ಒಟ್ಟು 9531 ಕಡೆಗಳಲ್ಲಿ , 132 ದಾಸರು , 5434 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲೋಕನೀತಿ 1 ಕಾಮಧೇನು ಕಲ್ಪತರು ಕಾಮಿತಾರ್ಥವನೀವ ಹರಿಯೇ ಎನಗಿರೆ ಎನಗ್ಯಾತಕೆ ಚಿಂತೆ ಕಾಮಿತಾರ್ಥವನೀವ ದೊರೆಯಿರಲು ಯನಗ್ಯಾತರ ಕೊರೆತೆ ಹರಿಕಾವದೇವ ನೀನಿರಲು ಕೋಳಿ ತನ್ನ ಮರಿಗೆ ಹಾಲುಕೊಟ್ಟು ಸಾಕುವದೆ ಕಾಳ ರಾತ್ರಿಯು ಕಳೆದು ಹರಿ ಉದಿಸುವನೆಂದು ಕೋಳಿಕೂಗಿದರೂ ಏಳದೆ ಮಲಗಿ ಕಾಲಕಳೆವರು ಮನುಜರುಹರಿಯೆ ಕಾಲಕೂಟ ಸಮ ಕಾಮಿತಾರ್ಥವ ಬೇಡುವರು ಕಾಲದೂತರು ಬರುವ ವ್ಯಾಳೆತನಕ ನಿನಧ್ಯಾನಿಸದೆ ಕಾಲಕಳೆವರು ಮನುಜರು ಕಾಲಮೂರುತಿ ನೀನೆ ಎಂದರಿಯರು ಹರಿ ಕಾಲ ಅಕಾಲ ನಿನಗುಂಟೆ ಎನಗುಂಟೆ ದೇವ ನೀ ಎನಗೆ ಇಂಥಾ ಕೀಳು ಬುದ್ಧಿಯ ಕೊಡದಿರೊ, ಏಳು ಬೆಟ್ಟದ ಒಡೆಯ ಶ್ರೀ ಶ್ರೀನಿವಾಸ 2 ಬೆಳಗೆದ್ದು ಹರಿ ನಿನ್ನ ಧ್ಯಾನಿಸದೆ ಪರಧ್ಯಾನ ಪರನಿಂದೆಯಲ್ಲಿಹರು ನಿತ್ಯ ನಿನ್ನ ಧ್ಯಾನ ಬಿಟ್ಟು ಬೆಳಗಾಗೆ ನಿನ್ನ ಸೂರ್ಯರಶ್ಮಿ ಬಿದ್ದರೂ ಏಳರು ಶಯನ ಬಿಟ್ಟು ಈ ಜಗದಿ ದೇವ ಈ ಕಲಿ ಜನರು ಇಂಥಾ ಬೆಳಗ ಎನಗೀಯದೆ ನೀ ಎನ್ನೊಳಗಿದ್ದು ಬೆಳಗಿನ ಜಾವದಿ ನಿನ್ನ ಕಳೆಕಳೆರೂಪ ಎನಗೆ ತೋರೋ ಘಳಿರನೆ ಶ್ರೀ ಶ್ರೀನಿವಾಸ 3 ಎರಡನೆ ಜಾವದಲಿ ಹುಂಜ ಹರಿಪೂರ್ವದಲಿ ಬರುವ ಏಳಿರೆಂದು ಕೂಗಲು ಸತಿ ಸಹಿತ ಕಾಮಕೇಳಿಯಲಿಹರು ಮೂರನೆ ಝಾವದಲಿ ಹರಿ ಉದಿಸಿ ಬ್ರಾಹ್ಮೀಮುಹೂರ್ತದೊಳು ಹರಿ ಬೆಳಕೀವ ಲೋಕಕೆ ಎಂದು ಕೂಗುವುದು ಕೋಳಿ ಕೇಳಿ ಕರ್ಣದಲಿ ಶಯನ ಬಿಟ್ಟೇಳರೊ ಈ ಜಗದಿ ಮೂರೆರಡು ಶತಶ್ವಾಸ ಜಪ ಮಾಡಿಸುವ ಹರಿಭಕ್ತ ಹನುಮನೆಂದರಿಯದೆ ಮಲಗಿ ಕಾಲ ಎರಗಿ ಬರುವುದು ಆಯುಷ್ಯವೆಂದರಿಯದೆ ಭಾರತೀಪತಿ ಅಂತರ್ಯಾಮಿ ನಿನ್ನಧ್ಯಾನಿಸದೆ ಇಹರಲ್ಲೋ ಈ ಜಗದಿ ಶ್ರೀ ಶ್ರೀನಿವಾಸ ಎನ್ನ ನೀನವರ ಸಂಗ ಸೇರಿಸದೆ ಕಾಯೊ ಹರಿಯೆ ಎನ್ನ ದೊರೆಯೆ 4 ಸೂರ್ಯನಂತರ್ಯಾಮಿ ನೀನಲದೆ ಮತ್ಯಾರಿಹರು ಹರಿ ಸೂರ್ಯಾಂತರ್ಗತ ಸೂರ್ಯನಾರಾಯಣ ಸೂರ್ಯಕೋಟಿ ತೇಜದಿ ಮೆರೆವೆ ಸೂರ್ಯ ಸಹಸ್ರ ಉದಿಸಿದಂತೆ ಬರುವೆ ಕರ್ಮ ನೀ ಮಾಡಿಸಿ ಪೆರ್ಮೆಯಿಂದವರ ಕಾಯ್ವ ಶರ್ವಾದಿವಂದಿತ ಗರ್ವರಹಿತ ವೈಕುಂಠಪತಿ ನೀ ನಿನ್ನವರ ಕಾಯಲು ಸರ್ವದಾ ಅವರಿಗೆ ವಲಿದು ಕಾವೆ ಆದಿನಾರಾಯಣ ಶ್ರೀ ಶ್ರೀನಿವಾಸ ಕಾಯೆನ್ನ ಸೂರ್ಯಾಂತರ್ಗತ ವೆಂಕಟೇಶಾ 5 ಹಗಲಿರುಳು ಎನ್ನದೆ ನಿನ್ನ ಸ್ತುತಿಪರು ಭಕ್ತರು ಅಘಹರನೆ ನಿನ್ನ ಪ್ರೇರಣೆಯಿಂದಲವರಿರಲು ಬಗೆಬಗೆಯ ರೂಪದಿ ಬಂದವರ ಸಲಹುವೆ ನಗೆ ಮೊಗದ ಶ್ರೀ ರಮೆಯರಸ ಲಕ್ಷ್ಮೀಶ ನಿನ್ನ ಬಗೆ ಅರಿತಿಹರಾರಿರೀಜಗದಿ ಪಗಲಿರುಳೆನ್ನದೆ ನೀನವರಲ್ಲಿದ್ದು ಸಲಹಲು ಬಗೆವರೆ ಅನ್ಯರಿಗೆ ಅಲ್ಪರಿವರೆ ನಿನ್ನವರು ಜಗದಾಖ್ಯ ವೃಕ್ಷನೀನಿರಲು ನಿನ್ನ ಭಕ್ತರು ನಿನಗಲ್ಲದೆ ಜಗದೊಡೆಯ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಲೋಕನೀತಿ ಅಂತರಂಗದ ರೋಗ ಯಾವುದು ಅದುಚಿಂತೆಯಲ್ಲದೆ ಮತ್ತ್ಯಾವುದು ಪ. ಸಂತತ ಶ್ರೀಹರಿನಾಮದಿಂದ್ಹೋಹುದುಅಂತ್ಯಕೊದಗಿತಜಮಿಳನಿಗಿನ್ನಾವುದು ಅ.ಪ. ಶ್ರವಣ ಮನನ ಸಾಧನ ನವವಿಧಭಕ್ತಿಭವಬೇರ ಕಡಿವುದೆಂದರಿಯಬೇಕುರವಿಕುಲಾಂಬುಧಿಸೋಮ ರಾಮನ್ನ ಚಿಂತಿಸಿಭವವಾರಿಧಿಯ ದಾಟುವರೆಲ್ಲರು ಕೇಳಿ 1 ಜರಾಮರಣಾದಿ ದುಃಖಗಳ ಪರಿಹರಿಸಿಪರಿಪರಿಯಾನಂದ ಕೊಡುವುದಿದುಮರೆಯದೆ ಮನದಲಿ ಒಮ್ಮೆ ನೆನೆದು ಪಾಡೆಸರುವಾಭೀಷ್ಟವ ಕೊಡುವುದಿದೊಂದೆವೆ 2 ಭಯಗಳ ಬಿಡಿಸಿ ಅಭಯಗಳ ಕೊಡಿಸುವಭವದೂರ ಗೋವಿಂದನೆಂದರಿತುಹಯವದನನೆ ಎನ್ನ ಉದ್ಧರಿಸೊ ಎಂದುನಯದಿಂದ ಬೇಡುವರ ಭಾಗ್ಯವೆ ಭಾಗ್ಯ 3
--------------
ವಾದಿರಾಜ
ಲೋಕನೀತಿ ಇತ್ತಿತ್ತ ಬಾರೆಂದು ಕರೆಯುವವರಿಲ್ಲದಿರೆ ವ್ಯರ್ಥವಲ್ಲವೆ ಜನ್ಮವು ಪ. ಅತ್ತತ್ತ ಹೋಗೆಂಬ ನುಡಿ ಕೇಳಿ ಜಗದೊಳಗೆ ಮತ್ತೆ ಇರಬಹುದೆ ಹರಿಯೆ ಅ.ಪ. ಆರಿಗಾರಾಗುವರೊ ಪ್ರಾರಬ್ಧ ನೀಗದಲೆ ಶೌರಿ ದಾರಿಯ ತೋರನು ಈ ರೀತಿಯರಿತು ಹೇ ದುರ್ಮನವೆ ನರಹರಿಯ ಆರಾಧನೆಯನೆ ಮಾಡೊ 1 ಏಕಾದಶ್ರೇಂದ್ರಿಯವ ಶ್ರೀ ಕಳತ್ರನೊಳಿಟ್ಟು ಏಕ ಮನದಲ್ಲಿ ಭಜಿಸು ಏಕೆ ತಲ್ಲಣಿಸುವೆ ಶೋಕಕ್ಕೆ ಒಳಗಾಗಿ ನೂಕು ಭವತಾಪ ಜಗದಿ 2 ಗೋಪಾಲಕೃಷ್ಣವಿಠ್ಠಲನೆ ಗತಿ ಎಂತೆಂದು ಈ ಪರಿಯಿಂದ ಭಜಿಸು ಶ್ರೀ ಪರಮ ಕಾರುಣ್ಯ ಗುರುಗಳಂತರ್ಯಾಮಿ ತಾಪ ಹರಿಸುವನು ಭವದಿ 3
--------------
ಅಂಬಾಬಾಯಿ
ಲೋಕನೀತಿ ಇರಬೇಕು ಇದ್ದರು ಇಲ್ಲದಿರಬೇಕು ಪ ಹರಿಯಲ್ಲಿ ಮನವಿಟ್ಟು ತೊರೆದು ಮಮತೆ ಭವದಿ ಅ.ಪ. ಪರದೈವ ಹರಿಯೆಂದು ದೃಢದಿಂದಲಿರಬೇಕು ಗುರುವಾಯು ಸರಿಯೆಂದು ಗುರುಭಕ್ತಿಮಾಡಬೇಕು ಹರಿಯ ಕರುಣ ವಿಲಾಸದಿಂದಲಿ ವೈರಿ ವೃಂದವ ಸ್ಮರಿಸಿ ಸ್ಮರಿಸುತ ಕ್ರಮದಿ ಬಿಂಬನ ಪರಮ ಸುಖದಿಂ ಜ್ಞಾನ ಘಳಿಸುತ 1 ತಿಳಿಯಬೇಕೊ ವಿದ್ಯೆ ತುಳಿಯಬೇಕಾವಿದ್ಯೆ ಬೆಳಿಸಬೇಕು ಭಕ್ತಿ ಹಳಿಯಬೇಕು ಹಂಮದ ನಳಿನ ನಯನನ ಆಳುವೆಂಬುದ ತಿಳಿದು ತವಕದಿ ದೊರೆಯ ತೊಳಳಿಬಳಲಿದೆ ಬಹಳ ವುದರಕೆ 2 ಹರಿಯಿತ್ತದುಣಬೇಕು ಸಮಚಿತ್ತವಿರಬೇಕು ಹರಿಗಿತ್ತುಮಣಿಬೇಕು ಧೊರೆ ಚಿತ್ತವೆನಬೇಕು ಪರರ ಬೇಡದೆ ಬಿಡುತ ಹರಿಯನು ಸಿರಿಗುಪ್ರೇರಕ ವಿಷ್ಣುವೆನ್ನುತ ಹಿರಿಯರಕರುಣ ಪಡೆಯುತ 3 ಮಂತ್ರಸಿದ್ಧಿಯು ಬೇಕು ತಂತ್ರ ವೃಂದವು ಬೇಕು ಯಂತ್ರವಾಹಕ ಹರಿಯ ಸ್ವಾತಂತ್ರವರಿಯಬೇಕು ಕಂತುಪಿತನೇಕಾಂತ ಭಕ್ತರ ಭಾಗ್ಯ ಪಡೆಯುತ 4 ಗಾತ್ರ ಶುದ್ಧಿಯುಬೇಕು ಪಾತ್ರವರಿಯುತ ದಾನವಿತ್ತು ಪೂಜಿಸಬೇಕು ಪುತ್ರಮಿತ್ರ ಕಳತ್ರ ಗತಹರಿ ತುತ್ತುವುಣ್ಣಿಸಿ ಜಗವ ಸಲಹುವ “ಶ್ರೀಕೃಷ್ಣವಿಠಲ”ನ ಕರುಣ ಪಡೆಯಲು 5
--------------
ಕೃಷ್ಣವಿಠಲದಾಸರು
ಲೋಕನೀತಿ ಏನು ಮಾಡಿದರೇನು ಹಾನಿಯಾಗದು ಪಾಪ ಶ್ರೀನಿಕೇತನನ ದಿವ್ಯನಾಮ ನೆನೆಮನವೆ ಪ ಕ್ಷಣ ಪದಕಮಲಗಳ ಸ್ಮರಿಸಿ ಮನದೊಳಗೆ ಪ್ರತಿ ಕ್ಷಣಕ್ಷಣದಿ ಹರಿ ಮಹಿಮೆ ಭಜಿಸಿ ಭಕ್ತಿಯಲಿ ತೃಣ ಘನದೊಳಿಹನು ಹರಿ ಎನುತ ಚಿಂತಿಸಿ ಮನದಿ ಪ್ರಣವ ಪ್ರತಿಪಾದ್ಯನಂಘ್ರಿಯ ಭಜಿಸದನಕ 1 ಕಪಟನಾಟಕ ಸೂತ್ರಧಾರಿ ಶ್ರೀ ಹರಿಯ ಗುಣ ಅಪರಿಮಿತ ಮಹಿಮೆಗಳ ಭಜಿಸಿ ಹಿಗ್ಗುತಲಿ ಚಪಲ ಬುದ್ಧಿಗಳಿಂದ ತಪಿಸಿ ಕಂಗೆಡದೆ ಮನ ಅಪರೂಪ ಹರಿನಾಮ ಜಪ ಮಾಡದನಕ 2 ದಾನಧರ್ಮಗಳಿಂದ ಧನ್ಯನಾದೆನು ಎನಲು ಹಾನಿಯಾಗೋದು ಆಯು ಪ್ರತಿ ನಿಮಿಷದಿ ಸ್ನಾನ ಜಪತಪದೊಳಗೆ ಯಾರೆನಗೆ ಸರಿ ಎನದÉ ಮೌನದಿಂದ್ಹರಿ ನಾಮ ಧ್ಯಾನಿಸುವತನಕ 3 ಕ್ಲೇಶ ಆನಂದಗಳು ಈಶನಾಜ್ಞೆ ಇದೆಂದು ವಾಸುದೇವನೆ ಜಗತ್ಪ್ರೇರಕನು ಎಂದು ಶ್ವಾಸ ಬಿಡುವ ಶಕ್ತಿ ಲೇಸು ತನಗಿಲ್ಲ ಸ- ರ್ವೇಶ ನಿನ್ನಧೀನವೆಂದರಿವ ತನಕ4 ಗಾತ್ರ ಶೋಷಣೆಯಾಕೆ ಪಾರ್ಥಸಖನಂಘ್ರಿಗಳ ಕೀರ್ತಿಸುತ ಮನದಿ ರಾತ್ರಿ ಹಗಲು ಕಮಲನಾಭ ವಿಠ್ಠಲನ ಶ್ರೀಮೂರ್ತಿಯನೆ ನೆನೆನೆನೆದು ಸುಖಿಯಾಗೊ ಮನವೆ5
--------------
ನಿಡಗುರುಕಿ ಜೀವೂಬಾಯಿ
ಲೋಕನೀತಿ ಮತ್ಸರಿಸುವವರಲ್ಲಿ ಮಾನ್ಯವಿರಲೀ ಪ ಬಚ್ಚಲಿಲ್ಲದ ಮನೆಯು ಸ್ವಚ್ಛತಾನಾಗಿಹುದೆ ಅ.ಪ ಅರಿಷಡ್ವರ್ಗಗಳು ತುಂಬಿಕೊಂಡಿಹ ದೇಹ ಪರಿಶುದ್ಧವಹುದೇನೊ ಆವಾಗಲೂ ಪರಿಪರಿಯಿಂದಲಿ ಪರಿವಾರ ಜನಗಳು ಪರಿಹಾಸ್ಯಮಾಡಿ ಅಘವ ಕದ್ದೊಯ್ವರಯ್ಯ 1 ಗುಣತ್ರಯಗಳಿಂದಲಿ ನಿಬಿಡವಾದೀದೇಹ ಗುಣಕಾರ್ಯ ಮಾಡದೇ ಬಿಡದೆಂದಿಗೂ ಅಣಿಯಾಗಿ ದುರ್ಗುಣಗಳೊಕ್ಕಣಿಸಿ ಪೇಳುವಡೆ ಗುಣವ ತಿದ್ದಲು ತಾವು ಋಣಿಯಾಗುವರಯ್ಯ2 ಅಭಿಮಾನವೆಂಬುದು ನಭೋಮಂಡಲವರೆಗಿಹುದು ಶುಭವೆಂತೊ ಡಾಂಭಿಕದ ಹೇ ಮಾನವಾ ತುಂಬಿತುಳುಕುವ ದುರಭಿಮಾನವನೆ ತೊಲಗಿಸಿ ಇಂಬು ತೋರುವರಯ್ಯ ಮನಸ್ಥೈರ್ಯಕೇ3 ಕಕ್ಕುಲತೆ ಪಡದೆ ನಕ್ಕುಸಂತೈಸಿಲಾಲಿಸುವ ತೆರದಿ ಅಕ್ಕರದಿ ತನ್ನ ಅಪರಾಧಗಳನೆಲ್ಲ ಲೆಕ್ಕಿಸದೆ ಪೇಳ್ವರದು ಉಪಕಾರವಯ್ಯ 4 ಮಚ್ಚರದಿ ನಿಂದಿಸೆ ಅಚ್ಚುತನ ಭಕುತರಿಗೆ ನಿಚ್ಚದಲಿ ಸ್ವಚ್ಛಭಕುತಿ ಇಹುದು ಮಚ್ಚರಕೆ ಸ್ವೇಚ್ಛೆಯಿಂದೆದುರು ಉಚ್ಚರಿಸದಿರೆ ಮೆಚ್ಚಿ ಕಾಯುವನಯ್ಯ ಶ್ರೀ ವೇಂಕಟೇಶ 5
--------------
ಉರಗಾದ್ರಿವಾಸವಿಠಲದಾಸರು
ಲೋಕನೀತಿ ಮಾನವ ಭ್ರಾಂತಿಸುಖವ ಪ. ನಂಬಲಾಗದು ಮಣ್ಣಬೊಂಬೆಯಂದದ ದೇಹ ಡಂಭ ಮೋಹಗಳಿಂದ ಮದಿಸುತ ಹಂಬಲಕ್ಕೀಡಾಗುವಂತಿದ ಅ.ಪ. ನೀರಮೇಲಣಗುಳ್ಳೆ ತೋರಿಹಾರುವ ಬಗೆ ಮಾರನಾಟಿದೊಳಾಡುತ ನಲಿಯುತಲಿಕೆ ಸಾರಿಬರೆ ತನಗಪಮೃತ್ಯುಕಾಲವು ಮೀರಿದುಬ್ಬುಸವಾಂತು ಮಿಡುಹುತ ಬೋರಿಡುತ ಬೊಬ್ಬರಿಸಿ ತರಳರ ಸಾರಿಕೂಗುವ ಕಾಯಧಿರವನು 1 ನಾನು ನನ್ನದಿದೆಂದಭಿಮಾನದಿಂ ಮತಿಗೆಟ್ಟು ಜ್ಞಾನವಿಲ್ಲದೆ ಭುವಿಯೊಳ್ ದೀನನಾಗಿ ನಾನಾಪರಿಯಿಂ ಸೊರಗಿ ನರಳುತಿಹ ನೀ ನಿಜವೆಂದು ನಂಬದೆ ಜ್ಞಾನ ಲಾಭದಿ ಮನುಜನೆನ್ನಿಸೆ 2 ಕಾಮಕ್ರೋಧವ ಬಿಟ್ಟು ರಾಮನೊಳ್ ಮನವಿಟ್ಟು ತಾಮಸಬುದ್ಧಿಯನೀಡಾಡುತೆ ಮತ್ತೆ ಶಮದಮಾದಿಗಳನಭ್ಯಸಿಸುತೆ ಕ್ಷಮೆಯನಾಶ್ರಯಿಸುತೆ ಸುಖದುಃಖದೊಳ್ ಕಮಲನಯನ ಶೇಷಾದ್ರಿನಾಥನ | ವಿಮಲ ಪದದೊಳೈಕ್ಯನಾಗಲು ಅಮಭಕ್ತಿಯೆ ಮುಖ್ಯ ಸಾಧನ ನಮಗೆ ಈ ಭ್ರಾಂತಿ ಸಲ್ಲದು 3
--------------
ನಂಜನಗೂಡು ತಿರುಮಲಾಂಬಾ
ಲೋಕನೀತಿ (ಆ) ಇರುವುದೆಲ್ಲ ಮನೆಯೊಳಗಿದ್ದರೆ ಆಡಿಗೆಗೆ ಯಾತಕ್ಕೆ ತಡವಾಗೋದು | ಪ ತರಬೇಕೇಂದು ನೂರು ತಡವೆ ನಾ ನುಡಿದರು ಅರಿಯದವರ ಪರಿತಿರುಗುತ್ತಲಿರುವದು ಅ.ಪ ಮನೆ ಮನೆಯಲಿವಂದು ಮಾನಾರ್ಧಮಾನಗಳು ಮೆಣಸಿನಪುಡಿ ಉಪ್ಪು ಅಕ್ಕಿ ಸಾಲ ದಿನ ದಿನ ಮಧ್ಯಾಹ್ನ ತಿರುಗಿದ ಮೇಲೆ ಮನೆಗೆ ಬಂದು ಹಸಿವೆನುತ ಪೇಳುವದು 1 ಎಣ್ಣೆವಗ್ಗರಣೆಯಲ್ಲದೆ ಕಾಣೆನಭಿಗಾರ ಮುನ್ನೆ ಪಿತ್ಥ ಹೆಚ್ಚಿ ತಲೆ ನೋಯ್ವುದು ನಿನ್ನೆಮೊನ್ನೆ ಹೇಳಿದುದಕೆ ಹೊಡೆಸಿಕೊಂಡೆ ದೊಣ್ಣೆಪೆಟ್ಟಿನಿಂದ ಬೆನ್ನು ಬಾತಿರುವದು 2 ವರುಷಕ್ಕಾಗುವ ಮಟ್ಟಿಗೆಲ್ಲಾ ಪದಾರ್ಥ ಶೇ- ಖರವ ಮಾಡುವುದು ಈ ಮನೆಯೊಳಿಲ್ಲಾ ಹಿರಿಯರಿಂದ ಬಂದ ಸಂಪ್ರದಾಯವಿದೇನೊ ಇಂಥಾಮನೆಯ ಸೇರಿ ಈ ಸುಖ ಪಡುವೆ 3 ಮದುವೆಯಲ್ಲಿದ್ದದ್ದು ಪ್ರಸ್ತದೊಳಗೆಯಿಲ್ಲ ಬದಲು ಸೀರೆಯು ನಾನುಟ್ಟರಿಯೆ ವಿಧಿಲಿಖಿತವು ತಪ್ಪುವುದೆಯೆಂದಿಗಾದರು ವದರಿ ಕೊಂಡರೆಯೇನು ಇದರೊಳು ಫಲವುಂಟು 4 ಜ್ಞಾನ ಶೂನ್ಯರು ಮನೆಯೊಳಿಹರೆಲ್ಲರು ಈ ನರಜನ್ಮವು ಇಷ್ಟಕ್ಕೆಸಾಕೆಂದು ಧೇನಿಸಿ ಗುರುರಾಮವಿಠಲನ ಬೇಡುವೆ 5
