ಒಟ್ಟು 7252 ಕಡೆಗಳಲ್ಲಿ , 131 ದಾಸರು , 4420 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಧನ್ಯಳೊ ಗಿರಿಜೆ ಎಂಥ ಮಾನ್ಯಳೋ ಪಸ್ಥಾಣುವಮೂರ್ತಿಪಾದಸೇವೆತಾನೆನಿರತಮಾಡುತಿಹಳೊ ಅ.ಪಭೂತಗಣದ ಯೂಥವಿರಲುಸೂತಗಣನಾಥಾದ್ಯರಿರಲುಭೂತಪತಿಯಚರಣತೊಳೆದುತೀರ್ಥಕೊಡುತ ಬರುವಳ್ ಸಭೆಗೆ 1ನಾರದರು ದಿಕ್ಪಾಲರಿರಲುವಾರಿಜಾಸನ ವಿಷ್ಣುವಿರಲುಮಾರಹರನಿಗಾರತಿ ಎತ್ತಿತಾನೆ ಸಭೆಗೆ ತೋರಿಸುವಳು 2ವಸುಗಳ್ ಸಪ್ತ ಋಷಿಗಳಿರಲುಅಸುರ ಶಿಕ್ಷರು ನುತಿಸುತಿರಲುಪಶುಪತಿಯ ಲೇಪಿಸಿದ ಭಸ್ಮಗೋವಿಂದಾದ್ಯರಿಗೆ ಪ್ರಸಾದ ಕೊಡುವಳ್ 3
--------------
ಗೋವಿಂದದಾಸ
ಏನುಚೋದ್ಯಶ್ರೀನಿಧೆಹರಿಮಾನಿನಿಶ್ರೀದೇವಿ ಭೂದೇವಿರಮಣಪಸೃಷ್ಟಿಕರ್ತನೆಂದು ಪೇಳ್ವರು ಪಾಂಡವರ ಮನೆಯಬಿಟ್ಟಿ ಬಂಡಿಬೋವನೆಂಬೋರು ಪಾಂಚಾಲಿಗೆ ಒದಗಿದಕಷ್ಟಕಳೆದÀು ಪೊರೆದನೆಂಬೊರೊಕೆಟ್ಟದಾನವರ ಅಟ್ಟುಳಿಯ ಕಳೆದುದುಷ್ಟಕಂಸನವಧೆಯ ಸ್ಪಷ್ಟ ಪೇಳುತಿಹರೊ 1ಗಜನ ಸಲಹಿ ಪೊರೆದನೆಂಬೊರೊ ನೆಗಳೆಯನು ಸೀಳಿತ್ರಿಜಗದೊಡೆಯ ಶ್ರೀಶನೆಂಬೊರೊ ಪ್ರಹ್ಲಾದ ಧೃವಗೆನಿಜಸೌಭಾಗ್ಯ ಇತ್ತೆ ಎಂಬೊರೊವಿಜಯಸಾರಥಿಯ ವಿಶ್ವರೂಪ ತೋರಿಸುಜನರನ್ನು ಪೊರೆದ ನಿಜವ ಪೇಳುತಿಹರು 2ವತ್ಸಾಸುರನ ಮಡುಹಿದೆಂಬೊರೊ ಅಡವಿಯಲಿ ಕಾಡ-ಕಿಚ್ಚನುಂಗಿ ಬೆಳೆದಿ ಎಂಬೊರೊ ತಾಯಿಗೆ ಬಾಯೋಳಹೆಚ್ಚಿನ್ವಿಷಯ ತೋರ್ದಿ ಎಂಬೊರೊಕಚ್ಚ ಬಂದ ಘಣಿಯ ಮೆಟ್ಟಿ ತುಳಿದು ಜಲವಸ್ವಚ್ಛಗೈದನೆಂದಾಶ್ಚರ್ಯ ಪೇಳುತಿಹರೊ 3ಕರಡಿ ಮಗಳು ಮಡದಿಯೆಂಬೊರೊ ಪುಷ್ಪವನು ತರಲುತೆರಳಿ ಯುದ್ಧ ಮಾಡ್ದನೆಂಬೊರೊ ದೇವೇಂದ್ರನ ಗೆಲಲುತರುಣಿ ಸಮರಗೈದಳೆಂಬೊರೊಮುರಳಿನಾದದಿಂದ ತರುಣಿಯರ ಮನವಮರುಳುಗೈದನೆಂದು ಪರಿಪರಿ ಪೇಳುವರೊ 4ಕೆಟ್ಟದ್ವಿಜನ ಪೊರೆದಿ ಎಂಬೊರೋ ವನವನವ ಚರಿಸಿಸುಟ್ಟ ದಾಸಗೊಲಿದೆ ಎಂಬೊರೋ ಒಪ್ಪಿಡಿಯ ಗ್ರಾಸವಕೊಟ್ಟದ್ವಿಜನ ಪೊರೆದಿಯೆಂಬೊರೊಅಟ್ಟಹಾಸದಿ ತಂದ ರುಕ್ಮಿಣಿಯ ತನ್ನಪಟ್ಟದರಸಿಯೆಂದು ಸ್ಪಷ್ಟ ಪೇಳುತಿಹರೊ 5ಶಿಲೆಯ ಸತಿಯಗೈದನೆಂಬರೊ ಅಡವಿಗಳ ಚರಿಸಿಬಲುಕಪಿಗಳ ಕೂಡ್ದನೆಂಬೊರೊ ಭಯ ಭಕ್ತಿಗೆ ಮೆಚ್ಚಿಫಲದ ಎಂಜಲ ಸವಿದನೆಂಬೊರೊ ಮೆಚ್ಚಿಸುಲಭದಿಂದ ದೈತ್ಯಕುಲವನೆಲ್ಲ ಸವರಿಛಲದ ದಶಶಿರನ ವಧೆಯ ಪೇಳುತಿಹರೊ 6ಪುಟ್ಟಬ್ರಹ್ಮಚಾರಿ ಎಂಬೋರೊ ಬಲಿರಾಜನ ಬೇಡಿಕೊಟ್ಟದಾನ ಕೊಂಡನೆಂಬೋರೊ ಈರಡಿಯನಳೆದುಮೆಟ್ಟಿ ಸಿರವ ತುಳಿದನೆಂಬೋರೊಎಷ್ಟು ಪೇಳಲಿ ನಿನ್ನ ಶ್ರೇಷ್ಠಗುಣಗಳನ್ನುದಿಟ್ಟ ಕಮಲನಾಭ ವಿಠ್ಠಲ ಸರ್ವೇಶ 7
--------------
ನಿಡಗುರುಕಿ ಜೀವೂಬಾಯಿ
ಏನೊ ರಂಗ ನಿನ್ನ ವನಿತೆಯೊಳಪರಾಧಧ್ಯಾನಿಸಲು ದೊರಕೊಂಬುದೆನೀನಗಲಬೇಡ ತರಳೆಗಭಯವ ಕೊಟ್ಟುಮೌನದಲಿ ನಡೆಯೊ ಮನೆಗೆ ಬೇಗ ಪ.ಸ್ಮರನ ದಾಳಿಗೆ ಕಂದಿ ಕುಂದಿ ಬಳ್ಕಡಿಯಿಡುತವಿರಹಾಗ್ನಿಗನ್ನತೊರೆದು ಸ್ಮರಿಸುವಳುನಿರುತ ನಿನ್ನಯ ಗುಣಾವಳಿಗಳನುಕರಿಸೋತರಳೆಯ ಕೂಡೊ ಕೋಪ ಬೇಡೊ ನೋಡೊ 1ಪರಮಪುರುಷ ನೀ ಅವಳ ಜರಿದ ಕಾರಣಸೋಮಕಿರಣ ವಿಷಸಮ ಝಳದಪರಿತೋರಿ ಬಳಲುವಳು ಸಖಿಭೃಂಗ ಕಳಕಕೆತರಳೆ ಕೂಡೊ ಕೋಪ ಬೇಡೊ ನೋಡೊ 2ನಲ್ಲ ನಿನ್ನ ಸಂಗ ಬಯಕೆಗೆ ಕಣ್ಣ ತೇಲಿಸುವಳಲ್ಲೊ ತೊದಲ್ಲು ನುಡಿವಳಲ್ಲೊಮೆಲ್ಲನೆದೆ ನೋಡಿ ಸುಯಿಗರೆವಳು ಖಗಾಂಕಜನಬಿಲ್ಲಿಗೆಬಲಿಕೊಡಲಿ ಬಾರೊ ತೋರೊ3ಪಯನಿಧಿ ಒಡೆಯನ್ಯಾಕೆ ಬಾರನೆಂದವಳು ತನ್ನಯ ಸುದತಿಯರ ಬೈವಳುನಯನಧsರವಿರಸಿ ಕಂಬನಿದುಂಬುವಳು ಗಡಪ್ರಿಯಳರಸೆಜಾರವಿರಸಹರಿಸೊ4ನಿನ್ನ ನಂಬಿದಳಿಗಿಂತಾಗುತಿರೆ ಸುಮ್ಮನಿಹೆಎನ್ನ ಹೇಯ ಬಾರದೆನಲುಉನ್ನತ ಹಯವನೇರಿ ಬಂದವಳ ನೆರೆದ ಪ್ರಸನ್ನ ವೆಂಕಟನಾಯಕರಸಿಕ5
--------------
ಪ್ರಸನ್ನವೆಂಕಟದಾಸರು
