ಒಟ್ಟು 3495 ಕಡೆಗಳಲ್ಲಿ , 122 ದಾಸರು , 2470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳು ಶ್ರೀ ಗುರುರಾಯ ಏಳು ಪರಮಪ್ರಿಯ ಏಳು ಮಂಗಳಕಾಯ ಭಕ್ತಜನಪ್ರಿಯ ಏಳಯ್ಯ ಬೆಳಗಾಯಿತು ಪ. ಬಳಲಿ ಬಂದಿರುವಂಥ ಬಾಲ ಶಿಷ್ಯಂದಿರನು ಸುಲಲಿತದ ಪ್ರಿಯ ವಾಕ್ಯದಿಂದ ಸಂತೈಸಿ ಮಲಿನ ಮನವನೆ ತಿದ್ದಿ ಸುಜ್ಞಾನ ಬೋಧಿಸಿ ನಳಿನನಾಭನ ಪಾದಕೊಪ್ಪಿಸಲಿಬೇಕು 1 ಶುದ್ಧಾಂತಃಕರಣದಿಂ ಪೊದ್ದಿರುವ ಶಿಷ್ಯರನು ಉದ್ಧಾರಗೈಯಲಂಕಿತಗಳಿತ್ತು ಸಾರ ತತ್ವಾಮೃತವನುಣಿಸಿ ಪದ್ಮನಾಭನ ದಾಸರೆಂದೆನಿಸಬೇಕು 2 ಎದ್ದು ಸ್ನಾನವಗೈದು ತಿದ್ದಿ ನಾಮವನ್ಹಚ್ಚಿ ಪದ್ಮಾಕ್ಷಿ ತುಳಸಿ ಮಾಲೆಗಳ ಧರಿಸಿ ಗದ್ದುಗೆಯೊಳು ಕುಳಿತು ಹೃದ್ವನಜಸ್ಥಾನ ಪದ್ಮಪಾದವ ಮನದಿ ಸ್ಮರಿಸಬೇಕು 3 ಹಿಂದ್ಯಾರು ಪೊರೆದರು ಮುಂದ್ಯಾರು ಕಾಯ್ದರು ತಂದೆ ನೀವಲ್ಲದಿರೆ ಪೊಂದಿದರಿಗೆ ತಂದೆ ಮುದ್ದುಮೋಹನದಾಸವರ ಎಮ್ಮೊಳು ಕುಂದನೆಣಿಸದೆ ಕಾಯೊ ಕರುಣಾಳು ಗುರುವೆ 4 ಆಪನ್ನ ರಕ್ಷಕನೆ ಗೋಪಾಲಕೃಷ್ಣವಿಠ್ಠಲನಂಘ್ರಿ ಕಮಲ ಕೃಪಾಳು ತೋರು ನೀ ಕೃಪೆಮಾಡು ಕಣ್ತೆರದುಶ್ರೀ ಪದ್ಮಜಾತರೊಂದಿತನ ದಾಸಾರ್ಯ 5
--------------
ಅಂಬಾಬಾಯಿ
ಐದನೆ ವರ್ಷದ ಅಂತ್ಯ ಭಾಗದೊಳಗೆ ಐದುವೊ ಮಾರ್ಗವನು ನಿಶ್ಚಯಿಸಿದೆ ಪ. ಆದಿಮಾಸದ ಶುದ್ಧನವಮಿ ಸ್ಥಿರವಾರದಲಿ ಮೋದಗುರುಗಳು ಬೋಧಿಸೆ | ದಯದಿ ಅ.ಪ. ಐದನೆ ತಿಂಗಳಲಿ ಅಂಕುರುವು ಪಲ್ಲೈಸಿ ಐದು ಇಂದ್ರಿಯವು ಕಲೆತು ಕಾಯ ಐದಲಾರದು ಜೊತೆಗೆ ಕರ್ಮ ಒಂದು ಈ ದಿವ್ಯ ಮತಿಯೆನಗೆ ಸಾದರದಿ ಪುಟ್ಟಲು ಮೋದವಾಗುತ ಮನದೊಳು ಆದಿದೈವನ ಕರುಣವಾದ ಬಳಿಕಿನ್ನೇನು ಪಾದಪದ್ಮವ ತೋರೆಲೊ | ಸ್ವಾಮಿ 1 ಐದೆರಡು ಒಂದು ಇಂದ್ರಿಯಗಳನೆ ಬಂಧಿಸಿ ಐದಿಸಿ ಮೂಲಸ್ಥಳಕೆ ಐದು ರೂಪಾತ್ಮಕನ ಆದರದಿ ಪೂಜಿಸುತ ಐದೊಂದು ದೂರ ತ್ಯಜಿಸಿ ಐದು ನಾಲ್ಕು ತತ್ವದಧಿಪತಿಗಳನು ಆದರದಿ ಧ್ಯಾನಮಾಡಿ ಐದು ಮೂರು ದಳದಿ ಆದಿತ್ಯನಂತಿರುವ ಶ್ರೀಧರನ ನುತಿಸಿ ನುತಿಸಿ | ಸ್ತುತಿಸಿ 2 ಐದು ಭೇದಗಳ ಮತ ಸ್ಥಾಪಕರ ಕರುಣದಲಿ ಐದು ಮೂರನೆ ಖಂಡಿಸಿ ಐದೆರಡು ರೂಪಕನ ಆದರದಿ ಸ್ತುತಿಸುತ್ತ ಭೇದಿಸಿ ಹೃದಯಗ್ರಂಥಿ ಶ್ರೀದ ಶ್ರೀಗೋಪಾಲಕೃಷ್ಣವಿಠ್ಠಲನ ಪದ ಆದರದಿ ನಂಬಿ ಸ್ತುತಿಸಿ ಈ ದಾರಿ ಕಾಣಲು ಇದಕೆ ಕಾರಣದಿವ್ಯ ಮೋದ ಶ್ರೀಗುರು ಕರುಣವೋ | ದಯವೋ 3
--------------
ಅಂಬಾಬಾಯಿ
ಒಂದರಿಂ ಸುಖವಿಲ್ಲ ಹುಟ್ಟು ಮೊದಲು ಡಂಭ- ಪ ದಿಂದ ಭೈರೂಪ ತೊಟ್ಟು ತಿರುಗುತಿದೆಅ.ಪ ಬಟ್ಟೆ ಸಂಸಾರ ವಿಷಯ ಕೋಟಲೆಗೊಂಡುನಾಯ್ ಬಾಯ ಕೊಚೆಯಂತೆ ನಸಿಯುತಿದೆ ದೇಹ 1 ಬುದ್ಧಿ ದೃಢ ದುರ್ಮಾರ್ಗದಿಂದ ನೋಡದೆ ಹೋಯ್ತುಶುದ್ಧ ಸತ್ಕರ್ಮವಿಲ್ಲದೆ ಸೂರೆ ಹೋಯ್ತುದುರ್ದೆಸೆಯ ಪಥದ ಲಂಪಟ ಮಾಯಕೆ ಸಿಲುಕಿಮದ್ದಳೆಯ ಇಲಿಯಂತೆ ಆಯಿತೀ ದೇಹ 2 ಭೋಗ ಸಂಗವಮಾಡಿ ಪೋಗಲೈಸಿತು ದೇಹರಾಗಲೋಭವು ಹೆಚ್ಚಿ ವೈರಾಗ್ಯ ಹೊಯ್ತುಆಗಮವ ತಿಳಿಯದೆ ಕೃಷ್ಣನ್ನ ಧ್ಯಾನಿಸದೆಜೋಗಿ ಕೈ ಕೋಡಗನಂತೆ ತಿರುಗುತಿದೆ 3
--------------
ವ್ಯಾಸರಾಯರು
ಒಂದು ದಿನದಲಿ ಇಂದಿರೇಶನು ಚಂದದಿಂದಲಿ ವನಕೆ ಬಂದನು ಸುಂದರಾಂಗನು ಗೋಪ ವೃಂದದಿ ನಿಂದು ಕೊಳಲನು ಸ್ವರವಗೈದನು 1 ಕೊಳಲ ಧ್ವನಿಯನು ಕೇಳುತಾಕ್ಷಣ ಖಗಮೃಗಂಗಳು ಮಯ್ಯ ಮರತವು ತರುಣಿ ಮಣಿಯರು ಮನೆಯ ಕೆಲಸಕೆ ಮರತು ಮಯ್ಯನು ತೆರಳಿ ಬಂದರು 2 ಕೊಳಲ ಧ್ವನಿಯನು ಕೇಳಿ ಗೋಪೇರು ನಳಿನನಾಭನ ಬಳಿಗೆ ಬಂದರು ನಳಿನಮುಖಿಯರ ನೋಡಿ ಕೃಷ್ಣನು ಮುಗುಳುನಗೆಯಲಿ ಮಾತನಾಡಿದನು 3 ನಾರಿಮಣಿಯರೆ ರಾತ್ರಿ ವೇಳೆಯು ಈಗ ಇಲ್ಲಿಗೆ ಬಂದಿರೇತಕೆ ಮಾರನಯ್ಯನ ಮಾತುಕೇಳುತ ಮಡದಿ ಮಣಿಯರು ನುಡಿದರಾಗಲೆ4 ಬಾಲಕೃಷ್ಣನೆ ನಿನ್ನ ಕೊಳಲಿನ ಈಗಲೆಮ್ಮಯ ಮನವು ಹರುಷಿಸೆ ಬೇಗ ನಿನ್ನನು ಬೇಡಿಕೊಂಬೆವೊ 5 ಇಂತು ಕೃಷ್ಣನು ಸರಸವಾಡುತ ನಿಂತನವರಿಗೆ ಹರುಷ ತೋರುತ ಚಿಂತೆಯೆಲ್ಲವ ಬಿಟ್ಟು ಗೋಪೇರು ಅಂತರಾತ್ಮನ ಭಜಿಸುತಿದ್ದರು 6 ಏನು ಪುಣ್ಯವೊ ನಮ್ಮದೆನುತಲಿ ದಾನವಾರಿಯ ಸ್ಮರಿಸುತಿದ್ದರು ನಾರೇರೆಲ್ಲರ ನೋಡಿ ಕೃಷ್ಣನು ಬೇಗದಿಂದಲಿ ಅಂತರ್ಧಾನನಾದನು 7 ಸ್ಮರನ ಪಿತನನು ಸ್ಮರಿಸಿಪಾಡುವ ತರುಣಿಯರಿಗೆ ಮೈ ಸ್ಮರಣೆ ಮರೆತಿರೆ ಭರದಿ ಕಂಗಳ ತೆರೆದು