ಒಟ್ಟು 4775 ಕಡೆಗಳಲ್ಲಿ , 127 ದಾಸರು , 3268 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇನಿತೆಂದು ಶಾಸ್ತ್ರ ಪೇಳುವವು ಪ ಪುನಹ ಪುನಹ ಭಗವತ್ಪ್ರಾಪ್ತಿ ಬೇಕೆಂಬುವರಿಗೆ ಅ.ಪ. ಅನುಬಂಧಿಗಳಲಿ ಮಮತೆಯನೆ ಬಿಡು ವಿಷಯ ವಾ ಸನೆಯನೀಡಾಡು ಸುಜ್ಞಾನ ಭಕ್ತಿಯ ಬೇಡು ಮನದಲ್ಲಿ ಹರಿಯ ಮೂರ್ತಿಯನೆ ನೆರೆ ನೋಡು ಸುಜ್ಞ ರನು ಕೊಂಡಾಡು ಅಜ್ಞಾನಿಗಳ ಸಹವಾಸ ಸುಡು ವನಜನಾಭನ ಪೂಜೆ ಮಾಡು ಪ್ರತಿ ಕ್ಷಣ ಬಿಡದೆ ಭಗವದ್ಗುಣಗಳ ಕೊಂಡಾಡು 1 ಪರಮಾಣು ಮೊದಲ್ಗೊಂಡು ವ್ಯಕ್ತ ತತ್ತ್ವದೊಳ ಹೊರಗೆ ವ್ಯಾಪಕನಾಗಿ ತದ್ರೂಪ ನಾಮದಿಂ ಕರೆಸುತಲಿ ತದ್ವಿಕಾರಗಳಿಲ್ಲದಲೆ ಸೃಷ್ಟಿ ಪರಿಪಾಲನೆ ಲಯಗಳನೆ ಮಾಡಿ ಮೋದಿಸುತಾ ಪರಮಾತ್ಮನೊಬ್ಬನಿಹನೆಂದು ಹರಿಗೆ ಮರೆಯದಲೆ ಮಹಿಮೆಗಳ ಪೊಗುಳುತಿರು ಮನುಜಾ 2 ಹರಿಭಕ್ತರಿದ್ದೆಡೆಗೆ ಹರಿದು ಹೋಗಲಿ ಬೇಕು ತಿರಿಯ ಕ್ಪುಂಡ್ರಗಳ ನಿಂದಿಸಬೇಕು ಹರಿಯ ನಾಮತ್ರಯಾಂಕಿತರಿಗೆರಗಲು ಬೇಕು ಗುರು ಹಿರಿಯರ ವಗುಣಗಳೆಣಿಸದಿರ ಬೇಕು ಮ ತ್ಸರವ ಬಿಡಬೇಕು ಭಕ್ತರಲಿ ಹೀಗೆ ಒರೆದೊರೆದು ಪೇಳುವರು ಬುಧರು ನಿತ್ಯದಲಿ 3 ನಿತ್ಯ ನೈಮಿತ್ತಿಕ ಸುಕರ್ಮ ಮಾಡಲು ಬೇಕು ಕೃತ್ಯವಲ್ಲದೆ ಲೋಕವಾರ್ತೆಗಳ ಬಿಡಬೇಕು ಚಿತ್ತದಲಿ ಹರಿಪಾದ ಚಿಂತಿಸುತಲಿರಬೇಕು ವಿತ್ತದೇಹಾಗಾರ ಭಗವಂತನದೆಂದು ದೇ ಪರಿಯಂತ ಮಾಳ್ಪ ಕರ್ಮ ಸತ್ಯಸಂಕಲ್ಪಕಿವು ಪೂಜೆ ಎನಬೇಕು 4 ಸೀತೋಷ್ಣ ಸುಖ ದುಃಖ ಮಾನಾಪಮಾನ ಜಯ ಭೀತಿ ನಿರ್ಭೀತಿ ಅಪಜಯ ಜ್ವರಾಪಸ್ಮಾರ ಭೂತ ಬಾಲ ಗ್ರಹ ಮೃಗಸರ್ಪ ನೃಪ ಚೋರ ಯಾತನೆಗೆ ಭಯಪಡದೆ ಸರ್ವತ್ರದಲಿ ಜಗ ನ್ನಾಥವಿಠ್ಠಲನ ಸ್ಮರಿಸುತಿರು ಮಹಾ ಪಾತಕವ ಪರಿಹರಿಸಿ ಪೊರೆವ ದಯದಿಂದಾ 5
--------------
ಜಗನ್ನಾಥದಾಸರು
ಇನಿಯಗೆನ್ನೊಡನೆ ಪ್ರೀತಿಯೋ ಆ ತರುಣಿಯೊಳ್‍ಘನತರ ಪ್ರೀತಿಯೊ ಪೇಳೆನೆಗೆಕನಕಾಂಗಿಯವನೆನಿಸಿದ ಚಾರಿತ್ರವನಿನಗರುಪುವೆಯದ ತಿಳಿದೆನಗುಸುರೆ ಪ ಸುರಗಿ ಸಂಪಿಗೆ ಮಲ್ಲಿಗೆ ಜಾಜಿ ಮೊದಲಾದಪರಿಪರಿ ಪುಷ್ಪಮಾಲೆಗಳಾಕೆಗೆತರುಣಿ ಕೇಳಲ್ಲಿ ತಾ ಪುಷ್ಪದ ಸರಗಳಕರುಣದಿಂದೆನ್ನ ಬಳಿಗೆ ಕಳುಹಿದ ಮೇಲೆ 1 ನಾನಾ ವಿಧಧ ವಿಚಿತ್ರಾಂಬರಗಳಆ ನಳಿನಾಕ್ಷಿಗೆ ಕಳುಹಿದನೆಮಾನಿನಿಯೊಂದೆ ವರ್ಣದ ವಸ್ತ್ರಗಳ ಸುಮ್ಮಾನದಿಂದೆನ್ನ ಬಳಿಗೆ ಕಳುಹಿದ ಕಾಣೆ 2 ಏಕಾವಳಿ ಪಂಚರತ್ನದ ಸರಗಳನೇಕ ಹಾರಗಳ ಶೃಂಗಾರವಾಕೆಗೆರಾಕೇಂದುಮುಖಿ ನನಗೊಂದೆ ಹಾರವುಯಿದಶ್ರೀ ಕೆಳದಿ ರಾಮೇಶ್ವರ ತಾನೆ ಬಲ್ಲ 3
--------------
ಕೆಳದಿ ವೆಂಕಣ್ಣ ಕವಿ
ಇನಿಯಗೆನ್ನೊಡನೆ ಮುನಿಸೋ ಪ್ರೀತಿಯೋ ಪೇಳೆವನಜಾಕ್ಷಿಯವನೆಸಗಿದುದಾ ಪೇಳ್ವೆನೆ ಪ ಮೃಗಮದ ತಿಲಕವ ಪಣೆಗೆ ತಾನಿಡಲಿಲ್ಲಅಗಿಲುಗಂಧವ ಮೈಗೆ ತೀಡಲಿಲ್ಲ ಸೊಗಸು ಸಂಪಿಗೆ ಸರವಮುಡಿಸಿ ಝಗಝಗಿಪ ಮುತ್ತಿನ ಸರವಹಾಕದೆ ಎನ್ನ ಮುಗುಳು ಮೊಲೆಗೆಸೆಳ್ಳುಗುರಿಕ್ಕದಿದ್ದ ಮೇಲೆ1 ಗುರುಕುಚರ್ಚಿತ ಮೃಗಮದ ಪತ್ರವ ಸೆರಗಿನಿಂದೊರಸಿದನೆಕುಂಕುಮಗಂಧವ ಭರದಿ ಲೇಪಿಸಿದನೆ ತಾನೆತಾಂಬೂಲವ ಹರುಷದಿ ಕರದಿತ್ತನೆಆಲಿಂಗಿಸಿ ಪರಮ ಸಂತೋಷದಿ ತಿರುಗಿ ನೋಡಿದನೆ 2 ಧರಿಸಿದ ಮಿಸುನಿಯ ಆಭರಣಂಗಳ ಭರದಿಂದ ತೆಗೆದ ತಾನೆಚಿನ್ನದುಂಗುರವ ಬೆರಳಿಗೆ ನಲಿದಿಟ್ಟನೆತರುಣಿ ಬಾರೆಂದು ನಂಬುಗೆಗೊಟ್ಟನೆಶ್ರೀ ಕೆಳದಿಯ ಪುರದ ರಾಮೇಶ ಎನ್ನನೆರೆದು ಮನ್ನಿಸಿದನೆ3
--------------
ಕೆಳದಿ ವೆಂಕಣ್ಣ ಕವಿ
ಇನ್ನಾರೆ ತಿಳಿದು ನೋಡು ಮನರಾಯಾ | ನಿನ್ನ ಕಣ್ಣದೆರೆದು ಸ್ವ ಹಿತದ ಉಪಾಯಾ ಪ ನಾನಾ ಜನ್ಮದಲ್ಲಿ ಬಂದು ಧರೆಯಲ್ಲಿ ಸುಖ | ವೇನು ಪಡೆದಿ ಹರಿಯ ಸ್ಮರಣೆ ಮರೆದಿಲ್ಲಿ 1 ಶರಗೊಡ್ಡಿ ಬೇಡಿಕೊಂಬೆ ನಾನೀಗಾ | ಸ್ಥಿರವಾದರಿಲ್ಲ ದೂರ ಶಿವಯೋಗಾ 2 ಇಂದು ನಾಳೆವೆನ್ನಬೇಡಿ ನಿಶ್ಚಯಾ ನಿನಗ | ಮುಂದ ಮತ್ತ ದೊರೆಯದಿದ ನರದೇಹಾ 3 ತಂದೆ ಮಹಿಪತಿಸ್ವಾಮಿ ದಯದಿಂದ | ನಂದವ ಪಡೆದು ಗೆಲಿಯೋ ಭವದಿಂದಾ 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇನ್ನುಪೇಕ್ಷೆಯ ಮಾಡೆ ಎನ್ನ ಕಾಯುವರಿಲ್ಲ ಮನ್ನಿಸಿ ಸಲಹೊ ದಯದಿ ಪ ಆಪನ್ನ ಪರಿಪಾಲ ಶ್ರೀನಿವಾಸ ಅಖಿಳಾಮರೇಶ | ಶ್ರೀಶಾ ಅ.ಪ ಕ್ರೂರತರ ಸಂಸಾರ ದಾವಾಗ್ನಿ ಮೇರೆಯಿಲ್ಲದೆ ಸುಟ್ಟು ಘೋರ ದುಃಖ ಬಿಡಿಸುತಿಹುದೊ ವಾರಿಜಾಕ್ಷ ನಿನ್ನ ನಾಮಾಮೃತವೆಂಬ ಮಳೆಗರೆದು ಹರಸಿ ಪೊರೆಯಯ್ಯ | ಜೀಯ 1 ಸತಿಸುತರ ಹಿತಕಾಗಿ ಅತಿ ನೀಚವೃತ್ತಿಲಿ ನಡೆದು ಪತಿತ ನಾನಾದೆನಯ್ಯ ಪತಿತಪಾವನ ನಿನ್ನ ಕಥೆಗಳನು ನುಡಿಸಿ ಸ- ದ್ಗತಿಯ ಪಾಲಿಸಯ್ಯ | ಪ್ರೀಯ 2 ಆರು ಮಂದಿಗಳೆಂಬ ವೈರಿಗಳೆನ್ನನು ಸೇರಿ ಗಾರು ಮಾಡುತಲಿಹರೊ ಕಂಸಾರಿ ಸೇರಿದೆ ಪರಿಹರಿಸೊ ಕಷ್ಟ | ನಿನ್ನಿಷ್ಟ 3 ಪಶುಪತಿ ಘುಡುಘುಡಿಸಿ ವ್ಯಸನದಿಂ ಕೊಲ್ಲುತಿಹುದೋÀ ಶ್ವಸನ ಅಂತರ್ಯಾಮಿ ನಿಶಾಚರ ವೈರಿ ವಶಮಾಡಿ ಎನ್ನ ಪೊರೆಯೊ | ಕಾಯೊ 4 ಅತಿತ್ತ ಪೋಗದಲೆ ಹಿತವಾದ ಚಿಂತೆಯೊಳು ರತನಾಗಿ ಖತಿಗೊಳ್ಳುತಿಹೆನೊ ಸ್ಮøತಿಯಿತ್ತು ಪಾಲಿಸೊ | ಸಲಿಸೊ 5 ಒಂದು ಕ್ಷಣವಾದರು ಕುಂದು ಮಾಳ್ಪಾಲೋಚನೆ ಯಿಂದ ಮನ ಹಿಂದಾಗದೊ ಆನಂದ ಮುನಿವಂದ್ಯ ದ್ವಂದ್ವತಪ ಪಾದದಿ ಮನ ಹೊಂದುವಂದದಿ ಮಾಡೊ | ಎನ್ನ ಕೂಡೊ 6 ಐಹಿಕ ಸುಖ ಬಯಸಿ ಲೋಕದ ವಿಹಿತಗಳೆಲ್ಲ ಮರೆದೆ ತಲ್ಪ ವಿಜಯರಾಮಚಂದ್ರವಿಠಲ ಪಾಹಿ ಸತತಯೆನ್ನ | ಮುನ್ನ 7
--------------
ವಿಜಯ ರಾಮಚಂದ್ರವಿಠಲ
ಇನ್ನೆಲ್ಲಿ ಪರಮುಕ್ತಿ ಸಾಧನವು ನಿಮಗೆ ಭಿನ್ನ ಭೇದವಳಿಯದ ಕುನ್ನಿಮನುಜರಿಗೆ ಪ ಆಸೆಮೊದಲಳಿದಿಲ್ಲ ಮೋಸಕೃತಿನೀಗಿಲ್ಲ ಹೇಸಿ ಸಂಸಾರದ ವಾಸನ್ಹಿಂಗಿಲ್ಲ ದೋಷಕೊಂಡದಿ ನೂಕ್ವ ಕಾಸಿನಾಸ್ಹೋಗಿಲ್ಲ ದಾಸಜನ ವ್ಯಾಸಂಗ ಕನಸಿನೊಳಗಿಲ್ಲ 1 ಸತಿಮೋಹ ಕಡಿದಿಲ್ಲ ಸುತರಾಸೆ ಬಿಟ್ಟಿಲ್ಲ ಅತಿಭ್ರಮೆ ಸುಟ್ಟಿಲ್ಲ ಹಿತಚಿಂತನಿಲ್ಲ ಸ್ಮøತಿವಾಕ್ಯ ಅರಿತಿಲ್ಲ ಅತ್ಹಿತಪಥಗೊತ್ತಿಲ್ಲ ಗತಿಮೋಕ್ಷ ಕೊಡುವಂಥ ಪವಿತ್ರರೊಲಿಮಿಲ್ಲ 2 ಹಮ್ಮು ದೂರಾಗಿಲ್ಲ ಹೆಮ್ಮೆಯನು ತುಳಿದಿಲ್ಲ ಬ್ರಹ್ಮತ್ವ ತಿಳಿದಿಲ್ಲ ಚುಮ್ಮನದಳಿಕಿಲ್ಲ ಕರ್ಮ ತುಸು ತೊಳೆದಿಲ್ಲ ಧರ್ಮಗುಣ ಹೊಳಪಿಲ್ಲ ನಿರ್ಮಲಾನಂದ ಪದವಿ ಮರ್ಮ ಗುರುತಿಲ್ಲ 3 ಸತ್ಯಸನ್ಮಾರ್ಗವಿಲ್ಲ ಭೃತ್ಯನಾಗಿ ನಡೆದಿಲ್ಲ ಉತ್ತಮರೊಳಾಡಿಲ್ಲ ಮತ್ರ್ಯಗುಣ ತೊಡೆದಿಲ್ಲ ನಿತ್ಯಸುಖ ದೊರೆವಂಥ ಸತ್ಸೇವೆಯಿಲ್ಲ4 ಮೂರಾರು ಕೆಡಿಸಿಲ್ಲ ಈರೈದು ತರಿಸಿಲ್ಲ ಆರೆರಡು ಮುರಿದಿಲ್ಲ ತಾರತಮ್ಯವಿಲ್ಲ ಸಾರಮೋಕ್ಷದೀಪ ಧೀರ ಶ್ರೀರಾಮನಡಿ ಗಂ ಭೀರ ದಾಸತ್ವ ಸವಿಸಾರ ಕಂಡಿಲ್ಲ 5
--------------
ರಾಮದಾಸರು
ಇನ್ನೇನ ಮಾಡುವೆ ಇನ್ನಾರ ಬೇಡುವೆ ಪ್ರ-ಸನ್ನ ಚೆನ್ನಕೇಶವ ಎನ್ನ ಬಿನ್ನಪವಮನ್ನಿಸಿ ದಿನದಿನದಲ್ಲಿನಿನ್ನನರ್ಚಿಪಂತೆ ಮಾಡು ಪ. ಮೊಲೆಯುಂಬ ಹಸುಗೂಸು ಮಾತನಾಡಿ ತನ್ನಮನದಭೀಷ್ಟವ ಪೇಳ್ವುದೆಚೀರಿ ಅಳುವದೈಸೆ ಅದನರಿತು ಅದರ ತಾಯಿಅಪ್ಪ್ಪಿಮುದ್ದಾಡಿಸುತ್ತಬಳಲಿಕೆÀ ಪೋಪಂತೆ ನಸುಬಿಸಿಪಾಲನುಬಾಯೆಂದು ಕುಡಿಸುವಳುಸಿರಿಲಲನೆಯರಸ ನಮ್ಮ ಈ ಪರಿಯಲಿನೀನು ಲಾಲಿಸಿ ಸಲಹಬೇಕು 1 ಕರಿ ಕರೆಯಲುಪೊರೆದಂತೆ ಪೊರೆಯೆನ್ನನುಮಕರಿಯ ಕೊಂದು ಪೊರೆದಂತೆ2 ಹುಲಿಯ ಕಂಡೋಡುವ ಹುಲ್ಲೆಯ ಮರಿಯಂತೆಭವದ ಬೇಗೆಯಲಿ ಬೆಂದೆ ವಿಘಳಿಗೆ ಘಳಿಗೆಯೊಳು ಅಲಸದೆ ಪಾಪವಗÀಳಿಸುವ ಗÀಸಣೆಗಂಜೆತುಳಸಿಯ ದಳದಿಂದ ಸಂತುಷ್ಟನಹ ನಿನ್ನಒಲಿಸುವ ಭಾಗ್ಯದಲ್ಲೆ ಈ ಇಳೆಗೆ ಭಾರವಾದೆಇಹಪರ ದುಃಖದ ಹಂಬಲಿಕೆ ಎಳ್ಳಷ್ಟು ಇಲ್ಲಸನ್ಮಾರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ ಅಪವರ್ಗದ ಹಂಬಲಿಕೆ ಎಳ್ಳಷ್ಟು ಇಲ್ಲ3 ಹೆಂಡಿರ ಸಾಕಲಾರದೆ ಹೆಣ್ಣು ಮಕ್ಕಳುಗಳಕಂಡ ಕಂಡವಗೆರ್À ಮಾರಿ ಜಗಭಂಡನೆನಿಸಿಕೊಂಡೆ ಬಡತನ ಹಿಂಗದೆಕೊಂಡೆಯಗಳ ಪೇಳುವೆಉಂಡುಡುವರ ಕಂಡು ಮತ್ಸರ ಮಾಡುವೆತಂಡ ತಂಡÀದವರಿಂದ ಕಡಗೊಂಡರ್ಧನ ಕೊಡದೆ ಕಲ್ಲಪೊರುವೆನು ಕೋ-ದಂಡವೇರಿಸಿ ಕೊಂಡೆನು 4 ದಂಡವಿಡಿದು ವೇಷಧಾರಿಯೆಂಬುದ ಕೈಕೊಂಡು ರಾವಣನಂತೆ ಚರಿಸಿ ಎನ್ನಮಂಡೆ ಬೋಳು ಮಾಡಿ-ಕೊಂಡು ಇಳೆಯೊಳು ಪರಸತಿಯರ ಮೋಹಿಪೆಪುಂಡರೀಕಾಕ್ಷ ಈ ಪರಿಯ ಕ್ಲೇಶಗಳನುಉಂಡರೆÀ ವೈರಾಗ್ಯ ಬಾರದು ಎಲೆಪಾಂಡವಪ್ರಿಯ ಇನ್ನಾರಿ ಗುಸುರುವೆನು ಉ-ದ್ದಂಡಭಕ್ತರ ಸೇರಿಸೊ ಕೈ-ಕೊಂಡು ನಿನ್ನುದ್ದಂಡಭಕ್ತರ ಸೇರಿಸೊ5 ತಪ್ಪಿದರೆ ತಾಯಿ ತನ್ನ ಮಕ್ಕಳುಗಳತಕ್ಕೈಸಿಕೊಂಬವೊಲು ಕಾಮ-ನಪ್ಪ ಎನ್ನಪ್ಪ ಒಂದು ಕೊರತೆಯ ಕಾಣದೆಕರುಣದಿ ಕಾಯಬೇಕುಅಪಾರಮಹಿಮ ನೀನಾಶ್ರಿತ ಜನರನುಅತ್ತ ಹೋಗೆನ್ನೆ ಗಡ ನೀನ-ಪ್ರತಿಮಹಿಮನೆನಿಸಿಕೊಂಡೆ ಅದರಿಂದಅಮರರ ಶಿರೋರನ್ನವೆ ಅರ್ಜುನಸಖಅಮರರ ಶಿರೋರನ್ನವೆ 6 ಸರಿಮಿಗಿಲಿಲ್ಲದ ಸರ್ವೇಶ ಹರಿಯೆಂದುಸಿರಿಹಯವದನರಾಯ ನಿನ್ನಪರಮ ಮುನಿಗಳೆಲ್ಲಪರೀಕ್ಷೆಮಾಡಿ ನೋಡಿಮುನ್ನ ನಿರ್ಣೈಸಿದರುಹಿರಿಯರ ಮಾತನು ಪಾಟಿಮಾಡದನಗೋತ್ರ ಸೂತ್ರಗಳು ಪೋಕುಪ್ರವರ ಗೋತ್ರ ಋಷಿಮೂಲಯೆಂದು ಪ್ರಸಿದ್ಧ ಇನ್ನಾರು ನಿನ್ನಂಥವರು 7
--------------
ವಾದಿರಾಜ
ಇನ್ನೇನು ಕೇಳುತಿ ಛೀ ಹುಚ್ಚ ಮರುಳೆ ಪ ಆರನು ಕಟ್ಟಿನ್ನು ಆರನು ಬಿಟ್ಟಿನ್ನು | ಆರಕ ಆರಿಟ್ಟು ಆರಳಿದು | ಆರು ಚಕ್ರವ ಮೀರಿರುವ | ಮೂರು ಗುಣಕೆ ದೂರಿರುವವನ 1 ಅನುದಿನ | ಸಾಧು ಪುರುಷರ ಸಂಗದಲಿ |ಭೇದವ ಬಿಟ್ಟು ನಾದವನಾಲಿಸಿ | ಬೋಧದೊಳಗೆ ಲಯಗೊಂಡ ಮಹಾತ್ಮನ2 ನಿತ್ಯ ಪೂಜಿಸಿ ಶಾಂತಿ ಪೊಂದಿದವನ3
--------------
ಭಾವತರಕರು
ಇನ್ನೇನು ಭಯವಿಲ್ಲನಿನಗೆ ಪಾದ ಭಜಿಸೊ ಮನದೊಳಗೆ ಪ ಬನ್ನಗೊಳಿಸುವಾ ವ್ಯಾಧಿ ಮುನ್ನೆ ಬಾರದೋ ಮಗುವೇ ಅ.ಪ ಕರ್ಮ ಶೇಷದಲಿಂದ ಈ ವಿಧದ ವ್ಯಾಧಿ ಸಂಭವಿಸಿತಲ್ಲಾ ಪಾದ ಸೇವೆ ಸತ್ಕಾರದಿಂದಲೇ ತಾವಕÀನು ನೀನೆಂದು ಗುರುರಾಯ ಪೊರೆವಾ 1 ಏನು ಕರುಣವೊ ಗುರುವರಗೆ ನಿನ್ನಲಿ ನೀನೇನು ಧನ್ಯನೋ ಈ ಲೋಕದಲ್ಲೀ ದೀನಭಾವವನೋಡಿ ದೀನವತ್ಸಲಬಂದು ತಾನೆ ಕರುಣದಿ ಪೊರೆದಮೇಲೇ2 ಅರಿಯದಿಹ ನರರಿಗಾಶ್ಚರ್ಯ ತೋರಲೋಸುಗದಿ ಮರೆಯದಂತೆ ಮನಕೆ ಕುರುಹು ಮಾಡಿ ಧರೆಯೊಳಗೀ ಗುರುವರಗೆ ಸರಿಯಿಲ್ಲ ಗುರುಜಗನ್ನಾಥ ವಿಠಲ ತಾನೇ ಬಲ್ಲಾ 3
--------------
ಗುರುಜಗನ್ನಾಥದಾಸರು
ಇನ್ಯಾಕೆ ದೇವಿ ಮುನಿಸು ಮಾತಾಡೇ| ನಿನ್ನ ಹಿಡಿದ ಛಲ ಗೆಲಿಸಿದ ಬಳಿಕ ಪ ಘನ ಮಳೆಗರವ ಜೀಮ್ಯೂತಮ್ಯಾಲೇ|ತಾ| ಮುನಿಪ ಕೋಪದಿ ಪೋಗುತಲಿಹ| ಮನ ದೊಳಗಿದ್ದ ಚಾತಕನಂತೆ ನಿನ್ನ ಮ್ಯಾಲೆ| ವನರುಹ ನೇತ್ರ ನಾ ಮುನಿದುದು ಕಾಣೆ 1 ಸಂಗತಿಲ್ಲದೆ ನಿನ್ನಾಂಗ ನಟ್ಟುಳಿಯಿಂದ| ಭಂಗ ಗೊಂಡಿಹುದು| ತುಂಗ ಪಯೋಧರೆನ್ನಂಗ ತೋಷಿಸುವ ತಾ| ಲಿಂಗನ ಗೈಯೆ ನೀ ಮಂಗಳವದನೇ 2 ನಿನ್ನಿಂದಾಗಲಿ ಮತ್ತ ನನ್ನಿಂದಾಗಲಿ ಇನ್ನು ಮುನ್ನಾದ ಮನದ ಗಂಟು ಬಿಟ್ಟು| ಪನ್ನಗವೇಣಿ ಮಾತಾಡೇ ಸದ್ಗುಣದ ಸಂ| ಪನ್ನೇ ಮಹಿಪತಿ ಸುತಗೊಲಿದ ಶ್ರೀದೇವಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಲ್ಲಿ ಬಾ ಇಲ್ಲಿ ಬಾ ಮೆಲ್ಲ ಮೆಲ್ಲನೆ ಹೆಜ್ಜೆಯನಿಕ್ಕುತ ಪುಲ್ಲನಾಭ ಗೋಪಾಲಕೃಷ್ಣ ಗೊಲ್ಲರೊಡಗೂಡಿ ಪ. ಪಾಲು ಮೊಸರು ಬೆಣ್ಣೆ ಕೊಡುವೆ ಬಾ ಗೋಲಿ ಗುಂಡು ಗಜಗನೀಡುವೆ ಬಾ ಆಲಯ ಪೊಕ್ಕು ಧೂಳಿ ಮಾಡಲು ಬ್ಯಾಡ 1 ಅಂಗಳದೊಳು ಬಾ ಬೆಳದಿಂಗ ತೋರುವೆನು ರಂಗು ಮಾಣಿಕ್ಯದುಂಗರ ನಿಡುವೆನು ಮಂಗಳಾಂಗನೆ 2 ಮೃದನಯ್ಯನೆ ಬಾ ಸುದತಿಯರೊಡಗೂಡಿ ಬಾ ಸಡಗರದಿ ನೀ ಬಾ ಕಾಳೀಮರ್ಧನಕೃಷ್ಣ ಬಾ 3
--------------
ಕಳಸದ ಸುಂದರಮ್ಮ
ಇಲ್ಲಿಲ್ಲ ಸ್ವಾಮಿ ಅಲ್ಲಿಲ್ಲ ಎಲ್ಲವೂ ಸುಳ್ಳೆಂಬ ಖುಲ್ಲ ಜನರುಗಳಿಗಿಲ್ಲಿಲ್ಲ ಪ ಸತಿಸುತರುಗಳೆಲ್ಲ ಅತಿಹಿತರೆನ್ನುತ ರತಿಪತಿಪಿತನ ಮರೆತು ಇಪ್ಪ ಜನರಿಗೆ 1 ಮಿಗಿಲಾದ ಮಹಿಮೆಯ ಜಗದೊಳು ತೋರುವ ಅಗಣಿತ ಮಹಿಮಗೆ ಸೊಗಸದ ಜನರಿಗೆ 2 ಶರಧಿಶಯನನಾದ ಶ್ರೀವತ್ಸಾಂಕಿತನನ್ನು ಮರೆತು ಮರಳುಗೊಂಡು ಕರಗಿ ಕುಂದುವ ಜನರಿಗಿಲ್ಲಿಲ್ಲ 3
--------------
ಸಿರಿವತ್ಸಾಂಕಿತರು
ಇಲ್ಲೆಂದೆ ಇಲ್ಲೆಂದೆ ಭಕ್ತಜನಕೆ ಭಯ ಇಲ್ಲೆಂದೆ ಇಲ್ಲೆಂದೆ ಪ ಪಾದ ಎಲ್ಲ ಸಂಪದವೆಂದು ಬಲ್ಲಂಥ ಭಕ್ತರಿಗೆಲ್ಲರೀತಿಲಿ ಭಯಅ.ಪ ವಂದಿಸಿ ನುಡಿದರೆ ಬಂತೇನೆಂದೆ ನಿಂದಿಸಿ ನುಡಿಯಲು ಕುಂದೇನೆಂದೆ ಸಿಂಧುಶಯನನ ತಂದು ಮಾನಸವೆಂಬ ಮಂದಿರದಿಟ್ಟವರಿಗೆಂದೆಂದಿರದು ಭಯ 1 ಬಡತನ ಬಂದರೆ ಮಿಡುಕೇನೆಂದೆ ಕಡುಸಿರಿಯಿರ್ದರೆ ನಿಜವೇನೆಂದೆ ಜಡಭವ ಕನಸೆಂದು ದೃಢವಹಿಸೊಡಲೊಳು ಮೃಡಸಿಧರನೆ ನಿಮ್ಮ ಆಡುವರಿಗೆ ಭಯ 2 ಪೊಡವಿಪ ಮೆಚ್ಚಲು ಕೊಡುವುದೇನೆಂದೆ ಕಡುಕೋಪಗೊಂಡರೆ ಕೆಡುವುದೇನೆಂದೆ ಪೊಡವೀರೇಳನು ಒಡಲೊಳಗಿಟ್ಟವನಡಿ ಬಿಡುದಿರುವರಿಗಿಡಿ ಭುವನದ ಭಯ 3 ಸತಿಸುತರಿದ್ದರೆ ಹಿತವೇನೆಂದೆ ಸತಿಸುತರಿಲ್ಲದಿರೆ ಅಹಿತವೇನೆಂದೆ ರತಿಪತಿಪಿತನಡಿ ಸತತದಿ ಗೂಡಿಟ್ಟು ನುತಿಪ ಭಕ್ತರಿಗೆ ಕ್ಷಿತಿಮೇಲೇತರ ಭಯ 4 ಭೂಷಣ ಮಾಡಲದೊಂದೇ ಅಂದೆ ದೂಷಣ ಮಾಡಲದೊಂದೇ ಅಂದೆ ಶ್ರೀಶ ಶ್ರೀರಾಮನ ಸಾಸಿರ ನಾಮದ ಧ್ಯಾಸದಿಟ್ಟವರಿಗೇಸು ಕಾಲದಿ ಭಯ 5
--------------
ರಾಮದಾಸರು
ಇಲ್ಲೇ ಹರಿ ಇರುವ ಪ ಬಲ್ಲವರದ ನೋಡಲಲ್ಲೇ ತೋರುವ ಅ.ಪ ಗಿಡದ ಬೇರು ಕಾಂಡ ಕೊಂಬೆ ರೆಂಬೆಗಳಲ್ಲಿ ಅಡಗಿ ಎಲೆಯೊಳ್ಹೀಚು ಹೂವ್ಕಾಯ್ಗಳಲ್ಲಿ ಮೃಡ ಸಖನಲ್ಲಲ್ಲೆ ವಿವಿಧ ರೂಪಗಳಿಂದ ಅಡಗಿದ್ದು ಬೆಳೆಸುವ ಕಳೆಗೊಳಿಸುವನು1 ವಸ್ತ್ರದ್ಹಾಸುಹೊಕ್ಕು ದಾರಗಳಂದದಿ ವಿಸ್ತಾರಗೊಂಡ ಈ ಲೋಕದೊಳು ಹಸ್ತಿವರದನಾದಿಮೂಲ ತಾ ನೆಲೆಗೊಂಡು ಸ್ವಸ್ಥದಿ ಪೊರೆವನನಂತ ಪ್ರಾಣಿಗಳ 2 ಅನಿರುದ್ಧ ಪ್ರದ್ಯುಮ್ನ ಸಂಕರ್ಷಣ ರೂಪ ವನು ತಾಳಿ ನಾರಾಯಣ ವಾಸುದೇವನು ಅನಿಮಿತ್ತಬಂಧು ಚರಾಚರ ಪೃಥ್ವಿಯ ನನುದಿನ ಪೊರೆವ ರಘುರಾಮವಿಠಲನು 3
--------------
ರಘುರಾಮವಿಠಲದಾಸರು
ಇವ ನೋಡಮ್ಮ ನವನೀತಚೋರ ದೇವದೇವ ಮಾ ಮನೋಹರ ಧ್ರುವ ಗೋವನಿವ ಗೋಪಾಲ ಶ್ರೀಧರ ಗೋವಿಸುವ ಇವ ದಾಮೋದರ ಸಾವಿರ ನಾಮದೊಡೆಯ ಸಹಕಾರ ಫಣಿ ಮೆಟ್ಟಿದ ವೀರ 1 ಸಿರಿಯ ಲೋಲನಿವ ನಂದಕುಮಾರ ಉರಗಶಯನ ಕೌಸ್ತುಭಭರ ಪರಮ ಪುರಷ ಹರಿಯ ಸುರವರ ಮರುಳಮಾಡಿದವ ಗೊಲ್ಲತೇರ 2 ಬೆಣ್ಣೆ ಮೊಸರು ಕದ್ದು ವೈವನ ಕಣ್ಣಿಲೆ ಕಟ್ಟಬೇಕು ಇವನ ಪುಣ್ಯಯುಳ್ಳ ಯಶೋದೆ ಕಂದನ ಬಣ್ಣಿಸೊ ಮಹಿಪತಿಗನುದಿನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು