ಒಟ್ಟು 1581 ಕಡೆಗಳಲ್ಲಿ , 102 ದಾಸರು , 1089 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಗಬೇಡಿ ನಗಬೇಡಿ ನೀವ್ ನಗಬೇಡಿ ನಗಬೇಡಿ ಪ. ನಿಗಮನುತನ ಭಜಿಸುವ ನಿಜದಾಸರ ಬಗೆಯರಿಯದೆ ಬಿನ್ನಾಣದಿಂದ ನೀವ್ ಅ.ಪ. ಹರಿಸರ್ವೋತ್ತಮ ಹೌದ್ಹೌದೆಂಬುವ ಹರಿದಾಸರ ಲಕ್ಷಣಗಳ ತಿಳಿಯದೆ1 ಸ್ಥಿರವಲ್ಲದ ತನುಭ್ರಾಂತಿಯ ಪೊಂದುತ ಗುರುಚರಣ ನಂಬಿದ ದಾಸರ ಕಂಡು 2 ಲಜ್ಜೆಯ ತೊರೆಯುತ ಮೂರ್ಜಗದೊಡೆಯನ ಘರ್ಜಿಸಿ ಪಾಡುವ ಸಜ್ಜನರನೆ ಕಂಡು 3 ಲೋಕವಿಲಕ್ಷಣ ಚರ್ಯೆಯ ಧರಿಸುತ ಶ್ರೀ ಕಾಂತನ ಧ್ಯಾನಿಪರಿವರನರಿಯದೆ4 ಗೋಪಾಲಕೃಷ್ಣವಿಠ್ಠಲನಂಘ್ರಿಗಳನು ಭೋಪರಿ ನಂಬಿದ ನಿಜದಾಸರ ಕಂಡು 5
--------------
ಅಂಬಾಬಾಯಿ
ನಗುರೋರಧಿಕಂ ನಗುರೋರಧಿಕಂ ನಗುರೋರಧಿಕೆಂಬುದೆ ಪಂಥ ಬಗೆದನುಭವ ಜಗದೊಳು ನೆಲೆಗೊಂಬುದಿದೊಂದೆ ಪಂಥ ನಿಗಮಗಳಿಗೆ ಸುಗಮಾಗಿ ತೋರುವ ಪಥ 1 ಖರೆ ಮಾಡುವದಿದೊಂದೆ ಪಥ ಯತಿ ಮುನಿಜನ ಮನೋಹರ ಮಾಡುವದಿದೊಂದೆ ಪಥ ಅತಿಶಯಾನಂದನುಪಮವಾಗಿಹ ನಿಜ ಸತ್ಯ ಸನಾತನ ಗುರುಪಥ 2 ಅನಾಥನಾಥನಾಗ್ಯನುಭವ ತೋರುವದಿದೊಂದೆ ಪಥ ಅಣು ರೇಣುಕ ಪರಿಪೂರ್ಣವಾಗಿಹದಿದೊಂದೆ ಪಥ ದೀನ ಮಹಿಪತಿಗೆ ಸನಾಥ ಮಾಡುವ ಪಥ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಗುವರಲ್ಲವೊ ರಂಗ ನಾಚಿಕೆ ಇಲ್ಲವೊನಿನಗೆ ಹಗೆಯ ಮಾಡಿದವಳ ಬಗೆಯ ಕಾಣೆರಂಗ ಪ. ಅನ್ಯಾಯ ನ್ಯಾಯವೆಂಬುದಿನ್ನು ನೀ ಅರಿಯೆಲೊಮನ್ನೆಯಳ ವೀಳ್ಯ ಹಿಡಿದೆಯಲ್ಲೊನೀ ಹಿಡಿದೆಯಲ್ಲೊ ರಂಗ1 ಭರದಿ ಕೋಪಿಸಿ ಭೀಷ್ಮ್ಮೆ ತಿಳುವಳಿಕೆ ನಿನಗಿಲ್ಲಹರದೆಯರಿಬ್ಬರು ಎನಗೆ ಸರಿಯರಲ್ಲಎನಗೆ ಸರಿಯರಲ್ಲ ಭೀಷ್ಮ್ಮೆ ದೂರುವರೇನೆ2 ಹೀಂಗೆ ಯಾರೂ ನಗರೇನ ಭೀಷ್ಮ್ಮೆಇರುವೆಗಿಂತ ಕಡಿ ಮಾಡಿದೆಲ್ಲಎನ್ನ ಕಡಿಮಾಡಿದೆಲ್ಲ 3 ಅತಿ ಕೋಪದಿಂದ ಭೀಷ್ಮೆ ಸ್ಮøತಿಯಿಲ್ಲ ನಿನಗಿನ್ನುಸತಿಯರಿಬ್ಬರು ಎನಗೆ ಸರಿಯರಲ್ಲಎನಗೆ ಸಮರಲ್ಲ4 ಅಕ್ಕ ತಂಗಿಯರೆಂಬೊ ದಿಕ್ಕಿನ ಮೂಲೆಗೆ ಬೆಕ್ಕಿನಕಿಂತ ಕಡಿ ಮಾಡಿದೆಲ್ಲೊಎನ್ನ ಮಾಡಿದೆಲ್ಲೊ ರಂಗಾ 5 ವಾರಿಜಾಮುಖಿ ಎನಗೆ ಯಾರು ಹಿರಿಯರು ಹೇಳೆನಾರಿಯರಿಬ್ಬರು ಎನಗೆ ಪೊರರಲ್ಲಎನಗೆ ಪೊರರಲ್ಲ್ಲ 6 ಹುಡುಗಿಯರೆಂಬುವನುಡಿಯ ಕೇಳುತ ಭೀಷ್ಮಿಕಡುಹರುಷ ಬಡುತಲೆ ಮನದೊಳಗೆತನ್ನ ಮನದೊಳಗೆ7 ಕೃಷ್ಣನ ಮಡದಿಯರು ಎಷ್ಟು ಗುಣವಂತರೆಂದುಅಷ್ಟ್ಟೂರಕ್ಕಿಂತ ಮೊದಲೆ ಮದಿವ್ಯಾದೆನಿಮ್ಮನ್ನು ಮದುವ್ಯಾದೆ8 ಸಿಟ್ಟು ಬಿಟ್ಟಿಬ್ಬರು ಕೃಷ್ಣ ನಮ್ಮವನೆನ್ನಿಧಿಟ್ಟಿ ರಾಮೇಶ ಸಕಲೇಷ್ಟವೆನ್ನಿಸರ್ವೇಷ್ಟವೆನ್ನಿ9
--------------
ಗಲಗಲಿಅವ್ವನವರು
ನಗುವಿನಿಂದಾರೋಗ್ಯ ಉಂಟೆಂಬರಯ್ಯ ನಗುವಿನಲಿ ಹಲವಾರು ಬಗೆಗಳುಂಟಯ್ಯ ಪ ನಗುವಿಂದ ಸನ್ಮಿತ್ರ ಹಗೆಯಪ್ಪುದುಂಟಯ್ಯ ನಗುತ ಬಾಳೆಂಬುದೇ ಸೊಗವೋ ರಂಗಯ್ಯ ಅ.ಪ ಗೊಳ್ಳೆಂಬ ನಗೆಯುಂಟು ಬಲ್ಲವನ ಸಭೆಯಲಿ ಕಳ್ಳನಗೆಯೊಂದುಂಟು ಪೊಳ್ಳುಕಡೆಗಳಲಿ ಸುಳ್ಳುನಗೆಯೊಂದುಂಟು ಜಳ್ಳು ಡಾಂಭಿಕರಲಿ ಮುಳ್ಳುಕಲ್ ನಗೆಯುಂಟು ಕಳ್ಳಕಾಕರಲಿ 1 ನಸುನಗೆಯು ಮನದ ಸಂತಸದ ಕುರುಹು [ಎಸೆ]ವ ರಸನೆ ನಗುವುದೇ ಹಾಸ್ಯವಯ್ಯಾ ರಸಪೂರ್ಣ ನಗುವುಂಟು ಬಿಸಜಾಕ್ಷನಲ್ಲಿ ಹೊಸದಾದ ನಗು ಮಾಂಗಿರಿನಲವಿನಲಿ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಗೆಗೇಡವ್ವಾ ತಂಗಿ ನಗೆಗೇಡು ಹಗರಣ ಸಂಸಾರ ತಿಗಡಿ ಬುಗಡಿ ಬಲು ¥ ಕಾಲನಾಗಿ ದ್ರವ್ಯಕೂಡಿಸಿದ ಮಹ ಮೇಲು ಮಾಳೀಗೆ ಮನೆ ಕಟ್ಟಿಸಿದ ಕೀಳುಸತಿಸುತರೆಂದು ನಂಬಿದ ಮತ್ತು ಮಾಲಿನೊಳಗೆ ಇಟ್ಟು ಆಳಿದ ಕಾಲವೊದಗಿ ಬಂದು ದಾಳಿಟ್ಟೊಯ್ಯಲು ತನ್ನ ಆಳಿಗಿಟ್ಟುಣುತಾರ ಹೋಳಿಗೆ 1 ಕುಂದಿಪೋಗುವಕಾಯ ಖರೆಯೆಂದ ಇದ ರಂದ ತಿಳಿಯದೆ ಬಲುಮೋಹಿಸಿದ ಬಂದಕಾರ್ಯದ ಬಗೆ ಮರೆದ ಸುಳ್ಳೆ ದಂದುಗದೊಳು ಬಿದ್ದು ನಿಗರ್ಯಾಡಿದ ಒಂದೂಕಾಣದೆ ಬಂದದಾರಿಹಿಡಿದ 2 ಪರಮ ಸನ್ಮಾರ್ಗವನು ತೊರೆದ ಬರಿ ಬರಿದೆ ದು:ಖದೊಳಗುರುಳಿದ ಹರಿಯ ಶರಣರನು ನಿಂದಿಸಿದ ಸದಾ ದುರುಳರಾವಾಸದೊಳಗಾಡಿದ ಪರಮ ಕರುಣಾಕರ ವರದ ಶ್ರೀರಾಮನ ಚರಣ ಪಿಡಿಯದೆ ಘೋರನರಕಕ್ಕೀಡಾದ 3
--------------
ರಾಮದಾಸರು
ನಡೆಯ ಬೇಕೆಲ್ಲೋರಂಗಾ ವಳಮನಿಗೆ | ತಡವಾಯಿತು ಬಂದು ಸಭೆಯೊಳಗೆ ಪ ಭಕುತರು ತಾಳ ಮೃದಂಗ ವೀಣೆಗಳಿಂದ | ನಿಗಮಗೋಚರ ನಿಮ್ಮಚರಿತವನು | ಬಗಿ ಬಗಿಯಲಿ ಪಾಡುವದಕೆ ಮರುಳಾಗಿ | ನಗಧರನಿಂತೀ ಸಕಲ ಮರೆದು 1 ಹೊನ್ನು ಮಯದ ತೂಗು ತೊಟ್ಟಿಲ ವಂಬರ | ಬಣ್ಣಬಣ್ಣದ ಪುಷ್ಪವಹಾಸಿ | ರನ್ನ ದೀಪದ ಎಡಬಲಲಿಂದಿರೆದೇವಿ | ನಿನ್ನ ಮಾರ್ಗವ ನೋಡುತಿಹಳಯ್ಯಾ | 2 ಬಂದ ಭಾಗವತರಿಗೆಲ್ಲ ಬೇಡಿದ್ದು ಕೊಟ್ಟು | ಮಂದ ಹಾಸದ ಉಚಿತದಿ ಕಳುಹಿ | ಸಾರಥಿ | ಛಂದದಿ ಬಿನ್ನಹ ಅವಧರಿಸಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂದಕಂದನ ನೋಡಿರೇ| ಅಂದದಿ ಛಂದದಿ ಪಾಡಿರೇ ಪ ದುಡುದುಡುಕೆಂದು ಕಡೆಯಲು ಗೋಪಿ| ಒಡನೊಡನಾಲಿಸಿ ಶಬ್ದವಾ|| ದುಡುದುಡು ಬಂದ ಕಡಗೋಲ ಪಿಡಿದು ಬಿಡದೆವೆ ಬೆಣ್ಣೆಯ ಬೇಡುವಾ1 ಅಂದುಗೆ ಗೆಜ್ಜೆಗಳಾ| ಘಿಲು ಘಿಲುಕೆಂದು ನುಡಿಸುವಾ| ಎಳೆಯಳೆಗೆಳೆರ ಮೇಳದಲಾಡಿ| ನಲಿನಲಿದಾಡುತಲೊಪ್ಪುವಾ 2 ಅಚ್ಚರಿ ಬಗೆಯಲಿ ಗುರುಮಹಿಪತಿ ಪ್ರಭು ಸಚ್ಚರಿತಾಮೃತ ಬೀರುವಾ|| ಪಟ್ಟದ ಬೊಂಬೆಯ ನಿಚ್ಚಳ ಭಾಸುವ| ಅಚ್ಯುತನಾಕೃತಿ ದೋರುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಂದಪುತ್ರನ ಆಜ್ಞೆಯಿಂದಲುದ್ಧವ ಬ್ಯಾಗ ಬಂದು ಗೋಕುಲ ಹೊಕ್ಕಾನಂದದಿಂದಲಿ 1 ಬಾಲನ್ವಾರ್ತೆಯ ಕೇಳೆಶೋದ ಗೋಪನು ಕೊಂ- ಡಾಡಿ ಗುಣಗಳ ಮನಕೆ ತಾಳಿದರ್ಹರುಷವ 2 ತಾಪ ಬಿಡದಲೆ ಅಗಲಿ ಶ್ರೀಪತಿ ಕಾಣದೆ ಸಂತಾಪದಿಂದಿರೆ 3 ಸತಿಯರೆಲ್ಲರು ಗೋಪಿಸುತನ ಪಾಡುತ ದಧಿಯ ಮಥಿಸಿ ಕದವನೆ ತೆಗೆಯೆ ರಥವ ಕಂಡರು 4 ದಾವ ಕಾರಣ ನಮ್ಮ ಭಾವಭಕ್ತಿಗೆ ಸ್ವಾಮಿ ತಾನೆ ಬಂದಾನೋ ತನ್ನಕ್ರೂರನ ಕಳಿಸ್ಯಾನೊ 5 ಭದ್ರೆರೆಲ್ಲರೂ ಕೂಡಿ ಎದ್ದು ಬರುತಿರೆ ಮಧ್ಯಮಾರ್ಗದಿ ಅಲ್ಲುದ್ಧವನ ಕಂಡರು 6 ಕಾಂತೇರೆಲ್ಲರು ಕೂಡೇಕಾಂತ ಸ್ಥಳದಲ್ಲಿ ನಿಂತು ಕಂತುನಯ್ಯನು ಲಕ್ಷ್ಮೀಕಾಂತ ಕ್ಷೇಮವೆ 7 ಇಂದಿರೇಶನ ಬಿಟ್ಟಗಲಿ ವ್ರಜದೊಳು ಕಾಲ ಹಿಂದೆ ಕಳೆವೋದ್ಹ್ಯಾಗಿನ್ನ ್ಹಗಲು ಇರುಳನೆ 8 ಮುಂದೆ ಕಾಣದೆ ನೇತ್ರ ಅಂಧಕರಂದದಿ ಮು- ಕ್ಕುಂದನಿಂದಲಿ ರಹಿತರೆಂದಿಗಾದೆವೊ 9 ತೊಡಿಗೆ ಬಂಗಾರ ಶಿರದಿ ಮುಡಿವೊ ಮಲ್ಲಿಗೆ ದೇಹ- ಕ್ಕುಡಿಗೆ ಭಾರವೊ ಬಿಟ್ಟು ಪೊಡವಿಗೊಡೆಯನ 10 ಉದ್ಧವ ನಾವು ಜಾಳು ಸ್ತ್ರೀಯರು ಒಲ್ಲದೆ ಕಾಳಿಮರ್ದನ ಕಾಲಲೊದ್ದು ಪೋದನು 11 ಜಾರಸ್ತ್ರೀಯರುಯೆಂದು ನಗದಿರುದ್ಧವ ಬಿಗಿದ ಮೋಹಪಾಶದಿ ಈ ವಿಚಾರ ಮಾಡಿದ 12 ಬಲೆಯಗಾರಗೆ ಸಿಕ್ಕು ಬಳಲಿದಾಕ್ಷಣ ಅದರ ಕೊ- ರಳ ಕೊಯ್ಯದೆ ಅವಗೆ ಕರುಣ ಬರುವುದೆ 13 ಎಷ್ಟು ಹೇಳಲೊ ಅವನ ಗಟ್ಟಿಯೆದೆಗಳ ಒಲ್ಲದೆ ಬಿಟ್ಟು ನಮ್ಮನು ಮಧುರಾಪಟ್ಟಣ ಸೇರಿದ 14 ಭ್ರಮರಕುಂತಳೆ ಒಂದು ಭ್ರಮರಕಾಣುತ ಬ್ಯಾಡ ಕಮಲನಾಭನ ವಾರ್ತೆ ಕಿವಿಗೆ ಸೊಗಸದು 15 ಮದನಮೋಹನ ಹೋಗಿ ಮಧುರಾಪುರಿಯಲಿ ಅಲ್ಲಿ ಚÉದುರೆರಿಂದಲಿ ಅವಗೆ ಸೊಗಸು ಸಮ್ಮತ 16 ಕ್ರೂರನೆನ್ನದೆ ಇವಗಕ್ರೂರನೆನುತಲಿ ದಾರ್ಹೆಸರಿಟ್ಟರೋ ನಮಗೆ ತೋರಿಸೊ ಅವರನು 17 ಯಾತಕ್ಹೇಳುವಿ ಅವನ ವಾರ್ತೆ ಸೊಗಸದು ಹರಿಯು ಪ್ರೀತಿ ವಿಷಯನು ನಮಗೆ ಘಾತಕನೆನಿಸಿದ 18 ಜಲನ ಭೇದಿಸಿ ಹಯನ ಕೊಂದು ವೇದವ ಹ್ಯಾಗೆ ಹರಣ ಮಾಡಿದ 19 ಕ್ಷೀರ ಮಥನವ ಮಾಡಿ ಸ್ತ್ರೀಯರೂಪದಿಂದಸುರರ ಮೋಹಿಸಿದ್ವಂಚನೆ ನಮಗೆ ಪೂರ್ಣ ತಿಳಿಸಿದ 20 ಭೂಮಿ ಬಗಿದನು ತನ್ನ ಕ್ವಾರೆಯಿಂದಲಿ ನಮ್ಮನ್ನು ಸೀಳಿ ಪೋದರೆ ಇನ್ನೀ ಘೋರ ತಪ್ಪುವುದು21 ಕಂದ ಕರೆಯಲು ಕಂಬದಿ ಬಂದು ಸಲಹಿದನೆಂದು ನಂಬಿ ಕೆಟ್ಟೆವೊ ಇನ್ನಿವನ ಹಂಬಲ ಸಾಕಯ್ಯ 22 ಕೊಟ್ಟ ದಾನವ ಬಲಿಯ ಕಟ್ಟಿ ಪಾಶದಿಂದವನ ಮೆಟ್ಟಿದ ಪಾತಾಳಕಿಂಥಾಕೃತ್ಯಮರುಂಟೇನೊ 23 ಕೊಡಲಿ ಕೈಯ್ಯೊಳು ಪಿಡಿದು ಹಡೆದ ಮಾತೆಯ ಶಿರವ ಕಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 24 ಬಂದ ಸತಿಯಳ ಮೋರೆ ಅಂಗ ಕೆಡಿಸಿದ ತ- ನ್ನಂಗನೆ ಕಾಣದೆ ತಿರುಗಲೆಮಗೆ ಸನ್ಮತ 25 ಪತಿಯ ಸುತರನೆ ಬಿಟ್ಟೆವಶನ ವಸನವ ಅಗಲಿದ್ವಸುನಂದನಗೆ ನಮ್ಮೆಲ್ಲರುಸುರು ಮುಟ್ಟಲ್ಯೊ 26 ಬೌದ್ಧರೂಪದಿ ಸ್ತ್ರೀಯರ ಲಜ್ಜೆಗೆಡಿಸಿದನೆಂಬೊ ಸುದ್ದಿ ಬಲ್ಲೆವೊ ನಾವಿಲ್ಲಿದ್ದವರುದ್ಧವ 27 ಕಲಿಯ ಮನಸಿರೆ ಇವಗೆ ಕಲ್ಕ್ಯನೆಂಬೋರೊ ಕತ್ತಿ ಪಿಡಿದ ಪುರುಷಗೆ ನಮ್ಮೊಳು ಕರುಣ ಬರುವುದೆ 28 ಬ್ಯಾಡವೆನುತಲಿ ಅವಗೆ ಬೇಡಿಕೊಂಡೆವೊ ಗಾಡಿಕಾರನು ನಮ್ಮ ನೋಡದ್ಹೋದನು 29 ನಮ್ಮ ವಚನವ ಹೋಗಿ ಮನ್ನಿಸುದ್ಧವ ಪನ್ನಂಗಶಯನನ ಪಾದಕ್ಕಿನ್ನು ನಮಿಸೆವೊ 30 ಬಿಟ್ಹ್ಯಾಗಿರುವೊಣೋ ಭೀಮೇಶಕೃಷ್ಣನ ನಮ್ಮ ದೃಷ್ಟಿಗೆ ತೋರಿಸೊ ಮುಕ್ತಿ ಕೊಡುವೊ ದಾತನ31
--------------
ಹರಪನಹಳ್ಳಿಭೀಮವ್ವ
ನದೀದೇವತೆಗಳು ಕಂಗಳಿಂದಲಿ ನಿನ್ನ ಕಂಡೆ ನಾನೀಗ ಹಿಂಗಿತೇ ಎನ್ನ ಅಘದ್ಹಿಂಡು ಕಾವೇರಿ ಪ. ಮಂಗಳಾಂಗಿಯೆ ಶ್ರೀ ರಂಗನಾಥನ ಪದ ಭೃಂಗಳೆನಿಸಿ ಜನರ ಪಾವನಗೈವೆ ತುಂಗವಿಕ್ರಮ ಹರಿಗೆ ಮೂಲರೂಪಳಾಗಿ ಅಂಗ ಶುದ್ಧಿಯಗೈವೆ ಪಾಪಿಗಳ ಸತತ 1 ಎಲ್ಲೆಲ್ಲಿ ನೋಡೆ ಶ್ರೀರಂಗನ್ನ ಸೇವಿಸುವೆ ಪುಲ್ಲಲೋಚನೆ ನಿನ್ನ ಬಗೆಯರಿವೆನೆ ಬಲ್ಲ ಭಕ್ತರು ಬಂದು ನಿನ್ನಲ್ಲಿ ಸ್ನಾನವಗೈದು ಉಲ್ಲಾಸದಿಂದ ಆನಂದಪಡುತಿಹರೆ 2 ನೊರೆಸುಳಿಗಳಿಂದ ಭೋರ್ಗರೆಯುತ್ತ ಹರಿ ಇರುವ ಅರಮನೆಯೆ ವೈಕುಂಠವೆಂದು ಸೂಚಿಸುತ ಹರಿಸದನ ಸುತ್ತಿರುವೆ ವಿರಜೆ ನಾನೆಂದೆನುತ ಅರುಹುವಾ ತೆರದಿ ಬಹು ರಭಸದಿಂ ಪರಿವೆ 3 ನಿನ್ನ ಧ್ವನಿ ಇಂಪೆಂದು ಆನಂದದಿಂದಾಲಿಸುತ ಚನ್ನ ಶ್ರೀರಂಗ ತಾ ಪವಡಿಸಿಹನೆ ಘನ್ನ ಮಹಿಮಳೆ ಸಕಲ ಜೀವರಾಶಿಯ ಪೊರೆವೆ ಎನ್ನ ಮನ ಹರಿಪದದಿ ನಲಿವಂತೆ ಮಾಡೆ 4 ನಿನ್ನನೇ ವಿರಜೆ ಎಂತೆಂದು ಭಾವಿಸಿ ಈಗ ಎನ್ನ ಗುರುಗಳ ದಯದಿ ಸ್ನಾನಗೈದೆ ಇನ್ನು ಶ್ರೀ ವೈಕುಂಠದೊಡೆಯನಾ ತೋರಮ್ಮ ಘನ್ನ ಶ್ರೀ ಗೋಪಾಲವಿಠ್ಠಲನ 5
--------------
ಅಂಬಾಬಾಯಿ
ನಂಬಿಗಿಟ್ಟ ಸಂಸಾರ ಇದು ನಂಬಿ ಹಂಬಲಿಸದಿರು ಪೂರಾ ಪ ಕಾಯವೆಂಬುದು ಸ್ಥಿರವಲ್ಲಾ ಅತಿ ಮಾಯಕೆ ಬಂದು ಸಿಕ್ಕಿದೆಲ್ಲಾ ಬಾಯಿ ರುಚಿಗಳು ಬಿಡು ಎಲ್ಲಾ ರುಚಿ ರುಚಿಸೆಲ್ಲಾ ತಂದೆ ತಾಯಿಗಳು ಇನ್ನು ಹೊಂದಿದ ಅದರಲ್ಲೆ ಬಗೆ ಮಾಯದೊಳು ಇರುವಾಗೆ ಆನಂದ ತೋರುವದು ನಿನ್ನೊಳಗೆ 1 ಧೊರೆತನ ದೌಲತ್ತು ಸ್ಥಿರವೆಂದು ಪರಿ ಪರಿಯಲಿ ವಿಹರಿಸು ಎಂದೂ ಪರಮಾತ್ಮನ ಭಜನಿಲ್ಲದೆಂದೂ ವ್ಯರ್ಥ ಪಾಪಕೆ ಒಳಗಾಗಿ ಕೆಡುವೆಂದೂ 2 ಬದುಕು ಬಾಳುವೆ ನಂಬಿಕೊಂಡು ಮುಂದೆ ತುದಿಗಾಣದೆ ಹೋಗ್ವದು ಕಂಡೂ ----------------------- ---------------------- 3 ಅಷ್ಟೂ ಶ್ರೀಹರಿ ಮಾಯವೆಂದೂ ಸ್ಪಷ್ಟದಿ ಮನದಲಿ ತಿಳಿಯಿಂದೂ ಶಿಷ್ಟ ಹೆನ್ನ ವಿಠ್ಠಲನೆಂದೂ ಉತ್ಕøಷ್ಟದಿ ಹೃದಯದಿ ಸ್ಮರಿಸಿಂದೂ 4
--------------
ಹೆನ್ನೆರಂಗದಾಸರು
ನಂಬಿದೆನೇ ನಿನ್ನ ಅಂಬುಜನಯನೆ ನಂಬಿದೆ ನಿನ್ನ ಪ. ನಂಬಿದೆ ನಿನ್ನನು ಅಂಬುಧಿಶಯನನೆನ್ನ ಡಿಂಬದಿ ನಿಲುವಂಥ ಸಂಭ್ರಮ ಕೊಡು ತಾಯೆ ಅ.ಪ. ಆರು ಮೂರೆರಡೊಂದು ಮೇರೆ ಇಲ್ಲದೈದು ಜಾರರು ಸೇರಿದರೆ ತಾಯಿ ತೋರುತ ಕರುಣವ ಬೀರುತ ವರ ಸಂಗ ದೂರಮಾಡಿಸಿ ಪಾರುಗಾಣಿಸು ತಾಯೇ 1 ಅಗಣಿತ ಮಹಿಮನ ಬಗೆಬಗೆ ಪೂಜಿಸಿ ಜಗದಾಖ್ಯಾನ ನೀ ಮಿಗೆ ವಲಿಸಿಹೆ ತಾಯೆ ಮಗುವೆಂದು ಭಾವಿಸಿ ಚಿಗಿದು ಕಂಬದಿ ಬಂದ ನಗಧರ ನರಹರಿ ಸಿಗುವ ಪರಿಯ ತೋರೆ2 ಕಲಿಯುಗದಲಿ ಶ್ರೀ ಶ್ರೀನಿವಾಸನ ಜ್ಹಾಯೆ ವಲಿದು ಭಕ್ತರ ಕೊಲ್ಹಾಪುರ ಮೆರೆಸಿಹೆ ತಾಯೆ ಕಲಿಮಲ ಕಳೆದು ನಲಿದು ಭಕ್ತರ ಕಾಯೆ ಛಲವ್ಯಾಕೆ ಹರಿ ಸಹ ನÀಲಿಯುತೆ ಬಾರೆ 3
--------------
ಸರಸ್ವತಿ ಬಾಯಿ
ನಂಬು ನಂಬು ನಂಬು ಮನವೆ ಅಂಬುಜಾಕ್ಷನ ಪ್ರಭುವ ಪಾದ ಇಂಬು ನಿನಗೆ ದೊರಕುವುದು ತುಂಬಿ ಮಂಗಳ ಪ ದುಷ್ಟ ಅನ್ನ ದುಷ್ಟ ಸಂಗ ಭ್ರಷ್ಟ ಭಾವದಿಂದ ಮನವು ಕೆಟ್ಟು ಬೆದರಿ ಸವಿಯುಗೊಳ್ಳದು ಶಿಷ್ಟರನುಭವ 1 ಸತ್ಯಹರಿಯು ಜಗದ್ಗುರುವು ಸತ್ಯ ಮಧ್ವಶಾಸ್ತ್ರ ಫಲವು ಸತ್ಯ ಮಹಿಮ ಗುರುಕರುಣ ಸತ್ಯ ನಿತ್ಯದಿ 2 ಭಾರತ ಭಾಗವತವ ಕೇಳು ಭರತನಣ್ಣನ ಚರಿತೆ ಕೇಳು ಖರೆಯು ಹರಿಯ ಭಕ್ತರೀಗೆ ನಿರುತ ಮಂಗಳ 3 ನಿರುತ ವಿದಯ ಲೋಭಿಗಳ ದುರುಳ ದುರ್ಬಲ ಭಾವ ತಿಳಿದು ಹರಿಯ ಮೆರೆಯೆ ಸಕಲ ಭಯವು ಮರುಳು ಮಾಳ್ಪವು 4 ಕರಿಯ ಧ್ರುವನ ಅಸುರ ಬಾಲನ ನರನ ಸತಿಯು ಭೀಷ್ಮ ಕುಚೇಲ ವರದ ದೇವನ ದಾಸರ ಭಜಿಸು ನಿರುತ ದೃಢದಲಿ 5 ಹಿಂದೆ ಎಷ್ಟೊ ಕಾಲದಿಂದ ಕುಂದು ನೋಡದೆ ನಿನ್ನ ಬಿಡದೆ ಮುಂದು ತಂದ ಬಗೆಯ ತಿಳಿಯೊ ಸಂದೇಹ ಪೋಪದು 6 ಕಾಲಿಗೆ ಬಿದ್ದ ದೀನರನ್ನು ಕರ್ಮ ಮೀರಿ ಪೊರೆವ ಬಾಳ ಕರುಣಿ ಮಹಾ ವಿಜಯ ರಾಮಚಂದ್ರನು7 ಹಿಂದೆ ಪೇಳ್ದ ವಾಕ್ಯವೆಲ್ಲಿ ಇಂದು ಬಿಡದೆ ಫಲಿಸುವೋವು ಮಂದನಾಗದೆ ಪ್ರಭುವ ಪಾದ ದ್ವಂದ್ವ ಬಿಡದಿರು 8 ನಿತ್ಯ ಹನುಮ ಭೀಮ-ಮಧ್ವ ಭೃತ್ಯರ ಶಿರೋರತನುನಿವನು ಸತ್ಯ ಮಹಿಮ ಜಯೇಶವಿಠ- ಲಾಪ್ತ ಸತ್ಯವು 9
--------------
ಜಯೇಶವಿಠಲ
ನಮಿಪೇ ನಮಿಪೇ ನಮಿಪೇ ಶ್ರೀ ಗುರುದೇವಾ ಜ್ಞಾನಬೋಧಾ ನೀಡಿ ಮನದಾ ದೀನತನ ಬಿಡಿಸಿ ನೀನೆ ಆ ಪರಮಾತ್ಮನೆನುವಾ ಸ್ವಾನುಭವ ಹಿಡಿಸಿ ಹೀನವಿಷಯಾಸಕ್ತಿಯಾ ನೀಗಿಸಿ ಎನಗಾಗಿ ಜಗದಸುಖದ ಮರುಳು ಬಿಡಿಸಿ ಸೊಗಸ ತೋರಿಸಿದಿ ಅಘವನಳಿದು ಸೊಗಸಿನೊಳಗೆ ಖಗೆಯ ನಿಲಸಿದಿ ನೀ ಬಗೆಯ ರೋಗವೆಲ್ಲವ ನೀಗಿಸಿ ಎನಗಾಗಿ
--------------
ಶಂಕರಭಟ್ಟ ಅಗ್ನಿಹೋತ್ರಿ
ನಮಿಸು ಮನವೆ ನೃಹರಿ ರೂಪವಾ | ರೋಗ ಹರಣನಾ ಪ ಹರಣ | ಸುರಪ ಪಾಲಕನಾ ಅ.ಪ. ಸಕಲ ಸುರರ ದನುಜ ಭಾದಿಸೆ | ಹರಿಗೆ ಮೊರೆಯಿಡೇಅಕಳಂಕ ಮಹಿಮ ಅಭಯವಿತ್ತು | ಅವರ ಕಳುಹಿದಾ 1 ಸುರರು ಪಾಡಿದರೂ 2 ಪಿತನು ತನ್ನ ಸುತನ ಭಾದಿಸೆ | ಹರಿಯೆ ಚರಣವಾಸತತ ನಮಿಸಿ ಭಜಿಸಿ ಭರದಿ | ಕಂಬದಿ ಕರೆದನೂ 3 ಭೃತ್ಯನ್ವೊಚನ ಸತ್ಯ ಮಾಡೆ | ಸ್ತಂಭವ ಸೀಳುತಾವೃತ್ಯಸ್ತವಾಗೆ ಸಕಲರ್ ಹೃದಯ | ಘಡ ಘಡೀಸುತಾ 4 ದೈತ್ಯನುದರ ಬಗೆದು ಕರುಳ | ಮಾಲೆ ಧರಿಸುತಾನೃತ್ಯವಾಡಿ ತನ್ನ ಪ್ರಳಯ ರೂಪವ ತೋರಿದಾ 5 ಅಕ್ಷರಜ್ಞೆ ಲಕುಮಿ ದೇವಿ | ಪಕ್ಷಿವಾಹನನಾಲಕ್ಷಣ ವೀಕ್ಷಿಸಿ ಕುಕ್ಷಿಯ ಬಿಡುತ | ವತ್ಸನ ನೂಕಿದಳು 6 ಮೋದ ಪಡಿಸುತಾಸದಯದಿಂದ ಗೈದ ಅವನ | ಭಕ್ತ ಶ್ರೇಷ್ಟನಾ 7 ಪತಿ 8 ಭವ ಕೂಪಾ9
--------------
ಗುರುಗೋವಿಂದವಿಠಲರು
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು