ಒಟ್ಟು 527 ಕಡೆಗಳಲ್ಲಿ , 85 ದಾಸರು , 448 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂಥಾ ದೂರುವುದೊಳಿತಲ್ಲವರೆಮ್ಮ ರಂಗಯ್ಯನು, ಹಾವಳಿ |ಅಂಥಾದು ಏನು ಮಾಡಿದನಮ್ಮ ಎಂದೆಂದಿಗು ನಮ್ಮ ||ಸಂತತಿಯೊಳು ಗುಣವಂತರೇ ಕೃಷ್ಣ ನಿ-ರಂತರ ಬಡವರನೆಂತು ದಣಿಸುವ ಪಕಣ್ಣೇ ಬಿಡುವನು ಬೆದರಿಸೆ ಮಾತರಿಯ ವನದೊಳಗಡಗಿಹ |ಮಣ್ಣು ತಿಂಬುವ ಬಾಯ್ದೆರೆವನಾರ್ಯ ಹಿತಕರ್ಮಗಳರಿಯ ||ಅನ್ನ ತಿನ್ನಲರಿಯ ಬೆಣ್ಣೆ ಮೆಲುವ ಬಲು |ಹೆಣ್ಣು ನೆರೆದು ಮತ್ತನ್ಯರೊಳು ಕಲಹೆ 1ಎಲ್ಲ್ಯಾಡೊದು ದುರ್ಗಂಧವು ಕಠಿಣಾಂಗ ನೆಲಗೆದರುವ ಶ್ರಿಂಗ |ರಿಲ್ಲದೆ ರಹದೆರೆವರ್ಭಕ ರಂಗ ಪಾಪವರಿಯ, ಮಂಗ- ||ರೊಲ್ಲಭ ಅಹಿಫಣೆಯಲ್ಲಿ ಕುಣಿದು ವಸ- |ನಿಲ್ಲದೆ ತಿರುಗುವಗೆಲ್ಲಿದೊ ವಾಚಿ2ಮೀನ ಕೂರ್ಮದಂತ್ಯುದಕದೊಳಗೆ ಆಡುವ ಕೆಸರೊಳಗೆ |ಶ್ರೀನಾರಸಿಂಹ ಸಣ್ಣವರೊಳಗೆ ಆಡುವ ತನ್ನೊಳಗೆ ||ತಾನೇ ಅಗ್ನಿಯ ನುಂಗಿ ನಭಕೇಶಗೆಮಾನವಕೊಟ್ಟಾನೆ ಪ್ರಾಣೇಶ ವಿಠಲನ 3
--------------
ಪ್ರಾಣೇಶದಾಸರು
ಇದು ಭಾಗ್ಯ ಇದು ಭಾಗ್ಯ ಇದು ಭಾಗ್ಯವಯ್ಯಪದುಮನಾಭನಪಾದಭಜನೆ ಸುಖವಯ್ಯಪ.ಕಲ್ಲಾಗಿ ಇರಬೇಕು ಕಠಿಣ ಭವತೊರೆಯೊಳಗೆಬಿಲ್ಲಾಗಬೇಕು ಬಲ್ಲವರ ಒಳಗೆ ||ಮೆಲ್ಲನೇ ಮಾಧವನ ಮನದಿ ಮೆಚ್ಚಿಸಬೇಕುಬೆಲ್ಲವಾಗಿರಬೇಕು ಭಕುತಜನರೊಳಗೆ 1ಬುಧ್ಧಿಯಲಿ ತನ್ನ ಮನ ತಿದ್ದುತ್ತಲಿರಬೇಕುಮುದ್ದಾಗಬೇಕು ಮುನಿಯೋಗಿಗಳಿಗೆ ||ಮಧ್ವಮತದಬ್ಧಿಯೊಳು ಮೀನಾಗಿ ಇರಬೇಕುಶುದ್ಧ ಭಕುತಿಯಸುಕೃತಉಣಲುಬೇಕು2ವಿಷಯ ಭೋಗದ ತೃಣಕೆ ಉರಿಯಾಗಿ ಇರಬೇಕುಕುಶಲದಲಿ ಶ್ರೀ ಹರಿಯ ನೆನೆಯಬೇಕು ||ವಸುಧೆಯೊಳು ನಮ್ಮ ಪುರಂದರವಿಠಲನಹಸನಾಗಿ ನೆನೆನೆನೆದು ಸುಖಿಯಾಗಬೇಕು 3
--------------
ಪುರಂದರದಾಸರು
ಈ ಕಾರಣ ಹರಿನಾಮವ ನೆನೆಯಲಿಬೇಕಾಲಸ್ಯವಿಲ್ಲದಲೆಭೀಕರ ಯಮಭಟರಂತ್ಯದಿ ಕವಿಯಲಿನೂಕುವುದೀ ಅಸ್ತ್ತ್ರದಲಿ ಪ.ಷೋಡಶ ಉಪಚಾರದ ಪೂಜಾವಿಧಿಮಾಡುವ ಪಕ್ವಗೆ ಸಾಧ್ಯ ತಾಮಾಡೇನೆಂದರಗಾಧಮಾತಾಡಿದರೇನದಸಾಧ್ಯರೂಢಿಲಿ ಶ್ರೀಹರಿಗುಣ ಸಂಕೀರ್ತನೆಪಾಡಿದರತಿ ಆಹ್ಲಾದ 1ಸುಜ್ಞಾನಿಗಳ್ಹರಿ ಮೆಚ್ಚಿಸಿದರೆ ಅನಭಿಜÕರಿಗೆಲ್ಲಿಯ ಜ್ಞಾನಭವಸುಗ್ಗಿಯೊಳೆಲ್ಲಿ ಧ್ಯಾನ ವೈರಾಗ್ಯದ ನಡೆಯು ಕಠಿಣ ಅನಘ್ರ್ಯದ ಭೋಜನ ದೊರೆತಿದೆ ಹರಿನಾಮಂಗಳೆ ಅಮೃತದ ಪಾನ 2ಈ ಜನುಮವು ಜಗುಳುವ ಮುನ್ನಖಗರಾಜಗಮನ ರಂಗನ್ನ ಸರ್ವದಾ ಜಪಿಸುವನೆ ಧನ್ಯ ಸುಖಬೀಜವಿದೆನ್ನಿತ್ರಿಜಗತ್ಪತಿ ಪ್ರಸನ್ವೆಂಕಟರಾಯನಸೋಜಿಗನಾಮಂಗಳಣ್ಣ3
--------------
ಪ್ರಸನ್ನವೆಂಕಟದಾಸರು
ಈತನೀಗ ಶ್ರೀನಿವಾಸನೂ ಶ್ರೀರಂಗನೂಈತನೀಗ ಶ್ರೀನಿವಾಸನೂ ಪಈತನೀಗ ಶ್ರೀನಿವಾಸ ಈತ ಸಕಲಾ ಲೋಕಕೀಶಈತ ಭೂತಪತಿಯ ಪ್ರೀತ ಈತ ಲಕ್ಷ್ಮೀಕಾಂತ ಖ್ಯಾತ ಅ.ಪಕೌಸಲ್ಯಾತ್ಮಜಾತನೆನಿಸಿದ ಶ್ರೀ ರಾಮಚಂದ್ರಕೌಶಿಕನೊಳ್ ವಿದ್ಯ ಪಠಿಸಿದಾ ವೈಶ್ವಾನರನಸಾಕ್ಷಿಯಿಂದ ವಸುಧೆಸುತೆಯ ಒಲಿಸಿ ತಂದಕೀಶಬಲನ ಕೂಡಿ ಬಂದು ಆ ದಶಾಸ್ಯನನ್ನೆ ಗೆಲಿದಾ 1ದೇವಕೀಯ ತನಯನೆನಿಸುತಾ ಶ್ರೀಕೃಷ್ಣವನದಿಗೋವುಗಳನು ಮೇಸಿ ಚಲಿಸುತಾಹಾವಿನ್ಹೆಡೆಯ ತುಳಿದು ನಲಿದುಗೋವರ್ಧನವ ಸೆಳೆದು ಬಡಿದು ಮಾವಕಂಸನ್ನ ಗೆಲಿದು ದೇವಿ ರುಕ್ಮಿಣಿಯನು ತಂದ 2ಬಕುಳದೇವಿದತ್ತಪುತ್ರನೂ ಶ್ರೀ ವೆಂಕಟೇಶಸುಖದಿ ತಿರುಪತಿಯೊಳು ನಿಂತನೂಯುಕುತಿಯಿಂದ ಪದ್ಮಾವತಿಯ ಸಕಲವೈಭವದಲಿ ವರಿಸಿ ಭಕುತರನ್ನ ಪೊರೆವ ಗೋವಿಂದದಾಸನೊಡೆಯನಿವನೂ 3
--------------
ಗೋವಿಂದದಾಸ
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎಂದು ಬಹನಮ್ಮ ಯಾದವರರಸನುಎಂದು ಬಹನಮ್ಮ ಪ.ತಂದು ತೋರೆಲೆ ಗಜಗಾಮಿನಿ ಯದುಕುಲ ತಿಲಕನಕಂದುಗೊರಳಗೊಲ್ಲ ಚಂದದಿಎಂದಿಗೆ ಅವ ನಮ್ಮ ಕಾಡುವಇಂದುವದನೆಪೋಗೆ ಬ್ಯಾಗೆ1ಯಾಕೆ ಗೋಕುಲ ನಮಗ್ಯಾಕೆ ವೃಂದಾವನಸಾಕುವರ್ಯಾರಮ್ಮ ನಮ್ಮನುಶ್ರೀಕಾಂತನಿಲ್ಲದೆ ನಿಮಿಷ ಯುಗವಾಯಿತುಪೋಕನಲ್ಲವೆ ಕ್ರೂರ ಅಕ್ರೂರ 2ಮುಡಿಗೆ ಮಲ್ಲಿಗೆಭಾರಕಣ್ಣಿಗೆ ಅಂಜನಭಾರನಡುಮಧ್ಯಕೆ ನಿರಿಭಾರವೆಅಡಿಗೆಅಂದುಗೆಭಾರನುಡಿವ ಕೀರವಉರಜಡಿವಸಮೀರಸಖಿಯೆ ಸಖಿಯೆ3ಬೆಳದಿಂಗಳೆನಗೆ ಬಿಸಿಲಾಗಿ ತೋರುತಲಿದೆ ಬಗೆ ಬಗೆ ಪುಣ್ಯದ ಮಾಲಿಕೆಯುಅಲ್ಲೆ ಪಿಕಗಾನವು ಕಿವಿಗತಿಕಠಿಣವುಒಲ್ಲೆಅಗರುಚಂದನಲೇಪತಾಪ4ಯಾಕೆ ಕಸ್ತೂರಿ ಗಂಧ ನಮಗ್ಯಾಕೆ ಚಂಪಕಮಾಲೆಲೋಕನಾಯಕ ತಾನಿಲ್ಲದೆಶ್ರೀಕಾಂತನಿಲ್ಲದೆ ನಿಮಿಷ್ಯುಗವಾಯಿತು ಕಂಡಿದ ಪ್ರಸನ್ವೆಂಕಟ 5
--------------
ಪ್ರಸನ್ನವೆಂಕಟದಾಸರು
ಏನು ಬೇಡಲಿ ನಿನ್ನ ಹರಿಯೆ ಪಏನ ಬೇಡಲಿ ನಿನ್ನ ಚಂಚಲ ಕಠಿಣನ |ಮಾನದಿಂದ ಮೋರೆ ಓರೆಮಾಡುವನ ಅ.ಪಕರುಳಹರಕನ - ಏನ ಬೇಡಲಿ |ತಿರಿದು ತಿಂಬುವನ ||ಕೊರಳಗೊಯ್ಕ ಅರಣ್ಯ ತಿರುಗವನ ಮೊ - |ಸರು ಬೆಣ್ಣೆ ಕದ್ದು ತಿಂಬವನ 1ವಾಸಶೂನ್ಯನ - ಬೇಡಲೇನು ಕತ್ತಿ - |ಬೀಸಿ ಸವರುವನ ||ಕಾಸುವೀಸವನೆಲ್ಲ ಮೀಸಲು ಮಾಡಿಟ್ಟು |ಕೇಸಕ್ಕಿ ಉಂಡುಂಡು ವಾಸಿಸುವನ2ಬೇಡಿದರೆ ಕೊಡನ - ಮೋರೆನೋಡಿ |ಭಿಡೆಯ ಹಿಡಿಯದವನ |ಬಡವರ ಕರೆತಂದು ಅಡಿಗೆ ಸೇರಿಸಿಕೊಂಡ |ಒಡೆಯ ಪುರಂದರವಿಠಲದೊರೆಯ 3
--------------
ಪುರಂದರದಾಸರು
ಏನೇನ ದಾನವ ಮಾಡಲು - ಹರಿಯ |ಧ್ಯಾನಕೆ ಸಮವಾದ ದಾನಂಗಳುಂಟೆ ? ಪ.ದಿನಕೊಂದು ಲಕ್ಷ ಗೋದಾನವ ಮಾಡಲು |ಅನುದಿನ ಉದಕದಾನವ ಮಾಡಲು ||ಮನಶುದ್ಧವಾದ ಭೂದಾನವ ಮಾಡಲು |ವನಜನಾಭನ ಧ್ಯಾನಕೆ ಸಮವುಂಟೆ ? 1ಉತ್ತಮವಾದ ವಸ್ತ್ರವ ದಾನಮಾಡಲು |ಮುತ್ತು ಮಾಣಿಕವ ದಾನವ ಮಾಡಲು ||ಅತ್ಯಂತ ವಿದ್ಯಾ ಪ್ರದಾನವ ಮಾಡಲು |ಚಿತ್ತಜಪಿತನ ಧ್ಯಾನಕೆ ಸಮವುಂಟೆ ? 2ಶತಕೋಟಿ ಕನ್ಯಾಪ್ರದಾನವ ಮಾಡಲು |ಶತಶತ ಸುವರ್ಣ ದಾನವ ಮಾಡಲು ||ಮಿತಿಯಿಲ್ಲದೆ ಅನ್ನದಾನವ ಮಾಡಲು |ಕ್ಷಿತಿಪತಿಯ ಪಾದಧ್ಯಾನಕೆ ಸಮವುಂಟೆ ? 3ನಾನಾ ತೀರ್ಥದಲಿ ಸ್ನಾನವ ಮಾಡಲು |ಕಾನನದೊಳಗೆ ತಪವ ಮಾಡಲು |ಜಾÕನಿಯಾಗಿ ಕಾಶೀಯಾತ್ರೆಯ ಮಾಡಲು |ಜಾನಕೀಪತಿಯ ಧ್ಯಾನಕೆ ಸಮವುಂಟೆ ? 4ಧಾರಣಿ ಪಾರಣಿ ಭೀಷ್ಮಪಂಚಕ ಮಾಡಿ |ಹರುಷದಿ ವಿಷ್ಣುಪಂಚಕ ಮಾಡಲು ||ಪರಮ ಕಠಿಣ ಚಾಂದ್ರಾಯಣ ಮಾಡಲು |ಪುರಂದರವಿಠಲನ ಧ್ಯಾನಕೆ ಸಮವುಂಟೆ ? 5
--------------
ಪುರಂದರದಾಸರು
ಕಕ್ಷಾದೇವತೆಗಳ ಮನನ115ಪ್ರಾಣ ಪಾಲೀಸಿಂದ್ರಾನ ರಾಣೀ ದಕ್ಷಾನಿರುದ್ಧಾ |ಮಾನಿನಿರತಿಮನುಗುರುವಾಯು ಕೋಲೆ ||ಮಾನಿನಿರತಿಮನುಗುರುವಾಯು ಯಮಸೋಮ|ಮಾನವಿ ಭಾಸ್ಕರಗೆರಗೂವೆ ಕೋಲೆ 1ವರುಣ ನಾರದವಹ್ನಿತರುಣಿ ಪ್ರಸೂತಿ ಭೃಗು |ಸರಸೀಜಾಸನನ ಪುತ್ರರಾರೊಂದು ಕೋಲೆ ||ಸರಸೀಜಾಸನನ ಪುತ್ರರಾರೊಂದು ಮಂದಿಗಳ |ವರನಾಮ ವಿಸ್ತರಿಸಿ ವಂದಿಪೆ ಕೋಲೆ 2ಅಂಗೀರಾ ಪುಲಸ್ತ್ಯ ಅತ್ರಿ ಮಂಗಳಾಂಗ ಪುಲಹ ಕೃತು |ತುಂಗವಶಿಷ್ಠಿ ಮರೀಚಿಗೊಂದಿಪೆ ಕೋಲೆ ||ತುಂಗವಶಿಷ್ಠ ಮರೀಚಿ ವಿಶ್ವಾಮಿತ್ರನಿಗೆ ಮತ್ಸ್ಯಾ |ನಂಗ ಕಂಡ ವೈವಸ್ವತಗೊಂದಿಸುವೆ ಕೋಲೆ3ನಿರರುತಿ ಪ್ರಾವಾಹಿಮಿತ್ರಗುರುಪತ್ನೀಗೆ ವಂದಿಸುವೆ |ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಕೋಲೆ ||ಕರಿಮುಖ ವಿಶ್ವಕ್ಸೇನ ಪೌಲಸ್ತ್ಯ ಅಶ್ವಿನೀಗ |ಳಿರಳೂ ಹಗಲೂ ನಾ ಸ್ಮರಿಸೂವೆ ಕೋಲೆ 4ಮರುತೂ ನಾಲ್ವತ್ತೊಂಬತ್ತುಗುರುವಿಶ್ವೇದೇವ ಹತ್ತು |ಎರಡು ಅಶ್ವೀನೀ ರುದ್ರರ್ಹನ್ನೊಂದೂ ಕೊಲೆ ||ಎರಡು ಅಶ್ವೀನೀ ರುದ್ರರ್ಹನ್ನೊಂದೂ ವಸುಯಂಟು |ಎರಡಾರು ಸೂರ್ಯರಿಗೆರಗೂವೆ ಕೋಲೆ 5ಭಾರತೀ ಭರತಾಗೆ ಮೂರು ಪಿತೃಗಳಿಗೆ |ಧಾರೂಣೀ ಋಭುವೀಗೆರಗುವೆ ಕೋಲೆ ||ಧಾರೂಣೀ ಋಭುವೀಗೆರಗೂವೆ ತಿಳೀವದು |ನೂರು ಮಂದೆಂದೂ ಕರಸೋರು ಕೋಲೆ 6ಮೂರು ಮಂದೀ ಉಳಿದೂ ಈರೈದು ಒಂದು ಮನು |ಚಾರುನಾಮಗಳ ವರ್ಣೀಪೆ ಕೋಲೆ ||ಚಾರುನಾಮಗಳ ವರ್ಣೀಪೆ ದಯಮಾಡಿ |ಸೂರಿಗಳೆಲ್ಲಾ ಕೇಳ್ವೋದು ಕೋಲೆ 7ಸ್ವಾರೋಚೀಷೋತ್ತುಮಾನು ಶ್ರೀ ರೈವತ ಚಾಕ್ಷುಷಾ |ನಾರಾಯಣನ ದಾಸ ಸಾವರ್ಣಿ ದಕ್ಷಾ ಕೋಲೆ ||ನಾರಾಯಣನ ದಾಸ ಸಾವರ್ಣಿ ದಕ್ಷ ಬ್ರಹ್ಮ |ಮಾರಾರಿದೇವ ಧರ್ಮ ಇಂದ್ರ ಸಾವರ್ಣೀ ಕೋಲೆ 8ಎಂದಿವರೀಗೊಂದೀಸಿ ಮುಂದೆ ಚವನ ಋಷಿ |ನಂದಾನೋಚಿತ್ಥ್ಯ, ಪಾವಕಾ, ಧೃವ, ನಹುಷ ಕೋಲೆ ||ನಂದಾನೋಚಿತ್ಥ್ಯಪಾವಕಧೃವನಹುಷಶಶಿ|ಬಿಂದೂ ಪ್ರಹ್ಲಾದ ಪ್ರಿಯ ವೃತಗೊಂದಿಸುವೆ ಕೋಲೆ9ಶಾಮಲಾ ಗಂಗಾ ಉಷಾ ಸೋಮರಾಣಿ ಸಂಜ್ಞಾ |ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ಕೋಲೆ ||ಧೀಮಂತ ಪರ್ಜನ್ಯಾಖ್ಯ ಸೂರ್ಯಗೆ ವಂದಿಸೀ ಅನ |ಭೀ ಮಾನೀ ಸೂರರನ್ನ ಮನದೊಳು ನೆನವೆನೆ ಕೋಲೆ 10ಅನಲರಸೀಬುಧಅಶ್ವಿನಿ ಭಾರ್ಯಾ ಛಾಯಾ ಪುತ್ರ |ಶನಿ ಪುಷ್ಕರಜಾನೂಜ ದೇವತಿಗಳಿಗೆ ಕೋಲೆ ||ಶನಿ ಪುಷ್ಕರಜಾನೂಜ ಮನ ದೇವತೆಗಳಿಗೊಂದಿಪೆ ಸು |ಪ್ರಾಣೇಶ ವಿಠಲಾನಲ್ಲಿರಲೆಂದು ಕೋಲೆ 11ಉರುವಸೀ ಮುಖ್ಯ ಅಪ್ಸರ ಸ್ತ್ರೀಯರೀಗೊಂದಿಸೀ |ಹರಿನಾರಿಯರ ಪಾದಕ್ಕೆರಗೂವೆ ಕೋಲೆ ||ಹರಿನಾರಿಯರ ಪಾದಕ್ಕೆರಗಿ ಪಿತೃಗಂಧರ್ವ |ನರನಾರಪತಿಮನುಷ್ಯೋತ್ತಮರಿಗೊಂದಿಸುವೆ ಕೋಲೆ12ಈ ನಿರ್ಜರರ ಧ್ಯಾನವನ್ನು ಮಾಡುತ್ತಾ |ಪ್ರಾಣೇಶ ವಿಠಲನ ಆ ನಾಭಿಯಿಂದ ||ಪ್ರಾಣೇಶ ವಿಠಲನ ಆ ನಾಭಿಯಿಂದ ಬಂದ |ಜ್ಞಾನಿಗಳ ಸಂತತೀ ನಾ ವರ್ಣಿಸುವೆ ಕೋಲೆ 13
--------------
ಪ್ರಾಣೇಶದಾಸರು
ಕೃಷ್ಣನಾಮಾಮೃತ ರುಚಿಕರವೆಲ್ಲವುಶ್ರೇಷ್ಠ ಭಕ್ತರಿಗಲ್ಲದೇದುಷ್ಟಮಾನವಮತಿಹೀನಗೆಪೇಳಲು ಇಷ್ಟವಾಗಲು ಬಲ್ಲುದೇ ಪಗುಡಶೈಲದಲಿ ಲಿಂಬೆ ಬೀಜ ಪ್ರತಿಷ್ಠಿಸೆಫಲವು ಮಧುರವಹುದೆ ಗುಡುಗುಮೋಡಕೆ ಮಯೂರವು ಕುಣಿದಂತೆಕುಕ್ಕುಟ ನೋಡಿ ಕುಣಿವುದೆ ಸುಡುವಗ್ನಿಯಲಿಬೀಜಬಿತ್ತಿ ನೀರೆರೆದರೇ ಗಿಡವಾಗಿ ಶೋಭಿಪುದೇಪೊಡವಿಯೊಳಗೆ ಲಕ್ಷ್ಮೀಯೊಡೆಯನಚರಿತೆಯ ಮೂಢಮಾನವಬಲ್ಲನೇ 1ವೀಣೆಯ ನುಡಿಸುತ್ತ ಗಾಯನ ಹಾಡಲುಕೋಣಗೆ ಹಿತವಹುದೆ ಸಾಣೆಕಲ್ಲನುಬಿಸಿನೀರಿನೊಳಿಟ್ಟರೆ ಮೇಣದಂತಾಗುವುದೇಜಾಣತನದಿ ವೇದ ಓದಿದ ಹೊಲೆಯನುಬ್ರಾಹ್ಮಣನೆನಿಸುವನೆ ಕ್ಷೋಣಿಯೊಳಗೆವಾಸುದೇವನ ಚರಿತೆಯ ಹೀನಮತಿಯು ಬಲ್ಲನೆ 2ಕೋಗಿಲೆ ಸಾಕಿದ ಕಾಗೆಯ ಮರಿ ತನ್ನ ರಾಗದಿಮೋಹಿಪುದೇ ನಾಗರಹಾವಿಗೆ ಹಾಲೆರೆದರೆನಿತ್ಯವಿಷವ ನೀಗಿಸಿಕೊಂಬುದೇ ಭೋಗದಾಸೆಯಸ್ತ್ರೀಗೆ ವಿಟನ ಮೇಲಲ್ಲದೇ ಯೋಗಿಯೊಳ್ಹಿತವಹುದೇ ಸಾಗರಶಯನ ಗೋವಿಂದನಮಹಿಮೆಯಭೋಗಾಸಕ್ತನು ಬಲ್ಲನೇ 3
--------------
ಗೋವಿಂದದಾಸ
ಕೇಳೆಗೋಪಿಗೋಪಾಲ ಮಾಡಿದ ಬಲು |ದಾಳಿಯ ಗೋಕುಲದಿ ಪತಾಳೆಲಾರೆವೆ ತವಕದಲಿ ಕಂದಗೆ ಬುದ್ಧಿ |ಹೇಳೆ ಕೃಷ್ಣವ ಕರೆದು ಅ.ಪಸರಿರಾತ್ರಿಯೊಳು ಸರಸರನೆ ಮನೆಗೆ ಬಂದು |ಸುರಿದು ಪಾಲ್ಪೆಣ್ಣೆಗಳ ||ಉರೋಜಗಳಿಗೆಕರಸರಿಸಿ ಕಣ್ಗಳನು |ತೆರೆದು ನೋಡುವನೆ ನಮ್ಮ 1ಗಂಡನು ಮನೆಯೊಳಗಿರಲು ಬಂದು ಕೃಷ್ಣ |ಭಂಡ ಮಾತುಗಳ ಬಹು ||ತುಂಟತನದಲಾಡಿಉದ್ದಂಡಕಠಿಣಕಾಯ |ದುಂಡುಕುಚವ ಪಿಡಿದ 2_______ವದ ಮೇಲಿರಲು ತಾ |ಸೀರೆಯ ಸೆಳೆವ ನೋಡೆ ||ಆರಿವರೆಂದು ವಿಚಾರಿಸಿ ನೋಡಲು |ಮೋರೆಯ ಬಾಗಿದನೆ 3ಕೇರಿಯೊಳಗೆದಧಿಮಾರುತಿರಲು ಕೃಷ್ಣ |ಸಾರಿ ಬಂದು ಮೊಸರ ||ಸೂರೆಗೊಂಡು ಪರನಾರಿಯರ ನೆರೆದು ತಾ |ಘೋರರೂಪದಿ ಮೆರೆದ 4ಆಡಲೇತಕೆ ನಮ್ಮ ಬಾಗಿಲಂಗಳದೊಳು |ಬೇಡುವ ಜಲ ದೈನ್ಯದಿ ||ನೀಡುವೆ ಜಲ ಜಲಜಾಕ್ಷ ಬಾಬಾ ಎನೆ |ಮಾಡುವರತಿಎಂಬನೆ5ಹುಡುಗನೆಂದು ಕೈಯ ಪಿಡಿಯ ಪೋಗಲು ನಮ್ಮ |ಉಡೆಮುಡಿ ಪಿಡಿದ ನೋಡೆ ||ಪಡೆದವಳಿಗೆ ಪೇಳುವೆ ನಡೆ ಎನೆ ಮಚ್ಚ |ಕೊಡಲಿ ತೋರುವನೆಗೋಪಿ6ಮಡದಿಯರೆಲ್ಲರು ಮಿಯುತಲಿರೆ ಮೈ |ಉಡುಗೆಯ ತೆಗೆದುಕೊಂಡು ||ಸಡಗರದಲಿ ಬೇಡಿಕೊಳ್ಳೆ ವಸ್ತ್ರಗಳನು |ಕೊಡದೆ ಅಡವಿಗೆ ನಡೆದ 7ಬೆಣ್ಣೆಯ ತಿಂದು ತಮ್ಮಣ್ಣಗೆ ತಾ ಕೊಟ್ಟು |ಚಿಣ್ಣರ ಬಡಿವ ನೋಡೆ ||ಬಣ್ಣಿಸಿ ನಮ್ಮ ಬಾಯಿಗೆ ಬೆಣ್ಣೆ ತೊಡೆಯುತ |ಬೆಣ್ಣೆಯ ತಿಂದಿರೆಂಬ 8ಏಣಲೋಚನೆ ಸರ್ಪವೇಣಿ ನಮ್ಮ ಮನೆ |ಓಣಿಯೊಳಗೆ ಪೋಗುತ ||ಕಾಣದಂತೆ ಚಕ್ರಪಾಣಿ ನಮ್ಮೊಳು ತನ್ನ |ತ್ರಾಣವ ತೋರಿದನೆ 9ಪದುಮನಾಭನು ಪುರದ ಚದುರಿಯರಿಗೆ ತಾನು |ಮದನಶಾಸ್ತ್ರವ ಪೇಳುತ ||ಮುದದೊಳಗಿರಲವರೊಡೆಯ ಬರಲು ಕೃಷ್ಣ |ಕುದುರೆಯ ನೇರಿದನೆ 10ಎಷ್ಟುಪದ್ರವ ಕೊಟ್ಟರು ಗೋಕುಲದೊಳು |ಬಿಟ್ಟವನಿರಲಾರೆವೆ ||ಸೃಷ್ಠಿಯೊಳಗೆ ಸರ್ವಾಭಿಷ್ಟದ ಪುರಂದರ-|ವಿಠಲ ಸಲಹುವನೆ 11
--------------
ಪುರಂದರದಾಸರು
ಗಜಲಕ್ಷ್ಮಿ ಬಿಜಯ ಮಾಡೇ ಮೂಕಾಂಬಿಕೆಭಜಿಸುವೆ ವರವ ನೀಡೆಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಜಸುರ ಮುಖ್ಯರು ಭಜಿಸಲು ನಿನ್ನನುನಿಜವಾದ ವರವನಿತ್ತೆ ಜಗನ್ಮಾತೆಕುಜನರ ಮರ್ದಿಸುತೆವಿಜಯಸಾರಥಿಭುಜಗಶಯನನಭಜನೆಯನು ಅನುದಿನದಿ ಪಠಿಸುವಸುಜನಸಜ್ಜನಪಾಲೆ ಸದ್ಗುಣಶೀಲೆಮುನಿಜನಲೋಲೆ ಜಯ ಜಯ1ಕೊಲ್ಲೂರ ಪುರನಿಲಯೆ ಮಹದೇವಿಯೆಪುಲ್ಲಲೋಚನೆ ಪಾಲಯೆಎಲ್ಲ ಭಕ್ತರ ಮನ ಸಲ್ಲಿಸಿ ಸಲಹುವಚಲ್ವ ರಂಗನ ರಾಣಿಯೆ ಶ್ರೀದೇವಿಯೆಕುಲ್ಲ ಕುಂಕುಮ ಜಾಣಿಯೇ ಸಲ್ಲಲಿತೆಕಾಲಲ್ಲಿ ರಂಜಿಪ ಪಿಲ್ಲಿ ಮಿಂಚಿಕೆ(?) ಕಡಗ ಪೈಜಣಗೆಜ್ಜೆ ಗಲಗಲ ಎಂದು ನಲಿಯುತ ಬಾರೆಜಗದ ವಿಚಾರೆ ಮುಖ ತನು ತೋರೆ ಜಯ ಜಯ2ಚಂದಿರ ಮುಖದ ಮನೇ ಸರ್ವೇಶ್ವರಿಕುಂದಕುಂಡಲರದನೇಮಂದಗಾಮಿನಿ ಅರವಿಂದನಯನೆಸುರಪಂಡಿತಗುಣಕರುಣಿನೀನಲ್ಲದೆ ಮುಂ ಸುಖವ ಕಾಣೆನೆಚಂದನನವಗಂಧ ಕುಂಕುಮ-ದಿಂದ ಶೋಭಿಪ ಕೀರವಾಣಿಯೆಸುಂದರಿಯೆ ಗೋವಿಂದನರಸಿಯೆ ಧರ್ಮದೇವಿಯೆದೈvÀ್ಯ £್ಞಶಿನಿಯೆ ಜಯ ಜಯ3
--------------
ಗೋವಿಂದದಾಸ
ಗುಮಾನ ಆರದು ಇನ್ನ್ಯಾಕೆಹರಿನಾಮದ ಬಲವೊಂದಿರಲಿಕ್ಕೆ ಪಸ್ವಾಮಿಮಾಧವನ ಪ್ರೇಮಪಡೆದು ಮಹನಾಮಮೃತದ ಸವಿಯುತಲಿರುವರ್ಗೆ ಅ.ಪರೊಚ್ಚಿಗೆದ್ದು ಮಾಡುವುದೇನೋ ಜನಸ್ವಚ್ಛದಿ ಒಡಗೂಡಿದರೇನೋಮೆಚ್ಚಿ ಕೊಡುವಫಲ ಇವರೇನೋ ಅತಿಹುಚ್ಚ ನೆಂದರಾಗುವುದೇನೋನಿಶ್ಚಲಚಿತ್ತದಿ ಅಚ್ಯುತಾನಂತನಬಚ್ಚಿಟ್ಟು ಮನದೊಳು ಉಚ್ಚರಿಸುವರಿಗೆ 1ಸತಿಸುತರಿವರಿಂದ್ಹಿತವೇನೊ ತನ್ನಪಿತಮಾತೆ ಮುನಿದರೆ ಕೊರತೇನೋಅತಿಸಂಪತ್ತಿನಿಂದ ಗತಿಯೇನೋ ಈಕ್ಷಿತಿಜನ ಮೆಚ್ಚಲು ಬಂತೇನೋರತಿಪತಿಪಿತನಂ ಅತಿ ಗೂಢತ್ವದಿಸತತದಿ ನುತಿಸುವ ಕೃತಕೃತ್ಯರಿಗೆ 2ಭೂಮಿಪ ಕೋಪಿಸಲಂಜುವರೆ ಈತಾಮಸರಿಗೆ ತಲೆ ಬಾಗುವರೇಭೂಮಿ ದೈವಗಳ ಬೇಡಿದರೆ ಮನಕಾಮಿತವನ್ನು ಪೂರೈಸುವರೇಕಾಮಿತಾರ್ಥನೀಗಿ ಮಹಾಮಹಿಮನನೇಮದಿ ಪಠಿಪ ಶ್ರೀರಾಮದಾಸರಿಗೆ 3
--------------
ರಾಮದಾಸರು
ಚೌತಿಯ ದಿವಸರಂಭೆ : ವಾರಿಜಗಂಧಿನಿ ನೋಡಿತ್ತ ಶ್ರುತಿ-ಮೌರಿರಭಸದಿ ಲಕ್ಷ್ಮೀಕಾಂತಭೂರಿವೈಭವದಿ ಪೊರಟನೆತ್ತ ಯಾವಕಾರಣವೆಂದು ಪೇಳೆಲೆ ಸತ್ಯ 1ದೇವರ ಪೂಜೆಗೋಸುಗ ಬಂದಪಾವನಮೂರ್ತಿಯಾದುದರಿಂದ ನಮ್ಮಕಾವನು ಕರುಣಾಕಟಾಕ್ಷದಿಂದ 2ರಂಭೆ : ನೂತನವಾಯ್ತೆ ಕೇಳಲೆ ಜಾಣೆ ಜಗ-ನ್ನಾಥನಿಗ್ಯಾವ ಕುಲವು ಕಾಣೆರೀತಿಯನರುಹಬೇಕೆಲೆ ಬಾಲೆ ಸರ್ವಚೇತನಾತ್ಮನ ನಾಟಕದ ಲೀಲೆ 3ಕೊಂಡಕಾರಣದಿ ಪೂಜೆಗಳೆಲ್ಲಕಂಡು ಪೊಗಳಲು ಕವಿಗು ಸಲ್ಲ ಇನ್ನುಪುಂಡರೀಕಾಕ್ಷನವನೆ ಬಲ್ಲ 4ರಂಭೆ : ರಾಜವದನೆ ಪೂಜೆಯಾದ ಮೇಲೆ ಅಂ-ಭೋಜನಾಭನು ತಾಕ್ಷ್ರ್ಯನ ಮೇಲೆರಾಜಬೀದಿಯೊಳ್ ಬರುವದೇನೆ ಇಂಥಸೋಜಿಗವೇನು ಪೇಳೆಲೆ ಜಾಣೆ 5ಬಟೆನಿಸ್ಸಾಳರವದಿ ಬರುವ ಚಂದಸಟೆಯಲ್ಲ ಕೇಳು ಕರುಣದಿಂದ ನಮ್ಮಕಟಕರಕ್ಷಿಸಲು ಬರುವ ಗೋವಿಂದ6ರಂಭೆ : ಬಳಿಕ ಪಲ್ಲಂಕಿಯೇರಿದ ಕಾಣೆ ಜನ-ಗಲಭೆಗಳಿಂದ ಪೋಗುವದೇನೆನಲವಿನಿಂದಲಿ ಪೊರಟೆಲ್ಲಿಗೆನೆ ಮಹಾ-ಜಲಜನಾಭನ ಮಹಿಮೆಯ ಜಾಣೆ 7ದೀಪವೆಂದೆನುತ ಭಕ್ತರು ಮುದದಿಶ್ರೀಪರಮಾತ್ಮ ವಿಲಾಸದಿ ಭಕ್ತ-ರಾಪೇಕ್ಷೆಗಳನು ಸಲ್ಲಿಸುವಂದದಿ 8ರಂಭೆ : ಸೋಮಾರ್ಕಜ್ಯೋತಿಹಿಲಾಲುಗಳು ಜನ-ಸ್ತೋಮಜೇನುಂಡೆಬಿರುಸುಮಿಗಿಲುವ್ಯೋಮಕೇಶಗಳ ಪೊಗಳತೀರದು ಸರಿಭೂಮಿಯೊಳ್ ಕಾಣೆನೆಂಬಂತಾದುದು 9ಅಮಮ ಇದೇನೆ ಇಂದಿನ ಲೀಲೆ ಜನ-ರಮರಿಕೊಂಡಿಹರೇನಿದು ಬಾಲೆಸಮವಿಲ್ಲ ಇಂತೀ ವೈಭೋಗಕ್ಕೆಲೆ ನ-ಮ್ಮಮರಾವತಿಗಿಂತಧಿಕ ಬಾಲೆ 10ಲಾರ್ತಿ ಹರಣವಾಗ್ವದು ಜಾಣೆಕೀರ್ತಿತರಂಗಮಾಗಿಹುದೇನೆ ಶೇಷ-ತೀರ್ಥವೆಂದರೆ ಕೇಳಿದು ಪ್ರವೀಣೆ 11ರಂಭೆ :ಏಸುದೊಡ್ಡಿತೆ ಕೇಳಲೆ ಬಾಲೆ ಅನಂ-ತಾಸನದಂತೆ ಮರೆವುದಲ್ಲೇನಾಸಿರ ದೀಪಸೋಪಾನದಲೆ ಮಹಾ-ಶೇಷನಿಹನು ಮಧ್ಯದೊಳಿಲ್ಲೇ 12ಊರ್ವಶಿ :ಕರುಣಾಕರನು ನಮ್ಮೆಲ್ಲರನುನಿತ್ಯಪೊರೆಯಲೋಸುಗ ಬಂದನು ತಾನುಸುರುಚಿರ ಮಂಟಪವೇರಿದನು ಭೂ-ಸುರರಿಂದ ವೇದಘೋಷವ ಕೇಳ್ವನು 13ದೃಷ್ಟಾಂತವಾಗಿ ಪೇಳುವದೇನೆ ಬ್ರಹ್ಮಸೃಷ್ಟಿಗೆ ಪೊಸತಾಗಿಹುದು ಕಾಣೆಕಟ್ಟಿಸಿದವನು ಪುಣ್ಯೋತ್ತಮನು ಪರ-ಮೇಷ್ಠಿ ಜನಕನ ಕೃಪೆಯಿನ್ನೇನು 14ಭಜಕರ ಮುಖದಿಂದೆಲ್ಲ ತಾನು ಭೂ-ಭುಜನಾಗಿ ನಡೆಸುವನಿದನೆಲ್ಲನುನಿಜವಾಗಿನಿತ್ಯಸಾಕಾರವನು ತೋರಿತ್ರಿಜಗವನೆಲ್ಲ ರಕ್ಷಿಸುತಿಹನು 15ರಂಭೆ : ಬಿಡದೆ ಇನ್ನೊಂದು ಕೇಳುವೆ ನಾರಿ ಜಗ-ದೊಡೆಯ ಪೊರಡುವ ಕಾಲದಿ ಭಾರಿಬೆಡಿಖಂಬ ಧ್ವನಿಯು ಇದೇನೆ ಪೇಳೆ ಇಂಥಕಡು ಬೆಡಗನು ಉಸುರೆಲೆ ಬಾಲೆ 16ಊರ್ವಶಿ: ಜನರು ಎಲ್ಯಾದರಂಜಿದÀ ಭಯವ ತಮ್ಮತನುವಿಗೆ ಸೋಂಕಲದನೆಲ್ಲವಮನದಿ ಝುಮ್ಮೆನಿಸಿ ಬೆಚ್ಚೋಡಿಸುವ ಖಂಬ-ಧ್ವನಿಯೆಸಗಿದರು ಕೇಳಿದರಂದವ 17ತಿರುಗಿಯೇರಿದನು ಪಲ್ಲಂಕಿಯಲ್ಲಿ ಸುತ್ತು-ಬರುವನು ವೇದನಿನಾದದಲಿವರರತ್ನ ಖಚಿತ ಮಂಟಪದಲ್ಲಿ ನಿಂತನಿರವದಿ ಸುಖದಾಯಕನಲ್ಲಿ 18ಶರಣರ ಪಾಪ ಮನಕೆ ತಾರ ದುಡಿದವರಭೇರಿಗೆರೆವ ಬಿಸಿನೀರವರಲಕ್ಷ್ಮೀನಾರಾಯಣಧೀರ ಸುರು-ಚಿರ ಸಿಂಹಾಸನವೇರಿದ ವೀರ 19
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಜನನಿರುದ್ರಾಣಿ ರಕ್ಷಿಸು ಎನ್ನಜಗದೀಶನ ರಾಣಿ ಪ.ವನಜಭವಸುರಮುನಿಕುಲಾರ್ಚಿತೆಕನಕವರ್ಣಶರೀರೆ ಕಮಲಾ-ನನೆ ಕರುಣಾಸಾಗರೆ ನಮಜ್ಜನ-ಮನಮುದಾಕರೆ ಮಾನಿತೋದ್ಧರೆ ಅ.ಪ.ಆದಿಕೃತಾಯುಗದಿ ಪ್ರತಿಷ್ಠಿತ-ಳಾದೆ ಧರಾತಳದಿಆದಿತೇಯರ ಬಾಧಿಸುವ ದಿತಿ-ಜಾಧಮರ ಭೇದಿಸಿದೆ ಸಜ್ಜನ-ರಾದವರ ಮನ್ನಿಸಿದೆ ತ್ರೈಜಗ-ದಾದಿಮಾಯೆ ವಿನೋದರೂಪಿಣಿ 1ಖಂಡ ಪರಶುಪ್ರೀತೆ ನಿಖಿಲಬ್ರ-ಹ್ಮಾಂಡೋದರಭರಿತೆಚಂಡಮುಂಡವೇತಂಡದಳನೋ-ದ್ದಂಡಸಿಂಹೆ ಅಖಂಡಲಾರ್ಚಿತೆಪಾಂಡುತನುಜಕೋದಂಡವಿತರಣೆಚಂಡಿಕೇ ಕರದಂಡಲೋಚನಿ 2ಸಿಂಧೂರಸಮಯಾನೆ ಸರಸ ಗುಣ-ವೃಂದೆ ಕೋಕಿಲಗಾನೆಸುಂದರಾಂಗಿ ಮೃಗೇಂದ್ರವಾಹಿನಿಚಂದ್ರಚೂಡಮನೋಜೆÕ ಸತತಾ-ನಂದಪೂರ್ಣೆ ಮುನೀಂದ್ರನುತೆ ಸುಮ-ಗಂಧಿ ಗೌರಿ ಶಿವೇ ಭವಾನಿ 3ಲಂಬೋದರಮಾತೆ ಲಲಿತ ಜಗ-ದಂಬಿಕೆ ಗಿರಿಜಾತೆಕಂಬುಕಂಠಿ ಕಾದಂಬನೀಕು-ರುಂಬಜಿತಧಮ್ಮಿಲ್ಲೆ ತವ ಪಾ-ದಾಂಬುಜವ ನಾ ನಂಬಿದೆನು ಎನ-ಗಿಂಬು ಪಾಲಿಸೆ ಶುಂಭಮರ್ದಿನಿ 4ಘನವೇಣುಪುರವಾಸೆ ಸರ್ವಾರ್ಥದಾ-ಯಿನಿ ತ್ರೈಜಗದೀಶೆಸನಕನುತೆ ಶ್ರೀಲಕ್ಷುಮಿನಾರಾ-ಯಣಭಗಿನಿ ಶ್ರೀಮಹಿಷಮರ್ದಿನಿಮನಮಥಾಮಿತರೂಪೆ ಕಾತ್ಯಾ-ಯಿನಿ ನಿರಾಮಯೆ ಮಂಜುಭಾಷಿಣಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