ಗರ್ವಮತ್ಸರಾದಿಗಳನು ಬಿಡುವುದೆ ಮತಿಯು ಶರಣು ಹೊಡೆಯೊ ಕರುಣಮಯನ ಚರಣಯುಗಳದಿ ಕರಗತವಾಗುವುದು ನಿನಗೆ ಇಹಪರ ಸುಖವು ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ ಕಮಲಪತ್ರಗಳಲಿ ಜಲದ ಕಣಗಳ ತೆರದಿ ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80 ಜ್ಞಾನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ ಜ್ಞಾನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ ದಾರುಣ ಸಂಸಾರ ಜಲದಿ ಪಾರುಗಾಣಲು ಧೀರನಾಗಿ ಈಜುವವಗೆ ತಾರಣ ಸುಲಭ ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ ಬೆಳಸಿದಂತೆ ತರುಲತೆಗಳು ಫಲಕೊಡುವುದೊ ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ ಹುಳಿಯ ರಕ್ತವಿರುವತನಕ ತಲೆಯು ಬಾಗದು ಕಾಲ ಸಾಲದೊ 90 ಪರರ ನುಡಿಗಳನ್ನು ಕದ್ದು ಕೇಳಬೇಡವೊ ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ ಚಾಡಿಯಾಡ ಬೇಡ ಚಾಡಿ ಕೇಳಬೇಡವೊ ಸೇಡನು ತೀರಿಸುವ ಹೇಡಿಯಾಗಬೇಡವೊ ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ ಕರವ ಪಿಡಿಯೆಲೊ ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100 ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ ಇರುಳು ಕಂಡ ಬಾವಿಗೆ ನೀ ಉರುಳಬೇಡವೊ ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110 ಪಾಪಿಯಾಗಬೇಡ ಇತರ ಜನರ ವಂಚಿಸಿ ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು ಕೂಪ ಕೂರ್ಮದಂತೆ ಜಗವ ನೋಡಬೇಡವೊ ರೂಪುರಂಗುಗಳಿಗೆ ಮನವ ಸೋಲಬೇಡವೊ ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ ಕೊಡಲಿಯನ್ನು ಸೇರಿ ಮರದ ಕಾವಿನಂದದಿ ನಡತೆ ಕಲಿಸದಿದ್ದರವರು ಬುಡಕೆ ತರುವರೊ ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120 ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ ಗುಹ್ಯ ತತ್ವ ಪೇಳಬೇಡವೊ ನಾಯಿಗಳಿಗೆ ಹವ್ಯದಾನ ಮಾಡಬೇಡವೊ ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ ಕರ್ಮ ಸುಡುವುದೆ ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ ಜನನ ಮರಣ ನಿಯತ ಕಾಲಗಳಲಿ ಬರುವವೊ ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130 ತಾಳಿದವನು ಬಾಳುವನೆಂದರಿತು ನಡೆಯೆಲೊ ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ ಬಾಲನೆಂದು ಅರಿತು ಸತತ ಜ್ಞಾನವ ಗಳಿಸೆಲೊ ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140 ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ ಬಿಂದು ಬಿಂದು ಸೇರಿ ಸಿಂಧುವಾಯಿತೊ ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ ಅರಿಯದ ಅಜ್ಞಾನಿಯೊಡನೆ ಸರಸಬೇಡವೊ ತರುಗು ತಿನ್ನುವವನ ಕೇಳಬೇಡ ಹಪ್ಪಳ 150 ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ ಸಾಹಸವನು ಮಾಡದಿರೊ ಪ್ರಬಲ ಜನರಲಿ ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ ಭಾಗ್ಯಹೀನ ಬಡವನೆಂದು ಜರಿಯಬೇಡವೊ ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160 ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ ಅರಳು ಹುಡುಕಬೇಡವೊ ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ ಬೀದಿಯಲಿರುವ ಜನಗಳ ಬೇಸರಿಸಬೇಡವೊ ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170 ಊರು ಕುರಿಯ ಕಾದು ಗೌಡನೆನಿಸಬೇಡವೊ ದೂರು ತರುವ ಜನರ ಕ್ಷಣದಿ ನಂಬಬೇಡವೊ ನಾರಿಯ ಸಾಹಸವ ನಂಬಿ ದುಡುಕಬೇಡವೊ ಎರಡು ಕರವು ಸೇರದೆ ಚಪ್ಪಾಳೆಯಾಗದು ಕುರುಡನು ತೋರಿಸುವುದೆಲ್ಲ ಮಾರ್ಗವಾಗದು ಕರಡಿಯು ಮೈಯಪರಚಲದು ಸೌಖ್ಯವಾಗದು ಗುರುಗಳ ಬಿಟ್ಟೋದಲು ಉಪದೇಶವಾಗದು ಹರಿಯಭಕುತಿ ಹರಿಯದಿರಲು ಗಾನವಾಗದು ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180 ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು ಕಿರಿಯ ಜನರ ಗುಣಗಾನವು ಭಜನೆಯಾಗದು ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು ಕದ್ದು ಅವಿತುಕೊಂಬರೆಲ್ಲ ಗರತಿಯಾಗರು ಮದ್ದು ಮಾಟ ಮಾಡುವವರು ಸುದತಿಯಾಗರು ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190 ರೀತಿ ನೀತಿಗಳನು ಪರಗೆ ಹೇಳಲು ಸುಲಭ ಮಾತನಾಡಿದಂತೆ ಮಾಡಿ ತೋರುವರಿಹರೇ ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು ಹೋತನ ಗಳಸ್ತನವಿದಲ್ಲ ಕೂತು ಕೇಳರಿ ಗಾದೆಗಳನು ವೇದವೆಂದು ಪೇಳಲುಚಿತವು ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು ಪರಮ ಭಾಗವತರ ಚರಿತೆಯೋದಿ ನೋಡಿರಿ ಅರಿಯಬಹುದು ನುಡಿದ ನೀತಿಸಾರವೆಲ್ಲವ ನಾಡುನುಡಿಗಳೆಂದು ಮರೆಯಬೇಡವೆಂದಿಗು ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
--------------
ವಿದ್ಯಾಪ್ರಸನ್ನತೀರ್ಥರು
ಸುವ್ವಿಮಟ್ಟು ಶರಣು ರಾಘವೇಂದ್ರ ಗುರುವೆ ಶರಣು ವ್ಯಾಸರಾಜ ಪ್ರಭವೆ ಶರಣು ನಾರಸಿಂಹ ಭಕ್ತ ಶರಣು ಶರಣು ಶಂಕು ಕರ್ಣನೆ ಪ ನಿರುತ ನಿಮ್ಮ ಚರಣ ಕಮಲ ಗೆರಗಿ ಎರಗಿ ಬೇಡಿ ಕೊಂಬೆ ದುರಿತ ರಾಶಿ ಭರದಿ ಹರಿಯ ಕರುಣ ಕೊಡಿಸು ಕರುಣಿಯೆ ಅ.ಪ ವಿಧಿಯ ಶಾಪ ಧರಿಸಿ ಮುದದಿ ಉದಿಸಿ ಬಂದು ದೈತ್ಯ ಕುಲದಿ ಹೃದಯ ಗತನೆ ವಿಶ್ವವ್ಯಾಪ್ತ ಪದುಮನಾಭನೆಂದು ತೋರ್ದೆಹೋ ಬುಧರ ಮಕುಟ ಭಕ್ತಿ ಶರಧಿ ಮದನ ತೇಜ ಬೋಧ ಮಧ್ವ ಚೇಲ ತ್ರಿದಶ ಮಾನ್ಯ ಪ್ರಹ್ಲಾದ ಬಾಹ್ಲೀಕ 1 ತುಳಿದು ಶೃತಿ ವಿರೋಧ ಬೋಧೆ ಸುಜನ ತತಿಯ ಸುಮತಿ ಚಲುವ ಕುವರ ನೆನಿಸಿ ಬಂದೆ ಹೋ ಬಲಿಸಿ ಕೃಷ್ಣನನ್ನು ಕುಣಿಸಿ ಬಲಿಸಿ ವಾಯು ಮತವ ಮೆರಸಿ ಒಲಿದು ನೃಪಗೆ ರಾಜ್ಯವಾಳಿ ಹಳಿದೆ ವಿಧುವ ಕೀರ್ತಿ ವಿಭವದಿ 2 ಮತ್ತೆ ಬಂದೆ ರಾಘವೇಂದ್ರ ಹತ್ತು ಆರು ಮತ್ತೆ ನಾಲ್ಕು ಮೊತ್ತ ಕಲೆಗಳೆಲ್ಲ ಬಲ್ಲ ಸತ್ಯ ಪ್ರಾಣ ಶಾಸ್ತ್ರ ಮೆಲ್ಲನೆ ಎತ್ತ ಸಾಟಿ ಕಲ್ಪವೃಕ್ಷ ನಿತ್ಯ ವಿವಿಧ ಮಹಿಮೆ ತೋರ್ಪೆ ಇತ್ತು ಪೊರೆವೆ ಜನರ ಬಿಢೆಯ ವಿತ್ತ ನೀಡು ಭೃತ್ಯಗೆ 3 ನಾರಸಿಂಹ ವೇದ ವ್ಯಾಸ ಮೂರುತೀಶ ರಾಮಚಂದ್ರ ಸೂರಿಗಮ್ಯ ಕೃಷ್ಣ ದೇವ ಸುರರು ಎಲ್ಲರು ಸೇರಿ ನಿಮ್ಮ ನಡಿಸಿ ಕಾರ್ಯ ಸೂರೆ ಗೈಸುತಿರಲು ಕೀರ್ತಿ ಪಾರವಿಲ್ಲ ಮಹಿಮೆಗೆಂಬೆ ಈರ ಪಿತನ ಕರುಣ ಭೂಷಿತ 4 ರಾಘವೇಂದ್ರ ನಿಮ್ಮ ನಾಮ ಯೋಗ್ಯ ಜಪಿಸೆ ಭಕ್ತಿಯಿಂದ ಶ್ರೀಘ್ರನಾಶ ಅಘಸಮೂಹ ಹಾಗೆ ಸಿದ್ಧಿ ವಾಂಛಿತಂಗಳು ಯೋಗ ಸಿದ್ಧಿ ಭೋಗ ಸಿಧ್ಧಿ ಯೋಗ ಪತಿಯ ಭಕ್ತಿ ಸಿಧ್ಧಿ ಬೇಗ ಪಡೆದು ಕ್ರಮದಿ ಭವದ ಬೇಗ ನೀಗಿ ಮುಕ್ತಿ ಕಾಂಬುವ 5 ದಾನ ಗೈದನಿಷ್ಟ ಪುಣ್ಯ ಸುಜನ ಶಿಷ್ಯ ತತಿಗೆ ಶ್ರೀನಿವಾಸನನ್ನು ಯಜಿಪ ದಾನ ಶೌಂಡ ನಿಮಗೆ ಸಾಟಿಯ ಕಾಣೆ ಕಾಣೆ ಸತ್ಯ ಸತ್ಯ ನಾನು ಮೂಢ ಪಾಪಿ ಕೃಪಣ ಏನು ಸೇವೆ ಮಾಡಲಾಪೆ ಕಾಯ ಬೇಕೆಂಬೆ 6 ನಿನ್ನ ನೆನೆದ ಮಾತ್ರಕಿನ್ನು ಅನ್ನ ವಸನ ಎಲ್ಲ ಸಿಧ್ಧ ಹೊನ್ನು ಹೆಣ್ಣು ಮಣ್ಣು ಮಿಷಯ ನಿನ್ನ ಕೇಳ್ವ ಜ್ಞಾನಿ ಆಹನೆ ಮನ್ನಿಸೆನ್ನ ದೋಷರಾಶಿ ನಿನ್ನ ಶಿಷ್ಯನೆಂದು ಗ್ರಹಿಸು ಮನ್ನ ಮಾಡು ಭವವ ಬೇಗ ಕಣ್ಣು ನೀಡು ಜ್ಞಾನ ದೆಂಬುವೆ 7 ಜಯ ಸುಧೀಂದ್ರ ಪ್ರೇಮ ಪುತ್ರ ಜಯ ವಿಜೀಂದ್ರವರ ಸುಪೌತ್ರ ಜಯ ಜಯೇಂದ್ರ ಕರುಣ ಪಾತ್ರ ಜಯ ಕವೀಂದ್ರ ಮಧ್ವ ಛಾತ್ರನೆ ಜಯ ಭವಾಭ್ದಿ ಪೋತ ಚರಣ ಜಯ ದಯಾಭ್ದೆ ಸುಗುಣ ಕೋಶ ಜಯ ಯತೀಂದ್ರ ಕಾಮಧೇನು ಜಯವು ಜಯವು ಜ್ಞಾನ ಭಾಸ್ಕರ 8 ಸತ್ಯಸಂಧ ಸತ್ಯ ಸ್ತಂಭ ಭೃತ್ಯ ಸತ್ಯ ವೇತ್ತ ಸತ್ಯನಾಥ ನೊಲಿ ಮೆಯಿಂದ ನಿತ್ಯ ಕಾಂಬನೆ ಸತ್ಯ ಮಾತೆ ಸಿರಿಯ ನಾಳ್ವ ಮುಕ್ತಿದಾತ ಕೃಷ್ಣವಿಠಲ ಚಿತ್ತದಲ್ಲಿ ಸುಳಿಯಲೆಂಬಭೃತ್ಯ ಬಯಕೆ ಸತ್ಯ ಮಾಡ್ಪ್ರಭೋ 9
--------------
ಕೃಷ್ಣವಿಠಲದಾಸರು
ಸುಳಾದಿ ಕೌಸ್ತುಭ ಫಾಲ ಸಿಂಗಾಡಿಯಂತಿಪ್ಪ ಪುರ್ಬುಕೂರ್ಮನಂದದಿಗಲ್ಲ ಚುಬುಕ ಚುಬುಕಾಗ್ರದಿಂಸಿರಿಯರಸ ಹಯವದನ ಶೇಷಗಿರಿ ಅರಸನ ಕಿರೀಟದÀಪರಿಪರಿಯ ಸೊಬಗ ನಾ ಕಂಡು ಕೃತಾರ್ಥನಾದೆ ನಾ 1 ಮಠ್ಯತಾಳ ಇಂದಿನದಿನ ಸುದಿನ ಗೋವಿಂದನ ಕಂಡ ಕಾರಣಹಿಂದಿನ ಪಾಪವೃಂದವು ಬೆಂದುಹೋಯಿತು ಎನಗೆಮುಂದಿನ ಮುಕುತಿ ದೊರಕಿತುತಂದೆ ಹಯವದನನೊಲವಿಂದ 2 ತ್ರಿಪುಟತಾಳ ಪಾದ ಪದುಮದ ನೆನಹೊಂದಿದ್ದರೆ ಸಾಕು 3 ರೂಪಕತಾಳ ಗುರು ಭಕುತಿಯಿರಬೇಕು ಹಿರಿಯರ ಕರುಣವು ಬೇಕುಹರಿಕಥೆಗಳ ನಿತ್ಯದಲಿ ಕೇಳುತಿರಬೇಕುವಿರಕುತಿ ಬೇಕು ವಿಷ್ಣುವಿನಾರಾಧನೆ ಬೇಕುವರಮಂತ್ರ ಜಪಬೇಕು ತಪಬೇಕು ಪರಗತಿಗೆಪರಿಪರಿಯ ವ್ರತಬೇಕು ಸಿರಿಪತಿ ಹಯವದನನಪರಮಾನುಗ್ರಹ ಬೇಕು ವಿಷಯನಿಗ್ರಹಬೇಕು 4 ಝಂಪೆತಾಳ ಹರಿಸಗುಣ ಸಾಕಾರ ಸಕಲಸುರರೊಡೆಯ ನಿ-ರ್ಜರರೆಲ್ಲ ಹರಿಯ ಕಿಂಕರರೆಂದರಿಯಬೇಕುಮರಣಜನನ ದೋಷಗಳಿಗತಿ ದೂರತರನೆನಿಪಸ್ಮರಣೆ ಸಂತತಬೇಕು ದುರಾಚಾರ ಬಿಡಬೇಕುಸಿರಿ ಹಯವದನ ಶೇಷಗಿರಿ ಅರಸನಸ್ಮರಣೆಯಿದ್ದವನು ಸಂಸಾರ ಭಯವನುತ್ತರಿಸುವ 5 ಆದಿತಾಳ ಶ್ರೀನಾಥ ಪ್ರಭುವೆತ್ತ ಹೀನಯೋನಿಗಳೊಳುನಾನಾದುಃಖಗಳುಂಬ ಹೀನ ಮಾನವನೆತ್ತಭಾನುಮಂಡಲವೆತ್ತ ಶ್ವಾನನುಬ್ಬರವೆತ್ತಮಾನವ ಹರಿ ನಾನೆಂಬುದ ನೆನೆಯದಿರುದಾನವಕುಲವೈರಿ ಹಯವದನ ವೆಂಕಟಶ್ರೀನಿವಾಸನ ದಾಸರ ದಾಸನೆನಿಸಿಕೊ 6 ಏಕತಾಳ ಕೈವಲ್ಯವನೀವ ನಮ್ಮಶ್ರೀವಲ್ಲಭನ ಕೈಯಿಂದನೀವೆಲ್ಲ ಕ್ಷುದ್ರವ ಬೇಡಿಗಾವಿಲನ ಪೋಲದಿರಿಸಾವಿಲ್ಲದ ಮುಕುತಿಪಥವಬೇಡಿಕೊಳ್ಳಿರೊನೋವಿಲ್ಲದಂತೆ ಸುಖಿಸಬಲ್ಲಕೋವಿದರೆಲ್ಲರುಪೂವಿಲ್ಲನಯ್ಯ ವೆಂಕಟಪತಿ ಹ-ಯವದನನ್ನ ಪ-ದವಲ್ಲದನ್ಯತ್ರ ದಾವಲ್ಲಿ ಭಯ ತಪ್ಪದು 7 ಅಟ್ಟತಾಳ ಗಾತ್ರವ ಬಳಲಿಸಿ ಸ್ತೋತ್ರವ ಪಾಡುತ್ತಯಾತ್ರೆಯ ಮಾಡಿ ವೆಂಕಟೇಶನ ಮೂರ್ತಿಯನೇತ್ರದಿ ನೋಡಿ ತಮ್ಮಿಷ್ಟವ ಪಡೆವ ಸ-ದ್ಭಕ್ತರ ಕಂಡುನಿನ್ನ ಮನದ ಭ್ರಮೆಯ ಬಿಡುದೈತ್ಯ ಪೌಂಡ್ರಕಮತವ ನೆಚ್ಚಿ ಕೆಡಬೇಡಚಿತ್ರಚರಿತ್ರ ಹಯವದನನೊಲಿಸಿಕೊ 8 ದಿಲ್ಲಿಯರಾಯನ ಕಂಡು ಪುಲ್ಲಿಗೆಯ ಬೇಡುವರೆತಲ್ಲೆಯೂರಿ ತಪಸು ಇದ್ದಲ್ಲಿ ಸಾಧಿಸಿಕೊಳ್ಳಿರೊಕ್ಷುಲ್ಲಕರೆಂಜಲನುಂಡು ಬಾಳ್ವರ ನೋಡು ಲಕ್ಷುಮಿವಲ್ಲಭನಲ್ಲದೆ ಹೀನಫಲದಾಸೆ ಸಲ್ಲದಯ್ಯಚೆಲ್ವ ಹಯವದನ ತಿಮ್ಮನಲ್ಲದೆ ಕೈವಲ್ಯಕೆಹಲ್ಲು ಹಂಚಿಗೆ ಬಾಯಿತೆರೆದಂತೆ ಅಲ್ಲಲ್ಲಿಗೆ ಪೋಗದಿರಿ 9 ರೂಪಕತಾಳ ಹನುಮಂತನ ನೋಡು ತನುಮನಧನಂಗಳಶ್ರೀನರಸಿಂಹಗರ್ಪಿಸಿದಪ್ರಹ್ಲಾದನ ನೋಡುಅನುದಿನ ವನದಲ್ಲಿ ತಪವ ಮಾಡುವಮುನಿಜನರ ಕಂಡು ನಿನ್ನ ಮನದ ಭ್ರಮೆಯ ಬಿಡುಘನಮಹಿಮ ವೆಂಕಟಪತಿ ಹಯವದನನ ಭೃತ್ಯರ ಪರಿಚಾರಕರ ಭೃತ್ಯನೆನಿಸಿಕೊ 10 ಜತೆÀ ತಿರುಮಲೆರಾಯ ತ್ರಿವಿಕ್ರಮಮೂರುತಿಸಿರಿ ಹಯವದನನ [ಚರಣವೆ ಗತಿಯೆನ್ನು]
--------------
ವಾದಿರಾಜ
ಸೇರಿ ಬದುಕುವೆ ನಮ್ಮ ಸ್ವಾಮಿಯಂಘ್ರಿಯನುಭೂರಿ ದೋಷಗಳನ್ನು ಬಯಲ ಮಾಳ್ಪುದನು ಪನಿರ್ಗುಣದ ರೂಪವದು ನಿಲುಕದೆಂದಿಗೂ ಮನಕೆದುರ್ಗುಣದ ಪುಂಜಕ್ಕೆ ದೊರಕುವುದೆ ಹುಡುಕೆಅರ್ಗಳದ ವೃತ್ತಿಗಳಲಾಳಿ ಮುಳುಗಿರಲಿದಕೆಮುಗ್ಗಿ ಮೋಹಿಪ ನಾನು ಮಥಿಸಲಿನ್ನೇಕೆ 1ಸಗುಣಮೂರ್ತಿಯ ನೋಡೆ ಸ್ಥಿರದಿ ಬುದ್ಧಿಯು ನಿಲದುಅಗಣಿತದ ವಾಸನೆಯೊಳತಿಬದ್ಧವಡೆದುಬಿಗಿ ಭದ್ರವಾಗಿರಲು ಬಹು ಕರ್ಮವೆಳೆದೆಳೆದುಬಗೆಯದನು ನೆರೆ ನೋಡಿ ಬಿಟ್ಟದನು ಜರೆದು 2ಧ್ಯಾನಿಪರು ಧ್ಯಾನಿಸಲಿ ಧೈರ್ಯದಲಿ ಬ್ರಹ್ಮವನುಜ್ಞಾನಿಗಳು ತಿಳಿಯಲಾ ಗೂಢ ತತ್ವವನುಮಾನರಹಿತರು ಹರಿಗೆ ಮಾಡಲಾ ಕರ್ಮವನುನಾನೊಂದನೊಡಬಡೆನು ನೋಡಿ ಕಠಿಣವನು 3ವೇದಶಾಸ್ತ್ರಗಳೋದಿ ವಾದಿಸಲಿ ವಾದಿಗಳುಸಾಧಿಸಲಿ ಸ್ವರ್ಗವನು ಸಕಲ ಶ್ರೌತಿಗಳುಬೋಧಿಸಲಿ ಪರರಿಂಗೆ ಬಹುತತ್ವಭೇದಿಗಳುಮಾಧವನಿಗೆರಗುವದೆ ಮತವೆನಗೆ ಕೇಳು 4ಪಾದಪದ್ಮವನಂಬಿ ಪಡೆದರಮಿತರು ಗತಿಯ ಓದಿದವರೈದಿದರು ವಾಸನೆಯ ಬಗೆಯಕಾದು ರಕ್ಷಿಪುದಂಘ್ರಿ ಕೊಡುವುದಮಿತದ ಸಿರಿಯವಾದಿಸದೆ ನಂಬಿದೆನು ವಿಧಿಜನಕನಡಿಯ 5ಇದು ತಾನೆ ಲೋಕಗಳನೆಲ್ಲವಾಳುವ ದೊರೆಯುಇದು ತಾನೆ ಯೋಗಿಗಳಿಗಿದಿರಾದ ಬಗೆಯುಇದು ವಿಷಯದೊಳಗಿರುವರೆಬ್ಬಿಸುತ್ತಿಹ ಸುಧೆಯುಇದನೆ ನಾನಂಬಿದೆನು ಯಾಕೆ ಕರೆಕರೆಯು 6ತರುಬಿ ನಿಂದಿದೆ ಲೋಕ ತತ್ಪಾದಪದ್ಮವನುಹೊರೆಯುತಿಹುದಾ ಜನವ ಹೊಣೆಯಾಗಿ ತಾನು ತಿರುಪತೀಶ್ವರ ನನಗೆ ತೋರ್ದನೀ ಮತಿಯನ್ನುವರದೇಶ ನನಗೊಲಿದವೊಡೆಯ ವೆಂಕಟನು 7ಓಂ ತೀರ್ಥಪಾದಾಯ ನಮಃ
--------------
ತಿಮ್ಮಪ್ಪದಾಸರು
ಸೋಜಿಗದಲಿ ಜೀವಿಸುವರು ಸುಜನರು ಪ ಈ ಜಗದಲಿ ದುಷ್ಟ ಗೋಜಿಗೆ ಸಿಲುಕದೆ ಅ.ಪ ಪರರ ವಿಭವಗಳಿಗೆ ಕರಗಲರಿಯರಿವರು ಕೊರೆಯುವ ಬಡತನಕುರಿಯಲರಿಯರು ಹರಿ ಕರುಣದಿ ತಮಗೆ ಸಿರಿಯು ಬಂದೊದಗಲು ಪರಿಪರಿ ವಿಧದಲಿ ಮೆರೆಯದೆ ದೈನ್ಯದಿ 1 ಕೆಡುಕುತನಗಳನು ಅರಿಯರು ಈ ಜನ ಬಡವರ ಸೌಖ್ಯಕೆ ದುಡಿವರು ಮುದದಲಿ ಕಡುದುರುಳರು ನಿಂದೆ ನುಡಿಗಳಾಡುವರೆಂದು ದುಡುಕದೆ ಅವರಲಿ ಕ್ಷಮೆಯ ತೋರುತ ಸದಾ 2 ಪರರಿಗುಪಕೃತಿಯಲರಿಯರು ಮಿತಿಯನು ಪರರಿಗುಪಕೃತಿಗೆ ಜರಿಯರು ಮತಿಯನು ಶರಣ ಪ್ರಸನ್ನನ ಕರುಣವ ಪೊಂದಲು ವರನೀತಿಗಳಲಿ ನಿರತರಾಗುತ ಸದಾ 3
--------------
ವಿದ್ಯಾಪ್ರಸನ್ನತೀರ್ಥರು
ಸ್ಮರಿಸಿ ಸುಖಿಸೆಲೋ ಮಾನವಾ ಪ ಸರಸಿಜಾಸನ ಸತತ ನೆನೆವ ಹರಿನಾಮವನು ಅ.ಪ ಜವರಾಯ ಕಿಂಕರರ ಹಿಮ್ಮೆಟ್ಟಸಿದ ನಾಮ ಧ್ರುವರಾಯಗೊಲಿದ ಘನವು ಈ ನಾಮ ನವನೀತರೂಪದಿಂದ ಘನವ ತಾಳ್ದಿಹ ನಾಮ ಸುವಿಲಾಸದಿಂ ಪಾರ್ಥಗೊಲಿದಿರ್ಪನಾಮವನು 1 ಸನಕಾದಿ ಮುನಿಗಳು ಸತತ ಭಜಿಸುವ ನಾಮ ಅನಿಲಜಾತನಿಗೊಲಿದ ಪರಮನಾಮ ವನಚಾರಿಯಾಗಿದ್ದ ಶಬರಿಗೊಲಿದ ನಾಮ ವನಚರರ ಗರುವವನು ಮುರಿಯುವ ನಾಮ 2 ಪಾಂಚಾಲಿಗಕ್ಷಯದ ವರವನಿತ್ತಾ ನಾಮ ಪಾಂಚಜನ್ಯವ ಸಿರಿಯೊಳೆಸೆಯುತಿಹ ನಾಮ ವಂಚಕರ ಹೃದಯಗಳ ಭೇದಿಸುತ್ತಿಹನಾಮ ಚಂಚಲೆಯರುತ್ಸಾಹದಿಂ ಭಜಿಪ ನಾಮವನು 3 ದುರುಳದೈತ್ಯರ ಮನವ ಕದಡಿ ಕಲಕುವ ನಾಮ ಶರಣಾಗತಾವಳಿಯ ಪೊರೆಯುತಿಹನಾಮ ತರಳಪ್ರಹ್ಲಾದ ತಾ ಪಿತಗೊರೆವ ನಾಮವನು 4 ಮಾಂಗಿರೀ ವರಾಗ್ರದೊಳು ಮರೆಯುತಿಹ ಸಿರಿನಾಮ ಶೃಂಗಾರ ಶ್ರೀ ಪಾಂಡುರಂಗ ನಾಮ ಗಂಗಾಧರಾನುತ ಸುಖದಾತ ಶ್ರೀನಾಮ ಮಂಗಳಕರ ರಾಮದಾಸನುತ ನಾಮವನು 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಸ್ಮರಿಸುಮನವೆ ನೀ ದೇವಕಿ ಕಂದನ ಧ್ರುವ ಪಾಲನ ಕುರುಳರ ನಾಶನ 1 ಉರಗಶಯನನ ಗರುಡವಾಹನನ 2 ಸಿರಿಯ ಲೋಲನ ಪರಮ ಪಾವನನ 3 ಸುರರಾಜವಂದ್ಯನ ಕರಿರಾಜಪ್ರಿಯನ 4 ಗಿರಿಯನೆತ್ತಿದನ ತುರುಗಳಗಾಯದ್ದವನ 5 ಸಾರ ಸಂಜೀವನ 6 ಭಂಜನ ದುರಿತ ನಿವಾರಣ 7 ಸರ್ವಾರ್ಥಕಾರಣ ಹರುಷದ ಜೀವನ 8 ಪರಿಪೂರ್ಣವಿಹನ ಪೂರಿತ ಕಾಮನ 9 ಗುರುಶಿರೋರತ್ನನ ಕರುಣಲೋಚನ 10 ಸ್ಮರಿಸು ಮನವೆ ನೀ ಮಹಿಪತಿ ಈಶನ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸೊ ಮನವೇ ಹರಿಯ ನರಹರಿಯ ಅರಸಾಗ್ಯಾಳುವ ಸಿರಿಯ ಧ್ರುವ ಕರಿಯ ಕೇಳಿದ ಮೊರಿಯ ನೀನರಿಯ ಸುರರ ಬಿಡಿಸಿದ ಸರಿಯ ಧರೆಯೊಳಗಿದು ಖರಿಯ ಯುಗಮೊರಿಯ ಹೊರೆವನು ತಾ ಪರೋಪರಿಯ 1 ಸರ್ವದೈವಕೆ ಹಿರಿಯ ಮುರ ಅರಿಯ ಹರ ಹೃದಯದಲಿ ಪರಿಯ ಸ್ಮರಿಸುವದೀ ಪರಿಯ ದುರಿತ ಕರುಣಕಿಲ್ಲೀತನ ಸರಿಯ 2 ಸೆರಗವಿಡಿದು ಹರಿಯ ಪರಿಪರಿಯ ಅರಿಯೋ ನವವಿಧ ಪರಿಯ ಶರಣಾಗತರ ಸಿರಿಯ ಸುರವರ್ಯಾ ತರಳಮಹಿಪತಿ ದೊರೆಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ಮರಿಸೊ ಮಾನವನೆ ಗುರುಚರಣ ಅಂತ: ಕರಣ ಶುದ್ಧಿಯಲಿ ಮರೆಯದೆ ಪ್ರತಿದಿನ ಪ ದುರಿತ ಘನತತಿ ಮರುತ ಶ್ರೀ ರಘುದಾಂತ ತೀರ್ಥರ ಕರಜ ಶ್ರೀ ರಘುವೀರ ತೀರ್ಥರ ಚರಣಯುಗಲವ ಹರುಷದಿಂದಲಿ ಅ.ಪ ಧರೆಯೋಳ್ ಸುಂದರ ಸುರಪುರದಿ ಜನಿಸಿ ಗುರು ವಿಠ್ಠಲಾರ್ಯರ ಚರಣಾನುಗ್ರಹದಿ ವರ ಶಬ್ದ ಶಾಸ್ತ್ರವ ತ್ವರದಿ ಕಲಿತು ತುರಿಯಾ ಶ್ರಮವನೆ ಸ್ವೀಕರಿಸಿ ಗುರುಮುಖದಿ ಮರುತ ಶಾಸ್ತ್ರವನರಿತು ಧರ್ಮದೊಳಿರುತ ವಿಷಯದಿ ವಿರತಿಯಲಿ ಅನವರತ ಪ್ರವಚನ ನಿರತ ಸದ್ಗುಣ ಭರಿತ ಪಾವನ ಚರಿತರಂಘ್ರಿಯ 1 ಹೇಮಾಲಂಕೃತ ರತ್ನನಿಚಯಯುಕ್ತ ಹೇಮ ಮಂಟಪದಿ ಸುಂದರ ಶುಭಕಾಯಾ ಶ್ರೀ ಮನೋಹರ ಕವಿಗೇಯಾ ಬ್ರಹ್ಮ ವ್ಯೋಮ ಕೇಶಾದಿ ನಿರ್ಜರಗÀಣಶೇವ್ಯಾ ಭೂಮಿ ಸುರಜನ ಸ್ತೋಮಕನುದಿನ ಕಾಮಿತಾರ್ಥವ ಗರಿವ ಸೀತಾರಾಮರಂಘ್ರಿಯ ತಾಮರಸವನು ನೇಮದಿಂದರ್ಚಿಪರ ಶುಭಪದ2 ಪರಿಶೋಭಿಸುವ ಕಾಷಾಯ ವಸ್ತ್ರ ವರನಾಮ ಮುದ್ರಾಲಂಕೃತ ತನುಸಿರಿಯ ಗುರು ಅಕ್ಷೋಭ್ಯರ ಶುಭಚರಿಯ ಗ್ರಂಥ ವಿರಚಿಸಿದರು ನವರತುನ ಮಾಲಿಕೆಯ ಧರಣಿಯೊಳು ಸಂಚರಿಸುತಲಿ ಬಲು ಕರುಣದಿಂದಲಿ ಶರಣು ಜನರಘ ಭವ ಭಯಹರಣ ಗುರುವರ ಚರಣಯುಗಲವ3 ವಿನುತ ಸಮೀರ ಕೃತ ಸಾರಶಾಸ್ತ್ರವನೆ ಬೋಧಿಸುತ ಸಜ್ಜನರ ಘೋರ ಸಂಸೃತಿ ಭಯದೂರ ಮಾಡಿ ತೋರಿ ಸನ್ಮಾರ್ಗ ದೀಪಿಕೆಯ ಸುಸಾರ ಸೇರಿದವರಘ ದೂರ ಪರಮೋದಾರ ಗುಣ ಗಂ- ಸೂರಿಜನ ಪರಿವಾರನುತ ಜಿತ- ಮಾರ ಶ್ರೀ ರಘುವೀರ ತೀರ್ಥರ 4 ಶೇಷಾಚಲದಿ ಶಿಷ್ಯಗಣದಿ ಬಂದ ಶ್ರೀ ಸತ್ಯ ಪ್ರಮೋದ ತೀರ್ಥರ ಸ್ವರ್ಣೋತ್ಸವದಿ ತೋಷಬಡಿಸುತ ನಿರ್ಭಯದಿ ಉಪನ್ಯಾಸ ಮಾಡಿದರು ವೀಶಗಮನ ಸುರೇಶ ಭಕುತರ ಸಿರಿ ನರಕೇಸರಿಗೆ ಪ್ರಿಯದಾಸ ಕೊಡಲಿವಾಸ ಕರ್ಮಂದೀಶರಂಘ್ರಿಯ 5
--------------
ಕಾರ್ಪರ ನರಹರಿದಾಸರು