--------------
ಗುರುರಾಮವಿಠಲ
ಲೋಕನೀತಿಯ ಪದಗಳು 448 ಅನ್ನದಾನವನ್ನೆ ಮಾಡು ಕನ್ಯದಾನವನ್ನೆ ಮಾಡುನಿನ್ನ ನಂಬಿದರ ಪೊರೆದುನ್ನತ ಹರ್ಷದಿ ಬಾಳುಸನ್ನುತ ಸರ್ವಲೋಕಗಳನ್ನು ರಕ್ಷಿಸುವನಾಗ ಪ್ರ-ಸನ್ನ ಮೂರುತಿಯಾಗುರನ್ನದ ರಾಶಿಗಳನ್ನು ಚಿನ್ನದ ಆಭರಣಗಳನ್ನುಭೂಸುರರಿಗಿತ್ತು ಮನ್ನಿಸು ಉದಾರನಾಗುಮನ್ನೆಯರೆಲ್ಲರು ಬಂದುನಿನ್ನನೋಲೈಸಲೆಂದು ಅಪರ್ಣೆಪರಿಸಿದಳು 1 ಕೋಟಿ ಗೋದಾನವ ಮಾಡು ಸಾಟಿಯಿಲ್ಲದಂಥಾ ಪಂಚಕೋಟಿ ಗಜದಾನ ಶತಕೋಟಿಯಶ್ವದಾನಗಳಮೀಟಾದ ಬ್ರಾಹ್ಮರಿಗಿತ್ತು ಕೀರ್ತಿವಂತನಾಗು ಕಿ-ರೀಟ ಶೌರ್ಯದೊಳಾಗು ಮೀಟಾದ ಮಂತ್ರಿಗಳ ಕಿ-ರೀಟ ರತ್ನಕಾಂತಿಗಳ ಕೋಟಿ ನಿನ್ನ ಪಾದದಲ್ಲಿಧಾಟಿಯಾಗಿರುವನಾಗುಲೂಟಿಸಿ ವೈರಿಗಳನು ಗೋಟುಗೊಳಿಸುವ ಶಶಿಜೂಟ ಭಕ್ತನಾಗು 2 ಇತ್ತೆರದೆ ಬೀಸುತಿಹ ಮುತ್ತಿನ ಚಾಮರ ಶ್ವೇತಛ್ಛತ್ರ ಸೀಗುರಿಗಳ ಮೊತ್ತದ ಸಾಲೊಳಗೆ ಒ-ಪ್ಪುತ್ತಲಿರುವವನಾಗು ಸತ್ಯವಂತನಾಗು ಸುವ್ರತ ನೀನಾಗುಪೆತ್ತವರ ನೋಡಿ ನಲಿವುತ್ತಿರಲು ಭೂಸುರರುಮುತ್ತಿನಕ್ಷತೆಯನಾಂತುಪೃಥ್ವಿಯ ವೊಳಗೆಲ್ಲಾ ಸ-ರ್ವೋತ್ತಮ ಪುರುಷನಾಗೆನುತ್ತಮಸ್ತಕದಿ ತಳಿವುತ್ತ ಪರಸಿದರು 3 ಇಂದ್ರನಾಗು ಭೋಗದೊಳು ಸತ್ಯವಾಕ್ಯದೊಳು ಹರಿ-ಶ್ಚಂದ್ರನಾಗು ಪಾಲನೆಯ ಮಾಡುವುದರೊಳಗೆ ಉ-ಪೇಂದ್ರನಾಗು ಬುದ್ಧಿ ಕೌಶಲದೊಳು ತಿಳಿಯಲು ನಾ-ಗೇಂದ್ರ ನೀನಾಗುಚಂದ್ರನಾಗು ಶಾಂತಿಯೊಳಗೆಂದು ವಂದಿಮಾಗಧರವೃಂದ ಕರವೆತ್ತಿ ಜಯವೆಂದು ಪೊಗಳುತ್ತಿರಲಾ-ಚಂದ್ರಾರ್ಕವು ಸೌಖ್ಯದಿ ಬಾಳೆಂದು ಸಾನಂದದೊಳಾಗಇಂದಿರೆ ಪರಸಿದಳು4 ಧೀರನಾಗುದಾರನಾಗು ಸೂರಿಜನವಾರಕೆ ಮಂ-ದಾರನಾಗು ಸಂಗರ ಶೂರನಾಗು ವೈರಿ ಜ-ಝ್ಝೂರನಾಗು ಮಣಿಮಯ ಹಾರನಾಗುವೀರಾಧಿವೀರ ನೀನಾಗುಭೂರಮಣನಾಗು ಮಂತ್ರಿವಾರ ಸಂರಕ್ಷಕನಾಗುಕಾರುಣ್ಯಸಾಗರನಾಗು ಕಾಮಿತಫಲಿದನಾಗುಶ್ರೀ ರಾಮೇಶನಪಾದಾಬ್ಜ ವಾರಿಜ ಭಕ್ತನಾಗೆಂದುಶಾರದೆ ಪರಸಿದಳು5
--------------
ಕೆಳದಿ ವೆಂಕಣ್ಣ ಕವಿ
