ಒಟ್ಟು 7670 ಕಡೆಗಳಲ್ಲಿ , 133 ದಾಸರು , 4351 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಷ್ಟಪಟ್ಟರೂ ಇಲ್ಲ ಕಳವಳಿಸಿದರಿಲ್ಲಭ್ರಷ್ಟಮಾನವ ಹಣೆಯ ಬರಹವನ್ನದೆ ಇಲ್ಲ ಪಸಿರಿವಂತನ ಸ್ನೇಹಮಾಡಿ ನಡೆದರಿಲ್ಲಪರಿಪರಿಯಲಿ ವಿದ್ಯ ಕಲಿತರಿಲ್ಲನರಿಯ ಬುಧ್ಧಿಯಲಿ ನಡೆದುಕೊಂಡರು ಇಲ್ಲಅರಿಯದೆ ಹಲವ ಹಂಬಲಿಸಿದರಿಲ್ಲ 1ಕೊಂಡೆಗಾರಿಕೆಯನ್ನು ಹೇಳಿ ನಡೆದರಿಲ್ಲಕಂಡಕಂಡವರಿಗೆ ಕೈ ಮುಗಿದರಿಲ್ಲಗಂಡುಗತ್ತರಿಯನ್ನು ಕೊರಳಿಗಿಟ್ಟರು ಇಲ್ಲಚಂಡನಾದರೂ ಇಲ್ಲ ಪರಿಹಾಸ್ಯವಲ್ಲ 2ಕಟ್ಟಾಳು ಕಂಡು ಜಾಣನಾಗಿ ಪುಟ್ಟಿದರಿಲ್ಲಬೆಟ್ಟಗಳನು ಕಿತ್ತಟ್ಟರಿಲ್ಲಸೃಷ್ಟಿಯೊಳು ಪುರಂದರವಿಠಲರಾಯ
--------------
ಪುರಂದರದಾಸರು
ಕಾಯಲಾರೆನು ಕೃಷ್ಣಕಂಡವರ ಬಾಗಿಲನು |ನಾಯಿ ಕುನ್ನಿಗಳಂತೆ ಪರರ ಪೀಡಿಸುತೆ ಪಉದಯಕಾಲದಲೆದ್ದು ಸಂಧ್ಯಾವಿಧಿಯ ಬಿಟ್ಟು |ಪದುಮನಾಭನ ಪಾದಸ್ಮರಣೆ ಮೊದಲಿಲ್ಲದೆ ||ಮುದದಿ ನಿನ್ನರ್ಚಿಸದೆ ನರರ ಸದವನ ಪೊಕ್ಕು |ಒದಗಿ ಸೇವೆಯ ಮಾಡಿಅವರಬಾಗಿಲನು1ಕಲ್ಲಕರಗಿಸಬಹುದು ಹುರಿಗಡಲೆಯನು ಅರೆದು |ತೈಲವನು ತೆಗೆದಾದರುಣಲು ಬಹುದು ||ಬಲ್ಲಿದವರಾ ಮನಸು ಮೆಚ್ಚಿಸಲರಿಯೆನೈ |ಹಲ್ಲು ಕಿರಿಯುತಲಿ ಹಂಬಲಿಸಿ ಬಾಯ್ಬಿಡುತ 2ಇಂತು ನಾನಾ ಚಿಂತೆಯಲಿ ನಿನ್ನ ನೆನೆಯದೆ |ಭ್ರಾಂತಿಯೆಂತೆಂಬ ಹೆಬ್ಬಲೆಯೊಳು ಸಿಲುಕಿ |ಅಂತ್ಯವ ನಾ ಕಾಣೆ ಆದರಿಸುವರಿಲ್ಲ |ಚಿಂತೆಯ ಬಿಡಿಸಯ್ಯಪುರಂದರವಿಠಲ3
--------------
ಪುರಂದರದಾಸರು
ಕಾಯೋ ಕೃಷ್ಣಭವತೋಯದಿ ಮುಳುಗಿ ಉ- |ಪಾಯವ ಕಾಣದೆ ಬಾಯ ಬಿಡುವೆನೋ ಕಾಯೋ ಕಾಯೋ ಪಭಾಗವತರ ಪ್ರಿಯ ನಾಗಭೂಷಣಸಖ|ನೀಗಿಭಯವಕರಬೇಗನೆ ಪಿಡಿಯೊ 1ಇಂದಿರೆಯರಸ ಮುಕುಂದ ಯಶೋದೆಯ |ನಂದನ ಕರುಣಿಸೊ ಇಂದೀವರಾಕ್ಷ2ಸಿಂಧುಶಯನ ಪೊರೆಯೆಂದು ಕರೆಯಕರಿ|ಬಂದು ಸಲಹಿದೆಯೋಮಂದದಯಾಳು3ಕುರುಪ ಪಿಡಿಯಲುದ್ಧರಿಸಿದೆ ತರುಣಿಯ |ನರಕಹ ನಿನಗೆ ನಾ ಪರಕೀಯನಲ್ಲೋ 4ಜಾನಕೀವಲ್ಲಭನೀನೇ ಮರೆದುಬಿಡೆ |ಕಾಣೆನೊ ಒಬ್ಬರ ನಾನವನಿಯೊಳು5ಭಕುತರಿಗೋಸುಗ ಹತ್ತವತಾರವ |ಅರ್ತಿಂದಲಿ ಕೊಂಡುತ್ತಮ ಶ್ಲೋಕ6ದ್ವೇಷಿಗಳೆನ್ನನು ಘಾಸಿಸದಂದದಿ |ಪೋಷಿಸುವುದು ಪ್ರಾಣೇಶ ವಿಠ್ಠಲನೇ 7
