ಒಟ್ಟು 2882 ಕಡೆಗಳಲ್ಲಿ , 122 ದಾಸರು , 2152 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಲ್ಲಿನಿಂದ ಸರ್ವ ಫಲ ಬಾಹುದೊ | ಪ ಕೈವಲ್ಯ ತೋರುವುದೊ ಅ.ಪ ಕಲ್ಲು ಕಡೆಯುತ್ತಿರಲು ಅಮೃತವೆ ಪುಟ್ಟಿತು | ಕಲ್ಲು ಎತ್ತಲು ಮಳೆಯೊಳೆಲ್ಲವರು ಉಳಿದರು | ಕಲ್ಲು ಹರಿಪಾದವನು ಸೋಕೆ ಹೆಣ್ಣಾಯಿತು | ಕಲ್ಲು ಲಂಕೆಗೆ ಮಾರ್ಗ ಚೆನ್ನಾಗಿ ಶೋಭಿಸಿತು1 ಕಲ್ಲಿನೊಳಗೆ ದೇವನೊಡಮೂಡಿ ಕಾಣಿಸುವ | ಮೂರ್ತಿ ಮಂತಾಹುದು | ಕಲ್ಲು ದೇವರ ಗುಡಿಗೆ ಗರುಡ ಗಂಬವು ಆಯ್ತು | ಕಲ್ಲು ಕೋಟ್ಯಾನು ಕೋಟಿಗೆಲ್ಲ ಬೆಲೆಯಾಯ್ತು2 ಕಲ್ಲೆಂದುಪೇಕ್ಷಿಸದೆ ಕಾಲಕಾಲದಿ ನಿಮ್ಮ | ಕಲ್ಲು ಮನಸನು ಬಿಟ್ಟು ಪೂಜೆಮಾಡಿ | ಸಿರಿ ವಿಜಯವಿಠ್ಠಲ ಒಳ್ಳೆ | ಕಲ್ಲು ಪದವಿಯ ಕೊಟ್ಟು ಸತತ ಪಾಲಿಪನೊ 3
--------------
ವಿಜಯದಾಸ
ಕವಿಗಳು ಪೊಗಳುವ ವಿವರವ ಪೇಳುವೆ ಪ ಅವನಿಯೊಳ್ ಕೃಷ್ಣನು ಅವತರಿಸುವ ಕಥೆ ಅ.ಪ ಸುರರೊಡೆಯನ ದಿವ್ಯ ತರುವನು ಬಲದಲಿ ಸರಸಿಜನಾಭನು ಧರೆಗೆ ತರುವನೆಂದು ಅರಿಯುತ ವರ ಸುಮನಸರೆಲ್ಲ ಕರಗಳಿಂದಲಿ ಸುಮ ಸುರಿದರೆಂದೆನುತಲಿ 1 ಅಂಬುಜನಾಭನು ಶಿಶುವಾಗಿರಲವನ ಸಂಭ್ರಮದಲಿ ತನ್ನ ವಶಗೊಳುವುದಕೆ ತುಂಬುರು ಗಂಧರ್ವರು ಪಾಡಿದರು ರಂಭೆ ಊರ್ವಶಿಯರು ನೃತ್ಯ ಮಾಡಿದರೆಂದು2 ವಾಸುದೇವನು ತನ್ನ ಶಿಶುವೆಂದರಿಯುತ ವಸುದೇವನ ಬಲು ಆಸೆಗೆ ನಗುತಲಿ ವಸುಗಳು ದೇವರು ವಾಸುದೇವನು ತಮ್ಮ ಕೂಸು ಏಕಲ್ಲವೆಂದು ಹರುಷ ಪೊಂದಿದರೆಂದು 3 ಇಂದುವದನನ ಅಂದವ ನೋಡುತ ಚಂದ್ರಕಲೆಯರ್ಧ ಕುಂದಿದನೆನ್ನುತ ಸುಂದರಕೃಷ್ಣನು ಅಂದು ತನ್ನಯ ಕುಲ ದಿಂದ ಬಂದಿರೆ ಬಲು ನಂದ ಪೊಂದಿದನೆಂದು 4 ಪನ್ನಗಶಯನನು ಸಣ್ಣ ಕೂಸಾಗಿರೆ ತನ್ನ ವಿಭುತನಕೆ ಇನ್ನು ಕುಂದಿಲ್ಲವೆಂದು ಉನ್ನತ ಗಗನ ಪ್ರಸನ್ನನಾಗಿ ದಿವ್ಯ ಸಣ್ಣ ತಾರೆಗಳಿಂದ ಬೆಡಗು ತೋರಿದ ಕಥೆ 5
--------------
ವಿದ್ಯಾಪ್ರಸನ್ನತೀರ್ಥರು
ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ- ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1 ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ- ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2 ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು ನಾ ಧೇನಿಸಲರಿಯೆ ಹರಿಯೇ 3 ಪ್ರಾಣಾಯಾಮವ ಕ್ರಮವು ರೇಚಕ ಪೂರಕವು ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4 ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು ವಿಷಮವಾಗಿಹುದಯ್ಯ ಮತ್ಸಾಧನ ಪ್ರತ್ಯಾಹಾರ ಸಾಧನವಿಲ್ಲ ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5 ಧಾರಣೋಪಾಯದೊಳು ಅಣುಮಾತ್ರ ನಾನರಿಯೆ ನರಕ್ರಿಮಿಯಾಗಿ ನಾ ಧರೆಯೊಳುಳಿದೆ ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6 ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ ಸಂಸ್ತುತಿಸೆ ಸಂಪ್ರಜ್ಞಾ ಅಸಂಪ್ರಜ್ಞವೆಂಬ ಘನಸಮಾಧಿಯೊಳ್ ಪರಿವಿಲ್ಲದಲೆ ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7 ಶುದ್ಧವಾದ ದ್ವೈತತ್ರಯ ತಿಳಿಯದಲೆ ಮುಗ್ಧನಾಗಿಹೆ ನಾನಪರಿಶುದ್ಧನೊ ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8 ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ ಹರಿಯೇ ಬಿಂಬಕ್ರಿಯವ ನಾನರಿಯದೇ ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9
--------------
ಉರಗಾದ್ರಿವಾಸವಿಠಲದಾಸರು
ಕಂಸಾರಿ ನಿನ್ನ ಪದ ತೋಯಜಕೆರಗುವೆ | ಕಾಯಜ ಜನಕ ಪ ಪಾಥÀಜ ಭವವಿಧಾತ ಸುಮನಸ ಪ್ರಾತವಿನುತ ಮಾನಾಥನೆ ನಿರುತ 1 ಭದ್ರಮೂರುತಿ ಬಲಭದ್ರಾನುಜ ಮಂದ ರಾದ್ರಿಪಾಣಿ ಸಮುದ್ರ ಶಯನ2 ಖೇಟವರೂಧ ಕಿರೀಟಸೂತ ಶತ | ಕೋಟಿದಿನಪ ನಿಭ ಘೋಟಕವದನ 3 ಕಂತು ಜನಕ ಮಾವಾಂತಕ ಮಾನವ ದಂತಿವೈರಿ ಜಗದಂತರಿಯಾಮಿ 4 ಸಾಮಗಾನಪ್ರೀಯ ಶಾಮಸುಂದರ ವ್ಯೊಮ ನೃಪನ ಜಾಮಾತನೆ ಜವದಿ 5
--------------
ಶಾಮಸುಂದರ ವಿಠಲ
ಕಳದೇವಲ್ಲ ಕೈಗೆ ನಿಲುಕಿದ ನಿಧಾನ |ತಿಳಿದು ಬಿಟ್ಟೆವಲ್ಲ ಸ್ವರ್ಗದ ಸೋಪಾನ || ಅಳಿದೆವಲ್ಲ ಆತ್ಮಲೋಕದ ವಿಮಾನ |ಸಲೆಯೆಂಬ ಸಮಯ ತುಂಬಿತಲ್ಸಮಾನಾ ಪ ಮದ್ದು ಮೇಯಿದಂತೆ ಚಿಂತೆಗಳಿದ್ದು ಸೊರಗಿ |ಕದ್ದು ಕಳ್ಳನಂತೆ ಲೋಕದೊಳು ತಿರುಗಿಬಿದ್ದು ಬೈಸಿಕೊಂಡೆ ಧನಿಕರಲಿ ಮರುಗಿ |ಹದ್ದು ಕಾಗೆಯಂತೆ ಕೂಳ ತಿಂದು ಒರಗಿ1 ಜನದ ಮನದ ನಾಚಿಕೆಗಳೆಲ್ಲ ಬಿಟ್ಟು |ಕನಸಿನಂಥ ವಿಷಯ ಸವಿಗೆ ಸೋಂಕಿ ಕೆಟ್ಟು |ಜನಿಸಿದವರ ಕೂಡ ಮತ್ಸರವ ತೊಟ್ಟು |ಶುನಕನಂತೆ ಬೊಗಳಿ ಬೊಗಳಿ ಗೋಳಿಟ್ಟು 2 ಉಕ್ಕಿ ಸೊಕ್ಕಿ ಸಾಧು ಸಜ್ಜನರ ದೂರಿ |ನಕ್ಕು ನುಡಿದು ಅವರ ದೋಷಗಳ ಬೀರಿ |ಝಕ್ಕಿಸಲರಿಯಾದವರ ಮಾತುಗಳ ಮೀರಿ |ರುಕ್ಮದಾಶೆ ಹಿಡಿಯದೆ ಹೇಡಿತನವ ತೋರಿ 3
--------------
ರುಕ್ಮಾಂಗದರು
ಕಳವಳಿಪುದೆನ್ನ ಮನ ಕಮಲಾಕ್ಷ ಬಾರದಿರೆ ಪ ನಳಿನಸಂಭÀವ ಲಿಖಿತವೇನಿಹುದೊ ಸಖಿಯೆ ಅ.ಪ. ಪೋದ ವಿಪ್ರನು ಬರದಿರಲು ಏನು ಕಾರಣವೊ ಹಾದಿಯಲಿ ವಿಘ್ನ ತಾನೊದಗಿತೊ ಮಾಧವನಿಗೆನ್ನೊಳು ಮಮತೆ ಬಾರದೆ ಹೊಯ್ತೆ ಮೇದಿನಿಯೊಳೇಕೆ ನಾ ಪುಟ್ಟಿ ಬಂದನೆ ಸಖಿಯೆ 1 ನಿನ್ನ ಹೊರತೆನಗಿನ್ನು ಅನ್ಯಗತಿಯಿಲ್ಲೆಂದು ಭಿನ್ನವಿಸಿಕೊಂಡಿದ್ದೇನಾಯಿತೆ ಕರ್ಮ ಬಲವಂತವಾಗಿರಲು ಬನ್ನಪಡಿಸುತಲೆನ್ನ ಬಳಲಿಪುದು ಸರಿಯೆ 2 ವಸುದೇವ ಸುತನಾಗಿ ಶಿಶುತನದ ಕ್ರೀಡೆಯೊಳ್ ಅಸುರರನು ಸಂಹಾರ ಮಾಡಿದವಗೆ ಶಿಶುಪಾಲನಾಕಾಲದ ವಶಮಾಡಲಸದಳವೆ ಕುಸುಮಾಕ್ಷಿ ಕರಿಗಿರೀಶನೆ ಗತಿಯು ಸಖಿಯೆ 3
--------------
ವರಾವಾಣಿರಾಮರಾಯದಾಸರು
ಕಾಕು ದೇಹದ ಮೇಲೆ ಪ ಲೋಕೇಶ ನಿಮ್ಮಯ ಶ್ರೀಪಾದಕಮಲಕ್ಕೆ ಜೋಕೆ ಮಾಡೆನ್ನೆಂದು ಮರೆಹೊಕ್ಕೆ ಸ್ವಾಮಿ ಅ.ಪ ಹೀನ ಬವಣೆಯ ಕಳೆದು ಜ್ಞಾನಪಾಲಿಸೆಂದು ದೈನ್ಯಬಡುವೆನು ನಿನಗೆ ನಾನಾ ಪರಿಯಲಿಂದ ಏನು ಕಾರಣ ನಿನಗೆ ದಯ ಬಾರದೆನ್ನೊಳು ದೀನಜನರ ಬಂಧು ಧ್ಯಾನಿಸುವ ಪ್ರಾಣ 1 ರಿಣದಿ ಮುಕ್ತನ್ನ ಮಾಡೆಂದ್ವಿಧವಿಧ ಬೇಡುವೆ ದಿನ ದಿನ ಮತ್ತಿಷ್ಟು ಘನವಾಗುತಿಹ್ಯದು ಮನಸಿಜಪಿತ ನಿನಗಿನಿತು ಭಾರನೆ ನಾನು ಕನಿಕರಬಡದಿಹಿ ಅನುಗನೋಳ್ವನಜಾಕ್ಷ 2 ಇಂತು ನಿರ್ದಯನಾಗಿ ಚಿಂತೆಯೆಂದೆಂಬುವ ಚಿಂತೆಚಿತೆಯೊಳು ನೂಕಿ ಎನ್ನ ಭ್ರಾಂತಿಪಡಿಸಬೇಡೋ ಅಂತ:ಕರಣದ ದೇವ ಅಂತ:ಕರುಣಿಸಿ ಎನ್ನ ಅಂತರಂಗದೊಳಿಹ್ಯ ಚಿಂತೆಯಳಿ ಶ್ರೀರಾಮ 3
--------------
ರಾಮದಾಸರು
ಕಾಣದ ವಸ್ತುವು ಕಾಣುವುದು ಕೇಳದದನಿಯು ಕೇಳುವುದು ಇಂದಿನ ಕಾರ್ಯವು ನಾಳಿನ ಸಂಗತಿ ತಿಳಿಯುವುದು ಚಿರವಹುದು ಪ [ಜೀವ]ಹೇಗಿದ್ದರೆ ಹೀಗಾಗುವುದು ನಾ ಮಾಡುವ ಕೈ ವಶವಹುದು ಮನಸಿನ ಕಶ್ಮಲ ಕಳೆದಿರಬೇಕು 1 ಆಶೆಯ ಪಾಶವು ಸುಟ್ಟಿರಬೇಕು ಸೋದರ ಭಾವವು ನೆಟ್ಟಿರಬೇಕು ನೀ ಗತಿಯೆಂದರೆ ಸಾಕು 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಣಲಿಲ್ಲವೆಂದೆನಬೇಡಿ ಪ ಜಾಣನವನು ನಿಮ್ಮ ಕೋಣೆಯೊಳಗಿರುವಾ ಗು ಡಾಣವ ತುಡುಕುವ ನೆರೆನೋಡಿ ಅ.ಪ ಸುಲಭನು ನಿಮಗವನೊಲಿವನು ನಿಮ್ಮೆಡೆ ನಿಲುವನು ನಲಿವನು ಕೈನೀಡೀ ಸಲಿಸಿರಿ ಬೆಣ್ಣೆಯ ಮೆಲುವನು ಕಿಲಕಿಲ ನುಲಿವನು ಚಲಿಸಲು ಬಿಡಬೇಡಿ 1 ಅಳುಕುತ ಬಳುಕತ ಬಳಲುತ ಸುಳಿಯುತೆ ಘಳಿಲನೆ ಪೋಪನೆಚ್ಚರವಿರಲಿ ಎಳನಗೆಯಿಂದ ಪಾಲೆರೆಯಿರಿ ಮನ ದೊಳಚ್ಚಳಿಯದ ಮೋದವು ನೆಲೆಸಿರಲಿ 2 ಮನವೆಂಬುವುದೇ ವನರುಹವಮ್ಮಾ ಕನಸುನೆನಸಿನೊಳಾ ವನಜವನರ್ಪಿಸೆ ನೀನೆಂಬುದನೇ ಮರೆಯುವಿರಮ್ಮಾ [ತನುಮನ ಅವನಡಿ ಸೇರುವುದಮ್ಮಾ] 3 ಪಡಸಾಲೆಯೊಳಿವ ನಿಲ್ಲುವನಲ್ಲಾ ಅಡಿಗೆಯ ಕೋಣೆಯ ಬಿಡುವನಲ್ಲ ಒಡೆಯ ಶ್ರೀಮಾಂಗಿರಿಪತಿಯನು ನೋಡದ ಮಡದಿಯಿಲ್ಲವೆಂಬುದು ಸಟೆಯಲ್ಲ 4 ನೀವಿರುವಾಯೆಡೆ ಪಾಲ್ಗಡಲಮ್ಮಾ ನೀವಡಿಯಿಡುವುದೇ ಕಡೆಗೋಲಮ್ಮಾ ದಧಿ ನವನೀತವು ನೀವಿರೆ ಮಾಂಗಿರಿರಂಗನುಂಟಮ್ಮಾ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಾಣಿಕೆಯನು ತಂದೆ ನಿನ್ನಡಿಗೆ ಪ ಹಾರಿಸಿಕೊಂಬುವ ಶೂರನೆಂದು ತಂದೆ ಮುರಾರಿ ವಿಚಾರಿಸಿ 1 ಇಲ್ಲದ ವಸ್ತುವಿಗಲ್ಲವೆ ಲೋಕದೊಳೆಲ್ಲರ ಮಾನಸರುಲ್ಲಾಸವೂ ನಿಲ್ಲದೆ ದುರಿತಗಳೆಲ್ಲ ಸೇರಿಸಿಕೊಂಡು 2 ಬರಿಕೈಯೊಳೆಂದಿಗು ಬರಲಾಗದೆಂದು ತಂದೆನೈ ವರದ ವಿಠಲ ಹರಿ3
--------------
ಸರಗೂರು ವೆಂಕಟವರದಾರ್ಯರು
ಕಾಣೆವಾವಿದನು ಕಾಣೆವಾವಿದನಾವ ಶಾಸ್ತ್ರದಲಿ ವಿದುಗಳ ಪ್ರಮಾಣ ವಚನದಲಿ ಮೂರನೆಯ ಪಥದಾಪಜಾಣಿಲಾತ್ಮನ ಸಮಾಧಿಯಲನುಭವಿಸಿ ಸುಖವಕಾಣದೆ ಬರಿದೆ ಮುಕುತರಾವೆಂಬ ಪರಿಯಾ ಅ.ಪತಾನೆ ಚೇತನವಂತೆ ತನಗೆ ಕರ್ಮಗಳಂತೆತಾನೆ ಸುಖಮಯನಂತೆ ತಾಪವನಂತೆತಾನೆ ಬೋಮವದಂತೆ ಹಾನಿವೃದ್ಧಿಗಳಂತೆತಾನೆ ನಿರ್ಲೇಪಸ್ತುತಿನಿಂದೆ ತನಗಂತೊ 1ಬೋಧೆಯು ತಾನಂತೆ ಸಾಧನವು ಬೇಕಂತೆಭೇದವಿಲ್ಲವದಂತೆ ಭೀತಿ ತನಗಂತೆನಾದ ಬಿಂದುಗಳನರಿದಿಪ್ಪಗತಿಯಂತೆಪಾದಾಭಿಮಾನ ಚಿಂತೆಯು ಪೋಗದಂತೆ 2ಕಾಯ ಕರುಣಾಭಿಮಾನಗಳಿಲ್ಲ ತನಗಂತೆಮಾಯೆ ಬಾಧಿಪುದಂತೆ ಮನಸಿನೊಳಗೆಈಯಹಂಕಾರವಿಲ್ಲದ ಬೊಮ್ಮಪದವಂತೆಹೇಯವಿದುಪಾದೇಯವೆನಿಪ ಭ್ರಮೆಯಂತೆ 3ಈಶ ತಾನಂತೆ ತನ್ನಾಶೆಗಳು ಬಿಡವಂತೆಕೋಶ ಸಾಕ್ಷಿಕನಂತೆ ಕೋಪ ತನಗಂತೆಪಾಶವಿಲ್ಲವದಂತೆ ಪಾಡುಪಂಥಗಳಂತೆಈ ಸಕಲ ತಾನಂತೆ ಇನ್ನು ವಿಧಿಯಂತೆ 4ಚೇತನವೆ ತಾನಂತೆ ಚಿತ್ತನಿಲ್ಲದುದಂತೆಪಾತಕಗಳಿಲ್ಲವಂತೆ ಪರಪೀಡೆಯಂತೆಜಾತಿಸೂತಕವೆಂಬ ಜಂಜಡಗಳಿಲ್ಲವಂತೆಮಾತಿನ ರಿಪು ಮತ್ಸರಗಳು ಬಿಡವಂತೆ 5ವಿಶ್ವಾತ್ಮತಾನೆಂಬ ವಿಶ್ವಾಸವುಂಟಂತೆವಿಶ್ವತ್ರೈಜಸರ ನಿಜವರಿಯನಂತೆನಶ್ವರದ ಭೋಗಂಗಳೆಂಬ ನಂಬಿಗೆಯಂತೆವಿಶ್ವಾದಿಗಳ ರೀತಿಯಲ್ಲಿ ಪಗೆಯಂತೆ 6ಅಂಡಪಿಂಡಗಳೈಕ್ಯವೆಂಬ ಬುದ್ಧಿಗಳಂತೆಚಂಡಾಲನಿವನೀತ ಮೇಲೆಂಬುದಂತೆಪಂಡಿತನು ಪ್ರವುಢ ತಾನೆಂಬ ಭಾಷೆಗಳಂತೆಕುಂಡಲಿಯ ಹೆಳವ ಕೇಳ್ದಡೆ ಕುದಿವನಂತೆ7ಚಿನ್ಮಯಾತ್ಮಕನು ತಾನೆಂಬ ಚಿಂತೆಗಳಂತೆತನ್ನವರು ತಾನೆಂಬ ಭ್ರಮೆಪೊಗದಂತೆಸನ್ಮುದ್ರೆಯಂತೆ ಸತ್ಯಾಸತ್ಯವೆರಡಂತೆತನ್ಮಯತೆಯಂತೆ ಲಕ್ಷಣೆಯರಿಯನಂತೆ 8ಗುರುಭಕುತಿಯಂತೆ ವರಕರುಣವಿಲ್ಲವದಂತೆಗುರುಶರಣನಂತವರನುಗೇಳನಂತೆಪರಮಪದ ತಾನಂತೆ ಪಿರಿದು ಸಂಶಯವಂತೆವರ ಮುಕ್ತಿಯಂತೆ ವಾಸನೆಯು ಬಿಡದಂತೆ 9ಈ ಪರಿಯ ಸಂಭಾವನೆಗಳ ಪರಿಹರಿಸಿ ಶ್ರೀಗೋಪಾಲಾರ್ಯ ಜನರಿಗೆ ದಯದಲಿತಾಪಂಗಳನು ಸವರಿ ದಾಟಿಸಯ್ಯಾ ಚಿತ್ಪ್ರತಾಪದಿಂ ನಿಜಪಾದ ಬೋಧೆಯನು ಕೊಟ್ಟು10
--------------
ಗೋಪಾಲಾರ್ಯರು
ಕಾಮಕೋಟಿ ಸುಂದರಾ | ತಿರುಪತಿಯಸ್ವಾಮಿ ತೀರ್ಥಮಂದಿರಾ ಪ ಕಾಮಜನಕ ಭಕ್ತಪ್ರೇಮಿ ಭವಾಟವಿಧೂಮಕೇತು ಹೃತ್ | ಧಾಮದಿ ನೆಲಿಸೋ ಅ.ಪ. ವೃಷಭಾಚಲಾ | ಸನ್ನಿಲಯನೆವೃಷಭಾ - ಬಲಾ ||ಒಸೆದು ಪರಿಕಿಸುತ || ಅಸುರನ ಸವರುತಅಸಮಗಿರಿಗೆ ನೀ | ಅಸುರನ ಪೆಸರಿತ್ತೆ 1 ಭಂಜನ ಶರದಿಜೆಕಂಜಜಾಕ್ಷಿ ಪ್ರಿಯ | ಅಂಜನಿವರದಾ 2 ಶೇಷಾ _ ಭೂಧರಾ | ಮನಸಿನ ಬಹುಕ್ಲೇಶಾ _ ಅಪಹರ ||ಶೇಷದೇವ ಮದ | ಲೇಸು ಹರಿಸಿ ಅವನಾಶೆ ಸಲಿಸಿ ಹರಿ | ಶೇಷಾಚಲನಾದೇ 3 ವೆಂಕಟಾಚಲಾ | ಮಾಧವನಾಸಂಕಟಾಗಳಾ ||ಅಂಕುರಿಸದೆ ನಿ | ಷ್ಪಂಕನೆಂದೆನಿಸಿಕಿಂಕರ ತನಯಳ | ಕಂಕಣ ಕಟ್ಟಿದೆ 4 ಶ್ರೀವರ - ಭೂವರಾ | ಪೊರೆಯುವೆ ನೀಜೀವರಾ - ಅಂತರಾ ||ಜೀವನಾಮಕನಾಗಿ | ಜೀವ ಭಿನ್ನ ಹರಿಕೈವಲ್ಯದ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಕಾಮಪಿತ ಪದಸರಸಿರುಹ ಭೃಂಗ ಭಂಗ ಪ ದಾಕ್ಷಾಯಿಣೀಪತೇ ಬಾಗಿ ವಿಜ್ಞಾಪಿಸುವೆ ದಾಕ್ಷಿಣ್ಯ ಲವಲೇಶವಿಲ್ಲವೊ ನನಗೆ ಸಾಕ್ಷಿಯೇಸು ಕೊಡಲಿದಕೆ ಬ್ರಹ್ಮನ ಶಿರ ತರಿದೆ ಸಾಕ್ಷಾತು ಪಿತನೆಂಬುದ ನೀ ಲಕ್ಷ್ಯವಿಡದೆ 1 ಸ್ಮರ ನಿನ್ನ ಕಿರಿತಂದೆ ಅಕ್ಷಿತೆರದೀಕ್ಷಿಸವನ ಬಿಡದೆ ದಹಿಸಿನಿಂದೆ ದಕ್ಷ ನಿನಗೇನಾಗಬೇಕು ತಿಳಿದು ನೋಡೊ ತಕ್ಷಣದಲವನನೆತ್ತಿ ಹರಿಗಡಿದೆ ನೀನು 2 ಪಾಪಯೇಸು ಮಾಡಿದರೆಯು ಭಯವೇನು ನಿನಗೆ ಶ್ರೀಪತಿ ರಂಗೇಶವಿಠಲಗೆ ಸರ್ವವರ್ಪಿಸಿ ತಾಪತ್ರಯ ದೂರ ವಿರಾಗಿಯಾಗಿ ಮನಸ್ಸು ನಿ- ಪರಿ ಮನಸ ಕೊಡು ಗುರುವೆ 3
--------------
ರಂಗೇಶವಿಠಲದಾಸರು
ಕಾಮಾರಿ ಕಾಮಿಪೆ ಕಾಮನ ಪಿತನಾ | ಕಮನೀಯ ರೂಪನ ಪ ಉಮೆಯರಸನೆ ಮಮ ವಿಷಯ ಸ್ತೋಮವನೀ ಮಾಣಿಪುದಲೊ ಹೇ ಮಹದೇವ ಅ.ಪ. ಗೌರೀ ವರ ತವ ಸುಂದರ ಚರಣಾ | ಸ್ಮರಿಸುವೆ ಪ್ರತಿದಿನಾವೈರಾಗ್ಯ ಹರಿಭಕ್ತಿ ಜ್ಞಾನಾ | ಹರಬೇಡುವೆ ನಿನ್ನಾ |ಮಾರಹರನೆ ಮುರವೈರಿಯ ಪ್ರೀಯನೆಶೌರಿಯ ತೋರಿಸೊ ಹೃದ್ವಾರಿಜದಲಿ 1 ಫಣಿ ಪದ ಯೋಗ್ಯನೆಫಣಿಯ ಶಯ್ಯನ ಕಾಣಿಸೊ ಬೇಗನೆ 2 ತೈಜಸ ಗಜ ಚರ್ಮಾಂಬರನೇ | ಶಿಖಿವಾಹನ ಪಿತನೇ |ಶ್ರೀಕರ ಗುರು ಗೋವಿಂದ ವಿಠಲನಸಖ ಸ್ವೀಕ5ನ್ನನು ಓಕರಿಸದ 3
--------------
ಗುರುಗೋವಿಂದವಿಠಲರು
ಕಾಯ ಪ ದಾನವಾರಣ್ಯಪಾವಕ ವೀತಶೋಕ ಅ.ಪ. ಆನತೇಷ್ಟ ಪ್ರದಾಯಕ ನಮಿಸುವೆನು ಸದಾ ಮೈನಾಕಿಧರ ಬಿಂಬ ಸುರಮುನಿಕದಂಬ ಧ್ಯಾನಗಮ್ಯನೆ ಭಕ್ತರಾಪತ್ತು ಕಳೆ ಶಕ್ತಾ ನೀನೆ ಗತಿಯೆಂಬೆ ಮುನಿಮನ ವನಜ ತುಂಬೆ 1 ಶ್ರವಣ ಮಂಗಳನಾಮಧೇಯ ನಿರ್ಜಿತಕಾಮ ಸವನ ದ್ವಿತಿಯರೂಪ ವಿಗತಕೋಪ ಸ್ವವಶ ಸ್ವಾತಂತ್ರ್ಯ ವಿಖನಸ ಪೂಜ್ಯವಜ್ರನಖ ಪವಿ ದಂಷ್ಟ್ರದರ್ಶ ಭಾರ್ಗವಿರಮಣಗಶನಾ 2 ಆದಿದೇವಾನಂತ ಮಹಿಮನೇ ನಿಶ್ಚಿಂತಾ ಕಾದುಕೋ ನಿನ್ನವರ ವಿಬುಧ ಪ್ರವರಾ ಮೋದಮಯ ಶ್ರೀ ಜಗನ್ನಾಥವಿಠಲರೇಯ ವೈದಿಕವ ನುಡಿಸು ಲೌಕಿಕ ಮಾರ್ಗವ ಬಿಡಿಸು 3
--------------
ಜಗನ್ನಾಥದಾಸರು