ನೋಡಲು ಮುರಳೀಧರನ ಕಾಣದಲೆ ಚಿಂತಿಸಿ 8 ಜಾಜಿ ಸಂಪಿಗೆ ಸೂಜಿ ಮಲ್ಲಿಗೆ ರಾಜೀವಾಕ್ಷನ ಕಾಣಲಿಲ್ಲವೆ ಬಿಳಿಯ ಮಲ್ಲಿಗೆ ಎಳೆಯ ತುಳಸಿಯೆ ನಳಿನನಾಭನ ಸುಳಿವು ಕಾಣಿರಾ 9 ಸರಸದಿಂದಲಿ ಹರಿವ ಯಮುನೆಯೆ ಪಾದ ಕಾಣೆಯಾ ಚಿಗರಿ ಮರಿಗಳೆ ನಿಮ್ಮ ಕಂಗಳು ನಳಿನನಾಭನ ಸುಳವು ಕಾಣವೆ 10 ಯಾರ ಕೇಳಲು ಹರಿಯ ಕಾಣರು ನಾರಿಮಣಿಯರೆ ನಾವೆ ಕರೆಯುವ ಮುದ್ದು ಕೃಷ್ಣನೆ ಪದ್ಮನಾಭನೆ ಶ್ರದ್ಧೆಯಿಂದಲಿ ನಿಮ್ಮ ಭಜಿಪೆವೊ 11 ಜಯತು ಜಯತು ಶ್ರೀ ಲಕ್ಷ್ಮೀ ರಮಣನೆ ಜಯತು ಜಯತು ಶ್ರೀ ಗರುಡಗಮನನೆ ಜಯತು ಜಯತು ಶ್ರೀ ಉರಗಶಯನನೆ ಜಯತು ಜಯತು ಶ್ರೀ ಪರಮ ಪುರುಷನೆ 12 ಜಯತು ಜಾಹ್ನವಿಜನಕÀ ಶ್ರೀಶನೆ ಜಯತು ಭಕ್ತರ ಭಯವಿನಾಶನೆ ಜಯತು ಪಾವನ ಪುಣ್ಯ ಚರಿತನೆ ಜಯತು ಜಯತು ಲಾವಣ್ಯರೂಪನೆ 13 ಎಳೆಯ ಚಿಗುರಿನಂತಿರುವ ಪಾದವು ರುಳಿಯ ಗೆಜ್ಜೆಯು ಕಾಲಪೆಂಡೆಯು ಎಳೆಯ ಪಾದದಿ ಹೊಳೆವ ಪೈಜನಿ ಘಲಿರು ಘಲಿರು ಎಂದೆನುತ ಮೆರೆವುದು 14 ಪುಟ್ಟ ನಡುವಿಗೆ ಪಟ್ಟೆ ಮಡಿಗಳು ಇಟ್ಟ ಚಲ್ಲಣ ಪುಟ್ಟ ಕೃಷ್ಣಗೆ ಉಡುಗೆಜ್ಜೆಯು ಗಂಟೆ ಸರಪಳಿ ಒಪ್ಪಿ ಮೆರೆಯುವ ಕಾಂಚಿಧಾಮವು 15 ಚತುರ ಹಸ್ತದಿ ಶಂಖುಚಕ್ರವು ಗದೆಯು ಪದುಮವು ಹೊಳೆಯುತಿರುವುದು ಕಡಗ ಕಂಕಣ ತೋಳ ಬಾಪುರಿ ವಜ್ರದೊಂಕಿಯು ಮೆರೆಯುತಿರುವುದು 16 ಕೌಸ್ತುಭ ವೈಜಯಂತಿಯು ಸುರಗಿ ಸಂಪಿಗೆ ಸರಗಳೊಲಿಯುತ ಎಳೆಯ ತುಳಸಿಯ ಸರಗಳೊಪ್ಪುತ ಜರದವಲ್ಲಿಯು ಜಾರಿ ಬೀಳಲು 17 ವÀಕ್ಷ ಸ್ಥಳದಿ ಶ್ರೀಲಕ್ಷ್ಮಿ ಒಪ್ಪಿರೆ ರತ್ನ ಪದಕಗಳೆಲ್ಲ ಶೋಭಿಸೆ ಮಕರ ಕುಂಡಲ ರತ್ನದ್ಹಾರಗಳಿಂದ ಒಪ್ಪಿರೆ 18 ಗುರುಳು ಕೂದಲು ಹೊಳೆವೊ ಫಣೆಯಲಿ ತಿಲುಕ ಕಸ್ತೂರಿ ಶೋಭಿಸುತ್ತಿರೆ ಎಳೆಯ ಚಂದ್ರನ ಪೋಲ್ವ ಮುಖದಲಿ ಮುಗುಳು ನಗೆಯು ಬಾಯ್ದಂತ ಪಂಕ್ತಿಯು 19 ಪದ್ಮನೇತ್ರಗಳಿಂದ ಒಪ್ಪುತ ಪದ್ಮ ಕರದಲಿ ಪಿಡಿದು ತಿರುವುತ ಪದ್ಮಲೋಚನೆಯನ್ನು ನೋಡುತ ಪದ್ಮನಾಭನು ಕೊಳಲನೂದುತ 20 ರತ್ನ ಮುತ್ತಿನ ಕಿರೀಟ ಶಿರದಲಿ ಮತ್ತೆ ನವಿಲಿನ ಗರಿಗಳೊಪ್ಪಿರೆ ಹಸ್ತಿ ವರದನು ಎತ್ತಿ ಸ್ವರವನು ಮತ್ತೆ ಕೊಳಲನು ಊದೊ ದೇವನೆ 21 ಸುಂದರಾಂಗನೆ ಮಂದಹಾಸನೆ ಮಂದರೋದ್ಧರ ಬಾರೋ ಬೇಗನೆ ಇಂದಿರೇಶನೆ ಇಭರಾಜವರದನೆ ರಂಗನಾಥನೆ ಬಾರೊ ಬೇಗನೆ22 ಮದನ ಮೋಹನ ಪಾರಮಹಿಮನೆ ಬಾರೊ ಬೇಗನೆ ಶ್ರೀರಮಾಪತೆ ಶ್ರೀ ನಿಕೇತನ ವಾರಿಜಾಕ್ಷನೆ ಬಾರೊ ಬೇಗನೆ 23 ಹೀಗೆ ಗೋಪೇರು ಮೊರೆಯನಿಡುತಿರೆ ಮಂಗಳಾಂಗನು ಬಂದನೆದುರಿಗೆ ಧ್ವಜ ವಜ್ರಾಂಕುಶ ಪದ್ಮ ಪಾದವು ಅಡಿಯನಿಡುತಿರೆ ಧರಣಿ ನಲಿವಳು 24 ಹರಿಯ ನೋಡುತ ಪರಮ ಹರುಷದಿ ತರುಣಿಮಣಿಯರು ಹರುಷ ಪಡುತಲಿ ಪರಮ ಮಂಗಳ ಚರಿತ ದೇವಗೆ ಸ್ವರವನೆತ್ತಿ ಮಂಗಳವ ನುಡಿದರು 25 ಶುಭ ಕಂಬು ಕಂಠಗೆ ಮಂಗಳಂ ಮಹಾ ಮಾರನಯ್ಯಗೆ ಮಂಗಳಂ ಮಹಾ ಮುದ್ದುಕೃಷ್ಣಗೆ ಮಂಗಳಂ ಜಯ ಮಂಗಳಾಂಗಗೆ 26 ಕಮಲ ಮುಖಿಯರು ನಮಿಸಿ ಕೃಷ್ಣಗೆ ಸರಸವಾಡುತ ಹರುಷ ಪಡುತಲಿ ಕಮಲನಾಭ ವಿಠ್ಠಲನ ಕೂಡುತ ಮನದಿ ಸುಖವನು ಪಡುತಲಿದ್ದರು 27
--------------
ನಿಡಗುರುಕಿ ಜೀವೂಬಾಯಿ
ಒಂದು ಪಥವ ಹೊಂದಲರಿಯರೀ ಮನುಜರು ಇಂದಿರೇಶನ ಪಾದವ ಕಾಣದೆ ಕೆಡುವರು ಧ್ರುವ ಒಂದರೆ ಘಳಗಿ ನಾನೆವೆ ಮಾಡಿದೆನೆಂಬರು ಒಂದರೆ ಘಳಗಿ ಪ್ರಾಚೀನವೆಂಬರು ಒಂದರೆ ಘಳಗಿ ಈಶ್ವರ ಸೂತ್ರವೆಂಬರು ಒಂದರೆ ಘಳಗಿ ತಾ ಏನೋ ಎಂತೆಂಬರು 1 ಒಮ್ಮೆ ಜಾಗೃತಿಯೊಳಿದೇ ನಿಜವೆಂಬರು ಖರೆ ಎಂಬರು ಒಮ್ಮೆ ಸುಷುಪ್ತ್ತಿಯೊಳಿದೇ ಸತ್ಯವೆಂಬರು ಒಮ್ಮೆ ಇದರ ಶುದ್ಧಿ ತಿಳಿಯದಂತಿಹರು 2 ಒಂದು ತಿಳಿದರ ಸಕಲವು ಒಂದಾಗಿ ದೋರುವದು ಒಂದರೊಳಗ ಸಕಳ ದೊರೆಕೊಂಬುದು ಒಂದಾಗಿ ಸಲಹುವ ಮಹಿಪತಿ ಸ್ವಾಮಿಯ ತಂದೆ ಸದ್ಗುರು ಭಾಸ್ಕರ ಕೋಟಿ ತೇಜನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಬ್ಬಟ್ಟಿಗೆ ಮಂಗಳಜಯ ಮಂಗಳಂ ಶುಭೋದಯ ಮಂಗಳಂನಯ'ದರಿಗೊಪ್ಪಾದ ಒಬ್ಬಟ್ಟಿಗೆ ಪಐದು ದ್ರವ್ಯಂಗಳೊಡನೈದಿತೊ ಇಚ್ಛೆಯಲಿ ುೀ ಕೃತಿಯಾಗಿನಾದಿ ತೇಜೋಬ್ಧಿಯಲಿ ಸರ್ವಜನಕೆಐದಿಸುತ ಸುಖವ ಸಂಪಾದಿಸುತ ಗುರುವರನಪಾದಸ್ಮರಣೆಗೆ ಮತಿಯನೀಯುವುದಕೆ 1ಹರಿಸಮಾರಾಧನೆಯೊಳರಸಿ ನೋಡಿದರೆ ತಾನಿರದೆಡೆಯೊಳಿಲ್ಲ ಮಂಗಳವೆನಿಸುತಬೆರೆದಿರಲು ತಾನು ಸರ್ವರಿಗು ಹರುಷವನಿತ್ತುಪೊರೆದು ಚೆನ್ನಾುತೆನಿಸುವ ವಡವೆಗೆ 2ಮೆರೆದು ಚಿಕ್ಕನಾಗಪುರದಲಿ ತನ್ನ ಮ'ಮೆಯನುಗುರುವಾಸುದೇವ ಕೃಪೆಯನ್ನು ಪಡೆದುಪರಮ ಭಾಗವತ ಗಂಗಾಧರಯ್ಯನ ಹೊಣೆಯನಿರದೆ ಸಂಪಾದಿಸಿದ ಒಬ್ಬಟ್ಟಿಗೆ 3
--------------
ತಿಮ್ಮಪ್ಪದಾಸರು
ಒಲಿದವಳ ಬಿಡುವುದು ಧರ್ಮವಲ್ಲ | ಚಲುವ ನಿನಗಾಗಿ ನಾ ಯೇಸು ಕಾಲಕೆ ತಪವಿದ್ದೆ ಪ ತಂದೆತಾಯಿಗಳಲ್ಲಿ ಪುಟ್ಟಿದಾಕ್ಷಣದಲ್ಲಿ | ಅಂದೆ ನೇಮಿಸಿದರು ಪೆಸರನಿಟ್ಟು | ಸಂದೇಹಗೊಳದಿರು ಮೈಲಿಗೆಯವಳೆಂದು | ಬಂದ ಪ್ರಾಣವÀ ನೋಡು ಬರಿದೆ ಪೇಳುವಳಲ್ಲ 1 ಕನ್ಯಾವಸ್ಥಿಯಲಿಂದ ನಿನ ನಿನ್ನ ಧ್ಯಾನವಲ್ಲವೇ | ಅನ್ಯಪುರುಷರಾಪೇಕ್ಷೆ ಮಾಡಲಿಲ್ಲ | ಅನ್ಯಾಯವೇನು ಆಗಲಿ ಪೋಗುವರೇನೊ | ಅನ್ಯಥಾ ಈ ನುಡಿಗೆ ನಿಜಕೆ ನಿಲ್ಲುವೆ ನಾನು 2 ಮಲದಲ್ಲಿ ಮೂರುದಿನ ಪೋಗಾಗಿ ಹೋಗಿದ್ದೆ | ಬಲು ಶುಚಿಯಾದೆನೊ ಶುದ್ಧ ಜಲದಿ | ಘಳಿಗೆ ಕಡೆದರೆ ಎನ್ನ ಪ್ರಾಣನಿಲ್ಲವೊ | ಎನ್ನನಗಲಿ ಮೈ ತಪ್ಪಿಸಿ | ದೂರ ಕರೆದೊಯ್ಯೊ ಕರುಣದಲಿ 3 ನಗೆಗೇಡಿ ಮಾಡದಿರು ಜಗದೊಳಗೆ ಇಪ್ಪವಳ | ಸೊಗಸಿಗನೆ ಸರಸವಾಡುವನೆ ಬಾರೊ | ಮಗುಳೆ ಮತ್ತೊಬ್ಬರು ಮೆಚ್ಚಿದರೆ ಇದೆ ಪಾಟು | ಮಗುಳೇನು ಹೊಸ ಪರಿಯು ತೋರುವುದು ನೋಡಿದರೆ 4 ಕಂಡ ಕಾಣದ ಹಾಗೆ ಮಾತನಾಡಿದಿರೆನ್ನ | ಅಂಡೊಲಿವ ಖ್ಯಾತಿ ಎಂದಿಗೆ ತೀರದೂ | ಕುಂಡಲಿಗಿರಿವಾಸ ವಿಜಯವಿಠ್ಠಲ ವೆಂಕಟ | ಹಿಂಡು ಬಂಧುಗಳಿದ್ದರೇನು ಮಾನವನು ತೊರೆದೆ 5
--------------
ವಿಜಯದಾಸ
ಒಲಿದೆ ಯಾತಕಮ್ಮಾ ಲಕುಮಿವಾಸುದೇವಗೆ ಪ ಶುದ್ಧ ನೀಲವರ್ಣದ ಮೈಯಕಪ್ಪಿನವನಿಗೆ ಹ್ಯಾಗೆ ಅ.ಪ. ಹುಟ್ಟಿದ ಮನೆಗಳ ಬಿಟ್ಟು ಕಳ್ಳ-ದಿಟ್ಟತನದಿ ಗೋಕುಲದಲ್ಲಿ ಬೆಳೆದ ಚಟ್ಟಿ ಸಹಿತ ಹಾಲು ಕುಡಿದ- ಅಲ್ಲಿದಿಟ್ಟ ಕಾಳಿಂಗನ ಹೆಡೆಯ ತುಳಿದವನಿಗೆ 1 ಗೊಲ್ಲರ ಮನೆಗಳ ಪೊಕ್ಕು- ಅಲ್ಲಿಗುಲ್ಲು ಮಾಡದೆ ಮೊಸರೆಲ್ಲ ಸವಿದಮೆಲ್ಲನೆ ಸವಿಮಾತನಾಡಿ-ಅಲ್ಲಿಎಲ್ಲ ಸಖಿಯರ ಅಭಿಮಾನಗೇಡಿಗೆ 2 ಮಾವನ ಮರ್ದಿಸಿದವಗೆ -ಅಲ್ಲಿಸೋಳ ಸಾಸಿರ ಗೋಪೇಯರ ಮದುವೆ ಆದವಗೆಹಾವಿನ ಮ್ಯಾಲೊರಗಿದವಗೆಕಾವೇರಿ ತೀರದ ರಂಗವಿಠಲಗೆ 3
--------------
ಶ್ರೀಪಾದರಾಜರು
ಒಲ್ಲೆನವ್ವಾ ಲಕುಮಿಯ ನಲ್ಲ ಬಾರದಿದ್ದರೆತನುಹೊರೆಯನೊಲ್ಲೆನವ್ವಾ ಪ ಭಾರ ಹುವ್ವಿನಭಾರ ಸೈರಿಸಲಾರೆನೆಮಾರನಯ್ಯನು ಬಾರದಿದ್ದರೆಮಾರನಂಬಿಗೆ ಗುರಿಯ ಮಾಡಿ 1 ಎಲ್ಲ ದೇವರ ವಲ್ಲಭನೆಂದುಒಲಿದ ಮನ ನಿಲ್ಲದೆನಿಲ್ಲದೆ ರಂಗ ಪೋದ ಮಧುರೆಗೆಬಿಲ್ಲ ಹಬ್ಬದ ನೆವನ ಮಾಡಿ 2 ಮಂದಾನಿಲನ ಸಹಿಸಲಾಗದುನೊಂದೆ ಶುಕಪಿಕ ರವಗಳಿಂದಚಂದ್ರಕಿರಣದಿ ಬೆಂದೆ ಇನ್ನೀವೃಂದಾವನವೇಕನನಗಲಿ 3 ಮುನ್ನ ಆಡಿದ ಮಾತ ಮರೆತುಎನ್ನ ಮನದೊಳಗೀಡಾಡಿವನ್ನಜಾಕ್ಷನು ಬಾರ ಪುರದವನ್ನಿತೆಯರನು ಮೆಚ್ಚಿ ಪೋದ 4 ಪೊಂಗೊಳಲ ಧ್ವನಿಗೆ ಸಿಲುಕಿಭಂಗಗೆಟ್ಟೆನಂಗಜನಿಂದಲಿಪೆಂಗಳಿಗುಚಿತವಲ್ಲ ಇದುರಂಗವಿಠಲನ ತೋರದಿದ್ದಡೆ 5
--------------
ಶ್ರೀಪಾದರಾಜರು
ಓ ಎನ್ನಬಾರದೇ ಹರಿಯೆ | ಶ್ರೀಯರಸನೇ ನೀನೇ ಗತಿಯೆಂದು ಅನ್ಯ ಉ| ಪಾಯವನರಿಯದ ಬಾಲಕ ಕರೆದರೆ ಪ ಹಾಲವ ಬೇಡುವ ಮೊರೆಯಿಡಲುಪಮನ್ಯು ಆ | ಬಾಲಗ ಧ್ವನಿ ದೋರಿದಂತೆ | ಚಾಲವರಿದು ಸರೋವರದಲಿ ಕರೆದ ಶುಂ| ಡಾಲಗೆ ಧ್ವನಿ ದೋರದಂತೆ | ವ್ಯಾಳ್ಯೆಕ್ಕ ಒದಗೆಂದು ರಾತ್ರಿಲಿ ಕರೆದ ಪಾಂ| ಚಾಲಿಗೆ ಧ್ವನಿ ದೋರಿದಂತೆ | ಕಾಲಕಾಲಕ ಬಂದು ಮೊರೆಯಿಡೆ ಸುರಮುನಿ | ಜಾಲಕ ಮೈದೋರಿ ಧ್ವನಿ ದೋರಿದಂತೀಗ 1 ಆವಾಗ ಧ್ವನಿದೋರಿದಂತೆ | ಗೋವ ಮೇಯಿಸಿ ತೆರಳಲು ಗೊಲ್ಲರೊದರುವ ಭಾವಕ ಧ್ವನಿದೋರಿದಂತೆ | ದೇವ ನೀಮರಿಯಾಗೆ ಹುಂಕರಿಸ್ಸೊದರಲು | ಆವಿಗೆ ಧನಿ ದೋರಿದಂತೆ | ಕಾವನೈಯ್ಯನೆ ನಿನ್ನ ನೆನೆದ ಗೊಲ್ಲತೆರಾ | ಜೀವನ ಹಿತವಾಗಿ ಧನಿದೋರಿದಂತೀಗ 2 ಬಂದೂಳಗಕ ನಿನ್ನ ಪಾಂಡವರೊದಲು | ನಿಂದು ನೀ ಧನಿದೋರಿದಂತೆ | ಇಂದಾದಾ ಕಲಿಯುಗದ ದಾಸರ ಮಾತಿಗೆ | ಬಂದು ನೀ ಧನಿ ದೋರಿದಂತೆ | ಕಂದನಳುವ ಧ್ವನಿ ಕೇಳುತ ಜನನಿ ಅ | ನಂದದಿ ಧನಿದೋರುವಂತೆ | ತಂದೆ ಮಹಿಪತಿ - ನಂದನ ಪ್ರಭು ಗೋ | ವಿಂದ ಮುಕುಂದೆನ್ನ ಸಲಹೆಂಬ ಮೂಢನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಂಕಾರ ರೂಪಿಣಿ ಭದ್ರಾಣಿ ಕಲ್ಯಾಣಿ ಪಂಕೇಜದಳಲೋಚನೀ ಅಂಬಾ ಪ ಶಂಕರ ಪ್ರಿಯರಾಣಿ ಗೀರ್ವಾಣೆ ರುದ್ರಾಣಿ | ಸ ರ್ವ ಮಂಗಳವಾಣಿ | ಕರುಣಿ ಶುಶ್ರೋಣಿ ಅ.