ಒಟ್ಟು 6014 ಕಡೆಗಳಲ್ಲಿ , 123 ದಾಸರು , 4195 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇದುಸ್ನಾನ ಇದುಸ್ನಾನ ಇದುಸ್ನಾನವಯ್ಯ ಸದಮಲಜ್ಞಾನಿಗಳು ಮನವೊಪ್ಪಿ ಮಾಡ್ವ ಪ ಇಟ್ಟು ಹಂಗಿಸದ್ದೆ ಸ್ನಾನ ಕೊಟ್ಟು ಕುದಿಯದ್ದೆ ಸ್ನಾನ ಕೊಟ್ಟದ್ದು ಕೊಡುವುದೇ ಶಿಷ್ಟ ತುಂಗಾಸ್ನಾನ ನಿಷ್ಠರಾಡದ್ದೆ ಸ್ನಾನ ದುಷ್ಟಸಂಗಳಿವುದೇ ಸ್ನಾನ ಶಿಷ್ಟಜನಸಂಗವೇ ನಿಜ ಕೃಷ್ಣಾಸ್ನಾನ 1 ಭವ ಅದು ಸ್ನಾನ ಕ್ಷೀರಸಾಗರ ಸ್ನಾನ ರಾಗನೀಗ್ವುದೆ ಸ್ನಾನ ಜಾಗರಣ ಸದಾಸ್ನಾನ ಭಾಗವತರೊಲುಮೆ ನಿಜ ಭಾಗೀರಥೀಸ್ನಾನ 2 ಮರೆವ ತರಿವುದೆ ಸ್ನಾನ ಅರಿವು ತಿಳಿವುದೆ ಸ್ನಾನ ಪರಮಜ್ಞಾನ ನಿಜ ಸುರಗಂಗಾಸ್ನಾನ ಕರುಣ ಪಡೆವುದೆ ಸ್ನಾನ ಮರಣಗೆಲಿವುದೆ ಸ್ನಾನ ಹರಿದಾಸರೊಡನಾಟ ಸರಸ್ವತೀ ಸ್ನಾನ 3 ವಾದನೀಗ್ವುದೆ ಸ್ನಾನ ಭೇದ ಅಳಿವುದೆ ಸ್ನಾನ ಮಾಧವನ ಕಥಾಶ್ರವಣ ಸದಾ ಯಮುನಾ ಸ್ನಾನ ವೇದವನರಿವುದೆ ಸ್ನಾನ ಬೋಧಪಡೆವುದೆ ಸ್ನಾನ ಸಾಧುಸಜ್ಜನಸೇವೆ ಗೋದಾವರೀಸ್ನಾನ 4 ನೇಮನಿತ್ಯವೆ ಸ್ನಾನ ತಾಮಸ್ಹರಣವೆ ಸ್ನಾನ ಕಾಮತೊಳೆವುದೆ ನಿಜ ಭೀಮಾನದೀಸ್ನಾನ ಕ್ಷೇಮಸಾಗರ ತ್ರಿಭೂಮಿಯೊಳಧಿಕ ಶ್ರೀ ರಾಮನಡಿಭಕುತಿಮುಕ್ತಿ ಹೇಮಾನದೀಸ್ನಾನ 5
--------------
ರಾಮದಾಸರು
ಇಂದೆ ಕುಂದುಗಳನು ಹರಿಸು ಪ ಕಂದನಮುಂದಕೆ ಬರುತಲಿ ಚಂದವಾದ ನಿನ್ನಯ ಮುಖ ಚಂದ್ರಮನಂ ತೋರಿ ನೇತ್ರೇಂದ್ರಿಯಕಾನಂದ ಬೀರೈ ಅ.ಪ ಶ್ರೀವರ ನಿನ್ನ ಭಕ್ತರ ಭಾವಿಸುತ್ತ ತಪ್ಪ ಕ್ಷಮಿಸಿ ನೋವಕೊಡದೆ ರಕ್ಷಿಸುವ ಕೃಪಾಳುವು ನೀನೈ ದೇವಕಿನಂದನ ನಿನ್ನಯ ಪಾವನತರ ಪದಪದ್ಮಕೆ ನಾ ವಿನಯದಿ ನಮಿಸಿ ತಳಿವೆ ಹೆಜ್ಜಾಜಿಕೇಶವಾ ಓ ವಿಭೀಷಣಹಿತಕರ ಸಾವಕಾಶ ಮಾಡದೆ ನೀ ಕಾವುದೆನ್ನ ಸಮಯವರಿತು ಸಾಮಗಾನಸನ್ನುತ 1 ಚಿಟ್ಟೆಸ್ವರಕ್ಕೆ ಭವ ಭಯ ಭಂಗ ವರಭಕ್ತೇಷ್ಟ ದಾತಾರ ದೈತ್ಯಾರಿ ವೈಕುಂಠ ಪುರಹರನುತ ಶುಭಗುಣಯುತ ಪರಮಚರಿತ ನಿರುಪಮಪದ ಕು ವರ ಧ್ರುವನಿಗೊಲಿದ ದ್ವಿಜನ ಪೊರೆದ ಕರುಣಾ ಧರಣೀ ಭರಹರಣಾ ಪಾವನಚರಣ ಜಾಜಿಕೇಳುವ 2
--------------
ಶಾಮಶರ್ಮರು
ಇದೇ ಇದೇ ಘನಸುಖಾ ಸಾಧಿಸಿ ಗುರುಮುಖಾ ಧ್ರುವ ಅಂಜದಾಲಿಸಿ ಕೇಳಿ ಪ್ರಾಂಜಳಾಗ್ಯದೆ ಝಂ ಝಂ ಝಂ ಝಂ ಝಂ ಝಂ ಝೆಂಕರಿಸುತಲ್ಯದೆ 1 ಒಂದೊಂದು ಪರಿಲ್ಯಾನಂದವುದೋರುತಲ್ಯದೆ ಧೀಂ ಧೀಂ ಧೀಂ ಧೀಂ ಧೀಂ ಧೀಂ ಧೀಂಮಿಡುಗುತದೆ 2 ಮನೋಹರಾಗುವ ಅನುಭವದೋರುತದೆ ದೀನ ಮಹಿಪತಿಗೆ ಪಾವನಗೈಸುತದೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಇದೇ ವಸ್ತು ಸನಾತನ ಒಂದೆ ಆದಿ ಅನಾದಿಯಾಧಾರಿದರಿಂದೆ ಧ್ರುವ ವೇದವಂದಿತ ವಸ್ತುವಿಮಲಾ ಸಾಧುಜನರ ಸಾಧನೆಗನುಕೂಲಾ 1 ಜ್ಞಾನವಿಜ್ಞಾನದ ನಿಜಸಾರಾ ಅನುಭವಕನುಭವಾಗುವ ಸುಆಗರಾ 2 ಸಗುಣ ನಿರ್ಗುಣಕಿದೆ ಮೂಲ ಭಕ್ತಜನರು ಮಾಡುವುದು ಪ್ರತಿಪಾಲಾ 3 ದೇವಾದಿಗಳು ಮಾಡುವರಿದೇ ಧ್ಯಾನಾ ಭವಹರ ಗುರುಮೂರುತಿ ನಿಧಾನಾ 4 ಇಹಪರ ಸುಖದೋರುದಿದೆ ನೀಟ ಮಹಿಪತಿಸ್ವಾಮಿ ಶ್ರೀಗುರು ಮಣಿಮುಗುಟ5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಕೇಳ್ ಭಾಗವತಧರ್ಮ ಸ್ವರೂಪಾನಂದದಾಮರ್ಮ ತಿಳಿಯದಾಮೂಢಮನುಜರಿಗೂ ತಿಳಿಸುವಾ ಸುಲಭದಾಧರ್ಮ ಸದಾ ತನ್ನಂತರಂಗದಲಿ ಮನನವಾಮಾಡಿ ಬೋಧೆಯನು ಸದÀಮಲಾತ್ಮಾನುಭವವ ಪಡೆವುದಿದುವೇ ಅಳೀ ನೀ ಭೇದಭಾವನೆಯಾನಿಕಾಯಾ ಅಳೀ ನೀ ತಿಳೀ ನೀ ನಿರ್ವಿಕಲ್ಪಾನಂದವಿಭುವೆ ನಾನೆ ಇದÉನೆಂದು ಸ್ವರೂಪಾ ಇದೋ ಮಿಥ್ಯಾ ಜಗವಿದೆಲ್ಲ ತಿಳೀ ನೀನೆ ಕನಸಿನಂತೆ ಬೋಧಾ ಸ್ವರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಜ್ಞಾನವೊ ಇದೇ ಮಾನವೊ ಧ್ರುವ ಕೇಳಿ ಕೇಳಿ ಕೇಳಿ ಕೇಳುವ ಮಾತಿದು ಕೇಳಿದಂತೆ ನೀವು ಬಾಳಿ ಬಾಳಿದ ಮ್ಯಾಲಿನ್ನು ಹೇಳ್ಯಾಡುವ ಮಾತಿನ ಮೊಳೆ ಅಂಕುರನೆ ಸೀಳಿ ಒಳಿತಾಗಿದೆ ಪೂರ್ಣ ಕೇಳಿ ಕಳೆದ ದುಸ್ಸಂಗವು ಕೇಳುವನಾದರೆ ತಿಳಿಸಿಕೊಡುವನು ಗುರು ಹೇಳಿ 1 ಸೂಟಿ ತಿಳಿದು ನಿಜಧಾಟಿಗೆ ಬಂದರೆ ಕೋಟಿಗವನೇ ಒಬ್ಬ ಙÁ್ಞನಿ ನೀಟಾಗಿಹ್ಯ ಘನಕೂಟವು ತಿಳಿದರೆ ನೋಟದಲ್ಲವ ಬಲು ತ್ರಾಣಿ ನೋಟದಲ್ಲಿಹುದು ತ್ರಾಟಿವ ಬಲ್ಲನೆ ಬೂಟಕ ದೇಹಾಭಿಮಾನಿ ನಾಟಿ ಮನದೊಳು ಮಾಟಿಸಿಕೊಂಬುದು ಘಟಿಸಿತಿದೆ ಸಾಧನ 2 ನೆನೆಯಲಿಕ್ಕೆ ಮನ ಘನಬೆರದಾಡುವ ಖೂನಾಗುವದಿದೆ ರಾಜಯೋಗ ಅನುಭವಿಗಳಿಗೆ ಅನುಕೂಲವಾಗಿನ್ನು ಅನುವಾಗಿದೋರುದು ಬ್ಯಾಗ ಭಾನುಕೋಟಿತೇಜ ತಾನೆತಾನಾದನು ಎನ್ನ ಮನದೊಳು ಈಗ ದೀನ ಮಹಿಪತಿಗೆ ಸನಾಥಮಾಡುವ ಸ್ವಾನುಭವದ ಬ್ರಹ್ಮಭೋಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ದೇವ ಪೂಜಿಯು ನೋಡಿ ಹೃದಯದಲಿ ನಿಜ ಒಡಗೂಡಿ ಧ್ರುವ ಮೂರ್ತಿಎಂಬುದೆ ಅಮೂರ್ತಿ ನಾಮರೂಪ ನಿಜ ಗುಹ್ಯವಾರ್ತಿ ವ್ಯೋಮಾಕಾರದ ಮನೆಮೂರ್ತಿ ಸ್ವಾಮಿ ಸದ್ಗುರುವಿನ ಕೀರ್ತಿ 1 ನಿತ್ಯನಿರ್ಗುಣ ನಿರ್ವಿಕಲ್ಪ ಸತ್ಯಸದ್ಗುರು ಸ್ವರೂಪ ನಿತ್ಯ ನಿತ್ಯದಿತ್ಯರ್ಥ ಸುದೀಪ ತತ್ವಙÁ್ಞನ ಮನಮಂಟಪ 2 ಸ್ವಾನುಭವ ಸ್ವಾದೋದಕ ಙÁ್ಞನ ಭಾಗೀರಥಿ ಅಭಿಷೇಕ ಮೌನ ಮೌನ್ಯ ವಸ್ತ್ರಾಮೋಲಿಕ ಧಾನ್ಯವೆಂಬುದೆ ಸೇವಿ ಅನೇಕ 3 ಗಂಧಾಕ್ಷತಿ ಪರಿಮಳ ಫಲಪುಷ್ಪ ಬುದ್ಧಿ ಮನವಾಯಿತು ಸ್ವರೂಪ ಸದ್ವಾಸನ್ಯಾಯಿತು ಧೂಪ ದೀಪ ಸದ್ಭಾವನೆ ನೈವೇದ್ಯ ಮೋಪ 4 ಫಲತಾಂಬೂಲವೆ ಸದ್ಭಕ್ತಿ ಮೂಲಜೀವ ಭಾವನೆ ಮಂಗಳಾರ್ತಿ ಬಾಲಕ ಮಹಿಪತಿ ನಿಜಪೂಜಿಸ್ಥಿತಿ ಕುಲಕೋಟಿ ಉದ್ಧರಿಸುವ ಗತಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನಿತ್ಯನಮಸ್ಕಾರ ನೋಡಿ ಗುರುಚರಣಕೆ ಮನಗೂಡಿ ಧ್ರುವ ಬಿಡದಿಹುದೇ ಸತ್ಸಂಗಾ ನೋಡಿ ಇದೇವೆ ಶಿರಸಾಷ್ಟಾಂಗಾ ಕಡದ್ಹೋಯಿತು ಭವದುಸ್ಸಂಗಾ ದೃಢಮಾಡಿ ಅಂತರಂಗಾ1 ನಮೃತಲಿಹುದೆ ನಮನಾ ನೇಮದಿಂದ ನಡೆದವರು ದಿನಾ ಬ್ರಹ್ಮಾನಂದದೋರುವ ಸಾಧನ 2 ಗುರ್ವಿನಂಘ್ರಿಗೆ ಎಡೆಮಾಡಿ ಅರ್ವಿನೊಳಾದ ಮಹಿಪತಿ ನೋಡಿ ಗರ್ವ ಪುಣ್ಯೆಂಬುದು ಈಡ್ಯಾಡಿ ಸರ್ವಪಾಪ ಹೋಯಿತು ನೋಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿ ನಿಜ ಉಪಾಯ ಸದಮಲ ಸುಖದಾಶದಾಶ್ರಯ ಧ್ರುವ ಸಾಧನವಿಲ್ಲಿದೆ ಶ್ರೇಯಸುಖ ಬ್ಯಾರದೆ ಕೇಳತಿಸೂಕ್ಷ್ಮ ಮಾತು ಭೇದಿಸಿ ನೋಡೇನೆಂದರೆ ತಿಳಿದೀತು ಸಾಧಿಸಿ ಕೈಗೊಟ್ಟಿತು 1 ಗೋವಗೋಂತಲ್ಲದೆ ಬ್ಯಾರೆದೆ ಘನ ಭಾವಿಸದೆ ನಿಜಖೂನಾ ಸಾವಧವಾದವಗಿದೇನಿಧಾನ ಭವಹರ ಗುರುಕರುಣಾ 2 ತಾನೆಂಬುದರೊಳು ತಾನೆತಾನಾಗೇದ ಭಾನುಕೋಟಿ ಉದಿತ ದೀನ ಮಹಿಪತಿಸ್ವಾಮಿಯು ಸಾಕ್ಷಾತಾನಂದ ಘನಭರಿತಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಪರಮಾರ್ಥ ಪ್ರಾಪ್ತಿಗೆ ಸೋಪಾನ ತಿಳಿ ಇದರಲ್ಲಿ ಬೇಡಿನ್ನು ಅನುಮಾನ ಇದೇ ಬಕುತಿಮಾರ್ಗವೇ ಸುಲಭ ಸೋಪಾನ ತಿಳಿ ವೈರಾಗ್ಯಜ್ಞಾನಾದಿಗಳ ತಾಣಾ ಪ ಸಂಸಾರದೊಳಗಿರ್ದ ಜೀವಂಗೆ ಸುಖದುಃಖದಿ ಬಳಲುವ ಮನುಜಂಗೆ ಕಂಸಾರಿ ಶ್ರೀ ಕೃಷ್ಣನಾಮವೊಂದೇ ಪಾಪ ಸಂಹಾರಿ ಪರಶಿವನಾಮವೊಂದೇ ಈ ಸಂಸಾರ ದಾಂಟುವಾ ನಿಜತಾಣಾ1 ನಿಷ್ಕಾಮ ಮನದಿಂದ ಭಜಿಸಲ್ಕೆ ಬಹು ದುಷ್ಕರ್ಮ ಫಲವೆಲ್ಲ ತೊಲಗಲ್ಕೆ ಶ್ರೇಷ್ಠ ವೈರಾಗ್ಯವು ನೆಲೆಸಲ್ಕೆ ಬಲು ಜಿಜ್ಞಾಸೆ ಮನದಲ್ಲಿ ಜನಿಸಲ್ಕೆ ಈ ಪರಮಾತ್ಮಧ್ಯಾನ ಮಹಾಸಾಧನಾ 2 ಆತ್ಮಜ್ಞಾನದ ಬೋಧನೆಗೊಂಡು ಪರಮಾತ್ಮನ ರೂಪವೆ ತಾನೆಂದೂ ಬರಿ ತೋರ್ಕೆ ಜಗವೆಲ್ಲ ಪುಸಿ ಎಂದೂ ಪರಮಾತ್ಮನೆ ನಿತ್ಯನು ನಿಜವೆಂದೂ ಪರಜ್ಞಾನವ ನೀಡಲ್ಕೆ ಈ ಸಾಧನ 3 ಪರಮಾರ್ಥನುಭವಿಗಳ ಸಂಗ ನೆರೆದೊರಕುತಲಿರುತಿರೆ ಭವಭಂಗ ವರ ಭಕ್ತಿ ಮಾರ್ಗದಿ ದೊರಕುವದೆಂದ ಇದೆ ಪರಮಾರ್ಥ ಪ್ರಾಪ್ತಿಗೆ ಮೂಲವೆಂದ ಇದೆ ಗುರುಶಂಕರಾನಂದಕೃಪೆಯಿಂದ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಸಂಧಿಸಿ ಧರ್ಮ ಭೇದಸಿ ಗುರುವರ್ಮ ಶೋಧಿಸಿ ನೋಡಲಿಕ್ಕೆ ಛೆÉೀದಿಸಿಹೋಗುದು ಭವಕರ್ಮ ಧ್ರುವ ಕಾಣಾದ ಕಾಣಬ್ಯಾಡಿ ಕಾಣಿಸುವದು ನೋಡಿ ಕಾಣಿಸಿ ಕಾಣಗೊಡದಿಹ್ಯದ ಖೂನ ನಿಜಮಾಡಿ 1 ದೋರದ ನೋಡಬ್ಯಾಡಿ ದೋರಿಸುವದು ನೋಡಿ ದೋರಿಸಿದೋರಗುಡದಿಹುದ ಖೂನ ನಿಜಮಾಡಿ 2 ಕೇಳದ ಕೇಳಬ್ಯಾಡಿ ಕೇಳಿಸುವದ ನೋಡಿ ಕೇಳಿಸಿ ಕೇಳೆಗೊಡದಿಹುದ ಖೂನ ನಿಜಮಾಡಿ 3 ಆಡದ ನೋಡಬ್ಯಾಡಿ ಅಡಿಸುವದ ನೋಡಿ ಅಡಿಸಿ ಆಟ ನೋಡಗೂಡದ ಖೂನ ನಿಜಮಾಡಿ 4 ನುಡದ ನೋಡಬ್ಯಾಡಿ ನುಡಿಸುವದ ನೋಡಿ ನುಡಿಸಿ ನುಡಿ ತಿಳಿಯಗುಡದ ಖೂನ ನಿಜಮಾಡಿ 5 ಮಾಡದ ನೋಡಬ್ಯಾಡ ಮಾಡಿಸೂವದ ನೋಡಿ ಮಾಡಿಸಿ ಮಾಡದೋರಗುಡದ ಖೂನ ನಿಜಮಾಡಿ 6 ತಿಳುಹದ ನೋಡಬ್ಯಾಡಿ ತಿಳುಹಿಕುಡದ ನೋಡಿ ತಿಳುವಿಸುವದ ತಿಳುವದೆ ಮಹಿಪತಿವಸ್ತ ನೋಡಿ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸಾಧಿಸಿನೋಡಿ ಮನ ಉನ್ಮನÀಮಾಡಿ ಘನಸುಖ ಭೇಧಿಸಿದರ ಭಾಸುತದೆ ತನ್ನೊಳು ತಾನೆ ಕೌತುಕಧ್ರುವ ನೋಡಿ ನೋಡಿ ಖೂನ ಅರುಹು ಇಲ್ಲದೆ ಜನದೊಳು ಬರುದೆ ಹೇಳ್ಯಾಡುದೇನ ನಿರ್ವಿಕಲ್ಪನ ನಿಜನೆಲೆನಿಭವರಿತು ನೋಡಿ ಸ್ಥಾನ ಸರ್ವಸಾಕ್ಷಿ ಸರ್ವಾತೀತವೆಂಬ ವಸ್ತು ನೋಡಿ ಪೂರ್ಣ 1 ಕಣ್ಣಿನ ಕೊನೆ ಮುಟ್ಟಿ ಕರಗಿ ಮನವು ನೋಡಿ ಪೂರ್ಣ ಬೊಧ ಸಣ್ಣ ದೊಡ್ಡವರೊಳಗಿದೆ ಒಂದು ಸಾರುತಿದೆ ವೇದ ಧನ್ಯ ಧನ್ಯಗೈಸುವ ನಿಜ ಪುಣ್ಯ ಗುರುಪಾದ ಚನ್ನಾಗ್ಯನುಭವದಿಂದ ನೋಡಲಿಕ್ಯಾಗದು ಸ್ವಾದ 2 ಸುರಿಮಳಿಗರೆವುತಲ್ಯದೆ ಸ್ವಸುಖದಾನಂದೊ ಬ್ರಹ್ಮ ತೆರೆತಿಳಿಯಲಿಕ್ಕೆ ಗುರು ಶರಣ ಹೋಗಬೇಕು ಇದೇ ವರ್ಮ ಹರುಷಗೈಸಿದ ನೋಡಿ ಪತಿತಪಾವನ ಸದ್ಗುರು ನಮ್ಮ ತರಳ ಮಹಿಪತಿಗಿದೆ ನಿತ್ಯಭಿನವದ ನೋಡಿ ಸಂಭ್ರಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಸೀತಾ ಮಹಾಮಂತ್ರ ಭವಾಬ್ದಿ ದಾಂಟುವಾ ಮಂತ್ರಾ ನಿತ್ಯ ಅನುದಿನಾ ಪಠಿಸುತಿರುವಾತಾ ಮುಕುತಿಪಂಥ ಪಡೆವ ನಿರುತಾ ಇದೇ ದೇಹದಲಿ ತಾನಿರುತಾ 1 ವಿರಾಗಿಯಾಗಿ ಮನದಲ್ಲಿ ಪರಾನಂದಾತ್ಮರೂಪವನು ತಿಳಿಯುವಾ ಚೈತನ್ಯರೂಪವನು ಇದೇ ಗೀತಾಪರಣಫಲ ತಾ ಪ್ರಶಾಂತಾಕಾಮನಾಗಿರುತಾ 2 ನಿಧಾನಾ ನೊಂದಮನನಿಗಿದೆ ಪ್ರಧಾನಾ ಶಾಸ್ತ್ರ ಸಂಚಯ ದೇ ಪ್ರಧಾನಾ ಷಟ್‍ಶಾಸ್ತ್ರ ಸಂಚಯದೇ ಸದಾ ಧ್ಯಾನಾ ಇದೇ ಮನನಾ ಮನುಜನೇ ಇದುವೆ ಸುಖತಾಣಾ 3 ತಿಳಿ ನೀ ಗೀತೆಯಾ ಬೋಧಾ ಅಳಿ ನೀ ಜೀವಪರ ಬೇಧಾ ತಿಳಿ ನೀ ಪರಮಾತ್ಮಪದ ಬೋಧಾ ಪಡೆವ ಮೋದಾ ಶ್ರವಣದಿಂದಾ ಇದೇ ಶ್ರೀ ಶಂಕರನ ಬೋಧಾ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ಸುಪಥನೋಡಿ ಸ್ವಹಿತ ಸಾಧು ಜನರ ಸುಸನ್ಮತ ವೇದಾಂತದ ಸುಸಾರಬೋಧವ್ಹೇಳಿದ ವಸ್ತು ಭಗವದ್ಗೀತಾ ಸಂದಿಸೀಹ್ಯದÀು ಸದೋದಿತ ಭೇದಿಸಿ ನೋಡಲು ತನ್ನೊಳಗ ತಾಂ ದೋರುತಿದೆ ಸಿದ್ದಾಂತ 1 ಮಮೈವಾಂಶೋ ಜೀವಲೋಕೇ ಜೀವಭೂತ ಸನಾತನ ಃ ಸ್ವಾಮಿ ಹೇಳಿದ್ದ ತಿಳಿಯಲಿಕ್ಕೆ ಆತ್ಮಾನುಸಂಧಾನದ ಖೂನ ನೇಮದಿಂದಲಿ ಹೇಳಿದ ಮಾತಿಗೆ ಮುಟ್ಟಿದನೊಬ್ಬರ್ಜುನ ತುಂಬೇದ ವಿಶ್ವದಿ ಪರಿಪೂರ್ಣ 2 ಏಕಾಂಶೇನ ಸ್ಥಿತೋ ಜಗತ ವೆಂಬ ವಾಕ್ಯದನುಭವ ಸೇವಿಸಿದೊಬ್ಬ ಶುಕದೇವ ನಾಲ್ಕುಶೂನ್ಯವು ಮೆಟ್ಟಿನೋಡಲು ಭಾಸುತಿದೆ ಸುಮನದೈವ ತಾನಾಗೀ ಹ್ಯದು ಜೀವ 3 ಜಾನಾತಿ ಪುರುಷೋತ್ತಮಂ ಮನುಷ್ಯರೊಳಗಧಮಾಧಮಾ ಕ್ರಮತಿಳಿದವನೆ ಪರಮಯೋಗಿ ಆತನೇ ಉತ್ತಮೋತ್ತಮಾ ತಾಂ ಕೇಳಿ ನಿಜಾಧ್ಯಾತ್ಮಾ 4 ` ಹರಿ ಃ ಓಂ ತತ್ಸದಿತಿ ' ವೆಂಬ ನಿಜ ತಿಳಯಬೇಕಿದೆ ಮುಖ್ಯ ಏಳುನೂರು ಶ್ಲೋಕದವಾಕ್ಯ ತ್ವರ ತಾಂ ತಿಳಿಯದು ಒಂದೇ ಮಾತಿನ ಬ್ರಹ್ಮಾದಿಕರಿಗಾಟಕ್ಯ ತರಳಮಹಿಪತಿಗಿದೆ ಸೌಖ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು