ಒಟ್ಟು 910 ಕಡೆಗಳಲ್ಲಿ , 93 ದಾಸರು , 733 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರಯ್ಯ ತಿಮ್ಮಯ್ಯಾ ತೋರಯ್ಯಾ ಮುಖವನು | ತಾರಯ್ಯಾ ಒಂದು ಚುಂಬನ ಕರುಣ | ಬೀರಯ್ಯಾ ನಮ್ಮ ವಶಕೆ ಪ ಶೋಭಾನೆ || ನಿಲ್ಲು ನಿಲ್ಲೆಲೊ ದೇವಾ | ಎಲ್ಲಿ ಪೋಗುವಾ ನೀನು ಸಲ್ಲದು ನಿನ್ನ ಚೋರಂಗ ಲೀಲಿಗೆ ಪಳ್ಳಿಸೋಕುದೆ ಇಲ್ಲ ಇಲ್ಲದೆ 2 ಹಾರಿಸಿ ವೈದು ಮರನೇರಿ | ಹಾರಿಸಿ ಮರನೇರಿದ ಸಣ್ಣ | ಪೋರ ಬುಧ್ಧಿಗಳ ಬಿಡವಲ್ಲಿ 3 ತುರುಕರಗಳ ಕಾಯ್ದು | ಚರಿಸಿದೆ ಅಡವಿಯ | ಪರಸತಿಯರ ವ್ರತಗಳ | ಪರಸತಿಯರ ವ್ರತಗಳ ಕೆಡಿಸಿದ | ಪರಮಾತ್ಮನಿಗೆ ಎಣೆಯುಂಟೆ 4 ಕೇಸಕ್ಕಿ ತಿರುಮಲ ಲೇಸಯ್ಯಾ ನಿನ್ನ ಗುಣ | ಕಾಸುಕಾಸಿಗೆ ಬಿಡದಲೆ | ಕಾಸುಕಾಸಿಗೆ ಬಿಡದೆ | ಬಡ್ಡಿಕೊಂಬ ಆಶೆಗಾರನು ಬಹು ಸೂರಾಳೊ 5 ಅಣಕವಾಡಲಿ ಬೇಡ ಕೆಣಕಿದರೆ ನಿನ್ನ | ಹೊಣಿಕೆಹಾಕುವೆ ಹಿಡತಂದು ಎನ್ನಯ | ಮನವೆ ನಿನ್ನಯ ಚರಣಕ್ಕೆ ಶೋಭಾನೆ 6 ಬೆಟ್ಟದ ಕೊನೆ ಏರಿ ಎಷ್ಟು ದೂರ ಓಡೀ | ಗಟ್ಯಾಗಿ ನಿನ್ನ ಚರಣದ | ಗಟ್ಯಾಗಿ ನಿನ್ನ ಚರಣದ ಕೊನಿಯ ಉಂ ಗುಷ್ಟ ಕಚ್ಚದಲೆ ಬಿಡೆ ನಾನು 7 ಹಿಂದೆ ಯಾರು ಏನು ತಂದು ಕೊಟ್ಟರೋ ನಿನಗೆ | ಇಂದು ನಾನೇನು ಕೊಡಲಿಲ್ಲವೆಲೋ ತಂದೆ | ಕಣ್ಣಿರದು ನೋಡೊ ಕಮಲಾಕ್ಷ | ಶೋಭಾನೆ 8 ಭಕ್ತನ ನುಡಿಕೇಳಿ ಚಕ್ಕನೆ ಬಿಗಿದಪ್ಪಿ | ತೆಕ್ಕಿಸಿದಾ ವಿಜಯವಿಠ್ಠಲ ಎನ್ನ ಅಕ್ಕರವೆಲ್ಲ ತೀರಿಸಿದಾ | ಶೋಭಾನೆ 9
--------------
ವಿಜಯದಾಸ
ಬಾರೆ ವೆಂಕಟರಮಣಿ ಶ್ರೀದೇವಿ ನೀ ಬಾರೆ ವೆಂಕಟರಮಣಿ ಪ ನಿತ್ಯ ಅ.ಪ. ಏನು ಪುಣ್ಯವೆ ನಂದು ಪಾರಾಯಣನೀನು ಕೇಳುವಿ ಬಂದುಹೀನ ಮಾನವನಿಗೆ ನೀನು ಬರುವಿ ಎಂಬೊಜ್ಞಾನವಿಲ್ಲದೆ ಉಚ್ಚ ಸ್ಥಾನದೊಳಗೆ ಬಾರೆ 1 ಸ್ವಪ್ನದೊಳಗೆ ಬರುವಿ ಶ್ರೀದೇವಿ ನೀಕ್ಷಿಪ್ರದಿಂದಲಿ ಪೋಗುವಿಸರ್ಪಶಯನ ನಮ್ಮಪ್ಪ ಗೋಕುಲ ಬಾಲಅಪ್ಪಿಕೊಳ್ಳುವ ಸುಖ ಒಪ್ಪಿಸಬೇಕಮ್ಮ 2 ಸಿರಿ ರಂಗನಂಕದಿ ಕೂತುಭೃಂಗಕುಂತಳೆ ಹೃದಯಂಗಳದೊಳಗಾಡೆ 3 ಎಲ್ಲ ದೇವತೆಗಳನೆ ತಪಾದಿಯೆಪುಲ್ಲ ವಾರಿಜನಯನೆಗೊಲ್ಲ ಬಾಲನಪಾದ ಪಲ್ಲವ ನೋಡದೆನಿಲ್ಲಲೊಲ್ಲದು ಮನಸೊಲ್ಲು ಲಾಲಿಸೆ ತಾಯೆ4 ಇಂದಿರೇಶನ ರಾಣಿ ಎನ್ನಯ ಮನೋ-ಮಂದಿರದೊಳು ಬಾ ನೀನಂದಗೋಕುಲ ಬಾಲಾನಿಂದು ಕರದೊಳೆತ್ತಿತಂದು ತೋರಿಸೆ ಅರವಿಂದನಿಲಯೆ ಲಕ್ಷ್ಮಿ 5
--------------
ಇಂದಿರೇಶರು
ಬಾರೆ ಸಖಿ ವಾರಿಜ ಮುಖಿ ಬಾರೆ ಬಾರೆ ಸಖಿ ಬಾರೆ ಕೋಪಿಸೋರೆ ಹೀಗೆ ಯಾರುಪದೇಶವುಮುರಾರಿಯ ಮುಖ್ಯ ಬಲರಾಮನ ಸಖಿಯೆಬಾರೆ ಬಾರೆ ವಾರಿಜ ಮುಖಿಯೆ ಪ. ಪುಟ್ಟ ಸುಭದ್ರಾ ನಿನಗೆ ಸಿಟ್ಯಾಕ ಒದಗಿತಇಟ್ಟ ಮುದ್ರಿಗಳು ತಡವಾಗಿಇಟ್ಟ ಮುದ್ರಿಗಳು ತಡವಾಗಿ ಮುಯ್ಯವಇಷ್ಟು ಹೊತ್ತನಾಗೆ ತರಬಹುದೆ 1 ಕೇಳೆ ಸುಭದ್ರಾ ಮುಯ್ಯಾ ಕಾಳ ರಾತ್ರಿಲೆ ತಂದುಭಾಳ ಕೋಪಿಸುವ ಬಗಿ ಹೇಳಭಾಳ ಕೋಪಿಸುವ ಬಗಿ ಹೇಳ ಮುತ್ತಿನ ತೋಳುತಾಯಿತವ ಕೊಡುವೆನ 2 ಧಿಟ್ಟ ಸುಭದ್ರಾ ಮುಯ್ಯಾ ಇಷ್ಟೊತ್ತ್ತಿನಾಗ ತಂದು ಸಿಟ್ಟು ಮಾಡಿದ ಬಗಿ ಹೇಳಸಿಟ್ಟು ಮಾಡಿದ ಬಗಿ ಹೇಳ ಮುತ್ತಿನ ಕಟ್ಟಾಣಿ ಕೊಡುವೆ ನಿನಗಿನ್ನು3 ಲೋಕನಾಯಕಿ ಕೃಷ್ಣ್ಣಿ ಕೋಪವ್ಯಾ ಕೊದಗಿತಹಾಕಿದ ಮುದ್ರಿ ತಡವಾಗಿ ಹಾಕಿದ ಮುದ್ರಿ ತಡವಾಗಿ ಮುಯ್ಯವ ಈ ಕಾಲದೊಳಗೆ ತರಬಹುದೆ4 ಕೆಂಡದಂಥವಳ ಗುಣ ಕಂಡೇವ ಸಭೆಯೊಳು ಚಂಡಿತನವನೆ ಬಿಡು ಕೃಷ್ಣಿಚಂಡಿತನವನೆ ಬಿಡು ಕೃಷ್ಣಿ ಮುತ್ತಿನ ದಂಡೆ ಕೊಡುವೆ ಬಿಡುಕೋಪ5 ಬೆಂಕಿಯಂಥವಳ ಗುಣ ಶಕ್ಯವೆ ವರ್ಣಿಸಲು ಶಂಕರಾದ್ಯರಿಗೆ ವಶವಲ್ಲಶಂಕರಾದ್ಯರಿಗೆ ವಶವಲ್ಲ ಮುತ್ತಿನ ವಂಕಿಯ ಕೊಡುವೆ ನಿನಗಿನ್ನು 6 ಸತಿಯು ಸುಭದ್ರೆ ನೀನು ಯತಿಯ ಬೆನ್ಹತ್ತಿದಾಗ ಅತಿಭೀತಿ ಎಲ್ಲಿ ಅಡಗಿತ್ತಅತಿಭೀತಿ ಎಲ್ಲಿ ಅಡಗಿತ್ತ ನಾವುನಿನ್ನ ಪತಿವ್ರತ ತನವ ಅರಿವೆನೆ7 ಮಿತ್ರೆಯರು ನಾವೆಲ್ಲ ತುಪ್ಪಅನ್ನವನುಂಡುಪುತ್ರರ ಸಹಿತ ಸುಖನಿದ್ರೆಪುತ್ರರ ಸಹಿತ ಸುಖನಿದ್ರೆ ಗೈವಾಗ ಮತ್ತ ನೀ ಮುಯ್ಯ ತರಬಹುದೆ8 ಲೋಲ ರಾಮೇಶನು ಹಾಲು ಅನ್ನವನುಂಡುಬಾಲರ ಸಹಿತ ಸುಖನಿದ್ರೆಬಾಲರ ಸಹಿತ ಸುಖನಿದ್ರೆ ಗೈವಾಗಮ್ಯಾಲೆ ಮುಯ್ಯ ತರಬಹುದೆ9
--------------
ಗಲಗಲಿಅವ್ವನವರು
ಬಾರೊ ಬಾರೊ ರಂಗ-ಬಾರೊ ನಮ್ಮನೆಗೆ ಪ ಬೋರನ್ಹಾಕುವೆ ನಡೆಮುಡಿಯ ನಿಮ್ಮಡಿಗೆ ಅ.ಪ ಪರಿಮಳಾಂಬುವಿನಿಂದ-ಪದವ ತೊಳೆಯುವೆನೊ ವರಗಂಧಾಕ್ಷತೆಯನು-ಭರದಿ ಧರಿಸುವೆನೋ 1 ಹೊಸಪಟ್ಟೆಯನು ತಂದು-ಹೊಂದಿಸಿ ರಾಜಿಸುವೆ ಕುಸುಮದಿಂದರ್ಚಿಸಿ ಕೂಡೆ ಸಂತಸವ 2 ಕುಂಕುಮಾಗಿಲು ದಿವ್ಯ ಗುಗ್ಗುಲಹೊಗೆಯ ಬಿಂಕದಿಂದರ್ಪಿಸುವೆನು ಭೋಗಿಸಯ್ಯಾ 3 ಮೇಲೆ ಸದ್ಭಕ್ಷ್ಯ ತಾಂಬೂಲವರ್ಪಿಸುವೆ ಲಾಲಿತ ಮಹಮಂಗಳಾರತಿಯೀವೆ 4 ಬಿಡದೆ ಸಾಷ್ಟಾಂಗವ ನಿಡುವೆ ರಮೇಶ ಪೊಡವಿಯೊಳ್ ಮಹದೇವಪುರದ ಶ್ರೀಹರಿಯೆ5
--------------
ರಂಗದಾಸರು
ಬಾರೊ ರಂಗ ಕೋಮಲಾಂಗ ದಾರಿಗೆ ತನ್ನಂಗಸಂಗ ನೀಡಲ್ಹೋದ ಎನ್ನ ಕಂಗಳಿಂದ ನೋಡದೆ 1 ಉಂಗುರಗುರುಳ ಚೆಲ್ವೆ ಉದಯಭಾಸ್ಕರನಂತಿದ್ದ ಜಾಂಬವಂತಿಯೇರ್ಹಂಬಲಿಸುತ್ಹೋದನೆ ಸಖಿಯೆ 2 ರಂಗುತುಟಿ ರಜತದಾಭರಣ ಕುಂದಣದಂತಿರುವೋ ಕೋಮಲೆ ಇಂದು ನಾ ಕರೆತಾವೇನಮ್ಮ ಸುಂದರಾಂಗನ 3 ವೇಳ್ಯಮಾಡಿದೆನ್ನರಮಣ ಕಾಳಾದೇವಿ ಮನೆಯಲವಳ ತೋಳ ಪಿಡಿದು ಸೆಳೆಮಂಚದಲ್ಲಿ ಕುಳಿತಿಹನೆ 4 ಏಳು ಏಳೆಂದೆಬ್ಬಿಸುತಲಿ ಈರೇಳು ಲೋಕದೊಡೆಯನ ನಾಳೆ ನಾ ಕರೆತಾವೇನಮ್ಮ ನಾರದಪ್ರಿಯನ 5 ಅಮ್ಮನಾ ಸ್ಮರಿಸಲ್ಲಾ ್ಹ್ಯಗೆ ಪನ್ನಂಗಶಯನ ನೀಲ ರನ್ನಮಂಚದಲ್ಲಿ ಲೆತ್ತವನ್ನಾಡಹೋದ 6 ಅನ್ನವನು ಬಿಟ್ಟು ಭಾಮೆ ತನ್ನ ಪ್ರಾಣ ತೊರೆವೋಳೆಂದು ಮನ್ನಿಸಿ ಕರೆತಾವೇನಮ್ಮ ನಿನ್ನಾಳುವೋನ 7 ಮುದ್ದು ಮುಖವನು ನೋಡುತಿದ್ದನಾಕೆ ಮಂದಿರದಲ್ಲಿ ಮದ್ದು ಮಾಡ್ವೊಲಿಸಿದ್ದಾಳೇನಾ ಭದ್ರಾ ಕೃಷ್ಣಗೆ 8 ಸದ್ಯೋಜಾತನಯ್ಯನಯ್ಯ ಕದ್ರುಕುಮಾರನ ಶಯ್ಯ- ನ್ನ ್ಹದ್ದೇರಿಸಿ ಕರೆತಾವೇನಮ್ಮ ಪದ್ಮನಾಭನ 9 ಅತ್ಯಂತ ಪ್ರೀತಿ ಮೋಹದ ಮಿತ್ರವಂತೆ ಮಂದಿರದಲ್ಲಿ ವತೆÀ್ತಯಿಟ್ಟಂತಾಯಿತಮ್ಮ ವಾಮಾಂಗಿ ಹರಿಯ 10 ಸತ್ಯವಾಗಿ ಕೇಳೇ ಭಾಮೆ ಹೆತ್ತ ತಾಯಿ ತಂದೆಯರಾಣೆ ಹಸ್ತ ಮುಗಿದು ಕರೆತಾವೇನರ್ಕಕೋಟಿತೇಜನ 11 ಪಚ್ಚೆಪದಕ ರತ್ನದಾಭರಣ ಅಚ್ಚಮುತ್ತಿನಂತಿರುವೊಳ್ವೊಯ್ಯಾರಿ ಮೆಚ್ಚು ಮಾಡೊಲಿಸಿದ್ದಾಳೇನೊ ಲಕ್ಷಣಾ ಹರಿಯ 12 ರಕ್ಷಿಸ್ಹರಿ ರಕ್ಷಿಸೆಂದು ಇಕ್ಷು ಬಿಲ್ಲನಯ್ಯನ ಕರೆತಂದು ಈ ಕ್ಷಣದಲ್ಲಿ ಕೂಡಿಸುವೆ ಇಂದಿರಾಪತಿಯ 13 ಚೆಲ್ವೆರುಕ್ಮಿಣಿ ಮಂದಿರದಲ್ಲಿ ಮಲ್ಲಿಗೆ ಮಂಚದಲ್ಲೆಚ್ಚರಿ- ಲ್ಲದ್ಹಾಗೆ ಕುಳಿತಿದ್ದ ಬರುವೋನಿಲ್ಲಿಗಿನ್ನಾ ್ಹ್ಯಗೆ14 ಪಲ್ಲವಪಾದಗಳಿಂದ ನಿಲ್ಲದೆ ಭೀಮೇಶಕೃಷ್ಣ ಇಲ್ಲಿಗೆ ಬಂದಿರುವ ನೋಡೆ ಫುಲ್ಲನಯ್ಯನು 15
--------------
ಹರಪನಹಳ್ಳಿಭೀಮವ್ವ
ಬಾರೋ ಬಾರೆಲೋ ಹೃದಯ ವಾರಿಜದೊಳುಬಾರಿ ಬಾರಿಗೆ ಕರೆವೆ ನಿನ್ನ ಮೋರೆ ತೋರೆಲೋ ಪ ಪುಟ್ಟ ಪಾದವ ಕ್ಷಿತಿಯೊಳಿಟ್ಟು ಮೋದವ ಕೊಟ್ಟು ಭಕ್ತರಿಗೆ ತೋರೋ ಕೃಷ್ಣ ರೂಪವಾ 1 ಸಿಂಧು ಮಥಿಸಿದಿ ಸುಧೆಯ ತಂದು ಬಡಿಸಿದಿ ಕೃಷ್ಣಾಚಂದದಿಂದ ದೇವತೆಗಳ ವೃಂದ ಸಲಹಿದಿ 2 ಇಂದು ವದನನೆ ಶಾಮಸುಂದರಾಂಗನೇಆನಂದದಿಂದ ತೋರೋ ಎನಗೆ ಕುಂಜಹೃದಯನೇ 3 ಇಂದಿರೇಶನೆ ಭವೇಂದ್ರ ವಂದ್ಯನೆ ಕೃಷ್ಣಾ ನಿನ್ನಕಂದನೆಂದು ಕರೆಯೋ ಎನ್ನ ನಂದ ಬಾಲನೇ4
--------------
ಇಂದಿರೇಶರು
ಬಾರೋ ಮನೆಗೆ ಶ್ರೀಧರನೆ ನಿಜಪರಿ ವಾರದೊಡನೆ ಗುಣವಾರಿಧಿಯೆ ಪ ಮಾರಜನಕ ಸುಕುಮಾರಾಂಗ ಪರಮೋ ದಾರಾಕೃತಿಯ ನೀ ತೋರಿಸೆನಗೆ 1 ಎಷ್ಟು ಜನ್ಮದ ತಪ ಒಟ್ಟಾಗಿ ಸೇರಲು ದೃಷ್ಟಿಸುವೆನೊ ಶ್ರೀ ಕೃಷ್ಣ ನಿನ್ನನು 2 ಚಿನ್ನದ ಪೀಠದಿ ರನ್ನದ ಕಲಶದಿ ಚನ್ನಾಗಿ ತೊಳೆಯವೆ ನಿನ್ನಡಿಗಳ 3 ಗಂಧವ ಹಚ್ಚಿ ಸುಗಂಧ ತುಳಸೀದಳ ದಿಂದಾಲಂಕರಿಸುವೆ ಸುಂದರಾಂಗನೆ 4 ಜಾಜಿಯು ಮೊದಲಾದ ಹೂಜಾತಿಗಳ ತಂದು ಮೂಜಗದೊಡೆಯನನು ಪೂಜಿಸುವೆನೊ5 ಲೋಪವಿಲ್ಲದೆ ದಿವ್ಯ ಧೂಪವನರ್ಪಿಸಿ ದೀಪಂಗಳನು ಬಹು ದೀಪಿಸುವೆನು 6 ಘೃತ ಮೇಲಾದ ಭೋಜ್ಯವ ಮೇಳೈಸುವೆನು ಶ್ರೀಲೋಲನಿಗೆ 7 ಕರ್ಪೂರವೀಳ್ಯವನರ್ಪಿಸಿ ಮೋದದಿ ಕರ್ಪೂರದಾರತಿಗಳರ್ಪಿಸುವೆನು 8 ಮಣಿದು ನಿನ್ನಂಘ್ರಿಗೆ ಹಣೆಯ ಚಾಚುತ ಮನ ದಣಿಯುವಂದದಿ ನಾ ಕುಣಿದಾಡುವೆ 9 ಸದಯ ನಿನ್ನಂಘ್ರಿಯ ಹೃದಯಾರವಿಂದದ ಸದನದೊಳಿಂಬಿಟ್ಟು ಮುದಮೊಂದುವೆ 10 ಶರಣಾಗತರನೆಲ್ಲ ಕರುಣದಿ ಸಲಹುವ ವರದವಿಠಲ ಪುಲಿಗಿರಿಧಾಮನೆ 11
--------------
ವೆಂಕಟವರದಾರ್ಯರು
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಾಲಗೋಪಾಲ ಬಲುಜಾಣನೆ ಗೋಪಮ್ಮ ನೀಲ ಮೇಘಶ್ಯಾಮನೆ ಬಹುಶೂರನೇ ಜಾರನೇಚೋರನೇ ಪ ನಾರಿಯರೆಲ್ಲರು ನೀರ ತರುತಲಿರೆ ನೀರ ಕೊಡವನೆಲ್ಲ ಒಡೆದ ಗೋಪಮ್ಮ 1 ಸಣ್ಣ ಸಣ್ಣ ಹುಡುಗರ ಬಣ್ಣಿಸಿ ಕರೆತಂದು ಕಣ್ಣ ಬಿಡಿರೆನುತಲೆ ಸುಣ್ಣ ತೊಡೆದು ಪೋದ 2 ಅಂಗನೆಯರು ಪುಣ್ಯಗಂಗೆ ಮೀಯುತಲಿರೆ ರಂಗನಾಗ ದಿವ್ಯಾಂಗ ವಸ್ತುವ ನೊಯ್ದ ಗೋಪಮ್ಮ 3 ದಡದ ಮರವನೇರಿ ಉಡುವ ಸೀರೆಯನೆಲ್ಲ ಕೊಡದೆ ಕಾಡಿದ ಕೃಷ್ಣ ಮಾನ ಭಂಗವ ಮಾಡಿ 4 ತಾಳಲಾರೆವು ನಿಮ್ಮ ಮಗನ ಲೂಟಿಯ ನಾವು ಹೇಳೆ ಭೀಮನ ಕೋಣೆ ಲಕ್ಷ್ಮೀಲೋಲನಿಗೊಮ್ಮೆ ಗೋಪಮ್ಮ 5
--------------
ಕವಿ ಪರಮದೇವದಾಸರು
ಬಾಲನೇನೆ ನಿನ್ನ ಮಗನು ಗೋ- ಪಾಲಕೃಷ್ಣನು ಪ. ಬಾಲನೇನೆ ನಿನ್ನಮಗನು ಬಾಲಕಿಯರಾಲಯ ಪೊಕ್ಕು ಶೀಲಗೆಡಿಸಿ ಸಾಲದೆ ಗೋ- ಕುಲವನು ಸೂರೆಮಾಡಿದ ಅ.ಪ. ಕಾಲು ಇಲ್ಲದೆ ನಡೆವನೀತ ಮೇಲುಗಿರಿಯ ಬೆನ್ನಲಾಂತ ಮೂಲಬೇರ ಮೆಲ್ಲುವಾತ ಜ್ವಾಲರೂಪಿ ಸ್ಥೂಲಕಾಯ ಬಾಲನಾಗಿ ಭೂಮಿಬೇಡಿದ ಹಾಲು ಕುಡಿಸಿದ ತಾಯ ಎರವು ಮಾಡಿದ ವಲ್ಕಲವನುಟ್ಟು ಅಡವಿ ಆಲಯವ ತಿರುಗಿದ ಶ್ರೀರಾಮಚಂದ್ರ ವೇಲಾಪುರದ ಸೋರುಮುಡಿಯ ಬಾಲೆಯನು ಸೋಲಿಸಿ ಕಾಲದಲ್ಲಿ ಕಲ್ಕ್ಯನಾದ 1 ಮಡುವಿನಲ್ಲಿ ಅಡಗಿಯಿರುವ ಪೊಡವಿ ದೊಡ್ಡನೆತ್ತಿ ಪೊರೆವ ಅಡವಿಯಲ್ಲಿ ಆಡುತಿರುವ ಕಡುಕ್ರೂರ ಹಿಡಿದ ಹಟವ ಹುಡುಗನಾಗಿ ಪೊಡವಿ ಬೇಡಿದ ಕೊಡಲಿ ಪಿಡಿದು ಕಡಿದು ಕ್ಷತ್ರಿಯರ ಕುಲವ ತರಿದನೆ ರಾವಣಾದಿ ಪಡೆಯನೆಲ್ಲ ಸಂಹರಿಸಿದ ಶ್ರೀರಾಮಚಂದ್ರ ತುಡುಗು ಮಾಡಿ ಗಡಿಗೆ ಪಾಲ ಕುಡಿದು ಕಡಹದಲ್ಲಿ ಅಡಗಿ ಬಿಡದೆ ತ್ರಿಪುರವ್ರತಕೆಡಿಸಿ ಪಿಡಿದು ತೇಜಿಯ ನಡೆಸುತಿಹನು 2 ನೀರಪೊಕ್ಕು ವೇದತಂದು ಭಾರಪೊತ್ತು ಬೆನ್ನಲಿಟ್ಟು ಕೋರೆಹಲ್ಲು ತೋರುವ ಕ್ರೂರವದನ ಅಪಾರ ಮಹಿಮ ಪಾದ ಭೂಮಿ ಬೇಡಿದ ವಿಪ್ರರ ಕರೆಸಿ ಧಾರುಣಿಯನೆ ದಾನ ಮಾಡಿದ ಪರ್ವತಗಳ ತರಿಸಿ ಶರಧಿಯನ್ನು ಸೇತುಕಟ್ಟಿದನೆ ಶ್ರೀರಾಮಚಂದ್ರ ಜಾರ ಚೋರ ಮಾರನಯ್ಯ ನಾರೇರಪ್ಪಿ ಮರುಳುಮಾಡಿ ವಾರಿಜಾಕ್ಷ ಹಯವದನ ಏರಿ ಕುದುರೆ ವೈಹಾಳಿಮಾಡಿದ 3
--------------
ವಾದಿರಾಜ
ಬಾಲೆಯರೆಲ್ಲರು ಬನ್ನಿರೆ ರನ್ನದ ಕೋಲ್ಗಳನೀವ್ ಪಿಡಿದು ಪ. ಮೇಲಹ ಪದಮಂ ಪಾಡುವ ಕೋಲಾಹಲ ಸಮಯವಿದು ಅ.ಪ. ಶರಧಿತನೂಭವೆ ನೀ ಬಾ ಬಾ ನೆರೆಮೆರೆವೀ ಶರದುತ್ಸಹಮಂ ಅರಿಪುತು ಜಗಕಿಂದು 1 ನಿಗ್ರಹಕಾರ್ಯದಿಂದುಗ್ರನಾಗಿಹ ಭರ್ಗನಕೆಲಕೈತಂದು ವ್ಯಗ್ರತೆಯಿಳಿಸಿ ಪೊರೆ ಶೀಘ್ರದಿ ಗಿರಿಸುತೆ ಸಮಗ್ರ ಭಾರತಮಿಂದು2 ಸರಸ್ವತಿ ಬಾ ನಿನ್ನರಸನ ಕೆಲಸಾರ್ ಧರೆಯೊಳ್ ಸುಪ್ರಜರಂ ನೆರೆ ಸೃಜಿಸುವ ವೋಲ್ ಅರುಹು ವಿಚಕ್ಷಣೆ ಅಸುರರ ಪಡೆಯದಿರೆನ್ನು3 ಶರದಿತನೂಭವೆ ಅರಸಗೆ ನೀನೊರೆ ಪರಿಪರಿ ವಿಧದಿಂದಂ ಕೊರತೆಯದಿಲ್ಲದೆ ಪೊರೆ ಜಗಮೆನ್ನುತ ಪೊರೆವೆವು ಛಲದಿಂದಂ4 ಭಾರತ ಜನನಿಯ ಭಾಗ್ಯೋದಯಮಂ ತೋರಿರೆ ಶಕ್ತಿತ್ರಯರೆ ಭಾರತವೀರರಿಗಾರೋಗ್ಯೈ ಶ್ವರ್ಯಂಗಳ ಕರುಣಿಸಿರೇ 5 ರಾಷ್ಟ್ರಪ್ರಮುಖರ ಕಷ್ಟಂಗಳ ನಾ ವೆಷ್ಟೆಂದೊರೆದಪೆವೇ ಸೃಷ್ಟಿ ಸ್ಥಿತಿ ಲಯಕರ್ತರು ನೀವಿರೆ ದೃಷ್ಟಿಸಿರೀಗೆನ್ನುವೆವೆ 6 ಕನ್ನಡತಾಯಿಯ ಕನ್ನೆಯರಾವು ಉನ್ನತಿಯನ್ನೆಳಸುವೆವು ಮನ್ನೆಯರ್ ನೀವೆಮ್ಮೋಳಿನ್ನಾವೇಶಿಸೆ ಧನ್ಯರು ಮಾನ್ಯರು ನಾವಹೆವು7 ಆರ್ಯಮಹಿಳೆಯರೆನೆ ವೀರಮಾತೆಯರೆನೆ ಧಾರುಣಿಯೊಳಗೆಮ್ಮಂ ಧೈರ್ಯಸ್ಥೈರ್ಯೌದಾರ್ಯ ಗುಣಂಗಳ ಪೂರಿತರಪ್ಪಂತೊಸೆವುದೆಮಗಿನ್ನು 8 ಒಲಿದೆಮ್ಮನು ನೀವ್ ನೆಲೆಸಿರೆ ನಲವಿಂ ಬಲಗೊಳ್ಳುತ್ತಾನವರತಂ ಕಲಿಯುಗಮಲ್ಲಿದು ಕೃತಯುಗಮೆನುವೋಲ್ ಬೆಳಗುವೆವೆಲ್ಲೆಡೆಯೋಳ್9 ಪರಿ ಭಾವಿಸಿ ಮನ್ನಿಸಿರೆ ಶ್ರೀವರ ಶ್ರೀಶೇಷಗಿರೀವರ ನಾವಗ ಮೋವುಗೆ ಕರುಣಿಸಿರೆ 10
--------------
ನಂಜನಗೂಡು ತಿರುಮಲಾಂಬಾ
ಬಿಂಕವ್ಯಾತಕ್ಕೆನಮ್ಮ ಕೂಡ ಬಿಂಕವ್ಯಾತಕ್ಕೆಅಕಳಂಕ ರುಕ್ಮಿಣಿಯರಮನೆಗೆ ಅಹಂಕಾರದಲಿ ಮುಯ್ಯ ತಂದು ಪ. ವಾತನೊಡಗೂಡಿ ಜನಿಸಿ ಆತನಮದುವೆ ಮಾಡಿಕೊಂಡೆನೀತಿಯೇನ ನಿನಗೆ ದ್ರೌಪತಿಈ ಮಾತು ಕೇಳಿ ಮಂದಿ ನಗರೆ 1 ಹುಟ್ಟು ಹೊಂದು ನಾರಿ ನೀನುಎಷ್ಟೊಂದು ಗರವು ನಮ್ಮ ಕೂಡಯಾಕೆ ಕೃಷ್ಣನ ಅರಸಿ ರುಕ್ಮಿಣಿಗೆಒಂದಿಷ್ಟರೆ ದೋಷ ತೋರ ಸಖಿಯೆ2 ಜನನ ಮರಣವೆಂಬೆರಡು ಜಾಣಿ ರುಕ್ಮಿಣಿಬಲ್ಲಳೇನ ಜನನಿ ಬೊಮ್ಮಗ ಎನಸಿತಾನೆ ಜಗದಿ ಖ್ಯಾತಿ ತುಂಬಿಲ್ಲವೇನ ಈ ಜಗದಿ ಖ್ಯಾತಿ ತುಂಬಿಲ್ಲವೇನ 3 ನಿತ್ಯ ನಿತ್ಯ ಮೂರುತಿ ಕೃಷ್ಣನ ಭಜಿಸಿನಿತ್ಯ ತೃಪ್ತಳು ಎನಿಸುತಿಹಳು 4 ಅತ್ತಿಗೆಯರೆಂಬೊ ದಿವ್ಯ ಅರ್ಥನಾಮವ ಜಪಿಸಿಮತ್ತೆ ರಾಮೇಶನ ಅರಸಿಯರಿಬ್ಬರಭೃತ್ಯಳಾಗಿ ಭಾಗ್ಯವ ಪಡಿಯೆ5
--------------
ಗಲಗಲಿಅವ್ವನವರು
ಬಿಡದೆ ನಿಮ್ಮನು ಪೂಜಿಸುವ ದಾಸರಿಗೆಪ ತಡೆಯದೆ ವೈಕುಂಠವಹುದು ಸೋಜಿಗವೆ ಅ.ಪ. ಬಡತನವಾಗೆ ಬಾಲತ್ವದ ಸಖನೆಂದುಮಡದಿ ಪೋಗೆನ್ನೆ ಕುಚೇಲ ಬಂದುಪಿಡಿತುಂಬ ಅವಲಕ್ಕಿಯ ತಂದು ಕೊಡಲಾಗಕಡು ಮೆಚ್ಚಿ ಅವನಿಗೆ ಸೌಭಾಗ್ಯವನಿತ್ತೆ 1 ಕುಡುತೆ ಪಾಲ್ಕುಡಿದು ಪೊಡವಿಯನು ಮೆಟ್ಟಿ ಪಾಪಿಷ್ಠನನು ಕೆಡಹಿದೆಬಡವರಾಧಾರಿಯೆಂಬ ಬಿರುದನು ಪಡೆದೆ 2 ಕಡಲಶಯನನೆ ಕುಬುಜೆ ತಂದ ಗಂಧಕೆ ಮೆಚ್ಚಿಒಡನೆ ಅವಳನು ಸುರೂಪಿಯ ಮಾಡಿದೆಸಡಗರದಿ ಅನವರತ ಬಿಡದೆ ಪೂಜಿಸುವಂಥದೃಢಭಕ್ತಗೇನುಂಟು ಏನಿಲ್ಲ ಸಿರಿಕೃಷ್ಣ 3
--------------
ವ್ಯಾಸರಾಯರು
ಬಿಡು ಎನ್ನ ಶೆರಗನು ಬಾಲಕೃಷ್ಣಾಉಡುಗಿ ದೇವರ ಮನಿ ಬರುವೆ ಬೇಗ ಪ ಅಂಗಳ ಥಳಿ ಹಾಕಿ ರಂಗವಲ್ಲಿಯ ಹಾಕಿತಂಗಳ ಮೊಸರನ್ನಾ ಕಡೆಯಲ್ಹಾಕಿಬಂಗಾರದ ಬಟ್ಟಲೊಳು ರಂಗ ಬೆಣ್ಣೆಯನೀವೆಕಂಗಳನೆ ತೆಗಿ ಬೀರು ಮಂಗಳವಾ1 ಹಾಸಿಗೆ ಬಿಟ್ಟೇಳು ವಾಸುದೇವನೆ ನಿಮ್ಮಹಾಸಿನ ತೊಟ್ಟಿಲೊಳು ಮಲಗು ಕೂಸಾಏಸು ಹುಡುಗರೆಲ್ಲ ಸೋಸಿಲಿ ಕರೆವರುದೋಸೆ ಕೊಡುವೆ ತಿನ್ನೋ ಏಳು ಬೇಗ 2 ತರುವು ಕಟ್ಟಲಿ ಬೇಕು ಕರುವು ಕಾಯಲುಬೇಕುತೊರೆದು ಮಲಿಯನುಣ್ಣು ಏಳು ಬಾಲಜರದ ಕುಂಚಿಗೆ ಹೊದ್ದು ಹೊರಗೆ ಬಂದಿಹ ರಾಮಕರೆಯುತ್ತಲಿರುವನು ಕಣ್ಣೆತ್ತಿ ನೋಡು 3 ಕೋಳಿ ಕೂಗುತಲಿದೆ ಕಾಳು ಕಡಿವೆ ಹಾಕುಏಳು ಗಿಳಿಯು ನಿನ್ನ ಕೇಳುತಲಿವೆಪಾಲು ಸಕ್ಕರಿನಿತ್ತು ಸಾಲು ಕೋಕಿಲ ಹಿಂಡುಗಾನ ಮಾಡುತಲಿವೆ ಏಳು ಬೇಗ4 ಅಂದ ಮಾತನು ಕೇಳಿ ಆ ಕಂದ ಎತ್ತಿಕೋ ಎನ್ನಒಂದು ಬಟ್ಟಲದೊಳಗೆ ತಂದುಕೊಡು ಆಡುವೆಎಂದು ತಾಯಿ ಚಿನ್ನಾ ಹಿಂದೆ ಸೆರಗಪಿಡಿದು ಇಂದಿರೇಶ 5
--------------
ಇಂದಿರೇಶರು
ಬಿಡು ಬಿಡು ಇನ್ನು ಸೋಗಾಚಾರ | ಒಡಿಯ ಬಲ್ಲನು ನಾನು ನಿನ್ನ ವಿಚಾರ ಪ ತುಡಗತನ ಕಲಿತು ನೆರೆಹೊರೆಯವರ ಮನೆಯಲ್ಲಿ | ಗಡಿಗೆ ತುಪ್ಪಾ ಬೆಣ್ಣೆ ಮೊಸರು | ಹಾಲು | ಕುಡಿದು ಛೀ ಹಳಿ ಕದ್ದ ಕಳ್ಳನೆನೆಸಿಕೊಂಡ | ಪಡಚುತನವಲ್ಲದೆ ಭಾರಕನು ನೀನಲ್ಲ 1 ಸೀರಯನು ಕದ್ದಂದು ಕಡವಿನ ಮರವನೇರಿ | ಊರ ನಾರಿಯರ ಮಾನಕ್ಕೆ ಸೋತು || ಜಾರತನದವನಾಗಿ ತಿರಗಿ ಜಗದಾ ಭಂಡ | ಪೋರರಿಗೆ ಪೋರನಲ್ಲದೆ ಹಿರಿಯನಲ್ಲ2 ಮುನಿಗಳೆಜ್ಞದಲ್ಲಿ ತಿರಿತಂದು ಗೊಲ್ಲತೆರ | ತನುಜರ ಸಂಗಡಲಿದ್ದು ಎಂಜಲುಂಡು | ಮನುಜದೇಹವ ತೆತ್ತು ಬಿನಗು ಲೀಲಾಕೃತಿ | ದನಗಾವಿ ಎಲ್ಲದೆ ದೊರೆ ಮಗನು ನೀನಲ್ಲ 3 ಯಾತಕ್ಕೆ ಬಾರದ ಕುನಪೆಣ್ಣಿಗೆ ಮೆಚ್ಚಿ | ಮಾತುಳನ ಕೊಂದು ಮುತ್ತೈಯಗೊಲಿದು | ಭೀತಿಯಲಿ ಪರರಾಯನ ಮಗಳ ಕೊಂಡು ಬಂದ | ಯಾತರ ಪೌರುಷದವನು ಲೋಕದೊಳಗೆಲ್ಲ 4 ತೊತ್ತಿನ ಮಗನಲ್ಲಿ ವುಂಡು ಬಿಗಿಸಿಕೊಂಡು | ಮಿತ್ರಭೇದವನಿಕ್ಕಿ ಬಂಧುಗಳಿಗೆ | ತೆತ್ತಿಗನು ನೀನಾಗಿ ವಾಜಿಗಳ ಪಿಡಿದು | ಹತ್ಯವ ಮಾಡಿಸಿದೆ ಉತ್ತಮನು ನೀನಲ್ಲ 5 ಅಣ್ಣ ತಮ್ಮಂದಿರನು ಅಗಲಿಸಿ ವೈರದಲಿ | ನುಣ್ಣಗೆ ಒಬ್ಬರೊಬ್ಬರ ಕೊಲ್ಲಿಸಿ | ಇನ್ನೇನು ಉಸರುವೆನು ಕಟ್ಟಕಡಿಗೆ ಎಲ್ಲ | ನಿನ್ನ ಕುಲವನು ಕೊಂದೆ ಇದು ಪುಶಿಯಲ್ಲ 6 ತಿಳಿಯಲಾರರು ನಿನ್ನ ಠಕ್ಕು ಠವಳಿಯ ಮಾಯ | ಜಲಜ ಸಂಭವ ಶಿವ ಇಂದ್ರಾದ್ಯರು | ಸುಲಭ ದೇವರದೇವ ವಿಜಯವಿಠ್ಠಲರೇಯ |ವೊಲಿದ ದಾಸರಿಗೆ ಸಂತಾನ ಕುಲದೀಪ7
--------------
ವಿಜಯದಾಸ