ಒಟ್ಟು 1741 ಕಡೆಗಳಲ್ಲಿ , 101 ದಾಸರು , 1310 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿಂದ ನಿನ್ನಾನಂದದಲ್ಲಿಡೋ ಗೋವಿಂದ ಪ ಗೋವಿಂದ ಹೃದಯಾರವಿಂದದಲ್ಲಿ ಇಂದೂ ಮುಂದೂ ಚರಣಾರವಿಂದ ತೋರೊ ಅ.ಪ ಬೆಟ್ಟದ ದರುಶನ ಲಾಭವು ಕಷ್ಟ ಪಟ್ಟರು ದೊರೆಯಲಸಾಧ್ಯವು ನೋಡೆ ಸುಟ್ಟು ಹೋಗುವುದಘರಾಶಿಯು ಪಟ್ಟ ಶ್ರಮವು ಇಷ್ಟಾರ್ಥವು ದಿಟ್ಟ ಮನವ ಕೊಟ್ಟು ಅಟ್ಟುರಿಯ ಕಳೆದು ಮೆಟ್ಟು ಮೆಟ್ಟಲನೇರಿ ದಿಟ್ಟಿಪರೋ ನಿನ್ನ1 ಪದುಮಜಾಂಡ ಕೋಟಿ ನಾಯಕ ದೇವ ಶ್ರೀದ ಸೃಷ್ಟಾದ್ಯಷ್ಟ ಕರ್ತೃ ನೀನೆ ಆದ್ಯಂತ ಜಗದಾಧಾರಕ ಅಂತರಾತ್ಮಕ ವಿಶ್ವವ್ಯಾಪಕ ಆದಿಮೂಲ ಚತುಷ್ಪಾದ ಎಂದೆನಿಸಿ ತ್ರಿ- ಪಾದ ಇಳೆಯೊಳಿಟ್ಟೆ 2 ಸದಮಲಾತ್ಮಕನೇ ದೇವ ಸರ್ವದಾ ಎಲ್ಲಾ ಹದಿನಾಲ್ಕು ಲೋಕವ ಧರಿಸಿದೆ ದಿವ್ಯ ನೆಲೆಸಿದೆ ಸರ್ವರ ಹೃದಯದ ಪದುಮದಲಿ ಪೊಳೆದು ತ್ರಿಜಗವಂದಿತನಾಗಿ ಮೇದಿನಿಯೊಳು ಮೆರೆಯುತಿಹೆ 3 ಧ್ವಜವಜ್ರಾಂಕುಶಯುಕ್ತಲಾಂಛನ ದೆÉೀವ ಅಬ್ಜಭವಾರಾಧ್ಯ ಚರಣದಿವ್ಯ- ಅಬ್ಜಸಖಕೋಟಿಕಿರಣ ಪಾದಾಭರಣದಿಂದ ಕಿರಣಾ ತಾ ಝಗಝಗಿಸುತ್ತ ನೂಪುರ ಕಾಲಂದಿಗೆ ಗೆಜ್ಜೆ ಸಜ್ಜುಗೊಂಡಿಹ ಮೂರ್ಜಗದೊಡೆಯನೆ ಹರಿ 4 ತಟಿತಕೋಟಿನಿಭಸಮಕಾಯ ಕಟಿಯ ದಿವ್ಯರತ್ನಖಚಿತದಟ್ಟಿಯಾ ತೊಟ್ಟ ಪಟ್ಟೆಪೀತಾಂಬರ ಬಟ್ಟೆಯಾ ಸೊಂಟಪಟ್ಟಿಯ ಇಟ್ಟ ಪರಿಯಾ ಅಟ್ಟಹಾಸದಿ ನಿಂದ ಸೃಷ್ಟಿಗೊಡೆಯ ಮನೋ- ಭೀಷ್ಟದಾಯಕ ಬೆಟ್ಟದೊಡೆಯನೆ 5 ಕರಚತುಷ್ಟಯದಲ್ಲಿ ಮೆರಯುವಾ ಶ್ರೀ ಸು- ದರ್ಶನ ಶಂಖದಿಂದಿರುವಾ ದೀನ ಶರಣಜನರಿಗಭಯ ಹಸ್ತವಾ ಕರೆದು ನೀಡುವ ಕಾಮಿತಾರ್ಥವ ಪರಿಪರಿ ಭಾಪುರಿ ಭುಜಗಾಭರಣಾದಿಗಳ ಧರಿಸಿರುತ ಭಕ್ತಜನರಘ ಹರಿಸುವಾ6 ವಕ್ಷಸ್ಥಳದಲ್ಲಿ ಶ್ರೀವತ್ಸವೂ ಕಂಠ ದಕ್ಷಿಣದಲ್ಲಿ ತೋರ ನಕ್ಷತ್ರದಂತಿಹ ಹಾರವೂ ಕುಕ್ಷಿ ಅಂದವೂ ಮೋಕ್ಷದಾತೃವು ಅಕ್ಷರ ವಾಚ್ಯತ್ರ್ಯಕ್ಷಾದಿ ಸುರವಂದ್ಯ ಈ ಕ್ಷಿತಿಗಿಳಿದು ಪ್ರತ್ಯಕ್ಷನಾಗಿ ನಿಂದೆ 7 ಮಂದಹಾಸಮುಖ ಅರವಿಂದ ದಂತ ಚಂದಕರ್ಣಕುಂಡಲದಿಂದ ಕೆಂದುಟಿಯಿಂದ ಒಪ್ಪುವ ಚೆಂದ ಪೊಂದಿ ಮಕುಟ ಸರ್ವಾಲಂಕಾರ ಪರಿಪೂರ್u ಬಂಧ ಮೋಚನ ಹರಿ ಶ್ರೀ ವೇಂಕಟೇಶನೆ 8 ಪರಿಪರಿ ಮುಕ್ತಜೀವರುಗಳು ಇಲ್ಲಿ ಪರಿವಾರ ತರುಲತೆ ಶಿಲೆಗಳು ಇನ್ನು ವಿರಜೆ ಮೊದಲಾದ ಸರ್ವತೀರ್ಥವು ಸ್ವಾಮಿ ತೀರ್ಥವೂ ಮೋಕ್ಷದಾತೃವೂ ಭವ ಶಕ್ರಾದಿನುತಉರಗಾದ್ರಿವಾಸವಿಠಲ ಜಗದೀಶನೆ 9
--------------
ಉರಗಾದ್ರಿವಾಸವಿಠಲದಾಸರು
ಗೋವಿಂದ ವಿಠಲ ನಿನ್ನ ವಂದಿಸುವೆ ಸ್ವಾಮಿನೀ ಒಲಿದು ರಕ್ಷಿಸುವುದು ಜೀವಿ ಇವ ಬಹುಕಾಲಸಾವ ಸಾವ ನಿನ್ನ ಸೇವೆಯೊಳಗೆ ಇಟ್ಟು ಕಾವುದು ನಿರುತ ಪ. ಆವ ಈ ಯುಗದಲ್ಲಿ ನಿನ್ನ ವಿಷಯರಾಗಿಈವ ಸುಜನರು ಸ್ವಲ್ಪರು ತಾ ವ್ಯಾಪಿಸಿ ಇಹರುಅಸುರರೆ ಬಹುಳಾಗಿ ಆವದವಸ್ಥೆಗಳಲಿನೀ ವರವನು ಕಲಿಗೆ ಇತ್ತ ಕಾರಣ ಉಪಜೀವರ ವ್ಯಾಪಾರಈ ವಿಧದಲಿ ತಳೆದು ನಿನ್ನ ಹುಡುಕುತಲಿನ್ನುಜೀವಿ ಸಾತ್ವಿಕನು ಮೊರೆಯಿಡಲು ಬಿನ್ನಯಿಸಿದೆನೊ 1 ಏನು ಸಾಧನವನು ಖೂಳವನು ಕಂಡಿನ್ನುನೀನು ವಂದಿಸಿವೆಂದರೆ ಜ್ಞಾನಭಕುತಿ ಉಳ್ಳಜ್ಞಾನಿಗಳಲಿವಗೆ ನಾನು ಕಂಡೆನು ಭಕುತಿಯಕ್ಷೋಣಿಯಲಿ ಭಕುತಿ ನಿನ್ನಲಿ ಪುಟ್ಟಲಿಬಹುದುಜ್ಞಾನಿಗಳ ದುರ್ಲಭ ನೀನು ಒಲಿವುವ ಅವಗೆನಾನವರಲಿ ಭಕುತೀವೆ ನಾನಾಸಾಧನ ಫಲವಿದೆ ನೋಡಾ 2 ಪ್ರಾರ್ಥಿಸುವೆ ನಾ ನಿನ್ನ ಪ್ರೇರಣೆಯ ಅನುಸಾರಕೀರ್ತಿ ನಿನ್ನದು ಜಗದೊಳು ಪಾತ್ರ ಇವನೆಂದುನಿನ್ನ ಚಿತ್ತದಲಿ ಇತ್ತೆ ಸಾರ್ಥಕನ ಮಾಡು ಚೆಂ ಸ್ವಾ ?ಕೀರ್ತನೆಯ ಮಾಡಿಸು ನಿನ್ನ ಪರವಾಗಿ ನಿಜಸ್ಫೂರ್ತಿಸಖರಂಗ ಗೋಪಾಲವಿಠಲ ಶ್ರುತಿಶಾಸ್ತ್ರಾರ್ಥವನುಸಾರ ಪ್ರಾಪ್ತಿ ನೀನಾಗಿವಗೆ3
--------------
ಗೋಪಾಲದಾಸರು
ಗೋವಿಂದ ಹರಿ ಗೋವಿಂದ ಪ ಗೋವಿಂದ ಪರಮಾನಂದ ಮುಕುಂದಅ ಮಚ್ಛ್ಯಾವತಾರದೊಳಾಳಿದನೆ - ಮಂದರಾಚಲ ಬೆನ್ನೊಳು ತಾಳಿದನೆಅಚ್ಛ ಸೂಕರನಾಗಿ ಬಾಳಿದನೆ - ಮದಹೆಚ್ಚೆ ಹಿರಣ್ಯಕನ ಸೀಳಿದನೆ1 ಕುಂಭಿನಿ ದಾನವ ಬೇಡಿದನೆ - ಕ್ಷಾತ್ರ-ರೆಂಬುವರನು ಹತ ಮಾಡಿದನೆಅಂಬುಧಿಗೆ ಶರ ಹೂಡಿದನೆ - ಕಮ-ಲಾಂಬಕ ಗೊಲ್ಲರೊಳಾಡಿದನೆ 2 ವಸುದೇವನುದರದಿ ಪುಟ್ಟಿದನೆ - ಪಲ್‍ಮಸೆವ ದನುಜರೊಡೆಗುಟ್ಟಿದನೆಎಸೆವ ಕಾಳಿಂಗನ ಮೆಟ್ಟಿದನೆ - ಬಾ-ಧಿಸುವರ ಯಮಪುರಕಟ್ಟಿದನೆ 3 ಪೂತನಿಯ ಮೈ ಸೋಕಿದನೆ - ಬಲುಘಾತದ ಮೊಲೆಯುಂಡು ತೇಕಿದನೆಘಾತಕಿಯನತ್ತ ನೂಕಿದನೆ - ಗೋಪವ್ರಾತ ಗೋಗಳನೆಲ್ಲ ಸಾಕಿದನೆ4 ಸಾಧಿಸಿ ತ್ರಿಪುರರ ಗೆಲಿದವನೆ - ಮ್ಲೇಚ್ಛರಛೇದಿಸೆ ಹಯವೇರಿ ಕೆಲೆದವನೆಸಾಧುಸಂತರೊಡನೆ ನಲಿದವನೆ - ಬಾಡದಾದಿಕೇಶವ ಕನಕಗೊಲಿದವನೆ 5
--------------
ಕನಕದಾಸ
ಚಂಡನಾಡಿದ ಹರಿ ಚಂಡನಾಡಿದ ಪ ಪುಂಡರೀಕ ಕುಸುಮಮಯದ ಅ.ಪ. ಸಾರ ಸೊಬಗಿನಿಂದ ನೋಡಿ ಕರವ ನೀಡಿ ಪಾರಿಜಾತ ಕುಸುಮಮಯದ 1 ಸೊಂಪಿನಿಂದ ಮಂದಹಾಸ ಪೆಂಪುದೋರೆ ಸಿರಿಯಮ್ಮೆ ಗಂಪಿನಿಂದ ರಮೆಯು ಸಹಿತ ಚಂಪಕದ ಕುಸುಮಮಯದ 2 ಪುಲ್ಲನಯನ ಪರಿಮಳವ ಚೆಲ್ವ ಚಂದ್ರ ಕಿರಣದಂತೆ ಚೆಲ್ವನಾಂತ ಸರಸಮಾನ ಮಲ್ಲಿಗೆಯ ಕುಸುಮಮಯದ 3 ದಿವ್ಯ ಮಾಧುಪ ಝೇಂಕೃತಿಯು ಭವ್ಯಮಾಗೆ ದಿವಿಜರೆಲ್ಲ ದಿವ್ಯಮೆಂದು ಪೊಗಳೆ ಸುಖದಿ ನವ್ಯ ಜಾಜಿ ಕುಸುಮಮಯದ 4 ಶ್ರೀನಿವಾಸ ಸಕಲ ಹೃದಯ ಶ್ರೀನಿವಾಸ ಧೇನುನಗರಶ್ರೀನಿವಾಸ ವೆಂಕಟೇಶ ಶ್ರೀನಿವಾಸ ಕುಸುಮಮಯದ 5
--------------
ಬೇಟೆರಾಯ ದೀಕ್ಷಿತರು
ಚಂಡನಾಡುವ ಬಾರೆಲೈ ಪ್ರಾಣೇಶ್ವರ ಪ. ಮಲ್ಲೆ ಜಾಜಿ ಸಂಪಿಗೆ ಮೇಣ್ ಮಲ್ಲಿಗೆ ಇರುವಂತಿಗೆ ಚಲ್ವ ಪಾರಿಜಾತದಿಂದ ಚೆಲ್ವನಾಂತು ಮೆರೆಯುತಿರ್ಪ 1 ಪರಿಮಳಾನ್ವಿತ ಪಾಟಲೀ ಸುರಗಿ ಸೇವಂತಿಗೇ ಸುರಭಿಳÀ ಕರಮಾಗಿ ಯೆಸವಪರಿಯನೋಡಿ ನಲಿಯುತಾವು 2 ವಿಮಲಶೇಷಶೈಲವಾಸ ಕಮಲಬಾಂಧವ ಸದೃಶಭಾಸ ಕಮಲನಾಭ ಭಕ್ತಪಾಲ ರಮಣ ನಿನ್ನ ಕಮಲಪಾಣಿಯಿಂ3
--------------
ನಂಜನಗೂಡು ತಿರುಮಲಾಂಬಾ
ಚಂದಮ್ಮ ಬಲು ಚೆಂದಮ್ಮ ಗೋ ವಿಂದನ ದಾಸರ ಸಂಗಮ್ಮ ಪ ಪಾದ ಪದ್ಮಮ್ಮ ನೀ ನ್ಹೊಂದಿ ಭಜಿಸು ಸದಾನಂದಮ್ಮ ಅ.ಪ ಸಂದೇಹ ಕಡಿಯಂತರಂಗಮ್ಮ ಮು ಕ್ಕುಂದನತಿಳಿ ನಿಜಲಿಂಗಮ್ಮ ನಿಂದೆ ಬಳಸದಿರು ತುಂಗಮ್ಮ ಭವ ಬಂಧವು ನಿನಗಿಲ್ಲ ಗಂಗಮ್ಮ 1 ಸಾಧಿಸು ನಿಜದೃಢ ತುಳಸಮ್ಮ ಸಂ ಪಾದಿಸು ನಿಜಜ್ಞಾನ ಶರಣಮ್ಮ ಸಾಧುಜನಕೆ ಬಾಗು ಸುಶೀಲಮ್ಮ ಪರ ಸಾಧನೆ ನಿನ್ನಗೆ ಸರಸಮ್ಮ2 ಕಾಮಿತಕಳಿ ಭಾಗ್ಯಲಕ್ಷಮ್ಮ ನೀ ತಾಮಸತೊಳಿ ಮನ ಸೀತಮ್ಮ ಸ್ವಾಮಿಧ್ಯಾನಪಿಡಿ ಸತ್ಯಮ್ಮ ಶ್ರೀ ರಾಮನ ನಂಬುನೀ ಮುಕ್ತ್ಯಮ್ಮ 3
--------------
ರಾಮದಾಸರು
ಚಂದಲಾ ಪರಮೇಶ್ವರಿ ವಂದಿಸುವೆನು ಚಂದಲಾ ಪರಮೇಶ್ವರಿ ಪ ಚೆಂದಾಗಿ ಮನಸಿಗಾನಂದ ನೀಡುವ ನಿನ್ನಮುಂದೆಯೆ ಕಂದ ತಾ ಬಂದು ನಿಂದಿಹೆನವ್ವ ಅ.ಪ. ಘನದಯಾವಂತೆ ಕಾಯೆ ಇದು ನಿನ್ನಅನುಗ್ರಹವೆಂಬೆ ತಾಯೆಕನಸಿನೊಳಿರಲಿಲ್ಲ ಮನಸಿನೊಳಿರಲಿಲ್ಲಜನನಿ ನೀನೆ ಕರೆಸಿ ದರುಶನವಿತ್ತವ್ವ 1 ಸನಿತೆಯೊಳ್ಬಂದು ನಿಂತು ದಯಾಮೃತವಹನಿಸುವಿ ಜನರಿಂಗಿತುಜನರ ಪಾವನ ಮಾಡಿ ಘನ ಸಂತಸ ನೀಡಿಅನುದಿನ ಜನ ಪಾಡಿ ಕುಣಿಯುವಂತೆ ಕೃಪೆ ಮಾಡೆ 2 ಸದಯಾಮೂರ್ತಿಯು ನೀ ಸತ್ಯ ನಿನ್ನಯ ಪಾದಪದುಮಕೆ ಮಣಿಯುವೆ ನಿತ್ಯಗದುಗಿನ ವೀರನಾರಾಯಣನೆನ್ನಯಹೃದಯದಿ ಸತತ ನಿಲುವಂತೆ ಕರುಣಿಸೌ 3
--------------
ವೀರನಾರಾಯಣ
ಚಂದ್ರಹಾಸನ ಕಥೆ ಸುಜನ ತ್ರೈಭುವನೋದ್ಧಾರ ಕಾರುಣ್ಯನಿಧಿ ಹೆಳವನಕಟ್ಟೆರಂಗಯ್ಯ ನಾರಾಯಣ ಶರಣೆಂಬೆ 1 ಭಕ್ತರ ಭಾಗ್ಯನಿಧಿಯೆ ನುಡಿಸಯ್ಯ ಎನ್ನ ಜಿಹ್ವೆಯಲಿ 2 ಅಜಹರಿಸುರ ವಂದಿತನೆ ನಿಜವಾಗೊ ಮತಿಗೆ ಮಂಗಳವ 3 ಸಂಗೀತಲೋಲೆ ಸುಶೀಲೆ ಹಿಂಗದೆ ನೆಲಸೆನ್ನ ತಾಯೆ 4 ನಿತ್ಯಾನಂದ ರಜತಾಚಲವಾಸನೆ ಭಕ್ತವತ್ಸಲ ಭಾಳನೇತ್ರ ಮುಗಿದು ವಂದಿಸುವೆ 5 ಸೂರ್ಯ ಪತಿಯ ಚರಣವನ್ನು ನೆನೆವೆ ಮಂಗಳವಾಗಲೆಂದು 6 ಒರೆದಂಥ ಜೈಮಿನಿಯೊಳಗೆ ಮಾಡಿ ವರ್ಣಿಸುವೆ 7 ಸಂದೇಹ ಮಾಡುತ್ತಿರಲು ಪೇಳಿದ ಫಲುಗುಣಗೆ 8 ಮುಂದೊತ್ತಿ ರಥವ ಬೆಂಬತ್ತಿ ನಿಂದಿರಿಸಿದ ಚಂದ್ರಹಾಸ 9 ವೈಷ್ಣವಕುಲ ಶಿರೋರನ್ನ ಪರಾಕ್ರಮ ದಿಟ್ಟರಿಗಿದು ನೀತವೆಂದು 10 ನ್ನೊಡೆಯಗೆ ಪೇಳಿದರಾಗ ಕಡುಚಿಂತೆಯಲಿ ಪಾರ್ಥನಿದ್ದ 11 ದಿನಕರ ಪ್ರತಿಬಿಂಬದಂತೆ ವನಜನಾಭ ಕೃಷ್ಣ ಶರಣೆನ್ನುತ ಸುರಮುನಿ ಇಳಿದಂಬರದಿಂದ12 ಉಟ್ಟಿಹ ಕರದಿ ವೇಣುವನು ಶ್ರೇಷ್ಠÀ ಬಂದನು ಇವರೆಡೆಗೆ 13 ಆನಂದದಿಂದ ಕೇಳಿದರು 14 ಎಲ್ಲ ವೃತ್ತಾಂತವನರುಹಿ ಬಲ್ಲಿದ ತುರಗವ ಕಟ್ಟಿದ ಧೀರ ಅಲ್ಲಾರು ಎನುತ ಕೇಳಿದರು15 ಪ್ರಮುಖರಿಲ್ಲ್ಯಾರು ಪೇಳೆನುಲು ಸಮಯವಲ್ಲವು ಪೇಳೆನಲು 16 ವ್ಯಾಸಾಂಬರೀಷ ವಿಭೀಷಣಕ್ರೂರ ಪರಾಶರ ಧ್ರುವ ಪ್ರಹಲ್ಲಾದ ಈಸುಮಂದಿ ಭಕ್ತರಿಗಧಿಕನು ಚಂದ್ರಹಾಸನೆಂಬಾ ಹರಿಭಕ್ತ17 ಹೇಳಬೇಕೆನುತ ಮುನೀಶನೆಂದೆಂಬ ಕೇರಾಳದೇಶದ ರಾಜ್ಯವನು ಪ್ರಧಾನಿಯನು 18 ಭೂತಮೂಲದಲಿ ಪುಟ್ಟಿದನು ತಾತ ಕಾಲವಾಗಿ ಪೋದ 19 ಸಾಯಲಾದಳು ರಾಜಪತ್ನಿ ಸಿರಿ ಪರರಾಯರು ಬಂದು ಕಟ್ಟಿದರು20 ಬಾಲನಿರಲು ಆ ಶಿಶುವೆತ್ತಿ ನಡೆದಳು 21 ಕುಂತಳಪುರಕಾಗಿ ಬಂದು ಆ ಗ್ರಾಮದಲ್ಲಿ 22 ಎರೆದು ಪೋಷಣೆಯ ಮಾಡುವಳು ಮರುಗುತಿರ್ದಳು ಮನದೊಳಗೆ 23 ಹಾಸುವ ವಸ್ತ್ರಗಳಿಲ್ಲ ಬೇಸತ್ತು ಅಳಲುವಳೊಮ್ಮೆ 24 ನೋಡಿ ಹಿಗ್ಗುವಳು ಆಲಂಬದಲ್ಲಿರುತಿಹಳು 25 ಕಂಗಳ ಕುಡಿನೋಟವೆಸೆಯೆ ಮಂಗಳಗಾತ್ರದ ಮುದ್ದುಬಾಲಕನೆಲ್ಲರಂಗಳ- ದೊಳಗಾಡುತಿಹನು 26 ಪರಪುಟ್ಟನಾದುದ ಕಂಡು ಮಡಿಯ ಪೊದಿಸುವರು 27 ಮಾಗಾಯಿ ಮುರವಿಟ್ಟು ಮನ್ನಿಸಿ ಕೆನೆಮೊಸ- ರೋಗರವನ್ನು ಉಣಿಸುವರು ರಾಗಗಾನದಲಿ ಪಾಡುವರು 28 ಎಣ್ಣೂರಿಗೆಯನು ಕೊಡಿಸುವರು ಕೇರಿ ಕೇರಿಗಳೊಳು ಕೊಡುವರೆಲ್ಲರ ಕಾರುಣ್ಯದ ಕಂದನಾಗಿ29 ತಮ್ಮಾಲಯದೊಳು ಕರೆದೊಯ್ದು ಮಾಲೆಯನವಗೆ ಹಾಕುವರು 30 ಮಾವಿನ ಫಲಗಳನು ಮದನನಯ್ಯನ ಕಿಂಕರಗೆ 31 ಸಾಲಿಗ್ರಾಮ ಶಿಲೆಯ ಅಷ್ಟು ಜನರಿಗೆ ತೋರಿಸಿದ 32 ಪುಣ್ಯೋದಯದಿ ಸಾಲಿಗ್ರಾಮ ಶಿಲೆಯು ಲಕ್ಷ್ಮಿನಾರಾಯಣ ಮೂರುತಿಯ 33 ಕೂಡಿದ ಗೆಳೆಯರ ಕೂಡೆ ದೌಡೆಯೊಳಿಟ್ಟು ಕೊಂಡಿಹನು 34 ಮಂಡೆಗಳನು ತಗ್ಗಿಸುವನು 35 ಬೆಚ್ಚುವನಪಹರಿಸುವರೆನುತ ಬಹು ಎಚ್ಚೆತ್ತು ಪಿಡಿದಾಡುವನು ಬಾಯೊಳಗಿಡುವ 36 ಮಂದಿರದಲಿ ವಿಪ್ರರಿಗೆ ಆ- ಬಂದರು ಬುಧಜನರೆಲ್ಲ 37 ಶ್ರೇಷ್ಠರೆಲ್ಲರ ಕುಳ್ಳಿರಿಸಿ 38 ಮಂತ್ರಾಕ್ಷತೆಯನು ಮಂತ್ರಿಗಿತ್ತು ಲಕ್ಷಣವನ್ನೆ ನೋಡಿದರು 39
--------------
ಹೆಳವನಕಟ್ಟೆ ಗಿರಿಯಮ್ಮ
ಚನ್ನಕೇಶವ ಇನ್ನೇನಿನ್ನೇನಿನ್ನು ಯನಗಿನ್ನೇನಿನ್ನೇನಿನ್ನು ಪ. ಚನ್ನಕೇಶವನಿವನನ್ನು ಹೃದಯದೊಳ್ ಚೆನ್ನಾಗಿ ನೆಲಸಿರಲಿನ್ನೇನ ಬೇಡುವೆ 1 ಭುವಿಜಾತೆಯೆನ್ನ ಮಾತೆ - ಭುವಿನಾಥನೆನ್ನ ತಾತ ಇವರೆನ್ನೊಳಿರುತಿರೆ ಭವಕ್ಲೇಶ ಪರಿದಿರೆ 2 ಅಂಡಜವಾಹನಾಖಂಡಲಾರ್ಚಿತನ ಪುಂಡರೀಕಾಕ್ಷನ ಕಂಡು ಕೊಂಡಾಡಿದೆ 3 ಧರೆಯೊಳಧಿಕ ಶೇಷಗಿರಿಯೊಳು ನೆಲಸಿರ್ಪ ವರದ ಶ್ರೀನರಹರಿ ವರದನೆನ್ನೊಳಿರೆ 4
--------------
ನಂಜನಗೂಡು ತಿರುಮಲಾಂಬಾ
ಚರಿತೆಯ ಪೇಳಬೇಕೆ ಪ ಕೊರತೆಗಳೆಣಿಸದೆ | ಸ್ಥಿರಸುಖದೊಳು ಬಾಳಿ ಅ.ಪ ಚದುರ ಚೆನ್ನಿಗ ಮುದ್ದು | ಪದುಮದಳಾಕ್ಷನ 1 ಕಾಲಿನೊಳೊದೆದೆಲ್ಲ | ಶ್ರೀಲೋಲನುಣಲೊಲ್ಲ 2 ಹರಿಣಾಕ್ಷಿಯರಿರೇನು | ಮರುಳರಂತೊರೆವಿರೆ 3 ಮೆಚ್ಚಿನ ಮಾತಿದು | ಸಚ್ಚರಿತವಿದೆಂದು 4 ಬಿಗಿವೆ ಸದಾನಂದ | ವಾಗಲಿ ನಿಮಗೆಲ್ಲ 5
--------------
ಸದಾನಂದರು
ಚರಿಯ ಪೇಳುವೆನು ಚರಿಯ ಪೇಳುವೆವು ಪ. ಕೃಷ್ಣ ಬಂದೆಮ್ಮಾಲಯದೊಳು ಲೂಟಿಗೈದಿಪನೆ ಅ.ಪ. ಗುಲ್ಲು ಮಾಡದೆ ಘುಲ್ಲ ಲೋಚನ ಮೆಲ್ಲಡಿ ಇಡುತ ಬಂದೂ ಗಲ್ಲಕೆ ಮುತ್ತು ಕೊಟ್ಟು ಎಮ್ಮಾ ಗಲ್ಲ ಪಿಡಿಯುವನೆ ಶ್ರೀಕೃಷ್ಣ ಗುಲ್ಲು ಮಾಡುವನೆ ಯಶೋದೆ 1 ನೆಲುವಿಲಿದ್ದ ಬೆಣ್ಣೆ ಕದ್ದ ಚೆಲುವ ಕೃಷ್ಣನೆ ದೇವಾ ಛಲದಿ ಪಿಡಿಯಾಪೋದರೆಮ್ಮಾ ಅಣಕ ಮಾಡುತ್ತಾ ಮುರಾರಿ ಪರಾರಿಯಾದನೇ ಯಶೋದೆ 2 ಹಿರಿಯಕಾಲದ ಸಾಲಿಗ್ರಾಮ ಕರಿಯ ಕಲ್ಲೆಂದು ಶ್ರೀ ಕೃಷ್ಣ ಭರದಿ ಬಾಯೊಳ ನುಂಗಿ ಜಗಕೆ ತಾನ್ಹಿರಿಯನೆಂಬುವನೆ ಯಶೋದೆ ಹಿರಿಯನೆಂಬುವನೆ 3 ಗೊಲ್ಲಸತಿಯೇರೊಡನೆ ಪೋಗಿ ಮೆಲ್ಲ ಮೆಲ್ಲನೆ ಶ್ರೀಕೃಷ್ಣ ಚೆಲ್ಲಿಮೊಸರ ಗಡಿಗೆಯೊಡೆದು ಸಲ್ಲಾಪತೋರೆಂಬುವನೆ ಯಶೋದೆ ಸರಸತೋರೆಂಬುವನೆ 4 ಸಿರಿರಮಣನ ಕರೆದು ನೀನು ಬರೆಯ ಬೇಕಮ್ಮಾ ಬುದ್ಧಿ ಥರವೆಯಮ್ಮಾ ಕೂಡಿ ತರಳಾ ಸರಸವಾಡುವುದು ಶ್ರೀ ಶ್ರೀನಿವಾಸ 5
--------------
ಸರಸ್ವತಿ ಬಾಯಿ
ಚಿಕ್ಕವನೇನೆ ಮಿಕ್ಕಾದಂಥ | ಮಕ್ಕಳಿಲ್ಲೇನೆ, ನಿಮ್ಮವರೊಳು ||ದಿಕ್ಕಿಲ್ಲವೇನೆ, ಇವಗೆ ತಕ್ಕ |ಬುದ್ಧಿಯ ಕಲಿಸುವವರಿನ್ನು ಪ ತಂಡ ತಂಡದಿ ಬರುತಿಹ ನಮ್ಮನ |ಕಂಡು ಆಡುವ ಆಟಕಿಯ ಬಿಟ್ಟು ||ಚೆಂಡು ಪುಟಿದು ಬಂತು ಬಚ್ಚಿಟ್ಟಿರ್ಯಾಕೆಂದು |ದುಂಡ ತೋಳಗಳೆತ್ತಿ ಭಂಡು ಮಾಡುವನಿವ 1 ಶಿಶುವೆಂದು ಎತ್ತಪ್ಪಿಕೊಂಡು ಮುದ್ದಿಡಲು |ದಶನಗಳಿಂದಧರ ನೋಯಿಸಲು ||ಆಶೆಯಲಸುವ ಪೀರಿದವನಿವನೆಂದಂಜಿ |ಸೊಸಿಯನ್ನಬ್ಬರಿಸಿ ಬೀದಿಯೊಳಂದು 2 ಆರಿಲ್ಲದಾಗೊಬ್ಬವನನ್ನು ಬಾಲಕನೆಂದು |ದ್ವಾರವಿಕ್ಕಿ ನೀರೆ ಮೇಲಿರಿಸಿ ||ಬಾರಯ್ಯ ಮುದ್ದು ಕೊಡಯ್ಯ ಎನೆ ಹದಿ- |ನಾರು ವರುಷದವನಾದ ರುಕ್ಮಭೂಷಾ 3
--------------
ರುಕ್ಮಾಂಗದರು
ಚಿಂತಾಮಣಿ ನಾರಸಿಂಹ ಪ ಪಾಹಿ ಕರುಣಾಸಾಗರ ಶ್ರೀಹರಿಯೆ ಅ.ಪ ಯೋಗಿ ನೀ ಗಣಗಳ ಕೊಂದು ನಾಗಭೂಷಣನಿಗೊಲಿದಂಥ ರಾಗದಿ ದೋಷವಿದೂರರ ರಾಗದಿಂದಲಿ ಪಾಲಿಸುತಿರುವೆ ದೊರೆಯೆ 1 ಕೋಲಾವತಾರದ ಹರಿಯ ದಿವ್ಯ ಲೋಲ ನೇತ್ರದಿ ಬಂದ ನದಿಯ ಮಾಲಾದಿ ಭೂಷಿತನಿರುವಿ 2 ಶೂಲಿಗೊಲಿದೆ ಪಾತಾಳದಲ್ಲಿ ಚೆಲ್ವ ರಾಜೇಶಮುಖ ಹರಿಯೇ ನಿನ್ನ ಬಲ್ಲಿದ ಜನರಿಗೆ ಸುಲಭ 3
--------------
ವಿಶ್ವೇಂದ್ರತೀರ್ಥ
ಚಿಂತೆಯ ಮಾಡದಿರು ಚದುರೆ ನಿನಗೆ ನಾನು ಕಂತುಪಿತನನು ತೋರುವೆ ಪ ಸಂತೋಷದಿಂದ ಸರ್ವಾಭರಣವಿಟ್ಟುಕೊಂಡು ನಿಂತು ಬಾಗಿಲೊಳು ನೋಡೆ ಪಾಡೆ.ಅ.ಪ ಕುಸುಮ ಹಾರವನು ಸುಖನಿಧಿಗೆಕಂದರದಿ ನೀಡಿ ನೋಡೆಸಂದೇಹ ಬಿಟ್ಟು ಬಿಗಿದಪ್ಪಿ ಮನವೊಂದಾಗಿಎಂದೆಂದಿಗಗಲದಿರೆನ್ನ ರನ್ನ 1 ಆಸನವ ಕೊಟ್ಟು ಕಮಲಾಸನನ ಪಿತಗೆ ಸವಿ-ಯೂಟಗಳನುಣ್ಣಿಸಿಲೇಸಾಗಿ ತಾಂಬೂಲ ತವಕದಲಿ ತಂದಿಟ್ಟುವಾಸನೆಗಳನೆ ತೊಟ್ಟು ಸೂಸುವ ಸುಳಿಗುರುಳುಗಳ ತಿದ್ದುತಲಿ ನಕ್ಕುಶ್ರೀಶನ್ನ ಮರೆಯ ಹೊಕ್ಕುಆ ಸಮಯದಲಿ ನಿನಗೆ ದಾಸಿ ಎನ್ನಯ ಮನದಿವಾಸವಾಗು ಬಿಡದೆ ಎನ್ನ ರನ್ನ 2 ಇಂತು ಈ ಪರಿಯಲ್ಲಿ ಶ್ರೀಕಾಂತನನು ಕೂಡಿ ಏ-ಕಾಂತದಲಿ ರತಿಯ ಮಾಡಿಸಂತೋಷವನು ಪಡಿಸಿ ಸಕಲ ಭೋಗವ ತಿಳಿಸಿಸಂತತ ಸ್ನೇಹ ಬೆಳೆಸಿಅಂತರಂಗಕ್ಕೆ ಹಚ್ಚಿ ಅವನಾಗಿ ತಾ ಮೆಚ್ಚಿಪ್ರೀತಿಯಿಂದಧರ ಕಚ್ಚಿಕಂತು ಕೇಳಿಯೊಳು ಕಡುಚೆಲ್ವ ರಂಗವಿಠಲಇಂತು ನಿನ್ನಗಲ ಕಾಣೆ-ಜಾಣೆ.3
--------------
ಶ್ರೀಪಾದರಾಜರು
ಚಿಂತೆಯಾತಕೆ ನಿನಗೆ ಎಲೆ ಪ್ರಿಯಳೆ | ಸಂತತ ತಿಳುಪುವೆನು ಭಕುತಿಯಿಂದಲಿ ಕೇಳು ಪ ಈ ಭೋಗ ನಮಗೆ ಯಾಕೆಂದು ನೀ ಕೇಳುವಿಯಾ | ಲಾಭವಲ್ಲದ ಇದು ನೋಡುವದಕೆ ಶ್ರೀ ಭೂರಮಣ ತಾನೆ ತಂದಿತ್ತ ವಿಚಿತ್ರ ವೈಭೋಗವಲ್ಲೆನೆಂದರೆ ಬಿಡದು ರಮಣೀ 1 ಹಿರಿಯರು ಈರ್ವಗೆ ಮಾಡಿದ ನಿಷ್ಠೆ ವಿ ಪರಿ ಸೌಖ್ಯವ ಹಿರಿದಾಗಿ ಕೊಟ್ಟು ನಮ್ಮನು ಪಾಲಿಸುವುದು ಬಲು ಮೊರೆಯಿಟ್ಟರೆ ಕೇಳು ಹರಿಯ ಮಹಿಮೆಗೆ ನಮೋ 2 ಕ್ಷೀರಸಾಗರದೊಳಗೆ ಓಲ್ಯಾಡುವವನ ವಿ ಚಾರಮಾಡದೆ ತಂದು ಹೃದಯಮಧ್ಯ ಸೇರಿಸುವಂದದಿ ಎನಗೆ ಇಲ್ಲಿಹ್ಯುದು ಸಂ ಸಾರದೊಳಗಿದ್ದ ಸುಖವಿನಿತುಂಟು ರಮಣೀ 3 ಸಂತಾನವಿಲ್ಲೆಂದು ಈರ್ವರೂ ಚಿಂತಿಪದ್ಯಾಕೆ ಪಿಂತೆ ಕಾಂತಾರದಲಿ ಬಾಲಮೃಗನ ಅಂತಕನ ಪುರಿಗೆ ಅಟ್ಟಿದ ದೋಷದಿಂದ ನಮ- ಗಿಂತು ತೋರಿತು ಗುಟ್ಟು ಪೇಳಬಾರದು ರಮಣೀ 4 ಈ ಜನ್ಮ ಬಂದದಕೆ ಇನ್ನಾದರೆಚ್ಚೆತ್ತು ಮಾಜಿಕೊಂಡಿದ್ದು ಜನರಂತೆ ನಡದು ಸಿರಿ ವಿಜಯವಿಠ್ಠಲನ ಸ ರೋಜ ಚರಣವನು ಪೂಜಿಸುವೆನು ರಮಣೀ 5
--------------
ವಿಜಯದಾಸ