ಒಟ್ಟು 579 ಕಡೆಗಳಲ್ಲಿ , 88 ದಾಸರು , 457 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

4 ಲೋಕನೀತಿ294ಅಂದೇನಿಂದೇನಯ್ಯ ಶ್ರೀಅರವಿಂದನಾಭನ ಹಗೆಯವ ಅಸುರಎಂದಿಗೆ ಮತಿ ಕವಲಿಲ್ಲದೆ ಹರಿಪದಹೊಂದಿದಗೆ ಮುಕ್ತಿಯವಸರ ಪ.ಅಂದಿಗೆ ಹರಿಮಹಿಮೆಗಳನ್ನು ಆನಂದದಿಂದ ಕೇಳದವ ದ್ವೇಷಿಇಂದಿಗೆ ಹರಿಕಥೆ ತಾತ್ವಿಕ ಜನರನುನಿಂದಿಸುವವನೆ ನಿಜದ್ವೇಷಿ 1ಸರ್ವಹ ಕೃಷ್ಣಾಕೃತಿಗೆ ವೈರ್ಯಾಗಿ ಬಹುಗರ್ವಿಪ ಕಂಸನು ಅತಿತಾಮಸಉರ್ವಿಲಿ ನರಹರಿ ಚರಣವರ್ಚಿಸದೆಶರ್ವಸರ್ವೋತ್ತಮನೆಂಬವತಾಮಸ2ವಾಸುದೇವನ ಪಾಶದಿ ಬಿಗಿಸುವೆನೆಂದುಆಶಿಸಿ ಕೆಟ್ಟ ಕೌರವ ಕುಮತಿದೋಷ ಧರ್ಮವನೆಲ್ಲ ಸರಿಮಾಡಿ ಶಾಕ್ತನಾಗ್ಯಾಸುರಿ[ಯ] ಪೂಜಿಪ ಹೊಲೆ ಕುಮತಿ 3ರುಕ್ಮಿಣಿ ದೇವಿಯೆ ಲಕ್ಷ್ಮಿಯೆಂದು ತಿಳಿಯದರುಕ್ಮನು ಮದಸೊಕ್ಕಿದ ಪಾಪಿಲೆಕ್ಕವರಿಯದೆ ಜೀವೇಶರು ಸಮರೆಂದುಲೆಕ್ಕಿಸುವವ ನರರೊಳು ಪಾಪಿ 4ಕೃತಕ ಹಕ್ಕಿಯನೇರಿ ತಾ ವಾಸುದೇವನೆಂದುಅತಿಕ್ಲೇಶವುಂಡ ಪೌಂಡ್ರಕ ಕಲಿಯುಸಕಳ ಜಗದೊಡೆಯ ಪ್ರಸನ್ವೆಂಕಟೇಶನಭೃತ್ಯನಾಗದೆಯೆ ನಾನೆಂದವ ಕಲಿಯು 5
--------------
ಪ್ರಸನ್ನವೆಂಕಟದಾಸರು
ಅಂದೆ ನಿರ್ಣಯಸಿದರು ಕಾಣೋ |ಇಂದಿರಾಪತಿ ಪರದೈವತವೆಂಬುದ ಪಅಂದು ಚತುರ್ಮುಖ ನಾರದನಿಗೆ ತನ್ನ |ತಂದೆ ಶ್ರೀಹರಿ ಪರದೈವವೆಂದು ||ಸಂದೇಹಗಳ ಪರಿಹರಿಸಿಹ ದ್ವಿತೀಯದಸ್ಕಂಧದೊಳಯ್ದನೆಯ ಅಧ್ಯಾಯದಲಿ 1ಅಂದು ಕಪಿಲದೇವ ದೇವಹೊಲೆಗೆ ತಾನು |ಚೆಂದದ ತತ್ತ್ವವನೆಲ್ಲ ಬೋಧಿಸಿದ ||ಅಂದದಲರ್ಜುನ - ಉದ್ದವರಿಗೆ ಅಂದಾ - |ನಂದದಿ ಗೀತಾಶಾಸ್ತ್ರವನೊರೆದನೆಂದು 2ವೇದೈಶ್ಚ ಸರ್ವೋರಹಮೇವ ವೇದ್ಯಃ |ವೇದವಿಧಾಯಕ ನಾಮದವನು ||ವೇದಾಕ್ಷರಗಳು ಹರಿನಾಮಗಳೆಂದು |ವೇದಾಂತ ಸಿದ್ಧಾಂತಗಳಲಿ ಪೇಳಿದರೆಂದು 3ರಾಜಸ -ತಾಮಸ ಪೌರಾಣಗಳಿವು |ರಾಜಸ -ತಾಮಸ ಜೀವರಿಗೆ ||ರಾಜಸ -ತಾಮಸ ಗತಿಗೋಸ್ಕರ ಮುನಿ - |ರಾಜ ವ್ಯಾಸನು ಮೋಹಕವೆಂದು ಪೇಳಿದ 4ಬಿಡು ಪಾಷಂಡಮತದ ದುರ್ಬುದ್ಧಿಯ |ಬಿಡದೆಮಾಡು ವೈಷ್ಣವಸಂಗವ ||ಧೃಡಭಕ್ತಿಯಿಂದ ಶ್ರೀಹರಿಯ ಪೂಜಿಸಿದರೆ |ಮೃಡಪ್ರಿಯ ಪುರಂದರವಿಠಲನೊಲಿವನೆಂದು 5
--------------
ಪುರಂದರದಾಸರು
ಅರ್ಚನೆ ಮಾಡಿರಯ್ಯ ಶ್ರೀ ಭಗವದರ್ಚನೆ ಮಾಡಿರಯ್ಯಅರ್ಚನೆ ಮಾಡುವ ಅರ್ಚಕ ಬುಧರಿಗೆಅರ್ಚಿಪ ಪದದಲ್ಲಿಅಚ್ಯುತದೊರೆವನೆಂದುಪ.ಅಂತರಂಗದ ಶುದ್ಧಿಲಿ ತನ್ನ ಬಾಹ್ಯಂತರ ಪರಿಪೂರ್ಣನಚಿಂತಿಸಿ ಸರ್ವಸ್ವತಂತ್ರ ಶ್ರೀ ಹರಿವೇದತಂತ್ರೋಕ್ತ ಪಥದಿ ನಿರಂತರ ಮರೆಯದೆ 1ಪೃಥುಧ್ರುವ ಅಂಬರೀಶ ಸುಧರ್ಮಜ ದಿತಿಜೋದ್ಭವ ಅಕ್ರೂರಕೃತವರ್ಮ ಸಾತ್ಯಕಿ ಯದುಕುಲ ಸುರಖಷಿಯತಿತತಿ ಅರ್ಚಿಸಿ ಅತಿಧನ್ಯರಾದರೆಂದು 2ಅನಂತಮೂರ್ತಿಯೊಳು ತನಗೊಂದು ಧ್ಯಾನಕ್ಕೆ ತಂದುಕೊಂಡುಆನಂದತೀರ್ಥರ ಸಂತತಿಗಳಿಂದತಾನು ಇಷ್ಟನಾಗಿ ನಾರಾಯಣನಾತ್ಮನೆಂದು 3ಬ್ರಹ್ಮಸ್ತೋತ್ರದಿ ಸಹಸ್ರ ಸನ್ನಾಮಪೂರ್ವಕ ಸ್ತೋತ್ರದಿಶ್ರೀಮತ್ಪಂಚಸೂಕ್ತ ಪಂಚಾಮೃತ ಸ್ನಾನರಮ್ಯಾಯುಧ ಕೌಸ್ತುಭಮಣಿ ಮಾಲೆಯಿಂದ 4ಧ್ಯಾನಾವಾಹನ ಸ್ನಾನ ಸುಪಾದ್ಯಾಚಮನಾಘ್ರ್ಯ ಧೂಪದೀಪ ಪ್ರಸೂನ ತುಳಸಿ ಗಂಧಮೋಘ ನೈವೇದ್ಯದಿಂಮಾನಸಾರ್ಚನೆ ಪ್ರತ್ಯಕ್ಷಾಗಲಿ ಎಂತೆಂದು 5ವೀರಾವರ್ಣದ ಮಧ್ಯದಿ ಶ್ರೀ ಮಧುಕೈಟಭಾಂತಕ ಕೃಷ್ಣನಕೋಟಿಕಾಂಚನ ರತ್ನಾಭರಣವೈಜಯಂತಿಕಿರೀಟಕುಂಡಲದಾಮಹಾರ ನೂಪುರಗಳಿಂದ6ದಿವ್ಯಾಂಬರ ಭೂಷಣ ನವರತುನ ಭವ್ಯ ಮಂಟಪವಸನಅವ್ಯಾಕೃತಾಧ್ಯಕ್ಷ ಶ್ರೀಭೂಮುಕ್ತಾಮುಕ್ತಸೇವ್ಯಮಾನನಾಪಾದ ಮೌಳ್ಯಾಂತ ವೀಕ್ಷಿಸಿ7ಬಹು ನೀರಾಂಜನಗಳಿಂದ ಸದ್ವೇದೋಕ್ತ ಗಹಗಹನ ಸೂತ್ರಂಗಳಿಂದಅಹಿವರಶಯನಜ ಭವಾಹಿಪ ವಿಪ್ರವಂದ್ಯಮಹಿಮನನಂತನೆಂತೆಂದು ಪರವಶದಿಂದ 8ತಾಳದಂಡಿಗೆ ಜಾಗಟೆ ಶಂಖ ಮದ್ದಳೆ ಕಂಸಾಳೆಭೇರಿಆಲಾಬುತಂಬೂರಿಭಾಗವತಗಾನಮೇಳೈಸಿ ತುತೂರಿ ವಾಜಂತ್ರಿ ಘೋಷದಿಂದ 9ಅಲವಬೋಧರು ಪೇಳಿದ ಪೂಜಾವಿಧಿಗಳ ಪ್ರದಕ್ಷಿಣೆ ಪ್ರಮಾಣಲಲಿತ ಗೀತ ನೃತ್ಯ ಬಲು ಪ್ರೇಮದಲಿ ಮಾಡಿಹೊಳೆವ ಬಿಂಬಾತ್ಮನ ಕಾಂಬ ಲವಲವಿಕೆಯಿಂದ 10ಆತ್ಮ ಕರ್ತೃತ್ವನೀಗಿಸರ್ವಾಂತರಾತ್ಮ ಪರಮಾತ್ಮನೆಂದುಆತ್ಮ ಮತ್ತೆ ಜಾÕನಾತ್ಮ ಪ್ರೇರಕ ಪ್ರೇರ್ಯಾತ್ಮ ನಿವೇದನ ಭಕ್ತಿ ನವಕಗಳಿಂದ 11ಸರ್ವೇಂದ್ರಿಯ ಮನಸ್ಥ ಮುಖ್ಯಪ್ರಾಣನೋರ್ವ ನಿಯಂತ್ರಹರಿಸರ್ವ ಪ್ರೇರಕನೆಂಬೊ ವಿಜ್ಞಾನಮಾರ್ಗದಿಸರ್ವಕಾಲದಲಿ ಸರ್ವಸಮರ್ಪಣೆಯೆಂದು 12ಮಂದಜನರು ಭಕ್ತಿಲಿ ದೂರ್ವನೀರಿಂದೆ ಪೂಜೆಯ ಮಾಡಲುತಂದೆ ಪ್ರಸನ್ವೆಂಕಟಕೃಷ್ಣ ಕಾರುಣ್ಯಸಿಂಧುಪ್ರಸನ್ನಾತ್ಮಬಂಧು ಮುಕ್ತಿಯನೀವ13
--------------
ಪ್ರಸನ್ನವೆಂಕಟದಾಸರು
ಆರ ಮುಂಧೇಳಲಿ ಕರಕರಿಯ ಈ |ಪೋರನು ಕೊಡವಲ್ಲನಲ್ಲೇ ಸೀರೆಯ ಪದಾರಿಯೊಳ್ಹೋಗಿ ಬಹರ್ಯಾರೆನ್ನ ಕಂಡರೆ |ಊರೆಲ್ಲ ಹೋಗಿ ದೂರರೇನೆ1ಸಂತಿಗೆ ಹೋಗ್ಯಾಕೆ ನಿಂತರೆಂದುಡುಕುತ |ಕಾಂತನೇ ಬಂದರೇನಂತ ಹೇಳುವಾ 2ಬತ್ತಲಾರಾಗಿ ಜಲ ಮತ್ತೀಗ ಸೇರುವಾಗಿ |ಮೃತ್ಯು ಬಂದನಂಬುದರ್ತಿವೇನೆ 3ನೀರ ಹಾವುಗಳೆಲ್ಲ ಶರೀರವ ಸುತ್ತುತಿವೆ |ಗಾರಾದೆವಲ್ಲೆ ವಾರಿಜಾಸ್ಯೆ 4ಮುಳ್ಳು ತೆಪ್ಪವು ಮೋರೆಗೆಲ್ಲ ಮುಚ್ಚುತಲಿವೆ |ಖುಲ್ಲಪೋರಗೆ ದಯೆಯಿಲ್ಲವಲ್ಲೇ 5ಜಲ ಜಂತುಗಳೆಲ್ಲ ಗುಳು ಗುಳು ಮಾಡುತವೆ |ಜಲಜಾಕ್ಷಗ್ಯೇತಕೆ ತಿಳಿಯದಮ್ಮ 6ಮೀನಾಗಳಲ್ಲಿ ಹತ್ತಿ ಏನೇನೋ ಮಾಡುತವೆ |ಏಣಾಕ್ಷಿ ನಮಗೇ ಏನು ಬಂತೇ 7ಹಿಂದತ್ತ ಹೋದರೆ ಕಂಧರದುದ್ದ ನೀರು |ಮುಂದತ್ತ ಬರೆ ಎದೆಗಿಂದ ಕೆಳಗೆ 8ಏಡಿಗಳೆಲ್ಲ ಕಾಲು ನೋಡಿ ಕಚ್ಚುತಲಿವೆ |ಮಾಡಲಿನೆ ಮೋರೆ ಬಾಡಿತಲ್ಲೆ 9ಮೂಗುತಿ ಮಣಿಯೆಲ್ಲ ಹೇಗೋ ಎಲ್ಲ್ಯೋ ಎನಲು |ಈ ಗತಿಯಾಗೆ ಮನೆಗೆ ಹೋಗೋದ್ಹ್ಯಾಂಗೆ 10ಏನಾದರಾಗಲಿ ಪ್ರಾಣೇಶ ವಿಠಲಗೆ |ನೀನೇ ಗತಿಯೋ ಕಾಯೊ ಎನ್ನಬೇಕೇ 11
--------------
ಪ್ರಾಣೇಶದಾಸರು
ಇಲ್ಲಿರಲಾರೆ ಅಲ್ಲಿಗೆ ಪೋಗಲಾರೆ |ಫುಲ್ಲನಾಭನೆ ನೀನಿದ್ದಲ್ಲಿ ಇರಿಸೆನ್ನ ಪಮರಳಿ ಮರಳಿ ಜನ್ಮ ಮರಣವನೊಲ್ಲೆ |ದುರುತ ಕೋಟಲೆಯ ಸಂಸಾರವನೊಲ್ಲೆ ||ತುರುಕಾದು ಕೊಳಲನೂದುವ ಮುರಮರ್ದನ |ಚರಣಕಮಲಗಳ ಸ್ಮರಣೆಯೊಳಿರಿಸೆನ್ನ 1ಬಂದು ಸಂಸಾರದ ಬೇನೆಯೊಳಗೆ ಬಿದ್ದು |ನೊಂದೆನು ಕಡುಮೋಹದಿಂದ ನಾ ಬೆಂದು ||ನಂದಗೋಪನ ಕಂದ ವೃಂದಾವನಪ್ರಿಯ |ಎಂದೆಂದು ತವಪಾದ ಸ್ಮರಣೆಯೊಳಿರಿಸೆನ್ನ 2ಪುತ್ರ-ಪೌತ್ರರು ಬಂಧು-ಮಿತ್ರ ಬಾಂಧವರೆಂದು |ಕತ್ತಲೆಯೊಳು ಕಡುನೊಂದೆನಯ್ಯ ||ಸತ್ಯಮೂರುತಿ ಶ್ರೀ ಉಡುಪಿಯ ಶ್ರೀ ಕೃಷ್ಣ |ಭಕ್ತವತ್ಸಲ ಶ್ರೀಪುರಂದರವಿಠಲ 3
--------------
ಪುರಂದರದಾಸರು
ಊರ್ವಶಿ :ಸಿಂಧುಶಯನ ವನದಿಂದಇಂದಿರೇಶ ಮುದದಿಂದ ಮೌನಿಮುನಿ-ವೃಂದದಿಂದ ಸ್ತುತಿವಂದನೆಗೊಳ್ಳುತ 1ಏಸುಲೋಭಿಯೊ ತಿಮ್ಮಶೆಟ್ಟಿ ಒಂದುಕಾಸಿಗೆ ಮಾರುವ ರೊಟ್ಟಿದಾಸರ ಕೂಡಿ ಜಗಜಟ್ಟಿ ಬಹುದೇಶವ ತಿರುಗುವ ಶೆಟ್ಟಿದೂಷಣಾರಿ ಪಾದಾಶ್ರಿತಜನರಭಿ-ಲಾಷೆ ಸಲಿಸಿ ಇಲ್ಲಿ ತೋಷದಿ ನಿಂತವ 2ದೊಡ್ಡವನೈ ಮಹಾರಾಯ ಹಳೆದುಡ್ಡಿಗೆ ನೀಡುವ ಕೈಯಅಡ್ಡಿಗೈದರೆ ಬಿಡನಯ್ಯ ಇವಬಡ್ಡಿಕೇಳುವ ತಿಮ್ಮಯ್ಯದಡ್ಡುಕೇಸಕ್ಕಿಯ ಮಡ್ಡಿಪ್ರಸಾದವಗುಡ್ಡೆಯ ಮೇಲಿದ್ದು ದುಡ್ಡಿಗೆ ಕೊಡುವವ 3ತಿರುಪತಿಗೆ ಪ್ರತಿಯಾಗಿ ಪಡುತಿರುಪತಿಯೆಂದಿಹಯೋಗಿಮೆರಸುವನೈ ಸ್ಥಿರವಾಗಿ ಶ್ರೀವರವೆಂಕಟ ಲೇಸಾಗಿಶರಣರು ಏನೆಂದು ಸಂತೋಷಿಪಕರುಣಾಕರ ಚಪ್ಪರ ಶ್ರೀನಿವಾಸನು 4ಈ ಪರಿಯಲಿ ಒಲಿದಿಪ್ಪಾ ಬಹುವ್ಯಾಪಾರಿ ತಿಮ್ಮಪ್ಪಾಕಾಪಟ್ಯರಿಗೆ ತಾನೊಪ್ಪನಮ್ಮಗೋಪಾಲಕಜಗದಪ್ಪಶ್ರೀಪರಮಾತ್ಮ ನಾನಾಪರಿ ವಿಭವದಿಗೋಪುರದಲಿ ತಾ ವ್ಯಾಪಿಸಿ ನಿಂದನು 5ರಂಭೆ : ನಾರೀವರ್ಯಾರಮ್ಮ ನೋಡಲುಸಾರಹೃದಯರಮ್ಮತೋರಣಛತ್ರಚಾಮರ ಬಿರುದುಗಳಿಂದಭೂರಿವಿಭವದಿಂದ ಸಾರಿಬರುವರಮ್ಮ1ಕರದಿ ಕಲಶವಿಹುದು ಶಾಲಿನನಿರಿ ಮುಂದಿರುತಿಹುದುಬೆರಳಿನೊಳುಂಗುರುವರದ್ವಾದಶನಾಮಧರಿಸಿ ಸಮಂತ್ರೋಚ್ಚರಿಸುತ ಬರುವರು 2ಮಂದಿಗಳೊಡ್ಡಿನಲಿ ಬರುವರುಮಂದಸ್ಮಿತದಲಿಚಂದದಿ ಜನಗಳಸಂದಣಿಮಧ್ಯದಿಇಂದಿರೆಯರಸನ ಧ್ಯಾನದಿ ಬರುವರು 3ಹಿಂಗದೆ ಬರುತಿಲ್ಲಿ ಮನಸಿನಇಂಗಿತವರಿತಿಲ್ಲಿಬಂಗಾರದ ಭೂಷಣಸಮುದಾಯದಿಅಂಗಜಪಿತನಿಗೆ ಶೃಂಗಾರಗೈವರು 4ವಿಪ್ರೋತ್ತಮರ ಗುಣ-ಕೆಂತು ಸೈರಣೆಯಾಂತು ನಾನಿರಲಿಚಿಂತಿತಾರ್ಥವನೀವ ಲಕ್ಷ್ಮೀ-ಕಾಂತ ಶ್ರೀನಿವಾಸನಂಘ್ರಿಯಸಂತಸದಿ ಪೂಜಾದಿ ಸತತಿ-ಯಾಂತಕೊಂಡಿಹೇಕಾಂತಭಕ್ತರು 1ಒಂದು ಭಾಗ ಪುರಾಣಿಕರು ತಾವೆಂದುಕೀರ್ತಿಯನು ಧರಿಸಿ ಮ-ತ್ತೊಂದು ಭಾಗದಿ ಜೋಯಿಸರುತಾವೆಂದು ಧರ್ಮವನು ಪಾಲಿಸಿಸಿಂಧುಶಯನನ ಚಾರುಚರಣ-ದ್ವಂದ್ವಕಾನತರಾಗಿ ಲೋಕದಿವಂದ್ಯರೆನಿಸಿಯಾನಂದ ಪರರಿವ-ರೆಂದು ಶ್ರೀಗೋವಿಂದ ನಡೆಸುವ 2ವೇದಶಾಸ್ತ್ರಪುರಾಣತರ್ಕವನೋದಿ ಬಲ್ಲವರು ವಿಪ್ರರಿಗಾದಿ ಗೌಡಸಾರಸ್ವತ ಋಗ್ವೇದಿ ಬ್ರಾಹ್ಮಣರು ಇವರಲಿವಾದಗೈವ ಕುವಾದಿಗಳ ಮನ-ಭೇದಿಸುತ ನಿಜವಾದ ಮಾರ್ಗವಶೋಧನೆಗೆ ತಾವೈದಿಸುವ ಮಹಾಸಾಧುಗಳಿಂದ ದೃಢವಾದ ಮಾತಿದು 3ಅಂಬುಜಾಕ್ಷಿಯೇನೆಂಬೆಮೇಗರೆಡಂಭಮಾತಲ್ಲ ಧನಿಯ ಕು-ಟುಂಬವೆನುತಲಿ ತುಂಬ ಕೀರ್ತಿಯಗೊಂಬರೆ ಎಲ್ಲ ಸಂತಸಸಂಭ್ರಮದಿ ವೇದ್ಯಾಂಬುನಿಧಿಯಲಿತುಂಬಿರುವರೀ ಕುಂಭಿನಿಯೊಳು ಜ-ಸಂಬಡುವುದು ವಾಸಿಷ್ಠಗೋತ್ರಜ-ರೆಂಬ ವಿಪ್ರಕದಂಬಪೂಜ್ಯರು 4ರಂಭೆ : ಬಾಲೇ ನೀ ಪೇಳಿ ದಿನದ ಲೀಲೆಯೇನೆಂದೆನಗೆಆಲಯದೊಳಿದ್ದ ಜನಜಾಲವಿಂದೀ ನೆಲೆಗೆ1ಮೇಳವಿಸುತ್ತ ಕೂಡಿರುವರು ಪೇಳೆಲೆ ಸುಶೀಲೆಆಲೋಚಿಸಲರಿದಾ ಕಮಲಾಲೋಲನಮಹಾಲೀಲೆ 2ಕೇಳುವೆನರಿದಾಲಸ್ಯವ ತಾಳಬೇಡ ಸಖಿಯೇಮೂರ್ಲೋಕದೊಳಗೆ ಇಂಥಲೀಲೆಯ ನಾನರಿಯೆ 3ಫಾಲೇಂದು ಕುಂದದ ವರ್ಣಕೋಲು ಚಾಮರಗಳನಲುಗಿಸಿಕೊಂಡು ಬಗ್ಗಿ ಪೇಳುವರು ಸ್ತೋತ್ರಗಳು 4ಚಂಡವೈಶ್ವಾನರನ ತೇಜಾಖಂಡದಿಂದೋರಂತೆಮಂಡಲೈದರೊಳಗೆ ಪ್ರಭೆಗೊಂಡಿಹುದು ಕಾಂತೆ 5ಪಾದುಕೆಯ ಮುಂದೆಯಿರಿಸಿ ಮೋದದಿಂದಿಕ್ಕೆಲದಿಆದಿನಾರಾಯಣ ಮದುಸೂದನನೆ ಮುದದಿ 6ಕಾದುಕೊಳ್ಳೆನುತ ಸ್ತುತಿಸಿ ಪಾದಕೆರಗುವರುನಾದಿನಿ ಕೇಳಿದರ ಪರಿಯನೀ ದಯದಿಂದುಸುರು 7ದೇವನಾಗಮನವೆಲ್ಲನೂದೀವಟಿಗೆ ಸೇವೆಯೆಂದು ಪೇಳುವರುಭಾವುಕರು ಮನದೊಳಂದು 1ಕೇಳಿದರೆ ಆಲಸಾಯನವನು ಸುರಿದುಆಯತವನು ವರ್ಣಿಸುವಡೆ ಬಾಯಿಯುಸಾವಿರ ಸಾಲದುಶ್ರೀಯರಸನ ಮಹಿಮೆಯರಿವದಾರಿಗಳವಲ್ಲ 3ಜಯಜಯ ಭಕ್ತಸುಪೋಷಣ ಜಯಜಯದೈತ್ಯವಿನಾಶನಜಯಜಯ ಜಾಹ್ನವಿತಾತ ಜಯಜಯ ಜಗದಾತಜಯಜಯ ರವಿಶತತೇಜ ಜಯಜಯಆಶ್ರಿತ ಸುರಭೂಜಜಯಜಯ ನಾದದಿಯೇರ್ದ ನಿರ್ಭಯತೋರುತ ಒಲಿದು 4* * *ವಾರೀಜನೇತ್ರೆ ಕಳ್ ಭೂರಿವಿಭವವನ್ನು ನೋಡೆ ತಂಗಿ ಭಕ್ತ-ರೋರಂತೆ ಬಂದು ಕರೆಯುವಾನಂದವ ನೋಡೆ ತಂಗಿ 1ಸೇವೆಯ ಕೈಕೊಳ್ಳು ಎನುತಡ್ಡಬಿದ್ದರು ನೋಡೆ ತಂಗಿ ಭಕ್ತಿಭಾವದಿ ನೀ ದಯಮಾಡೆಂದು ಪೇಳ್ದರು ನೋಡೆ ತಂಗಿ 2ದೇವಕಾರುಣ್ಯ ಸುಭಾವದಿ ಶರಣರ್ಗೆ ನೋಡೆ ತಂಗಿ ಪ್ರತಿ-ಭಾವವ ತೋರಿ ಗೋಪುರ ಸೇವೆಗೊಂಡರು ನೋಡೆ ತಂಗಿ 3ಪಲ್ಲಂಕಿಯಲಿ ಭಕ್ತಸುಲಭವೇರುವನು ನೋಡೆ ತಂಗಿ ರಥ-ದಲ್ಲಿ ತಾನೇರುತ್ತ ಮೆಲ್ಲನೆ ಬರುವನು ನೋಡೆ ತಂಗಿ 4ಭೇರಿನಗಾರಿಮೃದಂಗೊಂದು ಕಡೆಯಲ್ಲಿ ನೋಡೆ ತಂಗಿ ರಥಮೌರಿಪಟಿಹ ತಂಬಟೆಯೊಂದು ಕಡೆಯಲ್ಲಿ ನೋಡೆ ತಂಗಿ5ಸಾಲಿನೊಳೆಸೆವ ಬೊಂಬಾಳ ಹಿಲಾಲುವ ನೋಡೆ ತಂಗಿ ಜನ-ಜಾಲಗಳೆಲ್ಲರು ಮೇಳವಿಸಿರುವರು ನೋಡೆ ತಂಗಿ 6ಪಟ್ಟದರಸನಾಗಮವನ್ನು ಕಾಣುತ ನೋಡೆ ತಂಗಿ ತಮ್ಮ-ಪಟ್ಟವನು ಶೃಂಗರಿಸಿದರೇನೆಂಬೆ ನೋಡೆ ತಂಗಿ 7ಕಟ್ಟಿದ ಗೂಡುದೀಪದ ಚಮತ್ಕಾರ ನೋಡೆ ತಂಗಿ ಹೇಮ-ಬೆಟ್ಟವ ಇಳೆಗೆ ತಂದೊಟ್ಟಿಹರೆಂಬಂತೆ ನೋಡೆ ತಂಗಿ 8ಚಿತ್ತೈಸಿದನಿಲ್ಲಿನಿತ್ಯಉತ್ಸಹಲೋಲ ನೋಡೆ ತಂಗಿ ಭಕ್ತ-ರರ್ತಿಯ ಸಲಿಸಿ ಪ್ರವರ್ತಕನಾದನು ನೋಡೆ ತಂಗಿ 9ಕಾಣಿಕೆಯಾರತಿಗಳನೆಲ್ಲ ಕೊಳ್ಳುತ ನೋಡೆ ತಂಗಿ ಬಂದಶ್ರೀನಿವಾಸನು ಭಕ್ತರ ಒಡನಾಡುತ್ತ ನೋಡೆ ತಂಗಿ 10ಯಾವಾಗಲು ಬರುವವನಲ್ಲ ಧನಿಯೆಂದುನೋಡೆ ತಂಗಿ ನಮ್ಮದೇವರು ಬಂದರೆಂದುರುತರ ತೋಷದಿ ನೋಡೆ ತಂಗಿ 11ಜೋಡಿಸಿ ಕೈಗಳ ಭಯದಿ ಬಗ್ಗಿ ನೋಡೆ ತಂಗಿ ದಯ-ಮಾಡೆಂದು ಹರಿಯನ್ನು ಬೇಡಿಕೊಂಡೊಯ್ದರು ನೋಡೆ ತಂಗಿ12ಭೂರಿಕದಳಿಚೂತಪನಸ ಫಲಗಳನ್ನುನೋಡೆ ತಂಗಿ ಮಹಾ-ಮೇರುವಿಗೆಣೆಯಾದ ಮೇರ್ವೆಶೃಂಗಾರವ ನೋಡೆ ತಂಗಿ 13ಸುತ್ತುಮುತ್ತಲು ಝಲ್ಲಿಗಳಾನಂದವ ನೋಡೆ ತಂಗಿ ಅದ-ರೊತ್ತಿಲಿರುವ ಪಲ್ಲವ ಪೂಗಳ ಮಾಲೆ ನೋಡೆ ತಂಗಿ 14ಮೇಲೆ ಕಟ್ಟಿರುವ ಪತಾಕೆನಿಶಾನಿಯ ನೋಡೆ ತಂಗಿ ಸಾಲು-ಸಾಲಿನ ಅಂಕಣದೊಳಗಿಹ ಬೊಂಬೆಯ ನೋಡೆ ತಂಗಿ 15ಬಾಣಬಿರುಸು ಜೇನುಂಡೆಯ ಶಬ್ದವ ನೋಡೆ ತಂಗಿ ವೀಣಾ-ವೇಣುಸುಗಾನ ಸಂಗೀತ ಮನೋಹರ ನೋಡೆ ತಂಗಿ16ತಾಳಮೃದಂಗ ಸುಸ್ವರ ರಂಜಿತದಿಂದ ನೋಡೆ ತಂಗಿ ಗಣಿ-ಕಾಲತಾಂಗಿಯರ ಗಾಯನದಭಿನಯನ್ನು ನೋಡೆ ತಂಗಿ 17ಕಾಲುಂಗುರ ಗೆಜ್ಜೆಗಳಕಟ್ಟಿಕುಣಿವರು ನೋಡೆ ತಂಗಿ ತಮ್ಮಮೇಲುದನೋಸರಿಸುತ್ತ ಮೋಹಿಸುವರು ನೋಡೆ ತಂಗಿ 18ಕಂತುಪಿತನು ಇಲ್ಲಿ ನಿಂತನು ವಿಭವದಿ ನೋಡೆ ತಂಗಿ ತದ-ನಂತರದಲಿ ಆರತಿಯನುಗೊಂಡನು ನೋಡೆ ತಂಗಿ 19ಭೂತಪದೊಳಗೀ ನೂತನವೆಲ್ಲುಂಟು ನೋಡೆ ತಂಗಿ ಹರಿ-ಪ್ರೀತರಾಗಿರುವನಾಥರ ಸೇವೆಯ ನೋಡೆ ತಂಗಿ 20ವೇದೋದ್ಧಾರಕ ನಿನ್ನ ಪಾದವೇ ಗತಿಯೆಂದುನೋಡೆ ತಂಗಿ ಮಹಾ-ಸಾಧುಗಳತ್ತಲು ಕಾದುಕೊಂಡಿರುವರು ನೋಡೆ ತಂಗಿ 21ಚರಣನಂಬಿದ ತನ್ನ ಶರಣರ ಪೊರೆಯೆಂದುನೋಡೆ ತಂಗಿ ತಾನುತ್ವರಿತದಿ ಬಂದನು ಉರುತರ ತೋಷದಿ ನೋಡೆ ತಂಗಿ 22ಮನೆಮನೆಗಳ ಸಮ್ಮುಖದಲ್ಲಿ ದೀಪವ ನೋಡೆ ತಂಗಿ ಎಲ್ಲಾಜನಗಳು ಕೈಗಳ ಮುಗಿದು ನಿಂದಿರುವರು ನೋಡೆ ತಂಗಿ 23ರಾಜ ಬೀದಿಯೊಳು ವಿರಾಜಿಪ ತೋರಣನೋಡೆ ತಂಗಿ ಸುರ-ಭೂಜದಂತಿಹ ಮಹಾಸೋಜಿಗಕುರುಜವ ನೋಡೆ ತಂಗಿ24ಕಂತುಜನಕನಿಲ್ಲಿ ನಿಂತು ಪೂಜೆಯಗೊಂಡನೋಡೆ ತಂಗಿ ತದ-ನಂತರದಲಿ ಮನಸಂತೋಷಪಡಿಸಿದ ನೋಡೆ ತಂಗಿ 25ಮುಂದೆ ಬರುವ ಜನಸಂದಣಿಗಳ ಮಧ್ಯ ನೋಡೆ ತಂಗಿ ಇ-ನ್ನೊಂದು ಗೂಡಿನ ಪರಿಯಂದವ ನೀನಿತ್ತ ನೋಡೆ ತಂಗಿ 26ಮಾಣಿಕ್ಯರಾಸಿಯಮಾಣದೆಇಟ್ಟರೊ ನೋಡೆ ತಂಗಿ ಸರಿ-ಗಾಣೆ ಈ ಗುಡಿಗೆ ಜಾಣೆ ನೀ ಮನವಿಟ್ಟು ನೋಡೆ ತಂಗಿ 27ಮೂಡಿತೊ ಸೂರ್ಯನ ಕಿರಣಗಳೆಂಬಂತೆನೋಡೆ ತಂಗಿ ಇಂಥಗೂಡಿನೊಳಗೆ ದಯಮಾಡಿ ಸೇವೆಯಗೊಂಡ ನೋಡೆ ತಂಗಿ28ತರುಣಿಯರನ್ನಳೆಯಿತ್ತ ಶರಧಿಯಂತುಕ್ಕುತನೋಡೆ ತಂಗಿ ಭೂರಿ-ಹರುಷದಿಂ ಬರುವ ಭಕ್ತರನೇಕರು ನೋಡೆ ತಂಗಿ 29ಹರಿಯೇ ನೀ ಎಮ್ಮಯ ಪೊರೆಯೆಂದು ಭಕ್ತಿಯೊಳ್ನೋಡೆ ತಂಗಿ ಬಂದುಚರಣಕಾನತರಾಗಿ ಅರಿಕೆಯ ಗೈವರು ನೋಡೆ ತಂಗಿ 30ಮಕ್ಕಳನರಸಿ ಮಾತೆಯು ಪೋಗುವಂದದಿನೋಡೆ ತಂಗಿ ಮಹಾ-ರಕ್ಕಸವೈರಿಯು ದಯಮಾಡಿ ಪೊರಟನು ನೋಡೆ ತಂಗಿ 31ಪರಮಪುರುಷ ಭೂರಿವಿಭವದಿ ಬರುವುದನೋಡೆ ತಂಗಿ ಬಾಣಬಿರುಸುಗಳೆಲ್ಲವು ಸುರುಸುರುಯೆಂಬುದು ನೋಡೆ ತಂಗಿ 32ಫಲ್ಲನೆ ಹೊಳೆಯುವ ಹಿಮಕರಜ್ಯೋತಿಯನೋಡೆ ತಂಗಿ ಮನಘಲ್ಲೆನಿಸುತ್ತಿಹ ಬೆಡಿಖಂಬಧ್ವನಿಯನು ನೋಡೆ ತಂಗಿ 33ಭುಗಿಲು ಭುಗಿಲು ಧಗಧಗಲೆನ್ನುತಲಿದೆ ನೋಡೆ ತಂಗಿ ಕಿ-ಡಿಗಳನುಗುಳುವ ವಸನಪ್ರಕಾಶವ ನೋಡೆ ತಂಗಿ 34ಈ ರೀತಿಯ ವಿಭವದಿ ಏರಿದ ಮೇರ್ವೆಯ ನೋಡೆ ತಂಗಿ ರತ್ನ-ದಾರತಿಯಗೊಂಡನು ಶ್ರೀನಿವಾಸನು ನೋಡೆ ತಂಗಿ 35ಲೋಕದೊಳಗೆ ನೂತನವಿದೊಂದನು ನೋಡೆ ತಂಗಿ ಅ-ನೇಕ ಮಕ್ಕಳುಗಳ ನೇತಾಡಿಸುವದ ನೋಡೆ ತಂಗಿ 36ಪುತ್ರೋತ್ಸವ ಫಲಗಳು ದೊರಕಿದ ಕಾರಣ ನೋಡೆ ತಂಗಿ ಇದು-ಪುತ್ರ ಫಲಾವಳಿ ಹರಕೆಯಂಬರು ಕಾಣೆ ನೋಡೆ ತಂಗಿ 37ಇಳಿದನು ಇಂದಿರೆಯರಸನು ಮೇರ್ವೆಯ ನೋಡೆ ತಂಗಿ ರಥ-ದೊಳಗಿದ್ದ ಪರತತ್ವರೂಪನು ಸಹಿತಲಿ ನೋಡೆ ತಂಗಿ 38ಮಾಣದೆಭಕ್ತರ ಮಮತೆಯ ಕಾರಣ ನೋಡೆ ತಂಗಿ ಮುಖ್ಯ-ಪ್ರಾಣರಲ್ಲಿಗೆ ಪೋದರಿಬ್ಬರು ಒಂದಾಗಿ ನೋಡೆ ತಂಗಿ 39ಅವರಿವರಂತಲ್ಲ ದೊರೆ ಹನುಮಂತನು ನೋಡೆ ತಂಗಿ ಪಟ್ಟ-ದರಸನ ಸಹಿತಿಲ್ಲಿ ಇಳಿಸಿದನಲ್ಲವೆ ನೋಡೆ ತಂಗಿ 40ಹನುಮನ ಸೇವೆಯ ಕೈಕೊಂಡು ಕರುಣದಿನೋಡೆ ತಂಗಿ ಮತಘನವಾದ ಶೇಷತೀರ್ಥವ ನೋಡಿ ಬಂದನು ನೋಡೆ ತಂಗಿ41* * *ಬಂದನು ತ್ರೈಜಗದೀಶ ನಡೆ-ತಂದನು ರವಿಕೋಟಿಭಾಸ ಸರ್ವೇಶ ಪ.ಪಲ್ಲಂಕಿಯಲಿ ತಾನೇರಿ ಭಕ್ತ-ಸುಲ್ಲಭ ಸುತ್ತುಬರುವನೆಲೆ ನಾರಿಸಲ್ಲಲಿತಾರ್ಥ ಋಗ್ವೇದ್ಯಜುರ್ವೇದವ-ನೆಲ್ಲವ ಲಾಲಿಸಿ ಉಲ್ಲಾಸದೊಳಗೆ 1ಸಂಗೀತನರ್ತನಗಳನು ಪೂರ್ಣ-ಮಂಗಲಕರ ವೀಣಾವೇಣುಗಾನವನುಶೃಂಗಾರ ಪದ್ಮಮೃದಂಗ ಸರ್ವಾದ್ಯಪ್ರ-ಸಂಗದಿ ಒಲಿಯುತಗಜನಕನು 2ಕಪಟನಾಟಕಸೂತ್ರಧಾರಿ ಸರೀ-ಸೃಪಗಿರಿರಾಜ ದಾನವಕುಲವೈರಿಅಪರೂಪವಾದ ಮಂಟಪದಲಿ ಮಂಡಿಸಿಕೃಪೆಯ ಬೀರಿದನು ಸೇವಿಪ ಭಕ್ತರಿಂಗೆ 3ಭಕುತರಾಯಾಸವನೆಲ್ಲ ತನಶಕುತಿಯಿಂದಲಿ ಬಿಡಿಸಿದನದನ್ನೆಲ್ಲಅಖಿಳಭಯಗಳ ನಿವಾರಿಸಿ ತೆಗೆಯುತ್ತಮುಕುತಿದಾಯಕನು ಗೃಹಾಂತರಕ್ಕೈದಿದನು 4ಇಂದ್ರಾದಿ ದೇವತೆಯರನು ಅರ್ಧ-ಚಂದ್ರಶೇಖರಪ್ರಮಥಾದಿ ಗಣವನುಇಂದುಗೋವಿಂದನು ಚಂದದಿ ಸಂತುಷ್ಟಿ-ಹೊಂದಿಸಿ ಸರ್ವಾನಂದವ ತೋರ್ದನು 5ಆದ್ಯಂತ ಭಕ್ತರ ನೋಡಿ ಶ್ರೀಪ್ರ-ಸಾದವ ನೀಡಿ ಭಕ್ತರ ಒಡನಾಡಿಮುದ್ದುಮೋಹದ ಮಡದಿಯರ ಸಮೇತದಿಗದ್ದುಗೆಯಲಿ ಸಾನ್ನಿಧ್ಯ ತೋರಿದ ಕಾಣೆ 6ಈ ರೀತಿಯಲಿ ಶ್ರೀಹರಿಯು ನಾನಾಭೂರಿವಿಭವದ ಶೃಂಗಾರ ಶೋಭಿತವುನೀರೆ ಪಂಚಮಿ ಶುಭವಾರದ ದಿವಸದಸಾರಉತ್ಸಹ ಪೂರ್ಣ ತೋರಿಸಿ ಪೊರೆದನು7ಆರತಿಯನು ಎತ್ತಿದಳು ಜಯ-ಭೇರಿರವದಿ ಆಕಾಶನ ಮಗಳುವಾರಿಧಿಶಯನ ಮುರಾರಿ ಶ್ರೀಲಕ್ಷ್ಮೀ-ನಾರಾಯಣನ ಸಾಕಾರವನ್ನು ನೋಡಿ 8
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಎಂತಹ ಸಣ್ಣವನೆ-ನಿನ್ನ ಮಗನಂತಹರೆಲ್ಲಿಲ್ಲವೆ |ಹೊಂತಕಾರಿಬಲವಂತರಿಗಧಿಕನುಪತರಳನಂತಿಪ್ಪನು ತರಳೆಯರೊಡನಾಡುವ |ಕಿರುಬೆರಳುಗುರಲಿ ಗಿರಿಯನೆತ್ತಿದವ 1ಕಾಳಿಯ ಸರ್ಪನ ಕಾಲಲ್ಲಿ ತುಳಿದವ |ಪಲಾಯನ ಮಾಡಿ ಕಾಲಯವನನ ಸುಟ್ಟ 2ಕಿಚ್ಚು ಪಾನವ ಮಾಡಿ ಅಚ್ಚರಿ ತೋರಿದ |ರಚ್ಚೆಮಾಡುವಿರೆಂದು ಮುಚ್ಚಿಕೊಂಬುವಿಯಲ್ಲೆ3ಬಾಯಿ ತೆರೆದನಲ್ಲೆ ನೀನಂಜುವಂದದಿ |ಆಯಮಳಾರ್ಜುನರಾಯಾಸ ಬಿಡಿಸಿದ 4ದಿಟ್ಟತನದಿ ಮೊಲೆಗೊಟ್ಟವಳನು ಕೊಂದ |ಪುಟ್ಟ ಪುರಂದರವಿಠಲರಾಯನು 5
--------------
ಪುರಂದರದಾಸರು
ಎಂತು ವರ್ಣಿಸಲಹುದು ಸಿರಿವರನಸಿರಿನಾರಸಿಂಹನಪಅಂತರಂಗದಿ ಹರಿಯ ಸ್ಮರಣೆಯಸಂತತವು ಬಿಡದಂತೆ ಮಾಡುವಕಂತುಪಿತ ಭಕ್ತರನು ಪೊರೆಯಲುನಿಂತಿರುವ ಸಿರಿಕಾಂತನೆನುತಲಿ ಅಪನಿಷ್ಠೆಯಿಂದಲಿ ಬೆಟ್ಟವೇರುತ್ತಹರಿಭಕುತರೆಲ್ಲರುಕಷ್ಟಗಳ ಪರಿಹರಿಸು ಎಂದೆನುತಮನಮುಟ್ಟಿ ಭಜಿಪರುಸೃಷ್ಟಿಕರ್ತನೆ ರಕ್ಷಿಸೆಂದೆನುತಇಷ್ಟದಾಯಕ ನಿನ್ನ ಮಹಿಮೆಯಎಷ್ಟು ಪೊಗಳುವರಯ್ಯ ಕೇಶವಭಕ್ತರನು ಉದ್ಧರಿಸಲೋಸುಗಬೆಟ್ಟದಲಿ ಉದ್ಭವಿಸಿದಾತನ 1ವಾಸುದೇವನ ಮಹಿಮೆ ಪೊಗಳುತ್ತ ನ-ರಸಿಂಹ ಲಕ್ಷೀ ನಾರಸಿಂಹ ನ-ರಸಿಂಹ ನರಸಿಂಹ ಎಂದೆನುತ ಹರಿ-ದಾಸರೆಲ್ಲರು ಸಾರಸಾಕ್ಷನೆ ನಿನ್ನ ಪೊಗಳುತ್ತದ್ವಾರ ದ್ವಾರದಿ ಪೂಜೆUಷÉೂಳ್ಳುತಮಾರಪಿತ ಮಹಲಕ್ಷೀ ಸಹಿತದಿದೋರ ರಥÀದೆಡೆಯಲ್ಲಿ ನಿಲ್ಲುತತೇರ ನೇರುವ ಶ್ರೀ ರಮೇಶನ 2ಸಾರಪದಕಗಳಿಂದ ಶೋಭಿಸುತ ಝಳಝಳಿಪವಜ್ರದ ತೋರ ಮುತ್ತಿನ ಮಾಲೆಹೊಳೆಯುತ್ತ ಥಳಥÀಳಿಪ ನೊಸಲಲಿಸಾರಕಸ್ತೂರಿ ತಿಲಕ ರಂಜಿಸುತಮಾರಬಿಲ್ಲೆಂತೆಸೆವ ಪುಬ್ಬಿನಚಾರುತರ ಶೃಂಗಾರ ನಯನದವಾರೆ ನೋಟÀದಿ ನೋಡಿ ಭಕುತರ ಅ-ಪಾರದುಃಖಗಳನ್ನ ನೀಗುವರ3ಕೋಟಿಸೂರ್ಯಪ್ರಕಾಶಮಯವಾದನವರತ್ನ ಖಚಿತ ಕಿರೀಟಕುಂಡಲಧರಿಸಿ ಅನುವಾದಎಡಬಲದ ಭುಜದಲಿಮಾಟದ ಭುಜಕೀರ್ತಿ ಸುಲಲಿತದನೋಟಕಾಶ್ಚರ್ಯವನೆ ತೋರುತಶ್ರೀ ಕಳತ್ರನು ರಥದಿ ಮೆರೆಯುತ ದಿ-ವಾಕರನ ಪ್ರಭೆಯಂತೆ ಪೊಳೆಯುವರಮಾ ಮನೋಹರ ರಮೆಯ ರಮಣನ 4ಛತ್ರಿ ಚಾಮರಗಳನೆ ಪಿಡಿದಿಹರು ಎಡಬಲದಿಸ್ತುತಿಸುತ ಎತ್ತಿ ಸ್ವರಗಳ ಗಾನಪಾಡುವರುಚಿತ್ತೈಸುಹರಿಬಾ ಬಾರಿತ್ತಬಾಬಾರೆಂದು ಕರೆಯುವರುಸುತ್ತ ತುಂಬರು ನಾರದರಪರಿನೃತ್ಯಗಾನಗಳಿಂದ ಸ್ತುತಿಪರುಕರ್ತೃ ಕಮಲನಾಭ ವಿಠ್ಠಲರ-ಥೋತ್ಸವದಿ ನಲಿನಲಿವ ದೇವನ 5
--------------
ನಿಡಗುರುಕಿ ಜೀವೂಬಾಯಿ
ಎತ್ತಾರೆ ಹಿಂದಿನ ಮಾತು |ಭಾರತೀಶನಿನ್ನಭೃತ್ಯರು ತಮ್ಮನುವರಿತು | ನೀ ಸಲಹದಿದ್ದರೆ ಹೀಗೆಂದು ಪಮೂಗು ಹಿಡಕೊಂಡು ಕುಳಿತಿದ್ದಿ ನೂರತೊಂಭತ್ತೆಂಟು ಕಲ್ಪ |ಆಗಲೊಬ್ಬರೂ ನಿನ್ನನಾರೆಂದು ಕೇಳಾರೋ ||ಈಗ ದೇವರ ದಯೆಯಿಂದ ಹದಿನಾಲ್ಕು ಲೋಕಕ್ಕೆ ಮಂತ್ರಿ |ಯಾಗಿ ಸಂತೋಷದಿಂದ ಮೇಲು ಮೆರೆವುದಕ್ಕೀ ಗರ್ವವೆಂದು 1ಊರ ಸೇರದಲೆ ಕಂಡ ಗಿಡದ ತೊಪ್ಪಲುಗಳ ತಿಂದು |ಅರಣ್ಯದೊಳು ಬಹುಕಾಲ ಬದುಕಿದ್ದು ಮತ್ತೂ ||ಶ್ರೀರಾಮನಾಳಾಗಿ ಶಿಲೆಯ ಪೊತ್ತುದು ಜಗವೆಲ್ಲಾ ಬಲ್ಲದು ಮುಂದೆ |ವಾರಿಜಾಸನ ಪದವಿಯಾಳೆಂದುಹರಿನುಡಿದುದಕೀಗರ್ವವೆಂದು 2ತಿರಿದುಂಡು ಹನ್ನೆರಡಬ್ದ ವನವಾಸ ಅಜ್ಞಾತವೊಂದು |ವರುಷ ಮತ್ಸ್ಯಾಧಿಪನಾಗಾರದಲಿ ಪಾಕ ಮಾಡಿ ||ತರುಣೀ ಮಾನಭಂಗವ ನೋಡಿ ಸುಮ್ಮನಿದ್ದೆಯಾಗ ಕೃಷ್ಣ |ತರಿದು ದುರ್ಯೋಧನರ ರಾಜ್ಯ ನಿಮಗಿತ್ತುದಕೀ ಗರ್ವವೆಂದು 3ಎಲ್ಲರೂ ಕಂಡದ್ದು ಹುರಳಿ ಗುಗ್ಗರಿ ತಿಂದು ಭಿಕ್ಷಾರ್ಥಿಯಾಗಿ |ಮುಳ್ಳು ಮರದಡಿಯಲ್ಲಿ ಕುಳಿತದ್ದು ಹಿರಿಬದರಿಯಲ್ಲಿ ||ಸುಳ್ಳಲ್ಲ ವೇದವ್ಯಾಸಾನಂತ ವೇದಾರ್ಥ ತಿಳಿಸಿ ಸಕಲ |ಬಲ್ಲವನೆಂದು ಪೆಸರೂ ಕೊಟ್ಟದೆವೇ ಈ ಗರ್ವವೆಂದು 4ಏನೆಂಬುವ ಸರ್ವರಲ್ಲಿ ಹೊಕ್ಕು ಬಳಕೆ ಮಾಡುತಿದ್ದಿ |ಹೀನರು ನಿನಗೀಸು ನೀರ ಹಾಕಂದುಕೇಳಿ||ಪ್ರಾಣೇಶ ವಿಠಲನ್ನ ಭಜಿಸಿ ಪೂರ್ಣ ದಯಕೆ ಪಾತ್ರನಾಗಿ |ಮೀನಾಂಕಾರಿ ಮುಖರಿಂದರ್ಚನೆಗೊಂಬಕ್ಕೀ ಗರ್ವವೆಂದು 5
--------------
ಪ್ರಾಣೇಶದಾಸರು
ಎಂಥ ಗಾಡಿಕಾರನೆ ಯಶೋದೆ ನಿನ್ನ ಮಗ ಏಕಾಂತಕಾಂತೆರೊಳಾಡುವ ಕೊಂಕು ನೋಡುವ ಪ.ಮುಗುಳುನಗೆಗಳಿಂದ ಮಡದೇರ ಕಂಚುಕದಬಿಗುಹಿನ ಮಲಕ ಬಿಟ್ಟ ಬಹಳ ದಿಟ್ಟಉಗುರೊತ್ತಿ ಗುರುತು ಪೊಂಬುಗುರಿಗಳೆಮ್ಮವೆಮೊಗ್ಗು ಮೊಲೆಗಳ ಪಿಡಿದು ಮೊನೆ ನೋಡಿದ 1ತೋಳೆರಡನು ತಳಕಿಕ್ಕಿ ಇವಿಗೋ ದುಂಡುಮೊಲೆ ಎನಗಂದವೆಂದು ಮೋಹನಸಿಂಧುತಾಳಿದ್ದ ಕೊರಳೊಳು ತನ್ನ ಪದಕದೊಳುಮೇಲದೆಯೆಂದಪ್ಪಿದ ಬಿಗಿದಪ್ಪಿದ 2ರಾಕೇಂದುಮುಖಿಗೆರಾಹುಬಂದು ತೊಡರಿತುಈಕೆಗೆ ಮೋಸವೆಂದು ಎತ್ತಿದ ಬಂದುಜೋಕೆ ಮಾಡುವೆನೆಂದುಜಡಿದುಮಾರವೇಣಿಯಸಾಕಿ ಉಪಕಾರವೆಂದಸಚ್ಚಿದಾನಂದ3ಎಲೆಲೆ ನಾಭಿ ಒಲ್ಪಕಾಯಳೆ ನಾವು ಮುಟ್ಟಿ ಕೆಂಪಿನಾಮೊಲೆ ಮೊಗ್ಗು ಕಪ್ಪಾದವೆಂದು ಮುಟ್ಟಿ ಅಹುದೆಂದುಅಲಕದ ಪೆಳಲ ಬಿಟ್ಟು ಅಹಿರಿಪು ನವಿಲುಥರಅಲರ್ಗಳಾರ್ಮುಡಿಗಟ್ಟಿದ ಅಂಜಬ್ಯಾಡೆಂದ 4ಚದುರೇರೆನ್ನ ವಂಚಿಸಿ ಚಿನ್ನಿಪಾಲು ತನಿವಣ್ಣುಇದೀಗ ಬಚ್ಚಿಟ್ಟರೆಂದು ಯದುಕುಲೇಂದುಮುದ್ದು ಬಟುಗಲ್ಲದಿ ಮೊನೆವಲ್ಗಳ ನಾಟಿಸಿಅಧರಾಮೃತ ಪೀರಿದ ಅತಿಕೊಬ್ಬಿದ 5ಮುಡಿಯ ತೋರಕ ಕೊಡ ಮಲಿ ಭಾರಕಬಡನಡು ಮುರಿವದೆಂದು ನಗೆಯಲ್ಲವೆಂದುಜಡಿತದೊಡ್ಯಾಣವ ಜಾಣೆ ಕಟಿಗೆ ಬಿಗಿದುಡಿಗೆ ಕರವನಿಡಿದ ದುಡುಕು ಮಾಡಿದ 6ಮೃಗಮದಬಾವನ್ನ ಮಘಮಘಿಪ ಪೂಮಾಲೆಝಗಝಗಿಪ ಭೂಷಣವ ಜಾತಿ ಮೌಕ್ತಿಕವಮುಗುದೇರಿಗಿತ್ತ ಮೋಹಿಪ ಪ್ರಸನ್ನವೆಂಕಟಜಗಕೊಬ್ಬ ಚೆಲುವನಮ್ಮ ಜಯಿಸಿದ ನಮ್ಮ 7
--------------
ಪ್ರಸನ್ನವೆಂಕಟದಾಸರು
ಎಂಥ ಬಾಲಕೃಷ್ಣ ಗೋಪೇರಂತಃಚೋರಾನಂತನೆಕಂತುಪಿತ ಕೋಟಿ ಕಾಂತಿಯಲ್ಲಿ ಭ್ರಾಂತ ಮಾಡಿದನಿವ ಪ.ಬಾಲನಾದರೊಳಿತು ಒಳ್ಳೆ ಬಾಲೆಯರಮೊಳೆಮೊಲೆಗಾಲದ ಹಣ್ಣೆಂದು ನಖದಲಿ ಸೀಳಿ ನೋಡುವರೆಹೇಳಲೇನೆಂತೆನ್ನ ನಳಿತೋಳಲಪ್ಪಿ ತೊಂಡೆಹಣ್ಣಿಗ್ಹೋಲುವದೆಂದಧರನುಂಡ ತಾಳಬಹುದೇನಮ್ಮ 1ನಿಚ್ಚಟಮೈಯೊಳು ನಾವುನಿಚ್ಚಮೈಯ ತೊಳೆಯುವಾಗಬಚ್ಚಲೊಳು ಬಂದು ಕಣ್ಣಮುಚ್ಚಿ ಅಟ್ಟಹಾಸದಿಸಚ್ಚಿದಾನಂದಗೋಪಾಲ ವಚ್ಚೆರೆಗಂಗಳೆಯರಹುಚ್ಚುಮಾಡಿ ಹೋದನಿವನ ನೆಚ್ಚಬಹುದೇನಮ್ಮ 2ಹತ್ತಿಲಿದ್ದ ಸುಪ್ತ್ತಪುರುಷನ್ನೊತ್ತಿ ರತಿಕಳೆದೋರಿಚಿತ್ತ ಸೂರೆಗೊಂಬುದಾವ ಕೃತ್ಯವಮ್ಮ ರಂಗಗೆಸುತ್ತಿನವರರಿಯರೆಂದು ಚಿತ್ತವಾಯಿತಲ್ಲದೆಅತ್ತೆ ಮಾವ ಕಂಡರೆಮ್ಮ ತೊತ್ತು ಮಾಡಿ ಬಡಿವರೆ 3ಹಟನೆಂದು ಬಾಯೊಳು ಬಾಯಿಟ್ಟು ಮುದ್ದನಿಡಲುಬಟ್ಟಕುಚವಿಡಿದೆಮ್ಮ ರಟ್ಟು ಮಾಡಬಹುದೆದಿಟ್ಟ ಜಾರನಿಗೆ ಕೈಯ ಕಟ್ಟುವೆವೆಂದರೆ ಚೆಲ್ವಬಟ್ಟಗಲ್ಲ ಕಚ್ಚಿ ಕ್ಷತವಿಟ್ಟೋಡಿದ ನಮ್ಮಯ್ಯ 4ಚಿನ್ನನಾದರೇನು ಚೊಕ್ಕ ಚಿನ್ನದಂಥ ಗುಣವುಳ್ಳಚೆನ್ನಿಗನ ರೂಪಕೊಲಿದ ಕನ್ಯೆಯರು ಪೂರ್ವದಪುಣ್ಯವಂತರಲ್ಲದುಳಿದಿನ್ನಾರಿಗೆಲ್ಲಿ ಎಂದೂ ಪ್ರಸನ್ವೆಂಕಟೇಶ ಸಿಕ್ಕ ಇನ್ನು ಸುಖ ದಕ್ಕೀತೆ 5
--------------
ಪ್ರಸನ್ನವೆಂಕಟದಾಸರು
ಎಂಥಾ ಚಲುವ ಶ್ರೀಹರಿಭಕ್ತರೋದ್ಧಾರಿಎಂಥಾ ಚಲುವ ಶ್ರೀಹರಿಪಎಂಥಾ ಚಲುವ ಲಕ್ಷ್ಮೀಕಾಂತ ಶ್ರೀಭೂಸಹಿತಚಿಂತಿತಾರ್ಥವ ನೀವ ಕಂತುಪಿತನುಹರಿಅಪಚರಣದಂದುಗೆ ಗೆಜ್ಜೆಯು ಘಲುಘಲುರೆಂದುಮೆರೆವ ಪೈಜನರುಳಿಯು ಜರದ ಪೀತಾಂಬರವುನಡುವಿನ ಚಲ್ಲಣವು ಸಡಗರದಿಂದ ನಿಂತಮದನಗೋಪಾಲನು ಹೃದಯದಿ ಹಾರವುಕೌಸ್ತುಭಹೊಳೆಯಲು ವಿಧವಿಧಪದಕಗಳಿಂದಲಿ ಶೋಭಿಪಅದ್ಭುತ ಮಹಿಮನು ವಿಧಿಭವವಂದ್ಯನುಸದಮಲಕಾಯನು ಸಚ್ಚಿದಾನಂದನು 1ಕರದಿ ಕಂಕಣ ಭೂಷಣ ಕರುಣದಿ ಸುರರಪೊರೆವ ವೈಭವ ಕಾರಣಕರವತೋರುತ ತನ್ನಚರಣಸೇವೆಯ ಮಾಳ್ಪಪರಮಭಕ್ತರನೆಲ್ಲ ತ್ವರದಿ ಪಾಲಿಪೆನೆಂದುಸುರವರ ವಂದ್ಯನು ಪರಿಪರಿವರಗಳಕರದು ನೀಡುವಸಿರಿಕರಿರಾಜವರದನುಸರಸಿಜನಾಭಸನ್ಮಂಗಳ ಮಹಿಮನುಉರಗಗಿರಿಯ ಶ್ರೀವರಶ್ರೀನಿವಾಸನು2ಪಟ್ಟೆನಾಮವು ಘಣೆಯೊಳುಕಸ್ತೂರಿ ತಿಲಕ ಒಪ್ಪುತಿರೆ ವ್ಯೆಭವದೊಳುಸರ್ಪಶಯನ ಸರ್ವೋತ್ತಮ ಸಿರದೊಳುರತ್ನಕಿರೀಟನಿಟ್ಟು ಅತ್ಯಂತ ಶೋಭಿಸಲುಸುತ್ತಲ ಚಾಮರವೆತ್ತಿ ಬೀಸುತಿರೆನರ್ತನ ಗಾಯನ ವಿಸ್ತರಿಸಲು ಪುರು-ಷೋತ್ತಮ ತಾನಿರ್ಲಿಪ್ತನಾಗಿ ಸರ್ವಕರ್ತೃಕಮಲನಾಭವಿಠ್ಠಲ ಸರ್ವೋತ್ತಮ3
--------------
ನಿಡಗುರುಕಿ ಜೀವೂಬಾಯಿ
ಎರೆದು ಪೀತಾಂಬರÀವನುಡಿಸಿದಳಾಗವರಗೋಪಿಯು ಬೇಗಪಮುರುಳಿಯನೂದುತ ಪರಿಪರಿ ಗೆಳೆಯರುಪರಮಾತ್ಮನೆ ನಿನ್ನರಸುತಲಿಹರೆಂದು ಅಪಗುರುಳು ಕೂದಲು ಮುಖದಲ್ಲಿ ಹೊಸ ಬೆವರುಥಳಥಳಿಸುತಲಿಹುದುಎಳೆಯ ಶ್ರೀ ತುಳಸಿಯ ವನಮಾಲೆಗಳುಗಳದಲಿ ಶೋಭಿಪುದುಅರಳು ಮಲ್ಲಿಗೆ ಪುಷ್ಪದ ಹಾರಗಳುಮುತ್ತಿನ ಪದಕಗಳುಕೊರಳೊಳು ಮುತ್ತಿನ ಸರಗಳಿಂದೊಪ್ಪುತಮುರುಳಿಯ ನೂದುತ ಸರಸರ ಬಾರೆಂದು 1ಗುರುಳು ಕೂದಲೊಳೊಪ್ಪುವ ಅರಳೆಲೆಯುಸೊಗಸಿನ ನವಿಲ್ಗರಿಯುಬಿಗಿದು ಸುತ್ತಿದ ಸಿರದಲಿ ಕೇಶಗಳುಅತಿ ಶೋಭಿಸುತಿಹವುಚದುರಿದ ಕೇಶದಿ ಕೆಂದೂಳಿಗಳುಮಧುವೈರಿಯ ಕೇಳುವಿಧವಿಧ ರಾಗದಿ ಪಾಡುತ ನಿನ್ನನುಸದನದಿ ಪೂಜಿಸಿ ನೋಡುವೆ ಬಾರೆಂದು 2ನೊಸಲಲ್ಲಿ ಕುಡಿನಾಮವನಿಟ್ಟಿಹಳುನೋಡುತ ಹಿಗ್ಗುವಳುಎಸಳು ಕಣ್ಣಿಗೆ ಕಪ್ಪನೆ ತೀಡುವಳುಬಣ್ಣಿಸಿ ಕರೆಯುವಳುಎಸೆವೊ ಕರ್ಣಕೆ ನೀಲದ ಬಾವುಲಿಯೂರತ್ನದ ಚೌಕಳಿಯುಬಿಸುಜನಾಭ ನಿನ್ನ ಶಶಿಮುಖಿಯರುಗಳುರಸಕಸಿ ಮಾಳ್ಪರು ಹಸನಾಗಿ ಕೂಡೆಂದು 3ಅರಳುಕೆಂದಾವರೆ ಪೋಲುವಚರಣಸ್ಮರಿಸುವರಘಹರಣಸುರರುಕಿನ್ನರರೋಲೈಸುವಚರಣವರಸುಗುಣಾಭರಣಘಲುಘಲುಘಲುರೆಂದೊಪ್ಪುವಚರಣಸಜ್ಜನರಾಭರಣಅಡಿಯಿಡುತಲಿ ಬಾ ಮೃಡಸಖ ನಿನ್ನಯಅಡಿಗೆರಗುವರೈ ತಡೆಯದೆ ಬಾರೆಂದು 4ವರಹಸ್ತದಿ ಬೆಣ್ಣೆಯ ಮುದ್ದೆಯ ಕೊಡುವೆಬಾರೆನ್ನಯ ದೊರೆಯೆಜರದೊಲ್ಲಿಯ ಮುರಳಿಸಹಿತ ನಡುವಿಗೆ ಕಟ್ಟುವೆನುಬಾ ಭಕುತರ ಪೊರೆಯೆಉಗುರಿಂದ ಗಿರಿಯನು ಎತ್ತಿದ ಧಣಿಯೆಸುರಚಿಂತಾಮಣಿಯೆಹಗಲು ಇರಳು ನಿನ್ನಗಲಿರಲಾರೆ ಶ್ರೀ-ಕಮಲನಾಭವಿಠ್ಠಲ ಬೇಗಬಾರೆಂದು 5
--------------
ನಿಡಗುರುಕಿ ಜೀವೂಬಾಯಿ
ಎಷ್ಟು ಸುಖಿಗಳೊ ಗೋವು ಗೊಲ್ಲತಿ ಗೋಪರು ಶ್ರೀಕೃಷ್ಣನೊಡನೆ ಹಗಲಿರುಳು ಕ್ರೀಡೆಯಲಿ ಕಾಲವ ಕಳೆವರು ಪ.ಕೋಹೋ ಕೋಹೋ ತೃವ್ವೆ ತೃವ್ವೆ ಅಂಬೆ ಅಂಬೆ ಬಾರೆ ಎಂದುಮೋಹದಿಂದ ಕರೆಸಿಕೊಂಡು ಓಡಿ ಓಡಿ ಬಂದುಶ್ರೀಹರಿಯ ಹೆಗಲ ಮೇಲೆ ಗಳಗಳಿಟ್ಟುಕದಪುಕಂಠಲೇಹಿಸಿ ಮೊಗದಿರುದಿರುಹಿ ಸಿರಿನಖದಿಂ ತುರಿಸಿಕೊಂಬರು 1ತುಡುಗನೆಂದು ತುಡುವಿಡಿದು ಅಡಿಗಡಿಗೆ ಅಪ್ಪಿ ಚುಂಬಿಸಿಪಿಡಿಪಿಡಿದು ಗೋಪಿಯಡಿಗೆ ಒಪ್ಪಿಸಿ ಒಪ್ಪಿಸಿಮಡದೆರೆಲ್ಲ ಮಧುವೈರಿಯ ಸಂಗ ಸೊಬಗಿಲೋಲಾಡುತಲಿಒಡನೊಡನೆ ಗೋಪಾಲ ಮೂರುತಿಯ ಕಣ್ಣುಮನದಲಿಟ್ಟು ಸುಖಿಪರು 2ಸಣ್ಣವರಾಡಲೊಲ್ಲೆನೆನಲು ಗದ್ದವಿಡಿದು ಮುದ್ದಿಸಿ ನಮ್ಮಣ್ಣ ತಮ್ಮಗಳಿರಾ ಗೆಳೆಯರಿರಾ ಬನ್ನಿರೆಂದುಅಣ್ಣೆಕಲ್ಲೊಡ್ಡಿ ಗಜಗವಾಡಿ ಸೋಲಿಸಿಕೊಂಡಳುವಚಿಣ್ಣರ ಮನ್ನಿಪ ಪ್ರಸನ್ವೆಂಕಟೇಶನ ಉಣ್ಣುವೆಂಜಲಸೆಳೆದುಂಬುವರು 3
--------------
ಪ್ರಸನ್ನವೆಂಕಟದಾಸರು
ಏಕೆ ಮುರ್ಖನಾದೆ - ಮನುಜಾಏಕೆ ಮುರ್ಖನಾದೆ ? ಪ.ಏಕೆ ಮೂರ್ಖನಾದೆ ನೀನುಕಾಕು ಬುದ್ಧಿಗಳನು ಬಿಟ್ಟುಲೋಕನಾಥನ ನೆನೆಯೊ ಮನುಜಾ ಅಪಮಕ್ಕಳು ಹೆಂಡರು ತನ್ನವರೆಂದುರೊಕ್ಕವನು ಗಳಿಸಿಕೊಂಡುಸೊಕ್ಕಿಂದ ತಿರುಗುವರೇನೊ ಹೇ ಮನುಜಾ 1ಕಕ್ಕಸದ ಯಮದೂತರು ಬಂದುಲೆಕ್ಕವಾಯಿತು ನಡೆಯೆಂದರೆಸಿಕ್ಕವರೆಲ್ಲ ಬಿಡಿಸುವರೇನೊ ಹೇ ಮನುಜಾ 2ಅರಿಷಡ್ವರ್ಗದ ಆಟವ ಬಿಟ್ಟುಪುರಂದರವಿಠಲನ ಹೊಂದಲುಬೇಕುಹರಿಯನು ಸೇರುವ ಮಾರ್ಗವ ನೋಡೋ ಹೇ ಮನುಜಾ 3
--------------
ಪುರಂದರದಾಸರು