ಒಟ್ಟು 8888 ಕಡೆಗಳಲ್ಲಿ , 133 ದಾಸರು , 4838 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿ ರಂಗನಿಗೇ ಮಂಗಳಾಂಗನಿಗೆ ಪ ಭಾರ ಬೆನ್ನಿಲೆ ಪೊತ್ತು ದಾಟಿಸಿತಂದಂದು ನಾರಶಿಂಹನಿಗೆ ಸುರಶೂರ ಸಿಂಹನಿಗೆ 1 ಬಲಿಯ ದಾನವ ಬೇಡಿ ಕುಲವ ಸಂಹರಿಸುತಶಿಲೆಯನುದ್ಧರಿಸಿದ ಚೆಲುವ ಬಾಲನಿಗೆ ಗಾನಲೋಲ ಕೃಷ್ಣನಿಗೆ 2 ದುರಿತ ನಾಶಕಗೆ 3
--------------
ಸಿರಿಗುರುತಂದೆವರದವಿಠಲರು
ಸಿರಿಯ ಮದವೆ ಮುಕುಂದ - ನಿನ್ನಚರಣ ಸೇವಕನ ಬಿನ್ನಹ ಪರಾಕೆಲೊ ದೇವ ಪ ಅಷ್ಟದಿಕ್ಪಾಲಕರ ಮಧ್ಯದಲಿ ವೈಕುಂಠಪಟ್ಟಣವು, ಸಿರಿಯೋಲಗವ ನಿತ್ಯದಿಕಟ್ಟಿ ಓಲೈಸುತಿಹ ದಾಸರನಿಮಿಷರು, ಮನಮುಟ್ಟಿ ಪಾಡುವ ನಾರದರ ಗೀತ ಸಂಭ್ರಮದ 1 ಸಕಲ ಐಸಿರಿಯ ಅಧಿದೇವಿಯೆ ಪಿರಿಯರಸಿಯುಕುತಿಯೊಳು ಲೋಕಗಳ ಸೃಜಿಸುವಂಥಶಕುತ ನಿನ್ನಯ ಹಿರಿಯ ಮಗನು, ಜೀವಿಗಳ ಮೋ-ಹಕದಿ ಮರುಳು ಮಾಳ್ಪಾತ ಕಿರಿಮಗನೆಂಬ 2 ಅರಿ ಹೃದಯದಲ್ಲಣನೆಂಬ ಬಿರುದು ಸಾಹಸಇಲ್ಲ ನಿನಗಾರು ಇದಿರೆಂಬ ಗರ್ವದಿ ಎನ್ನಸೊಲ್ಲು ಕಿವಿ ಕೇಳದಂತಾಯಿತೆ ಹರಿಯೆ ? 3 ಶೇಷ ಹಾಸು ಮಂಚವು, ಗರುಡ ತುರುಗವು, ಪೀತವಾಸದುಡುಗೆಯು, ಕೊರಳಲಿ ವೈಜಯಂತಿಮೀಸಲಳಿಯದ ಪುಷ್ಪಮಾಲೆಗಳ ಧರಿಸಿ ಜಗದೀಶನೆಂಬುವ ಬಿರುದು ಹೊಗಳಿಸಿಕೊಳ್ಳುವ 4 ಭಕ್ತವತ್ಸಲನೆಂಬ ಬಿರುದು ಬಿಡು, ಅಲ್ಲದೊಡೆಶಕ್ತ ಎನ್ನನು ಕಾಯೋ ಸುಲಭದಿಂದಮುಕ್ತಿಯನ್ನು ಪ್ರಕಟಿಸಲು ಲೋಕದೊಳು ಭಜಕರ್ಗೆಯುಕ್ತ ಕರ್ತ ಕಾಗಿನೆಲೆಯಾದಿಕೇಶವರಾಯ5
--------------
ಕನಕದಾಸ
ಸಿರಿಯ ರಮಣ ನರಹರಿಯ ಚರಣಗಳ ನಿರತ ಭಜಿಪರಿಗೆ ಸ್ಥಿರ ಸುಖವಿಹುದು ಪ ದುರಳ ವಿಷಯಗಳ ತೊರೆದು ಮುದದಿ ಮೈ ಮರೆಯುವ ತೆರದಲಿ ಉರುತರ ಭಕುತಿಯಲಿ ಅ.ಪ ತನಯ ಪ್ರಹ್ಲಾದನು ಜನಕನ ವಚನವ ನನುಸರಿಸದೆ ತನ್ನ ಮನದಲಿ ಸಂತತ ನೆನೆದು ಶ್ರೀಹರಿಯನು ದಿನದಿನ ನಾರಾಯಣನ ಸುಮಂಗಳ ಗುಣಗಳ ಪೊಗಳುತ ಕುಣಿ ಕುಣಿಯುತ ತನ್ನ ಜನಕನ ಕೋಪಕೆ ಹೊಣೆಯಾಗುತಲಿರೆ ಕ್ಷಣದಲಿ ಪೊರೆದ 1 ಖೂಳನು ತನ್ನಯ ಬಾಲನ ನಡತೆಯ ತಾಳಲಾರದೆ ಕೋಪ ಜ್ವಾಲೆಯಿಂದುರಿಯುತ ಪೇಳೊ ಇಲ್ಲಿಹನೇನೊ ತಾಳೊ ನೋಡುವೆನೆಂದು ಪೇಳಿ ಕಂಬವ ತನ್ನ ಕಾಲಲಿ ಒದೆಯಲು ಸೀಳಿ ಛಟ ಛಟನೆ ತಾಳಿ ಘೋರತನು ಖೂಳ ರಕ್ಕಸನಲಿ ಧಾಳಿಯ ಗೈದ 2 ದುರುಳ ಹಿರಣ್ಯಕನ ಕರಳ ಬಗೆದು ತನ್ನ ಕೊರಳಲ್ಲಿ ಮಾಲೆಯ ಧರಿಸಿ ಸಿಡಿಯುತಿರೆ ಉರಿಯಿಂದ ಧರಣಿಯು ತರತÀರ ನಡುಗಲು ಸುರರ ಮೊರೆಯ ಕೇಳಿ ವರಲಕುಮಿಯು ನರ ಹರಿಯನು ಸ್ತುತಿಸಲು ಮರೆತು ಕೋಪವನು ವರ ಭಕುತನಿÀಗೆ ಪ್ರಸನ್ನತೆಯಿತ್ತ 3
--------------
ವಿದ್ಯಾಪ್ರಸನ್ನತೀರ್ಥರು
ಸಿರಿಯನನುರಾಗದಿ ಭಜಿಸುವೆನು 1 ಕ್ಷೀರಸಾಗರಾತ್ಮಜೆಯರಸ ಕೃಪಾವಾರಿಧಿ ಸರ್ವೇಶ | ಅ ಪಾರಗುಣಾರ್ಣವ ಜಗದೀಶ ಬೆಂಬಿಡದಿರು ಶ್ರೀಶಾ 2 ಸದಾ ಸದ್ಭಕ್ತ ಜನಪ್ರೇಮಿ ವಿನುತ ನಂಬಿದವನೆ ನಿಷ್ಕಾಮಿ 3 ಪ್ರಪಂಚಕು ಟುಂಬಿ ಸದಾನಂದ 4 ದುರ್ವಿಷಯ ಸುಟ್ಟು ನಿನ್ನ ಚಿಂತೆ ಮನಕೆ ಕೊಟ್ಟು 5 ಸಂಜೀವ 6 ದುರ್ಜನರ ಬಿಟ್ಟೆ ದೈತ್ಯರನ್ನು ಪರ ಮೇಷ್ಠಿ ಪೊಗಳುತಿಹನು ಎನ್ನಳವೆ ಶಿಷ್ಟರ ದೊರೆ ನೀನು 7 ಭೂಮಿಯನೆ ತ್ತಿದೆ ಕೋರೆದಾಡೆಯಲಿ ಸಾಕಾಗದೆ ನಿರುತವು ಭಜಿಸುವ ಶಶಿ ಶೇಖರ ಮೋದದಲಿಎಂದುಸು ರುತಲಿದೆ ವೇದದಲಿ 8 ಕಂಬದೊಳವÀ ತರಿಸಿದೆ ಮೋದದೊಳು ಮನಸರು ಭಲಾ ಎನಲು 9 ಬಲಿಯಯಾಗ ಮಂಟಪಕ್ಕೆ ಪೋಗಿ ಯೋಗಿ 10 ಸಮುದ್ರ ವನ್ನೊತ್ತಿದೆ ಜಗಜಟ್ಟಿ ನಾಚರಿಸಲು ಮನವಿಟ್ಟಿ 11 ಸತಿ ಸತ್ಕೀರ್ತಿಯ ಪಡೆದು ಜಗದಿ ಮೆರೆದೆ 12 ಮೆರೆದೆ ಕೌರವರ ಭೀಮನಿಂ ಕೊಲ್ಲಿಸಿದೆ 13 ಜನಾದ್ಯರ ಗೆದ್ದು ಸುಮನಸಾಳಿ ಯರಸಂ ಹರಿಸಿದನಾ ಶೂಲಿ 14 ಕೃತಯುಗದ ಧರ್ಮ ನಡೆಸಿದೆಯ್ಯಾ ಎನ್ನ ಪಾಲಿಸಯ್ಯ ಜೀಯಾ 15 ಜನರುನೆನೆಯಲು ತಾ ಇಷ್ಟಾರ್ಥವ ಪಡೆವರು ಸದಾ ತನ್ನ ಸಂತರೊಳಗಿಡುವನು16 ಸುಜನ ಕಾಮಿತದಾಯಕ ರಕ್ಷ ಕೋಮಲಾಂಗ ನೂತನ ಪುರಿ ಮಂದಿರ ಕುಜನನಿಕರ ಶಿಕ್ಷಾ | ವರದ ರಾಜನಿಖಿಲ ಸಂರಕ್ಷಾ 17
--------------
ಗುರುರಾಮವಿಠಲ
ಸಿರಿಯು ಬೇಡೆನಗೆ ಈ ಬರಿಯ ವೈಭವದ ಪರಿಯು ಬೇಡವೆನಗೆ ಪ ಪರಿಪರಿಯಲಿ ನಿನ್ನ ಚರಣ ಸೇವೆಯಲಿ ಪರತರ ಸುಖಗಳ ಅರಿವು ಬೇಕಲ್ಲದೆ ಅ.ಪ ಮರೆತೆನೊ ನಿನಗಾಗಿ ಚೆಲುವ ಸತಿಸುತರ ತೊರೆದೆನೋ ಬಹು ವಿಧ ಪ್ರೇಮಪಾಶಗಳ ಬೆರಗಾದೆನೋ ದೇವ ಮರುಕದಿಂದೆನಗೆ ನೀ ವರ ಮಾರ್ಗವ ತೋರೋ ಮುರಳೀಧರನೆ 1 ಮಂದಮತಿಗಳೆನ್ನ ನಿಂದಿಸುತಿರುವುದಾ ನಂದವೇನೋ ನಿನಗೆ ಸುಂದರ ಮೂರುತಿ ಕುಂದಿ ಕುಂದಿದ ಮನ ಮಂದಿರದಲಿ ನಿಲ್ಲೋ ಇಂದಿರಾ ರಮಣನೆ 2 ಎನ್ನ ಕುಂದುಗಳನ್ನು ಮನ್ನಣೆ ಮಾಡಿ ಸಂ ಪನ್ನತೆ ಎನಗೀಯೋ ಘನ್ನ ಮಹಿಮ ಸುಪ್ರಸನ್ನವಿಠ್ಠಲನೇ ನಿನ್ನವನೆನಿಸೆಲೋ ಪನ್ನಗಶಯನನೇ 3
--------------
ವಿದ್ಯಾಪ್ರಸನ್ನತೀರ್ಥರು
ಸಿರಿರಮಣ ತವ ಚರಣಕೆರಗಿ ಬೇಡುವೆ ನಾನು ತ್ವರದಿ ಉದ್ಧರಿಸೋ ಈ ಭವದಿ ಬೇಗಾ ಪ ಪೊಟ್ಟಿಯೊಳಿರುವ ಶಿಶು ಕಷ್ಟವನೆ ಕೊಡಲು ಸಹ ಕೆಟ್ಹೋಗಲೆಂದು ತಾ ಬಯಸಳು ಸೃಷ್ಟಿ ನಿನ್ನೊಳಗಿರಲು ಹೊಟ್ಟೆಯೊಳಗಿರುವೆನು ಅಷ್ಟು ತಪ್ಪೇನು ಕ್ಷಮಿಸಿ ಪೊರೆವುದಾ ತೆರದಿ 1 ಜ್ಞಾನವಿಲ್ಲದೆ ಹರಿಯೇ ನಾನು ನೀನು ಸರಿಸ- ಮಾನರೆಂದರಿತು ನಾ ಮೋಸ ಹೋದೆ ನಾನು ನಿನ್ನಾಧೀನವಿರುವೆನೇ ಹೊರ್ತು ನೀ ನೆನ್ನಧೀನನೆಂದಿಗೂ ಅಲ್ಲವೊ ದೊರೆಯೇ 2 ಏಸು ಜನ್ಮಗಳಿಂದ ವೇಷವಾ ಧರಿಸಿ ಹನು- ಮೇಶ ವಿಠಲನೆ ನಾ ತೋರಿಸಿದೆನೋ ಕೇಶವಾ ಕೊಡು ನೀ ಸಂತೋಷವಾಗಿರೆ ಮುಕ್ತಿ ಬೇಸರಾಗಿರೆ ಇನ್ನು ವೇಷವನು ಬಿಡಿಸೊ 3
--------------
ಹನುಮೇಶವಿಠಲ
ಸಿರಿವರನ ಕರುಣಕ್ಕೆ ಪಾತ್ರ ನಾನಾದೆ ಪರಮ ಹರಿಭಕ್ತನಾಗಿ ಬಾಗಿ ಶರಣೆಂದು ಪ ಪರಿಪರಿಯಿಂದೊರೆದ ಕುಲಗುರುವಿನ ವಾಕ್ಯಗಳ ತರದೆ ತುಸು ಗಣಿತಕ್ಕೆ ಮರಣಭೀತಿಲ್ಲದೆ ಹರಿಸರ್ವೋತ್ತಮನೆಂಬ ವರಮಂತ್ರ ಪಠಿಸಿದ ಪರಮಪ್ರಹ್ಲಾದರಿಗೆ ನಿರುತ ಶರಣೆಂದು 1 ಪನ್ನಂಗಶಯನ ಉನ್ನತ ಮಹಿಮೆಗಳ ತನ್ನೊಳಗೆ ತಾ ತಿಳಿದು ಭಿನ್ನ ಭೇದವಿಲ್ಲದೆ ಗನ್ನಗತಕನಾದ ಅಣ್ಣನಿಗೆ ಮಹ ನೀತಿ ಯನ್ನು ಪೇಳಿದ ವಿಭೀಷಣಗಿನ್ನು ಶರಣೆಂದು 2 ವನಧಿಯನ್ನು ಲಂಘಿಸಿ ದನುಜಕುಲ ಸಂಹರಿಸಿ ವನಜನಾಭನ ಸೇವೆ ಮನುಮುಟ್ಟಿ ಗೈದು ಜನನಮರಣವ ಗೆಲಿದು ಘನಪದವಿ ಗಳಿಸಿದ ಹನುಮರಾಯರ ಪದಕೆ ಮಣಿದು ಶರಣೆಂದು 3 ತರಳತನದಲಿ ನಿಖಿಲ ಧರೆಭೋಗಗಳ ತೊರೆದು ಹರಿಮಂತ್ರ ಜಪಮಾಡಿ ಸ್ಥಿರಪದವ ಪಡೆದ ಪರಮಕಂಟಕ ಗೆಲಿದವರಿಗರಿತು ಶರಣೆಂದು 4 ನಿತ್ಯನಿರ್ಮಲ ನಿಖಿಲಕರ್ತ ಶ್ರೀರಾಮನಡಿ ಭಕ್ತರೆನಿಸಿದ ಮಹ ನಿತ್ಯಾತ್ಮರ ಸತ್ಯಪಾದಗಳೆನ್ನ ನೆತ್ತಿಯೊಳ್ಪೊತ್ತು ನಿಜ ಚಿತ್ತದಿಂ ನೆನೆನೆನೆದು ನಿತ್ಯಶರಣೆಂದು 5
--------------
ರಾಮದಾಸರು
ಸಿರಿವರಾ | ಬಾ ಸುಂದರಾ || ಸುರಭೀಶ ಸುರನುತ | ಸಿರಿವತ್ಸಭೂಷಿತ ಪ ದಂಡಾವತಿಯವರ | ದಂಡೇಯೋಳ್ ನೆಲಸಿದ | ಪುಂಡರೀಕಾಕ್ಷ ಕೋ | ದಂಡಪಾಣಿ ಹರೇ ಬಾ ಸುಂದರಾ 1 ನಂದಗೋಪನ ಕಂದ | ನಂದಭದ್ರೆಯರಿಂದ | ನಿಂದು ಕ್ಷೀರದಿ ಮಿಂದು | ಸಿಂಧುಶಯನ ಹರೇ ಬಾ ಸುಂದರಾ 2 ಮಂಗಳ ಮಹಿಮ ಶ್ರೀ | ರಂಗನಾಥನೆ ಪೊರೆ | ಅಂಗಜಪಿತ ಯದು | ಪುಂಗವ ಶ್ರೀಶಕೇಶವ ಬಾ ಸುಂದರಾ 3
--------------
ಶ್ರೀಶ ಕೇಶವದಾಸರು
ಸೀತಾ ಕಲ್ಯಾಣ ಪಾಕ ಶೇಷಾದ್ರಿ ಬ್ರಹ್ಮಕೆ ಶರಣು ಲೋಕನಾಯಕ ಹೆಳವನಕಟ್ಟೆ ವೆಂಕಟ ನೀ ಕರುಣಿಸಿ ಸಲಹುವುದೆನಗೆ ಜಯ ಜಯ ಪ. ಮದುವೆಯ ನಾಲ್ಕು ದಿವಸದಲ್ಲಿ ಮದುವಣಿಗನು ರಾಮ ಜಾನಕಿಗೆ ಪದನ ಹೇಳುವೆ ಸುಜನರು ಕೇಳಿ ಜಯ ಜಯ 1 ಚಿತ್ತಜಪಿತ ಶ್ರೀರಾಮರಿಗೆ ಅರ್ತಿಯಿಂದರಿಷಿಣೆಣ್ಣೆಯ ಮಾಡ್ವ ಮಿತ್ರೆ ಕೌಸಲ್ಯದೇವಿ ಕೇರಿ ಕೇರಿಯ ಗುಂಟ ಮುತ್ತೈದೇರನು ಕರೆಸಿದಳು ಜಯ ಜಯ 2 ಪೀತಾಂಬರದುಡುಗೆಯನುಟ್ಟು ಜ್ಯೋತಿಯಂದದಿ ಥಳಥಳಿಸುತಲಿ ಜಾತಿಮಾಣಿಕದಾಭರಣವಿಟ್ಟು ರಾಮರ ಮಾತೆಯರೆಲ್ಲ ಶೃಂಗಾರವಾಗಿ ಜಯ ಜಯ 3 ಚೀಣ ಚೀಣಾಂಬರಗಳನುಟ್ಟು ವೇಣಿ ಕಸ್ತೂರಿಯ ಪಣೆಗಿಟ್ಟು ಜಾಣೆಯರೆಲ್ಲ ಶೃಂಗಾರವಾಗಿ ಮಲ್ಲಿಗೆ ಬಾಣನ ಪಟ್ಟದಾನೆಗಳಂತೆ ಜಯ ಜಯ 4 ಪೊಂಬಣ್ಣದ ಹಳದಿಯ ಕಲೆಸಿ ತುಂಬಿದ ಹರಿವಾಣದೊಳಗೆ ಅಂಬುಜನಾಭಗೆ ಅರಿಷಿಣೆಣ್ಣೆಯ ಮಾಡ್ವ ಸಂಭ್ರಮಕೆ ನಡೆತಂದರಾಗ ಜಯ ಜಯ 5 ಗರುಡನ್ವಲ್ಲಭ ಸೌಂದರದೇವಿ ವರುಣನ್ವಲ್ಲಭೆ ಕಾಳಕದೇವಿ ಹರನ್ವಲ್ಲಭೆ ಪಾಪ[ನಾ] ಶಿಗಂಗೆ ಸಹಿತಲಿ ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ 6 ಬ್ರಹ್ಮವಲ್ಲಭೆ ಶಾರದಾದೇವಿ ವಾ- ಯುರಮಣಿ ಅಂಜನಾದೇವಿ ಹರುಷದಿ ಕೌಸಲ್ಯೆ ಕೈಕೆಸೌಮಿತ್ರೆಯರು ಅರಿಷಿಣೆಣ್ಣೆಯ ಮಾಡಬಂದರಾಗ ಜಯ ಜಯ7 ಅಲ್ಲಲ್ಲಿ ನಡೆವ ನಾಟಕಶಾಲೆ ಬಿಲ್ಲಾಳು ಬೆತ್ತ ಕಾಟನವರು ಸೊಲ್ಲುಸೊಲ್ಲಿಗೆ ಹಿಡಿಹೊನ್ನನು ತ್ಯಾಗವ ಚೆಲ್ಲುತ ದಶರಥ ನಡೆದನಾಗ ಜಯ ಜಯ 8 ಹೊಡೆವ ತಂಬಟೆ ಭೇರಿ ನಿಸ್ಸಾಳೆ ಬಿಡದೆ ಚೀರುವ ಹೆಗ್ಗಾಳೆಗಳು ಸಿಡಿಲು ಗರ್ಜಿಸುವಂತೆ ಪಂಚಮವಾದ್ಯದಿ ನಡೆದರು ಜನಕರಾಯನ ಮನೆಗೆ ಜಯ ಜಯ 9 ಕುಸುಮಬಾಣನ ಮಾರ್ಬಲದಂತೆ ಹಸುರು ಪಚ್ಚೆಯ ಪಲ್ಲಕ್ಕಿಗಳು ಮುಸುಕಿದ ಪರಿಮಳದೊಳಪ[ಸಾ]ತಕೆ ದಶರಥ ಬಂದನೆಂದರೆ ಜನರು ಜಯ ಜಯ 10 ಭರದಿಂದಲೆದ್ದು ಜನಕರಾಯ ತರಿಸಿ ನಿವಾಳಿಗಳನು ಹಾಕಿ ಹರುಷದಿ ಕೈಲಾಗವ ಕೊಟ್ಟಯೋಧ್ಯದ ಅರಸ[ನ] ಮನ್ನಿಸಿ ಒಡಗೊಂಡನಾಗ ಜಯ ಜಯ11 ಬೇಗದಿ ಗದ್ದುಗೆಯನು ಹಾಸಿ ಬೀಗನ ಉಪಚರಿಸಿದ ಜನಕ ಭಾಗೀರಥಿ ಪಾರ್ವತಿ ಗಂಗೆ ಸಹಿತಲಿ ನಾಗಭೂಷಣನು ಕುಳಿತನಾಗ ಜಯ ಜಯ 12 ಸುತ್ತಣ ರಾಯರಾಯರಿಗೆಲ್ಲ ರತ್ನಗಂಬಳಿಗಳ ಹರಹಿದರು ಅರ್ತಿಯಿಂದಲಿ ಸುರರೆಲ್ಲರು ಕುಳಿತರು ವಿಸ್ತರಿಸಿದ ಮಂಟಪದೊಳಗೆ ಜಯ ಜಯ 13 ಮಣಿಮಂಟಪದೊಳು ಹಸೆಹಾಸಿ ಕನಕ ಮಣಿಯ ತಂದಿಳುಹಿದರು ದಿನಕರಕುಲರಾಮ ಹಸೆಗೇಳೆನುತಲಿ ಗುಣಾವಳಿಗ[ಳ] ಕೊಂಡಾಡಿದರು ಜಯ ಜಯ 14 ಪೊಕ್ಕಳೊಳಜನ ಪೆತ್ತವನೇಳು ಅಕ್ರೂರಜನ ಪೆತ್ತವನೇಳು ಮುಕ್ಕಣ್ಣನ ರಿಪುಬಲವ ಸಂಹರಿಸಿದ ಭಕ್ತವತ್ಸಲ ಹಸೆಗೇಳೆಂದರು ಜಯ ಜಯ 15 ದಶರಥರಾಜನಂದನನೇಳು ಅಸುರಸಂಹಾರ ಕಾರಣನೇಳು ವಸುಧೆಗೊಡೆಯ ರಾಮ ಹಸೆಗೇಳೆನುತಲಿ ಋಷಿಗಳೆಲ್ಲರು ಶ್ರುತಿಗರೆದರಾಗ ಜಯ ಜಯ 16 ಋಷಿವಾಲ್ಮೀಕಿ[ಯ]ರೆಲ್ಲರು ಕೂಡಿ ಕುಶಲದ ಬಾಸಿಂಗವ ಪಿಡಿದು ಅಸುರಾರಿಯ ಮಸ್ತಕಕಳವಡಿಸೋರು ವಸುದೇವನಾಗೆಂದು ಹರಸುತಲಿ ಜಯ ಜಯ 17 ತಂಡತಂಡದ ರತ್ನ ಅಡಸಿದಾಗ ಮಣಿ ಬಿಗಿದಿದಾಗ ತೊಂಡಿಲ ಮುತ್ತೈದೇರಳವಡಿಸೋರು ಕೋ- ದಂಡ ಪಾಣಿಸತಿಜಾನಕಿಗೆ ಜಯ ಜಯ 18 ಬೆರಳಿಗೆ ಮುದ್ರೆ ಉಂಗುರವಿಟ್ಟು ಕೊರಳಿಗೆ ಏಕಾವಳಿಯನೆ ಹಾಕೋರು ತರಳಾಕ್ಷಿಯರಾ ಜಾನಕಿಗೆ ಜಯ ಜಯ 19 ಬೊಂಬೆಯ ತೊಂಡಿಲ ಮುಡಿದಿರ್ದು ಕುಂಭಿಣಿಸುತೆ ಕುಳ್ಳಿರಲಾಗಿ ಅಂಬುಜಾಂಬಕ ರಘುರಾಮನ ಹರುಷದಿ ರಂಭೆಯಿದ್ದೆಡೆಗೆ ಬಂದನೆ ನಗುತ [ಜಯ ಜಯ]20 ಬಂದನೆ ಭಾಗ್ಯಲಕ್ಷ್ಮೀರಮಣ ಬಂದನೆ ಭಕ್ತವತ್ಸಲ ಸ್ವಾಮಿ ಬಂದನೆ ಜಾನಕಿಯಡೆ ರಾಮನು ತಾ ಬಂದನೆ ಮಣಿಮಂಟಪದೆಸೆಗೆ [ಜಯ ಜಯ] 21 ಧೂರ್ಜಟಿ ಜಪಿಸುವ ನಾಮವಿಗ್ರಹ ಬಂದ ವಜ್ರಮಾಣಿಕದ್ಹಸೆಯಿದ್ದೆಡೆಗೆ ಜಯ ಜಯ 22 ಕೌಸಲ್ಯಸುತ ಕುಮಾರ ಬಂದ ಹಂಸವಾಹನಪಿತ ರಾಮ ಬಂದ ಕಂಸಾರಿ ದುಃಖವಿ [ನಾಶ] ರವಿಕುಲ ವಂಶೋದ್ಧಾರಕ ಬಂದನಾಗ [ಜಯ ಜಯ] 23 ಭಕ್ತವತ್ಸಲ ರಾಘವ ಬಂದ ಮುಕ್ತಿದಾಯಕ ಶ್ರೀರಾಮ ಬಂದ ಅರ್ಕನು ಶತಕೋಟಿತೇಜನು ಜಗಕತಿ- ಶಕ್ತ ತಾ ಬಂದನೆಂದವೆ ಕಹಳೆ ಜಯ ಜಯ 24 ಸಿಂಧುಬಂಧನ ರಾಘವ ಬಂದ ಪು- ರಂದರವರದ ಶ್ರೀರಾಮ ಬಂದ ಇಂದುವದನೆಪತಿ ರಾಮ ಬಂದನು ರಾಮ- ಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 25 ಯಜ್ಞಶಿಕ್ಷಾಮಿತ್ರ ರಾಮ ಬಂದ ಸುಗ್ರೀವರಕ್ಷಕಾರಣ ಬಂದ ಲಕ್ಷ್ಮ- ಣಾಗ್ರಜ ಬಂದನೆಂದವೆ ಕಹಳೆ ಜಯ ಜಯ 26 ಯಂತ್ರವಾಹಕ ರಾಘವ ಬಂದ ಮಂತ್ರಮೂರುತಿ ರಾಮ ಬಂದ ಕಾಂತೆ ಶ್ರೀ ಜಾನಕಿರಮಣ ಬಂದನು ರಾಮ ತಂತ್ರಿ ತಾ ಬಂದನೆಂದವೆ ಕಹಳೆ ಜಯ ಜಯ 27 ದೂಷಕಹರಣ ಶ್ರೀರಾಮ ಬಂದ ವಿ- ಭೀಷಣವರದ ರಾಘವ ಬಂದ ಭಾಷೆ ಪಾಲಿಪ ರಾಮಚಂದ್ರ ಬಂದನು ಜಗ- ದೀಶ ತಾ ಬಂದನೆಂದವೆ ಕಹಳೆ ಜಯ ಜಯ 28 ತಾಟಕಪ್ರಾಣಾಪಹಾರ ಬಂದ ಜಟÁಯುಮುಕ್ತಿಕಾರಣ ಬಂದ [ತಾಟಂಕ] ಧರ ನಾರಾಯಣ ರವಿಕುಲ ಕೋಟಿ ತಾ ಬಂದನೆಂದವೆ ಕಹಳೆ ಜಯ ಜಯ 29 ವೀರ ವಿಕ್ರಮ ರಾಘವ ಬಂದ ಮಾರೀಚಮರ್ದನ ರಾಮ ಬಂದ ನಾರಿ ಶ್ರೀ ಜಾನಕಿರಮಣ ಬಂದನು ಹರಿ ರಾಮ ತಾ ಬಂದನೆಂದವೆ ಕಹಳೆ ಜಯ ಜಯ 30 ದೇವಕುಮಾರ ರಾಘವ ಬಂದ ದೇವರ ದೇವನು ರಾಮ ಬಂದ ಭಾವೆ ಶ್ರೀ ಜಾನಕಿರಮಣ ಬಂದನು ರಾಮಚಂದ್ರ ತಾ ಬಂದನೆಂದವೆ ಕಹಳೆ ಜಯ ಜಯ 31 ನಿರುಪಮಚರಿತ ರಾಘವ ಬಂದ ದುರಿತದಲ್ಲಣ ರಾಮದೇವ ಬಂದ ಭರತಶತ್ರುಘ್ನರ ಸಹೋದರಯೋಧ್ಯದ ಸುರಪತಿ ಬಂದನೆಂದವೆ ಕಹಳೆ ಜಯ ಜಯ 32 ಹೇಮಖಚಿತ ರತ್ನ ಪೀಠದಲಿ ಭೂಮಿಜೆ ಸಹಿತ ಕುಳಿತ ರಾಮ ವಾಮ ಭಾಗದಿ ಒಪ್ಪಿರ್ದಳು ಜಾನಕಿ ಆ ಮಹಾಸಭೆಯನು ಬೆಳಗುತಲಿ ಜಯ ಜಯ 33 ಕುಂದಣ ರತ್ನದಡ್ಡಿಕೆಯೊಳಗೆ ಹೊಂದಿಸಿ ನವರತ್ನ ಇರುವಂತೆ ಇಂದುವದನೆ ಜಾನಕಿ ಹರುಷದಿ ರಾಮ ಚಂದ್ರನ ಮಧ್ಯದೊಳೊಪ್ಪಿದಳು ಜಯ ಜಯ 34 ಹೇಮದ್ಹರಿವಾಣದೊಳಗ್ನಿಯನು ಕಾಮಿನಿಯರು ತಂದಿಳುಹಿದರು ರಾಮ ಮನ್ನಿಸಿ ಉಡುಗೊರೆಯಿತ್ತು ಅವರಿಗೆ ಹೇಮಾರ್ಚನೆಗಳ ತೊಡಗಿದನು ಜಯ ಜಯ 35 ಲಾಜತೊಂಡಿ[ತಂಡು?]ಲ ಆಹುತಿಗೊಟ್ಟು ಪೂಜಿಸಿದನೆ ವಿಘ್ನೇಶ್ವರನ ರಾಜವದನೆಯ ಒಡಗೊಂಡು ರಾಘವ ಪೂಜಿಸಿದನೆ ಋಷಿಮುನಿವರರ ಜಯ ಜಯ 36 ಇಂದ್ರಾದಿ ಮುನಿಗಳು ಕೈಹೊಡೆದು ಚಂದ್ರ ಸೂರ್ಯರು ಉಘೇಉಘೇಯೆನಲು ಮಂದಾರ ಮಲ್ಲಿಗೆ ಮಳೆಗಳ ಕರೆದರು ಅಂದದಿ ಸುರಜನರೆಲ್ಲರಾಗ ಜಯ ಜಯ 37 ಅರಳುವ ಕೆಂದಾವರೆ ಕುಸುಮ ಪರಿಮಳ ಸುರಮ್ಯ ಕಣ್ಗೆಸೆಯೆ ಎರಗುವ ಮರಿದುಂಬಿಗಳಂತೆ ರಾಘವ ಕರಗಳ ಪಿಡಿದೆÀತ್ತಿದ ಸತಿಯ [ಜಯ ಜಯ] 38 ಇಳೆಯ ಜಗಂಗಳನುದರದಲಿ ಅಳವಡಿಸಿದ ಮಹಾತ್ಮಕನು ಇಳೆಯ ಮಗಳನು ಎತ್ತಲಾರದೆ ರಾಮ ಬಳಲಿದನೆಂದು ನಕ್ಕರು ಜನರು ಜಯ ಜಯ 39 ಪರಾಕು ಸ್ವಾಮಿ ಪರಾಕು ದೇವ ಪಾದ ಎಚ್ಚರಿಕೆ ಸೀತಾಪತಿ ರಾಮನೆ<
--------------
ಹೆಳವನಕಟ್ಟೆ ಗಿರಿಯಮ್ಮ
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸೀತಾಮನೋಹರ ವಿಠಲಾ | ಕಾಪಾಡೊ ಇವಳಾ ಪ ಮಾತುಮಾತಿಗೆ ನಿನ್ನ | ಸ್ಮರಣೆ ಸುಖ ಕೊಟ್ಟು ಅ.ಪ. ಮಂಗಳಾಂಗನೇ ಹರಿಯೇ | ಶೃಂಗಾರ ಮೂರುತಿಯೇಭಂಗಗೈ ಅಜ್ಞಾನ | ಸತ್ಸಂಗವನೆ ಕೊಟ್ಟುಸ್ವಾಂಗಾಯ ನಾಮ | ನೀಲಾಂಗ ಶ್ರೀ ಹರಿಯೆಕಂಗಳಿಂದಲಿ ಕಾಂಬ | ಹವಣೆಯನು ತಿಳಿಸೋ 1 ತರತಮಾತ್ಮಕ ಜ್ಞಾನ | ಹರಿಗುರು ಸದ್ಭಕ್ತಿಮರುತ ಮತ ದೀಕ್ಷೆಯನು | ಕರುಣಿಸೋ ಹರಿಯೇದುರಿತಾಳಿ ದುಷ್ಕರ್ಮ | ಪರಿಹರಿಸಲೀವಳಿಗೆಪರಮ ಆನಂದವನೆ | ಕರುಣಿಸೊ ಹರಿಯೇ 2 ಪೇಳ್ವುದೆನಿಹುದೆನಗೆ | ಸರ್ವಜ್ಞ ನೀನಿರುವೆಭವದಿಂದ ಕಡೆಗಿತ್ತು | ಪವನಂತರಾತ್ಮಈ ವಿಧದಭಿನಿಪವ | ನೀವೊಲಿದು ಸಲಿಸೆಂದುದೇವ ಪ್ರಾರ್ಥಿಪೆ ಗುರು | ಗೋವಿಂದ ವಿಠಲಾ 3
--------------
ಗುರುಗೋವಿಂದವಿಠಲರು
ಸೀಸಪದ್ಯ ಮಕರ ಭಾದೆಗೆ ಸಿಲುಕಿ ಕರಿರಾಜ ತಾ ಕರೆಯೆ ಭರದಿ ನೀ ಬಂದೆ ತಂದೆ ಭಾಧಿಸುತಿರಲು ಕಂದ ಪ್ರಹ್ಲಾದನನು ಸಂದೇಹವಿಲ್ಲದೆಲೆ ಬಂದು ಕಾಯ್ದೆ ವಿಪಿನದಲಿ ಧ್ರುವರಾಯ ತಪವಗೈಯುತಲಿರಲು ಕೃಪೆಯಿಂದ ಮೈದೊರ್ದೆ ಕೃಪಣವತ್ಸಲನೇ ಮರಣ ಕಾಲದಿ ಮಗನ ಕರೆದಜಾಮಿಳನಂದು ಕರುಣದಿಂದಲಿ ಪೊರೆದೆ ಕರುಣ ಶರಧೆ ದುರುಳ ಸೆರಗ ಸೆಳೆಯುತಿರೆ ನೊಂದು ಚೀರಿಡಲಕ್ಷಯಾಂಬರವನಿತ್ತೆ ಇಂದು ನೀನಲ್ಲದೆಲೆ ಕಾಯ್ವರಿನ್ನಾರಿಹರು ತಂದೆ ನೀ ಮೈದೋರು ಶ್ರೀ ಕರಿಗಿರೀಶ
--------------
ವರಾವಾಣಿರಾಮರಾಯದಾಸರು
ಸೀಸಪದ್ಯ ಸುಂದರಾಂಗನ ಪಾದಕೊಂದಿಸುತ ಭಕ್ತಿಯಲಿ ಮಂದರೋದ್ಧಾರ ಮುಚುಕುಂದ ವರದ ನೆಂದು ಸ್ತುತಿಸುವ ಭಕ್ತವೃಂದವನು ರಕ್ಷಿಸುವ ಕುಂದನೆಣಿಸದಲೆ ನಾರಸಿಂಹ ಹರಿಯು 1 ಇಂದಿರಾರಮಣಗೆ ಜಯ ಗೋವಿಂದ ಗೋಪಕುಮಾರ- ನೆಂದವರ ಬಂಧನವ ಬಿಡಿಸಿ ಕಾಯ್ವ ಕಂದರ್ಪಜನಕ ಕಮಲಾಕ್ಷ ಹರಿ ಗತಿ ಎನುತ ಬಂದವನ ಕೈ ಬಿಡನು ಇಂದಿರೇಶ 2 ದುಂದುಭಿ ವತ್ಸರದಿ ಸುಜನರೆಲ್ಲ ತಂದೆ ಕಮಲನಾಭ ವಿಠ್ಠಲನೆನುತ ಒಂದೆ ಮನದಲಿ ಭಜಿಸಿ ಸ್ತುತಿಪ ಜನರ ಚಂದದಲಿ ಕಾಯ್ವ ನಾರಸಿಂಹ ಹರಿಯು3
--------------
ನಿಡಗುರುಕಿ ಜೀವೂಬಾಯಿ
ಸುಖದಕ್ಕಿತೇ | ಸುಖದಕ್ಕಿತು ಗುರುದಯ ಲೆಕ್ಕಾ ಪ ಕಂಡವರ ಮಾತಿಗೆ ಮನವಿಟ್ಟು ಜಗದೊಳು | ಹಿಂಡದೈವಕ ಬಾಯಿದೆರುತ್ತಿದ್ದೆನೆ | ಮಂಡಿಯ ಮ್ಯಾಲೆನ್ನಾ ಕರವಿಟ್ಟು ಹೊಳೆವಾ ಪಿಂಡಾಂಡದಿ ಗಂಡನ ತೋರಿದನಕ್ಕ 1 ಇಲ್ಲೆಂಬ ಸಂಶಯ ಹೋಯಿತು ಒಳಹೊರ | ಗೆಲ್ಲೆಲ್ಲಿ ನೋಡಲು ತಾನಾದನೇ | ಫುಲ್ಲನಾಭನ ಕೂಡಿ ತನುಭಾವ ಮರದು | ಕೈವಲ್ಯ ಮಂದಿರ ಸಾರಿದೆನಕ್ಕಾ 2 ಏನ ಹೇಳಲಿ ಆಡು ತಾಡುತಾ ಯಡಹಿನಿ | ಧಾನವ ಕಂಡಂತಾಯಿತೇ | ಮಾನುಭಾವರಸಾದ ತಂದೆ ಮಹಿಪತಿ | ತಾನೊಲಿದೆನ್ನನುದ್ಧರಿಸಿದನಕ್ಕಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸುಖದಿ ಜೀವಿಸು ಬಾಲೆ ಸುಗುಣ ಶೀಲೆ ಸುಖದಿ ಜೀವಿಸು ಬಾಲೆ ಪ ಸುಖದಿ ಜೀವಿಸು ಬಾಲೆ | ಸುಕುಮಾರಿ ಗುಣಲೀಲೆ ರುಕುಮಿಣೀಶನ ಭಕುತಳೆನಿಸಿದ ಸಖುದೇವಿಯಂತೆ ಸಕಲ ಭಾಗ್ಯದಿ ಅ.ಪ ಭೂಸುರೋತ್ಮರಿಂದಲಿ | ಗುರುಮಂತ್ರೋಪ ದೇಶವಗೊಳ್ಳುತಲಿ | ಪ್ರತಿದಿವಸ ತಪ್ಪದೆ ಬ್ಯಾಸರಿಯದೆ ಹರುಷದಲಿ | ಸದ್ಭಕ್ತಿ ಪೂರ್ವಕ ದಾಸರ ಪದ ನಿತ್ಯದಲಿ | ನೀ ಪಾಡುತಲಿ ಸುಜನ ವೃಂದಕೆ ದೂಷಿತ ಬಹು ದೋಷಕಂಜುತ ವಾಸುದೇವನ ವಾಸರದಿ ಉಪ ವಾಸವನು ಲೇಸಾಗಿ ಮಾಡುತ 1 ಭಾವ ಭಕುತಿಲಿರುವ | ಗೋ ತುಳಸಿ ವೃಂದಾವನ ಪೂಜಿಸುತ | ವಿನಯದಿ ಅತ್ತಿ ಪತಿ ಪರ ದೇವನು ಎಂದೆನುತ | ಸಲೆ ಸೇವಿಸುತ್ತ ಕಾಲ ಕಪಟ ಮತಿಗಳ ಠಾವಿಗ್ಹೋಗದೆ ಪರರ ಒಡವೆಯ ಬೇವಿನಂದದಿ ಭಾವಿಸುತ ಸಂ ಭಾವಿತಳು ನೀನಾಗಿ ಜಗದೊಳು 2 ಮಂದ ಮತಿಯರ ಕೂಡದೆ | ಎಂದೆಂದಿಗು ಪರ ನಿಂದೆ ಮಾತುಗಳಾಡದೆ ಅವರೊಲುಮೆಯಿಒಂದಲಿ ಪಡಿ ಪ್ರೇಮದಿ | ಸಂದೇಹ ಪಡದೆ ತಂದೆ ತಾಯಿಗೆ ಕುಂದು ತಾರದೆ ನಂದ ಕಂದ ಮುಕುಂದ ಶಾಮ ಸುಂದರನ ಶುಭನಾಮ ಬಿಡದಲೆ ಒಂದೆ ಮನದಲಿ ಧ್ಯಾನಿಸುತ ಚಿರ 3
--------------
ಶಾಮಸುಂದರ ವಿಠಲ