ಒಟ್ಟು 773 ಕಡೆಗಳಲ್ಲಿ , 67 ದಾಸರು , 468 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಾಯಾಸದಿಂದ ಸಾಧಿಸಬೇಕು ಸತ್ಸಂಗ ಮಾಯಿಕಬುದ್ಧಿ ಬಿಟ್ಟು ನೋಡಿ ಅಂತರಂಗ ಧ್ರುವ ಆಯಿತವಾಗಿ ತೋರುತಾನೆ ಶ್ರೀರಂಗ ಸಾಯದಲ್ಯಾಗುತದೆ ನೋಡಿ ಭವಭಂಗ 1 ಹಿಡಿದರೆ ಹಿಡಿಯಬೇಕೊಂದೆ ಸಾಧು ಸಹವಾಸ ಪಡೆದರೆ ಪಡೆಯಬೇಕೊಂದೆ ತಾ ನಿಜಧ್ಯಾಸ ನಡಿನುಡಿ ಒಂದೆ ಆಗುವುದೆ ಅಪ್ರಯಾಸ ತಡಿಯದೆ ಮಾಡಬೇಕೊಂದೆ ನಿಜಾಭ್ಯಾಸ 2 ಅನೇಕ ಪುಣ್ಯ ಒದಗಿತು ಸತ್ಸಂಗದಾಗ ದಿನಕರಕೋಟಿ ಹೊಳೆವುದು ಮನದೊಳಗೆ ಬ್ಯಾಗ ತನುಮನವಿಟ್ಟು ಕೇಳಿ ಗುರುಪಾದಕೀಗ ಘನಸುಖದಾಯಕ ಮಹಿಪತಿಯ ಸದ್ಗುರುವಿಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾರವೆಂದು ನಂಬಬ್ಯಾಡವೋ ಸಂಸಾರ ಸಾರವೆಂದು ನಂಬಬ್ಯಾಡವೋ ಪ ಸಾರವೆಂದು ನಂಬದೇ ಸಂಸಾರ ಸುಖವೆಲ್ಲ ಅ ಕಂಸಾರಿ ಚರಣ ಸಾರಿರೋ ಅ.ಪ ಇಂದ್ರಜಾಲ ದೊಡ್ಡವಣ ಗಂಧರ್ವ ಪುರದ ಮಾಟಾ ಸಾಂದ್ರಜಲ ಪೂರಾ ಛಂದವಿದು ನೋಡಿರ್ಯೋ ಕನಸಿನಲಿ ಕೆಂಯ್ಯಾ ಬೆಳೆಯ ಘನವಕಂಡು ನೆಚ್ಚಿ ತನ್ನ ಮನಿಯೊಳಿಹ ಧಾನ್ಯವೆಲ್ಲಾ ಜಿನುಗು ಮಾಡಿದಂದದಿ 1 ತನುವುತನ್ನನಳಿದರೆ ತನು ಸಂಬಂಧಿಗಳಾರು ಕ್ಷಣಿಕವಾದಾ ಸತಿಸುತ ಧನದ್ರವ್ಯ ಕಾಣಿರ್ಯೋ ಮರ್ಕಟವು ಕೀಲುದೆಗೆದು ಪುಕ್ಕಟೆವೆಸಿಕ್ಕಿದಂತೆ ಅಕ್ಕರದ ಸುಖವೆಲ್ಲಾ ದುಃಖ ರೂಪ ಕಾಣಿರ್ಯೋ 2 ಕುತ್ತಿನ ಮಡಹು ತಾಪತ್ರಯ ತಾರುಮನೆ ಮೃತ್ಯುಬಾಯ ತುತ್ತುರೋಗ ಹುತ್ತವಿದು ಕಾಣಿರ್ಯೋ ಮರಹು ನೀಗಿ ಹರಿಯಭಕ್ತಿ ಬೆರೆದು ನಿತ್ಯರಾಗಿರೆಂದು ಗುರು ಮಹಿಪತಿ ಭೋದಗರೆದ ವಾಕ್ಯನೋಡಿರ್ಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾರಿಭಜಿಸಿರೋ 'ಜಯರಾಯರಂಘ್ರಿಯಪಾರುಮಾಳ್ಪರಾ ಸಂಸಾರಸಾಗರಾ ಪದೇಶ ದೇಶವಾ ಪರದೇಶಿಯಂದದಿಬ್ಯಾಸರಿಲ್ಲದೆ ತಿರುಗಿ ಕಾಶಿಗ್ಹೋದರು 1ಸಪ್ನದಲ್ಲಿ ಶ್ರೀ ಪುರಂದರದಾಸರಾಯರುವ್ಯಾಸಕಾಶಿಯಲ್ಲಿ ದಾಸ ದೀಕ್ಷೆಕೊಟ್ಟರು2ಬಾು ತೆರೆುತು ನಾಲಿಗೆ ಮೇಲೆ ದಾಸರು'ಜಯ'ಠ್ಠಲಾ ಎಂದು ಬರೆದು ಬಿಟ್ಟರು 3ಎಚ್ಚರಾುತು ದಿವ್ಯ ಜ್ಞಾನ ಹುಟ್ಟಿತು ಧೈನ್ಯ ಓಡಿತು ಹರಿಯ ಧ್ಯಾನ ಹತ್ತಿತು 4ದಾಸರಾದರು ಹರಿಯ ದಾಸರಾದರು ಕೂಸೀಮಗ ದಾಸ 'ಜಯದಾಸರಾದರು 5ಹರಿಯ ಶ್ರೇಷ್ಠತೆ 'ಂದೆ ಒರೆಗೆ ಹಚ್ಚಿದಾಭೃಗುಮರ್ಹಯೇ ನಮ್ಮ 'ಜಯದಾಸರು6ಪಾಪಕಳೆವರು ಭಕ್ತರ ತಾಪಕಳೆವರುಭೂಪತಿ'ಠ್ಠಲನ ಅಪರೋಕ್ಷ ಮಾಳ್ಪರು 7
--------------
ಭೂಪತಿ ವಿಠಲರು
ಸಾವಧನಾಗಿ ಮನುಜಾ | ಕೇಳು | ನಿಜ ಸ್ಥಿತಿಯಾ ಪ ಕೇಳು ನಿಜ ಸ್ಥಿತಿಯಾ | ಪಡೆದೇನೆಂದರೆ ಗತಿಯಾ | ಬೀಳದೆ ನೀ ಕವಳದಾರಿಗೆ | ನಂಬು ಗುರು ಮೂರ್ತಿಯಾ 1 ಗಗನ ಮುರಿದು ಬೀಳಲಿ | ಸಾಗರ ಮೇರೆದಪ್ಪಲಿ | ಬಾಗದೇ ನೀ ಅನ್ಯದೈವಕ | ಭಾವ ದೃಢ ವಿರಲಿ 2 ದಾಸರ ಕಂಡರೆ ರಂಗಯ್ಯಾ | ಜಂಗಮ ಕಂಡರೆ ಲಿಂಗಯ್ಯಾ | ವೇಷಿಯಂತೆ ತಿರುಗಬ್ಯಾಡಾ | ಹಿಡಿಯೋ ಒಂದೇ ನಿಷ್ಠೆಯಾ 3 ಕಂಡ ಮಾರ್ಗ ನೋಡದೆ | ಕಂಡ ಮಾತನಾಡದೆ | ಗಂಡನೊಬ್ಬನ ಮಾಡದೆ ನಾರಿ | ಪತಿವೃತೆ ಮೆರಿವದೇ 4 ಎಲ್ಲಿ ಒಂದೇ ನಿಷ್ಠೆಯು | ಅಲ್ಲಿ ಶ್ರೀ ಹರಿ ಕೃಪೆಯು | ನಿಲ್ಲದೆ ಮಹಿಪತಿ ನಂದನಸ್ವಾಮಿ | ಇದಿರಿಡುವನು ಸಂಗತಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಾವಧಾನವಾಗಿ ನೋಡಿ ಶ್ರೀ ವಾಸುದೇವನ ದ್ರುವ ಆವಾಗ ನೋಡಿ ಚರಣ ಸೇವಿಸಿ ನಿಧಾನ 1 ಕಣ್ಣಮುಂದೆ ಕಟ್ಯಾನೆ ಭಿನ್ನವಿಲ್ಲದೆ ತುಂಬ್ಯಾನೆ ಸಣ್ಣ ದೊಡ್ಡರೊಳಗ್ಹಾನೆ ಕಾಣಿಸುತಲ್ಹ್ಯಾನೆ 2 ಚಿತ್ತಮನೊಂದು ಮಾಡಿ ಹತ್ತಿಲಿ ಸಾಭ್ಯಸ್ತ ನೋಡಿ ನಿತ್ಯ ನಿಜಗೂಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನವಾಗಿ ನೋಡೋ ಸ್ವಾಮಿ ಸದ್ಗುರು ಶ್ರೀಪಾದ ಬೋಧ ಧ್ರುವ ತಿರುಗಿ ನೋಡೋ ನಿನ್ನ ನೀನು ಅರಿತು ಸ್ವಾನುಭವದಿಂದ ಕರಗಿ ಮನ ನೋಡಿ ನಿಜದೋರುತದೆ ಬ್ರಹ್ಮಾನಂದ ಸೆರಗವಿಡಿದು ಸೇರು ಬ್ಯಾಗೆ ಗುರುಕರುಣ ಕೃಪೆಯಿಂದ ಪರಮ ಸುಪಥವಿದೆ ವರಮುನಿಗಳಾನಂದ 1 ಹಚ್ಚಿ ನಿಜಧ್ಯಾಸವಂದು ಕಚ್ಚಿಕೊಂಡಿರೋ ಸುಹಾಸ ಮುಚ್ಚಿಕೊಂಡು ಮುಕ್ತಿ ಮಾರ್ಗ ನೆಚ್ಚಿರೋ ನಿಜಪ್ರಕಾಶ ಹುಚ್ಚುಗೊಂಡು ಹರಿಯ ರೂಪ ಅಚ್ಚರಿಸೋ ನಿರಾಶ ಎಚ್ಚತ್ತು ನಿನ್ನೊಳಗೆ ಬೆರೆಯೋ ಘನಸಮರಸ 2 ಸಾವಧಾನವೆಂದು ಶ್ರುತಿ ಸಾರುತದೆ ತಾ ಪೂರ್ಣ ಸುವಿದ್ಯ ಸುಖವಿದು ಸಾಧಿಸು ಅನುದಿನ ಪಾವನ್ನಗೈಸುದಿದೆ ಮಹಿಪತಿ ಜೀವಪ್ರಾಣ ಭಾವ ಬಲಿದು ನೋಡಲಿಕೆ ದೋರುತದೊ ನಿಧಾನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಖದಿ ಜೀವಿಸು ಬಾಲೆ ಸುಗುಣ ಶೀಲೆ ಸುಖದಿ ಜೀವಿಸು ಬಾಲೆ ಪ ಸುಖದಿ ಜೀವಿಸು ಬಾಲೆ | ಸುಕುಮಾರಿ ಗುಣಲೀಲೆ ರುಕುಮಿಣೀಶನ ಭಕುತಳೆನಿಸಿದ ಸಖುದೇವಿಯಂತೆ ಸಕಲ ಭಾಗ್ಯದಿ ಅ.ಪ ಭೂಸುರೋತ್ಮರಿಂದಲಿ | ಗುರುಮಂತ್ರೋಪ ದೇಶವಗೊಳ್ಳುತಲಿ | ಪ್ರತಿದಿವಸ ತಪ್ಪದೆ ಬ್ಯಾಸರಿಯದೆ ಹರುಷದಲಿ | ಸದ್ಭಕ್ತಿ ಪೂರ್ವಕ ದಾಸರ ಪದ ನಿತ್ಯದಲಿ | ನೀ ಪಾಡುತಲಿ ಸುಜನ ವೃಂದಕೆ ದೂಷಿತ ಬಹು ದೋಷಕಂಜುತ ವಾಸುದೇವನ ವಾಸರದಿ ಉಪ ವಾಸವನು ಲೇಸಾಗಿ ಮಾಡುತ 1 ಭಾವ ಭಕುತಿಲಿರುವ | ಗೋ ತುಳಸಿ ವೃಂದಾವನ ಪೂಜಿಸುತ | ವಿನಯದಿ ಅತ್ತಿ ಪತಿ ಪರ ದೇವನು ಎಂದೆನುತ | ಸಲೆ ಸೇವಿಸುತ್ತ ಕಾಲ ಕಪಟ ಮತಿಗಳ ಠಾವಿಗ್ಹೋಗದೆ ಪರರ ಒಡವೆಯ ಬೇವಿನಂದದಿ ಭಾವಿಸುತ ಸಂ ಭಾವಿತಳು ನೀನಾಗಿ ಜಗದೊಳು 2 ಮಂದ ಮತಿಯರ ಕೂಡದೆ | ಎಂದೆಂದಿಗು ಪರ ನಿಂದೆ ಮಾತುಗಳಾಡದೆ ಅವರೊಲುಮೆಯಿಒಂದಲಿ ಪಡಿ ಪ್ರೇಮದಿ | ಸಂದೇಹ ಪಡದೆ ತಂದೆ ತಾಯಿಗೆ ಕುಂದು ತಾರದೆ ನಂದ ಕಂದ ಮುಕುಂದ ಶಾಮ ಸುಂದರನ ಶುಭನಾಮ ಬಿಡದಲೆ ಒಂದೆ ಮನದಲಿ ಧ್ಯಾನಿಸುತ ಚಿರ 3
--------------
ಶಾಮಸುಂದರ ವಿಠಲ
ಸುಮ್ಮನಿರಬ್ಯಾಡಿ ನಿಮ್ಮೊಳು ನೀಟ ನೋಡಿಒಮ್ಮನವ ಮಾಡಿ ಪರಬ್ರಹ್ಮನೊಲು ಕೂಡಿ ಧ್ರುವ ಹೊತ್ತುಗಳಿಯಲು ಬ್ಯಾಡಿ ಹೃತ್ಕಮಲದೊಳು ನೋಡಿ ಅತ್ತಿತ್ತಲಾಗದೆ ಚಿತ್ತಸ್ವಸ್ಥ ಮಾಡಿ ಹತ್ತಿಲಿಹ ವಸ್ತುವನು ಪ್ರತ್ಯಕ್ಷ ಮಾಡಿ ನಿತ್ಯ ನಿಜಾನಂದ ಸುಪಥವು ಗೂಡಿ 1 ಮುತ್ತಿನಂಥ ಜನ್ಮ ವ್ಯರ್ಥಗಳಿಯಲಿ ಬ್ಯಾಡಿ ನಿತ್ಯ ಸಾರ್ಥಕದ ಸಾಧನವ ಮಾಡಿ ಸತ್ಯ ಶಾಶ್ವತದಾವದೆಂದು ಖೂನದಲಿ ಅಡಿ ಕೃತ್ಯಾ ಕೃತ್ಯಾಗುವ ಸ್ವಸುಖ ಬೆರೆದಾಡಿ 2 ದೀನ ಮಹಿಪತಿ ಸ್ವಾಮಿ ತಾನೊಲಿದು ಬಾವ್ಹಾಂಗ ಜ್ಞಾನಾಭ್ಯಾಸವ ಮಾಡಿಕೊಳ್ಳಿ ಬ್ಯಾಗ ಭಾನುಕೋಟಿ ತೇಜ ದೀನದಯಾಳು ತಾಂ ನೆನೆವರಿಗನುಕೂಲವಾಗುತಿಹ್ಯ ಈಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸುಳಾದಿ ಧ್ರುವತಾಳ ಶ್ರೀನಿವಾಸನೆ ನೀನು ಬ್ಯಾಗನೆ ಬಂದು ಸಾನುರಾಗದಿ ಸಂಸಾರ ಬಿಡಿಸೋ ಭಾನುಕೋಟಿ ಪ್ರಕಾಶಭಾಗ್ಯನಿಧಿಯೆನ್ನ ಮಾನವ ಕಾಯ್ವುದು ಮಂಗಳಾಂಗನೆ ಏನೇನು ಕಾರ್ಯಗಳು ನಿನ್ನಾಧೀನವಾಗಿರಲು ನಾನುನನ್ನದು ಎಂದು ಮಮತೆಯನೆ ಕೊಟ್ಟು ಅನ್ಯಾಯದಿಂದ ಎನ್ನzಣಿಸುವುದು ದಾನವಾಂತಕರಂಗ ಮುದ್ದುಮೋಹನವಿಠಲ ನೀನೆಗತಿಯೆಂದವಗೆ ನಿರ್ಭಯವೊ ಹರಿಯೆ 1 ಮಠ್ಯತಾಳ ಎನ್ನಪರಾಧಗಳು ಅನಂತವಿರುವದನ್ನು ನಿನ್ನಸ್ಮರಣೆ ಒಂದೆ ಸಾಕೊ ಹರಿಯೆ ಬನ್ನ ಬಡಿಸುವದ್ಯಾಕೊ ಮನ್ಮನದಲಿಪೊಳೆದು ಚೆನ್ನಾಗಿ ಸಲಹೋಘನ್ನಮಹಿಮಾ ಮುದ್ದುಮೋಹನವಿಠಲನೇ 2 ತ್ರಿವಿಡಿತಾಳ ಬಿಂಬನೆನೆಸಿಕೊಂಡು ಪ್ರತಿಬಿಂಬಗಳೊಳಗೆಕಾರ್ಯ ಅಂಭ್ರಣಿಸಹಿತವಾಗಿ ನೀಮಾಡಿ ಮಾಡಿ ಸೂವಿ ಅಂಬುಜನಾಭಾನೆ ಎನ್ನಾಡಂಭಕ ಭಕುತಿ ಬಿಡಿಸಿ ಸಂಭ್ರಮದಿಂದ ಕಾಯೊ ಕರುಣಾನಿಧೆ ಶಂಬರಾರಿಯಜನಕ ಮುದ್ದುಮೋಹನವಿಠಲ ಕಂಬದಿಂದಲಿ ಬಂದು ಭಕುತನ್ನಸಲಹಿದ ದೇವ 3 ಅಟ್ಟತಾಳ ಏನೇನುದಾನ ಅನಂತ ಮಾಡಲೇನು ಕಾನನದಲಿ ಪೋಗಿ ತಿರುಗಿತಿರುಗಿದಂತೆ ಜ್ಞಾನದಿಂದಲಿ ತಾರತಮ್ಯಾನುಸಾರ ನಿನ್ನ ಧ್ಯಾನವನ್ನ ಒಂದು ಕ್ಷಣವಾದರೂತೋರಿಸೊ ವಾನರ ವಂದ್ಯ ಮುದ್ದುಮೋಹನವಿಠಲ ನಾನಾವಿಧದಿಂದ ನಂಬಿದೆನೊ ಹರಿಯೇ4 ಆದಿತಾಳ ನೀನೆ ಅನಾಥಬಂಧು ನೀನೆ ಅದ್ಭುತಮಹಿಮ ನೀನೆ ಅಸುರಾಂತಕ ನೀನೆ ಅಮರಾದಿವಂದ್ಯ ನೀನೆ ಭವರೋಗ ವೈದ್ಯ ನೀನೆ ಭಕ್ತವತ್ಸಲ ನೀನೆ ಪರಿಪೂರ್ಣ ಸುಖ ನೀನೆ ಪರಂಜ್ಯೋತಿ ನೀನೆ ಪರಬ್ರಹ್ಮ ನೀನೆ ಪುರುಷೋತ್ತಮ ನೀನೆ ಪುಣ್ಯೈಶ್ವರ್ಯ ನೀನೆ ನಿರ್ಮಲ ಜ್ಞಾನ ನೀನೆ ಶಶಿ ಕೋಟಿಲಾವಣ್ಯ ನೀನೆ ಮುದ್ದುಮೋಹನ ವಿಠಲ ನೀನೆ ವೇಗದಿ ಬಂದು ನೀನೆ ರಕ್ಷಿಸು ಎನ್ನನು 5 ಜೊತೆ ಸ್ವಾಮಿ ಪುಷ್ಕರಣಿವಾಸ ಕಾಮಿತಫಲದಾನೆ ಶ್ರೀಮನೋಹರ ನಮ್ಮ ಮುದ್ದುಮೋಹನ ವಿಠಲ
--------------
ಮುದ್ದುಮೋಹನವಿಠಲದಾಸರು
ಸೂಳಿನ್ನ ಪೊಗುವವ ಏನಾದೆಂತಾ ಹಾಳಾದಬಳಿಕ ಪುಣ್ಯ ಮೂಳನಾಯಾದ ಪ ಮೂತ್ರದ್ವಾರಕೆ ಮೆಚ್ಚಿ ಮಾತಾಪಿತರ್ವೈರ್ಯಾಗಿ ಪಾತ್ರಾಪಾತ್ರೆನದೆ ಕುಲಗೋತ್ರ ಧರ್ಮಳಿದ ಮಾತೃ ಭೂಮಾತೆಯ ಯಾತ್ರ ಸುದ್ದರಿಯದೆ ಧಾತ್ರಿಯೊಳ್ ಕೈಸೂತ್ರಗೊಂಬ್ಯಾದ1 ಸುಲಭದಿಂ ತನ್ನಯ ಕುಲನಾಶಗೆ ಅನ್ಯ ಕುಲಕೆ ಹವಣಿಪ ಮಾರಿಬಲೆಗೆ ಒಳಪಟ್ಟು ಕುಲ ವಿಧವಿಧ ಭಕ್ತಿಗಳನಗಲಿ ಬಲುಪಾಪಕೊಳಗಾಗಂಕತನ ಮಹ ಕೊಲೆಗೆ ಈಡಾದ 2 ಉತ್ತಮರ ಲಕ್ಷಿಸದೆ ಸತ್ಯಕ್ಕೆ ಮನಗೊಡದೆ ಮೃತ್ಯುರೂಪಿಣಿಮಾತೇ ಅತ್ಯಧಿಕವೆನುತ ಮರ್ತು ತನ್ನಯ ಸುಖವ ತೊತ್ತಾಗಿ ಪಾತಕಿಗೆ ನಿತ್ಯ ಮೈಲಿಗೆಹೊರುವ ಕತ್ತೆಯಂತಾದ 3 ಸಾರುತಿಹ್ಯವೇದ ಸುವಿಚಾರವಾದಗಳೆಲ್ಲ ತೂರಿ ಅಡಿವಿಗೆ ಅಟ್ಟಿ ಮೀರಿ ಮಹವಾಕ್ಯ ಘೋರನರಕಕೊಯ್ದು ಸೇರಿಸುವವತಾರಿ ಮಕ್ಕ ಮಾರಿ ಜಾರೆಗೆ ಬಿಡದೆ ಸೆರೆಯಾಳು ಆದ 4 ಮನ ಅವಳಿಗರ್ಪಿಸಿ ತನು ಅವಳಿಗೊಪ್ಪಿಸಿ ಧನವನಿತು ಅವಳ ಅಧೀನದಲ್ಲಿರಿಸಿ ಬಿನುಗರೊಳುಬಿನುಗೆನಿಸಿ ಕುಣಿಕುಣಿದು ಕಡೆಗೆ ಮಮ ಜನಕ ಶ್ರೀರಾಮನಡಿ ಕನಿಕರಕ್ಹೊರತಾದ 5
--------------
ರಾಮದಾಸರು
ಸೃಷ್ಟಿ ಕಾರಣ ದಯಾ ದೃಷ್ಟಿಯಲಿ ನೋಡೆನ್ನ ಘಟ್ಟಿಗನೆನಬೇಕೊ ಇಷ್ಟಿಲ್ಲ ಅಪರಾಧ ಪ ಇಷ್ಟವರನ ಬಂಧದೋಳೆನ್ನ ಸಿಲುಕಿಸಿ ದುಷ್ಟರೂ ಒಂದಾಗಿ ತಾವೆಲ್ಲ ಎನ್ನನೂ ಲಿಷ್ಟರೊಳು ನೀ ಕೇಳುವಂತೆ ಕೂಗಿದೆನಲ್ಲ 1 ನಿನ್ನ ಮಾತುಗಳಾಡಧ್ಹಾಂಗೆನ್ನ ಮಾಡಿಸಿ ಅನ್ಯವಾರುತಿಗಳು ಚನ್ನಾಗಿ ನುಡಿಸಲು ಅನ್ಯಾಯ ಬಂತೆಂದು ಅವರಂತೆ ನುಡಿದು ನಾ ಮನ್ನದೊಳಗೆ ಮೊರೆ ಇಟ್ಟದನರಿಯಾ 2 ಒಳಗೆ ಹೊರಗೆ ತುಂಬಿಕೊಂಡಿಹರು ಬಹಳ ಖಳರು ಅವರು ದೇಶ ಕಾಲವಯ್ಯ ಬಳಿಯಲಿ ನಿನ್ನವರು ಗೂಢ ವೇಷದಿ ತಾವು ಸುಳಿಯಲು ಅವರನ್ನು ಗುರುತು ಮಾಡಿದೆನಯ್ಯ 3 ಈಗಲೂ ನಿನ್ನ ಬಲಪವನನಾಗಮದಿಂದ ಬ್ಯಾಗನೆ ಖಳರನ್ನ ವರದು ಸವರಿಸೊ ಜಾಗರೂಕನಾಗಿ ಅದೇ ಪದ್ಧತಿ ಪಿಡಿದು ಸಾಗಿ ಬಂದೆನು ಕೇಳು ಎನ್ನಿಂದೇನಪರಾಧ4 ಲೇಸಾಗಿ ಬಲವಿತ್ತು ಎನ್ನನು ಕಳಿಸಲು ಆಸು ಅಸುರರನ್ನು ತರದೊಟ್ಟುವೆಯಾ ವಾಸುದೇವವಿಠಲ ನೀ ಕೈಯ್ಯ ಪಿಡಿದರೆ ಆ ಸುಕಾರ್ಯಕೆ ಬಾಹೆ ನೋಡೆನ್ನ ಶಕುತಿ5
--------------
ವ್ಯಾಸತತ್ವಜ್ಞದಾಸರು
