ಒಟ್ಟು 857 ಕಡೆಗಳಲ್ಲಿ , 93 ದಾಸರು , 749 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾಲಕೃಷ್ಣ ಸುಮ್ಮನೆ ಹಟವ್ಯಾತಕಮ್ಮಾ ನಿನಗೆಮೊಮ್ಮುಣಿಸುವೆ ನಾನು ಕೇಳೊ ಕೃಷ್ಣಯ್ಯ ಪ. ಹಶಿವಿಯಾಗಿಹುದೇನೊ ನಿನಗೆ ಸಣ್ಣಹಸುಳರಂಜಿಪ ಬಾವಾ ಬಂದಾನೊ ಹೊರಗೆಮೊಸರಕಡೆದು ನಾ ಬೇಗ ಅಟ್ಟಿಹೊಸ ಬೆಣ್ಣೆ ಕೊಡುವೆನೊ ಕಂದಯ್ಯ ನಿನಗೆ 1 ಹಾಲು ಕುಡಿಸುವೆನೊ ನಾ ಒಬ್ಬಕೀಳು ತಿರುಕ ಬಾಗಿಲಲ್ಲಿ ಬಂದಿಹನೊಬಾಲಯ್ಯ ಅಳದೀರೊ ನೀನು ತನ್ನಜೋಳಗೆಯಲಿ ನಿನ್ನ ಕೊಂಡೊಯುವನು 2 ಅರಳೆಲೆ ಅಂದಿಗಿ ಇಡಿಸಿ ನಿನ್ನಪೆರನೂಸಲಲಿ ಕಸ್ತೂರಿಯ ಧರಿಸಿಪರಿಪರಿಯಲಿ ಸಿಂಗರಿಸಿ ಗೊಲ್ಲತರಳರೊಡನ ಆಡಕಳುವೆನೋ ಕರಸಿ 3 ಉಂಗುರು ಸರಪಳಿಯಿಟ್ಟು ಬಣ್ಣದಂಗಿಯ ತೊಡಿಸುವೆ ಕೇಳೋ ನಿ ಇಷ್ಟುರಂಗಯ್ಯ ಬಂತ್ಯಾಕೊ ಸಿಟ್ಟು ನಿನಗೆಮಂಗಳಾತ್ಮಕ ಏನೂ ಬೇಕೊ ಹೇಳಿಷ್ಟು 4 ಸಿರಿ ವೆಂಕಟರಾಯಾನಿನ್ನಾಟವಬಲೇಶ ನಿಚಯಾ ನೋಡಿಕರಂಣಿನೊಳಗಿಟ್ಟು ಹೀರುವರಯ್ಯಾ 5 ಪಾಪ ಕರ್ಮವ ಮಾಡಬ್ಯಾಡಾ ನರಕಕೂಪದೊಳಗೆ ಬಿದ್ದು ಹೊರಳಾಡಬ್ಯಾಡಕಾಕಪುರುಷರ ಸಂಗ ಕೇಡಾ ನಮ್ಮಶ್ರೀಪತಿಯ ಸ್ಮರಣೆ ಮಾಡದೆ ಬಿಡಬ್ಯಾಡಾ 6 ವಿಹೀತ ಕರ್ಮಗಳನ್ನು ಮಾಡೋ ನೀನುಅಹಿತಲ್ಪನೊಲಿಸಿ ಸದ್ಗತಿಯನ್ನು ಬೇಡೊಅಹಿತ ವಿಷಯ ಸುಖ ದೂಡೋ ಲೋಕ ದಹಿತನ ಸೇವೆಗೆಯುತಲಿ ಕೊಂಡಾಡೊ 7 ಸತ್ಯವಚನದಿಂದ ಬಾಳೊ ಬಲುಭಕ್ತಿಪೂರ್ವಕದಿ ಸಚ್ಛಾಸ್ತ್ರ ಕೇಳೊಚಿತ್ತದಿ ಶಾಂತಿಯ ತಾಳೊ ದುಷ್ಟ_ರುಕ್ತಿ ಕೇಳದೆ ನಿನ್ನ ಕಿವಿ ಮುಚ್ಚಿಕೊಳ್ಳೊ 8 ಪಂಚಭೇದ ಪ್ರಪಂಚವು ನಿಜವೆನ್ನೊ ಮೂಢಾ 9 ಜೀವೇಶಾರೊಂದೆಂಬೊ ಹೊಲಿಯಾ ಪರಿಭಾವಿಸೂ ದ್ವಾಸುಪರ್ಣವೆಂಬೊ ಶ್ರುತಿಯಾಕಾವನಯ್ಯನೆ ಜಗದೊಡೆಯಾ ನಮ್ಮಜೀವಾತ್ಮ ಭೃತ್ಯನೊ ಖರಿಯಾ 10 ಅದ್ವೈತರೊಡನಾಟ ಬ್ಯಾಡ ನಮ್ಮಮಧ್ವಮತದ ಪದ್ಧತಿ ಬಿಡಬ್ಯಾಡಾಖದ್ಯೋತಸುತಗಂಜಬ್ಯಾಡಾ ನೀನುಪೊಂದು ಐಹೊಳಿಯ ವೆಂಕಟನಂಘ್ರಿಗಾಢಾ 11
