ಒಟ್ಟು 1724 ಕಡೆಗಳಲ್ಲಿ , 110 ದಾಸರು , 1401 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತನು ಮನ ಧನ ನಿನ್ನವಯ್ಯ ವನಜನಾಭ ಮಾರನಯ್ಯ ಪ ಮನಸು ನನಸು ನಿನ್ನವಯ್ಯ ಕನಸು ಕಿನಸು ನಿನ್ನವಯ್ಯ ದಿನ ದಿನ ದಿನ ಭಜಿಪೆನಯ್ಯ ಮನದಿ ನೆಲಸೋ ನೀ ರಂಗಯ್ಯ ಅ.ಪ ಸ್ನಾನ ಸಂಧ್ಯಾ ಜಪವು ತಪ ಧ್ಯಾನಪೂಜೆ ಧೂಪ ದೀಪ ದಾನ ಧರ್ಮ ನೇಮ ಲೋಪವೇನನರಿಯೆ ವಿಶ್ವರೂಪ 1 ಎನ್ನದೆಂಬುದಾವುದಿಲ್ಲ ಎನ್ನ ಕಾರ್ಯವೆನ್ನದಲ್ಲ ಎನ್ನ ಪೊರೆವರಾರು ಇಲ್ಲ ನಿನ್ನ ಬಿಟ್ಟರೇ ಗತಿಯಿಲ್ಲ2 ನಿನ್ನ ಸನ್ನಿಧಿ ಎನ್ನದೇಶ ನಿನ್ನ ಭಜನೆ ಎನ್ನ ಕೋಶ ನಿನ್ನ ಕೃಪೆಯೇ ಎನ್ನ ದೋಷನಾಶ ಸನ್ನುತಕಾಯೋ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವಿದು ನಿತ್ಯವಲ್ಲ ಮನವು ನಿಶ್ಚಲ ಅಲ್ಲ ಪ ಕನಸಿನಂತೆ ಜೀವಿತವೆಲ್ಲ ಇನಿತು ಶಾಂತಿಯ ತಾಣ ಅಲ್ಲ ಅ.ಪ ಜಲಚರಂಗಳು ವನಚರಂಗಳು ಅಲೆವ ಪಕ್ಷಿಕೀಟಕ್ರಿಮಿಗಳು ಕಲುಷ ವಿಮಲವೆಂಬುದನರಿಯವು ಮಾನವ ಜನ್ಮಕೆ 1 ಜನುಮಗಳೊಳು ಹಿರಿಯದೆನಿಪ ಮನುಜ ಜನ್ಮವನಾಂತ ಮೇಲೆ ವಿನಯ ನಯ ವಿಧೇಯತೆಯಿಂದ ವನಜನಾಭನ ನೆನೆಯದಿರ್ದೊಡೆ 2 ಭಜಿಪ ಭಕ್ತರ ಕೂಗಿಗೊಲಿದು ಗಜವ ಪಾಲಿಸಿದಂತೆ ಬಂದು ನಿಜಪದಂಗಳ ತೋರ್ಪ ಮಾಂಗಿರಿ ವಿಜಯರಂಗನ ಸನ್ನುತಿ ಗೈಯದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಪ್ಪಲರಿಯದು ಬರೆದ ಬ್ರಹ್ಮನಿರ್ಮತವು ಒಪ್ಪುವದು ಯತಿ ಮುನಿ ಋಷಿಯ ಸಂತತಿಯು ಧ್ರುವ ಆನಿ ಮೊದಲಿರುವೆ ಕಡೆ ಅಣುಮಾತ್ರಾಕಾರವನು ಮುನ್ನ ಬರೆದಂತೆ ತಾನಡೆಯುತಿಹಂದು ಇನ್ನು ಮುತ್ತನ್ಯ ದೈವಕ ಬಯಸಿ ಬೇಡಿದರೆ ಮುನ್ನಿಗೆ ಕೊಡಬಲ್ಲವೆ ಬಿನಗುದೈವವು 1 ಭಿನ್ನವಿಲ್ಲದೆ ತನುವಿನೊಳು ಆನಂದ ಘನ ಉನ್ನತ ಮಹಿಮ ಪರಿಪೂರ್ಣವಿರಲು ಮೂರ್ತಿ ಶ್ರೀಪಾದವನು ಅನುದಿನ ಭಜಿಸಿ ಘನ ಸುಖವ ಪಡಿಯೊ ಮನವೆ 2 ಕಕ್ಕುಲಾತಿಯ ಬಟ್ಟು ಕಂಡವರ ಕಾಲ್ಗೆರಗಿ ಫಕ್ಕಸಾರಿಯ ಧರ್ಮ ಜರಿಯ ಬ್ಯಾಡ ಸಕಲ ಸಹಕಾರ ಮಹಿಪತಿಸ್ವಾಮಿ ನಿನಗಿರಲು ಭಕುತಿ ಮುಕುತಿಯ ಉಂಟು ಮೂಢ ಜನವೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತರತಮದಿ ಶರಣು ಮಾಡುವೆ ನಿಮಗೆ ಕರಣಶುದ್ಧಿಯಲ್ಲಿ ಕರುಣ ಮಾಡಿ ಎನ್ನ ಪರಿಪಾಲಿಸಬೇಕು ನಿರುತ ಬಿಡದೆ ಮನ ಸಿರಿಹರಿ ಚರಣಕ್ಕೆ ಎರಗುವಂತೆ ವರಭಕುತಿಯಲ್ಲಿ ಪ ಪರಮೇಷ್ಠಿ ವಾಯು ಸರಸ್ವತಿ ಭಾರತೀ ಉರಗ ಈಶ ಹರಿ ಸತಿಯರು ಮೂ ರೆರಡು ಜನರು ಆ ತರುವಾಯ ಸೌಪರ್ಣಿ ಸಿರಿ ಗುರು ದಕ್ಷನೆ ಶಚಿ ಮರುತ ಪ್ರವಾಹ ಮೂ ವರು ಸನಕಾದ್ಯರು ದುರಿತಶಾಸನ ಶಶಿ ತರಣಿ ಶತರೂಪ ವರುಣ ನಾರದರ 1 ಮುನಿಗಳ ಶ್ರೇಷ್ಠ ಭೃಗು ಅನಲ ಪ್ರಸೂತಗಾಧಿ ತನುಜ ವಾರಿಜಾಜನ್ನತನಯರು ವೈವಸ್ವತ ಸೂರ್ಯ ದನು ಪ್ರವಾಹವೆಂಬ ಅನಿಲನ್ನ ತಳೋದರಿ ಅನಿಲದೇವಜ ಅಶ್ವಿನಿ ದೇವತೆಗಳು ಅನಳಾಕ್ಷಸುತ ಧನಪತಿ ಪ್ರಹ್ಲಾದ ಗುಣಿಸುವೆ ವಸು ಏ ಳನು ದಶರುದ್ರರು ಇನಿತರೊಳಗೆ ಒಬ್ಬನ ಬಿಟ್ಟನು ದಿನ 2 ದಶ ವಿಶ್ವದೇವತರು ಸ್ವಶನರೊಳಗೆಗೀರ್ವರ ರಸದ್ಯುನವಕೋಟಿ ತ್ರಿದಶರೂಪ ಪಿತ್ರರೂ ಎಸವ ಸೋಮ ಪುನರ್ವಾಪಸರಿಪಶತಸ್ಥರು ನಸುನಗೆ ಕರ್ಮಜ ಋಷಿ ಈರ್ವರು ಮನು ಕುಶಲ ಸಪ್ತ್ತರಿಗೆ ತುತಿಸೆ ಕಾಲಕಾಲದಿ 3 ಮಾಂಧಾತ ಬಲಿ ಶಶಿಬಿಂದುವೆ ಪ್ರಿಯವ್ರತ ಪರೀಕ್ಷಿತ ನಂದ ಕಕುಸ್ಥ ಗಯ ಕುಂದದೆ ಯದುಕುಲದಿಂದ ಬಂದ ಹೈಹಯನು ಚಂದ್ರನ ಮಡದಿ ಏಳೊಂದನೆ ಸೂರ್ಯನು ಮಂದಹಾಸಾಂಬುಜ ಬಾಂಧವನಸತಿ ಕಲದರ್ಪನಸೂಸೆ ವೃಂದಾರಕರಿಗೆ 4 ಸದಮಲ ಸ್ವಾಹಾದೇವಿ ಬುಧಾ ಉಷಾದೇವಿ ಶನಿ ಮುದದಿಂದ ಪುಷ್ಕರ ಸಹೃದಯ ತುಂಬರರಿಂದ ಮೊದಲಾಗಿ ನೂರುಮಂದಿ ತ್ರಿದಶ ಗಂಧರ್ವರು ಚದುರೆ ಊರ್ವಸಿ ರಂಭೆ ಅದಿತಿ ಕಶ್ಯಪದಿತಿ ಹದಿನಾರು ಸಾವಿರ ಬುಧನ ಮಕ್ಕಳು ತಪೋನಿಧಿಗಳು ಎಂಭತ್ತು ತದುಪರಿ ಅಜಾನಜ ತ್ರಿದಶರು ಓಜಸ್ತರೆದರಾಗಿ ನಾನಿಂದು 5 ಹರಿಭಕ್ತರಾದ ಅಪ್ಸರ ಸ್ತ್ರೀಯರು ಕೆಲಕೆಲವು ಮರಳೆ ಚಿರಾಖ್ಯನಾಮದಿರುತಿಪ್ಪ ಪಿತೃಗಳು ಪರಿಪರಿ ನೂರುಕೋಟಿ ಪರಮಋಷಿಗಳಿಗೆ ಸುರ ಗಂಧರ್ವರ ವಿಸ್ತರ ಮನುಜ ಗಂಧರ್ವ ಧರಿಣಿಜಾಕವಿ ಮೇಲರಿದು ಜಯಂತಗೆ ಕರ ಮುಗಿವೆ ಕ್ಷಿತಿಪರನು ಕೊಂಡಾಡುತ ಇರುಳು ಹಗಲು ಉತ್ತಮರ ಮನುಜರ ಪಾಡಿ ನಿರುತ ಜಂಗಮ ಸ್ಥಾವರಗಳ ನೋಡುತ 6 ಭುಜಗಶಯನನಿಂದ ಸೃಜಿಸಿದ್ದ ಸರ್ವರಿಗೆ ನಿಜವಾಗಿ ಶಿರವಾಗಿ ಭಜಿಸುವೆ ಚನ್ನಾಗಿ ತ್ರಿಜಗದೊಳಗೆ ಎನ್ನ ರಜ ತಾಮಸ ಗುಣದ ವೃಜವೆ ಓಡಿಸಿ ನಿತ್ಯಸುಜನ ಮಾರ್ಗವ ತೋರಿ ರಜನಿ ಚರಾಂತಕ ವಿಜಯವಿಠ್ಠಲನ್ನ ಭಜಿಪೆನದಕೆ ನಿಮ್ಮ ನಿಜವ್ಯಾಪಾರದಿ ಸೃಜಿಸಿ ಕೊಡುತ ಧರ್ಮ ವೃಜಗಳೊದಗಿಸುತ್ತ ಕುಜನ ಮತದ ಮೇಲೆ ಧ್ವಜವೆತ್ತಿಸುವುದು 7
--------------
ವಿಜಯದಾಸ
ತಾತ್ವಿಕವಿವೇಚನೆ ಏರಿಸಿ ಏರಿಸಿ ಮಾರುತ ಮ್ವತಧ್ವಜ ಸಾರ ಸುಖಂಗಳ ನಿತ್ಯದಲುಂಬುವ ಯೋಗ್ಯತೆ ಯುಳ್ಳವರೂ ಪ ಈರನ ಮತವೇ ಸಾರವು ಶ್ರುತಿಗಳ ಶೌರಿಯ ಮತವೇ ಈರನ ಮತ ಖರೆ ದೂಡಿರಿ ಸಂದೇಹ ಅ.ಪ ಇಲ್ಲವು ಜಗವಿದು ಭ್ರಾಂತಿಯ ಕಲ್ಪನೆ ಸುಳ್ಳೇ ಎಲ್ಲವು ಬ್ರಹ್ಮನ ಬಿಟ್ಟರೆ ಬ್ರಹ್ಮನೆ ಸತ್ಯವೆನೆ ಅಲ್ಲವು ನುಡಿಯಿದು ಬ್ರಹ್ಮನು ಕಾರಣ ಸುಳ್ಳಾಯಿತು ನುಡಿ ಅಲ್ಲವೆ ಯೋಚಿಸಿ ಕೊಡದು ಈ ಮನವು 1 ಉಂಬುದು ಉಡುವುದು ಕಾಂತೆಯ ಸಂಗವು ನಂಬಲು ಬೇಡಿರಿ ಸುಳ್ಳೇಯೆಂತೆಂನೆ ಸಾಕ್ಷಿಯು ಒಪ್ಪುವುದೇ ನಂಬಲನರ್ಹವೆ ಕಾರ್ಯಸುಕಾರಿಯ ಖರೆ 2 ಒಂದೇ ತೆರವಿಹ ವಸ್ತು ದ್ವಯವಿರೆ ಒಂದನು ಮತ್ತೊಂದೆಂಬುವ ಭ್ರಾಂತಿಯು ಕೊಡುವದೂ ಪೊಂದಿಹ ಹೇಗೆನೆ ಉತ್ತರ ಸಿಕ್ಕದು ಯೋಚಿಸಿ ಕೋವಿದರೆ 3 ಭ್ರಾಂತಿಯ ಪೆಣ್ಣನು ಕೊಡುತ ತಾಸ್ವಾ ತಂತ್ರ ವಿಹೀನನು ಆಗುತ ಮಿಡುಕುವ ದೇವನು ಎನಿಸುವನೆ ಮಂತ್ರಿಸೆ ಬ್ರಹ್ಮನ ನಾನಿಹೆ ನೆಂಬುದ ಭ್ರಾಂತಿಯ ತೊಲಗುತ ಬ್ರಹ್ಮನು ಆಹನೆ ಮನವ ವಿಚಾರಿಸಿರಿ4 ನಾನೇ ಬ್ರಹ್ಮನು ಎಂಬೀ ಜ್ಞಾನವು ತಾನೇ ಬಾರದು ಸಹಜ ವಿದಲವು ಅನುಭವ ವಿರುದ್ಧಾ ತಾನೇ ಬ್ರಹ್ಮನು ಆಗಿರೆ ಭವದೊಳು ನಾನಾ ದುಃಖವ ನುಣ್ಣಲು ಬಂದರೆ ಹುಚ್ಚನೆ ಅವಸರಿಯು5 ಬ್ರಹ್ಮ ದ್ವಯವಿದೆ ಸತ್ಯ ದ್ವಯವಿದೆ ಬ್ರಹ್ಮನು ಆಹುದು ಕೊನೆ ಮಾತೆಂದರೆ ಬ್ರಹ್ಮನು ಶೂನ್ಯನಿಹ ಬ್ರಹ್ಮನು ನಿರ್ಗುಣ ನಂದವಿಹೀನನು ಬ್ರಹ್ಮನ ಗತಿಯೆನೆ ಸರ್ವವಿನಾಶವೆ ಯಾರಿದ ಬಯಸುವರೂ6 ವ್ಯಕ್ತಿತ್ವವು ತಾನಾಶವು ಆಹುದೆ ಮುಕ್ತಿಯು ಯೆಂತೆನೆ ಸರ್ವವಿನಾಶಕೆ ಸಾಧನೆಯೇ ಬತವು ಮುಕ್ತಿಯು ದುಃಖವಿವರ್ಜಿತ ಬರಿಸುಖ ರಿಕ್ತವು ಬರಿಯೆನೆ ಭವವಿದು ವರವೈ ಬೇಡವು ಆ ಮುಕ್ತಿ7 ಸತ್ಯವ ನುಡಿವುದು ವೇದವು ಒಂದೆಡೆ ಮಿಥ್ಯವ ನುಡಿವುದು ಮತ್ತೊಂದೆಡೆಯೆನೆ ಯಾವುದು ಸಿದ್ಧಾಂತ ಮೊತ್ತವ ನೂಕುತ ಕಿಚ್ಚಡಿ ವೇದಕೆ ಮೊತ್ತವ ಕೊಳ್ಳುತ ಒಂದೇ ಅರ್ಥವ ಜೋಡಿಸಿ ಇದು ನೀತಿ8 ಬೌದ್ಧರು ಒಪ್ಪನು ಶ್ರುತಿಗಳ ದೇವನ ವೇದವ ಒಪ್ಪುವ ಮಾಯಾವಾದಿಯ ಬ್ರಹ್ಮನು ಸೊನ್ನೆಯಿಹ ವೈದಿಕ ವೇಷದ ಬೌದ್ಧನ ವಾದವೆ ಶೋಧಿಸಿ ನೋಡಲು ಮತ್ತೇನಿಲ್ಲವು ಚಿಂತಿಸೆ ಸರಿಯಿಷ್ಠೆ9 ತರತಮ ಬಹುವಿಧ ಭೋಗವ ಮುಕ್ತಿಲಿ ಇರುವುದು ಸಿದ್ಧವು ಶೃತಿಗಳ ನಂಬಲು ಜೀವರ ಭಿನ್ನತೆಯು ಸ್ಥಿರವೇ ಆಯಿತು ಇದರಿಂ ಮುಕ್ತಲಿ ಪರಿ ಬಗೆತಾ ವಿದಿತವೆ ಜಗದಲಿ ಭೇದವೆ ಸರ್ವತ್ರ10 ನಾಸ್ತಿಕ ವಾದವ ತಳ್ಳಿರಿ ಆಚೆಗೆ ನಾಸ್ತಿಕ ಬಂದನೆ ತಂದೆಯು ಇಲ್ಲದೆ ಕಾರ್ಯವು ಜಗವಿರಲು ಆತನು ನೊಡಿಹ ಜ್ಞಾನಿಗಳಿಲ್ಲವೆ ಪೊಗಳವೆ ಗೋತತಿಯು11 ಪ್ರಕೃತಿ ವಿಕಾರದ ಜಗವಿದು ವಿದಿತವೆ ವಿಕಲ ವಿಶೇಷದ ಜೀವನು ಹಾಗೆಯೆ ಉಭಯರ ಆಳುವನು ವಿಕಲ ವಿವರ್ಜಿತ ಸಕಲ ಗುಣಾರ್ಣವ ಸಕಲ ನಿಯಾಮಕ ಸರ್ವ ಸಮರ್ಥನು ಇರಲೇ ಬೇಕಷ್ಟೆ12 ನಿತ್ಯವು ಈತ್ರಯ ಸಿದ್ಧವು ಆದರೆ ನಿತ್ಯ ಪರಸ್ಪರ ಸಂಬಂಧ ತ್ರಯ ಜ್ಞಾನವೆ ಪುರುಷಾರ್ಥ ಉತ್ತಮ ನೊಬ್ಬನು ಅಧಮರು ಇಬ್ಬರು ಮತ್ತಿವರಲಿ ಹಾಗಧಮನು ಜೀವನು ಚೇತನ ಪ್ರಕೃತಿ ವರ13 ಸರ್ವ ಸ್ವತಂತನು ಒಬ್ಬನೆ ಇರದಿರೆ ಸರ್ವಾ ಭಾಸವೆ ಜಗವಿದು ಆಹುದು ಪ್ರಭು ದ್ವಯ ಕೂಡುವುದೆ ಸರ್ವಗ ಶಾಶ್ವತ ಪೂರ್ಣಾ ನಂದನು ಸರ್ವ ವಿಚಿತ್ರನು ಮುಕ್ತಿದನಿರದಿರೆ ಪ್ರಭು ಅವನೆಂತಾಹ14 ಶುರುಕೊನೆ ಮಧ್ಯವು ಇದ್ದ ದೇವಗೆ ಬರುವನೆ ಹೊಸ ಹೊಸ ದೇವನು ಪ್ರತಿಪ್ರತಿ ಕಲ್ಪದಿ ಯೋಚಿಸಿರಿ ಇರದಿರೆ ಸಕಲೈಶ್ವರ್ಯವು ಆತಗೆ ತರುವನು ನಂದದ ಸೃಷ್ಠಿಯ ಹೇಗವ ವರಸಮರಿಲ್ಲವಗೆ15 ಸುಳ್ಳಿರೆ ಜಗವಿದು ಪಾಲಿಪ ದೊರೆಯದ ಕಳ್ಳನೆ ಅಲ್ಲವೆ ಅಷ್ಠಕರ್ತುತ್ವವು ಕೂಡುವ ದ್ಹೇಗಿನ್ನು ಎಲ್ಲಾ ಜಗವಿದು ನಿತ್ಯಾ ನಿತ್ಯವು ಎಲ್ಲಾ ಸತ್ಯವೆ ಶ್ರುತಿಗಳ ನುಡಿಗಳು ಭೃತ್ಯರು ಜೀವಗಣ16 ನಿತ್ಯವು ಪ್ರಕೃತಿಯು ಜೀವರು ಈಶನು ಸತ್ಯವು ಇದುಯೆನೆ ಪಂಚಸುಭೇದವು ನಿತ್ಯವೆ ಎಲ್ಲೆಲ್ಲು ನಿತ್ಯ ಸುಖಂಗಳ ಬಯಸುವ ನಮಗವು ಹತ್ತವು ಕಾರಣ ಸರ್ವಸ್ವತಂತ್ರನು ದೇವನೆ ಸತ್ಯವಿದು17 ಚೇತನ ಪ್ರಕೃತಿಯೆ ಲಕ್ಷ್ಮಿಯು ತಿಳಿವುದು ಆತನ ರಾಣಿಯು ನಿತ್ಯಸುಮುಕ್ತಳು ನಿತ್ಯಾವಿಯೋಗಿನಿಯು ಚೇತನ ನಿಚಯದ ಚೇತನ ಹರಿ ಇಹ ಆತನೆ ದೊರೆ ಜಗ ಜಂಗಮ ಸ್ಥಾವರ ಸತ್ತಾದಾಯಕನು 18 ದೋಷ ವಿದೂರ ಅಶೇಷ ಗುಣಾರ್ಣವ ದಾಸ ಪೋಷನಿಜ ಮುಕ್ತಿದ ನಿರದಿರೆ ಭಜಿಸುವದೇಕವನ ಶ್ರೀಶನು ಬಿಡೆ ಜಡ ಚೇತನ ಚೇಷ್ಠೆಯು ನಿಹ ಉಲ್ಲಾಸದಿ ಭಜಿಸುವುದು 19 ಪರಿಮಿತ ಶಕ್ತನು ದೇವನು ಇದ್ದರೆ ಪರಿಮಿತ ಜೀವರ ತೆರವೇ ಆಹನು ಕಾರಣ ನಿಸ್ಸೀಮ ಹರಿಗುಣವಗಣಿತ ಸಿಗ ಸಾಕಲ್ಯದಿ ನಿರುಪಮ ಸುಖಜ್ಞಾನಾತ್ಮಕ ವಿಭುವರ ಅನಾದಿ ಸಿದ್ಧವಿದು 20 ಪ್ರಾಕೃತ ಗುಣಗಣ ವರ್ಜಿತ ದೇವನ ಜ್ಞಾನ ಸುದೃಷ್ಠಿಗೆ ಗೋಚರನು ಸ್ವೀಕೃತ ನಾದರೆ ಜೀವನು ಹರಿಯಿಂ ತಾಕಿಸಿ ದೃಷ್ಠಿಗೆ ತನ್ನನೆ ತೋರುವ ಭಕ್ತರ ಬಾಂಧವನು 21 ತರತಮ ಜ್ಞಾನದಿ ಗುಣ ಉತ್ಕರ್ಷವು ಬರುವುದು ಕಾರಣ ತಿಳಿಯುತ ಹರಿಪರ ಮೋಚ್ಛನು ಹೌದೆನ್ನಿ ಅರಿವುದು ಅತಿಪರಿ ಪಕ್ವದ ಭಕ್ತಿಯ ಮಾಧವ ಮೆಚ್ಚುವನು22 ವೇದಗಳಿಂದಲೆ ದೇವನು ವ್ಯಕ್ತನು ವೇದಗಳಿಂದಲೆ ಧರ್ಮಾಧರ್ಮವಿ ವೇಕವು ಸರಿಯಷÉ್ಠ ವೇದ ನಿಜಾರ್ಥವೆ ಸಚ್ಛಾಸ್ತ್ರಂಗಳು ಮೋದವೆ ದೊರಕದು ಬಿಟ್ಟರೆ ಇವುಗಳ ಸಾದರ ಭಜಿಸುವುದು23 ಬಿಂಬನು ಹರಿ ಪ್ರತಿ ಬಿಂಬನು ಜೀವನು ಬಿಂಬಾಧೀನವು ಪ್ರತಿ ಬಿಂಬನ ಚೇಷ್ಠೆಗಳೆಂತರಿತು ಉಂಬುತ ಮುದದಿಂ ಸುಖದುಃಖಂಗಳ ಬಿಂಬಕ್ರಿಯೆಯೆನುಸಂಧಾನವ ಗುರುವಿಂದರಿತು ಸಮರ್ಪಿಸಿ24 ಮೆಚ್ಚುಲು ಮಾಧವದಾವುದಸಾಧ್ಯವು ಅಚ್ಚುತನೊಲಿಮೆಗೆ ಹೆಚ್ಚಿದುದೇನಿದೆ ಕೊಚ್ಚುತಕಲಿ ಸೊಂಕು ತಚ್ಛಭಿಮಾನ ಫಲೇಚ್ಛೆಯ ತ್ಯಜಿಸುತ ಕಚ್ಛಪ ನೊಲಿಮೆಗೆ ವಿಧಿಯ ನಿಷೇಧವ ಮರೆಯದೆ ಗೈಯುತಲಿ25 ಪರ ಮೋಚ್ಚನು ವರಸಮರಿಲ್ಲವು ಸಿರಿ ವರ ವಿಧಿಪಿತ ಸೃಷ್ಠ್ಯಾದ್ಯಷ್ಠಸು ಕರ್ತನು ವಿಭುವೆಂದು ನಿರುಪಮ ನಿಖಿಳಾಗಮ ಪ್ರತಿ ಪಾದ್ಯನು ಸ್ವರತ ಸ್ವತಂತ್ರನು ಪೂರ್ಣಾನಂದನು ಎನ್ನುತ ಸಾರುತಲಿ26 ಸಾಮನು ಸರ್ವರ ಬಿಂಬನು ಸರ್ವಸು ನಾಮನು ಸರ್ವಾಧಾರನು ಜಡಜಂಗಮ ವಿಲಕ್ಷಣನು ಭೂಮನು ಭಕ್ತ ಪ್ರೇಮಿಯು ಸದ್ಗುಣ ಧಾಮನು ಪೂರ್ಣನು ನಿಜ ಸುಖ ಮುಕ್ತಿದನೆನ್ನುತ ಸಾರುತಲಿ27 ವಿಧಿ ಪರಿಸರ ವಿಪಶಿವ ಪ್ರಮುಖರು ಪರಿವಾರವು ನಿರವದ್ಯನು ಮುಕ್ತಾ ಮುಕ್ತರ ನಾಯಕನು ಉರುಗಾಯನ ಜಗದೊಳ ಹೊರವ್ಯಾಪ್ತನು ಪರಿಮರ ಸ್ವಗತ ಭೇದ ವಿವರ್ಜಿತನೆಂಬುದ ಸಾರುತಲಿ28 ತರತಮ ಪಂಚಸುಭೇದವು ನಿತ್ಯವು ನಿರುತದಲುಂಬುವ ಸಾರವೆ ದುಃಖ ನಿರ್ಲೇಪನು ಅದ್ಭುತನು ಅರಿಯರು ಯಾರೂ ಇವನೇ ವಲಿಯದೆ ಪುರುಷೋತ್ತುಮ ಸಾಕಲ್ಯದವಾಚ್ಯನು ಎಂದು ಡಂಗುರ ಹೊಡೆಯುತ 29 ಗುರುವಿನ ದ್ವಾರವೆ ಹರಿತಾ ವಲಿಯುವ ಗುರುವೆನೆ ಮುಖ್ಯದಿ ಮುಖ್ಯ ಪ್ರಾಣನೆ ಸರಿಸಿರಿ ಯೆಂತೆಂದು ಗುರುಗಳು ಹಿರಿಯರು ಎಲ್ಲಾ ಕ್ರಮದಲಿ ಮಧ್ವರಿಗೊಂದಿಸಿ ಮುದದಿ 30 ಅನುಭವವಿಲ್ಲದ ಜ್ಞಾನವು ವಣವಣ ಸಾಧನೆ ಇದು ಖರೆಯ ಚಿನುಮಯ ನೊಲಿಸಲ್ ಮನೆಧನ ಬೇಡವು ತನುಮನೆ ವಿಷಯಗಳಿಂದಲೆ ಪೂಜಿಪ ಕ್ರಮದಿಂಯಜಿಸುತ 31 ಕಲಿಯುಗವಿದು ವರ ಸುಲಭದಿ ಸಾಧನೆ ವಲಿಯುವ ಬೇಗನೆ ನಾಮ ಸ್ಮರಣೆಗೆ ಭಜಿಸಿರಿ ಹರಿನಾಮ ವಳದಾರಿಯು ಸರಿ ಕ್ರಮದಿಂ ಪಾಡಲು ಮುಳುಗುತ ಭಕ್ತಿಯ ಕಡಲೊಳ್ ನಿಜಹರಿ ದಾಸರು ದೀಕ್ಷೆಯಲಿ32 ಕವಿಗುರು ರಾಜರ ಚರಣದಿ ಬಾಗುತ ಪವನ ಮತಾಂಬುಧಿ ಸೋಮನು ಜಯಮುನಿ ಹೃದಯಗ ವಾಯುವಲಿ ಅವಿರತ ನಲಿಯುವ ಶ್ರೀ ಕೃಷ್ಣವಿಠಲನು ತವಕದಿ ವಲಿಯುವ ಗ್ರಹಿಸಲ್ ಈ ಪದ ಜಯ ಜಯವೆನ್ನುತ33
--------------
ಕೃಷ್ಣವಿಠಲದಾಸರು
ತಾನಾಗಿ ದೊರಕುವುದು ಹರಿದರುಶನ ಪ ಶ್ರೀನಾಥವಿಠಲನಲಿ ದೃಢಭಕ್ತಿವುಳ್ಳವಗೆ ಅ.ಪ ಅರುಣೀಯದೊಳೆದ್ದು ಹರಿಕೃಷ್ಣ ಎನುವವಗೆ ಹರಿಹರಿ ಹರಿ ಎಂದು ಸ್ನಾನಗೈವವಗೆ ಹರಿಯ ದ್ವಾದಶನಾಮ ಪಠಣೆಯಿಂಮಣಿವವಗೆ ಗರುಡವಾಹನ ಕೃಷ್ಣ ಗೋಪಾಲಯೆನುವವಗೆ1 ನಿತ್ಯಕರ್ಮವಗೈದು ಫಲವ ಬಯಸದ ಕತ್ರ್ಯವ್ಯಗಳ ಗೈದು ಫಲ ಕೃಷ್ಣಗರ್ಪಿಪ ನರಗೆ ಉತ್ಸಾಹದಿಂದ ಅಭ್ಯಾಗತರ ಪೂಜಿಪಗೆ ಸತ್ಯದೈವವು ಎಂದು ಗೋಸೇವೆ ಗೈವವಗೆ 2 ಕುಳಿತು ನಿಲುವೆಡೆಗಳೊಳು ಹರಿಕೃಷ್ಣ ಎನುವವಗೆ ಇಳೆಯೊಳಿಹ ನರರೆಲ್ಲ ಭ್ರಾತರೆಂದವಗೆ ಉಳಿವು ಅಳಿವುಗಳೆಲ್ಲ ಹರಿಕರುಣವೆಂಬವಗೆ ಜಲಜನಾಭನ ದಿವ್ಯ ನಾಮಗಳ ಭಜಿಸುವಗೆ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾಮರಸ ನೆರೆನಂಬಿದೆ ಪೊರೆಯೆನ್ನನು ಪ ಜನನ ಮರಣವಿದೂರ ನೀನಾಜನಪತಿಯ ತನುಜಾತನೆ ಅನಿಮಿಷೇಶರಿಗೊಡೆಯನೆನಿಸಿದೆ 1 ಶ್ರೀರಮಣಿಯನಾದಿಕಾಲದಿ ನಾರಿಯನಿಪಳು ನಿನ್ನಗೆ ಮಾರಹರಶರಮುರಿದು ಹರುಷದಿ ವಾರಿಜಾಕ್ಷೆಯ ವರಿಸಿದೆ 2 ಮೂಜಗತ್ಪತಿಯಂದಿಗೆಂದಿಗು ರಾಜ್ಯತೊಲಗಿದನೆನಿಸಿದೆ ಈ ಜಗದೊಳಿಹ ಅಜ್ಞ್ಞಜನರಿಗೆ ಸೋಜಿಗವ ನೀತೋರಿದೆ 3 ಶ್ರೀಲಕುಮಿ ಪತೆ ನಿನ್ನ ಮಹಿಮಾ ಜಾಲದಿವಿಜರು ತಿಳಿಯರು ನೀಲಮೇಘಶ್ಯಾಮ ಶಿಲೆಬಾಲೆ ಮಾಡಿದು ಚೋದ್ಯವೆ 4 ಮುತ್ತುರತ್ನ ಕಿರೀಟ ಶಿರದಲಿ ಇತ್ತಿಹ್ಯರ್ಕಶತÀಪ್ರಭಾ ನೆತ್ತಿಯಲಿ ಜಡೆಧರಿಸಿ ವಲ್ಕಲ ಪೊತ್ತು ತಿರುಗುವುದುಚಿತವೇ 5 ಕುಜಭವ ಭವರರ್ಪಿಸಿದ ಎಡೆ ಭುಂಜಿಪುದು ನೀವಿರÀಲವೋ ಅಂಜಿಕಿಲ್ಲದೆ ಭಿಲ್ಲಹೆಂಗಳೆಯಂಜಲವ ನೀ ಮೆದ್ದಿಯಾ 6 ಮಂಗಳಾಂಘ್ರಿಯ ಭಜಿಪಯೋಗಿ ಜನಂಗಳಿಗೆ ನೀನಿಲುಕದೆ ಮಂಗಗಳಿಗೆ ನೀನೊಲಿದಿಯಾ 7 ಹಾಟಕಾಂಬರ ತಾಟಕಾರಿ ವಿರಾಟ ಮೂರುತಿ ಎನ್ನಯ ಕೋಟಲೆಯ ಕಡುತಾಪದಿಂಕಡೆದಾಟಿಸೆನ್ನನು ಜವದಲಿ 8 ಭಾರವಿಲ್ಲದೆ ಅಖಿಲಜಗಸಂಹಾರ ಮಾಡುವಿಯನುದಿನ ಕ್ರೂರರಾವಣ ಮುಖ್ಯದನುಜರಹೀರಿ ಬಿಸುಟಿದು ಜೋದ್ಯವೆ 9 ಶಾಂತಿಯ ಪೆÇಂದಿದ ಹರನ ಪೂಜಿಯಗೈದಿಯಾ 10 ವಾರಿಜಾಭವ ಮುಖ್ಯದಿವಿಜರು ಪಾರುಗಾಣದೆ ಮಹಿಮನೆ ಸಾರಿ ಭಜಿಸುವ ಭಕ್ತರಿಗೆ ಕೈವಾರಿಯಂದದಿ ತೋರುವಿ 11 ತಾಮಸರ ಸಂಗದಲಿ ನೊಂದೆನು ಕಾಮಕ್ರೋಧದಿ ಬೆಂದೆನು ಈ ಮಹಿಗೆ ನಾಭಾರವಾದೆನು ಪ್ರೇಮದಿಂದಲಿ ಪಾಲಿಸು 12 ನಿನ್ನಧ್ಯಾನವ ತೊರೆದು ನಾಬಲು ಅನ್ಯವಿಷಯದಿ ರಮಿಸಿದೆ ಎನ್ನ ದೋಷಗಳೆಣಿಸದಲೆ ಕಾರುಣ್ಯಸಾಗರ ಕರುಣಿಸು 13 ಹೀನ ವಿಷಯಾಪೇಕ್ಷೆ ಬಿಡಿಸಜ್ಞಾನತಿಮಿರವ ನೋಡಿಸು ಮೌನಿ ಮಧ್ವಾರ್ಯರ ಮತದ ವಿಜ್ಞಾನ ತತ್ವವ ಬೋಧಿಸು 14 ಸಾಮಗಾನವಿಲೋಲ ರಘುಜನೆ ನೇಮದಿಂದಲಿನೀಯನ್ನ ನಾಮವನೆ ಪಾಲಿಪುದು ಸಚಿದ್ಧಾಮ ವರದೇಶ ವಿಠಲನೆ15
--------------
ವರದೇಶವಿಠಲ
ತಾಯಿ ಅಲ್ಲವೇ ನೀನು ಹೆತ್ತ ಪ ತಾಯಿಯಾದ ಮೇಲೆ ಕತ್ತೆಮರಿಯಾದರೂ ಪೊರೆಯಬೇಕುಎನ್ನ ಅ.ಪ. ಸಾರ್ಥಕಾಗಲಿಲ್ಲ ಜನುಮವು ವ್ಯರ್ಥವಾಯಿತಲ್ಲಾಸಾಗುತಿದೆ ಆಯು ಸಹಿಸಲಾರೆ ಬಡಿಸೆ ಭವದ ನೋವು 1 ಸಾರವೆಲ್ಲಿದೆ ಸಂಸಾರ ಶರಧಿಯೊಳಗೆ ಮುಣುಗಿದೆ ಅಸಾರ ಸುಖವ ಸವಿದು ಘನ ಸಂಸಾರಿ ಎನಿಸಿ ಮೆರೆದೆ 2 ನಿಷ್ಠೆಯಿಂದ ನಿನ್ನ ಭಜಿಸಿದೆ ಭ್ರಷ್ಟನಾದೆ ಇನ್ನು ಶಿಷ್ಟರೊಡಯ ತಂದೆವರದಗೋಪಾಲವಿಠ್ಠಲನ ಮುಟ್ಟಿ ಭಜಿಪ ಎನ್ನ 3
--------------
ತಂದೆವರದಗೋಪಾಲವಿಠಲರು
ತಾರೊ ನಿನ್ನಯ ಕರವಾರಿಜವನು ಕೃಷ್ಣ ಸಾರಿ ಬೇಡಿಕೊಂಬೆ ಮುರಾರಿ ದಯಮಾಡಿಪ ಮಾರಮಣನೆ ಸಂಸಾರ ಶರಧಿಯೊಳೀಸ ಲಾರದೆ ಬಳಲುತ ಚೀರೂತಲಿರುವೆ ಅ.ಪ ದಾರಾ ಪುತ್ರರೆನಗೆ ದಾರಿ ತೋರುವರೆಂದು ಮಾರ ಜನಕನೆ ಕೇಳೊ ಮೋರೆ ತೋರದೆ ಅವರು ಜಾರಿಕೊಂಡರಯ್ಯ ಭೂರಿ ಬಳಗದವರ್ಯಾರು ಬಾರರೊ ದೇವ 1 ಧಾರುಣಿ ಧನ ಧಾನ್ಯ ಹೇರಳವಾಗಿದೆ ಜೀವ ಹಾರಿ ಹೋಗುವಾಗ ಯಾರಿಲ್ಲವಯ್ಯ ಕೋರಿ ಭಜಿಪೆ ನಿನ್ನ ಬಾರಿ ಬಾರಿಗೆ ನಾನು ಕ್ಷೀರ ವಾರಿಧಿವಾಸ ವೀರ ಮಾರುತೀಶ 2 ಘೋರಾಂಧಕಾರದಿ ಮೇರೆಯು ಕಾಣದೆ ಮಿತಿ ಮೀರಿದ ಭಯದಿಂದ ಗಾರು ಪಡುತಿಹೆನೊ ಕಾರುಣ್ಯನಿಧಿಯೆ ನೀ ಪಾರು ಮಾಡದಿರೆ ಮತ್ತ್ಯಾರು ಕೇಳುವರೆನ್ನ ಶ್ರೀ ರಂಗೇಶವಿಠಲ 3
--------------
ರಂಗೇಶವಿಠಲದಾಸರು
ತಿಳಿದು ಕೊಳ್ಳಿರಿ ಜಾಣರೆಲ್ಲಾ ಅಹಂ ಅಳಿದು ನಿಂತಿರುವಂತ ಸತ್ಯಾತ್ಮ ಬಲ್ಲಾ ಪ ಆದ್ಯಂತ ವಿಸ್ತಾರಮೆಲ್ಲಾ ಇದನು ಕೇ ಳೀದರ್ಜುನÀಗೇಳಿದ ಕಳ್ಳಗೊಲ್ಲ ಅ.ಪ ಎಂಟಾರುಗಳ ನೀನು ಕಂಡೂ ಅಲ್ಲಿ ಟಂಟಣಿಸುವದೇನನುಭವದಿ ನೀನುಂಡೂ ತುಂಟರೈವರಕಡೆಗೊಂಡು ಜ್ಞಾನ ಮಂಟಪದೊಳಗೆ ಆಡುವ ಬಾರೊ ಚೆಂಡೂ 1 ನಾರದಾದಿಗಳೆಲ್ಲ ಬಂದೂ ಆಹ ಮೀರಿದ ಶ್ರೀರಂಗಧಾಮನೊಳು ನಿಂದೂ ಸಾರಿದರು ನಿಜನಾಮವೆಂದೂ ಇದನು ಯಾರಾದರು ಭಜಿಸಿ ಗೋಪ್ಯದೊಳಗೆಂದು 2 ಪರದೊಳಗೆ ನೀ ಬೆರೆದಾಡೊ ಸತ್ಯ ಶರಣರಿಗೊಲಿವ ಹರಿಯಹುದಿದು ನೋಡೋ ನರಹರಿ ಭಜನೆಯ ಮಾಡು ನನ್ನ ಗುರುವೆ ತುಲಸಿ ನಿನ್ನೊಳಿಹುದೈನೆ ನೋಡೋ 3
--------------
ಚನ್ನಪಟ್ಟಣದ ಅಹೋಬಲದಾಸರು
ತಿಳಿಯ ಬರದೆಲೆ ಮನವೆ, ತೀರ್ಥ ಯಾತ್ರೆಯ ಫಲವು ಪ ಸುಲಭದಲಿ ಸದ್ಗತಿಯ ಸೂರೆಗೊಂಬುವರಿಗಲ್ಲದೆ ಅ ನೂರೆಂಟು ತಿರುಪತಿಯ ಯಾತ್ರೆಯನು ನಾನೊಲ್ಲೆವಾರದೊಂದ್ಹೊತ್ತು ಉಪವಾಸವನು ನಾನೊಲ್ಲೆಸಾರ ರೇಣುವೆಯುಂಡು ಕಡೆಯ ಬಾಗಿಲ ಕಾಯ್ವನೀರ ಗೌಡಿಯ ಮಗನ ಮಗನ ಮಗನೆನಿಸೆನ್ನ1 ಪಂಚಾನ್ನ ಪರಮಾನ್ನವಾವುದನು ನಾನೊಲ್ಲೆಚಂಚಲಗೊಳಿಸುವ ಭೋಗ ಭಾಗ್ಯವ ನಾನೊಲ್ಲೆಹಿಂಚದೆ ದಾಸೋಹ ಮಾಳ್ಪವರ ಮನೆಯ ಕಾಯ್ವಉಂಚ ಗೌಡಿಯ ಮಗನ ಮಗನ ಮಗನೆನಿಸೆನ್ನ2 ಪಟ್ಟಾವಳಿ ದುಕೂಲವನು ನಾನೊಲ್ಲೆಪಟ್ಟೆ ನಾಮದ ಬರಿಯ ಪ್ರದರ್ಶನ ನಾನೊಲ್ಲೆಸೃಷ್ಟಿಯೊಳು ನಿನ್ನ ಭಜಿಪ ಭಕ್ತರ ಮನೆ ಕಾಯ್ವಮುಟ್ಟುಗೌಡಿಯ ಮಗನ ಮಗನ ಮಗನೆನಿಸೆನ್ನ 3 ಮುತ್ತಿನಾಭರಣ ತಾಳಿ ಪದಕವ ನಾನೊಲ್ಲೆಸತ್ತಿಗೆಯ ನೆರಳಿನಲಿ ಸಾಗುವುದ ನಾನೊಲ್ಲೆನಿತ್ಯ ನಿನ್ನ ನೆನೆವರ ಮನೆಯ ಬಾಗಿಲ ಕಾಯ್ವತೊತ್ತುಗೌಡಿಯ ಮಗನ ಮಗನ ಮಗನೆನಿಸೆನ್ನ 4 ಆಶೆ ಪಾಶಗಳೆಂಬ ಜಂಜಾಟ ನಾನೊಲ್ಲೆದೇಶಾನುದೇಶಗಳ ತಿರುಗಾಟ ನಾನೊಲ್ಲೆಶ್ರೀಶಾದಿಕೇಶವನ ಭಜಿಪರ ಮನೆಯ ಕಾಯ್ವಕಸಗೌಡಿಯ ಮಗನ ಮಗನ ಮಗನೆನಿಸೆನ್ನ 5
--------------
ಕನಕದಾಸ
ತಿಳಿಸುವ ಮಾತಲ್ಲಾ | ತಿಳಿಸದೆ ತಿಳಿಯುವ ಮಾತಲ್ಲಾ | ತಿಳಿಸದೆ ತಿಳಿಯದು | ತಿಳಿಯದು ನಿನಗದು | ತಿಳಿಸದೆ ತಿಳಿಯದು | ತಿಳಿಯದೆ ಹೊಳೆಯದು ಪ ಎಚ್ಚರ ನೀ ಮರೆತಿ ಮದ ಮತ್ಸರದಲೀ ಬೆರತೀ | ಅಚ್ಚ ಹೇಸಿಕೀ ದೇಹ ಮುಚ್ಚಿದ ಚರ್ಮಕ್ಕೆ | ನಿಶ್ಚಯವೆಂದರಿವೆ ಛೇಕರವೇ 1 ಭೇದವಳಿಯಲು ಬೇಕೊ ಮನದ ವಿವಾದ ಕಳೆಯಲು ಬೇಕೊ | ಸಾಧುಸಂತರ ಸಂಗ ಸೇವಿಸಿ ತತ್ತ್ವದ್ಹಾದಿ ಹಿಡಿಯ ಬೇಕೊ |ನೀನೆ ಹೀಗ್ಯಾಕೊ 2 ಬೋಧ ಮುಕ್ತಿ |ಆದಿಮೂರ್ತಿ ಭವತಾರಕ ದೇವ ಪಾದವಪೂಜಿಸಿ ನೀವ್ | ತಿಳಿದೆ ಭಜಿಸದಲೇ 3
--------------
ಭಾವತರಕರು
ತಿಳೀವಲ್ಲದಿದು ಎನಗೆ ತಿಳಿಸಯ್ಯ ಹರಿಯೆ ಬಲುಪಾಪಿಜೀವಿಯ ತಪ್ಪಾರಿಗಿಹ್ಯದೋ ಪ ಹುಟ್ಟಿಸಿದವನಿಗೋ ಹುಟ್ಟಿ ಬಂದವನಿಗೋ ಸೃಷ್ಟಿಗೊಳಿಸಿದಂಥ ಸೃಷ್ಟಿ ಕರ್ತನಿಗೋ ಗಟ್ಟ್ಯಾಗಿ ನನಗಿದರ ಗುಟ್ಟು ತಿಳಿಸೈ ತಂದೆ ಮುಟ್ಟಿಭಜಿಸುವೆ ನಿನ್ನ ಶ್ರೀಕೃಷ್ಣರಾಯ 1 ಗೋಡೆಯ ಡೊಂಕಿರಲು ಗೋಡೆಯ ತಪ್ಪಥವ ಗೋಡೆಯನು ಕಟ್ಟಿದ ಗೌಂಡಿಯ ತಪ್ಪೋ ಕೂಡಿಟ್ಟು ಹಣ ವೆಚ್ಚಮಾಡಿ ಕಟ್ಟಿಸಿದಂಥ ಗೋಡೆಯೊಡೆಯನ ತಪ್ಪೋ ತಿಳಿಹೇಳೆನಗೆ 2 ಬಂಡಿ ತಗ್ಗಿಗೆ ಬೀಳೆ ಬಂಡಿದೇ ತಪ್ಪಥವ ಬಂದಡರಿ ಕೂತುಕೊಂಡವರದೆ ತಪ್ಪೋ ಬಂಡಿಹೊಡೆಯುವಂಥ ದಿಂಡೆಗಾರನ ತಪ್ಪೋ ಕಂಡು ಇದ್ದಂತ್ಹೇಳೋ ಪಂಢರಿರಾಯ 3 ಜೀವಾಳ ಅಪಸ್ವರ ನುಡಿಯಲದರದೇ ತಪ್ಪೋ ಜೀವಾಳ ಬಾರಿಸುವಗೋ ಜೀವಾಳ ಕರ್ತನಿಗೋ ಆವಂಗೆ ತಪ್ಪು ಜಗಜೀವ ಜೀವೇಶನೆ ನ್ಯಾ ಯಾವಾಗ್ಹೇಳಯ್ಯ ಭಾವಜಪಿತನೆ 4 ಪ್ರಾಣೇಶ ಶ್ರೀರಾಮ ನೀನೆ ಬರೆದಿಹ್ಯ ಬರೆಹ ನೀನೆ ವ್ಯಾಪಕ ಸರ್ವ ನೀನೆ ರಕ್ಷಕನೋ ನೀನೆ ಸ್ವಾತಂತ್ರ್ಯಾಖಿಲ ಏನಿಲ್ಲ ಮನುಜನಾ ಧೀನ ತಪ್ಪ್ಯಾಕಿವಗೆ ನೀನೆ ಪೇಳಯ್ಯ 5
--------------
ರಾಮದಾಸರು
ತೀರ್ಥ ಪಿಡಿದವರೆಲ್ಲ ತಿರುನಾಮಧಾರಿಗಳೆ - ಜನ್ಮ ಪ ಸಾರ್ಥಕವಿಲ್ಲದವರೆಲ್ಲ ಭಾಗವತರೆ ಅ ಮೂಗ್ಹಿಡಿದು ನೀರೊಳಗೆ ಮುಳುಗಿ ಜಪತಪ ಮಾಡಿನಿಗಮಾಗಮ ಪುರಾಣಗಳನೋದಿ ತಿಳಿದುಬಾಗಿ ಪರಸ್ತ್ರೀಯರನು ಬಯಸಿ ಕಣ್ಣಿಡುವಂಥಯೋಗ ಭ್ರಷ್ಟರೆಲ್ಲ ದೇವ ಬ್ರಾಹ್ಮಣರೆ ? 1 ಪಟ್ಟೆ ನಾಮವ ಬಳಿದು ಪಾತ್ರೆ ಕೈಯಲಿ ಹಿಡಿದು ಗುಟ್ಟಿನಲಿ ಜಪಿಸುವ ಗುರುತರಿಯದೆಕೆಟ್ಟ ಕೂಗನು ಕೂಗಿ ಹೊಟ್ಟೆಯನು ಹೊರೆವಂಥಪೊಟ್ಟೆಗುಡುಮಗಳೆಲ್ಲ ಪರಮ ವೈಷ್ಣವರೆ ? 2 ಲಿಂಗಾಂಗದೊಳಗಿರುವ ಚಿನ್ಮಯವ ತಿಳಿಯದೆಅಂಗಲಿಂಗದ ನೆಲೆಯ ಗುರುತರಿಯದೆಜಂಗಮ ಸ್ಥಾವರದ ಹೊಲಬನರಿಯದ ಇಂಥಭಂಗಿಮುಕ್ಕಗಳೆಲ್ಲ ನಿಜ ಲಿಂಗವಂತರೆ ? 3 ಅಲ್ಲಾ ಖುದಾ ಎಂಬ ಅರ್ಥವನು ತಿಳಿಯದೆಮುಲ್ಲ ಶಾಸ್ತ್ರದ ನೆಲೆಯ ಮುನ್ನರಿಯದೆಪೊಳ್ಳು ಕೂಗನು ಕೂಗಿ ಬಗುಳಿ ಬಾಯಾರುವಂಥಕಳ್ಳ ಸುಳ್ಳರಿಗೆಲ್ಲ ವೀರ ಸ್ವರ್ಗವುಂಟೆ ?4 ವೇಷ ಭಾಷೆಯ ಕಲಿತು ಗೋಸಾಯಿ ಉಡೆದೊಟ್ಟುಆಸೆಯನು ತೊರೆಯದೆಯೆ ತಪಕೆ ಕುಳಿತುವಾಸನೆಯ ಗುರುತಿನಾ ಹೊಲಬನರಿಯದ ಇಂಥವೇಷಧಾರಿಗಳೆಲ್ಲ ಸಂನ್ಯಾಸಿಗಳೆ ? 5 ಆರು ಚಕ್ರದ ನೆಲೆಯ ಅಷ್ಟಾಂಗ ಯೋಗದಲಿಮೂರು ಮೂರ್ತಿಯ ಮೂರು ಕಡೆಯೊಳಿರಿಸಿಮಾರ ಪಿತನಹ ಕಾಗಿನೆಲೆಯಾದಿ ಕೇಶವನಸಾರಿ ಭಜಿಸಿದವರಿಗೆ ಕೊರೆವ ಕೊರತೆಯುಂಟೆ ? 6
--------------
ಕನಕದಾಸ
ತುಂಗಭದ್ರ ನದಿ ತೀರದಿ ನೆಲಸಿಹನ್ಯಾರೆ ಪೇಳಮ್ಮಯ್ಯ ಪ. ರಂಗ ತಾನು ಇಲ್ಲಿರುತಿಹನಮ್ಮ ಅ.ಪ. ಶಂಖ ಚಕ್ರ ತ್ರಿಶೂಲವ ಧರಿಸಿಹನ್ಯಾರೇ ಪೇಳಮ್ಮಯ್ಯ ಶಂಕಿಸದಂದದಿ ತೋರುವನಮ್ಮ 1 ಈ ಪರಿರೂಪವ ಧರಿಸಲು ಕಾರಣವೇನೇ ಪೇಳಮ್ಮಯ್ಯ ಈ ಪರಿರೂಪವ ಧರಿಸಿಹನಮ್ಮ 2 ಪರಿ ಶುದ್ಧ ಸಾತ್ವಿಕರಿಗೆ ಹ್ಯಾಗೇ ಪೇಳಮ್ಮಯ್ಯ ಶುದ್ಧ ಜ್ಞಾನವನಿತ್ತು ಸಲಹುವನಮ್ಮ 3 ವಿಷ್ಣು ಭಕ್ತರ ಮನಸಿಗೆ ತೋರುವ ಮತಿ ಏನೇ ಪೇಳಮ್ಮಯ್ಯ ಬಿಟ್ಟಿರಲಾರದ ಗುಟ್ಟು ಕಾಣಮ್ಮ 4 ಪರಿ ಲೀಲೆ ಇದೇನೆ ಪೇಳಮ್ಮಯ್ಯ ಹರಿಯು ತಾನು ಒಲಿಯನು ಕಾಣಮ್ಮ 5 ಪರಿ ಹ್ಯಾಗೇ ಪೇಳಮ್ಮಯ್ಯ ಪರಿ ಧರಿಸುವದೊಂದರಿದೇನಮ್ಮ 6 ಹರಿಹರ ಕ್ಷೇತ್ರದಿ ನೆಲಸಿಹ ಸ್ವಾಮಿಯ ಭಜಿಸುವದ್ಹ್ಯಾಗೇ ಪೇಳಮ್ಮಯ್ಯ ಕರಕರೆ ಭವವನು ಕಳೆಯಬೇಕಮ್ಮ 7 ಶ್ರೀಸತಿ ಪಾರ್ವತಿ ಸಹಿತದಿ ನೆಲಸಿಹನ್ಯಾರೇ ಪೇಳಮ್ಮಯ್ಯ ಶೇಷಭೂಷಣ ಸಹ ಶ್ರೀನಿವಾಸ ಕಾಣಮ್ಮ 8
--------------
ಅಂಬಾಬಾಯಿ