ಪ ಹೈಮವತೀ ಮಾತೆ | ಹಿಮಗಿರಿ ತನುಜಾತೆ ಭಾಮೆ ಸ್ವಯಂಜಾತೆ | ಸುರಮೌನಿಗೀತೆ ಪ್ರೇಮ ರಸಾನ್ವಿತೇ | ರಾಮಾಭಿನಂದಯುತೆ ಶ್ರೀಮಾಂಗಿರೀಶ | ರಂಗಸಹಜಾತೆ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಓದಿ ಮರುಳಾದರಯ್ಯ ಬೋಧವಿಲ್ಲದೆ ಓದಿನೋಡಲದನರಿತು ಹರಿಯ ನೆನೆಯಲೊಲ್ಲದೆ ಪ. ಕರಣೇಂದ್ರಿಯ ಕಾಟಕೆ ಸಿಲುಕದ ಕರ್ಮದಾವುದು ಪರಗತಿ ವಿಚಾರವಿಲ್ಲದ ನಿಜದಾವುದು ಗುರುಚರಣ ಪರಿಚಯವಿಲ್ಲದ....ಯಾವುದು1 ಅಂತರಂಗ ಶುದ್ಧಿಯಿಲ್ಲದ ಕಂತೆಯಾವುದು ನಿತ್ಯ ಶಾಂತಿ ಶಮದಮವಿಲ್ಲದ ಭ್ರಾಂತಿ ಯಾವುದು ಸಂತತ ಸಮಾಧಾನದ ಚಿಂತೆಯಾವುದು ನಮ್ಮ ಕಪಟ ದಾವುದು 2 ಮಧ್ವಮತದ ಮಾರ್ಗವನ್ನು ಮೀರಿದಾವುದು ಶ್ರುತಿ ಸಿದ್ಧ ಹರಿಯ ಗುಣವ ಹಾಡಿಪಾಡದ್ಯಾವುದು ವೃದ್ಧರನ್ನು ಕೆಣಕಿ ಕಾಡಿ ಕೊಂಬದಾವುದು ಅದು ಸಿದ್ಧಯಮನ ಬಾಧೆಗೆ ಒಳಗಾಗುವದಾವುದು 3 ಸಾರತತ್ವ ಸುಧೆಯ ಸವಿಯ ದೂರಿದಾವುದು ಪರಿ- ವಾರ ಜನರ ಪೊರೆವರುಪಚಾರ ದಾವುದು ಸಾರಿ ತನ್ನ ಸಾಕ್ಷಿಗಿನ್ನು ಬಾರದಾವುದು ಅದು ಕೀರನಾಕ....ಯಾ ಸಂಸ್ಕಾರ ದಾವುದು 4 ಅನ್ನದ ಜೀವ ಭಿನ್ನಹರಿ ಎನ್ನದಾವುದು ದ್ವಾಸು- ಪರ್ನಪಥವ ಪಾ....ಮಾಡದಾವುದು ಧನ್ಯ ಹಯವದನ ನಾನೆನ್ನುವುದು ಅದು ಕುನ್ನಿಯಂತೆ ಹಲವು ಪರಿಯ ಕೂಗುವುದದು 5
--------------
ವಾದಿರಾಜ
ಔಷಧದ ಬೇರೊಂದನು ನಾರದನು ತಂದ ಪೋಷಣೆಗೆ ಸಕಲರೂ ಸವಿಯಲೆಂದ ಪ ಜ್ವರಭೇದಗಳಿಗೆಲ್ಲ ನರಹರಿ ಎಂಬ ಬೇರು ಶಿರವೇಧೆ ಎಂಬುದಕೆ ಹರಿಹರಿ ಎಂಬ ಬೇರು ವಾತ ರುಜೆಗಳಿಗೆ ಸಿರಿಲೋಲನೀ ಬೇರು ಪರಿಪರಿಯ ಭವಗಳಿಗೆ ನಾರಾಯಣಾ ಎಂಬ ಬೇರು 1 ಪಿತ್ತರೋಗಂಗಳಿಗೆ ಚಿತ್ತಜನಪಿತನೆಂಬ ಪೃಥ್ವಿಯೊಳಗತ್ಯಧಮ ವಿಭಂದ ರೋಗಗಳಿ ಗರ್ಥಿಯಿಂ ಲೇಪಿಸುವ ಸತ್ವಗುಣನಿಧಿಯೆಂಬ ನಿತ್ಯಶೌರಿಯ ನಾಮ ಶಿವಬೇರು 2 ನಾರದನು ಬೇರೂರೆ ನೀರೆರೆದ ಪ್ರಹ್ಲಾದ ಧೀರಬಲಿ ಬೆಳೆಯಿಸಿದ | ನೀರ ಗಜನೆರೆದ ವೀರದಶಶಿರನನುಜನೆಚ್ಚರದೊಳಿದ ಕಾಯ್ದ ನಾರಿ ದ್ರೌಪದಿ ಶಿರದಿ ಮೊಗ್ಗಾಗಿ ಧರಿಸಿದಂಥ 3 ಅರಳಿದ ಸುಮಗಳನು ಅಕ್ರೂರ ಪೋಷಿಸಿದ ತ್ವರಿತದಿ ಕಾಯ್ಗಳನು ಶುಕದೇವ ಕಾಯ್ದ ನರರೆಲ್ಲರೀ ಫಲವ ದಿನದಿನವು ಮೆಲಲೆಂದು ವರದ ಮಾಂಗಿರಿರಂಗ ಪೇಳುತಿಹನು 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂಗಳಿದ್ಯಾತಕೋ ಚಿನುಮಯ ರಂಗನ ನೋಡದಾ ಸಂಗರಹಿತಾತ್ಮನ ನೋಡದಾ ಪ ಶರೀರವೇ ತಾನೆಂದು ನಂಬಿ ಮೆರೆದು ನಿಜಾನಂದವನ್ನು ದೃಷ್ಯಂಗಳನ್ನು ನೋಡುವಾ 1 ತಾನಿದ್ಯಾರು ತನಗೆ ತೋರ್ಪ ತನುವಿದೇನೆಂದರಿವುತಿರ್ಪ ಜ್ಞಾನದೃಷ್ಟಿಯಿಲ್ಲದಂಥ ಆನನಂಗಳನು ನೋಡುವ 2 ಹಂಸ ತಾನಾಗಿ ಚರಿಪ ಹಂಸನ ಪ್ರಕಾಶವನ್ನು ಶುಂಶುಮಾರದಿ ಬೆಳಗುತಿರ್ಪಭ್ರಂಶಿತಾಂ ತನ್ನ ನೋಡದಾ 3 ಸಂತಸಾಧು ಚರಣಕ್ಕೆರಗಿ ಚಿಂತೆಗಳನು ಹರಿದು ಭರದಿ ಶಾಂತಿ ಸುಖವನಿತ್ತ ಗುರು ಶಾಂತಮೂರುತಿ ನೋಡಲಾರದ 4
--------------
ಶಾಂತಿಬಾಯಿ
ಕಂಜಾಕ್ಷ ಹರಿಯ ಕಂಡಲ್ಲದೆ ಈಪಂಜರದಿ ಈ ಗಿಣಿ ನಿಲ್ಲದೆ ಪ. ಬಾಲತÀನದಲ್ಲಿ ಮನೆಮನೆಯ ಪೊಕ್ಕುಪಾಲಕುಡಿದನು ಮನದಣಿಯಲಾಲಿಸಿದವನು ಇನ್ನು ಮುನಿಯಲೋಲಾಕ್ಷಿ ಬಿಡನ್ಯಾಕೀ ಗÀಸಣೆಯ 1 ಏಳುವರುಷದ ಶಿಶು ಪೋಗಿಆಲಸ್ಯ ಹಸುತೃಷೆÉಯ ನೀಗಿಶೈಲವಾಗಿ ನಿಂತಿದ್ದ ನಮಗಾಗಿಕಾಲಮ್ಯಾಲೆ ಬಿದ್ದನಿಂದ್ರ ಬಾಗಿ 2 ಕಾಳಿಂದಿಯ ಮಡುವಿನೊಳಾಡಿಕಾಳಿಯಾ ನಾಗಗೆÉ ಮದ ಹುಡಿಮೇಲೆ ಅವರೊಳು ಕೃಪೆಮಾಡಿಪಾಲಿಸಿದ ಕರುಣದಿ ನೋಡಿ3 ಪಾರಿಜಾತದ ಪೂಗಳ ತಂದುನಾರದ ಮುನೇಂದ್ರ ತಾನೆ ಬಂದುಸಾರಿದನಲ್ಲೆ ಗತಿ ನೀನೆಂದುನರ ಸುರರುಗಳಿಗೆ ಬಂಧು 4 ವೃಂದಾವನದೊಳಿವನ ಲೀಲೆ ಆ-ನಂದವನುಣಿಸಿತೆಲೆ ಬಾಲೆಎಂದವನ ಕತೆ ಕರ್ಣದೋಲೆ ಹಾ-ಗೆಂದು ಭಾವಿಸೆ ಪುಣ್ಯಶೀಲೆ 5 ಸಕಲ ಸುರರ ಶಿರೋರನ್ನಮುಕುತಿದಾಯಕ ಸುಪ್ರಸನ್ನಶ್ರೀಕೃಷ್ಣ ಅಟ್ಟಿದ ಉದ್ಧÀ್ದವನ್ನ ಬಂದುವಾಕು ಕೇಳಿ ಮನ್ನಿಸಿಯವನ6 ಚೆಲ್ವ ಹಯವದನನ್ನ ನೀರೆ ನಮ್ಮನಲ್ಲನವನಿಲ್ಲಿ ಬಾರದಿರೆಸುಲಭನ್ನ ಬೇಗ ಕರೆತಾರೆ ನಾ-ವೆಲ್ಲರವನಲ್ಲಿ ಹೋಹ ಬಾರೆ 7
--------------
ವಾದಿರಾಜ