ಒಟ್ಟು 8605 ಕಡೆಗಳಲ್ಲಿ , 133 ದಾಸರು , 4891 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಶ್ರೀನಿವಾಸ-ಶ್ರೀ ಭೂವಿಲಾಸ-ಶ್ರೀತಜನಪೋಷ -ಪಾಹಿಸುವೇಷ ಪ ಅಚ್ಯುತಮಾನ ಮದಚ್ಯುತವಿ ಪಚ್ಚಿನ್ಮನೋರಥ ನಿಚ್ವಿತ ಪಾಹಿ 1 ದುರಂತವಿಕ್ರಮ ದನುಜಾಂತಕ ಪಾಹಿ 2 ಗೋವಿಂದ ನತಸುಮ ನೋವೃಂದ ದಳಿತ ತಮೋವೃಂದ ಪೋಷಿತ ಗೋಬೃಂದ ಪಾಹಿ 3 ಕೊಶಮಾಂಪಾಹಿ 4 ಸುರವಾರಮಾಂಪಾಹಿ 5 ಸದನ ಗೋವಿಂದಮಾಂಪಾಹಿ6 ವಿಷ್ಣೋಸುಜನವರ್ಧಿಷ್ಣೋಸಂತೋಷಿತಜಿಷ್ಣು ಸುರಜೀಷ್ಣೋಮಾಂಪಾಹಿ 7 ನುತ ಬುಧಜನಪಾಹಿ 8 ಆಕ್ರಮನುಪಿತ ನಿಜಕ್ರಮ ಜಿತವಿಶ್ವಶಕ್ರಸಹಜ ತ್ರಿವಿಕ್ರಮ ಪಾಹಿ 9 ಸುರಕಾಮನ ಮುನಿಜನಪ್ರೇಮಮಾಂಪಾಹಿ 10 ಕೌಸ್ತುಭಕಂದರ ಪಾಹಿ 11 ಗೋಚರರಾಕೆಂದು ಪಾಹಿ 12 ಪದಪದ್ಮಮಾಂಪಾಹಿಂ 13 ಜಿತಕಾಮಮಾಂಪಾಹಿ 14 ದೊಷರಹಿತಗುಣ ಭೂಷಣ ನತಜನಪೋಷ- ಸಂತೋಷಿತ ಶೇಷಮಾಂಪಾಹಿ 15 ವಾಸುಕಿ ಶಯನ ವಿಕಾಶ ಕಮಲನಯ- ನಾಸುರದಮನ ಶರಾಸನ ಪಾಹಿ 16 ಪರಿತುಷ್ಟಮಾಂಪಾಹಿ 17 ವಿಹರಣ ಸಕಲ ಗುಣಾಭರಣಮಾಂಪಾಹಿ 18
--------------
ಸರಗೂರು ವೆಂಕಟವರದಾರ್ಯರು
ಶ್ರೀ ಶ್ರೀಪಾದರಾಜರು ಕಾಪಾಡು - ಕಾಪಾಡು ಶ್ರೀ ಪಾದರಾಯ ಪ ಪಾಪೌಘಗಳನಳಿದು ಶ್ರೀಪತಿಯ ತೋರೀ ಅ.ಪ. ನಾಡಿನೊಳು ಪೆಸರಾದ ಮೂಡಲಾದ್ರಿಗೆ ಪೋಪಮೂಡಬಾಗಿಲ ಕಾಯ್ವ ಪ್ರಾಣನಾಶ್ರಯಿಸೀ |ಮೂಡಬಾಗಿಲ ಪುರದಿ ನರಸಿಂಹ ಕ್ಷೇತ್ರದಲಿ |ಈಡು ಇಲ್ಲದೆ ಮೆರೆವ ಯತಿ _ ಸಾರ್ವಭೌಮಾ 1 ಹತ್ತಾರು ನಾಲ್ಕಾದ ಶಾಕಪ್ರತಿ ದಿನದಲ್ಲಿಉತ್ತಮೋತ್ತಮಗಿತ್ತು ಉಂಬ ಮಹಿಮಾ |ಕೃತ್ರಿಮ ಸ್ವಭಾವ ನೃಪ ಪರಿಕಿಸಲು ಪೋಗೆ ಹರಿಮತ್ತೊದಗಿಸಿದ ವ್ಯಾಳ್ಯಕ್ಕೆ ಹರಿಕೃಪಾ ಪಾತ್ರ 2 ವಿಪ್ರ ಬ್ರಹ್ಮತ್ಯವನು ಶಂಖದುದಕದಿ ಕಳೆಯೆಅಪ್ರಬುದ್ಧರು ನಗಲು ಗೆರೇಣ್ಣೆ ವಸನಾ |ಕ್ಷಿಪ್ರ ಶುದ್ದಿಯಗೈದೆ ಪ್ರೋಕ್ಷಿಸುತ ಶಂಖದಲಿಅಪ್ರಮೇಯನ ಕರುಣ ನಿನ್ನೊಳೆಂತುಂಟೋ 3 | ಅಹವು ರಾತ್ರಿಗಳಭಿಧ ಆದಿತ್ಯ ಸಂಸ್ಥಿತನುಅಹರ್ನಿಶೀ ನರನಾಡಿ ಸ್ಥಿತನಾಗಿಹಾ |ಬೃಹತಿ ನಾಮಕಗನ್ನ ಋಗ್ರಹಸ್ಯವನರುಪಿಬೃಹತಿ ಸಾಸಿರಗಳಿಪ ಸಂಧಾನವಿತ್ತೂ 4 ವಾದಿಗಳ ಎದೆಶೂಲ ವಾದ ಗ್ರಂಥದಿ ಪೂರ್ಣಬೋಧ ಶಿಷ್ಯರ ಹಿತವ ಕಾದು ಜಗದೀ |ವೇದ ವೇದ್ಯನು ಗುರು ಗೋವಿಂದ ವಿಠ್ಠಲನಪಾದ ಧೃವ ಧ್ಯಾನದಲಿ ಮೆರೆಯುತಿಹ ಗುರುವೇ 5
--------------
ಗುರುಗೋವಿಂದವಿಠಲರು
ಶ್ರೀ ಶ್ರೀಪಾದರಾಜರು ಧರೆಯೊಳು ಮೂರೇಳು ಕುಮತರ ಭಾಷ್ಯವಕಿರುಕು ಹಾವಿಗೆ ಎಂದದಿ ರಚಿಸೆಚರಣದಿಂದಲಿ ತುಳಿದು ಶತ್ರು ಖಳರಾ ಕರೆದುಮೊರೆಯಿಡುತಿವೇ ಶಾಸ್ತ್ರಸೆರೆಯ ಬಿಡಿಸೀರೆಂದು ಪ . . . ಹರಿಪ್ರೀತಿಗಾಗೆ ನಿರ್ಮಿಳ ಸುಕೃತಂಗಳಾಧರಿಸಿದಾ ಕುಸುಮಪರಿಮಳಂಗಳಾನರನೊಬ್ಬ ದೂಷಿಸೆ ಕೇಳಿ ಸರ್ವವನುಳುಹೆಅರಕ್ಷಣದಿ ಅವನ ತನು ಬಿರಿಯೆ ರಕ್ಷಿಸಿದೆ 2 ಸುರನಾಥಪುರಕಂದು ಘನ ಪುಷ್ಪವಿಮಾನದಿಸರಿವುತ್ತಲಿರೆ ರಘುನಾಥೇಂದ್ರರವರಯೋಗಿ ವೃಂದಾವನ ಪ್ರದಕ್ಷಿಣೆ ಗೈಸಿಕರೆದು ಭಾಷಿಸಿ ಕಳುಹಿದಾಶ್ಚರ್ಯ ಚರಿತಾ 3 ಸರಸಿಜಾಕ್ಷನ ಧ್ಯಾನದೊಳಿರೆ ವ್ಯಾಸಮುನಿಯಾಉರಗ ಬಂಧಿಸಲು ಧ್ಯಾನದೊಳೀಕ್ಷಿಸಿಮರುತ ವೇಗದಿ ಪೋಗಿ ಫಣಿಪನೊಡನೆ ಭಾಷಿಸಿತೊಡರು ಬಿಡಿಸಿದ ಅಹಿಪಾಶವ ಗುರುರಾಯ 4 ಸಿರಿಕೃಷ್ಣ ಪದಕಂಜಭೃಂಗನೆಂದಿನಿಸುವವರ ಹೇಮವರ್ಣತೀರ್ಥರ ಕುವರಸುರನರೋರುಗರೋಳು ಪ್ರಖ್ಯಾತರೆನಿಸುವಅರಿಶರಭ ಭೇರುಂಡನೆನಿಪ ಶ್ರೀಪಾದರಾಯ 5
