ಒಟ್ಟು 6899 ಕಡೆಗಳಲ್ಲಿ , 128 ದಾಸರು , 4614 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಿಂದಿನ ದಿನದಂತಿದಲ್ಲಣ್ಣ ಈಗ ಬಂದಿಹ ದಿನವತಿ ಹೊಸದಣ್ಣ ಪ ಹೆಂಡಿರು ಮಕ್ಕಳ ಕರೆದರೆ ಒಳಗೆ ತಂಡುಲವಿಲ್ಲ ಗಂಜಿಗೆಶರೆ ಉಂಡೆವೆನುತ ಬಾಯ ಬಿಡುತಾರೆ ಇದ ಕಂಡು ನಾಕ್ಷಣವು ಜೀವಿಸಲಾರೆ 1 ಕಡಕಟ್ಟು ಹುಟ್ಟಿತೆಂಬುದು ಹುಸಿಯಿನ್ನು ಕೊಡುವರು ಕೊಡುವುದಿಲ್ಲವೋ ರೋಸಿ ಉಡಲು ತೊಡಲಿಕ್ಕಿಲ್ಲ ಕೈ ಬೀಸಿ ಎದೆ ನಡುಗಿ ಸಾವೆನು ನಾನು ಪರದೇಶಿ 2 ಅತಿಥಿಗಿಕ್ಕಲಿಕೆ ತನಗೇ ಇಲ್ಲ ಪ್ರತಿಮೆ ಲಿಂಗ ಪೂಜೆಗಳು ಜನ್ಮದೊಳಿಲ್ಲ ವ್ರತನೇಮ ದಾನ ಧರ್ಮಗಳಿಲ್ಲ ಪರ ಗತಿಗೇನು ಮುಂದೆ ಸಾಧನವಿಲ್ಲ 3 ಸಂಸಾರದೊಳಗೇನು ಸುಖವಿಲ್ಲ ಪರಮ ಹಂಸನಾಗಲು ಮುಂದೆ ಪಥವಿಲ್ಲ ಕಂಸಾರಿ ಸ್ಮರಣೆ ಎಂದಿಗೂ ಇಲ್ಲ ತಮ ಧ್ವಂಸಿ ಯಣುಗನ ಕೈವಶರೆಲ್ಲ 4 ಕಾಲಗತಿಯು ಬಲು ಬಿರುಸಣ್ಣ ಜನ ಬಾಳುವ ಪರಿಯಿನ್ನು ಹೆಂಗಣ್ಣ ಕೂಳಿಗೆ ಬಗೆಯಿಲ್ಲದಾಯ್ತಣ್ಣ ಲಕ್ಷ್ಮೀ ಲೋಲನ ಮೇಲೆ ಭಕ್ತಿಯಿಲ್ಲಣ್ಣ 5
--------------
ಕವಿ ಪರಮದೇವದಾಸರು
ಹಿಂದಿಲ್ಲ ಸ್ವಾಮಿ ಮುಂದಿಲ್ಲ ತಂದೆ ನೀನಲ್ಲದೆ ಕಾಯುವರೆನಗಾರು ಪ ಚರಣದಾಸರಿಗೆ ಆವರಿಸಿದ ಸಂಕಟ ಪರಿಹರಿಸಿ ಕಾಯಲು ಹರಿಯೆ ನೀನಲ್ಲದೆ 1 ಭಕ್ತವತ್ಸಲ ನೀನು ಮುಕ್ತಿ ದಾಯಕನಯ್ಯ ಭಕ್ತರ ವಿಪತ್ತು ಕಳೆಯುವರಾರು ನಿನ್ನ್ಹೊರತು 2 ಶ್ರೀಶ ಶ್ರೀರಾಮ ಜಗದೀಶ ಈ ದಾಸನ ಆಸೆಯ ಪೂರೈಸಿ ಪೋಷಿಸು ಬೇಗನೆ 3
--------------
ರಾಮದಾಸರು
ಹೀಂಗಾಯಿತ್ಹೀಂಗಾಯಿತೆ ಎನ್ನಯ ಬಾಳು ಪ ಗಂಗಾಜನಕ ಪಾಂಡುರಂಗ ಮೂರುತಿಯನು ಹಿಂಗದೆ ಭಜಿಸದೆ ಅಂಗಜನ್ವಶನಾದೆ 1 ಕಂತು ಜನಕ ಲಕ್ಷ್ಮೀಕಾಂತ ಮೂರುತಿಯನ್ನು ಚಿಂತಿಸದೆ ವಿಷಯ ಚಿಂತನೆಯಲ್ಲಿರುವೆ 2 ಹಿಂಡು ಜನರ ಮುಂದೆ ಸಂಭಾವಿತನಂದದಿ ಶುಂಭ ನಾ ಮೆರೆದೆನೊ 3 ಅಂಗನೆಯರ ಅಂಗಸಂಗ ಬಯಸಿ ಅಂತ ರಂಗದಿ ಕುಳಿತು ಬಹು ಸಂಗತಿ ಕಲ್ಪಿಸಿದೆ 4 ನಾನು ಪೇಳುವುದೇ ಸನ್ಮಾನ್ಯವೆಂದುಸುರಿ ನಾ ಮಾನಿನಿಯರ ಕೂಡಿ ಶ್ವಾನನಂದದಿ ಬಾಳ್ವೆ 5 ಬಿಡಿಸೋ ಬಿಡಿಸೋ ಹರಿ ಕೇಡು ಬುದ್ಧಿಗಳನ್ನು ಈಡು ನಿನಗಿಲ್ಲೆಂಬೊ ದೃಢಮನಸನೆ ಕೊಡೊ 6 ಘನತೆ ನಿನಗಲ್ಲವೊ ದೀನರ ಬಳಲಿಪುದು ಮಾನದಿಂದಲಿ ಕಾಯೊ ಶ್ರೀ ನರಹರಿಯೇ7
--------------
ಪ್ರದ್ಯುಮ್ನತೀರ್ಥರು
ಹೀನ ಬುದ್ಧಿಯ ಹಿಂದೆ ದೂಡುವ ಪ ಕಲಿಮಲಾಪಹನೆಂದು ಪಾಡುವ ಕಲುಷರಾಶಿಯ ಕಳೆದುಕೊಳ್ಳುವ ಹಲವು ಭವದಲಿ ಬಳಲದಂದದಿ ನಳಿನನಾಭನ ನಂಬಿಕೊಳ್ಳುವ 1 ದೇಹ ಗೇಹ ವ್ಯಾಮೋಹ ಭಾರದಿ ಚೋದಗೊಂಡರೆ ಚಕ್ರಿವೊಲಿವನೆ ನಾಹಮೀಶ್ವರೊ ಎಂದು ತಿಳಿದು ದಾ- ಸೋಹಮೆಂಬ ಸನ್ನಾಹಗೊಳ್ಳುವ 2 ಪಂಕಜಾಪತೇ ಪತಿತ ಪಾವನ ವೆಂಕಟೇಶದಾಸೌಘ ಜೀವನ ಕಿಂಕರಾರ್ತಿಹ ಕರುಣದಿಂದಲಾ- ತಂಕವಿಲ್ಲದೆ ಸ್ವಾಂಕ ಕೊಡುವನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹುಚ್ಚನಾಗಬೇಕೋ ಜಗದಿ ಹುಚ್ಚನಾಗಬೇಕೋ ಪ ಅಚ್ಚುತಾನಂತನ ನಿಶ್ಚಲ ಧ್ಯಾನದಿ ಇಚ್ಛೆಯಿಟ್ಟು ಜಗದೆಚ್ಚರ ನೀಗಿ ಅ.