ಒಟ್ಟು 754 ಕಡೆಗಳಲ್ಲಿ , 79 ದಾಸರು , 595 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಯಾಕೆ ಬೇಕು ಜನ್ಮವಾದರು ಲೋಕನಾಥನೆ ಪ ಜೋಕೆ ಮಾಡುತಲೆನ್ನ ಕಾಯದ ನೌಕ ನಾಯಕ ನೀ ಕರುಣ ಬಿಡೆ 1 ಮಾತೆ ಕರುಣದೊಳಾತ್ಮಜಗೆ ಸ್ತನವಿತ್ತು ಪೊರೆವಂತೆ ಪ್ರೀತಿಯಲಿ ತವಜಾತನೆಂದು ಆತುರದಿ ನೀನಾದರಿಸದಿರೆ 2 ವಾರಿಧರ ನೆರೆ ಚಾತಕಗೆ ನೀರಬಿಂದುವೀವಂತೆ ಧೀರ ನರಸಿಂಹವಿಠಲನೆ ಕರುಣಾರಸವೆನಗೆ ಬೀರದಿರ್ದೊಡೆ 3
--------------
ನರಸಿಂಹವಿಠಲರು
ಯಾಕೆಮ್ಮನಗಲಿ ಪರಲೋಕ ಸೇರಿದೆ ಗುರು ಐಕೂರು ನರಸಿಂಹಾರ್ಯ ಪ ಲೌಕಿಕವ ಬಿಟ್ಟು ಸುವಿವೇಕ ನಡೆವ ವಾಕು ಪೇಳ್ವರ ಕಾಣೆ ಲೋಕದೊಳು ನಿನ್ಹೊರತು ಅ.ಪ ಅತಿಮಂದರಾದೆಮಗೆ | ಶ್ರುತಿ ಶಾಸ್ತ್ರ ಪುರಾಣ ಕಥೆ ದಾಸ ಕವಿತೆ ಸತತ ಪೇಳಿ ಮತಿವಂತರೆನಿಸಿ ಸ್ಪÀತ್ವಥ ಪಡಿಸಿ ಮುಂದೆ ಸ ದ್ಗತಿ ಕಾಣಿಸದೆ ಜಗದಿ ಹತಭಾಗ್ಯರನು ಮಾಡಿ 1 ಸಾಧುವರ್ಯನೆ ನಿಮ್ಮ ಪಾದವೇ ಗತಿ ಎಂದು ಸಾದರದಿ ನಿರುತ ನೆರೆನಂಬಿದಂಥ ಸೋದರಿಯರು ಪಂಚ ಭೇದ | ತರತಮಜ್ಞಾನ ಬೋಧಿಸುವರಿಲ್ಲೆಂದು ಖೇದದಿಂದಿರುತಿಹರು 2 ಸೂರಿವರ ನಿನ್ನಗಲಿದಾರಭ್ಯ ಧರೆಯೊಳಗೆ ನೀರಿಂದ ದೂರಾದ ಮೀನಿನಂತೆ ಘೋರ ದುಃಖದಿ ಮುಳುಗಿ ಪಾರುಗಾಣದೆ ದಿಕ್ಕು ತೋರದಾಗಿಹುದೀಗ ಬಾರೋ ಮನಮಂದಿರದಿ 3 ತನುವು ತ್ಯಜಿಸಿದರೇನು | ಅನಿಮಿಷಾಂಶನೆ ನಮ್ಮ ಕನಸು ಮನನಿನೊಳಗೆ ಸುಳಿದಾಡುತ ಕೊನೆಯಲ್ಲಿ ಹರಿನಾಮ | ಅನುಗ್ರಹಿಸುವೆವು ಎಂಬ ಘನ ಅಭಯ ನೀಡೆಂದು ಮಣಿದು ಪ್ರಾರ್ಥಿಪೆನಯ್ಯ 4 ಪುಣ್ಯಪುರುಷನೆ ನಮಗೆ ಇನ್ನಾವ ಬಯಕಿಲ್ಲ ಜನ್ಮ ಜನ್ಮಕೆ ನಿನ್ನ ಚರಣಾಬ್ಜವ ಚನ್ನಾಗಿ ಸೇವಿಸುವ ಘನ್ನ ಸುಖಗರಿಯೆಂದು ನಿತ್ಯ 5 ನಿನ್ನಿಂದ ಸತ್‍ಶ್ರವಣ | ನಿನ್ನಿಂದ ಅಘಹರಣ ನಿನ್ನಿಂದ ಶ್ರೀವಾಯು ಹರಿಯಕರುಣ ನಿನ್ನಿಂದ ಉಪದೇಶ \ ನಿನ್ನಿಂದ ಭವನಾಶ ನಿನ್ನಿಂದ ಬಿಂಬ ದರ್ಶನವು ನಮಗಿನ್ನು 6 ಪಾಮರರ ಅಪರಾಧ ನೀ ಮನಕೆ ತಾರದಲೆ ಹೇಮ ಕಾಮಿನಿ ಭೂಮಿ ಈಮೂರರ ವ್ಯಾಮೋಹವನೆ ಬಿಡಿಸಿ | ಶಾಮಸುಂದರ ಭಕ್ತ ಸ್ತೋಮ ಸಂಗದೊಳಿಟ್ಟು ಪ್ರೇಮದಲಿ ಪಿಡಿಕೈಯ್ಯ 7
--------------
ಶಾಮಸುಂದರ ವಿಠಲ
ಯಾಕೆಲೋ ರಂಗಾ | ನಿನ್ನರಸಿಯೊಳುಮುನಿದಿರುವೆ | ಲೋಕವೀರೇಳು ರಕ್ಷಿಪ ಮುದ್ದು ರಂಗಾ ಪ ನಾಲ್ಕನೆಯ ಅವತಾರದಲಿ ಉಗ್ರವಾಗಿರೆ | ಆ ಕಮಲಜ ಮುಖ್ಯ ಬೆದರುತಿರಲು | ಲಕುಮಿ ತಾಕಂಡು ತೊಡೆಮೇಲೆ ಕುಳ್ಳಿರಲು | ಈ ಲೋಕದೊಳು ಶಾಂತನೆನಿಸಿದಳೊ ನಿನ್ನರಿಸಿ 1 ಗುಂಜೆಯಮಾಲೆ ಕೊರಳಿಗೆ ಹಾಕಿ ಗೋವಳರ | ಎಂಜಲ ತಿನುತ ಗೋಗಳ ಕಾಯುತಿರಲು | ಕಂಜನಯನೆಯು ಬಂದು ಸಕಲ ಶಿರಿಯಿಂದಲಿ | ರಂಜಿಸಿದಳೊ ಜಗದೊಳಗೆ ನಿನ್ನ ಅರಿಸಿ 2 ಇಂತರಿದು ನಾನಾಪರಿಯಿಂದ ನಿನ್ನ ಮೇಲೇ | ಸಂತತ ಉಪಕಾರ ಮಾಡಿರೆ ನೀನು | ಕಂತುಮಾತೆಯ ತಪ್ಪು ನೋಡುವರೇನೋ | ಆ- ನಂತನೇ ಏಳು ಮಹೀಪತಿನಂದನೊಡೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾತಕೀಪರಿ ಚಿಂತೆ ಮನದೊಳಗೆ ಭ್ರಾಂತೆ ಪ ನಡಿಯ ಕಲಿಸಿದರ್ಯಾರು ನುಡಿಗಲಿಸಿ ನಿನಗೆ ಒಡಲಿಗಿಕ್ಕಿದರ್ಯಾರು ಷಡುರಸದÀ ಅನ್ನವ ಕಡುಮಮತೆಯೊಳು ಶಿಲ್ಪ ಬಿನ್ನಣಪ್ಪುದು 1 ಪಂಡಜಗೊಲಿದುಗತಿಯಿತ್ತರಿಯು ಸಲಹುವನು ಭಕುತರ ತಲೆಯಮೇಲಿಟ್ಟಮೃತ ಕರವನು ಶ್ರೀನಿಲಯನಿರುತಿರೆ2 ಪಿಂತೆ ರಾವಣನಳಿದಾನಂತ ಮಹಿಮಳ ಚಿಂತೆಯನು ತಾ ಕಳಿದಾ ಚಿಂತಿಪರ ಮನದೊಳು ಸಂತಸದಿ ತಾನುಳಿದಾ ಅಂತರಿಯೆನಿವನ ಸಂತ ಜನರಿಗೆ ಅಂತಕನ ಭಯವೆಂತು ಒಪ್ಪುದು ಹರಿಯ ನೆನೆಯಲು ನಿಂತು ಶ್ರೀ ನರಸಿಂಹವಿಠಲನಂತರಂಗದಿ ಜಪಿಸುವಾತ್ಮಗೆ 3
--------------
ನರಸಿಂಹವಿಠಲರು
ರಂಗ ಬಾರೊ ನರಸಿಂಗ ಬಾರೊ ಪ. ಸಾಸಿರ ಮೂರುತಿ ವಾಸವವಂದ್ಯನೆಸಾಸಿರನಾಮದೊಡೆಯನೆಸಾಸಿರನಾಮದೊಡೆಯನೆ ನರಹರಿಕೇಶವ ನಮ್ಮ ಮನೆದೈವ 1 ವಾರಣವಂದ್ಯನೆ ಕಾರುಣ್ಯರೂಪನೆಪುರಾಣಗಳಲ್ಲಿ ಪೊಗಳುವಪುರಾಣಗಳಲ್ಲಿ ಪೊಗಳುವ ನರಹರಿನಾರಾಯಣ ನಮ್ಮ ಮನೆದೈವ2 ಯಾದವಕುಲದಲ್ಲಿ ಸಾಧುಗಳರಸನೆಭೇದಿಸಿ ದನುಜರ ಗೆಲಿದನೆಭೇದಿಸಿ ದನುಜರ ಗೆಲಿದನೆ ನರಹರಿಮಾಧವ ನಮ್ಮ ಮನೆದೈವ 3 ದೇವೆಂದ್ರ ಮಳೆಗರೆಯೆ ಗೋವರ್ಧನ ಗಿರಿಯೆತ್ತಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿಆ ಗಿರಿಯ ಶ್ರೀಕೃಷ್ಣ ಕೊಡೆಮಾಡಿ ಕಾಯಿದನೆಗೋವಿಂದ ನಮ್ಮ ಮನೆದೈವ 4 ಸೃಷ್ಟಿಗೆ ಕರ್ತನೆ ದುಷ್ಟಕಂಸನ ಗೆಲಿದುಶಿಷ್ಟಪರಿಪಾಲನೆನಿಸಿದಶಿಷ್ಟಪರಿಪಾಲನೆನಿಸಿದ ನರಹರಿವಿಷ್ಣುವೆ ನಮ್ಮ ಮನೆದೈವ5 ಮಧುವೆಂಬೊ ದೈತ್ಯನ ಮುದದಿಂದ ಗೆಲಿದನೆವಿದುರನ ಮನೆಯಲಿ ನಲಿದುಂಡವಿದುರನ ಮನೆಯಲಿ ನಲಿದುಂಡ ನರಹರಿಮಧುಸೂದನ ನಮ್ಮ ಮನೆದೈವ 6 ಚಕ್ರವ ಪಿಡಿದನೆ ಭೂಚಕ್ರವ ಗೆಲಿದನೆಅಕ್ರೂರನೊಡನೆ ಮಧುರೆಗೆಅಕ್ರೂರನೊಡನೆ ಮಧುರೆಗೆ ಪೋದ ತ್ರಿ-ವಿಕ್ರಮ ನಮ್ಮ ಮನೆದೈವ7 ಸಾಮವನೋದುತ್ತ ದಾನವ ಬೇಡುತ್ತನಾಮದ ಮಹಿಮೆ ಪೊಗಳುತ್ತನಾಮದ ಮಹಿಮೆ ಪೊಗಳುತ್ತ ನರಹರಿವಾಮನ ನಮ್ಮ ಮನೆದೈವ8 ಶ್ರೀಧರ ಎಸಿಸಿದ ಶ್ರೀವತ್ಸ ಲಾಂಛನಶ್ರೀಧರ ಗೋಪೀತನಯನೆ ಶ್ರೀಧರ ಗೋಪೀತನಯನೆ ನರಹರಿಶ್ರೀಧರ ನಮ್ಮ ಮನೆದೈವ 9 ಋಷಿಜನ ವಂದ್ಯನೆ ಬಿಸಜನಾಭನೆ ದೇವಋಷಿಜನರಿಗೆಲ್ಲ ಅಭಯವಋಷಿಜನರಿಗೆಲ್ಲ ಅಭಯವ ಕೊಡುವೋನೆಹೃಷಿಕೇಶನೆ ನಮ್ಮ ಮನೆದೈವ10 ಪದುಮಸಂಭವಪಿತ ಪದುಮದಾಮೋದರ[ಪದುಮ]ದಿಂದಭಯವ ಕೊಡುವೋನೆ[ಪದುಮ]ದಿಂದಭಯವ ಕೊಡುವೋನೆ ನರಹರಿಪದುಮನಾಭನೆ ನಮ್ಮ ಮನೆದೈವ 11 ನಾಮದ ಮಹಿಮೆಯ ಪ್ರೇಮದಿ ಪೊಗಳಲುಕಾಮಿತಾರ್ಥಗಳ ಕೊಡುವೋನೆಕಾಮಿತಾರ್ಥಗಳ ಕೊಡುವೋನೆ ನರಹರಿದಾಮೋದರ ನಮ್ಮ ಮನೆದೈವ 12 ಸಂಕಟಗಳ ತರಿವೋನೆ ಪಂಕಜನಾಭನೆಶಂಕೆಯಿಲ್ಲದೆ ಅಸುರರಶಂಕೆಯಿಲ್ಲದೆ ಅಸುರರ ಸಂಹರಿಸಿದಸಂಕರ್ಷಣ ನಮ್ಮ ಮನೆದೈವ 13 ವಸುದೇವತನಯನೆ ಶಿಶುಪಾಲನ ಗೆಲಿದನೆವಶವ ಮಾಡಿದೆಯೊ ತ್ರಿಪುರರವಶವ ಮಾಡಿದೆಯೊ ತ್ರಿಪುರರ ನರಹರಿವಾಸುದೇವ ನಮ್ಮ ಮನೆದೈವ14 ಶುದ್ಧಸ್ವರೂಪನೆ ಶುದ್ಧ ಭಕ್ತರನು ಸಲಹಯ್ಯಹದ್ದುವಾಹನನಾದ ದೇವನೆಹದ್ದುವಾಹನನಾದ ದೇವನೆ ನರಹರಿಪ್ರದ್ಯುಮ್ನ ನಮ್ಮ ಮನೆದೈವ 15 ವನಜಲೋಚನ ಹರಿ ವಿನಯ ಉಳ್ಳವನೆಧ್ವನಿಕೇಳಿ ಬಂದ ಕುಬುಜೆಯ ಧ್ವನಿಕೇಳಿ ಬಂದ ಕುಬುಜೆಯ ನರಹರಿಅನಿರುದ್ಧ ನಮ್ಮ ಮನೆದೈವ 16 ಪಾರಿಜಾತದ ಹೂವ ನಾರಿಗೆ ಇತ್ತನೆವೀರ ದಾನವರ ಗೆಲಿದನೆವೀರ ದಾನವರ ಗೆಲಿದನೆ ನರಹರಿಪುರುಷೋತ್ತಮ ನಮ್ಮ ಮನೆದೈವ 17 ಅಕ್ಷಯಪದವೀವ ಪಕ್ಷಿವಾಹನಸ್ವಾಮಿಕುಕ್ಷಿಯೊಳೀರೇಳು ಭುವನವಕುಕ್ಷಿಯೊಳೀರೇಳು [ಭುವನವನಾಳಿದ] ನರಹರಿ ಅ-ಧೋಕ್ಷಜ ನಮ್ಮ ಮನೆದೈವ18 ನರಕಾಸುರನ ಕೊಂದು ಹಿರಣ್ಯನ ಮರ್ದಿಸಿಕರುಳ ಬಗೆದು ವನಮಾಲೆ ಹಾಕಿಕರುಳ ಬಗೆದು ವನಮಾಲೆ ಹಾಕಿದ ಹರಿನರಸಿಂಹನೆ ನಮ್ಮ ಮನೆದೈವ19 ಅಚ್ಚ್ಚುತಾನಂತನೆ ಸಚ್ಚಿದಾನಂದನೆ[ಮಚ್ಚಾವತಾರದಿ] ನಲಿದನೆ[ಮಚ್ಚಾವತಾರದಿ] ನಲಿದನೆ ನರಹರಿಅಚ್ಚುತ ನಮ್ಮ ಮನೆದೈವ 20 ಜಾನಕಿರಮಣನೆ ದಾನವಾಂತಕನೆದೀನರಕ್ಷಕನೆ ಸಲಹಯ್ಯದೀನರಕ್ಷಕನೆ ಸಲಹಯ್ಯ ನರಹರಿಜನಾರ್ದನ ನಮ್ಮ ಮನೆದೈವ 21 ಅಪರಿಮಿತಮಹಿಮನೆ ವಿಪರೀತ ಚರಿತನೆ[ಗುಪಿತವೇಷಗಳ] ತಾಳಿದನೆ[ಗುಪಿತವೇಷಗಳ] ತಾಳಿದ ನರಹರಿಉಪೇಂದ್ರ ನಮ್ಮ ಮನೆದೈವ 22 ಹರನ ಭಸ್ಮಾಸುರನು ಮರಳಿ ಬೆನ್ನ್ಹತ್ತಲುತರುಣಿರೂಪವನು ತಾಳಿದÀನೆತರುಣಿರೂಪವನು ತಾಳಿದ ನರಹರಿ ಶ್ರೀ-ಹರಿಯೆ ನಮ್ಮ ಮನೆದೈವ 23 ಕೃಷ್ಣಾವತಾರದಲಿ ದುಷ್ಟರ ಗೆಲಿದನೆವೃಷ್ಣಿಯರ [ಕುಲತಿಲಕನೆ]ವೃಷ್ಣಿಯರ [ಕುಲತಿಲಕನೆ] ನರಹರಿ ಶ್ರೀ-ಕೃಷ್ಣನೆ ನಮ್ಮ ಮನೆದೈವ 24 ಇಪ್ಪತ್ತು ನಾಲ್ಕು ನಾಮಂಗಳ ಪಾಡುವೆನುಅಪ್ಪ ಕೇಶವನ ಚರಿತೆಯನುಅಪ್ಪ ಕೇಶವನ ಚರಿತೆಯನು ಪಾಡಲುಒಪ್ಪಿಸಿಕೊಳ್ಳುವ ಹಯವದನ25
--------------
ವಾದಿರಾಜ
ರಂಗಪ್ಪ ಬಂದವ್ನೆ ಬಾಗ್ಲಲ್ಲಿ ನಿಂತವ್ನೆ ಸಿಂಗಾರದಿಂದವ್ನೇ ತೆಂಗಿನಕಾಯ್ಬಾಳೆಹಣ್ತಂದು ನೋಡಿರೋ ಹೊಂಗೂಳನೊತ್ತವ್ನೇ ಪ ನಾಕ್ಮಳ ನಿಂತವ್ನೆ ನೀರಲ್ಲಿ ನಿಂತವ್ನೆ ನಾಕೈಯಾ ಪಡೆದವ್ನೇ ಇಕ್ಕೆಲದಲಿ ಸಂಕುಚಕ್ರವ ಹಿಡಿದವ್ನೆ ರಾಕ್ಷಸನ್ನ ಮೆಟ್ಟವ್ನೆ1 ಗಟ್ಟಿ ಬೆನ್ನಿನ ಮ್ಯಾಗೆ ಬೆಟ್ಟವ ಹೊತ್ತವ್ನೆ ಗಟ್ಟಿ ಗದೇ ಹಿಡಿದವ್ನೇ ಮಟ್ಟಸವಾದ ನಾಕ್ಕಾಲಲ್ಲಿ ನಿಂತವ್ನೆ ಸಿಟ್ಟಿಲ್ಲ ನಗತವ್ನೇ 2 ಮೊಳದುದ್ದ ಮೂಗ್ಯ್ಮಾಲೆ ಭೂಮಿಯ ಹೊತ್ತವ್ನೇ ಬೆಳಸವ್ನೇ ಕೋರೆಹಲ್ಲಾ ತೊಳಲಿಬಳಲವನಪ್ಪ ನಮ್ಮಪ್ಪ ರಂಗಪ್ಪ ಯೆಳನಗೆ ನಗ್ತಾನೇ 3 ಮೂಡ್ತವ್ನೆ ಕಂಬ್ದಲ್ಲಿ ನರಸಿಮ್ಮನಾಗವ್ನೆ ಹಿಡಿದವ್ನೆ ದೊಡ್ರಾಕ್ಷಸ್ನಾ ದೊಡ್ದುಗ್ರಲೊಟ್ಟೆಯ ಬಗಿತವ್ನೆ ಸಿಗಿತವ್ನೆ ಕೊಡುತೀನ್ವರವನೆಂತಾನೇ 4 ಗಿಡ್ಡ ಹಾರುವನಂತೆ ಮೂರೆಜ್ಜೆ ಭೂಮಿಯನಡ್ಡಡ್ಡ ಅಳೆದವ್ನೆ ಪಾಡ್ಯದ ಹಬ್ದಲ್ಲಿ ಬಲಿಯ ಕರೆತರುತಾನೆ ಬೇಡಿದ್ದ ಕೊಡುತಾನೇ 5 ಜಯ ಜಯ ಜಯವೆಂತಾನೇ ಕೈಯಲ್ಲಿ ಹಿಡಿದವ್ನೆ ಗಂಡುಗೊಲ್ಲಿಯ ನೋಡೋ ಭಯವಿಲ್ಲ ಕೈಮುಗಿಯೋ 6 ಶಿವನ ಬಿಲ್ಮುರಿದವ್ನೆ ರಾವಣನ ತರಿದವ್ನೆ ಭೂಮಿಯೆಲ್ಲವಾಳ್ತವ್ನೆ ತವಕದಿ ನೋಡಿರೆಲ್ಲಾ 7 ಮಡುವಿಗೆ ಧುಮುಕಿ ಕಾಳಿಂಗನ ತುಳಿದವ್ನೆ ಹಿಡಿದವ್ನೆ ಹೊಂಗೊಳಲಾ ಮಾನವ ಕಡುರೂಪವಂತ ನಮ್ಮ 8 ಮತ್ತರ ಮಡದೀರ ವ್ರತವನು ಕೆಡಿಸಲು ಬೆತ್ತಲೆ ನಿಂತವ್ನೇ ಕೃತ್ತಿವಾಸನ ಕೈಯ್ಯೊಳಿಂಬಾಗಿ ನಿಂದವ್ನೆ ಉತ್ತಮ ದೇವನಮ್ಮ 9 ದುರುಳರನೊದೆಯಾಕೆ ಹೊಂಟವ್ನೇ ಪದಕಮಲಕೆ ಯೆರಗೋ 10 ಮುದ್ದು ರಂಗಪ್ಪನಿಗೆ ಪೊಂಗಲು ನೇವೇದ್ಯ ಸಿದ್ಧ ಮಾಡಿರಯ್ಯಾ ಬದ್ಧವು ಅವ ನಮ್ಮ ಕಾಯೋದು ಸಟೆಯಲ್ಲ ಎದ್ದೆದ್ದು ತಲೆಬಾಗಿರೊ 11 ರಾಮನು ಅವನೇ ಕಾಮನಪ್ಪನು ನಿಸ್ಸೀಮ ನಮ್ಮ ರಂಗನೇ ರಾಮದಾಸನ ಮನದೊಳು ಮನೆ ಮಾಡ್ಯವ್ನೇ ಪಾಮರ ವರದನೆಂಬ ಮಾಂಗಿರಿ 12
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ರಥವೇರಿ ಬರುತಿಹ ಗುರುವರನ್ಯಾರೆ ಪೇಳಮ್ಮಯ್ಯಾ ಪ ಟೀಕಾಕೃಧ್ಯ ತಿವರನಮ್ಮ ಅ.ಪ ಸ್ವೀಕರಿಸಿ ಮಾರುತನವತರಿಸಿ ಶೃತಿಸಮ್ಮತ ಶ್ರೀಮಧ್ಭಾಷ್ಯವತಾರಚಿಸಿ ಛಾತ್ರರಿಗೆ ವಿವರಿಸೆ ಕೇಳುತಲನುದಿನದಿ ಮಹಿಮ ಸುರಪತಿಯು ಕಾಣಮ್ಮ 1 ದೇಶಪಾಂಡ್ಯರಕುವರ ಕೇಳಲು ಗುರುವಚನ ಸಂಸಾರ ಸುಖವನ ಜಯ ತೀರಥರಮ್ಮ 2 ಸ್ಥಾಪಿಸಿದರು ಮುದದಿ ಶುದ್ಧಮಾಯಿ ಸುಭಟಧ್ವಜನಿಯ ಓಡಿಸಿದ ವಾಕ್ಸಾಯಕದಿಂದ ಮಧ್ವರಾಜಕೃತ ಸದ್ಗ್ರಂಥಗಳ ವಿಸ್ತಾರ ಮಾಡಿದ ಯತಿಧೀರಾ ಗೆಲಿದ ಪ್ರಸಿದ್ಧ ಕಾಣಮ್ಮ 3 ಚಾಮೀಕರಕೃತ ಚಾಮರ ಛತ್ರಗಳಿಂದ ಸೇವಿಪದ್ವಿಜರಿಂದ ಶ್ರವಣಕೆ ಪೀಯೂಷ ಭವಬಾಧೆ ಬಿಡಿಸಿದ ಶ್ರೀಮಳಖೇಡ ಸುಧಾಮ ಕಣಮ್ಮ4 ತೋಷಿತ ಬುಧನಿಕರ ಪಾವನತರಚರಿಯ ಶರಣುಜನಕೆ ಸುರತರುವೆನಿಸಿದ ಜಯರಾಯಾ ವಿದ್ವಜ್ಜನಗೇಯಾ ಧರೆಯೊಳು ಸಿರಿಕಾರ್ಪರ ನರಸಿಂಹನೆ ಪರನೆಂದರುಹಿದ ಗುರುವರನಮ್ಮ5
--------------
ಕಾರ್ಪರ ನರಹರಿದಾಸರು
ರಾಘವೇಂದ್ರನೆಂದು ನುಡಿದವರಿಗೆ | ಅನುರಾಗದಿಸಲಹುವರಾ ಯೋಗಿ ಶ್ರೀ ರಾಘವೇಂದ್ರರಾಯಾ ಪ ರಾಮಧ್ಯಾನವನು ಮಾಡುತಲನುದಿನ | ಜಯಿಸಿದಿ ರಾಕ್ಷಸರಾ ರಾಯರಾವ್ಯಾಧಿಗಳಳಿದು ಸೇವಾ ಕೊಡುತಿಹರಾ ರಮಾವಲ್ಲಭನಾಶ್ರಯ ಮಾಡಿ | ರಾಜ್ಯವಾಳಿದರೆ ರಾಘವೇಂದ್ರ 1 ಘಾತುಕ ದನುಜನ ಕಾಲವಿದೆಂದು ಎಣಿಸದೆ ಕಲಿಯುಗ ಘನ ಪರಾಕ್ರಮದಿಂದ ಮೆರೆಯುವಿ | ಸುಯತೀಂದ್ರ ನೀ ಘನ ಜಾಡ್ಯಗಳ ಕಳೆದು ಜನರಿಗೆ ಸುರಿಸಿದಿ ಸುಖಮೇಘ ಘಾ ಬುರಿಯಿಂದಲಿ ಬಂದ ಆತುರರಿಗೆ ಕಳದಿರೊ ನೀ ಅಘವಾ 2 ವೇದಶಾಸ್ತ್ರ ಪಾರಾಯಣ ಮಾಡುತ | ವೃಂದಾವನ ದೊಳಿರುವೇ ವ್ಯಥೆಯಿಂದಲಿ ಬಂದಾ ತುರರಿಗೆ | ಅತಿಸುಖವನು ಸುರಿವೇ ವೇದವ್ಯಾಸರು ಮೊದಲಾದರೊಳು | ಆಧಾರದೊಲಿರುವೇ ವೇಷತಾಳಿ ನೀ ಯತಿಯಾಗಿ ಈ ಜಗದೊಳುನೀ ಮೆರೆವೆ 3 ಬಿಡುವೆನುರಾಘವೇಂದ್ರಾ ಮತ್ಸ್ಯ ದ್ರಾಕ್ಷಾಫಲದಂತೆ ಮಧುರವು ತೋರಿಸಲಹೊಗುಣಸಾಂದ್ರಾ ದ್ರವ್ಯ ಪತಿಸಿರಿ ನರಸಿಂಹ ವಿಠಲನ ತೋರೋದಯದಿಂದ ನೀರಾಘವೇಂದ್ರಾ 4
--------------
ಓರಬಾಯಿ ಲಕ್ಷ್ಮೀದೇವಮ್ಮ
ರಾಘವೇಂದ್ರಸ್ವಾಮಿಗಳ ಸ್ತೋತ್ರ ಕಂಡು ಧನ್ಯನಾದೆ ಗುರುಗಳ - ಕಣ್ಣಾರೆ ನಾಕಂಡು ಧನ್ಯನಾದೆ ಈ ಗುರುಗಳ ಪ ತುಂಗಾತಟದಿ ಬಂದು ನಿಂತ ಪಂಗು ಬಧಿರಾದ್ಯಂಗ ಹೀನರಅಂಗಗೈಸಿ ಸಲಹುವಾ - ನರಸಿಂಗನಂಘ್ರಿ ಭಜಕರಿವರ 1 ಗುರುವರ ಸುಗುಣೇಂದ್ರರಿಂದಪರಿಪರಿಯಲಿ ಸೇವೆಗೊಳುತವರಮಂತ್ರಾಲಯ ಪುರದಿ ಮೆರೆವಪರಿಮಳಾಖ್ಯ ಗ್ರಂಥಕರ್ತರ 2 ಸೋ ಅಹಂ ಎನ್ನದೆ ಹರಿಯ ದಾಸೋ ಅಹಂ ಎನ್ನಲು ಒಲಿದು ವಿಜಯಮೋಹನ ವಿಠ್ಠಲನ್ನ ಪರಮಸ್ನೇಹದಿಂದ ತೋರುವವರ 3
--------------
ಮೋಹನದಾಸರು
ರಾಜಮುಖೀ ಬೇಗ ಪ. ಚಿತ್ರವಿಚಿತ್ರಮಾಗಿ ಮೆರೆವ ರತ್ನಖಚಿತ ಮಂಟಪದಿ ಕೆತ್ತನೆಯ ಹಸೆಯಮೇಲೆ ರತ್ನಗಂಬಳಿಯ ಹಾಸಿ 1 ಪರಿಪರಿಯ ರಾಗದಿಂದ ತರುಣಿಯರು ನಿನ್ನ ಪಾಡಿ ಕರೆಯುತಿಹರೋಳ್ ಕರುಣೆಯಿರಿಸಿ ಅರಸನೊಡನೆ ಸರಸದಿಂದ2 ಪಂಕಜಾಕ್ಷಿ ನಿನ್ನ ಚರಣಕಿಂಕರರ ಮೊರೆಯ ಕೇಳಿ ಕನಕಪೀಠದಲ್ಲಿ ಕುಳಿತು ಕಾಂಕ್ಷಿತಾರ್ಥವಿತ್ತು ಸಲಹು 3 ಪರಮಪುರುಷ ಶೇಷಶೈಲವರದನರಸಿ ನಿನ್ನ ಗುಣವೆ ಸ್ಮರಿಸಿ ಸ್ಮರಿಸಿ ಕರೆಯುತಿರುವ ತರಳೆಯರಂ ಪೊರೆಯೆ ತಾಯೆ4
--------------
ನಂಜನಗೂಡು ತಿರುಮಲಾಂಬಾ
ರಾಮ ಜಾನಕೀರಮಣ ರಾಜೀವದಳನಯನ ಧಾಮ ನಿಧಿವಂಶ ಸೋಮನಿಗೆ ಪ ಪದುಮಶಾಲೆಯೊಳಗೆ ಪದುಮಗದ್ದುಗೆ ಹಾಕಿ ಪದುಮನಾಭನು ಬಂದು ಕುಳಿತನು ಪದುನುನಾಭನು ಬಂದು ಕುಳಿತನು ಎಡದಲ್ಲಿ ಪದುಮಾಕ್ಷಿ ಪದುಮ ಸಾಧನೆ ಲಕುಮಿ ಒಪ್ಪಿದಳು. 1 ವಾರುಣಿ ಗಿರಿಜೆ ಮೀನಕೇತನ ರಾಣಿ ಇಂದ್ರಾಣಿ ಮಿಕ್ಕಾನಲಿದಾಡುತಲಿ ಮೀನಕೇತನ ರಾಣಿ ಇಂದ್ರಾಣಿ ನಕ್ಕು ನಲಿದಾಡುತಲಿ ಆನಂದದಿ ಬಂದು ಕುಳಿತರು ತಮ್ಮ ಠಾಣೆಗೆ 2 ಚಿನ್ನದ ತಳಿಗೇಲಿ ಎಣ್ಣೆ ಅರಿಶಿಣ ಗಂಧ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಸಣ್ಣ ಕುಂಕುಮ ಜಾತಿ ಕಸ್ತೂರಿ ಪೊಂಗಳಸ ಹೆಣ್ಣುಗಳ ಮಧ್ಯೆ ಇಳಿಸಿದರು3 ತಂದೆ ತಾತನ ಬಳಿಯ ಮಂದಾಕಿನಿ ವಾಗ್ವಿಯ- ರೊಂದಾಗಿ ಒಡಗೂಡಿ ರಂಗಯ್ಯನ ಕೈಗೆ ಒಂದಾಗಿ ಒಡಗೂಡಿ ರಂಗಯ್ಯನ ಕೈಯೊಳಗೆ ತಂದು ಅರಿಶಿಣ ಎಣ್ಣೆ ಗಂಧವಿತ್ತು4 ತಡಮಾಡಲಾಗದು ಕಡಲಶಯನ ನಿಮ್ಮ ಮಡದಿಯಂಗಕ್ಕೆ ತೊಡೆವುದೆನಲು ಮಡದಿಯಂಗಕ್ಕೆ ತೊಡೆವುದು ಎನಲಾಗಿ ಕಡು ಹರುಷದಿ ಸತಿಯಳ ನೋಡಿದನು 5 ಎನ್ನರಸಿ ಹೊನ್ನರಸಿ ಪ್ರಾಣದರಸಿ ಪಟ್ಟದರಸಿ | ಕನ್ಯೆ ಶಿರೋಮಣಿ ಪಾವನ ದೇಹಿ || ಕನ್ಯೆ ಶಿರೋಮಣಿ ಪಾವನ ದೇಹಳೆ ನಿನ್ನ | ಕನ್ನಡಿ ಮುಖವ ತೋರರಿಷಿಣವ ನಾ ಹಚ್ಚುವೆ 6 ತಂದೆ ನಂದನರಿಗೆ ಬಂಧು ಬಳಗ ಸುತ್ತ | ಹೊಂದಿದ ಜನರಿಗೆ ಹಲವರಿಗೆ || ಹೊಂದಿದ ಜನರಿಗೆ ಹಲವರಿಗೆ ಕದನ | ತಂದು ಹಾಕುವಳೆಂದು ಹಚ್ಚಿದನು 7 ತೂಗಿಸಿಕೊಂಬುವಳೆ ದೌತ್ಯಕ್ಕೆ ಸಲ್ಲುವಳೆ | ಬಾಗಿಲ ಕಾಯಿಸುವಳೆ ಬಲ್ಲಿದರ || ಬಾಗಿಲಕಾಯಿಸುವಳೆ ಬಲ್ಲಿದರನು ಬಿಡದೆ | ಸಾಗರನ ಮಗಳು ಎಂದು ತೊಡೆದನು 8 ಇಂದಿರಾದೇವಿ ಬಾ ಮಂದಿರಾಂಬುಜ ರಾಮ | ಸುಂದರ ಶ್ರೀವಾರಿ ಮಂಗಳಗಾತ್ರೆ || ಸುಂದರ ಶ್ರೀನಾರಿ ಮಂಗಳಗಾತ್ರೆ ಯೆಂದು | ಅಂಗಜ ಜನಕನು ನಗುತಲಿದ್ದ 9 ರಮಣಿಯ ದೇಹಕ್ಕೆ ಕಮಲನಾಭನು ಎದ್ದು | ವಿಮಲಕಸ್ತೂರಿ ಗಂಧವರಿಷಿಣ ಎಣ್ಣೆ || ವಿಮಲ ಕಸ್ತೂರಿ ಗಂಧವರಿಷಿಣ ಎಣ್ಣೆಯ | ಕ್ರಮದಿಂದ ಲೇಪಿಸಿ ಊಟಣಿಸಾರಿ 10 ಸಾಕಾರಗುಣವಂತಿ ತ್ರಿಲೋಕದ ಜನನಿ | ನಾಕಜವಂದಿತಳೆ ನಾಗಗಮನೆ || ನಾಕಜವಂದಿತಳೆ ನಾಗಗಮನೆ ಏಳೂ | ಶ್ರೀಕಾಂತನ ಸೇವೆಯ ಮಾಡೆಂದರು 11 ಅಂದ ಮಾತನು ಕೇಳಿ ಗಂಧ ಅರಷಿಣ ಕೊಂಡು | ನಿಂದು ಸಮ್ಮುಖದಲ್ಲಿ ರಂಗನ ನೋಡಿ | ನಿಂದು ಸಮ್ಮುಖದಲ್ಲಿ ರಂಗನ ನೋಡಿ ಹಿಗ್ಗಿ | ಚಂದ್ರವದನೆ ಪತಿಗೆ ಹಚ್ಚಿದಳು 12 ಗೋವಳರ ಎಂಜಲು ಆವಾಗ ತಿಂದವನೆ | ಮಾವನ್ನ ಕೊಂದವನೆ ಮಾಯಾಕಾರ || ಮಾವನ್ನ ಕೊಂದವನೆ ಮಾಯಾಕಾರನೆ ನಿನ್ನ | ಸೇವೆಗೆ ಶಕ್ತಳೆನುತ ಹಚ್ಚಿದಳು 13 ಬೆಣ್ಣೆ ಮೊಸರು ಕದ್ದು ಹೆಣ್ಣುಗಳ ಕೆಡಿಸಿ | ಮುನ್ನೆ ತೊತ್ತಿನ ಮಗನ ಮನಿಯ ಉಂಡ || ಮುನ್ನೆ ತೊತ್ತಿನ ಮಗನ ಮನಿಯಲುಂಡ ಹಿಂದೆ | ಹೆಣ್ಣಾಗಿ ಇದ್ದವನೆಂದು ಹಚ್ಚಿದಳು 14 ಎನ್ನರಸ ಚೆನ್ನರಸ ಪ್ರಾಣದರಸ ಪಟ್ಟಣದರಸ | ಭಿನ್ನವಖಿಳ ಜೀವಕ್ಕೆನ್ನ ಒಡೆಯ || ಭಿನ್ನವಖಿಳ ಜೀವಕ್ಕೆನ್ನ ಒಡೆಯ ಸಲಹಿಂದು | ಚೆನ್ನಾಗಿ ಅರಿಷಿಣ ಗಂಧ ಹಚ್ಚಿದಳು 15 ನಿತ್ಯ ಕಲ್ಯಾಣ ಪುರುಷೋತ್ತಮ ಸರ್ವೇಶ | ಸತ್ಯಸಂಕಲ್ಪ ಸಿದ್ಧ ಅಪ್ರಮೇಯಾ || ಸತ್ಯಸಂಕಲ್ಪ ಸಿದ್ಧ ಅಪ್ರಮೇಯನೆಂದು | ಮಿತ್ರೆ ಸರ್ವಾಂಗಕ್ಕೆ ಹಚ್ಚಿದಳು 16 ದೇವಿ ದೇವೇಶಗೆ ಈ ಉರುಟಣೆಯಿಲ್ಲ | ಆವಾವ ಬಗೆ ಎಲ್ಲ ತೋರಿಸುತ್ತ || ಆವಾವ ಬಗೆ ಎಲ್ಲ ತೋರಿ ವಧು-ವರಗಳಿಗೆ | ಹೂವು ಬಾಸಿಂಗವ ರಚಿಸಿದರು17 ಅಸುರ ವಿರೋಧಿ ವಸುದೇವನಂದನ | ಪಶುಪತಿ ರಕ್ಷಕ ಪರಮ ಪುರುಷ || ಪಶುಪತಿ ರಕ್ಷಕ ಪರಮ ಪುರುಷ ಎಂದು | ಹಸನಾಗಿ ಲೇಪಿಸಿ ಇತ್ತ ಜನರ 18 ಶೃಂಗಾರವಂತೇರು ರಂಗ ಶ್ರೀಲಕುಮಿಗೆ | ಮಂಗಳಾರತಿ ಎತ್ತಿ ಹರಸಿದರು || ಮಂಗಳಾರತಿ ಎತ್ತಿ ಹರಸಿ ದೇವರಮನೆಗೆ | ಅಂಗನೆಯಳ ಸಹಿತ ನಡೆಯೆಂದರಾಗ 17 ಎತ್ತಿಕೊಂಡನು ರಂಗ ಚಿತ್ತದ ವಲ್ಲಭೆಯ | ಮತ್ತೆ ಸುಗಂಧಿಯರು ಹೊಸ್ತಿಲೊಳಗೆ || ಮತ್ತೆ ಸುಗಂಧಿಯರು ಹೊಸ್ತಿಲೊಳಗೆ ನಿಂದು | ಪತ್ನಿಯ ಹೆಸರು ಪೇಳೆಂದರು ಆಗ 20 ಬೇಗ ಮಾರ್ಗವ ಸಾರಿ ತೂಗಲಾರನು ಇವಳ | ಸಾಗಿ ಪೋಗುವನೆಂದು ಪೇಳುತಿರಲು || ಸಾಗಿ ಪೋಗುವನೆಂದು ಪೇಳುತಿರಲು ಸ್ತ್ರೀ ಕೂಟ | ತೂಗವದೆಂತು ನಾಳೆ ನುಡಿಯೆಂದರು 21 ನಕ್ಕು ಸಂತೋಷದಲಿ ರುಕ್ಮಿಣಿ ಎಂದನು | ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ || ಅಕ್ಕಯ್ಯ ಪೇಳೆಂದು ಹೆಮ್ಮಕ್ಕಳೆಲ್ಲ ಎನಲು | ಚಕ್ರಪಾಣಿ ಎಂದು ಪೇಳಿದಳು ಲಕುಮಿ 22 ಗಂಡ ಹೆಂಡತಿ ಪೋಗಿ ದಂಡ ಪ್ರಣಾಮಮಾಡಿ | ಮಂಡಲದ ಚರಿತೆ ತೋರಿದರು ಆಗ || ಮಂಡಲದ ಚರಿತೆ ತೋರಿ ವಧು-ವರಗಳಿಗೆ | ಕಂಡವರಿಗೆ ಮದುವೆಯೆನಿಸಿದರು 23 ದಂಪತಿಗಳು ಒಲಿದು ಇಂಪಾಗಿ ಉರುಟಣಿ | ಸೊಂಪಾಗಿ ಮಾಡಿದರು ಅನೇಕವಾಗಿ || ಸಂಪತ್ತು ಕೊಡುವನು ವಿಜಯವಿಠ್ಠಲರಾಯಾ 24
--------------
ವಿಜಯದಾಸ
ರಾಮ ನಿನ್ನಯ ದಿವ್ಯ ನಾಮವೇ ಗತಿಯೆಂಬೆ ಪಾಮರನೆಂದೆನ್ನ ಪಾಲಿಸು ತಂದೆ ಪ. ಸುರರಾಜನಂಗಸಂಗವಗೈದು ಶಿಲೆಯಾದ ವರಮುನಿ ಗೌತಮನರಸಿಯು ನಿನ್ನ ಚರಣಾರವಿಂದ ಸಂಸ್ಪರ್ಶಮಾತ್ರದಿ ದಿವ್ಯ ತರುಣಿಯಾಗಿಹಳೆಂಬ ಪರಿಯ ನಂಬಿದೆನು 1 ಪ್ರಥಮ ವರ್ಣವು ಪಾಪ ತತಿಗಳ ತರಿವುದು ಜತನ ಮಾಡುವುದನ್ಯ ವರ್ಣವೆಂದೆನುತ ನಿತ್ಯ ಸಂಸ್ತುತಿಮಾಳ್ಪವದರಿಂದಾ- ಶ್ರಿತ ಕಲ್ಪತರು ನೀನೆ ಗತಿಯೆಂಬೆ ನಿರತಾ 2 ನಿತ್ಯ ನಿರ್ನಾಮಗೊಳಿಸು ಪನ್ನಗಾಚಲನಾಥ ಪರಿಪೂರ್ಣ ಕೃಪೆಯಿಂದ ಮನ್ನಿಸಿ ಮನಸನ್ನು ನಿನ್ನಲ್ಲಿ ಇರಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮ ರಾಮೆನ್ನಿರೊ ಸೀತಾಪತಿ ರಾಮ ರಾಮೆನ್ನಿರೊಪ. ಗಂಗೆಯೊಳ್ ಮುಳುಗಲ್ಯಾಕೆ ನಡೆದು ಬಲು ಭಂಗವ ಪಡುವುದ್ಯಾಕೆ ಮಂಗಲದಾತ ನರಸಿಂಗನ ನಾಮವ ಹಿಂಗದೆ ನೆನೆದರಿಷ್ಟಂಗಳ ಕೊಡುವ1 ಉಪವಾಸ ಮಾಡಲ್ಯಾಕೆ ಕಪಟದೊಳು ಗುಪಿತದಿ ಕುಳ್ಳಲ್ಯಾಕೆ ಉಪಮೆರಹಿತ ಶ್ರೀಪತಿ ಕೃಷ್ಣರಾಯನ ಜಪಿಸಿ ಬಂದರೆ ಜನ್ಮ ಸಫಲವಾಗುವುದಲ್ಲೋ2 ಧ್ರುವನು ಸದ್ಗತಿ ಪಡೆದ ಕರುಣದಿಂದ ಪವಮಾನಿಗೆ ಒಲಿದ ಭುವನ ಈರಡಿ ಮಾಡಿ ಬಲಿಯನ್ನು ಸಲಹಿದ ಬವರದೊಳಗೆ ದಾನವರನ್ನು ಮಡುಹಿದ3 ಯಾತ್ರೆಗೆ ಪೋಗಲ್ಯಾಕೋ ಕಾವಡಿ ಪೊತ್ತು ತೀರ್ಥಸ್ನಾನಗಳ್ಯಾತಕೋ ಮಾಧವ ಶತಪತ್ರನಾಭನ ಸಂ- ಕೀರ್ತನಾದಿಗಳೆ ಪರತ್ರಸಾಧನವಲ್ಲೊ4 ಭೂರಿಯಾಯಾಸವ್ಯಾಕೋ ಬರಿದೆ ಸಂ- ಸಾರವ ನಂಬಲ್ಯಾಕೋ ಮಾರಾರಿಸಖ ಲಕ್ಷ್ಮೀನಾರಾಯಣನನ್ನು ಸೇರಿ ಭಜಿಪರ ಉದ್ಧಾರಮಾಡುವ ಶ್ರೀ5
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮದುರ್ಗದ ಪರಮ ಪೂಜ್ಯ ಆಚಾರ್ಯರನುನೇಮದಿಂದ ಸ್ಮರಿಸೊ ಮನುಜಾಕಾ'ುತಾರ್ಥವ ಕೊಟ್ಟು ಪ್ರೇಮದಿಂದ ಕ್ಕೆಪಿಡಿದುಸನ್ಮಾರ್ಗ ತೋಗಿಸುವರರು ಅವರು ಪಮಧ್ವಮತದೊಳು ಜನಿಸಿ ಸಚ್ಛಾಸ್ತ್ರಗಳನೋದಿ ಪ್ರಸಿದ್ಧಪಂಡಿತರಾಗಿ ಶುದ್ಧ ಆಚರಣೆ ಸದ್ದೈರಾಗ್ಯಸದ್ಭಕ್ತಿ ಸುಜ್ಞಾನ ಪೂರ್ಣರಾಗಿದುಡ್ಡಪ್ಪ ದೊಡ್ಡಪ್ಪ ಧಡ್ಡಪ್ಪರೆನ್ನದೆ ಸರ್ವಸಮದ್ಟೃ ಇಟ್ಟು'ದ್ಯಾರ್ಥಿಗಳಿಗೆಲ್ಲ ಅನ್ನವಸ್ತ್ರವ ಕೊಟ್ಟು ಗುರುಕುಲನಡಿಸಿದ ಋಗಳವರು 1ಸ್ನಾನಸಂಧ್ಯಾನ ಜಪಿತಪ ಅನುಷ್ಠಾನ ಅಗ್ನಿಹೋತ್ರವನಡಿಸುತ ಧ್ಯಾನಮೌನವು ಸದಾ ರಾಮನಾಮ ಸ್ಮರಣೆಪಾಠಪ್ರವಚಿನ ಪುರಾಣ ದಾನಧರ್ಮವು ದಿವ್ಯ ಸಂತಾನಸಂಪತ್ತು ರಾಜಮನ್ನಣೆ ಪಡೆದರು ಕ್ಷಣ ವ್ಯರ್ಥಕಳೆಯದೆ ವ್ಯರ್ಥಮಾತಾಡದೆ ದಿನಚರಿ ನಡಿಸಿದರು ಕಡೆತನರ 2ಘನವೈಯ್ಯಾಕರಣಿ ಗರ್ವವು ಎಳ್ಳೆಷ್ಟು ಇಲ್ಲಾ'ನಯ ಪೂರ್ಣಸ್ವಭಾವ ಹಣಹೆಣ್ಣು ಮಣ್ಣಿನಾಶೆಯುಪೂರ್ಣಬಿಟ್ಟವರು ಜನ'ತದಿ ಸತತ ನಿಂತರುಧನ ಮಾನ ಮರ್ಯಾದೆಗಳಿಗಾಗಿ ಎಂದೆಂದೂ ಧಡಪಡ-ಮಾಡಲಿಲ್ಲಾ ಗುಣನಿಧಿ ಭೂಪತಿ 'ಠ್ಠಲನ ಭಜನೆಯಾಕುಣಿಕುಣಿದು ಮಾಡುವ ಪರಮ ಭಾಗವತರು 3ಗಲಗಲಿ ನರಸಿಂಹಾಚಾರ್ಯರು
--------------
ಭೂಪತಿ ವಿಠಲರು
ರುದ್ರ ಕಾಶೀ ವಿಶ್ವೇಶ್ವರ ಗಂಗಾಧರ ಹಿಂಗಿಸೆನ್ನ ಲಿಂಗ ಭಂಗಬಡಿಸೊ ನರಸಿಂಹ ಭಕ್ತ 1 ಭೂತನಾಥ ಪಾರ್ವತೀನಾಥ ತ್ರಿನೇತ್ರ ಎನ್ನ ಭೀತಿ ಬಿಡಿಸು ಸೇತು ಶ್ರೀರಾಮಲಿಂಗ 2 ಹಂಪೆಯಲ್ವಾಸವಾದ ಪಂಪಾಭೀಮೇಶ ಕೃಷ್ಣ ನಿ- ನ್ನೆಂತೊಲಿಸುವುದೊ ಗೌರೀಕಾಂತ ಶಿವಲಿಂಗ 3
--------------
ಹರಪನಹಳ್ಳಿಭೀಮವ್ವ