ಏಳು ಶ್ರೀ ಗುರುರಾಯ ಬೆಳಗಾಯಿತಿಂದುಧೂಳಿ ದರುಶನ ಕೊಡಿರಿ ಈ ವೇಳೆ ಶಿಷ್ಯರಿಗೆ ಪ.ಏಳುಗುರುರಾಘವೇಂದ್ರ ಏಳು ದಯಾಗುಣಸಾಂದ್ರಏಳು ವೈಷ್ಣವ ಕುಮುದಚಂದ್ರ ಶ್ರೀ ರಾಘವೇಂದ್ರ ಅ.ಪ.ಅಶನವಸನಗಳಿಲ್ಲವೆಂಬವ್ಯಸನಗಳಿಲ್ಲಮುಸುಕ್ಹಾಕಿ ಮೋಸದಲೆ ಮೋಹಿಸಿದೆನೆಲ್ಲಅಸುರಾರಿಯ ಸ್ಮರಿಸದೆ ಪಶುವಿನೊಲು ಈ ದೇಹವಸುಮತಿಯೊಳು ಬಹಳ್ಹಸಗೆಟ್ಟಿತಲ್ಲ 1ನಾನು ನನ್ನದು ಎಂದು ಹೀನಮನಸಿಗೆ ತಂದುಏನು ಮಾಡುವಕರ್ಮನಾನೆ ಅಹುದೆಂದುಸ್ವಾಮಿ ಕರ್ತೃತ್ವವನು ತಿಳಿಯಲಿಲ್ಲ ನಾನೊಂದುನೀನೆ ಉದ್ಧರಿಸಯ್ಯ ದೀನ ದಯಾಸಿಂಧು 2ಅನ್ಯರ ಕೈಯಲ್ಲಿ ನಿನ್ನವರನಿರಿಸುವುದುಅನ್ಯಾಯವಾಯ್ತುಪಾವನ್ನಗುರುರಾಯಎನ್ನ ಮಾತಲ್ಲವಿದು ನಿನ್ನ ಮಾತೇ ಸರಿಮನ್ನಿಸಿ ಆಗು ಪ್ರಸನ್ನ ಗುರುರಾಯ 3ವೇದ ಶಾಸ್ತ್ತ್ರಗಳನ್ನು ಓದಿ ಪೇಳ್ದವನಲ್ಲಭೇದಾಭೇದವನು ತಿಳಿಯಲಿಲ್ಲಸಾಧು ಸಜ್ಜನರ ಸಹವಾಸ ಮೊದಲಿಲ್ಲಹಿಂದಾಗಿಮಾನಮಾರಿಸಿದಿ ಉಳಿಸಲಿಲ್ಲ4ಆಸೆಗೊಳಗಾದೆನೊ ಹೇಸಿ ಮನುಜನು ನಾನುಕ್ಲೇಶಭವಸಾಗರದೊಳೀಸುತಿಹೆನೊಏಸುಜನ್ಮದಿ ಎನ್ನಘಾಸಿಮಾಡಿದೆ ಮುನ್ನದಾಸನಾಗುವೆ ತೋರೊ ಪ್ರಸನ್ನವೆಂಕಟನ 5
--------------
ಪ್ರಸನ್ನವೆಂಕಟದಾಸರು
ಒಂದು ಸಂಜೀವಿನಿಕಿತ್ತಿ ತಂದ ಕಾಲದಲೆಅಂಜಿಕೆ ಎಲ್ಲಡಗಿತ್ತೋ ಭೀಮ ಪ.ಬೆಳೆದ ಬಾಲಕೆ ಖಳರು ಇಕ್ಕಲು ಬೆಂಕಿಲಂಕೆಯಬೆಳಗಿ ಬಂದಪುರುಷ ಬಿಡು ನಿನ್ನ ಸೋಂಗು 1ಹೊಡೆದು ಹಿಡಿಂಬೆಯ ಮಡುಹಿದ ಕಾಲಕ್ಕೆಅಡಗಿತ್ತೆಲ್ಲೋ ಭೀತಿಬಿಡು ನಿನ್ನ ಸೋಂಗು 2ಹೆದರಿಕಿದ್ದರೆ ಒಬ್ಬನೆ ಬದರಿಕಾಶ್ರಮಕೆ ಹೋಗಿಚದುರ ರಾಮೇಶನಪಾದಗಳಿಗೆರಗೊ 3
--------------
ಗಲಗಲಿಅವ್ವನವರು
ಒಳಿತು ಈಶಕುನ ಫಲವಿಂದು ನಮಗೆ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಲಜನಾಭನ ಸಂಗ ದೊರಕುವುದೆ ರಮಣಿ ಪ.ವಾಮಗರುಡನನೋಡು ವಾಯಸದ ಬಲವನ್ನುಕೋಮಲಾಂಗಿಯರೈದು ಪೂರ್ಣಕುಂಭ ||ಸಾಮಾನ್ಯವೇಗೌಳಿ ಬಲಕಾಗಿ ನುಡಿಯುತಿದೆಪ್ರೇಮದಲಿ ಮಧುರ ವಚನವ ಕೇಳು ರಮಣಿ 1ಮೊಳಗುತಿವೆಭೇರಿದುಂದುಭಿ ಘಂಟೆ ವಾದ್ಯಗಳುಫಲ ಪುಷ್ಪ ದಧಿಗಳಿದಿರಾಗುತಿದೆಕೊ ||ಚೆಲುವ ಭಾರದ್ವಾಜ ಪಕ್ಷಿ ಬಲವಾಗುತಿದೆಬಲುಹಂಗಎಡವಾಗುತಿದೆನೋಡುಕೆಳದಿ2ನೋಡು ದ್ವಯ ಬ್ರಾಹ್ಮಣರು ಇದಿರಾಗಿ ಬರುವುದನುಕೂಡಿದುವು ಮನದ ಸಂಕಲ್ಪವೆಲ್ಲ ||ಬೇಡಿದ ವರಗಳೀವ ಪುರಂದರವಿಠಲನನೋಡಿ ಸಂತೋಷದಲಿ ನೆನೆವೆನೆಲೆ ರಮಣಿ 3
--------------
ಪುರಂದರದಾಸರು
ಓಡಿ ಬಾರಯ್ಯ ವೈಕುಂಠಪತಿ ನಿನ್ನನೋಡುವೆ ಮನದಣಿಯೆ ಪನೋಡಿ ಮುದ್ದಾಡಿ ಮಾತಾಡಿ ಸಂತೋಷದಿಪಾಡಿ ಪೊಗಳುವೆನುಪರಮಪುರುಷಹರಿಅ.ಪಕೆಂದಾವರೆಯಂತೆ ಪಾದಂಗಳೆರಡುಅಂದುಗೆಕಿರಿಗೆಜ್ಜೆ ಘಲುಘಲುರೆನುತ ||ಚೆಂದದಿ ಪೀತಾಂಬರವಲೆದಾಡುತಕುಂದಣದುಡುದಾರ ಝಣ ಝಣ ಝಣಕುತ 1ಕೋಟಿ ಸೂರ್ಯ ಪ್ರಕಾಶಗಳಿಂದಲಿ ಲ-ಲಾಟದಲ್ಲಿ ಇಟ್ಟ ಕಸ್ತುರಿ ತಿಲಕ ||ಕೂಟದ ಗೋಪಾಂಗನೆಯರ ಕೂಡೆಆಟ ಸಾಕು ಬಾರೋ ಅರವಿಂದ ನಯನ 2ಕಿರುತುರುಬಿನ ಮೇಲೆ ಒಲೆವುತಿರುತಿರೆಮುರುಗು ಮಲ್ಲಿಗೆ ಜಾಜಿ ಶ್ರೀತುಳಸೀ ||ಕರದಲಿ ಪಿಡಿದಾ ಪೊಂಗೊಳಲೂದುತತಿರಿತಿಂದು ಬಾಹೋ ಸಡಗರ ಸಾಕೋ 3ಎಣ್ಣೂರಿಗತಿರಸ ಸದಮಲ ದೋಸೆ ಬೆಣ್ಣೆಅಣ್ಣಯ್ಯ ನಿನಗೆ ಕೊಡುವೆನೋ ಬಾರೋ ||ಕಣ್ಣಮುಚ್ಚಿ ಗೋಪಾಂಗನೆಯರ ಕೂಡಿ |ಬೆಣ್ಣೆಯ ಮೆಲುವುದು ಉಚಿತವೆ ಸಾಕೋ 4ಮಂಗಳಾತ್ಮಕ ಮೋಹನಾಕಾರನೆಸಂಗೀತಲೋಲಸದ್ಗುಣ ಶೀಲ ||ಮಂಗಳೆ ಲಕುಮಿಯ ಸಹಿತವಾಗಿ ಬಂದುಕಂಗಳ ಮುಂದಾಡೊಪುರಂದರವಿಠಲ5
--------------
ಪುರಂದರದಾಸರು
ಓಡಿ ಹೋಗುವರೇನೋ ಜಾಣ ಪಾರ್ಥನೋಡಿ ಬಲ್ಲೆವೊ ನಿಮ್ಮತ್ರಾಣಪ.ಹೆಣ್ಣುತನದಿ ಒಳಗೆ ಸೇರಿದಿನಮ್ಮ ಕಣ್ಣಿಗೆ ಬೀಳದೆ ಹಾರಿದಿಬಣ್ಣವ ಬಹಳ ಬಹಳ ತೋರಿದಿನಮ್ಮಣ್ಣ ಬಲರಾಮನ ಇದುರಿಗೆ ಬಾರದೆ 1ಹೊಳೆವು ಎಷ್ಟು ಹೇಳಲೊ ನಿನ್ನಶೌರ್ಯ ತಿಳಿದೀತುಘನಮಹಿಮನಘನಬಳೆಯ ನಿಟ್ಟಿದ್ದು ಮುನ್ನಇಂಥ ಅಳಿಯ ದೊರೆತೆಲ್ಲೊರನ್ನ 2ಗಂಡಸಲ್ಲವೊ ಇಂಥ ಬಾಳು ನಿನಗೆಗಾಂಡೀವಿಯಾತಕೆ ಹೇಳೊಷÀಂಡನೆಂದರೆ ಇಂಥ ಬಾಳುವೆನಾಚಿಕೊಂಡು ಬರಲಿಲ್ಲೇನೊ ಹೇಳೊ 3ಬಿಲ್ಲು ಕಂಡರೆ ನಿನಗೆ ಭೀತಿಯೆಒಳ್ಳೆ ಚಲುವೆಯರ ಮ್ಯಾಲೆ ಅತಿ ಪ್ರೀತಿಯೊನಲ್ಲ ಹೀನಳ ಬೆರೆದ ಖ್ಯಾತಿಯೊಅದಕೆ ಇಲ್ಲೆ ಬರಲಿಲ್ಲಿಯೋ ಸೋತು 4ಏನು ಹೇಳಲಿ ಇಂಥ ನಿಂದ್ಯವನಿನಗೆಮಾನಿನಿಹೆರಳೇನು ಚಂದಧೇನಿಸಿ ನೋಡಲುಕುಂದಹಾಗೆ ತಾನು ರಾಮೇಶ ಅಂದ 5
--------------
ಗಲಗಲಿಅವ್ವನವರು
ಔತುಕೊಂಡಿ ಯಾಕೊ ನರಹರಿಪ್ರಾರ್ಥನೆಯನ್ನು ಕೇಳೊ ಸ್ವಾಮಿ ಪವೇದ ತಂದುಭಾರಪೊತ್ತುಕೋರೆ ತೋರಿ ಕರುಳ ಬಗೆದುಬೇಡಿ ಭೂಮಿ ದೂಡಿನೃಪರಸಾಗರವ ಬಂಧಿಸಿದ ಭಯವೋ 1ಕದ್ದು ಬೆಣ್ಣೆ ಕಳ್ಳನೆನಿಸಿವದ್ದು ತ್ರಿಪುರಾಸುರರ ಸದೆದುಹದ್ದನೇರುವುದನೆ ಬಿಟ್ಟುಹಯವನೇರಿದ ಭಯವೋ ಸ್ವಾಮಿ 2ತರಳಗೊಲಿದು ಬರಲು ನಿನ್ನಇರಿಸಿ ಸ್ನಾನಕೆನುತ ಪೋಗಿತ್ವರದಿ ಬಂದು ನೋಡಲು ಅದ್ಭುತದಿ ಬೆಳೆದ ಭಯವೋ ದೇವ 3ನಿಲುಕದಿರಲು ನಿನ್ನವದನಯುವಕ ನೋಡಿ ಮೊರೆಯನಿಡಲುತವಕಿಸುವಿ ಬಾಲಕನೆ ನಿನ್ನಸಮಕೆ ಎನ್ನ ಮಾಡಿಕೊ ಎಂದು 4ಸಿರದಿ ಕರವನಿಡುತ ತನ್ನಸಮಕೆ ಬರುವ ತೆರದಿ ನಿನ್ನಸಿರವ ಪಿಡಿದು ಬಿತ್ತಿ ಸ್ತುತಿಸೆಕುಳಿತೆ ಕೂಡಲಿಯ ತೀರದಲಿ 5ಭಕ್ತರೆಲ್ಲ ನೆರೆದು ನಿನ್ನಭಕ್ತಿಪಾಶದಿಂದ ಬಿಗಿದುಇಚ್ಛೆ ಬಂದ ತೆರದಿ ಕುಣಿಸೆಮೆಚ್ಚಿಅವರಪೊರೆವೆÀ ದೇವ6ಬಂದ ಜನರು ಛಂದದಿಂದತುಂಗಭದ್ರೆ ಸಂಗಮದಲಿಮಿಂದು ನಿನ್ನ ವಂದಿಸುವರೊತಂದೆ ಕಮಲನಾಭವಿಠ್ಠಲ 7
--------------
ನಿಡಗುರುಕಿ ಜೀವೂಬಾಯಿ
ಕಂಡೀರೆ ನೀವೆಲ್ಲರೂ ಶ್ರೀಕೃಷ್ಣನ ಕಂಡೀರೆ ಪಕಂಡೀರೆ ಪಾಂಡುರಂಗನನೂ ಕಳಕೊಂಡಿರೆಪಾಪ ಸರ್ವವನೂ ಅಂಡಜವಾಹನನಾಗಿಸಂಚರಿಸುವಪುಂಡರೀಕಾಕ್ಷಬ್ರಹ್ಮಾಂಡ ನಾಯಕನನ್ನೂ 1ಎಂಟನೆ ಅವತಾರಿಯೆನಿಸಿ ದೇವಕಿ ಎಂಟನೇಗರ್ಭದಿ ಜನಿಸಿ ಎಂಟನೆಮಾಸಶ್ರಾವಣಕೃಷ್ಣಾಷ್ಟಮಿ ದಿನ ನಟ್ಟಿರುಳಿನಲಿಸೃಷ್ಟಿಗಿಳಿದ ಶ್ರೀಕೃಷ್ಣನ 2ಮಧುರಾ ಪಟ್ಟಣದಿ ಮೈದೋರಿ ಬಹುವಿಧವಾಗಿ ಗೋಕುಲದೊಳಗಾದಧಿಘೃತಚೋರಕನೆಂದು ಯಶೋದೆಗೆಪದುಮಾಕ್ಷಿಯರು ಬಂದು ದೂರುವ ಕೃಷ್ಣನ 3ದನುಜೆ ಪೂತನೆಯಸುಗೊಂಡು ತನ್ನಜನನಿಗೋಪಿಗೆ ಬಾಯೊಳ್ ತೋರ್ದ ಬ್ರಹ್ಮಾಂಡವನಜಾಕ್ಷಿಯರ ಕೂಡಿ ಯಮುನಾ ತೀರದೊಳಾಡಿವನಿತೆಯರುಡುವ ಶೀರೆಗಳೊಯ್ದ ಕೃಷ್ಣನೇ 4ಗೋವಳರರಸನೆಂದೆನಿಸಿ ಶಿರಿಗೋವರ್ಧನವೆತ್ತಿಗೋವ್ಗಳ ಮೇಸಿ ಪಾವಕನುಕಾಳಿಮರ್ದನ ಗೈದು ಮಾವ ಕಂಸನ ಗೆಲ್ದಮಧುರೆಯೊಳ್ ಕೃಷ್ಣನಾ 5ದ್ವಾರಕಾಪುರವೊಂದ ರಚಿಸಿ ಬಲವೀರರಾಮನ ದೊರೆರಾಯನೆಂದೆನಿಸಿನಾರಿಯರ್ ಹದಿನಾರು ಸಾವಿರ ವಡಗೂಡಿಮಾರಕೇಳಿಯೊಳ್ ಮುದ್ದು ತೋರುವ ಕೃಷ್ಣನ 6ಶರದ ಸೇತುವಿಗೆ ಮೈಯ್ಯಾಂತ ಉಟ್ಟಶೆರಗೀಗೆ ವರವ ದ್ರೌಪದಿಗೊಲಿದಿತ್ತನರನ ಸಾರಥಿಯಾಗಿ ಕುರುನೃಪರನು ಗೆಲ್ದುಧರೆಯ ಪಟ್ಟವ ಧರ್ಮಜನಿಗಿತ್ತ ಕೃಷ್ಣನೆ 7ದುಷ್ಟ ನಿಗ್ರಹನೆಂಬ ಬಿರುದೂ ಭಕ್ತರಕ್ಷಕನೆಂದು ಮೂರ್ಲೋಕವದೆಂದೂಸೃಷ್ಟಿಯೊಳ್ ನರಜನರು ನಮಿಸಿ ಪೂಜಿಸಲೆಂದುಬಿಟ್ಟರು ದ್ವಾರಕಾಪುರವ ರಾಮಕೃಷ್ಣರು 8ಹಡಗಿನ ಮೇಲೇರಿ ಬಂದೂ ನಮ್ಮಉಡುಪಿಅನಂತೇಶನಿದಿರಾಗಿ ನಿಂದೂಕಡು ಕೃಪೆಯೊಳ್ ಭಕ್ತ ಕನಕನಿಗೊಲಿದವೊಡೆಯ ಗೊೀವಿಂದ ಗೋಪಾಲಕೃಷ್ಣನ 9
--------------
ಗೋವಿಂದದಾಸ
ಕಂಡೆನಾ ಕನಸಿನಲಿ ಗೋವಿಂದನ ಪಕಂಡೆನಾ ಕನಸಿನಲಿ ಕನಕರತ್ನದ ಮಣಿಯ |ನಂದನ ಕಂದ ಮುಕುಂದನ ಚರಣವ ಅ.ಪಅಂದುಗೆಕಿರುಗೆಜ್ಜೆ ಘಲಿರೆಂಬ ನಾದದಿಬಂದು ಕಾಳಿಂಗನ ಹೆಡೆಯನೇರಿ ||ಧಿಂಧಿಮಿ ಧಿಮಿಕೆಂದು ತಾಳಗಳಿಂದಾನಂದದಿ ಕುಣಿವ ಮುಕುಂದನ ಚರಣವ 1ಉಟ್ಟ ಪೀತಾಂಬರ ಉಡಿಯ ಕಾಂಚಿಯದಾಮತೊಟ್ಟ ಮುತ್ತಿನ ಹಾರ ಕೌಸ್ತುಭವು ||ಕಟ್ಟಿದವೈಜಯಂತಿತುಲಸಿಯ ವನಮಾಲೆಇಟ್ಟ ದ್ವಾದಶನಾಮ ನಿಗಮಗೋಚರನ 2ಕಿರುಬೆರಳಿನ ಮುದ್ರೆಯುಂಗುರ ಮುಂಗಡೆಕರದಲಿ ಕಂಕಣ ನಳಿತೋಳುಗಳ ||ವರಚತುರ್ಭುಜ ಶಂಖಚಕ್ರದಿ ಮೆರೆವನನಿರುತದಿ ಒಪ್ಪುವ ಕರುಣಾ ಮೂರುತಿಯ 3ಬಣ್ಣದ ತುಟಿ ಭಾವರಚನೆಯ ಸುಲಿಪಲ್ಲಸಣ್ಣ ನಗೆಯ ನುಡಿ ಸವಿಮಾತಿನ ||ಪುಣ್ಯ ಚರಿತ್ರನ ಪೊಳೆವ ಕಿರೀಟನಕಣ್ಣು ಮನ ತಣಿಯದಕಂಸಾರಿಕೃಷ್ಣನ4ಮಂಗಳ ವರತುಂಗಭದ್ರದಿ ಮೆರೆವನಅಂಗಜಪಿತಶ್ರೀ ಲಕ್ಷ್ಮೀಪತಿಯ ||ಶೃಂಗಾರ ಮೂರುತಿಪುರಂದರವಿಠಲನಕಂಗಳಿಂದಲಿ ಕಂಡೆ ಹಿಂಗಿತು ಭವಭಯ 5
--------------
ಪುರಂದರದಾಸರು
ಕಣ್ಣಾರೆ ಕಂಡೆನಚ್ಯುತನ-ಕಂಚಿಪುಣ್ಯ ಕೋಟಿ ಕರಿರಾಜವರದನ ಪವರಮಣಿ ಮುಕುಟಮಸ್ತಕನ ಸುರ-ವರಸನಕಾದಿ ವಂದಿತ ಪಾದಯುಗನ ||ತರುಣಿ ಲಕ್ಷ್ಮೀ ಮನೋಹರನ-ಪೀತಾಂಬರದುಡಿಗೆಯಲಿ ರಂಜಿಸುವ ವಿಗ್ರಹನ 1ಕಸ್ತೂರಿ ಪೆರೆನೊಸಲವನ ತೋರಮುತ್ತಿನ ಹಾರ ಪದಕವ ಧರಿಸಿದನ ||ಎತ್ತಿದಭಯ ಹಸ್ತದವನ ತನ್ನಭಕ್ತರ ಸ್ತುತಿಗೆ ಹಾರಯಿಸಿ ಹಿಗ್ಗುವನ 2ನೀಲಮೇಘಶ್ಯಾಮಲನ ದೇವಲೋಲಮಕರಕುಂಡಲಧರಿಸಿಹನ ||ಮೂಲೋಕದೊಳಗೆ ಚೆನ್ನಿಗನ ಕಮಲಾಲಯಾಪತಿ ವೈಕುಂಠವಲ್ಲಭನ 3ಭಾನುಕೋಟಿ ತೇಜದವನಭವಕಾನನರಾಶಿಗೆಹವ್ಯವಾಹನನ ||ದಾನವರೆದೆಯ ತಲ್ಲಣನ ಮುನಿಮಾನಸೆಹಂಸನೆಂದೆನಿಸಿ ಮೆರೆವನ4ತುಂಗಚತುರ್ಭುಜದವನಶುಭಮಂಗಳ ರೇಖೆ ಅಂಗಾಲಲೊಪ್ಪುವನ ||ಶೃಂಗಾರ ಹಾರ ಕಂಧರನ ದೇವಗಂಗೆಯ ಪಿತಪುರಂದರವಿಠಲನ5
--------------
ಪುರಂದರದಾಸರು
ಕನಕಗಿರಿ ರಂಗನ ಕಾಣದೆ ನಿಲ್ಲಲಾರೆ ನಾಕನಕಾಭರಣನ ತೋರಿಕೊಡೆ ಸೈರಿಸಲಾರೆ ಪ.ಕನಕದಂತೆ ಮೈಯವನ ಕನಕಾಚಲಧರನಕನಕಾಂಬಕನ ಗೆದ್ದಕನಕಕಶ್ಯಪನ ಗೆದ್ದ1ಕನಕಾದ್ರಿಕರಕರ ಕನಕಭೂಮಿತಾರಕನಕಮೃಗ ಸಂಹಾರ ಕನಕಪಕ್ಷಿಸಂಚರ 2ಕನಕಾಂಬರವ ಬಿಟ್ಟ ಕನಕವರ್ಮವ ತೊಟ್ಟಕನಕಗನ್ನಿಕೆಯ ರಮಣಕರ್ತುಪ್ರಸನ್ನವೆಂಕಟನ3
--------------
ಪ್ರಸನ್ನವೆಂಕಟದಾಸರು
ಕಮಲನಾಭ ವೆಂಕಟೇಶ ಭಕ್ತ ಕಲ್ಪಭೂರುಹ ಶ್ರೀಕಮಲಪ್ರಾಣೇಶಾಪವಿಮಲ ವೈಕುಂಠಪುರೀಶಾ ಶಿವಕಮಲಸಂಭವನುತ ಕರ್ಬುರನಾಶಾ ಅ.ಪನಿರುಪಮ ಸುಂದರ ಗಾತ್ರಾನಿತ್ಯಪರಿಪೂರ್ಣ ವೈಭವಪರಮಪವಿತ್ರಾಶರನಿಧಿತನಯಕಳತ್ರಾಶೇಷಪರಿಜನಕೃತಘೋರಪಾಪಾಂಧ ಮಿತ್ರಾ1ಸನಕಸನಂದನ ವಿನುತಾಶಶಿದಿನಕರಶತಕೋಟಿ ದಿವ್ಯ ಸುಚರಿತಾಜನನ ಮರಣ ಕ್ಲೇಶರಹಿತ ಶ್ರೀವನಜಸುದರ್ಶನ ವನಮಾಲ ಧರಿತ2ಜಲಜಮಿತ್ರ ವಂಶ ಭೂಷಾ ಕ್ಷಾರಜಲಧಿಬಂಧನ ಪುಣ್ಯಜನ ಪ್ರಾಣ ಶೋಷಾತುಲಸೀ ರಾಮದಾಸ ಪೋಷಾ ಶ್ರೀತುಲಸೀ ಕಾನನಹಿತ ತುಂಬುರ ತೋಷಾ 3
--------------
ತುಳಸೀರಾಮದಾಸರು
ಕರವೊಡ್ಡಿ ಬೇಡುವೆನು ಕಮಲದಳನೇತ್ರಕರುಣದಲಿ ಸಲಹೆನ್ನ ಕಾಮಹರ ಮಿತ್ರ ಪಕಾಯದಲಿ ಬಲವಿಲ್ಲ ಕಂಗಳಿಗೆ ಸುಖವಿಲ್ಲಕೈಯ್ಯೊಳಗೆ ಹಣವಿಲ್ಲ ಬಾಯಬಲವಿಲ್ಲಕಾಯವಿದು ನೀನಿಟ್ಟ ಮಾಯಪಾಶಕೆ ಸಿಕ್ಕಿಹೇಯವಾದುದು ಸಲಹೋ ಹೇ ಲಕ್ಷ್ಮೀರಮಣ 1ಕಾಲನಾಳುಗಳೆಮ್ಮ ಕಾಲಕೈಗಳಕಟ್ಟಿಕಾಲದಂಡದಿ ಬಡಿದು ಕಾಲನೆಡೆಗೈದೂಕಾಲಮೇಘದ ತೆರದಿ ಕಾಲನಂತೆ ಘರ್ಜಿಸುವಕಾಲದಲಿ ಕಾಯ್ವವರ ಕಾಣೆ ನಾಳಿನಲೀ 2ಕರಿರಾಜನನು ಕಾಯ್ದೆ ಕಂಬದಲಿ ಮೈತೋರ್ದೆಖರ ದೂಷಣ ನಿನ್ನ ಕರದಿ ಶಿರ ವರಿದೀಕರುಣದಿಂದಲಿ ದ್ರೌಪದಿಯ ಸೆರಗಿಗಕ್ಷಯವಿತ್ತೆಕರವಿಡಿದು ಸಲಹೆನ್ನ ಕಲುಶ ಸಂಹಾರಾ 3ಕಂದನಪರಾಧವನು ತಂದೆ ಕ್ಷಮಿಸುವ ತೆರದಿಕಂದುಕುಂದುಗಳೆನ್ನೊಳಿರಲು ನೀ ಕ್ಷಮಿಸಿಕಂದನಂದದಿ ನೋಡಿಕಂದರ್ಪಜನಕನೆಚಂದದಲಿ ಸಲಹೊ ಗೋವಿಂದದಾಸನನೂ 4
--------------
ಗೋವಿಂದದಾಸ