ಪ ಮರವೆ ಹರಿಯಬೇಕೋ ಪರಲೋಕ ದರಿವಿನೊಳಿರಬೇಕೊ ಪರಿಪರಿಯಿಂದಲಿ ಸಿರಿಯರಸನ ಪಾದ ಸ್ಮರಿಸಿ ಇಹ್ಯದರಿವು ತೊರೆದಾನಂದದಿ 1 ಪರನೆಲೆ ತಿಳಬೇಕೋ ಕಾಯದ ನರನೊದೆಯ ಬೇಕೊ ದುರಿತಾಕಾರಿಗಳ ಕಿರಿಕಿರಿಯಿಲ್ಲದೆ ಹರಿಹರಿಯೆನ್ನುತ ಪರಮಾನಂದದಿ 2 ಕಾಮ ಕಳೆಯಬೇಕೋ ಕಾಯದ ಪ್ರೇಮ ತೊರೆಯಬೇಕೊ ನೇಮದಿಂದ ಮಮಸ್ವಾಮಿ ಶ್ರೀರಾಮನ ನಾಮ ಭಜಿಸಿ ನಿಸ್ಸೀಮನಾಗಾನಂದದಿ 3
--------------
ರಾಮದಾಸರು
ಹುಚ್ಚು ಹೊಳೆಯ ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಎನ್ನ ಅಚ್ಚಳಿಯದೆ ದಡಕೆ ತಂದಿತಚ್ಚುತನ ದಯ 1 ಬಿಚ್ಚಿ ತೋರಲಾಗದೆನ್ನ ಅಚ್ಚರಿಯನು ದೇವ ನಿನ್ನ ಮೆಚ್ಚುಗೆಯನು ಪಡೆವೆನೆಂದು ಸತ್ಯ ಮಾಡುವೆ 2 ಅಷ್ಟದಾರಿದ್ರ್ಯ ಬರಲಿ ಕಷ್ಟ ರಾಶಿ ರಾಶಿ ಬರಲಿ ಶ್ರೇಷ್ಟದ ಮಾನಸದ ಭಾಗ್ಯವಿತ್ತು ಪೊರೆಯಲೊ 3 ವಿಷವ ಬಡಿಸುವರಿಗೆ ದಿವ್ಯ ರಸ ಕುಡಿಸುವಂತೆ ದೇವ ಹಸನ ಬುದ್ಧಿಯಿತ್ತು ಪೊರೆಯೊ ಹೃಷಿಕೇಶನೆ 4 ತ್ರಾಣವ ಕೊಡೊ ಮನಕೆ ದೇವ ಪ್ರಾಣಗಳನ್ನು ಚರಣದಲ್ಲಿ ಕಾಣಿಕೆಯರ್ಪಿಸುವೆ ರಮಾಪ್ರಾಣನಾಥನೆ5 ಮದಕೆ ಕಿಚ್ಚನೊಟ್ಟಿ ಕ್ಷಣದಿ ಎದೆಗೆ ಕೆಚ್ಚನಿತ್ತು ಮುದದಿ ಬದುಕಿನಲೇ ಮುಕುತಿ ಸೌಖ್ಯವಿತ್ತು ಪೊರೆಯೆಲೊ6 ವಿಭವ ತೋರುತಲಿ ಪ್ರಸನ್ನನಾಗೆಲೊ 7
--------------
ವಿದ್ಯಾಪ್ರಸನ್ನತೀರ್ಥರು
ಹುಡುಕಿದಳೆಶೋದ ಕಂದನ ಪಿಡಿದು ದಾರೆತ್ತಿಕೊಂಡ್ಹೋದರೆನುತ ಪ ಕಂಗಳನಿಕ್ಕಿ ಕಾದಿಹ್ಯದು ಸಿಂಗರದ ಗೋಪಿರ್ಹೆಂಗಳೆಯರು ರಂಗನ ಸುಖಕವರು ಗುಂಗುಹಿಡಿದು ಕುಳಿತಿಹ್ಯರು ರಂಗುಮಂಟಪದೊಳಗೆ ಎನ್ನ ಕಂಗಳಿದರ ಕಾಣನಾವ ಅಂಗನೆಯರಡಗಿಸಿದರೆಂದು ಅಂಗಲಾಚಿ ಅಂತರಂಗದಿ 1 ಉನ್ನತೋನ್ನತ ಋಷಿಗಣರು ಪನ್ನಂಗಶಾಯಿಯ ಸನ್ನಿಧಿಲವರು ಮುನ್ನಾವ ಕಾಲದಿಂ ಕುಳಿತಿಹರು ಭಿನ್ನವಿಲ್ಲದೆ ತಪವ ಮಾಳ್ಪರು ಇನ್ನು ಕಾಣಲವರು ತಮ್ಮಿಷ್ಟ ವನ್ನು ಪೂರ ಪಡೆವನಕ ಎನ್ನ ಕಣ್ಣಿಗೆ ಹಾಕರೆಂದು ಬನ್ನಬಡುತ ತನ್ನೊಳ್ತಾನು 2 ದೂಷಣೆ ಭೂಷಣಗಳನೊದೆದ ಮೋಸ ಕ್ಲೇಶಗಳನು ತರಿದ ಆಶಾ ಪಾಶಗಳನು ಜರಿದ ಈಶನುನ್ನತ ನಿಜವ ತಿಳಿದ ಶ್ರೀಶ ಶ್ರೀರಾಮ ನಿನ್ನ ಪಾದ ದಾಸರು ಕಾಣಲು ತಮ್ಮ ಭಕ್ತಿ ಪಾಶದಿಂದ ಬಿಗಿದು ಕಟ್ಟಿ ನ್ನೇಸು ಕಾಲದಿ ಬಿಡರೆಂದರಿದು 3
--------------
ರಾಮದಾಸರು
ಹುರುಡು ನಿನಗೆ ಥರವೇನೊ ಸ್ವಾಮಿ ಗರುಡವಾಹನ ಸುರಧೇನು ಪ. ಕುರುಡ ಕಾಣದೆ ಕೂಪದಲಿ ಬಿದ್ದರೆತ್ತದೆ ಮೊರಡುತನದಿ ಮುಖ ನೋಡುತ ನಗುವಂಥ ಅ.ಪ. ಜ್ಞಾನಮಾರ್ಗವ ಕಾಣದಿರುವ ದೀನ ಮಾನವನಿಗೆ ಮೋಹಭರವ ತಾನೆ ಕಲ್ಪಿಸಿ ತತ್ವದಿರುವ ಮುಚ್ಚಿ ನಾನಾ ಯೋಗಿಗಳಲ್ಲಿ ತರುವ ಮಾನವು ಸರಿಯೆ ಮಹಾನುಭಾವ ನಿನ್ನ ದೀನ ಬಂಧುತ್ವಕೆ ಹಾನಿ ಬಾರದೆ ಕೃಷ್ಣ 1 ಇಂದ್ರಿಯಾರ್ಥ ಸನ್ನಕರ್ಷವೆಂಬ ಬಂಧನದಲ್ಲಿ ಸಿಕ್ಕಿ ಬೀಳ್ವ ನಾನಾ ತಂದ್ರ ಸಾಗರ ಮುನಿಗಳ ಬಹು ಮಂಜನು ಮಾಯೆಯ ಗೆಲ್ವ ಹೊಂದಿಕೆಯನು ಸುಖ ಸಾಂದ್ರ ನೀನರಿಯೆಯ ಇಂದ್ರಾದಿಗಳನು ಎಂದೆಂದಿಗೂ ಸಲಹುವಿ 2 ಅದರಿಂದ ಸರ್ವಕಾಲದಲಿ ನೀನೆ ಒದಗಿ ಪೊಳೆವುತ್ತ ಮನದಲಿ ಪದಯುಗವಿರಿಸಿ ಶಿರದಲಿ ದಾಸಪದವ ಪಾಲಿಸು ಕರುಣದಲಿ ಭವ ವಂದ್ಯ ವೆಂಕಟಗಿರಿನಾಯಕ ಪದುಮಾಲಯೆ ಕೂಡಿ ಸದನದಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೂ ಬೇಕೆ ಹೂವು ಪರಿಮಳದ ಹೂವು ಪ ಪರಮ ಪುರುಷ ನಮ್ಮ ಕೃಷ್ಣನ ತೋಟದ ಅ.ಪ ಮಲ್ಲಿಗೆ ಸಂಪಿಗೆ ಜಾಜಿ ಸೇವಂತಿಗೆ ಮಲ್ಲೆ ಗುಲಾಬಿ ತಾವರೆ ಪಾರಿಜಾತ ಎಲ್ಲ ವಿಧದ ಮನಕ್ಲೇಶವ ಕಳೆಯಲು ಪುಲ್ಲಲೋಚನ ನಮ್ಮ ಕೃಷ್ಣನು ಧರಿಸಿದ 1 ದಾರದಿ ಕಟ್ಟಿಲ್ಲ ಮಾರು ಹಾಕುವುದಿಲ್ಲ ಕೇರಿ ಕೇರಿಗಳಲ್ಲಿ ಮಾರುವುದಲ್ಲ ಭೂರಿಭಕುತಿ ಎಂಬ ಭಾರಿಯ ಬೆಲೆಗಿದ ಮಾರೆಂದು ಪೇಳಿದ ಶೌರಿಯ ಸೊಬಗಿನ2 ರಂಗು ರಂಗುಗಳಿಂದ ಕಂಗೊಳಸುವ ಸ್ವಚ್ಛ ಬಂಗಾರದ ಛವಿ ಹಂಗಿಸುವ ಸಿಂಧು ಪ್ರಸನ್ನ ಶ್ರೀ ಮಾಧವ ನಂಘ್ರಿಯ ಸಂಗದಿ ಮಂಗಳಕರವಾದ 3
--------------
ವಿದ್ಯಾಪ್ರಸನ್ನತೀರ್ಥರು
ಹೂವ ತರುವರ ಮನೆಗೆ ಹುಲ್ಲ ತರುವೆ ಪ ಆವ ಪರಿಯಲಿ ಸಲಹೊ ದೇವ ಚಿನ್ಮಯನೆ ಅ ಈರೇಳು ಜನ್ಮದಿಂ ದಾಸನಾಗಿಹೆ ನಾನುಸೇರಿದೆನೊ ತವ ಶರಣರ ಸೇವೆಗೆಘೋರ ದುರಿತಗಳೆಂಬ ವಾರಿಧಿಯ ಬತ್ತಿಸಿನಾರಸಿಂಹನೆ ಕಾಯೊ ನಮ್ಮ ಕುಲಸ್ವಾಮಿ 1 ರಂಗನಾಥನೆ ನಿನ್ನ ಡಿಂಗರಿಗನೋ ನಾನುಡಂಗುರವ ಹೊಯಿಸಯ್ಯ ದಾಸನೆಂದುಭಂಗಪಡಿಸದೆ ನಿನ್ನ ಶರಣರೊಳಗಿಂಬಿಟ್ಟುಗಂಗೆ ಜನಕನೆ ಕಾಯೊ ಚರಣಕ್ಕೆ ಶರಣು 2 ಎಷ್ಟು ಮಾಡಲು ನಿನ್ನ ಬಂಟನೋ - ವೈಷ್ಣವರಹುಟ್ಟು ದಾಸಿಯ ಮಗನು ಪರದೇಶಿಯೋಸೃಷ್ಟಿಗೊಡೆಯ ಕಾಗಿನೆಲೆಯಾದಿಕೇಶವನೆ - ಕೈಬಿಟ್ಟೆಯಾದರೆ ನಿನಗೆ ಹರಿದಾಸರಾಣೆ 3
--------------
ಕನಕದಾಸ
ಹೃದಯೇಶ ನಿನ್ನಂತೆ ಸದಯರಿನ್ನಿಹರೇನು ವಿಧುಸನ್ನಿಭಾನನಾ ಪದ್ಮನಯನ ಶ್ಯಾಮಲಾಂಗನೆ ಎನ್ನ ಕಾಮಿತಮಿದೆಲ್ಲಮಂ ಪ್ರೇಮದಿಂ ಪಾಲಿಸೈ ಕ್ಷೇಮಧಾಮ ಏಲಾಲವಂಗದಿಂ ಬಾಲ್ಮೆಣಸುಪತ್ರೆಯಿಂ ಮೇಲೆನಿಸಿ ಘಮಘಮಿಪ ವೀಳ್ಯಮಿದನು ಮೆಚ್ಚಿ ನೀಡುವೆ ನಾನು ನೆಚ್ಚಿನಿಂ ಕೊಂಡಿದನು ಅಚ್ಯುತನೆ ನೀನಿನ್ನು ರಕ್ಷಿಸೆನ್ನ ರನ್ನದಟ್ಟೆಯ ಪಿಡಿದು ನಿಂದು ನಿಂದು ಖಿನ್ನತೆಯನಾಂತೆನ್ನ ಕರವು ನೊಂದು - ದಿನ್ನಾದೊಡೆನ್ನ ಕಣ್ದೆರೆದು ನೋಡು ಚನ್ನಶೇಷಾದ್ರೀಶ ಕರವನೀಡು
--------------
ನಂಜನಗೂಡು ತಿರುಮಲಾಂಬಾ
ಹೆಣ್ಣೆನವರ ಹೆಮ್ಮೆ ನೋಡಿರೀ ಜನರೆ ನೀವು ಪ ಕಣ್ಣು ಸನ್ನೆ ಮಾಡಿ ಮಾಡಿ ಕಾರ್ಯವನ್ನು ತೂಗಿಸುವರು ಅ.ಪ ಅರ ಪಾವು ರವೆಯು ಶಾವಿಗೆ ಮಾಡಿ ಭಾವದಲ್ಲಿ ಹಿಗ್ಗಿಗ್ಗಿ ತಾವು ಪ್ರಸ್ತಮಾಡುತಿಹರು 1 ಭಕ್ಷ್ಯ ಭೋಜ್ಯವೆಂಬುದದು ಲಕ್ಷ್ಯವಿಲ್ಲ ಮಾತಿನಲ್ಲಿ ಕುಕ್ಷಿತುಂಬ ಭೋಜನವಿಲ್ಲ ದಕ್ಷಿಣೆಯು ದ್ವಿಜರಿಗೆ ಕಾಣೆ 2 ವರಗೆ ಕೊಟ್ಟ ವಸ್ತ್ರ ಪಾತ್ರೆ ವರ್ಣಿಸಲೊಂದು ಬಾಯಿ ಸಾಲದು ಗುರುರಾಮ ವಿಠಲನೆ ಬಲ್ಲ 3
--------------
ಗುರುರಾಮವಿಠಲ
ಹೆಮ್ಮೆಯಾ ಬಿಡು ಬಿಡು ಮನುಜಾ ಪ ಬೊಮ್ಮ ದೂರ್ವಾಸಾದಿಗಳೆಲ್ಲಾ | ಸುಮ್ಮನೆ ತಲೆವಾಗಿ ಹೋದರೆಂಬುದ ಕೇಳಿ ಅ.ಪ ಕಡಲೊಳು ಕುಳಿತಿಹ ಬಕದಾಲ್ಭ್ಯನೊಳು ಗರ್ವ | ನುಡಿಯಲಿ ತಾ ವಾಯು ವಶದಿಂದಲಿ | ತಡಿಯದೆ ಬಹುಮುಖ ಕಮಲಾಸನ ಕಂಡು | ಒಡನೆ ಲಜ್ಜಿತ ಬ್ರಹ್ಮನಾದ ನೆಂಬುದು ಕೇಳಿ 1 ತುಚ್ಛ ಮಾಡಿದ ಇಂದ್ರನೆಂಬ ಗರ್ವದಿ ಬಂದು | ಮತ್ಸರಿಸಲು ಅಂಬೃಷಿಯೊಡನೆ | ಅಚ್ಯುತನಾಯುಧ ಬೆನ್ನಟ್ಟಿ ಬರಲಾಗ | ಹುಚ್ಚಿಟ್ಟು ದೂರ್ವಾಸ ಹೋದನೆಂಬುದ ಕೇಳಿ 2 ಮೇರು ಗಿರಿಯ ಸಮವಾಗಿ ಸೂರ್ಯನ ರಥಾ | ದಾರಿ ಕಟ್ಟುವೆನೆಂದು ಬೆಳೆಯುತಲಿ | ಧೀರಗಸ್ತ್ಯನ ನುಡಿ ಕೇಳಿ ವಿಂದ್ಯಾದ್ರಿ | ಧಾರುಣಿಯೊಳಗೇ ನಾದನೆಂಬುದ ಕೇಳಿ 3 ಯಕ್ಷರಾಕ್ಷಸದೇವ ದ್ವಿಜರೊಳೆಮಗಸಮ | ಕಕ್ಷದಿ ನಿಲುವ ರರೆನುತಾ | ಭಿಕ್ಷುಕ ಯೋಗಿಯನುತಾ ಶಿವನೆಣಿಸದೆ | ದಕ್ಷ ಮನ್ಮಥರೇನಾದರೆಂಬುದ ಕೇಳಿ 4 ನಹುಷಾದಿ ರಾಯರು ಮೂಢ ಪಂಡಿತರೆಲ್ಲಾ | ಬಹುತರು ನಮ್ರವೃತ್ತಿಯ ತ್ಯಜಿಸಿ | ಮಹಿಪತಿಸುತ ಪ್ರಭು ವಲುಮೆಗೆ ದೂರಾಗಿ | ಅಹಂಕಾರ ಬಲಿಯೊಳು ಕೆಟ್ಟರೆಂಬುದ ಕೇಳಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೆಳೆಲೆ ಸಖಿ ಘಮ್ಮನೆ ಸುಳಿದವನಾರೇ | ಕೇಳಮ್ಮ ಒಮ್ಮಿಂ ದೊಮ್ಮೆಲೆ ಕಂಡೆ ನಾನೀರೆ | ಒಲಿದು ಕರೆ ತಂದೆನಗಿನ್ನೊಮ್ಮೆ ದೋರೇ | ಚಲುವಿಕೆಯವನ ಉಸುರಲಾರೆ ಪ ಪದುಮ ಶಂಖ ಚಕ್ರಾಂಕಿ ತರುಣ ತಳದಾ | ಬಿದಿಗೆ ಚಂದ್ರಮನ ನೀಲಮಣಿಯಂತೆ ಹರಡಿನ ಪಾದಾ | ಚದುರ ನೂಪುರ ಗೆಜ್ಜೆ ರವದಾ 1 ಜಾನೂರು ಪೋಂಬಾಳೆ ಕಟಿ ತಟಾ | ಸುನಾಭಿ ತ್ರಿವಳಿಯ ಕೂಟಾ 2 ಕಿರಿಡೊಳ್ಳು ಮಧ್ಯ ಯಳೆ ವಾಸೆ ಹೃದಯಲಿ ಪದಕಾ | ಸಿರಿವತ್ಸ ಗ್ರೀವ ಕರ ಕಡಗ ತೋಳ ಬಂದಿ ಕುಂಡಲ ರನ್ನನೇಕಾ 3 ಕುರು ಮರಿಯಂದದಿ ಕದಪಿನಮುಖಾ | ಕಿರುನಗೆ ದಂತಾರ ನಯನ ಭ್ರೂತಿಲಕಾ | ನೊಸಲು ಕಸ್ತೂರಿ ತಿಲಕಾ 4 ತೆರಳಿದ ಬೆರಳುಂಗುರ ಸನ್ನೆ ಮಾಡುತಾ | ಗುರು ಮಹಿಪತಿ ನಂದನ ಪ್ರಭುನಿವಸತ್ಯ | ಧರಿಯೋಳಳಿವನ ಗಾಣಿ ಪರತಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೇ ದಯಾಸಾಗರ ಸ್ವಾಮಿ ವೇದ ಮಾಧವ ಮುಕುಂದ ಮನುಮುನಿ ಪ್ರೇಮಿ ಪ ವೇದಗೋಚರ ಸಾಧುಸನ್ನುತ ನಾದಪ್ರಿಯ ಭವಬಾಧೆರಹಿತ ಭೇದಹರ ಜಗ ಪಾದ ಭಜಿಸುವೆ ಪಾಲಿಸೆನ್ನ ಅ.ಪ ಮದಗಜ ಮುದದಿಂದ ಪೊರೆದಿ ಪ್ರಭುವೆ ಮದಗಜಗಮನೆಯ ಮಾನದಿಂ ಕಾಯ್ದೆ ಪದುಮವದನೆಶಾಪ ಕಳೆದೆ ಕರುಣಿ ಸದಮಲಬಾಲನ ತಪಕೆ ನೀನೊಲಿದಿ ಸುದಯಹೃದಯ ಸುಸದನಪಾಲ್ಸಿದಿ ಸದಮಲಾಂಗನೆ ಪದುಮವದನ ಮುದದಿ ನಿಮ್ಮಡಿ ಪದುಮಗಳು ಎ ನ್ಹøದಯ ಮಂದಿರದಿರಿಸಿ ರಕ್ಷಿಸು 1 ಗರುಡಂಗೆ ವರಮೋಕ್ಷ ನೀಡ್ದಿ ನಿನ್ನ ಸ್ಮರಿಪರಿಗೆ ದರುಶನಕೊಡುತಲಿ ನಡೆದಿ ತರುಣಿಯ ಎಂಜಲ ಸವಿದಿ ವನ ಚರನಿಗೆ ವಶನಾಗಿ ಅಭಯ ಪಾಲಿಸಿದಿ ಭರದಿ ದಕ್ಷಿಣಶರಧಿ ಹೂಳಿಸಿ ಮೆರೆವ ಲಂಕಾಪುರವ ಮುತ್ತಿದಿ ದುರುಳರ್ಹಾವಳಿ ದೂರಮಾಡಿ ಧರೆಯ ಭಾರವ ನಿಳುಹಿದಯ್ಯ 2 ನುಡಿಸಿದರೆನ್ನಿಂದಲಾವ ವಚನ ನುಡಿಸಿದ ಬಳಿಕದನು ನಡೆಸಿಕೊಡಭವ ನುಡಿಯಂತೆ ನಡೆಯೆನಗೆ ಸ್ಥಿರವ ಕೊಟ್ಟೆ ನ್ನೊಡಲೊಳಗದಂತೆಯಿರು ಅನುದಿನವು ಪೊಡವಿ ಮೂರನು ಒಡಲೊಳಿಟ್ಟಿಡೆ ಬಿಡದೆ ಆಳುವ ಒಡೆಯ ಶ್ರೀರಾಮ ದೃಢದಿ ನಿಮ್ಮಯ ಅಡಿಯ ನಂಬಿದೆ ಬಿಡಿಸು ಎನ್ನಯ ಮಂದಜ್ಞಾನವ 3
--------------
ರಾಮದಾಸರು