--------------
ವ್ಯಾಸರಾಯರು
ಶ್ರೀ ಸಂತಾನ ಗೋಪಾಲಕೃಷ್ಣ 141 ಗೋಪಿ ವಿನುತ ಧಾಮ ಅನಂತಾಸನ ಯೈದಿ ವಿಪ್ರನಿಗೆ ಸುಪುತ್ರನ್ನ ತಂದಿತ್ತ ಘೃಣೀಯೇ 1 ಅಂದು ವೈರಾಟಿಯು ಪಾಹಿ ಪಾಹಿ ಮಹಾ ಯೋಗಿನ್ ದೇವ ದೇವ ಜಗತ್ ಪತೇ ನಾನ್ಯಂ ತತ್ ಅಭಯಂ ಪಸ್ಯೆ ಎಂದು ನಾಥನೇ ನಿನ್ನ ಮೊರೆ ಹೋಗಲು ಅವಳ ಉದರ ಪ್ರವೇಶಿಸಿ ಶಿಶುವ ರಕ್ಷಿಸಿದ ಚಕ್ರಿ 2 ಸುಸ್ಪಟಿಕ ಕಾಂತಿಮಾನ್ ಶಿವ ಶಿವಾ ಪೋಲು ಈ ದಂಪತಿಗಳು ಯಥಾ ಯೋಗ್ಯ ಪ್ರೇಮ ಪರಸ್ಪರ ಬೆಳೆಸಿ ಹರಿ ಗುರು ಭಕ್ತಿ ವರ್ಧಿಸಿ ಸುಪುತ್ರ ಸಂತಾನ ಭಾಗ್ಯವಿತ್ತು ಸಲಹುದು 3 ಕಲ್ಯಾಣ ತಮರೂಪ ಅಂಬುಜ ಸುದರ್ಶನ ಬಲು ಚೆÀಲುವ ಶಂಖ ಕೌಮೋದಕೀಧರನೇ ಮಾಲಕ್ಷ್ಮೀ ವಕ್ಷನೀ ವರ ಅಭಯ ಪ್ರದನಾಗಿ ಸಲುಹುತಿಯೇ ಭಕ್ತರನ ಗುರುಗ ಶ್ರೀ ಕೃಷ್ಣ 4 ಗುರುಗಳೋಳಿಪ್ಪ ವರ ವಾಯು ಅಂತರ್ಗತನೇ ವಾರಿಜಾಸನಪಿತ ಶ್ರೀ ಪ್ರಸನ್ನ ಶ್ರೀನಿವಾಸ ಶರಣು ಭಾಗೀರಥಿ ಜನಕ ಪಾವನ ನಾಮನೇ ಪೂರ್ಣ ಕಾಮನೇ ಭಕ್ತ ವಾಂಛಿತ ಪ್ರದನೇ 5 ಪ
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯ ವಿಜಯತೀರ್ಥ ಚರಿತ್ರೆ ನಮೋ ಸತ್ಯ ವಿಜಯಾರ್ಯ ತೀರ್ಥರೇ ಸುಮಹ ಕಾರುಣ್ಯದಿಂ ಎನ್ನ ಪಾಪಗಳ ಮನ್ನಿಸಿ ವಿಮಲ ವಾಙ್ಮನೋಕಾಯದಲಿ ಶ್ರೀ ರಾಮ ಯದುಪತಿ ಸ್ಮರಣೆ ಇತ್ತು ಪಾಲಿಪುದು ಪ ಅಶೇಷ ಗುಣಗಣಾಧಾರ ವಿಭು ನಿರ್ದೋಷ ಹಂಸ ಶ್ರೀಪತಿಯಿಂದುದಿತ ಗುರುಪರಂಪರೆಗೆ ಬಿಸಜಭವ ಸನಕಾದಿ ದೂರ್ವಾಸ ಮೊದಲಾದ ವಂಶಜರು ಸರ್ವರಿಗೂ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷರಿಗೂ ಪರವಾಯು ಅವತಾರಾನಂದ ತೀರ್ಥರಿಗೂ ಉತ್ಕøಷ್ಠ ಗುರುತಮ ಮಧ್ವ ಆನಂದ ಮುನಿಗಳ ಕರಕಂಜಭವ ಸರ್ವ ಯತಿಗಳಿಗು ಶರಣು 2 ಮಾಧವ ಅಕ್ಷೋಭ್ಯ ಅದ್ವಿತೀಯ ಸುಸ್ಪಷ್ಟ ಟೀಕಾಗಳಿತ್ತ ಮೇಧಾಪ್ರವೀಣ ಜಯತೀರ್ಥಾರ್ಯರಿಗೂ ವಿದ್ಯಾಧಿರಾಜರಿಗೂ ನಮೋ ನಮೋ ಶರಣು 3 ವಿದ್ಯಾಧಿರಾಜರ ಶಿಷ್ಯರು ಈರ್ವರಲಿ ಮೊದಲನೆಯವರು ರಾಜೇಂದ್ರ ತೀರ್ಥರಿಗು ನಂತರ ಕೋವಿದೋತ್ತಮ ಕವೀಂದ್ರರಿಗೂ ತತ್ವಜ್ಞ ಶಿಷ್ಯವಾಗೀಶ ತೀರ್ಥರಿಗು ಶರಣು 4 ವಾಗೀಶ ತೀರ್ಥರು ಕವೀಂದ್ರ ಕರಜರು ವಾಗೀಶ ಕರಜರು ರಾಮಚಂದ್ರಾರಾರ್ಯರು ಈ ಗುರುಗಳಿಗೆ ಈರ್ವರು ಶಿಪ್ಯರು ಇಹರು ಬಾಗಿ ಶರಣಾದೆ ಈ ಈರ್ವರಿಗೂ 5 ಮೊದಲನೆಯವರು ವಿಭುದೇಂದ್ರತೀರ್ಥಾರ್ಯರು ವಿದ್ಯಾನಿಧಿ ತೀರ್ಥಾರ್ಯರ ಅನಂತರವು ವಿದ್ಯಾನಿಧಿ ಸುತರು ರಘುನಾಥತೀರ್ಥರು ವಂದಿಸಿ ಶರಣೆಂಬೆ ಇವರಿಗು ಇವರ ವಂಶಕ್ಕು 6 ರಘುನಾಥ ಕರಕಮಲಜಾತರಘುವರ್ಯರಿಗೆ ರಘೂತ್ತಮ ವೇದವ್ಯಾಸ ವಿದ್ಯಾಧೀಶ ವೇದನಿಧಿ ಸತ್ಯವ್ರತ ಸತ್ಯನಿಧಿ ಸತ್ಯನಾಥ ಸತ್ಯಭಿನವ ಸತ್ಯಪೂರ್ಣರಿಗೆ ನಮಿಪೆ 7 ಸತ್ಯಾಭಿನವತೀರ್ಥರ ಮಹಿಮೆ ಬಹುಬಹುವು ಸುತಪೋನಿಧಿಯು ಶ್ರೀನಿವಾಸನ್ನೊಲಿಸಿಕೊಂಡಿಹರು ಸತ್ಯಪೂರ್ಣರಿಗೆ ಶಿಷ್ಯರು ಈರ್ವರು ಸತ್ಯವರ್ಯರು ಸತ್ಯವಿಜಯರು ಎಂದು 8 ಸತ್ಯ ಪೂರ್ಣಾರ್ಯರು