--------------
ಪ್ರಾಣೇಶದಾಸರು
ಕಾಸು ಕನಕದಾಸೆಯಾದುದೇ | ಹರಿಗೆ |ದಾಸ ಜನರನೆಲ್ಲ ಮರೆತನೇ ಕಡೆಗೆಪವಾಸುದೇವನು ಶ್ರೀನಿವಾಸನೆನಿಸಿಕೊಂಡು |ಶೇಷಗಿರಿಯ ಮೇಲೆ ವಾಸವಾಗಿರುವವಗೆಅ.ಪಛಪ್ಪನ್ನದೇಶದ ಕಪ್ಪವ ತರಿಸುವ | ಒಪ್ಪಿ ಜನರಸರ್ವ ತಪ್ಪಪಾಲಿಸುವ |ಸರ್ಪಶಯನ ನಮ್ಮ ತಾಪತ್ರೆ ಘನವೆನಲು |ಅರ್ಪಿತವಹುದೇತಿಮ್ಮಪ್ಪ| ವೆಂಕಟ ಪತಿಗೆ ||ಕಾಸು||1ಶನಿವಾರ ಶನಿವಾರ ಮನೆ ಮನೆ ಭಿಕ್ಷೆಗೈದು |ಮಿನುಗುವ ಡಬ್ಬಿಯೊಳಿಟ್ಟು ಜನರು ಪೂಜಿಸೆ ನಲಿದು |ವನಜಾಕ್ಷ ನಿನಗೆಂದು ಕಣಜಕ್ಕೆ ಸುರಿಯೆ ತಂದು |ಮನುಮಥ ಪಿತಗೆ ನಮ್ಮ ನೆನಪು ಎಂತಹುದೋ ||ಕಾಸು||2ಗಂಧಚಂದನನಾಮತೀರ್ಥ ಪ್ರಸಾದ |ಸುಂದರವಾಹನಹರಕೆ ವಿನೋದ |ಚಂದದಿ ನೋಡಲ್ ಹರಿಯ ಧನವಿಲ್ಲದಾಗದ |ಸುಂದರಾಮೂರ್ತಿಗೋವಿಂದಗೆ ಸಾರ್ವದಾ3xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'
--------------
ಗೋವಿಂದದಾಸ
ಕಾಳಿ ಮೊದಲಾದವರು ಭಾಳೆ ವಸ್ತಗಳಿಟ್ಟುವ್ಯಾಳಾಶಯನÀನ ಮಡದಿಯರು ಪ.ಬಂದು ಶ್ರೀ ಪ್ರದ್ಯುಮ್ನ ಗಂಧಹಚ್ಚಿ ಐವರಿಗೆಅಂದದಲಿಬುಕ್ಕಿಟ್ಟುಸೂರಾಡಿಮಂದಾರಮಲ್ಲಿಗೆ ತಂದು ಕೊರಳಿಗೆ ಹಾಕಿಆನಂದ ಬಟ್ಟನು ನೋಡಕೆಲದಿ1ಅಚ್ಯುತನ ಮಡದಿಯರುಹಚ್ಚಿಅರಿಷಿಣ ಕುಂಕುಮಮಚ್ಚನೇತ್ರಿಯರು ದ್ರೌಪತಿಗೆಅಚ್ಛಾದ ಸುಭದ್ರೆಗೆಹಚ್ಚಿಅರಿಷಿಣ ಕುಂಕುಮಅಚ್ಚ ಮಲ್ಲಿಗೆಯನ್ನೆ ಮುಡಿಸಿ 2ಶಂಬರಾರಿಪಿತನ ಗಂಭೀರ ತಂಗಿಯರಿಗೆತಾಂಬೂಲ ಅಡಿಕೆಯನೆ ಕೊಟ್ಟುಸಂಭ್ರಮದಿ ರಮಿ ಅರಸು ಅಂಬರಗಳ ಉಡಿಸಿಮೈತುಂಬ ವಸ್ತಗಳ ಇಡಿಸಿ 3
--------------
ಗಲಗಲಿಅವ್ವನವರು
ಕುಳಿತೆಯ ಕೃಷ್ಣ ಕುಳ್ಳಿರ ಕಲಿತೆಯ |ಕುಳಿತೆಯ ಎನ್ನೊಡೆಯ ಪಇಳೆಯೊಳು ಭಕುತರ ಹೃದಯ ಕಮಲದೊಳು |ಕುಳಿತೆಯ ಎನ್ನೊಡೆಯ ಅ.ಪಜಲಚರರೂಪದಿ ನಿಗಮಗಳೆಣಿಸುತ ಕುಳಿತೆಯ ಎನ್ನೊಡೆಯ |ಕುಲಗಿರಿಗಳನೆಲ್ಲ ನೆಗಹಿಕೂರ್ಮನಾಗಿ ಕುಳಿತೆಯ ಎನ್ನೊಡೆಯ ||ಛಲದಿ ವರಾಹನಾಗಿ ಭೂಮಿದೇವಿಯ ತಂದುಕುಳಿತೆಯ ಎನ್ನೊಡೆಯಖಳಹಿರಣ್ಯಾಖ್ಯನ ಕರುಳಬಗಿವೆನೆಂದುಕುಳಿತೆಯ ಎನ್ನೊಡೆಯ 1ತೊಡೆ ವಟುವೇಷವ ಸುರರ ರಕ್ಷಿಪೆನೆಂದು ಕುಳಿತೆಯ ಎನ್ನೊಡೆಯ |ಪೊಡವಿಯ ಕ್ಷತ್ರಿಯ ವಂಶ ಸವರುವೆನೆಂದು ಕುಳಿತೆಯ ಎನ್ನೊಡೆಯ ||ಮಡದಿಯ ಒಯ್ದನ ಕೆಡಹಿ ಲಂಕೆಯಲಿಕುಳಿತೆಯ ಎನ್ನೊಡೆಯ |ಕಡುಮೂರ್ಖ ಕೌರವನನ್ನು ಕೊಲುವೆನೆಂದು ಕುಳಿತೆಯ ಎನ್ನೊಡೆಯ 2ತ್ರಿಪುರರ ಸತಿಯರ ವ್ರತವ ಕೆಡಿಪೆನೆಂದು ಕುಳಿತೆಯ ಎನ್ನೊಡೆಯ |ಉಪಸನಿಷದ್ವಾಹನ ತೇಜಿಯ ಬೆನ್ನಲಿ ಕುಳಿತೆಯ ಎನ್ನೊಡೆಯ |ಕೃಪೆಯಿಂದಲಿ ಮನದೊಳು ನೆನೆವವರಲಿಕುಳಿತೆಯ ಎನ್ನೊಡೆಯ |ಕಪಟನಾಟಕಸಿರಿ ಪುರಂದರವಿಠಲ ಕುಳಿತೆಯ ಎನ್ನೊಡೆಯ3
--------------
ಪುರಂದರದಾಸರು
ಕೂಡಲ ಮಾಣಿಕ್ಯ ಕ್ಷೇತ್ರಸ್ಥ ಭರತ ಪ್ರದ್ಯುಮ್ನ60ಶ್ರೀ ರಾಮಚಂದ್ರಾನುಜ ಭರತರಾಜಶರಣಾದೆ ತವಚರಣಯುಗಳ ತೋಯಜಕೆ ಪಉರು ಪರಾಕ್ರಮಿ ದುರ್ಗೆರಮಣ ಹರಿಚಕ್ರದಲಿಇರುವೆ ನೀ ತದ್ರೂಪದಲಿ ಸೇವಿಸುತಲಿಮಾರಶ್ರೀ ಕೃಷ್ಣಸುತ ಸ್ಕಂಧಾದಿರೂಪಿ ನೀಧೀರ ನಿನ್ನಲಿ ಕೃತೀಪತಿಯು ಪ್ರಜ್ವಲಿಪ 1ಉಡುಪಶೇಖರ ಕೊಟ್ಟ ವರಬಲದಿ ಪೌಲಸ್ತ್ಯಕಡು ಕಷ್ಟ ಕೊಡಲಾಗಸುರರುಮೊರೆಯಿಡಲುಕಡಲಶಯನನು ರಾಮ ಪ್ರಾದುರ್ಭವಿಸಲು ನೀನುಹೆಡೆರಾಜ ಅನಿರುದ್ಧಸಹ ಬಂದೆ ಬುವಿಯೊಳ್ 2ಕೇಕಯಕೆ ನೀ ಪೋಗೆ ಕೈಕೇಯಿ ವರದಿಂದರಾಕೇಂದುನಿಭಮುಖನು ನಿಷ್ಕಳ ಶ್ರೀರಾಮನನೂಕಲು ವನಕೆ ನೀ ಬಂದರಿತು ಧಿಕ್ಕರಿಸಿಏಕಾತ್ಮ ರಾಮನಲಿ ಪೋಗಿ ಬೇಡಿದೆಯೊ 3ಸ್ವೀಕರಿಸಿ ರಾಜ್ಯವಾಳೆಂದು ನೀ ಬೇಡಲುಅಖಿಲಾಂಡಕೋಟಿ ಬ್ರಹ್ಮಾಂಡಪತಿ ರಾಮನಾಕಿ ಭೂಸುರರೊಡೆಯ ಹದಿನಾಲ್ಕು ವರ್ಷಗಳುಆಗೆ ತಾ ಬರುವೆನು ಎಂದು ಪೇಳಿದನು 4ದೇವ ಶ್ರೀ ರಾಮನ ಸುಖಜ್ಞಾನಮಯಪಾದಸೇವಿಸಿ ಪ್ರೇಮಪ್ರವಾಹದಲಿ ನೀನುಬುವಿಯನು ಪವಿತ್ರ ಮಾಡುವ ಪಾದಪೀಠವನುನವವಿಧ ಭಕ್ತಿಯಲಿ ತಂದು ಪೂಜಿಸಿದೆ 5ನಂದಿಗ್ರಾಮದಲಿ ನೀ ತಪಶ್ಚರ್ಯದಲಿ ಇದ್ದುಬಂದಿಲ್ಲ ರಾಮನೆಂದಗ್ನಿ ಮುಖದಲಿ ನಿಲ್ಲೆಬಂದ ಇಕ್ಕೋ ಸ್ವಾಮಿ ರಾಮಚಂದ್ರನು ಎಂದಇಂದಿರೇಶನ ಪ್ರಥಮ ದೂತ ಶ್ರೀ ಹನುಮ 6ಅಖಿಲೇಶ ಸುಖಮಯನು ಶ್ರೀ ರಾಮಚಂದ್ರನುಸುಖ ಪೂರ್ಣ ಸೀತಾಸಮೇತ ಬರುವುದನುನೀಕೇಳಿಮುದದಲಿ1 ಮಾತೇರು ಶತ್ರುಘ್ನಭಕುತ ಪುರಜನ ಕೂಡ ಪೋದೆ ಕರೆತರಲು 7ಕಮಲೆ ಜಾನಕಿಪತಿಯ ಮೇಲೆ ಪೂಮಳೆ ಕರೆದುನಮಿಸೆ ನೀ ಭಕ್ತಿಯಲಿ ಕೃತಕೃತ್ಯ ಮನದಿಸ್ವಾಮಿ ರಾಮನು ನಿನ್ನಅಚಲಭಕ್ತಿಯ ಮೆಚ್ಚಿಪ್ರೇಮದಿಂದಲಿ ನಿನಗಾಲಿಂಗನವನಿತ್ತ 8ಸುರರ ನಗರೋಪಮವು ಸರೆಯೂ ತಟಿನಿಯಲ್ಲಿಇರುವುದು ಅಯೋಧ್ಯಾ ಆ ಪುರಿಜನರು ಎಲ್ಲಾಶ್ರೀರಾಮ ಸೀತಾಸಮೇತ ಪರಿವಾರ ಸಹಪುರಿಯೊಳು ಬರಲು ಆನಂದ ಹೊಂದಿದರು 9ಅಘದೂರ ಪೂರ್ಣಕಾಮನ ಮಂದಹಾಸವನುನರಜನರು ನೋಡಿ ಹಿಗ್ಗಿ ಘೋಷಿಸಲುಜಗಜ್ಜನ್ಮ ಸ್ಥಿತ್ಯಾದಿಕರ್ತ ಭೂಕಾಂತ ಶ್ರೀರಾಘವಗೆ ಮಾಡಿಸಿದೆ ರಾಜ್ಯಾಭಿಷೇಕ 10ಶ್ರೀ ರಾಮಭದ್ರನಿಗೆ ಯುವರಾಜನಾಗಿದ್ದುಭರತರಾಯನೆ ನೀನು ಸೇವೆ ಅರ್ಪಿಸಿದೆಸರಸಿಜೋದ್ಭವ ಲೋಕದಂತಾಯಿತೀ ಲೋಕವರವಿಷ್ಣು ಭಕ್ತಿಯು ಸೌಖ್ಯ ಎಲ್ಲೆಲ್ಲೂ11ಶರದಿಂದ ನೀನು ಗಂಧರ್ವರೂಪದಲಿದ್ದಮೂರು ಕೋಟಿ ಕ್ರೂರ ಅಸುರರನು ಕೊಂದೆಕರುಣಿಸಿ ನೀ ಎನ್ನ ಕಷ್ಟಗಳ ಪರಿಹರಿಸೊಶ್ರೀ ರಾಮಪ್ರಿಯ ಭರತ ಎನ್ನ ಗುರುಗಳ ರಾಜ 12ಶ್ರೀ ರಾಮ ಅವತಾರ ಕಾರ್ಯ ತಾ ಪೂರೈಸಿಸುರರುಮುನಿಗಣ ಮುಕ್ತಿಯೋಗ್ಯರ ಸಮೇತತೆರಳೆ ಸ್ವಧಾಮಕ್ಕೆ ಚಕ್ರ ನೀ ಚಕ್ರವನುಶ್ರೀರಾಮನಿಗೆ ದಕ್ಷಪಾಶ್ರ್ವದಲಿ ಪಿಡಿದೆ 13ಗರುಡಮೃಡಶೇಷಸ್ಥ ಭಾರತೀಪತಿ ಹೃಸ್ಥಪರಮಪೂರುಷ ಕೃತೀಪತಿಯು ಪ್ರದ್ಯುಮ್ನಹರಿರಾಮನಲಿ ಸದಾ ಭಕ್ತಿಭರಿತನೆ ಭರತವರನೀನು ಅಹಂಕಾರಿಕ ಪ್ರಾಣಾದ್ಯರಿಗೆ14ಸರಸಿಜಾಸನ ಪಿತ ಶ್ರೀ ಪ್ರಸನ್ನ ಶ್ರೀನಿವಾಸನವರಭಕ್ತ ವೃಂದ ಶಿರಮಾಣಿಕ್ಯ ಭರತಧರೆಯೊಳುತ್ತಮ ಕೂಡಲ್ ಮಾಣಿಕ್ಕವೆಂಬುವಕ್ಷೇತ್ರದಲಿ ನಿಂತು ಹರಿಭಕ್ತರನು ಪೊರೆವೆ 15
--------------
ಪ್ರಸನ್ನ ಶ್ರೀನಿವಾಸದಾಸರು
ಕೃಷ್ಣ ಇನ್ಯಾತರ ಶ್ರೇಷ್ಠನೆಸ್ತನ ಕೊಟ್ಟ ನಾರಿಯ ಕೊಂದು ಬಿಟ್ಟಾನೆ ಪ.ಅರ್ಜುನ ಯಾತರ ಭಂಟನೆನಿರ್ಲಜ್ಯದಿ ಧನುಷ್ಯ ಕೆಳಗಿಟ್ಟಾನೆÉ ಅ.ಪ.ಏನೇನೂ ಧೈರ್ಯವಿಲ್ಲವೊ ಕೃಷ್ಣಗೆಬಲು ಮೀನಿನಂತ ಚಂಚಲವೊ 1ಇಷ್ಟು ಎದೆಗಾರನಲ್ಲವೊ ಪಾರ್ಥಯುದ್ಧ ಬಿಟ್ಟರೆ ನಗುವರಲ್ಲವೊ 2ಸೊಲ್ಲುಸಾಲವ ಕೊಡುವೊನಲ್ಲವೊದೊಡ್ಡ ಕಲ್ಲು ಹೊರಿಸಲು ನಾಚಿಕೆ ಇಲ್ಲವೊ 3ಹೆಣ್ಣು ಬಾಳ್ವೆ ಬಲು ಹೊಲ್ಲೊಹರಡು ಸಣ್ಣವಲ್ಲವೊ ನಿನಗಲ್ಲವೊ 4ತಲೆದೂಗೊ ಲಕ್ಷಣ ಹೊಲ್ಲವೊಅತಿ ಮಲೆತು ನಡೆವ ಬುದ್ದಿ ಅಲ್ಲವೊ 5ವೇಷಗಾರಿಕೆ ಬಲು ಹೊಲ್ಲವೊವಿಶೇಷ ಪರಾಕ್ರಮ ಅಲ್ಲವೊಅರ್ಜುನ6ಬಿರಿಗಣ್ಣು ಲಕ್ಷಣ ಹೊಲ್ಲವೊದೊಡ್ಡ ಉರಿಮಾರಿಪುರುಷನಲ್ಲವೊ7ಮರುಳುತನ ಬಲು ಹೊಲ್ಲವೊಮಕ್ಕಳ ಕೊರಳು ಕೊಯ್ದರೆ ನಾಚಿಕೆ ಇಲ್ಲವೊ ಅರ್ಜುನ 8ತಿರುಕತನ ಬಲು ಹೊಲ್ಲವೊಅತಿ ಹರಕ ನೀ ಪುರುಷನಲ್ಲವೊ ಕೃಷ್ಣ 9ಚೋರತನದಿಂದ ಬಲು ಕೆಟ್ಯೊನಿನ್ನ ಧೀರತನವ ತೋರಿಸಿ ಬಿಟ್ಯೊ 10ಕೊಡಲಿಗಡುಕತನ ಹೊಲ್ಲವೊಛಲ ಹಿಡಿದರೆ ಬಿಡುವನಲ್ಲವೊ ಕೃಷ್ಣ 11ಅಹಲ್ಯದೇವಿಯ ಕೆಡಿಸಿದನೆಂದುಬಹು ಭೋಳೆ ಬುದ್ದಿಹೇಳಲೊನಿಂದುಅರ್ಜುನ12ನಾರಿಯ ಒಬ್ಬಗೆ ಒಪ್ಪಿಸಿಕೊಟ್ಯೊನೀ ಊರು ಕೇರಿ ಹಂಬಲ ಬಿಟ್ಯೊ ಕೃಷ್ಣ 13ವೈರಾಗ್ಯವ ತೋರಿಕೊಂಡೆಲ್ಲೊನಾಗನಾರಿಯ ಕೂಡಿಕೊಂಡೆಲ್ಲೊ ಪಾರ್ಥ 14ಪೋರತನವು ಬಲು ಅಲ್ಲವೊ ಕೃಷ್ಣನಿನ್ನ ಜಾರತನವ ಬಿಡಲ್ಲಿವೊ 15ದಾರಿದ್ರ್ಯತನ ಬಲು ಹೊಲ್ಲವೊದೊಡ್ಡ ವೀರನೆಂಬೊ ಗರವು ಅಲ್ಲವೊ ಅರ್ಜುನ 16ಅನ್ನವಸ್ತ್ರವು ನಿನಗಿಲ್ಲವೊಬಹು ಮಾನ್ಯನೆಂಬೊ ಗರವು ಅಲ್ಲವೊ ಕೃಷ್ಣ 17ರಾಜ ಲಕ್ಷಣ ನಿನಗಿಲ್ಲವೊರೂಪಮಾಜುಕೊಂಡ ಬುದ್ಧಿ ಅಲ್ಲವೊ ಅರ್ಜುನ18ದ್ವಂದ್ವ ಯುದ್ಧವÀ ಮಾಡಿದವನಲ್ಲವೊಕುದುರೆ ಚಂದಾಗಿ ಏರಿ ಓಡಲು ಬಲ್ಯೊ ಕೃಷ್ಣ 19ಕರೆದರೆ ಯುದ್ಧಕ್ಕೆ ಹ್ಯಾಗೆಂದುನೀನುತಿರುಗಿದಿ ತೀರ್ಥಯಾತ್ರೆಗಳೆಂದು ಅರ್ಜುನ 20ಕೃಷ್ಣ ಅರ್ಜುನರ ಈ ಸಂವಾದಸಂತುಷ್ಟ ರಾಮೇಶ ಕೊಡುವಮೋದ21
--------------
ಗಲಗಲಿಅವ್ವನವರು
ಕೃಷ್ಣ ಮಂತ್ರವ ಜಪಿಸೊ - ಏ ಮನುಜ |ಕೃಷ್ಣ ಮಂತ್ರವ ಜಪಿಸೊ ಪ.ವೈಷ್ಣವೋತ್ತಮನಾಗಿ ವಿಷ್ಣುವೆ ಗತಿಯೆಂದು ಅಪಜಪತಪಾನುಷ್ಟಾನ ಸ್ನಾನಕ್ಕೆ ಈ ಮಂತ್ರ |ಕಪಟಬುದ್ದಿಗಳನ್ನು ಕಟ್ಟುವ ಮಂತ್ರ ||ಉಪದೇಶದಲಿ ಜ್ಞಾನಕೊಟ್ಟು ಸಲಹುವ ಮಂತ್ರ |ಸುಪವಿತ್ರ ಮಾಡಿ ಸ್ವರ್ಗ ಸೂರೆಗೊಡುವ ಮಂತ್ರ 1ಸಕಲ ಸಾಧನೆಗಳಿಗೆ ಸಾರಭೂತದ ಮಂತ್ರ |ನಿಖಿಳ ದೇವರಿಗೆಲ್ಲ ಸಾಕ್ಷಿ ಭೂತದ ಮಂತ್ರ ||ಭಕುತಿಯಲಿ ದ್ರೌಪದಿಯ ಭಜಿಸಿದ ಈ ಮಂತ್ರ |ಮುಕುತಿಯ ಕೊಟ್ಟು ಜನರ ಪೋಷಿಸುವ ಮಂತ್ರ 2ಭಾವಿಸಲಣುರೇಣು ಪರಿಪೂರ್ಣವಾದ ಮಂತ್ರ |ಜೀವಗಳಿಗೆಲ್ಲ ಸಂಜೀವ ಮಂತ್ರ ||ಪಾವನ ಮಾಡಿ ಪಾಲಿಪುದೀ ಮಂತ್ರ |ದೇವ ಪುರಂದರವಿಠಲ ಮಹಾ ಮಂತ್ರ 3
--------------
ಪುರಂದರದಾಸರು
ಕೃಷ್ಣ ರಕ್ಷಿಸೆನ್ನ ಜಯ ಜಯಪಕ್ಷಿರಾಜಗಮನಾದುಷ್ಟಹನನ ಜಲಜಾಕ್ಷ ಜನಾರ್ದನಶಿಷ್ಟ ಜನರ ಮನದಿಷ್ಟ ಪ್ರದಾಯಕ ಪಗೋಕುಲದೊಳು ನೆಲಸಿ ದೈತ್ಯರ-ನೇಕರನು ಮಥಿಸಿಲೋಕದ ಜನರಿಗೆ ರೀತಿಯ ತೋರುತ-ನೇಕರ ಮನೆ ಮನೆ ಬೆಣ್ಣೆಯ ಭುಜಿಸಿದ 1ದ್ವಾರಕೆಯೊಳು ನಿಂತೆ ಕೌರವವೀರಗಾಯುಧವಿತ್ತೆಸಾರಥಿಯಾಗುತೆ ಧಾರುಣಿ ಗೆಲಿಸಿದೆಧೀರ£Àುನೀ ಗೋವಿಂದನೆ ದಾಸನೆ 2
--------------
ಗೋವಿಂದದಾಸ
ಕೃಷ್ಣನ ನೆನೆವನೆ ಅಜ್ಞಾನಿ | ಸ್ವಾಮಿ |ಕೃಷ್ಣನ ಮರೆವನೆ ಸುಜ್ಞಾನೀ ಪಕೃಷ್ಣನಅನುದಿನಸ್ಮರಣೆಗೈವನೆ | ದುಷ್ಟ |ಕೃಷ್ಣನ ಪರಿಪರಿ ಜರೆವನೆ ಶ್ರೇಷ್ಠ ಅ.ಪಕೃಷ್ಣನ ಸ್ಮರಿಸೀಗ ಬದುಕಿದರುಂಟೇ |ಕೃಷ್ಣನ ನಂಬೀಗ ಜನಿಸಿದರುಂಟೇ ||ಕೃಷ್ಣ ಸೇವೆಯನಿತ್ಯಮಾಡುವನೆ ತುಂಟ |ಕೃಷ್ಣನಾಜೆÕಗೆ ತಪ್ಪಿ ನಡೆವನೆ ಬಂಟ 1ದುರುಳರ ಕಂಡು ತಾ ಪೊರೆವನೆ | ಕೃಷ್ಣ |ಶರಣರ ನೋಡೀಗ ಮುರಿವನೇ ಕೃಷ್ಣ ||ಮೊರೆಯಿಟ್ಟು ಕರೆದರೆ ಬಾರನೆ ಕೃಷ್ಣ |ಕರುಣದಿ ಇಷ್ಟಾರ್ಥ ಕೊಡನೇ ಶ್ರೀಕೃಷ್ಣ 2ಧನ್ಯನೆ ಕೃಷ್ಣನ ನೆನೆವನೆ ಪಾಪಿ |ಮೌನದಿ ಕೃಷ್ಣ ಎಂಬನೇ ಮೂಗ ಕೋಪಿ ||ಮಾನ್ಯನೇ ಕೃಷ್ಣನ ನೋಡದ ಕುರೂಪಿ |ಮುನ್ನ ಗೋವಿಂದದಾಸರಿಗೆಲ್ಲ ಗೋಪಿ 3
--------------
ಗೋವಿಂದದಾಸ
ಕೃಷ್ಣನಾಮಾಮೃತ ರುಚಿಕರವೆಲ್ಲವುಶ್ರೇಷ್ಠ ಭಕ್ತರಿಗಲ್ಲದೇದುಷ್ಟಮಾನವಮತಿಹೀನಗೆಪೇಳಲು ಇಷ್ಟವಾಗಲು ಬಲ್ಲುದೇ ಪಗುಡಶೈಲದಲಿ ಲಿಂಬೆ ಬೀಜ ಪ್ರತಿಷ್ಠಿಸೆಫಲವು ಮಧುರವಹುದೆ ಗುಡುಗುಮೋಡಕೆ ಮಯೂರವು ಕುಣಿದಂತೆಕುಕ್ಕುಟ ನೋಡಿ ಕುಣಿವುದೆ ಸುಡುವಗ್ನಿಯಲಿಬೀಜಬಿತ್ತಿ ನೀರೆರೆದರೇ ಗಿಡವಾಗಿ ಶೋಭಿಪುದೇಪೊಡವಿಯೊಳಗೆ ಲಕ್ಷ್ಮೀಯೊಡೆಯನಚರಿತೆಯ ಮೂಢಮಾನವಬಲ್ಲನೇ 1ವೀಣೆಯ ನುಡಿಸುತ್ತ ಗಾಯನ ಹಾಡಲುಕೋಣಗೆ ಹಿತವಹುದೆ ಸಾಣೆಕಲ್ಲನುಬಿಸಿನೀರಿನೊಳಿಟ್ಟರೆ ಮೇಣದಂತಾಗುವುದೇಜಾಣತನದಿ ವೇದ ಓದಿದ ಹೊಲೆಯನುಬ್ರಾಹ್ಮಣನೆನಿಸುವನೆ ಕ್ಷೋಣಿಯೊಳಗೆವಾಸುದೇವನ ಚರಿತೆಯ ಹೀನಮತಿಯು ಬಲ್ಲನೆ 2ಕೋಗಿಲೆ ಸಾಕಿದ ಕಾಗೆಯ ಮರಿ ತನ್ನ ರಾಗದಿಮೋಹಿಪುದೇ ನಾಗರಹಾವಿಗೆ ಹಾಲೆರೆದರೆನಿತ್ಯವಿಷವ ನೀಗಿಸಿಕೊಂಬುದೇ ಭೋಗದಾಸೆಯಸ್ತ್ರೀಗೆ ವಿಟನ ಮೇಲಲ್ಲದೇ ಯೋಗಿಯೊಳ್ಹಿತವಹುದೇ ಸಾಗರಶಯನ ಗೋವಿಂದನಮಹಿಮೆಯಭೋಗಾಸಕ್ತನು ಬಲ್ಲನೇ 3
--------------
ಗೋವಿಂದದಾಸ
ಕೃಷ್ಣಮೂರ್ತಿ ಕಣ್ಣ ಮುಂದೆ ನಿಂತಿದಂತಿರೆ ಪಮಸ್ತಕದಲಿ ಮಾಣಿಕದ ಕಿರೀಟಕಸ್ತುರಿ ತಿಲಕವು ಹೊಳೆವಲಲಾಟ||ಹಸ್ತದಿ ಕೊಳಲನೂದುವ ನರೆ ನೋಟಕೌಸ್ತುಭದೆಡ ಬಲದೊಳು ಲೋಲಾಟ 1ಮಘಮಘಿಸುವ ಸೊಬಗಿನ ಸುಳಿಗುರುಳುಚಿಗುರು ತುಳಸಿವನ ಮಾಲೆಯಿಟ್ಟ ಕೊರಳುಉಗುರಿಗೆ ಹೊನ್ನ ಮುದ್ರಿಕೆಯಿಟ್ಟ ಬೆರಳುಸೊಗಸಿನ ನಾಭಿಯು ತಾವರೆಅರಳು2ಉಡುದಾರಒಡ್ಯಾಣಸಕಲಾಭರಣಬೆಡಗಿನ ಪೀತಾಂಬರ ರವಿಕಿರಣ ||ಕಡಗಗಗ್ಗರಗೆಜ್ಜೆ ಇಕ್ಕಿದಚರಣಒಡೆಯಪುರಂದರವಿಠಲನ ಕರುಣ3
--------------
ಪುರಂದರದಾಸರು
ಕೆಟ್ಟಿತು ಕೆಲಸವೆಲ್ಲ - ಲೋಕದಿ ಕಾಮನಟ್ಟುಳಿದಶನವಾಯಿತು ಪ.ಬಟ್ಟೆ ತಪ್ಪಿ ಮುಂದೆ ಕೆಟ್ಟು ಕರ್ಮಿಯಾಗಿಬಿಟ್ಟು ಮುಂದಣ ಪಥವ - ಹೇ ದೇವಾ ಅಪಸತ್ಯ ಕಾಮ ಕರ್ಮವು ಧರ್ಮದ ಬಲಮತ್ತೆ ಅಡಗಿಹೋಯಿತುಎತ್ತ ನೋಡಲು ನೀಚವೃತ್ತಿಯೆತುಂಬಿಅತ್ಯಂತ ಪ್ರಬಲವಾಯ್ತೋ ಹೇ ದೇವಾ 1ಹೊತ್ತುಹೊತ್ತಿಗೆ ಹಲವು ಲಂಪಟತನದಲಿಚಿತ್ತ ಚಂಚಲವಾಯಿತುಸತ್ತು ಹುಟ್ಟುವ ಸುಳಿಯಲ್ಲದೆ ಮತ್ತೊಂದುಗೊತ್ತು ಇಲ್ಲದೆ ಹೋಯಿತ್ತೋ ಹೆ ದೇವಾ 2ಪೇಳುವುದೇನಿನ್ನು ದುರ್ಜನರ ಸಂಗದೋಲಾಟ ಸೊಗಸಾಯಿತುಕೀಳು ಮೇಲು ಮೇಲು ಕೀಳಾಗಿ ನಡೆಯುವಕಾಲವೆಗ್ಗಳವಾಯಿತೋ ಹೇ ದೇವಾ3ಆಳುವ ಅರಸರಿಗೆಲ್ಲ ಕಾಂತನದಾಸೆಮೇಲು ಮೇಲಾಯಿತಯ್ಯನೀಲ ಮೇಘಶ್ಯಾಮ ನಿನ್ನಾಳೆಂಬರಿಗೆಕೂಳು ಹುಟ್ಟದೆ ಹೋಯಿತೋ ಹೇ ದೇವಾ 4ಅರಿಷಡ್ವರ್ಗದಲಿ ಸಿಲುಕಿ ಸುಜ್ಞಾನದಅರಿವು ಇಲ್ಲದೆ ಹೋಯಿತುಕರಣಾಳು ಶ್ರೀ ಪುರಂದರವಿಠಲನೆ ನಿನ್ನಸ್ಮರಣೆಯಿಲ್ಲದೆ ಹೋಯಿತೋ ಹೇ ದೇವಾ 5
--------------
ಪುರಂದರದಾಸರು
ಕೆಟ್ಟು ನೆಂಟರ ಸೇರುವುದು ಬಹಳ ಕಷ್ಟಹುಟ್ಟೇಳು ಜನ್ಮಕ್ಕೆ ಇದು ಬೇಡ ಹರಿಯೆ ಪ.ಹರಿಯನಪ್ಪಲುಬಹುದು ಉರಿಯ ಮುಕ್ಕಲುಬಹುದುಉರುವ ಮಾರಿಗೆ ಗ್ರಾಸವಾಗಬಹುದುಸುರಿವ ಕೆಂಡದ ಮನೆಗೆ ಬರಿಮೈಯೊಳಿರಬಹುದುಧರೆಯೊಳಗೆ ದಾರಿದ್ರವಾರಿಗೂ ಬೇಡವೋ 1ವಿಷಯ ಕುಡಿಯಲುಬಹುದು ಇರಿದುಕೊಳ್ಳಲುಬಹುದುಹಸಿದ ಹುಲಿಬಾಯಿ ತುತ್ತಾಗಬಹುದುಹಸೆಗೆಟ್ಟು ಹೋದ ನಂಟಿರಲಿ ತಾ ಬಾಯನ್ನುಕಿಸಿಯಲಾಗದು ಕೊರಳ ಹಿಸುಕಿಕೊಳಬಹುದು 2ಕುಡುಗೋಲು ಪಿಡಿದು ಕೂಟಿಯಮಾಡಿ ಉಣಬಹುದುಒಡಲಾಸೆಗೊಲ್ಬುರಾಳಾಗಬಹುದುಒಡೆಯ ಶ್ರೀ ಪುರಂದರವಿಠ¯ ಸ್ಮರಣೆಯಲಿಬಡವನಾಗಿಯೇ ಬೇಡಿ ಉಣ್ಣಬಹುದು 3
--------------
ಪುರಂದರದಾಸರು