ಸೇರಿ ಸುಖಿಸು ಮಾನವ ಗುರು ಚರಣ ಸರೋಜವ ಪ ಸೇರಿದ ಶರಣರ ಘೋರ ಪಾತಕವೆಂಬ ವಾರಿಧಿ ಭವಕೆ ಸಮೀರ ಜಗನ್ನಾಥ ಸೂರಿವರ್ಯ ದಾಸಾರ್ಯರಂಘ್ರಿಯನು 1 ತಾರತಮ್ಯವ ತಿಳಿಯದೆ ಕಲಿಯುಗದಿ ಮುಕ್ತಿ- ದಾರಿಕಾಣದೆ ಭವದಿ ಬಿದ್ದ ಜ- ನರುದ್ಧಾರ ಮಾಡಲು ದಯದಿ ಬ್ಯಾಗವಾಟದಿ ನರಸಿಂಗಾಖ್ಯ ವಿಪ್ರಗಾರ ದೋಳುದ್ಭವಿಸಿ ಚಾರು ಕಥಾಮೃತ ಸಾರವ ಧರೆಯೋಳು ಬೀರಿದಂಥವರ 2 ಮೇದಿನಿಯೊಳು ಚರಿಸಿ ವಾಕ್ಯಾರ್ಥದಿ ಬಹು ವಾದಿಗಳನೆ ಜಯಿಸಿ ಎನಿಸಿದರು ಪೂರ್ಣ ಬೋಧ ಮತಾಬ್ಧಿಗೆ ಶಶಿನೃಪ ಮಾನ್ಯರೆನಿಸಿ ಶ್ರೀದ ಪ್ರಹ್ಲಾದನನುಜ ಸಹ್ಲಾದರೆ ಇವರೆಂದು ಸಾದರ ಬಿಡದ ಪಾದಪಂಕಜಾರಾಧಕರಿಗೆ ಸುರಪಾದರೆನಿಪರ 3 ಕ್ಷೋಣಿ ವಿಬಂಧ ಗಣದಿ ಸೇವೆಯಗೊಂಡು ಮಾನವಿ ಎಂಬ ಕ್ಷೇತ್ರದಿ ಮಂದಿರ ಮಧ್ವ ಸ್ಥಾಣುವಿನೊಳು ಮುದದಿ ಕಾರ್ಪರವೆಂಬ ಕಾನನದಲ್ಲಿ ಕೃಷ್ಣವೇಣಿ ಕುಲದಿ ಮೆರೆವ ಶ್ರೀನಿಧಿ ನರಪಂಚಾನನಂಘ್ರಿಯುಗ ಧ್ಯಾನದಿ ಕುಳಿತ ಮಹಾನುಭಾವರನು 4
--------------
ಶ್ರೀನಿಧಿವಿಠಲರು
ಸೈ ಸೈ ಶರಣಾಗತ ವತ್ಸಲ ನೀ ನೋಯಿಸಬಂದಸುರೆಗೆ ನಿರ್ಮಲ ಸುಖವಿತ್ತಿ ಪ. ಬೆನ್ನಿನ ಮೇಲೆ ಬೆಟ್ಟವ ಪೊರಿಸಿದ ಸುರ- ರನ್ನು ಕಾಪಾಡಿ ಸುಧೆಯನುಣಿಸಿದಿ ನೀ 1 ಹಂಜಿಯಂದದಿ ತಲೆ ನರತಿಹ ಬ್ಯಾಡತಿ ನಿರಂಜನ ಮೂರುತಿ2 ಅಟ್ಟಿ ಬರುತ ನಿನ್ನ ಕಟ್ಟಿದ ಗೋಪೆಗೆ ಪೊಟ್ಟೆಯೊಳಿಹ ಸರ್ವ ಲೋಕವ ತೋರಿದಿ 3 ಅಗ್ರಜ ಭಾರ್ಯಳನುಳುಪಿ ಕೊಲ್ಲಿಸಿದಂಥ ಸುಗ್ರೀವನ ಕೂಡೆ ಸಖ್ಯವ ಬೆಳಸಿದಿ 4 ಪಾತಕಿ ಪತಿಯಾದ- ಜಾಮಿಳನನು ತನ್ನ ನಿಲಯಕೆ ಕರೆಸಿದಿ 5 ವಿಧ ವಿಧದನ್ನವ ಕುರುಪತಿಯಲಿ ಬಿಟ್ಟು ಕುಡುತೆ ಪಾಲುಂಡುವ 6 ಕಂಡವರನು ಕೊಂದಿಹ ಕ್ರೂರನ ಮುನಿ ಮಂಡಲದಲಿ ಪ್ರಚಂಡನೆಂದೆನಿಸಿದಿ 7 ಕುಂತಿಯ ಕುವರನ ಕುದುರೆಯ ನಡೆಸುತ ಅಂತರಂಗ ಸಖ್ಯವ ಬೆಳೆಸಿದಿ ನೀ 8 ಖುಲ್ಲ ಚೇಷ್ಟೆಯ ಮಾಡಿ ಕಲ್ಲಾಗಿ ಬಿದ್ದ ಅ- ಹಲ್ಯೆ ಪತಿವ್ರತೆ ಎಂಬ ಬಿರುದ ಕೊಟ್ಟ್ಟಿ 9 ತಂದೆಯ ಕೊಲ್ಲಬೇಕೆಂದು ಸನ್ನಹಗೈದ ಕಂದನ ಸ್ವಾಂಕದೊಳಂದು ಕುಳ್ಳಿರಿಸಿದಿ 10 ಎಷ್ಟೊ ಪಾಪಗಳಟ್ಟುಳಿ ಬಿಡಿಸಿರೆ ಭ್ರಷ್ಟನೆಂದೆನ್ನೊಳು ನಿಷ್ಠುರವ್ಯಾತಕೆ 11 ಪನ್ನಗ ಗಿರಿವರ 12
--------------
ತುಪಾಕಿ ವೆಂಕಟರಮಣಾಚಾರ್ಯ
ಸ್ಮರಿಸು ಸ್ಮರಿಸು ಮನವೇ ಗುರುರಾಯರ ಪ ಸ್ಮರಿಸು ಸ್ಮರಿಸು ಬಿಡದೆ ಸ್ಮರಿಸು ನೀ ಗುರು ಸತ್ಯ ಜ್ಞಾನತೀರ್ಥರ ಪದವ ಸಾರುವೆ ಬೇಡಿದ್ದು ಕೊಡುವೆನೆಂಬುವರನು ಅ.ಪ ಸಂಶಯ ಪಡಬ್ಯಾಡವೋ ಇದಕೆ ನಾ ನಿ ಸ್ಸಂಶಯದಿಂದ ಪೇಳುವೆ ಸಂಶಯಾತಕೆ ಋಷಿ ವಂಶೀಕ ರಾವಣನ ಧ್ವಂಸ ಮಾಡಿದ ರಾಮನ ಸಂಸೇವಿಪರÀ ನೀ 1 ಶಾಪಾನುಗ್ರಹ ಶಕ್ತರೂ ಇವರು ಕಾಮಕ್ರೋಧವ ಬಿಟ್ಟವರೂ ತಾಪತ್ರಯಗಳಳಿದು ಪಾಪಗಳೋಡಿಸಿ ಕಾಪಾಡುವೆನೆಂದು ಜಗದಿ ಮೆರೆದವರ 2 ಗುರುಕರುಣಾಬಲದಿ ಶ್ರೀಹರಿನಪರೋಕ್ಷಿಗೈಸಿದ ಧೀರರ ದುರ್ವಾದಿಗಳ ಮುರಿದು ಗುರು ಮಧ್ವರಾಯರ ಪರಮ ಪ್ರೀತಿಯ ಪಡೆದ ನರಹರಿ ಪ್ರಿಯರ 3
--------------
ಪ್ರದ್ಯುಮ್ನತೀರ್ಥರು
ಸ್ವಸ್ತ ಮಾಡಿಕೊಳ್ಳಬೇಕು ವಸ್ತು ತನ್ನೊಳಾಗದ ಹಸ್ತ ನೀಡಲಿಕ್ಕೆ ಸ್ವಾಮಿ ವಿಸ್ತರಿಸಿ ತೋರುತದೆ ಧ್ರುವ ಸಾವಧಾನವಾಗಲಿಕ್ಕೆ ಸಾಧಿಸಿ ಬರುತದೆ ಭಾವ ಬಲಿದು ನೋಡಲಿಕ್ಕೆ ಕಣ್ಣಮುಂದೆ ಭಾಸುತದೆ ನಿವಾತ ಕೂಡಲಿಕ್ಕೆ ತಾನೆ ತಾನಾಗ್ಯದೆ ಆವಾಗ ನೋಡಿ ನಿಜ ಠವಠವಿಸುತದೆ 1 ಆರೇರಿವೆರದು ನೋಡಿ ಗುರುವಾಕ್ಯ ಮಿರಬ್ಯಾಡಿ ಸಾರವೆ ಆದೆ ನೋಡಿ ಗುರುಸೇವೆ ಪೂರ್ಣಮಾಡಿ ದೂರ ಹೋಗಿ ನೋಡಬ್ಯಾಡಿ ತಿರುಗಿ ನಿಮ್ಮೊಳು ನೋಡಿ2 ಇದ್ದಲ್ಲೆ ಅದ ಪೂರ್ಣ ಸದ್ಗುರು ಕರುಣ ಬಿದ್ದಲ್ಲೆ ಬಿದ್ದು ಘನ ಸತ್ಯವಾದ ನಿಜಘನ ಬುದ್ಧಿವಂತರ ಮನ ಗೆದ್ದು ಅಯಿತುನ್ಮನ ಸಿದ್ಧರ ನಿಜಸ್ಥಾನ ಶುದ್ಧ ಮಹಿಪತಿ ಸುಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು