ಒಟ್ಟು 623 ಕಡೆಗಳಲ್ಲಿ , 85 ದಾಸರು , 539 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀಪ್ರಿಯರ ಚರಣ ಭಜನೆ ನಿರುತದಿಂದ ಮಾಡುವ ಪ ಲಕ್ಷ್ಮೀಪತಿಯ ಕರುಣ ಪಡೆದು ಹರುಷದಿ ನಾವ್ ಬದುಕುವ ಅ.ಪ ಸದ್ಪೈಷ್ಣವ ಕುಮುದಕಾಭಿ ವೃದ್ಧಿ ತರುವ ಗೋಸುಗ ಮಧ್ವ ಮತಾಬ್ಧಿಯಲ್ಲಿ ಉದ್ಭವಿಸಿದ ಚಂದ್ರರ 1 ವ್ಯಾಸಮುನಿಗೆ ಒಲಿದ ಕೃಷ್ಣನ ಸೋಸಿನಿಂದ ಪೂಜಿಸಿ ವ್ಯಾಸಸೂತ್ರ ಭಾಷ್ಯ ಉಪ ನ್ಯಾಸ ಮಾಡಿ ಮರೆವರ 2 ದೀನ ಜನರ ವೃಂದಕೆ ಸುರ ಧೇನು ಎನಿಪ ಮುನಿವರ ಶ್ರೀ ನರಹರಿಗೆ ತಾವು ಅನುಗರಾಗಿ ಇರುವರ 3
--------------
ಪ್ರದ್ಯುಮ್ನತೀರ್ಥರು
ಲಾಲಿ ಗೋವಿಂದ ಲಾಲಿ ಕೌಸಲ್ಯಬಾಲ ಶ್ರೀರಾಮ ಲಾಲಿ ಪ ಲಾಲಿ ಮುನಿವಂದ್ಯ ಲಾಲಿ ಜಾನಕಿ-ರಮಣ ಶ್ರೀರಾಮ ಲಾಲಿ ಅ.ಪ. ಕನಕರತ್ನಗÀಳಲ್ಲಿ ಕಾಲ್ಗಳನೆ ಹೂಡಿನಾಲ್ಕು ವೇದಗಳನ್ನು ಸರಪಣಿಯ ಮಾಡಿಅನೇಕ ಭೂಮಂಡಲವ ಹಗೆಯನು ಮಾಡಿಶ್ರೀಕಾಂತನುಯ್ಯಾಲೆಯನು ವಿರಚಿಸಿದರು1 ಆಶ್ಚರ್ಯಜನಕವಾಗಿ ನಿರ್ಮಿಸಿದಪಚ್ಚೆಯ ತೊಟ್ಟಿಲಲ್ಲಿಅಚ್ಚುತಾನಂತನಿರಲು ತೂಗಿದರುಮತ್ಸ್ಯಾವತಾರ ಹರಿಯ 2 ಧರ್ಮಸ್ಥಾಪಕನು ಎಂದು ನಿರವಧಿಕನಿರ್ಮಲ ಚರಿತ್ರನೆಂದುಮರ್ಮ ಕರ್ಮಗಳ ಪಾಡಿ ತೂಗಿದರುಕೂರ್ಮಾವತಾರ ಹರಿಯ 3 ಸರಸಿಜಾಕ್ಷಿಯರೆಲ್ಲರು ಜನವಶೀಕರ ದಿವ್ಯರೂಪನೆಂದುಪರಮ ಹರುಷದಲಿ ಪಾಡಿ ತೂಗಿದರುವರಹಾವತಾರ ಹರಿಯ4 ಕರಿಕುಂಭಗಳ ಪೋಲುವ ಕುಚದಲ್ಲಿಹಾರ ಪದಕವು ಹೊಳೆಯಲುವರ ವರ್ಣಿನಿಯರು ಪಾಡಿ ತೂಗಿದರುನರಸಿಂಹಾವತಾರ ಹರಿಯ 5 ಭಾನುಮಣಿಯರೆಲ್ಲರು ಯದುವಂಶಸೋಮನಿವನೆಂದು ಪೊಗಳಿನೇಮದಿಂದಲಿ ಪಾಡಿ ತೂಗಿದರುವಾಮನಾವತಾರ ಹರಿಯ6 ಸಾಮಜವರದನೆಂದು ಅತುಳ ಭೃಗು ರಾಮಾವತಾರವೆಂದುಶ್ರೀಮದಾನಂದ ಹರಿಯ ತೂಗಿದರುಪ್ರೇಮಾತಿರೇಕದಿಂದ7 ಕಾಮನಿಗೆ ಕಾಮನೆಂದು ಸುರಸಾರ್ವಭೌಮ ಗುಣಧಾಮನೆಂದುವಾಮನೇತ್ರೆಯರು ಪಾಡಿ ತೂಗಿದರುರಾಮಾವತಾರ ಹರಿಯ8 ಸೃಷ್ಟಿಯ ಕರ್ತ ನೆಂದು ಜಗದೊಳಗೆಶಿಷ್ಟ ಸಂತುಷ್ಟನೆಂದುದೃಷ್ಟಾಂತರಹಿತನೆಂದು ತೂಗಿದರುಕೃಷ್ಣಾವತಾರ ಹರಿಯ 9 ವೃದ್ಧನಾರಿಯರೆಲ್ಲರು ಜಗದೊಳಗೆ ಪ್ರಸಿದ್ಧನಿವನೆಂದು ಪೊಗಳಿಬದ್ಧಾನುರಾಗದಿಂದ ತೂಗಿದರು ಬೌದ್ಧಾವತಾರ ಹರಿಯ 10 ಥಳಥಳಾತ್ಕಾರದಿಂದ ರಂಜಿಸುವಮಲಯಜಲೇಪದಿಂದಜಲಗಂಧಿಯರು ಪಾಡಿ ತೂಗಿದರುಕಲ್ಕ್ಯಾವತಾರ ಹರಿಯ 11 ಕನಕಮಯ ಖಚಿತವಾದ ತಲ್ಪದಲಿವನಜಭವ ಜನಕನಿರಲುವನಜನಾಭನ್ನ ಪಾಡಿ ತೂಗಿದರುವನಿತಾಮಣಿಯರೆಲ್ಲರು 12 ಪದ್ಮರಾಗವ ಪೋಲುವ ಹರಿಪಾದಪದ್ಮವನು ತಮ್ಮ ಹೃದಯಪದ್ಮದಲಿ ನಿಲಿಸಿ ಪಾಡಿ ತೂಗಿದರುಪದ್ಮಿನೀ ಭಾಮಿನಿಯರು 13 ಹಸ್ತಭೂಷಣ ಮೆರೆಯಲು ದಿವ್ಯತರಹಸ್ತಲಾಘವಗಳಿಂದಹಸ್ತಗಳ ಪಿಡಿದುಕೊಂಡು ತೂಗಿದರುಹಸ್ತಿನೀ ಭಾಮಿನಿಯರು14 ಮತ್ತಗಜಗಾಮಿನಿಯರು ದಿವ್ಯತರಚಿತ್ರವಸ್ತ್ರಗಳನುಟ್ಟುಚಿತ್ತಸಂತೋಷದಿಂದ ತೂಗಿದರುಚಿತ್ತಿನೀ ಭಾಮಿನಿಯರು 15 ಕಂಕಣಧ್ವನಿಗಳಿಂದ ರಂಜಿಸುವಕಿಂಕಿಣೀಸ್ವರಗಳಿಂದಪಂಕಜಾಕ್ಷಿಯರು ಪಾಡಿ ತೂಗಿದರುಶಂಕಿನೀ ಭಾಮಿನಿಯರು 16 ಚೊಕ್ಕ ಕಸ್ತೂರಿ ಪಂಕದಿಂ ರಂಜಿಸುವಮಕರಿಕಾಪತ್ರ ಬರೆದುಲಿಕುಚಸ್ತನಿಯರು ಪಾಡಿ ತೂಗಿದರುಅಕಳಂಕಚರಿತ ಹರಿಯ17 ಆನಂದಸÀದನದೊಳಗೆ ಗೋಪಿಯರುಆ ನಂದಸುತನ ಕಂಡುಆನಂದ ಭರಿತರಾಗಿ ತೂಗಿದರುಆನಂದ ಭೈರವಿಯಿಂದ 19 ದೇವಾಧಿದೇವನೆಂದು ಈ ಶಿಶುವುಭಾವನಾತೀತನೆಂದುದೇವಗಂಧರ್ವರ್ಪಾಡಿ ತೂಗಿದರುದೇವ ಗಾಂಧಾರದಿಂದ 20 ನೀಲ ಕರುಣಾಲವಾಲ ಶ್ರೀಕೃಷ್ಣ ಜೋ ಜೋಲೀಲಾವತಾರ ಜೋ ಜೋ ಪರಮಾತ್ಮಬಾಲಗೋಪಾಲ ಜೋ ಜೋ 21 ಇಂದುಧರಮಿತ್ರ ಜೋ ಜೋ ಶ್ರೀಕೃಷ್ಣಇಂದು ರವಿ ನೇತ್ರ ಜೋ ಜೋಇಂದುಕುಲ ಪುತ್ರ ಜೋ ಜೋ ಪರಮಾತ್ಮಇಂದಿರಾರಮಣ ಜೋ ಜೋ 22 ತುಂಗ ಭವಭಂಗ ಜೋ ಜೋ ಪರಮಾತ್ಮರಂಗ ಕೃಪಾಂಗ ಜೋ ಜೋಮಂಗಳಾಪಾಂಗ ಜೋ ಜೋ ಮೋಹನಾಂಗರಂಗವಿಠಲನೆ ಜೋ ಜೋ 23
--------------
ಶ್ರೀಪಾದರಾಜರು
ಲಾಲಿ ರಂಗನ ರಾಣಿ ಪರಮಕಲ್ಯಾಣಿ ಲಾಲಿ ಕೀರವಾಣಿ ಪಂಕಜಪಾಣಿ ಲಾಲಿ ಪ. ಕ್ಷೀರಸಾಗರದಲಿ ಜನಿಸಿ ತಾ ಬಂದು ವಾರಿಜಾಕ್ಷನ ವಕ್ಷಸ್ಥಳದಿ ತಾ ನಿಂದು ಘೋರ ಪಾತಕಿಗಳನು ಪೊರೆವೆನೆಂತೆಂದು ಶ್ರೀರಂಗಕ್ಷೇತ್ರದಲಿ ಬಂದು ತಾ ನಿಂದು 1 ಶುದ್ಧ ಪಾಡ್ಯ ತುಲಾ ಕಾರ್ತೀಕದಲಿ ಮುದ್ದು ಶ್ರೀರಂಗನ ರಾಣಿ ಹರುಷದಲಿ ದಂತದ ಉಯ್ಯಾಲೆಮಂಟಪದಲ್ಲಿ ಕಂತುಪಿತನರಸಿಯಾಡಿದಳೆ ಉಯ್ಯಾಲೆ 2 ಕಸ್ತೂರಿಯನಿಟ್ಟು ಮುತ್ತಿನ ಮೂಗುಬಟ್ಟು ಹಾರಪದಕಗಳು ಪೀತಾಂಬ್ರವನೆ ಉಟ್ಟು ಕುಂದಣದ ಒಡ್ಯಾಣವನ್ನು ಅಳವಟ್ಟು ಇಂದಿರಾದೇವಿ ಆಡಿದಳೆ ಉಯ್ಯಾಲೆ 3 ರತ್ನದಾ ಕಿರೀಟವನ್ನು ತಾ ಧರಿಸಿ ಕಮಲ ಸರಗಳಳವಡಿಸಿ ಮುತ್ತು ಸುತ್ತಿದ ರತ್ನದಸುಲಿಯನು ಧರಿಸಿ ಅ ಚ್ಚುತನರಾಣಿ ಆಡಿದಳೆ ಉಯ್ಯಾಲೆ 4 ದೋಸೆ ವಡೆ ನೈವೇದ್ಯ ಮೀಸಲನು ಸವಿದು ದಾಸರೆತ್ತಿದ ಪಿಷ್ಟದಾರತಿಯಲಿ ನಲಿದು ಲೇಸಾದ ಕರ್ಪೂರ ವೀಳ್ಯವನು ಸವಿದು ವಾಸುದೇವನರಾಣಿ ಆಡಿದಳೆ ಉಯ್ಯಾಲೆ 5 ವರರಂಗವಂಶದವರು ವರದಿಂದ ಪಾಡೆ ಕರುಣಾಕಟಾಕ್ಷದಿಂ ದೇವಿ ತಾ ನೋಡೆ ಪ್ರಜೆಗಳೆಲ್ಲರು ಬಂದು ವರಗಳನು ಬೇಡೆ ವಜ್ರದಭಯಹಸ್ತಗಳಿಂದ ವರಗಳನು ನೀಡೆ 6 ಕರ್ತ ಶ್ರೀ ಶ್ರೀನಿವಾಸ ರಂಗನಾರಾಣಿ ಸಪ್ತದಿನದುಯ್ಯಾಲೆಯನು ತಾ ರಚಿಸಿ ಭಕ್ತರಿಗೆ ತೀರ್ಥ ಪ್ರಸಾದಗಳನಿತ್ತು ಅರ್ಥಿಯಿಂ ತೆರಳಿದಳು ತನ್ನರಮನೆಗೆ 7
--------------
ಯದುಗಿರಿಯಮ್ಮ
ಲಾಲಿಸಿ ರಘುವರನ ಚರಿತೆಯ ಸಾರ ಪೇಳುವೆ ಸುಖನಾಥನ ಪ ಶ್ರೀ ಲಲಾಮನು ಸುರರ ಮೊರೆಯನು ಭಾರ ಹರಿಸಲು ಲೀಲೆಯಲು ದಶರಥ ನೃಪಾಲನ ಬಾಲನೆನಿಸುತ ಅವತರಿಸಿದನು ಅ.ಪ. ಕುಶಿಸುತನ ಯಜ್ಞವ ರಕ್ಷಿಸಿ ಪಥದಿ ಋಷಿ ಪತ್ನಿಯ ಶಿಲಾರೂಪವ ಬಿಡಿಸಿದ ದೇವ ಪಶುಪತಿಯ ಕೋದಂಡ ಖಂಡಿಸಿ ಶಶಿವದನೆ ಜಾನಕಿಯ ಕರವನು ಕುಶಲದಲಿ ಪರಿಗ್ರಹಿಸಿ ಲೀಲೆಯ ನಸಮ ಭಾರ್ಗವನೊಡನೆ ತೋರಿದ 1 ತಂದೆ ವಾಕ್ಯವ ಪಾಲಿಸೆ ತಾ ಧರಣಿಗೆ ಬಂದ ಕಾರ್ಯವ ಸಲ್ಲಿಸೆ ಋಷಿಗಳಾಸೆ ತಂದು ತಾ ಮನಕಂಡು ವನಕೆ ಸತಿ ಸೋದರರ ಸಹಿತದಿ ಮುಂದೆ ಗಂಗೆಯ ದಾಟಿ ಭರದ್ವಾಜ ನಿಂದ ಸತ್ಕಾರವನು ಕೊಂಡನು2 ಚಿತ್ರಕೂಟದಲಿರಲು ವಿನಯದಿ ಬಂದು ಭಕ್ತ ಭರತನು ಬೇಡಲು ಪಾದುಕೆಯಿತು ಮತ್ತೆ ದಂಡಕವನ ಪ್ರವೇಶಿಸಿ ದೈತ್ಯರನು ಸಂಹರಿಸಿ ಶರಭಂಗ ಗಿತ್ತು ಮುಕ್ತಿಯ ಕುಂಭಸಂಭವ ನಿತ್ತ ದಿವ್ಯಾಸ್ತ್ರಗಳ ಪಡೆದನು 3 ವರಪಂಚವಟಿಯೊಳಗೆ ಶೂರ್ಪನಖಿಯು ದುರುಳ ಬುದ್ಧಿಯೊಳು ಬರೆ ಕಿವಿಮೂಗ ಕೊಯ್ಸಿ ಹರಿಣರೂಪದಿ ಬಂದ ದೈತ್ಯನ ಹರಣಗೈದಾಶ್ರಮಕೆ ತಿರುಗಲು | ಧರಣಿಸುತೆಯನು ಕಾಣದೆಲೆ ತಾ ನರರ ಪರಿಯಲಿ ಹಂಬಲಿಸಿದನು 4 ವನಜಾಕ್ಷಿ ವೈದೇಹಿಯ ಪುಡುಕುತ ಪಂಪಾ ಸನಿಹಕ್ಕೈತಂದು ವಾಲಿಯ ಸಂಹರಿಸ್ಯವನ ಅನುಜ ಸುಗ್ರೀವನಿಗೆ ಹರುಷದಿ ವಿನುತ ವಾನರ ರಾಜ್ಯದೊಡೆತನ ವನು ಕರುಣಿಸಿದ ಬಳಿಕ ಜಾನಕಿ ಯನು ಪುಡುಕೆ ಕಳುಹಿದನು ಕಪಿಗಳ 5 ಸ್ವಾಮಿಯ ಸ್ತುತಿಗೈಯುತ ಶ್ರೀ ಹನುಮಂತ ಆ ಮಹೋದದಿಯ ದಾಟುತ ಲಂಕೆಯ ಪೊಕ್ಕು ಭೂಮಿಜಾತೆಯ ಕಂಡು ರಾಮನ ಕ್ಷೇಮ ವಾರ್ತೆಯ ತಿಳುಹಿ ಬಹುಜನ ತಾಮಸರ ಸದೆಬಡಿದು ರಾವಣ ನಾ ಮಹಾ ನಗರಿಯನು ದಹಿಸಿದ 6 ಮರಳಿ ರಾಮನ ಬಳಿಗೆ ಬೇಗದಿ ಬಂದು ಮರುತ ಸುತನು ರಾಮಗೆ ಸೀತೆಯ ಕ್ಷೇಮ ವರುಹಿ ಚೂಡಾಮಣಿಯ ನೀಡಲು ಕರದಿ ಕೈಕೊಂಡದನು ನೋಡುತ ನರರ ಪರಿಯಲಿ ಹರುಷಬಾಷ್ಪವ ಸುರಿಸಿದನು ಶ್ರೀ ಕರಿಗಿರೀಶನು 7
--------------
ವರಾವಾಣಿರಾಮರಾಯದಾಸರು
ವಂದನೆಯ ಮಾಡುವೆ ಶ್ರೀಗುರುವಿಗೆ- ವಂದನೆಯ ಮಾಡುವೆÀ ಪ ವಂದನೆ ಮಾಡುವೆನಿಂದು ಯದುಶೈಲದೋಳ್ ಚಂದದೊಳಿರುತಿಹ ತಂದೆ ನಾರಾಯಣಗೆ ಅ.ಪ ಹರುಷದಿಂದಲಿ ಇನ್ನು ಹರಸಿ ಸಜ್ಜನರಿಗೆ ವರಗಳ ಕೊಡುತಿಹ ವರಲಕ್ಷ್ಮಿ ತಾಯಿಗೆ 1 ಹಿರಿದಾದ ದೈತ್ಯನ ಸೀಳಿ ಸಂತೋಷದಿ ಮೊರೆಹೊಕ್ಕ ಕಂದನ ಪೊರೆದ ನರಸಿಂಹಗೆ 2 ಪಾವನತರಮಾದ ದೇವಸಮೂಹವ ಕಾವ ಕೃಪಾನಿಧಿ ಕಲ್ಯಾಣಮ್ಮಗೆ 3 ವಿಸ್ಫುರಿತದಲ್ಲಿರ್ಪ ವೈರ್ಮುಡಿ ತಿರುಮಣ್ಣು ಸರ್ಪಶಯನಗರ್ಪಿಸಿದಂತ ಗರುಡಗೆ 4 ಶ್ರೀಲೋಲನಡಿಗಳ ಲೀಲಾಮೃತಗಳ ಶೀಲರಾಗಿ ಕುಡಿದ ಶ್ರೇಷ್ಠ ಆಳ್ವಾರ್ರಿಗೆ 5 ವರದವಿಠಲನ ಒಲಿದು ತಾ ಬಂದಿನ್ನು ಗಿರಿಯೊಳು ನೆಲೆಸಿದ ವರ ಗುರುಪೀಠಕೆ 6 ಪಂಕಜಾಕ್ಷನಪಾದಪಂಕಜ ನಂಬಿಹ ವೆಂಕಟಪುರದೊಳಗಿರುವ ವೈಷ್ಣವರಿಗೆ 7 ವಿಷ್ಣುವಿನಂಶದಿ ಪುಟ್ಟಿ ಸಂತೋಷದಿ ಸೃಷ್ಟಿಯನಾಳ್ವ ಶ್ರೀ ಕೃಷ್ಣಭೂಪಾಲಗೆ8 ಮರೆಯದೆ ಭಕ್ತರ ಕರುಣದಿಂದಲಿ ಕಾಯ್ವ ವರಮಹದೇವನ ಪುರದಶ್ರೀರಂಗಗೆ 9
--------------
ರಂಗದಾಸರು
ವಂದಿಸು ಗುರು ಸತ್ಯಸಂಧ ಮುನಿಯಾ ವೃಂದಾವನಕೆ ಹರುಷದಿಂದ ಎಂದೆಂದು ಪ ಗಂಗಾ ಪ್ರಯಾಗ ಗಯಾ ಶ್ರೀಶೈಲಹೋಬಲ ಭು ಜಂಗಾದ್ರಿ ಮೊದಲಾದ ಕ್ಷೇತ್ರಗಳನು ಇಂಗಿತಜ್ಞರ ಸಹಿತ ಸಂಬಂಧ ಗೈಸಿ ವರಮಹಿಷ ತುಂಗಾತಟದಿ ವಾಸವಾಗಿಪ್ಪ ಯತಿವರಗೆ 1 ಭೂದೇವನುತ ಸತ್ಯಬೋಧ ಮುನಿವರ ಕರ ವೇದಿಕದೊಳುದ್ಭವಿಸಿದ ಕಲ್ಪವೃಕ್ಷ ಸಾಧುಜನರಿಗೆ ಬೇಡಿದಿಷ್ಟಾರ್ಥಗಳ ಮೋದದಿ ಕೊಡುವ ಮಹಿಮರ ಕಂಡು 2 ಶ್ರೀ ಮನೋರಮನ ಅತಿವಿಮಲತರ ಶಾಸ್ತ್ರ ನಾಮಾವಳಿಗೆ ಸುವ್ಯಾಖ್ಯಾನ ರಚಿಸಿ ಧೀಮಂತ ಜನರಿಗುಪದೇಶಿಸಿ ನಿರಂತರ ಧಾಮ ಜಗನ್ನಾಥ ವಿಠಲನ ಒಲುಮೆ ಪಡೆದವರಿಗೆ 3
--------------
ಜಗನ್ನಾಥದಾಸರು
ವನವ ನೋಡೋಣು ಬಾರೇ ನೀರೆ ಅಲ್ಲಲ್ಲಿಗೆ ಸರೋವರ ವನವ ನೋಡೋಣು ಬಾರೇ ನೀರೆ ಪ. ನೀರ ಮೇಲಾಡುವ ಪಾರಿವಾಳದ ಹಿಂಡುದೂರಾಗಿ ಬೆಳೆದ ಅಡಿಕೆಯದೂರಾಗಿ ಬೆಳೆದ ಅಡಿಕೆ ತೆಂಗಿನಮರ ಶ್ರೀದೇವಿ ಅರಸನ ವನವಿದು 1 ತುಂಬಿ ತುಂಬಿ ಜqತಾ ರಂಗಯ್ಯಓಕುಳಿಯಾಡಿದ ವನವಿದು2 ಮೃಗ ಹಿಂಡು ಕಡೆಯಿಲ್ಲ 3 ತೋಟಪಟ್ಟಿಗಳಲ್ಲಿ ನೀಟಾದ ಹಂಸಗಳು ಆಟವಾಡುತ್ತಿರಲು ಹರುಷದಿಆಟವಾಡುತ್ತಿರಲು ಹರುಷದಿ ಅಲ್ಲಲ್ಲೆ ನೀಟಾಗಿ ನಲಿವ ನವಿಲು ಹಿಂಡು4 ಕಬ್ಬಿನ ತೋಟಕ್ಕೆ ಹಬ್ಬಿದ ಹಂದರ ಅಬ್ಬರದಿ ಬೆಳೆದ ಹಲಸಿನ ಅಬ್ಬರದಿ ಬೆಳೆದ ಹಲಸು ತೆಂಗಿನ ಮರ ರುಕ್ಮಿಣಿ ರಾಮೇಶನ ವನವಿದು5
--------------
ಗಲಗಲಿಅವ್ವನವರು
ವನಿತೆಯರ ಆರತಿಕಂ||ಸಿರಿಧರಣಿಯರೊಡೆವೆರಸಿಯೆತಿರುಪತಿಯಧಿನಾಥನೊಲಿದು ಶಯ್ಯಾಸನದೊಳ್ುರುತಿರೆ ಸತಿಯರು ಹರುಷದಿಪರಿಪರಿಯಾರತಿಯನೆತ್ತಿ ನಡೆದರು ಮುದದಿಂಆವ ಜನ್ಮದ ಪುಣ್ಯ ಫಲಿಸಿತು ನಮಗೆದೇವಾಧಿದೇವ ಬಂದನು ನಮ್ಮ ಮನೆಗೆ ಪನೆನೆಯಲು ಮನದೊಳು ನೆಲೆಗೊಂಡನಮ್ಮ ಸನಿಯಕೆ ಕರೆದರೆ ುದಿರಾದನಮ್ಮಮನದ ಮಧ್ಯಕೆ ಮತ್ತೆ ಬರುವ ಕಾಣಮ್ಮವನಿತೆಯರಾರತಿಯ ತಂದೆತ್ತಿರಮ್ಮಾ 1 ಪಾದವ ತೊಳೆದು ಪನ್ನೀರಿಂದ ನಾನುಆದರದಿಂ ಹಸ್ತಕಿತ್ತು ಹಸ್ತವನುಪಾದಾವಧಾನವ ಪೇಳಲೈದಿದನುಮೋದದಿಂದಾರತಿಯಾ ತಂದೆತ್ತಿರಮ್ಮಾ 2 ತಿರುಪತಿುಂದ ಭಕ್ತರ ಪಾಲಿಸಲೆಂದುವರದ ವೆಂಕಟರಾಯ ತಾ ಬಂದನಿಂದುಗುರುವಾಸುದೇವಾರ್ಯನಾದನೀ ಬಂಧುತರುಣಿಯರಾರತಿಯ ತಂದೆತ್ತಿರಮ್ಮಾ 3ಓಂ ಯುಧ್ಠಿರಪ್ರತಿಷ್ಠಾತ್ರೇ ನಮಃ
--------------
ತಿಮ್ಮಪ್ಪದಾಸರು
ವಾಯುದೇವರು ಎಲ್ಲಿರುವೆ ತಂದೆ ಬಾರೊ ಮಾರುತಿ ಪ ಎಲ್ಲೆಲ್ಲಿನೋಡಿದರು ಅಲ್ಲಿ ನಿನ್ನ ಕೀರುತಿ ಅಲ್ಲಿನಿನ್ನಕೂಡಿರುವ ನಿತ್ಯಾಶ್ರೀಪತಿಅ.ಪ ವಾರಿಧಿಯ ಹಾರಿ ನೀ ಸೇರಿ ತ್ವರದಿ ಲಂಕೆಯ ಕ್ರೂರರನ್ನು ಕೊಂದು ಕುರುಹ ತಂದ ಮಹರಾಯ 1 ದುರುಳ ಕುರುಪನನ್ನು ಕೊಂದು ತರಳೆಯಮಾನ ಹರುಷದಿಂದ ಪೊರೆದು ನೀ ಮೆರೆದ್ಯೊ ಸುಮ್ಮಾನ 2 ಹಿತದಿ ಸತತ ಭಜಿಸಿ ಶೇಷ ವಿಠ್ಠಲನ ಮೋದಿಸಿದಿ 3
--------------
ಬಾಗೇಪಲ್ಲಿ ಶೇಷದಾಸರು
ವಾಸುದೇವಯನ್ನ ಸಲಹೋ ವಾರಿಜಾಸನ ಈಶವಾಸವಾರ್ಚಿತ ಚರಣ ವನಜೋದರ ಭಾಸುರಾಂಗ ಕೋಟಿ ಪ್ರಭಾಕರ ಪ್ರಕಾಶ ಮಂದಹಾಸ ಕಮಲಾಚಲನಿವಾಸ ಶ್ರೀ ಜಗದೀಶ ಪ ತಾಪಸೋತ್ತಮ ಸತಿಗೆ ಕೋಪದಿಂದ ಪಾಷಾಣರೂಪವಾಗಿ ಬಿಟ್ಡೆನುತ ಶಾಪಕೊಡಲು ಕೋಪನಾಮಣಿ ಬಲು ಪ್ರಲಾಪಿಸುತ ಮನದಿ ನಿಷ್ಪಾಪರರ ನುಡಿಯಂತೆ ಧರಿಯಲಿಬಿದ್ದಿರಲು ಪಾದ ಸ್ಪರ್ಶಿಸಲಾಕ್ಷಣ ಸೀತಾಪತಿಯ ಸೇವೆಯಿಂದ ಸುಂದರಿಯಾದಳು ತ್ವರದಿ 1 ಪಾಪಗಳು ಮಾಡಿದವನಂತ್ಯ ಕಾಲದಲಿ ಸುತನ ನಾರಗೆಂದು ಕರಿಯೇ ಗತಿ ತೋರಿದಿ ಹಿತದ ಲಾಮರಾಮರೆಂಬ ನಿನ್ನ ಹರುಷದಲಿ ಪೊರೆದೆ ಕ್ಷಿತಿ ನಾಥ ಹರಿ ಮಹೋನ್ನತ ಚರಿತನೆ ಪತಿತ ಪಾವನ ಬಿರುದು ಪರಮಾತ್ಮ ನಿನಗಿರಲು ಸ್ತುತಿಸುವೆನು ಗೋವಿಂದ ಶುಭಕರ ಶ್ರೀ ಮುಕುಂದ 2 ಶರಧಿ ಗಂಭೀರ ಹಾಟಕಾಂಬರ ಶೋಭಿತ ಪುರುಷೋತ್ತಮಾನಂತ ಮುರವೈರಿ ಮುರಲೀರವ ವಿನೋದ ಗರುಡಗಮನ `ವರ ಹೆನ್ನೆಪುರನಿಲಯ' ಪರಮಪಾವನ ನೃಹರೆ ಉರಗೇಂದ್ರಶಯನ ಮಂದರಧರ ಕೃಪಾಂಬುಧೆ3
--------------
ಹೆನ್ನೆರಂಗದಾಸರು
ವಿಜಯರಾಯರ ದಿನದಿ ವಿಜಯ ಪಯಣವ ಮಾಳ್ಪೆ ನಿಜದಾಸಕೂಟ ಪಥದಿ ಪ. ವಿಜಯಸಖಪ್ರಿಯ ತಂದೆ ಮುದ್ದುಮೋಹನ ಗುರು ವಿಜಯವಿತ್ತುದ್ಧರಿಸಲಿ ದಯದಿ ಅ.ಪ. ಧರೆಯಲ್ಲಿ ಪುಟ್ಟಿ ಮುವ್ವತ್ತಾರು ವತ್ಸರವು ಸರಿದುದೀ ಬಹುಧಾನ್ಯಕೆ ವರಗುರು ಉಪದೇಶ ಅಂಕಿತವು ಲಭಿಸಿ ಎಂ ಟೊರುಷವಾಗಲಿಂದಿಗೆ ಪರಮಕೃಪೆಯಿಂದ ದಾಸತ್ವ ಸಿದ್ಧಿಸಲೆಂಬ ಕಾಲ ಒದಗೆ ನರಹರಿಯೆ ನಿನ್ನ ಚರಣವೆ ಎನಗೆ ಗತಿ ಎಂದು ನೆರೆ ನಂಬಿ ಪೊರಟೆನೀಗ ಬೇಗ 1 ಸರುವ ವಸ್ತುಗಳಲ್ಲಿ ಇರುವ ಅಭಿಮಾನ ಶ್ರೀ ಹರಿ ನಿನ್ನ ಪದದಲಿರಿಸು ವರ ಗುರು ಚರಣದಲಿ ಸದ್ಭಕ್ತಿ ಸರ್ವದಾ ಸ್ಥಿರವಾಗಿ ನೆಲೆಯಗೊಳಿಸು ಹೊರಗೊಳಗೆ ಹಿಂದುಮುಂದರಘಳಿಗೆ ಬಿಡದೆ ನೀ ನಿರುತದಲಿ ಸಂರಕ್ಷಿಸು ಹರಿದಾಸ ಮಾರ್ಗದಲಿ ಹರುಷದಲಿ ನಲಿವಂತೆ ವರಮತಿಯ ದಯಪಾಲಿಸು ಹರಿಯೆ 2 ಗುರುಕರುಣ ಕವಚ ತೊಟ್ಟಿರುವ ಎನಗಿನ್ನಾವ ಪರಿಯ ಭಯವಿಲ್ಲವೆಂದು ಸ್ಥಿರವಾಗಿ ನಂಬಿ ಪೊರಮಡುವೆನೀ ಶುಭದಿನದಿ ಗುರುವಾರ ಗುರು ಕೃಪೆಯಲಿ ಪರಿಪರಿಯ ದುಷ್ಕರ್ಮ ಪರಿಹರಿಸಿ ಕಾಯುವೊ ಗುರುಚರಣ ಧ್ಯಾನಬಲದಿ ಮರುತಾಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ಕರುಣದಲಿ ಒಲಿದು ಪೊರೆಯೊ ಹರಿಯೆ 3
--------------
ಅಂಬಾಬಾಯಿ
ವಿಶೇಷ ಸಂದರ್ಭದ ಹಾಡು ಶ್ರೀ ವರದೇಂದ್ರಾಖ್ಯಾನ ಉತ್ಸವ ವರ್ಣನೆ 39 ಇರುಳುಹಗಲು ತವಸ್ಮರಿಸುತಲಿಹ ಭಕು - ತರಿಗಿಹ ಪರಸುಖಸುರಿಸುವ ಶ್ರೀ ಗುರು ಪ ಲಿಂಗಸುಗುರುನಿವಾಸ ಭಕ್ತ ಜಂಗುಳಿ ದುರಿತವಿನಾಶ ಮಂಗಳ ಚರಿತ ಮೌನೀಶ ವಿಹಂಗವಾಹನ ನಿಜದಾಸ 1 ಸಿರಿ ವಸುಧಿಜಾಪತಿ ಪದದೂತ ವಸುಧಿಯೊಳಗೆ ವಿಖ್ಯಾತ ಸುಮನಸರ ಸುವಂಶಜನೀತ 2 ಸುದರುಶನ ಮಾಲಾ ಕಲುಷ ನಿರ್ಮೂಲಾ 3 ವಾಯುಮತಾಬ್ಧಿವಿಹಾರಾ ಕಾಷಾಯ ಕಮಂಡಲಧಾರಾ ಮಾಯಿ ಜಲಜ ಚಂದಿರ ಗುರುರಾಯರ ಮಹಿಮೆಯಪಾರಾ 4 ಪಂಡಿತಮಂಡಲಭೇಶ ಪಾಖಂಡಿಮತೋರುಗವೀಶ ಕುಲಿಶ ತನ್ನ ತೊಂಡನೆಂದವರಘನಾಶ 5 ತಿಮಿರ ತರಣಿಯೊ ಕನಳನೀ ಮುನಿಯೋ 6 ಸುರನದಿಪತಿಯೊ ಧೈರ್ಯದಿ ಭೂಭತ್ಪತಿಯೊ ಚಾತುರ್ಯದಿ ವರಬ್ರಹ್ಮಸ್ಪøತಿಯೊ 7 ದಾನದಿರವಿಜನೆನಿಪನು ಸುವಿಧಾನದಿ ಕ್ಷಿತಿಯ ಪೋಲುವನು ಮೌನದಿ ಶುಕಮುನಿವರನು ಅಸಮಾನಯೋಗಿ ಎನಿಸುವನು 8 ಹರಿಸ್ಮರಣಿಯಲಿರುತಿರುವ ನರಹರಿನಿಂದಿಪ ಮತತರಿವ ಹರಿಪನೆಂಬರೆ ಪೊರೆವ ಶ್ರೀ ಹರಿಯಿವರಗಲದಲಿರುವ9 ಪ್ರಾಣೇಶ ದಾಸರೆನಿಪರು ಶ್ರೀ ಶ್ರೀನಿವಾಸನ ವಲಿಸಿಹರು ಜ್ಞಾನಿಗಳಿಗೆಅತಿ ಪ್ರೀಯರು ಅಸಮಾನದಾಸರೆನಿಸುವರು 10 ವರಕÀವಿ ಶ್ರೀ ಜಗನ್ನಾಥಾರ್ಯರ ಕರುಣ ಪಡೆದನವರತ ಧರಣಿಯೊಳಗೆ ವಿಖ್ಯಾತ ನರಹರಿ ಯಸ್ಮರಿಸುತಿಹ ನಿರುತ 11 ಹಿಂದಿನಸುಕೃತದಿ ಫಲದಿ ವರದೆಂದ್ರಾರ್ಯರು ವಂದಿನದಿ ಚಂದದಿ ದಾಸಗೃಹದಿ ನಡೆತಂದರು ಬಹುಸಂಭ್ರಮದಿ12 ಬಿನ್ನೈಸಿದ ಭಕುತಿಂದ ಮುನಿಮಾನ್ಯದರುಶನದಿಂದ ಧನ್ಯಧನ್ಯನಾನೆಂದ ಪಾವನ್ನವಾಯ್ತು ಕುಲವೆಂದ 13 ದಾಸಾರ್ಯರ ಭಕುತಿಯನು ನಿರ್ದೋಷವಾದ ಙÁ್ಞನವನು ತೋಷಬಡುತ ಮುನಿವರನು 14 ಶ್ರೇಷ್ಠನಾದಯತಿವರನು ಉತ್ಕøಷ್ಟವಾದಸ್ಥಳವನ್ನು ನಮಗೆನುತಿಹನು15 ದೇಶಕರಿಂಗಿತವರಿದು ವರದಾಸಾರ್ಯರು ಕೈಮುಗಿದು ಈ ಶರೀರತಮ್ಮದೆಂದು ಮಧ್ವೇಶಾರ್ಪಣವೆಂತೆಂದು 16 ತಪ್ಪದೆ ಸರ್ವದೇಶದಲಿ ತಾಕಪ್ಪವ ಕೊಳುತಲ್ಲಲ್ಲಿ 17 ಸಿರಿ ನಿಲಯನಂಘ್ರಿ ಸ್ಮರಿಸುತಲಿ ಕಳೇವರ ತ್ಯಜಿಸಿದರಲ್ಲಿ ಆಬಳಿಕ ಲಿಂಗಸುಗೂರಲ್ಲಿ 18 ತುಲಸಿ ವೃಕ್ಷರೂಪದಲ್ಲಿ ಇಲ್ಲಿನೆಲೆಸಿಹವೆಂದು ಸ್ವಪ್ನದಲಿ ಗಂಜಿಯ ಮರಡಿಯಲಿ ಇದ್ದಶಿಲೆ ತರಿಸೆಂದು ಪೇಳುತಲಿ 19 ಬಣವಿಯ ತ್ವರ ತೆಗೆಸುತಲಿ ತರುಮನುಜನಸರಿನೋಡುತಲಿ ಮುನಿ ವಚನವನಂಬುತಲಿ ಶಿಲೆಯನು ತಂದಿರಿಸಿದರಿಲ್ಲಿ 20 ಪುರುದಲಾಗಯಿರುತಿಹನು ತ್ವರದಿಂದಲಿ ಕಳುಹಿದನು ನರಹರಿ ಸಾಲಿಗ್ರಾಮವನು 21 ವರಪುಣ್ಯ ಕ್ಷೇತ್ರದಲಿಂದ ಮುನಿವರ ತಾನಿಲ್ಲಿಗೆ ಬಂz ಶರಣರ ಪಾಲಿಪೆನೆಂದ ಸುಖಗರೆಯುತ ಅಲ್ಲಿಯೆ ನಿಂದ 22 ಸುಂದರಪಾದುಕೆಗಳನು ಪುಣೆಯಿಂದಿಲ್ಲಿಗೆ ತರಿಸಿದನು ವಂದಿಸುವವರ ಘಗಳನ್ನು ತ್ವರದಿಂದ ತರಿದು ಪೊರೆಯುವನು 23 ದಾಸಕುಲಾಗ್ರಣಿಯನಿಪ ಪ್ರಾಣೇಶ ಕರಾರ್ಚಿತ ಮುನಿಪ ದೇಶಿಕ ವರರೆಂದೆನಿಪ ರಘುಜೇಶ ಪದಾಂಬುಜ ಮಧುಪ 24 ವೃಂದಾವನದಿ ನಿಂದಿರುವ ರಾಘವೇಂದ್ರರ ಧ್ಯಾನದಲಿರುವ ಅಂದಣೇರಿ ತಾಮೆರೆವ ಭಕ್ತವೃಂದವ ಕಾದುಕೊಂಡಿರುವ 25 ಪ್ರತಿಗುರುವಾಸರದಲ್ಲಿ ಜನತತಿ ಸಂಭ್ರಮದಿಂದಿಲ್ಲಿ ಮಿತಿಯಿಲ್ಲದೆ ಭಕುತಿಯಲಿ ನಲಿಯುತ ವಾಲ್ಗೈಸುವರಿಲ್ಲಿ 26 ಪ್ರತಿ ಪ್ರತಿ ವತ್ಸರದಲ್ಲಿ ಗ್ರೀಷ್ಮಋತು ಆಷಾಢಮಾಸದಲ್ಲಿ ತಿಥಿ ಷಷ್ಟಿಯ ದಿವಸದಲಿ ದ್ವಿಜತತಿ ಸುಭೋಜನ ವಿಲ್ಲಿ 27 ಮರುದಿವಸದ ಸಂಭ್ರಮವು ಶ್ರಿಂಗರಿಸಿದ ರಥದುತ್ಸವವು ಪರಿಪರಿ ಜಸಂದಣಿಯು ಇದು ವರಣಿಪುದಕೆ ದುಸ್ತರವು 28 ಯತಿವರ ಪರಮಾನಂದದಿಂದ ರಥವೇರಿ ಬರುವದು ಚಂದ ಅತಿಹರುಷದಿ ಜನವೃಂದಗುರು ಸ್ತುತಿಮಾಳ್ಪದು ಮುದದಿಂದ 29 ಝಾಂಗಟಿ ದಮ್ಮುಡಿಯು ಕಾಲುಗೆಜ್ಜೆಕಟ್ಟಿದಡಿಯುದಿವ್ಯ ಮೇಲು ಸರದ ಪದನುಡಿಯು 30 ಭೇರಿ ಭಜಂತ್ರಿ ತುತ್ತೂರಿಗಂಭೀರದಿ ಹೊಡೆವನಗಾರಿ ಅಂಬರ ಮೀರಿ 31 ಪರಿ ಪರಿಧೂಪಗಳು ಫಲÀಗಳನೈವೇದ್ಯಗಳು ಮಂಗಳ ಕರ್ಪೂರ ದೀಪಗಳು 32 ಥಳಿಪ ಪತಾಕಿ ಬೆತ್ತಗಳು ಮಿಗಿಲು 33 ಸಂತಜನರ ಜಯಘೋಷ ಅತ್ಯಂತ ಮನಕೆ ಸಂತೋಷ ಕುಣಿಯುತಿಹ ಶೀಶ 34 ಕಂತುಪಿತನದಯದಿಂದ ಇಲ್ಲಿ ನಿಂತಿಹ ಸುರರಾನಂದ ಎಂತೊರಣಿಪೆ ಮತಿಮಂದ ದುರಂತ ನಿಮ್ಮಯ ಗುಣವೃಂದ 35 ಸುವಿನಯದಿಂದ ನಮಿಸುವರು ಭಯವನು, ಈಡಾಡುವರು ತಮ್ಮಬಯಕೆ ಪೂರೈಸಿಕೊಳ್ಳುವರು 36 ಜ್ವರಛಳಿ ವ್ಯಾಧಿ ಪೀಡಿತರು ಮತ್ತುರಗವೃಶ್ಚಿಕದಂಶಿಕರು ಕುಂಟರು ಬಧಿರÀರು 37 ಪರಿಪರಿಗ್ರಹಪೀಡಿತರು ಬಹುಪರಿ ಶುಭಕಾಮಿಪ ಜನರು ಪೊರೈಸಿಕೊಂಬುವರು 38 ಸಾಷ್ಟಾಂಗದಿ ವಂದಿಪರು ಅಭಿಷ್ಟೇಯ ಪಡೆದುಕೊಳ್ಳುವರು ಕಷ್ಟಗಳನು ನೀಗುವರು ಸಂತುಷ್ಟರಾಗಿ ತೆರಳುವರು 39 ಇದುಪುಣ್ಯಕ್ಷೇತ್ರ ವೆನಿಸಿತು ಶ್ರೀಪದುಮೇಶಗಾವಾಸಾಯ್ತು ಮುದದಿಂದನಲಿಯುವರಾಂತು 40 ಈಸುಪದ ಪೇಳ್ವನೆಧನ್ಯ ಜಗದೀಶನ ತುತಿಸಿದ ಪುಣ್ಯ ದೇಶಿಕಪತಿ ಮುನಿಮಾನ್ಯ ವರದೇಶ ವಿಠಲಾಗ್ರಗಣ್ಯ 41
--------------
ವರದೇಶವಿಠಲ
ವೆಂಕಟರಮಣ ವೇದಾಂತಕೋಟಿವಂದ್ಯ ಪತಿ ಏಳೆನ್ನುತ ಪ. ಪಂಕಜಮುಖಿ ಪದ್ಮಾವತಿ ಸರ್ವಾ- ಲಂಕಾರದ ನಿದ್ದೆ ಸಾಕೆನ್ನುತ ಅ.ಪ. ಮಂಗಲಚರಿತ ಭುಜಂಗಶಯನ ನಿ- ನ್ನಂಗದಾಯಾಸವ ಪರಿಹರಿಸಿ ಪೊಂಗಲಶದಿ ಉಷ್ಣೋದಕ ಗಂಧ ತೈಲಾ- ಮೂರ್ತಿ 1 ದಧಿಯ ಪೃಥುಕದಲಿ ಹದಗೈದು ಮಧುರದಿ ಮಧುಸೂದನ ನಿನ್ನ ಪದದ ಮುಂದೆ ಸದ್ ಹೃದಯರು ತಂದಿಹರು ಸಮರ್ಪಿಸೆ ಮದಜನಕ ನಿನ್ನ ಓಲೈಸುವರಯ್ಯ 2 ಸಣ್ಣಕ್ಕಿಯನು ದಿವ್ಯಾನ್ನ ಪಾಕವ ಮಾಡಿ ಚೆನ್ನಾದ ಗೋಕ್ಷೀರವನ್ನು ತಂದು ಉನ್ನತ ಮಹಿಮನೆ ಉಣ್ಣೆಂದು ಲಲಿತ ಸು- ವರ್ಣಪಾತ್ರೆಯೊಳು ತಂದಿಹರು ಶ್ರೀಹರಿಯೇ 3 ವಿಧವಿಧ ಷಡುರಸಭರಿತ ಮನೋಹರ ಸುಧೆಗೆಯಿಮ್ಮಡಿ ಮಧುರತ್ವದಲಿ ಮೃದುವಾದ ಉದ್ದಿನ ದೋಸೆಯ ಸವಿಯೆಂದು ಪದುಮನಾಭನೆ ನಿನ್ನ ಹಾರೈಸುವರಯ್ಯ 4 ಕದಳಿ ಉತ್ತಮ ಫಲಗಳ ತಂದು ರಕ್ಕಸವೈರಿಯೆ ನಿನ್ನ ಮುಂದೆ ಚೊಕ್ಕಟವಾಗಿಡೆ ಲೆಕ್ಕ ಲೇಖನಗಳ ವಾಸುದೇವ ನೀನೇಳಯ್ಯ5 ಸಾರಹೃದಯ ಗೌಡಸಾರಸ್ವತ ವಿಪ್ರ ಭೂರಿ ವೇದಾದಿ ಮಂತ್ರದ ಘೋಷದಿ ಶ್ರೀರಮಣನೆ ದಯೆದೋರೆಂದು ಕರ್ಪೂರ- ದಾರತಿಯನು ಪಿಡಿದಿಹರು ಶ್ರೀಹರಿಯೇ 6 ಭಾಗವತರು ಬಂದು ಬಾಗಿಲೊಳಗೆ ನಿಂದು ಭೋಗಿಶಯನ ಶರಣಾದೆನೆಂದು ಜಾಗರದಲಿ ಮದ್ದಳ ತಾಳರಭಸದಿ ರೇಗುಪ್ತಿರಾಗ ಸಂಗೀತ ಪಾಡುವರಯ್ಯ 7 ಕರುಣಾಸಾಗರ ನಿನ್ನ ಚರಣದ ಸೇವೆಯ ಕರುಣಿಸೆಂದೆನುತಾಶ್ರಿತ ಜನರು ಕರವ ಮುಗಿದು ಕಮಲಾಕ್ಷ ನಿನ್ನಯ ಪಾದ- ಸ್ಮರಣೆಗೈಯುತ ನೋಳ್ಪಾತುರದಿಂದ ಹರುಷದಿ 8 ನಾನಾ ಜನರು ಬಂದು ಕಾಣಿಕೆ ಕಪ್ಪವ ಶ್ರೀನಿವಾಸನೆ ನಿನ್ನ ಪದಕೆ ಒಪ್ಪಿ ದಾನವಾಂತಕ ನಿನ್ನ ದಯವೊಂದೆ ಸಾಕೆಂದು ಧ್ಯಾನಮಾಳ್ಪರು ದಯಮಾಡೆಂದು ಹರಿಯೇ 9 ನೀನೆ ಗತಿಯೆಂದು ನಿನ್ನ ನಂಬಿಹರು ಲ- ಕ್ಷ್ಮೀನಾರಾಯಣ ಪುರುಷೋತ್ತಮನೆ ಮಾನದಿ ಭಕ್ತರ ಸಲಹಯ್ಯ ಸಂತತ ಶ್ರೀನಿವಾಸನೆ ಬೇಗ ಏಳು ಶ್ರೀಹರಿಯೆ 10
--------------
ತುಪಾಕಿ ವೆಂಕಟರಮಣಾಚಾರ್ಯ
ವೆಂಕಟೇಶಾಯ ನಮೊ ವಿಜಯವಿಠ್ಠಲನೆ ನಮೊ | ಪಶುಪತಿ ಗುರು ನಮಿತ ಪಾದಾ | ಪಂಕಜವ ಪೊಗುಳವೆನು ಪರಿಪಾಲಿಸೆನ್ನ | ಕಿಂಕರನ ಕಿಂಕರರಿಗೆ ಕಿಂಕರನೆಂದೆನಿಸೊ ಪ ಕಾರ್ಯವಾಕಾರ್ಯವನು ತಿಳಿಯಲೊಲ್ಲದ ಕಾಮಾ | ತೂರ್ಯದಲಿ ಪಾಪಗಳೆ ರಚಿಸಿ | ಬೆಂಬಿಡದದೆ ಬಲು | ಧೈರ್ಯವಂತನು ನೀನಾಗಿ | ಧೈರ್ಯವಾಗಿದ್ದಾಗ ಜಡಜೀವ ಜಂತುಗಳು | ವೀರ್ಯದಲಿ ಪೊಕ್ಕು ದುಃಖಾತಿಶಯದಲಿ | ದುರ್ಯೋನಿ ಮುಖದಿಂದ ಜನನ ಜನಿತನಾದೆ | ಮರ್ಯಾದೆಗಳು ಇಲ್ಲದೆ ಹರಿಯೇ 1 ಕ್ಷಿತಿಯೊಳಗೆ ಬಂದು ಕಾಮ ಕ್ರೋಧ ಸಂಮೋಹ ಶ್ರುತಿ ವಿಭ್ರಮ ಬುಧ್ಧಿನಾಶ ರಾಗದ್ವೇಷ | ಪಥದಲಿ ವಿಷಯೇಂದ್ರಿಗಳು ಆತ್ಮವಶವಾಗಿ ಹಿತದ ಪ್ರಸಾದದಿಂದ | ಗತಿ ಅದರಿಂದ ಈ ಸಂಖ್ಯೆಯಿಂದಲಿ | ಹತವಾಗಿ ಪೋಗಿ ಮರಳೆ ದೇಹವನು | ತೆತ್ತು ಗತಿ ಪುಣ್ಯವಂತನೈದೆ 2 ಇಂದಿಗಾ ಇವನ ಮನೆ ತಂದೆ ತಾಯಿಯ ದಿವಸ | ಇಂದಿಗಾ ಇವನ ಮನೆ ಹತ್ತ ಹತ್ತನೆ ದಿವಸ | ಹವ್ಯ ಕವ್ಯ ಜಾವಳ | ಇಂದಿಗಾ ಮದುವೆ ಮುಂಜಿ | ಇಂದು ನಿಮ್ಮನೆ ಪ್ರಸ್ತವೆಂದು ಕೇಳುತಾ ಪೋಗಿ | ಬಂದವರನನ್ನುಸರಿಸೆ ಬಾಗಿಲಾ ಮುಂದೆ ಕುಳಿತು | ನೊಂದೆ | ಬಂದೆನೊ ಕೊನೆಯಲಿ 3 ಆರಾದರೂ ಬಂದು ಕಾಸು ಕೊಡದಿದ್ದರೆ | ದೂರುವೆನೊ ನೂರಾರು ಕೇರಿ ಕೇರಿಯ ತಿರಗಿ | ಸಾರೆ ಅವರಲ್ಲಿದ್ದ ಅವಗುಣಂಗಳ ಎತ್ತೆ | ಬೀರುವೆನು ಬೀದಿಯೊಳಗೆ | ವಾರಣದಿಂದಲಿ ಕರೆದು ಆವನಾದರು ಬಂದು | ಶಾರೆ ಭತ್ತವ ಕೊಡಲು ಕೊಂಡಾಡುವೆ ಕುಲ ಉ | ಪೋರ ಬುದ್ಧಿಗಳ ಬಿಡದೆ4 ಪರವಣಿ ಪುಣ್ಯಕಾಲಾ ದಿವಸ ಬಂದರೆ ತಿಳಿದು | ಪರಮಾರ್ಥವೆಂದರಿದು ಉತ್ತಮರ ಬಾ ಎಂದು | ಕರೆದು ತುತ್ತನ್ನ ಮೇಲೊಂದು ದಕ್ಷಿಣೆ ಕಾಸು | ಹರುಷದಿಂದಲಿ ಕೊಡದಲೆ ಪರರ ಹಳಿಯುತ್ತ ಏನೇನು | ಇಟ್ಟುಕೊಂಡು ಮನಿಗೆ ಬಂದು | ಪರರರಿಯದಂತೆ ಮಂಚದ ಕೆಳಗೆ ಹೂಳಿ ಈ | ಪರಿಯಿಂದ ದಿನ ಹಾಕಿದೆ5 ತೊತ್ತು ಓರ್ವೆಯಲ್ಲಿ ಈ ಹೊತ್ತು ಪೋಗಾಡಿಸಿದೆ | ಉತ್ತಮರ ಬಳಿಯಲಿ ಕುಳಿತು ಸತ್ಕಥೆಗೆ ಕಿವಿ ಇತ್ತು ಕೇಳದಲೆ ಕೆಲಸಾರೆ ಬೇಸರಿಕೆಯಲಿ | ಅತ್ತಲಿತ್ತಲು ವ್ಯರ್ಥ ಸುತ್ತಿ ಸುಮ್ಮನೆ ಸುದ್ದಿ ಬರಿಗಂಟುಸಟೆ | ಮಾತು ಎತ್ತುವನೊ ಅನ್ನಿಗರನ ನ | ಎಣಿಕೆ ಮಾಡದಲೆ | ಉನ್ಮತ್ತದಲಿ ಕೆಟ್ಟೆನಯ್ಯಾ6 ಪರಿಯಂತ | ವೇದೆನೆ ಬಟ್ಟೆನೊ ದುಷ್ಟ ಹಾದಿಯಲಿ ಸಿಗಬಿದ್ದು | ಈ ದುರಾಚಾರಗಳ ಗಣನೆ ಮಾಡದೆ ಇನ್ನು | ಕಾದುಕೊ ಕಮಲನಾಭಾ | ಹೋದಪರಾಧಗಳ ನೋಡದಲೆ ದಯದಿಂದ | ಆದರಿಸಿ ನಿನ್ನ ದಾಸರ ಸಂಗತಿಯನಿತ್ತು | ಪಾದವನು ಕಾಣಿಸಯ್ಯಾ7
--------------
ವಿಜಯದಾಸ
ವೇಂಕಟೇಶನೆ ಎನ್ನಾ ಪಾಲಿಪುದೊ ಹರಣ ಪ ಪಂಕಜೋದ್ಭವ ಹರ ವಂದ್ಯ ಪರಾತ್ಪರ ನಿಖಿಲಾಗಮೈಕವಿಜ್ಞೇಯ ಲೋಕೋದ್ಧಾರ ಅ.ಪ ವತ್ಸರ ಬ- ಹುಧಾನ್ಯ ಸಂದ ಶುಕ್ಲ ದ್ವಿತೀಯ ಸಂಧ್ಯಾಸವನ ಬಂದು ಕೀರ್ತನ ಸೇವಾ- ನಂತರದಿ ಎನ್ನಾ ಮಂದಿರದೊಳು ಸುಪ್ತಾವಸ್ಥೆ ಯಿಂದಿರಲಾಗ ಅಂದು ಕಡೆಯ ಯಾ- ಮದಿ ತೈಜಸನೆ ನೀ ಹಂಸರಿಂದೆನ್ನ ಮನಸಂಶಯ ಹರಿಸಿದೆ1 ಅರುಣೋದಯಲೆದ್ದು ಮುದದಿ ಕರಣಶುಧ್ದನಾಗಿ ತ್ವರಿತದಿ ಸ್ವಪನದ ವಿ- ವರಕಾಗಿ ಹರುಷದಿ ಹರಿಪೂಜಾಕಾಲದಿ ಅರುಹಿದ ಮರುತ ಮೂರುತಿಯಾ ಉರುತರ ಚರಿತೆಯ ನಿರುತಪೊಗಳಲಾಯತವಿತ್ತ ತಿರುಪತಿಶೈಲಾಧಿಪ ಮಮಕುಲಸ್ವಾಮಿ2 ಹರಿಗುರುಸೇವೆಯನು ಸರ್ವಸದ್ಯೋಗ್ಯಸಾಧನವನ್ನು ಪರಮಹಂಸರು ಇತ್ತವೇಂಕಟೇಶಾಂಕಿತ ಮೂರುತಿಯ ನುತಿಪಾ ನಿಜ ಹರಿಭಕುತರ ಚರಣಕಮಲಬಂಡುಣಿಯೆನಿಸಿ ಇವನನಿರುತ ರಕ್ಷಿಸೋ ಉರಗಾದ್ರಿವಾಸವಿಠಲಾ 3
--------------
ಉರಗಾದ್ರಿವಾಸವಿಠಲದಾಸರು