ಲೋಕನೀತಿಯ ಹಾಡುಗಳು ಆರು ಹಿತರಾದಾರು ಈ ವಿಶ್ವದೊಳಗೆ ಕೃತಿ ಹೊರತು ಪ ಪಿತನಲ್ಲ ಸುತನಲ್ಲ ರತಿಯಲ್ಲ ಸುತೆಯಲ್ಲ ಅತಿ ಪ್ರೀತಿಯಿಂ ಪೊರೆದ ನಿಜಮಾತೆಯಲ್ಲಾ ಸುತನಪೇಕ್ಷಿಸಿ ಹೆದರಿ ಅಜಮಿಳನು ಕರೆಯಲ್ಕೆ ಪತಿತ ಪಾವನ ಹರಿಯ ನಾಮ ಹಿತವಾಯ್ತು 1 ಧನವಲ್ಲ ಸಿರಿಯಲ್ಲ ಬಹು ಬೆಳೆದ ಮೈಯಲ್ಲ ಹಣ ರಾಶಿ ಗಳಿಸುವ ದುರ್ಬುದ್ಧಿಯಲ್ಲ ಮನ ಮತ್ಸರಗಳಲ್ಲ ಕಾಮಕ್ರೋಧಗಳಲ್ಲ ತನುವಲ್ಲ ಡಂಬರದ ವೇದಾಂತವಲ್ಲ2 ತರಳನಾಗಿಹ ಧೃವಗೆ ತರುಣ ಪ್ರಲ್ಹಾದನಿಗೆ ಕರಿರಾಜ ಹನುಮಾದಿ ನಿಜ ಭಕ್ತರಿಂಗೇ ವರಧರ್ಮ ಪುತ್ರನಿಗೆ ಮಧ್ಯ ಪಾಂಡವನಿಗೇ ಪರಮ ಪತಿವ್ರತಾ ರಮಣಿ ದ್ರೌಪದಿಗೇ 3 ಧರಣಿಯನು ಹೊತ್ತಿರುವ ಆದಿಶೇಷಗೆ ಮತ್ತೆ ನಿರುತವೂ ಭಜಿಸಿದ ಪರಮ ದಾಸರಿಗೆ ಸಿರಿಯರಸ ಶ್ರೀಹರಿಯ ಭಜನೆಯೊಂದುಳಿದು 4 ಜನ್ಮಬಂಧವ ನೀಗಿ ಪರಮ ಪದವಿಯ ಕೊಡುವ ಸನ್ನುತವು ನಿಜ ಸೌಖ್ಯವನ್ನು ಕರುಣಿಸುವ ಪ್ರಾಣಿಯಲಿ ಆತ್ಮನಲಿ ಶ್ರಧ್ಧೆ ಹುಟ್ಟಿಸುವಂಥ ಚನ್ನಕೇಶವ ಸ್ವಾಮಿ ಭಕ್ತಿಯೊಂದುಳಿದು 5
--------------
ಕರ್ಕಿ ಕೇಶವದಾಸ
ಲೋಕೇಶನೆನಿಪ ಶ್ರೀಗುರು ಸಿದ್ಧೇಶ್ವರಗೆ ಪ ನೀ ಕಮಲಮುಖಿ ಆಋವೈರಿಯ ನೇಕ ಮೈಯ್ಯಾಳು ಸುತ್ತಿಕೊಂಡು ವಿ ವೇಕವಿಲ್ಲದೆ ವಿಷವನುಂಡ ಪಿನಾಕಧರÀನಿಗೆ ಸೋಲುವರೆ ನೀ ಜಗವ ಮೋಹಿಪ ಮಾನಿನೀ ಮಣಿಯೇ ಅ.ಪ. ಶಿರದೊಳು ಶಶಿಯ ಕೆಂಜೆಡೆ ಇಹ ಜೋಗಿ ಸ್ಮರನ ದಹಿಸಿ ಭಸ್ಮ ಹಣೆಗಿಟ್ಟ ಯೋಗಿ ಇರುವರೆ ಸ್ಥಳವಿಲ್ಲದಂತೆ ತಾ ಪೋಗಿ ಮೆರೆವ ಸ್ಮಶಾನ ಮಂದಿರಕನುವಾಗಿ ಮರುಲು ಭೂತ ಪಿಶಾಚ ಯಕ್ಷರ ನೆರವಿಯಲಿ ಕುಣಿಕುಣಿದು ಬ್ರಹ್ಮನ ಶಿರವಿಡಿದು ತಿರಿದುಂಬ ಗೊರವಗೆ ಬರಿದೆ ತಿಳಿಯದೆ ಜಗವ ಮೋಹಿಪ ಮಾನಿನೀ ಮಣಿಯೇ 1 ಮಂಡೆಯೋಳ್ ಜಾನ್ಹವಿ ಶಶಿಯನ್ನೆ ಸೂಡಿ ರುಂಡಮಾಲೆಯ ಕೊರಳೊಳಗಿಟ್ಟಪಚಾಡಿ ಕುಂಡಲಿಗಳಾ ಧರಿಸಿರುವನ ನೋಡಿ ಖಂಡ ಪರಶುವೆಂದು ಅವನ ಕೊಂಡಾಡಿ ಧಿಂಡೆಯಾಗಿಹ ಪ್ರಾಯದವಳು ನೀ ನೀನವನನೊಲಿದೆ ಪ್ರ ಚಂಡೆ ಪಾರ್ವತಿ ಜಗವ ಮೋಹಿಪ ಮಾನಿನೀ ಮಣಿಯೇ 2 ಕರದಿ ತ್ರಿಶೂಲ ಧಮರುಗಳ ಧರಿಸಿರುವಾ ಕಂಚರ್ಮಾಂಬಕ ಪುಲಿದೊಗಲುಟ್ಟು ಮೆರೆವಾ ಹಿರಿಯತನಕೆ ವೃಷಭವನೇರಿ ಬರುವಾ ಶಿರಿಯ ಹೊಗಾಡಿ ಫಕೀರನಂತಿರುವಾ ವಿರಚಿಸಿದ ಲೀಲಾವಿನೋದದ ಪರತರ ಶ್ರೀ ಪ್ರಣವರೂಪನ ಗುರುವಿಮಲಾನಂದ ತೊಟ್ಟಿದ ಗುರು ಸಿದ್ಧೇ ಶ್ವರನೆಂದು ತಿಳಿಯದೆ ಜಗವ ಮೋಹಿಪ ಮಾನಿನೀಮಣಿಯೇ 3
--------------
ಭಟಕಳ ಅಪ್ಪಯ್ಯ
ಲೋಕೈಕ ಬಂಧು ಹೇ ದಯಾಸಿಂಧು ಜೋಕೆಮಾಡಭವ ನೀನೆನ್ನೊಳು ನಿಂದು ಪ ಹೇಯಪ್ರಪಂಚದ ಮಾಯಾಮೋಹದಿ ಎನ್ನ ಕಾವದೇವರು ನೀನೆ ಕೈಯ ಪಿಡಿದು ಸಲಹೊ 1 ದಿವನಿಶಿ ಬಿಡದೊಂದೇಸಮನೆ ಬೆನ್ನ್ಹತ್ತಿ ಮಾಯ ಕವಿದು ವಿಧವಿಧದೆನ್ನ ಸುವಿಚಾರ ಮರೆಸಿ ಭವಭವದೊಳಗೆಳಸಿ ಭವಿಯೆಂದೆನಿಸಿ ಕೆಟ್ಟ ಜವನಿಗೀಡೆನಿಸುವ ಭವಮಾಲೆ ಗೆಲಿಸು 2 ಘನದು:ಖಮಯವಾದ ಜನನಮರಣಬಾಧೆ ರಿಣಭಾದೆ ತನುಭಾದೆಯನು ಪರಿಹರಿಸಿ ತನುತ್ರಯದಲಿ ನಿನ್ನ ನೆನೆವೆನಗೆ ಪಾಲಿಸು ಕನಿಕರದಿಂ ಕಾಯೊ ಜನಕ ಶ್ರೀರಾಮ ಪ್ರಭು 3
--------------
ರಾಮದಾಸರು
ಲೋಭಿಯು ಬೇಡಲು ಲಾಭವೇನಿರುವುದು ನಾಭಿಯು ಒಣಗುವುದು ಪ ಲೋಭಿಗೆ ಧನದಿಂದ ಶೋಭೆಯುಂಟೆ ಮನ ಕ್ಷೋಭೆಯಲ್ಲದೆ ಸತತ | ತನ್ನಯ ಮನಕ್ಷೋಭೆಯಲ್ಲದೆ ಸತತ ಅ.ಪ ನೂರು ಛಿದ್ರಗಳಲ್ಲಿ ತೋರುತಿದ್ದರು ದೇಹ ಕೋರನು ನವವಸನ | ಏನೆಂದು ಕೋರನು ನವವಸನ ಮೂರು ಕಾಸಿಗೆರಡು ಮಾರುತಿದ್ದರು ಅದ ದೂರದಿ ತ್ಯಜಿಸುವನು | ನೂತÀನವಸ್ತ್ರ ದೂರದಿ ತ್ಯಜಿಸುವನು 1 ಬಂಧು ಜನರು ತನ್ನ ಮಂದಿರಕ್ಕಿಳಿಯಲು ನೊಂದುಕೊಳ್ಳುವ ಮನದಿ | ತತ್ತಳಿಸುತ ನೊಂದುಕೊಳ್ಳುವ ಮನದಿ ತೊಂದರೆಗಳ ಪೊಂದಿಹೆನೆನ್ನುತ ಮುಂದಕೆ ಸಾಗಿಸುವ | ಬಂದವರನು ಮುಂದಕೆ ಸಾಗಿಸುವ 2 ಮುಗ್ಗಿದ ಧವಸವು ಅಗ್ಗÀದಿ ಮಾರಲು ಹಿಗ್ಗುತ ಕೊಳ್ಳುವನು | ಸೊಗಸಿನಲಿ ಹಿಗ್ಗುವನು ಒಗ್ಗಿಹುದೆನ್ನುತ ನುಗ್ಗಿಸಿ ಉದರದಿ ಸಗ್ಗದೆ ನಡೆಯುವನು | ಪರನುಡಿಗೆ ಸಗ್ಗದೆ ನಡೆಯುವನು 3 ಹಣದಲಿ ಲೋಭಕೆ ಕೊನೆ ಮೊದಲಿಲ್ಲದೆ ಒಣಗಿಸುವನು ತನುವ | ಕಾರ್ಪಣ್ಯದಿ ಒಣಗಿಸುವನು ತನುವ ಗೆಣೆಯನಿವನು ನಾಲ್ಕಾಣೆಯ ಕಂಡರೆ ಕುಣಿಯುವನು ಮನದಲ್ಲಿ | ಎಣೆಯಿಲ್ಲದೆ ಕುಣಿಯುವ ಮನದಲ್ಲಿ4 ಕಿಕ್ಕಿರಿದರು ಧನ ಕಕ್ಕುಲತೆಯೊಳ್ ತನ್ನ ಮಕ್ಕಳ ಸಲಹುವನು | ರಕ್ಕಸನಿವ ಮಕ್ಕಳ ಸಲಹುವನು ಮಿಕ್ಕ ಧನವ ಬಲು ಅಕ್ಕರೆಯಿಂದ ಎವೆ ಯಿಕ್ಕದೆ ನೋಡುವನು | ನೇತ್ರದಿ ಎವೆಯುಕ್ಕದೆ ನೋಡುವನು 5 ನುಡಿದರೆ ಸವಿಮಾತ ಒಡವೆ ವಸನಗಳಿ ಗ್ಹಿಡಿವಳೆಂದರಿಯುತಲಿ | ಸಡಗರದಿ ಹಿಡಿವಳೆಂದರಿಯುತಲಿ ಕರವ ಪಿಡಿವ ತನ್ನ ಮಡದಿಯ ಕಂಡರೆ ಸಿಡಿಮಿಡಿಗÀುಟ್ಟುವನು | ನಿರ್ಘೃಣನಿವ ಸಿಡಿಸಿಡಿ ಗುಟ್ಟುವನು 6 ರಾಯರೆ ನಿಮ್ಮ ಸಹಾಯ ಹೊರತು ಕಾಣೆನೆನಲು ಕಾಯುವ ಧಣಿ ನಾರಾಯಣನೆನುತಲಿ ನುಡಿಯುವನು 7 ಈ ಧನವೆ ದೊಡ್ಡ ಸಾಧನವೆನ್ನುವ ಮೇಧಾವಿಯು ಇವನು | ಓದಲರಿಯದ ಮೇಧಾವಿಯು ಇವನು ಪಾದ ಕಮಲದಲಿ ಆದರವರಿಯನಿವ | ಎಂದೆಂದಿಗು ಆದರವರಿಯನಿವ 8 ಘನತೆಯು ಬೇಡವು ಜನತೆಯು ಬೇಡವು ಧನವಿದ್ದರೆ ಸಾಕು | ಈ ನರನಿಗೆ ಧನವಿದ್ದರೆ ಸಾಕು ಮನುಜ ಮುಟ್ಟದ ಗುಬ್ಬಿಯನನುಕರಿಸುತ ಜೀ ವನವನು ಕಳೆಯುವನು | ಕ್ಲೇಶದಿ ಜೀವನವನು ಕಳೆಯುವನು9 ಗಳಿಸಿದವನ ಧನ ಬಳಸಿದವನಿಗೆಂಬ ಮುಳುಗಿ ಮುಳುಗುತಿರುವ | ಕ್ಲೇಶಗಳಲಿ ಮುಳುಗು ಮುಳುಗುತ್ತಿರುವ 10 ಭುಜಗಶಯನ ಹರಿ ಸುಜನರು ತನ್ನನು ಅಜನೆಂದು ಕರೆಯುತಿರೆ | ಸೃಷ್ಟೀಶನ ಅಜನೆಂದು ಕರೆಯುತಿರೆ ತ್ಯಜಿಸದೆ ಹೆಸರನು ಅಜಗಳ ಸ್ತನದಂತೆ ಸೃಜಿಸಿದನೀ ಜನರ | ಪ್ರಸನ್ನ ಹರಿ ಸೃಜಿಸಿದನೀ ಜನರ 11
--------------
ವಿದ್ಯಾಪ್ರಸನ್ನತೀರ್ಥರು
ಲೋಲನೇಳುವದಕಿನ್ನ ಮುನ್ನ ಪ ತಾಳಮೇಳದವರೆಲ್ಲಿ ಬಂದು ದ್ವಾರ ದೊಳು ಸೇರಿ ಪಾಡುತಿಹರೊ ನಿಂದು 1 ಸುರರು ಸಭೆ ಯಲಿ ಬಂದಾಗಲೆ ಓಲೈಸುತಲಿಹರು 2 ತಡಮಾಡಬೇಡಯ್ಯ ನೀನು ನಿನ್ನ ಒಡೆಯನೆದ್ದು ನಿನ್ನನು ಕೂಗ್ಯಾನೊ 3 ಕಪಿಯಾಗಿ ನೀ ಪುಟ್ಟಬೇಕಂತೆ ತಾನು ವಿಪಿನವಾಸಕಾಗಿ ತೆರಳುವನಂತೆ 4 ಶರಧಿಯ ನೀ ದಾಟಬೇಕಂತೆ ಅಲ್ಲಿ ಸಿರಿಗೆ ಮುದ್ರೆಯ ನೀನೀಯಬೇಕಂತೆ 5 ದುರುಳನ ಪುರವ ನೀನುರುಹಬೇಕಂತೆ ಅವನ ಪರಿವಾರವೆಲ್ಲವ ನೀ ತರಿಯಬೇಕಂತೆ 6 ಕುಂತೀಲಿ ನೀ ಪುಟ್ಟಬೇಕಂತೆ ತಾನು ಕಂತುವಿಗೆ ಪಿತನಾಗುವನಂತೆ 7 ಮಗಧ ಮುಖ್ಯರ ನೀ ಸೀಳಬೇಕಂತೆ ದೇವ ಜಗಕೆ ಮಂಗಳವ ನೀ ಮಾಡಬೇಕಂತೆ 8 ದುರುಳ ದುಶ್ಶಾಸನನ ಇರಿಯಬೇಕಂತೆ ಅವನ ಕರುಳ ನಿನ್ನರಸಿಗೆ ಮುಡಿಸಬೇಕಂತೆ 9 ಮುದ್ದು ಭಾರತಿಯ ನೀ ಬಿಡಬೇಕಂತೆ ನೀನು ಹೊದ್ದು ಕಾವಿಬಟ್ಟೆ ಯತಿಯಾಗಬೇಕಂತೆ 10 ಅದ್ವೈತ ಮತವನು ನೀ ಖಂಡ್ರಿಸಬೇಕಂತೆ ಗುರು ಮಧ್ವಮುನಿಯೆಂದು ನೀ ಮೆರೆಯಬೇಕಂತೆ 11 ಬದರಿಕಾಶ್ರಮಕೆ ಪೋಗಬೇಕಂತೆ ಅಲ್ಲಿ ಬಾದರಾಯಣನಾಗಿ ತಾನಿರ್ಪನಂತೆ 12 ಹಿಂಗದೆ ಶ್ರೀಶನ ನೀ ನುತಿಸಬೇಕಂತೆ ಸಿರಿ ರಂಗೇಶವಿಠಲ ನಿನಗೊಲಿದಿಹನಂತೆ 13
--------------
ರಂಗೇಶವಿಠಲದಾಸರು
ಲೌಕಿಕ ಏತಕ್ಕೆ ನಮಗೆ ಪ ಲೋಕೇಶ ಕೃಷ್ಣನ್ನ ಮರಿಸಿ ಕೆಡಿಸುವಂಥ ಅ.ಪ. ಸುಳ್ಳು ಹೇಳಲಿಬೇಕು ಕಳ್ಳನಾಗಲಿಬೇಕು ಮೆಲ್ಲನೆ ಸವಿಮಾತು ಆಡಿನಟಿಸಬೇಕು ಪುಲ್ಲನಾಭನ ಬಿಟ್ಟು ಹುಲ್ಲುಮಾನವನನ್ನು ಕಾಲ ಕಳಿಸುವಂಥ 1 ಗಡ್ಡ ಬೋಳಿಸಬೇಕು ದುಡ್ಡುಗಳಿಸಬೇಕು ಬಡ್ಡಿಗೆ ಕೊಡಬೇಕು ದೊಡ್ಡ ಮನೆಯ ಕಟ್ಟಿ ಅಡ್ಡಿಯಿಲ್ಲದೆ ಮೆರೆದು ದೊಡ್ಡವನಾಗಬೇಕು ಹೆಡ್ಡಮಂದಿಯಲಿರಿಸಿ ಗೊಡ್ಡು ದೇಹವ ಮಾಳ್ವ 2 ಸತಿಸುತ ಧನಗಳನೆ ಗತಿ ದೈವನೆನಬೇಕು ಹಿತದಿಂದ ದುಡಿಯುತ ಸತಿಯರಿಗಿಡಬೇಕು ಗತಿದಾಯಕ ನಮ್ಮ “ಶ್ರೀ ಕೃಷ್ಣವಿಠಲ”ನ್ನ ಶಾಸ್ತ್ರನೇತ್ರದಿ ನೋಡೆ ಪುರಸೊತ್ತು ಕೊಡದಂಥ 3
--------------
ಕೃಷ್ಣವಿಠಲದಾಸರು