--------------
ಐಹೊಳೆ ವೆಂಕಟೇಶ
ಬಿಟ್ಟು ಬನ್ನಿರೊ ಸಂಸಾರದ್ಹಂಬಲ ಪ. ಸೃಷ್ಟಿಪತಿಯ ಸೇರಿ ನೀವು ಸುಖಿಸಬನ್ನಿರೊ ಅ.ಪ. ಹೆಂಡಿರುಮಕ್ಕಳು ಎಂಬೋ ಹಂಬಲ ಬೇಡಿರೊಕೊಂಡವರಲ್ಲ ಕೊಡುವರಲ್ಲ ಮುಂದಿನ ಗತಿಯನು 1 ಎಷ್ಟು ಮಾಡಿ ಗಳಿಸಿ ತಂದರು ಸಾಲದೆಂಬರೊನಷ್ಟಮಾಡಿ ಇವನ ಬದುಕು ಎಲ್ಲ ತಿಂಬರು 2 ನಡುಬೀದಿಯಲಿ ಇವನ ಎಳೆದು ಸೆಳೆವರೊಕಡೆಗಣ್ಣು ಕುಡಿಹುಬ್ಬು ನೋಟದಿಂದಲಿ 3 ಉಂಡು ಉಟ್ಟು ಗುಂಡಿನಂತೆ ಮನೆಯಲಿರುವರೊಚಂಡ ಯಮನದೂತರು ಬಂದು ಎಳೆದು ಒಯ್ವರೊ4 ಮುಟ್ಟಿ ಭಜಿಸಿರೊ ಹಯವದನನಂಘ್ರಿಯನೆಟ್ಟನೆ ಮುಕ್ತಿಮಾರ್ಗ ತೋರಿಕೊಡುವೆನೊ 5
--------------
ವಾದಿರಾಜ
ಬಿಡು ಬಿಡು ವಾಜಿಥರವಲ್ಲಾ | ಪ್ರಾಣಿ ಪ ಕಡಲಶಯನೆಚ್ಚರ ಗಳದೆಲ್ಲಾ | ಬಿಡದೇ ನಿನ್ನ ನೀ ಮರೆವುದು ಸಲ್ಲಾ | ಎಡಬಲ ನೋಡದೆ ನೀ | ವಿಡಿ ಗುರುಗಳ ಅಡಿಗಳ | ಪಡಿ ನಿಜಗತಿಯಾ 1 ಏಸು ಜನ್ಮವ ಸುತ್ತಿ ಬಂದ್ಯೋಯತ್ತಿ | ನ್ನೇಸು ಜನ್ಮವ ತಾಳಬೇಕು ಮುಂದ | ಹೇಸಲಿಲ್ಲವನೊಂದು ಘಾಸಿಯಿಂದ | ಅಶನ ವ್ಯಸನ ತೃಷಿ ಭಸಿಯೊಳು ನಿಶಿದಿನ | ಪಶುವಿನ ಪರಿಯಲಿ ದೆಶೆಗೆಡ ಬ್ಯಾಡಾ 2 ಎಂತು ಹೇಳಲಿನ್ನು ಮನವೇ ನಾನು | ಸಾಧು | ಸಂತರ ಸಂಗದಿ ಬಾಳು ನೀನು | ಅಂತರಂಗದಿ ಹರಿ ಮೂಡುವನು | ಹಿತಾಹಿತ ನರಿತು ಸುಮತಿಯಲಿ ಗುರು ಮಹೀ | ಪತಿ ಸುತ ಪ್ರಭು ಸ್ತುತಿರತಿಯಲಿ ಬಾಳು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಿಡೆನು ನಿನ್ನಯ ಪಾದವಾ ಮುಖ್ಯ ಪ್ರಾಣ ಬಿಡೆನು ನಿನ್ನ ಪಾದಾ ಕಡಲ ಹಾರಿದೆನೆಂಬ ಸಡಗರದಿಂದೆನ್ನ ಕಡೆಹಾಯಿಸದೆ ಬೇಗ ಪ. ಹದಿನಾಲ್ಕು ಲೋಕದೊಳು ವ್ಯಾಪಕವಾಗಿ ಮುದದಿಂದ ಹಂಸ ಮಂತ್ರವ ಜಪಿಸುತ ಮಧುವೈರಿಯನು ಒಲಿಸಿ ಕಡೆಗೆ ಅಜ- ಪದವನೈದುವಿ ಸುಖದಿ ವಿಧುಕಳಾಧರ ವಾಸವಾದ್ಯರ ಮುದದಿ ರಕ್ಷಿಸಿ ದೈತ್ಯ ಪುಂಜವ ವಿಬುಧ ಗಣಾರ್ಚಿತ 1 ಮತಿವಂತನಾದಮ್ಯಾಲೆ ತ್ವತ್ಪಾದವೇ ಗತಿಯೆಂದು ನಂಬಿಹೆನು ನೀ- ನಿತ್ತ ಶಕುತಿಯಿಂದ ಪೂಜೆಯನು ಮಾ- ಡುತ ನಿನ್ನ ಪ್ರತಿಮೆಯ ನಮಿಸುವೆನು ವಿತತ ಮಹಿಮನೆ ಪೂರ್ವಭವ ದುಷ್ಕøತಗಳೆನ್ನನು ಪತನಗೊಳಿಪದನತುಳ ನೀ ನೋಡುತ್ತ ಎನ್ನನು ಜತನಮಾಡದೆ ವಿತಥ ಮಾಳ್ಪರೆ 2 ಹಿಂದೆ ತ್ರೇತಾಯುಗದಿ ಈ ಧರಣಿಗೆ ಬಂದು ನೀ ಕಪಿರೂಪದಿ ಅರ- ವಿಂದ ಬಾಂಧವನನು ಸೇರಿದಿ ಇಂದ್ರ ನಂದನನಿಂಗೆ ರಾಜ್ಯವ ಇಂದಿರೇಶನ ದಯದಿ ಕೊಡಿಸಿ ಪು- ರಂದರಗೆ ವರವಿತ್ತ ಬಲದಶ ಕಂಧರನ ಜವದಿಂದ ಗೆಲಿದನೆ 3 ಭೀಮನನೆನಿಸಿ ಕೀಚಕರ ನಿ- ರ್ನಾಮ ಗೊಳಿಸಿ ಜಯಿಸಿ ಕಿಮ್ಮೀರ ಬಕಮಾಗಧರ ಸೀಳಿಸಿ ಸಾಮಗಾಯನ ಲೋಲಕೃಷ್ಣನ ಪ್ರೇಮ ರಸಪೂರ್ಣೈಕ ಪಾತ್ರನಿ- ರಾಮಯನೆ ಧೃತರಾಷ್ಟ್ರತನಯಸ್ತೋಮವನು ತರಿದಮಲರೂಪ 4 ಕಡೆಯಲಿ ಕಲಿಯುಗದಿ ನೀ ಯತಿಯಾಗಿ ಮೃಡನ ತರ್ಕವ ಖಂಡಿಸಿ ಜ್ಞಾನಾ ನಂದಕದಲಿ ಕೃಷ್ಣನ ಸ್ಥಾಪಿಸಿ ಮಾಯಿಗಳನ್ನು ಬಡಿದು ದೂರದಲೋಡಿಸಿ ಪೊಡವಿಗಧಿಪತಿ ಪಾವನಾತ್ಮಕ ಒಡೆಯ ಶೇಷಾಚಲನಿವಾಸನ ಮೆರದನೆ ತಡವ ಮಾಡದಲು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬಿನ್ನಹಕೆ ಬಾಯಿಲ್ಲ ಭೂತನಾಥ ಪ ನಿನ್ನ ಪದರಜ ಸ್ನಾನ ನೀಡೆನ್ನ ಉದ್ಧರಿಸು ಅ.ಪ. ಹೀನ ಯೋಗ್ಯತೆಗಿನ್ನು ಏನು ಮಾಡಲೊ ಸ್ವಾಮಿ ಧೇನು ವತ್ಸನ ತೆರದಿ ಪಾಲಿಸೆನ್ನ ವೇಣುಗೋಪಾಲನಾ ಧ್ಯಾನ ನಿಲ್ಲದು ಮನದಿ ನಾನು ನನ್ನದು ಬಿಡದು ಎನಗಾವ ಗತಿಯಿನ್ನು 1 ನೀಲಕಂಠನೆ ನಿನ್ನ ನೀಳಪಾದದ ಧೂಳಿ ಮೂರ್ಲೋಕದಘತೂಲಕಗ್ನಿ ಸತತ ಫಾಲಾಕ್ಷ ಪತಿತ ಪರಿಪಾಲಕನು ನೀನೊಬ್ಬ ಹಾಲಲ್ಲಿ ಅದ್ದೆನ್ನ ಹರಿಭಕ್ತರ ಬಂಧು 2 ಮನಕರಣ ತನು ವಿಷಯ ಘನಪಾಶದಲಿ ಸಿಕ್ಕಿ ಉಣಿಸುವುವು ಮಹದುಃಖ ಎನ್ನ ಮೀರಿ ತುಂಬಿ ಎನಿತು ನಿನ್ನಲಿ ನಿಂದು ಪೊರೆಯೆಂದು ಮೊರೆ ಇಡಲಿ 3 ದುಷ್ಟವಾಸನೆ ಶಕ್ತಿ ಮೆಟ್ಟಿ ಆಳುವುದೆನ್ನ ವೃಷ್ಟೀಶನಲಿ ಎನ್ನ ಪೋಗಬಿಡದೊ ದುಷ್ಟನಕ್ರಗೆ ಸಿಕ್ಕ ಕರಿಯಂತೆ ಬಾಯ್ಬಿಡುವೆ ಕಷ್ಟ ಪರಿಹರಿಸಯ್ಯ ಹರಿನಿಷ್ಠಧ್ಯಾನವನಿತ್ತು 4 ಶತಕೋಟಿ ಶ್ರುತಿಯಲಿ ಜಯೇಶವಿಠಲ ನತಬಂಧು ಎಂತೆಂದು ಸಾರುತಿಹುದು ಹಿತಭಕ್ತ ನೀ ಹರಿಗೆ ಹರಿಮೀರ ನಿನ್ನುಕ್ತಿ ಪತಿತಪಾವನ ನನ್ನ ಹರಿಭಕ್ತನ ಮಾಡು5
--------------
ಜಯೇಶವಿಠಲ
ಬಿನ್ಯೈಪೆ ನಿನಗಾನು ಭೀಮಸೇನ ಪ ಬನ್ನಬಡುತಿಹ ಜನರ ಭಯವ ಪರಿಹರಿಸೆಂದು ಅ.ಪ. ನೀಚರಿಂದಲಿ ಬಂದ ಭಯಗಳಿಂದಲಿ ಜನರು ಯೋಚಿಸುವರೆಮಗಾರು ಗತಿಯೆನುತಲಿ ಕೀಚಕಾಂತಕ ನಿನ್ನ ಕೀರ್ತಿ ಬಹುವಿಧ ಕೇಳಿ ಯಾಚಿಸುವೆ ನಿನಗಾನು ಎಲ್ಲರನು ಸಲಹೆಂದು 1 ಭವ ವಿಮೋಚಕನು ನೀನೆ ಸಚ ರಾಚರಕೆ ಸಂತತ ಪುರೋಚನಾರಿ ಪ್ರಾಚೀನ ಕರ್ಮಾಬ್ಧಿ ವೀಚಿಯೊಳು ಮುಳುಗಿಹ ಖೇಚರೇಂದ್ರಾಹಿಪ ತ್ರಿಲೋಚನರ ಗುರುವೆ 2 ಖಚರೋತ್ತಮನೆ ನಿನ್ನ ಸುಚರಿತೆಗಳನು ಕೇಳಿ ರಚನೆಗೈಯ ಬಲ್ಲೆನೆ ಅಚಲ ಸತ್ವ ಪ್ರಚಲಿಸುತಿಹ ಮನೋವಚನ ಕಾಯುವ ಘಟೋ ಪ್ರಚಯ ಮಾಡುವುದೆಂದು 3 ಲೋಚಿತದ ಧರ್ಮಗಳ ಸೂಚಿಸೆಮಗೆ ಪಾಚಕನೆ ನಿನ್ನಡಿಗೆ ಚಾಚುವೆನು ಶಿರ ಸವ್ಯ ಸಾಚಿ ಸೋದರನೆ ದಯದಿ ಗೋಚರಿಸಿ ಸಲಹೆಂದು 4 ವಾಚಾಮಗೋಚರ ಜಗನ್ನಾಥ ವಿಠ್ಠಲನ ಶ್ರೀ ಚರಣ ಭಜಕನೆ ನಿಶಾಚರಾರಿ ಮೈಚರ್ಮ ಸುಲಿದು ದುಶ್ಯಾಸನನ ರಕುತ ಪರಿ ಷೇಚನೆಯ ಮಾಡಿದೆ ಮಹೋಚಿತವಿದೆಂದರಿದು 5
--------------
ಜಗನ್ನಾಥದಾಸರು
ಬೆಟ್ಟದ ಶೃಂಗವ ಹತ್ತಿ ಧುಮುಕುವೆ ನಾನು ಕೃಷ್ಣನೇ ಸರ್ವೋತ್ತಮ ಮತ್ತಾರೊಬ್ಬರಿಲ್ಲವೆಂದು ಪ ಪಂಕಜಾಸನಾಹಿಪ ಶಂಕರಾದಿಗಳು ಹರಿಗೆ ಕಿಂಕರರು ಮತ್ತು ಇವಗೆ ಪುತ್ರ ಪೌತ್ರರು `ಏಕೋ ನಾರಾಯಣ ಆಸೀನ್ನಬ್ರಹ್ಮೇ'ತಿ ಶ್ರುತಿಯೊಂದೇ ಸಾಕೊ ಮತ್ತಿನ್ಯಾಕೆ ಸಂಶಯ ಹರಿ ನೀನೆ ಗತಿಯೆಂದು 1 `ಯಂಕಾಮಯೇ' ಎಂಬ ಶ್ರುತಿ ಪಂಕಜಾಸನಾನಿಲ ಶಂಕರರೆಲ್ಲರೂ ಹರಿಕಿಂಕರರು ಸಿರಿಗೆ ಕಿಂಕರರೆಂಬುದ ನಿಶ್ಶಂಕವಾಗಿ ಪೇಳಲು ಶಂಕೆ ಯಾಕೊ ಸಲಹೊ ಶ್ರೀ ಪಂಕಜಲೋಚನನೆಂದು 2 ಜಾನಕಿ ವಿಯುಕ್ತನಾಗಿ ಕ್ಲೇಶಗಳಪಟ್ಟಿರುವ ಮತ್ತು ಜರಾಸಂಧಗಂಜಿ ಬೆಟ್ಟವೇರಿದನು ನಿರವದ್ಯ ನಿರನಿಷ್ಟ ಎಂಬೊ ಶ್ರುತಿಯನ್ನೆ ನೋಡಿ ನಿರ್ದೋಷನಿದನೆಂದು 3 ದೇವದತ್ತ ಯಜ್ಞದತ್ತ ಮೊದಲಾದ ಜನರಂತೆ ಪುರುಷನಾದ ಮೇಲೆ ಇವನಲ್ಪಗುಣನು ಎಂಬ ದುರ್ಮತಿಯ ಬಿಟ್ಟು ಗುಣಶ್ರುತ ಸವಿರುದ್ಧ ಎಂಬೋ ಶ್ರುತ್ಯರ್ಥವ ತಿಳಿದು ಹರಿಗುಣಪೂರ್ಣನೆಂದು 4 ಸೋಮಕುಲಶೇಖರನೆ ಭಾಮಾವಲ್ಲಭ ಬಲ ರಾಮನಿಗೆ ಸಹೋದರ ಸಾಮಗಪ್ರಿಯ ಶ್ರೀಮನ್ನಾಮಗಿರಿ ಶ್ರೀ ಸ್ವಾಮಿ ನೃಹರಿಯೆ ವಿದ್ಯಾ ರತ್ನಾಕರ ಯೋಗಿಯನ್ನು ಹರಿ ನೀನೆ ರಕ್ಷಿಸೆಂದು 5
--------------
ವಿದ್ಯಾರತ್ನಾಕರತೀರ್ಥರು
ಬೆಡಗು ತೋರುತಲಿದಕೋ ಮಾಧವರಾಯ ಪ ಉಡುರಾಜ ಮೌಳಿ ವಿನುತನೆ ಎನಗೊಂದು ಅ ಕುಂಜವರದ ಧನಂಜಯ ದುರಿತ ಭಂಜಿಸಿ ಕರದಿ ಗುಲಗುಂಜಿಯ ಪಿಡಿದಿದ್ದು 1 ಮೋಕ್ಷ ಪದವಿಯ ಉಪೇಕ್ಷೆ ಮಾಡಿ ಬಂದು ಈ ಕ್ಷಿತಿಯೊಳಗೆ ಪಂಪಾಕ್ಷೇತ್ರದಿ ಇಪ್ಪ2 ಸಗುಣ ಸಾಕಾರನೆ ಜನ್ನಾಥ ವಿಠಲನೆ ಜಗತಿಯ ಬಗೆದಿಲ್ಲಿ ಮಿಗೆ ವಾಸವಾದದ್ದು 3
--------------
ಜಗನ್ನಾಥದಾಸರು
ಬೇಕೆಂದರೆ ಬಾರದು ಒಲ್ಲೆನೆಂದರೆ ಹೋಗದುಏಕಂಜುವಿ, ಶ್ರೀಹರಿ ಕರುಣಿಸದೆ ಒಂದೂ ಆಗದು ಪ ಸುಖವಾದಡೆ ಕಾಣುತ ಮುಖ ಕಮಲವುವಿಕಸಿತವಾಹುದು ಶ್ರೀಹರಿ ಕರುಣದಿದುಃಖವಾದಡೆ ದುಸ್ಥಿತಿಯಲಿರಲು ಅಂ-ಬಕದಲಿ ಜಲ ಪೋಗುವುದೇಕೊ ?ಸುಖದುಃಖ ದಿವ ರಾತ್ರಿಯ ತೆರವದರಿಂದಲಿ ನರರಂ-ಗಕೆ ಬಾಹುದು, ರಕ್ಷಣೆ ಮಾಡುವ ಕಾಶಿಪೀತಾಂಬರಮಕರ ಕುಂಡಲಾಭರಣನ ನೆನೆ ಮನವೆ1 ಸಿರಿ ಬಂದರೆ ಸಿರಿಗಾನಂದವ ಮಾಡುವಿರೇತಕೆ ಮನ ನಿರ್ಮಳ ಧ್ವನಿಯಲಿದರಿದ್ರವು ಬಂದರೆ ಧಾತುಗೆಟ್ಟು ದೇಹಾ-ತುರ ಹೊಂದುವಿರೇತಕೆ ದುಗುಡದಿಸಿರಿ ದಾರಿದ್ರ್ಯವು ಸುರತತಿಗಡರುವತೆರನೆಂದರಿದದರಿಂದಲಿ ಮಾನ-ವರಿಗೆ ಬಾಹುದು, ಪರಿಹರಿಸುವ ಪರಮಾತ್ಮನೆನಿಪಮುರವೈರಿಯ ಬಿಡದಿರು ಎಲೆ ಮನವೆ 2ಬಿ ಜನನವಾದರೆ ಹಾಡಿ ಹರಸಲೇತಕೆಅನುಗತಿಯನು ಹೇಳಿದರಳಲೇಕೆಜನನಮರಣವದೆಲ್ಲರಿಗೆ ಗತಿಬಾಹುದು ಏಕೆಜನನ ಮರಣವನೊಂದು ಹೊರಗೆ ಮಾಡಿ ಪರಜನದೊಳಗಿರಿಸುವ ಸುಜನೇಶ ಮುನೀಶನೆಂ-ದೆನಿಸುವ ಕಾಗಿನೆಲೆಯಾದಿಕೇಶವರಾಯನಅನುಶ್ರುತಿಯನು ಬಿಡದಿರು ಎಲೆ ಮನವೆ 3
--------------
ಕನಕದಾಸ
ಬೇಗದಿ ಮುಕುಂದ ಪ. ಮಾಡುವ ಭಾಗ್ಯ ಕರುಣಿಸೊ ಕೃಪೆಯಿಂದ ಅ.ಪ. ನಿರುತ ನಿನ್ನೊಳಗಿಹವು ಸರಸಿಜ ಭವಮುಖರು ನಿನ್ನಪಾಂಗಮಸ್ಮರಣೆಯಿಂದಲಿ ಬಾಳ್ವರು ಪೀತಾಂಬರದಿಸರಿರವ ರೂಪಿಯಾಗಿ ಹೊಂದಿರುವಳು ನಗುತ 1 ನಿತ್ಯ ಸಂತೃಪ್ತರೂಪ ಸಕಲ ಲೋಕ ವ್ಯಾಪ್ತನಾಗಿರುವ ಭೂಪ ಜ್ಞಪ್ತಿ ಮಾತ್ರದಿ ಎನಗೆ ಒಲಿವ ಪರಮಾಪ್ತ ನೀನಿರುತಿರಲು ನೆನೆದು ಮರುಳಾದೆನು ವಿಲಿಪ್ತಿಯ ಸಲಿಸು 2 ತೋರದೊ ವರದ ನಿನ್ನನು ಮರೆದ ಕಾಯುವರ ಕಾಣೆ ನಿನ್ನಾಣೆ ಸಲಹೊ ಪುರಂದರಗೊಲಿದ 3 ಧರ್ಮಮಾರ್ಗವ ತೊರೆದು ಶೃತ್ಯದಿತ ಸತ್ಕರ್ಮಗಳ ಮರೆದು ನಿರ್ಮಲರನು ಜರಿದು ನೀಚರನೆಲ್ಲ ಭರ್ಮಗೋಸುಗ ತರಿದು ಸುಖವ ನೀಗಿ ನಾ ಬಾಗಿ ಕೂರ್ಮನಂತಿರುವೆ 4 ಆಸೆಯೆಂಬುದು ಎನ್ನನು ನಾನಾವಿಧ ಕ್ಷೇಶಬಡಿಸುವುದಿನ್ನು ಘಾಸಿಗೆ ಒಳಗಾದೆನು ಕೈಯಲಿ ಒಂದು ಕಾಸಿಲ್ಲದವನಾದೆನು ಶ್ರೀಶ ನೀ ಕರುಣಿಸಿನ್ನು ಸದ್ಗತಿಯನ್ನು ಸುಜನಪಹಾಸಗೊಳಿಸದೆ 5
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬ್ರಹ್ಮಜ್ಞಾನ | ಬಿಡು ಬಿಡು ಬಿಡು ನೀ ಸಂಸಾರ ಧ್ಯಾನ |ಕಡೆಯಲ್ಲಿ ನಿನ್ನ ಕಳಹುವರಲ್ಲಿಗೆ | ಬಿಡದಿರು ಸದ್ಗುರುವಿನ ಧ್ಯಾನ ಪ ಯಾತಕೆ ಕಲಿತ್ಯೋ ಬಹು ಯುಕ್ತಿಗಳ | ಬರಿ ಮಾತಿಲಿ ಆಗದು ನಿಜ ಮುಕ್ತಿ | ನೀತಿಯಿಂದ ನೀ ಅರಿತು ನೋಡಲು | ಸ್ವಾತ್ಮದ ಜ್ಞಾನವು ಆಗುವದಿದಕೆ1 ಸತಿ ಸುತರಾ ನೀ ನೋಡಿ ಹಿಗ್ಗುತಿ | ಮಿತಿಯಿಲ್ಲದೆ ಅವರಿಗೆ ತಗ್ಗುತಿ | ಗತಿಯ ಕೊಡುವ ಸಂತರು ಬಂದರೆ | ಮೋತಿಯ ತಿರುವಿ ವ್ಯಸನಕೆ ತಗ್ಗುತಿ 2 ಸಾಧು ಪುರುಷರ ಸಂಗವ ಹಿಡಿಯೊ | ಬೋಧಾಮೃತವನು ನೀ ಕುಡಿಯೊ | ಆದಿಯಲಿ ಭವತಾರಕ ಭಜಕರು | ಹೋದ ಹಾದಿಯ ನೀ ಹಿಡಿಯೊ 3
--------------
ಭಾವತರಕರು
ಬ್ರಹ್ಮದೇವರ ಸ್ತೋತ್ರ* ಮಟ್ಟತಾಳ ಕಂಬು ವಿಹಂಗ ಗಮನ ವಿಭುವೆನಂಬಿದವರ ಪೊರೆವ ವ್ಯಾಸವಿಠಲ ನೀ-ನೆಂಬುವರನ ನಂಬಿದ ನೀಚನ ಮರಿಯಾದಿರು 2 ತ್ರಿವಿಡಿತಾಳ ಜಿಹ್ವೆ ನುಡಿಯದುಸವಿಯದ ನಾನಾ ರಸವನುಂಡು ಬಹುಕಾಲಸವೆದು ಪೋದವು ನಟ್ಟ ಮನವು ಇನ್ನು ತಿರಗದುತವ ವಿಸ್ಮøತಿಯಲಿಂದ ಭೂ ವನದೊಳಿದ್ದ ಮಾ-ನವರ ಚರಿಯದಲಿ ಕೋಪವೆ ತಗ್ಗದುಎವೆ ಇಡುವಿನಿತು ಕಾಲವಾದರು ಪೂಜಾವಿವರದಲ್ಲಿಗೆ ಚಿತ್ತವು ನಿಲ್ಲದು ಭವವಿದೂರನೆ ಕೇಳುಕವಲ ಬುದ್ಧಿಯಲಿಂದ ನವನವ ರೂಪದ ಯುವತಿಯರನಿವಹದ ಅನುಭವ ದ್ವಿವಿಧವಿಂದಿಗೇ ಕಾ-ಯವ ನೋಡಲಿದ್ದಂತೆ ಇಲ್ಲದಂತೆಧ್ರುವದಲಿ ನುಡಿವೆ ಎನ್ನವಗುಣವಿನ್ನೊಂದುಭವಸಾಗರವ ದಾಟಿಸುವ ಜ್ಞಾನಿಗಳ ಪ್ರೀತಿಯನೆ ತ-ಗ್ಗುವಂತೆ ಚತುರ ತೋರುವೆಇವುಗಳಿಂದಾಗುವ ಜನನ ಬಾಧಿಯ ಬಲ್ಲೆಜೀವರಲ್ಲಿ ಹೀನ ಜನ್ಮವ ಬರುವದು ಬಲ್ಲೆಸ್ಥಾವಿರಾಯ ವ್ಯಾನಾದಿ ನೆಗುವವು ಪುಣ್ಯಾಖ್ಯಗಿರಿಗೆಪವಿಯಂಬದನುಗಾಲ ಪಠಿಸಬಲ್ಲೆಪವನನಂತರ್ಯಾಮಿ ಶ್ರೀವ್ಯಾಸವಿಠಲ ಇಂಥಅವಿವೇಕ ಮನುಜಂಗೆ ಆವಗತಿಯಾಗುವದೊ 3 ಅಟ್ಟತಾಳ ಅನ್ಯಾಯ ನಡತಿಗಳ ಚರಿಸುತಲಿಪ್ಪಮನುಜಾಧಮನಿಗೆ ಮಹಿಯೊಳಗೆ ವಿಪ್ರಜನ್ಮವ ನೀನಿತ್ತದಾವ ಬಗೆಯ ಕಾಣೆಇನ್ನೀಗ ಮಾಡುವ ಅನ್ಯಾಯ ನಡತಿಯುತಣ್ಣನ ಕಿಡಿಯಂತೆ ತತ್ಕಾಲಕಿಪ್ಪದುಘನ್ನ ಬವಣೆ ಮುಂದೆ ಅನುಭವವೇ ನಿಜಪನ್ನಗ ಶಯನ ಶ್ರೀ ವ್ಯಾಸವಿಠ್ಠಲ ಸುಪ್ರಸನ್ನ ವದನ ದೇವ ನಿನ್ನ ಪಾದವೆ ಗತಿ 4 ಆದಿತಾಳ ಪಾದ ಚೆನ್ನಾಗಿ ಪೊಂದಿಸಿನಿನ್ನವನಿವನೆಂದು ಮನುಜರಿಂದ ನುಡಿಸಿನಿನ್ನ ಕೀರ್ತನೆಯ ವದನದಿಂದ ಪೇಳಿಸಿಇನ್ನು ಈ ಬಗೆ ಮಾಳ್ಪರೆ ಘನ್ನದಯಾಂಬುಧೇಮನ್ನ ವಾಚ ಕಾಯದಿ ಅನ್ಯಾಯ ಪೆಚ್ಚಿಸದೆಎನ್ನ ಬೆಳವಿಗೆಯಂತೆ ಬೆಳಸದಂತೆ ಮಾಡಿದೆಮನ್ನಣಿಸುವ ಜನರಿಂದ ಮಾಂದ್ಯವ ಮಾಡಿಸಿದೆಸನ್ಯಾಯವಲ್ಲ ಧೊರಿಯೆ ನಿನ್ನ ಚಿತ್ತವೊ ಸ್ವಾಮಿಸನ್ಮುನಿಗಣ ಪ್ರೀಯ ವ್ಯಾಸವಿಠ್ಠಲರೇಯಾನಿನ್ನವರವನೊ ನಿನ್ನ ಸರಿ ಬಂದ ಬಗೆ ಮಾಡೊ 5 ಜತೆ ವೇಣುಗೋಪಾಲ ದಾಸರ ಮನ ಮಂದಿರಾ |ಪ್ರಾಣ ನಿನ್ನದೊ ವ್ಯಾಸವಿಠ್ಠಲ ಗೋಪಾಲಕೃಷ್ಣ ||
--------------
ವ್ಯಾಸವಿಠ್ಠಲರು
ಭಕುತರಪರಾಧವ ಬಗೆಯನೀ ದೇವಭಕುತರು ತಪ್ಪಿದರೆ ಬಲು ಭಯವೀವ ಪ . ಇಟ್ಟುಣಿಸಿದ ಬಲಿ ಕಟ್ಟಿದ ಯಶೋದೆಗೆಇಷ್ಟಾರ್ಥಗಳನಂದು ಕೊಟ್ಟು ಕಾಯನೆದುಷ್ಟತನದಿ ಧೃತರಾಷ್ಟ್ರತನಯ ತನ್ನಕಟ್ಟಲು ಹವಣಿಸೆ ಕಷ್ಟವನುಣಿಸನೆ 1 ಕಾಲಲಿ ತನ್ನ ಅಂಗವನೊದ್ದ ಮುನಿಪನಮೂಲೋಕವರಿಯೆ ಮುದ್ದಿಸಿ ಮೆರೆಯನೆತಾಳದೆ ನೃಪತಿಯ ತಾನೆಂದು ತಿಳಿಯನುಕಾಲಯವನ ಬಂದು ಕಾಳು ಮಾಡಿಸನೆ 2 ಪರವಶಚಿತ್ತನಾಗಿಫಲುಗುಣ ಜರೆಯಲುಹರಿ ದೂರಾಗದೆ ಹರಣವ ಕಾಯನೆಅರಸೆಂಬ ಗರ್ವದಿಂದ ಅರಿಭಟ ಪೌಂಡ್ರಕನಧುರಕೆ ಗುರಿಯ ಮಾಡಿ ಧುರದಿ ಕೊಲಿಸನೆ3 ಶರಕೆ ಗುರಿಯ ಮಾಡಿ ಸಮರದೊಳೊಡ್ಡಿದಸುರವ್ರತÀಗಂದು ಶುಭವನೀಯನೆಹರನ ಮೆಚ್ಚಿಸಿ ತನ್ನ ಗೆಲುವ ಬಿಲ್ಲ ಬೇಡಿದಶರೀರ ಸಂಬಂಧಿಯ ಕೊಲಿಸನೆ 4 ಮಕುಟವ ಕದ್ದೊಯ್ಯಲು ಮಹಾಬಲಿಯ ಬಾಗಿಲಅಕಳಂಕನಂದು ಕಾವುದ ಬಿಟ್ಟನೆಈ ಕೃಷ್ಣ ಹಯವದನನಿಂದುಡುಪಿನ ಜನಕೆಶೋಕವಿತ್ತ ಕಳ್ಳನಿಗೆ ಶೂಲಗತಿಯೀಯನೆ5
--------------
ವಾದಿರಾಜ