ಒಟ್ಟು 8337 ಕಡೆಗಳಲ್ಲಿ , 130 ದಾಸರು , 4215 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನನಗೆ ಮನಕೆ ಬಡಿದಾಟೆಳೆದಾಟ ಶ್ರೀಸನಕಾದಿವಂದ್ಯ ಬಿಡಿಸಿ ಕಾಯೊದಾತಪ.ಸಲಿಲಸ್ನಾನವ ಮಾಡಿ ಊಧ್ರ್ವ ತಿಲಕವನಿಟ್ಟುನಳಿನಾಕ್ಷ ನಿನ್ನಂಘ್ರಿ ಜಪಿಸೆಂದರೆಛಲದಿಂದ ವಿಹಿತವಲ್ಲದ ದಾರಿಗೊಯ್ದೆನ್ನತೊಳಲಿಸಿ ನೆಲೆಗಾಣಿಸದೆ ಛಲವಿಡಿದಿದೆ 1ಬೇಡಿಕೊಂಡರೆ ಕೇಳದಾಡಿಕೊಂಡರೆ ಕೇಳದೀಡಾಡಿ `ಬಿಸುಟೆನ್ನ ದಣಿಸುತಿದೆನೋಡುನಾನಾಕ್ರೋಶ ಮಾಡಿದರಂಜದುಬಾಡಿ ಬಳಲಿದೆನೆನ್ನ ಕರುಣಿಲ್ಲವಿದಕೆ 2ಮನಪಶುಕಟ್ಟಲು ಜ್ಞಾನಧಂಗಡವಿಲ್ಲಘನವೈರಾಗ್ಯದ ಕಟ್ಟು ದೃಢವಿಲ್ಲವುಮಿನುಗುವ ಭಕುತ್ಯೆಂಬ ಎಳೆಹುಲ್ಲಿನಾಸಿಲ್ಲನೀನೆ ವಶಮಾಡಿಕೊ ಪ್ರಸನ್ವೆಂಕಟೇಶ 3
--------------
ಪ್ರಸನ್ನವೆಂಕಟದಾಸರು
ನಂಬದಿರು ಈ ದೇಹ ನಿತ್ಯವಲ್ಲ |ಅಂಬುಜಾಕ್ಷನ ಭಜಿಸಿ ಸುಖಿಯಾಗು ಮನವೇ ಪ.ಎಲು ರಕ್ತ ಮಾಂಸಗಳ ಮೇಲೆ ಚರ್ಮದ ಹೊದಿಕೆ |ಮಲಮೂತ್ರ ಒಳಗೆ ಕ್ರಿಮಿರಾಶಿಯಿಹವು ||ಹಲವು ವ್ಯಾಧಿಯ ಬೀಡು ಪಂಚಭೂತದ ನಾಡು |ಹುಲುದೇಹವನು ನೆಚ್ಚಿ ಕೆಡಬೇಡ ಮನವೆ 1ಸತಿಸುತರು ಹಿತರೆಂದು ಮತಿಮರೆತು ಮಮತೆಯಲಿ |ಅತಿಕಾಂಕ್ಷಿಯಿಂದ ದುರ್ವಿಷಯ ಬಲಿದು ||ಸತತ ಲಕ್ಷ್ಮೀಪತಿಯ ಶರಣೆನದೆ ಇಹಪರದ |ಗತಿಶೂನ್ಯನಾಗಿ ಕೆಡಬೇಡ ಮನವೆ 2ಪರರ ನಿಂದಿಸದೆ ಪರವಧಗಳನು ಬಯಸದೆ |ಗುರು - ವಿಪ್ರಸೇವೆಯನುಮಾಡು ಬಿಡದೆ ||ಹರಿಸ್ತುತಿಯ ನೀ ಕೇಳು ಹರಿಕೀರ್ತನೆಯ ಪಾಡು |ಪರಮಪುರಂದರವಿಠಲನೊಲಿದು ಪಾಲಿಸುವ3
--------------
ಪುರಂದರದಾಸರು
ನಂಬಬೇಡ ನಾರಿಯರನುಹಂಬಲಿಸಿ ಹಾರಯಿಸಬೇಡಅಂಬುಜಾಕ್ಷಿಯರೊಲುಮೆ ಬಯಲುಡಂಬಕವೆಂದು ತಿಳಿಯಿರೊ ಪ.ನೋಟವೆಲ್ಲ ಪುಸಿಯು - ಸತಿಯರಾಟವೆಲ್ಲ ಸಂಚು - ಸನ್ನೆಕೂಟವೆಲ್ಲ ಗನ್ನ - ಘಾತುಕನೋಟವೆಲ್ಲ ವಂಚನೆವಾತಬದ್ಧ ಹೆಂಗಳಲ್ಲಿಕೋಟಲೆಗೊಂಡು ತಿರುಗಬೇಡಮಾಟಗಾತಿಯರೊಲುಮೆ ಬಯಲುಬೂಟಕವೆಂದು ತಿಳಿಯಿರೊ 1ಸೋತನೆಂದು ವಿಟಗೆ ದೈನ್ಯಮಾತನಾಡಿ ಮರುಳಗೊಳಸಿಕಾತರವ ಹುಟ್ಟಿಸಿ ಆವನಮಾತೆ - ಪಿತರ ತೊಲಗಿಸಿಪ್ರೀತಿ ಬಡಿಸಿ ಹಣವ ಸೆಳೆದುರೀತಿಗೆಡಿಸಿ ಕಡೆಯಲವನಕೋತಿಯಂತೆ ಮಾಡಿ ಬಿಡುವಚಾತಿಕಾರ್ತಿ ಹೆಂಗಳೆಯರ 2ಧರೆಯ ಜನರ ಮೋಹಕೆಳಸಿಭರದಿ ನೆಟ್ಟು ಕೆಡಲುಬೇಡಎರೆಳೆಂಗಳ ಹೆಂಗಳೊಲುಮೆಗುರುಳೆ ನೀರ ಮೇಲಿನಮರೆಯಬೇಡ ಗುರುಮಂತ್ರವಸ್ಥಿರವಿಲ್ಲದ ಜನ್ಮದಲ್ಲಿಕರುಣನಿಧಿ ಪುರಂದರವಿಠಲನಚರಣಸ್ಮರಣೆ ಮಾಡಿರೊ3
--------------
ಪುರಂದರದಾಸರು
ನಂಬಿದೆ ನಿನ್ನ ಶಾಂಭವೀಸುತಲಂಬೋದರ ಗುರುವರ ಧವಳಾಂಬರಾವೃತ ಪ.ವಿಘ್ನಭಂಜನ ವಿಶ್ವರಂಜನಮಗ್ನಗೈಸಬೇಡ ಭವದಿ ನಿರ್ಗತಾಂಜನ 1ಭಾರಯಾರದು ವಿಘ್ನಹಾರಿಸುವದುಭಾರತಾರ್ಥ ಭಾಸ್ಕರಾಚಾರ್ಯ ನಿನ್ನದು 2ರಕ್ಷಣೀಯನೆ ಮುಮಕ್ಷುಪ್ರಿಯನೆಲಕ್ಷ್ಮೀನಾರಾಯಣಾಂಘ್ರಿ ಲಕ್ಷಿತಾತ್ಮನೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಮಿಸೊ ಗಂಧವಹಗೆ ಪ್ರತಿದಿನ ನಿನ್ನ |ಶ್ರಮವ ಕಳೆದು ಅಭೀಷ್ಟಿಯ ಕೊಡುವ ಮನುಜ ಪಹರಿಕರುಣಿಸದಿರೆಗುರುಕರುಣಿಸುವನು |ಗುರುಕರುಣಿಸದಿರೆಹರಿಜರೆವ ||ಧರೆಯೊಳು ವಾತಪ್ರಸಾದ ಸಂಪಾದಿಸಿ |ಶಿರಿವಲ್ಲಭಗೆ ಬೇಕಾದವರ ಕೇಳು ಮನುಜ 1ಹನುಮನೊಲಿದನೆಂದು ಒಲಿದ ಸುಗ್ರೀವಗೆ |ಮನಸಿಜಪಿತನು ತನ್ನಯಚರಣ|ಘನವಾಹ ಸುತ ಭಜಿಸಿದರಿನ್ನವಗೆ ಪ್ರಭಂ |ಜನನೊಲಿಯದಕೆ ಕೊಂದನು ಕೇಳೆಲೊ ಮನುಜ 2ದುರ್ಜನಾಂತಕಗೆ ಬೇಕಾದ ಕಾರಣದಿಂದ |ಅರ್ಜುನಾದಿಗಳು ಸುಖವ ಬಿಟ್ಟರು ||ಅಬ್ಜಾಪ್ತಸುತ ಅಸಮರ್ಥನೆ ರಣದೊಳು |ನಿರ್ಜಿತನಾಗಲು ತಿಳಕೊ ಇದು ಮನುಜ 3ಸುರರೆಲ್ಲ ಕೂಡಿ ನ್ಯಾಯವ ಮಾಡಿ ನೋಡಲು |ಸರಿಯಾಗಲಿಲ್ಲವು ಮಾರುತಗೆ ||ಗಳವುದ್ಭವಿಸಲುಮಥನಕಾಲದಿ ಆದಿತ್ಯರ |ಮೊರೆಕೇಳಿಪ್ರಾಶನ ಮಾಡಿದ ಮನುಜ 4ಶಮೆಯಲ್ಲಿ ದಮೆಯಲ್ಲಿ ಸರ್ವಗುಣದಲ್ಲಿ |ಪವಮಾನಗೆ ಸರಿಯುಂಟಾವನು ಜಗದಿ ||ಅಮಲ ಪ್ರಾಣೇಶ ವಿಠಲಗಲ್ಲದವನು |ಯಮ ಸದನಕೆ ಯೋಗ್ಯ ಯಮಗಲ್ಲೆಂಬ ಮನುಜ 5
--------------
ಪ್ರಾಣೇಶದಾಸರು
ನಮೋ ನಮೋ ರಾಮ ಕಳುಹಿಸಿದನಮ್ಮಾ |ಮಮ ಸ್ವಾಮಿ ಬದುಕಿಹನೆ ಪೇಳೋ ತಮ್ಮ ಪವಾಸುದೇವನು ಜಗದ ಸೃಜಿಸುವನು ಕೆಡಿಸುವನು |ನಾಶವೆಲ್ಲಿಹದು ರಘುವರ್ಯಗಮ್ಮಾ ||ವಾಸವಾಗಿರೆ ವನದಿಮೃಗತರಲು ಪೋಗಿ ಜಗ- |ದೀಶ ನುಡಿದನು ಕಡೆಯ ಮಾತು ತಮ್ಮ 1ಖಳಮಾಯೆಯಲಿ ಬರಲು ರಾಘವನು ಸಂಹರಿಸೆ |ನೆಲಕುರುಳಿ ಕೂಗಿದನು ಅವನೇ ಅಮ್ಮಾ ||ಬಲುವಿಂದ ಲಕ್ಷ್ಮಣನ ಬೈದು ಅಟ್ಟಿದೆ ನಾನು |ಜಲಜಾಕ್ಷನೋರ್ವನಿಹನೇನೋ ತಮ್ಮ 2ಅನುಜಯುಕ್ತದಿ ದೇವ ಕಪಿದಂಡು ನೆರಹಿಹನು |ಹನುಮಂತ ನಾ ರಾಮದೂತನಮ್ಮಾ ||ಇನಿತು ಸತ್ಯವೊ ಅನೃತವೊ ನಂಬಿಗ್ಯಾಗದು |ಮನದ ಅನುಮಾನ ಬಿಡುವಂತೆ ಮಾಡೋ ತಮ್ಮ 3ಸಿರಿಕಾಂತ ಶ್ರೀಮಂತ ಕರುಣದಲಿ ಕೊಟ್ಟಿಹನು |ಗುರುತಿನುಂಗುರವನಿದು ನೋಡಿರಮ್ಮಾ ||ಪರಮಾತ್ಮನಿಗೆ ದೂತನಹುದುಶುಭವಾರ್ತೆಗಳೆ |ಇರುವನೆಲ್ಲೆದು ವಿಸ್ತರಿಸೆಲೊ ತಮ್ಮಾ 4ಕಾನನದೆ ಚರಿಸುತ ರವಿಸುತಗೊಲಿದು ಶುಕ್ರಜನ |ಹಾನಿ ಮಾಡಿದನಲ್ಲೇ ಇರುವನಮ್ಮಾ ||ಜಾನಕಿಯೆಂದೆನ್ನನು ನಿತ್ಯದಲಿ ನೆನೆಸಿ |ಏನು ಮಾಡುವನೊ ಪೇಳುವದೋ ತಮ್ಮ 5ನಿನ್ನಗಲಿ ವ್ಯಾಕುಲದಿ ನರರಂತೆ ಕೇಶವನು |ಅನ್ನ ಉದಕವನೆಲ್ಲಾ ಜರಿದನಮ್ಮಾ ||ಪನ್ನಗಾರಿ ಧ್ವಜನು ದನುಜರ ಗೆಲಿದು |ಯನ್ನ ಕೂಡುವದು ನಾ ಕಾಣೆ ತಮ್ಮ 6ತಾಯೆ ರಾವಣನಳಿದು ನಾನೊಯ್ವೆ ನಿನ್ನೀಗ |ನೋಯಿಸದೆ ಹರಿಗೀಡು ಆವನಮ್ಮಾ ||ನಾಯಕನು ನೀಂ ಭೃತ್ಯರೊಳು ತ್ವರಿತ ಬಹುದೆಂದು |ಕಾಯಜಪಿತನಿಗೆ ಬಿನ್ನೈಸೊ ತಮ್ಮ 7ಪೋಗಿ ಬರುವೆನು ನಿಮ್ಮ ಗುರುತು ಏನಿದೆ ಕೊಟ್ಟು |ಬೇಗನಪ್ಪಣೆಯೆನಗೆ ಈವದಮ್ಮಾ ||ನಾಗಶಯನಗೆ ರಾಗಟೆಯನಿತ್ತು ಪದಕೆ ತಲೆ |ಬಾಗಿರುವಳೇಳದಲೆಯೆನ್ನೋ ತಮ್ಮ 8ನಳಿನಮುಖಿಯೆ ನಮೋ ನಮೋ ದಯೆಯಿರಲಿ ಸ್ವಲ್ಪ ದಿನ |ದೊಳಗೆ ಬರುವೆವು ಚಿಂತೆ ಬೇಡವಮ್ಮ ||ಭಳಿ ಭಳಿರೆ ಪ್ರಾಣೇಶ ವಿಠ್ಠಲನ ಪೂರ್ಣ ದಯೆ |ಗಳಿಸಿ ಅಜಪಟ್ಟವನು ಆಳೋ ತಮ್ಮ 9
--------------
ಪ್ರಾಣೇಶದಾಸರು
ನಮೋ ನಮೋ ಶ್ರೀ ಭೀಮ | ನಮೋ ನಮೋ ಜಿತಕಾಮ |ಕಮಲಾಕ್ಷ ದಾಸ | ಪೊರೆಯಬ್ಜಾಪ್ತ ಭಾಸ ಪಘನಗಿರಿಯೊಳಗೆ ಕುಂತಿ ನಿನ್ನೆತ್ತಿಕೊಂಡಿರಲು |ಧ್ವನಿ ಮಾಡೆ ಹುಲಿ ತಾಯಿ ನಡುಗಿ ಬಿಸುಟೀ ||ತನುವು ನಿನ್ನದು ಸೋಂಕೆ ನಗವೊಡೆದು ಶತಶೃಂಗ- |ವೆನಿಸಿಕೊಂಡಿತೋ ದ್ವಾಪರದಿ ಬಲವಂತ 1ಲೋಕದೊಳು ಮನುಜರಾ ಶಿಶುಗಳಂದದಿ ಬೆಳೆದು |ಪಾಕಶಾಸನಿ ಯಮಜ ಯಮಳರ ಜನನೀ |ಯಾ ಕೂಡಿಕೊಂಡು ಇಭಪುರಿಗೈದಿ ಮೋದದಲಿ |ಸಾಕಿಕೊಂಡೆಯಂಬಿಕೆಯ ಮಗನಿಂದಾ 2ಚಿಕ್ಕವರೊಡನೆ ಚಂಡು ಬುಗುರಿ ಈಸಿರೆ ಓಟ |ತೆಕ್ಕೆ ಮುಷ್ಟಿ ಮರಗಳನೇರುವಲ್ಲಿ ||ಸೊಕ್ಕಿದವನಿವನೆಂದು ಆವಾಗಲೆಲ್ಲರಿಗೆ |ಬಿಕ್ಕಿ ಬಾಯ್ದೆರೆವಂತೆ ಮಾಡಿ ತೋರಿಸಿದೆ 3ಅಹಿತರಾದವರು ನೀರೊಳಗೆ ಕೆಡಹಲು ಎದ್ದೆ |ಅಹಿಗಳಿಂ ಕಟ್ಟಿಸಲು ನೋಯದಿದ್ದೆ ||ಸಹಿಸದಲೇ ವಿಷಹಾಕಿ ಬದುಕಲ್ಕೆ ಹೊರಘಾಕೆ |ಮಹಮೋಸ ಮಾಡೆ ಗೆದ್ದು ಧರಿಯೊಳು ಮೆರೆದೆ 4ಸೋಕಿಯಸುರಿಯ ಮಗನ ಪಡೆದು ಖಲನನು ತರಿದು |ಏಕಚಕ್ರ ನಗರದಲ್ಲಿದ್ದು |ಬೇಕೆಂದು ನೀನಾಗಿ ಪೋಗಿ ಬಕನನು ಕೊಂದೆ |ಈ ಕುಂಭಿಣೀಯೊಳು ನಿನಗಿದಿರಾರು ದೇವಾ 5ಪಾಂಚಾಲಿಯನು ಗಳಿಸೆ ಕೋಪದಿಂ ಬಂದಹರಿ|ವಂಚಕರ ದರ್ಪವ ಭಂಗಿಸಿ ಲೀಲೆಯಿಂ |ಮಿಂಚುವಾ ಗದೆಲಿಹ ನಿಶ್ಚಿಂತ ಬಲವಂತ |ಮುಂಚಿನಜ ಪ್ರಣತ ಸುರಭೂಜ ರವಿತೇಜ 6ಈ ಪರಿಯಿಂದ ಕೆಲಕಾಲವಲ್ಲೆಲ್ಲ |ಕಾಪಾಡಿ ವಜ್ರಿಪ್ರಸ್ಥಕೈ ತಂದು ||ಪಾಪಿ ಜರಿಜನ ಕೊಂದು ರಾಜಸೂಯವ ಮಾಡಿ |ನೀಂ ಪಾಲಿಸಿದೆಯವನಿ ಸದ್ಧರ್ಮದಿಂದ 7ದ್ಯೂತವಾಡಿದ ಸಮಯದಲ್ಲಿ ದ್ರೌಪದಿಯಳನು |ಪಾತಕಿವಸವೆಳೆಯೆ ಕೋಪದಿಂದ ||ಘಾತಿಸುವೆನೆಂದಬ್ಬರಿಸಿ ಪಲ್ಗಡಿದು ಲಕ್ಷ್ಮೀ |ನಾಥನಿಚ್ಛೆಂಗೆ ಈಗೇಂದು ಕೈಮರೆದೇ 8ತಮೋ ಯೋಗ್ಯನಾ ಪಾಪಪೂರ್ಣದಾಹದಕೆ ಬ- |ಹು ಮಿತಿಯಿಂದ ವನವಾಸ ಪತ್ಕರಿಸಿದೆ ||ಸಮರಾಂಗಣದೊಳಿವರ ಹೀಗೆ ಸವರುವೆನೆಂದು |ಸುಮನಸಾರಾಧ್ಯ ಬಾಹುಗಳೆತ್ತಿ ನಡೆದೆ 9ಕಾನನದಿ ಕಿರ್ಮೀರನಂ ಕೊಂದು ಋಷಿಯಿಂದ |ಮಾನವಂ ಕೈಕೊಂಡು ಮತ್ತೆ ಮುಂದೆ ||ಆ ನಗದಿ ಬಹುಕಾಲ ಸೇರಿಕೊಂಡಿದ್ದಂಥ |ದಾನವರ ಮಡುಹಿ ಸೌಗಂಧಿಕವ ತಂದೆ 10ನಿನ್ನೊಳಗೆ ನೀಂ ಲೀಲೆ ಮಾಡಿದ್ಯಾ ಸಮಯದಲಿ |ಚಿನ್ನದೋಪಮ ಪುಷ್ಪವೊಂದು ಬೀಳೆ ||ನಿನ್ನರಸಿಯಿದು ಎನಗೆ ಇಷ್ಟವೆನಲವಳ ನುಡಿ |ಮನ್ನಿಸುತೆ ಪೋಗಿ ಮಣಿಮಂತನೊಂಚಿಸಿದೆ 11ದ್ವೈತ ವನದೊಳು ಬಂದುಮೃಗಬೇಟೆಯಾಡೆ ಪುರು |ಹೂತ ಪದವಾಳ್ದವನು ಮೆಯ್ಯ ಸುತ್ತಲ್ ||ನೀತವಕಬೀಳದೆ ಅವನ ಪುನೀತನ ಮಾಡಿ |ಖ್ಯಾತಿ ತಂದಿತ್ತೆಯಂತಕನ ಸುತಗಂದು 12ಮತ್ಸ್ಯ ದೇಶಾಧಿಪನ ಮನೆಯಲ್ಲಿ ಇದ್ದಾಗ |ಹೆಚ್ಚಿನಾ ಬಲದ ಮಲ್ಲನ ಕೆಡಹಿದೆ ||ಅಚ್ಚ ಪಾಪಾತ್ಮ ಕೀಚಕನನ್ವಯ ತಂದೆ |ಅಚ್ಯುತನ ನಿಜದಾಸ ಭಕ್ತರಘನಾಶ 13ಎಂಟೈದು ವರುಷ ಈ ರೀತಿಯಲಿ ಕಳೆದು ವೈ- |ಕುಂಠಪತಿ ದಯದಿಂದ ಉಪಪ್ಲಾವ್ಯದಿ ||ಗಂಟು ಹಾಕಿದಿ ದುರಾತ್ಮನ ಕೂಡ ಸಂಗರಕೆ |ಕಂಠೀರವರವದಿಂ ತಲೆದೂಗಿ ನಡೆದೆ 14ಮುತ್ತೆ ಭೀಷ್ಮಗೆ ವಂದು ಸ್ವಲ್ಪಮಾತ್ರಕೆಮಾನ|ವಿತ್ತಂತೆ ತೋರಿ ಎಲ್ಲರ ರಥವನೂ |ಕತ್ತರಿಸಿ ಹಿಂದಕ್ಕೋಡಿಸಿದೆ ನಿನ್ನಾರ್ಭಟಕೆ |ಹತ್ತು ದಿಕ್ಕಿನೊಳೊಬ್ಬರಿದಿರಾಗಲಿಲ್ಲ 15ಪ್ರಹ್ಲಾದನವತಾರ ಬಾಹ್ಲೀಕನನು ಗೆದ್ದು |ಮಹೀಜಸುತನಾನಿಮಸ್ತಕಶೀಳಿದೆ ||ಬಹುಖೋಡಿಧಾರ್ತರಾಷ್ಟ್ರರ ಕೊಂದು ಹರೆಬಿಟ್ಟ |ಅಹಿಯಂತೆ ರಣರಂಗದಲ್ಲಿ ಸಂಚರಿಸಿದೆ 16ಕಡು ಕೋಪದಿಂದ ಹೂಂಕರಿಸಿಯುರಿಯುಗುಳುತಲಿ |ಪೊಡವಿ ನಡುಗಿಸಿನಭಬೇಯಿಸುತ್ತಲಿ ||ಪಿಡಿದು ದುಶ್ಶಾಸನನ ತೊಡೆಯಲ್ಲಿ ನೆರೆಗೆಡಹಿ |ಒಡಲ ಛೇದಿಸಿ ರಕ್ತಮಜ್ಜನವಗೈದೆ 17ಕರುಳ ದಂಡೆಯ ಮಾಡಿ ಅರಸಿ ಮಂಡೆಗೆ ಮುಡಿಸಿ |ಖರೆಯ ಮಾಡಿದೆ ಉಭಯತರ ಶಪಥವ ||ಕರೆದೆ ಕುರು ಪಾಂಡವರ ಬಿಡಿಸ ಬನ್ನೀರೆಂದು |ಮರುಳಗೊಂಡರೆಲ್ಲ ನಿನ್ನರೂಪನೋಡುತಲಿ 18ಸ್ವಾಮಿ ಪ್ರಾಣೇಶ ವಿಠಲನ ಆಜೆÕಯ ವಹಿಸಿ |ಭೂಮಿ ಭಾರಿಳುಹುದಕೆ ಅವತರಿಸಿದೆ ||ನಾ ಮಾಡುವೆನೆ ಪೂರ್ತಿ ನಿನ್ನ ಮಹಿಮೆಯ ಸಮರ |ಭೀಮಕರಪಿಡಿದು ಸಲಹುವದೋ ಪ್ರತಿದಿನದಿ 19
--------------
ಪ್ರಾಣೇಶದಾಸರು
ನರನಾದ ಮೇಲೆ |ಹರಿನಾಮ ಜಿಹ್ವೆಯೊಳಿರಬೇಕು ಪ.ಭೂತದಯಾಪರನಾಗಿರಬೇಕು |ಪಾತಕವೆಲ್ಲವ ಕಳೆಯಲು ಬೇಕು |ಮಾತು - ಮಾತಿಗೂಹರಿಎನಬೇಕು1ವೇದ - ಶಾಸ್ತ್ರಗಳನೋದಲು ಬೇಕು |ಭೇದಾಭೇದವ ತಿಳಿಯಲು ಬೇಕು |ಸಾಧು - ಸಜ್ಜನರ ಸಂಗದೊಳಿರಬೇಕು 2ತಂದೆ - ತಾಯಿಗಳ ಸೇವೆಯು ಬೇಕು |ಬಂದುದನುಂಡು ಸುಖಿಸಲು ಬೇಕು |ತಂದೆ ಪುರಂದರವಿಠಲನ ದಯೆಬೇಕು 3
--------------
ಪುರಂದರದಾಸರು
ನರರ ಪಾಡಲು ಬೇಡ ನಾಯಿ ಮನವೆಮುರಹರನ ಭಕುತಿನೆಲೆ ಹೊಂದು ಮನವೆ ಪ.ದಾರಿದ್ರ್ಯ ವ್ಯಸನದೊಳು ಮುಳುಗಿ ನರಧನಿಕರನುಆರಾಧನೆಯ ಮಾಡಿ ಬರಿದೆ ಕೆಡುವೆಘೋರನರಕದ ಭಯಗಳನು ನೋಡೈ ತಿಳಿದುನಾರಸಿಂಹನ ನಂಬು ದೃಢದಿ ಮನವೆ 1ಬಲ್ಲಿದರ ಬಳಿವಿಡಿದು ಪೋಗಿ ಭ್ರಮೆಗೊಳ್ಳದಿರುಭುಲ್ಲೈಸಿ ಬಳಲಿಮೃಗತೃಷೆಯಂದದಿಫುಲ್ಲಲೋಚನ ಹರಿಯ ದಾಸರನು ಅನುಸರಿಸಿಸೊಲ್ಲುಸೊಲ್ಲಿಗೆ ಸುಧೆಯ ಸವಿದುಣ್ಣು ಮನವೆ2ಮದದಿ ಮತ್ಸರದಿ ಪ್ರಜ್ವಲಿಸುತಿಹ ದೇಹದಲಿಕುದಿಯದಿರುತ್ರಿವಿಧತಾಪದಲಿ ಉಕ್ಕಿಹದಿನಾಲ್ಕು ಭುವನದೊಡೆಯನ ನಂಬಿದರೆ ನಿನಗೆಪದವಿತ್ತು ಪೊರೆಯನೆ ಪೇಳು ಮನವೆ 3ಮಂದಮತಿಯಾಗಿ ಬಹುವಿಷಯ ಭ್ರಾಂತಿಯಲಿ ಮದಾಂಧರನೋಲೈಸಿ ಕೃಶವಾದರೆಮುಂದುಗಾಣದೆ ಖಳರು ನೋಯಿಸಿ ನುಡಿದರೆಕಂದಿ ಕುಂದಿ ಬಳಲುವೆಯಲಾ ಮರುಳು ಮನವೆ 4ಮುನ್ನಸಂಚಿತಸುಕೃತವೆಂತುಟೊ ತಂದೆ ಪ್ರಸನ್ನವೆಂಕಟಪತಿಯ ಒಲುಮ್ಯಾಯಿತುಇನ್ನಾದರೆಚ್ಚರಿತು ವಿವಿಧ ಭಕುತಿಯ ಗಳಿಸಿಧನ್ಯ ನೀನೆನಿಸಿ ಸಾರ್ಥಕವಾಗು ಮನವೆ 5
--------------
ಪ್ರಸನ್ನವೆಂಕಟದಾಸರು
ನರರ ವಂಚಿಸಿದನೆಂದೆಂಬ | ಪೌರುಷವೇಕೋ |ಹರಿಯ ವಂಚಿಸಲಸಾಧ್ಯವು | ನಿನಗೆ ಮರುಳೆ |ದುರುಳರೊಡನಾಟದಲಿ ದುಷ್ಟ ಕಾರ್ಯವಮಾಡು|ನರಕದಲಿ ಮುಳುಗಿಸುವ ಯಮನುನೋಡುಪಮೂಢ ಮತಿ ಕೇಳ್ ನರಗೆ ನೋಡಲೆರಡೇ ಕಣ್ಣು |ಗಾಢ ನಿದ್ರೆಯೊಳದನು ಮುಚ್ಚಿ ಮಲಗುವನೂ |ಗಾಢಾಂಧಕಾರದಲಿ | ಸೊಡರ ಹೊರತು ಕಾಣದದು |ರೂಢಿಯೊಳು ಸಹಸ್ರಾಕ್ಷ | ನನು ಮೋಸಗೊಳಿಸುವಾ |ಪಾಡೇನ ಬಲ್ಲೆ ಮರುಳೇ1ಎರಡೇಳು ಜಗವನ್ನು ಧರಿಸಿರುವ ಹೃದಯದಲಿ |ಗರುಡ ವಾಹನನಾಗಿ ಧರೆಯೊಳ್ ಚರಿಸುವನು |ತರಣಿಶಶಿನೇತ್ರನೆಂದೆನಿಸಿ ಸರ್ವವನೋಳ್ಪ |ಪರಮಾತ್ಮನಾಗಿ ಪ್ರಾಣಿಗಳ | ಹೃದಯದಲಿ |ಹರಿಯು ನೆಲೆಸಿರ್ಪ ಕೇಳು2ಇಂದೋರ್ವನನು ಮೋಸಗೊಳಿಸಿದಾ ದೋಷವಿದು |ಎಂದೆಂದಿಗೂ ನಿನ್ನ ಬೆನ್ನ ಬಿಡದೂ |ನಿಂದಿಗನು ನರಜನಕೆ ಗೋವಿಂದನಿಗೆ ದ್ರೋಹೀ |ಎಂದೆನಿಸಿ ಯಮನ ಹಂಗಿಗನಾಗಬೇಡ ನಾಳೆ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ನಲಿನಲಿದು ಬಾ ತ್ರಿಜಗದಾಂಬೆ ಪ.ಮಾನಸದೊಳು ಸುಜ್ಞಾನಬೋಧಳಾಗಿಆತನದೇವಕದಂಬೆ ಅ.ಪ.ವಿದ್ಯಾ ಬುದ್ಧಿ ವಿನಯ ಮಂಗಳಗಳಸಾಧ್ವಿ ನಿನ್ನಲಿ ಬೇಡಿಕೊಂಬೆ 1ನಲಿದೆನ್ನಯ ಜಿಹ್ವಾಗ್ರದಿ ನೆಲಸುತಸುಲಭದೋರೆಯೆ ಸುಲಲಿತವ ಶಿವೆ 2ಧೀರ ಲಕ್ಷ್ಮೀನಾರಾಯಣಾಶ್ರಿತೆ-ಪರಮೇಷ್ಠಿಪರಿರಂಭೆ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನವರತ್ನ ಖಚಿತ ಮಾಣಿಕ್ಯದ ಮಂಟಪದಿನವವಿಧದ ಹಂಸತೂಲಿಕ ತಲ್ಪದಲಿಭುವನಮೋಹನ ಶ್ರೀಹರಿಪವಡಿಸಿರಲುಕವಿಗಳು ಪೊಗಳಿ ಪಾಡುವರು ಶ್ರೀಹರಿಯೆಏಳಯ್ಯ ಬೆಳಗಾಯಿತು 1ನಾಗಶಯನನೆ ಏಳು ನಾಗಾರಿವಾಹನನೆನಾಗಸಂಪಿಗೆ ಪಾರಿಜಾತವರಳುತಿದೆಬೇಗದಲಿ ಭಾಗೀರಥಿ ಉದಕವನೆ ತಂದುನಾಗಕನ್ನಿಕೆಯರು ಕಾದು ನಿಂತಿಹರುಏಳಯ್ಯ ಬೆಳಗಾಯಿತು 2ಅತ್ರಿ ವಸಿಷ್ಠ ಭಾರದ್ವಾಜ ಗೌತಮರುಸುತ್ತೆಲ್ಲ ಋಷಿಗಳು ಸ್ತೋತ್ರವನೆ ಮಾಡುತ್ತಮಿತ್ರೆರುಕ್ಮಿಣಿ ಭಾಮೆರಿಂದ ಸೇವಿಪ ಹರಿಗೆಮುತ್ತಿನಾರತಿ ಪಿಡಿದು ನಿಂದಿಹರು ಹರಿಯೆಏಳಯ್ಯ ಬೆಳಗಾಯಿತು 3ಲಕ್ಷ್ಮಿರಮಣನೆ ಏಳು ಪಕ್ಷಿವಾಹನ ಏಳುಕುಕ್ಷಿಯೊಳು ಜಗವನಿಂಬಿಟ್ಟವನೆ ಏಳುರಕ್ಷ ಶಿಕ್ಷಕ ಜಗದ್ರಕ್ಷಕನೆ ನೀ ಏಳುಈಕ್ಷಿಸಿ ಭಜಕರನುದ್ದರಿಸಲೇಳುಏಳಯ್ಯ ಬೆಳಗಾಯಿತು 4ಕಮಲಮಲ್ಲಿಗೆ ಜಾಜಿಕುಸುಮಮಾಲೆಗಳನ್ನುಕಮಲಾಕ್ಷಿಗರ್ಪಿಸುತ ಹರುಷದಿಂದಕಮಲನಾಭ ವಿಠ್ಠಲ ಸಲಹು ಸಲಹೆಂದೆನುತಕಮಲಭವೇಂದ್ರಾದಿಗಳು ಸ್ತುತಿಸುವರು ಹರಿಯೆಏಳಯ್ಯ ಬೆಳಗಾಯಿತು 5ಏಳು ಧೃವವರರೂಪ ಏಳು ನರಹರಿರೂಪಏಳುನಗಧರರೂಪಏಳಯ್ಯ ಹರಿಯೆಏಳಯ್ಯ ಬೆಳಗಾಯಿತು
--------------
ನಿಡಗುರುಕಿ ಜೀವೂಬಾಯಿ
ನಾ ನಿನಗೇನ ಬೇಡುವುದಿಲ್ಲ - ಎನ್ನಹೃದಯಕಮಲದೊಳು ನೆಲಸಿರು ಹರಿಯೆ ಪಶಿರ ನಿನ್ನ ಚರಣಕೆರಗಲಿ -ಚಕ್ಷುಎರಕದಿಂದಲಿ ನಿನ್ನ ನೋಡಲಿ ಹರಿಯೆ ||ನಿರುಮಾಲ್ಯ ನಾಸ ಘ್ರಾಣಿಸಲಿ -ಎನ್ನಕರಣ ಗೀತಂಗಳ ಕೇಳಲಿ ಹರಿಯೆ 1ನಾಲಗೆ ನಿನ್ನ ಕೊಂಡಾಡಲಿ ಎನ್ನತೋಳು ಕರಂಗಳ ಮುಗಿಯಲಿ ಹರಿಯೆ ||ಕಾಲು ತೀರ್ಥಯಾತ್ರೆಗೆ ಪೋಗಲಿ -ಮನಓಲೈಸಿ ನಿನ್ನನು ಸ್ಮರಿಸಲಿ ಹರಿಯೆ 2ಚಿತ್ತ ನಿನ್ನೊಳು ಮುಳುಗಾಡಲಿ -ನಿನ್ನಭಕ್ತ ಜನರ ಸಂಗ ದೊರಕಲಿ ಹರಿಯೆ ||ತತ್ತ್ವಯೋಗಾಭ್ಯಾಸಕ್ಕಾಗಲಿ -ಉಕ್ಕಿಸತ್ಯ ಮೂರುತಿ ನಮ್ಮಪುರಂದರವಿಠಲ3
--------------
ಪುರಂದರದಾಸರು
ನಾಗರಾಜ ನರಸುರ ನಮಿತೇ |ಸಾಗರ ಕರುಣೀ ಸರಸ್ವತೀ ||ಕೋಗಿಲ ಗಾನವಿನೋದಿತೇ ಬೇಗನೆವರಗಳ ಕೊಡು ಮಾತೇ ಪಶೃಂಗೇರಿ ಪುರವರ ನಿಲಯೇ |ಮಂಗಲಚರಣೆ ಶಾರದೆಯೇ |ಭೃಂಗಕುಂತಲೆಭವಭಂಗನಿವಾರಿಣಿ |ರಂಗನ ಸುತನರ್ಧಾಂಗಿಯೆ ರಕ್ಷಿಸು 1ಪುಸ್ತಕಹಸ್ತಜಗದ್ಭರಿತೇ ಉತ್ತಮಳೆಮಕುಟಾನ್ವಿತದಾತೇ |ಪೃಥ್ವಿಪಾಲ ಮನದರ್ಥಿಯ ಸಲಿಸುವ |ಸ್ವಸ್ತಿಶ್ರೀಮನ್ಮಥನತ್ತಿಗೆ ಶಾರದೆ 2ಕುಂದಮಂದಾರಪುಷ್ಪಗಳ |ಚಂದಣ ಕುಂಕುಮ ಗಂಧಂಗಳಮಂದಗಮನೆ ಅರವಿಂದನಯನೆ ಗೋವಿಂದನ ಸೊಸೆಗಾನಂದದೊಳರ್ಚಿಸಿ 3
--------------
ಗೋವಿಂದದಾಸ
ನಾಚಿಕೆಪಡಬೇಡ - ಮನದೊಳು -ಯೋಚಿಸಿ ಕೆಡಬೇಡ ಪ.ನಿಚ್ಚ ನೆನೆಯೊ ನಮ್ಮಚ್ಯುತನಾಮವ |ಮೆಚ್ಚಿ ಕೊಟ್ಟರೆ -ಅಚ್ಯುತಪದವೀವಅಪಹರಿಹರಿಯೆಂದೊದರೋ - ಹತ್ತಿದ - |ದುರಿತಗಳಿಗೆ ಬೆದರೋ ||ವಾರಿಜಾಕ್ಷನ - ವೈಕುಂಠಪುರವ |ಸೇರಿಸೇರಿ ನೀ ಕುಣಿಕುಣಿದಾಡೊ 1ಆರಗೊಡವೆ ಏನೋ - ನರಕದ |ದಾರಿ ತಪ್ಪಿಸುವರೆ ||ನೀರಜಾಕ್ಷ ನಮ್ಮನಿರ್ಜರ ಪತಿಯಲಿ |ಸೇರಿ - ಸೇರಿಸಿ ಮನ ನಲಿನಲಿದಾಡೊ 2ಭಕ್ತಜನರ ಕೂಡೊ - ಭವಭಯ |ಬತ್ತಿಪೋಪುದು ನೋಡೊ ||ಮುಕ್ತಿದಾಯಕ ಶ್ರೀ ಪುರಂದರವಿಠಲನ |ಭಕ್ತಿಯಿಂದ ನೀ ಹಾಡಿ ಕೊಂಡಾಡೊ 3
--------------
ಪುರಂದರದಾಸರು