ತಮ್ಮ ಗುರು ಸತ್ಯಾಭಿನವರ ಪದ್ಧತಿ ಅನುಸರಿಸಿ ಶ್ರೀಮಠ ಆಳುತ್ತ ಸತ್ಯವರ್ಯರನ್ನು ಗೋದಾವರಿ ಕ್ಷೇತ್ರ ವಿಜಯ ಮಾಡೆಂದು ಸತ್ಯವಿಜಯರನ್ನ ಕಳುಹಿದರು ಪೂರ್ವದಿಸೆಗೆ 9 ಸತ್ಯವರ್ಯರು ಗೋದಾವರಿ ಪಂಚವಟಿ ನಾಸಿಕ ತ್ರಿಯಂಬಕಾದಿ ಕ್ಷೇತ್ರ ಸಮೀಪ ವಿಜಯಮಾಡೆ ಸತ್ಯವಿಜಯರು ತೋಂಡದೇಶ ಚÉೂೀಳ ಪಾಂಡ್ಯಾದಿ ನಾಡಲ್ಲಿ ವಿಜಯ ಮಾಡಿದರು 10 ಜಯಶೀಲರಾಗಿ ದಿಗ್ವಿಜಯಮಾಡಿ ತೋಯಜಾಕ್ಷನಪಾದಐದಿದರು ನಿಯಮೇನ ಸತ್ಯವಿಜಯರು ಅಲಂಕರಿಸಿದರು ಪೀಠ 11 ಸತ್ಯಾಭಿನವ ಆರ್ಯರ ಸತ್ಯಪೂರ್ಣ ಗುರುಗಳ ಪದ್ಧತಿಯಲಿ ಸತ್ಯವಿಜಯಾರ್ಯರು ವೇದಾಂತವಾಖ್ಯಾರ್ಥ ದುರ್ವಾದ ಖಂಡನ ಅಧಿಕಾರಿಗಳಿಗು ಉಪದೇಶ ಮಾಡಿದರು 12 ಸೇತುಯಾತ್ರೆ ಮಾಡಲು ದಿಗ್ವಿಜಯ ಕ್ರಮದಲಿ ಬಂದರು ಆರಣಿಗೆ ತೋಂಡದೇಶದಲಿ ವಿಪ್ರ ಆರಣಿ ರಾಜನು ಸಂತಾನ ವೃದ್ಧಿಗೆ ಕೊರಗುತ್ತಿದ್ದ 13 ಯುಕ್ತಮರ್ಯಾದೆಗಳ ವೈಭವದಿಂದಲಿ ಸತ್ಯವಿಜಯರಿಗೆ ಮಾಡಿ ದೇವಾರ್ಚನೆ ಭೂದೇವರಿಗೆ ಭೋಜನಮಾಡಿಸಿದ ರಾಜನು ವೇದ್ಯವಾಯಿತು ಗುರುಗಳಿಗೆ ರಾಜನ ಕೊರತೆ 14 ಸತ್ಯವಿಜಯತೀರ್ಥಾರ್ಯರ ಗುರುವರ್ಯರು ಸಪ್ತದಶ ಅಕ್ಷರ ಮಂತ್ರ ಪ್ರತಿಪಾದ್ಯಹರಿದಯೆಯಿಂದ ಒದಗಿಸುವ ವಂಶವೃದ್ಧಿ ಎಂದು ಅನುಗ್ರಹಿಸಿ ಪೋದರು ದಿಗ್ವಿಜಯಕೆ ವರವು ಪೂರ್ಣವಾಯಿತು 15 ಸೇತುಯಾತ್ರೆ ದಿಗ್ವಿಜಯ ಪೂರಯಿಸಿ ಆ ಗುರುಗಳು ಮತ್ತು ಬಂದರು ಆರಣಿ ಕ್ಷೇತ್ರಕ್ಕೆ ಕೃತಜ್ಞ ಆ ರಾಜನು ಎದುರುಗೊಂಡು ಗುರುಗಳ ಪಾದದಲಿ ಶಿರವಿಟ್ಟು ಸ್ವಾಗತವನಿತ್ತ 16 ಸಂಸ್ಥಾನ ಮೂರ್ತಿಸ್ಥ ಹರಿಪೂಜಾ ವೈಭವವು ನಿತ್ಯ ಪ್ರವಚನ ಪಾಠಕೀರ್ತನೆ ಏನೆಂಬೆ ಸತ್ಯವಿಜಯರನ್ನ ರಾಜ ಅಲ್ಲಿಯೇ ಇರಬೇಕು ಎಂದು ಕೋರಿ ಒದಗಿಸಿದ ತಕ್ಕ ಸೌಕರ್ಯ 17 ಸತ್ಯವಿಜಯಾರ್ಯರಿಗೆ ದೇಹ ಅಧಾರೂಢ್ಯ ವೇದ್ಯವಾಯಿತು ಆರಣಿರಾಜನಿಗೆ ಭಕ್ತಿಶ್ರದ್ಧೆಯಿಂದಲಿ ಉಪಚಾರ ಮಾಡಿದನು ಮಾಧವಗೆ ಅರ್ಪಿಸುತಕೊಂಡರು ಗುರುಗಳು 18 ಶ್ರೀ ಸತ್ಯವಿಜಯತೀರ್ಥರ ಮಹಿಮೆ ಬಹು ಉಂಟು ಒಂದು ಮಾತ್ರ ಸ್ಥಾಲಿಪುಲಿಕನ್ಯಾಯದಲಿ ಈ ದಿವ್ಯ ಸಣ್ಣ ನುಡಿಗಳಲಿ ಪೇಳಿಹುದು ಮಾಧ್ವಯತಿ ಹರಿದಾಸ ಮಹಿಮೆಗಳಿಗೆ ಅಳವುಂಟೆ 19 ತಮ್ಮ ತರುವಾಯ ಸಂಸ್ಥಾನ ಆಡಳಿತವ ಶ್ರೀ ಮನೋಹರ ಹರಿ ಪ್ರಿಯರು ಸತ್ಯವರ್ಯ ಸುಮನೋಹರ ಸತ್ಯಪ್ರಿಯ ತೀರ್ಥನಾಮದಲಿ ರಮಾರಮಣಸೇವೆಗೆ ವಹಿಸಬೇಕೆಂದು 20 ಭಕ್ತಿಮಾನ್ ಆರಣಿ ರಾಜನಿಗೆ ಹೇಳಿ ಹಿತದಿ ಅನುಗ್ರಹಿಸಿ ಗುರುವರ್ಯ ಸತ್ಯವಿಜಯರು ಧ್ಯಾನದಿಂ ಐದಿದರು ಹರಿಪುರ ಚೈತ್ರ ಕೃಷ್ಣಪುಣ್ಯದಿನ ಏಕಾದಶಿ ದ್ವಾದಶಿಲಿ 21 ಮತ್ತೊಂದು ಅಂಶದಲಿ ಸತ್ಯವಿಜಯ ನಗರಾಖ್ಯ ಕ್ಷೇತ್ರ ಆರಣಿ ಸಮೀಪ ವೃಂದಾವನದೀ ಇದ್ದು ಸೇವಿಸುವ ಸುಜನರಿಗೆ ವಾಂಛಿತ ಒದಗಿಸುತ ಕುಳಿತಿಹರು ಹರಿಧ್ಯಾನ ಪರರು 22 ಸತ್ಯಲೋಕೇಶಪಿತ ಶ್ರೀಪ್ರಸನ್ನ ಶ್ರೀನಿವಾಸ ಪ್ರಿಯ ಸತ್ಯಾಭಿನವತೀರ್ಥ ಕರಕಂಜ ಜಾತ ಕರ ಕಾಯವಾಙ್ಮನದಿ ನಮೋ ಶರಣು ಮಾಂಪಾಹಿ 23
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಸತ್ಯಬೋಧರು ಕುರುಡನಿಗೆ ಕರವಿತ್ತು ಕೈಪಿಡಿದು ಕಾಯೋ ಪ ದೃಢಮತಿಯಿತ್ತು ತವ ಪಾದದಲಿ ಅ.ಪ. ಗರುಡಾರಿ ಭೂಷಣನ ಚರಣದಡಿಯೊಳಗಿದ್ದು ಘನ ತಪವ ಗೈವ ಮಹತ ಪರಿಯೊ 1 ಬೋಧತೀರ್ಥಾರ್ಯರ ಮತಕನುಸರಿಸಿಸದ್ಭಕುತ ಜನಕೆ ಭೇದಗಳ ಬೋಧಿಸುತ ಸತ್ಯಬೋಧಾಖ್ಯಯದೀ ಧರೆಯೊಳಗಮರವೇ 2 ಮ್ಲೇಚಪುರದಲಿ ಕುಳಿತು ಸಂಚಿತಾಗಾಮಿಗಳ ಕೊಂಚಮಾಡುತ ನಿಷ್ಕೆಂಚಿನರ ಪ್ರೀಯಾತಂದೆವರದಗೋಪಾಲವಿಠಲನ ಮಂಚ ಪದನಿಂದ ಪೋಷಿತನಾದ ಪ್ರಭುವೇ 3
--------------
ತಂದೆವರದಗೋಪಾಲವಿಠಲರು
ಶ್ರೀ ಸರಸ್ವತೀ ತಾ ಸುಮತೀ ಭವತೀ ಭಾರತಿ ಪ. ವಾಣೀ ವೀಣಾಪುಸ್ತಕಪಾಣಿ ಪಂಕಜಾಂಘ್ರಿಯುಗೇ ಫಣಿವೇಣಿ ಮಂಜುಳವಾಣಿ ಏಣಾಂಕವದನೆ ಶುಭಗುಣಶ್ರೇಣಿಗೀರ್ವಾಣಿ ಜನನಿ 1 ದೂರೆ ಶುಭ್ರಾಂಬರೆಧಾರೇ ಸಾರಸಭವ ಹೃತ್ಸರಸವಿಹಾರೇ ಧೀರೇ ಚತುರೆ ಕರಪಲ್ಲವ ಚತುರೇ 2 ವರದೇ ರಸನದೆ ನಿಂತವಸರದೇ ಸರಸದಿನುಡಿ ನಿಜಗುಣದಿ ಸೂನೃತೆ ವ್ರತದಿ ವರಶೇಷಾದ್ರಿನಿಕೇತನನಂಘ್ರಿಯ ಮರೆಯದೆ ಭಜಿಸುವೆ ತೆರದಿಂ ಕುಡುವರಮಂ 3
--------------
ನಂಜನಗೂಡು ತಿರುಮಲಾಂಬಾ
ಶ್ರೀ ಸುಬ್ರಹ್ಮಣ್ಯಸ್ತುತಿ ಮಾಮವ ಸುಬ್ರಹ್ಮಣ್ಯ ಹೈವiವತಿಸುತ ಘನಕಾರುಣ್ಯ ಪ ಕಾಮಿತದಾಯಕ ಭೀಮಪರಾಕ್ರಮ ಸಾಮಗಾನಪ್ರಿಯ ಕೋಮಲಕಾಯ ಅ.ಪ ವೇಲಾಯುಧ ಸಂಭ್ರಾಜಿತ ವರದಾ ನೀಲಕಂಠವಾಹನ ಚಿರಸುಖದಾ ಶ್ರೀಲಲಿತಾ ಮನಾಕರ್ಷಿತ ನಾದ [ಬಾಲ]ಕೇರಳಪುರವಾಸ ವಿನೋದ 1 ಭವಭಯನಾಶನ ಪವನ ಷಡಾನನ ರವಿಸಮಲೋಚನ ನವಮಣಿಸದನಾ ಭುವನಮನೋಹರ ಸಾಸಿರವದನಾ ಶಿವಪ್ರಿಯನಂದನ ತಾರಕದಮನಾ 2 ಸಂತನಾನತ ಶಾಂತವಿನೀತ ಸಂತತ ಮಾತಾ ಲಲಿತಾ ಸಹಿತಾ ಚಿಂತಿತಾರ್ಥದಾತಾರಾ ಕೃಪಾಯುತ ಅಂತರಾತ್ಮ ಮಾಂಗಿರಿಪತಿ ಶೋಭಿತ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಸುಮಧ್ವ ವಿಜಯಸ್ಥ ಅಷ್ಟೋತ್ತರ ಶತನಾಮಾವಳಿ ನಮಿಸುವೆ ಜಗದ್ಗುರುಗಳೇ ಪ ಅಮಿತ ಮಹಿಮನ ವಿಮಲ ಪದಪದ್ಮ ತೋರ್ವುದೆಮಗೇ ಅ.ಪ. ಭೂರಿ ವಿಶ್ವ ಭೂಷಣರೇ ಪಾಹಿಮಾಂ ಪಾಹಿ 1 ಪರಿಪೂರ್ಣ ಪ್ರಮತಿಯೇ | ಪುರುಸಂಖ್ಯ ಪೂರ್ಣೇಕ್ಷ ಅರವಿಂದ ಲೋಚನರೆ | ಗುರುಮತ್ಯಮಿತ ಬುದ್ಧಿ ಮರುದಂಶ ಪ್ರಚುರಧೀ | ಪುರು ಕರುಣ ಆಂಬುಧಿಯ ಮೇರೆಯನು ಮೀರಿದವರೆ || ಸರುವಿತ್ ಪೂರ್ಣದೃಕ್ | ಉರುಮತಿಯೆ ಸಕಲಜ್ಞ ಸರುಧೀ ಪೃಥು ಹೃದಾ | ಪುರುಧೀ ಪ್ರಭೂತಧೀಃ ಪರಮ ಆನಂದ ಸತ್ತೀರ್ಥ ಸೂರಿರಾಜಾಧಿ ರಾಜರೆ ಪಾಹಿ ಪಾಹಿ 2 ಫುಲ್ಲ ಬೋಧ ಬಹುಲ ಪ್ರಬೋಧರೇ | ಮಹೀಷ್ಟ ಸುಹೃದಯರೇ ಬಹುಲ ಬೋಧಾಖ್ಯರೇ | ಮಹಾ ಪುರುಷೋತ್ತಮನ ದಾಸರೊಳಧಿಕನೆ ಪಾಹಿ 3 ನಮೊ ನಮೋ ಧೀರಮತಿ | ನಮೊ ಪೃಥೂ ದರ್ಶನರೆನಮೊ ನಮೋ ಸುಖ ತೀರ್ಥ | ನಮೊ ಪೃಥುಲ ಚೇತಾತ್ಮನಮೊ ನಮೋ ಪೃಥುಮತಿಯೆ | ನಮೊ ನಮೊ ಸಮಗ್ರ ಧೀರ್ಸುಸ್ಮಿತೇಂದುಗಳೆ ಪಾಹಿ || ನಮೊ ವಿಪುಲ ಹೃದಯರೇ | ಅಮಂದಧಿಯೆ ಶುದ್ಧಧೀಃ ನಮೊ ನಮೋ ಸುವಿಚಾರ | ನಮೊ ದಾನವರ್ಭೀಮ ನಮೊ ಪುಷ್ಟ ಬುದ್ಧಿಯೇ | ನಮೊ ಪೃಥುಲ ಹರಿ ನಿಗೂಢ ಮೂರ್ತಿಯೆ ಪಾಹಿ ಪಾಹಿ4 ಆನಂತ ಬೋಧಾಖ್ಯ | ಅನೂನ ಬೋಧರು ಎನಿಪಆನಂದ ತೀರ್ಥಾಖ್ಯ | ಅನುಮಾನ ತೀರ್ಥರೇಸ್ವರ್ಣವರ್ಣಾಭಿಧರೆ | ಧನ್ಯ ಪ್ರವರರು ಎನಿಪ ಆದೀನ ಸತುವಾಭಿಧರೆ ||ಅನಂತಧಿಯ ಮಧ್ವ ಸು | ಪೂರ್ಣ ಸಂಖ್ಯ ಧೀರದಿಹನುಮಂತ ಕೃಷ್ಣೇಷ್ಟ | ಪ್ರಾಣೇತ ಪ್ರಾಜ್ಯೇಕ್ಷಆನಮಿಸಿ ಬೇಡ್ವೆ ಸಂ | ಪೂರ್ಣ ಪ್ರಮತಿಯೆ ತವ ಚರಣ ತೋರಿಸಿ ಸಲಹುವುದೂ 5 ಪಾಹ್ಯದ ಭ್ರಮನೀಷ | ಪಾಹಿ ಪ್ರಚುರ ಪ್ರಜ್ಞಪಾಹಿ ವಿಪುಲ ಪ್ರಮತಿ | ಪಾಹಿ ಆಯುತ ಚೇತಪಾಹಿ ಪೃಥು ಪ್ರಬೋಧಾ | ಪಾಹಿ ಪ್ರಬರ್ಹ ಬೋಧಾಖ್ಯರೇ ಪಾಹಿ ಪಾಹಿ ||ಪಾಹ್ಯ ಮಂದಮನೀಷ | ಪಾಹ್ಯದ ಭ್ರಸುಸಂಖ್ಯಪಾಹಿ ಬೃಹತು ಪ್ರಬೋಧ | ಪಾಹ್ಯತಿ ಭದ್ರ ಭಾಷಣಪಾಹ್ಯ ಪೂರ್ವ ಪುರುಷ | ಪಾಹಿ ದಶಧಿಷಣಾರ್ಯಾ ವರ್ಯ ಚರ್ಯರೇ ಪಾಹಿ 6 ಸಿರಿ ಮಾಧವನ | ಗುಣ ಸಾಧಕಾಗ್ರಣಿಯೆ ಪಾಹಿಮಾಂ ಪಾಹಿ ಪಾಹಿ 7 ವಾಸುದೇವ ಪರಿ | ಶಿಕ್ಷಣದಿ ದಕ್ಷನೆನಿಸುವನಿಗೇ ಜಯವಾಗಲಿ ||ಜಯ ಹರಿಗಧಿಷ್ಠಾನ | ಜಯ ಮುಖ್ಯ ಪ್ರತಿ ಬಿಂಬಜಯ ಜಯತುದಾರಮತಿ | ಜಯ ಹರಿದಯಿತ ವರನೆಜಯ ಶ್ರೀ ಮದಾನಂದ | ತೀರ್ಥಾರ್ಯವರ್ಯ ಜಯ ಜಯತು ನಿಮ್ಮ ಪದಗಳಿಗೇ 8 ಮಧ್ವಾಖ್ಯ ಶೃತಿಪ್ರತೀ | ಪಾದ್ಯರೆಂದೆನಿಸುತಲಿಮಧ್ವ ವಿಜಯಾಖ್ಯ ಪ್ರ | ಸಿದ್ಧ ಗ್ರಂಥದಿ ಪೊಳೆವಮಧ್ವಗುರು ತವನಾಮ | ಶಬ್ದಾಖ್ಯ ಮಣಿಗಳಷ್ಟೋತ್ತರದ ಮಾಲೆಯನ್ನೂ ||ಮುದ್ದು ಮೋಹಜ ತಂದೆ | ಮುದ್ದು ಮೋಹರಲಿರುವಮಧ್ವಗುರುವೇ ನಿಮ್ಮ | ಹೃದ್ಗುಹದಲಿರುವಂಥಮುದ್ದು ಗುರುಗೋವಿಂದ | ವಿಠ್ಠಲನಿಗರ್ಪಿಸುವೆ ಉದ್ಧರಿಪುದೆಮ್ಮ ಸತತ 9
--------------
ಗುರುಗೋವಿಂದವಿಠಲರು
ಶ್ರೀ ಹಯಮುಖ ಲಕ್ಷ್ಮೀನಾರಾಯಣ ಶ್ರೀಹರಿಕೇಶವ ನಮೊ ನಮೊಮ'ಸೂರ್ಪುರ ಪ್ರಭುಗುರು ಪರಕಾಲಮಠಸ್ಥಿತಿಧಾಮ ನಮೋ ನಮೋ ಪಮಧುಕೈಟಭದೈತುಲ್ಯ ದೃಂಚನುಹಯ ವದನುಡವೈತಿ' ನಮೋ ನಮೋ'ಧಿಸತಿಶಾರದ ಚಿರಕಾಲಾರ್ಚನ ಕ್ರತಯಾಮೊದಿತ ನಮೋ ನಮೋ 1ಅರಿದರಕರಧರ ಅಬ್ಜ ಸುರವರ ಪುರಹರಾದಿನುತ ನಮೋ ನಮೋಮುರಹರಭವಹರಮುಚುಕುಂದಾವನ ಧರಾಧರಾಧರ ನಮೋ ನಮೋ 2ಶರಸ್ಮರಕುಶಲವ ಶರಕಮಲಜಪಿತ ಸರಸಿಜನಯನ ನಮೋ ನಮೋಪರಮಪುರುಷಸಿರಿಯುರಕೌಸ್ತುಭಮಣಿ ಹಾರಾಲಂಕೃತ ನಮೋ ನಮೋ 4ಘನಗಿರಿಸಂಸ್ಥಾನಾಧಿಪಗುರು ಯಾಗಮಭೂ'ುಜಯುತ ನಮೋ ನಮೋದನರಗ ಶ್ರೀಮದ್ವೇದಾಂತಾರ್ಯಾರ್ಚನಲೊನೈತಿ' ನಮೋ ನಮೋ5ಹಲಕುಲಿಶಾಂಕುಶ ನಳಿನಧ್ವಜಪದ ಜಲರುಹನಾಭಾ ನಮೋ ನಮೋಶ್ರದ್ಧಗಪರಂಪರ ಸೇವಾರ್ಚನ ಗೊನಿ ತದ್ದಾಮೊದಿತ ನಮೋ ನಮೋ 6ಲರೊಧೃವಹಲ್ಯಾಕರ್ವುರಸುತ ಭೂ ಸುರಾದಿದಯಪಾಲ ನಮೋ ನಮೋಶರಣಾಗತಬಿರುದಾಂಕಿತ ಮದ್ಭಯದುರಿತ'ದೂರ ನಮೋ ನಮೋ 7ದೊಡ್ಡಕೃಷ್ಣರಾಜೇಂದ್ರ ಪ್ರಭೃತಿತೀ ಧರಪತಿವಂದಿತ ನಮೋ ನಮೋಸಡ್ಡಗತವಪದ ಸೇವಾರ್ಹುಲು ುೀಶದ್ವಂಶಜಪ ನಮೋ ನಮೋ 8ಸಿರಿಯಭಿನವರಂಗನಾಥ ಯತೀಂದ್ರಸೇವಕಸೇ'ತ ನಮೋ ನಮೋಸರಿತುಲಸೀಗುರುಚರಣಾಶ್ರಿತ ರಂಗಸ್ವಾ'ುದಾಸೊದ್ಧರ ನಮೋ ನಮೋ9
--------------
ಮಳಿಗೆ ರಂಗಸ್ವಾಮಿದಾಸರು
ಶ್ರೀ ಹರಿದಾಸವೃಂದ ಸ್ತೋತ್ರ (ಕೋಲು ಪದ) ಶ್ರೀ ಪುರಂದರದಾಸರು ಪರಮೇಷ್ಟಿ ಪಿತನಾಜ್ಞೆ ಧರಿಸಿ ಬಂದ ವರಸುರ ಮೌನಿಯವತಾರಿ ಕೋಲೆ | ವರಸುರ ಮೌನಿಯವತಾರಿಯಾದ ಪುರಂದರದಾಸರ ಬಲಗೊಂಬೆ ಕೋಲೆ 1 ಶ್ರೀ ವಿಜಯದಾಸರು ಪುಟ್ಟ ಬದರಿಯಲ್ಲಿ ಪುಟ್ಟಿ ಪುರಂದರ ಶ್ರೇಷ್ಟದಾಸರ ದಯಾಪಾತ್ರ ಕೋಲೆ | ಶ್ರೇಷ್ಟದಾಸರ ದಯಪಾತ್ರರಾದ ವಿಜಯ ವಿಠಲದಾಸರ ಬಲಗೊಂಬೆ ಕೋಲೆ 2 ಶ್ರೀ ಗೋಪಾಲದಾಸರು ನಾಗಭೂಷಣಸುತ ನಾಗಾಶ್ಯವಂಶಜ ಭಾಗವತಾಗ್ರಣಿ ಭಾಗಣ್ಣ ಕೋಲೆ | ಭಾಗವತಾಗ್ರಣಿ ಭಾಗಣ್ಣದಾಸರಿಗೆ ಬಾಗಿ ನಮಿಸಿ ಪ್ರಾರ್ಥಿಪೆ ಕೋಲೆ 3 ಶ್ರೀ ಜಗನ್ನಾಥ ದಾಸರು ಬಂದ ಸಹ್ಲಾದನಂಶಜ ಕೋಲೆ | ಬಂದ ಸಹ್ಲಾದನಂಶದ ಮಾನವಿ ಮಂದಿರ ದಾಸರಿಗೆ ವಂದಿಪೆ ಕೋಲೆ 4 ಶ್ರೀ ಪ್ರಾಣೇಶದಾಸರು ಶ್ರೀ ಗುರು ರಂಗವೊಲಿದ ಭಾಗವತರ ಛಾತ್ರ ದಾಗಿ ಶ್ರೀ ಹರಿಯ ಬಣ್ಣಿಸಿ ಕೋಲೆ | ಛಾತ್ರರಾಗಿ ಶ್ರೀಹರಿಯ ಬಣ್ಣಿಸಿದಂಥ ಲಿಂಗ ಸೂಗೂರ ದಾಸರಿಗೆ ವಂದಿಪೆ ಕೋಲೆ 5 ಪ್ರಾಣೇದಾಸರ ಸೂನುವೆನಿಸಿದ ಮಾನವಿ ರಾಯರ ಸೇವಿಸಿ ಕೋಲೆ | ಮಾನವಿ ರಾಯರ ಸೇವಿಸಿದಂಥ ಗುರು ಪ್ರಾಣೇಶದಾಸರ ಬಲಗೊಂಬೆ ಕೋಲೆ 6 ಶ್ರೀ ಶ್ರೀಶಪ್ರಾಣೇಶದಾಸರು ಗಂಧದ ಕೊರಡು ಪೆಟ್ಟು ತಿಂದು ಮಾವಂದಿರಿಂದ ಛಂದಾಗಿ ತತ್ವವರಿದಂಥ ಶ್ರೀ ರಘು | ನಂದನ ದಾಸರಿಗೆ ವಂದಿಪೆ ಕೋಲೆ 7 ಶ್ರೀ ಶೇಷದಾಸರು ಇಳೆಯೊಳು ಚಿಂತರವೇಲಿ ವಾನರೇಂದ್ರನ ಸಲೆ ಸೇವಿಸುತ ವಲಿಸಿದ ಕೋಲೆ | ಸಲೆ ಸೇವಿಸುತ ವಲಿಸಿದ ಗುರು ಪ್ರಥಮ ಶಿಲೆ ಶೇಷದಾಸರ ಬಲಗೊಂಬೆ ಕೋಲೆ 8 ಪಾರ್ಥಿವ ವರ್ಷದಿ ಪಾರ್ಥಸಾರಥಿ ಭವ್ಯ ಮೂರ್ತಿಯ ಮುದದಿ ಸ್ಥಾಪಿಸಿ ಕೋಲೆ | ಮೂರ್ತಿಯ ಮುದದಿ ಸ್ಥಾಪಿಸಿದಂಥ ಪೂರ್ವ ಪಾರ್ಥಾಹಿಪಾರ್ಯರ ಪ್ರಾರ್ಥಿಪೆ ಕೋಲೆ 9 ಪರಿವಾರ ಸಹಿತ ಚರಿಸುತ ಕೋಲೆ | ಪರಿವಾರ ಸಹಿತ ಚರಿಸುತ ಅಸಿಘ್ಯಾಳು ಪುರವಾಸ ದಾಸರಿಗೆ ಶರಣೆಂಬೆ ಕೋಲೆ 10 ಶ್ರೀ ಗುರು ಜಗನ್ನಾಥದಾಸರು ಸ್ವಾಮಿರಾಯರ ವಲಿಸಿ ಸ್ವಾಮಿರಾಯನಿಗೊಲಿದು ಸ್ವಾಮಿ ಶ್ರೀಹರಿಯ ಮಹಿಮೆಯ ಕೋಲೆ ಸ್ವಾಮಿ ಹರಿಯ ಮಹಿಮೆ ಪೇಳಿದ ಕೋಸಿಗಿ ಸ್ವಾಮಿರಾಯಾರ್ಯರ ಬಲಗೊಂಬೆ ಕೋಲೆ 11 ಶ್ರೀ ಇಂದಿರೇಶದಾಸರು (ತಿರುಪತಿ ಶ್ರೀ ಹುಚ್ಚಾಚಾರ್ಯರು) ಅಚ್ಭ ಸದ್ಭಕ್ತಿಯಲಿ ಅಚ್ಯುತಕೃಷ್ಣನ ಅರ್ಚಿಸಿ ವಿಧ ವಿಧ ಮೆಚ್ಚಿಸಿ ಕೋಲೆ | ಅರ್ಚಿಸಿ ವಿಧ ವಿಧ ಮೆಚ್ಚಿಸಿದಂಥ ಜ್ಞಾನಿ ಹುಚ್ಚಾಚಾರ್ಯರನ ಬಲಗೊಂಬೆ ಕೋಲೆ 12 ಶ್ರೀ ಭೀಮಸೇನಾಚಾರ್ಯರು ಕೊಪ್ಪರ ಶ್ರೀಮತ್ ಕಾರ್ಪರಕ್ಷೇತ್ರಧಾಮ ನರಸಿಂಹನ ನೇಮ ಪೂರ್ವಕದಿ ಪೂಜಿಸಿ ಕೋಲೆ | ನೇಮ ಪೂರ್ವಕದಿ ಪೂಜಿಸಿದಂಥ ಪೂಜ್ಯ ಭೀಮಸೇನಾರ್ಯಋ ಬಲಗೊಂಬೆ ಕೋಲೆ 13 ಶ್ರೀ ರಾಘಪ್ಪದಾಸರು ಮರುತನ ಪ್ರತ್ಯಕ್ಷಗೈದು ತನ್ನ ಗುರುತು ತೋರದೆ ಚರಿಸಿದ ಕೋಲೆ | ಗುರುತು ತೋರದೆ ಚರಿಸಿದ ರಘುಪತಿ ಚರಣ ಕಿಂಕರಗೆ ಶರಣೆಂಬೆ ಕೋಲೆ 14 ನೂರಾರು ಶಿಷ್ಯಪರಿವಾರ ಸಹಿತರಾಗಿ ಶೌರಿಕಥಾಮೃತ ಸವಿಯುತ ಕೋಲೆ | ಶೌರಿಕಥಾಮೃತ ಸವಿದಂಥ ಶ್ರೀ ರಘುವೀರನ ದಾಸರಿಗೆ ನಮಿಸುವೆ ಕೋಲೆ 15 ಗೋವಿಂದದಾಸರ ಭಾವಕ್ಕೆ ಮೆಚ್ಚಿ ದೇವನ ಮಹಿಮೆ ತೋರಿದ ರಾಘವಾಖ್ಯ ಕೋವಿದರಾಗ್ರಣಿಯ ಬಲಗೊಂಬೆ ಕೋಲೆ 16 ಶ್ರೀ ಗೋವಿಂಧದಾಸರು ಎಳೆಯತನದಿ ವಿದ್ಯ ಕಲಿಯದೆ ಹರಿನಾಮ ಬಲದಿಂದ ಜ್ಞಾನಿಗಳಿಸಿದ ಕೋಲೆ | ಬಲದಿಂದ ಜ್ಞಾನಗಳಿಸಿ ಅಸಿಷ್ಯಾಳು ನಿಲಯ ದಾಸರಿಗೆ ವಂದಿಪೆ ಕೋಲೆ 17 ಮಾವನ ವೈರಿಯಾದ ಮಾವರನ ಮನದಿ ಮಾವನನಂತೆಂದು ಭಾವಿಸಿ ಕೋಲೆ | ಮಾವನಂತೆಂದು ಭಾವಿಸಿ ಸ್ತನಿಸಿದ ಗೋವಿಂದದಾಸರ ಬಲಗೊಂಬೆ ಕೋಲೆ 18 ಬಂದ ವಿಪ್ರರಿಗೆ ಸಂದರುಶನದಿಂದ ವಂದಿಸಿ ಪರಮಾನಂದವ ಬಡು ಗೋ ವಂದಿಸಿ ದಾಸರಿಗೆ ವಂದಿಪೆ ಕೋಲೆ 19 ಲೇಸು ಭಕ್ತಿಯಿಂದ ದಾಸರ ಕವನ ಸುಧೆ ಪ್ರಾಶನಗೈದು ಸಂತತ ಕೋಲೆ | ಪ್ರಾಶನಗೈದು ಸಂತತ ಅಶಿಷ್ಯಾಳು ವಾಸದಾಸರಿಗೆ ಶರಣೆಂಬೆ ಕೋಲೆ 20 ಜಾಗರ ಶಿಷ್ಯ ಶ್ರೀ ಐಕೂರಾಚಾರ್ಯರು ಏಕಾಂತದಲಿ ಕುಳಿತು ಶ್ರೀಕಾಂತನ್ನ ವಲಿಸಿ ಲೋಕಾಂತರದಲಿ ಚರಿಸಿದ ಕೋಲೆ | ಲೋಕಾಂತರದಲಿ ಚರಿಸಿದ ನಮ್ಮಗುರು ಐಕೂರಾಚಾರ್ಯರಿಗೆ ಶರಣೆಂಬೆ ಕೋಲೆ 21 ಹುಟ್ಟಿದು ಒಂದೂರು ಮೆಟ್ಟಿದ್ದು ಬಹು ಊರು ಕಟ್ಟ ಕಡೆಯಲಿ ಹರಿಯೂರು ಕೋಲೆ | ಕಟ್ಟ ಕಡೆಯಲ್ಲಿ ಹರಿ ಊರು ಸೇರಿದಂಥ ಶ್ರೇಷ್ಟ ಸದ್ಗುರುಗಳ ಬಲಗೊಂಬೆ ಕೋಲೆ 22 ಹಾದಿ ಇದೆಂದು ಬೋಧಿಸಿದಂಥ ನಮ್ಮ ಮಾಧವೇಶಾಚಾರ್ಯರ ಬಲಗೊಂಬೆ ಕೋಲೆ 23 ಚತುರ ವಿಂಶತಿ ವರನುಡಿಗಳಿಂದೆಸೆಯುವ ರತುನ ಹಾರದ ಕೋಲುಪದ ಕೋಲೆ | ರತುನ ಹಾರದ ಕೋಲುತದ ನಿತ್ಯಪರಿಸುವರಿಗೆ ಶಾಮಸುಂದರವಿಠಲ ಮುದವೀವÀ ಕೋಲೆ 24
--------------
ಶಾಮಸುಂದರ ವಿಠಲ
ಶ್ರೀ ಹರಿಸ್ತುತಿ ಶ್ರೀ ರಮಾಧವ ವಾರಿಜನೇತ್ರ | ಪುರಾರಿಯ ಸಖ ಪಾಹಿಮಾಂ ಪ ವಿಗಡ ವಿಪ್ರನಾದಾ ಕ್ಷತ್ರಿಯರುಗಳ ಶಿರವ ಕಡಿದಾ ಜಲಧಿಯ ದಿಗಂಬರನೆನಿಸಿ ತುರಗವೇರಿದ ಕಲ್ಕ್ಯ ಶ್ರೀ ರಮಾಧವ 1 ಜವದಿ ಬೆತ್ತಲೆಯಾಗಿ | ಹವಣಿಸುತೋಡಿದ ಶ್ರೀರಮಾಧವ 2 ಜಲಚರ ಕೂರ್ಮಭೂವಲಯವೆತ್ತುತ ಕಂಭ | ಚೆಲುವ ಪಾವಂಜೇಶ ಗೆಳೆಯದಾಸರ ರಕ್ಷ ಶ್ರೀ ರಮಾಧವ 3
--------------
ಬೆಳ್ಳೆ ದಾಸಪ್ಪಯ್ಯ
ಶ್ರೀಕರಾರ್ಚಿತ ರಂಗನಾಥ ಜಗದೇಕನಾಥ ಪ. ಪಾಕಶಾಸನವಂದ್ಯ ಪರಮ ಕಾರುಣ್ಯನಿಧಿ ಜೋಕೆಯಿಂ ಭಕ್ತರನು ರಕ್ಷಿಸಲು ಬಂದೆಯೊ ಅ.ಪ. ಸಿರಿ ಆಲದೆಲೆಯ ಮೇ- ಲೊಂದು ಬೆರಳನೆ ಚೀಪುತ ಮುಂದೆ ಶೇಷಶಯನನಾಗಿ ಬ್ರಹ್ಮನ ಪಡೆದು ಮಂದಹಾಸದಿ ನಲಿಯುತ ಇಂದಿರೆ ಸಹಿತಲಿರೆ ಭಕ್ತರೆಲ್ಲರು ಆಗ ನೋಡಲಿಲ್ಲೆಂದೆನುತ ಇಂದು ಈ ನಾಗರಾಜನ ಮಂಚವನೆ ಏರಿ ಸಿಂಧುಶಯನನೆ ಮಲಗಿದ್ಯಾ ಸ್ವಾಮಿ 1 ಅಜಗೆ ವೇದವನಿತ್ತು ಅಸುರನ್ನ ಕೊಂದು ನೀ ಭುಜಗಶಯನನೆ ಮಲಗಿದ್ಯಾ ಋಜುಗಣವಂದಿತನೆ ಬೆನ್ನಲಿ ಗಿರಿಪೊತ್ತ ಆಯಾಸದಿಂ ಮಲಗಿದ್ಯಾ ದ್ವಿಜಧ್ವಜನೆ ಭೂಮಿಯನು ಮೇಲೆತ್ತಿ ತಂದು ಸಾಕಾಗಿಲ್ಲಿ ಶಯನಿಸಿದೆಯಾ ಭಜಿಸಿದ ಬಾಲಕನ ಪಿತನೊಡನೆ ಕಾದಾಡಿ ಬಳಲಿ ನೀ ಪವಡಿಸಿದೆಯಾ ಸ್ವಾಮಿ 2 ಇಂದ್ರ ಪದವಿಗೆ ಬಂದ ಬಲೀಂದ್ರನ ನೆಲಕೊತ್ತಿ ಬಂದಿಲ್ಲಿ ಮಲಗಿಪ್ಪೆಯಾ ಕೊಂದು ಜನನಿಯ ಚಿಂತೆಯಿಂದ ಮನದಿನೊಂದು ಬಂದಿಲ್ಲಿ ಮಲಗಿಪ್ಪೆಯಾ ತಂದೆ ತಾಯಿ ಆಜ್ಞೆಯಿಂದ ಅಡವಿಯ ಅಲೆದು ಬಂದಿಲ್ಲಿ ಮಲಗಿಪ್ಪೆಯಾ ಮಂದರೋದ್ಧರ ಶ್ರೀಶ ಮಾವನ್ನ ಕೊಂದು ನೀ ಬಂದಿಲ್ಲಿ ಪವಡಿಸಿದೆಯಾ ಸ್ವಾಮಿ 3 ನಾರಿಯರ ವ್ರತ ಕೆಡಿಸಿ ನಾಚಿಕೆಯಿಂ ಬಂದು ಏರಿ ಮಂಚವÀ ಮಲಗಿದ್ಯಾ ಏರಿ ಕುದುರೆಯನು ದುಷ್ಟರ ಶಿರವ ತರಿಯುತ್ತ ಸೇರಿ ಶೇಷನ ಮಲಗಿದ್ಯಾ ಬಾರಿ ಬಾರಿಗೆ ಇಂಥ ಕಾರ್ಯಗಳ ಮಾಡಿಸಿ ಬಳಲಿಲ್ಲಿ ಮಲಗಿಪ್ಪೆಯಾ ನಾರದಾದ್ಯರ ಗಾನ ಕೇಳುತಾನಂದದಿಂ ನಿದ್ರೆಗೈಯುತ ಮಲಗಿದ್ಯಾ ಸ್ವಾಮಿ 4 ಭಕ್ತ್ರರಾಡುವ ಸಲಿಗೆ ಬಿನ್ನಪಕೆ ಬ್ಯಾಸತ್ತು ಯುಕ್ತಿಯಿಂ ಪವಡಿಸಿದೆಯಾ ಮುಕ್ತರ ಸ್ತುತಿಗೆ ನಿದ್ರೆಯು ಬಾರದೆಂತೆಂದು ಮುಕ್ತೇಶ ಇಲ್ಲಿ ಮಲಗಿದೆಯಾ ಎತ್ತ ನೋಡಲು ಮಾರ್ಗಬಿಡಳು ಕಾವೇರಿ ಎಂದು ಸೋತಿಲ್ಲಿ ಮಲಗಿಪ್ಪೆಯಾ ಚಿತ್ತಜಾಪಿತ ಸ್ವಾಮಿ ಭಕ್ತರೆಬ್ಬಿಸಲೆಂದು ಚಿತ್ತದಲಿ ಇಪ್ಪದೇನೋ ದೇವ 5 ಅಸುರರ ಕಾಟ ವೆಗ್ಗಳವಾಗೆ ಬಂದಿಲ್ಲಿ ಅಡಗಿ ನೀ ಮಲಗಿಪ್ಪೆಯಾ ಬಿಸಜನಾಭನೆ ನಿನ್ನ ಬಗೆಯರಿತು ಎಬ್ಬಿಸುವ ಬಲವಂತರನ್ಯಾರೆಲೊ ಶಶಿವದನ ಭಕ್ತರನುದ್ಧರಿಸಲೋಸುಗದಿ ಬಂದಿಲ್ಲಿ ಮಲಗಿಪ್ಪೆಯಾ ಭವ ಬಂಧನವ ಪರಿಹರಿಸಿ ಘಸನಗೊಳಿಸದಲೆ ಕಾಯೊ ಜೀಯ 6 ಏಳು ಫಣೆಯ ಸರ್ಪನ ಮೇಲೆ ಮಲಗಿ ಏಳು ಕಣ್ದೆರದು ನೋಡೋ ತಾಳಲಾರೆನೊ ನಿನ್ನ ಸೇವೆಯಗಲಿದ ದುಃಖ ಏಳು ಮನ್ನಿಸಿ ಪಾಲಿಸೊ ವ್ಯಾಳಶಯನನೆ ನಿನ್ನ ಸೇವೆಯನು ಎನ್ನಿಂದ ಲೀಲೆಯಿಂ ಸ್ವೀಕರಿಸೆಲೊ ಭಾಳ ಬೇಡುವದೇನೊ ಗೋಪಾಲಕೃಷ್ಣವಿಠ್ಠಲ ಈ ವ್ಯಾಳೆ ಎನ್ನ ಸಲಹೊ ಸ್ವಾಮಿ 7
--------------
ಅಂಬಾಬಾಯಿ
ಶ್ರೀಕರಾರ್ಚಿತ ವಿಠಲ | ಸಾಕ ಬೇಕಿವಳಾ ಪ ವಾಕು ಮನ್ನಿಸುತಾ ಅ.ಪ. ಕಂಸಾರಿ ತವಪಾದಪಾಂಸು ಸೇವಾ ಸಕ್ತೆ | ಸಂಶಯ ನಿರಹಿತಾಅಂಶ ಆವೇಶ ಅವ | ತಾರಗಳ ತಿಳಿಸುತಲಿಶಂಸನದಿ ತವನಾಮ | ಸಂಪ್ರೀತನಾಗೊ 1 ದುಷ್ಕರ್ಮಗಳ ಭಾದೆ | ದೂರಾಗುವಂತೆಸಗೊನಿಷ್ಕಾಮ ಕರ್ಮಕ್ಕೆ | ಮಾರ್ಗವನೆ ತೊರೋ |ಶುಷ್ಕ ಆಚಾರಗಳ | ತ್ಯಜಿಸುತ್ತ ತವನಾಮಅಕ್ಕರದಿ ಭಜಿಪಂಥ | ಚೊಕ್ಕಮನವೀಯೊ 2 ಶರ್ವವಂದ್ಯನೆ ದೇವ | ತವನಾಮ ಸಂಸ್ಕøತಿಯಸರ್ವದಾ ಸರ್ವತ್ರ | ಇವಳಿಗೊದಗಿಸುತಾಭವವನದಿ ಉತ್ತರಿಸೊ | ಭವರೋಗ ಭೇಷಜನೆದರ್ವಿಜೀವಿಯ ಕಾಯೊ | ಪವನಂತರಾತ್ಮ 3 ಸೃಷ್ಟಾದಿಕರ್ತನೇ | ಸುಗುಣಮೂರುತಿ ದೇವಕಷ್ಟಂಗಳ ಪರಿಹರಿಸಿ | ಕಾಪಾಡೊ ಹರಿಯೇಕೃಷ್ಣಮೂರುತಿ ದೇವ | ಕಾರುಣ್ಯ ಸಾಗರನೆಸುಷ್ಠಮನ ನಿಲಿಸೊ ತವ | ಚರಣದೊಳು ಹರಿಯೆ 4 ಸೂಚಿಸಲು ತೈಜಸನು | ಯೋಚನೆಯ ಕೈಕೊಂಡುವಾಚಿಸಿಹೆ ಅಂಕಿತದಿ | ದಾಸ ಸದ್ವೀಕ್ಷಾ |ಮೋಚ ಕೇಚ್ಛೆಯ ಮಾಡಿ | ಕೈಪಿಡಿಯೊ ಈಕೆಯನುಖೇಚರಾಂತಕ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಶ್ರೀಕಾಂತನನ್ನೊಲಿಸುವಾ ಬಗೆಯಾನೊರೆವೆ ಮಾನವ ಪ. ಶ್ರೀಕರಗುಣಯುತ ಪಾಕಶಾಸನವಿನುತ ಲೋಕೈಕ ವೀರನನ್ನೊಲಿಸುವಾ ತೆರನ ಪೇಳ್ವೆನಾಲಿಸು ಅ.ಪ. ಶಕ್ತಿ ಸಾಹಸಗಳಿಗೆ ಸೋಲುವನಲ್ಲ ರಕ್ಕಸಾಂತಕಮಲ್ಲ ಯುಕ್ತಿಮಾರ್ಗಕೆ ಮನವ ಸಿಲುಕಿಪನಲ್ಲ ಭಕ್ತವತ್ಸಲ ಸಿರಿನಲ್ಲ ವಿತ್ತ ಮೂಲಕದಿಂದ ಚಿತ್ತ ಚಲಿಸುವುದಲ್ಲ ಮುಕ್ತಿದಾಯಕನ ಮೆಚ್ಚಿಸಲ್ ವಿರಕ್ತಿಯಿಂ ಫಲವಿಲ್ಲ [ಮತ್ತ] ಖಿಲಾಂಡಕೋಟಿ ಬ್ರಹ್ಮಾಂಡನಾಯಕನ ಮೆಚ್ಚಿಸಲ್ ಭಕ್ತಿಯೊಂದೇ ಉತ್ತಮೋಪಾಯ ಕೇಳೆಲೈ1 ದೃಢದಿ ಶೈಶವದೊಳೇ ಅಡವಿಯನಾರಯ್ಯುತೆ ಪೊಡವೀಶನಡಿಗಿತ್ತ ತೊಡವಾವುದದ ಪೇಳ್ ಕಡು ಭಕ್ತನಾ ವಿದುರ ಪಡೆದನಸುರಾರಿಯಾಲಿಂಗನದ ಸುಖಮಂ ಮಡದಿಮಣಿ ಪಾಂಚಾಲಿ ಪಡೆದಳಕ್ಷಯಪ್ರದಾನಮಂ ತಡೆಯೇನು ಪೇಳಾ ಪರಮಾತ್ಮನೊಲ್ಮೆಗಿನ್ನು ದೃಢಭಕ್ತಿಗಿಂ ಮಿಗಿಲು ತೊಡವಾವುದಿರ್ಪುದೈ 2 ದಾನವವಂಶದಲಿ ಜನಿಸಿದನಾ [ಸು]ಜ್ಞಾನಿ ಪ್ರಹ್ಲಾದನು ಸಾನುರಾಗದಿ ಹರಿಯ ಭಕ್ತಿಯಿಂ ಧ್ಯಾನಿಸೆ ಕಂಬದಿಂ ನುನಿಸಿಯಾಕ್ಷಣದಲ್ಲಿ ಮನುಜಕೇಸರಿಯಾಗಿ ಘನದಾಕೋಪವನು ತಾಳಿ ದನುಜನ ಉರವ ಸೀಳಿ ಮನ್ನಿಸುತೆ ಭಕ್ತನಂ ನನ್ನಿಯಿಂ ಮೈದಡಹಿ ಉನ್ನತೋನ್ನತ ಪದವನಿತ್ತನಾಖಲಕುಠಾರಿಶೌರಿ ಮುನ್ನ ಭಕ್ತಿಯಿದುವೇ ಮುಖ್ಯಸಾಧನ ಕೇಳೈ 3
--------------
ನಂಜನಗೂಡು ತಿರುಮಲಾಂಬಾ