ಒಟ್ಟು 941 ಕಡೆಗಳಲ್ಲಿ , 89 ದಾಸರು , 762 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪ್ರಾಣ ಗುರು ರಾಮ ವಿಠಲ | ನೀನೆ ಪೊರೆ ಇವಳಾ ಪ ಮೌನಿ ಸದ್ವಂದ್ಯಗೆ | ಶ್ರೀನಿವಾಸದೇವ ಅ.ಪ. ಅರುಹಳೆನ್ನಳವಲ್ಲ | ಗುರುಕರುಣ ಸತ್ಪಾತ್ರೆವರಸುತ್ಯೆಜಸನಿತ್ತ | ಪಾನಕವ ಕೊಂಡುಸಿರಿ ರಮಣ ಮಂದಿರವ | ಸೇರಿ ನಾರಿಳ ಫಲವುಕರಗತವು ಆಗಲದು | ವರಮೂರ್ತಿಎನಿಸೆ 1 ಸುಪ್ತೀಶನಾಜ್ಞೆಯಲಿ | ಇತ್ತಿಹೆನೊ ಅಂಕಿತವಕತೃಸಿರಿ ರಾಮನೆ | ವ್ಯಕ್ತ ತೆರನಾದಾಮಕ್ತಗೊಡೆಯನೆ ದೇವ | ಭಕ್ತವತ್ಸಲಹರಿಯೆಆರ್ತರುದ್ಧರತಾ ಹರಿ | ಅರ್ಥಿಯಲಿಸಲಹೊ 2 ಹರಿದಾಸ್ಯದೊರಕಲ್ಕೆ | ಪೂರ್ವಸುಕೃತವೇ ಮಾರ್ಗತರಳೆ ಅದ ಪಡೆದಿಹಳು | ಕಾರುಣ್ಯ ಮಾರ್ತೆಮರುತಮತದಲ್ಲಿರುವ | ಕಾರುಣದಿ ಪೊರೆ ಇವಳಸರ್ವಜ್ಞಸರ್ವೇಶ | ಸುರ ಸಾರ್ವ ಭೌಮ3 ಭ್ರೂತ ಪಂಚಕದೇಹ | ಸುಸ್ಥಿರವು ಅಲ್ಲೆಂಬಖ್ಯಾತ ಮತಿಯನೆ ಕೊಟ್ಟು | ಸಲಹ ಬೇಕಿವಳಾಮಾತುಮೂತಿಗೆ ನಿನ್ನ | ನಾಮ ಸಂಸೃತಿಯಿತ್ತುಈ ತರಳೆನುದ್ದರಿಸು | ಮಾತಳಾಂತಕನೆ4 ಹಲವು ಮಾತೇಕೆ ಹರಿ | ಕಲಿಯುಗದಿ ತವನಾಮಬಲುಮಂದಿ ಜಪಿಸುತ್ತ | ಭವವ ದಾಂಟಿಹರೊಒಲಿಮೆಯಿಂದವಳನ್ನು | ಸಲಹಲ್ಕೆ ಪ್ರಾರ್ಥಿಸಿಹೆಎಲರುಣಿ ಶಯ್ಯ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಫಲಹಾರವ ಮಾಡೋ ಪದುಮಲೋಚನನೆ| ಒಲಿದು ಶ್ರೀ ಭೂದೇವಿ ಅರಸಿಯರೊಡನೆ ಪ ಕದಳೀ ಕಪಿಥ್ಥಶರ್ಕರ ಮೋದದಿಂದಲೀ| ಒದಗಿ ಬೆಂಡುಖರ್ಜೂರಿ ಘೃತಮೋಪ್ತದಿಂದಲಿ1 ಕಳೆದ ಸಿಗುರಿಯಾ ಕಬ್ಬಿನ ಪೇರು ಬದರಿಯಾ| ಬಲಿದ ಪರಿಮಳ ರುಚಿಗಳ ಒಪ್ಪನಿಂದಾ 2 ವಸುಧೆಯೊಳುಳ್ಳ ಸಕಲ ಫಲಸಾರವಾ| ಬಿಸಿಯಾದ ಪಲ್ಗೆನೆಯ ಮಧುಸಹಿತಾ 3 ಗುರುಮಹೀಪತಿಸ್ವಾಮಿ ಶರಣ ರಕ್ಷಕನೇಮಿ| ಸುರರಿಗಮೃತವೆರೆದಾನಂದ ಕರದಲಿ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಂದರೆ ಭಾಗ್ಯ ಲಕ್ಷ್ಮಿಯರುಮುಯ್ಯವ ಛಂದಾಗಿ ಗೆಲಿಸೆಂದುವಂದಿಸಿ ಹರಿಗೆ ಪ. ಇಂದು ಮುಖಿಯರೆಲ್ಲ ಛಂದಾದ ವಸ್ತಗಳಿಟ್ಟುಚಂದ್ರಗಾವಿಯನುಟ್ಟು ಚಂದ್ರನಂತೆ ಒಪ್ಪುತ 1 ನೀಲ ಮಾಣಿಕದ್ವಸ್ತ್ರಮೇಲುದು ಧರಿಸುತ ನೀಲಾದಿಗಳೆಲ್ಲ 2 ವಸ್ತ ಮುತ್ತಿನ ಇಟ್ಟು ಕಸ್ತೂರಿ ಬೊಟ್ಟಿಟ್ಟುಮಸ್ತಕದಲಿ ಮಾಣಿಕ್ಕಿಟ್ಟು ಭದ್ರಾದಿಗಳು 3 ಹಸ್ತಾಭರಣ ಸಮಸ್ತ ವಸ್ತಗಳಿಟ್ಟುಸ್ವಸ್ತ ಚಿತ್ತದಿಂದ ಮಿತ್ರ ವೃಂದಾರಕಾದಿಗಳು 4 ಕಾಲಿಂದ್ಯಾದಿಗಳೆಲ್ಲ ಬಹಳೆ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಲಾಶಯನನ ಬಳಿಗೆ5 ಲಕ್ಷಣಾದಿಗಳೆಲ್ಲ ಲಕ್ಷ ವಸ್ತಗಳಿಟ್ಟುಲಕ್ಷ್ಮಿರಮಣನೆ ಪಂಥ ವೀಕ್ಷಿಸಿಗೆಲಿಸೆಂದು 6 ಜಾಂಬವಂತ್ಯಾದಿಗಳು ತುಂಬಿದೊಸ್ತಗಳಿಟ್ಟುಸಂಭ್ರಮ ಸೂಸುತ ಅಂಬುಜಾಕ್ಷನ ಬಳಿಗೆ7 ಹದಿನಾರು ಸಾವಿರ ಚದುರೆಯರು ವಸ್ತಗಳಿಟ್ಟುಮದನ ಜನಕನ ಮುಯ್ಯ ಮುದದಿಂದ ಗೆಲಿಸೆಂದು8 ವೀರ ರಾಮೇಶ ನಾರಿಯರ ಸೋಲಿಸೋ ಭಾರನಿನ್ನದೆಂದು ನೂರು ಮಂದಿನುಡಿದಾರು 9
--------------
ಗಲಗಲಿಅವ್ವನವರು
ಬಂದು ನಿಲ್ಲೋ ಶ್ರೀಹರೇ-ಬಂದುನಿಲ್ಲೊ ಪ ಇಂದು ಹಿಂದು ನೀನೆಂದಿಗು ತಂದೆ ಗೋ- ವಿಂದ ಅನಿಮಿತ್ತಬಂಧು ಕಣ್ಣಮುಂದೆ ಅ.ಪ ಸ್ವಾಂಶದಿಂದ ಅಭಿವ್ಯಕ್ತಿಯಾದೆ ಪಂ- ಚಾಂಶತೋರಿ ಸರಸ ಜನನ ಮಾಡಿದೆ ಸ್ವಾಂಶನಾಗಿ ಅವತರಿಸಿ ಮೆರೆವ ಸ- ರ್ವಾಂಶದಿಂದಿಹ ತ್ರಿಂಶ ರೂಪನೇ 1 ಸ್ವಗತಭೇದವಿವರ್ಜಿತನೆನಿಸಿ ತ್ರಿಗುಣಮಯದಿ ಬ್ರಹ್ಮಾಂಡ ನಿರ್ಮಿಸಿ ಅಗಣಿತಮಹಿಮಾಧಾರನಾಗಿ ನಿಂದು ಮಿಗೆ ಶೋಭಿಸುವ ವಿರಾಟಮೂರುತಿಯೆ2 ಕಾರಣನೆನಿಸಿದ ಕರ್ಮನಿವೃತ್ತಿಗೆ ಸಾರವಾದ ಜ್ಞಾನಯೋಗ ಮಾರ್ಗವ ನಾರದಾದಿ ಮಹಾಮುನಿಗಳಿಗರುಹಿದ ನರನಾರಾಯಣ ಬದರಿ ಆಶ್ರಯನೇ 3 ಹಂಸಕಪಿಲ ದತ್ತಾತ್ರೇಯ ರೂಪನೆ ಹಂಸರಹಸ್ಯಗಳೆಲ್ಲವ ಪೇಳಿ ಸಂಶಯ ಬಿಡಿಸಿದೆ-ಜೀವಪರಮಾತ್ಮರ ಅಂಶಗಳರುಹಿದ ಹಂಸಮೂರುತಿಯೆ4 ಅಜಪಿತ ನೀ ಗಜರಾಜನ ಸಲಹಿದೆ ಭಜಿಸಿದ ವಾಲಖಿಲ್ಯರ ಕಾಯ್ದೆ ಅಜಹತ್ಯವು ವೃತ್ರವಧೆಯಿಂದ ಕಾಯ್ವ ಬಿ- ಡೌಜನ ಸಲಹಿದ ಗಜರಾಜ ವರದಾ5 ಪುರುಹೂತನ ಅಹಂಕಾರ ಖಂಡಿಸಿ ಕಿರುಬೆರಳಲಿ ಗೋವರ್ಧನಗಿರಿ ಎತ್ತಿ ಪರಿಪಾಲಿಸಿ ಗೋಬೃಂದವನೆಲ್ಲವ ಸುರರಿಂದ ಪೊಗಳಿಸಿಕೊಂಡೆ ಗೋವಿಂದ6 ಬುಧರರಿಯುಲು ಆ ವೇದ ವಿಭಾಗಿಸೆ ಉದಯಿಸಿ ಮುದದಿಂದ ಬದರಿಯ ಸದನದಿ ಬೋಧಿಸುತ್ತಲಿಹ ಬಾದರಾಯಣನೇ7 ಅಖಿಳಾಂಡಕೋಟಿಬ್ರಹ್ಮಾಂಡನಾಯಕ ವಿಕುಂಠಳೆಂಬೊ ಉದರದಿ ಜನಿಸಿ ಲಕುಮಿರೂಪಿಯಾದ ಸುಂದರಿಯ ಕೂಡ ಭೂ- ವೈಕುಂಠ ನಿರ್ಮಿಸಿದ ವೈಕುಂಠಮೂರುತಿಯೆ 8 ಸತ್ಯವ್ರತನೆಂಬೊ ಮನುವಿನುದ್ಧರಿಸಿ ಉತ್ತಮ ಔಷಧಿಗಳೆಲ್ಲವ ಸಲಹಿದೆ ದೈತ್ಯನಾದ ಉನ್ಮತ್ತನ ಕೊಂದು ಶ್ರುತಿಯ ತಂದಿತ್ತ ಮತ್ಸ್ಯಮೂರುತಿಯೆ 9 ಸುರಭಿನೆವನದಿ ಶರಧಿಮಥಿಸೆ ತಾ ಭರದಿ ಬೆನ್ನೊಳು ಧರಿಸಿಹೆ ಮಂದರ ಗಿರಿಧರನೆನಿಸಿದೆ ಕಮಠರೂಪನೆ 10 ಪ್ರಳಯ ಜಲಧಿಯೊಳು ಇಳೆಯನು ಕದ್ದಾ ಖಳಹಿರಣ್ಯನಾ ಶಿರವ ಚೆಂಡಾಡಿ ಜಲಧಿಯ ಶೋಧಿಸಿ ಇಳೆಯನು ತಂದು ಜಲಜಸಂಭವಗಿತ್ತ ಕ್ರೋಢರೂಪನೆ 11 ದುರುಳತನದಿ ತನ್ನ ತರಳನ ಬಾಧಿಪ ಹಿರಣ್ಯಕಶಿಪುವಿನ ಉದರವ ಬಗೆದು ಶರಣನಿಗಭಯವ ಕರುಣಿಸಿ ತೋರಿದ ಸರ್ವವ್ಯಾಪ್ತನೆಂದರುಹಿದ ನರಹರಿಯೇ12 ಬಲಿಯಿಂದಪಹೃತವಾದ ಸಾಮ್ರಾಜ್ಯವ ಸುಲಭದಿಂದಲಿ ಪುರಂದರಗಿತ್ತು ಸಲಹಿದೆ ಒಲಿದು ಬಲಿಯ ಭಕ್ತಿಗೆ ನೀ ಬಾ- ಗಿಲ ಕಾಯ್ದ ವಟು ವಾಮನನೆ 13 ದುರುಳತನದಿ ಆ ಹೈಹಯರೆಂಬ ನರಪರದುರ್ಮದ ಮರ್ದಿಸಲೋಸುಗ ನೃಪರ ಶಿರವನೆಲ್ಲ ತರಿದು ನಿಗ್ರಹಿಸಿದ ಭಾರ್ಗವ ಮೂರ್ತೇ 14 ಶರಧಿ ಬಂಧಿಸಿ ಸೇತುಕಟ್ಟಿ ಕಪಿ- ವೀರರೊಡನೆ ಆ ರಾವಣನಡಗಿಸಿ ಭೂ ಭಾರವನಿಳುಹಿಸಿ ಭೂಮಿಜೆಯನು ತಂದ ಅ- ಸುರ ಮರ್ದನ ದಾಶರಥಿ ರಾಘವ 15 ವಸುಮತಿಭಾರವನಿಳುಹಲೋಸುಗ ವಸುದೇವಸುತ ಶ್ರೀಕೃಷ್ಣನೆನುತಲಿ ಶಿಶುಪಾಲಾದಿಗಳಾಂತಕನೆನಿಸಿದ ಶಶಿಮುಖಿರುಕ್ಮಿಣಿ ಸಹಿತ ಶ್ರೀಕೃಷ್ಣ 16 ವೇದ ಕರ್ಮಗಳಿಗನರ್ಹರೆಲ್ಲರು ಸಾದರದಿಂದಲಿ ಅಧಮರೆಸಗುತಿರೆ ವೇದವಿರುದ್ದವಾದಗಳಿಂದಲೇ ಮೋಹವ ತೋರಿದೆ ಬುದ್ಧಸ್ವರೂಪನೆ17 ದುರುಳತನದಿ ಇಳೆಯಾಣ್ಮರುಗಳು ಕ್ರೂರತನದಿ ಪರಪೀಡಕರಾಗಿರೆ ಪರಿಹರಿಸಲು ಭೂಭಾರಕ್ಕಾಗಿ ಅವ- ತರಿಸಿ ಮೆರೆಯುವ ಕಲ್ಕಿರೂಪನೆ 18 ಏಕರೂಪ ಅನೇಕರೂಪನೆ ಏಕಮೇವ ನೀ ಪ್ರಕಟ ಮಾಡುವೆ ಪಿನಾಕಿ ಪ್ರಮುಖರು ಏಕದೇಶದಿ ಸಾಕಲ್ಯವ ತಿಳಿಯರೊ 19 ದೋಷದೂರ ಶೇಷಾಚಲವಾಸ ಪೋಷಿಸೊ ನಿನ್ನಯ ದಾಸಜನರ ಸರ್ವ ದೋಷಕಳೆದು ಮನೋಕಾಶದಲಿ ನಿಲ್ಲೊ ಶೇಷಗಿರೀಶ ಶ್ರೀ ವೆಂಕಟೇಶನೆ 20
--------------
ಉರಗಾದ್ರಿವಾಸವಿಠಲದಾಸರು
ಬನ್ನಿರಿ ಬನ್ನಿರಿ ಪುರಜನರೆಲ್ಲರು ಕೃಷ್ಣನ ದರುಶನಕೆ ಪೋಗುವ ಪ ಕೃಷ್ಣನು ಜನಿಸಿದ ಈ ದಿನ ಇಷ್ಟವ ಪ್ರಾರ್ಥಿಸಲು ಪೋಗುವಅ.ಪ ದುಂದುಭಿ ನಾದವು ಕೇಳುತಿದೆ ಬಲು ಮಂದಿಯ ತಂಡವು ಹೋಗುತಿದೆ ಕಂದನ ರೂಪದಿ ಬಂದಿಹ ಆನಕ ದುಂದುಭಿ ಕುವರನ ಸಂಭ್ರಮ ನೋಡಲು 1 ಪೇಳಿರಿ ನಿಮ್ಮಯ ಕೊರತೆಗಳೆÀಲ್ಲವ ಕೇಳಿರಿ ವರಗಳ ಧೈರ್ಯದಲಿ ಬಾಲನು ಸುಲಭದಿ ಒಲಿಯುವ ಒಳ್ಳೆಯ ಕಾಲವಿದೆಲ್ಲರಿಗೆ ಬೇಗನೆ 2 ಜನುಮ ಜನುಮಗಳ ಪುಣ್ಯದ ರಾಶಿಯು ಜನುಮಾಷ್ಟಮಿ ದಿನದಿ ಲೋಕಕೆ ಜನುಮಾದ್ಯಷ್ಟಕದಾತನ ದರುಶನ ಮನಕೆ ಪ್ರಸನ್ನತೆ ಕೊಡುವುದು ಪೋಗುವ 3
--------------
ವಿದ್ಯಾಪ್ರಸನ್ನತೀರ್ಥರು
ಬರಿದಿದೇಕೆಲೋ ನಿನ್ನಂತರಿರವು ಸಿರಿಯರರಸ ಅರಿಯನೇನೆಲೋ ಪ ಮರೆಯ ಮೋಸದಿ ಕುಕ್ಕಲು ಮೀನ ಹರಿವ ಉದಕದಿ ಬಕನು ಮೌನ ಧರಿಸಿದಂದದಿ ಪರಮಮೌನ ಧರಿಸಿ ಕುಳಿತು ಮರುಳುಗೊಳಿಸಿ ಪರರ ಕೊರಳ ಮುರಿವ ದುರುಳತನದ ಕೃತಿಗೆ ಹರಿಯು ಒಲಿಯುವನೇನು ಮರುಳೆ1 ಕಪಟ ನೀಗದೆ ಹುಚ್ಚು ಬಿಡದೆ ಗುಪಿತ ತಿಳಿಸದೆ ಮುಚ್ಚಿ ಕಣ್ಣು ತಪಸಿಯಂದದಿ ಕುಪಿತ ಮಾನಿಸನಾಗಿ ಕುಳಿತು ತಪಸಿಯಂತೆ ತೋರಿ ಜನರ ಅಪಾಯಮಾಳ್ಪ ಕಪಟವೇಷಕೆ ಸುಫಲ ದೊರೆಯುವುದೇನು ಮರುಳೆ 2 ಉದಯದೇಳುತ ಓಡಿ ಹೋಗಿ ನದಿಯ ಮುಳುಗುತ ತೀಡಿಗಂಧ ಹದದಿ ಬರೆಯುತ ವಿಧವಿಧಮಂತ್ರೊದರಿ ಇತರರ ಸದನ ಮುರಿದು ಸತಿಯ ಸುತರ ಮುದದಿ ಪೊರೆವ ಅಧಮ ವ್ರತಕೆ ಸದಮಲಾಂಗೊಲಿವನೆ ಮರುಳೆ 3 ಕಪಟ ನೀಗದೆ ಜಟೆಯ ಬೆಳಸಿನ್ನು ಚಪಲತನದಿಂ ದುಟ್ಟು ಕೌಪೀನ ನಿಟಿಲದಲ್ಲಿ ಭಸ್ಮಧರಿಸಿ ನಟಿಸಿ ಸಾಧುವರ್ತನದಿಂ ದ್ಹೊಟ್ಟೆ ಹೊರೆವ ಭ್ರಷ್ಟತನಕೆ ಕೆಟ್ಟ ಬವಣಳಿಯುವುದೆ ಮರುಳೆ 4 ತತ್ವದರ್ಥವ ಬೋಧಿಸುತ್ತ ಭೃತ್ಯ ಸಮೂಹವ ಸಂಪಾದಿಸುತ್ತ ನಿತ್ಯಸತ್ಯವ ವಿತ್ತದಾಸೆಗುತ್ತರಿಸುವಸತ್ಯಭ್ರಷ್ಟ ವರ್ತನಕೆ ಮುಕ್ತಿದಾಯಕ ಸಿರಿಯರಾಮ ಮುಕ್ತಿಸುಖ ನೀಡುವನೆ ಮರುಳೆ 5
--------------
ರಾಮದಾಸರು
ಬರುತಾದೋ ಪದ ಬರುತಾದೋ ಪ ಪದುಮನಾಭನ ದಿವ್ಯಸದಮಲಪಾದದ ವಿಧವಿಧ ಮಹಿಮೆಯಯ ಪೊಗಳಿ ಬಾಳುವ ಪದ ಅ.ಪ ಛಂದಸ್ಸು ಮೀಮಾಂಸೆ ಅಂದದ ಯತಿಗಣ ಒಂದು ನಾನರಿಯದೆ ಸಂದೇಹಮಿಲ್ಲದೆ ಮಂದರಧರನಡಿ ಒಂದೇ ತ್ರಿಭುವಿಗೆ ಮಿಗಿ ಲೆಂದು ಪಾಡುತಲಾನಂದ ಪಡೆಯುವ ಪದ 1 ಸಕಲರು ತೆಗೆದಿಟ್ಟ ಅಕತಪಚಟಯೆಂಬ ವಖಿಲಮಂ ಗಣಸದೆ ಪ್ರಕಟಮಿನಿತಿಲ್ಲದೆ ಅಕಟಕಟೆನ್ನುತ ನಿಖಿಲವ್ಯಾಪಕನಂಘ್ರಿ ಭಕುತಿಯಿಂ ಭಜಿಸುತ ಮುಕುತಿ ಪಡೆಯುವ ಪದ 2 ಅಳುಕದೆ ಲೌಕಿಕ ತಿಳೆಸುಖಕೆಳಸದೆ ಮಲಿನದಿ ಸಿಲ್ಕದೆ ಚಲನವಲನಿಲ್ಲದೆ ಜಲಜಾಕ್ಷ ಭಕ್ತರ ಸುಲಭ ಶ್ರೀರಾಮನಂ ಒಲಿಸಿ ಪ್ರಾರಬ್ಧವ ಗೆಲಿದು ನಲಿಯುವ ಪದ 3
--------------
ರಾಮದಾಸರು
ಬರುವ ಸಂದಣಿ ಭಾಳೆ ಭಾಳವೆ ಅಲ್ಲಿ ರಂಭೆ ಊರ್ವಶಿಯರ ಸಮ್ಮೇಳವೆ ಪ. ವರಗಿರಿ ವಾಸನ ಕರೆಯ ಬರುವ ಸೊಬಗು ಧರೆಯ ಮ್ಯಾಲಿಲ್ಲ ಸುಂದರಿಯೆ ರುಕ್ಮಿಣಿಯೆ 1 ಪಾಂಚಾಲಿ ಮೊದಲಾದ ಕೆಂಚೆಯರ ಆಭರಣವುಮಿಂಚಿನಂತೆ ಹೊಳೆಯುತ ಸಿದ್ಧರಾಗಿಹರಮ್ಮ ಚಂಚಲೆಯರು2 ಕಾಲಿಂದಿ ಮೊದಲಾದವರು ಭಾಳ ವಸ್ತಗಳಿಟ್ಟುವೈಯಾರಿಯರು ಒಲಿಯುತ ವ್ಯಾಳಾಶಯನನ ಬಳಿಗೆ 3 ಭದ್ರೆ ಮೊದಲಾದವರು ತಿದ್ದಿ ತಳಪಿಟ್ಟು ಶುದ್ಧ ವಸ್ತಗಳಿಟ್ಟುಸಿದ್ಧರಾಗಿಹರಮ್ಮ ಅನಿರುದ್ದನ ಕರೆಯಲು4 ಮಂದಗಮನೆಯರು ಗಂಧಕಸ್ತೂರಿ ಪುಷ್ಪಅಂದಾಗಿ ಧರಿಸಿ ಆನಂದವಾಗಿಹರಮ್ಮ5 ಕಾಲಂದುಗೆಗೆಜ್ಜಿ ತೋಳಲೆ ತಾಯಿತ ಭಾರಿ ವಸ್ತಗಳಿಟ್ಟು ಲೋಲ್ಯಾಡುತಿಹರಮ್ಮ6 ಅಚ್ಚಮುತ್ತಿನ ವಸ್ತ ಸ್ವಚ್ಚತೋರುವಂತೆ ಬಿಚ್ಚಿ ಚಾದರ ಹೊತ್ತು ಮಚ್ಚನೇತ್ರಿಯರೆಲ್ಲ 7 ಅಂದುಗೆ ಅರಳೆಲೆ ಬಿಂದುಲಿ ಭಾಪುರಿ ಕಂದರಿಗೊಸ್ತಗಳಿಟ್ಟು ಆನಂದವಾಗಿಹರಮ್ಮ8 ಮುತ್ತಿನ ಝಲ್ಲೆ ವಸ್ತಗಳಿಟ್ಟು ಫುಲ್ಲನಾಭನ ಕರೆಯಲು ಎಲ್ಲರೂನಿಂತಾರೆ9 ಶ್ರೇಷ್ಠ ರಾಮೇಶನ ಅಷ್ಷೊಂದು ಕರೆಯಲು ಪಟ್ಟಾವಳಿಗಳನುಟ್ಟು ಧಿಟ್ಟೆಯರು ನಿಂತಾರೆ10
--------------
ಗಲಗಲಿಅವ್ವನವರು
ಬಲ್ಲನೆಂಬೊ ಮಮಕಾರ ಬಿಡು ಎಲ್ಲೆಲ್ಲಿ ಇರುವ ಶ್ರೀಹರಿಯ ನೋಡು ಒಲಿಸಿ ಒಲಿಸಲು ನಿಲುವುದು ಜಿತವಾಗಿ ಹಾಡು ಪ ನೋಡಿದ್ದನ್ನೆ ನೀ ನೋಡು | ನಿನ್ನೆ ನೋಡಿದೆನೆಂಬೊ ಖೋಡ್ಯಾಲಸ್ಯ ಬಿಡು ಹುಡುಕಿ ತತ್ವಂಗಳ ಸಮನಾಗಿ ಜೋಡು ನಡುವೆ ತತ್ಪತಿಯ ಒಡೆಯನ ಇಡು 1 ಕೇಳಿದ್ದನ್ನೇ ನೀ ಕೇಳು | ನಿನ್ನ ಆಳುವರ ಪಾದಕೆ ಬೀಳು ಹಳೆವ ವಾರ್ತಿಗೆ ಅಳುಕುವ ಮನ ಸೀಳು ಬಲು ಪರಿಯಲಿ ಕಾಮ ಕ್ರೋಧಂಗಳ ಹೂಳು 2 ಅಭಿವೃದ್ಧೀಗೆ ಬರುವುದು ಲೋಭ ನಿಭಾಯಿಸಲು ಅದು ಹೊರುವುದು ಲಾಭ ಸಭೆಯೊಳು ಪೇಳಬ್ಯಾಡ ಸ್ವಭಾವ ಇಭವರದನಾಗುವ ಅಭಾವ 3 ನರ ಜನ್ಮವೇ ಬರುವೊದು ಕಷ್ಟ ಹರಿ ಸರ್ವೋತ್ತಮೆಂಬೋದೆ ಇಷ್ಟ ಸ್ಥಿರವಲ್ಲ ತ್ವರಿತ ಮಾಡೆಲೊ ಭ್ರಷ್ಟ ಅರಿತವರ ಕೂಡೆ ನಿರತಾಡು ಶ್ರೇಷ್ಠ 4 ಅಂಕುರಾವು ಪುಟ್ಟಿಹದೀಗ ಬಿಂಕದಿಂ ಪರಿಪಾಲಿಸೊ ಬೇಗ ಶಂಕರನುತ ವಿಜಯ ರಾಮಚಂದ್ರವಿಠಲನ ಪದ- ಪಂಕಜಕೆ ಅಳಿಯಂತೆ ಸಾಗು 5
--------------
ವಿಜಯ ರಾಮಚಂದ್ರವಿಠಲ
ಬಲ್ಲವಾಗಿಲ್ಲೆ ಪರಮಾತ್ಮಾ ಎಲ್ಲೆಲ್ಲಿ ನೋಡಿದರು ಅಲ್ಲಲ್ಲಿ ಇರುತಿಪ್ಪ ಪ ನೋಡಿದವೆಲ್ಲ ಶ್ರೀಹರಿಯ ಪ್ರತಿಮೆಗಳೆಂದು ಆಡಿÀದವೆಲ್ಲ ಹರಿಯ ರೂಪವೆಂದು ಮಾಡಿದದ್ದೆಲ್ಲ ಶ್ರೀಹರಿಯ ಸೇವೆ ಎಂದು ಕೂಡಿದದ್ದೆಲ್ಲ ಹರಿ ಭಕ್ತರೆಂದು 1 ತಾಪತ್ರಯಗಳೆಲ್ಲ ಮಹಾ ತಪಸು ಎಂದು ರೂಪಗಳೆÀಲ್ಲ ಹರಿಕಾಂತಿ ಎಂದು ವ್ಯಾಪಾರ ಹರಿ ಅಧೀನವೆಂದು 2 ತಾರತಮ್ಯಕಿದು ಪರಲೋಕದಿ ಸರಿಯಿಲ್ಲ ಸಿರಿ ಹರಿಯದೊರೆ ತನಗೆ ಎಂದೆನುತಾ ನಿತ್ಯ ಕಾಲಕಾಲಕೆ ಹರಿಯ ವ್ಯಾಪಾರ ಸ್ಮರಿಸುತ್ತ ಓಡ್ಯಾಡುತ 3 ಒಲಿಸಿ ಒಲಿಸಿ ಒಲಿದು ಒಲಿದು ಖಳರೊಳಗಾಡದಲೆ ವಿಜಯವಿಠ್ಠಲ ವೆಂಕಟ ಶೈಲ ನಿವಾಸಾ ಸರ್ವೋತ್ತಮನೆ ಗತಿ ಎಂದು 5
--------------
ವಿಜಯದಾಸ
ಬಹುಕಾಲಕೆ ಕಂಡೆ ಚೋದ್ಯವ ಇದು ಅಹುದಾದರಹುದೆನ್ನಿ ಇಲ್ಲವೆ ಛಿ ಎನ್ನಿ ಪ ಚಂಬು ಚರಿಗೆಯಂತೆ ತೆಗೆಯಿತು ತಾನೆತಾನಾಗಿ 1 ನಿತ್ಯ ಸಕಲತ್ತು ತಾನಾಗುತ ಜಾತಿಯ ನಡತೆಯನಡೆಸುವುದನು 2 ಸರ್ವತ್ರಸಮಗಾಣುತ ಮನೆಯೆಲ್ಲ ನೀರಾದುದು 3 ಕೊಳಗು ತಾನು ಒಲಿಸಿಕೊಂಡು ಮೇಳದಿ ಏಕೋ ಪಾತ್ರಗಳಿಂದ ಮೆರದುದ 4 ಜತನವು ಎಂದೆನ್ನಿಸಿಕೊಳ್ಳುತ ಲಕ್ಷ್ಮೀಪತಿಯಭೀಷೇಕಕ್ಕು ತಾನೆ ತಾನಾದುದ 5
--------------
ಕವಿ ಪರಮದೇವದಾಸರು
ಬಾ ವೆಂಕಟಶೈಲಾಧಿಪ ಮನ್ಮನಕೆ ತಡಮಾಡುವುದ್ಯಾಕೆ ಶ್ರೀ ವಲ್ಲಭನಾ ನಿನ್ನಂಘ್ರಿ ಕಮಲಕೆ ನಮಿಸುವೆ ಪ್ರತಿ ಕ್ಷಣಕೆ ಪ ನೀ ಒಲಿದೆನ್ನ ದಯಾವಲೋಕನದಿ ಪಾವನಮಾಡಲು ದೇವವರೇಣ್ಯ ಅ.ಪ. ವೈಕುಂಠಾಧೀಶ ವಿಗತಕ್ಲೇಶ ಚಿತ್ಸುಖಮಯವಪುಷ ಭವ ಮದನ ದಿ ವಾಕರ ಪ್ರಮುಖ ದಿವೌಕಸ ವರದ 1 ಮಮಸಮಾಸ್ವಾಮಿ ಮದಂತರ್ಯಾಮಿ ಸರ್ವಾಂತರ್ಯಾಮಿ ಅಮಿತಾತ್ಮ ಅತಿರೋಹಿತ ನಿಷ್ಕಾಮಿ ಸೇವಿತ ಶ್ರೀಭೂಮಿ ಅಮಿತ ಸುಗುಣಪೂರ್ಣ ಅಮಲಮಹಿಮ ಖಳದಮನ ದಯಾಳೊ 2 ನಾಮಾಭಿಧೇಯ ಲೋಕಾಧ್ಯಕ್ಷಾ ಕಮಲಾಯತಾಕ್ಷ ಸೋಮ ಭೂಮ ನಿಸ್ಸೀಮ ಮಹಿಮ ತ್ರಿ ಧಾಮರಾಮ ಘನಶ್ಯಾಮ ಲಲಾಮ 3 ಪವನಂತರಾತ್ಮಾ ನಿರ್ಮಲಾತ್ಮಾ ಪರಮಾತ್ಮ ಜ್ಞಾನಾತ್ಮಾ ಅವಿಕಾರ ಅತಿರೋಹಿತ ಭೂತಾತ್ಮ ಪೂತಾತ್ಮ ಮಹಿತಾತ್ಮ ತ್ರಿವಿಧ ಜೀವರಿಗೆ ವಿವಿಧ ಫಲಂಗಳ ತವಕದಿ ಕೊಟ್ಟವರವರ ಪಾಲಿಸೋ 4 ಸೃಷ್ಟ್ಯಾದಿಕರ್ತ ತ್ರಿಜಗದ್ಭರ್ತ ಲೋಕೈಕ ಸಮರ್ಥ ವೃಷ್ಣೀಶಾ ವೃಂದಾರಕ ರಿಪುಹರ್ತಾ ಮುಕ್ತರ ಪುರುಷಾರ್ಥ ಪರಮೇಷ್ಟಿ ಜನಕ ಶಿ ಷ್ಟೇಷ್ಟ ಹೃಷ್ಟ ಅನಿವಿಷ್ಟ ನಿವಿಷ್ಟ 5 ವೇದಸ್ತೇಯಾರಿ ಮಂದರಧಾರಿ ಭೂವರ ನರಹರಿ ಭೂ ದಾನವ ಬೇಡಿದ ಚಾಪಕುಠಾರಿ ರಾವಣಕುಲವೈರಿ ಯಾದವ ವಂಶ ಮಹೋದಧಿ ಚಂದಿರ ಸಾದಿತ ತ್ರಿಪುರ ಖಳೋದರ ಪಾಹಿ 6 ದಯದಿಂದ ನೋಡೊ ದೀನೋದ್ಧಾರ ಸದ್ಗುಣ ಗಂಭೀರಾ ಪ್ರಿಯ ನೀನೇ ಎನಗೆ ಲೋಕೋದ್ಧಾರ ಸೌಂದರ್ಯಸಾರಾ ಹಯಮುಖ ಲೋಕತ್ರಯ ಪತ್ರಯಾಮಯ ವಯನಗಯ್ಯ ನಾ ಬಯಸುವೆ ನಿನ್ನ7 ಭವ ಭಯಹಾರಿ ಬಿನ್ನೈಸುವೆ ಶೌರಿ ವಿಹಿತಾಹಿತಗಳು ನಿನ್ನನು ಮೀರಿ ಮಾಳ್ಪೆಗೆ ಕಂಸಾರೀ ಮಹಿತ ಶಮಲ ಸದಹಿತ ಲಕುಮಿ ಭೂ ಸಹಿತ ಮನದಿ ಸನ್ನಿಹಿತನಾಗೆಲೋ 8 ದಾತಾ ನೀನಲ್ಲದನ್ಯರರಿಯೇ ಕಂಡವರನು ಕರಿಯೇ ಪ್ರೀತನಾಗೆನ್ನೊಳು ಶ್ರೀ ಹರಿಯೇ ಮೂರ್ಲೋಕದ ದೊರೆಯೇ ಶ್ರೀ ತರುಣಿಯೊಡಗೊಡೀ ತನು ಸದನಕೆ ನೀ ತ್ವ ರಿತದಿ ಜಗನ್ನಾಥ ವಿಠ್ಠಲ 9
--------------
ಜಗನ್ನಾಥದಾಸರು
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರಯ್ಯ ಬೇಗ ಶ್ರೀ ಶ್ರೀನಿವಾಸ ಭಕ್ತರ ನುಡಿಗೆ ಪ. ಬಾರೋ ನಿನ್ನ ಮುಖ ತೋರೊ ತ್ವರಿತದಲಿ ಸಾರಸಾಕ್ಷ ನಿನ್ನ ಸಾರಿದೆನಯ್ಯ ಅ.ಪ. ವೈಕುಂಠದಿಂದ ಬಂದೆಯೊ ಗಿರಿಗೆ | ಲಕ್ಷ್ಮಿಯು ತಾ ಪೋಗೆ ಬೇಕಾಗಲಿಲ್ಲವೊ ಅರಮನೆ ನಿನಗೆ | ಮುನಿಗಳ ವರದನಿಗೆ ಬೇಕಾದ್ವೈಭವ ನೀ ಕೈಕೊಳುತ ಸಾಕುತಲಿಪ್ಪೆಯೊ ನೀ ಕರೆದವರನು 1 ಶ್ರೀಸ್ವಾಮಿ ಪುಷ್ಕರಣಿಯ ದಡದಲ್ಲಿ | ನೀ ವಾಸಿಸುತಲ್ಲಿ ಸೇವಾದಿಗಳನು ಬಗೆಬಗೆ ಕೊಳ್ಳುತಲಿ | ಸುಜನರ ಪೊರೆಯುತಲಿ ಈ ವಿಧದಿಂದಲಿ ಭಾವಜನಯ್ಯನೆ ಪಾವಕಸಖನೊಳು ಪಾವನನಾಗಿಹೆ 2 ವರ್ಣಿಸಲರಿಯೆ ನಿನ್ನನು ದೊರೆಯೆ | ಲೋಕದಿ ಅಚ್ಚರಿಯೆ ಘನ್ನ ಸುಮಹಿಮನೆ ಬೇಡುವದರಿಯೆ | ನೀನೆ ಕೈಪಿಡಿಯೆ ಮುನ್ನ ಮಾಡಿದ ಘನ್ನ ಪಾಪಗಳು ಇನ್ನಿರಲಾರವೊ ಮನ್ನಿಸಿ ಪೊರೆಯೊ 3 ಜಗಸೃಷ್ಟಿಯಿಂದ ಜೀವರ ಮಾಳ್ಪೆ | ಜೀವರ ಸೃಷ್ಟಿಪೆ ತ್ರಿಗುಣಾದಿಗಳಿಂದ ತಿರುಗಿಸುತಿರ್ಪೆ | ಕರ್ಮದ ತೆರೆಮಾಳ್ಪೆ ವಿಗಡ ದೇಹದೊಳು ಬಗೆ ಬಗೆ ದೇವರು ತಗಲಿ ನಿನ್ನ ಪದನಗಧರ ಕಾಣರೊ 4 ಕಣ್ಣ ಬಿಟ್ಟಿರುವೆ ಬೆನ್ನೊಳೆ ಬೆಟ್ಟವೆ | ಮಣ್ಣ ತಿನುತಿರುವೆ ಚಿಣ್ಣ ನಿನಗೊಲಿದು ಚಿಣ್ಣನಾಗ್ವೆ | ಬೆನ್ನೊಳು ಪರಶುವೆ ಹಣ್ಣು ಕೊಟ್ಟವಳಿಗೆ ಒಲಿದು ಗೋಪಿಯರ ಕಾಯ್ದು ಬಣ್ಣಗೆಟ್ಟು ಹಯವನ್ನೇರಿದೆ5 ಆಕಾಶರಾಯನ ಮಗಳ ತಂದೆ | ಈ ಗಿರಿಯಲಿ ನೀನೆ ಸಾಕುವ ಬಿರುದು ನಿನ್ನದೆಂದೆ | ನೀ ಕಾಯಲೆಬೇಕೆಂದೆ ನೂಕಿ ಎನ್ನ ಭವತಾಪನೀಗಲೆ ಶ್ರೀಕಳತ್ರ ನಿನ್ನ ಭಕ್ತರೊಳಿಡಿಸೊ 6 ಅಪಾರಮಹಿಮ ಅದ್ಭುತಚರಿತ | ಶೇಷಾದ್ರಿಯೊಳ್ ನಿರುತ ವ್ಯಾಪಾರ ಮಾಡುತ ಗುಪ್ತದೊಳಿರುತ | ನಿಜ ಭಕ್ತಗೆ ಕಾಣುತ್ತ ಪರಿ ಅದ್ಭುತ ಚರಿತೆಯ ತೋರುವ ಗೋಪಾಲಕೃಷ್ಣ ವಿಠ್ಠಲನೆ ನೀ ಕಾಯೊ 7
--------------
ಅಂಬಾಬಾಯಿ
ಬಾರೊ ಶ್ರೀವೆಂಕಟರಮಣ ತವಪಾ- ದಾರಾಧಕರನು ಪೊರೆಯಲು ಕರುಣಾಪೂರ್ಣ ಪ ಬಾರೋ ನಮಿಸುವೆ ಪೂರ್ಣ ಕೃಷ್ಣಾ ತೀರದಲಿ ಮಾಂಡವ್ಯ ಋಷಿಗಳ ಘೋರ ತಪಸಿಗೆ ಒಲಿದು ಗುಡೆಬಲ್ಲೂರು ಮಂದಿರನೆಂದು ಕರೆಸುತ ಅ.ಪ ಎಲ್ಲ ಕಡೆಗೆ ನೆಲೆಸಿರುವ ಸಿರಿ ನಲ್ಲನೊಲಿಸಲು ತಪವನು ಗೈವ ಬಲ್ಲಿದ ಮಾಂಡವ್ಯರಿರವ ಕಂಡು ಗೊಲ್ಲರು ಮಾಡಿದರನು ದಿನ ಶೇವಾ ಪುಲ್ಲನಾಭನು ದರುಶನವ ಮುನಿ ವಲ್ಲಭಗೆ ತೋರಿಸಲು ಬೇಡಿದ ಗೊಲ್ಲರೆನ್ನಯ ಭಕುತರವರಿಂದಲ್ಲಿ ಪೂಜೆಯಗೊಳ್ವದೆಂದನು 1 ಬಾರೊ ಬೇಗನೆ ದ್ವಿಜರಾಜ ಧ್ವಜ ವೇರಿ ಪೊರೆದೆಯೊ ಬಂದು ಕರಿಯೆ ಕರಿ ರಾಜ ತೋರೋ ಚವತರಣ ಸರೋಜಯುಗ್ಮ ಸಾರಿ ಭಜಿಸುವ ಭಕುತರ ಕಲ್ಪ ಭೂಜ ಮಾರಜನಕನೆ ಚಾರುಕನಕ ಕಿ ರೀಟ ಕುಂಡಲಹಾರಪದಕ ಕೇಯೂರ ಸಾಲಂ- ಕಾರ ವಪು ಶೃಂಗಾರದಲಿ ರಥವೇರಿ ಮೆರೆಯುತ 2 ವೇದವೇದ್ಯನೆ ನಿನ್ನ ಪ್ರೇಮಾ ಪಡೆದ ಪಾದ ಮಹಿಮೆಯ ವರ್ಣಿಸಿದ ದೇವ ಶರ್ಮಾ ಬೋಧಾದಿ ಸದ್ಗುಣಧಾಮ ಪಾಹಿ ಮೇದಿನಿ ವಿಬುಧ ಪೂಜಿತ ಪೂರ್ಣಕಾಮ ಮೇದಿನಿಯೊಳು ಶ್ರೀದ ನಿನ್ನಯ ಪಾದಯುಗಳವ ಕಂಡು ಹರುಷದಿ ಪಾದುಕೆಯ ರಚಿಸಿದಗೆ ಒಲಿದ ಅಗಾಧ ಮಹಿಮನೆ ಮೋದಗರೆಯಲು 3 ಒಂದಿನ ನಿಶಿಯೊಳುತ್ಸವದಿ ದಣಿ ದಂದು ಮಲಗಿರಲರ್ಚಕರು ದೇವಾಲಯದಿ ಬಂದು ಚೋರರು ಅತಿಜವದಿ ನಿನಗೆ ಪೊಂದಿಸಿದೊಡವೆ ಗಳನು ಚೌರ್ಯತನದಿ ಮಂದ ಮತಿಗಳು ಒಯ್ಯುತಿರೆ ಖಳ ವೃಂದಕಂಗಳು ಪೋಗೆ ತುತಿಸಲು ಚಂದದಿಂ ಬರೆ ಹೇಮನಾಮವ ಕುಂದದಲೆ ಮಾಡಿಸಿದರಾಕ್ಷಣ 4 ನೀರಜಾಸನ ಮುಖ್ಯ ತ್ರಿದಶ ಗಣದಿಂ- ಪಂಕಜ ಭಕ್ತಪೋಷ ಸೂರಿಜನರ ಸಹವಾಸ ಕೊಡು ಧಾರುಣಿಯೊಳು ಕೃಷ್ಣ ತೀರನಿವಾಸ ಬಾರೊ ನಿನ್ನನು ಶೇರಿದವರW ವಾರಿವಾಹ ಸಮೀರ ಕಾರ್ಪರ ನಾರ ಶಿಂಹಾತ್ಮಕನೆ ಯನ್ನಯ ಭವ ಭಯ ದೂರಮಾಡಲು 5
--------------
ಕಾರ್ಪರ ನರಹರಿದಾಸರು