ಒಟ್ಟು 19041 ಕಡೆಗಳಲ್ಲಿ , 136 ದಾಸರು , 7982 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಾಕು ಮಹಾಸ್ವಾಮಿ ಸಜ್ಜನಪ್ರೇಮಿಪ. ಕ್ಷೀರಸಾಗರಶಯನ ನಿವಾಸಾಪಾರಗುಣಗಣಾಶ್ರಯ ಚಾರು ಪದಾಬ್ಜದ್ವಯ ದನು- ಜಾರಿ ಧನಂಜಯಪ್ರಿಯ ಮದವಾರಣಕೃತನಿರ್ಭಯ ನಮ್ಮ ದೂರನು ಲಾಲಿಸು ಚಿನ್ಮಯ ಜಯ1 ದುಷ್ಟ ನಿಶಾಚರರಟ್ಟುಳಿ ಘನ ಕಂಗೆಟ್ಟುದು ಸುರಮುನಿಗಣ ಆ ಭ್ರಷ್ಟರು ಮಾಡುವ ನಿಷ್ಠುರಕೆ ಮೈಗೊಟ್ಟೆವು ಸಂಕರ್ಷಣ ನಾವಿ- ನ್ನೆಷ್ಟೆಂಬುದು ದುರ್ಗುಣವಶ ಬಿಟ್ಟೆವು ಸುರಪಟ್ಟಣ ನಮ್ಮ ಕಷ್ಟವು ಪದಕರ್ಪಣ ಪರಾಯಣ 2 ಅಂತರಂಗ ಬಹಿರಂಗ ಭ್ರಷ್ಟದನುಸಂತತಿ ಸಂತತಿ ಭಾರಿ ಬಲು ಧುರೀಣರ್ಸಂತಾಪಿಪರು ಮುರಾರಿ ನಮ್ಮ ಶೌರಿ ಜಗ- ದಂತ ವಿಹಾರಿ ನಿರಂತ ಪರಂತಪ3 ಚೆನ್ನಕೇಶವ ಚರಾಚರಾತ್ಮ ಚೈತನ್ಯರೂಪ ಶ್ರೀರಂಗ ನಮ್ಮ ಸನ್ನುತ ಶುಭಾಂಗ ಸ- ತಿಮಿರ ಪತಂಗ ಸುಪ್ರ ವಿಹಂಗ ತುರಂಗ4 ಕಾಲನಿಯಾಮಕ ಪ್ರಾಣ ನಿ ನ್ನೋಲಗ ಸೇವಕರಾಳಿಯೂಳಿಗವ ಕೇಳು ತ್ರಿಲೋಕತ್ರಾಣ ನತ ಪಾಲ ಪರೇಶ ಪುರಾಣ ಶ್ರೀಲೋಲ ವಿಗತ ಪರಿಮಾಣ ಹೃದ- ಯಾಲಯಮಣಿ ಲಕ್ಷ್ಮೀನಾರಾಯಣ 5
--------------
ತುಪಾಕಿ ವೆಂಕಟರಮಣಾಚಾರ್ಯ
ಪರಾಕು ಸಜ್ಜನಪ್ರೇಮಿ ಪ. ಕರುಣಾಕರ ಕೋಟಿದಿವಾಕರ ಪೂರ್ಣ ಸುಧಾ- ಕರ ಮಕುಟಲಲಾಮ ಅ.ಪ. ಭೋಗೀಂದ್ರ ಫಣಾಮಣಿಮಂಡನ ಸ- ದ್ಯೋಗೀಂದ್ರ ಮನೋವಿಶ್ರಾಮಿ ಭಾಗೀರಥಿ ಸುತರಂಗೊತ್ತುಂಗ ಮಹಾ ಸಾಗರ ತೇ ನೌಮಿ 1 ಕೇವಲ ಪಾಪಿ ಸದಾವ್ರತಹೀನನ ಕಾವುದು ಗೋಪತಿಗಾಮಿ ನೀನೊಲಿದರೆ ಮತ್ತಾವುದು ಭಯ ಮಹಾ- ದೇವ ವಶೀಕೃತಕಾಮಿ 2 ಲಕ್ಷ್ಮೀನಾರಾಯಣದಾಸಾರ್ಯ ಮ- ಹೋಕ್ಷಧ್ವಜ ಸುರಸುಕ್ಷೇಮಿ ದಕ್ಷಾಧ್ವರಹರ ವರಪರಮೇಶ ಮು- ಮುಕ್ಷುಜನಾಂತರ್ಯಾಮಿ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಪರಾಕು ಹೇಳುವನ ನಿರಾಕರಿಸುವದು ಹೊಕ್ಕ ನಿನ್ನ ಸೇವೆಯೊಳಗೆ ಬಹು 1 ಮಲಾದು(?0 ಇರುವಂ-------ಳಗೆ ಇರುವ ಅಲಾದಿ ಅಂಗಗಳು ಅವತರಿಸಿದ ದೇವಾ 2 ನೆಲಾನ ಘೂರಿಸಿದ ಭಲಾಶೆ ಮಾಡಿ ದುರುಳಾದ ಕರುಳ ತೆಗೆದು ಕೊರಾಳಲ್ಲಿಟ್ಟ ಸ್ವಾಮಿ 3 ಧರಾನÉ ದಾನ ಬೇಡಿ ಸರಾನ ಕೋಪದಿಂದ ಶರ---------ಸಿದ ಶ್ರೀಹರಿ ಎಂದು ಬಹು 4 ಬಲಾನೆ ಕುಟ್ಟಿ ಖಳನ ಬಲಾನೆಲ್ಲವ ಮುರಿದು ಲಲಾನೆಯನು ತಂದು ರಘುರಾಮನೆಂದು ಬಹು 5 ದುಷ್ಟ ಕಂಸಾನ ಕೊಂದಾ ಸೃಷ್ಟಿಕರ್ತಾನು ನೀನು ಕೃಷ್ಣಾ ಕರುಣಿಸೂ ಎಂದು ಪ್ರಾಯದಲಿ ಮೊರೆಯಿಟ್ಟು 6 ಅಂಬಾರವನು ಬಿಟ್ಟು ಸಂಚಾರದಲಿ ನೀ---- ---ಂ ಬೇರಿದಂಥ ಶ್ರೀ ಮಹಾನುಭಾವನೆನುತಾ 7 ಶರಾಣು ಎಂದು ಬಂದವರಾನ ಪೊರೆದ ಶ್ರೀಧರಾನೆ ರಕ್ಷಿಸೆಂದು ಕರಾವು ಮುಗಿದಿಂದೂ8 ನಿರಾಮಯಾನಾದ ಶ್ರೀ ರಾಮದೇವರೆನ್ನ ಪತಿ `ಹೊನ್ನ ವಿಠ್ಠಲಾ’ 9
--------------
ಹೆನ್ನೆರಂಗದಾಸರು
ಪರಾತ್ಮಾ ಶ್ರೀಶಿವಾನಂದಾ ಪ ನಮಿಸುವೇ ಪುಣ್ಯ ವಿಚಿತಾತ್ಮಾ ಮಹಾತ್ಮಾ ಸತ್ಯ ಸರ್ವಾತ್ಮಾ ಸ್ವರೂಪಾನಂದವಾ ಪಡೆವಾ ಸನ್ಮತಿಯಾ ನೀಡು ಗುರುದೇವಾ ಚರಣಕೆ ಎರಗುವೆನು ದೇವಾ 1 ಸದಾನಂದಾ ಮನೋಹರಾ ಹೃದಯದಾವಾಸ ನಿಜಸಾರಾ ಗುರುವರಾ ಶಂಕರಸ್ವರೂಪಾ ಕರುಣಿಸೈ ಬೋಧದಾನಂದಾ ಪರಾತ್ಮಾ ಶ್ರೀಶಿವಾನಂದಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ಪರಿ ನೆಲಸಿದೀ ಏ ಸ್ವಾಮಿ ಪರಿ ನೆಲಸೀದಿ ಏಸುಪರಿ ನೆಲಸೀದಿ ದಾಸಜನ ಹೃದಯದಿ ಭೂಸ್ವರ್ಗ ಪಾತಾಳ ಬ್ಯಾಸರ ಮಾಡಿದಿ ಪ ಎಸೆವ ಚಂಚಲ ಶಿರಿಯು ತವರ್ಕಣ್ ಮಸಕು ಮಾಡಿದಳೇನೋ ಬಿಸಜಸಂಭವ ವೇದಪಠಣದಿ ಕುಶಲ ನುಡಿಯನೇನೋ ಅಸ್ವಧಿಪ ಪ್ರಾಣ ಸೊಸಿಯ ವಾಣಿಯು ಸ್ವಸುತೆ ಭಾರತೀ ಉಸುರಿಬಿಟ್ಟಳೇನೋ 1 ಮುಪ್ಪೊಳಲುರಿಗಾನು ಪೌತ್ರನು ವೊಪ್ಪುವ ಮೈಗಣ್ಣಾ ತಪ್ಪದೆ ಸೇವಿಸುವ ಸುಮನಸರಪ್ಪಣಿತ್ತರೇನೋ ತಪ್ಪದಾಸರನ ಮುಗಿಪ್ಪ ಗರುಡ ಶೇಷ- ರೊಪ್ಪಿಗಿಯಿಲ್ಲದೆ ತಪ್ಪಿಸ್ಯೋಡಿ ಬಂದ್ಯಾ 2 ಸುರಲೋಕವಾಸಾವು ಶ್ರೀಹರೆ ಪರಮಸೌಖ್ಯವಲ್ಲೆ ಸುರತರುಧೇನುಗಳು ನಿನಗೆ ತಾವ್ ಕೊರತೆ ಮಾಡಿದವೇನೋ ಸುರಮುನಿಗಂಧರ್ವರ ಗಾಯನ ಬಿಟ್ಟು ಸರಸವೇನು ಕಂಡಿ ನರಸಿಂಹವಿಠಲ3
--------------
ನರಸಿಂಹವಿಠಲರು
ಪರಿ ಪಾಲಿಸಿವಳಾ ಪ ಬುದ್ಧಿಯಲಿ ನೆಲಸಿದ್ದು | ವಿದ್ಯೆ ಪಾಲಿಸುತಾ ಅ.ಪ. ಏಸೊ ಜನ್ಮದ ಪುಣ್ಯಾ | ರಾಶಿವದಗಿತೊ ಕಾಣೆಆಶಿಸುತ್ತಿಹಳಿವಳು | ದಾಸದೀಕ್ಷೆಯನುಆಸು ಸ್ವಪ್ನದಲಿ ಕೈ | ಲಾಸ ವಾಸನಿಂದಲಿಲೇಸು ವರ ಪಡೆದಿಹಳು | ಮೇಶ ಮಧ್ವೇಶಾ 1 ಮಧ್ವ ರಮಣನೆ ಕೇಳೊ | ಮಧ್ವಮತ ಪದ್ಧತಿಯುಬುದ್ಧಿಯಲಿ ನಿಲ್ವಪರಿ | ತಿದ್ದಿ ಹೇಳುವುದೋ |ಶ್ರದ್ಧೆಯಲಿ ಹರಿ ಗುರೂ | ಶುದ್ಧ ಸೇವೆಲಿ ಭವದಅಬ್ಧಿಯನೆ ದಾಟಿಸೋ | ಸಿದ್ಧ ಮುನಿವಂದ್ಯಾ 2 ನಿತ್ಯ ಮಂಗಳನೇ 3 ಮಾವಿನೋದಿಯೆ ಹರಿಯೆ | ಕಾವ ಕರುಣೀ ಎಂದುಓದಿ ನಿನ್ನಡಿಗಳಿಗೆ | ಧಾವಿಸುತ್ತಿಹೆನೋ |ನೀವೊಲಿದು ಕನ್ಯೆಯನು | ಕೈ ಪಿಡಿದು ಪಾಲಿಪುದುದೇವ ದೇವೋತ್ತಮನೆ | ಲಕ್ಷ್ಮಿ ನರಹರಿಯೆ 4 ಕಾಕು ಜನಗಳ ಸಂಗನೀ ಕೊಡದೆ ಕಾಯೊ ಹರಿ | ಲೋಕೇಶ ವಂದ್ಯಾ |ಲೋಕ ಗುರು ಗೋವಿಂದ | ವಿಠಲ ಮದ್ಭಿನ್ನಪವನೀ ಕೊಟ್ಟು ಕನ್ಯೆಯನು | ಉದ್ಧರಿಸೊ ಹರಿಯೇ 5
--------------
ಗುರುಗೋವಿಂದವಿಠಲರು
ಪರಿ ಪಾಹಿ ಶಿವ ಪ ಭವ ಶರಣಾಗತ ಪರಿಪಾಲ ಶಿವ ಗಿರಿಜಾ ಹೃದಯವಿಲೋಲ ಶಿವ 1 ಖಂಡಚಂದ್ರಧರ ಪಾಹಿ ಶಿವ ಕುಂಡಲೀಂದ್ರಧರ ಪಾಹಿ ಶಿವ ಚಂಡದನುಜ ಸಂಹಾರ ಶಿವ ತಾಂಡವೇಶ ಜಿತಮಾರ ಶಿವ 2 ಭಾನು ಸೋಮ ಶಿಖಿ ನೇತ್ರ ಶೀವ ಧೇನುನಾಥ ವರವಾಹ ಶಿವ ಸ್ವಾನುಭೂತಿ ಪರಿಪೂರ್ಣ ಶಿವ ಧೇನುನಗರ ಸುವಿಲಾಸ ಶಿವ 3
--------------
ಬೇಟೆರಾಯ ದೀಕ್ಷಿತರು
ಪರಿ ಪೋಷಿಸುತ ಎನ್ನ ಪ ಸತಿ | ಅಕ್ಷರಳೆ ಕೃಪೆ ಈಕ್ಷಣೇಯಲೆತ್ರ್ಯಕ್ಷ ಸುರಮುಖ | ರಕ್ಷೆ ಭಕುತಿಯ | ಬಿಕ್ಷೆ ಪಾಲಿಸಿ | ರಕ್ಷಿಸೆನ್ನನು 1 ಸ್ತವ್ಯನನ ಶ್ರೋ | ತವ್ಯನನ ಧ್ಯಾ | ತವ್ಯನನ ಮಂ | ತವ್ಯ ಭವ್ಯನನ |ಅವ್ಯಯನ ಅನ | ವದ್ಯ ರೂಪನ | ಸುವ್ಯಕ್ತಿಗೈ | ಅವ್ಯಕ್ತಮಾನಿಯೆ 2 ಭಾವ ಜಾರಿಯ | ಭಾವ ಕೊಲಿದು ವಿ | ಭಾವ ಸುಪ್ರಭೆ | ಭಾವ ತೋರಿದೆಗೋವಳನು ಗುರು | ಗೋವಿಂದ ವಿಠಲನ | ತಾವಕಗೆ ತೋರೂವುದೆಲೆ ತಾಯೆ 3
--------------
ಗುರುಗೋವಿಂದವಿಠಲರು
ಪರಿ ಸಾಧನವರ್ಗವಾ ಅರಿಷಡ್ವರ್ಗವೆಂಬ ದುರ್ಗವಾ ತನ್ನಯ ದಿವ್ಯಕರುಣಾರಸವೆಂಬ ಸ್ವರ್ಗವಾ ಕರೆದಿತ್ತಾ ಪರಿವುತ್ತಾ ಪರವುತ್ತಾ ಅರಿಸುತ್ತಾ 1ಕಾಳಗತ್ತಲೆಯ ಯೂಥವಾ ಮನದೊಳಿದ್ದಕೀಳು ಬುದ್ಧಿಯಪರಾಧವಾಮೂಳ ವಾಸನೆಯ ಮುಖವಾ ವೇದಾಂತ ಸಂಮೇಳದಿಂದ ಬಹ ಸುಖವಾಪೇಳುತ್ತಾ ಸೀಳುತ್ತಾ ತಾಳುತ್ತಾ ಕೀಳುತ್ತಾ 2ಸಾರ ಸತ್ಸಂಗದ ದಾರಿಯಾ ಮುಂದುಗಾಣಿಸದಕ್ರೂರ ಕರ್ಮಂಗಳ ಪರಿಯಾ ಘೋರ ಮಾಯೆಯೆಂಬ ತೊರೆಯಾ ಗೋಪಾಲಾರ್ಯಸಾರಾನಂದವೆಂಬ ಪುರಿಯಾತೋರಿಸುತಾ ಹೀರಿಸುತಾ ಹಾರಿಸುತಾ ಸೇರಿಸುತಾ 3
--------------
ಗೋಪಾಲಾರ್ಯರು
ಪರಿ ನಡಿಯುತ ಪುಣ್ಯವಂತರಾದ ಪ ಹರುಷಾದಿ ಆಚರಿಸುತಾ ಪಾದ ಬಿಡದೆ ನಿಜಭಕ್ತಿಯಲಿರುವಂಥ 1 ಪರಿಪರಿ ಶೋಧಿಸಿ ಮಹಿಮೆ ಸ್ಥಿರವಾಗಿ ಮನದಲ್ಲಿ ತಿಳಿದು ಸಿದ್ಧಿಸಿದಂಥಾ 2 ಇಷ್ಟದಿಂದ ಅತಿಯೋಗ್ಯರ ಕೂಡಿ ಶ್ರೇಷ್ಠ ಜ್ಞಾನಾಧಿಕ ನಿಷ್ಠಾರು ಎನಿಸಿದ ಶಿಷ್ಟ ಮಾನವ ಸಾಧು ಸಜ್ಜನರಾದಂಥ 3 ಮಾನವನಾಗುವದೇ ಘನಸಾರವನೆ ಗ್ರಹಿಸಿ ಮಾನಿತರೆನಿಸೀದ ಮಹಿಮರಾದಂಥಾ 4 ಭೂಮಿಪಾಲಕನಾದ `ಹೆನ್ನೆವಿಠ್ಠಲನ’ ಪ್ರೇಮದಿ ಹೇದಯಾದಿ ಪ್ರಣಿತಾರ್ಥವು ಹಿಡದು ಸ್ವಾಮಿ ನೀನೇಗತಿ ಸಕಲಾವು ನೀನೆಯೆಂಬೊ5
--------------
ಹೆನ್ನೆರಂಗದಾಸರು
ಪರಿಣಯ ಮಹೋತ್ಸವವು ಪ ಮಂಗಳ ಮಂಟಪವು ಚಪ್ಪರದಲ್ಲಿ .ಶೃಂಗಾರ ವರ ಪೀಠವು ಕಂಗೊಳಿಪ ರುಚಿರಾಂಬರಾಳಿಯು ಮಂಗಳ ಸುವಾದ್ಯಂಗಳಿಂದಲಿ 1 ಸುತ್ತ ದೀಪಾವಳಿಯು ಸುವರ್ಣದ ಮುತ್ತಿನ ತೋರಣವು ವಜ್ರ ಪದ್ಮವು ಸುತ್ತು ವೀಳೆಯ ಪುಷ್ಪ ನಿಚಯವು ಸುತ್ತೆ ಜವ್ವಾಜಿಗಳ ಪರಿಮಳ ಸುತ್ತಿ ಸುಳಿವ ಸುಗಂಧ ಲಹರಿಯು 2 ಬೀಗರು ಹಸೆಯೊಳಿರೆ ಆ ಮಧ್ಯದಿ ಬೀಗಿತ್ತಿಯರು ಕುಳ್ಳಿರೆ ಆಗ ನಿಶ್ಚಿತ ಲಗ್ನದಲ್ಲಿ ವಧೂವರರ ಪೂಜಿಯನು ಗೈಯಲು ತುಂಬಿರಲು ಸಭೆಯೊಳು 3 ದಾರಾ ಮಹೊತ್ಸವವು ಅಕ್ಷತೆಗಳ ಸೇರೆಯೊಳೆರೆಯುವುದು ನಾರಿಯರ ವರದೇವತಾಸ್ತುತಿ ಸಾರೆ ಭೂಸುರರಾಶಿಷಂಗಳು ಸೇರೆ ಸಂಗೀತಗಳ ವೈಖರಿ ಸಾರಿ ಸುರಗಣ ಜಯಜಯನ್ನಲು 4 ಮಾಡೆ ದಾನದಕ್ಷಿಣೆಯಾಗಲು ಬಾನುರಾಗದೆ ಸರ್ವರನ್ನು ವಿನೋದದಿಂದುಪಚರಿಸುತಿರಲು ಹರಸೆ ಸಂತೋಷದಿ 5
--------------
ಬೇಟೆರಾಯ ದೀಕ್ಷಿತರು
ಪರಿಪಾಲಿಸು ದಯದಿ ನಿರುತ ದಾಸಪುರಂದರ ಗುರುವೆ ಧರ್ಮಪಥವನು ತೋರಿ ಉದಾರಿ ಪ ಸುರಮೌನಿಯೆ ಮುದದಿ ಹರಿನಾಮವಾ ಘನ ಬೀರುತಾ ನಿರಯಾ ಪಾತ್ರರ ಸಲಹಿದಿನೀ 1 ಬಾಣಾಲಕ್ಷಕೆ ಪಾದನ್ಯೂನ ಕವನ ನೀ ವಿರಚಿಸುತಾ ವನಜನಾಭನ ಸ್ತಪಿಸಿದ ನೀ 2 ಶಿರಿಶಾಮಸುಂದರನಾ ಚರಣಾಬ್ಜಕಾರಡಿಯಂದದಿ ಚರಿಪ ಜ್ಞಾನಿಯೆ ನಮಿಸುವೆನು 3
--------------
ಶಾಮಸುಂದರ ವಿಠಲ
ಪರಿಪಾಲಿಸೈ ವರ ವೆಂಕಟೇಶ ಚರಣಾಬ್ಜಯುಗ ಸ್ಮರಣೆಯನಿತ್ತು ಪ ದುರಿತಾಧಿದೂರ ಪರತತ್ವಸಾರ ಪರಮಾತ್ಮನೆ ಪೊರೆ ಎನ್ನುತ ಕರಿರಾಜ ಮೊರೆಯಿಡುತಿರಲು ನೀ ಗರುಡನ ಏರಿ ತ್ವರೆಯಿಂದ ಬಂದೆ ಪರಮ ದಯಾಕರ ಶ್ರೀನಿವಾಸ 1 ಪಾಪಿಷ್ಠನು ಅಜಾಮಿಳನೆಂದು ಕೋಪದಿ ಯಮ ಭಟರೆಳೆಯುತಿರೆ ತಾಪಕೆ ತನ್ನ ಪುತ್ರನ ಕೂಗುತಲಿರೆ ಕೃಪೆಯಿಂದ ನಿಜಪುರಕೆ ಒಯ್ದೆ 2 ಕನಕಾಚಲನಿಧಿ ಲಕ್ಷ್ಮೀಕಾಂತ ಪ್ರಣತಾರ್ಥಿಹರ ಆನಂದಕರ ವನಜಾಸನಾದಿ ಅಮಿಷಪಾಲ ಯೋಗಿ ಮನ ಕುಮುದಲೋಲ 3
--------------
ಲಕ್ಷ್ಮೀನಾರಯಣರಾಯರು
ಪರಿಪೂರ್ಣಕಾಮೆ ಶ್ರೀ ರಮೆ ಪ ಕಮಲದಳ ಸಮ ವಿಮಲ ಚರಣಯುಗೆ ಅಮಲ ಜಂಘಾನ್ವಿತೆ ಶುಭಗೆ 1 ಕರ ಸದ್ಯೋರು ಇಭರಿಪು ಸಮಕಟೆ ಶುಭತಮ ಶುಭತಮ ನಾಭಿ ಸುತ್ರಿವಳೆ2 ಗುರು ವಾಸುದೇವವಿಠಲ ಪರಮಪ್ರಿಯೆ ಭವ- ಶರಧಿ ತಾರಕೆ ಚಂದ್ರಫಲಕೆ3
--------------
ವ್ಯಾಸತತ್ವಜ್ಞದಾಸರು
ಪರಿಭವ ತಾಪಹರಣ ಪ ದಯದಿ ಯುವತಿಯಕುಲ ಉದ್ಧಾರಣ ಜವದಿ ಕರಿಧ್ರುವಬಂಧಮೋಚನ ಯುವತಿಗಕ್ಷಯವಿತ್ತು ಒಲಿದು ಹಯವ ಪಿಡಿದು ರಥವ ನಡೆಸಿದ ಭುವನ ಬ್ರಹ್ಮಾಂಡ ಸೂತ್ರಧಾರಕ ಶಿವಸುರಾರ್ಚಿತ ಪೊರೆ ಸುಹೃದಯ ಅ.ಪ ಪತಿತಪಾವನ ಶ್ರೀಶಕೇಶವ ಸಹಸ್ರಾಕ್ಷಶಯನ ಮಾಧವ ಭೋಗ ಗರುಡಗಮನ ಪತಿತಪಾವನೆ ಇಂದಿರೆಂiÀi ಜೀವ ಜಗದಾದಿದೇವ ಯತಿತತಿನುತ ಪವಿತ್ರನಾಮ ಕ್ಷಿತಿಸುತೆಪತಿ ಪವಿತ್ರ ಮಹಿಮ ಸತಿಯರವ್ರತಹರ ಜಿತಮಹಮುಪ್ಪುರ ಕೃತ್ರಿಮ ಮುರಹರ ಮಥನಸಾಗರ ನುತಿಪರ್ಹಿತಕರ ಸುಪಥರಾಧಾರ ಹಿತದಿ ಪೊರೆಯೆನ್ನ ಕರುಣಾನಿಕರ 1 ನಿರುತ ಜನರ ಕಲ್ಪತರು ನೀನು ಭಯಭಕ್ತಿಯಿಂದ ಸ್ಮರಿಸಿ ಬೇಡ್ವರ ಪರಮಸುರಧೇನು ಸುರಗಂಗಾಜನಕ ಶರಣು ಸಜ್ಜನರಮಿತ ದಯಾ ಪರನು ವಿಶ್ವರಕ್ಷಕನು ಮರಣರಹಿತ ಮದನತಾತ ಶುಭ ಸಚ್ಚರಿತ ದುರುಳ ಸಂಹರ ಶರಣುಮಂದಾರ ಸುಗುಣರೋದ್ಧಾರ ಶರಣಭಜಕರ ವರಸುಖಕರ ಕರಣಿಸಭವನೆ ತ್ವರಿತ ಸುವರ 2 ಕುಸುಮನಯನ ಸ್ವತಂತ್ರ ಮಹಲೀಲ ದಿವಕೋಟಿ ಪ್ರಭಾಕರ ಕುಸುಮಗಾತ್ರ ಮಹತಂತ್ರ ಮಾಯಜಾಲ ಗೋವರ್ಧನೋದ್ಧಾರ ಕುಸುಮಧರ ಕುರುಕುಜನಕುಲಕಾಲ ಗೋಪಾಲಬಾಲ ಕುಸುಮನಾಭ ಕೌಸ್ತುಭಾಂಬರ ಅಸಮ ತುಲಸಿಮಾಲಾಲಂಕಾರ ಒಸೆದು ದಾಸನ ಪುಸಿಯೆಂದೆನಿಸದೆ ಹಸನುಮತಿಯಿತ್ತು ಪೋಷಿಸನುದಿನ ಎಸೆವ ತವಪಾದ ನಂಬಿ ಮರೆಬಿದ್ದ ಅಸಮದಯಾನಿಧಿ ಮಮ ಶ್ರೀರಾಮ 3
--------------
ರಾಮದಾಸರು